ಒಟ್ಟು 1722 ಕಡೆಗಳಲ್ಲಿ , 107 ದಾಸರು , 1032 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಳು ನಿದ್ದೆಯು ಸಾಕು ರಂಗನಾಥ ಪ ತಾಳು ತಾಳೆನಲೇಕೆ ಮಾಂಗಿರಿ ನಿವಾಸ ಅ.ಪ ಜಗವ ಪೋಷಿಪಚಿಂತೆ | ಮಿಗಿಲಾದ ದೇವಂಗೆ ಸೊಗಸಾದ ನಿದ್ದೆಯಾಪರಿವುಂಟೇ ನಗಜಗವ ಪೊತ್ತವನ ಬಳಗವು ಏನೆಂಬೇ ನಗೆಬೇಡ ಕಣ್ತೆರೆಯೊ ಮಾಂiÀiಕಾರ 1 ನಿದ್ದೆಗೆಡಿಸಲು ಪಾಪ ಇದ್ದರೆ ನನಗಿರಲಯ್ಯ ಸದ್ದಿಲ್ಲದಿಹುದೇ ಭಕ್ತರು ಹಾಡಿ ಕುಣಿಯೇ ಒದ್ದಮುನಿಗಾ ಪಾಪವಿದ್ದಿತೇ ಕರುಣಾಳು ಎದ್ದು ಬಾ ಬಾರೈಯ ಮಾರನಯ್ಯ 2 ಬಲ್ಲೆ ಬಲ್ಲೆನು ನಿನ್ನ ಚೆಲ್ಲಾಟಗಳನೆಲ್ಲ ಬೆಲ್ಲವನು ಕಂಡಿರುವೆ ಮುತ್ತದಿಹುದೇ ಸಿರಿ ಮಾಂಗಿರಿಯ ರಂಗ [ಒಲ್ಲೆನದೆ ಈಯಯ್ಯ ಎನಗು ಬೆಲ್ಲದಸವಿಯ]3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಏಳೇಳೇಳೆಲೆ ಮಾಮ | ಆರೋ ರೇಳೋದು ಸುಳ್ಳು ಬಂತು ಕ್ಷಾಮ ಪ ಹಾಳಾಗಿ ಹೋಯ್ತು ಮಳೆಬಳೆ ಕಾಳೆಲ್ಲ ಕಸವಾಯಿತು ಅ.ಪ ಭೂಮಿ ಒಕ್ಕಲಮಗನದು ಭೂಮೆಮ್ಮನ ಮಕ್ಕಳು ಒಕ್ಕಲಿಗರು ಭೂಮಿ ಬೆಳೆದರೆ ಅರ್ಧವನ್ನು ಬ್ರಾಹ್ಮಣರಿಗೇಕೆ ಕೊಡಬೇಕು 1 ಆರೋರು ಹೊಲ ಮಾಡಬಾರದು ಮಾಡಿದರೆ ಬಲು ಪಾಪ ಮಾರಲಿ ನಮಗೆ ಮೂರಕ್ಕೆ ನಾಲ್ಕಕ್ಕೊ ಏನಲಾ ಯೀರ್ಕೆಂಪ 2 ಎರವು ಇಸ್ತೆ ಚೇಸ್ತಾನು ಒದ್ದಂಟೆ ವಾಡೆ ಪೋನಿ ವಲ್ಲ ಬಾ ಪ್ನೋಳ್ ಚೇನು 3 ಹೊಲಕುಯಿದು ಕಟ್ಟುವಾಗ ಛಲದಿ ಹಾರುವೈಯ ಬೇಗ ಒಕ್ಕಲಿಗನ ಕಾಯಬೇಕಂತಾನೆ ಬಲು ಭ್ರಾಂತನು ತಾನೆ4 ಕೊಳಗ ಕೊಡÀುವೆವೇಳು ನಮ್ಮಲ್ಲಿ ನಡೆಯದು 5 ಕಂದಾಯ ಕೊಡುವಮಟ್ಟಿಗೆ ಕಾಳುಕೊಟ್ಟರೆ ಸಾಕು ಮುಂದಲು ಬಾರಿಗೆ ಸಾವೇ ಹಾಕಿ ಮೂಗಳಕ್ಕೆ ಗುತ್ತಿಗೆಬೇಕು 6 ನಾವು ತಿಂದು ಮಿಕ್ಕದರೊಳಗೆ ಹಾರೋರಿಗೆ ಸರಿಪಾಲು ಕಾಲ ಕಳ್ವೋದೆ ಮೇಲು 7 ಹೆಂಡಿರು ಹಿಟ್ಟು ಹೊರಲಿಲ್ಲ ಈ ಪುಂಡುತನ ನಮ್ಮಲಿ ಸಲ್ಲಾ ಭಂಡಿಸೌದೆ ಬೇಕೆಂದು ಬರುತಾನೆ ಭಲೆ ಭಲೆ ಹಾರೋನೆ 8 ನಮ್ಮದುಕೇಳಲೆ ಇನ್ನು ಉಳುಮೆಯಿಲ್ಲ ಹಾರುವೈಯಂಗೆ ರಾಜಿನಾಮೆ ಕೊಡಲಿ ಬಿಡಲೆ 9 ಎಷ್ಟು ಧರ್ಮದೊಳಿದ್ದುರು ರೈತರು ಕಷ್ಟಪಡುವರು ನಾವೆ ಬಿಟ್ಟಿ ಹಾರುವಯ್ಯ ಬಲ್ಲೆನೆ ಗುರುರಾಮವಿಠಲಗಾಗಲಿ ಸೇವೆ 10
--------------
ಗುರುರಾಮವಿಠಲ
ಒಂದಾನು ಒಂದು ದಿನ ಶಿಂಧುವಿನೊಳ್ ನೆರೆದು ಬಂದಾರು ದೇವತೆಗಳುವೃಂದಾವು ದುಷ್ಟ ಜನರಿಂದಾಲೆ ಭೂಮಿ ನೊಂದಾಳುಎಂದುಸುರಿತಾ ಪ ಕಂದರ್ಪತಾತ ನಿನಗೊಂದಿಸಿ ಬೇಡುವೆನು ಛಂದಾದಸೂರ್ಯಸುತನಾಮಂದಿರದೋಳ್ ಜನಿಸಿ ನಂದಾದಿ ಗೋಕುಲದಿ ನಿಂದಾತ್ಮಲೀಲೆ ತೋರೊ ಅ.ಪ. ಅಂದಾಡಿದೂತ ಸುರವೃಂದಾರ ವಾಕ್ಯಗಳ ಕಿವಿಯಿಂದಾಲೆಕೇಳಿ ಹರಿಯುಛಂದಾದಿ ನೀವುಗಳು ಮುಂದಾಗಿ ಜನಿಸುವದು ಹಿಂದಾಗಿನಾ ಜನಿಸುವೇಅಂದಾಡಿದಂಥ ಹರಿ ಸುಂದರಾ ಮಾತವನು ತಂದಾನುಬ್ರಹ್ಮ ಮನದೀಇಂದ್ರಾದಿಗಳಿಗೆಲ್ಲ ಅವನಂದದ್ದು ಪೇಳೆ ನಿಜಮಂದಿರಖೋಗಿರೆಂದಾ 1 ಎಲ್ಲಾ ಅಮರರೂ ನಿಜವಲ್ಲಾಭಿಯರು ಸಹ ಅಲ್ಲಲ್ಲೆಜನಿಸುತಿಹರೂಫುಲ್ಲಾಕ್ಷತಾ ಮಥುರೆಯಲಿಟ್ಟು ಗೋಕುಲದಿ ಮೆಲ್ಲಾನೆಬೆಳೆಯುತಿರಲುಅಲ್ಲಿದ್ದ ಗೋಪಿಯರು ಯಲ್ಲಾರು ತಾವು ನಿಜವಲ್ಲಾಭೆರೆಂದು ಹರಿಯೋಳ್‍ಎಲ್ಲಾನು ಬಿಟ್ಟು ಅವನಲ್ಲಿಗೆ ಸ್ನೇಹವನು ಉಲ್ಹಾಸಮಾಡುತಿರಲು 2 ವ್ರಜ ಕರ ವೃಂದಾವನದಲ್ಲಿಳುಹಿದಾ 3 ವಂದೀನ ರಾತ್ರಿ ರವಿನಂದಿನಿಯೋಳ್ ಹರಿಯುನಿಂದೂದಲಾಗ ಕೊಳಲುವೃಂದಾದರಾಗಗಳಿಂದಾಲೆ ಕೇಳಿ ವ್ರಜದಿಂದಾವರಾನಿಹರೂಮಂದೀರದೊಳಗೆ ನಿಜ ಕಂದಾರು ನಾಥಗಳು ಛಂದಾದವಸ್ತ್ರಂಗಳುವಂದಾನು ನೋಡದಲೆ ವಂದಾರು ಯಮುನೆಯಲಿಂದಾರುಮೈಯ್ಯ ಮರೆತು 4 ಬಂದೇವು ನಾವು ನಿಜ ಮಂದೀರ ಬಿಟ್ಟು ನಿಮ್ಮ ಸುಂದರಕೊಳಲ ಧ್ವನಿಗೇಛಂದಾದ ಸ್ಮರಣೆ ಸುಖದಿಂದಿತ್ತು ನಮಗೆ ದ್ವಿಜೇಂದ್ರೇತಕಾಯೋ ಯನಲುಅಂದಾವರಾಮಾತು ನಂದಾನುಸೂನ ದಯದಿಂದಾಲೆಕೇಳಿ ಹರಿಯೂಮುಂದಣಿಯಾಗ ಅವರಿಂದಾಲೆ ಕೂಡಿ ದಯದಿಂದಾಲೆನಲಿದು ಮರೆದೂ 5 ಬಂದಾನು ಮಥುರೆಯಲಿ ಕೊಂದಾನು ಮಾತುಳನೆತಂದೀಯಾ ಬಂಧನವ ಬಿಡಿಸೀಸಾಂದೀಪಗಿತ್ತು ಕಂದಾನಸೂನ ಕುರು ನಂದಾರಕೊಲ್ಲಿಸಿದನೂಇಂದ್ರತ್ವ ಜ್ವಾಲೆಗಳೂ ಅಂತಿತ್ತು ರಾಜ ಸುಖ ಸಂದೇಹ ಸಂತೋಷದೀಇಂದ್ರಾದಿ ಸರ್ವಸುರ ಸಂದೇಹ ಪ್ರಾರ್ಥಿಸಿದ ಒಂದೊಂದೆ ಮಹಿಮೆಗಳನೂ 6 ಛಂದಾಗಿ ಮಾಡಿದ್ವಶ ಮಡುಹಿಕರ ವೃಂದಾವಪಾಲಿಸಿದನೂನಂದಾತ್ಮ ಜಾತವು ಒಂದೊಂದೆ ಮಹಿಮೆಗಳ ತಂದೊಮ್ಮೆಮನದಿ ಸ್ಮರಿಸೀಬೆಂದಾವು ಪಾಪಗಳು ಬಂದಾವು ಸೌಖ್ಯಗಳುಸಂದೇಹವಿಲ್ಲನಿದರೋಳ್‍ಕಂದಾರ ಕೊಡುವ ಧನ ವೃಂದಾವು ಪೊರೆವಾ ಮಂದೀರವಿತ್ತು ಸಲಹುವ 7 ಇಂದೆನ್ನ ಮಾನಸದಿ ತಂದಾತ್ಮ ರೂಪವನೂ ಛಂದಾಗಿ ಸಂತೈಸಲೀನಂದಬಾಲಾಷ್ಟಕವನೂ ಇಂದುವಾವರು ಪಠಿಸುವಾ ಇಂದಿರೇಶನು ಪಾಲಿಸುವನೂ 8
--------------
ಇಂದಿರೇಶರು
ಒಂದಾನೊಂದು ದಿವಸದಲ್ಲಿ ಗುರುವ್ಯಾಸರಾಯರು | ಪ ಅಂದದಿಂದ ಪುರಂದರದಾಸರಿ | ಗಿಂದು ಭೋಜನಕ್ಕೆ ಬನ್ನಿರೆಂದು ಕರೆದರೂ ಅ.ಪ ಪೇಳಿತೆಂದು ದಾಸರು ಪೋಗಿ ತಾವು ನಿರ್ಮಲ ಸ್ನಾನ ಜಪಮಂತ್ರ ಹರಿಪೂಜೆಯನೆ ಮಾಡಿ || ಧಳಥಳಿಸುವ ವಿಠಲನ ದಿವ್ಯ ಪಾದ ಗಳ ಧ್ಯಾನಿಸಿ ಕುಳಿತರು ಜನಗಳೆಲ್ಲ ಕೇಳಿ 1 ವಿಠಲನ ದಿವ್ಯ ಮೂರ್ತಿಯ ಪಾಡಿ ದೃಷ್ಟಿಯಿಂದಲಿ ನೋಡಿ | ಮುಟ್ಟಿ ಮುಂದೊಲಿದು ಕುಣಿಕುಣಿದಾಡಿ || ಥಟ್ಟನೆ ವೇದಕ್ಕೆ ಸಮನಾದ ಪದಗಳು | ನಿಷ್ಠೆಯಿಂದ್ಹೇಳಿ ಅಭೀಷ್ಟವ ಪಡೆದರು2 ಎಡೆಯೊಳು ಷಡ್ರಸದನ್ನವ ನೀಡೆ | ಕಡು ಮಮತೆಗಳಿಂದ | ಬಿಡದೆ ದಾಸರ ದಾರಿಯ ನೋಡಿ || ಯೆಡ ಬಲದಷ್ಟ ದಿವ್ಯದಿಂಡೆಯರೆಲ್ಲಾ | ಕಡೆಯದೆಶೆ ಧರಿಸಿದರು ದಾಸರಾ 3 ಹಗಲು ಒಂಭತ್ತು ತಾಸಾಗಿರಲು | ಆಗೆದ್ದು ಬೇಗ ಗುರುಗಳ ಸಮೀಪಕ್ಕೆ ಬರಲು || ಮುಗಿದು ಕರಯುಗ್ಮವ ಬಗೆ ಬಗೆ ಸ್ತುತಿಸುತಾ | ಜಗದೊಳು ನಾನಪರಾಧಿಯೆಂದರೂ 4 ಭೋಜನವ ಮಾಡಿ ಗುರುಗಳಂದು ಸಿಂಹಾಸನದಲ್ಲಿ | ರಾಜಿಸುತ್ತ ಬಂದು ಕುಳಿತಿರಲಂದೂ || ಆ ಜನದೊಡಗೀ ದಾಸರು ಕರೆಯಲು | ನೈಜಭಾವದಿಂದು ಬಂದು ಕುಳಿತರೂ 5 ಪದಗಳು ಬರದ ವಹಿಯಕೊಂಡು ಪೋಗಿ | ಮಧ್ವಶಾಸ್ತ್ರದ ಮೇಲೆ ಕುಳ್ಳಿರಲಾಗ || ಅದನರಿಯದೆ ದಿಂಡೆಯನೊಬ್ಬನು ಆ | ಪದವಹಿಯ ತೆಗೆದು ಬಿಸುಟನಾಗಾ 6 ಯೆರಡಾವರ್ತಿ ತೆಗೆಯಲು ಆಗ | ತಿರುತಿರುಗಿ ಬಂದು ವರಪುಸ್ತಕದ ಮ್ಯಾಲೆ ಕುಳ್ಳಿರಲಂದೂ || ಗುರು ವ್ಯಾಸರಾಯರು ನೋಡಿ ಹರುಷದಿಂದ | ಕರೆದು ಬೈದರವಗೆ ಕಡು ಮೂರ್ಖನೆಂದೂ 7 ಪದದೊಹಿ ತೆಗೆದು ಬಿಸಾಡಿದರೆ ತಿರುತಿರು ಗ್ಯದರಮ್ಯಾಲೆ ವರನಾಲ್ಕು ವೇದಾರ್ಥದರೊಳಗುಂಟು || ನರರುತ್ತಮರೆಲ್ಲ ನೋಡಿ ಹರುಷದಿಂದ | ಪುರಂದರ ಉಪನಿಷತ್ತೆಂದರೂ 8 ಗುರುರಾಯರು ದಾಸರ ನೋಡಲಾಗ ಭರದಿಂದ ಯೆದ್ದು | ಅರಿವೆಯ ಕೈಯಿಂದೊರಸಲು ಆಗ || ತ್ವರಿತದಿ ಕೇಳಲು ವಿಠಲನ ಗುಡಿಯೊಳು | ಪಡದಗುರಿ ಹತ್ತವು ವರಿಸಿದೆವೆಂದರು 9 ಹಾಗೆಂದು ನುಡಿದಾಕ್ಷಣದಲಿ ಬೇಗ ಶಿಷ್ಯರಿಗೆ | ಹೋಗಿ ನೋಡಿ ಬಾರೆಂದೆನಲಾಗಿ || ಬೇಗದಿಂದಲಿ ಬಂದು ಕೇಳಲು ಅವರು | ಈಗ ದಾಸರು ಬಂದು ಪರಿಹರಿಸಿದರೆಂದು 10 ಆ ಮಾತು ಕೇಳಿದಾಕ್ಷಣದಿ ಬೇಗ | ಪ್ರೇಮದಿ ಬಂದು ಸ್ವಾಮಿರಾಯರಿಗೆ ಪೇಳಲು ಆಗ || ನಾಮವ ಸ್ಮರಿಸುತ ಪ್ರೇಮಾಲಿಂಗನವಿತ್ತು | ಕಾಮಿತಾರ್ಥ ಫಲವೀವ ಕಲ್ಪತರುವೆಂದರೂ 11 ಇಂತು ಅನುಭವ ಮಾತುಗಳನಾಡಿ ಲಕ್ಷ್ಮೀಕಾಂತನ | ಅಂತರಂಗದಲಿ ಅತಿಮಾನವ ಮಾಡಿ || ಮೂರ್ತಿ | ಶಾಂತತ್ವದಿ ನೋಡುತ ಶರಣು ಮಾಡಿದರೂ 12 ಗಜಪುರದಲ್ಲಿ ಇರುವರು ಕೂಡಿ ವಿಜಯವಿಠ್ಠಲನ್ನ | ಭಜನೆಯಿಂದ ದಿನ ದಿನ ಪೊಗಳಿ || ತ್ರಿಜಗದೊಡೆಯ ಗುರು ಪುರಂದರವಿಠಲನ | ನಿಜ ವೈಕುಂಠದ ಮುಕ್ತಿಯೈದಿದರೂ 13
--------------
ವಿಜಯದಾಸ
ಒಂದು ದಿನ ನಾರದಮುನಿ ಗೋಕುಲದಿ ಇಂದಿರೇಶನ ಲೀಲೆಯಾ ನಿಂದು ನಭದಲಿ ನೋಡುತಾ | ಮೈಯುಬ್ಬಿ ಬಂದನಾ ವೈಕುಂಠಕೆ 1 ಸಿರಿದೇವಿ ಸಖಿಯರೊಡನೆ | ವನದಲ್ಲಿ ಪರಿಪರಿಯ ಕ್ರೀಡೆಯೊಳಿರೇ ಅರವಿಂದ ನಯನೆಯನ್ನೂ | ಕಂಡನಾ ಸುರಮುನಿಯು ಸಂಭ್ರಮದಲೀ 2 ಜಗನ್ಮೋಹನಾಕಾರಳೂ | ಶ್ರೀ ಹರಿಯ ಜಗ ಸೃಷ್ಟಿಗನುಕೂಲಳೂ ಬಗೆ ಬಗೆಯವತಾರಳೂ | ಕ್ಷಣ ಹರಿಯ ಅಗಲದಂತಿರುತಿಪ್ಪಳೂ 3 ಹರಿಗೆ ಗುಣದಿಂ ಕಿರಿಯಳೂ | ಮತ್ತೆಲ್ಲ ಪರಿಯಲ್ಲಿ ಹರಿಗೆ ಸಮಳೂ ಶರಣೆಂದವರ ಕಾಯ್ವಳೂ | ಬೊಮ್ಮಾದಿ ಸುರರ ಸೃಜಿಸುವ ಶಕ್ತಳೂ 4 ನಾಕ ಸ್ತ್ರೀಯರನೆ ಕೂಡೀ | ವನದಲ್ಲಿ ಲೋಕನಾಯಕಿ ರಮಿಸುತಾ ಶ್ರೀಕಾಂತನಗಲದವಳೂ | ಮುನಿಗೆ ತ ನ್ನೇಕರೂಪವ ತೋರ್ದಳೂ 5 ನೊಡಿ ನಮಿಸಿದನು ಸಿರಿಯಾ | ಹರಿಗುಣವ ಹಾಡಿ ಪಾಡಿದನು ಮೈಯ್ಯಾ ಮೂಡೆ ರೋಮಾಂಚ ಕೈಯ್ಯಾ | ಮುಗಿಯುತಲಿ ನೋಡಿದನು ಸಿರಿಯ ದಣಿಯಾ 6 ಪಲ್ಲವಾಧರೆ ನಗುತಲಿ | ತನ್ನ ಕರ ಪಲ್ಲವದಿ ಕೃಪೆಯ ಮಾಡೀ ಎಲ್ಲಿಂದ ಬಂದೆ ಮುನಿಪಾ ವಿಷಯವೇ ನೆಲ್ಲ ಪೇಳೆಂದೆನ್ನಲೂ 7 ಏನ ಪೇಳುವೆನೆ ತಾಯೆ | ನಿನ ಪತಿಯ ನಾನಾ ವಿಧ ಚರ್ಯೆಗಳನೂ ನಾನರಿಯಲಾರೆ ನಮ್ಮಾ | ನವನೀತ ಚೋರನಾಗಿರುವನಮ್ಮಾ 8 ನಾಕ ಭೂಲೋಕ ತಿರುಗೀ | ಭುವಿಯೊಳಗೆ ನಾ ಕಂಡೆ ಗೋಕುಲವನೂ ಹೇ ಕಮಲೆ ಕೇಳು ಅಲ್ಲೀ | ನಿನ ಪತಿಯು ಆಕಳಾ ಕಾಯುತಿಹನೂ 9 ಬಿಟ್ಟು ವೈಕುಂಠವನ್ನೂ | ಪ್ರಾಯ ಸತಿ ದಿಟ್ಟೆ ನಿನ್ನನು ತೊರೆದನೂ ಹುಟ್ಟಿ ಗೊಲ್ಲರ ಕುಲದಲೀ | ಬೆರತನಾ ಕೆಟ್ಟ ಹೆಂಗಳೆಯರಲ್ಲಿ 10 ನಳಿನಜಾಂಡವ ಸಾಕುವಾ | ಜಗದೀಶÀ ಗೋಪಿ ಬೈ ಗಳನು ತಾ ಕೇಳುತಿಹನೂ 11 ಮದನಮೋಹನರೂಪನೂ | ಗೊಲ್ಲತೆರ ಅಧರಾಮೃತವ ಸವಿವನೂ ಎದೆ ಗಂಟು ಪಿಡಿಯುತಿಹನೂ | ಚಂಡೆಂದು ಗದರಿಸಲು ನುಡಿಯುತಿಹನೂ 12 ಸಂಪೂರ್ಣ ಕಾಮ ತಾನು | ವನದಲ್ಲಿ ಗುಂಪು ಸ್ತ್ರೀಯರ ಕೂಡ್ವನೂ ಸಂಪನ್ನ ಭೋಗಿಸುವನೂ | ಕೊಳಲ ಪಿಡಿ ದಿಂಪುಗಾನವ ಗೈವನೂ 13 ವನದ ಸೊಬಗೇನುಸುರುವೇ | ಶ್ರೀರಮಣಿ ದನಕರುವ ಕಾಯುತ್ಹರಿಯಾ ವನವನವ ತಿರುಗುತ್ತಿರೇ | ಕೊಳಲ ಧ್ವನಿ ವನವೆಲ್ಲ ತುಂಬಿರುತಿರೇ 14 ತಿಳಿಯುದಕ ಯಮುನೆ ಮಳಲು | ದಿಣ್ಣೆಯಲಿ ಕೊಳಲೂದೆ ಹರಿ ಕೇಳಲೂ ಮೊಳೆತವಾ ಬಂಜೆ ಮೋಟೂ | ಮೃಗಪಕ್ಷಿ ಕುಳಿತು ಮೈಮರೆತು ಕೇಳೇ 15 ಓಡಿ ಬರುತಲಿ ತುರುಗಳೂ | ಬಾಲವ ಲ್ಲಾಡಿಸದೆ ಕಣ್ಣುಮುಚ್ಚಿ ಮಾಡಿಟ್ಟ ಪ್ರತಿಮೆಯಂತೆ | ಕಾಣುತಿರೆ ಆಡಿಸದೆ ಸರ್ಪ ಹೆಡೆಯಾ 16 ಶೃಂಗಾರ ಕೊಳಲನೂದೆ | ಜಡ ಚೇತ ನಂಗಳಾಗುತ ಚಿಗುರಲೂ ಅಂಗ ಮರೆಯುತ ಜೀವಿಗಳ್ | ಜಡದಂತೆ ಕಂಗಳನುಮುಚ್ಚಿನಿಲ್ಲೆ 17 ಅಷ್ಟ ಐಶ್ವೈರ್ಯದಾತಾ | ನಾರಿಯರ ತುಷ್ಟಿಪಡಿಸುತಲಿ ಖ್ಯಾತಾ ಶಿಷ್ಟ ಜನರನು ಪೊರೆಯುತಾ | ರಕ್ಕಸರÀ ಹುಟ್ಟಡಗಿಸುವನು ವಿಹಿತಾ 18 ಪೇಳಲಳವಲ್ಲವಮ್ಮಾ | ಶ್ರೀ ಹರಿಯ ಲೀಲೆ ಜಾಲಗಳ ಬ್ರಹ್ಮಾ ನೀಲಗಳರರಿಯರಮ್ಮಾ | ಆನಂದ ತಾಳಿದೆನು ಕೇಳೆ ರಮ್ಮಾ 19 ಇಷ್ಟು ಗೋಕುಲದಿ ನೋಡೀ | ಕಾಣದಿ ನ್ನೆಷ್ಟೋ ಎನ್ನುತಲಿ ಪಾಡೀ ಗುಟ್ಟು ಪೇಳಲು ಬಂದೆನೂ | ಸಿರಿದೇವಿ ಸಿಟ್ಟಾಗಬೇಡವಿನ್ನೂ 20 ಪರನಾರಿಯರ ಬೆರೆಯುತಾ | ಶ್ರೀ ಕೃಷ್ಣ ಮರೆತು ನಿನ್ನನು ಸುಖಿಸುತಾ ಪರಿ ಯೊಚಿಸಮ್ಮಾ | ಆಜ್ಞೆ ಕೊಡು ತ್ವರಿತದಲಿ ಪೋಪೆನಮ್ಮಾ 21 ಹರಿಚÀರ್ಯವೆಲ್ಲ ಕೇಳಿ | ಶ್ರೀ ತರುಣಿ ಪರಮ ಆನಂದ ತಾಳೀ ಬೆರಗಾದ ಪರಿತೋರುತಾ | ಮುನಿವರಗೆ ಪರಿ ಏನು ಮುಂದೆ ಎನಲೂ 22 ಸನ್ನುತಾಂಗನ ಕೂಡಲೂ | ಭೂತಳದಿ ಇನ್ನೇನುಪಾಯವೆನಲೂ ಪನ್ನಂಗ ವೇಣಿ ಉದಿಸೂ | ಭೀಷ್ಮಕಗೆ ಇನ್ನು ನೀ ಕುವರಿ ಎನಿಸೂ 23 ಎಂತೆಂತು ಹರಿಯಚರ್ಯೆ | ಸಿರಿಕಾಂತೆ ಅಂತಂತು ನಿನ್ನ ಚರ್ಯೆ ಸಂತೋಷಪಡಿಸಿ ಎಮ್ಮಾ | ಸಲಹಮ್ಮ ಶಾಂತೆ ನಾ ಪೋಪೆನಮ್ಮಾ 24 ಮತ್ತೊಮ್ಮೆ ನೋಳ್ಪೆನೆಂದೂ | ಗೋಕುಲದ ಹತ್ತಿರದಿ ನಭದಿ ನಿಂದೂ ಸುತ್ತು ಮುತ್ತಲೂ ನೊಡಲೂ | ಸಿರಿದೇವಿ ವ್ಯಾಪ್ತಳಾಗಲ್ಲಿ ಇರಲೂ 25 ವನದಿ ಹರಿವಕ್ಷದಲ್ಲೀ | ಸಿರಿದೇವಿ ಘನ ವೇಣೂರೂಪದಲ್ಲೀ ವನಲಕ್ಷ್ಮೀರೂಪದಲ್ಲೀ | ಗೋಪಿಯರ ಪ್ರಣಯ ಪ್ರಕಾಶದಲ್ಲೀ 26 ಎಲ್ಲೆಲ್ಲಿ ಸೌಂದರ್ಯವೋ | ಉಲ್ಲಾಸ ಎಲ್ಲೆಲ್ಲಿ ವೈಭವಗಳೋ ಎಲ್ಲೆಲ್ಲಿ ಹರಿಲೀಲೆಯೋ | ಸಿರಿದೇವಿ ಅಲ್ಲಲ್ಲಿ ತಾನಿರುತಿರೆ 27 ಸಿರಿ ಹರಿಯ ಚರಿಯ ನೊಡಿದ ಪ್ರತಾಪಾ ಧರೆಗಿಳಿದು ನಮಿಸಿ ನಿಂದಾ | ಕ್ಷಮಿಸೆಂದು ಸಿರಿ ಹರಿಗೆ ಸ್ತೋತ್ರಗೈದಾ 28 ಸಿರಿಹರಿ ವಿಯೋಗವಿಲ್ಲಾ | ಆವಾವÀ ಕಾಲ ದೇಶದಲ್ಲೀ ಅರಿಯದಜ್ಞಾನ ನುಡಿಯಾ | ಮನ್ನಿಸೋ ಮಾಯಾ 29 ಜಯ ಜಯತು ಸುರವಂದ್ಯನೇ ಜಯ ಜಯತು ದುಷ್ಟಹರಣ | ಗುಣ ಪೂರ್ಣ ಜಯ ಜಯತು ಶಿಷ್ಟ ಶರಣಾ30 ಸ್ತುತಿಸುತಂಬರಕಡರಿದಾ | ಸುರಮುನಿಪ ಚ್ಯುತದೂರನತಿ ವಿನೋದಾ ಪತಿತರನು ಕಾಯ್ವ ಮೋದಾ | ಸುಖತೀರ್ಥ ಯತಿಗೊಲಿದು ಉಡುಪಿಲ್ನಿಂದಾ 31 ಆಪಾರ ಮಹಿಮ ಶೀಲಾ | ಸರ್ವೇಶ ಗೋಪಿಕಾ ಜನ ವಿಲೋಲಾ ಆಪನ್ನ ಜನರ ಪಾಲ | ಗುರುಬಿಂಬ ಗೋಪಾಲಕೃಷ್ಣವಿಠಲಾ 32
--------------
ಅಂಬಾಬಾಯಿ
ಒಂದೇ ನಾಮದಲಡಗಿದವೊ ಅಡಗಿದವೋ ಆಪ ಅಖಿಳ ವೇದಗಳು ಅ ಪ ಒಂದೇ ನಾಮವೆ ಪ್ರಹಲ್ಲಾದನ್ನ ರಕ್ಷಿಸಿತು ಒಂದೇ ನಾಮವೆ ಅಜಾಮಿಳಗೆ ವೊಲಿದಿತು ತಂದೆ ತಾಯ ಬಿಟ್ಟ ಕಂದ ಧ್ರುವರಾಯಗೆ ಆ ನಂದ ಪದವಿಯಿತ್ತ ಅದ್ಭುತ ಮಹಿಮೆಯು 1 ಮಚ್ಛಾದ್ಯನಂತಾವತಾರಾ ಸ್ವಚ್ಛ ಅಷ್ಟಾದಶ ಪುರಾಣ ಅಮೃತದ ಸಾರಾ ಕಚ್ಛಪ ತ್ರಿಜಗಕೆ ಆಧಾರ ತನ್ನ ಸ್ವೇಚ್ಛೆಯಿಂದಲಿ ತಾ ಮಾಡೋ ವ್ಯಾಪಾರಾ 2 ಒಬ್ಬರಿಂದಲಿ ತನಗಿಲ್ಲ ತಾ ನೊಬ್ಬನೆ ಜೀವರ ರಕ್ಷಿಪನೆಲ್ಲಾ ಕಬ್ಬುಬಿಲ್ಲಿನ ಪಿತ ವಿಜಯವಿಠ್ಠಲರೇಯ- ವೈ ದರ್ಭೆಯ ರಮಣನ ಸುಗುಣಗಳೆಲ್ಲಾ 3
--------------
ವಿಜಯದಾಸ
ಒಂದೇ ಮತ ಹರಿಯ ಮತ ಒಂದೇ ಭಾವ ಸಿರಿಯರಸನ ಭಾವ ಸಲಹಿದ ನರಹರಿ ಒಂದೇ ಮನದಂಬರೀಷನ ಕಾಯ್ದ ಹರಿ ಒಂದೇ ಮನದಿ ಧ್ರುವನ ಕಾಯ್ದ ಹರಿ ಒಂದೇ ಗಳಿಗೆಯಲಿ ತನ್ನುಂಗುಟದಿ ಸೋಕಿಸೆ ಕಲ್ಲಾಗಿದ್ದಹಲ್ಲೆಯ ಪೆಣ್ ಮಾಡಿದ ತಂದೆಯಂದದಿ ಭಕ್ತರ ಹಿಂದೆ ಕಾದಿದ್ದು ಕರುಣಾಸಿಂಧು ಭಕ್ತರ ಬಂಧು ಸುಂದರಿ ಸಿಂಧುಸುತೆಯರಸನ ನಿತ್ಯ ನೆನಯಿರಿ ಹರಿ ಭಕ್ತರು 1 ಸಾರ ನಾಲ್ಕು ಯುಗದಾಧಾರ ನಾಲ್ಕು ಮುಖದಲಿ ನೆಲಸಿ ಸೃಷ್ಟಿಕಾರ್ಯವ ನಡೆಸಿ ನಾಲ್ಕು ಮುಖ ಬೊಮ್ಮನಲಿ ನಾನಿಲ್ಲವೆನಿಸಿ ನಾಲ್ಕು ಯುಗದಲಿ ಜನಿಸಿದ ರಕ್ಕಸರಿಗೆ ತಿಳಿಸಿ ನಾಲ್ಕು ಲೋಕದಿ ಮೆರೆದ ನಾಕಚಾರ ವಂದ್ಯ ನಾಲ್ಕು ಹಸ್ತದಿ ನಾಲ್ಕು ವೇದತಂದಾ ಮೂರ್ತಿ ನಾಲ್ಕು ವೇದದ ಸಾರದಮೃತ ಭಕ್ತರಿಗಿತ್ತು ಹದಿನಾಲ್ಕು ಲೋಕಕೆ ನಾನೇ ಕರ್ತನೆಂದರಿಸಿ ನಾಲ್ಕು ವಿಧದಲಿ ಕಾವ ಶ್ರೀ ಶ್ರೀನಿವಾಸನ ಭಕ್ತರಾದರೆ ಈ ಕಲಿಯುಗದಿ ನಾಲ್ಕು ಜನರು ಮೆಚ್ಚುವರು ನಿಮ್ಮ ಹರಿ ಭಕ್ತರೆ ಕೇಳಿ2 ನಿನ್ನ ಸಹವಾಸ ಸೈ ನಿನ್ನ ಒಡನಾಟ ಸೈ ನಿನ್ನ ರೂಪ ಚತುರ ಬುದ್ಧಿ ಎನ್ನ ಸೈ ಎನ್ನಲಾಪರೆ ನಿನ್ನ ಕೈ ಚಳಕವಿಲ್ಲದಲೆ ಜೈಸುವದೆಂತೀ ಕಲಿಕಾಲದಿ ಸ್ವಾಮಿ ಜೈಲುವಾಸದಿ ಕೂತು ನಿನ್ನ ಕಲ್ಯಾಣವ ಕಟ್ಟಿದರೊ ನಿನ್ನ ಭಕ್ತರು ಜೈ ಕರುಣಾಕರ ನಿನ್ನ ಭಕ್ತರ ಮಹಿಮೆ ನಾ ಪೊಗಳುವದೆಂತೊ ಜೈ ಎನಿಸಿಕೊಳ್ಳಲು ನಿನ್ನೊಲುಮೆ ಕಾರಣವಲ್ಲವೆ ಜೈವೆಂಕಟ ಶ್ರೀಶಾ ಶ್ರೀ ಶ್ರೀನಿವಾಸ ನಿನ್ನ ಭಕ್ತರಿಗೆ ಜಯ ಅಪಜಯವೆಲ್ಲಿ ನಿನ್ನ ಭಕ್ತರಿಗೆ ಎಂದೆಂದಿಗೂ ಜೈ ಹರಿಭಕ್ತರ ನೆನೆಯಿರಿ ಹರಿಭಕ್ತರು 3 ಯನ್ನ ಯತ್ನವೇನಿಲ್ಲಿದರೋಳು ಪನ್ನಗಾದ್ರಿ ನಿವಾಸನಲ್ಲದೇ ಯನ್ನ ಯತ್ನ ಸಲ್ಲುವುದೇ ಎನ್ನ ಮನಸಿಲಿ ಬಂದು ನಿಂದು ತಾನೇ ನುಡಿಸಿದನಿಂದು ಚೆನ್ನಗಿರಿಯರಸ ಭಕ್ತ ಜನ ಬಂಧು ಬಂದು ನಿಂದು ಎನ್ನ ಮನದಭಿಲಾಷೆ ಸಲಿಸೆ ದೀನ ವತ್ಸಲನು ಎನ್ನ ಕರದಲಿ ಬರೆಸಿ ನಲಿದಾಡಿದ ತನ್ನ ವಾಣಿಯನಿತ್ತು ಎನ್ನ ಕುಲದೈವ ಶ್ರೀ ಶ್ರೀನಿವಾಸನ ಕೃಪೆ ಎನ್ನ ಮೇಲೆಂತುಟೊ ಕಾಣೆ ಇನ್ನು ಈ ವಾಣಿ ಹರಿಯದೆಂದು ನುಡಿವುದು ಹರಿಭಗವದ್ಭಕ್ತರು 4 ಪಾಮರರಿಗೆ ಕಲ್ಪತರು ಪಾಮರರಿಗೆ ಜಗದ್ಗುರು ವರವ ತೋರಿ ಪಾಮರರ ಪುನೀತರನು ಮಾಡೆ ಹರಿ ಪಾಮರೆಂದು ಲೆಕ್ಕಿಸದೇ ತಾವಲಿದು ನುಡಿಸಿದ ಪತಿತ ಪಾವನ್ನ ಶ್ರೀ ಶ್ರೀನಿವಾಸನದೇ ಈ ಉಕ್ತಿಯಲ್ಲರ ನೃತ್ರವಿಲ್ಲೆಂದು ತಿಳಿದು ಪಾಮರರನ್ನುದ್ಧರಿಸಲು ಹರಿಭಕ್ತರು ಪಠಿಸುವುದು ಈ ನುಡಿಯ 5 ಜತೆ ಶರಣು ಭಕ್ತರ ಪಾಲ ಶರಣು ಶ್ರೀಲೋಲಾ ಶರಣು ನಿನಗೆ ಸದಾ ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ
ಒಲಿಯುವೆ ನೀನೆಂತು ಹಲಧರಾನುಜಾ ಪ ಹೊಗಳಲು ನೀ ಮರುಳಾಗುವನಲ್ಲಾತೆಗಳಲು ನೀ ಮುನಿಯುವನಲ್ಲಾಹೊಗಳಲ್ಯೊ ತೆಗಳಲ್ಯೊ ತಿಳಿಯುವುದಿಲ್ಲಬಗೆಯನು ತೋರಲು ಹೇಳಸೊಲ್ಲ 1 ಪಂಚಪಕ್ವಾನ್ನವ ಹಂಚೇನೆಂದರೆಲಂಚಗುಳಿಯು ನೀನಲ್ಲಚಂಚಲಮನದವ ತಾನಾಗಿಹನೈಹಂಚಿಕೆಯನು ಹೇಳ್ ನಿತ್ಯತೃಪ್ತನೆ 2 ಪತಿ ನೀನಹುದೋಘನತರ ಗದುಗಿನ ವೀರನಾರಾಯಣಮನಸಿನ ಇಂಗಿತವನು ಪೇಳೆಲೊ ನೀ 3
--------------
ವೀರನಾರಾಯಣ
ಒಳ್ಳಾದು ಬರುತಾದೆ ಒಳ್ಳಾದು ಬರುತಾದೆ | ಒಳ್ಳಾದು ಬರುತಾದೆ ಕೈಯ್ಯದೋರೆ | ಗೋಪೆಮ್ಮ ಕೈಯ ನೋಡೇನು ಪ ಹೆತ್ತವಸರ ಬುಟ್ಟಿ ಹೊತ್ತದಿವ್ಯಂಬರ ಕೊರವಿ | ಉತ್ತಮದಾ ನುಡಿಗಳನು ಸತ್ಯಾಪುರದಿ ಹೇಳಬಂದೆ | ಕೈಯ್ಯದೋರೆ 1 ಮಥುರಾನಗರದಲ್ಲಿ ಮದನಮೋಹನಾ ಜನಿಸಿ | ಸದೆದು ಕಂಸಾದ್ಯರೆಲ್ಲಾ | ವದಗಿ ಹರಿವಾ ಕರಿಯಾ ನಿಮ್ಮ | ಕೈಯ್ಯದೋರೆ 2 ವರ ಉಗ್ರಶೇನನಿಗೆ ಅರಸು ತನವಾ ಕೊಟ್ಟು | ಪರಿ ಕರುಣೆಯಿಂದಾ | ಶರಣರನು ಹೊರೆವ ನಮ್ಮಾ ಕೈಯ್ಯದೋರೆ 3 ಮೌನಾಕಾ ವಲಿಗೆ ಹಾಕಿ | ತಾನು ಗೋಕುಲದಿ ಬೆಳೆದು ನಾನಾ ಉಪಾಯದಿ ಬಂದಾ | ದಾನವರ ಗೆದ್ದಾ ನಮ್ಮ | ಕೈಯ್ಯದೋರೆ 4 ಭಾರ ನಿಳುಹಲಾಗಿ | ಮಹಿಪತಿ ಸುತಪ್ರಭು | ಮಹಿಮೆ ದೋರ ಬಂದಾನಮ್ಮ | ಕೈಯ್ಯದೋರೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಓಂ ನಮೋ ರಾ‌ಘವೇಂದ್ರಾಪ ಓಂ ನಮೋ ರಾಘವೇಂದ್ರಾ ಘನದಯ ದಾಸಾಂದ್ರಾ ವಾರಿಧಿ ಪೂರ್ಣಚಂದ್ರಾ1 ಶ್ರೀರಾಮ ಜಯರಾಮ ಸ್ವಾಮಿ ಜಯಜಯ ರಾಮಾ ಈರೀತಿ ಸ್ಮøತಿಸಲಿಕೆ ಕೊಡುವಿ ವೈಕುಂಠ ಧಾಮಾ2 ಉಗ್ರ ವೃತ ತಪದಿಂದಾ ಜಪ ಅನುಷ್ಠಾನದಿಂದಾ ಶ್ರೀಘ್ರದಿಂದ ಪಡಕೊಂಬಾ ಫಲಕಾಮ ಸನ್ನಿಧಾ3 ಹನುಮಬಲ್ಲಾ ಹರಬಲ್ಲಾ ಋಷಿನಾರದ ಬಲ್ಲಾ ನೆನವನಾಮ ಸವಿಯಲೋ ಹೇಳಲಿಕೆ ಅಳವಲ್ಲಾ 4 ಮರಳು ಮಾನವರಂತಾ ಎನ್ನ ನೋಡಬ್ಯಾಡ ಡೊಂಕಾ ಗುರುಮಹಿಪತಿ ಸ್ವಾಮಿ ನಾಮ ವೆನೆವ ನಿ:ಶಂಕಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಓಡಿ ಬಾರೋ ರಂಗಯ್ಯ ಓಡಿ ಬಾರೋ ಕೃಷ್ಣಯ್ಯ ಪ. ನೋಡಿ ನಿನ್ನ ಮುತ್ತನೀಡುವೆ ಹಾಡಿ ಜೋಗುಳವ ಪಾಡುವೆ ಅ.ಪ. ಮೊಸರು ಭಾಂಡ ಒಡೆದು ಬೆಣ್ಣೆ ಹಸುಳೆ ಮೆದ್ದು ಬಾಯೆಲ್ಲಾ ರಸಿಕಸಿಯಾಗಿರುವ ಮೈಗೆ ಬಿಸಿ ನೀರೆರೆವೆನೊ ರಂಗ 1 ಬಿಸಿ ದೋಸೆಯ ಕೊಡುವೆನೆ ಮೊಸರೋಗರವ ಉಣಿಸಿ ನಿನಗೆ ಹಸುರಂಗಿಯ ತೊಡಿಸುವೆ ಕೃಷ್ಣಾ 2 ಮುದ್ದು ಮುದ್ದಾದ ಪಾದ ಹೆಜ್ಜೆನಿಟ್ಟು ಬಾರೆಲೊ ಮುದ್ದೆ ಬೆಣ್ಣೆ ಹಣ್ಣು ಕೊಟ್ಟು ಮುದ್ರೆಯುಂಗುರವನಿಟ್ಟು ನೋಡುವೆ 3 ಅಣ್ಣ ಬಲರಾಮನೊಡನೆ ಚಿಣ್ಣ ಆಡಬಾರೆಲೊ ಚಿಣ್ಣಿಕೋಲು ಚಂಡು ಬುಗುರಿ ಚಿಣ್ಣ ಕೊಡುವೆನೋ ಕೃಷ್ಣಾ 4 ಶೃಂಗಾರವ ಮಾಡುವ ಶ್ರೀ ಶ್ರೀನಿವಾಸ ಬಾರೆಲೊ ಮುದ್ದು ಕಂಗಳಿಗೆ ಕಪ್ಪನ್ಹಚ್ಚಿ ರಂಗ ನಿನ್ನ ನೋಡುವೆದಣಿಯ5
--------------
ಸರಸ್ವತಿ ಬಾಯಿ
ಕಂಗೆಡದಿರು ಮನವೆ ಕಂಗೆಡದಿರು ಒಡನೊಡನೆ ನೆರೆದು ಬಂದು ಪ ಜನಕೆ ಗ್ರಾಸವೆಂತಹುದೆಂದು ಅನುಮಾನ ಹಚ್ಚಿಕೊಂಡು ಬಡವಾಗದಿರೆಲೆ ಆಲೋಚನೆ ಮಾಡು ನಿನ್ನೊಳಗೆ ತಿಳಿದು ಮರಳಿ ಮರಳಿ ಘನಮಹಿಮ ನಾರಾಯಣ ಅನಾದಿ ಸ್ವಾಭಾವಿಕ ಚಿನುಮಯ ಸತ್ಯಸಂಕಲ್ಪ ದೇವ| 1 ಇನಿತು ಜೀವಿಗಳಿಗೆ ಕಾಲಕಾಲಕೆ ಗ್ರಾಸ ಮಾಡಿಯಿಪ್ಪಾ ಕ್ಷಣಮಿರಗೊಡದೆ ಆವಲ್ಲಿಯಿದ್ದರೂ ವುಣಿಸುವ ಉಚಿತವನ್ನೆ ತಿಳಿದು ನೋಡಿ ದಿನ ದಿನಕೆ ಅಧಿಕವಿಲ್ಲಾ ತತ್ಪೂರ್ವ ಚೇತನಕೆ ನಿರ್ಮಾಣ ಮಾಡಿದಂತೆ ಬೊಮ್ಮಾ2 ಫಣಿತಿಯಲ್ಲಿ ಬರೆದಿರುವ ಆಯು:ಕರ್ಮವಿದ್ಯಾ ಧನ ನಿಧಾನನೆನೆಸಿ ಶ್ರೀಹರಿಯ ಆಜ್ಞಾದಿ ಜನಿಸುವಾಗಲೆ ಅವರವರವಾಡಿಪನಾ ಕೊನೆಯ ಸೆರಗಿನಲಿ ಕಟ್ಟಿಹನೋ ನಿನಗೆ ಕಾಣಬಾರದೋ ಪದಶಾಸ್ತ್ರಗಳಿಂದೆ ಗುಣಿಸಿ ನೋಡಿದರೆ ಕಾರುಣಿಕÀವಹುದೊ 3 ಅಣುಮಾತ್ರನಿಂ ನಿಂದಾ ಆಗುವಾ ಶೌರ್ಯವೇನೋ ಅನುಭವಕೆ ತಂದುಕೊಂಡು ಗ್ಲಾನಿಯಾಗೋ ಮಿನುಗು ಚಿಂತೆಗಳಿಂದಾ ಬರುವ ಲಾಭವೇ ಕಾಣೆ ತನುವ ಶೋಷಿಸಿ ವಿರೋಧಾವಾಗಿ ಕೊಂಬೆ ಸಿರಿ ನಮ್ಮ ವಿಜಯವಿಠಲರೇಯಾ ಮನುಜಾದಿ ದೇಹಿಗಳಿಗೆ ಸ್ವಾಮಿಯಾಗಿಪ್ಪನೋ
--------------
ವಿಜಯದಾಸ
ಕಟಕಟಾ ಕಂಡೆವಲ್ಲಾ ಕುಟಿಲವರ್ತನ ಕೆಲಕೆಲವು ಈ ಕಲಿಯುಗದೀ ಪ ಮಳೆಯಿಲ್ಲ ಬಂದರಿಳೆ ಬೆಳೆಯದು ಬೆಳೆಯೆ ಧರಣಿ ಹುಲಿಸಿಲ್ಲ ಹುಲಿಸಾದರಿಲ್ಲಾ ಪ್ರಜೆಗೇ ಸಲುವಕೋರಲ್ಪವನು ಬಿಡರು ರಾಜರುಗಳ ಹಾ ವಳಿಯಲುಳುಹಿಲ್ಲ ಇನ್ನೆಂತು ಕೃಷಿಕರಿಗೇ 1 ಧನವಗಳಿಸಿಯೆ ಪಡುವುದನ್ಯಾಯವೇ ಮೊದಲು ಮನವರಿತು ಪಾತಕಂಗಳ ಮಾಡುತಿಹರೂ ಇನಿತು ಗಳಿಸಿದ ಕೃತ್ಯದರ್ಥಕ್ಕೆ ಚೋರರು ಜನಪರೊಡೆಯರು ಬಯಲಮಮತೆಗಳ ಬಿಡರೂ 2 ಕಕ್ಕುಲತೆ ಪರನಿಂದೆ ರಾ ಕ್ಷಸಕೃತ್ಯ ಹಿಂಸೆ ಮತ್ಸರ ಅನಾಚಾರಾ ಕುಹಕ ಕುಟಿಲ ಕುಮದ ಸ್ವಾಮಿದ್ರೋಹ ವಸುಮತಿಯ ಸುರರ ವಧೆ ಘನವಾಯಿತಲ್ಲಾ 3 ತೊಡುವೊಡವೆಗಳ ಬೇಡಲೊಡನೆರಡು ಕಂಗಳಲಿ ಕಿಡಿಸೂಸಿ ಬಾಯಿ ನೊರೆಸುತ್ತಿ ಘರ್ಜಿಸುತಾ ಜಡಿವ ಕೋಪದಿ ಮಧುಪರಂತೆ ಜರೆವೀ ಬಾಯಿ ಬಡುಕರೇ ಮೇದಿನಿಗೆ ಹೊರೆಯಾದರಲ್ಲಾ 4 ರಸನಬಿಡುವರು ಕಸವಪಿಡಿವರೊರೆಯನು ಪಿಡಿದು ಬಿಸುಡುವರಲಗ ಪರುಸವನು ಬಿಟ್ಟು ಕಲ್ಲಾ ಒಸೆದು ಬಿಡುವರು ಶ್ರೀ ವೈಕುಂಠಕೇಶವನಿರಲು ನುಸಿ ದೈವಗಳ ಭಜಿಸಿ ಹಸಗೆಡುತಲಿಹರೂ 5
--------------
ಬೇಲೂರು ವೈಕುಂಠದಾಸರು
ಕಂಡದ್ದು ಬಯಸಿ ಕಂಗೆಡು ಬೇಡಾ ಪಾದ ಬಿಡಬೇಡಾ ಪ ಕಾಲನಿನ್ನದಲ್ಲ ಕಡುಮೂರ್ಖ ಆ ಕಾಲ ಪುರುಷ ಮಾಡಿದನೇಕಾ ಪರಿಗಳಿಂದ ಇನ್ನು ಯಾಲೋಕಾದಲಿ ನಡುವುದಲ್ಲಾ ಸುಖದು:ಖ ಪಾಲಿಗೆ ಬಂದದ್ದು ಬಿಡದನಕಾ ಪ್ರಾಪ್ತಿ ಇದ್ದಷ್ಟೇ ಇಲ್ಲಧಿಕಾ ಶ್ರೀಲೋಲನ ನೀನಿರುವತನಕಾ ಸ್ಮರಿಸದೆ ಇರಬೇಡ ಅವಿವೇಕಾ 1 ಘಣಿಯಲ್ಲಿ ಬರದದ್ದು ತಪ್ಪದಲ್ಲೆ ಜಗ ಭಗವಂತ ನೀ ಮಾಡಿದಲ್ಲೆ--- -------- ನಿನ್ನದಲ್ಲೆ ಅನುಗ್ರಹ ಮಾಡುವ ಭರದಲ್ಲೆ ನಗಧರನಾ ನಾಮ ಬಲದಲ್ಲೆ ಅಘಗಳ ಕಳಿ ನೀ ತೀವ್ರದಲ್ಲೆ 2 ಇಷ್ಟಾರ್ಥ ನೀ ಮಾಡಬೇಕಂದಿ ಸಂಚಿತ ಎಲ್ಲೆಂದಿ ಕಷ್ಟವ ಪಡಕೊಂಡು ನೀ ಬಂದಿ ಕಾಮಕೆ ಸುಖವು ಇಲ್ಲೆಂದಿ ಇಷ್ಟದಿ ಶ್ರೀ ಹರಿ ಪದಹೊಂದಿ ಇರದೆ ನೀ ಇರಬೇಡಾ ಇಬ್ಬಂದಿ ಸ್ಪಷ್ಟದಿ 'ಹೊನ್ನಯ್ಯ ವಿಠ್ಠಲಂದಿ’ ಸಾರ್ವದಿ ಮುಂದಕ ನೀ ಬಂದಿ3
--------------
ಹೆನ್ನೆರಂಗದಾಸರು
ಕಡಲಶಯನ ಹರಿಯ ತೊಡೆಯಲ್ಲಿ ಮಡದ್ಯೇರಿಬ್ಬರು ಕುಳಿತು ಪ ಪನ್ನಂಗಶಯನ ಕೇಳೆ ಸ್ವಾಮಿ ನೀ ಎನ್ನ ಮನೆಗೆ ಏಳೊ ನಿನ್ನ ಪಾದಕ್ಕೆ ಎರಗುವೆನೆಂದು ಭಾಮೆ ಕೈ- ಯನ್ನು ಮುಗಿದಳಾಗ 1 ಎನ್ನ ಮನೆಯಲ್ಲಿದ್ದ ಶ್ರೀಹರಿ- ಯನ್ನು ಕರೆಯಲವರ ಕಣ್ಣೇಸೆನುತಲಿ ಕರ್ಣಿ(ನ್ಯೆ?) ರುಕ್ಮಿಣಿ ಕೋಪ- ವನ್ನು ಧರಿಸಲಾಗ 2 ಎಷ್ಟು ಹಣವ ನೀನು ಕೃಷ್ಣಗೆ ಕೊಟ್ಟು ಕೊಂಡಿ ಹೇಳೆ ದಿಟ್ಟತನದ ಮಾತಾಡೋ ರುಕ್ಮಿಣಿ ನಿನ್ನ ಶ್ರೇಷ್ಠತನವೇನ್ಹೇಳೆ 3 ಹತ್ತು ಆರು ಸಾವಿರದಷ್ಟ ಭಾರ್ಯೇರವೊಳಗೆ ಸತ್ಯಭಾಮೆ ಉತ್ಕøಷ್ಟ ಚೆಲುವೆಯೆಂದು ಕೃಷ್ಣ ನಿನ್ನಲ್ಲಿಹನೆ4 ಹದಿನಾಲ್ಕು ಲೋಕದಲಿ ಹರಿ ಪಾದಾಂಬುಜವ ಕಾಂಬುವೋರಿಲ್ಲೆ ಯದುನಾಥನ ಎದೆ ಮ್ಯಾಲ್ಹತ್ತಿರುವೋದು ಇದು ಸೋಜಿಗವಲ್ಲೆ 5 ಇಷ್ಟೆ ಸೋಜಿಗವೆಂದು ಆಡಲು ದಿಟ್ಟೆ ನಿನಗೆ ಅರಿದೆ ಅಷ್ಟದಿಕ್ಪಾಲಕರನೆ ಓಡಿಸಿ ವೃಕ್ಷ ಕಿತ್ತು ಒದರು(ರುವು?) ದಲ್ಲೆ 6 ಜಲಪ್ರಳಯ ಕಾಲದಲಿ ಜನರಿಲ್ಲದ ಅಂಧಕಾರದಲಿ ಎಲೆಯಾಗಾ ಪರಮಾತ್ಮನ ಮನವ ನೀ ಮೊ- ದಲೆ ಒಲಿಸಿಕೊಂಡೆ 7 ಕಾದು ಸೇವಿಸೆ ಹರಿಯ ಪಾದದ- ಲ್ಲಾದರವಿಲ್ಲದಲೆ ದಾನ ಮಾಡುತ ಮುನಿಹಿಂದಟ್ಟಿದರ್ಹರಿ ಹ್ಯಾಗೆ ಬರುವನ್ಹೇಳೆ 8 ಮೂರು ಲೋಕದ ದೊರೆಯ ಮೂರೆಲೆ ತುಳಸಿ- ಸರಿಯ ಮಾಡಿ ಮುಕುತಿದಾಯಕ ಕೈವಶವಾ- ಗಿರಲು ನೀ ಸಕಲ ಮಾಯವ ಬಲ್ಲೆ 9 ಪಟ್ಟದ್ವೊಲ್ಲಭೆ ನಾನು ಕೃಷ್ಣಗೆ ಮೆಚ್ಚಿ ಬಂದೆಯೆ ನೀನು ಅಚ್ಚುತ ತಾ ಪರಮಾನುಗ್ರ(ಹ)ವ ಮಾಡಿ ಬಂ- ದಿಚ್ಛೆಲಿರುವ ತಾನು10 ಮಾತಾಪಿತರು ಅನುಜನನ್ವಂಚಿಸಿ ಈತಗ್ವಾಲೆಯ ಬರೆದು ಯಾತಕಂಜಿಕೆ ವಲಿಸ್ಯೋಡಿ ಬಂದವಳೆಂದು ಕೀರ್ಹೊಗಳುವುದಲ್ಲೆ 11 ತಂದು ಕೊಡಲು ಮಣಿಯ ಸಭೆಯೊಳು ಅಂದು ತಗ್ಗಿಸಿ ತಲೆಯ ನಿಂದ್ಯದ ಮಾತಿಗೆ ತಂದು ನಿಮ್ಮಯ್ಯ ಮುಂದಿಟ್ಟು ಪೋದನೆ ನಿನ್ನ 12 ಕೇಳೊ ಕೇಳೊ ನುಡಿಯ ನೀನೀ- ರೇಳು ಲೋಕದ ಒಡೆಯ ಹೇಳೋ ಬುದ್ಧಿ ನಿನ್ನಯ ವಲ್ಲಭೆ ಮಾತಾ- ಡೋಳೊ ನಿರ್ಭಿಡೆಯ 13 ರಕ್ಕಸಾಂತಕ ಕೇಳೊ ನಿನ್ನ ಚಿಕ್ಕವಲ್ಲಭೆ ಮ(ಹಿ)ಮೆ ಉಕ್ಕಿ ಉಕ್ಕಿ ಎನ್ನ ಮ್ಯಾಲೆ ಬರಲು ನಿನ- ಗಕ್ಕರ ತೋರುವುದೆ 14 ಆರ್ಯಳೆಂದು ನಾನು ತಾಳಿದೆ- ನಕ್ಕ ರುಕ್ಮಿಣಿ ಮಾತ ಏರಿ ಏರಿ ಏನ್ನಮ್ಯಾಲೆ ಬರಲು ಇದು ನ್ಯಾಯವೇನೊ ನಿನಗೆ 15 ನಾಲ್ಕು ತೋಳಿನಿಂದ ಆಲಿಂಗಿಸಿ ಕಾಂತೆಯರಿಬ್ಬರನು ಯಾತಕಿಂಥ ಕದನವು ಘನವಾಯಿತು ಸಾಕು ಸಾಕುಯೆನುತ16 ವಾರಿಜಾಕ್ಷ ಕೇಳೋ ನಾರದ- ರ್ಹೂಡಿದರೀ ಜಗಳ ಪಾರಿಜಾತ ಸರಿಸವತಿಗೆ ಕೊಟ್ಟ- ರಿನ್ಯಾರು ಸೈರಿಸೋರ್ಹೇಳೊ 17 ನಂದನವನ ತರುವ ನಾ ತಂದಿಟ್ಟೆನಂಗಳದಲ್ಲೆ ಅಂದಿಬ್ಬರನಾನಂದವ ಬಡಿಸಿದ ಚೆಂದದಿಂದಲಿ ನಗುತ 18 ಭಾಮೆ ರುಕ್ಮಿಣಿ ಸಹಿತ ನಡುವೆ ಭೀಮೇಶ ಕೃಷ್ಣನು ಕುಳಿತ ಕಾಮನಯ್ಯನ ಚರಿತ್ರೆಯ ಪಾಡ- ಲಮೃತ ಪಾನವು ನಿರುತ 19
--------------
ಹರಪನಹಳ್ಳಿಭೀಮವ್ವ