ಒಟ್ಟು 1636 ಕಡೆಗಳಲ್ಲಿ , 112 ದಾಸರು , 1355 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಓಡ್ಯಾಡುತ ನೀ ಒಲಿದೊಲಿದು ಮನೆಗೆ ಬಾರೊ ಮುಕುಂದ ನೋಡೆನ್ನನು ದಯಮಾಡದಿರುವುದೇನು ಚೆಂದ ಪ ನೀಲವರ್ಣನೆ ನೀರಜಾಕ್ಷ ನಿನ್ನಪಾರ ಗುಣವ ನಾ ಏನುವರ್ಣಿಸಲ್ಹೇಳೊ ಸಾಕ್ಷ ಇಂದಿರಾಪತಿ ನಿನ್ನ ಆಕಾರ ನೋಡುವೆ- ನೆಂದ್ಹುಟ್ಟಿತೆನಗೆ ಮಹಾಪೇಕ್ಷ 1 ಹಸ್ತಿ ವರದ ಕೇಳು ನಿನ್ನ ಚರಣಾಬ್ಜಗಳಿಗೆ ನಾ ಮಸ್ತಕ ಬಾಗುವೆ ಮುನ್ನ ತಿಳಿ ಭೃತ್ಯನೆಂದೆನ್ನ ಚಿತ್ತಕೆ ತಂದು ನೀ- ನಾಗ ಬೇಕೆನಗೆ ಪ್ರಸನ್ನ 2 ಉಟ್ಟಾಂಬರನಿರಿಜರವು ಭೂಷಣ ಹೊಸ ಪರಿಯು ವಕ್ಷಸ್ಥಳದಿ ನೋಡೋ ಸಿರಿಯು ಇಟ್ಟಿರೋ ಬಾಪುರಿಯು ಶ್ರೇಷ್ಠ ಭೀಮೇಶ- ಕೃಷ್ಣನೆ ಲೋಕನಾಳುವ ದೊರೆಯು 3
--------------
ಹರಪನಹಳ್ಳಿಭೀಮವ್ವ
ಕಂ||ಇಂದುವಿನ ವಾರದರ್ಚನೆಸಂದುದು ನಿನ್ನಡಿಗಳಿಂಗೆ ಗ್ರಹಗತಿ ಸೂಚಿಸೆಹಿಂದಣ ಕರ್ಮದ ಫಲವನುಸಂದೇಹವು ಬಿಡದು ಬಿಡಿಸು ವೆಂಕಟರಮಣನೆದುರಿತವನು ಪರಿಹರಿಸು ಸ್ಥಿರಭಕ್ತಿುರಿಸುತಿರುಪತಿಯ ಸ್ಥಿರವಾಸ ಶ್ರೀ ವೆಂಕಟೇಶ ಪಭಯವಾಗುತಿದೆ ದೇವ ಭಯಬಡಿಸುತಿರೆ ಕರ್ಮಭಯವಿಲ್ಲದಿರುವದೆಂತುಭಯನಿವಾರಕನಾಮ ಭಯತಿಮಿರ ರವಿಯಹುದುಭಯ ಹೋಗಿ ಸ್ಥಿರವಾಗಿ ಮನ ನಿಲ್ಲದಿಹುದು 1ಪರಮ ಯೋಗ್ಯನಿಗೊಂದು ಪಿರಿದಾದ ದುಃಖವಿದೆಪರಿಹರಿಸದಾವ ವಿಧದಿಕರಗಿ ಕಂದುತಲಿರಲು ಬಿರಿಸು ಕರ್ಮದ ಗತಿಯುನರಹರಿಯೆ ಮಹಿಮೆಯನು ನೆರೆ ತೋರಿಸೀಗ 2ಭಜನೆಯನು ಮಾಡಿದರೆ ಭಜನೆ ಕಾಮನೆಯಾಗಿನಿಜ ದೊರಕದೆಂಬ ಭಯವುಭಜಿಸಿ ಪಾಪವ ಕಳೆಯೆ ಭಜನೆಯದಕಾಗುವುದುಭಜನೆ ದೇಹದಿ ನಿಂದು ಭವ ತಾನು ನಿಲ್ಲುವುದು 3ಕರ್ಮಕೀ ಪರಿ ಬಲವು ಧರ್ಮವಾಗಿರೆ ಬಲಿತುಕರ್ಮವೇ ಬೆಳೆಯುತಿಹುದುಮರ್ಮವರಿತರು ಬಿಡದು ಹೆಮ್ಮೆಯದು ಬಲ್ಲವಿಕೆಧರ್ಮ ಬರುವದು ನಿನಗೆ ಕರ್ಮವಿದ ಕಡೆಗೊಳಿಸು 4ಇಚ್ಛೆುಂದಿದ ಸೃಜಿಪೆ ುಚ್ಛೆುಂ ಪರಿಹರಿಪೆಇಚ್ಛೆಯೇ ತೋರುತಿಹುದುಇಚ್ಛೈಸಿ ನಿನ್ನಡಿಯನಚ್ಯುತನೆ ಭಜಿಪರಿಗೆ 5ತುಚ್ಛವಾದೀ ಕರ್ಮ ಬಿಚ್ಚದಿಹುದೇನುಗರ್ವ ಬರುವದು ಜನಕೆ ಸರ್ವಗತನೆನಿಸಿದರೆನಿರ್ವಹಿಪೆನೆನಲು ಹೀಗೆಸರ್ವೇಶ ನೀನೊಲಿದು ಸರ್ವದೋಷವ ಕಳೆಯೆಗರ್ವವೆಡೆಗೊಳ್ಳದೈ ಪೂರ್ವದವನೆನಿಸು 6ಸೂತ್ರವನು ನಿರ್ಮಿಸಿದೆ ಸೂತ್ರ ನಿನ್ನಾಧೀನಸೂತ್ರಕ್ಕೆ ಶಕ್ತಿಯೆಂತುಯಾತಕೀ ಕರ್ಮಗತರನು ಮಾಡಿ ಜನರುಗಳ ಪಾತಕರು ಹೊರಗೆಂದು ಯಾತನೆಯ ಮಾಳ್ಪೆ 7ಮೃಷೆಯೆಂದ ಮಾತ್ರದಲಿ ಮೃಷೆಯಾಗದೀ ದುಃಖವಿಷಮವೇ ಬಳಲಿಸುವದುವಿಷವು ಮೊದಲಾಗಿ ತದ್ವಿಷಮ ಕರ್ಮದಿ ಹರವುವಿಷಮವಿದು ನಿನ್ನ ನಿಜದಲಿ ತೊಲಗದೆಂತು 8ಕರುಣಾಕರನೆ ನೀನು ಗುರುಮುಖದಿ ಕರ್ಮಗಳಬರಸೆಳೆದು ಬಯಲಮಾಡೆಮರೆವೆಯಾವರಣವಿರಬೇಕೆ ತಿರುಪತಿವಾಸವರದ ಶ್ರೀ ವಾಸುದೇವಾರ್ಯ ವೆಂಕಟರಮಣ 9ಓಂ ಪಾರ್ಥಸಾರಥಯೇ ನಮಃ
--------------
ತಿಮ್ಮಪ್ಪದಾಸರು
