ಒಟ್ಟು 1466 ಕಡೆಗಳಲ್ಲಿ , 103 ದಾಸರು , 1222 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಮಾಡಲೀ ಮನ ಮಾತು ಕೇಳದೇನು ಮಾಡಲಿ ಶ್ರೀ ನರಹರಿಯ ನೆನೆಯದೆ ಕಂಡ ಹೀನ ವಿಷಯದಲ್ಲಿ ಶ್ವಾನನಂತೆ ಪೋಪರೇನು ಪ ಸಾಧು ಸಜ್ಜನರ ಬೋಧನೆಯ ಜರಿಸಿ ಮಾಧವನೆ ನಿನ್ನ ಪಾದಕೊಯಿರಿ ಮಾಳ್ಪೊದೇನು 1 ಕಾಯ ಬಾಂಧವರ ಮಾಯಪಾಶಕ್ಹಾಕೆ ತೋಯಜಾಕ್ಷ ಎನ್ನ ಬಾಯ ಬಿಡಿಸೊರೈಯ್ಯ 2 ಗಜ ಸಿಕ್ಕಿಬಿದ್ದು ನೈಜ ದಿಕ್ಕುಕಾಣದಂತೆ ಸಿಕ್ಕೆ ವಿಷಯದಲ್ಲಿ 3 ತಂದು ತಂದು ಗೋವಿಂದ ನಿನ್ನಲಿಡೆ ಸಂದುಗೊಂಡು ಬಿಡಿಸಿಕೊಂಡು ಪೋಪುದೈಯ್ಯ 4 ದೇಹಗೇಹದಲ್ಲಿ ಸ್ನೇಹ ಇಡಿಸಿ ಕೆಡಿಸಿ ಶ್ರೀ ಹಯವದನ ಮೋಹಪಾಶಕ್ಹಾಕೋದೇನು 5 ವಾಕು ಕೇಳೋ ತಂದೆ ಪಾದ ಒಂದೇ ಸಾಕಬೇಕೊ ಇಂದೆ 6 ಹೀನಬುದ್ಧಿಬಿಡಿಸಿ ಜ್ಞಾನ ನಿನ್ನಲಿರಿಸಿ ಗಾನಲೋಲ ಕಾಯೋ ಶ್ರೀ ನರಹರಿಯೆ 7
--------------
ಪ್ರದ್ಯುಮ್ನತೀರ್ಥರು
ಏನು ಸಾಧಿಸುವದೇನರಿದು ಙÁ್ಞನಗಮ್ಯ ಗುರುಮಾರ್ಗದೊರೆಯಲರಿಯದು ಧ್ರುವ ನೀತಿಶಾಸ್ತ್ರವನೋದಿ ಪಂಡಿತನಾಗಲಿಬಹುದು ಶ್ರುತಿ ಸ್ಮøತಿಗಳ ತಿಳಿದು ತರ್ಕಸ್ಯಾಡಲಿಬಹುದು ಅತಿ ಬಲ್ಲತನದಿ ಯತಿಯನಿಸಿಕೊಳ್ಳಲಿಬಹುದು ಕ್ಷಿತಿಯೊಳು ಮೆರೆಯಲಿಬಹುದು ಸುತತ್ವ ಜ್ಞಾನಖೂನ ದೊರೆಯಲರಿಯದು 1 ಗೃಹತ್ಯಾಗಮಾಡಿ ಸಂನ್ಯಾಸಿ ಅಗಲಿಬಹುದು ದೇಹ ದಂಡಿಸಿ ವನವಾಸಿಯಾಗಲಿಬಹುದು ಗುಹ್ಯಗೊಪೆಯಲಿ ಸೇರಿ ತಪಸಿಯೆನಿಸಲಿಬಹುದು ಬಾಹ್ಯನಿಷ್ಠೆಯದೋರಬಹುದು ಸೋಹ್ಯ ಸದ್ಗುರುಮಾರ್ಗ ದೊರೆಯಲರಿಯದು 2 ಹಲವು ಕುಟಿಲದ ವಿದ್ಯವನು ಸಾಧಿಸಲಿಬಹುದು ಜಲದೊಳಗೆ ಮುಳಗಿ ಮಂತ್ರವನು ಜಪಿಸಲಿಬಹುದು ಸೀಲಿ ಸಾಲ್ವಳಿಯ ಸುಶಕುನ ಪೇಳಲಿಬಹುದು ಮ್ಯಾಲೆ ಜನರಂಜಿಸಲಿಬಹುದು ಮೂಲ ಮುಕ್ತಿ ಕೀಲ ತಿಳಿಯಲರಿಯದು 3 ಪೃಥ್ವಿಯನೆ ತಿರುಗಿ ಬಹುಭಾಷೆಯಾಡಲಿಬಹುದು ಮತಿವಂತನಾಗಿ ಕವಿತ್ವಮಾಡಲಿಬಹುದು ಗೀತರಾಗವು ಜಂತ್ರದೊಳು ನುಡಿಸಲಿಬಹುದು ಚದುರಂಗ ಪಗಡ್ಯಾಡಿ ಗೆಲಬಹುದು ಮತ್ತ ಮನ ಬೆರೆವ ಘನಸುಖವು ದೊರೆಯಲರಿಯದು 4 ಶೂರತನದಲಿ ಪರಾಕ್ರಮ ಹಿಡಿಯಲಿಬಹುದು ಧೀರಗುಣದಲಿ ಮಹಾಧೀರನೆನಿಸಲಿಬಹುದು ನೂರ್ಬಲದ ಪೌರುಷಲಿ ರಾಜ್ಯನಾಳಲಿಬಹುದು ಸಿರಿಸೌಖ್ಯದೊಳಿರಲಿಬಹುದು ಸಾರ ಸುಜ್ಞಾನಸುಖ ದೊರೆಯಲರಿಯದು 5 ಪರ್ವತಾಗ್ರದಲೇರಿ ಧರೆಗೆರಗಲಿಬಹುದು ಹರಿವ ನದಿಯನೆ ಹಾರಿ ಹೋಗಲಿಬಹುದು ಮೊರೆವುತಿಹ್ಯ ಸರ್ಪದಾ ವಿಷವು ಧರಿಸಲಿಬಹುದು ಕ್ರೂರ ಮೃಗದೊಳು ತಿರುಗ್ಯಾಡಬಹುದು ಪಥ ದೊರೆಯಲರಿಯದು 6 ಪೊಡವಿಯೊಳು ಹವಲು ವಿದ್ಯವ ಸಾಧಿಸಲುಬಹುದು ಬಡದ ಬವಣಿಯ ಬಟ್ಟು ನಾಡ ಶೋಧಿಸಬಹುದು ಗೂಢ ವಿದ್ಯದ ಮಾತು ಆಡಿ ತೋರಿಸಬಹುದು ಹಿಡಿದು ಮೌನವ ಕೂಡಬಹುದು ಮೂಢಮಹಿಪತಿ ಒಡಿಯನ ಕೃಪೆ ಪಡೆವದೆ ದುರ್ಲಭವು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನೂ ತೋಚದೋ ಮುಂದೇನು ಗತಿಯೋ ದೇವಾ ಅಪ್ರಮೇಯ ಸದಾ ಪ ನಾನು ನನ್ನದು ಎಂಬಭಿಮಾನದಿಂದನುದಿನ ಹೀನಕರ್ಮದ ಸುಳಿಯೊಳು ನಾ ನೊಂದು ನಿಂದೆನೊ ಅ.ಪ ಬೋಧೆ ಇಲ್ಲದೆ ನಾನು ಬಾಧೆಪಡುವೆ ಪೂರ್ಣ ಬೋಧರ ಮತತತ್ತ್ವ ಸಾಧಿಸಲಿಲ್ಲವೋ ಸಾಧುಸಜ್ಜನರೆಂದು ಆದರಿಸಲರಿಯೆನೋ ಆಧಾರನಾಗೋ ನಿರಾಧಾರನಾಗಿಹೆ ಬಾಧಿಪರೋ ಬಂಧುಗಳು ಪ್ರತಿದಿನ ನಿಂದಿಪರೋ ಮನಬಂದ ತೆರದಲಿ ಊರೊಳಿತರಜನ ಉದಯಾಸ್ತ ಪರಿಯಂತರದಿ ಎನಗೆ ಉದರದ ಯೋಚನೆ ಆದುದೀಪರಿ ಎನ್ನ ಜೀವನ ಇದಕೆ ಸಾಧನಮಾಡಿ ಮೋಹದ ಮುದದಿ ಮೈಮರೆದೆನನುದಿನ ಪದುಮನಾಭನೆ ಮೊರೆಯಿಡುವೆ ಮುಂದೇನು ಗತಿ ಪಥವಾವುದೋ ದೇವಾ 1 ಯುಕುತಿಯಿಂದಲಿ ಕರ್ಮಮಾಡಿ ಬೆಂಡಾದೆ ಭಕುತಿಮಾತ್ರವು ಏನ್ನೊಳಿನಿತಿಲ್ಲವೋ ಶಕುತಿಯುಕುತಿಗಳೊಳು ನೀನಿದ್ದು ನಡೆಸುವೆ ಭಕುತಿ ಕೊಡದಿರುವೆಯಾ ಮುಕುತರೊಡೆಯಾ ಮಾಕಳತ್ರನೆ ನಿನ್ನ ದಯವೊಂದನವರತ ಇರಲಿ ಅಕುಟಿಲಾಂತಃಕರಣ ಭಕ್ತರ ಸಂಗವೆನಗಿರಲಿ ನಿಖಿಲಗುಣಗಣಪೂರ್ಣ ನಿನ್ನಯ ಸ್ಮರಣೆಯೊಂದಿರಲಿ ಸಾಕು ಇದಕಾನೇನು ಮಾಡಲಿ ವಾಕುಮನಸಿಗೆ ಸಿ- ಲುಕದವ ನಿನ್ನ ಕಾಕುಮನುಜ ನಾನೆಂತು ತಿಳಿಯಲಿ ನೀ ಕರುಣಿಸದಲಿರೆ ಇನ್ನು ಅವಿ- ವೇಕಿ ನಾನಿನ್ನೆಂತುಗೈಯಲಿ 2 ನರಜನುಮದಿ ಬಂದು ಬರಿದೆ ಆಯುವ ಕಳೆದೆ ಹರಿಯೆ ನಿನ್ನಯ ಕರುಣ ದೊರೆಯಲಿಲ್ಲಾ ಕರೆಕರೆಪಡುತಲಿ ಜರೆಯೊಳಾಡುತಿಹೆ ದುರಿತ ಹರೇ ದಾರಿ ಎನಗೇನಿಹುದೋ ಇನ್ನು ಮುಂದೆ ಕ್ಲೇಶ ಕೊಡದಲೆ ಪಾರುಗಾಣಿಸೋ ತಂದೆ ಶರಣಜನರಿಗನವರತ ಸುರಧೇನು ನೀನೆಂದೇ ಅರಿಯದವ ನಾ ನೀ ಪೊರೆಯಲರಿದೇ ಕರುಣಾಶರಧಿಯೇ ನಿನ್ನ ಕೃಪೆಯೊಂದಿರಲು ಉರುತರ ಸಾಧನವು ಅದು ತರವರಿತು ಧೃಢಭಕ್ತಿ ಪಾಲಿಸೊ ಉರಗಗಿರಿ ಶ್ರೀ ವೇಂಕಟೇಶನೆ3
--------------
ಉರಗಾದ್ರಿವಾಸವಿಠಲದಾಸರು
ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ರಂಗನ ಮಹಿಮೆಯ ಏನೆಂದ್ಹೇಳಲಿ ಪ ಘನ್ನಸಿರಿವಿಧಿ ಧ್ಯಾನಕೆ ನಿಲುಕದ ಅಗಣಿತ ಮಹಿಮೆಯ ಅ ಎಲ್ಲವ ಬಲ್ಲನು ಎಲ್ಲವ ಮಾಡುವ ಎಲ್ಲರ ಒಡೆಯನು ಇಲ್ಲದ ಸ್ಥಳವಿಲ್ಲ ಬಲ್ಲವರಿಲ್ಲವೆ ಫುಲ್ಲನಾಭನ ನಲ್ಲನು ಲಕ್ಷ್ಮಿಗೆ ಗೊಲ್ಲನು ಆದನೆ 1 ಅಂಗನೆ ಲಕ್ಷ್ಮಿಯ ಸೊಗಸಿಗೆ ನಿಲುಕದ ಅಂಗನೆ ಇಲ್ಲದೆ ಮಗನನು ಪಡೆದವ ಹಿಂಗದ ತಾನೆ ಅಂಗನೆ ಯಾದವ ರಂಗನ ಗೋಕುಲ ಹೆಂಗಳ ಕೂಡಿದನೆ2 ತಂದೆಯ ಕೊಂದನು ಕಂದನ ಸಲಹಿದ ಕಂದನ ಕೊಂದನು ತಂದೆಯ ಸಲಹಿದ ಬಂಧುಗಳೆನ್ನದೆ ಕೊಂದನು ವಂಶವ ತಂದೆಯು ಇಲ್ಲದೆ ಕಂದನು ಆಗುವನೇ 3 ದಾನವ ನೀಡಿದ ದಾನಿಯ ತುಳಿದನು ಮಾನವ ತೆಗೆದಾ ಹೀನನ ಸಲಹಿದ ದೀನರ ಸಲಹುವ ದಾನವರಳಿವನು ಜ್ಞಾನಿಗಮ್ಯನು ಮಾನಸ ಹಂಸನ 4 ಹಸಿವೆಯ ಅರಿಯದ ಅಸಮದೇವನು ಸೊಸಿಯು ನೀಡಿದ ಶಾಖವ ತಿಂದನೆ ಪಶುಪತಿ ಋಷಿಯನು ವಶವಾಗಿ ಮಾಡಿದ ಮಾಸದಮಹಿಮನು 5 ನಾಲ್ಮೊಗನಯ್ಯನು ಸುಳ್ಳನು ಹೇಳುತ ಕಳ್ಳನು ಆದನು ಗೊಲ್ಲರ ಭಕ್ತರಿಗೆ ಮೆಲ್ಲನೆ ಕುರುಕುಲ ಎಲ್ಲವ ಸವರಿದ ಬಲ್ಲಿದ ಕೃಷ್ಣಗÉ ಇಲ್ಲವೆ ಸಮರಧಿಕ 6 ಜಗವನು ಮಾಡುವ ಜಗವನು ಪಾಲಿಪ ಜಗವನು ಅಳಿಸುವ ಮಗುವಾಗಿ ಬಂದನೆ ಜಗಜೀವ ಭಿನ್ನನು ಜಗದೊಳು ವ್ಯಾಪ್ತನು ನಗುತಲಿ ಬಾಯಲಿ ಜಗವನು ತೋರಿದನೆ7 ಯಾಗವ ನಡೆಸಿದ ಯಾಗವ ಕೆಡಿಸಿದ ಯೋಗವ ಚರಿಸುತ ಯೋಗವ ಬೋಧಿಪನೆ ಬಾಗುವ ಭಕ್ತರ ನೀಗುವ ಕಲುಷವ ಆಗಮವಂದಿತ ಸಾಗರಶಯನನೆ8 ಹತ್ತವತಾರವ ನೆತ್ತಿದ ಮಹಿಮನು ಉತ್ತಮ ಭಕುತರ ತೆತ್ತಿಗನಾದನೆ ಬತ್ತಲೆ ಶಿಶುವಾಗಿ ಬಿತ್ತಿದ ಮೋಹವ ಬೆಸ್ತರಕುವರಿಗೆ ಆತ್ಮಜನಾದವನೆ9 ಚಕ್ರವಪಿಡಿದವ ನಕ್ರನ ತರಿದವ ಶಕ್ರನಕಾಯ್ದವ ವಕ್ರೆಯ ಕೂಡಿದನೆ ರಕ್ಕಸಯವನನ ಠಕ್ಕಿಲಿ ಅಳಿಸುತ ಭಕ್ತನಪೊರೆದಾ ಯುಕ್ತಗಳೊಡೆಯನೆ 10 ನಾರೆಂದೊದರಿದ ಉರುತರ ಪಾಪಿಯ ಭರದಿಂಪೊರೆಯೊ ಕರುಣಾಸಾಗರನೆ ನರಹರಿದೇವನು ಪರಿಪರಿರೂಪನು ಪರಿಪರಿಲೀಲೆಗೆ ಮೇರೆಯೆ ಇಲ್ಲಾವೇ 11 ವಾರಿಯಲಾಡುವ ಭಾರವ ಹೊರುವಾ ಕೋರೆಯ ತೀಡುವ ಘೋರವ ತೋರುವನೇ ವೀರರತರಿಯುವ ಕ್ರೂರರಸವರುವ ಜಾರನು ಆಗುವ ವೈರಿಗಳ್ವಂಚಿಪ ಏರುವ ತೇಜಿಯನೆ 12 ಅದ್ಬುತ ರೂಪವ ಕದನದಿ ತೋರಿದ ಬದರಿಯನಿಲಯಗೆ ತುದಿಮೊದಲಿಲ್ಲಾವೆ ಉದರದಿ ಮಗುವನು ಮುದದಿಂಸಲಹಿದ ಮುದಮುನಿ ಪ್ರಿಯನು ಹೃದಯದಿ ವಾಸಿಪನೆ 13 ವಿಷವನು ಕುಡಿದಾ ವೃಷಭವಾಹನ ಅಸುರನ ಭಯದಿಂ ಘಾಸಿಲಿ ಓಡುತಿರೇ ಮೋಸದಿ ಯುವತಿಯ ವೇಷವ ಧರಿಸುತ ಪಶುಪತಿ ಸಲಹಿದನೇ 14 ಭರದಿಂ ರಥವೆತ್ತಿ ನರನಂ ಕಾಯ್ದನು ಧರಣಿಯ ಒತ್ತುತ ಕುರುಪನ ಕೆಡಹಿದನೇ ಮರೆಸುತ ರವಿಯನು ಪೊರೆದನು ಚೇಲನ ಸುರವರಪೋಷಕ ಸಿರಿಪತಿ ಚದುರನ 15 ಗಂಗೆಯಪಡೆದ ಮಂಗಳ ಮಹಿಮನು ಹಿಂಗದೆ ಗೋಪರ ಸಂಗಡ ಆಡಿದನೇ ತಿಂಗಳ ಬೆಳಕಲಿ ಶೃಂಗರ ಸೊಬಗನು ಹೆಂಗಳ ಕೂಡುತ ಸಂಗೀತ ಪಾಡಿದನೆ 16 ಕಾಳಿಯ ಫಣೆಯಲಿ ಕಾಳಿಂದೀಶನು ತಾಳಕೆ ಕುಣಿಯುತ ಕೊಳಲನ್ನೂದಿದನೆ ಘೂಳಿಗಳಳಿಯುತ ನೀಲಳತಂದವ ಊಳಿಗ ಮಾಡಿದನೇ 17 ನಾರಿಯು ಮೊರೆಯಿಡೆ ಸೀರೆಯನೀಡಿದ ವಾರಿಜಾಕ್ಷನು ಸೀರೆಯ ಚೋರನೆ ನೀರೊಳು ಮುಳುಗಿದ ಪೋರರಿಗೆಲ್ಲ ತೋರಿದ ಜಗವನು ಸೂರಿಗಳೊಡೆಯನೆ 18 ಗರುಡನ ಏರುವ ಧರಣಿಯ ರಮಣನು ಏರುತಹುಡುಗರ ತುರುಗಳ ಕಾಯ್ದನೆ ಮಾರನಪಡೆದ ಮುರಹರಕೃಷ್ಣನು ಗಿರಿಯನು ಎತ್ತುತ ಹರುಷವ ಬೀರಿದನೇ 19 ಶೃತಿಗಳು ಪೊಗಳುವ ವ್ಯಾಪ್ತನ ನಿತ್ಯನ ಪಾತಕ ಹೋಗುವುದೇ ಅಂತಕ ಗತಿ ಮತಿ ಪ್ರೇರಕ ದಾತನು ಎಂತೆನೆ ಪ್ರೀತಿಲಿ ಸಲಹುವನೆ 20 ಮಜ್ಜಿಗೆ ಕಡೆಯುವ ರಜ್ಜುವಿನಿಂದಲಿ ಮೂರ್ಜಗನಯ್ಯನು ಕಟ್ಟಿಸಿಕೊಂಡಾನೆ ಲಜ್ಜೆಯ ಬಿಡುತಲಿ ಗೆಜ್ಜೆಯ ಕಟ್ಟುತ ಘರ್ಜಿಸಿ ಪಾಡಲು ಹೆಜ್ಜೆಯ ತೋರುವನೆ 21 ದಾಸರ ಪೋಷಿಪ ಶೇಷಗಿರೀಶನ ವಿಶೇಷವೆ ಬಣ್ಣಿಸೆ ಶೇಷಗೆ ಆಗದೆ ದೋಷವು ಇಲ್ಲದ ವಾಸುದೇವನೆ ತೋಷವ ನೀಡುವ ಸಾಸಿರ ನಾಮಕನೆ22 ಜಯಮುನಿ ಅಂತರ ವಾಯುವಿನಲ್ಲಿಹ ಜಯಕೃಷ್ಣವಿಠಲನು ಜೀಯನೆ ಜಗಕೆಲ್ಲ ನಯಭಯದಿಂದಲಿ ಹಯಮುಖನೊಲಿಸಲು ಭಯವನು ಹರಿಸುತ ನ್ಯಾಯದಿ ಪಾಲಿಪನೇ 23
--------------
ಕೃಷ್ಣವಿಠಲದಾಸರು
ಏಳು ಏಳು ಏಳು ಲೋಕದ ಒಡಿಯನೆ | ಏಳು ಗೋವಳರಾಯ ಗೋಪೇರಿಗತಿ ಪ್ರಿಯಾ | ಅಪ್ರಾಕೃತ ಕಾಯಾ ಸುರಮುನಿ ಗೇಯಾ | ಏಳು ಗೋಪಾಲಕೃಷ್ಣ ಪ ಪುರಂದರನ ದಿಶೆಯಲ್ಲಿ ಗರುಡಾಗ್ರಜನು ಬರಲು | ಶರಧಿ ತೆರೆ ತಗ್ಗಿದವು ಉರಗ ಪೆಡೆ ಪಸರಿಸಿದಾ | ಹರಿದು ಪೋಯಿತು | ಕಾಳ | ಸುರ ವೈರಿಗಳು ಅಡಗಲು | ಅರಳಿದವು ಅರವಿಂದ | ಝಂಕರಿಸಿ ಶುಕಪಿಕ ಮೃಗಾದಿ ಯೆ-| ಕರುಣಾಳುಗಳ ದೇವನೆ 1 ಮೇರೆ ತಪ್ಪಿ ಬಂದಾ ರಥಸಹಿತ ಭಾಸ್ಕರನು ದಿಶದಿಶೆಗೆ ಕಿರಣಗಳ | ಹರಹಿಕೊಳುತಾ | ಹರಿ ಗುರುವೆ ಪೇಳಲಳವೆ | ಕಲಿಸಿ ಮಂದಿರದೊಳಗೆ ಎಳೆಬಾಳೆ | ಶೃಂಗರಿಸಿದರು ಅರವಿಂದನಾಭ ಚೆಲುವ 2 ಪರಮ ಮಂಗಳವಾದ ದ್ವಾರ ದ್ವಾರಗಳಿಗೆ | ವಿರಚಿಸಿತು ಕಳಿತೆ ತೋರಣ ಕನ್ನಡಿ ಮಲಕು | ಭರದಿಂದಲಿ ಬಿಗಿದು ಮೇಲ್ಕಟ್ಟು ಚಿತ್ತರದ ಗೊಂಬೆ | ಪರಿಚಾರವು ವಪ್ಪಲು | ಹಿರಿದು ಹೂವಿನ ಮಾಲೆ ಕಟ್ಟಿದವು | ಮಕರವು ತುರ ತೊ ಗರು ಪೊಗಳು ಕಾದೋದಕವು ತಂದಿರೆ | ಅರಸಾದ ಆದಿದೈವ3 ಪರಮ ಭಾಗವತರು ಬತ್ತೀಸರಾಗದಲಿ | ಸ್ವರಮಂಡಲಾ ತಾಳ ತಂಬೂರಿ ಕಿನ್ನುರಿಗ ಸರವೇಣಿ ನಾನಾ ಗೀತ | ಪರಿ ಪರಿ ಕೊಂಡಾಡುತಿರಲು | ಕುಣಿಯುತಿದೆ ಸುರನಿಕರ ಪರಿಪಾಲಿಕ 4 ಸುರ ನರೋರಗ ಯಕ್ಷಗರುಡ ಸಿದ್ಧ ವಿದ್ಯಾ | ಕಿನ್ನರ ಸಾಮ | ಪರಮೇಷ್ಟಿ ವಾಲಗಕೆ ಬಂದು ಎ- ದುರು ನಿಂದು ತುತಿಪನಾಹಕೊ ಭರಿತಾಭರಣವಿಟ್ಟು | ಸರಸ್ವತಿ ಭಾರತಿ ಗಿರಿಜೆ ಸುರನಾರಿಯರು ತಮ್ಮ | ಹರಿವಾಣ | ದಾರುತಿಯ ಪಿಡಿದು ನಿಂದೈಧಾರೆ ಶರಣಾಗತ ವತ್ಸಲಾ 5 ಕರಿ ತುರಗ ರಥಪಾಯದಳವು ದಟ್ಟಡಿಯಾಗಿ | ನೆರದಿದೆ ಸಭೆಯಲಿ ಸಪ್ತಾಂಗದವರುಂಟು | ಅರಿ ಶಂಖಗದಾ ಪದುಮಖೇಟ ನಂದನ ಮುಸಲಾ | ಪರಶು ನೇಗಲ ಸುಶಕ್ತಿ ಪರಿಪರಿಯ ದಿವ್ಯಾಯುಧವ ತಮತಮಗೆ | ಧರಿಸಿ ಸಂತೋಷದಲಿ ದಾತಾರ ನಿನ್ನಯ ಬರುವ ಹಾರೈಸಿ | ವೈರಿಗಳು ನೋಡುತಲಿ ಹಾರೆ ಕುರುವಂಶ ವಿನಾಶಕಾ 6 ಸುರಿಗೆ ಪಾರಿಜಾತದ ಮಲ್ಲಿಗೆ | ಸುರವನ್ನೆ ಬಕುಳ ಪಾರಿ ಭದ್ರ ಸಂಪಿಗೆ | ಮರುಗ ಮಲ್ಲಿ ಜಾಜಿ ಕಾಂಜಿ ಶಾವಂತಿಗೆ ಕರವೀರ ನಂದಾವರ್ತ | ಅರಗುಂದ ಕುಂತಾತಸಿದವನ ಮುಡಿವಾಳ | ಈರವಂತಿಕೆ ಕೇತಿಕಾ ಸರ್ವ ಕುಸುಮಗಳಿಗೆ | ಶಿರೋರತನವಾದ ಎಳದುಳಸಿ ಹಾರಗಳಿಗೆ | ಅರಿಗಳ ಮಸ್ತಕಾಂಕುಶಾ7 ಚರಣದಂದಿಗೆ ಪೆಂಡೆ ಪೊಂಗೆಜ್ಜಿ ಮಣಿಮಯದ | ಸರಪಳಿಯು ತೊಡೆದು ಬಿರುದಾವಳಿಗಳು ಪೀತಾಂ | ಕಾಂಚಿ ದಾಮಾ | ಸರಿಗೆ ನ್ಯಾವಳಹಾರ ತುಳಸಿ ಕೌಸ್ತಭ ಪದÀಕ | ಸಿರಿವತ್ಸ ಕನಕಕುಂಡಲ ನೊಸಲ ಮೃಗನಾಭಿ | ಕರದಾಭೂಷ ಫಣಿಮಕುಟ ಧರಿಪಾ ದೇವಿ ನಿನ್ನ | ದರುಶನ ಭಕ್ತರಿಗೆ ಲಾಭಾ 8 ಸಿರಿ ಏಳಲೀಸಳೊ ಹತ್ತವತಾರವನು ಧರಿಸಿದ ದಣವಿಕಿಯ | ಕರಿ ಕಾಯಲಿ ಬಂದ ಭರದ ಉನ್ನತವು | ರಣದೊಳಗೆ ಪಾರ್ಥನ್ನ ರಥದ ತುರುಗವ ನಡಿಸಿದ ಲಜ್ಜೆಯ | ಸುರತ ಕ್ರೀಡೆಯಲಿ ಸ್ತ್ರೀಯರೋಳಾದಂಜಿಕಿಯೊ | ವರವ ಕೊಡು ಎಂದು ಬಂದು ಮಮ ಭಕ್ತರ ಭಯವೊ | ಸಿರಿ ವಿಜಯವಿಠ್ಠಲ ಉಡುಪಿಯ ಕೃಷ್ಣ ನಿನಗೆ | ದರಿಲ್ಲವೆಂಬೊ ಘನವೊ9
--------------
ವಿಜಯದಾಸ
ಏಳು ರಂಗಯ್ಯ ನೀನೇಳು ಕೃಷ್ಣಯ್ಯ ಏಳಯ್ಯ ದೊರೆ ಬೆಳಗಾಯಿತೇಳೆಂದು ಪಾಲ್ಗಡಲೊಡೆಯ ಹರಿಯನೆಬ್ಬಿಸಿದಳಂದು ಬಾಲೆ ಯಶೋದೆಯು ಬಹು ಸಂಭ್ರಮದಿಂದ ಪ ಶಕ್ರನುಪಟಳವ ನೀ ಪರಿಹರಿಸಬೇಕು ವಿಕ್ರಮದಿ ಗೋವರ್ಧನ ಎತ್ತಬೇಕು ಚಕ್ರಧರ ನಿನ್ನ ಮಧುರೆಗೆ ಕರೆದೊಯ್ಯೆ 1 ಮಾವ ಕಂಸನು ನಿನ್ನ ಬಾ ಎಂದನಂತೆ ಸಾವು ಅವನಿಗೆ ಸಮೀಪದಲಿದೆಯಂತೆ ದೇವಕಿ ವಸುದೇವ ಸೆರೆಯಲಿರುವರಂತೆ ಕಾವುದಕೆ ನೀ ಪೋಗಲೇಬೇಕಂತೆ 2 ಬಿಲ್ಲ್ಹಬ್ಬದಲಿ ಜಯಶೀಲನಾಗಬೇಕು ಖುಲ್ಲ ರಕ್ಕಸ ದಲ್ಲಣನೆನಿಸಬೇಕು ಬಲ್ಲಿದ ಮಗಧನ ಕೊಲ್ಲಿಸಲುಬೇಕು 3 ದೇವಿ ದ್ರೌಪದಿಗೆ ಸುಚೇಲವೀಯಬೇಕು ಭಾವಮೈದುಗೆ ಬೋವÀನಾಗಬೇಕು ಪಾವಿನ ಶರದಿಂದವನ ಪೊರೆಯಬೇಕು ಯಾವತ್ತು ಭೂ ಭಾರವನಿಳುಹಬೇಕು 4 ಮಧ್ವರಾಯರ ಹೃತ್ಪದ್ಮದಿ ನಿಲಬೇಕು ಇದ್ದು ಉಡುಪಿಯೊಳು ಪೂಜೆಗೊಳಲುಬೇಕು ಶುದ್ಧ ವೈಷ್ಣವರಿಷ್ಟಗಳ ಸಲಿಸಬೇಕು ಮುದ್ದು ರಂಗೇಶವಿಠಲನೆನಿಸಬೇಕು 5
--------------
ರಂಗೇಶವಿಠಲದಾಸರು
