ಒಟ್ಟು 772 ಕಡೆಗಳಲ್ಲಿ , 90 ದಾಸರು , 698 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಡೆದು ಬಾರಯ್ಯ ಕೃಷ್ಣ ನಡೆದು ಪ ಪಕ್ಷಿವಾಹನ ಪರಪೇಕ್ಷಾರಹಿತ ನಿನ್ನ ಕುಕ್ಷಿಯೊಳಗೆ ಜಗ ರಕ್ಷಿಸುವಾತನೆಂದು ವಕ್ಷಸ್ಥಳದಿ ಶ್ರೀಮಾ- ರೀಕ್ಷಕನುಳುಹಿದಂತಕ್ಷದಿ ನೋಡುತಧೋಕ್ಷಜ ಹರಿಯೆ 1 ಸತ್ಯವಂತನೆ ಕೇಳಸತ್ಯ ಅಜ್ಞಾನ ಭವ- ಕತ್ತಲೊಳಗೆ ಬಹಳ ಶತ್ರು ಸಮೂಹದಲ್ಲಿ ಸುತ್ತಿ ಬಳಲುವೆ ಕೇಳಾಪತ್ತು ಬಾಂಧವ ನಿನ್ನ ಚಿತ್ತಕ್ಕೆ ತಂದು ಸಮಸ್ತ ಸುರೇಶ ನಿನ್ನ ಕರಿ ಸರ್ವೋತ್ತಮ ಹರಿಯೆ 2 ಚಾರ ಮಾಡಿದರು ನಿನ್ನಾರು ತಿಳಿಯಲಿಲ್ಲೊ ಶೂರ ಸುತಗೆ ಸುಕುಮಾರನೆನಿಸಿದಂಥ ಅ- ಸಮೀರಜ ಭವ ಸುರ ನಾರದಪ್ರಿಯನೆ ಉದ್ಧಾರಮಾಡು ಎನ್ನನು 3 ಧ್ವಜ ವಜ್ರಾಂಕುಶ ಪಾದಭಜಕರೆನಿಸುವಂಥ ಸುಜನರ್ವಂದಿತನಾದ ಕುಜನ ಕುಠಾರಿಯೆ ನೀ ಅಜಮಿಳಗೊಲಿದಂಥಜಗಣೇಂದ್ರನ ಪ್ರಿಯ ನಿಜವಾಗಿ ನೋಡೆನ್ನ ರಜತಮ ಕಳೆಯುವ 4 ಕಡಲಶಯನನಾದ ಉಡುರಾಜ್ವದನ ಬಿಟ್ಟು ಭಿಡಿಯ ಭೀಮೇಶ ಕೃಷ್ಣ್ನೆನ್ನೊಡೆಯನೆನುತ ಬಂದ ಬಡವ ಸುದಾಮಗಿಟ್ಟಿ ಹಿಡಿ ಹಿಡೀ ಎಂದು ಭಾಗ್ಯ ತಡೆಯದೆ ನಾ ನಿನ್ನಡಿಗಳಿಗೆರಗುವೆ ಕೊಡು ಕೊಡು ವರಗಳ ಪೊಡವಿ ಪಾಲಿಪನೆ 5
--------------
ಹರಪನಹಳ್ಳಿಭೀಮವ್ವ
ನಂದನ ಕಂದ ಸುಂದರ ಕೋಮಲಾಂಗ ಚಂದ್ರವದನ ಮುಚುಕುಂದವರದಗೆ ಮಂಗಳಂ ಮಂಗಳಂ 1 ಮುದ್ದು ಮುಖದಲಿ ತಿದ್ದಿಟ್ಟ ತ್ರಿನಾಮವ ಹದ್ದುವಾಹನ ಖದ್ರಿ (ಕದ್ರು?) ಸುತ ಫಣಿಶಯನ ಮಂಗಳಂ ಮಂಗಳಂ 2 ಶ್ರೀಶ ಭೀಮೇಶಕೃಷ್ಣನೆ ವೆಂಕಟೇಶ ಸಾಸಿರನಾಮದೊಡೆಯ ಶ್ರೀನಿವಾಸ ಮಂಗಳಂ ಮಂಗಳಂ 3
--------------
ಹರಪನಹಳ್ಳಿಭೀಮವ್ವ
ನದಿಗಳ ಸ್ತೋತ್ರ ಕಾವೇರಿ ಕಲುಷ ಸಂಹರಳೆ ಕಾವೇರಿ ಪ ವಿಧಿ ಸುತೆ ನಮ್ಮ | ಕಾವುದು ಬಿಡದಲೆ ಅ.ಪ. ಅಮಿತಾಭ ಕವೇರ ನೃಪನು | ಪುಣ್ಯಶಮದಮದಿಂದಯುತನು | ಸಾರಿಹಿಮನಗ ತಪ್ಪಲುಗಳನು | ದಿವ್ಯಸಮಶತದಶ ವರ್ಷಗಳನು | ಆಹಸುಮನ ಸೋತ್ತಮನಾದ | ಬೊಮ್ಮನ ಧೇನಿಸಿಅಮಮಸುಘೋರವು | ವಿಮಲ ತಪವ ಗೈದ 1 ಬೊಮ್ಮ | ಅಚ್ಚ್ಯುತ ಮಾಯ ತನ್‍ಇಚ್ಛೆಯ ಸುತೆ ನಿನ | ಮೆಚ್ಚು ಪುತ್ರಿಯಹಳು 2 ಸ್ಮರಣೆ ಮಾತ್ರದಿ ವಿಷ್ಣುಮಾಯಾ | ದಿವ್ಯತರುಣಿ ರೂಪದಿ ಬ್ರಹ್ಮರಾಯ | ನೆದುರುಕರವ ಮುಗಿದು ಪೇಳು ಜೀಯಾ | ಎನೆಬರೆದನಾ5ದು ಕವೇರ್ಕನ್ಯಾ | ಆಹಸರಿತು ರೂಪದಿ ಮೋಕ್ಷ | ವg್ವ5ರ ವಹುದು ನೀಸರುವ ತೀರಥ ಮಯಿ | ಪರಿವುದು ಈ ಪರಿ 3 ಎರಡು ಅಂಶವು ನಿನಗಿಹುದೂ | ಒಂದುಸರಿತಾಗಿ ಪ್ರವಹಿಸುವೂದು | ಮತ್ತೆತರುಣಿ ರೂಪದಿ ಪತ್ನಿಯಹುದು | ಮುನಿವರ ಕುಂಭ ಸಂಭವಗಹುದು | ಆಹಕರೆಸಿ ಲೋಪಾಮುದ್ರೆ | ಮೆರೆವುದು | ಪತಿವ್ರತೆಶಿರೋಮಣಿ ಎನಿಸಿ ನೀ | ಮೆರೆವುದು ಭುವಿಯಲ್ಲಿ 4 ವರವಿತ್ತು ಮರೆಯಾಗೆ ಅಜನು | ನೃಪವರ ಸುತೆಯೊಡನೆ ಪೊರಟನು | ಕಾಲಕರ ಮರತನದಿ ಕಳೆದಾನು | ಮುಂದೆವ್ಯೆರಾಗ್ಯದಿಂ ಪೇಳಿದಾನು | ಆಹಪರಿಶುದ್ಧನಿಹೆ ನಿನ್ನ | ದರುಶನ ಮಾತ್ರದಿಪರಮ ನಿಷ್ಕಾಮದ | ಕರ್ಮವನೆಸಗುತ್ತ 5 ಹರಿಧ್ಯಾನದೊಳು ಬಲುರತ | ನಿರೆನರಪತಿ ಹರಿಲೋಕ ಗತ | ನಾಗೆತರುಣಿ ಕಾವೇರಿಯು ಸ್ಥಿತ | ಘೋರವರ ತಪವನ್ನು ಗೈಯ್ಯುತ್ತ | ಆಹಇg5ರಲೀ ಪರಿ ಪರಿ ಪರಿ ಬೇಡಿದಳ್ 6 ಸರಿದ್ರೂಪಳಾಗಿನ್ನು ಪರಿದೂ | ಹರಿಶರಣರ ಪಾಪವ ತರಿದೂ | ಮತ್ತೆಸರುವರ ತಾಪವ ಕಳೆದೂ | ಇನ್ನುಸರಿತು ಗಂಗಾದಿಗೆ ಹಿರಿದೂ | ಆಹವರ ಕೀರ್ತಿಯಿಂದಲಿ | ಮೆರೆಯುತ ಲೋಕೋಪಕರಳೆನಿಸಿ ಪ್ರವಹಿಸಿ | ಶರಧಿಯ ಸೇರ್ವಂಥ 7 ಸ್ಮರಣೆ ಮಾತ್ರದಿ ಪಾಪನಾಶಾ | ಮಾಳ್ಪಗಿರಿಯುಂಟು ಸಹ್ಯ ಆದ್ರೀಶ | ಅಲ್ಲಿತರು ರೂಪಮಲಕ ದೊಳ್ವಾಸಾ | ನಿನ್ನಚರಣ ಕಮಲವ ವಾಣೀಶಾ | ಆಹವಿರಜೆ ಪುಣ್ಯದ ಜಲ | ವರ ಕಂಬುವಿಲಿ ತುಂಬಿಎರದಭಿಷೇಚಿಸೆ | ಪರಿವುದದರ ಸಹ 8 ವರ ದತ್ತಾತ್ರೇಯ ನೆಂದೆನಿಸಿ | ತವಶಿರ ಸ್ಥಾನದಲ್ಲಿ ವಾಸೀಸಿ | ಎನ್ನಶರಣರ ಅಘಗಳ ಹರಿಸೀ | ನಿನ್ನವರ ದಕ್ಷಗಂಗೆಂದು ಕರೆಸೀ | ಆಹವರ ತವೋತ್ಸಂಗದಿ | ಶಿರವಿಟ್ಟು ಮಲಗುತ್ತಸರಿದ್ವರಳೆನಿಸುತ್ತ | ಮೆರೆಸುವೆ ನಿನ್ನನು 9 ಮಂಗಳ ಜಪತಪ ಸ್ನಾನ | ಮಿಕ್ಕಗಂಗಾದಿ ತೀರ್ಥಾನುಷ್ಠಾನ | ನಾಲ್ಕ್ಯುಗಂಗಳೊಳಗೆ ಮಾಳ್ಪ ನಾನಾ | ಕರ್‍ಮಂಗಳ್ತವೋತ್ಸುಂಗ ಶಿರಸ್ಥಾನ | ಆಹಮಂಗಳಾಮಲಕ ಜಲಂಗಳಿಗ ಸಮ ಕ-ಳೆಂಗಳ್ಷೋಡಶಕ್ಕೊಂದಂಗ ಸರಿ ಬರೆದು 10 ದಾತ | ತನ್ನಕಾಮಂಡುಲಿನೊಳ್ ನಿನ್ನ ಧೃತ | ಆಹನೇಮದಿಂದೊಂದಂಶ | ಲೋಪಾ ಮುದ್ರೆಯು ಆಗಿಆ ಮಹ ಮುನಿಯನ್ನ | ಪ್ರೇಮದಿ ವರಿಸುವೆ 11 ವರವಿತ್ತು ಮರೆಯಾಗೆ ಹರಿಯು | ಅತ್ತವರ ಮುನಿ ತಪಸಿನ ಧಗೆಯು | ಕಂಡುಸುರಜೇಷ್ಠ ಅವನೆದುರು ಹೊಳೆಯು | ಆಗಬರೆದನು ಜೀವನ ಧೊರೆಯು | ಆಹಹೊರಲಾರದವ ತಾನು | ವರ ಸನ್ಯಾಸದಿ ಮನವಿರಸಿರುವುದು ನಿರಾ | ಕರಿಸುತ್ತ ಪೇಳ್ದನು 12 ಚಕ್ರಧರ | ತುಂಬಿದ ಮನದಿಂದಹಂಬಲಿಸಿ ಕೈಗೊಂಡು | ಬೆಂಬಿಡದೆ ಸಲಹುವ 13 ಮುನಿವರಗಸ್ತ್ಯನು ಅಜನ | ಮಾತಮನವಿಟ್ಟು ಕೇಳುತ್ತ ವಚನ | ಪೇಳ್ದಅನುಕೂಲ ಭಾರ್ಯಳಾಳ್ವುದನ | ಯೋಗಅನುಕೂಲಿಸುವುದೆಂಬ ಹದನ | ಆಹವನಜ ಗರ್ಭನು ತನ್ನ | ತನುಜೆಯ ಸುಕನ್ಯಾಮಣಿಯ ಕಾವೇರಿಯ | ವಿನಯದಿ ವರಿಸೆಂದ 14 ನಗ ಶೃಂಗದಿರಿಸುತ್ತಮಿಗೆ ಚೆಲ್ವ ಸರಿತಾಗಿ | ಪೋಗಲನುಗ್ರಹಿಸು 15 ಮೋದ ತಾಳುತ್ತಸುಗುಣೆಯ ಬೆಸಸೀದ | ನಗು ಮುಖದಿಂದಲಿ 16 ಹೊರ ಮುಖಳಾದಳ್ ಕಾವೇರಿ | ಮುನಿವರನ ಸತ್ಕರಿಸಲು ನಾರಿ | ದ್ವಿಜವರ ಪೇಳೆ ಬ್ರಹ್ಮಗನುಸಾರಿ | ಆಕೆವರಗಳ ಬೇಡಲು ಭಾರಿ | ಆಹಸುರಜೇಷ್ಠ ನ್ವೊರೆದಂತೆ | ವರಗಳ ನೀಯಲುಸುರಕನ್ಯಾಮಣಿಯಾಗ | ವರಿಸಿದಳಾ ಮುನಿಯ 17 ವಾಹನ ಪತ್ನಿ ಸೇರಿ | ಶಿರಿಕಂಸಾರಿ ಗರುಡನ್ನ ಏರಿ | ಕ್ರತುಧ್ವಂಸಿ ಉಮಾ ನಂದಿ ಏರಿ | ಇಂದ್ರಶಂಸಿ ಸೈರಾವತನೇರಿ | ಆಹಸಾಂಶರು ಯೋಗ್ಯ ನಿರಂಶರು ಸೇರಿ ಪ್ರ-ಶಂಸನ ಗೈಯುತ್ತ ವೈವಾಹ ನಡೆಸಿದರ್ 18 ಮದುವೆ ವೈಭವ ಪೇಳಲಾರೆ | ಜಗದುದಯಾದಿ ನಡೆಪರಿಹಾರೆ | ಹರಿಮುದ ಪೊಂದಲಿನ್ನೆದುರ್ಯಾರೆ | ಎಲ್ಲರ್ವೊದಗಿ ಆಶೀರ್ವದಿಶ್ಯಾರೆ | ಆಹವಿಧ ವಿಧ ದುಡುಗೊರೆ | ಅದ ಪೇಳಲಳವಲ್ಲಅದುಭುತ ಜರುಗಿತು | ಉದ್ವಾಹ ಕಾರ್ಯವು 19 ಗಮನ | ಮತ್ತೆಕಾವೇರಿ ಸಹ ಮುನಿ ಹಿಮನ | ಕೇಳ್ಕೆಭಾವಿಸುತಲ್ಲೆ ಕೆಲದಿನ | ಆಹಆವಾಸಿಸಿರೆ ಋಷಿ | ಸಾರ್ವರ ಮನ ತಿಳಿದುಆಹ್ವಾನ ವಿತ್ತಳು | ಸಹ್ಯಾದ್ರಿ ಸನಿಯಕ್ಕೆ 20 ಗಮನ | ಆಹಇಂಬಿಟ್ಟನ್ನೊಂದಂಶ | ಲೋಪಾಮುದ್ರೆಯು ಕುಂಭಸಂಭವ ಸಹ ಸಹ್ಯ ಅದ್ರಿಗೆ ಗಮಿಸಿದಳ್ 21 ಉತ್ತರ ಹಿಮನಗ ಬಿಡುತ | ವನಸುತ್ತುತ ವಿಂಧ್ಯ ಮೀರುತ್ತ | ಹಾಂಗೆಉತ್ತಮ ಸಹ್ಯಾಚಲೇರುತ್ತ | ಅಲ್ಯುನ್ನತ್ತ ಬ್ರಹ್ಮಗಿರಿ ಸಾರುತ್ತ | ಆಹಉತ್ತಮ ಕ್ಷೇತ್ರದಿ ಜತ್ತಾಗಿ ಕಮಂಡಲಒತ್ತಟ್ಟಿಗಿರಿಸುತ್ತ ಪತ್ನಿಗೆ ಬೆಸಸಿದರ್ 22 ಕಾಲ ಮುದದಿ ಕರಕದಿಂದಅದುಭೂತವೆನೆ ಸರಿದ್ವರಳಾಗಿ ಪ್ರವಹಿಸು 23 ಪರಿ ಕಾಲ ಸಮೀಪವಾಗಲು ಸುರಪ 24 ಹರಿ ಮನೋಭಾವಾನು ಸಾರಿ | ಮಳೆಗರೆಯಲನ್ಯತರುವ ಸಾರಿ | ಶಿಷ್ಯರುಗಳಾಶ್ರಯಿಸಲು ಮೀರಿ | ಕುಂಡಸರುವೆ ತೀರಥಗಳು ಉಸುರಿ | ಆಹಪರ್ವ ಕಾಲವು ಇದು | ಪೊರಮಡು ಕಾವೇರಿಪರಿವೆವು ನಿನ ಪಿಂತೆ | ತೀರ್ಥಗಳಗ್ರಣಿಯೆ 25 ವಿಧಿ ಬಂದ ಹಂಸವನೇರಿ | ಆವಮುದದಿಂದ ವನಗಳ್ ಸಂಚಾರಿ | ಇನ್ನುಅದುಭೂತಾಮಿತ ತೀರ್ಥ ಗಿರಿ | ಕಂಡುಒದಗಿ ಕರಕದ ಜಲ ಭಾರಿ | ಆಹಮುದದಿ ಮೀಯುತ ಜಪ ಅದುಭೂತಾಷ್ಟಾಕ್ಷರಪದುಮ ಸಂಭವ ಹರಿಧ್ಯಾನದಿ ರತನಾದ 26 ಮಂದ ಮಾರುತ ಬೀಸೆ ವಿಮಲ | ಧಾತ್ರಿಗಂಧ ವೆಂದೆನುತಲಿ ಬಹಳ | ಮುದದಿಂದೆಚ್ಚರಗೊಂಡು ಕಂಗಳ | ಮುಂದೆಸುಂದರಾಮಲಕಾ ಕೃತಿಗಳ | ಆಹಎಂದು ಕಾಣದ ದೃಶ್ಯ | ವೆಂದೆನುತಲಿ ಮನದಿಂದ ಧೇನಿಸೆ ಅದು | ಛಂದದಿ ಮರೆಯಾಯ್ತು27 ಸಿರಿ ಹರಿಯು | ಸಿರಿವತ್ಸಾಂಕಿತನು ಬಾಹು ದ್ವಿದ್ವಯು | ಇಂದಮೆಚು5Àೂಪವ ತೋರೆ ವಿಧಿಯು | ಆಹ |ಸಚ್ಚರಿತೆಯ ಪಾಡೆ | ನಿಚ್ಚಳಾಮಲಕದಉಚ್ಚರೂಪವ ಕಂಡು | ಅರ್ಚಿಸಿದನು ಬಹಳ 28 ಗಾತ್ರ ಪಾದ | ಬಿಸಜಗಳ್ವಂದಿಸಿಬಿಸಜ ಸಂಭವ ಗೈದ | ಅಸಮ ಸಂಪೂಜೆಯ 29 ಧಾತಾ ಸ್ವ ಕುಂಡಿಕಾಸ್ಥಿತ | ವಿಮಲ ತೀರ್ಥವು ವಿರಜೆಯಿಂ ಹೃತ | ಶಂಖಪೂರ್ತಿಸಿ ಪೂಜಾ ಪದಾರ್ಥ | ಪ್ರೋಕ್ಷಿಸಿಪೂತಾತ್ಮಾಮಲಕದಿ ಸ್ಥಿv5 ಆಹಶ್ರೀ ತರುಣೀಶನ | ದತ್ತಾತ್ರೇಯನ ರೂಪಖ್ಯಾತ ಪೂಜಿಸುತಿರಲಶರೀರ ವಾಕ್ಕಾಯ್ತು 30 ಪರಿ ಗೈಯ್ಯುವ ಭಾಮಾ ಮಣಿಕುರಿತು ಪೇಳಿತು ವಾಣಿ ನೇಮ | ನೀನುಶರಧೀ ಸೇರುವ ಮನೋ ಕಾಮಾ | ಆಹಪರಿಪೂರ್ಣವಹುದೀಗ | ವರ ತುಲಾಪರ್ವದಿಶರತ್ಕಾಲ ಮುಕ್ತಿದ | ಪರಿವುದು ಕಾವೇರಿ31 ತತುಕ್ಷಣ ಮುನಿಯ ಕಮಂಡ್ಲು | ದೊಳುಸ್ಥಿತ ಸರ್ವ ತೀರ್ಥಮಾನಿಗಳೂ | ಪೇಳೆತುತುಕಾಲ ಕವೇರ ತನುಜಳೂ | ಶೀಘ್ರಉತು ಪತ್ತಿ ತಾಳಿ ಪರಿದಾಳೂ | ಆಹಇತರ ತೀರಥಗಳು | ಸರಿತು ರೂಪದಿ ಹಿಂದೆಅತಿ ತ್ವರೆಯಲಿ ಪ್ರವ | ಹಿತರಾಗಿ ಪೋದರು 32 ಋಷಿವರ್ಯ ಸ್ನಾನವ ಮಾಡಿ | ಪರಿಕ್ಷಿಸಲಾಗ ವಿಸ್ಮಯ ಕೂಡಿ | ಶಿಷ್ಯರಿಗುಸರಲಾಕ್ಷೇಪದ ನುಡಿ | ಅವರುಸಿರಿದರ್ ಮಳೆಯ ಗಡಿಬಿಡಿ | ಆಹರಸ ರೂಪದಲಿ ಪರಿವ | ಅಸಮ ಪತ್ನಿಯ ಕೂಗೆಋಷಿಗೆ ಶಾಂತಿಯ ಸೊಲ್ಲ | ಒಸೆದು ಪೇಳಿದಳವಳೂ 33 ಸುರವರ ಪೂಜ್ಯ ಧಾತ್ರಿಯು | ಇನ್ನುತರುವು ಆ ಮಲಕದ ಬಳಿಯು | ತೀರ್ಥವರ ಶಂಖ ಸಂಜ್ಞಿತ ತಿಳಿಯು | ಇಲ್ಲಿವಿರಜೆಯ ದೊಂದಿಹ ಕಳೆಯು | ಆಹವರ ನಭೊ ಗಂಗೆಯು | ಸರಿ ಸಹ್ಯಾಮಲಕವುವರಣಿಸಲಳವಲ್ಲ | ಸರಿದ್ವರ ಮಹಿಮೆಯ 34 ಕೈವಲ್ಯ | ದಾತನ ಒಲಿಮೆಯು 35 ಗಂಗಾನದೀಗಗಳು ತಮ್ಮ | ಪಾಪಹಿಂಗಿಸಲೋಸುಗವಮ್ಮ | ತುಲಾಮಂಗಳ ಮಾಸದಲಮ್ಮ | ಒಂದುತಿಂಗಳಿಹರಿಲ್ಲಿ ಸಂಭ್ರಮ್ಮಾ | ಆಹಗಂಗೆ ದಕ್ಷಿಣಾಖ್ಯೆ | ಮಂಗಳೆ ಜನಗಳಘಂಗಳ ಕಳೆಯುತ್ತ | ತುಂಗೋಪಕಾರಿಯೆ 36 ಕಾವೇರಿ ಪ್ರವಹಿಸಿ ಭರತ | ವರ್ಷಪಾವಿಸುತಿಹಳು ತಾ ನಿರುತ | ಬಂದುಸೇವಿಸೂವರ ಪಾಪ ತ್ವರಿತ | ದೂರಗೈವಳೆಂಬುವದೆ ನಿಶ್ಚಿತ | ಆಹಈ ವಿಧ ಮಹಿಮೆಯ ಓವಿ | ಪಾಲಿಸಿದನು |ಶ್ರೀವರ ಶ್ರೀ ಗುರು | ಗೋವಿಂದ ವಿಠಲಯ್ಯ 37
--------------
ಗುರುಗೋವಿಂದವಿಠಲರು
ನಂದಿವಾಹನ ಸಖನೆ ಯೆಂದಿಗೆ ನೋಡುವೆ ನಿನ್ನಾ ಪ ಅರಿಗೆನಿನ್ನಾಚಾರ್ಯರಪ್ಪಣೆ ಹೊಂದಿಸುಖಿಸುತಿರುವೆನೊನಂದಿ ಅ.ಪ ರಂಗನಾಯಕನೆ ಬಾರೊ ರಾಕ್ಷಸಾಂತಕನಲ್ಲವೆ ಮಂಗಳಾಂಗ ಮಾತನಾಡೊ ಮಾಯಧಾರಿ ಕೇಶವ 1 ಸಾಟಿಯೇನಹುದೊ ಹರಿ ಸಾಧು ಶಿಖರನಲ್ಲವೆ ಆಟವಾಡುವ ಬಾಲನನ್ನು ಕರುಣದಿ ಕಾಯಲಿಲ್ಲವೆ2 ಕೋಲುಪ್ಯಾಟಿಯೊಳು ನಿನ್ನ ಕೋರಿ ಕೊಸರಿ ಕೂಗುವೆ ಮೂಲಗುರುವು ತುಲಶಿರಾಮಾ ದಾಸರ ಸೇವಕನಾಗುವೆ ಹರಿದಾಸರ ಸೇವಕನಾಗುವೇ 3
--------------
ಚನ್ನಪಟ್ಟಣದ ಅಹೋಬಲದಾಸರು
ನಂದಿವಾಹನಾ ಪಾಲೀಸೊ ನೀ | ಕಂದ ನೆಂದನಾ ಪ ಕಂದು ಗೊರಳ ಮೌ | ಳೆಂದು ಶಿಖರ ಅಮರೇಂದ್ರ ಮುಖರು ಸುರ | ವೃಂದ ವ್ಯಂದ್ಯ ಪದಅ.ಪ. ನಂದ - ನಂದನಾ - ಪ್ರಿಯ ಸಖ | ಮಂದಜಾಸನಾಕಂದ ನೆನಿಸಿ ದುರ್ | ವೃಂದ ತ್ಯಜಿಸಿ ತವತಂದೆ ಯಾಜ್ಞೆಯಲಿ | ನಿಂದು ಸರಿದ ಹರ 1 ದಿತಿಸುತ | ಸ್ತೋಮ - ಪ್ರೀಯನೇ ||ಶಾಮ ಸುಂದರ ಹರಿ | ಪ್ರೇಮಾನ್ವಿತ ಸುತಕಾಮಾರಿಯೆ ಹರ | ಸಾಮಜವಾಸಾ 2 ಸೇವ್ಯ ನಂಘ್ರಿ ದಶದಿವ್ಯ ಕಲ್ಪ ತಪ | ಗೈಯ್ಯೆ ಶಯ್ಯನಾದೆ 3 ಯೋಗಿ ರೂಪ ಭವರೋಗ ವೈದ್ಯ ಹೃ | ದ್ರೋಗ ಕಳೆಯೊ ಶಿವ4 ಗೌರಿ ಮನೊ - ಹರಾ - ಕೈಲಾಸವಾಸ | ಕೈರಾತಾ ಕೃತಿಧರಾ ||ಗಿರಿ ಇಂದ್ರ ಕೀಲದಿ | ಘೋರ ತಪಸಿ ನರಸಾರೆ ನಿನ್ನ ಪದ | ಶೂರ ಪಡೆದ ಶರ 5 ಶುಕ | ಲಿಂಗಾಕಾರನೇ ||ತುಂಗ ಮಹಿಮ ನಿ | ಸ್ಸಂಗ ಹರಿಯ ದ್ವಿತಿಯಂಗ ಡಮರು ಶೂ | ಲಿಂಗಳ ಪಿಡಿದಿಹ 6 ತೈಜಸ - ತಾಮಸ | ಸಾಕಾರಿ - ಓಜಸಾ ||ನೀ ಕುಶಾಸ್ತ್ರದಲಿ | ಭೀಕರರನು ಅವಿವೇಕರ ಮಾಡ್ದೆ | ಪಿ | ನಾಕಿ ಧರ ಹರ 7 ರುಂಡ - ಮಾಲನೇ - ಮುನಿಜ ಮೃ | ಕಂಡ - ಪಾಲನೇ ||ಅಂಡಜ ಮಹ ಬ್ರ | ಹ್ಮಾಂಡ ದೊಡೆಯ ಪದಪುಂಡರೀಕದೊಳು | ಬಂಡುಣಿ ಎನಿಸಿಹೆ 8 ಶಂಭೊ - ಶಂಕರ - ಧೂರ್ಜಟೆಯೆ | ಅಂಚೆ - ಮನೋಹರಾ ||ಕಂಬು ಪಾಣಿ ಪದ | ಹಂಬಲಿಸುವೆ ಹೃದಯಾಂಬರದೊಳು ಎನ | ಬಿಂಬನ ತೋರಿಸು 9 ಸೋಮರ್ಕಾನಲ - ಈಕ್ಷಣಾ | ಭೀಮ - ಕೈಕಪಾಲ ||ಭೀಮ ಭವಾಟವಿ | ಧೂಮಕೇತು ಸಿರಿರಾಮ ಪದಾಶ್ರಿತ | ವೈಮನ ಕಳೆಯೊ 10 ಭಾವ - ಜಾರಿಯೇ - ಮುರುಹರ | ರಾವಣಾದಿ - ಪ್ರಿಯಾ ||ಸಾವಧಾನದೊಳು | ಭಾವ ಶುದ್ಧಿಸುತತೋರ್ವುವೆನಗೆ ಗುರು | ಗೋವಿಂದ ವಿಠಲನ 11
--------------
ಗುರುಗೋವಿಂದವಿಠಲರು
ನನ್ನ ಕರ್ಮವು ಬಂದು ಇನ್ನು ಬಾಧಿಸುತಿರೆ ಅನ್ಯರೇನ ಮಾಡುವರೈ ಪ ಕನ್ನೆ ಶಿರೋಮಣಿ ದ್ರೌಪತಿ ವರದನೆ ಎನ್ನ ಪಾಲಿಸೊವೋ ಪ್ರಸನ್ನ ರಂಗನಾಥ ಅ.ಪ ಭಿಕ್ಷಕ್ಕೆ ಬಂದಾಗ ಲಕ್ಷ್ಯವಿಡದೆ ಹೋಗಿ ಸಾಕ್ಷಿಯ ನಾಕಂಡೆನೈ ಪಕ್ಷಿ ವಾಹನನೆ ನೀರಕ್ಷಿಸಬೇಕಯ್ಯ ಸಾಕ್ಷಾತನೆಂತೆಂಬೊ ಮೋಕ್ಷಾಧಿಕಾರಿಯೆ 1 ದೋಷಕ್ಕೆ ಗುರಿಯಾದೆನೈ ಆಶೆಯ ಬಿಡಿಸಯ್ಯಾ ಶ್ರೀ ವೆಂಕಟರಮಣ ದೋಷರಹಿತ ಗುರುವು ದಾಸ ತುಲಸೀರಾಮ 2
--------------
ಚನ್ನಪಟ್ಟಣದ ಅಹೋಬಲದಾಸರು
ನಂಬಿದೆ ನಾಗರಾಜ ಹರಿಯ ಪಾ- ದಾಂಭೋಜಭಕ್ತಿಭಾಜ ಪ. ಶಂಭುಶಕ್ರಾದ್ಯರು ಹಂಬಲಿಪರು ನಿನ್ನ ತುಂಬಿದ ಜೀವಕದಂಬಾಭಿಮಾನಿಯೆ ಅ.ಪ. ಸಾವಿರ ಜಿಹ್ವೆಯೊಳು ಹರಿಯ ಸ್ತುತಿ ಗೈವೆ ನಿರತ ಕೃಪಾಳು ಶ್ರೀವಾಸುದೇವನ ಕರುಣ ನಿನ್ನಲ್ಲೆಷ್ಟು ದೇವೇಶನಾದರು ಯಾವನು ಬಣ್ಣಿಪ ಶ್ರೀವಧೂವರನ ಕಮಲಪದ ರಾ- ಜೀವ ಸೌಂದರ್ಯವನು ತನ್ನಯ ಸಾವಿರಾಕ್ಷಿಗಳಿಂದ ಕಾಣುತ ಕೇವಲಾನಂದಾಬ್ಧಿ ಮಗ್ನನೆ 1 ಶಿರವೊಂದರಲಿ ಬ್ರಹ್ಮಾಂಡ ಸಾಸವೆಯಂತೆ ಧರಿಸಿದೆ ಸುಪ್ರಚಂಡ ವರ ರಘುರಾಮನಾವರಜ ಲಕ್ಷ್ಮಣನಾದೆ ಹರಿ ಕೃಷ್ಣರಾಯನ ಪಿರಿಯನಾಗಿ ಅವ- ತರಿಸಿ ಭೂಭಾರವನುರೆ ಸಂ- ಹರಿಸಿ ವೇದ ಪುರಾಣ ತತ್ತ್ವವ ಶರಣಜನರಿಗೆ ಬೋಧಿಸುವ ಮಹಾ ಕರುಣಿ ಕಮಲಾಕಾಂತನ ಭಕ್ತನೆ 2 ಲಕ್ಷ್ಮೀನಾರಾಯಣನ ನಿದ್ರಾಸ್ಪದ ರಕ್ಷಿಸು ಕೃಪೆಯಿಂದೆನ್ನ ಸಾಕ್ಷಾದಚಲರೂಪ ನಿನ್ನೊಳು ನೆಲಸಿದ ಪಕ್ಷಿವಾಹನ ಜಗದಧ್ಯಕ್ಷ ಶ್ರೀನಿವಾಸ ಮೋಕ್ಷ ಮಾರ್ಗಪ್ರದರ್ಶಿ ಸತತ ಮು- ಮುಕ್ಷು ಜನಮನಹರ್ಷ ನಿರ್ಜರ- ಪಕ್ಷ ಸುಫಲಪ್ರದ ಸದಾ ನಿರ- ಪೇಕ್ಷ ಗುರುವರ ರಾಕ್ಷಸಾಂತಕ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಂಬಿದೆ ನಿನ್ನ ನೀರಜಪಾದ | ಇಂಬಿನಲ್ಲಿಟ್ಟು ಸಲಹೊ ಪ್ರಸಾದ ಪ ಅಂಬರೀಷನ ಶಾಪ ಹಿಂಗಿಸಿ ಕಳೆದ ದ- | ಯಾಂಬುಧಿ ನೀನೆಂದು ಹಂಬಲಿಸಿದೆ ಹರಿಯೆ ಅ.ಪ ಉಗ್ರನ್ನ ಖಳವಂಚಿಸಿ ತನ್ನ ಕ- | ರಾಗ್ರವಾ ಶಿರದಲ್ಲಿ ಇಡಬರಲು || ಅಗ್ರೇಶ ಕಾಯೆಂದು ಅವನೀಗ ಮೊರೆಯಿಡೆ | ಶೀಘ್ರದಿಂದಲಿ ಬಂದು ಕಾಯ್ದು ಕರುಣಿಯೆಂದು1 ಕಾಲದೂತರು ಅಜಾಮಿಳನೆಳೆಯಲು | ನಾಲಿಗೆಯಿಂದ ನಾರಗÀನೆನ್ನಲು || ಆಲಸ್ಯ ಮಾಡದೆ ನಿನ್ನ ದೂತರನಟ್ಟಿ | ಓಲಗ ವೈಕುಂಠವಿತ್ತ ಭಾಂದವನೆಂದು 2 ಭೂತಳದೊಳು ನಿನ್ನನು ಪೋಲುವ | ದಾತರ ನಾನೆಲ್ಲಿ ಕಾಣೆ ಶ್ವೇತವಾಹನ || ದಾತ | ವಿಜಯವಿಠ್ಠಲನಹುದೆಂದು ದೃಢವಾಗಿ 3
--------------
ವಿಜಯದಾಸ
ನಂಬಿದ್ಯಾ ಮನವೇ ನಂಬಿದ್ಯಾ ಪ ನಂಬಿದ್ಯ ಮನವೆ ಕೊಂಡಾಡಿದ್ಯ ಆನಂದ ತೀರ್ಥರ ಮತವೆಸತ್ಯವೆಂದು ಅ.ಪ ಇಂದಿರೆ ರಮಣನೆ ಪರದೈವವೆಂದು ಬಂಧನಾದಿ ಅಷ್ಟಕರ್ತೃತ್ವ ಆತನದೆಂದು ಕುಂದುಕೊರತೆಗಳಿಲ್ಲದ ಸರ್ವೇಶ ಶಾಶ್ವತನೆಂದು ನಂದ ಕಂದನು ಸಾನಂದ ಗುಣ ಪೂರ್ಣ ಸ್ವರತನೆಂದು 1 ನಾರಾಯಣನೆ ಸರ್ವೋತ್ತುಮನು ಎಂದು ಸಿರಿ ಅಜಶಿವರೆಲ್ಲ ಹರಿಯಕಿಂಕರರೆಂದು ಮುರವೈರಿ ಅಂತಃ ಬಹಿರ್ವ್ಯಾಪ್ತನು ಎಂದು ಶಾರಂಗ ಪಾಣಿಯೆ ಸರ್ವಾಂತರ್ಯಾಮಿಯೆಂದು 2 ಸಾಕಾರಸರ್ವೇಶ ನಿರ್ವಿಕಾರ ನೆಂದು ಓಂಕಾರ ವಾಚ್ಯನೆ ಸರ್ವಾಧಾರ ಸರ್ವಗನೆಂದು ಅಕಾರಾದಿ ಸರ್ವವರ್ಣಸ್ವರ ಶಬ್ದ ವಾಚ್ಯನುಎಂದು ಅಜ ಅಪ್ರಮೇಯನೆಂದೂ3 ವೇದಗೋಚರ ತಾವೇದಾತೀತನೆಂದು ವಿಧಿಸಿರಿ ವಂದಿತ ಸಾಕಲ್ಯದಿ ಅವಾಚ್ಯನೆಂದು ಮಧುಸೂಧನನು ಚಿನ್ಮಯ ವಪುಷನೆಂದು ಭೇದವಿಲ್ಲದ ರೂಪ ಗುಣಕ್ರಿಯ ಅವಯವನೆಂದು4 ನಾಶರಹಿತ ಕೇಶವನೊಬ್ಬ ಆರ್ತಿವರ್ಜಿತ ನೆಂದು ಕ್ಲೇಶರಹಿತ ವಾಸುದೇವನು ವಿಧಿನಿಷೇಧ ವರ್ಜಿತನೆಂದು ವಿಶ್ವೇಶ ಸರ್ವತಂತ್ರ ಸ್ವತಂತ್ರನು ಸಾರ್ವಭೌಮನು ಎಂದೂ ವಾಸುಕಿ ಶಯನನು ಲೀಲೆ ಗೋಸುಗ ವಿಹಾರಮಾಳ್ಪಾನೆಂದು5 ಪುರುಷ ಸೂಕ್ತ ಪ್ರತಿಪಾದ್ಯ ಅಪ್ರಾಕೃತನೆಂದು ವರಗಾಯತ್ರ್ಯಾದಿ ಸರ್ವಮಂತ್ರ ಪ್ರತಿಪಾದ್ಯನೆಂದು ಅಪವರ್ಗ ಗತಿದಾಯಕನೆಂದೂ ಪಾದ ಭಜನೆಯೆ ಸಾರವೆಂದೂ 6 ವಿರಂಚಿ ಜನಕನೆ ಸರ್ವತ್ರ ಸರ್ವರಲಿದ್ದು ಸರ್ವಕಾರ್ಯ ಕಾರ್ಯಗಳನು ಮಾಡಿ ಮಾಡಿಸುವನೆಂದು ಸರ್ವಜೀವರಿಗೆ ಕರ್ಮಗಳುಣಿಸಿ ತಾ ನಿರ್ಲೇಪನೆಂದೂ ಖರಾರಿರೂಪಗಳೆಲ್ಲ ಅನಾದಿ ಶುಕ್ಲಶೋಣಿತವರ್ಜಿತವೆಂದು7 ಲಕ್ಷ್ಮಿರಮಣನು ಪಕ್ಷಪಾತ ರಹಿತನೆಂದು ಪಕ್ಷಿವಾಹನನು ಕ್ಷರಾಕ್ಷರ ವಿಲಕ್ಷಣನೆಂದು ಲಕ್ಷ್ಮಣಾಗ್ರಜನು ಕುಕ್ಷಿಯೊಳಗೆ ಬ್ರಹ್ಮಾಂಡ ರಕ್ಷಿಪನೆಂದು ಇಕ್ಷು ಚಾಪನ ಪಿತನಚಿಂತಾದ್ಭುತನೆಂದು 8 ಹಂಸಾದಿ ಹದಿನೆಂಟು ರೂಪಗಳ ಧರಿಸಿ ಹೊರಗೆ ವ್ಯಾಪಿಸಿ ಕಂಸಾರಿಸಕಲವ ನಡಿಸೀನಡಿಸುತ ಸುಖದುಃಖಗಳ ಲೇಶಯೋಗ್ಯತೆ ಮೀರಗೊಡದಲೆ ಉಣಿಸುವನೆಂದು 9 ಪತಿತ ಪಾವನ ಪರಾವರೇಶ ತ್ರಿಗುಣವರ್ಜಿತನೆಂದು ಸತತ ಸ್ವಪ್ನ ಸುಷಪ್ತಿ ಜಾಗ್ರತೆ ಮೋಕ್ಷಾ ವಸ್ಥೆಗಳಲಿ ವಿಶ್ವ ತ್ವೆಜಸ ಪ್ರಾಜ್ಞ ತುರ್ಯರೂಪಾದಿಂದ ಮತಿ ಪ್ರೇರಕನಾಗಿ ಕಾದುಕೊಂಡು ಪೊರೆಯುವ ನೆಂದು10 ಸತ್ಯವತಿ ಸುತನು ಸತ್ಯ ಸಂಕಲ್ಪನೆಂದು ಆತನೆ ನಿತ್ಯಾನಿತ್ಯ ಜಗದೀಶನಂತರ್ಯಾಮೀಯೆಂದು ಮುಕ್ತಾ ಮುಕ್ತರ ನಾಥ ಮುಖ್ಯ ಬಿಂಬನು ಚತುರಾನನಾದಿಗಳಿಗೆಲ್ಲಾ ಎಂದು11 ಅನಿಲ ಜೀವೋತ್ತಮ ಹರಿಯ ಪ್ರಥಮಾಂಗ ಅಪರೋಕ್ಷ ಪ್ರಭುವು ಅಣು ಮಹದ್ಘನ ರೂಪ ಚರಿತ ಭಾರತೀಶ ವಾಣೀ ಪತಿಯ ಪದಾರ್ಹ ವಾತದೇವನು ಎಂದು 12 ಹನುಮ ಭೀಮ ಮಧ್ವ ಮೂರಾವತಾರದ ದೇವ ಅನುಪಮ ಬಲನಿಸ್ಸೀಮ ಪುರುಷತೇಜ ತೃಣ ಮೊದಲಾದ ಸರ್ವಜೀವರಲ್ಲಿದ್ದು ಅವರ ಹರಿಯಾಜ್ಞೆಯಂತೀವನೆಂದೂ 13 ದ್ವಾತ್ರಿಂಶಲ್ಲಕ್ಷಣ ಸಂಪನ್ನ ಗುರು ಮಧ್ವನೆಂದು ಆತನೇಲೋಕಕ್ಕೆಲ್ಲ ಗುರವು ಎಂದು ಈತ ಸಕಲಪೇಳಿದ ಮಾತಿಗೆ ಸರಿಯಿಲ್ಲವು ಎಂದು ಪ್ರೀತಿಯಿಂದಲಿ ಭಜಿಪ ಭಕ್ತಗೇನೆ ಮುಕ್ತಿಯೆಂದು 14 ಹರಿಯ ಮತವೆ ಹನುಮನ ಮತವು ಎಂದು ಸಿರಿ, ವಿರಂಚಿ ಪವನ ವಾಣಿ ಭಾರತೀಯರಲ್ಲಿ ಗರುಡ ಶೇಷ ಶಿವ ಶಕ್ರಾದಿಸರ್ವರೊಳಗೆ ತಾರತಮ್ಯ ಪಂಚ ಭೇದವು ಸತ್ಯವೆಂದು 15 ಭಾರತಿ ಪತಿಯದ್ವಾರವೆ ಹರಿಯು ಸ್ವೀಕರಿಪ ನೆಂದು ಮುರಾರಿಯ ಒಲುಮೆಗೆ ಜ್ಞಾನಯುತಭಕ್ತಿಯೆ ಸಾಧನವೆಂದು ಧರೆಯೊಳಗೆ ಹರಿನಾಮ ಸ್ಮರಣೆಗೆ ಸರಿಯಿಲ್ಲವು ಎಂದು ಮಾರಮಣನ ಅನುಗ್ರಹವೆ ಮೋಕ್ಷದಾಯಕ ವೆಂದು 16 ಅರಿಷಡ್ವರ್ಗಗಳಳಿಯುವುದೆ ವೈರಾಗ್ಯ ಮಾರ್ಗವೆಂದು ಗುರುವಿನ ಕರುಣವೆ ಜ್ಞಾನಕ್ಕೆ ಕಾರಣವೆಂದು ಸಾರಮಾರ್ಗಕ್ಕೆ ಸಾಧುಗಳ ಸಂಗವೆ ಮುಖ್ಯವೆಂದು ನೀರಜಾಕ್ಷಗೆ ಸರಿ ಮಿಗಿಲು ಇಲ್ಲವೆಂದು 17 ಜೀವ ಈಶಗೆ ಭೇದ ಈಶ ಜಡಕೆ ಭೇದ ವೆಂದು ಜೀವ ಜೀವಕೆ ಭೇದ ಜಡ ಜಡಕೆ ಭೇದವೆಂದು ಪರಿ ಪಂಚ ಭೇದವೆಂದು ಸಾವಧಾನದಿ ತಿಳಿದು ಜಗತ್ಸತ್ಯವೆಂದು ಧೃಡದಿ 18 ಸುರರೊಳುನರರೊಳು ಅಸುರರೊಳು ಎಲ್ಲೆಲ್ಲು ತಾರತಮ್ಯವು ಅನಾದಿಯಿಂದಲಿ ಇರುತಿಹುದೆಂದು ಸ್ವರೂಪಾನಂದಾವಿರ್ಭಾವವೆ ಮುಕ್ತಿಯೆಂದು ಅರವಿಂದನಾಭಗೆ ಸರ್ವರು ಸದಾದಾಸರೆಂದು 19 ಧನಕನಕ ವನಿತಾದಿಗಳೆಲ್ಲ ಹರಿಗೆ ಅರ್ಪಿತ ವೆಂದು ಏನೇನು ಮಾಡುವುದೆಲ್ಲ ಶ್ರೀ ಕೃಷ್ಣನ ಸೇವೆಯೆಂದು ದೀನ ಜನ ಮಂದಾರನಾಧೀನ ಸುಖದುಃಖಾಗಳೆಂದು ಏನು ಬೇಡದೆ ಹರಿಯ ಸತತನೆನೆವೋದೆ ಸಾಧನ ವೆಂದು20 ನಾಕೇಶ ಜಯತೀರ್ಥ ವಾಯ್ವೂಂತರ್ಗತನಾದ ಶ್ರೀಕೃಷ್ಣ ವಿಠಲಾನೆ ಮಮಸ್ವಾಮಿ ಸರ್ವಸ್ವವೆಂದು ಸಕಲ ಕರ್ಮಗಳರ್ಪಿಸುತ ತ್ರಿಕರಣ ಶುದ್ಧಿಯಿಂದಲಿ ಮಾಕಳತ್ರನ ಸತತ ಭಜಿಸುತ್ತಿರಬೇಕು ಎಂದು 21
--------------
ಕೃಷ್ಣವಿಠಲದಾಸರು
ನಮಿಸು ಮನವೆ ನೃಹರಿ ರೂಪವಾ | ರೋಗ ಹರಣನಾ ಪ ಹರಣ | ಸುರಪ ಪಾಲಕನಾ ಅ.ಪ. ಸಕಲ ಸುರರ ದನುಜ ಭಾದಿಸೆ | ಹರಿಗೆ ಮೊರೆಯಿಡೇಅಕಳಂಕ ಮಹಿಮ ಅಭಯವಿತ್ತು | ಅವರ ಕಳುಹಿದಾ 1 ಸುರರು ಪಾಡಿದರೂ 2 ಪಿತನು ತನ್ನ ಸುತನ ಭಾದಿಸೆ | ಹರಿಯೆ ಚರಣವಾಸತತ ನಮಿಸಿ ಭಜಿಸಿ ಭರದಿ | ಕಂಬದಿ ಕರೆದನೂ 3 ಭೃತ್ಯನ್ವೊಚನ ಸತ್ಯ ಮಾಡೆ | ಸ್ತಂಭವ ಸೀಳುತಾವೃತ್ಯಸ್ತವಾಗೆ ಸಕಲರ್ ಹೃದಯ | ಘಡ ಘಡೀಸುತಾ 4 ದೈತ್ಯನುದರ ಬಗೆದು ಕರುಳ | ಮಾಲೆ ಧರಿಸುತಾನೃತ್ಯವಾಡಿ ತನ್ನ ಪ್ರಳಯ ರೂಪವ ತೋರಿದಾ 5 ಅಕ್ಷರಜ್ಞೆ ಲಕುಮಿ ದೇವಿ | ಪಕ್ಷಿವಾಹನನಾಲಕ್ಷಣ ವೀಕ್ಷಿಸಿ ಕುಕ್ಷಿಯ ಬಿಡುತ | ವತ್ಸನ ನೂಕಿದಳು 6 ಮೋದ ಪಡಿಸುತಾಸದಯದಿಂದ ಗೈದ ಅವನ | ಭಕ್ತ ಶ್ರೇಷ್ಟನಾ 7 ಪತಿ 8 ಭವ ಕೂಪಾ9
--------------
ಗುರುಗೋವಿಂದವಿಠಲರು
ನಮೋ ನಮಸ್ತೇ ನರಸಿಂಹ ದೇವಾ ಸ್ಮರಿಸುವವರ ಕಾವಾ ಪ ಸುಮಹಾತ್ಮ ನಿನೆಗೆಣೆ ಲೋಕದೊಳಾವಾ ತ್ರಿಭುವನ ಸಂಜೀವಾ ಉಮೆಯರಸನ ಹೃತ್ಕಮಲದ್ಯುಮಣಿ ಮಾ ರಮಣ ಕನಕ ಸಂಯಮಿ ವರವರದಾ ಅ ಕ್ಷೇತ್ರಜ್ಞ ಕ್ಷೇಮಧಾಮ ಭೂಮಾ ದಾನವ ಕುಲಭೀಮಾ ಸನ್ನುತ ಬ್ರಹ್ಮಾದಿ ಸ್ತೋಮಾ ಸನ್ಮಂಗಳ ನಾಮಾ ಚಿತ್ರ ಮಹಿಮನಕ್ಷತ್ರನೇಮಿಸ ರ್ವತ್ರಮಿತ್ರ ಸುಚರಿತ್ರ ಪವಿತ್ರ 1 ಅಪರಾಜಿತ ಅನಘ ಅನಿರ್ವಿಣ್ಣ ಲೋಕೈಕ ಶರಣ್ಯ ಶಫರಕೇತು ಕೋಟಿಲಾವಣ್ಯ ದೈತ್ಯೇಂದ್ರ ಹಿರಣ್ಯಕ ಶಿಪುಸುತನ ಕಾಯ್ದಪೆನೆನುತಲಿ ನಿ ಷ್ಕಪಟ ಮನುಜಹರಿವಪುಷ ನೀನಾದೆ 2 ತಪನ ಕೋಟಿ ಪ್ರಭಾವ ಶರೀರಾ ದುರಿತೌಘವಿದೂರಾ ಪ್ರಪಿತಾಮಹ ಮಂದಾರ ಖಳವಿಪಿನ ಕುಠಾರಾ ಕೃಪಣಬಂಧು ತವ ನಿಪುಣತನಕೆ ನಾ ನುಪಮೆಗಾಣೆ ಕಾಶ್ಯಪಿವರವಾಹನಾ 3 ವೇದವೇದಾಂಗವೇದ್ಯಾ ಸಾಧ್ಯ ಅಸಾಧ್ಯ ಶ್ರೀದ ಮುಕ್ತಾಮುಕ್ತರಾರಾಧ್ಯಾ ಅನವದ್ಯ ಮೋದಮಯನೆ ಪ್ರಹ್ಲಾದವರದ ನಿ ತ್ಯೋದಯ ಮಂಗಳ ಪಾದಕಮಲಕೆ 4 ಅನಿಮಿತ್ತ ಬಂಧು ಜಗನ್ನಾಥ ವಿಠಲ ಸಾಂಪ್ರತ ನಿನಗೆ ಬಿನ್ನೈಸುವೆ ಎನ್ನಯ ಮಾತಾ ಲಾಲಿಸುವುದು ತಾತಾ ಗಣನೆಯಿಲ್ಲದವ ಗುಣವೆನಿಸಿದೆ ಪ್ರತಿ ಕ್ಷಣಕೆ ಕಥಾಮೃತ ಉಣಿಸು ಕರುಣದಿ 5
--------------
ಜಗನ್ನಾಥದಾಸರು
ನಮೋ ನಮೋ ನಾರದವಂದ್ಯ ನಮೋ ನಮೋ ನಿಗಮನಿಕರವೇದ್ಯ ಪ ಭವಭಯರೋಗವೈದ್ಯ ಅ.ಪ ಹರಿಚರನಾಗಿ ವೇದವ ತಂದೆ ಹರಿಪತಿಯನು ಮೇಲಾಂತು ನಿಂದೆ ಹರಿವಂಶಜರನೆಲ್ಲರ ತರಿದೆ ಹರಿವಾಹಿನಿಯ ನೀನಾಳ್ದೆ ಹರಿಸುತಗೊಲಿದು ಹೆಂಗಳ ವ್ರತಕೆಡಿಸಿದೆ ಹರಿವಾಹನ ಜಯತು 1 ಶಿವವಾಹನ ಧ್ವಜರೂಪ ಶಿವಧರನೆನಿಪ ಯುಗ ಪ್ರತಾಪ ಶಿವಭಕ್ತನ ಕೊಂದೆ ಶಿವನ ರೂಪಾದೆ ನೀಂ ಪದಕಡಿಯನಿಟ್ಟೆ ಶಿವವೈರಿಯ ರಿಪುವೆನಿಸಿದೆ ಶಿವನ ಬಿಲ್ಲನು ಬಾಗಿಸಿ ಮುರಿದೆ ಶಿವನ ತುಳಿದೆ ನೀ ಶಿವನಿಗೆ ಸಖನಾದೆ ಶಿವವಾಹನ ಜಯತು2 ಸುರಜ್ಯೇಷ್ಠನಿಗೆ ಶ್ರುತಿಯನಿತ್ತೆ ಸುರರಿಗೆ ಸುಧೆಯನು ಕರೆದೆರೆದೆ ಸುರನಗವರ್ಣ ಹಿರಣ್ಯಾಕ್ಷನ ಕೊಂದೆ ಸುರಸಿಂಧುವಪಡೆದೆ ಸುರಭಿಯ ನೆವದಿ ಭೂಪರನೆಲ್ಲ ತರಿದೆ ಸುರರಿಪು ದಶವದನನ ತರಿದೆ ಸುರನಗವರ್ಣ ಸರ್ವಜ್ಞ ಹಯಾರೂಢ ಸುರಪುರ ಲಕ್ಷ್ಮೀಶ 3
--------------
ಕವಿ ಲಕ್ಷ್ಮೀಶ
ನಮೋ ನಮೋ ನಾರಾಯಣ ನಮೋ ಶ್ರುತಿ ನಾರಾಯಣ ನಮೋ ಬಾದರಾಯಣ ನರನ ಪ್ರಾಣ ಪ ಶಿವನ ಮೋದದಲಿ ಪಡೆದೆ ಶಿವರೂಪದಲಿ ನಿಂದೆ ಶಿವನೊಳಗೆ ಏರಿದೆ ಶಿವನಿಗೊಲಿದೆ ಶಿವಗೆ ನೀ ಮಗನಾದೆ ಶಿವ ತಾತನೆನೆಸಿದೆ ಶಿವನ ಮಗನಾ ಪಡೆದೆ ಶಿವನ ಕಾಯ್ದೆ1 ಶಿವಗೆ ಸಹಾಯಕನಾದೆ ಶಿವನ ಕಂಗಡಿಸಿದೆ ಶಿವನ ಧನುವನು ಮುರಿದೆ ಶಿವನೊಲಿಸಿದೆ ಶಿವನ ಜಡ ಮಾಡಿದೆ ಶಿವನ ಒಡನೆ ಬಂದೆ ಶಿವಮುನಿಗೆ ಉಣಿಸಿದೇ ಕೇಶವನೆನಿಸಿದೇ 2 ಶಿವನ ಜಡೆಯೊಳಗಿದ್ದ ಶಿವಗಂಗೆಯ ಪೆತ್ತೆ ಶಿವನ ಕೂಡಲಿ ಕಾದಿದವನ ಭಾವ ಶಿವ ಭಕ್ತನ್ನ ನಿನ್ನವನಿಂದ ಕೊಲ್ಲಿಸಿದೆ ಶಿವನ ಶೈಲವನೆತ್ತಿದವನ ವೈರಿ3 ಶಿವ ನುಂಗಿದದ ನುಂಗಿದವನ ಒಡನಾಡುವ ಶಿವ ಪರಾಶಿವ ನಿನ್ನ ಶಿವ ಬಲ್ಲನೇ ಯವೆ ಇಡುವನಿತರೊಳಗೆ ಧವಳ ಹಾಸಾ4 ಶಿವನ ಮೇಲಿದ್ದ ಸಹಭವೆ ರಮಣ ಸರ್ವದಾ ಶಿವನೊಳಗಿಳಿದ ಶಿಷ್ಯನಿವ ಹರಾತೀ ತಲ್ಪ ಶಿವ ಸಮಾನಿಕ ರೂಢ ಶಿವನ ಮನೆ ತೊಲಗಿಸುವ ಶಿವ ಬಾಂಧವಾ 5 ಶಿವನ ಧೊರಿಯೆ ಜ್ಞಾನ ಶಿವ ಹಚ್ಚುವದೆ ಕೊಡು ಶಿವಮಣಿ ಎನಿಸುವ ಸ್ತವ ಪ್ರಿಯನೇ ವಾಹನ ವೈರ ಶಿರವ ತರಿಸಿದೆ ದೇವ ಶಿವ ಪ್ರತಿಷ್ಠಿಸಿದೆ ಶಿವಗೆ ಕಾಣಿಸದಿಪ್ಪೆ6 ಶಿವನ ಸೋಲಿಸಿದವನ ಜವಗೆಡಿಸಿದೆ ಶಿವನು ಕುದರಿಯ ಹೆರವ ಅವನು ಕಾಯಿದ ಗೋವ ಶಿವನವತಾರ ಶಸ್ತ್ರವನು ಹಳಿದೆ 7 ಶಿವನಧರ್Àನಾಗಿ ದಾನವನು ಕೊಂದ ಮಹಿಮಾ ಶಿವಋಷಿ ಪೇಳಿದ ಯುವತಿ ರಮಣಾ ಶಿವನ ವೀರ್ಯವ ಧರಿಸಿದವನ ಮುಖದಲಿ ಉಂಬ ಅವರ ಬೆಂಬಲವೇ ಯಾದವಕುಲೇಶಾ 8 ಶಿವಗೆ ತ್ವಂಚ ಬಾಹುಯೆಂದು ಪೇಳಿ ಮೋಹ ದಿವಿಚಾರಿಗಳ ತಮಸಿಗೆ ಹಾಕುವೆ ಶಿವಮೂರುತಿ ನಮ್ಮ ವಿಜಯವಿಠ್ಠಲರೇಯ ಶಿವನಾಳು ಮಾಡಿ ಆಳುವ ದೈವವೇ9
--------------
ವಿಜಯದಾಸ
ನರಸಿಂಹ ಪಾಹಿ ಲಕ್ಷ್ಮೀ ನರಸಿಂಹ ಪ ನರಸಿಂಹ ನಮಿಪೆ ನಾ ನಿನ್ನ ಚಾರುಚರಣಕಮಲಕೆ ನೀ ಎನ್ನ ಕರವ ಪಿಡಿದು ನಿಜ ಶರಣನೆಂದೆನಿಸೊ ಭಾ ಸುರ ಕರಣಾಂಬುಧೆ ಗರುಡವಾಹನ ಲಕ್ಷ್ಮೀ ಅ ತರಳ ಪ್ರಹ್ಲಾದನ್ನ ನುಡಿಯಾ ಕೇಳಿ ತ್ವರಿತದಿ ಬಂದ್ಯೊ ಎನ್ನೊಡೆಯ ನಾನು ಕರುಣಾಳೊ ಭಕ್ತರ ಭಿಡೆಯ ಮೀರ ಲರಿಯೆ ಎಂದೆಂದು ಕೆಂಗಿಡಿಯ ಅಹ ಭರದಿಂದುಗುಳುತ ಬೊಬ್ಬಿರಿದು ಬೆಂಬತ್ತಿಕ ರ್ಬುರ ಕಶ್ಯಪುವಿನ ಹಿಂಗುರುಳ ಪಿಡಿದೆ ಲಕ್ಷ್ಮೀ 1 ಪ್ರಳಯಾಂಬುನಿಧಿ ಘನಘೋಷದಂತೆ ಘುಳಿ ಘುಳಿಸುತಲಿ ಪ್ರದೋಷ ಕಾಲ ತಿಳಿದು ದೈತ್ಯನ ಅತಿರೋಷದಿಂದ ಪ್ಪಳಿಸಿ ಮೇದಿನಿಗೆ ನಿದೋಷ ಅಹ ಸೆಳೆಸೆಳೆಯುತ ಚರ್ಮಸುಲಿದು ಕೆನ್ನೆತ್ತರೋ ಕುಳಿಯನಾಡಿದೆ ದಿಶಾವಳಿಗಳೊಳಗೆ ಲಕ್ಷ್ಮೀ 2 ಕ್ರೂರ ದೈತ್ಯನ ತೋರಗರುಳಾ ತೆಗೆ ದ್ಹಾರ ಮಾಡಿದೆ ನಿಜಕೊರಳ ಕಂಡು ವಾರಿಜಾಸನ ಮುಖದಯರ್ಕಳ ಪುಷ್ಪ ಧಾರಿಗೆರೆದು ವೇಗ ತರಳಾ ಆಹ ಸೂರಿ ಪ್ರಹ್ಲಾದಗೆ ತೋರಿ ತವಾಂಘ್ರಿ ಸ ರೋರುಹಾವನು ಕಾಯ್ದೆ ಕಾರಣ್ಯನಿಧಿ 3 ಜಯಜಯ ದೇವವರೇಣ್ಯ ಮಹ ದ್ಭಯ ನಿವಾರಣನೆ ಅಗಣ್ಯ ಗುಣಾ ಶ್ರಯ ಘೋರ ದುರಿತಾರಣ್ಯ ಧನಂ ಜಯ ಜಗದೇಕ ಶರಣ್ಯ ಅಹ ಲಯವಿವರ್ಜಿತ ಲೋಕ ತ್ರಯ ವ್ಯಾಪ್ತ ನಿಜಭಕ್ತ ಪ್ರಿಯ ಘೋರಮಯ ಹರ ದಯ ಮಾಡೆನ್ನೊಳು ಲಕ್ಷ್ಮೀ 4 ಕುಟಲ ದ್ವೇಷದವನು ನೀನಲ್ಲ ನಿನ್ನಾ ರ್ಭಟಕಂಜಿದರು ಸುರರೆಲ್ಲ ನರ ನಟನೆ ತೋರಿದ್ಯೋ ಲಕ್ಷ್ಮೀನಲ್ಲ ನಾ ಪಾ ಸಟಿ ಕಾಣೆನಪ್ರತಿಮಲ್ಲ ಅಹ ವಟಪತ್ರಶಯನ ಧೂ ರ್ಜಟಿವಂದ್ಯ ಜಗನ್ನಾಥ ವಿಠಲ ಕೃತಾಂಜಲಿಪುಟದಿ ಬೇಡುವೆ ಲಕ್ಷ್ಮೀ5
--------------
ಜಗನ್ನಾಥದಾಸರು
ನಲ್ಲೆಯರು ನಮೋ ಎಂಬೆವು ಸುರರಎಲ್ಲರ ಬಲಗೊಂಬೆವು ಪ. ಚಲ್ವೆ ಕಂಗಳೆಯರಿಗೆ ಹೊಲ್ಲವು ಎನುತಿರೆಹೊಲ್ಲ ತನವೆಲ್ಲ ಹೊರಗ್ಹಾಕಿ ಬಾಹೊಅ.ಪ. ಅಗಣಿತ ಮಹಿಮ ಹೌದೆಂದುಅಗಣಿತ ಮಹಿಮಎನುತಿರೆಮಗನ ಮುಂದಾಗಿ ಬಲಗೊಂಬೆ1 ಸಾಗರಶಯನಗೆ ಆಗುವ ಹಾಸಿಗೆ ಬ್ಯಾಗನೆ ವರವ ಕೊಡುವೋನುಬ್ಯಾಗನೆ ವರವ ಕೊಡುವ ನಾಗೇಂದ್ರನಮೋ ಎಂಬÉ ನಮ್ಮ ಗೆಲಿಸೆಂದು 2 ನಂದಿವಾಹನ ಶಿವನ ಮುಂದಾಗಿ ಬಲಗೊಂಬೆ ಇಂದಿಗೆ ಪಂಥಗೆಲಿಸೆಂದುಇಂದಿಗೆ ಪಂಥಗೆಲಿಸೆಂದು ಬ್ರಹ್ಮನ ಕಂದನ ಮೊದಲೆ ಬಲಗೊಂಬೆ 3 ಸೌಪರ್ಣವಾರುಣಿ ಅಪರ್ಣ ದೇವಿಯರು ಸೌಕರ್ಯದಿಂದ ನಮ್ಮ ಪಂಥಸೌಕರ್ಯದಿಂದ ನಮ್ಮ ಪಂಥಗೆಲಿಸೆಂದುಕರವ ಮುಗಿವೆವು ಕ್ಷಣಕ್ಕೊಮ್ಮೆ 4 ಇಂದು ರಾಮೇಶನನುಗಾಲ ನೆನೆಯುತ ಮುಂದಕ್ಕೆ ಹೆಜ್ಜೆನಿಡುವೋಣ5
--------------
ಗಲಗಲಿಅವ್ವನವರು