ಕಂಜಾಕ್ಷ ಹರಿಯ ಕಂಡಲ್ಲದೆ ಈಪಂಜರದಿ ಈ ಗಿಣಿ ನಿಲ್ಲದೆ ಪ. ಬಾಲತÀನದಲ್ಲಿ ಮನೆಮನೆಯ ಪೊಕ್ಕುಪಾಲಕುಡಿದನು ಮನದಣಿಯಲಾಲಿಸಿದವನು ಇನ್ನು ಮುನಿಯಲೋಲಾಕ್ಷಿ ಬಿಡನ್ಯಾಕೀ ಗÀಸಣೆಯ 1 ಏಳುವರುಷದ ಶಿಶು ಪೋಗಿಆಲಸ್ಯ ಹಸುತೃಷೆÉಯ ನೀಗಿಶೈಲವಾಗಿ ನಿಂತಿದ್ದ ನಮಗಾಗಿಕಾಲಮ್ಯಾಲೆ ಬಿದ್ದನಿಂದ್ರ ಬಾಗಿ 2 ಕಾಳಿಂದಿಯ ಮಡುವಿನೊಳಾಡಿಕಾಳಿಯಾ ನಾಗಗೆÉ ಮದ ಹುಡಿಮೇಲೆ ಅವರೊಳು ಕೃಪೆಮಾಡಿಪಾಲಿಸಿದ ಕರುಣದಿ ನೋಡಿ3 ಪಾರಿಜಾತದ ಪೂಗಳ ತಂದುನಾರದ ಮುನೇಂದ್ರ ತಾನೆ ಬಂದುಸಾರಿದನಲ್ಲೆ ಗತಿ ನೀನೆಂದುನರ ಸುರರುಗಳಿಗೆ ಬಂಧು 4 ವೃಂದಾವನದೊಳಿವನ ಲೀಲೆ ಆ-ನಂದವನುಣಿಸಿತೆಲೆ ಬಾಲೆಎಂದವನ ಕತೆ ಕರ್ಣದೋಲೆ ಹಾ-ಗೆಂದು ಭಾವಿಸೆ ಪುಣ್ಯಶೀಲೆ 5 ಸಕಲ ಸುರರ ಶಿರೋರನ್ನಮುಕುತಿದಾಯಕ ಸುಪ್ರಸನ್ನಶ್ರೀಕೃಷ್ಣ ಅಟ್ಟಿದ ಉದ್ಧÀ್ದವನ್ನ ಬಂದುವಾಕು ಕೇಳಿ ಮನ್ನಿಸಿಯವನ6 ಚೆಲ್ವ ಹಯವದನನ್ನ ನೀರೆ ನಮ್ಮನಲ್ಲನವನಿಲ್ಲಿ ಬಾರದಿರೆಸುಲಭನ್ನ ಬೇಗ ಕರೆತಾರೆ ನಾ-ವೆಲ್ಲರವನಲ್ಲಿ ಹೋಹ ಬಾರೆ 7
--------------
ವಾದಿರಾಜ
ಕಂಡ ಕಂಡದ್ದು ಅದು ಔಷಧವಲ್ಲವೋ ಗಿಂಡಿ ಗಿಂಡೀದು ಅದು ತೀರ್ಥವಲ್ಲವೋ ಪ ಮೂರು ವರ್ಗಂಗಳಿಗೆ ಆರು ವೈರಿಗಳು ತೋರುತ್ತಿರುವÀರೆಂತೋ ಬೇರೆಯಾಗಿ 1 ಈ ರೀತಿಯಿಲ್ಲದೆ ಬೇರೊಂದು ತಿಳಿವರೆ ಮೂರು ವಿಧ ಬೇವÀರಿಗಾರು ಫಲಪ್ರದರು 2 ಮಾರಜನಕ ಹರಿ ಪಾರ್ವತೀಧವರಿವರು ಬೇರೆ ಎಂಬರಿತೆವೊ ಬಾರದೆ ಸರಿಯಾಗಿ 3 ಇಳೆಯ ಮೇಲಿರುತಿಹ ಜಲಾಶಯಗಳು ಬಳಿಕೆಗೋಸುಗ ತಾವಿಳದಿಹವಲ್ಲದೆ 4 ನಳಿನನಾಭನ ಪೂಜಾಗಳಿಗೆ ಬಾಂಬೊಳೆಯ ಮೈಲೆನಿಪದಲ್ಲದೆ ಮಿಕ್ಕಿಸಲು ಉಂಟೆ 5 ಚಿತ್ತಶುದ್ಧಿಯನೈದಿ ಉತ್ತಮ ಜಲದಿ ಮಿಂದು ಚಿತ್ತಜÀ್ಹನೈಯನ ಮಜ್ಜನಗೈಯಲು ಹತ್ತಾವತಾರನ ಮತ್ತೆ ಪೂಜೆಯ ಗೈದು ಉತ್ತಮ ಪದ ಸೇವಿಪುದೇ ತೀರ್ಥಾ 6 ಶಿರಿವರ ಪದಜಲ ವರ ತುಲಸೀದಲ ಬೆರೆÀಸಿ ಪಾವÀನ ಗೈಯೆ ಇರುವುದೆ ರೋಗವು ಉರಗಶಯನ ಶ್ರೀ ನರಸಿಂಹ ವಿಠಲನು ಪರಮ ವೈದ್ಯನು ತನ್ನ ಶರಣರಿಗೇ 7
--------------
ನರಸಿಂಹವಿಠಲರು
ಕಡಲಶಯನ ಹರಿಯ ತೊಡೆಯಲ್ಲಿ ಮಡದ್ಯೇರಿಬ್ಬರು ಕುಳಿತು ಪ ಪನ್ನಂಗಶಯನ ಕೇಳೆ ಸ್ವಾಮಿ ನೀ ಎನ್ನ ಮನೆಗೆ ಏಳೊ ನಿನ್ನ ಪಾದಕ್ಕೆ ಎರಗುವೆನೆಂದು ಭಾಮೆ ಕೈ- ಯನ್ನು ಮುಗಿದಳಾಗ 1 ಎನ್ನ ಮನೆಯಲ್ಲಿದ್ದ ಶ್ರೀಹರಿ- ಯನ್ನು ಕರೆಯಲವರ ಕಣ್ಣೇಸೆನುತಲಿ ಕರ್ಣಿ(ನ್ಯೆ?) ರುಕ್ಮಿಣಿ ಕೋಪ- ವನ್ನು ಧರಿಸಲಾಗ 2 ಎಷ್ಟು ಹಣವ ನೀನು ಕೃಷ್ಣಗೆ ಕೊಟ್ಟು ಕೊಂಡಿ ಹೇಳೆ ದಿಟ್ಟತನದ ಮಾತಾಡೋ ರುಕ್ಮಿಣಿ ನಿನ್ನ ಶ್ರೇಷ್ಠತನವೇನ್ಹೇಳೆ 3 ಹತ್ತು ಆರು ಸಾವಿರದಷ್ಟ ಭಾರ್ಯೇರವೊಳಗೆ ಸತ್ಯಭಾಮೆ ಉತ್ಕøಷ್ಟ ಚೆಲುವೆಯೆಂದು ಕೃಷ್ಣ ನಿನ್ನಲ್ಲಿಹನೆ4 ಹದಿನಾಲ್ಕು ಲೋಕದಲಿ ಹರಿ ಪಾದಾಂಬುಜವ ಕಾಂಬುವೋರಿಲ್ಲೆ ಯದುನಾಥನ ಎದೆ ಮ್ಯಾಲ್ಹತ್ತಿರುವೋದು ಇದು ಸೋಜಿಗವಲ್ಲೆ 5 ಇಷ್ಟೆ ಸೋಜಿಗವೆಂದು ಆಡಲು ದಿಟ್ಟೆ ನಿನಗೆ ಅರಿದೆ ಅಷ್ಟದಿಕ್ಪಾಲಕರನೆ ಓಡಿಸಿ ವೃಕ್ಷ ಕಿತ್ತು ಒದರು(ರುವು?) ದಲ್ಲೆ 6 ಜಲಪ್ರಳಯ ಕಾಲದಲಿ ಜನರಿಲ್ಲದ ಅಂಧಕಾರದಲಿ ಎಲೆಯಾಗಾ ಪರಮಾತ್ಮನ ಮನವ ನೀ ಮೊ- ದಲೆ ಒಲಿಸಿಕೊಂಡೆ 7 ಕಾದು ಸೇವಿಸೆ ಹರಿಯ ಪಾದದ- ಲ್ಲಾದರವಿಲ್ಲದಲೆ ದಾನ ಮಾಡುತ ಮುನಿಹಿಂದಟ್ಟಿದರ್ಹರಿ ಹ್ಯಾಗೆ ಬರುವನ್ಹೇಳೆ 8 ಮೂರು ಲೋಕದ ದೊರೆಯ ಮೂರೆಲೆ ತುಳಸಿ- ಸರಿಯ ಮಾಡಿ ಮುಕುತಿದಾಯಕ ಕೈವಶವಾ- ಗಿರಲು ನೀ ಸಕಲ ಮಾಯವ ಬಲ್ಲೆ 9 ಪಟ್ಟದ್ವೊಲ್ಲಭೆ ನಾನು ಕೃಷ್ಣಗೆ ಮೆಚ್ಚಿ ಬಂದೆಯೆ ನೀನು ಅಚ್ಚುತ ತಾ ಪರಮಾನುಗ್ರ(ಹ)ವ ಮಾಡಿ ಬಂ- ದಿಚ್ಛೆಲಿರುವ ತಾನು10 ಮಾತಾಪಿತರು ಅನುಜನನ್ವಂಚಿಸಿ ಈತಗ್ವಾಲೆಯ ಬರೆದು ಯಾತಕಂಜಿಕೆ ವಲಿಸ್ಯೋಡಿ ಬಂದವಳೆಂದು ಕೀರ್ಹೊಗಳುವುದಲ್ಲೆ 11 ತಂದು ಕೊಡಲು ಮಣಿಯ ಸಭೆಯೊಳು ಅಂದು ತಗ್ಗಿಸಿ ತಲೆಯ ನಿಂದ್ಯದ ಮಾತಿಗೆ ತಂದು ನಿಮ್ಮಯ್ಯ ಮುಂದಿಟ್ಟು ಪೋದನೆ ನಿನ್ನ 12 ಕೇಳೊ ಕೇಳೊ ನುಡಿಯ ನೀನೀ- ರೇಳು ಲೋಕದ ಒಡೆಯ ಹೇಳೋ ಬುದ್ಧಿ ನಿನ್ನಯ ವಲ್ಲಭೆ ಮಾತಾ- ಡೋಳೊ ನಿರ್ಭಿಡೆಯ 13 ರಕ್ಕಸಾಂತಕ ಕೇಳೊ ನಿನ್ನ ಚಿಕ್ಕವಲ್ಲಭೆ ಮ(ಹಿ)ಮೆ ಉಕ್ಕಿ ಉಕ್ಕಿ ಎನ್ನ ಮ್ಯಾಲೆ ಬರಲು ನಿನ- ಗಕ್ಕರ ತೋರುವುದೆ 14 ಆರ್ಯಳೆಂದು ನಾನು ತಾಳಿದೆ- ನಕ್ಕ ರುಕ್ಮಿಣಿ ಮಾತ ಏರಿ ಏರಿ ಏನ್ನಮ್ಯಾಲೆ ಬರಲು ಇದು ನ್ಯಾಯವೇನೊ ನಿನಗೆ 15 ನಾಲ್ಕು ತೋಳಿನಿಂದ ಆಲಿಂಗಿಸಿ ಕಾಂತೆಯರಿಬ್ಬರನು ಯಾತಕಿಂಥ ಕದನವು ಘನವಾಯಿತು ಸಾಕು ಸಾಕುಯೆನುತ16 ವಾರಿಜಾಕ್ಷ ಕೇಳೋ ನಾರದ- ರ್ಹೂಡಿದರೀ ಜಗಳ ಪಾರಿಜಾತ ಸರಿಸವತಿಗೆ ಕೊಟ್ಟ- ರಿನ್ಯಾರು ಸೈರಿಸೋರ್ಹೇಳೊ 17 ನಂದನವನ ತರುವ ನಾ ತಂದಿಟ್ಟೆನಂಗಳದಲ್ಲೆ ಅಂದಿಬ್ಬರನಾನಂದವ ಬಡಿಸಿದ ಚೆಂದದಿಂದಲಿ ನಗುತ 18 ಭಾಮೆ ರುಕ್ಮಿಣಿ ಸಹಿತ ನಡುವೆ ಭೀಮೇಶ ಕೃಷ್ಣನು ಕುಳಿತ ಕಾಮನಯ್ಯನ ಚರಿತ್ರೆಯ ಪಾಡ- ಲಮೃತ ಪಾನವು ನಿರುತ 19
--------------
ಹರಪನಹಳ್ಳಿಭೀಮವ್ವ
ಕಂಡಿರ ಮಧುರ ನಾಥನ ಕಂಡವರು ಪೇಳಿ ದಮ್ಮಯ್ಯ ಪ ದುಂಡು ಮುಖದ ಮೋಹನಾಂಗನು ಕೊಂಡು ಪೋದನೆಮ್ಮ ಮನವ ಅ.ಪ ಮಲ್ಲಿಗೆ ತುಳಸಿ ಮಾಲತಿ ಎಲ್ಲಿ ಪೋದನು ಪೇಳಿ ಕೃಷ್ಣನು ವಲ್ಲಭನ ಚರಣಗಳಲಿ ನಿಮ್ಮನು ಸಲ್ಲಿಸಿದ ಹಂಗೆಮ್ಮೊಳಿದ್ದರೆ 1 ತೋರಿದೆರೆ ನಯನಾಭಿರಾಮನ ಸೇರುವೆ ಅವನಂಘ್ರಿಯುಗಳಕೆ ಭೂರಿ ತರದುಪಕಾರ ನಿಮಗೆ ಸ ತ್ಕಾರ ಬರುವುದು ವಿಧಿಭವರಿಂದ 2 ಪದ್ಮೆಯರಸನು ನಿಮ್ಮೊಳಿರುವ ಸುದ್ದಿ ಬಲ್ಲೆವು ತೋರದಿದ್ದರೆ ಪದ್ಮಸಂಭವ ಪಣೆಯ ಬರಹವ ತಿದ್ದಿ ಪೇಳಿರಿ ಪದ್ಮಗಳಿರ 3 ಪಾರಿಜಾತ ಸುಜಾತ ನಂದಕು ಮಾರ ಮಣಿಯೊಂದನು ಕೊಡಲಾರೆಯ ಹೇರು ವಿಧ ವಿಧ ರತ್ನ ಮಣಿಗಳ ಸೂರೆಗೈವ ಅಭೀಷ್ಠಪ್ರದಾತ 4 ಕೇಳಲೇನುಪಯೋಗವಿವರು ಪೇಳಲಾರರು ಸುದ್ದಿ ಎಮಗೆ ತಾಳಲೆಂತು ಪ್ರಸನ್ನ ಕೃಷ್ಣನೆ ಕೇಳೆಲೆಮ್ಮಯ ಮೊರೆಯ ದಯದಿ 5
--------------
ವಿದ್ಯಾಪ್ರಸನ್ನತೀರ್ಥರು
ಕಂಡು ಎಂದಿಗೆ ಧನ್ಯಳಾಗುವೆ ನಾನು ಪಾದ ಪುಂಡರೀಕವನೂ ಪ. ಪುಂಡರೀಕನಿಗೊಲಿದು ಒಂದು ಇಟ್ಟಿಗೆ ಮೇಲೆ ಪಾಂಡವರ ಪ್ರಿಯ ಬಂಧು ನೆಲಸಿದಂಥಾ ಪಂಡರೀ ಕ್ಷೇತ್ರದಲಿ ಚಂದ್ರಭಾಗದಿ ಮಿಂದು ಮಂಡೆ ಬಾಗುತ ಹರಿಗೆ ಹಿಂಡಘವ ಕಳೆದೂ 1 ಕೋಮಲದ ಚರಣಕಭಿನಮಿಸಿ ಕರಯುಗದಿಂದ ಶ್ಯಾಮವರ್ಣನ ಪಾದಕಮಲ ಮುಟ್ಟೆ ಆ ಮಹಾ ಆನಂದ ಅನುಭವಿಪ ಭಾಗ್ಯವನು ಶ್ರೀ ಮಹಾಲಕುಮಿಪತಿ ಎಂದು ಕಾಂಬುವೆನೋ 2 ಆಪಾರಭಕ್ತರಿಗೆ ವಲಿದ ವಿಠಲನ ಮೂರ್ತಿ ಆಪಾದ ಮೌಳಿ ಈಕ್ಷಿಸುತ ಹೃದಯದಲಿ ಇರ್ಪಮೂರ್ತಿಯ ತಂದು ಗುರುಬಿಂಬ ಸಹಿತದಲಿ ಗೋಪಾಲಕೃಷ್ಣವಿಠಲನ ಎಂದು ಕಾಂಬೆ 3
--------------
ಅಂಬಾಬಾಯಿ
ಕಂಡುದನು ಪೇಳ್ವೆ ಬ್ರಹ್ಮಾಂಡ ನಾಯಕನೆ | ಕೊಂಡೆಯವಿದಲ್ಲ ಗ್ರಹಕುಂಡಲವ ಶೋಧಿಸುತ ಪ ಮಕರ ಸತಿ ಲಗ್ನದಲ್ಲಿರ್ಪ ಜಲ ತಾರಕೇಂದು ದಶೆ ಯಲಿ ನಿನಗೆ ಜಲದೊಳಾವಾಸವಾಯಿತು ಹರಿಯೆ 1 ಮನುಮಥನ ತಾತ ಕೇಳಿನಸುತನು ನಾಲ್ಕನೆಯ ಮನೆಯೊಳಿರುವನು ಲಗ್ನಕಧಿಪನೆನಿಸಿ ಮನದಿ ಯೋಚಿಸಲಿಕಾ ಶನಿದಶೆಯೊಳಾ ಕುಧರ ವನು ಪೊತ್ತು ದಣಿದೆನೀವ ನಿಧಿಯೊಳು ಹರಿಯೆ2 ಮಂಗಳನೆ ಸುಖಕಧಿಪ ಮಂಗಳನು ಸಿಂಗರದಿ ಸಿಂಗರಾಶಿಯೊಳು ತಾ ಕಂಗೊಳಿಸುತ ತುಂಗವಿಕ್ರಮನವನೆ ಸಂಘಟಿಸಿದನು ವನದಿ ಹಿಂಗದೆ ಬೇರು ಮೆಲುವಂಗವನು ಹರಿಯೆ 3 ವಾರಿಜಾಸನ ಪಿತನೆ ಕ್ರೂರಕ್ಷೇತ್ರದಿ ರಾಹು ಸಾರಿರ್ಪ ರಾಶಿ ವೃಶ್ಚಿಕವೆನಿಸಲು | ಕಾರುಣಿಕನವನ ದಶೆಯಾರಂಭದಲಿ ನಿನಗೆ ಘೋರ ರೂಪವ ತಾಳಲಾಯ್ತು ನರಹರಿಯೆ 4 ಮಂದರೋದ್ಧರ ಕೇಳು ಚಂದಿರನ ರಾಶಿಗಾ ನಂದದಧಿಪತಿ ಸೂರ್ಯನಂದನನು ತಾ ನಿಂದು ಮೇಷದೊಳತ್ರಿಕಂದನ ನಿರೀಕ್ಷಿಸಲು ಬಂದುದೈ ಭಿಕ್ಷೆಯದರಿಂದ ನಿನಗೆಲೆ ಹರಿಯೆ 5 ಅಂಬುಜಾನನ ಕೇಳು ಒಂಭತ್ತರಧಿಪ ಶಶಿ- ಸಂಭವನು ಪಾಪದಿಂ ತುಂಬಿರ್ಪನು | ಸಂಭವಿಸಲವನ ದಶೆಯಿಂದ ನೀ ಕ್ಷತ್ರಿಯ ಕ-ದಂಬ ಮರ್ದಿಸಿ ಧರ್ಮಮಂ ಬಿಟ್ಟೆ ಹರಿಯೆ 6 ದುರಿತ ಸ್ಥಾನಾಧಿಪತಿ ಗುರುವೇಳನೆಯ ಮನೆಯೊಳಿರುವನದರಿಂ | ಹಿರಿಯರುಪದೇಶದಿಂದಿರದೆ ಭಾರ್ಯೆಯನಗಲಿ ಚರಿಸಿದೆಯರಣ್ಯದೊಳಗಿರುತ ನೀ ಹರಿಯೆ 7 ಘೋರಪಾಪವಿನಾಶ ನಾರಿರಾಶಿಯ ನವಮ-ಕಾ ರವಿಯು ಸಾರಿ ನಿಂದಿರ್ಪನದರಿಂ | ಚೋರವ್ಯಾಪಾರ ಪರನಾರಿಯರ ಕೂಡೆ ವ್ಯಭಿ-ಚಾರ ನಿನಗಾಯಿತು ರಮಾರಮಣ ಹರಿಯೇ 8 ಕೈವಲ್ಯ ತಾರಕನಾಥನು | ಪೂತ ಬುದ್ಧಿಸ್ಥಾನ ವಾದನದರಿಂಲಿಂ ಭೂತಲದಿ ಸ್ಥಾಪಿಸಿದೆ ನೂತನ ಮತವ ಹರಿಯೇ 9 ಪಾರವರ್ಜಿತ ಕವಿಯು ಸಾರಿರ್ದ ದಶಮದೊಳ್-ಗಾರವ ನೆನೆಯುಂಟು ಧೀರನೆನಿಸಿ | ಭೂರಿಮ್ಲೇಂಛರನು ಸಂಹಾರ ಗೈಯುತ ತೇಜಿಯೇರಿ ಮೆರೆಯುತ್ತಿರುವ ನಾರಾಯಣ ಹರಿಯೆ 10
--------------
ಅನ್ಯದಾಸರು
ಕಂಡೆ ಕಂಡೆ ಸ್ವಾಮಿಯ ಕಂಡೆ ಕಂಡೆ ನಾ ಬ್ರಹ್ಮಾಂಡದೊಡೆಯನ ಪಾಂಡವರ ಪರಿಪಾಲಿಸುವನ ಪ್ರ- ಚಂಡ ಅಸುರರ ಶಿರವ ಚಕ್ರದಿ ಚೆಂಡನಾಡಿದ್ದ ಚೆಲುವ ಕೃಷ್ಣನ ಪ ಪಾದನಖದಿ ಭಾಗೀರಥ್ಯುದಿಸಿದಳು ಈರೇಳು ಲೋಕವನಿಟ್ಟ ಉದರದೊ- ಳಾದಿ ಮೂರುತಿ ಸಾರ್ವಭೌಮ 1 ಎಳೆದುಳಸಿ ಶ್ರೀವತ್ಸ ಕೌಂಸ್ತುಭ ಅ- ರಳು ಮಲ್ಲಿಗೆ ಹಾರ ಪದಕವು ಕೊ- ವೈಜಯಂತಿ ಮಾಲೆಯಂ- ತ್ಹೊಳೆವೊ ಮಾಣಿಕಾಭರಣ ಭೂಷಿತ 2 ಶೀಘ್ರದಲಿ ಜರೆಸುತನ ವಧÉ ಮಾ ಡ್ಯಜ್ಞದಲಿ ಶಿಶುಪಾಲರಂತಕ ರುಕ್ಮಿಣೀಪತಿ ಧರ್ಮಭೀಮರಿಂ- ದಗ್ರಪೂಜೆ ತಕ್ಕೊಂಡ ಕೃಷ್ಣನ 3 ಕಂಕಣ ಕರದಲಿ ಶಂಖ ಚಕ್ರವು ಅರ- ವಿಂದ ರೇಖವು ಚರಣದಲಿ ಪಂಕಜಾಕ್ಷನ ಮುಖದ ಕಾಂತಿಯು ಶಂಕೆಯಿಲ್ಲದೆ ಸೂರ್ಯರಂದದಿ 4 ಎಂಟು ಮಂದ್ಯೆರಡೆಂಟು ಸಾವಿರ ಸತಿಯ- ರಿಂದ ದ್ವಾರಾವತಿಯನಾಳಿದ ಪತಿತಪಾವನ ಪಾರಿಜಾತವ ಸತಿಗೆ ತಂದ ಶ್ರೀಪತಿಯ ಪಾದವ 5 ನಳಿನಮುಖಿ ದ್ರೌಪದಿಯು ಕರೆಯಲು ಸೆಳೆಯೆ ವಸ್ತ್ರ ಅಕ್ಷಯವ ಮಾಡಿಸಿ ಖಳರ ಮರ್ದನ ಕರುಣ ಸಾಗರೆಂ ದಿಳೆಯೊಳಗೆ ಹೆಸÀರಾದ ಕೃಷ್ಣನ 6 ನಂಬಿದವರನು ಬಿಡದೆ ತಾನಿ- ದ್ದಿಂಬಿನಲಿ ಸ್ಥಳಕೊಟ್ಟು ಕರೆವನು ಸುಂದರಾಂಗ ತಾ ಸೋಮಕುಲದಲಿ ಬಂದುದಿಸಿದ ಭೀಮೇಶ ಕೃಷ್ಣನ 7
--------------
ಹರಪನಹಳ್ಳಿಭೀಮವ್ವ
