ಒಟ್ಟು 1580 ಕಡೆಗಳಲ್ಲಿ , 110 ದಾಸರು , 1354 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣವ ಮಾಡೊ ಶರಣರ ಪ್ರೇಮಿಕರುಣವ ಮಾಡೊ ಅರುಣನಿಭನೆ ಗುರು | ಕರುಣವ ಮಾಡೊ ಪ ಸುರ ತರುವಿನ ಅನುಸರಿಸಿದ ಮನುಜಗೆ ಮೃಷ್ಟಾನ್ನದ ಬರವೆಸುರನದಿ ಅನುಸರಿಸಿದ ಮನುಜಗೆ ಘನ ತೃಷಿಯ ಬಾಧೆ 1 ಕಾಮಧೇನು ತನ್ನ ಧಾಮದೊಳಗೆಯಿರೆ ಸೀಮೆ ಆಳುವರಾಸೆರಾಮನ ಪದಯುಗ ತಾಮರಸವನಂಬೆ ಪಾಮರರಂಜಿಕೆಯೆ 2 ವ್ರಜತಾಧಿಪ ವೇಣುಗೋಪಾಲ ವಿಠಲನ್ನ ನಿಜವಾಗಿ ಸ್ಮರಿಸುವರಕುಜನ ದಲ್ಲಣ ಗುರು ವಿಜಯದಾಸರೆ ಸ್ಮರಿಸುವರೆಯಿವರ3
--------------
ವೇಣುಗೋಪಾಲದಾಸರು
ಕರುಣವೇಕೆ ಬಾರದಯ್ಯಾ ಕರಿವರದನೆ ಪ ಶರಣ ರಕ್ಷಕನೆಂದು ನಿನ್ನ ಮೊರೆಯ ಹೊಕ್ಕೆನೊ ಸರಸಿಜಾಕ್ಷ ಮರಣ ಕಾಲದಿ ಮಗನ ಕರೆದ ಪುರುಷ ಪುಣ್ಯ ಶರಧಿಯೇನೊ ಅ.ಪ. ತುತಿಸಸಲಿಲ್ಲವೆಂದು ಎನ್ನ ಹಿತವಗೈಯದೆ ಜರಿಪರೇನೊ ತುತಿಸಲಾಪವೇ ಶ್ರುತಿಗಳನ್ನು ಮಿತಿಗೆ ಸಿಲ್ಕದ ನಿನ್ನ ಮಹಿಮೆ 1 ಏನು ಸಾಧನವವÀ ಮಾಡಲಿಲ್ಲವೆಂದು ಕೈಬಿಡುವೆಯೇನೊ ನೀನು ದಯಮಾಡಿದಲ್ಲದೆ ಏನು ಸಾಧನ ಮಾಡಲಾಪೆನೊ 2 ಪಾಪಪುಣ್ಯ ಕರ್ಮಗಳಿಗೆ ನೀನೆ ಪ್ರೇರಕನಲ್ಲವೇನೊ ಶ್ರೀ ಪರಾತ್ಪರ ನೀ ಸ್ವತಂತ್ರ ನಾ ಪರಾಧೀನನಲ್ಲವೆ 3 ಪುಣ್ಯಗೈದವರಲಿ ಕರುಣವನು ಗೈವುದೇನು ಮಹಿಮೆ ಘನ್ನ ಪಾಪಿಗಳಲಿ ನೀ ಪ್ರಸನ್ನನಾಗಲು ಖ್ಯಾತಿಯಲ್ಲವೆ 4 ಪತಿತಪಾವನ ದೀನರಕ್ಷಕ ಶ್ರಿತ ಜನಮಂದಾರನೆಂಬ ವಿತತ ಬಿರುದು ಬರಿದೆ ಪೇಳೋ ಗತಿ ಪ್ರದಾಯಕನಲ್ಲವೇನೊ 5 ದುರಿತ ರಾಶಿ ನೋಡಿ ಬೆದರಿ ನಿಂತೆಯೇನೊ ನೀನು ದುರಿತ ದೂರನಲ್ಲವೇ ನಿನ್ನ ಸ್ಮರಣೆ ನೋಡದ ದುರಿತವಿಹುದಿ 6 ತರಳತನದ ಸಲಿಗೆಯಿಂದ ಪರಿಪರಿಯಲ್ಲಿ ನುಡಿದೆನಯ್ಯಾ ಪರಮ ತತ್ವವರಿಯೆ ನಾನು ಪೊರೆಯೊ ಎನ್ನ ಕರಿಗೀರೀಶ 7
--------------
ವರಾವಾಣಿರಾಮರಾಯದಾಸರು