ಒಂದು ದಿನ ನಾರದಮುನಿ ಗೋಕುಲದಿ ಇಂದಿರೇಶನ ಲೀಲೆಯಾ ನಿಂದು ನಭದಲಿ ನೋಡುತಾ | ಮೈಯುಬ್ಬಿ ಬಂದನಾ ವೈಕುಂಠಕೆ 1 ಸಿರಿದೇವಿ ಸಖಿಯರೊಡನೆ | ವನದಲ್ಲಿ ಪರಿಪರಿಯ ಕ್ರೀಡೆಯೊಳಿರೇ ಅರವಿಂದ ನಯನೆಯನ್ನೂ | ಕಂಡನಾ ಸುರಮುನಿಯು ಸಂಭ್ರಮದಲೀ 2 ಜಗನ್ಮೋಹನಾಕಾರಳೂ | ಶ್ರೀ ಹರಿಯ ಜಗ ಸೃಷ್ಟಿಗನುಕೂಲಳೂ ಬಗೆ ಬಗೆಯವತಾರಳೂ | ಕ್ಷಣ ಹರಿಯ ಅಗಲದಂತಿರುತಿಪ್ಪಳೂ 3 ಹರಿಗೆ ಗುಣದಿಂ ಕಿರಿಯಳೂ | ಮತ್ತೆಲ್ಲ ಪರಿಯಲ್ಲಿ ಹರಿಗೆ ಸಮಳೂ ಶರಣೆಂದವರ ಕಾಯ್ವಳೂ | ಬೊಮ್ಮಾದಿ ಸುರರ ಸೃಜಿಸುವ ಶಕ್ತಳೂ 4 ನಾಕ ಸ್ತ್ರೀಯರನೆ ಕೂಡೀ | ವನದಲ್ಲಿ ಲೋಕನಾಯಕಿ ರಮಿಸುತಾ ಶ್ರೀಕಾಂತನಗಲದವಳೂ | ಮುನಿಗೆ ತ ನ್ನೇಕರೂಪವ ತೋರ್ದಳೂ 5 ನೊಡಿ ನಮಿಸಿದನು ಸಿರಿಯಾ | ಹರಿಗುಣವ ಹಾಡಿ ಪಾಡಿದನು ಮೈಯ್ಯಾ ಮೂಡೆ ರೋಮಾಂಚ ಕೈಯ್ಯಾ | ಮುಗಿಯುತಲಿ ನೋಡಿದನು ಸಿರಿಯ ದಣಿಯಾ 6 ಪಲ್ಲವಾಧರೆ ನಗುತಲಿ | ತನ್ನ ಕರ ಪಲ್ಲವದಿ ಕೃಪೆಯ ಮಾಡೀ ಎಲ್ಲಿಂದ ಬಂದೆ ಮುನಿಪಾ ವಿಷಯವೇ ನೆಲ್ಲ ಪೇಳೆಂದೆನ್ನಲೂ 7 ಏನ ಪೇಳುವೆನೆ ತಾಯೆ | ನಿನ ಪತಿಯ ನಾನಾ ವಿಧ ಚರ್ಯೆಗಳನೂ ನಾನರಿಯಲಾರೆ ನಮ್ಮಾ | ನವನೀತ ಚೋರನಾಗಿರುವನಮ್ಮಾ 8 ನಾಕ ಭೂಲೋಕ ತಿರುಗೀ | ಭುವಿಯೊಳಗೆ ನಾ ಕಂಡೆ ಗೋಕುಲವನೂ ಹೇ ಕಮಲೆ ಕೇಳು ಅಲ್ಲೀ | ನಿನ ಪತಿಯು ಆಕಳಾ ಕಾಯುತಿಹನೂ 9 ಬಿಟ್ಟು ವೈಕುಂಠವನ್ನೂ | ಪ್ರಾಯ ಸತಿ ದಿಟ್ಟೆ ನಿನ್ನನು ತೊರೆದನೂ ಹುಟ್ಟಿ ಗೊಲ್ಲರ ಕುಲದಲೀ | ಬೆರತನಾ ಕೆಟ್ಟ ಹೆಂಗಳೆಯರಲ್ಲಿ 10 ನಳಿನಜಾಂಡವ ಸಾಕುವಾ | ಜಗದೀಶÀ ಗೋಪಿ ಬೈ ಗಳನು ತಾ ಕೇಳುತಿಹನೂ 11 ಮದನಮೋಹನರೂಪನೂ | ಗೊಲ್ಲತೆರ ಅಧರಾಮೃತವ ಸವಿವನೂ ಎದೆ ಗಂಟು ಪಿಡಿಯುತಿಹನೂ | ಚಂಡೆಂದು ಗದರಿಸಲು ನುಡಿಯುತಿಹನೂ 12 ಸಂಪೂರ್ಣ ಕಾಮ ತಾನು | ವನದಲ್ಲಿ ಗುಂಪು ಸ್ತ್ರೀಯರ ಕೂಡ್ವನೂ ಸಂಪನ್ನ ಭೋಗಿಸುವನೂ | ಕೊಳಲ ಪಿಡಿ ದಿಂಪುಗಾನವ ಗೈವನೂ 13 ವನದ ಸೊಬಗೇನುಸುರುವೇ | ಶ್ರೀರಮಣಿ ದನಕರುವ ಕಾಯುತ್ಹರಿಯಾ ವನವನವ ತಿರುಗುತ್ತಿರೇ | ಕೊಳಲ ಧ್ವನಿ ವನವೆಲ್ಲ ತುಂಬಿರುತಿರೇ 14 ತಿಳಿಯುದಕ ಯಮುನೆ ಮಳಲು | ದಿಣ್ಣೆಯಲಿ ಕೊಳಲೂದೆ ಹರಿ ಕೇಳಲೂ ಮೊಳೆತವಾ ಬಂಜೆ ಮೋಟೂ | ಮೃಗಪಕ್ಷಿ ಕುಳಿತು ಮೈಮರೆತು ಕೇಳೇ 15 ಓಡಿ ಬರುತಲಿ ತುರುಗಳೂ | ಬಾಲವ ಲ್ಲಾಡಿಸದೆ ಕಣ್ಣುಮುಚ್ಚಿ ಮಾಡಿಟ್ಟ ಪ್ರತಿಮೆಯಂತೆ | ಕಾಣುತಿರೆ ಆಡಿಸದೆ ಸರ್ಪ ಹೆಡೆಯಾ 16 ಶೃಂಗಾರ ಕೊಳಲನೂದೆ | ಜಡ ಚೇತ ನಂಗಳಾಗುತ ಚಿಗುರಲೂ ಅಂಗ ಮರೆಯುತ ಜೀವಿಗಳ್ | ಜಡದಂತೆ ಕಂಗಳನುಮುಚ್ಚಿನಿಲ್ಲೆ 17 ಅಷ್ಟ ಐಶ್ವೈರ್ಯದಾತಾ | ನಾರಿಯರ ತುಷ್ಟಿಪಡಿಸುತಲಿ ಖ್ಯಾತಾ ಶಿಷ್ಟ ಜನರನು ಪೊರೆಯುತಾ | ರಕ್ಕಸರÀ ಹುಟ್ಟಡಗಿಸುವನು ವಿಹಿತಾ 18 ಪೇಳಲಳವಲ್ಲವಮ್ಮಾ | ಶ್ರೀ ಹರಿಯ ಲೀಲೆ ಜಾಲಗಳ ಬ್ರಹ್ಮಾ ನೀಲಗಳರರಿಯರಮ್ಮಾ | ಆನಂದ ತಾಳಿದೆನು ಕೇಳೆ ರಮ್ಮಾ 19 ಇಷ್ಟು ಗೋಕುಲದಿ ನೋಡೀ | ಕಾಣದಿ ನ್ನೆಷ್ಟೋ ಎನ್ನುತಲಿ ಪಾಡೀ ಗುಟ್ಟು ಪೇಳಲು ಬಂದೆನೂ | ಸಿರಿದೇವಿ ಸಿಟ್ಟಾಗಬೇಡವಿನ್ನೂ 20 ಪರನಾರಿಯರ ಬೆರೆಯುತಾ | ಶ್ರೀ ಕೃಷ್ಣ ಮರೆತು ನಿನ್ನನು ಸುಖಿಸುತಾ ಪರಿ ಯೊಚಿಸಮ್ಮಾ | ಆಜ್ಞೆ ಕೊಡು ತ್ವರಿತದಲಿ ಪೋಪೆನಮ್ಮಾ 21 ಹರಿಚÀರ್ಯವೆಲ್ಲ ಕೇಳಿ | ಶ್ರೀ ತರುಣಿ ಪರಮ ಆನಂದ ತಾಳೀ ಬೆರಗಾದ ಪರಿತೋರುತಾ | ಮುನಿವರಗೆ ಪರಿ ಏನು ಮುಂದೆ ಎನಲೂ 22 ಸನ್ನುತಾಂಗನ ಕೂಡಲೂ | ಭೂತಳದಿ ಇನ್ನೇನುಪಾಯವೆನಲೂ ಪನ್ನಂಗ ವೇಣಿ ಉದಿಸೂ | ಭೀಷ್ಮಕಗೆ ಇನ್ನು ನೀ ಕುವರಿ ಎನಿಸೂ 23 ಎಂತೆಂತು ಹರಿಯಚರ್ಯೆ | ಸಿರಿಕಾಂತೆ ಅಂತಂತು ನಿನ್ನ ಚರ್ಯೆ ಸಂತೋಷಪಡಿಸಿ ಎಮ್ಮಾ | ಸಲಹಮ್ಮ ಶಾಂತೆ ನಾ ಪೋಪೆನಮ್ಮಾ 24 ಮತ್ತೊಮ್ಮೆ ನೋಳ್ಪೆನೆಂದೂ | ಗೋಕುಲದ ಹತ್ತಿರದಿ ನಭದಿ ನಿಂದೂ ಸುತ್ತು ಮುತ್ತಲೂ ನೊಡಲೂ | ಸಿರಿದೇವಿ ವ್ಯಾಪ್ತಳಾಗಲ್ಲಿ ಇರಲೂ 25 ವನದಿ ಹರಿವಕ್ಷದಲ್ಲೀ | ಸಿರಿದೇವಿ ಘನ ವೇಣೂರೂಪದಲ್ಲೀ ವನಲಕ್ಷ್ಮೀರೂಪದಲ್ಲೀ | ಗೋಪಿಯರ ಪ್ರಣಯ ಪ್ರಕಾಶದಲ್ಲೀ 26 ಎಲ್ಲೆಲ್ಲಿ ಸೌಂದರ್ಯವೋ | ಉಲ್ಲಾಸ ಎಲ್ಲೆಲ್ಲಿ ವೈಭವಗಳೋ ಎಲ್ಲೆಲ್ಲಿ ಹರಿಲೀಲೆಯೋ | ಸಿರಿದೇವಿ ಅಲ್ಲಲ್ಲಿ ತಾನಿರುತಿರೆ 27 ಸಿರಿ ಹರಿಯ ಚರಿಯ ನೊಡಿದ ಪ್ರತಾಪಾ ಧರೆಗಿಳಿದು ನಮಿಸಿ ನಿಂದಾ | ಕ್ಷಮಿಸೆಂದು ಸಿರಿ ಹರಿಗೆ ಸ್ತೋತ್ರಗೈದಾ 28 ಸಿರಿಹರಿ ವಿಯೋಗವಿಲ್ಲಾ | ಆವಾವÀ ಕಾಲ ದೇಶದಲ್ಲೀ ಅರಿಯದಜ್ಞಾನ ನುಡಿಯಾ | ಮನ್ನಿಸೋ ಮಾಯಾ 29 ಜಯ ಜಯತು ಸುರವಂದ್ಯನೇ ಜಯ ಜಯತು ದುಷ್ಟಹರಣ | ಗುಣ ಪೂರ್ಣ ಜಯ ಜಯತು ಶಿಷ್ಟ ಶರಣಾ30 ಸ್ತುತಿಸುತಂಬರಕಡರಿದಾ | ಸುರಮುನಿಪ ಚ್ಯುತದೂರನತಿ ವಿನೋದಾ ಪತಿತರನು ಕಾಯ್ವ ಮೋದಾ | ಸುಖತೀರ್ಥ ಯತಿಗೊಲಿದು ಉಡುಪಿಲ್ನಿಂದಾ 31 ಆಪಾರ ಮಹಿಮ ಶೀಲಾ | ಸರ್ವೇಶ ಗೋಪಿಕಾ ಜನ ವಿಲೋಲಾ ಆಪನ್ನ ಜನರ ಪಾಲ | ಗುರುಬಿಂಬ ಗೋಪಾಲಕೃಷ್ಣವಿಠಲಾ 32
--------------
ಅಂಬಾಬಾಯಿ
ಒಪ್ಪಿಸಿದೆ ಒರೆದು ದೂರ ಮುಂದೆನ್ನ ತಪ್ಪನೆಣಿಸದಿರು ಧೀರ ಅಪ್ಪಳಿಸು ಕಡು ಮೂರ್ಖರ ನಿನಗೆಂದು ತಪ್ಪುವುದೆ ಭಕ್ತಭಾರ ಪ. ದುರ್ಗಾಧಿಪತಿ ಲಾಲಿಸು ಮನಸಿಜನ ಮಾರ್ಗಣಕೆ ಸಿಲುಕಿ ಮನಸು ನಿರ್ಗಮಿಸದೊಳಸರಿದು ಮುಳುಗಿ ಸ- ನ್ಮಾರ್ಗಗಾಣದೆ ಕುಂದಿತು 1 ಪಂಚಾಂಗ ಪಲುಗುತಿರಲು ಮನೆಯ ಮ್ಯಾ- ಲ್ಹಂಚುಗಳಸ್ಥಿರವಾಗಲು ಚಂಚಲದಿ ಮನ ಕೆದರಲೂ ತದಧೀನ ಪಂಚಕರಣವು ಕೆಡುವವು 2 ಹೀಗಾದ ಬಳಿಕ ನಿನ್ನ ಸೇವೆ ಚೆ- ನ್ನಾಗುವದ ಕಾಣೆ ಮುನ್ನ ಶ್ರೀ ಗುರುವೆ ತ್ವರೆಯೊಳೆನನ ಮನವ ಪದ ರಾಗಿಯಾಗಿಸು ರನ್ನ 3 ಮೂರು ಋಣಬಾಧೆಯನು ಸಹಿಸುವದ- ಕಾರಿಂದ ಶಕ್ಯವಿನ್ನು ತೋರು ತ್ವಕ್ಕರುಣವನ್ನು ದಾಸನ್ನ ದೂರ ಬಿಡಲ್ಯಾತಕಿನ್ನು 4 ಸಂದಣಿಸಿಕೊಂಡು ಬರುವ ಸರ್ವ ಪ್ರತಿ ಬಂಧಕಗಳೆಲ್ಲ ತರಿವ ಕರವ ಶಿರದಿ ಭುಜ- ಗೇಂದ್ರ ಗಿರಿನಾಥ ದೇವ 5
--------------
ತುಪಾಕಿ ವೆಂಕಟರಮಣಾಚಾರ್ಯ
ಕಂ||ಇಂದುವಿನ ವಾರದರ್ಚನೆಸಂದುದು ನಿನ್ನಡಿಗಳಿಂಗೆ ಗ್ರಹಗತಿ ಸೂಚಿಸೆಹಿಂದಣ ಕರ್ಮದ ಫಲವನುಸಂದೇಹವು ಬಿಡದು ಬಿಡಿಸು ವೆಂಕಟರಮಣನೆದುರಿತವನು ಪರಿಹರಿಸು ಸ್ಥಿರಭಕ್ತಿುರಿಸುತಿರುಪತಿಯ ಸ್ಥಿರವಾಸ ಶ್ರೀ ವೆಂಕಟೇಶ ಪಭಯವಾಗುತಿದೆ ದೇವ ಭಯಬಡಿಸುತಿರೆ ಕರ್ಮಭಯವಿಲ್ಲದಿರುವದೆಂತುಭಯನಿವಾರಕನಾಮ ಭಯತಿಮಿರ ರವಿಯಹುದುಭಯ ಹೋಗಿ ಸ್ಥಿರವಾಗಿ ಮನ ನಿಲ್ಲದಿಹುದು 1ಪರಮ ಯೋಗ್ಯನಿಗೊಂದು ಪಿರಿದಾದ ದುಃಖವಿದೆಪರಿಹರಿಸದಾವ ವಿಧದಿಕರಗಿ ಕಂದುತಲಿರಲು ಬಿರಿಸು ಕರ್ಮದ ಗತಿಯುನರಹರಿಯೆ ಮಹಿಮೆಯನು ನೆರೆ ತೋರಿಸೀಗ 2ಭಜನೆಯನು ಮಾಡಿದರೆ ಭಜನೆ ಕಾಮನೆಯಾಗಿನಿಜ ದೊರಕದೆಂಬ ಭಯವುಭಜಿಸಿ ಪಾಪವ ಕಳೆಯೆ ಭಜನೆಯದಕಾಗುವುದುಭಜನೆ ದೇಹದಿ ನಿಂದು ಭವ ತಾನು ನಿಲ್ಲುವುದು 3ಕರ್ಮಕೀ ಪರಿ ಬಲವು ಧರ್ಮವಾಗಿರೆ ಬಲಿತುಕರ್ಮವೇ ಬೆಳೆಯುತಿಹುದುಮರ್ಮವರಿತರು ಬಿಡದು ಹೆಮ್ಮೆಯದು ಬಲ್ಲವಿಕೆಧರ್ಮ ಬರುವದು ನಿನಗೆ ಕರ್ಮವಿದ ಕಡೆಗೊಳಿಸು 4ಇಚ್ಛೆುಂದಿದ ಸೃಜಿಪೆ ುಚ್ಛೆುಂ ಪರಿಹರಿಪೆಇಚ್ಛೆಯೇ ತೋರುತಿಹುದುಇಚ್ಛೈಸಿ ನಿನ್ನಡಿಯನಚ್ಯುತನೆ ಭಜಿಪರಿಗೆ 5ತುಚ್ಛವಾದೀ ಕರ್ಮ ಬಿಚ್ಚದಿಹುದೇನುಗರ್ವ ಬರುವದು ಜನಕೆ ಸರ್ವಗತನೆನಿಸಿದರೆನಿರ್ವಹಿಪೆನೆನಲು ಹೀಗೆಸರ್ವೇಶ ನೀನೊಲಿದು ಸರ್ವದೋಷವ ಕಳೆಯೆಗರ್ವವೆಡೆಗೊಳ್ಳದೈ ಪೂರ್ವದವನೆನಿಸು 6ಸೂತ್ರವನು ನಿರ್ಮಿಸಿದೆ ಸೂತ್ರ ನಿನ್ನಾಧೀನಸೂತ್ರಕ್ಕೆ ಶಕ್ತಿಯೆಂತುಯಾತಕೀ ಕರ್ಮಗತರನು ಮಾಡಿ ಜನರುಗಳ ಪಾತಕರು ಹೊರಗೆಂದು ಯಾತನೆಯ ಮಾಳ್ಪೆ 7ಮೃಷೆಯೆಂದ ಮಾತ್ರದಲಿ ಮೃಷೆಯಾಗದೀ ದುಃಖವಿಷಮವೇ ಬಳಲಿಸುವದುವಿಷವು ಮೊದಲಾಗಿ ತದ್ವಿಷಮ ಕರ್ಮದಿ ಹರವುವಿಷಮವಿದು ನಿನ್ನ ನಿಜದಲಿ ತೊಲಗದೆಂತು 8ಕರುಣಾಕರನೆ ನೀನು ಗುರುಮುಖದಿ ಕರ್ಮಗಳಬರಸೆಳೆದು ಬಯಲಮಾಡೆಮರೆವೆಯಾವರಣವಿರಬೇಕೆ ತಿರುಪತಿವಾಸವರದ ಶ್ರೀ ವಾಸುದೇವಾರ್ಯ ವೆಂಕಟರಮಣ 9ಓಂ ಪಾರ್ಥಸಾರಥಯೇ ನಮಃ
--------------
ತಿಮ್ಮಪ್ಪದಾಸರು
ಕಂಜನಯನನ ಕಂಡೆ ಕಾಮನಯ್ಯನ ಪ. ಮಂಜುಗುಣಿಯೊಳಿಪ್ಪನ ತಿಮ್ಮಪ್ಪನಅ.ಪ ಪುಟ್ಟ ಪಾವುಗೆಯೊಳ್ಮೆಟ್ಟಿ ತೊಟ್ಟಂಬುಚಕ್ರವಕಟ್ಟಿದ ಕಠಾರಿಯಿಂದ ದುಷ್ಟರ ಹುಡಿಗುಟ್ಟುವ 1 ಚಕ್ರ ಶಂಖಧರನಾಗಿ ಕಕ್ಕಸರ ರಕ್ಕಸರಶಿಕ್ಷಿಸಿ ಶಕ್ರಮುಖ್ಯರ ಅಕ್ಕರಿಂದ ರಕ್ಷಿಸುವ 2 ಆಗಮವೈರಿಯನು ಕೊಂದಾಗ ಹಯವದನನ್ನಈಗ ಮಾನಿಸರಿಗೆ ಸೌಭಾಗ್ಯವೀವ ದೇವನ3
--------------
ವಾದಿರಾಜ
ಕಂಡು ಧನ್ಯಳಾದೆ ನಾನೀಗ | ಈ ದಿವ್ಯ ಪಾದ ಕಂಡು ಧನ್ಯಳಾದೆ ನಾನೀಗ ಪ. ಕಂಡು ಧನ್ಯಳಾದೆನೀಗ ತಂಡ ತಂಡದ ಪಾಪಗಳನು ಪಾದ ಅ.ಪ. ಭಕ್ತ ನುಡಿಗೆ ಮನದಿ ಮರುಗಿ ಮುಕ್ತಿ ತೋರ್ವೆನೆಂದು ಬಂದು ಶಕ್ತನಾದ ಹರಿಯ ತೋರಿ ಪಾದ 1 ಕಮಲನಾಭನ ಭಜಿಪ ಪಾದ ಕಮಲಾಪತಿಗೆ ಪ್ರೀತಿ ಪಾದ ಕಮಲಪುಷ್ಪ ಹರಿಗೆ ಅರ್ಪಿಸಿ ಪಾದ 2 ತಂದೆ ಮುದ್ದುಮೋಹನರೆಂ- ತೆಂದು ಜಗದಿ ಮೆರೆವೊ ಪಾದ ನಂದ ಕಂದನ ಮನದಿ ತೋರಿ ಇಂದು ಆನಂದ ಕೊಡುವೊ3 ಪಾದೋದಕವÀ ಪಾನಮಾಡಿ ಪಾದಪದ್ಮ ನಂಬಿ ನಮಿಸಿ ಪಾದಕಮಲ ಸ್ತೋತ್ರಗೈವೆ 4 ಗೋಪಾಲಕೃಷ್ಣವಿಠ್ಠಲನ ರೂಪ ಮನದಿ ತೋರ್ವ ಪಾದ ಪಾಪಗಳನು ಧ್ವಂಸಗೈದು ಪಾದ 5
--------------
ಅಂಬಾಬಾಯಿ
ಕಂಡು ಹೇಳಿಕೊಂಡೆನೆನ್ನ ಕಷ್ಟವ | ರಂಗನನು ಪ ಕಂಡ ಹೇಳಿಕೊಂಡೆನೆನ್ನ ಕಷ್ಟವ ಅ.ಪ. ಭೃತ್ಯ ಜನರು ಕುಡಿದ ನೀರು ಕದಲದಂತೆ ಒಡಲ ಸಲಹಿಕೊಂಡು ಬರುವ ಕಡಲಶಯನನಾದ ಹರಿಯ 1 ಜಗವ ಪೊರೆವ ದೇವ ಕುಂತಿ ಮಗನ ರಥಕೆ ಸೂತನಾಗಿ ಭುಜಗ ಶರವು ಅವನ ತಗಲದಂತೆ ಮಾಡಿದವನ 2 ಭಕುತ ಜನರು ಮಾಡಿದಂಥ ಸಕಲ ದುರಿತಗಳನು ಕಳೆದು ಮುಕುತಿ ಮಾರ್ಗ ತೋರುತಿರುವ ಶಕುತ ರಂಗೇಶವಿಠಲನ 3
--------------
ರಂಗೇಶವಿಠಲದಾಸರು
ಕಂಡೆ ನಾ ಕಣ್ಣೆದುರಲಿ ಕೃಷ್ಣನಾ ಪ ಕಂಡೆ ನಾನೀಗ ಬ್ರಹ್ಮಾಂಡದೊಡೆಯ ತಾ ತಾಂಡವಾಡಿ ಭೂಖಂಡದಿ ಮೆರೆದನ ಅ.ಪ ಜಯಮುನಿಹೃತ್ಕುಮುದಾಲಯದಿ ಸುಲೀ- ಲೆಯಾಡುತಿಹ ವಾಯ್ವಂತರ್ಗತ ಕೃಷ್ಣ ಜಯಜಯಜಯ ಶ್ರೀ ವಿಜಯಸಾರಥಿ ಭವ- ಭಯಹಾರಿ ಭಕ್ತರಭಯಪ್ರದಾಯಕ ದಯವನಧಿಯೆ ಮನದಾಮಯ ಕಳೆದು ನಿ- ರ್ಭಯ ದೊಳು ಕಾಯುವ ಜಗದೊಡೆಯಾ ಧೇಯವು ನಿನಗಿದು ಸದ್ಭಕುತರಾಶ್ರಯ ತಟಿತಕೋಟಿ ನಿಭಕಾಯ ಶ್ರೀಭೂಕಾಂತ ದೈತ್ಯಕೃತಾಂತ ಜಗದಾದ್ಯಂತ ನಿಂತು ಜೀವರಾದ್ಯಂತ ಕೃತ್ಯಗಳ್ ಸಂತತನಡೆಸುವ ಕಂತುಪಿತನ ನಾ 1 ಶ್ರೀಕಳತ್ರ ಪರಲೋಕೈಕನಾಥ ಜಗ- ದೇಕವಂದ್ಯನೆ ನರಲೋಕದ ಕ್ರೀಡೆಯೊಳ್ ಭೀಕರಿಲ್ಲದೆ ಬಕಶಕಟಾಕಂಸಾದಿಗಳ ಏಕಘಳಿಗೆ ಯೊಳು ನೀ ಕೊಂದು ನಲಿದು ನಿಂದೆ ಪಾಕಶಾಸನ ದಿವೌಕಸವಂದ್ಯನೆ ಪ್ರಕಟನಹುದೊ ನಿಪ್ಕುಟಿಲರಿಗೆ ದಿಟ್ಟತನದಿ ಹೃತ್ತಟದಲಿ ಧೇನಿಸೆ ತಟಿತದಂದದಲಿ ಒಳಗೇ ಭಟಜನರುಗಳಾ ಕಂಟಕದೆಡರಾಕಟಕಪರಿಹರ ವಿಟ್ಟು ಕರುಣಾಕಟಾಕ್ಷದಿಂದ ಸಂತ ವಿಟ್ಟು ನಟಿಸುವಾ ಸೃಷ್ಟಿಕರ್ತನ ನಾ 2 ರಂಗಾ ನಿನ್ನವರುಗಳಿಂಗಿತದಂತೆ ಮಾ- ತಂಗವರನ ನಿನ್ಹಾಂಗೆನಡೆಸಿ ಶುಭಾಂಗ ಸದ್ಭಕ್ತಕೃ- ಪಾಂಗ ಮಂಗಳಾಂಗ ತುಂಗಮಹಿಮ ಸ- ಪ್ತಾಂಗ ಏಕೋನವಿಂಶತಿ ಮಂಗಳವಿಶ್ವನೆ ಕಂಗಳಲಿದ್ದು ಜಗಂಗಳ ಕಾರ್ಯಂಗಳಿಗೀವೆ ಹಿಂಗಿಸಿ ಅಂಗದ ಕಾರ್ಯವ ನೀ ಮನ ಕಂಗಳಿಗಿತ್ತು ಎಂದಿಗು ಪೊರೆವಾ ಮಂಗಳ ಪ್ರಾಜ್ಞಭೋಗಂಗಳ ಪ್ರಜ್ಞ ಆಗದುಸೂಜ್ಞ ರಂಗನಾಥ ಹೃದ್ರಂಗದಿ ನಲಿಯುತ ಹಾಂಗೆ ನಿಂದಿಹ ಈ ಶ್ರೀವೇಂಕಟೇಶನ ನಾ 3
--------------
ಉರಗಾದ್ರಿವಾಸವಿಠಲದಾಸರು
ಕಂಡೆ ನಾ ಬ್ರಹ್ಮಾಂಡಯೊಡೆಯ ಶ್ರೀ ವೆಂಕಟೇಶನ ಪ ಕಂಡೆ ನಾ ಭಕುತರ ಹಿಂಡುಗಳು ನೆರೆ ಕೊಂಡಾಡುತಲಿದೆ ಪದಪುಂಡರೀಕವ ನಾ ಅ.ಪ ತುಂಗ ಮಹಿಮ ಸತ್ಸಂಗವಿತ್ತು ಮನದಂತರ ವರಿ- ತಾಂಗೀರಸದೀ ಮಂಗಳ ಪೌರ್ಣಿಮೆಭಾರ್ಗವವಾಸರದಿ ಭಾರ್ಗವಿಪತಿ ನಿನ್ನನು ಗ್ರಹದಿ ನಗದೊಡೆಯ ಭಕ್ತ- ರಘಹರಿಸುತ ಪನ್ನಗಗಿರಿಯೊಡೆಯ ನಿನ್ನಯ ಗುಡಿಯನ್ನು ಬಗೆ ಬಗೆ ಸುತ್ತಿಪರ ಹಿಂಡನ್ನು ನಾ ಕಂಡೆನೋ ಜಾಗು ಮಾಡದೆ ಬಾಯಿಬೀಗವ ಕೈಕೊಂಡು ಸಾಗಿ ಕಾಸಾರದಿ ಸ್ನಾನ ಮಾಡಿಕೊಂಡು ಬಾಗಿ ವರಾಹದೇವರ ವಂದಿಸಿ ಬೇಗದಿ ಹರಕೆ ಕೈಕೊಂಡಿಹ ದೇವನ 1 ಮುಕ್ತರೊಡೆಯ ಪುರುಷೋತ್ತಮ ನಿನ್ನಯ ಭಕ್ತರ ವಿಪತ್ತುಗಳೆಲ್ಲ ಹರಿಸಿಶಕ್ತ್ಯಾನುಸಾರ ತ್ವ- ದ್ಭಕ್ತರೆಸಗುವ ಅತ್ಯಲ್ಪಭಕ್ತಿಯ ಸ್ವೀಕರಿಸಿ ಭಕ್ತಿಯಿಂದ ಪ್ರಾಕಾರದಿ ಸುತ್ತಲು ಹೊತ್ತಗಂಡದೀಪಸಾರುತಲಿ ನಿತ್ಯನೂತನ ನಿನ್ನ ಸ್ತುತಿಸುತಲೀ ಮತ್ತೆ ಉರುಳುತಲೀ ಉತ್ತಮಗತಿಪ್ರದ ವ್ಯಕ್ತನಹುದೊ ತ್ವ- ದ್ಭಕ್ತರ ಮನೋರಥ ಪೂರ್ತಿಮಾಡುವ ಭಕ್ತವತ್ಸಲನೆಂಬ ಬಿರುದು ಪೊತ್ತ ಸ- ರ್ವೋತ್ತಮ ಶ್ರೀ ಪುರುಷೋತ್ತಮ ನಿನ್ನನು2 ಬೊಮ್ಮಜನಕ ಪರಬೊಮ್ಮನೆ ನಿನ್ನಯ ಸನ್ಮಹಿಮೆಯ ನಾ ಒಮ್ಮನದೀ ಒಮ್ಮೆಯಾದರು ಮನ್ಮನದಲಿ ನಿನ್ನಯ ಸನ್ಮಂಗಳರೂಪವ ನಿಲ್ಲಿಸದೆ ಸುಮ್ಮನೆಕುಳಿತು ಇಮ್ಮನನಾಗಿರೆ ಘಮ್ಮನೆ ಎನ್ನನು ಒಳಕ್ವೈದೆ ಕಣ್ಮನದೆದುರಲಿ ನೀ ನಿಂದೆ ನೀನೆನ್ನಯ ತಂದೆ ಸನ್ಮುದದಿಂದೆ ಪಾಮರನೆಂದೆನ್ನ ಪ್ರೇಮದಿ ಕರುಣಿಸಿ ಸನ್ಮಹಿಮೆಯ ತೋರ್ದೆ ಜಗದೀಶ ಕಾಮಿತಜನರ ಕಲ್ಪದ್ರುಮ ನೀನೆಲೊ ಈ ಮೇಲುಗಿರೀಶ ಶ್ರೀ ವೆಂಕಟೇಶಾ ನಿನ್ನ3
--------------
ಉರಗಾದ್ರಿವಾಸವಿಠಲದಾಸರು
ಕಂಡೆನಮ್ಮಾ ಕೌತುಕದಾ ಗಾರುಡಿಗನಾ | ಕೊಂಡಾಡಲಳವಲ್ಲ ಹೇಳಲೇ ನಾ ಪ ಬೋಧದನಾಗರ ನೂದುವನಾ 1 ಭಕ್ತರುದ್ದೇಶಕ ಬಂದ ಜವದಿ 2 ಸಕಲ ತೇಜದ ಬಬ್ಬುಳಿಯೋ ರೂಪ ನೆಲಿಯಾ | ಪ್ರಕಟ ತಿಳಿಯದು ನಿಜ ಕಳಿಯನಾ 3 ಅರಿಶಿಕ್ಷಾ ಭಕುತರ ಪಕ್ಷಾವೆಂಬ ನಾನಾ | ಬಿರುದು ಕಟ್ಟಿಹ ಮಹಿಮನಾ 4 ಕಾಳ ಸರ್ಪದ ನಿಜ ಮುಖ ಬಂಧವನ ಮಾಡಿ | ಜಾಳಿಸಿದನು ಭಯ ಈಡ್ಯಾಡಿ 5 ಹಮ್ಮಿನ ಗಾವ ಗುಂಡ ಗಜದಂತ ಶರಣರಿಗೆ | ವಮ್ಮಿಲೆ ಕಲೆಗಳ ದೋರುದೀಗನಾ 6 ತಂದೆ ಮಹಿಪತಿ ಸುತ ಸ್ವಾಂಮಿ ದುರ್ಲಭದಾ | ನಂದವ ತೋರಿದಾ ದಯದಿಂದಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು