ಒಟ್ಟು 410 ಕಡೆಗಳಲ್ಲಿ , 68 ದಾಸರು , 344 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಿಷ್ಣುವೆಂಬುದು ಕೊಂಡಾಡಿ ಧ್ರುವ ಜಿಹ್ವೆಗೊಂಡಿತು ಸುಸ್ವಾದ ದಿವ್ಯನಾಮ ಸುರಸ್ವಾದ ಭವನಾಶಗೈಸಿತು ಗುರುಬೋಧ ಸವಿದೋರಿತು ಗುರುಪ್ರಸಾದ 1 ಸ್ವಾನುಭವದ ಸವಿಸುಖ ಏನೆಂದ್ಹೇಳಲಿ ಕೌತುಕ ಮನಕಾಯಿತು ಹರುಷ ಅನೇಕ ಧನ್ಯ ಧನ್ಯಗೈಯಿತು ಜಿಹ್ವೆಮುಖ 2 ಸುಸ್ಮರಣಿಯ ಮಾಡಿ ನಿತ್ಯ ಮಾಡಿ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವೆಂಕಟ ಬಾರೋ ರಿಪುಸಂಕಟ ಬಾರೊ ಕಿಂಕರಿಗೊಲಿದ ನಿಶ್ಶಂಕ ಬಾರೋ ಪ ಪೊಂದೇರಿನೊಳಗೆ ಭೂಮಿ ಇಂದಿರೆಗೂಡಿ ಚೆಂದದಿಂದಲೊಪ್ಪುತಿಹ ಇಂದುವದÀನ ಮಂದರೋದ್ಧಾರನೆ ಮಹಾನಂದ ಮೂರುತಿ ಪಾದ ವಂದಿಪನೆಂದು 1 ಲೌಕೀಕ ವಿಲಕ್ಷಣ ಅನೇಕ ಏಕ ಸಾಕಾರ ವಿಗ್ರಹ ಪುಣ್ಯಶ್ಲೋಕ ವಿಭುವೆ ಪ್ರಾಕೃತ ರಹಿತಗಾತ್ರ ಲೋಕಪಾವನ ಶೋಕ ಮೂಲ ನಾಶನ ವಿಶೋಕ ಜನಕ 2 ಅಂಗ ಅಂಗೀ ಭಾವದಿಂದ ಅಂಗದೊಳಿದ್ದು ಸಂಗಡ ತಿರುಗುವೊ ನೀಲಾಂಗ ನಿಸ್ಸಂಗ ಭೃಂಗ ಜಗದಂತೆ- ರಂಗ ರಂಗರಾಜ ಸುಖಸಂಗ ಅನಂಗ 3 ಆಪ್ತಕಾಮ ಅಮೃತಾಂಗ ಗುಪ್ತಮಹಿಮ ತಪ್ತಕಾಂಚನ ಸನ್ನಿಭ ವ್ಯಾಪ್ತ ನಿತ್ಯಾ ತೃಪ್ತ ತೃಣ ಬೊಮ್ಮಾದಿ ನಿರ್ಲಿಪ್ತವಾಸ ಸಪ್ತ ಸಪ್ತ ಲೋಕೇಶ ಅತೃಪ್ತ ಲೀಲ 4 ಅಗಣಿತ ಬಂಧು ಅಗನಾಗ ಧಾರಕನೆ ನಾಗ ಭಂಜನ ಆಗಸದಂಗಾಂಗುಷ್ಟದಿಂದ ಪೆತ್ತನೆ ಆಗಲೀಗಲೆನ್ನದಲೆ ಸಾಗಿ ಬೇಗದಿ5 ನಿರ್ದೋಷ ವಸ್ತು ನೀನೆಂದು ನಿರ್ಧಾರ ಮಾಡೆ ಪೊದ್ದಿಪ್ಪವು ನಿನ್ನಲಿ ನಾಲ್ಕು ನಿರ್ದೋಷಂಗಳು ಭದ್ರ ಫಲದಾಯಕ ಸಮುದ್ರಶಯನ ಮಧ್ಯಜೀವಿ ವಂದ್ಯ ಸುಪ್ರಸನ್ನ ಮೋಹನ್ನ 6 ಜೀವಾಭಿಮಾನಿ ಗಿರೀಶ ದೇವ ದೇವೇಶ ಜೀವರಾಶಿಗಳ ಸ್ವಾಭಾವ ಪ್ರೇರಕ ಜೀವನನಾಗಿ ನಮ್ಮ ಕಾವುತಲಿಪ್ಪ ರಾ- ಜೀವ ನಯನ ವಿಜಯ ವಿಠ್ಠಲ ಪೂರ್ಣ 7
--------------
ವಿಜಯದಾಸ
ವೆಂಕಟಾಚಲನೆ ಬಾರೊ ಶಂಕರಾಭರಣ ಶಾಯಿ | ಕಿಂಕರರಿಗೊಲಿದ ನಿಃಶಂಕ ಬಾರೊ ಪ ಇಂದಿರೆ ಕೂಡ | ಚಂದದಿಂದಲೊಪ್ಪುತಿಹ ಇಂದುವದನಾ || ಮಂದರೋದ್ಧಾರನೆ ಮಹನಂದ ಮೂರುತಿ | ವೃಂದಾರಕ ವಂದ್ಯಪಾಲ ವಂದಿಪೆ ನಿಂದು 1 ಲೌಕಿಕ ವಿಲಕ್ಷಣ ಅನೇಕ ಏಕಾ | ಸಾಕಾರ ವಿಗ್ರಹ ಪುಣ್ಯಶ್ಲೋಕ ವಿಭುವೆ || ಪ್ರಾಕೃತ ರಹಿತಗಾತ್ರ ಲೋಕಪಾವನ | ಶೋಕ ಮೂಲನಾಶನ ಅಶೋಕ ಜನಕಾ 2 ಮಣಿ ಅಗಣಿತ ಬಂಧು | ಆಗನಾಗಧಾರಕನೆ ನಾಗ ಭಂಜನಾ || ಆಕಾಶ ಗಂಗೆಯ ಅಂಗುಷ್ಟದಿ ಪೆತ್ತನೆ | ಆಗಲೀಗಲೆನ್ನದಲೆ ಸಾಗಿ ವೇಗದಿ 3 ಅಂಗ ಅಂಗಿ ಭಾವದಿಂದ ಅಂಗದೊಳಿದ್ದು | ಸಂಗಡ ತಿರುಗುವ ನೀಲಾಂಗ ನಿಃಸಂಗಾ || ಭೃಂಗ ಜಗದಂತ | ರಂಗ ರಂಗರಾಜ ಸುಖಸಂಗ ನಿಸ್ಸಂಗಾ 4 ಆಪ್ತಕಾಮಿ ಅಮೃತಾಂಗ ಗುಪ್ತ ಮಹಿಮ | ತಪ್ತ ಕಾಂಚನ ಸನ್ನಿಭ ವ್ಯಾಪ್ತ ನಿತ್ಯಾ || ತೃಪ್ತ ತೃಣ ಬೊಮ್ಮದಿ ನಿರ್ಲಿಪ್ತ ವ್ಯಾಪ್ತಾ | ಸಪ್ತ ಸಪ್ತ ಲೋಕೇಶ ಅತೃಪ್ತ ಲೀಲಾ 5 ನಿರ್ದೋಷ ವಸ್ತುವಿನಿಂದ ನಿರ್ಧರ ಮಾಡೆ | ಪೊಂದಿಪ್ಪವು ನಿನ್ನಲಿ ನಾಲ್ಕು ನಿರ್ದೋಷಂಗಳೂ || ಭದ್ರ ಫಲದಾಯಕ ಸಮುದ್ರಶಯನಾ | ಮಧ್ಯಜೀವಿ ವಂದ್ಯ ಸುಪ್ರಸಿದ್ಧ ಮೋಹನ 6 ಜೀವಾಭಿಮಾನಿ ಗಿರೀಶ ದೇವ ದೇವೇಶಾ | ಜೀವ ರಾಶಿಗಳ ಸ್ವಭಾವ ಪ್ರೇರಕಾ || ಜೀವನವಾಗಿ ನಮ್ಮನು ಕಾವುತಿಪ್ಪ | ರಾಜೀವ ನಯನ ವಿಜಯವಿಠ್ಠಲ ಪೂರ್ಣಾ 7
--------------
ವಿಜಯದಾಸ
ವ್ಯಾಸರಾಯ ನಿನ್ನ ಅನುದಿನಾ | ಸ್ಮರಿಪ ಜನಕೆತೋಷದಿಂದ ಲೀವೆ ಸಾಧನಾ |ವಾಸುದೇವ ಕೃಷ್ಣಲೀಲೆ | ರಾಶಿಗುಣವ ಬೋಧಿಸುತ್ತಶ್ರೀಶ ಪಾದಪದುಮ ಕಾಂಬ | ಲೇಸು ಮುಕ್ತಿ ಮಾರ್ಗತೋರ್ವೆ ಅ.ಪ. ಏಸೊ ಮುನಿಗಳಿದ್ದು ಮಾಡದಾ | ಶಾಸ್ತ್ರವೆಂಬ ಭೂಷಣಂಗಳ್ಹರಿಗೆ ತೊಡಿಸಿದಾ |ಕೇಶವನೆ ಸರ್ವೋತ್ತಮನು | ದೋಷದೂರನೆಂದು ತಿಳಿಸಿಮೋಸಪಡಿಪ ಮಾಯಿ ಮತವ | ಘಾಸಿಮಾಡಿ ಜಯವ ಪಡೆದೆ 1 ವಾಸುದೇವ ವಾಲೀಲೆಯಏಸೊ ವಾದಿ ಜಯದ ಪತ್ರ | ಭೂಷಣಗಳ್ ಶ್ರೀಶಗಿತ್ತೆ 2 ಶೇಷನಾವೇಶದಿಂದಲಿ | ಪುಟ್ಟಿ ನೀವುವ್ಯಾಸರಾಯರೆಂಬ ಪೆಸರಲಿ |ದೇಶ ಪತಿಗೆ ಬಂದ ಕುಹು | ದೋಷಯೋಗ ಹರಿಸುತ ಸಿಂಹಾಸನೇರಿ ಜಗದಿ ಬಹಳ | ಭಾಸುರ ಸುಕೀರ್ತಿ ಪಡೆದೆ 3 ನ್ಯಾಯ ಗ್ರಂಥವೆಂದು ಕರೆಸಿಹ | ಚಂದ್ರಿಕಾದಿನ್ಯಾಯಾ ಮೃತವು ತರ್ಕ ತಾಂಡವ |ಗೇಯದಿಂದ ತುಚ್ಛ ಭಾಷ್ಯ | ಗಾಯನ ಮಾಡ್ದದುರ್ಮತೆನ್ನ ಮಾಯಿಮತವ ಗೆದ್ದು ಮಧ್ವ | ಧೇಯ ಸಾಧಿಸೀದ ಗುರುವೆ 4 ಪರಮ ಶಿಷ್ಯರೆಂದು ಮೆರೆವರಾ | ವಿಜಯಿಂದ್ರವರ ಸುವಾದಿರಾಜರೆಂಬರಾ |ಗುರುಗಳಾಗಿ ಯತಿ ಸುರೇಂದ್ರ | ವರ ಸುಪುತ್ರ ಭಕ್ಷೆ ಬೇಡೆಪರಮ ಹರುಷದಿಂದ ವಿಜಯ | ಇಂದ್ರರನ್ನ ಕಳುಹಿ ಪೊರೆದೆ 5 ಜ್ಞಾನಿಯರಸ ವ್ಯಾಸ ಮುನಿಗಳಾ | ಮನುಜರೆಂದುಹೀನ ಜನರು ಪೇಳೆ ಆವರ್ಗಳಾ |ಭಾನುಸೂನು ನರಕ$ನೇಕ | ಕಾಣಿಸುತ್ತ ಹಿಂಸಿಸೂವಶ್ರೀನಿವಾಸ ಹರಿಯ ಮುಂದೆ | ಗಾನ ಗೈದು ಆಡುತಲಿಪ್ಪ 6 ಪರಮಹಂಸ ಮುನಿಯು ಮನದಲಿ | ಪೂಜೆಗೈದುಹರಿಯ ಕಾಂಬ ಹೃದಯ ಗುಹೆಯಲಿ |ಗುರುವರ ಬ್ರಹ್ಮಣ್ಯ ಪೂಜ್ಯ | ಗುರು ಗೋವಿಂದ ವಿಠ್ಠಲಾನಚರಣ ವನಜ ಧ್ಯಾನಾಸಕ್ತ | ವರ ಸುನವ ವೃಂದಾವನಸ್ಥ 7
--------------
ಗುರುಗೋವಿಂದವಿಠಲರು
