ಒಟ್ಟು 389 ಕಡೆಗಳಲ್ಲಿ , 73 ದಾಸರು , 342 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುಕ್ತನಲ್ಲವೇ ಭವದಿ ಮುಕ್ತನಲ್ಲವೇ ಪ ಶಕ್ತನಾದ ಹರಿಯ ಪರಮ ಭಕ್ತಿಯಿಂದ ಭಜಿಪ ನರನು ಅ.ಪ. ಮಧುವಿರೋಧಿಯಮಲ ಗುಣವ ನಲಿದು ಪಾಡುವವನು 1 ಕೇಶವಗೆ ರಮಾಬ್ಜಭವ ಸದಾಶಿವ ಶಕ್ರಾದಿ ಸುರರು ದಾಸರು ಎವೆ ಇಡುವ ಶಕ್ತಿ ಲೇಶವಿಲ್ಲವೆಂಬ ನರನು 2 ಒಂದಧಿಕ ದಶೇಂದ್ರಿಯಗಳಿಗಿಂದಿರೇಶ ವಿಷಯವ ಸಮ ಬಂಧಗೈಸಿ ವೈಷಯಿಕ ಸುಖ ತಂದು ಕೊಡುವನೆಂಬ ನರನು 3 ಈ ಪರಿಯಲಿ ತಿಳಿದು ಪುಣ್ಯ ಪಾಪಕರ್ಮ ದುಃಖಸುಖ ಜ ಯಾಪಜಯ ಮಾನಾಪಮಾನ ಶ್ರೀಪ ಕೊಡುವನೆಂಬ ನರನು 4 ವೇದ ಶಾಸ್ತ್ರಗಳಲಿ ಇಹ ವಿರೋಧವಾಕ್ಯಗಳನು ಶ್ರೀ ಪ್ರ ಮೋದ ತೀರ್ಥರುಕ್ತಿಯಿಂದ ಶೋಧಿಸುತಲಿ ಸುಖಿಪ ನರನು 5 ಕರ್ಮ ವಿಹಿತ ಅಸಜ್ಜನರು ಮಾಳ್ಪ ವಿಹಿತವಾದ ಕಾಲಕದು ಅವಿಹಿತವೆಂದು ತಿಳಿಯುವವನು6 ಸ್ವರ್ಗ ಭೂಮಿ ಕರ್ಮ ಹರಿಸುವ ಹರಿಯೆಂಬ ನರನು7 ಪರಮ ಪುರುಷಗರ್ಪಿಸುತಲಿ ಹರುಷ ಬಡುತಲಿಪ್ಪ ನರನು 8 ಈ ಶರೀರದರಸು ಶ್ರೀನಿವಾಸಾ ಮಾತೆ ಪ್ರಾಣ ಪಾರ್ವ ತೀಶರಿಹರು ಎಂದೀ ದೇಹ ಪೋಷಿಸುತಲಿ ತೋಷಿಸುವನು 9 ಪ್ರಿಯ ವಸ್ತುಗಳೊಳಗೆ ಅನ್ನಮಯನೆ ಪ್ರೀಯನೆಂದು ಅನ್ಯ ಬಯಕೆಗಳನು ಜರಿದು ಹರಿಯ ದಯವ ಬಯಸುತಿಪ್ಪ ನರನ 10 ಶತ್ರುತಾಪಕನುಳಿದು ಅನ್ಯ ಮಿತ್ರರಿಲ್ಲವೆಂದು ಅಹೋ ರಾತ್ರಿಯಲ್ಲಿ ಬಿಡದೆ ಜಗದ್ಧಾತ್ರನ ಗುಣ ತುತಿಪ ನರನು11 ಬಿಂಬನೆನಿಸಿ ಸರ್ವರ ಹೃದಯಾಂಬರದೊಳಗಿದ್ದು ಜನವಿ ಡಂಬನಾರ್ಥ ಕರ್ಮಗಳ ಆರಂಭ ಮಾಳ್ಪೆನೆಂಬ ನರನು 12 ಅಕ್ಷರೇಢ್ಯ ಬ್ರಹ್ಮ ವಾಯು ತ್ರ್ಯಕ್ಷಸುರಪ ಸುರರೊಳಗ ಧ್ಯಕ್ಷ ಸರ್ವ ಕರ್ಮಗಳಿಗೆ ಸಾಕ್ಷಿಯೆಂದು ಸ್ಮರಿಸುವವನು 13 ಅಂಬುಜ ಭವಾಂಡದೊಳು ಮಹಾಂಬರವಿಪ್ಪಂತೆ ಶ್ರೀ ನಿ ತಂಬಿನಿ ಸಹ ಸರ್ವರೊಳಗೆ ತುಂಬಿಹನೆಂದರಿತ ನರನು 14 ಅದ್ವಿತೀಯನಪೇಕ್ಷ ಭಕ್ತ ಹೃದ್ವನಜ ನಿವಾಸಿಯೆನಿಸಿ ಕದ್ದೊಯ್ದವರಘವನುಣಿಪನದ್ವಯತನೆಂಬ ನರನು 15 ಜಾಂಬವತೀರಮಣ ವಿಷಯ ಹಂಬಲವನು ಬಿಡಿಸಿ ತನ್ನ ಕಾಂಬ ಸುಖವನಿತ್ತು ನಿಜ ಕುಟುಂಬದಿಡುವನೆಂಬ ನರನು 16 ಅಣು ಮಹತ್ಪದಾರ್ಥ ವಿಲಕ್ಷಣ ವಿಶೋಕ ಜೀವರೊಡನೆ ಜನಿಸಿ ಪುಣ್ಯ ಪಾಪ ಫಲಗುಳುಣದೆ ಉಣಿಪನೆಂಬ ನರನು 17 ಕರ್ಮ ಸುದತಿಯರೊಡಗೂಡಿ ಸಮಾ ಶೂನ್ಯ ಮಾಳ್ಪನೆಂದು ಪದೇ ಪದೆಗೆ ಸ್ಮರಿಸುವವನು18 ಸ್ವಾತಿವರುಷ ವಾರಿಕಣವ ಚಾತಕ ಹಾರೈಸುವಂತೆ ಶ್ವೇತವಾಹನ ಸಖನ ಕಥೆಯ ಪ್ರೀತಿಯಿಂದ ಕೇಳ್ಪ ನರನು 19 ಲೋಕಬಂಧು ಲೋಕನಾಥ ಲೋಕಮಿತ್ರ ಲೋಕರೂಪ ಲೋಕರಂತೆ ಲೋಕದೊಳು ವಿಶೋಕ ಮಾಳ್ಪನೆಂಬ ನರನು20 ಶಾತಕುಂಭವರ್ಣ ಜಗನ್ನಾಥ ವಿಠಲನೆಂಬ ಮಹ ದ್ಭೂತ ಬಡಕರಾವು ಇವನ ಭೀತಿ ಬಿಡದು ಎಂಬನರನು 21
--------------
ಜಗನ್ನಾಥದಾಸರು
ಮುಕ್ತನಾವನೋ ಜೀವನ್ಮುಕ್ತನಾವನೋ ಪ ಮುಕ್ತನಾವನಿವರ ಪಾದಾಸಕ್ತನಾಗಿ ಸರ್ವಕರ್ಮ ಭಕ್ತಿಯಿಂದ ನೀಡಿ ವಿಷಯಾಸಕ್ತನಾಗದವನಿಗಿನ್ನ ಅ.ಪ ಉದಯಕಾಲದಲ್ಲಿ ಎದ್ದು ನದಿಯಸ್ನಾನಮಾಡಿ ಇವರ ಪದುಮಸಮಪಾದಯುಗಳ ಹೃದಯದಲ್ಲಿ ಭಜಿಪಗಿನ್ನ 1 ವನಿತೆ ಧಾನ್ಯ ಧನುವು ತನಯ ಪ್ರಾಣ ಇವರ ಪಾದವನಜಕರ್ಪಿಸಿರುವಗಿನ್ನ 2 ಊಟ ಕೂಟ ನೋಟಮಾಟ ಪಾಠ ಆಟ ಕಾಟ ಇವರ ಉದಧಿ ದಾಟುವಾವಗಿನ್ನಮತ್ತೆ 3 ಉಕ್ತ ಕರ್ಮದಲ್ಲಿ ಮನ ಸಕ್ತನಾಗಿ ಹರಿಯ ಪಾದ ಭಕ್ತಿಯಿಂದ ಭಜಿಸಿ ಪಾಪಮುಕ್ತನಾಗುವವಗಿನ್ನ 4 ಶಕ್ತಿ ಇದ್ದರೊಳಗೆ ಹರಿಯ ಭಕ್ತಜನರ ಭಜಿಸಿ ಸರ್ವೋ ವಿಭೂತಿ ಮನದಿ ವ್ಯಕ್ತಮಾಡಿದವಗಿನ್ನ 5 ಮೋದತೀರ್ಥ ಶಾಸ್ತ್ರಸಾರ ಸ್ವಾದ ಮನದಿ ತಿಳಿದು ಅವರ ಹಾದಿಹಿಡಿದು ಬುಧರ ದಿವ್ಯ ಪಾದಯುಗಳ ಭಜಿಪಗಿನ್ನ 6 ಶಿರದಿ ಇದ್ದ ಹರಿಯ ರೂಪ ಅರಿದು ಮನಸಿನಿಂದ ನಿತ್ಯ ಶಿರದಿ ಕಾರ್ಯಮಾಡಿ ತಾನು ಹಿರಿದು ಹಿಗ್ಗುವಗಿನ್ನ 7 ನೇತ್ರಮೊದಲಾದ ಸರ್ವಗಾತ್ರದಲ್ಲಿ ಇರುವ ತೀರ್ಥ ಕ್ಷೇತ್ರಮೂರ್ತಿ ತಿಳಿದು ತನ್ನ ಗಾತ್ರನಿರ್ಮಲ ಮಾಳ್ಪಗಿನ್ನ 8 ಈಶ ಹರಿಯು ಸರ್ವ ಜೀವ ದಾಸರೆಂದು ತನ್ನ ಹೃದಯೋ ಪಾಸನಾವ ಮಾಡಿ ವಿಷಯ ಆಶೆಬಿಟ್ಟು ಇರುವಗಿನ್ನ 9 ಎನು ಮಾಳ್ಪ ಕರ್ಮವೆಲ್ಲ ಶ್ರೀನಿವಾಸ ಮಾಳ್ಪನೆಂದು ಜ್ಞಾನದಿಂದ ಸರ್ವರಲ್ಲಿ ಧ್ಯಾನಮಾಳ್ಪ ಮನುಜಗಿನ್ನ 10 ಶ್ವಾನ ಗೋವು ದ್ವಿಜ ಮತ್ತೆ ಅನಿ ಮೊದಲು ಸರ್ವರಲ್ಲಿ ಜ್ಞಾನಗಮ್ಯ ತಾನು (ತಾನೆ) ಸಮಾನನೆಂದವಗಿನ್ನ 11 ಅಮೃತ ವಿಷವು ಎಲ್ಲ ಸ್ವಾದು ಸಮವೆಂದು ಅಲ್ಲಿ ಇಚ್ಚೇ ಮಾಡದವಗಿನ್ನ 12 ವೃತ್ರಸೂದನನುಜ ಸರ್ವಕರ್ತೃ ಎಂಬವಗಿನ್ನ 13 ಪಾದ ದೂತ ನಾನು ಎಂದು ನಿತ್ಯ ಪಾತಕಾರ್ಯ ಮಾಡಿದಾಗ್ಯು ಪೂತನೆನಿಪನವನಗಿನ್ನ 14 ಸಿಟ್ಟು ಶೋಕ ಹರ್ಷ ಮೋಹ ಸುಟ್ಟು ಗುರುಜಗನ್ನಾಥ ವಿಠಲನ್ನ ಭಜಿಸಿ ಜಗದಿ ಶಿಷ್ಟ ನಾಗಿರುವಗಿನ್ನ 15
--------------
ಗುರುಜಗನ್ನಾಥದಾಸರು
ಮುಕ್ತಿ ಹೇಗೆ ಬಂದೀತೊ ಪಾಮರನೆ ಕೇಳೊ ವಿ- ರಕ್ತಿಯಾಗದೆ ಶಕ್ತಿ ಕಾಣಾದೆ ಪ ದುರ್ಜನ ದುಷ್ಟರಾದವರಾ ದೂರಮಾಡಿ ಮನದಿ ಸಾಧು ಕರುಣಾವು ಪಡುವಾ 1 ವೇದಶಾಸ್ತ್ರ ಸಂಪನ್ನಾರು ಆದ ಪಂಡಿತಾರು ಕೂಡಿ ಭೇದಾಭೇದಾರ್ಥಗಳು ಎಲ್ಲಾ ವಿದಿತವಾಗಿ ತಿಳುವ ಜ್ಞಾನಾ 2 ಪಾದ ಹಿಡದೂ ನಿಖರನಾಗಿ ನಿಶ್ಚಲನಾಗಿ ನಿಂತು ಸೇವೆ ಮಾಡುವಂಥಾ 3 ನಿತ್ಯ ಕರ್ಮಾ ನೇಮ ವೃತಾ ಸತ್ಯವಾಗಿ ನಡಸುವಂಥಾ ಉತ್ತುಮಾರ ಮನೆಗಳಲ್ಲಿ ಭೃತ್ಯನಾಗಿ ನಡೆಸೆಂಬುವಾ 4 ಮರ್ಮಮಂತ್ರಾಚಮನಾಗಳಲ್ಲಿ ಸರ್ವಕಾಲ ಹರಿಯ ಭಜಿಸಿ ಸತ್ಪುರಷಾ ತಾನಾಗುವಂಥಾ 5 ನಾನಾ ಪರಿಯಲಿ ಸ್ಮರಣೆಯ ಮಾಡಿ ನಾರಾಯಣನಾ ಕೃ------------- 6 ಚರಣವನ್ನೆ ಪೂಜಿಸಿ ಧನ್ಯನಾ----ಸನ್ಮಾರ್ಗವು ಕಾಣುವಂಥಾ 7
--------------
ಹೆನ್ನೆರಂಗದಾಸರು
ಮೃತ್ಯುಂಜಯನೇ ಶರಣು ಶಂಕರನೆ ಶರಣು ಶರಣು ಪ ವಾಸವೇ ಕೈಲಾಸ ವಸನವೇ ದಿಕ್ಕುಗಳು ಪೂಸಿಹುದು ಸರ್ವಾಂಗವೆಲ್ಲ ಭಸ್ಮ ನೇಸರಿನ ತೇಜ ಶಶಿಜೂಟ ಗಂಗಾಧರನ ಪಾಸಟಿಯು ನಿನಗೊಬ್ಬರಿಲ್ಲ ಗೌರೀಶ 1 ಪಂಚ ವಿಂಶತಿ ತತ್ವದೂರ ವಿಶ್ವಾಧಾರ ಪಂಚ ಶರಹರ ವಿರಂಚ್ಯಾದಿ ಸಂಸ್ತುತಾ ನಿತ್ಯ ಪ್ರ ಪಂಚ ಮಯನಾದ ಗಿರಿಜೇಶ ವಿಶ್ವೇಶ 2 ಪರಮ ಪುರುಷ ಪರೇಶ ಪರಮ ಗುಣಗಣ ನಿಲಯ ಶರಣ ಜನ ಸುರಧೇನು ವಿಶ್ವವಂದ್ಯಾ ಭವ ಪೂಜ್ಯಸೂರ್ಯ ಕೋಟಿಪ್ರಕಾಶ ಉರಗ ಭೂಷಣ ವೃಷಭಾರೂಢ ಗೌರೀಶ 3 ಭೂತಪತಿ ಭುವನೇಶ ಪ್ರೇತ ನಿಲಯ ನಿವಾಸ ನೂತನದ ಗಜಚರ್ಮ ನಿನಗೆ ವಿಖ್ಯಾತ ಗೀತ ನೃತ್ಯ ವಿಲಾಸ ಮಾತುಳಾಧ್ವರನಾಶ ಭಾತಿ ಕಂಠದಿ ವಿಷವು ಗೌರೀಶ 4 ಧರೆಯೊಳಧಿಕತರ ವರದ ಮೂಲನಿವಾಸ ಕರಿವದನ ನಂದೀಶ ಶಕ್ತಿ ಉಮೆ ಸಹಿತ ಭರದಿಂದ ನೆಲಸಿ ಸೊಪ್ಪಿನ ಸುಬ್ಬಗೆವರವಿತ್ತೆ ದುರಿತವನು ಪರಿಹರಿಸೋ ಶಂಭುಲಿಂಗೇಶ 5
--------------
ಕವಿ ಪರಮದೇವದಾಸರು
ಯಾಕಿಂತುಪೇಕ್ಷಿಸುವಿ ಪರಮ ಕರು- ಣಾಕರ ಶಿಕ್ಷಿಸುವಿ ಪ. ಹಿಂದಿನಾಪತ್ತುಗಳ ಸಮಯದಿ ನೀ ಬಂದೆನ್ನ ಕಾಯ್ದುದಿಲ್ಲವೆ ತಂದೆ ನೀನೆಂದು ನಂಬಿದ ಮೇಲೆನ್ನ ನೀನು ಇಂದಿಂತುಪೇಕ್ಷಿಪುದೆ 1 ಭವರೋಗಹಾರಿ ನಿನ್ನ ಭಕ್ತನಿಗಿಂಥ ಭವಣೆಯು ನಿಲುವುದುಂಟೆ ಕವಿ ಸನಕಾದ್ಯರಂತೆ ದೈಹಿಕ ದು:ಖ ಸಹಿಸಲು ಶಕ್ತಿಯುಂಟೆ 2 ಸೈರಿಸಲಾರೆ ಇನ್ನು ವೇದನೆಯಾ ಶೌರೀ ನೀ ದಯದೋರಿನ್ನು ಬರಗರಸಮಂಡನ ಕೃಪಾಕಟಾಕ್ಷ ದೋರೊ ಸುರಾರಿಖಂಡನ 3
--------------
ತುಪಾಕಿ ವೆಂಕಟರಮಣಾಚಾರ್ಯ
ಯಾಕೆ ಬಳಲಿಸುವಿ ಗುರುರಾಯಾ ಇನ್ನು ಸಾಕು ಮಾಡಿ ಸಲಹೋ ಕಡು ಬೇಗ ಜೀಯಾ ಭಕ್ತ ಕೇಳಿದರೆ ಕೊಡವಲ್ಲಿ ಉಪ- ಯುಕ್ತವಲ್ಲದ ಮಾಯವನು ಬಿಡಿಸಲೊಲ್ಲಿ ಶಕ್ತಿ ನಿನಗಿಹುದೋ ಕರದಲ್ಲಿ ವಿ- ರಕ್ತನೇ ಕೋಪವ್ಯಾತಕೋ ದಾಸನಲ್ಲಿ 1 ತ್ರಾಹಿ ತ್ರಾಹಿ ಗುರುರಾಯಾ ಈಗ ದೇಹಿ ಎಂಬಗೆ ನಾಸ್ತಿ ಎನಬ್ಯಾಡೋ ಜೀಯಾ ದೇಹ ನಿನಗೊಪ್ಪಿಸಿದೆನಯ್ಯಾ ಮುದ್ದು ಮೋಹದಾ ಹರಿಕಂದಾ ಪ್ರಹ್ಲಾದರಾಯಾ 2 ಇಷ್ಟಕ್ಕೆ ನಾ ಬಿಡುವುದಿಲ್ಲ ನೀನು ಥಟ್ಟನೆ ಕೊರಳ ಕೊಯ್ದರೆ ಯತ್ನವಿಲ್ಲಾ ಕೊಟ್ಟು ಕಾಯ್ದರೇ ಅಹಿತವಲ್ಲಾ ನಮ್ಮ ಧಿಟ್ಟ ಶ್ರೀ ಹನುಮೇಶವಿಠಲನ ಜಾಲಾ 3
--------------
ಹನುಮೇಶವಿಠಲ
ಯುಕ್ತಿ ಯುಕ್ತದಮಾತ ಕೇಳಬೇಕುಶಕ್ತಿಯನು ಮಾಡದಿರು ಮುಕ್ತಿಗನುವಾಗು ಪಚಿತ್ತಶುದ್ಧಿಯಲಿದ್ದು ಭಾವ ವಿಷಯದಿಕೂಡೆಮತ್ತೆ ಬಂಧಿಸಿ ಬಲಿದು ಮುಳುಗುತಿಹುದುಕಿತ್ತದನು ನಿಜದಲ್ಲಿ ನಿಲಿಸಿಯನುಸಂಧಾನವತ್ಯಧಿಕವಾದಡೆಯು ಮಿತನುಡಿ ಹಿತವೂ 1ಕಾರ್ಯಕಾರಣರೂಪನಾಗಿ ಜಗದೀಶ್ವರನುಧೈರ್ಯಗಳು ಬರುವಂತೆ ಪ್ರೇರಿಸುತ್ತಾಆರ್ಯರೊಳಗೆಣಿಕೆಯನು ಮಾಡಿಸುತಲಜ್ಞಾನಸೂರ್ಯನಾಗಿಯೆ ತಾನು ತೋರುತಿರ್ದಡೆಯೂ 2ಕರಣೇಂದ್ರಿಯಂಗಳಿವು ಜಡವಾಗಿ ವಿಷಯಗಳಬೆರೆಸಲರಿಯವು ತಾವು ಇಚ್ಛೆುಂದಾತಿರುಪತಿಯ ವೆಂಕಟನು ಸೂತ್ರಧಾರಕನಾಗಿಗುರುವಾಸುದೇವ ರೂಪದಿ ಸಲಹುತಿರಲು 3ತನುವನುಕೂಲಕೆ ಬಂದುದ ನೆನೆದುಸುರಿದ ಜೀವನಭಿಮಾನವ ಸಡಿಲಿಸುತಲಿ ವಿನಯದಿ ಗುರುವನು ಸೇರ್ವರೆ ನಿನಗೆರವಿಲ್ಲೆನ್ನುತಅನುಸರಿಸಿದ ಕಾರ್ಯವಾಸಿಗೋಸುಗ ಬಿಡದೆ 4
--------------
ತಿಮ್ಮಪ್ಪದಾಸರು
ಯೋಗಿವರ್ಯ ಶಿರಬಾಗಿ ನಮಿಸುವೆನು ಶ್ರೀ ರಾಘವೇಂದ್ರನೆ ಪ ಹೇಳಿದ ವಚನವ ಕೇಳಿ ಮನದಲಿ ಬಹಳ ಸುಖಿಸುತಲಿಕಾಲಕಾಲಕೆ ಶ್ರೀ ಲಲಾಮನ ಲೀಲೆ ಪಾಡುತ ವ್ಯಾಳೆ ನೋಡುವಿ 1 ಸತ್ಯವಾಣಿಯು ಮಿಥ್ಯವಾಗದು ಮತ್ತೆ ಲೋಕದೊಳುಚಿತ್ತದೊಳು ಅನಿತ್ಯ ಚಿಂತಿಸಿ ವೃತ್ತಿ ಕೃಷ್ಣನೊಳು ಇತ್ತು ಪಾಡುವಿ 2 ಎಲ್ಲ ಬಿಟ್ಟವ ಸುಳ್ಳನಾಡೊದು ಎಲ್ಲಿ ಕಾಣಿಸದುಫುಲ್ಲನಾಭನ ಭಕ್ತನಲ್ಲಿ ಹೇಳಿದ ಸುಳ್ಳು ಕಾದುಕೋ 3 ಆಶೆ ತೋರಿಸಿ ನಿರಾಶೆ ಮಾಡುವುದು ದಾಸ ಜನರೊಳಗೆಈಶ ನಿಜ ಬಹು ತೋಷವೆಂಬುದು ಭಾಷಿಸದೆಯತಿವೇಷ ದಿವಿಜನೆ 4 ಶಕ್ತಿವಚನವ ಕೃತ್ಯಮಾಡಲು ಶಕ್ತನಾರದನು ಒತ್ತಿ ಪೇಳಿದಹತ್ತರಾತನ ಭೃತ್ಯರಾಶಯ ಪೂರ್ತಿಮಾಡಿಸು 5 ನೀನೇ ಬಾಂಧವ ನೀನೇ ದೈವತ ನೀನೇ ಗುರುಪಿತನುನಾನು ನಂಬಿದೆ ಮೌನಿ ತೋರಿಸು ವೇಣು ಬಾಲಕನ ಜವ 6 ಇಂದು ಎನ್ನೊಳುನಿಂದು ಪ್ರಾರ್ಥಿಸು 7
--------------
ಇಂದಿರೇಶರು
ರಂಗಾ ಮನೆಗೆ ಬಂದ ಪರಮ ಮಂಗಳದಾಯಿ ಹಿಂಗಿತು ದಾರಿದ್ರ್ಯವಿನ್ನು ಶೃಂಗಾರ ಭುಜಂಗ ಶಾಯಿ ಪ. ಪದ್ಮನಾಭ ಸಿರಿನಲ್ಲಕೃಷ್ಣ ತನ್ನ ಪಾದ ಪಲ್ಲವೆ ಶರಣೆಂದು ನಿಲ್ಲೆ ಧೈರ್ಯದಿ ಮೆಲ್ಲ ಮೆಲ್ಲಕಾಗಿ ತನ್ನ ವಲ್ಲಭೆಯ ಕೂಡಿ ಎನ್ನ ಸೊಲ್ಲ ಲಾಲಿಸುತ ಕಂಸದಲ್ಲಣ ತಡವಿಲ್ಲದಂತೆ 1 ಆರುವೆನನೆಂಬ ಹುಣ ಘೋರಭಾವದಿಂದಲುಂಡು ಗಾರುಮಾಳ್ಪ ಸಮಯದಲ್ಲಿ ಚೀರುತಿರುವುದ ಮಾರಜನಕ ಲಾಲಿಸಿ ಕೃಪಾರಸದಿ ಸಲಹಿ ನಿಜ ಪಾ ದಾರವಿಂದ ಯುಗ್ಮವನ್ನು ತೋರಿ ತಿರುಗಿ ಕಳುಹಿದಂಥ 2 ಭಕ್ತಾಭರಣನೆಂಬ ಬಿರುದ ವ್ಯಕ್ತವಾಗಿ ತೋರಿ ಸರ್ವೋ ದ್ವøಕ್ತ ಮಹಿಮ ತನ್ನೊಳ್ಪರಮಾ ಮತಿಯನಿತ್ತು ಮಾಯಾ ಶಕ್ತಿಯರಸ ವೆಂಕಟೇಶ ನಿತ್ಯ ಮುಕ್ತ ರಮೆಯ ಕೂಡಿ ನಗುತ 3
--------------
ತುಪಾಕಿ ವೆಂಕಟರಮಣಾಚಾರ್ಯ
ರಘುಪತಿಯೆ ನಿನ್ನನ್ನೆ ಪೊಗಳುವ ಪದಗಳನುಸೊಗಸಾಗಿ ರಚಿಪಂತೆ ಬಗೆಯನ್ನು ನೀಡೋ ಪ ಪರರ ಪೊಗಳಿಕೆ ಬೇಡ ಪರರ ತೆಗಳಿಕೆ ಬೇಡಪರಮಪಾವನ ನಿನ್ನ ಮಹಿಮೆಯನು ಬಣ್ಣಿಸುವಸರಸ ನುಡಿಗಳು ಬಾಯೆ ಬರುವಂತೆ ಮಾಡೊ 1 ಒಂದು ಲಕ್ಷದ ನಾಮದೊಂದು ಮಣಿಮಾಡಿಕುಂದದಿಹ ಭಕ್ತಿಗುಣದಿಂದ ಪೋಣಿಸಿ ಪದ್ಯದಂಥ ಹಾರವ ಮಾಡಿ ನಿನ್ನೆಡೆಗೆ ಅರ್ಪಿಸಲುಮಂದ ಬುದ್ಧಿಯ ನನಗೆ ಶಕ್ತಿಯನೀಡೋ 2 ರಾಗ ನಿನಗೆಯೆ ತಾಳ ನಿನಗೆಯೆ ಗೊತ್ತುರಾಗ ತಾಳಗಳ ಮೇಳ ನನಗೇನು ಗೊತ್ತುರಾಗತಾಳಗಳಲ್ಲಿ ಹಗುರಾಗಿ ಹಾಡಲಿಕೆತೂಗಿ ಶಬ್ದಗಳಿಡಲು ಸನ್ಮತಿಯ ನೀಡೋ 3 ಸುರವರನೆ ಬೇಕಯ್ಯ ನಿನ್ನ ಪ್ರೇರಣೆ ಇದಕೆವರಕವಿಯು ಸು ಕುಮಾರವ್ಯಾಸನಿಗೆ ವರವಿತ್ತುಉರುತರದ ಕನ್ನಡದಿ ಭಾರತವ ಬರೆಯಿಸಿದತೆರದಿ ಗದುಗಿನ ವೀರನಾರಾಯಣನೆ ಸಲಹೊ 4
--------------
ವೀರನಾರಾಯಣ
ರಘುರಾಮಚಂದ್ರ ಬಾರೈ ಹರೆ ದಿವ್ಯ ರತ್ನಪೀಠಕೆ ಪ ದೇವತಾಳಿ ನುತಿಯ ಕೇಳಿ ಭಾವದಲ್ಲಿ ಮುದವ ತಾಳಿ ರಾವಣಾದಿ ದನುಜ ವೃಂದವ ಸೀಳಿ ಜಗವ ಪೊರೆದ ವಿಭುವೆ 1 ಇಂದು ಸುಂದರ ಫಾಲರಾಮ ಇಂದು ವಂಶಜಲೋಲ ದಶರಥನಂದನಾಶ್ರಿತ ವತ್ಸಲ ವಿಭುವೆ 2 ಪಂಕಜ ಮಲ್ಲಿಕಾಕುಸುಮಾಳಿ ಭಾಸುರ ಪುಲ್ಲ ಚಂಪಕ ಮಾಲಕ ರಂಜಿತ ಉಲ್ಲಸನ್ಮøದುವಾಣಿ ವಿಭುವೆ 3 ಭಕ್ತ ಹೃದಯ ಕುಮುದ ಚಂದ್ರ ಶಕ್ತಿವಿಜಿತ ರಾಕ್ಷಸೇಂದ್ರ ಭುಕ್ತಿ ಮುಕ್ತಿದಾಯಕ ವಿಭುವೆ 4 ಮಾನವೇಂದ್ರ ಸುರೇಂದ್ರ ವಂದಿತ ಸೂನ ಶರ ಸಹಸ್ರ ಸುಂದರ ಚಕೋರ ಧೇನುನಗರ ಶ್ರೀರಾಮ ವಿಭುವೆ5
--------------
ಬೇಟೆರಾಯ ದೀಕ್ಷಿತರು
ರಮಣಿ ಕೇಳೆಲೆ ಮೋಹನ ಶುಭಕಾಯನ ಅಮರ ವಂದಿತ ರವಿಶತಕೋಟಿ ತೇಜನ ವಿಮಲ ಚರಿತ್ರದಿ ಮೆರೆವ ಶ್ರೀ ಕೃಷ್ಣನಕಮಲವದನೆ ನೀ ತೋರೆ ಪ ಬಾಯೊಳಗಿಹಳ ಗಂಡನ ನಿಜ ತಮ್ಮನತಾಯ ಪಿತನ ಮಡದಿಯ ಧರಿಸಿದನಸ್ತ್ರೀಯಳ ಸುತನ ಕೈಯಲಿ ಶಾಪಪಡೆದನದಾಯಾದಿಯ ಮಗನಸಾಯಕವದು ತೀವ್ರದಿ ಬರುತಿರೆ ಕಂಡುಮಾಯಾಪತಿ ಭೂಮಿಯನೊತ್ತಿ ತನ್ನಯಬೀಯಗನ ತಲೆಗಾಯಿದಂಥರಾಯನ ಕರೆದು ತೋರೆ 1 ನಾಲಗೆ ಎರಡರವನ ಭುಂಜಿಸುವನಮೇಲೇರಿ ಬಹನ ತಂದೆ ಇಹ ಗಿರಿಯನುಲೀಲೆಯಿಂದಲಿ ಕಿತ್ತೆತ್ತಿದ ಧೀರನಕಾಳೆಗದಲಿ ಕೊಂದನಲೋಲಲೋಚನೆಯ ಮಾತೆಯ ಪುತ್ರನಣುಗನಮೇಲು ಶಕ್ತಿಗೆ ಉರವನಾಂತು ತನ್ನವರನುಪಾಲಿಸಿದಂಥ ದಾತನಹ ದೇವನಲೋಲೆ ನೀ ಕರೆದು ತೋರೆ 2 ಉರಿಯೊಳು ಜನಿಸಿದವನ ನಿಜ ತಂಗಿಯಸೆರಗ ಪಿಡಿದ ಖಳನಣ್ಣನ ತಂಗಿಯವರನ ತಲೆಯನು ಕತ್ತರಿಸಿದ ಧೀರನಗುರುವಿನೊಳುದಿಸಿದನಶರವ ತಪ್ಪಿಸಿ ತನ್ನ ದಾಸರ್ಗೆ ಅನುದಿನಕರೆದು ವರವನಿತ್ತು ಮನ್ನಿಸಿ ಸಲಹುವಉರಗಗಿರಿಯ ವೆಂಕಟಾದಿಕೇಶವನ ಗರತಿ ನೀ ಕರೆದು ತಾರೆ 3
--------------
ಕನಕದಾಸ
ರಾಘವೇಂದ್ರ ಜಯತು ಗುರುವರಗೌತಮ ಗೋತ್ರಜ ಪ ರಾಗರಹಿತಾಂತರಂಗ ಭಕ್ತಾವಳಿ ಸಂಗ ಶೃಂಗ ಅ.ಪ ಅಂಬಾಸುತ ಪರಿಪೂಜಿತ ಪಾದವ ತೋರೈ ವಂದಿಪೆ 1 ನಿರುತನಿನ್ನ ಪಾದಪದ್ಮವ ನಮಿಸುವಂಥ ಮನವ ಕೊಡೈ ಪರಮವೈದಿಕನ ಅರಿಯುವ ಶಕ್ತಿಯ ನೀಡು ರಾಘವೇಂದ್ರ2 ತರಳ ಸರಳ ಮೃದುವಚನಪೂರಣ ಸಾಧು ಪೂರ್ಣಸದನ ಶರಣಸುಜನ ವಾಂಚಿತಾರ್ಥದಾತ ಮಾಂಗಿರೀಶ ಪ್ರೀತ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಾಘವೇಂದ್ರ ನೀನೆನ್ನ ರಕ್ಷಕನಯ್ಯ ನಾಗಶಯನಧ್ಯಾನ ಒದಗಿಸೋ ಜೀಯ ಪ ಭಾಗ್ಯದೇಯ ವೈಶಾಲ್ಯ ಹೃದಯ ಮಂತ್ರಾಲಯ [ತುಂಗಾತೀರ] ಕ್ಷೇತ್ರ ನಿಲಯ ಅ.ಪ ಭಕ್ತರಕ್ಷಕ ನೀ ರಾಘವೇಂದ್ರ ಭಕ್ತ ಪಾಲಕ ನೀ ರಾಘವೇಂದ್ರ ಮುಕ್ತಿದಾಯಕ ನೀ ರಾಘವೇಂದ್ರ ಶಕ್ತಿ ಸ್ವರೂಪ ನೀ ರಾಘವೇಂದ್ರ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಾಜೋಪಚಾರರಾಜೋಪಚಾರರಾಜೀವನೇತ್ರ ನೀನವಧರಿಸು ಬೇಗ ಪಸಾವಿರದ ದಳವುಳ್ಳ ಕಮಲವೊಂದಕೆ ಶಕ್ತಿಸಾವಿರದ ಮೌಕ್ತಿಕದ ಸರಗಳೊಪ್ಪಿಹವುಕಾವಿಹುದು ಸಕಲ ದೇವಾತ್ಮಕದ ಶಾರದೆಯುನಾ ವಹಿಸಿ ತುರಿಯ ಕಲಶದ ಛತ್ರವೆಂದೆಂಬ 1ಆವಗವು ಸತ್ವಾದಿ ಗುಣಗಳಿಂದೊಪ್ಪಿರುವಆವರಣ ವಿಕ್ಷೇಪ ಶಕ್ತಿಯೆಂಬೆರಡುದೇವ ನಿನ್ನುಭಯ ಪಾಶ್ರ್ವದಲೊಲವುತಿಹ ಸರ್ವಭಾವದಿಂದುಭಯ ಚಾಮರವೆರಡರಿಂದ 2ಗಂಧರ್ವ ನಗರದಿಂದೈತಂದ ನಾರಿಯರುಛಂದದಿಂ ನರ್ತಿಸುತಲಿಹರೈವರಿವರುಒಂದಾಗಿ ಬಳಿಕಿವರ ಹೊಂದಿ ಮತ್ತೈವರಿರೆಹಿಂದೆ ನಾಲ್ವರುವೆರಸಿ ನಲಿವ ನರ್ತನವೆಂಬ 3ಪರವೆಂದು ನಾಭಿಯಲಿ ಪಶ್ಯಂತಿ ಹೃದಯದಲಿಸ್ವರವಿಹುದು ಕಂಠದಲಿ ಮಧ್ಯಮಾಖ್ಯೆಯಲಿಸ್ಫುರಿಸಿ ಮುಖಕಮಲದಲಿ ವೇದಶಾಸ್ತ್ರಗಳಾಗಿಮೆರೆವ ವೈಖರಿಯೆಂಬ ಗೀತವಿದ ಕೇಳು 4ತಾಳ ಮರ್ದಳೆ ಘಂಟೆ ಭೇರಿ ಶಂಖಗಳಿಂದಮೇಲಾದ ವೀಣೆ ವೇಣುಗಳ ರವದಿಂದಲಾಲಿಸುವ ಛಿಣಿ ಛಿಣೀ ಛಿಣಿಗಳೆಂಬವರಿಂದನೀಲ ಮೇಘಧ್ವಾನ ದಶನಾದದಿಂದ 5ಪರಿಪರಿಯ ಗತಿಯುಳ್ಳ ಚಿತ್ತವೆಂಬಶ್ವವನುವರ ಸತ್ವ ಗುಣವೆಂಬ ಹಲ್ಲಣವ ಬಿಗಿದುನಿರತ ಪರಮಾತ್ಮನೀಕ್ಷಣದ ಕಡಿವಾಣವನುಪಿರಿದಾಗಿಯಳವಡಿಸಿ ಮುಂದೆ ನಿಂದಿಹುದಾಗಿ 6ಒಲವುತಿಹ ಸುಖ ದುಃಖವೆರಡು ಘಂಟೆಗಳಿಂದನೆಲನ ಸೋಕುವ ಕಾಮ ಸುಂಡಿಲದರಿಂದಫಲ ಚತುಷ್ಟಯ ಪಾದ ಮೇಲು ಮಂಟಪದಿಂದಬಲುಮೆಯಹ ಮೂಲ ಕಾರಣವೆಂಬ ಗಜವು 7ಹಿಂದೆಮುಂದರುವರೊಂದಾಗಿ ವಹಿಸಿರಲದಕೆಹೊಂದಿಸಿದ ಚೌಕಿ ಮನವೆಂಬುದದರಲ್ಲಿಮಂದ ಮೃದು ಬಹು ವಿಷಯ ಸುಖದ ಹಾಸಿಕೆ ಹಾಸಿದಂದಳವಿದನುಭವದ ಕೊಂಬಿನಿಂದೊಪ್ಪಿರುವ 8ಆರು ನೆಲೆಯುಳ್ಳ ರಥವದಕೆ ಶಕ್ತಿಗಳೆಂಬಮೂರು ಕಲಶಗಳಲ್ಲಿ ನಾಲ್ಕು ಸತ್ತಿಗೆಯುಮೂರವಸ್ಥೆಗಳದರ ತುರಿಯವೆಂಬುದೆ ನಾಲ್ಕುಮೂರುಲೋಕವನಾಳ್ವ ಮಹಿಮ ನೀ ಪ್ರತಿಗ್ರಹಿಸು 9ನುಡಿವುದೆಲ್ಲವು ವೇದ ನಡೆವುದೆಲ್ಲವು ಶಾಸ್ತ್ರಬಿಡದೆ ನಿನ್ನಾಜ್ಞೆಯೊಳಗಿರೆ ಪುರಾಣದೃಢವಾಗಿ ನಿನ್ನ ಭಜನೆಯ ಮಾಳ್ಪ ದಿವಸವದುಕಡುಪುಣ್ಯವಾದ ಪಂಚಾಂಗವೆನಿಸುವದು 10ಉದಯದಲಿ ನಿನ್ನ ಸ್ಮರಣೆಯ ಮಾಡೆ ಪುಣ್ಯತಿಥಿಒದಗಿಸುವ ಸತ್ಕರ್ಮ ವಾರವೆನಿಸುವದುಅದರಲ್ಲಿಯನುಭವವೆ ನಕ್ಷತ್ರ ನಿನ್ನಲ್ಲಿಹುದುಗೆ ಜೀವನು ಯೋಗ ಹುದುಗುವದೆ ಕರಣ 11ಸಕಲ ವೇದಂಗಳಲಿ ಪ್ರತಿಪಾದಿಸಿದ ಫಲವುವಿಕಳವಿಲ್ಲದೆ ನಿನ್ನ ನಿಮಿಷ ಧ್ಯಾನಿಸಲುಸಕಲ ತೀರ್ಥಸ್ನಾನ ದಾನ ಜಪ ತಪ ಯಜ್ಞಸಕಲವೂ ಬಹುದೆಂಬ ಸರ್ವೋಪಚಾರ 12ಸುರ ಸಿದ್ಧ ಮುನಿವೃಂದ ನಿರತ ಸೇವಿತ ಚರಣಶರಣಾಗತೋದ್ದರಣ ಶರಧಿಜಾರಮಣತಿರುಪತಿಯ ಸ್ಥಿರವಾಸ ನಿರುಪಮ ಮಹಾಕರುಣಮರೆಯೊಕ್ಕೆ ಸಲಹೆನ್ನ ಪ್ರಾಣ ವೆಂಕಟರಮಣ 13ಓಂ ಜುನೇ ನಮಃ
--------------
ತಿಮ್ಮಪ್ಪದಾಸರು