ಒಟ್ಟು 454 ಕಡೆಗಳಲ್ಲಿ , 78 ದಾಸರು , 429 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದನು ಕೃಷ್ಣ ಗೋವಿಂದ ಮುಕುಂದ ಭವ ಬಂಧನ ಪರಿಹಾರ ಶೌರಿ ಪ ಸಾರಸಪತ್ರನೇತ್ರ ಅನಘ ಘನನೀರದÀ ನಿಭಗಾತ್ರ ಶಕಟಾಂತಕ ಧೀರ ಕರುಣಾ ಪಾತ್ರ ಮುರಹರ ಜಂಭಾರಿಸನ್ನುತ ಗೋತ್ರಾ ಧಾರಿ ಮುನಿಜನ ಮಂದಾರ ಗೋಪಾಲ ಘನ ಸಾರ ಶೋಭಿತ ಯದುವೀರ ನಾರಾಯಣ 1 ಪಂಡಿತ ಕುಸುಮಪಾಣೆ ಜನಕ ಶ್ರೀ ಅಂಡಜಗಮನ ಗಾನಲೋಲನೆ ತಂಡ ರಕ್ಷಕ ಪುರಾಣಪುರುಷ ಕೋ ದಂಡ ಪಾಣಿ ಧುರೀಣ ಕುಂಡಲಿಶಯನ ಭೂಮಂಡಲಾಧಿಪ ಬಲೋ- ದ್ದಂಡ ಪರಾಕ್ರಮ ಚಂಡಮಹಿಮ ರಾಮ 2 ವೇದವೇದ್ಯ ಸುನಾಮಾ ತ್ರಿಜಗನ್ನುತ ಯಾದವ ಸಾರ್ವಭೌಮ ಪರಮಾತ್ಮ ಆದಿತೇಯಾಬ್ಧಿ ಸೋಮ ರಮೇಶಾಂಬುಜೋದರ ಸುಗುಣಧಾಮ ಮಾಧವ ನರಮೃಗ ಪ್ರಹ್ಲಾದ ವರದ ಸನÀಕಾದಿ ವಂದಿತ ಚರಣ 3
--------------
ಹೆನ್ನೆರಂಗದಾಸರು
ಬಂದೆ ಭಗವತ್ಪಾದಯುಗಾರ ವಿಂದಕೆ ಮಿಳಿಂದನಾಗಿ ವಂದನೀಯರೆ ಯತಿಕುಲಾಬ್ಧಿ ಚಂದ್ರರ ಭುವನೇಂದ್ರತೀರ್ಥರೆ1 ಪರಮ ಪಾವನ ಭುವನೇಂದ್ರರ ಕರಸಂಜಾತ ವರದೇಂದ್ರರ ಕರಸರೋರುಹಭವರೆ ಮಹಾ ಕರುಣಾಂತಃಕರಣ ಧೀರರೆ2 ಸುಮತೀಂದ್ರಾದಿ ಯತೀಂದ್ರರ ವಿಮಲ ಹೃದಯಕಮಲಭಾಸ್ಕರ ಅಮಮ ನಿಮ್ಮ ಕಾಂಬ ಯೋಗ ಸುಕೃತ ಭೋಗಪೂಗ3 ಪೂರ್ಣಪ್ರಜ್ಞಾಚಾರ್ಯವರ್ಯ ಸನ್ನುತ ಮತಧೈರ್ಯ ಧುರ್ಯ ಧನ್ಯನಾದೆನು ನಾನಿಂದು ಸನ್ನಿಧಾನವನು ಕಂಡೆನು4 ಶ್ರೀಶ ಲಕ್ಷ್ಮೀನಾರಾಯಣ ವ್ಯಾಸ ರಘುಪತಿಯ ಚರಣೋ- ಪಾಸಕರೆ ಪಾವನರೆ ಕಾಶೀವiಠಾಧೀಶ್ವರರೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಬನ್ನ ಬಡಿಸುವುದು:ಖನೀಗುವಂತೆ ಸಿರಿ ಮನ್ನಣೆಯ ಪಡಿಯ ಕಂಡ್ಯಾಮನವೆ ಪ ಘನ್ನವಿದ್ಯದಮಬ್ಬಿಲಿನ್ನ ಖಳಜಗದ ಜೀ ವನ್ನ ಮಲಗಿದೆರೊಳಗ ಮುನ್ನ ಮಾಡಿದ ಸುಕೃತ ಪುಣ್ಯ ತಂಗಾಳಿ ಸಂಪನ್ನ ಗುರು ಕರುಣೋದಯ ದುನ್ನತೆಯ ಬೆಳಗು ಕಂಡು ಸನ್ನುತುದಯರಾಗಸ್ತವನ್ನು ಪಡುತಜ್ಞಾನ ಚನ್ನ ನದಿಯೊಳುಮಿಂದು ತನ್ನ ಸಂಚಿತದ ತ್ರೈಯ ಘ್ರ್ಯನ್ನೆರದು ಮೆರುವುತಿಹ ನಿನ್ನ ಸಿರಿಕರ ನೋಡು ಇನ್ನು ನಾಚಿಕೆ ಬಾರದೇ 1 ಬಂದು ನರದೇಹದಲಿ ನಿಂದಾಗ್ರ ಜನ್ಮದಲಿ ಹೊಂದುಪಥವನೆ ಬಿಟ್ಟು ಛಂದ ಹೊಲಬದಿ ಕೆಟ್ಟು ಮಂದಮತ ತನವೆರಿಸಿ ಮಂದಿಯೊಳಗಲ್ಲೆನಿಸಿ ಪರಿ ಪರಿಯ ಬಯಸೀ ಬೆಂದ ವಡಲನೆ ಹೊರೆದಿ ಕುಂದದಾಟಕೆ ಬೆರೆದಿ ತಂದಾಯುಷವ ಹೊತ್ತು ಇರದಯೇರಿತು ಬೆರೆತು ಮುಂದ ನಿನ್ನಯ ಗತಿಯ ಯಂದು ಘಳಿಸುವೆ ಸ್ಥಿತಿಯಾ ಇಂದಿರೇಶನ ವಲುಮೆಯಾ 2 ಮರಹು ಮುಸುಕವ ತೆಗೆದು ಅರಹುನಯನವ ತೆರೆದು ಪರಮ ಭಾವನೆ ಬಲಿದು ವರ ಭಕುತಿಗಳ ಜಡಿದು ತರಣೋಪಾಯವ ಕೂಡು ಹರಿಯ ಸೇವೆಯ ಮಾಡು ನೆರೆ ಸಾಧು ಸಂಗ ಬೇಡು ಸುರಸ ಬೋಧವ ಕೇಳು ಸರಕುಮಾತನೆ ಕೀಳು ಧರಿಯೊಳಗ ಸಾರ್ಥಕಲಿ ಪರಿಬಾಳುತಲಿರಲಿ ಗುರು ಮಹಿಪತಿಸ್ವಾಮಿ ಹೊರೆವದಯದಲಿ ನೇಮಿ ಶರಣ ಜನರಂತರ್ಯಾಮೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬನ್ನಿರಿ ದಾಸರೇ ಪೋಗುವಾ ನಮ್ಮ ಚನ್ನಕೇಶವನೆಂಬ ಹರಿಮಂದಿರಕೇ ಪ ಬನ್ನಿರಿ ಪೋಗುವಾ ಗುಡಿಯೊಳು ತಿನ್ನುವಾ ಚನ್ನಗೆ ಅರ್ಪಿಸಿ ತಂದ ಪಕ್ವಗಳ ಅ.ಪ. ನಾ ತಂದಿರುವೆನು ಪರಮಾನ್ನವನ್ನು ತಾತನ ನಾಮಕ್ಕೆ ಬೆರಿಸಿ ಮಾಡಿದೆನು ನೀತಿಯೊಳಾಭಕ್ತಿ ಮಧುಕ್ಷೀರವನ್ನು ಸತ್ಯದಿ ಕೂಡಿಸಿ ಸೇವಿಸುವಾ 1 ಪರಹಿತವೆನ್ನುವ ಸಕ್ಕರೆ ತಂದು ನಾ ಬೆರಿಸುವೆ ಧರ್ಮಗಳೆಂಬ ಪಾಯಸಕೇ ಹರಿಯ ಕೀರ್ತನೆಗಳ ಅಮೃತವ ಸೇರಿಸಿ ಪರಮಾನ್ನವೀ ರೀತಿ ಮಾಡಿರುವೆನಯ್ಯ 2 ಹರಿಭಕ್ತಿಯೆಂಬುವ ತಂಡುಲವನೆ ತಂದು ಹರಿಯ ಸ್ಮರಣೆಯೆಂಬ ವುದಕದಿ ತೊಳೆದು ಹರಿಯ ಭಜನೆಯೆಂಬ ಬೆಂಕಿಯ ಮೇಲಿಟ್ಟು ಸರಸದಿ ನಾ ಪಾಕವ ಮಾಡಿರುವೆ 3 ಸನ್ನುತ ದೂರ್ವಾಪಟ್ಟಣದಿ ನಿತ್ತಿರುವಂಥ ಪನ್ನಗಶಯನ ಶ್ರೀ ಹರಿಯ ನೆನೆಯುತ್ತ ಉನ್ನತ ಸೇವೆಯಿಂದಾತನ ಮೆಚ್ಚಿಸಿ ತಿನ್ನುವಾ ಕೇಶವ ನೀಯುವ ವರವಾ 4
--------------
ಕರ್ಕಿ ಕೇಶವದಾಸ
ಬನ್ನಿರಿ ಬನ್ನಿರಿ ದಾಸರೊಂದಾಗಿ ಚನ್ನ ಕೇಶವನರಮನೆಗೆ ಮುಂದಾಗಿ ಪ ಬನ್ನಿರಿ ಹರುಷದಿ ಪೋಗುವಾ ಬೇಗದಿ ಸನ್ನುತ ತಾತನ ಮೆನೆಯೊಳಗಿರುವಾ ಅ.ಪ. ನಿತ್ಯ ನೀಲಾಂಜನೆ ಪರಮ ಪಾವನನ ಭೃತ್ಯರ ಸಲಹುವ ಬರ ಶ್ರೀಧರನ ಪ್ರತ್ಯುಪಕಾರವ ಬೇಡದೆ ಸಲಹುವ ಸತ್ಯನಾರಾಯಣ ದೇವರ ಗುಡಿಗೆ 1 ನಗಧರ ರಂಗನ ಖಗವಾಹನನ ಜಗದೊಳು ಮೆರೆಯುವ ಗೋವಳ ಹರಿಯ ಅಗಣಿತಮದನನ ಸನಕ ವಂದಿತನ ಭೃಗಕುಲ ಶ್ರೇಷ್ಠನ ದೇವರ ಗುಡಿಗೆ 2 ತರಳರ ಸಲಹುವ ಭಜಕರ ಪೊರೆಯುವ ಪರಿಪರಿ ರೂಪದಿ ಮೆರೆಯುವ ಪರಿಯ ಪರಮಾತ್ಮನನ್ನು ಭಕ್ತಿಯಲಿ ಕೀರ್ತಿಸಲಾಗ ಸರಸದಿ ದಾಸರಿಗೊಲಿವ ಕೇಶವನ 3
--------------
ಕರ್ಕಿ ಕೇಶವದಾಸ
ಬಾ ಭಾಗ್ಯಲಕ್ಷ್ಮಿ ನಿನ್ನ ನಾ ಸೇವೆಗೈಯ್ಯುವೆ ನಾ ನಿನ್ನ ಪ್ರಾರ್ಥಿಸಿ ಬೇಡಿಕೊಂಬುವೆ ಪ ನಿನ್ನೇ ನಂಬಿದೆ ಪನ್ನಗವೇಣಿ ನೀಯೆನ್ನ ಕೈಯ ಬಿಡಬೇಡ ತಾಯೆ ಸನ್ನುತ ಚರಿತೆ ನಿನ್ನೇ ನಂಬುವೆ ಪಾದ ತೋರೆ ಸಂಪನ್ನೆ ನಿನ್ನ ಸದಾ ಸೇವೆಗೈವ ಚಿದಾನಂದವೀಯೆ 1 ಸಾರವಾದ ಸಂಸಾರದಲಿ ನೀರೆ ನೀನಲ್ಲದಿನ್ನಾರೆ ತೋರಿ ಕರುಣವ ನೀ ಸಾರೆ ಬಂದು ಪೊರೆ ಕರುಣಾಸಿರಿಯೆ ಎನ್ನ ಸೇವೆಯನು ಕೈಗೊಂಡು ಲಕುಮೀತಾಯೆ ಸದಾನಿನ್ನ ಸೇವೆ ಚಿದಾನಂದವೀಯೆ 2 ಪತಿ ಪಾದಸೇವೆ ಸÀತಿಗೆ ನೀನುಳಿಸಿ ಸತತದಿ ಮಾಂಗಲ್ಯ ಭಾಗ್ಯವ ನೀಡೆ ಸತಿ ನೀನೆಂದು ಸ್ತುತಿಪೆ ಸತತ ಎನ್ನ ಮೊರೆಯಾಲಿಸಿ ಕಾಯೆ ಸದಾ ನಿನ್ನ ಸೇವೆ ಚಿದಾನಂದವೀಯೆ3
--------------
ಸರಸ್ವತಿ ಬಾಯಿ
ಬಾದರಾಯಣ ಮದದಿ ಮರೆತೆನೊ ಸದಯದಿಂ ಮುದ ಪಾಲಿಸೊ ಪ ಬೋಧ ಮೂರುತೆ ಭಕ್ತರಾ ನುಡಿ ಸಾದರದಿ ನೀನಾಲಿಸೋ ಅ.ಪ ವೇದಭಾಗವ ಮಾಡಿ ವೇದವ್ಯಾಸನೆಂದೆನಿಸಿದಿ ಸದಮಲಾಭಾವದಲಿ ನಿನ್ನಯ ಪಾದಕಮಲವ ತೋರಿದಿ 1 ಗಾತ್ರ ಎನ್ನಯ ಖೇದ ಭಾವವನೋಡಿಸೊ ಮೋದತೀರ್ಥ ಹೃದಾಬ್ಜ ಮಂದಿರ ಸಾಧು ಸಂಗವ ಮಾಡಿಸೋ 2 ತರ್ಕಮುಧ್ರಾಧರನೆ ಎನ್ನ ಕುತರ್ಕ ಬುದ್ಧಿಯನೋಡಿಸೋ ಅರ್ಕಸನ್ನಿಭ ಬ್ರಹ್ಮ ಸುತರ್ಕ ಮಾರ್ಗವ ಬೋಧಿಸೋ 3 ಅಭಯಪ್ರದಕರ ಎನ್ನಭವ ಭಯ ತ್ರಿಭುವನೇಶ್ವರ ಓಡಿಸೀ ಇಭವರದ ಮಧ್ವೇಶ ಸಂತತ ಸಭೆಯ ಸಹನೀ ತೋರೆಲೊ4 ಯೋಗ ಪೀಠನೆ ನೀಗಿಸೆನ್ನಯ ಭೋಗಬುದ್ಧಿಯ ಸರ್ವದಾ ಯೋಗಿಕುಲವರ ಬಾಗಿ ನಮಿಸುವೆ ಯೋಗಮಾರ್ಗವ ತೋರಿಸೊ5 ಮಾ ಕಮಲಜ ಭವೇಂದ್ರವಂದಿತ ಮಾಕಳತ್ರ ನಮೋಸ್ತುತೇ ಯಾಕೆ ಎನ್ನಲಿ ನಿರ್ದಯವು ನೀ ಸಾಕಲಾರದ ಪಾಪಿಯೇ 6 ಸನ್ನುತಿಸಿ ನಾ ನಿನ್ನ ಬೇಡುವೆ ಸನ್ನುತಾಂಘ್ರಿಯ ಸೇವೆಯಾ ಸನ್ಮುನೀವರ ಶ್ರೀ ನರಹರೆ ದಾಸದಾಸರ ದಾಸ್ಯವಾ 7
--------------
ಪ್ರದ್ಯುಮ್ನತೀರ್ಥರು
ಬಾರವ್ವ ಮಹÀಭಾಗ್ಯದಭಿಮಾನಿ ಶ್ರೀಹರಿ ನಿಜರಾಣೀ ಪ ಸಾರಿದೆ ನಿನಪಾದನೀರಜಯುಗ ಮನೋ - ವಾರಿಜದಲಿ ನೀ ತೋರುತ ಲಕುಮಿ ಅ.ಪ ಅಖಿಲಾಗಮವಿನುತೆ ಎನ್ನಯ ಮಾತೆ ಸಕಲಸುರಗೀತೆ ನಿಖಿಲಾ ತ್ರಿಜಗದ್ವ್ಯಾಪ್ತೆ ಪ್ರಖ್ಯಾತೆ ಸಂಪತ್ಪ್ರದಾತೇ ನಖಮುಖ ಮಾತ್ರದಿ ವಿಖನಸಆಂಡದ ಅಖಿಲವ್ಯಾಪಾರವ ಸುಖದಲಿ ಮಾಡುವಿ 1 ಇಷ್ಟಾರ್ಥವ ಸಲಿಸಿ ಎನ್ನನು ಪೊರೆಯೇ ಕೊಲ್ಹಾಪುರÀ ಶಿರಿಯೆ ಅಷ್ಟ್ಟದಾರಿದ್ರÀ್ಯಗಳನು ನೀ ತರಿಯೆ ಈ ಕ್ಷಣ ಸುಖಸುರಿಯೇ ಅಷ್ಟಪÀÀದೋದರ ಅಷ್ಟಮೂರ್ತಿನಿನ್ನ ದೃಷ್ಟಿಯಿಂದ ಮಹಶ್ರೇಷ್ಟನಾಗಿಹನೇ 2 ಕ್ಷೀರಾವಾರಿಧಿಯೊಳು ಸಂಜಾತೆ ಮಾರನ್ನ ಮಾತೆ ಅ - ಪಾರಾಮಹಿಮಾಳೆ ಸುರಸನ್ನುತೆ ಜಗದೊಳಗೆ ಖ್ಯಾತೆ ವಾರವಾರಕೆ ದುರಿತಾರಿ ನಿನ್ನಯ ಪೂಜೆ ಚಾರುಮನದಿ ಮಾಳ್ಪೆ ಧೀರೆ ಉದಾರೆ 3 ವಾಸವಾಗೆನ್ನಾ ಮನೆಯೊಳಗಿನ್ನಾ ಪಾಲಿಸೆ ಇದನನ್ನಾ ವಾಸವಾದಿ ಸುರರಾಸೆಯ ಪೂರ್ತಿಸಿ ಈಶರ ಮಾಡಿದಂತೆ ಈ ಸಮಯದಿ ಎನ್ನ 4 ನಗೆಮೊಗ ಚೆನ್ನೆ ಸುಪ್ರಸನ್ನೆ ಸುರನಿಕರರನ್ನೆ ಮಗುವಿನ ಮಾತೆಂದು ನಗುತ ನೀ ಇನ್ನೆ ಬಾ ಬರುವದು ಘನ್ನೆ ನಗಹರ ಸುರಪನ ಮಗನನ ಸಖ ಗುರು ಜಗನ್ನಾಥ ವಿಠಲ ಸಮ್ಮೊಗವಾಗಿ ಬೇಗ ನೀ 5 ಶಿರಿದೇವಿ ನಿನ್ನ ಚರಣ ಸರಸಿಜಯುಗಕೆ ಶಿರದಿ ನಮಿಪೆ ಸತತ ಸರಸಿಜಾಂಬಕೆ ಸರಿಯಾರು ನಿನಗೀ ಸರಸಿಜಭವಾಂಡದೊಳು ಸgಸಿಜಾಕ್ಷಗೆ ದೇಶಕಾಲಗಳಿಂದ ಸರಿಯಾಗಿ ನಿತ್ಯದಲಿ ಪರಿಪರಿಸೇವಾದಿಂದ ಹರಿಯಾ ಮೆಚ್ಚಿಸಿ ಪರಮಾದರದಿಂದ ಪತಿಗನುಕೂಲ - ಪರಳಾಗಿ ಸೃಷ್ಟಿಗೆ ಮೂಲಕಾರಣಳೆನಿಸಿ ಪರಮೇಷ್ಟಿ ಮೊದಲಾದಾನಂತಜೀವರನ್ನ ಅರಿತು ಯೋಗ್ಯಾಯೋಗ್ಯತೆಯನ್ನನು - ಸರಿಸಿ ಸೃಜಿಪ ಶಕ್ತಿ ನಿನಗುಂಟು ನೀ “ಯಂ ಯಂ ಕಾಮಯೆ ತಂ ತಮುಗ್ರಂ ಕೃಣೋಮಿ” ಎಂತ ಶ್ರುತಿ ಸಾರುತಿದೆ ಶಿರಿ ನಿನ್ನ ಕಟಾಕ್ಷದಿ ಸಕಲೈಶ್ವರ್ಯಗಳು ಪರಿಪರಿ ವಿಧದಿಂದ ಒದಗುತಿಪ್ಪವು ಹರಿಕೃಪೆ ನಿನ್ನೊಳಗೆಂತಿಹುದೋ ಅರಿಯಾರು ಎಂದಿಗು ಬೊಮ್ಮಾದಿಸುರರು ನರರೇನು ಬಲ್ಲರಮ್ಮ ನಿನ್ನ ಮಹಿಮೆಯ ಶಿರಿಮಾನಿ ಎನ್ನ ನೀನು ಕರುಣದಿಂದಲಿ ನೋಡಿ ಹರಿಮೂರ್ತಿಯನ್ನೇ ತೋರೆ ಹರಿಣಲೋಚನೆ ಹರಿದಾಸಜನರೊಡೆಯ ಗುರುಜಗನ್ನಾಥವಿಠಲನ್ನ ಇರವು ತೋರಿಸಿ ಎನ್ನ ಪೊರೆಯಮ್ಮ 6
--------------
ಗುರುಜಗನ್ನಾಥದಾಸರು
ಬಾರೆಲೋ ಬೇಗನೆ ಭಾರತೀಪತಿ ಪ್ರಿಯ ಸಾರುತ ಬೇಗ ಶ್ರೀ ನಾರಾಯಣ ಪ. ನಾರದಾದಿ ವಂದ್ಯ ಪಾರುಗಾಣಿಸೆ ಭವ ಗಾರು ಮಾಡದೆ ಶ್ರೀಶ ಸರ್ವೇಶ ಅ.ಪ. ಸುಮನಸರೊಡೆಯನೆ ನೀನಾಗಮಿಸಲು ಸಕಲವು ಸುಗಮವಹುದೆ ಕಮಲೆಯ ಪ್ರೀಯನೆ ನಿನ್ನಾಗಮನವನೆ ಬಯಸುವೆ 1 ಭಕ್ತರ ಕಾಯುವ ಯುಕ್ತಿ ನಿನಗೆ ಸರಿ ಭಕ್ತವತ್ಸಲನೆಂಬೊ ಬಿರುದಿನ ದೇವ ಶಕ್ತಿ ಸ್ವರೂಪನೆ ಅಶಕ್ತರ ಪೊರೆವಾ ಸಕ್ತಿಯ ತೋರಿಸೆ ಭಕ್ತರಿದ್ದೆಡೆಗೆ 2 ಎನ್ನಪರಾಧ ಎಣಿಸಲೆನ್ನಳವೆ ಪನ್ನಗಾದ್ರಿನಿವಾಸ ಕೃಪೆತೋರೊ ಸನ್ನುತಚರಿತ ನಿನ್ನ ಪೊರತು ಎನ ಗನ್ಯರ ಕಾಣೆನಾ ಶ್ರೀ ಶ್ರೀನಿವಾಸ ದೊರೆ 3
--------------
ಸರಸ್ವತಿ ಬಾಯಿ
ಬಾಲಕೃಷ್ಣವಿಠಲ | ಕಾಪಾಡೊ ಇವನಾ ಪ ನೀಲ ನೀರದ ವರ್ಣ | ಕಾಳಿಂದಿ ರಮಣ ಅ.ಪ. ಮೋದ ತೀರ್ಥರ ಮತದಿಹಾದಿಯಲ್ಲಿರುವವನ | ಕಾದುಕೋ ಹರಿಯೇವೇದಾಣಿ ಸನ್ನುತನೆ | ಭೇದ ಪಂಚಕ ತಿಳಿಸಿಮೋದ ಪಡಿಸುವುದಿವನ | ವೇದಾಂತ ವೇದ್ಯ 1 ವ್ಯಾಪ್ತೋಪಾಸಕ ಜೀವಿ | ಗಿತ್ರಿಹೆನೊ ಅಂಕಿತವಸುಪ್ತೀಶ ಪೇಳ್ದಪರಿ | ಗೋಪ್ತ ಮಹಿಮಾಆಪ್ತ ನಿವ ನೆಂದೆನುತ | ಗೊತ್ತು ಮಾಡಿಹೆ ದೇವದೀಪ್ತ ಮೂರುತಿ ಹರಿಯೆ | ತೃಪ್ತಿ ಪಡಿಸಿವನಾ 2 ಸ್ವಾಪದಲಿ ಸತ್ಪಂಚ | ಪುಷ್ಪ ಬಕುಳವನಿತ್ತುಶ್ರೀಪ ನಿನ್ನನುಗ್ರಹ | ಪ್ರಾಪಕದಸೂಚ್ಯಾನೀ ಪಾಲಿಸುತ್ತಿವಗೆ | ಬಾಷ್ವಾವಾನಂದುದರಿಸೋಪಾನ ಮುಕ್ತಿಗೆನೆ | ವ್ಯಾಪಾರ ನಿನದೋ 3 ಉಂಬುಡುವ ಕ್ರಿಯೆ ಸರ್ವ | ಬಿಂಬ ತಾಗೈಯೈ ಪ್ರತಿಬಿಂಬ ಕುಂಟೆಂಬುವಾ | ಸುಜ್ಞಾನವಿತ್ತುಗುಂಭ ಸಾದನದಿ ಹೃದ | ಯಾಂಬರದಿ ನೀತೋರಿಸಂಭ್ರಮದಲಿರಿಸಿವನ | ಅಂಬುಜದಳಾಕ್ಷ 4 ಎಲ್ಲೆಲ್ಲೂ ನಿನ್ನ ವ್ಯಾಪ್ತಿ | ಸೊಲ್ಲನುಣಿಸುತ ಹರಿಯೆಬಲ್ಲಿದರ ಸಂಗವನು | ಸಲ್ಲಿಸುತ ಇವಗೇಪಲ್ಲಿವಿಸೆ ಸುಜ್ಞಾನ | ಬೇಡ್ವೆ ನಿನ್ನನು ದೇವಚೆಲ್ವ ಹಯಮುಖ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಬಾಲೆಯಾದಾನು ಬಲಭೀಮ ಪ ಬಾಲೇಂದು ಮುಖ ಸೋಲಿಪ ವದನದಿಂದೊಪ್ಪುತಅ.ಪ. ಸೊಲ್ಲು ಸೊಲ್ಲಿಗೆ ಬಲು ಕಳವಳಿಸುವನಾ ತರುಣಿ ದ್ರೌಪದಿ ತಾ ತಾಳದೆ ತನ್ನೊಳು ತಿಳುಪಿದಳು ಪತಿಯೊಡನೆಕೇಳಿದ ಮಾತ್ರದಿ ಸೀಳುವೆನೆನುತಲಿ ಕೋಪದಿಂದೊಮ್ಮೆಗೆ 1 ಸನ್ನುತ ಶಶಿಮುಖಯೆಂಬೋದು ಸರಿಯಾ-ಶ್ವಾಸನ ಸತಿಯಳ ಸರಸಾಟ ಸಹಿಸದೆ ಮೀಸೆಯ ತಿರುವುತ ಸಾರಿ ಸರಿ ಯಾರೆನ್ನುತ ಸತಿಯಾಗಿರು ಸುಖಸತಿಯಳ ಮಾಡಿ ನಿನ್ನಾಳುವೆನೆಂಬೋದು ಕೇಳಿ ಭರದಿ 2 ಸುಮಶರ ಶೋಷಕೆ ಹಿಮಕರ ವ್ಯಾಪಿಸಿ ಹರುಷವಗೊಳುತಾ ಸರಸಿಜಮುಖಿಯೆಂದು ಸರಸರ ಸಾಗಲು ಶಿರದೊಳು ಚರಣವ ಸೇರಿಸಿದಾ ಶಾಮರೂಪ ತಂದೆವರದಗೋಪಾಲವಿಠ್ಠಲನ ಸ್ಮರಿಸುತ 3
--------------
ತಂದೆವರದಗೋಪಾಲವಿಠಲರು
ಬಿಟ್ಟೆಯಾ ಸ್ವಾಮಿ ಎನ್ನ ಬಿಟ್ಟೆಯಾ ಬಿಟ್ಟೆಯಾ ಎನ್ನ ಜೀಯ ವ್ಯರ್ಥ ಪ. ಕೊಟ್ಟೆಯಾ ದುರಿತದ ಕಯ್ಯ ಅಹ ಕಟ್ಟ ಕಡೆಗು ಕಾವ ನೀನೆಂದು ನಂಬಿಕೆ ಇಟ್ಟ ದಾಸನ ಇಂಥ ಬಟ್ಟೆಯೊಳಗೆ ದೂಡಿ ಅ.ಪ. ಅನ್ಯರಿಗಳುಕದ ಶೌರ್ಯ ಸ್ವಜನೋನ್ನತವಾದ ಗಾಂಭಿರ್ಯ ಜನ ಸನ್ನುತವಾಗಿಹುದಾರ್ಯ ನಿನ್ನ ಸನ್ನುತಿ ಗೃಹ ಚಾತುರ್ಯಗಳ ತನ್ನಂತೆ ಕರುಣಿಸಿ ತಾವಕನೆನಿಸಿರೆ ಕುನ್ನಿಯ ಮರಿಗಿಂತ ಕಡೆಮಾಡಿ ದಾರಿಯೊಳ್ 1 ತಲ್ಪದಿಂದೆದ್ದವಸರದಿ ಬೊಮ್ಮ- ಕಲ್ಪೇಶ ನೀನಿಟ್ಟ ಕ್ರಮದಿ ಸ್ವಲ್ಪ ಸ್ವಲ್ಪವಾದರು ಕವರ್i ನೆವದಿ ನಾನಾ ಕಲ್ಪ ಪೂಜೆಯಗೈದು ಮುದದಿ ಶೇಷ ಕಲ್ಪೇಶ ನಿನಗೆ ಸಮರ್ಪಿಸಿ ಬಾಳ್ದನ- ನಲ್ಪ ಜನರಿಗೆ ನಿತ್ಯಾಲ್ಪರಿವೊಲ್ಮಾಡಿ 2 ಬಂದ ಸಜ್ಜನರನು ನೋಡಿ ಮಾನ- ದಿಂದ ಕುಳ್ಳಿರಿಸಿ ಮಾತಾಡಿ ಮತ್ತೆ- ನ್ನಿಂದಾದ ಸತ್ಕಾರ ಮಾಡಿ ತಿಳಿ- ದಂದದಿ ನಿನ್ನನು ಪಾಡಿ ಇದೆ ಮುಂದೆ ತಾರಕವೆಂದಾ ನಂದಗೊಡಿರಲೆನ್ನ ಹಂದಿಯಂದದಿ ಮೂಲೆ ಹೊಂದಿಸಿ ಕೆಡ ಹಾಕಿ 3 ಸಂಧ್ಯಾದಿಗಳನೆಲ್ಲ ಬಿಟ್ಟು ಅನ್ನ ತಿಂದು ಬೀಳುವೆ ಲಜ್ಜೆಗೆಟ್ಟು ರೋಗ ಬಂಧಿತ ನರಗಳ ಕಟ್ಟು ಶೂಲ ದಂದದಿ ಬೀಳುವ ಪೆಟ್ಟು ಇನ್ನು ಮೋಚಿಸು ಹಾಗಾ- ದಂದ ಕಾಲಕೆ ಪದ ಹೊಂದಿಸಿಕೊಳದೆನ್ನ 4 ಮರೆಯಲಿಲ್ಲೆಂದಿಗೂ ನಿನ್ನವೆಂಬು- ದರಿಯೆಯ ಲೋಕಪಾವನ್ನ ಇನ್ನು ಕರುಣ ಬಾರದ್ಯಾಕೊ ರನ್ನ ಶೇಷ ನಿತ್ಯ ಪ್ರಸನ್ನ ಬಹು ಕರಗುತ ಕಣ್ಣೀರ ಸುರುವಿದ ಮಾತ ಮರೆವುದುಚಿತವಲ್ಲ ಪರಮ ದಯಾಂಬುಧಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಬಿಡದಿರೆನ್ನ ಕಡಲನಡುವೆ ಪ ತಡಬಡಿಪುದ ನೋಡಿ ನೋಡಿ ಅ.ಪ ಸರಸ ಕರುಣಾಭರಣ ಶರಣ ನಿರುತ ಸೇವಿತ ವರ ಸುಚರಣ ಮರೆಯದಿರು ದಾಸಾನುದಾಸನ ಲೋಕಕಾರಣ 1 ಕರಿ ಬಲಿ ಪಾಂಚಾಲಿಯರನು ಹರುಷದಿಂದ ಪೊರೆದೆಯಲ್ತೆ ಕರುಣದಿಂದ ಬಾರೊ ಹರಿಯೆ ಸರಸಿಜಾಕ್ಷನೇ 2 ದೇವ ದೇವ ಪಾವನಾತ್ಮ ಭಾವಜಾತಪಿತ ಪರಮಾತ್ಮ ದಿವಿಜ ಸನ್ನುತಾ 3 ಕಾವರನ್ಯರಿಲ್ಲವಯ್ಯ ಪಾವನಾತ್ಮ ಮಾರನಯ್ಯ ಸಾವಕಾಶವೇಕೋ ಜೀಯ ಮಾವಿನಕೆರೆಯರಸ ರಂಗ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬಿಡೆ ಬಿಡೆನೋ ನಿನ್ನಾ|ಅಡಿಗಳ ಯುಗಳನ್ನಾ ಪ ಬಿಡೆ ಬಿಡೆನೋ ನಿನ್ನಾ|ಅಡಿಗಳ ಯುಗಳನ್ನಾ ಬಿಡದಿಹ ಪಾವನ್ನಾ| ಪೊಡವಿಯೊಳಗೆ|ಮೃಡ ಅಜರಿಗೆ ವಡಿಯ ನೀನೀಗ| ಒಡಲ ಹೊಕ್ಕೆನು ಕರುಣಾ ನಿನಗ 1 ಹಲವು ಜನ್ಮಂಗಳನು|ಬಲುತೆರ ಸೂಸಿದೆನು| ನೆಲೆಗಾಆಣದೆ ನಾನು|| ಸುಲಭದಿ ದೊರೆಕಿತು ದೀನೊದ್ದರನೆ 2 ಮುನ್ನ ಮಾಡಿದ ಪರಿ|ಬನ್ನ ಬಡಿಸದೆ ಸಾರಿ| ಚನ್ನಾಗೊಲಿಹರಿ| ಯನ್ನ ಹೃದಯದಲಿ ಇನ್ನು ನಿಶಿದಿನಲಿ|ನೆನೆವ ಭಕುತಿಲಿ| ಸನ್ನುತ ಮಹಿಪತಿ ನಂದನ ಪ್ರಭುವೇ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಿನ್ನಪ ಕೇಳಯ್ಯಾ ಬಡವನ ಮನ್ನಿಸು ಮಹರಾಯ ಪ ಎನ್ನ ಭವಗುಣಗಳನ್ನು ಕಳೆದು ಪೊರೆ ಸನ್ನುತಾಂಗ ಹರಿ ಉನ್ನತ ಮಹಿಮ ಅ.ಪ ತೊಳಲಿಬಳಲಿ ಬಂದೆ ಸಂಸಾರದ್ಹೊಲಸಿ ನೊಳಗೆ ನಿಂದೆ ಅಳಿಯುವ ದೇಹಕೆ ಕಳವಳಿಸುವ ಮನ ಮಲಿನತೊಳೆದು ನಿರ್ಮಲ ಮಾಡು ತಂದೆ 1 ಹುಟ್ಟಿ ನೀ ಸಾಯ್ವುದಕೆ ಬಂದಿಲ್ಲ ಗಟ್ಟ್ಯಾಗಿರಲಿಕ್ಕೆ ಸಠೆ ಈ ಲೋಕವು ದಿಟವಲ್ಲೆನಗೆ ಬಟ್ಟೆ ತಪ್ಪಿಸು ತಂದೆ 2 ಇಷ್ಟುದಿನವು ಕಳೆದು ತಿಳಿಯದೆ ಭ್ರಷ್ಟತನದಿ ಬಾಳ್ವೆ ಇಷ್ಟು ದಿನ ದಿನಗಳ್ವ್ಯರ್ಥ ಕೆಟ್ಟಿದ್ದೆ ಸಾಕಯ್ಯ ಶಿಷ್ಟಗುಣವಕೊಟ್ಟು ಸಲಹೊ ಶ್ರೀರಾಮ3
--------------
ರಾಮದಾಸರು