ವ್ಯಾಸಾ ಬದರಿ ನಿವಾಸಾ | ಎನ್ನಯ | ಕ್ಲೇಶ ನಾಶನಗೈಸು ಮೌನೀಶಾ | ಸಾಸಿರ ಮಹಿಮನೆ | ದೋಷರಹಿತ ಸುರ ಭೂಸುರ ಪರಿಪಾಲ ಶಾಶ್ವತ ವೇದ ಪ ಸತ್ಯವತಿ ವರಸೂನು ಭವತಿಮಿರ ಭಾನು | ಭೃತ್ಯವರ್ಗದ ಸುರಧೇನು | ಸತ್ಯಮೂರುತಿಯೆ ನೀನು | ಸ್ತುತಿಪೆ ನಾನು || ಹೊತ್ತು ಹೊತ್ತಿಗೆ ಸೂಸುತ್ತಿರಲೆನಗದು | ಅತ್ಯಂತ ಸುಖತರ | ಸುತ್ತವ ಸುಳಿಯೆಂದೆತ್ತಿ ಕಡೆಗೆಯಿಡು | ಎತ್ತ ನೋಡಲು ವ್ಯಾಪುತ ಸದಾಗಮ 1 ಲೋಕ ವಿಲಕ್ಷಣ ಋಷಿ | ಗುಣವಾರಿ ರಾಸಿ | ವೈಕುಂಠ ನಗರನಿವಾಸಿ | ನಾಕಾರಿಗಳ ಕುಲದ್ವೇಷಿ ಚಿತ್ರ ಸನ್ಯಾಸಿ | ಬೇಕೆಂದು ಭಜಿಪೆ ನಿಲಸಿ | ಜೋಕೆ ಮಾಡುವುದ | ನೇಕ ಪರಿಯಿಂದ | ನಿಕರ ತರಿಸದೆ | ಭೂಕಾಂತರು ನೋಡೆ | ಸಾಕಾರ ದೇವ ಕೃಪಾಕರ ಮುನಿ ದಿವಾಕರ ಭಾಸಾ2 ನಿರುತ ಎನ್ನಯ ಅರಿಷ್ಟ | ಮೆರೆವ ಉನ್ನತ ವಿಶಿಷ್ಟ | ಉರಗ ಕಿನ್ನರ ಗಂಧರ್ವರ | ಕರಕಮಲಗಳಿಂದ | ವರಪೂಜೆಗೊಂಬ | ಸಿರಿ ಅರಸನೆ ನಮ್ಮ ವಿಜಯವಿಠ್ಠಲ ಪರಾ | ಶರಸುತ ಬಲು ವಿಸ್ತರ ಜ್ಞಾನಾಂಬುಧೆ || 3
--------------
ವಿಜಯದಾಸ
ಶರಣಾಗತರಕ್ಷಕ ಬೇಗದಿ ಬಂದು ಮನಮಂದಿರದಿ ನಿಲ್ಲೋ ಪ ಈ ಕರೆಕರೆ ಸಂಸಾರಶರಧಿಯೊಳು ನಿಂದೆ ಹರಿಯೆ ನಿಲ್ಲೊಂದರಘಳಿಗೆಯಾದರೂ ಮನದಿಅ.ಪ ತೋಯಜಾಂಬಕ ನಿನ್ನ ನಾನೆಂದಿಗೆ ಕಾಯದೊಳು ಕಾಂಬೆನೊ ಮಾಯಾರಮಣನೆ ನೀ ಮಾಯವ ಹರಿಸಯ್ಯ ಆಯಾಸಗೊಳಿಸದೆ ಕಾಯುವುದೀಗಲೆ 1 ನಾನಾಯೋನಿಗಳಲ್ಲಿ ನಾ ಬರಲಂಜೆನೋ ಶ್ವಾನಸೂಕರ ಜನ್ಮದಿ ನೀನಿಟ್ಟರಾದರು ಶ್ರೀನಿಧಿಯೆ ನಿನ್ನಯ ಸ್ಮ- ರಣೆ ಒಂದಿದ್ದರೆ ನಾ ಧನ್ಯ ಧನ್ಯನೋ2 ಲೋಕಾಲೋಕೋದ್ಧಾರನೆ ನಿನ್ನಾಜ್ಞೆಯಿಂ ನಾಕೇಶ ಮೊದಲಾದ ಪಿ- ನಾಕಿ ಪ್ರಮುಖರು ಅನೇಕ ಕಾರ್ಯವೆಸಗಿ ಶೋಕಪಡಿಸುವರಯ್ಯ 3 ದುರ್ಗಾಶ್ರೀರಮಣ ಎನ್ನ ಸಂಸೃತಿಯೆಲ್ಲ ದುರ್ಗಮವಾಗಿಹುದೊ ಸ್ವರ್ಗ ಅಪ- ವರ್ಗಪ್ರದನೆ ಎನ್ನಯ ಭವ- ದುರ್ಗಕಡಿದು ಸನ್ಮಾರ್ಗ ಕರುಣಿಸೊ 4 ಸ್ವಾಮಿತೀರ್ಥದಿವಾಸ ಶ್ರೀಜಗದೀಶ ಸ್ವಾಮಿ ಶ್ರೀ ವೆಂಕಟೇಶ ಪಾಮರನಾದೆನ್ನ ತಾಮಸ ಹರಿಸಿ ಹೃತ್ಕಮಲದಲಿ ನಿಲ್ಲೊ ಕಮಲಾಪತಿಯೆ ದೇವ 5
--------------
ಉರಗಾದ್ರಿವಾಸವಿಠಲದಾಸರು
ಶರಣು ಗುರು ಬ್ರಹ್ಮಣ್ಯ | ಶರಣು ಶಿರಿ ಸುರಮಾನ್ಯಪರಿಹರಿಸು ಭವತಾಪ | ಬಿನ್ನವಿಪೆ ಮುನಿಪ ಪ ಪುರುಷೋತ್ಮ ಕರಜಾತ | ಕಣ್ವತಟದಲಿ ಖ್ಯಾತನರಹರಿಯ ಪದಕಮಲ | ಭಜಕಶೀಲಶರಣ ಜನ ಸುರಕಲ್ಪ | ತರುವೆ ಎನ್ನಯ ಪಾಪಪರಿಹರಿಸೊ ಮುನಿಮೌಳಿ | ನಾನು ಪದಧೂಳಿ 1 ಯೋನಿ ಅನೇಕದಲಿ | ಬಂದಿರುವೆ ನಾಬಳಲಿಮಾನ ನಿಧಿ ನೀಯನ್ನ | ಕಾಯೊ ದಯ ಪೂರ್ಣ |ಜ್ಞಾನಾರ್ಕನೆನಿಸಿರುವ | ಮೌನಿ ತವ ಸದ್ಭಾವಪೂರ್ಣ ಹರಿ ಸುಜ್ಞಾನ | ಪಾಲಿಸೈ ನಿಪುಣ 2 ವಿಕಳ ಮತಿಯನು ಹರಿಸು | ಅಕಳಂಕನೆಂದೆನಿಸುಸುಖತೀರ್ಥ ಮತ ಸುಧೆಯ | ಉಣುವ ಪರಿಯ |ಸುಖದಿಂದ ಕರುಣಿಸುತ | ಸುಖ ಹರಿಯ ನೋಳ್ಪಂಥಪ್ರಕರಣದಲಿರಿಸೆನ್ನ | ಮೌನಿ ಕುಲರನ್ನ 3 ಸುಕೃತ ಒಂದಿರಲಿ | ನಿನ್ನ ದಯವಿರಲಿ 4 ವಿಠ್ಠಲ ಸುಪೂಜಕನೆ | ಕಷ್ಟಗಳ ಕಳೆಯುವನೆಶಿಷ್ಟ ಸಜ್ಜನ ಪಾಲ | ಹರಿಪದ ವಿಲೋಲ ಕೃಷ್ಣ ಗುರು ಗೋವಿಂದ | ವಿಠ್ಠಲನ ಪದದ್ವಂದ್ವಸುಷ್ಠು ಹೃದ್ಗುಹದಲ್ಲಿ | ಕಾಣಿಪುದು ಅಲ್ಲಿ 5
--------------
ಗುರುಗೋವಿಂದವಿಠಲರು
ಶರಣು ಶರಣು ಕೃಷ್ಣಕೃಷ್ಣ ಶರಣು ಶರಣು ರಾಮ ರಾಮ ಶರಣು ಶರಣು ಶ್ರೀನಿವಾಸ ಶರಣು ಶರಣು ಶ್ರೀ ಹರೇ ಪ ಗುರುಸು ಭಕ್ತಿ ನೀಡಿ ಎನಗೆ ವರಿಸಿ ಶುದ್ಧ ದಾಸನೆಂದು ಕರುಣ ತೋರೊ ಕೇಶವ ಅನಂತ ರೂಪಿಯೇ ಅ.ಪ ಲೇಸಿನಿಂದ ಬ್ರಹ್ಮಶಿವರ ಪ್ರೇರಿಸುತ್ತ ಜಗವ ಪೊರೆವೆ ದಾಸನೆಂದು ಮೊರೆಯ ಹೊಕ್ಕೆ ಕಾಯೊ ಕೇಶವಾ 1 ವಾರಿನಿಲಯ ದೋಷದೂರ ಪೂರ್ಣಕಾಮ ಮುಕ್ತರೀಶ ಶರಧಿ ನಾರಾಯಣ 2 ವೇದಮಾತೆ ಶೃತಿ ಸುಗೀತೆ ವೇದಮಾನಿ ಲಕ್ಷಿರಮಣ ಶೂನ್ಯ ಮಾಧವ 3 ವಿನುತ ಸಾರ ವೇದಬಲ್ಲ ಸಾಧು ಪ್ರಾಪ್ಯ ವೇದಪಾಲ ಶರಣು ಗೋವಿಂದ 4 ವಿಶ್ವಜನಕ ವಿಶ್ವಪಾಲ ವಿಶ್ವವ್ಯಾಪ್ತ ವಿಶ್ವಭೋಕ್ತ ವಿಶ್ವಜೂತಿ ವಿಶ್ವಬಲನೆ ಶರಣು ವಿಷ್ಣುವೆ 5 ಆದಿ ದೈತ್ಯರನ್ನು ಕೊಂದು ಮೇದಿನೀಯ ಪೊರೆದ ದೇವ ಬಾಧೆ ಹರಿಸು ಮೂರು ವಿಧಧ ಮಧುಸೂದನ 6 ಲೋಕತ್ರಯವ ನಳೆದ ನೇಕ ಏಕನಿನಗೆ ಸಾಟಿಯಾರು ಜೋಕೆಯಿಂದ ಸಾಕಬೇಕು ತ್ರಿ-ವಿಕ್ರಮ 7 ಸೋಮ ಹಳಿದ ಕಾಂತಿಧಾಮ ನೇಮದಿಂದ ಬಲಿಯ ಕಾಯ್ದೆ ಹೇಮ ಜ್ಯೋತಿ ಪೂರ್ಣ ಸುಖಿಯೆ ಶರಣು ವಾಮನ 8 ಬೊಮ್ಮಶಿವರ ಕುಣಿಸಿ ಆಳ್ವ ಅಮ್ಮ ಪ್ರಕೃತಿಯನ್ನು ಧರಿಸಿ ಸುಮ್ಮಗೇನೆ ಜಗವ ಕಾವೆ ಶರಣು ಶ್ರೀಧರ 9 ಕರಣ ವ್ರಾತದಲ್ಲಿ ನಿಂತು ಕರಣಕಾರ್ಯಗಳನು ನಡಿಸಿ ಕರಣ ಪತಿಗಳನ್ನು ಪೊರೆವೆ ಹೃಷಿಕೇಶನೆ 10 ಉದರದಲ್ಲಿ ಜಗವ ಪೊತ್ತು ಸದರದಿಂದ ಒಪ್ಪಿಕೊಂಡೆ ಉದರದಲ್ಲಿ ರಜ್ಜುಭಂಧ ದಾಮೋದರ 11 ಚೊಕ್ಕವಿಧಿಯ ಹಾಗೆ ಜಗವ ಕುಕ್ಷಿಯಲ್ಲಿ ಪಡೆದ ದೇವ ಶರಧಿ ಶಯನ ಪದ್ಮನಾಭನೆ12 ಭಕ್ತಜನರ ಪಾಪಸೆಳೆವ ಶಕ್ತ ಪ್ರಲಯ ಸ್ತುತಿಗೈವ ದೇವ ಮುಕ್ತಿದಾತ ವಿಶ್ವಕುಕ್ಷಿ ವಾಸುದೇವನೆ 14 ಮೇರೆಯಿರದ ಕಾಂತಿಮಯನೆ ಸೇರಿ ಭಾಸ ಕೊಡುವೆ ರವಿಗೆ ಬೀರಿ ಜ್ಞಾನ ಭ್ರಾಂತಿ ಹರಿಸು ಪ್ರ-ದುಮ್ನನೆ 15 ನೀ ನಿರೋಧ ಕಾಣೆ ಎಂದು ನೀನೆ ಸಿಗುವೆ ಭಕ್ತಿ ಬಲೆಗೆ ಕೃಪಣ ಕ್ಷಮಿಸು ಅನಿ-ರುಧ್ಧನೆ 16 ಕ್ಷರರು ಜೀವ ರಾಶಿ ಎಲ್ಲಕ್ಷರ ವಿರುಧ್ಧ ಲಕ್ಷ್ಮಿತಾನು ವರನು ಭಿನ್ನ ಉಭಯರಿಂದ ಪುರುಷೋತ್ತಮ 17 ಕರಣಗಳಿಗೆ ಸಿಗುವನಲ್ಲ ಕರಣಗಳಲಿ ಭೇದವಿಲ್ಲ ಕರಣಜಯವ ಸಿಧ್ಧಿಸೆನಗೆ ಅ-ಧೋಕ್ಷಜ18 ದೋಶರಹಿತ ಮುಕ್ತರೀಶ ನಾಶರಹಿತ ಲಕ್ಷ್ಮಿರಮಣ ಈಶಬಿಂಬ ಜೀವ ಹೃಸ್ಥ ನಾರಸಿಂಹನೆ 19 ಜೀವರೊಡನೆ ವಿತತ(ಇರುವೆ) ಅಚ್ಯುತ 20 ಇಂದ್ರನನುಜ-ನಿಜಮಹೇಂದ್ರ ತಂದೆ ಸುಖವ-ದಿವಿಜಣಕೆ ವಂದ್ಯ ವಂದ್ಯ-ವಂದಿಸುವೆನು ಶ್ರೀ- ಉಪೇಂದ್ರನೆ 21 ಸೃಷ್ಠಿಗೈದು ಜಗವ ಲಯಿಪೆ ದುಷ್ಟದಮನ ಶಿಷ್ಟವರದ ಹುಟ್ಟು ಸಾವು ಕಟ್ಟು ಬಿಡಿಸೊ ಶ್ರೀ ಜನಾರ್ದನ 22 ಯಜ್ಞಭೋಕ್ತ ಮನುವ ಪೊರೆದೆ ಭಗ್ನಗೈಸಿ ದೋಷವೆನ್ನ ಜ್ಞಾನ ನೀಡೋ ಸುಜ್ಞನೆನಿಸು ವಾಜಿವದನ ಶರಣು ಶ್ರೀಹರೇ 23 ವಿಭವ ಮೂರ್ತಿ ಭಕ್ತಮನವ ಪಾಪ ಸೆಳಿವೆ ರಿಕ್ತನಾನು ಸರ್ವವಿಧಧಿ ಕಾಯೊ ಶ್ರೀಕೃಷ್ಣ 24 ಸರ್ವ ಶಬ್ದವಾಚ್ಯ “ಶ್ರೀಕೃಷ್ಣವಿಠಲ”ನನ್ನು ನೆನೆಯೆ ಸರ್ವಸುಖಗಳಿತ್ತುಕಾವ ಜಿಷ್ಣು ತೆರದಿ ಸತ್ಯಹೋ 25
--------------
ಕೃಷ್ಣವಿಠಲದಾಸರು
ಶರಣು ಶರಣು ಶ್ರೀ ದತ್ತಾತ್ರೇಯಾ ಶರಣು ಸಕಲಾ ಭುವನಾಶ್ರಯಾ ಶರಣೆಂಬೆ ಸಿಂಹಾಚಲ ನಿಲಯಾ ಸುರಜನ ರೇಯಾ ಸಲಹಯ್ಯಾ 1 ವನರುಹ ಸಂಭವ ತ್ರಿಲೋಚನ ಸನಕಾದಿ ಮುನಿ ವಂದಿತ ಚರಣ ಜನವನ ವಿಜನ ವ್ಯಾಪಕ ಘನ ಅನಸೂಯಾ ನಂದನ ಯೋಗೀಶಾ 2 ತತ್ವಯೋಗ ಸಿದ್ಧಿ ಬುದ್ಧಿ ದಾತಾರಾ ಸತ್ವ ಗುಣಾಲಂ ಕೃತ ಜ್ಞಾನ ಸಾಗರಾ ಸತ್ಯ ಸನಾತನೇ ಮುನಿ ದಿಗಂಬರಾ ಭಕ್ತ ಸಹಕಾರಾ ಅವಧೂತಾ 3 ಕಂದರ್ಪ ಕೋಟಿ ಸುಂದರಾಕಾರಾ ಹೊಂದಿದಾಭರಣಾನೇಕ ಶೃಂಗಾರಾ ಇಂದು ಸೂರ್ಯಾನಳ ತೇಜ ವ್ಯಾಪಾರಾ ಎಂದೆಂದೆಚ್ಚರಾ ಕಂಡು ನಿನ್ನಾ 4 ಮಂದಮತಿ ಬಾಲನ ಬಿನ್ನಾಹದ ಸ್ತುತಿ ಬಂದು ಅರ್ಪಿಸಿಕೋ ದುದಿ ಶ್ರೀಪತಿ ಇಂದು ಮೊರೆ ಹೊಕ್ಕೆನು ಅನನ್ಯಾಗತಿತಂದೇ ಮಹಿಪತಿ ಸುತ ಸ್ವಾಮೀ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣೆಂಬೆ ಗುರುರಾಯಾ ಶರಣ ಜನರಾಶ್ರಯಾ ಶರಣು ಸಮೀರ ಕುಮಾರ ಉದಾರನೆ ಶರಣು ಪಾವನ ಕಾಯಾ ಪ ಹರಿ ಪೂರ್ಣಾಂಶದಿ ಜನಿಸಿ ಹರಿ ಕುಲೋದ್ಬವ ನೆನಿಸಿ ಹರಿಯತುಡಕಿ ಬಂದು ಹರಿತೇಜದಿ ನಿಂದು ಹರಿಸೆ ಧನುಜ ಮೃಗವಾ ಹರಿರೂಪದಲಿ ನಿಂದೆಹರಿಮಂದಿರದಲಿನಲಿದೆ ಹರಿಬರಲು ನಮಿಸಿ ಹರಿದಶ್ವಜ ಗೊಲಿಸಿ ಹರಿಹಯಜಗ ಮುನಿದೇ 1 ಗೋಪೆಂದ್ರ ನಾಜÉ್ಞಯಲಿ ಗೋಪದಾಂಬುಧಿ ಪರಿಲಿ ಗೋಪನಲಂಘಿಸಿ ಗೋಪುತ್ರಿಯ ಕಂಡು ಗೋಪೀಡಕರ ಮುರಿದೇ ಗೋಪಾಲಗಿದಿರಾಗಿ ಗೋಪಾಸ್ತ್ರವಶವಾಗಿ ಗೋಪುರವ ನುರುಹಿ ಗೋಪಾನ್ವಯ ಗುರುಹಿ ಗೋಪದವಿಯ ಪಡೆದೆ 2 ಮಹಿದರಾನೇಕವತಂದು ಮಹೋದಧಿಯನೆ ಜಿಗಿದು ಅಹಿ ಮಹಿರಾವಣಾನ್ವಯ ಮಹಿರುಹದಲಿ ತರಿದೇ ಮಹಿಯೋಳು ಮೂರವತಾರಿ ಮಹಿಮಾನೆಕವಬೀರಿ ಮಹಿಪತಿ ಸುತಪ್ರಭು ಮಹಿಜಳ ಕೂಡಿಸಿ ಮಹದಾ ಗ್ರಣಿಯಾದೆ ||
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶಶಿಮುಖಿ ಜಾನಕಿ ರಮಣ ವಸುಧೆಯೊಳಗೆ ನಿಮ್ಮ ಭಜನೆಯ ಮಾಡುವರ ಶಿಶುವುಯೆಂದು ತಿಳಿದು ಶೀಘ್ರದಿ ರಕ್ಷಿಸೊ ಪ ಪಶುಪತಿ ರಕ್ಷಕ ಪಾವನ ಮೂರ್ತಿ ಪಶುಪಾಲಕನಾದ ಪರಮಾತ್ಮ ಕುಸುಮಜನನು ಅತಿಕರುಣದಿ ನೀನು ಕುಶಲದಿ ಪಡೆದ ಗುಣವಂತಾ ಹಸ ಮೀರಿನಡೆವಂತ ಅನೇಕ ದುಷ್ಟ ಅಸುರರ ಛೇದಿಸಿದ ಬಲವಂತಾ ದಶದಿಕ್ಕಿನೊಳಗೆ ದಾರನು ಕಾಣೆನೊ ದಶವಂತನು ನಿನಗಾರು ಸರಿಹಾರೊ 1 ಪಿತೃವಾಕ್ಯ ಪರಿಪಾಲನೆ ಮಾಡಿದ ಪುತ್ರನು ಅನಿಸಿದ ಪುಣ್ಯನಿಧಿ ಪತಿ ಧರ್ಮವ ಸರ್ವದಾ ನಡೆಸುವ ಸತ್ಯಮೂರ್ತಿ ಸೌಭಾಗ್ಯನಿಧಿ ಶತದ್ರೋಹಿಯಾಗಿ ಸೀತೆಯ ಒಯ್ದನ ಶತಮುಖನಯ್ಯನ ಸಂಹರಿಸಿದಿ ಸತತ ವಿಭೀಷಣ ಭಕ್ತಿಯಿಟ್ಟ ಸಲುವಾಗಿ ಲಂಕೆಯ ಧಾರೆಯನೆರದೀ 2 ಯಾದವ ಕುಲಪತಿ ಯಶೋದೆನಂದನ ವ್ಯಾಧನ ರಕ್ಷಿಸಿದಿ ವಿಶ್ವೇಶ ಬಾಧಕ್ಕೆ ಒಳಗಾಗಿ ಕರಿಕೂಗಲು ಮಕರಿ ಬಾಧೆಯ ತಪ್ಪಿಸಿದ ಪರಮೇಶಾ ಸಾಧು ಸಜ್ಜನ ಸರ್ವರ ಸಲಹುವ ಸಾಧು ಗುಣಾನಂದ ಸರ್ವೇಶಾ ಮಾಧವ `ಸಿರಿಹೆನ್ನೆ ವಿಠಲ' ನಿನ್ನಯ ಮೋದವ ತೋರೋ ಜಗದೀಶಾ 3
--------------
ಹೆನ್ನೆರಂಗದಾಸರು
ಶಿವರಗಳೆ ಉದಯದಲೆದ್ದು ಸದಾಶಿವ ಎನ್ನಿ |ಅದರಿಂದಲಿ ಸದ್ಗತಿಗಿರುವದು ಒಂದೇ ಹಾದಿ |ನಾನಾ ಗ್ರಂಥಗಳ್ಯಾತಕ ಓದೀ |ಓದಿದರೋದಲಿ ಬೇಕಧ್ಯಾತ್ಮಾ ||ಸಾಧಿಸಿ ಬರುವನು ಶಿವ ಸರ್ವೋತ್ತಮಾಸರ್ವೋತ್ತಮ ತಿಳಿದರೆ ಸಾಕು |ಅನೇಕ ಶಾಸ್ತ್ರಗಳೇತಕೆ ಬೇಕು |ಬೇಕೆಂಬೋದೇ ಬಿಡುವದೆ ಪರಮಾರ್ಥಲೋಕದ ಪರಿಯಲ್ಲಿರುವದೆ ಸ್ವಾರ್ಥ |ಸ್ವಾರ್ಥಕೆ ಪರಮಾರ್ಥಕೆ ಬಹು ದೂರಾ |ಎರಡೂ ಸಮನಿಸಿದವನೇ ಧೀರಾ ||ಧೀರ ಉದಾರಗೆ ಆರ ಹಂಗಿಲ್ಲಾ |ಸೂರೆಗೊಂಡನು ಮೂಜಗವೆಲ್ಲಾ |ಎಲ್ಲರಿಗೆ ತಾ ಬಲು ಕಿರಿದಾಗಿ |ಬಲ್ಲತನದ ಬಡಿವಾರವ3ೀಗಿನೀಗಿ ನಿಶ್ಚಿಂತ್ಯಾದರ ತ್ಯಾಗಿ ||ತ್ಯಾಗವು ಬಲಿತರೆ ಅವನೇ ಯೋಗಿಯೋಗಿಗೆ ಮೂಲಾ ಐಕ್ಯದ ಮಾಟಾ |ಬೇಗನೆ ತಿಳಿಯದು ಜೀವ ಶಿವ ಕೂಟಾ |ಕೂಟವ ತಿಳಿಯದೆ ಯಾತರ ಜ್ಞಾನಿ |ಚಾಟಕನಾದರೆ ಜ್ಞಾನಕೆ ಹಾನಿಹಾನಿಗೆ ಹಾನಿ ತಂದವ ಜಾಣಾಸ್ವಾನುಭವದಲಿದ್ದವ ಪ್ರತಿಗಾಣಾ |ಪ್ರತಿಗಾಣನು ಶಿವರತಿಯುಳ್ಳವನು |ಗತಿ ಬಯಸುವನು ಗುರು ಚರಣವನು |ಚರಣಗಳಲ್ಲಿ ವರಗಳು ಉಂಟು |ಗುರುಹಿರಿಯರಿಗೆ ಶರಣು ಹೋಗಿರಿ |ಪರಿಣಾಮದ ಘೋರಿಗೆ ಪರಿಪರಿ ಸ್ತುತಿಗಳು |ಪರಿ ಪರಿಸ್ತುತಿಗೆ ಪರಿಪರಿ ಪೂಜೀ |ಪರಿಪರಿ ಪೂಜಿಗೆ ಪರಿಪರಿ ವಾಜೀ ||ವಾಜಿ ಒಂದಾದರೆ ಸಹಜವೆ ತಾನು |ಮೂಜಗದೊಳಗಿದು ಸೋಜಿಗವೇನು |ಸೋಜಿಗವೆಂಬದು ಶ್ರಮದಲಿ ಮಾಯಾ ಕಂಟಕ ಕಾಕು ಭಂಗ ಬ್ರಹ್ಮಜ್ಞಾನ ಯೋಗಿ ಬ್ರಹ್ಮಜ್ಞಾನ ಬ್ರಹ್ಮಜ್ಞಾನ |ಸಿದ್ಧಗುರು ತ್ರಿಪುರಾಂತಕ ಧ್ಯಾನ |ಪ್ರಕಾಶ ಮುಖದಲಿ ಹೇಳಿದ ರಗಳಿ |ಶಿವ ಸಾಯೋಜ್ಯವೆ ಬೈಲನೆ ಹೊಗಳಿ ||
--------------
ನರಸಿಂಹ