ಕಂಡೆ ಕಂಡೆನು ಸ್ವಾಮಿಯ ಸುಪ್ರೇಮಿಯಾ ಪ ಕಂಡೆ ಕಂಡೆನು ಕೃಷ್ಣರಾಯನ ಪುಂಡರೀಕ ದಳಾಯತಾಕ್ಷನ ಪಾಂಡವಪ್ರಿಯ ಪಾರ್ಥಸಖನ ಉ ದ್ದಂಡ ಮಹಿಮ ಸುರೇಂದ್ರವಂದ್ಯನ ಅ.ಪ. ಕನಕ ನವಮಣಿ ಖಚಿತ | ವಾಗಿಹ ಸಿಂಹಾ ಸನದೊಳು ಸಲೆ ಶೋಭಿತ | ಸುರುಚಿರ ದಿವ್ಯ ಘನನೀಲನಿಭರಂಜಿತ | ನಿರ್ಮಲಗಾತ್ರ ಕುಂಡಲ ಮಣಿ ಗಣದ ಹಾರಾದಿ ಬಹು ಭೂ ಷಣಗಳನುಪಮ ಕಾಂತಿಯಿಂದಲಿ ಮಿನುಗುವತಿ ಲಾವಣ್ಯ ಮೂರ್ತಿಯ 1 ಕೋಟಿ ಮನ್ಮಥರೂಪನ | ಶ್ರೀಕೃಷ್ಣನ ಹಾಟಕಾಂಬರಧಾರನ | ಕರುಣಾಮಯ ಕಂಬು ಕಂಠನ ಆಟಮಾತ್ರದಿ ಪ್ರಬಲ ದೈತ್ಯ ಮ ಹಾಟವಿಯ ನಿರ್ಧೂಮಗೈದನ ಖೇಟವಾಹನನೆನಿಪ ತ್ರಿಜಗದಿ ಸಾಟಿಯಿಲ್ಲದ ದೇವದೇವನ 2 ಮೆರೆವ ದ್ವಾರಕಾಧೀಶನ | ದ್ರೌಪದಿದೇವಿ ಮೊರೆ ಕೇಳಿ ಸಲಹಿದನ | ಭಜಿಪರ ಅವ ಸರಕೊದಗುವ ದೇವನ | ಶ್ರೀ ಕೃಷ್ಣನ ತರಳತನದಲಿ ಗೋಕುಲದಿ ತಾ ಪರಿಪರಿಯ ಲೀಲೆಗಳ ತೋರಿದ ಪರಮ ಪುರುಷನ ಕರಿಗಿರೀಶನ ಸರಿಯಧಕರಿಲ್ಲದ ಸುರೇಶನ 3
--------------
ವರಾವಾಣಿರಾಮರಾಯದಾಸರು
ಕಂಡೆನೋ ಕಂಡೆ ಗುರುಚಿದಂಬರನಾ ತನು ಗೊಂಡು ಭೂಮಂಡಲದೊಳು ಚರಿಸುವನಾ ಪ ಪರಮಾತ್ಮ ಪರತತ್ವವನು ತಿಳಿದವನ ಧರೆಯ ಜನರನÀು ಪಾವನವ ಮಾಡುವನಾ ಕರುಣ ಸಮುದ್ರ ದೀನರ ದಯಾಪರನಾ ನೆರೆನಂಬಿದವರಿಗೆ ವರವ ಕೊಡುವನಾ 1 ಮಳೆ ಛಳಿ ಬಿಸಿಲು ಹಸಿವಿಗಂಜದವನ ಕಲ್ಲು ಮುಳ್ಳು ಬೆಟ್ಟವೆನ್ನದೆ ಚರಿಸುವನ ನೆಲೆಗಾಣದಂತಹ ಅಪಾರ ಮಹಿಮನು ಕಲಿಮನದೊಡ್ಡದಾನಂದ ನಿರ್ಗುಣನ 2 ಸ್ಮರಹರನಂತೆ ಭಸಿತ ದಿಗಂಬರನಾ ಕೆರೆಬಾವಿ ದೇವಾಲಯವನು ಕಟ್ಟಿಸುವನ ಪುರಹರನಂತೆ ಢಿಕ್ಕನೆ ಧರಿಸಿಹನ ನರ ಗುರಿಗಳು ಬಲ್ಲರೇನೋ ಇಂಥವನಾ 3 ಯಮನಿಯಮ ಅಷ್ಟಾಂಗ ನಿರತನ ಕಮಲಾರಿ ಪಿತನಂತೆ ಗಂಭೀರದವನ ಹಿಮವಂತನಂತೆ ಧೈರ್ಯದೊಳಿರುತಿಹನ ಕಮಲ ಬಾಂಧವನಂತೆ ತೇಜದಿಂದಿರುತಿಹನ 4 ಅರಿಗಳನರುವರ ನುಗ್ಗೊತ್ತಿದವನ ಕರಣೇಂದ್ರಿಯಂಗಳ ನಿಗ್ರಹಿಸಿದವನ ಪರಮ ದಾಸಗೆ ಆಲಿಂಗನವನಿತ್ತನಾ ಸ್ಥಿರ ಚಿದಾನಂದ ಪುರದ ದಿಗಂಬರನ 5
--------------
ಕವಿ ಪರಮದೇವದಾಸರು
ಕಥನಕಾವ್ಯಗಳು ಶ್ರೀ ವೆಂಕಟೇಶ ಪಾರಿಜಾತ ಅಧ್ಯಾಯ ಒಂದು ಶ್ರೀಪತಿರ್ಭೃಗುಣಾ ಸರ್ವಲೋಕೋತ್ಕøಷ್ಟ ಇತೀ ಪಿತ: ಗೋಕ್ಷೀರ ಸಿಕ್ತ ಸರ್ವಾಂಗೋ ವಲ್ಮೀಕಸ್ಥ: ಶುಭಂ ದಿಶೇತ | ಶ್ರೀಸಹಿತ ಶ್ರೀವೆಂಕಟೇಶಗೆ ಸಾಸಿನಾರತಿ ಮಾಡಿ ಬೇಡುವೆ ಭಾಷೆ ಭಾಷೆಗೆ ಎನಗೆ ಬುದ್ಧಿವಿಕಾಸ ಕೊಡುಯಂದು ಕರಮುಗಿದು ಬೇಡುವೆ ದಾಶರಥಿ ನಿಜದಾಸ ಕಲ್ಲೊಳ್ಳೀಶಗೊಂದಿಸುವೆ 1 ಸಂತತಿಗೆ ನತಿಸುವೆ ಐಜಿ ವೆಂಕಟರಾಮವರ್ಯರ ಪೂಜೆಯಲ್ಲಿರುವೆ ಜಗತಿಯಲಿ ಜನಿಸಿ ಅವರಾ ಪೂಜಿತಾಖ್ಯವು ವಹಿಸಿದವರನು ಪೂಜಿಸುವೆ ಬಿಡದೆ2 ಪೊಂದಿ ಆ ಗುರು ಪುತ್ರರಾಗಿರುವ ವಿಷ್ಣುತೀರ್ಥರನು ನಮಿಪೆ ಮತ್ತೆ ಸ್ವೋತ್ತಮರಾಗಿ ಇರುವ ಗುರುಗಳಿಗೊಂದಿಸುತ ಸ ರ್ವೋತ್ತಮಾನಂತಾದ್ರಿ ರಮಣನ ಮಹಿಮೆ ಪೇಳುವೆನು3 ವಚನ ಬುದ್ಧಿ ಪೂರ್ವಕ್ಹಿಂ ಸಂಪೂರ್ಣ ಸರ್ವ ದೇವೋತ್ತಮನು ಇರುವನ್ಯಾರೆಂದು ತಿಳಿ ಸರ್ವಲೋಕದಲಿ ಕೇಳಿ ಪೂರ್ವದಲ್ಲಿ ಪೋದ ಪೂರ್ವಿಕನÀ ಮನೆಯಲ್ಲಿ ಗರ್ವ ಅವನಲ್ಲಿ ಕಂಡು ಇರುವ ನಡೆದನಲ್ಲಿ 1 ನೋಡಿದನು ಆಗಲ್ಲಿ ಪ್ರೌಢೆ ಪಾರ್ವತಿಯು ಮಾತಾಡಿದಳು ನಾಚುತಲಿ ಬೇಡಬಿಡು ಪ್ರಾಣೇಶ ನೋಡು ಭೃಗು ಮುನಿಬಂದ ಬೇಡಿಕೊಂಬುವೆನೊ ಗಾಢನೆ ಕಣ್ಕೆಂಪು ಮಾಡಿ ಮುನಿಯಿದ್ದಲ್ಲಿ ಓಡಿಬಂದನು ಪೂಜೆಯ ಬೇಡ ಈ ಲೋಕದಲಿ ನೋಡಿ ಲಿಂಗವ ಪೂಜೆ ಮಾಡಲಿ ಜನರು 2 ಪರಿ ಶಾಪ ಮೆಟ್ಟಿದನು ವೈಕುಂಠ ಥಟ್ಟನೆ ಮತ್ತಲ್ಲಿ ದಿಟ್ಟ ದೇವನ ಕಂಡ ಪಟ್ಟದರಸಿಯಕೂಡಿ ಧಿಟ್ಟಾಗಿ ಮಲಗಿರಲು ಸಿಟ್ಟಿಲÉೂದ್ದನು ಒಳ್ಳೆ ಪೆಟ್ಟು ಅವನೆದಿಗೆ ಮುಟ್ಟಿ ಮುನಿ ಪಾದವನು ತುಷ್ಟನಾಗಿ 3 ಧ್ವನಿ ಮೇಲಿಷ್ಟು ಸಿಟ್ಟು ಕಾರಣ ಪೇಳಿಷ್ಟು ತಪ್ಪಿತು ಕ್ಷಮಿಸಿಷ್ಟು 1 ಎಳ್ಳುಕಾಳಷ್ಟು ನೊಂದು ಕೊಂಡಿದ್ದಾವು ಎಷ್ಟೋ 2 ಧರೆಯೊಳಗೆ ದ್ವಿಜರಿಗೆ ಸರಿಯಾರು ಇಲ್ಲೆಂದು ಬರುವುದು ಭಯ ಬಹಳಷ್ಟು ವರದಾನಂತಾ ದ್ರೀಶನ ಪರಮ ಭಕ್ತರಿಗೆ ಬರಬಾರದೆಂದಿಗೂ ಸಿಟ್ಟು 3 ವಚನ ಇಂದಿರಾಪತಿಯು ಹೀಗೆಂದು ಮುನಿಪಾದಂಗಳÀÀÀ ಚಂದದಿಂದಲಿ ಒತ್ತಿತ್ವರದಿಂದ ಉಷ್ಣೋದಕವನು ತಂದು ತೊಳೆಯುತ ಇಂದು ಪಾವಿತನಾದೆನೆಂದು ಹರುಷದಲ್ಲಿ ಮುಂದೆ ಭೃಗುಮುನಿಯು ಮುಕುಂದನ ಸರ್ವರಿಂದಧಿಕ ಸತ್ಯತಿಳಿರೆಂದ ಮುನಿಗಳೆಲ್ಲ ಮುಂದೆ ವೈಕುಂಠದಲಿ ಇಂದಿರಾದೇವಿ ಗೋವಿಂದನಾಟವ ಕಂಡಂದಳೀ ಪರಿಯು1 ರಾಗ:ಮೋಹನ ಕಲ್ಯಾಣಿ ಆದಿತಾಳ ಹರಿಯೆ ಪೋಗುವೆ ನಾನು ಮುನ್ನಿರುತಿರು ಒಬ್ಬನೇ ನೀನು ತಿರುಕನಾಗಿ ಇರುತಿರುವ ಭೂಸುರನು ಭರದೊಳೊದ್ದ ನಿನ್ಹಿರಿಯತನವೇನು ಪ ನಿನ್ನ ಶ್ರೀವತ್ಸವಿದು ಬಹು ಮಾನ್ಯವು ಎಂದೆನಿಸುವುದು ಮಾನ್ಯ ವಾಗಿಹುದು 1 ಬಡವ ಬ್ರಾಹ್ಮಣರಿಂದ ನೀ ಕಡೆಗೆ ಕೂಡಿರು ಚಂದಾ ಮಡದಿಯ ಹಂಬಲ ಬಿಡುದೂರದಿಂದ ತಡಮಾಡದೆ ನಾ ನಡದೆ ಗೋವಿಂದಾ 2 ಇನ್ನೆನ್ನ ಗೊಡವ್ಯಾಕೊ ಬಿಡು ನಿನ್ನ ಸಂಗತಿ ಸಾಕು 3 ಎನ್ನ ವೈರಿಗಳ ಮನ್ನಿಸುವ್ಯಾಕೋ ನನ್ನಿಚ್ಛೆಯಲಿ ನಾ ಇನ್ನಿರಬೇಕೊ 4 ಹಿಂದಕೆ ಕುಂಭೋದ್ಭವನು ಎನ್ನ ತಂದೆಯ ನುಂಗಿದ ತಾನು ಅಂದಿಗೆ ಎನಗಾನಂದವು ಏನು 5 ಮತ್ತೆನ್ನ ಸೊಸೆಗವರು ಬಹು ಭಕ್ತಿಯಲಿ ಪೂಜಿಸುವರು ವೈರಿಯವರ್ಹೊರತು ಇನ್ಯಾರು 6 ಹುಡುಗ ಬುದ್ಧಿಯು ಎಂದು ನಾ ಕಡೆಗೆ ಬಲ್ಲೆನು ನಿಂದು ಮಡುವ ಧುಮುಕಿ ಕಲ್ಪಡೆಯ ಪೊತ್ತಿಹುದು ಪಿಡಿದು ಭೂಮಿಯ ಕಂಭ ಒಡೆದು ಬಂದಿಹುದು 7 ಬಡವ ಬ್ರಾಹ್ಮಣನಾದಿ ಚಪಗೊಡಲಿಯ ಕೈಯಲಿ ಪಿಡಿದಿ ಮಡದಿಯ ಕಳಕೊಂಡು ತುಡುಗ ನೀನಾದಿ ಹಿಡಿದು ಬತ್ತಲೆ ಖೊಟ್ಟಿ ಕಡವನೇರಿದಿ 8 ಎಷ್ಟು ಪೇಳಲೆ ನಿನಗೆ ನೀನೆಷ್ಟು ಮಾಡಿದಿ ಹೀಗೆ ಅಷ್ಟು ಮನಸಿನೊಳಗಿಟ್ಟುನೂ ಆಗ ಕಟ್ಟಕಡಿಗೆ ಬಲು ಸಿಟ್ಟು ಬಂತೆನಗೆ 9 ಎಲ್ಲರಿಗುತ್ತಮ ನೀನು ಎಂದಿಲ್ಲಿದ್ದೆ ಮೋಹಿಸಿನಾನು ಬಲ್ಲಿದನಂತಾದ್ರಿಯೊಳಿರು ನೀನೆ 10 ರಾಗ:ಸಾರಂಗ ಆದಿತಾಳ ಪರಿ ಕಲಹ ಮಾಡಿ ತ್ವರಿತದಿಂದ ನಡೆದಳು ಕರವೀರಪುರಕೆ ಪ ಪರಮಾತ್ಮನು ತಾ ಮುಂದೀಪರಿ ಚಿಂತಿಸುತಿಹನು ಸಿರಿಯಿಲ್ಲದ ವೈಕುಂಠ ಸರಿಬಾರದು ಎನಗೆ1 ದೀನನಾದೆನು ಹಾ ನಾನು ಕಾಣುವೆನೆಂದು ಪ್ರಾಣ ನಿಲ್ಲದು ಪಟ್ಟದ ರಾಣಿಯ ಬಿಟ್ಟು 2 ಇನ್ಹ್ಯಾಂಗೆ ಇರಲಿ ಇನ್ನಾಕೆಯ ಹೊರತು ಕಣ್ಣಿಗೆ ವೈಕುಂಠಾರಣ್ಯ ತೋರುವುದು ಇನ್ನೆಲ್ಹೋಗಲಿ ಎಂದು ಬಂದ ತನ್ನಿಂದ ತಾನು3 ಶ್ರೀ ವೈಕುಂಠಕಿಂತ ಶ್ರೀ ವೆಂಕಟಗಿರಿಯು ಅಧಿಕವೆಂದು ಭಾವಿಸೀ ಪರಿಯು ಆವತ್ತಿಗೆ ಬೇಗಲ್ಲೇ ತಾ ವಾಸಕೆ ನಡೆದ ದೇವ ತಿಂತ್ರಿಣೆಯೆಂಬೋ ಆ ವೃಕ್ಷವಕಂಡ 4 ಅಡಗಿದ ಮೆಲ್ಲನೆ ಪೋಗಿ ಅಲ್ಲ್ಯಾದೇಶದಲೊಬ್ಬ ಜೋಳಾಖ್ಯನು ಎಲ್ಲರಿಂದಲಿ ತನ್ನ ಪುರದಲ್ಲೆ ಇರುವಾ5 ಶಿವನ ಕರುವಿನ ಮಾಡಿ ತಾನಾಕಳಾಗಿ ಅವನ ತಾಯಿಯು ಲಕ್ಷ್ಮೀ ಅವನ ಮಾರಿದಳು ಕೊಂಡ 6 ನಿತ್ಯ ವರಸಾಧು ಗುಣದಿಂದ ಸರಸಾಗಿ ಕೂಡಿ ಚರಿಸಿ ಬರುವುದು ವೇಂಕಟಗಿರಿಗ್ಹೋಗಿ ನಿತ್ಯ7 ಬಂದ ಕಾರಣವೇನು ಎಂದು ಸ್ಮರಿಸುತಲಿ ಇಂದಿರೇಶಗೆ ಭಕ್ತಿಯಿಂದ ಕ್ಷೀರವನು ಚಂದಾಗಿ ಕರೆವುದು ಬಂದು ಹುತ್ತಿನಲಿ 8 ಹಿಂಡದು ತನ್ನ ಕರುವಿನ ಪರಿ ರಾಜನ ಹೆಂಡತಿಯ ಆಗ ಚಂಡ ಕೋಪದಿ ಗೋಪನ ಕಂಡಂದಳು ಹೀಗೆ 9 ವಚನ ನೀ ಏನು ಮಾಡುವಿನಿತ್ಯ ಕುಡಿವುದೋ ವತ್ಸ ಏನುಮಾಡು ಪ್ರಾಣಕೊಂಬುವೇನು ತಾನು ಗಾಭರಿಗೊಂಡು ಧ್ಯಾನಿಸುತ ಆ ರಾಜ ಮಾನಿನಿಗೆ ನುಡಿದ ಬಹು ದೀನನಾಗಿ 1 ರಾಗ:ದಂತಿ ಆದಿತಾಳ ಅರಿಯೆ ತುರುಗಳ ಕಾಯ್ಕೊಂಡು ಬರುವೆ ನಾ ಇದಹೊರ್ತು ಪ ಕಟ್ಟುವರ್ಯಾರೊ ಅರಿಯೆ ಬರಿದೆ ನೀ ಎನ್ನ ಮೇಲೆ ಹರಿಹಾಯುವದ್ಯಾಕೆ ಅರಿಯೆ 1 ಪಾಲಾಗುವುದೊ ಅರಿಯೆ ಸರಸಾಗಿ ತಿಳಿನೀನು ನೆರೆಯೊರೆಯವರನಾ ಅರಿಯೆ 2
--------------
ಅನಂತಾದ್ರೀಶ - ಕಥನಕಾವ್ಯಗಳು
ಕದವನಿಕ್ಕಿದ ಕಾರಣೇನೆ ಮುದದಿ ಕೇಳೆ ಮೋಹನಾಂಗಿ ಸದನಕ್ಕಾಗಿ ಬಂದೆ ನಾನು ಸರಸವ್ಯಾತಕೆ ಸುಂದರಾಗಿ ಪ ಇಂದು ನಾನು ಬಂದೆ ದ್ರೌಪದಿ ಬಂದು ಬಾಗಿಲನ್ಹಾಕುವೋದು ಚೆಂದವೇನೆ ಚಂದ್ರಮುಖಿಯೆ ಬಂದು ಬಾಗಿಲು ತೆಗೆಯೆ ನೀನು 1 ಅಂಧಕಾರ ರಾತ್ರಿಯಲಿ ಬಂದವರ್ಯಾರೆಂದು ಅರಿಯೆ ನಿಂದು ಗುರುತೇನೆಂದು ಪೇಳಲು ಬಂದು ಬಾಗಿಲು ತೆಗೆವೆ ನಾನು 2 ಕಂಡರಿಯೆ ಎನ್ನ ಪರಾಕ್ರಮ ಖಾಂಡವವನವ ದಹಿಸಿದೆನೆ ಗಾಂಡೀವಾರ್ಜುನರಾಯ ನಾನು 3 ಗಾಂಡೀವಾರ್ಜುನರಾಯನಾದರೆ ದುಂಡು ಬಳೆ ಕಂಕಣಗಳಿಟ್ಟು ಗೊಂಡ್ಯ ರಾಗಟೆ ಹೆರಳಲ್ಹಾಕಿ ನೀ ಷÀಂಡರೂಪವ ಧರಿಸ್ಹೋಗೊ 4 ಕ್ಷೀರಸಾಗರದಲ್ಲೆ ತಾ ಮಂ- ದರ ಪೊತ್ತಮೃತವನೆ ತಂದ ಧೀರ ಕೂರ್ಮಗೆ ಮೈದುನಾದಂಥ ಶೂರ ಫಲ್ಗುಣರಾಯ ನಾನೆ 5 ಫಲ್ಗುಣರಾಯನಾದರೇನೊ ಸದ್ಗುಣ ಸಂಪನ್ನ ಬಿರುದು ಭದ್ರದೇವಿಯ ಕದ್ದು ತರುವಾಗ ಬುದ್ಧಿ ದಾರಲ್ಲಿಟ್ಟೆದ್ದಿರ್ಹೇಳೊ 6 ಪರಮೇಶ್ವರನ ಒಲಿಸಿಕೊಂಡು ಪಾಶುಪತಾಸ್ತ್ರ ಪಡೆದೆ ನಾನು ಪರಮ ಆಪ್ತ ವರಾಹನ ಕರುಣಕ್ಕೆ ಪಾತ್ರನಾದಂಥ ಪಾರ್ಥರಾಯನೆ 7 ಪಾಶುಪತಾಸ್ತ್ರ ಪಡೆದರೇನು ದೇಶ- ದೇಶ್ಯಾತ್ರೆತೀರ್ಥ ಚರಿಸಿ ಆಸೆ ಬಿಡದೆ ಸನ್ಯಾಸಿಯಾದಂಥ ಮೋಸಗಾರನೆ ಮನೆಗೆ ಪೋಗು 8 ಕೋಟಿ ದೈತ್ಯರ ಕೊಂದೆ ಎನ್ನಸರಿ- ಸಾಟಿಯಾರೀ ಲೋಕದೊಳಗೆ ಆ- ರ್ಭಟದವತಾರ ನಾರಸಿಂಹನೆ ನೀಟಾದಭಕ್ತ ಕಿರೀಟಿಯಲ್ಲವೆ 9 ಕೋಟಿ ದೈತ್ಯರ ಕೊಂದು ಜೂಜಿ- ನಾಟ ಸೋತ್ವನ ತೋಟ ತಿರುಗಿ ಪಾಟುಬಟ್ಟು ವಿರಾಟನಲ್ಲೆ ನಾ(ನ?)ಟರಾಟಕೆ ನಿಂತಿರ್ಯಾಕೊ 10 ಮಾತಿಗೆ ಮಾತಾಡೋರೇನೆ ಅ- ಭೂತಳವ ಬೇಡಿದ್ವಾಮನಗೆ ದೂತ ನಾ ಶ್ವೇತೂವಾಹನನೆ 11 ಶ್ವೇತೂವಾಹನ ನಿಮ್ಮ ಸತಿಗೆ ನಾಥರಿದ್ದೂ ಅನಾಥಳಂತೆ ಅ- ಜ್ಞಾತದಲ್ಲಿ ಸುದೇಷ್ಣೆ ಸೇವೆಗೆ ದೂತಿಯಾದ ಪ್ರಖ್ಯಾತಿ ದಾರದೊ 12 ಹೆತ್ತತಾಯಿ ಶಿರವನಳಿದ ಕ್ಷತ್ರೇ- ರಂತಕ ಭಾರ್ಗವಗೆ ನಿತ್ಯದಲಿ ನಿಜಸೇವಕ ಭೀ- ಭತ್ಸುರಾಯ ನಾನಲ್ಲವೇನೆ 13 ಧೀರ ಭೀಭತ್ಸುರಾಯ ನಿನ್ನ ನಾರಿಯ ಸಭೆಗೆಳೆದು ತಂದು ಸೀರೆ ಸೆಳೆವಾಗ ಶೂರರಾದರೆ ದಾರದಾರಂತೆ ನೋಡಿರ್ಯಾಕೊ 14 ಕಾಮ ಮೋಹಗಳಿಂದ ನಿನ್ನಲ್ಲೆ ಪ್ರೇಮದಿ ನಾ ಬಂದೆನೀಗ ರಾಮರಾಜÉ್ಞಗೆ ನಿಜ ಸೇವಕ- ನಾದ ವಿಜಯರಾಯ ನಾನೆ 15 ವಿಜಯರಾಯ ನೀನ್ಹೌದೊ ತೇಜಿದಿ- ಗ್ವಿಜಯಕೆನುತದರ್ಹಿಂದೆ ಪೋಗಿ ಮಗನ ಕೈಯಿಂದ ವಧೆಯು ನೀತವೆ ಮೊದಲೆ ಪರಾಜಿತನಾದಿರ್ಯಾಕೊ 16 ಶ್ರೇಷ್ಠರೊಳು ಮಹಾಶ್ರೇಷ್ಠ ನಾನೆ ಅಸ್ತ್ರವಿದ್ಯದಲ್ಲಧಿಕನೆಂದು ಕೃಷ್ಣಮೂರುತಿ ಒಲಿಸಿಕೊಂಡಂಥ ಕೃಷ್ಣೆ ನಲ್ಲನೆ ಕೃಷ್ಣೆ ಕೇಳೆ 17 ಸಾರಥಿ ಆದ್ದರಿಂದ ಹಸ್ತಿನಾವತಿ ಪಟ್ಟಣಾಳ್ವುದು ಇಷ್ಟು ದಾರ ದಯದಿಂದ್ಹೇಳೊ 18 ಅಂಗನಾಮಣಿ ನಿನ್ನ ಅಂಗ- ಸಂಗ ಬಯಸಿ ನಾ ಬಂದೆನೀಗ ಅಂಗದ್ವಸ್ತ್ರವಬಿಟ್ಟ ಬೌದ್ಧಗೆ ಸಖನು ನಾ ಸವ್ಯಸಾಚಿ ಅಲ್ಲವೆ 19 ಭುಜ ಪರಾಕ್ರಮಿ ಸವ್ಯಸಾಚಿ ನಿನ್ನೆರಡು ಕೈದಡ್ಡಿನ್ಯಾತಕೇಳೊ ದ್ವಿಜರ ಸುತರ ತಂದುಕೊಡದೆ ಮೊದಲೆ ಮಾಡಿದ ಪ್ರತಿಜ್ಞವೇನೊ 20 ಅಂಜೋನಲ್ಲ ನಾನರಿಗಳಿಗೆ ಕಲಿ- ಭಂಜನ ಕಲ್ಕ್ಯಾವತಾರಗೆ ಕಂಜಚರಣಕ್ಕೆ ವಂದಿಸುವೆ ಧ- ನಂಜಯ ನಾನಲ್ಲವೇನೆ 21 ಸೈಯೊ ನೀ ಧನಂಜಯರೇಯ ಸುರಪತಿಗೆ ಪತ್ರವನೆ ಬರೆದು ಶರದ ಪಂಜರ ಕಟ್ಟಿ ನೀ ಕುಂ- ಜರವನಿಳಿಸಿದ ಕಾರಣೇನೊ 22 ನಿನ್ನ ಸರಿ ಮಾತಾಡುವೋರ ಧನ್ಯರ ನಾ ಕಾಣೆನೆಲ್ಲು ಳನ್ನು ಕೇಳಿದಿನ್ಯಾಕೆ ತಡೆವೆ 23 ದಶ ನಾಮಗಳ ಕೇಳಿ ದ್ರೌಪದಿ <ಈಔಓಖಿ ಜಿಚಿ
--------------
ಹರಪನಹಳ್ಳಿಭೀಮವ್ವ
ಕನಕಮುನಿ ಕರಕಮಲ ಪೂಜಿತಾಂಘ್ರಿ ಮನುಜಮೃಗವೇಷ ಮಾರಮಣ ನಿನಗಾನಮಿಪೆ ಪ ನಿರವದ್ಯ ನಿರವಧಿಕ ಮಹಮಹಿಮ ಸ್ವರ್ದುನಿ ಪಿತನೆ ಸಮಭ್ಯಧಿಕ ಶೂನ್ಯ ವರ್ಧಿಸಲಿ ನಿನ್ನಲ್ಲಿ ಸದ್ಭಕ್ತಿ ಖಳಸಂಪ್ರ ಮರ್ದನ ಮಮಸ್ವಾಮಿ ಸರ್ವರಂತರ್ಯಾಮಿ 1 ತೀರ್ಥಪದ ನಿನ್ನ ಸತ್ಕೀರ್ತಿ ಸರ್ವತ್ರ ಕೀರ್ತಿಸುವ ಭಕ್ತರ ಭವಾಬ್ಧಿಹರನೆ ಪಾರ್ಥಸಖ ಸರ್ವದಾ ಪ್ರಾರ್ಥಿಸುವೆ ನಿನ್ನ ಚಿ ನ್ಮೂರ್ತಿ ಮನದಲ್ಲಿ ಸ್ಪೂರ್ತಿಸಲಿ ಸರ್ವದಾ 2 ಸೂತ್ರನಾಮಕ ಪ್ರಾಣಮಿತ್ರ ಭಾರತ ಪಂಚ ರಾತ್ರಾದಿ ಆಗಮಸೂತ್ರಪ್ರಿಯ ಕ್ಷೇತ್ರಜ್ಞ ಶ್ರೀ ಜಗನ್ನಾಥವಿಠ್ಠಲ ಅಹೋ ರಾತ್ರಿಯಲಿ ನಿನ್ನವರ ಸಹವಾಸ ಕೊಡು ಎನಗೆ3
--------------
ಜಗನ್ನಾಥದಾಸರು
ಕಪಾಲಧರ ತ್ರಯತಾಪರಿಹಾರ ಭ ಜಿಪೆ ಕಾಪಾಡು ಕೃಪೆ ಪಾಲಿಸಿ ಪ ಅಪಾರ ಪತಿವ್ರತಾಶಾಪವಿಮೋಚನ ಗೋಪ ಗೋಪತಿ ನಮಿತ ಗೋಪಾಲನೊಲಿಸೆನಗೆ ಅ.ಪ ಅಗಜಾವಲ್ಲಭ ಸುಗುಣರಘದೂರ ಜಗದೊಡೆಯ ಮಗುವಿನ ಮೊರೆ ಪಾಲಿಸು ವಿನುತ ಅಗಣಿತಾಗಣಿತಮಹಿಮೆ ಬಗೆದೆನ್ನ ನುಡಿಯಾಲಿಸು ನಗಧರ ಖಗರೂಢ ಜಗರಕ್ಷ ಹರಿನಾಮ ಅಗಣಿತ ಮತಿ ನೀಡೊ 1 ಅಜಭವಸುರ ನಮಿತ ರಜತಾದ್ರಿಮಂದಿರ ನಿಜಜ್ಞಾನ ದಯಮಾಡೊ ಮೃಡ ಗಜಚರ್ಮಾಂಬರ ಜಗದ ಗೋಜು ಮುಂದೆನಗೆ ಬೇಡೊ ಸುಜನ ಸಂರಕ್ಷಕ ಪಾದ ನಿಜಧ್ಯಾನ ಸ್ಥಿರಕೊಡೋ 2 ಮೃತ್ಯುವಿಜಯ ಸತ್ಯ ಚಿತ್ತ ನಿರ್ಮಲ ನಿತ್ಯ ಸತ್ಯರ ಸಖ್ಯ ನೀಡೊ ಸತ್ಯಸದ್ಭಕ್ತಿನಿತ್ತು ಮತ್ರ್ಯರಿಂದುಳಿಸೆನ್ನ ಚಿತ್ತ ಪರಿಶುದ್ಧ ಮಾಡೊ ಭಕ್ತವತ್ಸಲ ನಿಜಮುಕ್ತಿದಾಯಕ ಮಮ ಕರ್ತ ಶ್ರೀರಾಮನ ಭಕ್ತನೆಂದೆನಿಸೆನ್ನ 3
--------------
ರಾಮದಾಸರು