ಕರುಣಾದಿ ಪೊರೆಯನ್ನ ಪಾರ್ವತೀರಮಣ ಪುರಹರನೆ ಕರುಣಿಪುದೆಮಗೆ ಸುಜ್ಞಾನ ಈ ಪ ಧರಣಿಯೊಳು ಗೂಗಲ್ಲು ಕ್ಷೇತ್ರ ಸುಮಂದಿರನೆ ನಿನ್ನ ಅನುದಿನ ಅ.ಪ ದುರಿತ ಗಜ ಪಂಚಾಸ್ಯ ಕರಮುಗಿವೆ ನೆರೆನಂಬಿನಿನ್ನನು ಶೇವಿಸುವ ಶರಣರಿಗೆ ಸುರತರುವೆ ಜನಿಸಿರುವರೊಳು ಸರ್ವರಿಗೆ ಮನದಲಿ ಪ್ರೇರಿಸುವ ಗುರುವೆ ಗೂಗಲ್ಲಪ್ರಭುವೆ 1 ಭಾಗವತಸು ತಿಳಿಸೆನ್ನ ಮನಕೆ ಜಿತ ಮನೋಜಾತ 2 ಪರಿಪಾಲಿಸಲು ಶಿವನೆ ರಾಜಿಸುವ ಕೃಷ್ಣಾಕೂಲದಲಿ ನಿಂದಿರುವಿ ಶಂಕರನೇ ಜನಮೇಜಯಾಖ್ಯ ಪಾದ ಸುವಿಶಾಲ ಮಹಿಮನೇ 3 ನೀಡಿದೆಯೊ ಗೌತುಮ ಮನಮಂದಿರದಿ ಗೋ- ವಿಂದನಂಘ್ರಿಯ ಕಾಂಬುವೊ ಬಗೆಯ ತೋರೆನಗೆ ಜೀಯ4 ಶ್ರೀಶ್ವೇತಗಿರಿ ಸುಕ್ಷೇತ್ರ ಪಂಚ ಕ್ರೋಶಗನು ನೀನೆ ಸರ್ವೇಶ ಕಾರ್ಪರ ವಾಸಸಿರಿ ನರಕೇಸರಿಗೆ ಪ್ರಿಯನೇ ದುರ್ವಿಷಯದಲಿ ಅಭಿಲಾಷೆ ಪುಟ್ಟಿಸದಂತೆ ಶಶಿಧರನೆ ಸಿರಿವ್ಯಾಸಕುವರನೇ5
--------------
ಕಾರ್ಪರ ನರಹರಿದಾಸರು
ಕರುಣಾನಿಧಿ ನೀ ಶ್ರೀರಾಮ ನಿನ್ನ ಚರಣ ಸೇವಿಪರಾನತ ಪ್ರೇಮ ಪ. ಕರುಣ ತೋರುತ್ತೆನ್ನ ಪೊರೆ ರಾಮ ನಿನ್ನ ಸ್ಮರಣೆ ನಿರುತ ನೀಡೆಲೊ ಶ್ರೀರಾಮ ಅ.ಪ. ಆಶ್ರಿತ ಜನರಿಗೆ ನೀನಲ್ಲದೆ ನಿ ನ್ನಾಶ್ರಯಗೊಡದಿರೆ ಗತಿ ಕಾಣೆ ಸ್ತೋತ್ರದಿ ಸ್ತುತಿಸುವೆ ನಿನ್ನಾಣೆ ಜಗತ್ರಯ ಸಲಹೊ ಕೋದಂಡಪಾಣಿ 1 ಭವಭಯಭಂಜನ ಶ್ರೀರಾಮ ಎನ್ನ ಭಯವ ಬಿಡಿಸೊ ಜಾನಕಿ ರಾಮ ಕವಿಗೇಯ ನೀನೆ ಜಗದಭಿರಾಮ ಎನಗೆ ಜವನ ಬಾಧೆಯ ಬಿಡಿಸೊ ರಘುರಾಮ 2 ತಂದೆ ಶ್ರೀ ಶ್ರೀನಿವಾಸ ನೀನೆ ಎನಗೆ ಬಂದ ಕಷ್ಟದಿ ಸಲಹುವ ನೀನೆ ಮುಂದೋರಿ ಸಲಹೋ ತಾಯಿ ಗುರು ನೀನೆ ಇನ್ನೂ ಸಂದೇಹವಿಲ್ಲ ಕೇಳೆಲೊ ರಾಮ 3
--------------
ಸರಸ್ವತಿ ಬಾಯಿ
ಕರುಣಾರ್ಣವ ಶ್ರೀ ಗುರುವರ ಕರುಣಿಸೊ ನೀ ಎನ್ನ ಕರುಣಾಗತ ರಕ್ಷಾಮಣಿ ತವ ಚರಣಾಂಬುಜ ತೋರಿನ್ನ ಪ ಆನತಜನತತಿಜ್ಞಾನದ ಎನ್ನ - ಙÁ್ಞನವ ಕಳೆದಿನ್ನ ಮಾನದಿ ಸಲಹೆನ್ನಾ 1 ಕಾಮಿತ ಫಲಪ್ರದ ಕಾಮ್ಯಾರ್ಥವನೂ ಕಾಮಿಪ ಜನಕಿನ್ನ ಪ್ರೇಮದಿ ಅವರಭಿಕಾಮವ ಪೂರ್ತಿಸಿ ಕಾಮಧೇನುತೆರ ತೋರುವಿ ಘನ್ನ 2 ಶಿಷ್ಟೇಷ್ಟ ಪ್ರದನಿಷ್ಟಘ್ನನೆ ನೀ ಕಷ್ಟವ ಪರಿಹರಿಸಿನ್ನಾ ಎಷ್ಟೆಂಥೇಳಲಿ ಸೃಷ್ಟಿ ಯೊಳಗೆ ನಿನ್ನ ಶ್ರೇಷ್ಠ ಮಹಿಮೆಗಳನ್ನಾ 3 ಶಿಷ್ಟನೆ ನೀ ಪರಮೇಷ್ಟಿಯ ಸತ್ಪದಾ - ಧಿಷ್ಟತನೆಂದಿನ್ನಾ ಪ್ರೇಷ್ಟನೆ ಎನ್ನಯಭೀಷ್ಟೆಯ ನಿತ್ತು ಶ್ರೇಷ್ಠನ ಮಾಡಿನ್ನಾ 4 ಪಾತಕವನಕುಲ ವಿತಿಹೋತ್ರ ಸುಖ ದಾತನೆ ನೀ ಇನ್ನಾ ಈತೆರ ಮಾಡದೆ ನೀತ ಗುರುಜಗ - ನ್ನಾಥವಿಠಲ ಪ್ರಪನ್ನಾ 5
--------------
ಗುರುಜಗನ್ನಾಥದಾಸರು
ಕರುಣಿಸಲೊಲ್ಯಾ ಕರುಣಾನಿಧೇ ಪ ಕರುಣಿಸಲೊಲ್ಯಾ ನೀ ಕರುಣಸಾಗರ ನಿನ್ನ ಭವ ಅರಣ ದಾಟುವಂತೆ ಅ.ಪ ವಿಶ್ವವ್ಯಾಪಕನೆ ವಿಶ್ವಾಸುವಿಶ್ವ ನೀ ವಿಶ್ವ ಪ್ರೇರಕ ನಿನ್ನ ವಿಶ್ವಪಾದದೊಳು ನಾ ವಿಶ್ವಾಸಮಾಳ್ಪÀಂತೆ 1 ಜ್ಞಾನದಾಯಕನೆ ಜ್ಞಾನದಾಯಕ ಎನ್ನ ಜ್ಞಾನನಿಚಯ ನೀನೆ ಹಾನಿಮಾಡಿ ನಿನ್ನ ಜ್ಞಾನವನೈದೊಂತೆ 2 ಮಂದರೋದ್ಧರನೆ ಮಹಾರಾಯಾ ನಂದದಾಯಕನೆ ಇಂದಿರಾಪತಿ ನಿಜ ನಂದಕೊಡುವ ನಿನ್ನ ದ್ವಂದ್ವ ಚರಣದೊಳು ಸಂದೇಹವಿಲ್ಲದಂತೆ 3 ಕಾಮಿತಾರ್ಥವನೆ ಕಮಲಾಕ್ಷಾ ಕಾಮನ್ನಪಿತನೆ ಕಾಮಿತಾರ್ಥಗಳನ್ನು ಕಾಮಿಸದಲೆ ನಿನ್ನ ನಾಮವ ಭಜಿಸುವ ನೇಮಮತಿಯನಿತ್ತು 4 ಸೃಷ್ಟಿಕಾರಣನೆ ಶ್ರೀಕೃಷ್ಣಯ್ಯಾ ವೃಷ್ಣಿನಾಯಕನೆ ದುಷ್ಟಮತಿಯ ಬಿಡಿಸಿ ಶಿಷ್ಟಙÁ್ಞನವನಿತ್ತು ದಿಟ್ಟಗುರುಜಗನ್ನಾಥ ವಿಠಲ ನೀ ಎನ್ನ 5
--------------
ಗುರುಜಗನ್ನಾಥದಾಸರು
ಕರುಣಿಸಿಯಭಯವನು ಕೊಟ್ಟು ಕಾಯುವೆನಿರತಂ ಕರಕಮಲವದಯಮಾಡೈ ಅರಿಸಿನ ಹಚ್ಚುವೆನು ಮುದದಿ ಅರಸ ನಿನಗೆ ನಾಂ 1 ಪಂಕಜರಿಪು ನಿಭವಕ್ತ್ರನೆ ಪಂಕಜ ಸೂರ್ಯನೆ ಕುಂಕುಮ ಹಚ್ಚುವೆ ನಿನಗೆ ಕೊಡು ನಡು ಪಣೆಯಂ 2 ಭವ ತ್ಕಂಧರವ ನೀಡು ಪರಿಮಳ ಗಂಧವ ಹಚ್ಚುವೆನು ನಾನು ಕಮಲದಳಾಕ್ಷ 3 ನಿರತವು ಮನ್ಮಾನಸ ಪಂ ಕರುಹದಿ ಸೇವಿಸುವೆ ನಿನ್ನ ಕರುಣಾನಿಧಿಯೆ ಸರವನು ಕಂಧರದಿ ಧರಿಸುವೆ ಜಗನ್ನಾಥಾ 4 ನಾಮಾಡಿದ ತಪ್ಪುಗಳಂ ನೀ ಮನದಲಿ ತರದೆ ಕ್ಷಮಿಸುವದು ಪ್ರಾಣೇಶಾ ಪ್ರೇಮದಿ ವೀಳ್ಯವ ಶ್ರೀಗುರು ರಾಮವಿಠಲ ಕೊಡುವೆ ನಿನಗೆ ರಮ್ಯಚರಿತ್ರ 5
--------------
ಗುರುರಾಮವಿಠಲ
ಕರುಣಿಸು ಕಮಲಾಸನ ಮಾತಯೆ ನೀಂ ಕರಧೃತ ವರ ಕಮಲೆ ಪ ಶರಣವ ಪÉÇಂದಿಹೆ ಕರುಣದೊಳೀಕ್ಷಿಸು ವರದೆ ವರಲಕ್ಷ್ಮಿ ಅ.ಪ. ಕುಸುಮ ಧೂಪಾವಳಿಯಿಂದಲಿ ಸುಂದರಿ ಪೂಜಿಪೆನು ಬಂಧುರಗಾತ್ರಿಯೆ ಅಂದದೊಳೆನ್ನಯ ಮಂದಿರದೊಳಗಿಹುದು 1 ಶ್ರಾವಣ ಮಾಸದಿ ಭಾವಕಿ ನಿನ್ನನು ಭಾವದಿ ಭಾವಿಸುತ ತಾವಕ ಪಾದವ ಪ್ರೇಮದಿ ಪೂಜಿಪೆ ದೇವಿಯೆ ಒಲಿಯುವುದು 2 ಚಂದನಭೂಷಿತೆ ಸುಂದರ ಗಾತ್ರೆಯ ಮಂದಹಾಸಮೊಲಿಯೆ ಚಂದದ ಕಿಂಕಿಣಿಯಂದದರವದೊಳ್ ಬಂದು ದಯಂಗೆಯ್ಯೆ3 ಹರಿಮಾನಸ ಮೋಹದ ಪ್ರಾಣೇಶ್ವರಿ ಹರಸುತ ವರಗಳಿಂದ ವರಧೇನುನಗರ ವರಜನ ಪೋಷಿಣಿ ಕರುಣಾಕರೆ ವರದೆ4
--------------
ಬೇಟೆರಾಯ ದೀಕ್ಷಿತರು
ಕರುಣಿಸೆನಗಿನಿತು ಕರುಣಾರ್ಣವನೆ ನಿನ್ನ ಚರಣಾಬ್ಜದಲಿ ಭಕುತಿ ವಿಷಯದಿ ವಿರಕುತಿ ಪ ಬಿಂಬನೇ ಸರ್ವ ಪ್ರಯೋಜನವ ಮಾಡಿ ಪ್ರತಿ ಬಿಂಬರಿಗೆ ತತ್ಫಲಗಳೀವ ಕಾವ ಬಿಂಬನೆ ಸ್ವತಂತ್ರ ಪ್ರತಿಬಿಂಬಾ ಸ್ವತಂತ್ರತಮ ನೆಂಬ ಸುಜ್ಞಾನ ಪೂರ್ವಕ ನಿನ್ನ ಭಜಿಪ ಸುಖ 1 ಕಾರ್ಯ ಕಾರಣ ಅಂಶಿ ಅಂಶಾವತಾರ ಅಂ ತರ್ಯಾಮಿ ವ್ಯಾಪ್ಯ ವ್ಯಾಪಕ ಪ್ರೇರಕ ಪ್ರೇರ್ಯ ಬಾಧಕ ಬಾಧ್ಯ ಪೋಷ್ಯ ಪೋಷಕ ರೂಪ ಆರ್ಯರಿಂದರಿತು ಅನುದಿನದಿ ಸುಖಿಸುವ ಭಾಗ್ಯ 2 ತಾರತಮ್ಯದ ಜ್ಞಾನ ದುರ್ವಿಷಯಗಳಲಿ ಸ ದ್ವೈರಾಗ್ಯ ಹರಿದ್ವೇಷಿಗಳಲಿ ದ್ವೇಷಾ ಸೂರಿಗಳ ಸಂಗ ಗುಣರೂಪಕ್ರಿಯೆಗಳನು ಸುವಿ ನಿತ್ಯ ಅನುಮೋದ ಬಡುವಂತೆ 3 ಮಿಂದೋದಕಗಳೆಲ್ಲ ಮಜ್ಜನವು ದೇಹಾನು ಬಂಧಿ ಜನರೆಲ್ಲ ನಿನ್ನ ಪರಿವಾರವು ನಿಂದ್ಯ ಕರ್ಮಗಳೆಲ್ಲ ಪಾದುಕಗಳೆಂಬ ಅನು ಸಂಧಾನ ಮನಕೆ ನಿತ್ಯದಲಿ ಬರುವಂತೆ4 ಚೇತನಾಚೇತನಗಳೆರಡು ಪ್ರತಿಮೆಗಳು ಸಂ ಪ್ರೀತಿಯಲಿ ಸುರಕ್ಷಿಸುವುದು ಪೂಜೆ ಈ ತನುವೆ ಸದನವೆಂದರಿತು ನಿತ್ಯದಿ ಜಗ ನ್ನಾಥ ವಿಠ್ಠಲನೆಂಬ ವಿಷಯವೇ ಮುಖವೆಂದು 5
--------------
ಜಗನ್ನಾಥದಾಸರು
ಕರುಣಿಸೈ ಶ್ರೀ ರಾಮ ಕೌಸಲ್ಯ ಪ್ರೇಮ ಶರಣ ಜನಕನು ಪೊರೆವ ಕಾರುಣ್ಯಧಾಮ ಪ. ದಶರಥಾತ್ಮಜ ಯಜ್ಞ ಕಾಯ್ದು ಸೀತೆಯ ವರಿಸಿ ಕುಶಲದಿಂದಲಿ ಬಂದು ನಗರದಲ್ಲಿರಲೂ ಸತಿ ಅನುಜಸಹ ವನದಿ ನಸುನಗುತ ಚರಿಸಿ ರಕ್ಕಸರ ಸದೆಬಡಿದೆ 1 ಸತಿಯೆ ಕಳೆದಿರೆ ಹನುಮ ಹಿತವಾರ್ತೆ ಬಿನೈಸೆ ಹತಗೈದು ರಾವಣಾದಿಗಳನೆಲ್ಲ ಹಿತದ ರಾಜ್ಯದ ವಿಭೀಷಣ ರವಿಜರಿಗೆ ಇತ್ತು ವ್ರತ ಬಿಡಿಸಿ ಭರತನಿಗೆ ಧರಣಿಯಾಳಿದನೇ 2 ಪಟ್ಟಾಭಿರಾಮ ಮಂಗಳ ನಾಮ ಕೃಪೆಯಿಂದ ಇಷ್ಟಾರ್ಥವೀಯೊ ಸನ್ಮಂಗಳವನೂ ದಿಟ್ಟ ಶ್ರೀ ಹನುಮ ವಂದಿತ ಚರಣ ನಮಿಸುವೆನು ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲನೇ 3
--------------
ಅಂಬಾಬಾಯಿ
ಕರುಣಿಸೋ ಗುರು ಮಾರುತಿ ಶ್ರೀಧರ ಪರನೆಂದು ಬೋಧಿಸುತಲಿ ಪರ ವಾದಿಯ ಜಯಸಿದ ಮೋದತೀರ್ಥಮುನಿ 1 ಅಬಲೆಯ ಪ್ರಾರ್ಥನೆ ಲಾಲಿಸಿ ನಿಶೆಯೊಳು ಖೂಳನುದರವನ್ನು ಸೀಳಿ ಮೆರೆದ ಘನ 2 ಸ್ಮರಿಸುವ ಜನರ ಕೋರಿಕೆ ನೀಡಲು ಕೊರವಿ ಪುರದೊಳು ನೆಲೆ ನಿಂತ ಧೀರ 3 ಸೋಮಧರಾರ್ಚಿತ ಶಾಮಸುಂದರನ ನಾಮಾಮೃತವನು ಪ್ರೇಮದಿಂದ ಕೊಡು 4
--------------
ಶಾಮಸುಂದರ ವಿಠಲ
ಕರುಣೆ ತೋರಿಸೊ ದೇವಾ ಕರಿವರದನೆ ಪ. ಕರುಣ ತೋರಿಸೊ ದೇವ ಗರುಡಗಮನ ನಿನ್ನ ಕಮಲ ಧ್ಯಾನ ನಿರುತ ನೆನೆವ ಹರಿಅ.ಪ. ವೇದಾಂತ ವೇದ್ಯ ನೀನೆ ಆದಿನಾರಾಯಣ ಸಾಧುವಂದಿತನು ನೀನೆ ದೇವೇಶನೆ ವೇದವ್ಯಾಸನು ನೀನೆ ಬಾದರಾಯಣ ನೀನೆ ಭವ ಭಯಹರ ನೀನೆ 1 ಚಿಂತೆ ಕೊಡುವ ನೀನೆ ಚಿಂತಿತಾರ್ಥನು ನೀನೆ ಅಂತಕ ದೂತರಿಂದೆಳೆಸುವ ನೀನೆ ಸರ್ವ ಅಂತರ್ಯಾಮಿ ಅಂತÀರಂಗದಿ ನಿಂತು ಪ್ರೇರಿಸಿ ನಿನ ಪಾದ ಪಂಥದಿ ಸ್ತುತಿಗೊಂಡು ಸಂತಸ ಪಡುವವ ನೀನೆ2 ಮಾನುನಿ ದ್ರೌಪದಿಯಾ ಮೊರೆಯ ಕೇಳಕ್ಷಯ ನೀನೆ ಪಾಲಿಸಲಿಲ್ಲವೆ ಶ್ರೀ ಕೃಷ್ಣ ನೀನಿತ್ತು ಸಲಹಿದ ಶ್ರೀ ಶ್ರೀನಿವಾಸ ದೊರೆ ಗಾನಲೋಲನೆ ಭಕ್ತರ ಸಲಹುವೆನೆಂಬುವ ಆಭಯ ಹಸ್ತವ ನೀನಿತ್ತು ಸಲಹೆನ್ನದೇವಾಧಿದೇವ 3
--------------
ಸರಸ್ವತಿ ಬಾಯಿ
ಕರುಣೆ ತೋರೋ ಕಣ್ಣ ತೆರೆದು ಗುರುವು ನೀನೆ ಗತಿಯು ನೀನೆ ಪ ತ್ವರದಿ ಜಪವ ಪೂರ್ಣ ಮಾಡಿ ಕರವ ಶಿರದಲಿಡುತ ಅ.ಪ. ಸಿರಿಯ ವರನ ಪರಮ ಭಕುತ ಸಿರಿದಮಣಿಗಳಲ್ಲಿ ನೀನು ಹಿರಿಯ ಅಹುದೊ ಜಗದ ಗುರುವೆ ಪರಮ ಕರುಣಾಕರನೆ ದೇವ 1 ಹರಿಯ ಆಜ್ಞದಂತೆ ನೀನು ಸರುವ ಪ್ರಾಣಿಗಳಲಿ ನಿಂದು ಹಿರಿದು ಜಪವನಾಚರಿಸಿ ಅವರು ಅರಿಯದಂತೆ ನಿರುತ ಪೊರೆವೆ 2 ಶರಧಿ ಮಥನದಿಂದ ಬಂದ ಗರಳನಂದು ಭುವನಗಳನು ಉರುಹುತಿರಲು ಹರಿಯ ಮನವ ಅರಿತು ನೀನು ಭರದಿ ಕುಡಿದೆ 3 ಪೊಗಳಲವೆ ನಿನ್ನ ಮಹಿಮೆ ಸುಗುಣಮಣಿ ಭಾರತಿಯ ಪತಿಯೆ ಅಗಜೆಯರಸನನ್ನು ಪೆತ್ತ ನಗಧರನ ಪ್ರೀತಿ ಪಾತ್ರ 4 ಅಜನಪದಕೆ ಅರುಹನಾದೆ ದ್ವಿಜ ಫಣೀಶಾದಿಗಳ ಗುರುವೆ ಭಜನೆಗೈವೆನೆಂತು ನಿನ್ನ ತ್ರಿಜಗವಂದ್ಯ ತ್ರಿಜಗಪೂಜ್ಯ 5 ತ್ರೇತೆಯಲಿ ಅಂಜನಿಯಳ ಪೂತ ಗರ್ಭದಿಂದ ಬಂದು ಪೋತನಾದ ರವಿಜನನ್ನು ಪ್ರೀತಿಯಿಂದ ಸಲಹಿದೆಯ್ಯ 