ಶೇಷವಂದ್ಯ ಹರಿ ವಿಠಲ | ನೀ ಸಲಹೊ ಇವಳಾ ಪ ವಾಸುದೇವನೆ ಕೃಷ್ಣ | ಶ್ರೀಶ ಪುರುಷೋತ್ತಮ ಅ.ಪ. ಸೂಕರ ನೀಚ | ಯೋನಿಗಳಲಿ ಜನಿಸಿಜ್ಞಾನಾನು ಸಂಧಾನ | ಕಾಣದಿದ್ದಾಗ್ಯೂಅನೇಕ ಪೂರ್ವವೆನೆ | ಪುಣ್ಯ ಸಂಚಿತದಿಂದಮಾನವ ಸುಜನ್ಮದೊಳು | ಜನುಮ ಪೊತ್ರಿಹಳೊ 1 ತೈಜಸ ಸೂಚಿ | ವರ ಅಂಕಿತವನಿತ್ತೆಮರುತಾಂತರಾತ್ಮಕನೆ | ಮದ್ಬಿಂಜ ಪೊರೆಯಿವಳಾ 2 ವರಸು ಸೌಭಾಗ್ಯವನೆ | ಪರಿಹರಿಸಿ ದುಷ್ಕರ್ಮನಿರುತ ನಿನ್ನಯ ನಾಮ | ಸ್ಮರಣೆ ಸುಖವಿತ್ತೂಮರುತ ಮತ ತತ್ವಗಳ | ಅರಿವಾಗುವಂತೆಸಗೋಕರಿವರದ ಕಮಲಾಕ್ಷ | ಕಾರುಣ್ಯ ಮಾರ್ತೇ 3 ಪತಿಸುತರು ಹಿತರಲ್ಲಿ | ಕೃತಿರಮಣ ಸುವ್ಯಾಪ್ತಮತಿಇತ್ತು ಪೊರೆ ಇವಳ | ಕ್ಷಿತಿರಮಣ ದೇವಾಮತಿಮತಾಂ ವರರಂಘ್ರಿ | ಹಿತಸೇವೆ ದೊರಕಿಸುತಕೃತ ಕೃತ್ಯಳೆಂದೆನಿಸೊ | ಅತಿ ಚಿತ್ರ ಚರಿತಾ 4 ಕಾವ ಕರುಣಿಯೆ ದೇವ | ಭಾವುಕರ ಪರಿಪಾಲನೀವೊಲಿಯ ದಿನ್ನಿಲ್ಲ | ಆವತ್ರೈ ಜಗದೀನೋವುಸುಖ ದ್ವಂದ್ವಗಳ | ಸಮತೆಯು ಉಂಬಂತೆನಿವೊಲಿಯೊ ದೇವ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶೋಭಾನವೆನ್ನಿರೆ ಸ್ವರ್ಗಾರೋಹಿಣಿಗೆ | ಶೋಭಾನವೆನ್ನಿ ಶುಭವೆನ್ನಿ ಪ ಹರಿಪಾದ ನಖದಿಂದ ಬ್ರಹ್ಮಾಂಡವ ಶೀಳಲು | ಭರದಿಂದ ಇಳಿದು ಸತ್ಯಲೋಕ || ಭರದಿಂದ ಇಳಿದು ಸತ್ಯಲೋಕಕೆ ಬಂದ | ವಿರಜೆಗಾರುತಿಯ ಬೆಳಗಿರೇ 1 ಸರಸಿಜಾಸನ ನಮ್ಮ ಹರಿಪಾದ ತೊಳಿಯಲು | ಸರಸ ಸದ್ಗುಣ ಸುರಲೋಕ | ಸರಸ ಸದ್ಗುಣದಿ ಸುರಲೋಕಕೈದಿದಾ | ಸ್ವರ್ಣೆಗಾರುತಿಯ ಬೆಳಗಿರೇ 2 ಇಂದ್ರಲೋಕವ ಸಾರಿ ಧ್ರುವನ ಮಂಡಲಕಿಳಿದು | ಚಂದದಿಂದಲಿ ಮೇರುಗಿರಿಗೆ | ಚಂದದಿಂದಲಿ ಮೇರುಗಿರಿಗೆ ಬಂದಾ | ಸಿಂಧುವಿಗಾರುತಿಯ ಬೆಳಗಿರೇ 3 ಶತಕೋಟಿ ಎಂತೆಂಬ ಅಜನ ಮಂದಿರ ಪೊಕ್ಕು | ಚತುರ್ಭಾಗವಾಗಿ ಕರೆಸಿದ | ಚತುರ್ಭಾಗವಾಗಿ ಕರೆಸಿದ ಶ್ರೀ ಭೋಗ | ವತಿಗಾರುತಿಯ ಬೆಳಗಿರೇ4 ಇಂದ್ರ ದಿಕ್ಕಿಗೆ ಸಿತಾ ಚಕ್ಷು ಪಶ್ಚಿಮ ದಿಕ್ಕು | ಚಂದ್ರ ಯಮ ದಿಕ್ಕಿಗೆ ಭದ್ರದೇವಿ | ಚಂದ್ರ ಯಮ ದಿಕ್ಕಿಗೆ ಭದ್ರದೇವಿ ಅಳಕ | ನಂದಿನಿಗಾರುತಿಯ ಬೆಳಗಿರೇ 5 ಕುಂದ ಮಂದರೆ ಇಳಿದು ಗಂಧ ಮಾದನಗಿರಿಗೆ | ಹಿಂಗದೆ ಪುಟಿದು ವಾರಿನಿಧಿಯ | ಹಿಂಗದೆ ಪುಟಿದು ವಾರಿನಿಧಿಯ ನೆರದ | ಗಂಗೆಗಾರುತಿಯ ಬೆಳಗಿರೇ 6 ಗಿರಿಜೆ ಸೂಪಾರಶ್ವಕೆ ಧುಮುಕಿ ಮಾಲ್ಯವಂತಕೆ ಜಿಗಿದು | ಪರಿದಂಬುಧಿಯ ಕೂಡಿ ಮೆರದು | ಪರಿದಂಬುಧಿಯ ಕೂಡಿ ಮೆರದಾ | ತ್ರಿದಶೇಶ್ವರಿಗಾರುತಿ ಬೆಳಗಿರೇ7 ಕುಮುದಾದ್ರಿಗೆ ಇಳಿದು ನಲಾ ಶತ ಶೃಂಗ | ವನಧಿ | ವನಧಿ ಕೂಡಿದಾ | ಸುಮತಿಗಾರುತಿಯ ಬೆಳಗಿರೇ 8 ಮೇರು ಮಂದರಕಿಳಿದು ನಿಷಿಧ ಕಾಂಚನ ಕೂಟ | ಮೀರಿ ಹಿಮಗಿರಿಗೆ ಹಾರಿ ಬದರಿಗೆ | ಮೀರಿ ಹಿಮಗಿರಿಗೆ ಹಾರಿ ಬದರಿಗೆ ಬಂದಾ | ನಾರಿಗಾರುತಿಯ ಬೆಳಗಿರೇ 9 ಕ್ಷಿತಿಪ ಭಗೀರಥನಂದು ತಪವ ಒಲಿದು| ಅತಿಶಯವಾಗಿ ಧರೆಗಿಳಿದು | ಅತಿಶಯವಾಗಿ ಧರೆಗಳಿದು ಬಂದಾ | ಭಾಗೀರಥಿಗಾರುತಿಯ ಬೆಳಗಿರೇ10 ಮುನಿ ಜನ್ಹು ಮುದದಿಂದ ಆಪೋಶನವ ಮಾಡೆ | ಜನನಿ ಜಾನ್ಹವಿ ಎನಿಸಿದಾ| ಜನನಿ ಜಾನ್ಹವಿ ಎನಿಸಿದಾ ಮೂಜಗದ | ಜನನಿಗಾರುತಿಯ ಬೆಳಗಿರೇ 11 ವಿಷ್ಣು ಪ್ರಜಾಪತಿ ಕ್ಲೇತ್ರದಲ್ಲಿ ನಿಂದು | ಇಷ್ಟಾರ್ಥ ನಮಗೆ ಕೊಡುವಳು ಸತತ | ಇಷ್ಟಾರ್ಥ ನಮಗೆ ಕೊಡುವಳು ಸತತ ಸಂ | ತುಷ್ಟಿಗಾರುತಿಯ ಬೆಳಗಿರೇ 12 ಕ್ರಮದಿಂದ ಬಂದು ನಲಿವುತ ಸರಸ್ವತಿ | ಯಮುನೇರ ನೆರೆದು ತ್ರಿವೇಣಿ | ಯಮುನೇರ ನೆರೆದು ತ್ರಿವೇಣಿ ಎನಿಸಿದಾ | ವಿಮಲೆಗಾರುತಿ ಬೆಳಗಿರೇ13 ತ್ರಿವಿಧ ಜೀವರು ಬರಲು | ಅತ್ಯಂತವಾಗಿ ಅವರವರ | ಅತ್ಯಂತವಾಗಿ ಅವರವರ ಗತಿ ಕೊಡುವ | ಮಿತ್ರೆಗಾರುತಿ ಬೆಳಗಿರೇ 14 ಪತಿಯ ಸಂಗತಿಯಿಂದ ನಡೆತಂದು ಭಕುತಿಲಿ | ಸತಿಯಲ್ಲಿ ವೇಣಿಕೊಡಲಾಗಿ | ಸತಿಯಲ್ಲಿ ವೇಣಿ ಕೊಡಲಾಗಿ ಕಾವ ಮಹಾ | ಪ್ರತಿಗಾರುತಿ ಬೆಳಗಿರೇ 15 ವೇಣಿಯ ಕೊಟ್ಟಂಥ ನಾರಿಯ ಭಾಗ್ಯವು | ಪಡಿಗಾಣೆ | ಪಡಿಗಾಣೆ ಸುಖವೀವ | ಕಲ್ಯಾಣಿಗಾರುತಿಯ ಬೆಳಗಿರೇ 16 ಒಂದು ಜನ್ಮದಲಿ ವೇಣಿಯಿತ್ತವಳಿಗೆ | ಎಂದೆಂದು ಬಿಡದೆ ಐದೆತನವ | ಎಂದೆಂದು ಬಿಡದೆ ಐದೆತನವೀವ ಸುಖ | ಸಾಂದ್ರೆಗಾರುತಿಯ ಬೆಳಗಿರೇ 17 ವಾಚಾಮಗೋಚರೆ ವರುಣನರ್ಧಾಂಗಿನಿ | ಪ್ರಾಚೀನ ಕರ್ಮಾವಳಿ ಹಾರಿ | ಮಕರ | ವಾಚಳಿಗಾರುತಿಯ ಬೆಳಗಿರೇ 18 ಅಂತರ ಬಾಹಿರ ಪಾಪ ಅನೇಕವಾಗಿರೆ | ಸಂತೋಷದಿಂದಲಿ ಭಜಿಸಲು | ಸಂತೋಷದಿಂದಲಿ ಭಜಿಸಲು ಪೊರೆವ ಮಹಾ | ಕಾಂತೆಗಾರುತಿಯ ಬೆಳಗಿರೇ 19 ಗುರುಭಕುತಿ ತಾರತಮ್ಯ ಇಹಪರದಲ್ಲಿ ತಿಳಿದು | ಹರಿ ಪರನೆಂದು ಪೊಗಳುವರ | ಹರಿ ಪರನೆಂದು ಪೊಗಳುವರ ಪೊರೆವ | ಕರುಣಿಗಾರುತಿಯ ಬೆಳಗಿರೇ20 ಜಗದೊಳು ಪ್ರಯಾಗ ಕ್ಷೇತ್ರದಲ್ಲಿ ನಿಂದು | ಬಗೆ ಬಗೆ ಶುಭವ ಕೊಡುವಳು | ಬಗೆ ಬಗೆಯ ಶುಭವ ಕೊಡುವ ವಿಜಯವಿಠ್ಠಲನ | ಮಗಳಿಗಾರುತಿಯ ಬೆಳಗಿರೇ ಶೋಭಾನೆ 21
--------------
ವಿಜಯದಾಸ
ಶ್ರೀ ಲಕ್ಷ್ಮೀಶ ವಿಠಲಾ | ರಕ್ಷಿಸೋ ಇವನಾ ಪ ಕುಕ್ಷಿಯೊಳಗನ್ಯರನೆ | ರಕ್ಷಕರ ಕಾಣೇ ಅ.ಪ. ಮಧ್ವ ಮತದಲ್ಲಿವನು | ಶ್ರದ್ಧೆ ಭಕ್ತಿಯುತನುಪದ್ಧತಿಗಳಳವಡಿಸಿ | ಶುದ್ಧ ಸಾಧನದಾ |ಅಧ್ಯಯನಕೆಳೆ ತಂದು | ಬದ್ಧನನ | ಮಾಡುತ್ತಾಉದ್ಧರಿಸೋ ಶ್ರೀ ಹರಿಯೇ ಪದ್ಮನಾಭಾಖ್ಯಾ 1 ಭವ ಹಾರೀ2 ಸಾರ ಸಾರ ಸವಿ ಸವಿದುಂಬಭಾರಣಯಲಿರಿಸಯ್ಯ | ಮಾರಪಿತ ಹರಿಯೇ 3 ಕರ್ಮಗಳ ಮಾಳ್ಪುವಲಿ | ಮರ್ಮಗಳ ತಿಳಿಸಯ್ಯನಿರ್ಮಮತೆ ನೀಡುತ್ತ | ಧರ್ಮ ಸಾಧಕನೇಕರ್ಮನಾಮಕ ಹರಿಯೇ | ಪೇರ್ಮಣಯಲಿ ಇವನನ್ನುಕ್ರಮ್ಮಿಸೋ ಕರುಣದಲಿ | ಧರ್ಮಗುಪಾಧರ್ಮಿ 4 ಧಾವಿಸಿ ಬಂದಿಹನು | ದೇವ ತವ ದಾಸ್ಯಕೆನೆಭಾವಕನಿಗಿತ್ತಿಹೆನೊ | ಓವಿ ಉಪದೇಶಾಗೋವಳರ ಪ್ರಿಯ ಗುರು | ಗೋವಿಂದ ವಿಠಲನೆನೀ ವೊಲಿದು ಪೊರೆ ಇವನ | ದೇವ ದೇವೇಶಾ 5
--------------
ಗುರುಗೋವಿಂದವಿಠಲರು