ಒಟ್ಟು 515 ಕಡೆಗಳಲ್ಲಿ , 77 ದಾಸರು , 436 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಿಡೋ ಬಿಡು ಮನುಜ ಭ್ರಾಂತಿಯ ಪಡಕೊ ನಿನ್ನೊಳು ತಿಳಿಯುವ್ಹಾಂಗ ಸದ್ಗುರು ಭಕ್ತಿಯ ಧ್ರುವ ಬುಡದಲಿ ಫಲವಿರಲಿಕ್ಕೆ ಅಡರುವದ್ಯಾಕೊ ತುದಿಗೆ ಪಡಬ್ಯಾಡೋ ನಾನಾ ಸಾಯಾಸ ತೊಡಕಿ ಬೀಳುವ 1 ಕಾಶಿಗೆ ಹೋಗಬೇಕೆಂದು ಕಾಸಿನ ಚಾಲವರಿಕ್ಯಾಕ ಆಸಿ ಅಳಿದರೊಂದೇ ಸಾಕು ಭಾಸುದು ತನ್ನೊಳಗೆ 2 ದೇವರೆ ತಾ ದೂರಿದ್ದರೆ ಆವದೊ ನಿನ್ನ ಕಾವ ದೈವ ಠಾವಿಕಿ ಮಾಡಿಕೊಳ್ಳೊ ಸಾವಧ ವಾಗಿ 3 ಹೇಳಿಕೊಡುವ ಸ್ವಾಮಿ ಬೆಳಗ ತಾ ಝಾಡಿ 4 ಸಾಯಾಸವಿಲ್ಲದೆ ಮಹಿಪತಿಗೆ ಶ್ರಯದೋರಿತು ಗುರುವಾಕ್ಯದಲಿ ಆಯಿತು ಮಾಡಿದ ಗುರು ತಾಯಿತಂದೆನಗೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬೀಗಮುದ್ರೆಗಳಹವು ಬಹು ಬಾಗಿಲುಗಳಾಗಿಸಾಗರಾತ್ಮಜೆಯರಸ ಸುಖದಿ ಪವಡಿಸಲು ಪಪುರದ ಮುಂಭಾಗದಲಿ ಹೊಳೆವ ದ್ವಾರಗಳೈದುಹೊರಗುಭಯಪಾಶ್ರ್ವದಲಿ ಹೊಂದಿರುವವೆರಡುತೆರೆದು ಮುಚ್ಚುತಲಿರುವ ತತ್ಪಶ್ಚಿಮದಲೆರಡುಗುರಿಕಾರರೊಳಸರಿದು ಗೋಪ್ಯರಾಗುವರಿಂತು 1ಮೊದಲ ಜಾವದಲಿವನು ಮುಚ್ಚಿ ಮುದ್ರಿಸುತಿಹರುಹುದುಗಿದೊಳ ದ್ವಾರಗಳ ಹಾಗೆ ತೆರೆದಿಹರುಅದರೊಳರಸೆಡೆಯಾಡಿಯಾ ಭೋಗವನುಭವಿಸಿಕದಲಂತಃಪುರಕೆ ಕಡು ಮುದ್ರಿಸುವರು 2ಅಂತರದೊಳಿಹ ದ್ವಾರವವು ನಾಲ್ಕು ಬಳಿಕಲ್ಲಿಅಂತರಿಸದಧಿಪತಿಗಳವರು ನಾಲುವರುಸಂತತವು ಕಾದಿರುತ ಸರಿವರೊಳಮುಖವಾಗಿನಿಂತು ದೊರೆಯೊಡನಿವರ್ಗೆ ನಿದ್ರೆಯಾಗುವದಿಂತು 3ದ್ವಾರ ನಾಲ್ಕರೊಳೊಂದೆ ದೊಡ್ಡದದರಲಿ ದೊರೆಯುಸೇರಿ ನಿರತವು ತಾನು ಸಂಚರಿಪನಾಗಿಮೂರುಳಿದ ದ್ವಾರಗಳು ಮುಖ್ಯವಹುದಾದಡೆಯುತೋರುವೊಂದು ದ್ವಾರದಲಿ ತಾವೇಕವಾಗಿಹವು 4ಸಣ್ಣ ದ್ವಾರಗಳಿನ್ನು ಸಾವಿರಗಳುಂಟೊಳಗೆಕಣ್ಣಿ ಯೊಂದಿವಕೆಲ್ಲ ಕಟ್ಟಿರುವದದನುಪಿಣ್ಣವಾಗಿಯೆ ದೊರೆಯು ಪಿಡಿದೆಚ್ಚರದೊಳಿದ್ದುಕಣ್ಣಾಗಿ ತಾ ಕಾಯ್ವ ಕೋಟೆುದನೊಳಗಿದ್ದು 5ಯೋಗನಿದ್ರೆಯದೆಂದಡಿದು ಪರಮ ಪುರುಷನಿಗೆರಾಗವಿಲ್ಲದೆ ದೇವರಾಜಿಯಲಿ ನಿಂದುಭೋಗವನ್ನಿವರ್ಗೆಲ್ಲ ಬಹಿರಂಗದೊಳಗಿತ್ತುಭೋಗಾವಸಾನದಲಿ ಬಳಿಕೊಟ್ಟುಗೂಡಿಸಲು 6ಏಕನದ್ವಯನಮಲನೀಶ್ವರನು ಪರದಲ್ಲಿಪ್ರಾಕೃತದ ಪದ್ಧತಿಯ ಪರಿಪಾಲಿಸುತಲುಲೋಕೇಶ ತಿರುಪತಿಯ ಲೋಲ ವೆಂಕಟರಮಣನೀ ಕಳೇಬರದಲಿರಲಿಂದಿರೆಯನೊಳಕೊಂಡು 7ಓಂ ಸರ್ವಗ್ರಹರೂಪಿಣೇ ನಮಃ
--------------
ತಿಮ್ಮಪ್ಪದಾಸರು
ಬೇಕಿಲ್ಲ ಎನಗನ್ಯ ಏನೇನು ಸ್ವಾಮಿ ಸಾಕು ನಿನ್ನಯ ನಾಮವೊಂದೆ ನುತ ಪ್ರೇಮಿ ಪ ದುರುಳ ಸಂಹರ ನಾಮ ದುರಿತ ಪರಿಹರ ನಾಮ ಶರಧಿಮಥನ ನಾಮ ಸುರರ ಸಲಹಿದ ನಾಮ ಹರನ ಪ್ರೇಮದ ನಾಮ ಪರಮೇಷ್ಟಿಯನು ಪಡೆದ ಸ್ಥಿರನಾಮದ್ಹೊರತು 1 ಸೃಷ್ಟಿಯಾಳುವ ನಾಮ ಶಿಷ್ಟಪಾಲನ ನಾಮ ಕಷ್ಟ ಕಳೆಯುವ ನಾಮ ಇಷ್ಟಪೂರ್ಣ ನಾಮ ಮುಟ್ಟುಮುಡಿ ಹರನಾಮ ಅಷ್ಟಸಿರಿಪತಿನಾಮ (ಹುಟ್ಟುಸಾವಿ)ಲ್ಲದ ಶಿಷ್ಟನಾಮದ್ಹೊರತು 2 ವೇದ ಹೊಗಳಿದ ನಾಮ ಸಾಧುವಂದಿತನಾಮ ಬೋಧರೂಪದ ನಾಮ ಆದಿಮಹನಾಮ ಭೇದವಿಲ್ಲವ ನಾಮ ವೇದಗೋಚರ ನಾಮ ಆದಿ ಅಂತಿಲ್ಲದನಾದಿ ನಾಮದ್ಹೊರತು 3 ತರಳನ್ಪೊರೆದ ನಾಮ ಕರಿಯ ಸಲಹಿದ ನಾಮ ತರುಣಿನುದ್ಧಾರ ನಾಮ ಧರೆಪೊತ್ತ ನಾಮ ಕರುಣೆ ತುಂಬಿದ ನಾಮ ಶರಣಾಗತಪ್ರಿಯ ನಾಮ ನರನ ಬೆಂಬಲನಾದ ಹರಿನಾಮದ್ಹೊರತು 4 ಮೂರು ಕಳೆಯುವ ನಾಮ ಆರುಗೆಲಿಸುವ ನಾಮ ಆರುನಾಲ್ಕು ಸುಲಭದಿ ಹಾರಿಸುವ ನಾಮ ಸಾರ ಮುಕ್ತಿಯ ನಾಮ ಧೀರ ಶ್ರೀರಾಮ ನಿಮ್ಮಪಾರನಾಮದ್ಹೊರತು 5
--------------
ರಾಮದಾಸರು
ಬೇಡಿದರೆ ನೀಡುವುದೇನು ಹಿರಿದೆ ಗೋವಿಂದ ಬೇಡದೆ ನೀಡೆ ನಿನ್ನಂತಸ್ತಿಗತಿಚೆಂದ ಪ ನೀಡುವನು ನೀನಿರಲು ಬೇಡಿಕೆಗೆ ಕೊನೆಯುಂಟೆ ಬೇಡಿ ಬೇಸತ್ತರೂ ಆಸೆಯಿಂಗುವುದುಂಟೆ ಬೇಡಿದಮಣಿ ನೂರುಜನುಮ ಸಾಕಹುದುಂಟೆ ಬೇಡದೇ ಭಜಿಪವಗೆ ಹುಟ್ಟು ಸಾವುಗಳುಂಟೆ 1 ಹಿಂದೆ ನೀನಿತ್ತುದನು ಇಂದುಣುತಲಿಹೆವಯ್ಯ ಮುಂದೆ ನಾನುಣಲೇನು ಬೇಡವಯ್ಯ ಸಂದಿರ್ಪುವೈ ಸಾಲಸೋಲಂಗಳೇನಯ್ಯ ಮುಂದೇನು ಬೇಡ ಮಾಂಗಿರಿವಾಸ ರಂಗಯ್ಯ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೇಡೆಲೊ ಜೀವಾ ಜನಿಸಲೆ ಬೇಡೋ ಪ ಬೇಡ ನಿಜಸುಖ ದೊರೆಯದು ನೋಡೋ ಅ.ಪ ಹೆಣ್ಣೋ ಗಂಡೋ ಆಗಿ ಮೆರೆಯುವೆಮಣ್ಣು ಹೊನ್ನಿಗೆ ನೀ ಹಾತೊರೆಯುವೆಉಣ್ಣುತ ಪ್ರಾರಬ್ಧವ ಬಾಯ್ದೆರೆಯುವೆಹಣ್ಣಾಗುವೆ ನೀ ಪರೀಕ್ಷೆ ಮಾಡೊ 1 ಆರು ಹಗೆಗಳು ಗಡ ಮುತ್ತುವವೊಮೂರು ತಾಪಗಳು ಕಡು ಹೊತ್ತುವವೊನೂರೊಂದೊಗಟಗಳಿರದೊತ್ತುವವೊಪಾರಾಗಲು ಬಿಡವೆಂದಿಗು ಕೇಡೋ 2 ಹುಟ್ಟು ಸಾವುಗಳ ಸುಳಿಯಲಿ ಸುತ್ತುವೆಒಟ್ಟು ಮರಳಿ ಸಂಚಿತವನು ಬಿತ್ತುವೆ ಗಟ್ಟಿಸಿ ಗದುಗಿನ ವೀರನಾರಾಯಣನೆಹುಟ್ಟಿಸಬೇಡೆಂದಿಚ್ಛಿಸಿ ಬೇಡೋ 3
--------------
ವೀರನಾರಾಯಣ
ಬೋಧ ಭಾನು ಬರುತೈದನೆ ನಾದ ವಿನೋದವೆಂಬ ಈಕೋಳಿಯು ಕೂಗುತೈತವರನೀಕ್ಷಿಸೆ ಸತ್ಕರುಣಾ ಕಟಾಕ್ಷದಿಂಏಳಯ್ಯ ಗುರುವರ್ಯ ಏಳಯ್ಯ ಗುರುವರ್ಯ ಯತಿಜನಾಲಂಕಾರಪಏಳು ಭಕ್ತಾಧಾರ ಯಮನಿಯಮ ಸಂಚಾರಏಳು ವಿದ್ವದ್ವರ್ಯ ಪರಮಹಂಸಾಚಾರ್ಯ ಏಳು ಗೋಪಾಲ ಯತಿವರ್ಯಾ ಸ್ವಾಮಿಅ.ಪಆಧಾರ ಮಣಿಪೂರ ಹೃದಯ ಕಮಲಗಳಲ್ಲಿನಾದ ಬಿಂದು ಕಲೆಗಳೆಂಬರುಣನುದುಸಿದಬೋಧೆಯೆಂಬರ್ಕನಾವಿರ್ಭವಿಸಿದನು ಸಹಸ್ರಾರ ಕಮಲದ ತುದಿಯಲಿವೇದವೇದ್ಯಾನಂತಮಹಿಮ ಚಿನ್ಮಯರೂಪನಾದಸೌಖ್ಯಾಕಾರ ಕಲಿ ಕಲ್ಮಷವಿದೂರಆದಿಮಧ್ಯಾಂತರಹಿತಾನಂದ ನಿತ್ಯನಿಜಬೋಧನೊಲಿದುಪ್ಪವಡಿಸಾ ಸ್ವಾಮೀ1ನಿತ್ಯವೆ ನಿಮ್ಮ ಪದವೆಂದಜಾಂಡವನಿದನನಿತ್ಯವೆಂದಖಿಳ ವಿಷಯಗಳಲಿ ವಿರತರಾಗಿಅತ್ಯಂತ ಶಮ ದಮಾದಿಗಳೆಂಬ ಸಾಧನದಿ ಮುಕ್ತಿ ಸುಖವನು ಬಯಸುತಾಪ್ರತ್ಯಕ್ಷರ ಬ್ರಹ್ಮರೈಕ್ಯವರಿಯದೆ ವಿದುಗಳತ್ಯಂತ ತ್ವರೆುಂದ ನಿಮ್ಮ ಮುಖಕಮಲದಿಂತತ್ವಮಸಿ ವಾಕ್ಯದರ್ಥವ ತಿಳಿಯಬೇಕೆಂದು ನೃತ್ಯವನು ಮಾಡುತಿಹರೂ ಸ್ವಾಮಿ 2ದೇಹೇಂದ್ರಿಯಾಂತರಂಗವನೇತಿಗಳಿದು ಸಂದೇಹದಲಿ ಕೂಟಸ್ಥ ನೀನೆಂಬುದರಿಯದೆಮಹಾ ವಿಚಾರಿಸಿ ಭಕ್ತ ಸುಲಭನೆ ದಾಟಿಸೈ ಮೋಹಸಾಗರವನೆನುತಾಪಾಹಿ ನೊಂದೆವು ಸಂಸ್ಕøತಿಯ ಬಂಧದಲಿ ನಮ್ಮಬೇಹುದೈಪಾಲಿಸಲು ಯೋಗನಿದ್ರೆಯ ಬಿಟ್ಟುದಾಹರಿಸು ವೇದಾಂತಗೋಪ್ಯವನೆನುತ ನತಸಮೂಹ ಕಾದಿದೆ ಕೃಪಾಳು ಸ್ವಾಮಿ 3ಕೇಳಿ ಭಕುತರ ದೈನ್ಯ ಸಲ್ಲಾಪಗಳನಿಂತುಲೀಲಾವತಾರ ಗುರುರಾಯನೊಲಿದೆದ್ದವರಲಾಲಿಸುತ ಧನ್ಯರಾದಿರಿ ಸನ್ಮತಿಯೊಳಿಂತು ಮೇಳಾಪವಾುತೆನುತಾಬಾಲರಿರ ನಿಮ್ಮನಂತಃಕರಣದ ಧ್ಯಾನಜಾಲಸುತ್ತಿರಲಾಗಿ ನಿಮ್ಮ ನಿಜವನು ಮರೆದುಕಾಲಕರ್ಮಾಧೀನವಾಗಿ ನೊಂದಿರಸತ್ಯವೀ ಲೋಕವೆಂದರಿಯದೆ ಎನಲು ಗುರುವೇ 4ಜೀವೇಶ್ವರರ ವಾಚ್ಯ ಲಕ್ಷ್ಯಾರ್ಥವನು ನಿಚ್ಚ ಭಾವಿಸುತ ಬ್ರಹ್ಮ ಕೂಟಸ್ಥರೆಂದವರಿಗೆ ಸ್ವಭಾವದಿಂ ಭೇದವಿಲ್ಲೌಪಾಧಿಕವಿದೆಂದು ಸಾವಧಾನದಲಿ ತಿಳಿದೂನಾವೆ ಪರಿಪೂರ್ಣಾತ್ಮರೆಂದು ಬೋಧಾಮೃತವಸೇವಿಸಿದಡನುದಿನಂ ಕೃತಕೃತ್ಯರಹಿರೆನಲ್‍ದೇವ ಕೃತಕೃತ್ಯರಾದೆವು ನಮೋ ಎನುತ ಸ್ವಭಾವ ಪದದಲಿನಿಂದರೂ ಸ್ವಾಮೀ 5
--------------
ಗೋಪಾಲಾರ್ಯರು
ಬೋಧಾ ಜ್ಞಾನದಾ ಬೋಧ ಮೋದಾ ಶಾಂತಿಯಾ ಸ್ವಾದಾ ಪ ಸ್ವರೂಪದಾ ಸುಖಸ್ಪದಾ ಪ್ರಶಾಂತ ಗುರುಬೋಧಾ ಬೋಧ ಅ.ಪ. ಸುಲಭಸಾಧ್ಯ ಸುವಿಚಾರಾ ವೇದಾಂತಶಾಸ್ತ್ರದ ಸಾರಾ ತಾನೇ ಪರಮಾತ್ಮನು ಎನುವಾ ಸ್ವಾನುಭವಾಮೃತಜಲಧಾರಾ ಘೋರಾ ಸಂಸ್ಕøತಿಯ ಪಾರಾ 1 ಜೀವಭಾವವ ಮರೆಯಿಸುತಿರುವಾ ಸಾವ ನೀಗುವಾ ಮಂತ್ರವಾ ಸಾರಿ ಪೇಳ್ವ ಶಂಕರಾರ್ಯ ಮೋದಾ ಶಾಂತಿಯಾ ಸ್ವಾದಾ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಬ್ಯಾಗ ಬರುವೇನೆಂದು ಸಾಗಿ ಮಧುರೆಗೆ ಹೋದ ಹ್ಯಾಗೆ ಮಾಡುವೊಣುದ್ಧವ ಭಾಗವತಪ್ರಿಯಗಿನ್ನು ಬಾಗಿ ನಮಿಸುತ ನಾವು ಉದ್ಧವ ಪ ಗೋಕುಲವಾಸ ಬಿಟ್ಟ್ಯಾಕೆ ತೆರಳಿದ ಸ್ವಾಮಿ ಈ ಕಾರ್ಯವನು ತಿಳುಹಿಸೊ ಶ್ರೀಕರ ಕಮಲಾರ್ಚಿತ ಚರಣಧ್ವಜವಜ್ರ- ರೇಖಪಾದವ ಚಲಿಸಿದ ಪಾಕಶಾಸನಪ್ರಿಯನು ಪರಮ ನಿರ್ದಯ ಮಾಡಿ ಉದ್ಧವ 1 ಯಂತ್ರಮಾಯದಲಿ ಶ್ರೀಕಾಂತನೊಲಿಸುವುದಕ್ಕೆ ಮಂತ್ರವನು ಮಾಡರಿಯೆವೊ ಅಂತರಂಗದಲಿ ಅನಂತಗುಣ ಸ್ತುತಿಸಲೇ- ಕಾಂತ ಭಕ್ತರಲ್ಲವೊ ನಿಂತು ನಿತ್ಯಾನಂದಮೂರ್ತಿಯ ನೋಡದಲೆ ಉದ್ಧವ 2 ಅತಿಕ್ರೂರನೆನಿಸುವಕ್ರೂರ ಬಂದು ನಮಗ- ಹಿತಮಾಡಿ ಪೋದನಲ್ಲೊ ಮತಿಹೀನರಾಗ್ಹರಿಯ ರಥವ ನಿಲಿಸದಲೆ ಮುಂ- ದೆತನ (ಯತ್ನ ?) ಮರಿಯದೆ ನಿಂತೆವೊ ಪೃಥಿವಿ ಒಳಗಿಂಥ ಗೋಪಿಕಾಸ್ತ್ರೀಯರೆಂದು ಭಾಳಪ- ಉದ್ಧವ 3 ಸಕ್ಕರೆಯಂಥ ಸವಿಮಾತನಾಡುತ ನಮಗೆ ದಕ್ಕಿದಕ್ಕದಲ್ಹೋದನೊ ಮತ್ತೇನು ಪೇಳೋಣ ಮಂದಭಾಗ್ಯರು ಹರಿಯ ದಕ್ಕಿಸಿಕೊಳ್ಳದ್ಹೋದೆವೊ ಸಿಕ್ಕರೆ ಧನವು ಶತಸಾವಿರ ಕೊಪ್ಪರಿಗೆ ಅಷ್ಟ- ಉದ್ಧವ 4 ಮಡದಿಯರು ಕೇಳಿಗೆ ಮಧುರಾಪಟ್ಟಣದಂಥ ಚೆದುರೆಯರು ನಾವಲ್ಲವೊ ಮದನನಾಟಕೆ ಮದಗಜಗಮನೇರಿಗಿನ್ನು ಮುದದಿ ಮರುಳಾಗಿಪ್ಪನೊ ವಿಧಿ ಬರೆದನೇನೆಂದರೀ ನಮ್ಮ ಪಣೆಯಲ್ಲಿ ಉದ್ಧವ 5 ಮಲ್ಲರನೆ ಮಡುಹಿದ್ದ ಮಾವನ್ವೈರಿಯು ನಮ್ಮ ಕೊಲ್ಲಿ ಪೋದಂತಾಯಿತೊ ಸಲ್ಲ ನಡತೆಯ ಸೊಟ್ಟಕುಬ್ಜೆಗೆ ಕಡೆಯು ನಾ- ವಲ್ಲವೆಂದವಗೆ ಪೇಳೊ ನಿಲ್ಲದ್ಹೋಗ್ಹಿಂದಕೆ ಸುಳ್ಳಲ್ಲೊಂದು ಬೆರೆಸದಲೆ ಉದ್ಧವ 6 ಕಲ್ಲಾಗದೀವಿಧಿಯ ಕಾಮನಪಿತನಗಲಿ ಸೊಲ್ಲು ಸೊಲ್ಲಿಗೆ ಬಳಲ್ದೆವೊ ಮಲ್ಲಿಗ್ವೊಣಗಿದ ದಾರದಂತೆ ಗೋವ್ರಜಮೂಲೆ- ಯಲ್ಲಿ ನಾವಿರಲಾರೆವೊ ಎಲ್ಲಿ ಬಂದೊದಗಿತೀ ಬಿಲ್ಲ ್ಹಬ್ಬನಮಗೆ ಭೀ- ಉದ್ಧವ 7
--------------
ಹರಪನಹಳ್ಳಿಭೀಮವ್ವ
ಬ್ಯಾಡ ಬ್ಯಾಡಿರೆಂದ ಅವರೊಳು ಪಂಥಬ್ಯಾಡ ಬ್ಯಾಡಿರೆಂದು ಬ್ಯಾಡ ಬ್ಯಾಡ ಪಂಥ ನೋಡಿಕೊ ರುಕ್ಮಿಣಿಮಾಡೋರು ಮುಖಭಂಗಬೇಡಿಕೊಂಡೆನು ಭಾವೆ ಪ. ಹರದೆಯರಾಡಿದ ಮಾತು ಹರಿಯು ಕೇಳುತಬೇಗ ಕರೆಯ ಹೋಗೆಂದ ಮಡದಿಯರ ಕರಿಯ ಹೋಗೆಂದ ಮಡದಿಯರ ದ್ರೌಪತಿಯೆಸರಿಯಲ್ಲ ಪಂಥ ಬಿಡಿರೆಂದ1 ಹಾದಿ ಬೀದಿಯ ಮಾತು ಸಾಧಿಸುವರೆ ನೀವುವೇದಾಂತ ಮಳೆಯ ಗರೆದಾರುವೇದಾಂತ ಮಳೆಯ ಗರೆದಾರು ನಿಮ್ಮ ಮುಖಆದೀತು ಸಣ್ಣ ಸಭೆಯೊಳು 2 ಅತ್ತಲಿತ್ತಲೆ ಮಾತು ಜತ್ತು ಮಾಡೋರೆನೀವುಶ್ರುತ್ಯರ್ಥವೆಲ್ಲ ಸುರಿಸೋರುಶ್ರುತ್ಯರ್ಥವೆಲ್ಲ ಸುರಿಸೋರು ನಿಮ್ಮಮುಖ ಬತ್ತೀತು ಒಂದು ಕ್ಷಣದಾಗೆ 3 ಮಂದರಧರ ತನ್ನ ತಂಗಿಯರ ಕರೆಯೆಂದು ಮಂದಹಾಸದಲಿ ನುಡಿದನುಮಂದಹಾಸದಲಿ ನುಡಿದನು ಭಾವೆರುಕ್ಮಿಣಿ ಬಂದರು ಭಾಳೆ ವಿನಯದಿ4 ಆರು ಮಂದಿ ಹರಿಯ ನಾರಿಯರುಹದಿನಾರು ಸಾವಿರ ಮಂದಿ ಸಹಿತಾಗಿಹದಿನಾರು ಸಾವಿರ ಮಂದಿ ಸಹಿತಾಗಿ ಬಂದರು ನಾರಿ ದ್ರೌಪದಿಯ ಕರೆಯಲು5 ನೂರುಮಂದಿ ಹರಿಯನಾರಿಯರುತಂತಮ್ಮ ಹಾರಭಾರಗಳ ಅಲವೂತಹಾರಭಾರಗಳು ಅಲವೂತ ಬಂದರು ನೀರೆ ಸುಭದ್ರೆಯು ಕರೆಯಲು 6 ಪನ್ನಂಗ ವೇಣಿಯರು ಮನ್ನಿಸಿ ಹರಿಯಾಜ್ಞೆಚನ್ನ ರಾಮೇಶನ ಮಡದಿಯರು ಚನ್ನ ರಾಮೇಶನ ಮಡದಿಯರು ಬಂದರುಕನಿ ದ್ರೌಪತಿಯ ಕರೆಯಲು 7
--------------
ಗಲಗಲಿಅವ್ವನವರು
ಭಕ್ತರುದ್ಧಾರಕ ದಾಸರಾಯರಿವರ್ಯಾರೇ ಪೇಳಕ್ಕ ಪ. ಮುಕ್ತಿಗೊಡೆಯನ ಮಾರ್ಗತೋರಿ ಭವ ಮುಕ್ತಿಗೊಳಿಪ ಶ್ರೀ ಗುರುವೆಲೆ ತಂಗಿ ಅ.ಪ. ಕಂದರಂದದಿ ಪೊಂದಿದವರ ಪೊರೆಯುವರ್ಯಾರೇ ಪೇಳಕ್ಕಯ್ಯ ನಂದಕಂದನ ಅಂಕಿತ ಕೊಡುವವರ್ಯಾರೇ ಪೇಳಕ್ಕಯ್ಯ ಸಿಂಧುಶಯನನ ತೋರುವೆನೆಂಬುವರ್ಯಾರೇ ಪೇಳಕ್ಕಯ್ಯ ಬಿಡಿಸುವ ದಾಸೋತ್ತಮರೆಲೆ ತಂಗಿ 1 ಭಾವಜನಯ್ಯನ ಭಾವಿಸಿ ಭಜಿಸುವರ್ಯಾರೇ ಪೇಳಕ್ಕಯ್ಯ ಸಾವಕಾಶವಿಲ್ಲದೆ ತತ್ವವನೊರೆಯುವರ್ಯಾರೇ ಪೇಳಕ್ಕಯ್ಯ ಪಾವನಮಾನಿಗತಿ ಪ್ರಿಯರೆಂದೆನಿಸುವರ್ಯಾರೇ ಪೇಳಕ್ಕಯ್ಯ ನಾಮಾತ್ಮಕರಲೆ ತಂಗಿ 2 ಮಂದಮತಿಗಳ ಬಂದು ಕಾಯ್ವರಿವರ್ಯಾರೇ ಪೇಳಕ್ಕಯ್ಯ ಗಂಧಾಕ್ಷತೆ ಪದ್ಮಾಕ್ಷಿಯ ಧರಿಸಿಹರ್ಯಾರೇ ಪೇಳಕ್ಕಯ್ಯ ಬಂದು ಸ್ವಪ್ನದಿ ಅಭಯ ಕೊಡುವರಿವರ್ಯಾರೇ ಪೇಳಕ್ಕಯ್ಯ ಪೊಂದಿ ಭಜಿಸಿದ ಮಹಿಮರೆ ತಂಗಿ 3 ಕಷ್ಟವ ಬಿಡಿಸಿ ಉತ್ಕøಷ್ಟವ ತೋರಿದರ್ಯಾರೇ ಪೇಳಕ್ಕಯ್ಯ ಸೃಷ್ಟೀಶ ನಿತ್ಯಾನಂದನ ತೋರಿದರ್ಯಾರೇ ಪೇಳಕ್ಕಯ್ಯ ತುಷ್ಟಿಬಡಿಸಿ ವಚನಾಮೃತ ಕರೆಯುವರ್ಯಾರೇ ಪೇಳಕ್ಕಯ್ಯ ಶ್ರೇಷ್ಠ ದಾಸರೆಂದೆನಿಸಿ ಗೋಪಾಲಕೃಷ್ಣವಿಠಲಗತಿ ಪ್ರ್ರಿಯರೆ ತಂಗಿ4
--------------
ಅಂಬಾಬಾಯಿ
ಭರಬರನೆ ಬಾಜಾರಕೆ ನಾ ಬಂದೆನಯ್ಯ ಚಿದಾನಂದನ ಮರೆಯಲಿಕೆ ಪ ಐವರು ಗೌಡರು ಕಟ್ಟಿದ ಪೇಟೆ ಆ ಪೇಟೆಗೆಐದು ನಾಲ್ಕು ಬಾಗಿಲುಗಳುಐದು ಮಂದಿ ಸೆಟ್ಟರು ಸೇರಿಹರು ಆವರಲ್ಲಿಯೆಐದು ಮಂದಿ ಚಲವಾದಿಗಳು1 ಭಾರ ನೇಮಲ್ಲಿದೆ 2 ತಡುಗರೆಂಬವಾಲೆ ಶೆಟ್ಟಿಗಳೆ ಅಲ್ಲಿಗಲ್ಲಿಗೆಪಡುವಲ ಕೋರಿ ಶೆಟ್ಟಿಗಳೇಕಡುಕರ್ಮಿ ಕೋಮಟಿ ಶೆಟ್ಟಿಗಳೇ ಬಾಯಿ ಘನವಾಗೆಬಡಬಡಿಪ ಪಟ್ಟಣ ಶೆಟ್ಟಿ 3 ಪಾಪವೆಂಬ ವಸ್ತ್ರದಂಗಡಿಯೇ ನಾ ನೋಡಲಾಗಿತಾಪವೆಂಬ ಜವಳಿ ಅಂಗಡಿಯೆಕೋಪವೆಂಬ ಕುಪ್ಪಸ ದಂಗಡಿಯೇಒಪ್ಪುತಲಿರೆ ಕಾಪಥವೆಂಬ ಸಕಲಾತ್ಮಂಗಡಿಯೇ 4 ಚಿ, ಛೀ ಎಂಬ ಚಿಕ್ಕ ತಕ್ಕಡ ಗಂಡಿಯೆ ನಾ ಬರುತಿರೆನಾಚಿಕೆಯಿಲ್ಲದ ಕಂಚಿನಂಗಡಿಯೇಚು ಛೂ ಎಂಬ ಚೀನಿಯಂಗಡಿಯೇ ಯಡಬಲದಲ್ಲಿಕೋಚು ಮಾಡೋ ಉದ್ದಿನಂಗಡಿಯೇ 5 ತನು ವ್ಯಸನವೆಂಬ ತಾಡಪತ್ರಿ ತೋರಲಾಗಿಮನವ್ಯಸನವೆಂಬ ಕಿಂಕಾಪುಧನವ್ಯಸನವೆಂಬೋ ಮಖಮಲ್ಲು ನಾ ಬೆರಗಾಗೆಜನ ವ್ಯಸನವೆಂಬೋ ಜರತಾರಿಯೇ6 ನಾನಾ ವಿಷಯ ವೆಂಬೋ ಉತ್ತತ್ತಿ ಅಲ್ಲಿದ್ದಾವೆಜ್ಞಾನಶೂನ್ಯ ಜಾಜಿಕಾಯಿಮಾನ ಹಾನಿಯೆಂಬೋ ಜಾಪತ್ರಿನಾನು ನನ್ನದು ಎಂಬ ಭಂಗಿ ಸೊಪ್ಪು7 ಜೀವನೆಂಬ ಹೊಗೆಯ ತೊಪ್ಪಲೇ ಹಿರಿಯವಾದನೋವು ಕಷ್ಟಗಳೆಂಬ ಗಾಂಜಿಯೇಸಾವು ಬದುಕು ಎಂದೆಂಬ ಮಾಲೆಗಳೇ ಮಾರುತಲಿತ್ತೋನಾನು ನೀನು ಎಂಬ ಚಿಲುಮೆಗಳೋ 8 ಭೇದವೆಂಬ ನಿಲುವುಗನ್ನಡಿಯೆ ಒಳಗಿದ್ದಾವೆ ವಾದವೆಂಬವಜ್ರದಹರಳೇ ಹಾದಿ ಕಾಣೆನೆಂಬ ಹವಳದ ರಾಶಿಯೇ ಹರಡಿದ್ದಾವೆಗಾದೆ ಎಂಬ ಸೂಜಿದಬ್ಬಣವೇ 9 ಪ್ರಾರಬ್ಧವೆಂಬೋ ಉಂಬತಳಿಗೆಯೇ ಪಸರಿಸುತಿರುವಘೋರ ತಾಪತ್ರಯದ ತಟ್ಟೆಯೇನಾರಿ ನೋಟೆಂಬ ಕಠಾರಿಯೇ ನಿಲಿಸಿದ್ದಾವೆಸೂರಿಯ ಸುಕೃತವೆಂಬೋ ತುಬಾಕಿಯೇ10 ಪರಿಣಾಮಿಲ್ಲದ ಪಡವಲಕಾಯಿ ದಾರಿಯಲಿದಾರಿಯಿಲ್ಲದ ದೊಡ್ಡಿಲಕಾಯಿಅರಿವಿಲ್ಲದ ಕುಂಬಳಕಾಯಿ ಹಾಗಿದ್ದಾವೆಮರುಳು ಎಂಬ ಮಾವಿನಕಾಯಿ11 ಮಂಠ ಎಂಬೋ ಮೆಂತ್ಯ ಪಲ್ಲಯೇ ಮಾಸಲವಿತ್ತೆಕಂಟಕ ಎಂಬೋ ಹರಿವೆ ಪಲ್ಲೆಯೇಕೊಂಟೆಯೆಂಬೊ ಬಸಲೆ ಪಲ್ಲೆಯೇ ತೀವ್ರದಲಿತ್ತೆಶುಂಠವೆಂಬೋ ಬೆರಕೆ ಪಲ್ಲೆಯೇ 12 ಬಂಗಾರವೆಂಬೋ ಬಿಳಿಯ ಜೋಳವೇ ಬೆಡಗಿಲಿರೇರಂಗು ಎಂಬೋ ರಾಗಿ ರಾಶಿಯೇಸಂಗವೆಂಬೋ ಸಣ್ಣಕ್ಕಿಯೇ ಸಾರಿದ್ದಾವೆಹಿಂಗದೀಪರಿ ದಿವಾರಾತ್ರಿಯೇ 13 ಸಂಕಲ್ಪೆಂಬೋ ಧಾರಣೆ ಹಚ್ಚಿರೋ ಸಂಗಾತಲೆವಿಕಲ್ಪೆಂಬೋ ಧಾರಣೆಯಿಳಿವುದೇಸುಖದುಃಖವೆಂಬೋ ಮಾರಾಟವೇ ಸಾಗಿರಲಾಗಿಕಾಕಧಾವಂತರ ಸಂಧಾನವೇ 14 ಕಾಮಕ್ರೋಧಗಳೆಂಬ ಕಳ್ಳರೇ ಕಾವಲಿರ್ದುರಾಮನೆಂಬ ಸ್ಮರಣೆ ಕದ್ದಿಹರೋಕಾಮುಕರೆ ತಿರುಗಾಡುವರೆಲ್ಲ ಕಾಣದ ಹಾಗೆಆ ಮಹಾಜ್ಞಾನವ ಸುಲಿದಿಹರೋ15 ಬರಬಾರದ ನಾನು ಬಂದೆನೇ ಬಾಜಾರ ಬಿಟ್ಟುಹೊರಡುವ ತೆರನ ಕಾಣೆನೇಕರುಣಿಯಾಗಿ ಕೈ ವಿಡಿವರಾರೋಕರುಣಾಕರ ಹರ ವಿಶ್ವೇಶನೇ ಬಲ್ಲ 16 ಚಿಂತೆ ನಾನು ಮಾಡುತಿರಲಾಗಿ ಚಿದಾನಂದಚಿಂತೆ ಬೇಡೆಂದು ಮುಂದೆ ನಿಂದಿಹನುಚಿಂತೆ ಬಿಡು ಕಾವಲಿಹೆನೆಂದು ಚಿದ್ರೂಪ ತೋರಿಎಂತು ಪೇಳಲಿ ಎನ್ನೆದುರು ನಿಂದಿಹನೆ17
--------------
ಚಿದಾನಂದ ಅವಧೂತರು
ಭವ ಬಂಧವೂ ಪಗಂಗಾಜನಕ ಖಗೊತ್ತುಂಗ ತುರಗನೆ ದೇವ ರಂಗಾಪುರಾಗಾರನೆ ಸ್ವಾ'ು ಅ.ಪದುರಿತ ಕೋಟಿಗಳ ಪರಿಹರಿಸಿ ರಕ್ಷಿಪ ನಿನ್ನ ಬರಿನಾಮಸ್ಮರಣೆಯೊಂದುಪರಿಪರಿಯ ಭವದ ಕೋಟಲೆಯ ಬಿಡಿಸುವ ನಿನ್ನ ಚರಿತೆಯ ಶ್ರವಣವೊಂದುಅರಿತರಿಯದೆಸಗಿದಘರಾಶಿಯ ದ'ಸಿ ನಿನ್ನ ಶರಣಜನ ಸಂಗವೊಂದುಇರಲಿವನು ಬಯಸಿ ಬೇಡುವೆನೆಂದು ನಿನ್ನ ಸಿರಿಚರಣದೆಡೆಗೈದಿ ಸಂತಸದಳೆದುನಿಂದೂ 1ಆವಜನ್ಮಾರ್ಜಿತದ ಸುಕೃತ ಪರಿಪಾಕವೊ ದೇವ ನಿನ್ನಯ ಕರುಣವೋಸಾವಧಾನದಿ ನಿನ್ನ ನೆನೆದು ಪೂಜಿಸಿ ನುತಿಪ ಸೇವಕರ ಪ್ರೇಮದೊಲವೋಜೀವರಾಶಿಗಳೊಳುದುಸಿ ಮಡಿಯೆ ಪುಟ'ಟ್ಟ ಭಾವಬಂದೀ ಬಣ್ಣವೋಆವುದನು ತಿಳಿಯದಜ್ಞನನು ನಿನ್ನವರೊಯ್ದು ಪಾವನಕ್ಷೇತ್ರವನು ಪೊಗಿಸಿದತಿಶಯವೋ 2ಗುರು ವಾಸುದೇವಾರ್ಯನಾಗಿ ಚಿಕನಾಗಾಖ್ಯಪುರದಿ ಮ'ಮೆಯ ತೋರ್ದೆಯೈಕರೆದಜ್ಞರಜ್ಞತೆಯ ಪರಿದು ಸುಜ್ಞಾನ ಸುಧೆಯೆರೆದು ನೀನೆ ಪೊರೆದೆಯೈಪರದೇಸಿ ವೇಷದಿಂ ಮೂಢ ಜನರಿಗೆ ಭಕ್ತಿುರವ ಕೈಸಾರಿಸಿದೆಯೈಮರೆಯೊಕ್ಕೆ ನಾನು ತಿಮ್ಮದಾಸ ದೇವ ಪರಾಕು ಕರ'ಡಿದು ಕಾಯಬೇಕೆನ್ನ ವೆಂಕಟರಮಣ 3
--------------
ತಿಮ್ಮಪ್ಪದಾಸರು
ಭವದ ಬಂಧವಿನ್ನೆನಗೆ ಯಾಕೆ ಭವಹರಣ ನಾಮ ಎನ್ನ ಜಿಹ್ವೆಯೊಳಗೆ ಇರುತಿರಲು ಪ ದುರಿತ ಭೀತಿ ಯಾಕೆ ಎನಗೆ ಕರ್ಮದ ಲೇಪವ್ಯಾಕೆ ಎನಗೆ ಕುಲ ಚಲಗಳ್ಯಾಕೆ ಎನಗೆ ಮಡಿಯು ಮೈಲಿಗ್ಯಾಕೆ ಅನುದಿನದಿ ಪಾವನಾತ್ಮಕನ ನೆನವು ಎನ್ನ ಮನದೊಳಿರಲು 1 ನಷ್ಟ ಪ್ರಪಂಚಂಟಿನ್ನ್ಯಾತಹೆÉ ಬಿಟ್ಟ ಬಡತನ ತಂತಿನಗ್ಯಾಕೆ ಹುಟ್ಟು ಸಾವು ಕಷ್ಟ ಮತ್ತ್ಯಾಕೆ ಕೆಟ್ಟ ಯಮನ ಅಂಜಿಕಿನ್ನ್ಯಾಕೆ ಸೃಷ್ಟಿ ಕರ್ತನ ಶಿಷ್ಟಪಾದ ನಿಷ್ಠೆಯೆನ್ನೊಳು ಗಟ್ಟಿಯಿರಲು 2 ನಿತ್ಯ ನೇಮ ಪೂಜೆ ಯಾಕೊ ಮತ್ತೆ ಜಪ ತಪವು ಯಾಕೊ ನಿತ್ಯ ನಿರ್ಮಲಾನಂದ ರೂಪಿ ಸತ್ತು ಚಿತ್ತನಂದದಾತ ಮುಕ್ತಿದಾಯಕ ಶ್ರೀರಾಮ ಪಾದ ಭಕ್ತನಾಗಿ ನಾ ಮೆರೆಯುತಿರಲು 3
--------------
ರಾಮದಾಸರು
ಭಾಗವತ ದಶಮಸ್ಕಂದ ಕಥೆ ಜಯ ಜಯ ರಾಮಾನುಜ ಪಾಹಿ ಜಯ ಜಯ ಶ್ರೀಕೃಷ್ಣಪಾಹಿ ಜಯ ಪಾಂಡವ ಮಿತ್ರ ಪಾಹಿ ಜಯ ಜಯ ಜಯತು ಪ ಭವ ಪ್ರಮುಖ ಸುರರಿ- ಗಾನಮಿಸುತ ದಶಮಸ್ಕಂದದ ಕಥೆಯ ಪೇಳುವೆ 1 ತಾಮರಸಭವಂಗೆ ಪೋಗಿ ಮೊರೆಯನಿಟ್ಟಳು 2 ಹರಮುಖ ಸುಮನಸರ ಕೂಡಿ ವಿಧಿಯು ಕ್ಷೀರ ಶರಧಿಯೈದಿ ಪರುಷಸೂಕ್ತದಿಂದ ಹರಿಯ ಸ್ತೋತ್ರ ಮಾಡಲು 3 ಸುರರು ಯಾದವರಾಗಿ ನಾನು ಬರುವೆ ದೇವಕಿ ಪುತ್ರನೆನಿಸಿ ತರಿವೆ ನೀಚರನೆಂದಾಕಾಶವಾಣಿಯಾಯಿತು 4 ಕನ್ನಿಕೆಯರು ಭುವಿಯೊಳವತರಿಸುವದೆನ್ನುತ 5 ಮೃಡ ಸಡಗರದಲಿ ತಮ್ಮ ನಿಳಯಗಳನು ಸಾರ್ದರು 6 ಶೂರಸೇನನೆಂಬ ರಾಜ ಪಾರಂಪರ್ಯದಿ ಮಧುರೆಯಲ್ಲಿ ಧಾರುಣಿಯ ಪಾಲಿಸುತೆ ಧರ್ಮದಿಂದಲಿ 7 ದೇವಕನು ದೇವಕಿಯ ವಸುದೇವಗಿತ್ತು ಉತ್ಸವ ಬರೆ ಭಾವ ಮೈದ ಕಂಸ ರಥಕೆ ಸಾರಥಿಯಾದನು8 ನಭವುನುಡಿಯೆ ಜವದಿ ತಂಗಿಯ ಮುಡಿಯ ಪಿಡಿಯೆ ಕಂಸ ಕೋಪದಿ9 ಪುಟ್ಟಿದ ಮಕ್ಕಳನೆಲ್ಲ ನಿನಗೆ ಕೊಟ್ಟುಬಿಡುವೆ ಕೊಲ್ಲದಿರವಳ ಸಿಟ್ಟು ಸೈರಿಸೆನುತ ಪೇಳ್ದ ಶೌರಿಭಾವಗೆ 10 ಕೊಡಲು ಕಂಸ ಹೃದಯದಲಿ ಸತ್ಯಕೆ ಮೆಚ್ಚಿ ಭಾವಗೆಂದನು 11 ಇವನ ಭಯವು ಎನಗೆ ಇಲ್ಲ ಈವುಂದೆಂಟನೆ ಸುತನ ಮಾತ್ರ ತವಕದಿಂದ ಮನೆಗೆ ಪೋಗು ಪುತ್ರ ಸಹಿತದಿ 12 ಸೆರೆಯೊಳಿಡಿಸಿ ಘನವಿಭವದಿ ಭುವಿಯನಾಳುತಿರ್ದ ಕಂಸನು 13 ಸುರ ಋಷಿ ರಹಸ್ಯದಲಿ ಬಂದು ಪೇಳಿದ 14 ಉರಿದ ಕಣ್ಣೊಳು ಕಿಡಿಗಳುದುರೆ ಶೌರಿಯ ಬಂಧನದೊಳಿಟ್ಟು ತರಿದನಾರುಮಂದಿ ಸುತರ ತವಕದಲಿ 15 ಏಳನೆಯ ಗರ್ಭ ಉದರವಿಳಿದೆಂದು ತಿಳಿಯೆ ಜನರು ಶ್ರೀಲತಾಂಗಿಯರಸನಂಶ ಬಳಿಕ ಬೆಳೆದುದು 16 ಅದನು ವಯ್ದು ದುರ್ಗಿ ರೋಹಿಣಿಯುದರದಲ್ಲಿ ಇಟ್ಟೆಶೋದೆ ಯುದರದಲ್ಲಿ ತಾನು ಸೇರಿ ಬೆಳೆಯುತಿರ್ದಳು 17 ಬಳಿಕಯಿಂದಿರೇಶ ತಾನು ಜಲಜಮುಖಿ ದೇವಕಿಯ ಗರ್ಭ ದಲಿ ಪ್ರವಿಷ್ಠನಾಗಿರ್ದ ಮಹಿಮೆಯಿಂದಲಿ 18 ಮುಖದಿ ಕಳೆಯೇರಿರಲ್ಕೆ ಖಳನಿದೇ ಇದೇ ಎನುತ್ತ ಸಕಲ ಭಾಗದಿ ಕಾವಲಿಟ್ಟು ಸಮಯ ನೋಡುತ್ತಿರೆ 19 ಸುರರು ಹರಿಯ ವೇದದಿಂದ ಸ್ತೋತ್ರಮಾಡಿ ಹೋದರು 20 ನಂದನರಸಿಯಲ್ಲಿ ದುರ್ಗಿಯಂದುದಿಸಿರೆ ನಭೋ ಮಾಸದಿ ಅಂದುರಾತ್ರಿಯ ಶಿತಪಕ್ಷಯಷ್ಟಮಿ ದಿನದಲಿ 21 ಸರಸಿಜಾಪ್ತನುದಿಸಿದಂತೆ ಬೆಳಕು ತುಂಬಲು 22 ದರ ಗದಾರಿ ಪದ್ಮ ಪೀತಾಂಬರ ಶ್ರೀವತ್ಸ ಕೌಸ್ತುಭಗಳ ಶೌರಿ ನೋಡಿದ 23 ದಿವ್ಯರೂಪವ ಕಾಣುತ ವಸುದೇವ ಮನದಿ ಹಿಗ್ಗಿ ಮುದದಿ ಗೋವುಗಳನು ಹತ್ತುಸಾವಿರ ಧಾರೆಯೆರೆದನು 24 ತುತಿಸಲಂದು ಸತೀಪತಿಗಳು ಹಿತದಿ ತೇಜವ ಮಾಯಗೈದು ಸುತನು ಮಗುವಿನಂತೆ ತೋರೆ ಸೊಬಗಿನಿಂದಲಿ 25 ಕಾಲಲಿದ್ದ ಸಂಕೋಲೆಗಳು ಕಳಚಿ ಬಿದ್ದುದಾಗ ದೇವಕಿ ಬಾಲನನ್ನು ನೋಡಿ ಮನದಿ ಭಯವ ಪಟ್ಟಳು 26 ಬೀಗಮುದ್ರೆ ಸಹಿತ ಎಲ್ಲ ಬಾಗಿಲು ತನ್ನಿಂತಾನೆ ತೆಗಿಯೆ ಶೌರಿ ನಡೆದನು 27 ಗೋಕುಲವನೈದಿ ಕಮಲನಾಭನಂ ಯಶೋದೆಯ ಬಳಿಯಲಿಟ್ಟನು 28 ಆಕೆ ಪಡೆದ ಹೆಣ್ಣು ಶಿಶುವ ತಾ ಕೈಕೊಂಡು ಮನೆಗೆ ಬಂದು ಜೋಕೆಯಿಂದ ಮೊದಲಿನಂತೆ ತೋರುತಿರ್ದನು 29 ಅಳಲು ಶಿಶವು ಕೇಳಿಯೆಲ್ಲ ಖಳರು ಹೋಗಿ ಕಂಸಗುಸುರೆ ಝಳಪಿಸುತ್ತ ಖಡ್ಗವನ್ನು ಜವದಿ ಬಂದನು 30 ವಂದನಾದರೂ ಬಿಡಬಾರದೆ ಸುಂದರಿ ಇವಳಣ್ಣ ಎನಲು ಮುಂದುಗಾಣದೆ ಯೋಚಿಸುತ್ತ ಮುಗುವನೆತ್ತಿದ 31 ನಭದಿನಿಂತು ಸಾರಿ ಛೀ ದುರಾತ್ಮ ಯಾರ ಕಡಿವೆ ಯೆಂದಳು? 32 ವೈರಿ ಮೀರಿ ಕೊಂದು ಪಾಪಿಯಾದೆ ಛೀ! ಹೋಗೆಂದಳು 33 ಮನದಿ ನೊಂದು ಕಂಸನು ತನ್ನನುಜೆಯನ್ನು ಭಾವನನ್ನು ವಿನಯದಿಂದ ಬೇಡಿಕೊಂಡ ಕ್ಷಮಿಸಿರೆನ್ನುತಾ 34 ನೆರಹಿ ತನ್ನ ಮಂದಿಯಾದ ದುರುಳರಿಗೀ ಸುದ್ದಿಪೇಳೆ ಬರಲಿ ಹರಿಯು ಕೊಲುವೆವವನ ಭಯಬಿಡೆಂದರು 35 ಧರೆಯೊಳು ಪುಟ್ಟಿದ ಶಿಶುಗಳನ್ನು ತರಿವುದೆಂದು ಪೂತನೆಯೆಂಬ ಮರುಳೆಯನ್ನು ಕಳುಹಿ ವಿಸ್ಮಯದಿಂದಲಿರ್ದನು 36 ನಂದಗೋಕುಲದಲ್ಲಿ ಮಹಾನಂದವಾಗಿ ಜನರೆಶೋದೆಯ ಕಂದನನ್ನು ನೋಡಿ ಹಿಗ್ಗಿಯುತ್ಸವಗೈದರು 37 ಪ್ರೀತಿಯಿಂದ ನಂದಗೋಪ ಜಾತಕರ್ಮ ಮಾಡಿಸಲ್ಕೆ ಶ್ರೀ ತರುಣಿಯ ಕಳೆ ದಿನದಿನದಿ ಪೆರ್ಚುತಿಹುದು 38 ಶೌರಿಯ ಮಧುರೆಯಲಿ ನೋಡಿ ಆದರಿಸಿ ಎನ್ನ ಮಗನೆ ಧೀರ ನಿನ್ನ ಮಗನೆನ್ನುತ ಗೋಪ ನುಡಿದನು39 ಏಳನೆಯ ದಿನದಿ ಪೂತನಿ ಬಾಲಕಂಗೆ ಮೊಲೆಯನೊಡೆ ಹಾಲಾಹಲವನೀಂಟಯಸುವನೆಳದು ಕೊಂದನು40 ಬಿಡುಬಿಡೆನ್ನುತಾರ್ಭಟಿಸುತಲೊಡನೆ ಯೋಜನವಾಗಿ ದೇಹ ಪೊಡವಿಗುರುಳೆ ನೋಡಿಗೋಪರು ಭೀತಿಗೊಂಡರು 41 ಜನ್ಮತಾರೆಯುತ್ಸವದಲಿ ಶಕಟನು ಬಂಡಿಯೊಳು ಸೇರಿ ಇರಲು ನನ್ನಿಯಿಂದಲೊದ್ದು ಕೆಡಹಿ ಕೊಂದಿತಾ ಶಿಶು ಪೋರ 42 ಬಾರಿಬಾರಿಗೆ ರಕ್ಷೆಕಟ್ಟಿನಾರಾಯಣ ಕವಚವ ತೊಡಿಸಿ ಪೋರಬಾಲನನ್ನು ಸಲಹೆನುತ ಹರಿಯ ಬೇಡಿದರು43 ಸಾರಿ ನೆಲಕೆ ಕೆಡಹಿ ಮೇಲೆ ಆಡುತಿರ್ದನು 44 ಶೌರಿ ನೇಮದಿಂದ ಗರ್ಗ ಸೇರಿ ಗೋಕುಲವನು ಸಂ ಸ್ಕಾರ ಕ್ಷತ್ರದಿಂದ ಮಾಡಿದ ಶಿಶುಗಳೆರಡಕೆ 45 ರಾಮಕೃಷ್ಣರೆಂದು ಪೆಸರ ಪ್ರೇಮದಿಂದಲಿಡಿಸಿ ನಂದನ ನೇಮಕೊಂಡು ತಾ ತೆರಳಿದ ಗರ್ಗಾಚಾರ್ಯನು46 ಶುಕ್ಲಪಕ್ಷದ ಚಂದ್ರನಂತೆ ಶುಕ್ಲನಾಮಕ ಹರಿಯು ಜನದೊ ಳಕ್ಕರಿಯಲ್ಲಿ ಬಾಲಲೀಲೆ ತೋರುತಿರ್ದನು 47 ಅಂಬೆಗಾಲಿಡುತ್ತ ಕೃಷ್ಣ ಸಂಭ್ರಮದಲಿ ಮನೆಮನೆಗಳೊ ಳಿಂಬಾಗಿ ಪಾಲು ಬೆಣ್ಣೆ ಕದ್ದು ತಿಂಬನು 48 ವಂದು ನೋಡಿ ಕಣ್ಣುಮುಚ್ಚಿ ವಿಸ್ಮಿತಳಾದಳು 49 ಮನೆಮನೆಗಳ ಪೊಕ್ಕೆಶೋದೆತನಯ ಪಾಲುಬೆಣ್ಣೆಸವಿದು ವಿ ನಯದಿಂದ ಅರಿಯದವನಂತಿರುವ ತಾಯಿಗೆ 50 ಗೋಪಿ ವಿಧ ವಿಧ ಗುಣದಿಂದಲೂಖಲಕ್ಕೆ ಕಟ್ಟಿದಳ್ 51 ವರಳ ಸೆಳೆದುಕೊಂಡು ಮತ್ತಿಮರಗಳನ್ನು ಮುರಿಯೆ ಸಿದ್ಧ ಪರುಷರೀರ್ವರಾಬಾಲಗೆ ನಮಿಸಿ ತುತಿಸಿ ಪೋದರು 52 ವನಜನಾಭ ಕೃಷ್ಣನನ್ನು ದೂರುತಿರುವರು 53 ಸೂನು ನಮ್ಮ ಮನೆಗೆ ಬಂದು ಆನಂದದಿ ಯಾರು ಆಡದಾಟ ಆಡುವ 54 ಬಾಯಿಗೊರಸಲತ್ತೆ ಸೊಸೆಯ ಹೊಡೆಯೆ ನಗುತ ಓಡಿ ಬಂದ ತವಸುತ 55 ಲೀಲೆಯಿಂದಲಿವನು ನೆಲುವಿನ ಮೇಲಿಟ್ಟಿರುವ ಭಾಂಡವನ್ನು ಕೋಲಿನಿಂದ ತಿವಿದು ವಡೆದು ಪಾಲ ಸವಿದನು56 ಎತ್ತಿಕೊಳ್ಳೆನುತ್ತ ಮೈಯ್ಯ ಹತ್ತಿ ನೆಲುವಿನ ಭಾಂಡವನ್ನು ಮತ್ತೆ ನಿಲುಕಿಸಿಕೊಂಡು ಪಾಲಕೆನೆಯ ಮೆದ್ದನು 57 ಸತಿಪತಿಗಳ್ ಮಲಗಿರೆ ಮಧ್ಯೆ ಸರ್ಪವನು ಹಾಕಿ ತಾನ- ಗುತ್ತಲಿ ಜುಟ್ಟು ಜಡೆಗೆ ಗಂಟಿಕ್ಕಿ ಓಡಿದ58 ಅಳುತಲಿರುವ ಶಿಶುವಿನ ತಲೆಯ ಕೂದಲು ಕರುವಿನಬಾಲಕೆ ಎಳೆದು ಗಂಟುಹಾಕಿ ಬೀದಿಯಲ್ಲಿ ನೂಕುವ 59 ಬೆಣ್ಣಿಯನ್ನು ಮೆದ್ದು ಮಿಕ್ಕದನ್ನು ಕೋತಿಗಿತ್ತದು ತಿನ್ನತಿರಲು ನಗುತ ನಗುತ ತಿರುಗುತಿರುವನು 60 ಇನಿತು ಎಲ್ಲ ಪೇಳೆ ಗೋಪವನಿತೆ ತಾನು ಮಗನ ಮುದ್ದಿಸಿ ಘನ ಪ್ರಮೋದ ಚಿತ್ತಳಾಗಿ ಕಾಲಕಳೆವಳು 61 ಪ್ರೀತಿಯಿಂದ ಬನ್ನಿ ಎಂದು ಕರೆವ ಬಾಲರ 62 ಮೂರು ವರ್ಷವಾಗೆ ಕೃಷ್ಣ ಮುದದಿ ಕರುಗಳ ಕಾಯುತ್ತ ವಾರಿಗೆಯವರಿಂದ ಕೂಡಿ ಕುಣಿಯುತಿರುವನು 63 ವತ್ಸ ಬಕರ ಮುರಿದು ಕೃಷ್ಣ ಸ್ವೇಚ್ಛೆಯಿಂದಲಣ್ಣನೊಡನೆ ನಿಶ್ಚಲ- ಚಿತ್ತರುಲಿಯಲಾಡುತೆಸೆದ ಮೋದದಿ64 ವೃಂದಾವನಕೆ ಪೋಗಲಲ್ಲಿ ಇಂದಿರೇಶ ವಿಷದ ಮಡುವ ನೊಂದು ದಿನದಿ ಧುಮುಕಿ ಜಲವ ನಿರ್ಮಲಗೈದನು 65 ವನದೊಳಗ್ನಿಯನು ನುಂಗಿ ಜನರ ಸಲಹಿ ರಾತ್ರಿಯಲ್ಲಿ ಮುನಿ ಜನೇಢ್ಯನಾಗಿ ಗೋಕುಲದೊಳೆಸೆದನು 66 ಅಜಗರನಾಗಿದ್ದಸುರನ ನಿಜಶರೀರ ಬೆಳಸಿ ಕೊಂದು ಸ್ವಜನರನ್ನು ಪಾಲಿಸಿದನು ವೃಜಿನದೂರನು 67 ಳನ್ನು ಕಾಯ್ದ ಕೃಷ್ಣ ತಾನು ನನ್ನಿಯಿಂದಲಿ 68 ಕರುಗಳನ್ನು ಹುಡುಗರನ್ನು ಸರಸಿಜಭವ ಬಚ್ಚಿಡಲ್ಕೆ ಹರಿಯುತಾನು ತತ್ವದ್ರೂಪವಾಗಿ ಮೆರೆದನು 69 ನಾನಾಲಂಕಾರದಿ ಗೋವುಗಳ
--------------
ಗುರುರಾಮವಿಠಲ
ಭಾರತೀರಮಣಾ ಮನ್ಮನದಲಿ ತೋರು ತವ ಚರಣಾ ಪ ಮೂರೇಳು ಸಾವಿರದಾರುನೂರು ಜಪ ಓರಂತೆ ಜಪಿಸಿ ಉದ್ಧಾರ ಮಾಡುವಿ ಎಮ್ಮ ಅ.ಪ. ಮೂರುವಿಧ ಜೀವರೋಳು ಹೊರ ನೀ ಪ್ರೇರಕನೋ ದೇವ ನಾರಾಯಣನ ನಿಜಾರಾಧಕರೊಳು ಆರು ನಿನಗೆ ಸರಿ ಮೂರವತಾರನೆ 1 ಚತುರವಿಂಶಶಿ ತತ್ವೇಶರಾಪತಿಯ ನಿನ್ನ ತುತಿಪ ಉಪೇಂದ್ರ ಸುಯತಿಕರ ಪೂಜಿತ ನತಿಸುವೆ ಎಮಗೆ ಸನ್ನತಿ ಕೊಡು ಸರ್ವದಾ 2 ಪ್ರಾಣಪಂಚಕ ರೂಪನೆ ಖಳ ಶ್ರೇಣೀವಂಚಕ ಕ್ಷೋಣಿಯೊಳಗೆ ಕೃಷ್ಣ ವೇಣೀತರಂಗಿಣಿ ತ್ರಾಣಗೈದ ನಿರ್ವಾಣ ಪ್ರದಾಯಕ 3 ಲೋಕರೂಪನೆ ಜಗದೊಳನೇಕ ಚರಿತನೆ ಪಿನಾಕಿ ಸುರೇಂದ್ರ ದಿ ವೌಕಸರೆಮ್ಮನು ಸಾಕುವರನುದಿನ4 ಮಾತರಿಶ್ವನು ಜಾತಹನುಮ ಜಗನ್ನಾಥವಿಠಲನ ಪ್ರೀತಿಯಿಂದಲಿ ತೋರೋ 5
--------------
ಜಗನ್ನಾಥದಾಸರು