6 ಅಂದು ಕಪಿಯ ವೃಂದವೆಲ್ಲ ಬಂದು ಶರಿಧಿ ತಟದಿ ನಿಂದು ಮುಂದೆ ದಾರಿ ಕಾಣದಿರಲು ಸಿಂಧುವನ್ನು ದಾಟಿ ಬಂದೆ 7 ಮಂಗಳಾಂಗಿ ಸೀತೆಯನ್ನು ಕಂಗಳಿಂದ ನೋಡಿ ಹಿಗ್ಗಿ ಅಂಗನೆಯ ಪಾದಕೆರಗಿ ಉಂಗುರವನಿತ್ತ ಧೀರ 8 ಫಲವ ಸವಿವ ನೆವದಿ ನೀನು ನಲಿದು ವನವ ಮುರಿದು ತುಳಿದೆ ಕಲಹಕಿಳಿದು ಬಂದ ಅಕ್ಷನ ಬಲಿಯಹಾಕಿ ಕುಣಿಯುತಿರ್ದೆ9 ಕುಲಿಶಧರನ ಗೆಲಿದ ವೀರ ಜಲಜಭವನ ಶರವ ಬಿಡಲು ಛಲದಿ ನೀನು ಅದನು ತಡೆದು ಮಲೆತು ನಿಂತ ಮಹಿಮಯುತನೆ 10 ವನಜಭವ ನಾಮನ ಕೇಳಿ ಕನಲಿ ಬಂದಾ ಶರಕೆ ಸಿಲುಕಿ ದನುಜ ಸಭೆಗೆ ಬಿಜಯಮಾಡಿ ಅನುವ ತಿಳಿದು ಬಂದ ದೇವ 11 ರಕ್ಕಸನ ಲೆಕ್ಕಿಸದೆ ಧಿಕ್ಕರಿಸಿ ಮಾತನಾಡಿ ಪಕ್ಕಿರಥನ ಬಲುಮೆಯನ್ನು ಹೆಕ್ಕಳಿಸಿ ನೀ ಪೊಗಳಿ ನಿಂದೆ 12 ಉಕ್ಕಿ ಬಂದ ರೋಷದಿಂದ ರಕ್ಕಸನು ಚರರ ಕರೆದು ಇಕ್ಕಿರಿವನ ಬಾಲಕುರಿಯ ತಕ್ಕ ಶಿಕ್ಷೆ ಮಾಡಿರೆನಲು 13 ಸುಟ್ಟಬಾಲ ನೆಗಹಿಕೊಂಡು ದಿಟ್ಟ ನೀನು ಪುರವನೆಲ್ಲ ಅಟ್ಟಹಾಸದಿಂದ ಮೆರೆದೆ 14 ಶರಧಿ ಹಾರಿ ಬಂದು ಸತ್ಯಸಂಧ ರಾಮಗೆರಗಿ ಇತ್ತು ಚೂಡಾಮಣಿಯನವನಾ ಚಿತ್ತ ಹರುಷಗೈದ ಧೀರ 15 ಹರಿಯು ತನ್ನ ಬೆರಳಿನಲ್ಲಿ ಗಿರಿಯನೆತ್ತಿ ನಿಂತನೆಂದು ಸರುವ ಗಿರಿಗಳನ್ನು ನೆಗಹಿ ಶರಧಿಗೊಡ್ಡಿ ಸೇತುಗೈದೆ 16 ಸುರರಿಗಮೃತವಿತ್ತನೆಂದು ಅರಸಿ ಸಂಜಿವನವ ನೀನು ಭರದಿ ತಂದು ಒರಗಿ ಬಿದ್ದ ಹರಿಯ ವೃಂದಕೆರೆದು ಮೆರೆದೆ 17 ಮಂದರಾದ್ರಿಯನ್ನು ಒಡೆಯ ಅಂದು ಬೆನ್ನಲಿ ಪೊತ್ತು ನಿಂದು ಸಿಂಧುವನ್ನು ಗೆಲಿದನೆಂದು ಬಂದೆ ಹಾರಿ ಲಂಕಪುರಿಗೆ 18 ಧರಣಿಧವಗೆ ನೆರಳಿನಂತೆ ಕಾಲ ಚರಿಸಿ ನೀನು ಅರಸಿನಂತೆ ಬಂಟನೆಂಬ ಕರೆಯವಾರ್ತೆ ಖರೆಯಗೈದೆ 19 ಕಾಲನೇಮಿ ಯತಿಯ ರೂಪ ಜಾಲದಿಂದ ವೇಳೆ ಕಳೆಯೆ ಶೀಲವಂತ ಅವನ ಸೀಳಿ ಬಾಲದಿಂದ ನಗವ ತಂದೆ 20 ವ್ಯಾಸಮುನಿಯ ಯಂತ್ರದಲ್ಲಿ ವಾಸವೆಂದು ತೂರಿಕೊಳುತ ದಾಸ ಜನರ ಆಸೆಗಳನು ಬೇಸರಾದೆ ನೀ ಸಲಿಸುವೆ 21 ನೀನು ಒಲಿಯೆ ರಾಮನೊಲಿವ ನೀನು ಮುನಿಯೆ ರಾಮ ಮುನಿವ ನಾನು ನಿನಗೆ ಅನ್ಯನಲ್ಲ ಸೂನುವಲ್ಲೇ ತಿಳಿದು ನೋಡೊ 22 ನಿನ್ನ ನಂಬಿ ಸರಮೆಯರಸ ಪನ್ನಗಾರಿರಥನ ಒಲುಮೆ- ಯನ್ನು ಪಡೆದು ಹರುಷವಾಂತು ಧನ್ಯನಾದ ಧರೆಯೆ ಮೇಲೆ 23 ನಿನ್ನ ಜರೆದ ಅವನ ಅಣ್ಣ ತನ್ನ ಬಂಧು ದೇಶ ಕೋಶ- ವನ್ನು ನೀಗಿಕೊಂಡು ಕೊನೆಗೆ ಮಣ್ಣುಗೂಡಿ ಪೋದನಯ್ಯ 24 ದಂತಿಪುರದ ದೊರೆಯೆ ಮಡದಿ ಕುಂತಿದೇವಿ ಕುವರನಾಗಿ ಕಂತುಪಿತನ ಮತವ ತಿಳಿದು ನಿಂತು ಖಳರ ಸದೆದ ಶೂರ 25 ಏಕಚಕ್ರ ನಗರದಲ್ಲಿ ಶೋಕ ಪಡುತಲಿರ್ದ ಜನರ ಕಾಕು ಬಕನ ಏಕಮುಷ್ಠಿಯಿಂದ ಕೊಂದೆ 26 ಕೀಚಕಾರಿ ನಿನ್ನ ಮಹಿಮೆ ಯೋಚನೆಗೆ ನಿಲುಕದಯ್ಯ ಯಾಚಿಸೂತಿ ದೀನನಾಗಿ ಮಾಚದಂತೆ ಸಲಹೊ ಸ್ವಾಮಿ 27 ಜರೆಯ ಸುತನ ಗರುವ ಮುರಿದು ಭರದಿ ಅವನ ತನುವ ಸೀಳಿ ಧರಣಿಧವರ ಸೆರೆಯ ಬಿಡಿಸಿ ಪರಮ ಹರುಷಗರೆದ ಧೀರ 28 ದುರುಳ ದುಶ್ಶಾಸನನ ಅಂದು ಧುರದಿ ಕೆಡಹಿ ಉರವ ಬಗೆದು ತಿರೆಯ ಹೊರೆಯ ಹರಿಸಿದಂಥ ಸರುವ ಪುಣ್ಯ ಹರಿಗೆ ಇತ್ತೆ 29 ಮಲ್ಲಯುದ್ಧದಲ್ಲಿ ನೀನು ಖುಲ್ಲ ದುರ್ಯೋಧನನ ತೊಡೆಗ ಸುರರು ನೋಡಿ ಫುಲ್ಲ ಮಳೆಯಗರೆದರಾಗ 30 ಸೃಷ್ಟಿಕರ್ತ ಕೃಷ್ಣ ನಿನ್ನ ಇಷ್ಟದೈವವೆಂದು ಅವನ ನಿಷ್ಠೆಯಿಂದ ಭಜಿಸಿ ಇಳೆಯ ಶಿಷ್ಟ ಜನರ ಕಷ್ಟ ಕಳೆದೆ 31 ಖಲರು ನಿನ್ನ ಬಲುಮೆ ನೋಡಿ ಗೆಲುವು ತಮಗೆ ಆಗದೆಂದು ಕಲಿಯುಗದಿ ವಿಪ್ರರಾಗಿ ಇಳೆಯ ಧವನ ಹಳಿಯುತಿರಲು 32 ಜಡಜನೇತ್ರ ನಿನ್ನ ಕರೆದು ಅಡಗಿಸಿವರವಾದವೆನಲು ನಡುವೆ ಮನೆಯು ಎಂಬ ದ್ವಿಜನ ಮಡದಿ ಗರ್ಭದಿಂದ ಬಂದೆ 33 ಯತಿಯು ನೀನೆಂದೆನಿಸಿಕೊಂಡು ಚ್ಯುತಿ ರಹಿತ ಪ್ರೇಕ್ಷರಿಂದ ಶ್ರುತಿಪುರಾಣ ವೇದಮಂತ್ರ ತತಿಗಳನು ಪಠಣಗೈದೆ 34 ಹರಿಯೆ ಹರನು ಹರನೆ ಹರಿಯೆಂ- ದುರುಳ ಖಳರ ಕರೆದು ಕರೆದು ಜರೆದು ಭರದಿ ಹರಿಯೆ ಶರಣೆಂದರುಹಿ ಮೆರೆದೆ 35 ಮಾಯ ಮತವ ಧಿಕ್ಕರಿಸಿ ನ್ಯಾಯ ಶಾಸ್ತ್ರವನ್ನು ರಚಿಸಿ ಕಾಯಭವನ ಪಿತನ ಹಳಿದ ನಾಯಿಗಳನು ಬಡಿದು ನಿಂದೆ 36 ಕೃತಕಭಾಷ್ಯ ರಚಿಸಿದಂಥ ದಿತಿಜರನ್ನಾನತರ ಮಾಡಿ ಗತಿಯ ತೋರಿ ಜನಕೆ ಸತ್ಯಾ- ವತಿಯ ಸುತನ ಒಲುಮೆ ಪಡೆದೆ 37 ಮಧ್ವಮತವ ಉದ್ಧರಿಸಿ ಶುದ್ಧವಾದ ಬುದ್ಧಿಗಲಿಸಿ ಹದ್ದುವಾಹನ ಮುದ್ದುಕೃಷ್ಣನ ಶ್ರದ್ಧೆಯಿಂದ ಬದ್ಧಗೈದೆ 38 ಅಷ್ಟಮಠವ ರಚನೆ ಮಾಡಿ ಶಿಷ್ಟಜನರ ಬಾಧೆ ಕಳದೆ ತುಷ್ಟರಾದ ದ್ವಿಜರು ನಿನ್ನ ಎಷ್ಟು ಪೊಗಳಿ ತೀರದಯ್ಯ 39 ದಾನಧರ್ಮವ ಮಾಡಲಿಲ್ಲ ಜ್ಞಾನಮಾರ್ಗ ಹಿಡಿಯಲಿಲ್ಲ ದೀನತನದ ಭವಣೆಯಿಂದ ನಾನು ಮರುಗಿ ಬಂದೆನೀಗ 40 ವಚನ ಮಾರ್ಗದಲ್ಲಿ ನಿನ್ನ ಪ್ರಚನೆ ಮಾಳ್ಪೆ ಕೇಳೊ ದೇವ ರಚಿಸಲಾರೆ ನಿಯಮಗಳನು ಉಚಿತ ತೋರಿದಂತೆ ಮಾಡೊ 41 ನಾರಸಿಂಹ ರಾಮಕೃಷ್ಣ ನಾರಿ ಸತ್ಯವತಿಯ ಮಗನ ಮೂರುತಿಗಳ ಹೃದಯದಲ್ಲಿ ಸೇರಿ ಭಜಿಪ ಭಾವಿ ಬ್ರಹ್ಮ 42 ವಾಯು ಹನುಮ ಭೀಮ ಮಧ್ವ ರಾಯ ನಿನ್ನ ನಂಬಿ ಬಂದೆ ಮಾಯ ಪಾಶದಿಂದ ಬಿಡಿಸಿ ಕೃಪಣ ಬಂಧು 43 ಜನುಮ ಜನುಮದಲ್ಲಿ ನೀನೆ ಎನಗಿ ಜನನಿ ಜನಕನಾಗಿ ಕನಸು ಮನಸುನಲ್ಲಿ ನಿನ್ನ ನೆನೆಸುವಂತೆ ಮತಿಯ ನೀಡೊ 44 ತುಂಗಭದ್ರ ತೀರ ವಾಸ ಭಂಗಬಾಳನು ಹೊರೆಯಲಾರೆ ಮಂಗಳಾಂಗ ಕಳುಹೊ ಎನ್ನ ರಂಗಈಶವಿಠಲ ಪುರಿಗೆ 45
--------------
ರಂಗೇಶವಿಠಲದಾಸರು
ಕಳೆಯ ಬ್ಯಾಡವೋ ಕಾಲವ | ತಿಳಿ ನೀ ಮಾನವಾ | ವೃಥಾ | ಪ ಹರಿಚರಿತಾಮೃತ ವರಸುಗ್ರಂಥವನು ಪರಮತತ್ವವೆಂದರಿಯದೆ ಜಗದೊಳು 1 ಹದ್ದುಗಳಂದದಿ ಕಳೆಯಬ್ಯಾಡವೋ ಕಾಲವ 2 ದೋಷಿಗಳಮದದಿ ಕಳೆಯಬ್ಯಾಡವೋ ಕಾಲವ 3 ತನುಮನಧನ ಸತಿಯರನು ವಿಧಿಜಕಗರ್ಪಿಸದೆ ಶುನಕನಂದದಿ ಕಳೆಯ ಬ್ಯಾಡವೋ ಕಾಲವ 4 ಪ್ರೇಮದಿಂದಲಿ ಶಾಮಸುಂದರನ ನಾಮವು ಪಾಡದೆ ಪಾಮರನಂದದಿ ಕಳೆಯಬ್ಯಾಡವೋ ಕಾಲವ 5
--------------
ಶಾಮಸುಂದರ ವಿಠಲ
ಕಾಮಕೋಟಿ ಸುಂದರಾ | ತಿರುಪತಿಯಸ್ವಾಮಿ ತೀರ್ಥಮಂದಿರಾ ಪ ಕಾಮಜನಕ ಭಕ್ತಪ್ರೇಮಿ ಭವಾಟವಿಧೂಮಕೇತು ಹೃತ್ | ಧಾಮದಿ ನೆಲಿಸೋ ಅ.ಪ. ವೃಷಭಾಚಲಾ | ಸನ್ನಿಲಯನೆವೃಷಭಾ - ಬಲಾ ||ಒಸೆದು ಪರಿಕಿಸುತ || ಅಸುರನ ಸವರುತಅಸಮಗಿರಿಗೆ ನೀ | ಅಸುರನ ಪೆಸರಿತ್ತೆ 1 ಭಂಜನ ಶರದಿಜೆಕಂಜಜಾಕ್ಷಿ ಪ್ರಿಯ | ಅಂಜನಿವರದಾ 2 ಶೇಷಾ _ ಭೂಧರಾ | ಮನಸಿನ ಬಹುಕ್ಲೇಶಾ _ ಅಪಹರ ||ಶೇಷದೇವ ಮದ | ಲೇಸು ಹರಿಸಿ ಅವನಾಶೆ ಸಲಿಸಿ ಹರಿ | ಶೇಷಾಚಲನಾದೇ 3 ವೆಂಕಟಾಚಲಾ | ಮಾಧವನಾಸಂಕಟಾಗಳಾ ||ಅಂಕುರಿಸದೆ ನಿ | ಷ್ಪಂಕನೆಂದೆನಿಸಿಕಿಂಕರ ತನಯಳ | ಕಂಕಣ ಕಟ್ಟಿದೆ 4 ಶ್ರೀವರ - ಭೂವರಾ | ಪೊರೆಯುವೆ ನೀಜೀವರಾ - ಅಂತರಾ ||ಜೀವನಾಮಕನಾಗಿ | ಜೀವ ಭಿನ್ನ ಹರಿಕೈವಲ್ಯದ ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು