ಒಟ್ಟು 1652 ಕಡೆಗಳಲ್ಲಿ , 100 ದಾಸರು , 1233 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಷ್ಟೋ ಆಪರಾಧಿ ಯಾವುದು ಬಟ್ಟೆಯೋ ಕರುಣಾಬ್ಧಿ ಪ. ದುಷ್ಟರಾರು ಜನ ಒಟ್ಟುಗೂಡಿ ಎನ್ನ ಮೆಟ್ಟಿ ಕುಟ್ಟಿ ಪುಂಡಿಗುಟ್ಟುವರೈ ಹರಿ ಅ.ಪ. ಲೇಶ ಪುಣ್ಯವಿಲ್ಲ ಪಾಪದ ರಾಶಿ ಬೆಳೆಯಿತಲ್ಲ ಆಶಾವಶ ಹರಿದಾಸನೆಂದೆನಿಸಿದೆ ದೂಷಣ ಜನರ ಶಭಾಸಿಗೆ ಮೆಚ್ಚಿದೆ1 ಕುಲಕಲ್ಮಷ ಬಹಳ ದೇಹದಿ ನೆಲೆಸಿತು ಶ್ರೀಲೋಲ ಜಲಜನಾಭ ನಿನ್ನೊಲುಮೆಯೆ ಮುಖ್ಯವು ಕುಲಕೆಟ್ಟ ಅಜಮಿಳ ಪಾವನನಾದ 2 ಹೀನರೈವರ ಸಂಗದಿಂದಲೆ ಹಾನಿಯಾದೆನೊ ರಂಗ ಪ್ರಾಣವು ನಿನ್ನಾಧೀನವಾದ ಮೇಲೆ ನೀನೆ ಗತಿ ಲಕ್ಷ್ಮೀನಾರಾಯಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಏಕೆ ನಿರ್ಧಯವೊ ಓ ರಾಮ ಶ್ರೀ ರಘುರಾಮ ಪ ಸ್ಮರಿಸಿ ಸ್ಮರಿಸಿ ನಾನು ಕರಗಿ ಬೆಂಡಾದೆನೊ ಕರುಣವಿಲ್ಲವೆ ನಿನಗೆ 1 ಪಾವನ ಚರಿತನೆ ಪಾವನ ಮಹಿಮನೆ ಪಾವನ ರೂಪನೆ ಬಾ 2 ಮಾನವ ಸೇವ್ಯನೆ ಧೇನುಪುರೀಶನೆ ಬಾ ಶ್ರೀ ರಘುರಾಮ ಧೇನುಪುರೀಶನೆ 3
--------------
ಬೇಟೆರಾಯ ದೀಕ್ಷಿತರು
ಏತಕೆ ಒಣಭ್ರಾಂತಿ ತಿಳಿಯದು ಮೂರುದಿನದ ಸಂತಿ ನೀತಿಗೆಟ್ಟು ಸತಿಮೋಹದಿ ಕುಳಿತೆಮದೂತರೆಳೆಯುವಾಗೇನಂತಿ ಪ ಬರುವಾಗೊರ್ವಬಂದಿ ಬರುತಲೆ ಮಂದಿ ಮಕ್ಕಳೆಂದಿ ಇರು ಇರುತೆಲ್ಲ ನನ್ನದೆಂದಿ ಮರೆವಿನ ಆಲಯದೊಳು ನಿಂದಿ ಕರುಣವಿಲ್ಲದೆತುಸು ಹೆಡತಲೆಮೃತ್ಯು ಮುರಿದು ತಿನ್ನುವಾಗ್ಯಾರಿಲ್ಲ ಹಿಂದೆ 1 ತನುಜನರು ಇವರು ಧನಕನಕಿರುವತನಕ ಹಿತರು ಜನಕಜನನಿಯರು ಕೊನೆಗೆ ಸಂಗಡ ಬರರ್ಯಾರು ಕನಿಕರವಿಲ್ಲದೆ ಕಾಲದೂತರು ಘನಬಾಧೆಪಡಿಸಲು ಬಿಡಿಸರೋರ್ವರು 2 ಭೂಮಿ ಸೀಮೆಯೆಲ್ಲ ಈ ಮಹರಾಜ್ಯ ಭಂಡಾರ ಸುಳ್ಳು ಪಾಮರ ಸಂಸಾರ ಕಾಮಿಸಿ ಕೆಡಬೇಡೇಲೆ ಮಳ್ಳ ಕಾಮಜನಕ ನಮ್ಮ ಸ್ವಾಮಿ ಶ್ರೀರಾಮನ ನಾಮಭಜಿಸಿ ಭವಗೆಲಿದು ನೀ ಬಾಳೋ3
--------------
ರಾಮದಾಸರು
ಏತಕೆ ಸಂತತ ಚಿಂತಿಸುವೆ ಪ ಕೋತಿಗೆ ಮದ್ದಿಕ್ಕಿದ ರೀತಿಲಿ ಮನವೆಅ.ಪ ಹಾನಿ ವೃದ್ಧಿಗಳು ತಾನಾಗಿ ಬರುವುದು ಏನೇನು ಮಾಡಲು ಬಿಡಲೊಲ್ಲದು ಜ್ಞಾನವಿಲ್ಲದೆ ವೃಥಾ ಧೇನಿಸಿ ಧೇನಿಸಿ 1 ದೇಹಸಂಬಂಧಿಗಳ ಮೋಹ ಪಾಶಕ್ಕೆ ಸಿಕ್ಕಿ ಸಾಹಸ ಮಾಡುವುದೇನು ಫಲ ಊಹಿಸಿ ನೋಡಲು ಭ್ರಾಂತಿಯದಲ್ಲವೆ 2 ಪೂರ್ವ ಕರ್ಮಾನುಸಾರ ನಡೆಸುವನು ಗರ್ವವಿರಹಿತನು ಗುರುರಾಮವಿಠಲನು 3
--------------
ಗುರುರಾಮವಿಠಲ
ಏತರಿಂದ ಬ್ರಾಹ್ಮಣಿಕೆ ಪರಮಾತ್ಮನೆತಾನೆಂದು ತಿಳಿಯದ ನರನಲಿ ಪ ಜನಿವಾರ ನೋಡಿ ಬ್ರಾಹ್ಮಣ ನೆಂದರೆ ಸು-ಮ್ಮನೆ ಮರಕೆ ಬಳ್ಳಿ ಸುತ್ತಿಲ್ಲವೆಹಣೆಯ ಬಟ್ಟದ ನೋಡಿ ಬ್ರಾಹ್ಮಣ ನೆಂದರೆಹಾದಿ ಕಲ್ಲಿಗೆ ಸುಣ್ಣ ಬರೆದಿಲ್ಲವೆ1 ಜುಟ್ಟು ನೋಡಿ ಇವ ಬ್ರಾಹ್ಮಣ ನೆಂದರೆಜುಟ್ಟಿನ ಗುಬ್ಬಿಯು ತಾನಿಲ್ಲವೆಉಟ್ಟ ಧೋತ್ರವ ನೋಡಿ ಬ್ರಾಹ್ಮಣ ನೆಂದರೆಉಟ್ಟುದಿಲ್ಲವೆ ಮನೆಯ ನಡುಗಂಬ 2 ಬ್ರಾಹ್ಮಣನಾದರೆ ಬ್ರಹ್ಮ ಸರ್ವವು ಆಗಿಬ್ರಹ್ಮವಖಂಡದಿ ಭೇದವಿಲ್ಲದೆಬ್ರಹ್ಮ ಚಿದಾನಂದ ಗುರುನಾಥನಾಗಿಯೆಬ್ರಹ್ಮವ ಕಂಡವನೀಗ ಬ್ರಾಹ್ಮಣ3
--------------
ಚಿದಾನಂದ ಅವಧೂತರು
ಏನ ಪೇಳಲಿ ಹರಿಯ ವ್ಯಾಪಾರ ಮಹಿಮೆ ಪ ಆನಂದ ಆಶ್ಚರ್ಯ ಆಗುವುದು ಎನಗೆ ಅ.ಪ. ಮರಳಿಗೋಸುಗ ಪೋಗೆ ಮಾಣಿಕ್ಯ ದೊರೆಯಿತು ಅಮೃತ ಕಳಶವಾಯ್ತು ಇರುಳು ಕತ್ತಲೆಯೊಳಗೆ ಮಣಿದೀಪ ಮಿರುಗಿತು ಕಮಲ ಮಾಲಿಕೆಯಾಯ್ತು 1 ಪಾಪ ಕಾರ್ಯವ ಕೊಳಲು ಪುಣ್ಯ ಸಾಧನವೀವ ಪಾಪ ಸಾಧನವೀವ ಪುಣ್ಯ ಕಾರ್ಯದಲಿ ಪಾಪ ಬೀಜದ ಪುಣ್ಯ ಪುಣ್ಯ ಬೀಜದ ಪಾಪ ಶ್ರೀಪತಿಯ ವ್ಯಾಪಾರ ಈ ಪರಿಯಲಿಹುದು2 ಮೃಗಯಾ ವಿಹಾರದಲಿ ಮನವಿಟ್ಟು ನಾ ಬರಲು ಮೃಗಲಾಂಛನವನ ಕಳೆಯ ಮೀರುವಂಥ ಮಿಗೆ ತೇಜದೀ ಮಗುವು ಎನಗೆ ದೊರೆತುದು ನರ ಮೃಗರೂಪಿ ಕರಿಗಿರೀಶನ ಕರುಣವಿಲ್ಲದಲೆ 3
--------------
ವರಾವಾಣಿರಾಮರಾಯದಾಸರು
ಏನಂತ ನರನೆನ್ನಬೇಕೋ ಜಾನಕೀಶನ ಧ್ಯಾನ ಮನದೊಳಿಲ್ಲದವಗೆ ಪ ಸುಕೃತ ಒಡಗೂಡಿ ಮಾನವನಾದದ್ದು ಖೂನವಿನತಿಲ್ಲದೆ ಜ್ಞಾನಶೂನ್ಯನಾಗಿ ಶ್ವಾನನಂದದಿ ಕೂಗಿ ಹೀನಭವಕೆ ಬಿದ್ದು ನರಕಕ್ಹೋಗುವನಿಗೆ 1 ತಾನಾರೆಂಬ ವಿಚಾರವು ಇಲ್ಲದೆ ಏನೇನು ಸುಖವಿಲ್ಲದ್ಹೇಯಸಂಸಾರದ ಕಾನನದೊಳು ಬಿದ್ದು ಕುನ್ನಿಯಂದದಿ ಮಹ ಜಾಣರ ಜರೆಯುತ ಜವಗೀಡಾಗುವನಿಗೆ 2 ಹೇಸಿಪ್ರಪಂಚದ ವಾಸನ್ಹಿಡಿದು ಹಿಂದ ಕ್ಕೇಸೇಸು ಜನಮದಿ ಘಾಸಿಯಾದಂಥಾದ್ದು ಸೋಸಿಲಿಂ ತಿಳಕೊಂಡು ದಾಸಾನುದಾಸರ ದಾಸನಾಗದೆ ಕಾಲಪಾಶಕ್ಹೋಗುವನಿಗೆ 3 ಮಿಥ್ಯೆ ಕಾಣುವುದೆಲ್ಲ ನಿತ್ಯವಲ್ಲೆನ್ನುತ ಸತ್ಯವೃತ್ತಿ ತನ್ನ ಚಿತ್ತದೋಳ್ಬಲಿಸಲು ನಿತ್ಯ ಸುಖವನೀವ ಉತ್ತಮವಾದಂಥ ಹೊತ್ತನು ಕಳಕೊಂಡು ಮೃತ್ಯುವಶನಾಗುವಗೆ 4 ಸುಮನಸಕಲ್ಪದ್ರುಮ ತಂದೆ ಶ್ರೀರಾಮ ನಮಿತ ಚರಣ ಕಂಡು ನಮಿಸಿ ಪ್ರಾರಬ್ದವ ಕ್ರಮದಿ ಗೆಲಿದು ನಿಜ ವಿಮಲಪದ ಪಡೆವ ಸಮಯವನರಿಯದೆ ಯಮಲೋಕ ಸೇರುವಗೆ 5
--------------
ರಾಮದಾಸರು
ಏನಂತೆನ್ನಲಿ ಎನ್ನನುತಾಪ ನೀನಾದ್ದರಿಂದೆಂಬೆ ಗೈಯದೆ ಲೋಪ ಪ. ಕಣ್ಣೆದುರಾದ ಕಂದರ್ಪಲಾವಣ್ಯ ಸನ್ನುತ ಸಕಲ ಲೋಕೈಕಶರಣ್ಯ ಪುಣ್ಯಪುರುಷ ಸುಪ್ರಸನ್ನ ಕೇಳಮ್ಮ 1 ಕೆಂದಾವರೆಯಂತೆ ಚೆಂದುಳ್ಳ ಚರಣ ಸೌಂದರ್ಯಸಾರ ಪೀತಾಂಬರಾವರಣ ವಂದನೀಯ ಪೂರ್ಣಾನಂದ ಮುಕುಂದ ಸಂದೇಹವಿಲ್ಲ ತೋರಿದನು ಗೋವಿಂದ 2 ಶಂಕ ಚಕ್ರ ಗದಾ ಪಂಕಜಪಾಣಿ ಶಂಕರನುತ ಶ್ರೀವತ್ಸಾಂಕಿತ ಜನನಿ ಬಿಂಕದ ಕೌಸ್ತುಭಾಲಂಕೃತಗ್ರೀವ ವೆಂಕಟೇಶ ನಿಷ್ಕಳಂಕ ಕೇಳವ್ವ 3 ಚಂದ್ರಶತಾನನ ಕುಂದಸುಹಾಸ ಇಂದಿರಾ ಹೃದಯಾನಂದ ಪರೇಶ ಸುಂದರ ನಳಿನದಳಾಯತನಯನ ಮಂದರಧಾರ ಧರಾಧರಶಯನ 4 ಲಕ್ಷ್ಮೀನಾರಾಯಣ ಸುಕ್ಷೇಮಧಾಮ ಅಕ್ಷರಾರ್ಚಿತ ನೀಲನೀರದಶ್ಯಾಮ ಪಕ್ಷೀಂದ್ರವಾಹನ ಪಾವನಚರಿತ ಸಾಕ್ಷಿರೂಪ ಸಚ್ಚಿದಾನಂದಭರಿತ 5
--------------
ತುಪಾಕಿ ವೆಂಕಟರಮಣಾಚಾರ್ಯ
ಏನಂತೆನ್ನಲಿ ಎನ್ನನುತಾಪ ನೀನಾದ್ದರಿಂದೆಂಬೆ ಗೈಯದೆ ಲೋಪ ಪ. ಕಣ್ಣೆದುರಾದ ಕಂದರ್ಪಲಾವಣ್ಯ ಸನ್ನುತ ಸಕಲ ಲೋಕೈಕಶರಣ್ಯ ಪುಣ್ಯಪುರುಷ ಸುಪ್ರಸನ್ನ ಕೇಳಮ್ಮ 1 ಕೆಂದಾವರೆಯಂತೆ ಚೆಂದುಳ್ಳ ಚರಣ ಸೌಂದರ್ಯಸಾರ ಪೀತಾಂಬರಾವರಣ ವಂದನೀಯ ಪೂರ್ಣಾನಂದ ಮುಕುಂದ ಸಂದೇಹವಿಲ್ಲ ತೋರಿದನು ಗೋವಿಂದ 2 ಶಂಕ ಚಕ್ರ ಗದಾ ಪಂಕಜಪಾಣಿ ಶಂಕರನುತ ಶ್ರೀವತ್ಸಾಂಕಿತ ಜನನಿ ಬಿಂಕದ ಕೌಸ್ತುಭಾಲಂಕೃತಗ್ರೀವ ವೆಂಕಟೇಶ ನಿಷ್ಕಳಂಕ ಕೇಳವ್ವ 3 ಚಂದ್ರಶತಾನನ ಕುಂದಸುಹಾಸ ಇಂದಿರಾ ಹೃದಯಾನಂದ ಪರೇಶ ಸುಂದರ ನಳಿನದಳಾಯತನಯನ ಮಂದರಧಾರ ಧರಾಧರಶಯನ 4 ಲಕ್ಷ್ಮೀನಾರಾಯಣ ಸುಕ್ಷೇಮಧಾಮ ಅಕ್ಷರಾರ್ಚಿತ ನೀಲನೀರದಶ್ಯಾಮ ಪಕ್ಷೀಂದ್ರವಾಹನ ಪಾವನಚರಿತ ಸಾಕ್ಷಿರೂಪ ಸಚ್ಚಿದಾನಂದಭರಿತ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಏನನಾದರೂ ಬರೆಯೋ ಎನ್ನ ಪಣೆಯೊಳಗೆನೀನಿಷ್ಟ ಬರೆಯಬೇಡವೋ ಮೂಢ ವಿಧಿಯೇ ಪ ಬಾಲತನದಲಿ ಬಹಳ ಭಾಗ್ಯ ಸಂಪದಗಳನುಮೇಲೆ ಯೌವನ ಬರಲು ಬಡತನವನುಲೋಲಾಕ್ಷಿಯರಿಗೆ ಮರುಳಾಗಿ ಸಂಚರಿಪುದನುಹಾಲು ಅನ್ನವನಿಕ್ಕಿದವರಿಗೆ ಮುನಿವುದನು1 ಮುಪ್ಪಿನಲಿ ಯೌವನದ ಸ್ತ್ರೀಯ ಸಂಭೋಗವನುತುಪ್ಪವಿಲ್ಲದ ಭೋಜನದ ರುಚಿಯನುಅಪ್ಪುತಿಹ ಮಕ್ಕಳಿಲ್ಲದ ಕುಸಂಸಾರವನುಕಪ್ಪುಗೊರಲನ ನೆನೆಯದೇ ದಿನವ ಕಳೆವುದನು 2 ಪರರೊಡವೆಯನು ತಿಂದ ಶರೀರವನೆ ಪೊರೆವುದನುಪರರ ನಿಂದೆಯ ಮಾಡಿ ಬಾಳುವುದನುವರ ಕೆಳದಿ ರಾಮೇಶ ನಿನ್ನ ಪಾದಾಂಬುಜವಸ್ಮರಿಸಿದಂತನ್ಯಮತದಲ್ಲಿ ಸಂಭವಿಪುದನು 3
--------------
ಕೆಳದಿ ವೆಂಕಣ್ಣ ಕವಿ
ಏನಯ್ಯ ಧೊರೆಯೆ-ನಿನಗಾನಂದವೆ ಧೊರೆಯೇ ಪ ನುಡಿನೀನೊಲಿದಾಲಿಪುದುಅ.ಪ. ಜಾತಿಧರ್ಮವಿಲ್ಲಾ-ಶಾಸ್ತ್ರದರೀತಿನಡತೆಯಿಲ್ಲ ಮಾತಿದುಪುಸಿಯಲ್ಲಾ-ಮಾನದ-ಭೀತಿಯುಮೊದಲಿಲ್ಲಾ ನೀತಿಯನರಿಯದ-ಕೋತಿಗಳಂದವ ಜಾತಿಯ ಜನರೊಳು ಮಾತಿನವಾಶಿಯಿಲ್ಲ 1 ದುರ್ಜನರು ಬೆರೆದು-ದೋಷವಿ ವರ್ಜಿತರನ್ನು ಜರಿದು ಲಜ್ಜೆಯನೆರೆತೊರೆದು ಗರ್ವದಿ ಗರ್ಜಿಸಿ ಮೊರೆದು ಈ ಜಗದೊಳಗಿಹ ಸಜ್ಜನರಿಗೆ ಕುಲಕಜ್ಜಳರವ ಮತಿ ಗುಜ್ಜುಗಿಸುತ್ತಿಹ 2 ಗಂಡನ ಬಿಟ್ಟಿಹರು-ಗರತಿಯ-ಕಂಡು ನಗುತ್ತಿಹರು ಮಿಂಡರ ಬೆರೆದಿಹರು-ಮೇಲತಿ-ದಿಂಡೆಯರಾಗಿಹರು ಚಂಡಿಸುತಿರ್ಪರೋ 3 ಕೇಳುಹಂದೆಯಾಳು-ಕ್ಲೇಶವ ಪೇಳಲು ಮತಿತಾಳು ಕೀಳು ಜನರ ಬಾಳು ಕಿವಿಯಲ್ಲಿ ಕೇಳಬಹುದೆ ಪೇಳು ಜನರೂಳಿಗ ಬಲುಘನ 4 ಧರೆಯೊಳಧಿಕವಾದ ಶ್ರೀ ಪುಲಿ-ಗಿರಿಯೊಳು ನೆಲೆಯಾದ ಸಿರಿವರ ನಿಜಪಾದ-ಸೇವೆಯ-ಕರುಣಿಸು ಬಹುಮೋದ ಶರಣಾಭರಣ ನಿಜ ಕರುಣವ ತೋರಿಸು ವರದ ವಿಠಲಧೊರೆ ವರದದಯಾನಿಧೆ 5
--------------
ಸರಗೂರು ವೆಂಕಟವರದಾರ್ಯರು
ಏನಾದರೇನು ಮೋಕ್ಷವಿಲ್ಲ ಜ್ಞಾನವಿಲ್ಲದೆ ಪÀ ವೇದ ಓದಿದರೇನು ಶಾಸ್ತ್ರ ನೋಡಿದರೇನು | ಕಾದಿ ಕಾದಾಡಿ ಗೆದ್ದರೇನು | ಜ್ಞಾನವಿಲ್ಲದೆ 1 ಕಾನನ ಸೇರಿದರೇನು | ಕಾಶಿ ಪೀತಾಂಬರ ಉಟ್ಟರೇನು, ಜ್ಞಾನವಿಲ್ಲದೆ 2 ಜಪತಪ ಮಾಡಲೇನು, ಜಾಣತನ ಮೆರೆದರೇನು | ವಿಜಯವಿಠಲನ ಸಾರಿದರೇನು, ಜ್ಞಾನವಿಲ್ಲದೆ 3
--------------
ವಿಜಯದಾಸ
ಏನಿದು ಮಹದಪರಾಧ ಮಾಡಿದೆ ನಾನು ನಿನ್ನವರನೆ ನಿಂದಿಸಿದೆ ತಿಳಿಯದಭವ ದೇವ ಪ ಜ್ಞಾನವಿಡಿದಿ ನೋಡದೆ ತುಸು ಏನುಕಾಣದೆ ನಾನಾಪರಿಯಲಿ ಶ್ವಾನನಂದದಿ ಚೀರುತ್ಹಾರುತ ಹೀನವಾಚಗಳ್ವಾಚಿಸಿದೆನೋ ಅ.ಪ ತತ್ತ್ವದರ್ಥಕರಾಗಿ ಗುಪ್ತದಿಂದಿರ್ವವರ ನರ್ತುನೋಡದೆ ಅನರ್ಥವಾಡಿದೆನೋ ಪ್ರಭೋ ಮತ್ರ್ಯಗುಣಗಳ ಮರ್ತುಬಿಡದೆ ನಿರ್ತಮಾನಿಸರ ಗುರ್ತುತಿಳಿಯದೆ ಕತ್ತೆಯಂತೊದರುತ್ತ ಸತ್ಯರ ಕೃತ್ತಿಮರೆಂದೆನುತ ಜರಿದೆ 1 ಮೀನು ಜಿಹ್ವೆಯ ರುಚಿಗಾ ಗೇನು ತಿಳಿಯದೆ ಪೋಗಿ ಗಾಣ ಸೆಳೆದುನುಂಗಿ ಪ್ರಾಣಕೊಟ್ಟಂತೆ ಹರಿಯೆ ಗಾನಲೋಲನ ಮನದೊಳಿಟ್ಟು ಧ್ಯಾನಿಪ ಕೋವಿದಸುಜನರ ಖೂನವಿಲ್ಲದೆ ಮನಕೆ ಬಂದಂತೆ ಕಾಣದಂಧಕನಂತೆ ಜರಿದೆ 2 ನಿನ್ನಿಂದೆ ನಾ ಬಂದೆ ನೀನೆನ್ನ ತಂದೆ ಮುಂ ದಿನ್ನಿಂಥ ದುರ್ಮತಿಯನ್ನು ಕೊಡದಿರೊ ರಂಗ ನಿನ್ನ ದಾಸರೊಳಿಟ್ಟು ಅನುದಿನ ಭಿನ್ನವಿಲ್ಲದೆ ರಕ್ಷಿಸಯ್ಯ ನಿನ್ನ ಚರಣದಾಸರ ನಾಮ ಪನ್ನಂಗಶಾಯಿ ವರ ಶ್ರೀರಾಮ 3
--------------
ರಾಮದಾಸರು
ಏನಿದ್ದರೇನಯ್ಯ ಜ್ಞಾನವಿಲ್ಲದಿರೆ ಶ್ರೀನಾಥನಂ ನೆನೆಯದಿಹ ಹೀನಮಾನವಗೇ ಪ. ಗುರುವ ಸೇವಿಸಲಿಲ್ಲ ಹರಿಯ ಧ್ಯಾನಿಸಲಿಲ್ಲ ಅರಿತವರ ಸಂಗತಿಯೊಳ್ವೆರಯಲಿಲ್ಲವಲ್ಲಾ 1 ಹರಿಕತೆಯ ಭಕ್ತಿಯೊಳು ಪ್ರಕಟಮಾಡಿಸಲಿಲ್ಲ ಪರಿಪರಿಯ ಭೋಗದಿಂ ಮರುಳಾದೆನಲ್ಲ 2 ಬಂದೇ ದಾನವಿರದ ಧನವೇಕೆ ಪೇಳು ತಿಂದುಂಡು ಮಲಗುವಾನರಜನ್ಮ ಹಾಳು3 ಕರ ಚರಣ ಮೊದಲಾದ ಕರಣಂಗಳಂ ಪಡೆದು ಹರಿಪದವ ಪೊಂದುವಾ ಪರಿಯುಂಟೆ ಪೇಳು 4 ಆನಂದ ಸಾಮ್ರಾಜ್ಯ ನಿನಗಹುದು ಕೇಳು 5
--------------
ನಂಜನಗೂಡು ತಿರುಮಲಾಂಬಾ
ಏನಿದ್ದರೇನಯ್ಯಾ ಜ್ಞಾನವಿಲ್ಲದ ಮೇಲೆ ಪ ದೀನರಕ್ಷಕ ನಿನ್ನ ಧ್ಯಾನ ಮಾಡದವನೆ ಅ.ಪ. ಸತಿಸುತ ಬಾಂಧವರು ಬಹಳಿದ್ದರೇನು ಗತಿ ಕಾಣಿಸುವರೇನೋ ದೇವರ ದೇವ ಪತಿತಪಾವನ ನಿನ್ನ ಅತಿಭಕುತಿಯಿಂದ ಸ್ತುತಿಸಿ ಹಿಗ್ಗದಂಥ ಪಾಮರ ಮನಿಜನೆ 1 ಕ್ಷೇತ್ರಮಾನ್ಯಗಳೇಸಿದ್ದರೇನು ಪಾತ್ರೆ ಪದಾರ್ಥಗಳ್ ಗೃಹದಿ ತುಂಬಿದ್ದರೇನು ಪಾತ್ರಂಗಳ ನೋಡಿ ದಾನಧರ್ಮಂಗಳ ಮಾಡಿ ಮಹ ಯಾತ್ರೆಗಳ ಚರಿಸದೆ ಗಾತ್ರವ ಪೋಷಿಪಗೆ 2 ರಾಶಿ ವಿದ್ಯವಿರಲು ಅದರಿಂದ ಫಲವೇನು ಕೋಶವು ಕೊರೆಯಿಲ್ಲದೆ ಇರುತಿರ್ದರೇನೊ ವಿನುತ ಶ್ರೀ ರಂಗೇಶವಿಠಲನೊಳು ಲೇಶ ಭಕುತಿಯಿಲ್ಲದ ಹೇಸೀಕೆ ಮನದವನೆ 3
--------------
ರಂಗೇಶವಿಠಲದಾಸರು