ಒಟ್ಟು 4163 ಕಡೆಗಳಲ್ಲಿ , 122 ದಾಸರು , 2494 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ದಿವ್ಯ ಮೂರುತಿಯ ಕಣ್ಣದಣಿಯಲು ನೋಡಿಧನ್ಯನಾದೆನು ಧರೆಯೊಳು ||ಇನ್ನು ಈಭವಭಯಕೆ ಅಂಜಲೇತಕೆ ದೇವಚೆನ್ನ ಶ್ರೀ ವೆಂಕಟೇಶಾ ಈಶಾ ಪಏಸುಜನುಮದಸುಕೃತಫಲವು ಬಂದೊದಗಿತೋಈ ಸ್ವಾಮಿ ಪುಷ್ಕರಣಿಯೊಳ್ನಾ ಸ್ನಾನವನು ಮಾಡಿವರಾಹದೇವರ ನೋಡಿಶ್ರೀ ಸ್ವಾಮಿ ಮಹಾದ್ವಾರಕೆಈ ಶರೀರವನು ಈಡಾಡಿ ಪ್ರದಕ್ಷಿಣೆ ಮಾಡಿಲೇಸಿನಿಂದಲಿ ಪೊಗಳುತಆ ಸುವರ್ಣದ ಗರುಡ ಗಂಬವನು ಸುತ್ತಿ ಸಂತೋಷದಿಂ ಕೊಂಡಾಡಿದೆ ಬಿಡದೆ 1ನೆಟ್ಟನೆಯೆ ದ್ವಾರವ ದಾಟಿ ಪೋಗುತಲಿರಲುದಟ್ಟಣೆಯ ಮಹಾಜನದೊಳುಕೃಷ್ಣಾಜಿನದವರ ಕೈ ಪೆಟ್ಟು ಕಾಣುತ್ತ ಕಂಗೆಟ್ಟು ಹರಿಹರಿಯೆನುತಲಿಗಟ್ಟಿ ಮನಸಿನಲಿ ತಲೆಚಿಟ್ಟಿಟ್ಟು ಶೀಘ್ರದಲಿಕಟ್ಟಂಜನಕೆ ಪೋಗುತಬೆಟ್ಟದಧಿಪತಿ ನಿನ್ನ ದೃಷ್ಟಿಯಿಂದಲಿ ನೋಡೆಸುಟ್ಟೆ ಎನ್ನಯ ದುರಿತವಾ-ದೇವಾ 2ಶಿರದಲಿ ರವಿಕೋಟಿ ತೇಜದಿಂದೆಸೆಯುವಕಿರೀಟವರಕುಂಡಲಗಳಕೊರಳಲ್ಲಿ ಸರವೈಜಯಂತಿವನಮಾಲೆಯನುಪರಿಪರಿಯ ಹಾರಗಳನುಉರದಿ ಶ್ರೀವತ್ಸವನು ಕರದಿ ಶಂಖ-ಚಕ್ರಗಳವರನಾಭಿಮಾಣಿಕವನುನಿರುಪ ಮಣಿಖಚಿತಕಟಿಸೂತ್ರಪೀತಾಂಬರವಚರಣಯುಗದಂದುಗೆಯನು - ಇನ್ನು 3ಇಕ್ಷುಚಾಪನ ಪಿತನೆ ಪಕ್ಷೀಂದ್ರವಾಹನನೆಲಕ್ಷ್ಮೀಪತಿ ಕಮಲಾಕ್ಷನೆಅಕ್ಷತ್ರಯಅಜಸುರೇಂದ್ರಾದಿವಂದಿತನೆಸಾಕ್ಷಾಜ್ಜಗನ್ನಾಥನೇರಾಕ್ಷಸಾಂತಕ ಭಕ್ತ ವತ್ಸಲ ಕೃಪಾಳು ನಿರಪೇಕ್ಷ ನಿತ್ಯತೃಪ್ತನೇಕುಕ್ಷಿಯೊಳಗಿರೇಳು ಭುವನವನು ಪಾಲಿಪನೆರಕ್ಷಿಸುವುದೊಳಿತು ದಯದಿ -ಮುದದಿ 4ಉರಗಗಿರಿಯರಸ ನಿನ್ನಚರಣನೋಡಿದ ಮೇಲೆಉರಗಕರಿವ್ಯಾಘ್ರ ಸಿಂಹಅರಸು ಚೋರಾಗ್ನಿ ವೃಶ್ಚಿಕ ಕರಡಿ ಮೊದಲಾದಪರಿಪರಿಯ ಭಯಗಳುಂಟೇಪರಮವಿಷಯಗಳ ಲಂಪಟದೊಳಗೆ ಸಿಲುಕಿಸದೆಕರುಣಿಸುವುದೊಳಿತು ದಯವಾಸ್ಮರಗಧಿಕ ಲಾವಣ್ಯಪುರಂದರವಿಠಲನೇಶರಣಜನ ಕರುಣಾರ್ಣವಾ ದೇವಾ 5
--------------
ಪುರಂದರದಾಸರು
ನಿನ್ನ ನಂಬಿದೆ ನೀರಜನಯನಎನ್ನ ಪಾಲಿಸೊಇಂದಿರೆರಮಣಪಮುನ್ನ ಪಾಂಚಾಲಿಯ ಮೊರೆಯ ಲಾಲಿಸಿ ಕಾಯ್ದಪನ್ನಗಶಯನ ನೀಪರಮಪುರುಷನೆಂದುಅ.ಪಹರಿಸರ್ವೋತ್ತಮನಹುದೆಂಬ ಬಾಲಕನಹಿರಣ್ಯಕಶಿವು ಪಿಡಿದು ಬಾಧಿಸಲು ||ನರಹರಿ ರೂಪಿಂದಲವನ ವಕ್ಷವ ಸೀಳ್ದೆಪರಮವಿಶ್ವಾತ್ಮಕನಹುದೆಂದು ಮೊರೆ ಹೊಕ್ಕೆ1ಪಾದವ ಪಿಡಿದು ನೀರೊಳಗೆಳೆದ ನಕ್ರನಬಾಧೆಗಾರದೆ ಕರಿಮೊರೆಯಿಡಲು ||ಆದಿ ಮೂರುತಿ ಚಕ್ರದಿಂದ ನಕ್ರನ ಕೊಂದವೇದಾಂತವೇದ್ಯ ಅನಾಥ ರಕ್ಷಕನೆಂದು 2ಇಳೆಗೊಡೆಯನ ತೊಡೆ ನಿನಗೇತಕೆಂದು ಆಲಲನೆಕೈ ಪಿಡಿದೆಳೆಯಲರ್ಭಕನ ||ನಳಿನಾಕ್ಷ ನಿನ್ನನೆದೆಯೊಳಿಟ್ಟು ತಪವಿರ್ದಬಲು ಬಾಲಕಗೆ ಧ್ರುವ ಪಟ್ಟಿಗಟ್ಟಿದನೆಂದು 3ಸುದತಿಗೌತಮಸತಿ ಮುನಿಶಾಪದಿಂದಲಿಪಢದಿ ಪಾಷಾಣವಾಗಿ ಬಿದ್ದಿರಲು ||ಮುದದಿಂದಲಾಕೆಯಮುಕ್ತಮಾಡಿದಯೋಗಿಹೃದಯ ಭೂಷಣ ನಿನ್ನ ಪದ ವೈಭವವ ಕಂಡು 4ಪರಮಪಾವನೆ ಜಗದೇಕಮಾತೆಯನುದುರುಳರಾವಣ ಪಿಡಿದು ಕೊಂಡೊಯ್ಯಲು ||ಶರಣೆಂದು ವಿಭೀಷಣ ಚರಣಕೆರಗಲಾಗಿಸ್ಥಿರಪಟ್ಟವನು ಕೊಟ್ಟ ಜಗದೀಶ ನೀನೆಂದು 5ಅಂಬರೀಷನೆಂಬನೃಪತಿದ್ವಾದಶಿಯನುಸಂಭ್ರಮದಿಂದ ಸಾಧಿಸುತಿರಲು ||ಡೊಂಬೆಯಿಂದದೂರ್ವಾಸಶಪಿಸಲಾಗಿಬೆಂಬಿಡದಲೆ ಚಕ್ರದಿಂದ ಕಾಯ್ದವನೆಂದು 6ಧರೆಯೊಳು ನಿಮ್ಮ ಮಹಿಮೆಯ ಪೊಗಳ್ವಡೆಸರಸಿಜೋದ್ಭವ-ಶೇಷಗಸದಳವು ||ಸ್ಮರಣೆಮಾತ್ರದಿ ಅಜಾಮಿಳಗೆ ಮೋಕ್ಷವನಿತ್ತಪುರಂದರವಿಠಲ ಜಗದೀಶ ನೀನೆಂದು7
--------------
ಪುರಂದರದಾಸರು
ನಿನ್ನ ನಂಬಿದೆನೊ ನೀಯೆನ್ನ ಸಲಹಯ್ಯಎನ್ನ ಗುಣದೋಷಗಳ ಎಣಿಸಬೇಡಯ್ಯ ಪಬಾಲ್ಯದಲಿ ಕೆಲವು ದಿನ ಬಿರಿದೆ ಹೋಯಿತು ಹೊತ್ತುಮೇಲೆ ಯೌವನಮದದಿ ಮುಂದರಿಯದೆ ||ಸ್ಥೂಲ ಸಂಸಾರದಲಿ ಸಿಲುಕಿ ಬಳಲಿದೆ ನಾನುಪಾಲಿಸೈ ಪರಮಾತ್ಮ ಭಕುತಿಯನು ಕೊಟ್ಟು 1ಆಸೆಯೆಂಬುದು ಅಜನ ಲೋಕ ಮುಟ್ಟುತಲಿದೆಬೇಸರದೆ ಸ್ತ್ರೀಯರಲಿ ಬುದ್ದಿಯೆನಗೆ ||ವಾಸುದೇವನೆ ನಿನ್ನ ಪೂಜೆಗೆಯ್ದವನಲ್ಲಕೇಶವನೆ ಕ್ಲೇಶವನು ನಾಶ ಮಾಡಯ್ಯ 2ಈ ತೆರದಿ ಕಾಲವನು ಕಳೆದೆ ನಾನಿಂದಿರೇಶಭೀತಿ ಮೋಹದಿ ಙ್ಞÕನರಹಿತನಾದೆ ||ಮಾತೆ ಶಿಶುವನು ಕರೆದು ಮನ್ನಿಸುವ ತೆರನಂತೆದಾತಶ್ರೀಪುರಂದರವಿಠಲ ದಯಮಾಡೈ3
--------------
ಪುರಂದರದಾಸರು
ನಿನ್ನ ನಾನೇನೆಂದೆನೆ ಬಗಳಾಮುಖಿ ನಿನ್ನ ನಾನೇನೆಂದೆನೆನಿನ್ನ ನಾನೇನೆಂದೆ ತತ್ವವ ಕೇಳುತ ಚೆನ್ನಾಗಿಎನ್ನ ಬಳಿ ಕುಳ್ಳಿರೆಂದೆನಲ್ಲದೇಪಹತ್ತಿಯನರೆ ಎಂದೆನೇ ಹಳ್ಳದ ನೀರಹೊತ್ತು ಹಾಕೆಂದೆನೆ ಮತ್ತೆ ಹರಡಿಯ ತೋರಿ ಬೀ-ಸುತ್ತೆ ಚವುರಿಯಲಿಮತ್ತೆ ಗಾಳಿಯ ನೀಗ ಬೀಸೆಂದೆನಲ್ಲದೇ1ಕುಸುಬೆಯ ಒಡೆಯೆಂದೆನೇ ಕುದುರೆಯ ಮೈ-ಹಸನಾಗಿ ತೊಳೆಯೆಂದೆನೇಹೊಸ ಪೀತಾಂಬರವನುಟ್ಟು ಹೂವಮುಡಿಯೊಳು ಇಟ್ಟುಅಸಿಯ ಹಿಡಿದು ಮುಂದೆ ನಡೆಯೆಂದೆನಲ್ಲದೆ2ಕಲ್ಲನು ಹೊರು ಎಂದೆನೆಎಲ್ಲ ಕೆಲಸವನೀಗ ಮಾಡೆಂದೆನೆಬಲ್ಲಂತೆ ಪಾರುಪತ್ಯವನು ಮಾಡುತ್ತಾ ಕಾಲ್ಗೆಜ್ಜೆಘುಲ್ಲೆನಿಸಿ ನಡೆ ಎಂದೆನಲ್ಲದೇ3ಗೋಡೆಯನು ಬಳಿ ಎಂದೆನೆರಾಗಿಯ ಹಿಟ್ಟನು ಬೀಸೆಂದೆನೆಈಡಾಗಿ ಒಪ್ಪುವಾಭರಣಗಳ ನೀ ತೊಟ್ಟುಆಡುತ್ತ ಮಠದೊಳಗೆ ಇರು ಎಂದೆನಲ್ಲದೇ4ಬಟ್ಟೆಯನು ಒಗೆ ಎಂದೆನೆದುಷ್ಟರನು ಕೂಡಿ ನಲಿಯೆಂದೆನೇಶಿಶು ಚಿದಾನಂದ ಬ್ರಹ್ಮಾಸ್ತ್ರ ದೈವ ತಾನಿಷ್ಟ ದೇವತೆಯಾಗಿ ನೆಲೆಸೆಂದೆನಲ್ಲವೆ5
--------------
ಚಿದಾನಂದ ಅವಧೂತರು
ನಿನ್ನ ನೋಡಿ ಧನ್ಯನಾದೆನೊ - ಹೇ ಶ್ರೀನಿವಾಸ ಪನಿನ್ನ ನೋಡಿ ಧನ್ಯನಾದೆ ಎನ್ನ ಮನದಿ ನಿಂತು ಸುಪ್ರ-ಸನ್ನ ದಯಮಾಡಿ ನೀನು ಮುನ್ನಿನಂತೆ ಸಲಹ ಬೇಕೋ ಅ.ಪಲಕ್ಷ್ಮಿರಮಣ ಪಕ್ಷಿವಾಹನ ಲಕ್ಷ್ಮಿ ನಿನ್ನ ವಕ್ಷದಲ್ಲಿರಕ್ಷಣ ಶಿಕ್ಷಣ ದಕ್ಷ ಪಾಂಡವ ಪಕ್ಷ ಕಮಲಾಕ್ಷ ರಕ್ಷಿಸು 1ದೇಶದೇಶಗಳನು ತಿರುಗಿ ಆಶಾಬದ್ಧನಾದೆ ಸ್ವಾಮಿದಾಸನೆನಿಸಿ ಎನ್ನ ಜಗದೀಶ ಕಾಯೋ ವಾಸುದೇವ 2ಕಂತುಜನಕಕೊಟ್ಟು ಎನಗೆ ಅಂತರಂಗದ ಸೇವೆಯನ್ನುಅಂತರವಿಲ್ಲದೆ ಪಾಲಿಸಯ್ಯಹೊಂತಕಾರಿಪುರಂದರವಿಠಲ
--------------
ಪುರಂದರದಾಸರು
ನಿನ್ನ ನೋಡಿ ಧನ್ಯನಾದೆನೊ ಶ್ರೀಕೃಷ್ಣ ದಯದಿಮನ್ನಿಸಯ್ಯ ಮರೆಯ ಹೊಕ್ಕೆನು ಪಅನ್ನಪಾನದಿಂದ ಬೆಳೆದ ತನುವು ಸ್ಥಿರವಿದೆಂದು ನಂಬಿಮುನ್ನ ಮತಿಹೀನನಾಗಿ ನಿನ್ನ ಸ್ಮರಣೆ ಮರೆತೆ ಅ.ಪಮಾಯ ಪಾಶದಲಿ ಸಿಲುಕಿದೆಯನ್ನನಗಲಿ ಅಳಿದ ತಾಯಿತಂದೆಯರಿಗೆ ಮರುಗಿದೇ ಪ್ರಿಯಮಡದಿ ಪರಸ್ತ್ರೀಯರಲಿ ಮೋಹವೆರಸಿಮರುಳನಾದೆಕಾಯಸುಖವನೆಣಿಸಿಸರ್ವೇ ನ್ಯಾಯ ತಪ್ಪಿ ನಡೆದೆ ಕೃಷ್ಣಾ 1ಹಲವು ಜನ್ಮವೆತ್ತಿ ತೊಳಲಿದೇ ತರಳನೆನಿಸಿಹಲವು ಜಾತಿ ಮೊಲೆಯ ಭುಜಿಸಿದೆಹಲವು ದೇಶಗಳನು ಸುತ್ತಿ ಹಲವುಕ್ರೂರಕೃತ್ಯ ಗೈದೆ ತಲೆಯ ಹಿಂದೆಇರುವ ಮೃತ್ಯು ನೆಲೆಯನರಿಯದಿರ್ದೆ ಕೃಷ್ಣಾ 2ಆಶಾಪಾಶಗಳಲಿ ಸರ್ವ ದೋಷ ಮೋಸವೆಣಿಸದಾದೆಲೇಸ ಕಾಣೆ ಮುಂದೆ ಯಮನ ಪಾಶಕರ್ಹನಾದೆ ಕೃಷ್ಣಾ3ಅರಿಗಳಾರು ಮಂದಿ ದೇಹದಿ ನೆಲಸಿರ್ದು ಎನ್ನಮರುಳುಗೊಳಿಸೆ ಇಂದ್ರಿಯ ಸಹಾಯದಿನರವು ಮಾಂಸ ಅಸ್ಥಿಯಿಂದ ವಿರಚಿಸಿದ ದೇಹವಿದನುಪರಿಪರಿಯ ಶೃಂಗರಿಸುತ ಸ್ಮರನ ತೆರದಿ ಮೆರೆದೆ ಕೃಷ್ಣಾ 4ಒಂದು ದಿನವು ಸುಖವ ಕಾಣೆನೂ ಈ ಜೀವನಸಂಬಂಧಿಗಳ್ಯಾರೆಂಬುದನರಿಯೆನೂಬಂಧು ನೀನೇ ಸರ್ವಪ್ರದನು ಮುಂದೆ ಜನುಮವೆತ್ತದಂತೆಬಂದು ಎನ್ನ ಸಲಹೋ ಗೋವಿಂದದಾಸನೊಡೆಯ ಕೃಷ್ಣಾ 5
--------------
ಗೋವಿಂದದಾಸ
ನಿನ್ನ ಬೆನ್ನುಬಿದ್ದು ಧನ್ಯನಾದೆನು ಪನ್ನಂಗಶಯನನಿನ್ನ ಬೆನ್ನುಬಿದ್ದು ಧನ್ಯನಾದೆನು ಪಇನ್ನು ಭವದೊಳು ಅನ್ಯರಂಜಿಕೆಯನ್ನು ತಪ್ಪಿಸಿನಿನ್ನ ಕರುಣವನು ತೋರಿದಿ ಸನ್ನುತಾಂಗರೂಢಿಯೊಳು ನಾನು ಮೂಢನಾದೆನು ಧೃಢದಿ ನಿನ್ನಗಾಢಮಹಿಮೆಯ ಅರಿಯದಲೆ ಇನ್ನು ಬಡಬಡಿಸಿಕೊಂಡುಕೇಡಿಗೊಳಗಾಗಿ ಕೆಡುತಲಿರ್ದೆನು ಬಿಡದೆ ಪರರನುಬೇಡಿ ಆಸೆಯಿಂ ಭಂಗಮಾಡುತ ಖೋಡಿಯಪ್ಪುದ ಕಂಡು ನೀನೆಮೂಢನೊಳು ದಯಮಾಡಿ ಕರುಣವನೀಡಿ ಕುರುಹನು ತೋರ್ದಿ ದೇವ 1ಹೊಂದಿಕೊಂಡೀ ಮಾಯಾಜಾಲವನು ಒಂದನರಿಯದೆಮಂದಮತಿಯಾಗಿ ಕೆಡುತಲಿ ನಾನುಬಂಧನದ ಭವದ ಸಿಂಧುವಿನೊಳಗಾಡುತಿರ್ದೆನುನೊಂದು ಬೆಂದೆನುಮಂದಭಾಗ್ಯನ ಮಂದಮತಿಗಳುಒಂದು ಉಳಿಯದಂತೆ ಮಾಡೆನ್ನ್ಹøದಯ ಮಂದಿರದೊಳುನಿಂದುನೀನೆ ಮುಂದಕ್ಹಾಕಿದಿ ಮಂದರೋದ್ಧಾರ2ಮರುಳತನವನು ದೂರಮಾಡಿದಿ ಹರಿಯೆ ಎನ್ನಸರುವ ದುರ್ಗುಣ ತರಿದು ಹಾಕಿದಿ ಕರುಣದೆನ್ನದುರಿತಪರ್ವತಮೂಲ ಕಿತ್ತಿದಿ ಮರೆವು ಹರಿಸಿದಿಪರಮಕರುಣಾಕರನೆ ನಿನ್ನುಪಕಾರ ಮರಿಯೆನಾವಕಾಲದಿಪರರ ಬೇಡದಪದವಿನೀಡಿದಿಶರಣಜನಪ್ರಿಯ ಸಿರಿಯರಾಮ 3
--------------
ರಾಮದಾಸರು
ನಿನ್ನ ಭಕುತಿಯನು ಬೀರೊ ಎನ್ನಮನ್ನಿಸಿ ಸಲಹುವರಾರೋ ಪಸನ್ನುತಸನ್ಮಾರ್ಗ ತೋರೋ ಆಪನ್ನರಕ್ಷಕ ಬೇಗ ಬಾರೋ ಅ.ಪಪನ್ನಗಶಯನ ಲಕ್ಷ್ಮೀಶಾ ವೇದಸನ್ನುತಪಾದಸರ್ವೇಶಾಇನ್ನು ಬಿಡಿಸು ಭವಪಾಶಾ ಪ್ರಸನ್ನ ರಕ್ಷಿಸೊ ಶ್ರೀನಿವಾಸಾ 1ನಾರದ ಗಾನವಿಲೋಲಾ ಸ್ವಾಮಿಭೂರಿಭಕ್ತರ ಪರಿಪಾಲಾಶ್ರೀ ರಮಣಕರುಣಾಲವಾಲ- ದೇವನೀರದಶ್ಯಾಮ ಗೋಪಾಲಾ2ಕರಿರಾಜವರದ ಪ್ರಮೇಯಾ ಎನ್ನನರಿತು ನಡೆಸೊ ಯೋಗಿಧ್ಯೇಯ ||ಸುರಮುನಿ ಹೃದಯನಿಕಾಯ-ನಮ್ಮಪುರಂದರವಿಠಲರಾಯಾ3
--------------
ಪುರಂದರದಾಸರು
ನಿನ್ನ ಮಗನ ಮುದ್ದು ನಿನಗಾದರೆಗೋಪಿಆರಿಗೇನೆ? |ಎನ್ನ ಕೂಡ ಸರಸವಾಡಲು ಓರಗೆಯೇನೆ? ಪಹೆಚ್ಚಿನ ಸತಿಯರ ಕಚ್ಚೆಯ ಬಿಚ್ಚುವ ಹುಚ್ಚನೇನೆ?-ಅಮ್ಮ |ಇಚ್ಛೆಯರಿತು ನಮ್ಮ ಗಲ್ಲವ ಕಚ್ಚುವ ನೆಚ್ಚನೇನೆ? 1ಚೆಂಡೆಂದು ಮಿಂಡೆಯರು ದುಂಡು ಕುಚವ ಪಿಡಿವ ಗಂಡನೇನೆ? |ಕಂಡಕಂಡಲ್ಲಿ ಉದ್ದಂಡವ ಮಾಡುವ ಪುಂಡನೇನೆ 2ಹೊಸ ಕೂಟವರಿತು ಹಾಸಿಗೆಯನು ಹಾಕುವ ಶಿಶುವು ಏನೆ? |ಅಸಹಾಯ ಶೂರ ಶ್ರೀ ಪುರಂದರವಿಠಲರಾಯ ಕಾಣೆ 3
--------------
ಪುರಂದರದಾಸರು
ನಿನ್ನದೇ ಹಂಗೆನಗೆ ಶ್ರೀಹರಿನಿನ್ನದೇ ಹಂಗೆನಗೆ ಪನಿನ್ನದೇ ಹಂಗೆನಗುನ್ನತ ಸುಖವಿತ್ತುಮನ್ನಿಸಿ ದಯದಿಂದೆನನುದ್ಧರಿಸಯ್ಯ ಅ.ಪಜಿಹ್ವೆಗೆ ನಿಮ್ಮಯ ಧ್ಯಾನದ ಸವಿಸಾರವಿತ್ತಯ್ಯಾಭವಭವದಲ್ಲಿ ಪುಟ್ಟಿ ಜನಗೀಡೆನಿಸುವದಯದಿ ಪಿಡಿದು ಎನ್ನ ಭವಭಯಹರಿಸಿದಿ 1ವಿಸ್ತಾರ ತವಚರಿತ ಪಾಮರನ್ಹಸ್ತದಿಂ ಬರೆಸುತ್ತಅಸ್ತವ್ಯಸ್ತವೆಲ್ಲ ನಾಸ್ತಿ ಮಾಡಿ ನೀನೆಪುಸಿಯಾಗೆನ್ನಗೆ ಸ್ವಸ್ಥಪಾಲಿಸಿದಿ 2ಸದಮಲ ಶ್ರೀರಾಮ ಭಕುತಾಭಿ ಸದಮಲ ತವನಾಮಸುದಯದಿಂದೆನ್ನಯ ವದನದಿ ನಿಲ್ಲಿಸಿಸದಮಲವೆನಿಪ ಸಂಪದವಿಯ ನೀಡಿದಿ 3
--------------
ರಾಮದಾಸರು
ನಿನ್ನದೋ ನಿಖಿಲ ನಿನ್ನದೋಕುನ್ನಿ ಮನುಜರಾಧೀನೇನಿಲ್ಲ ಶ್ರೀಹರಿ ಪನೀನಿಟ್ಟ ರವಿಶಶಿಗಳುಹರಿನೀನಿಟ್ಟ ದಶದಿಕ್ಕುಗಳುಹರಿನೀನಿಟ್ಟ ಅಗ್ನಿಜ್ಯೋತಿಗಳುಹರಿನೀನಿಟ್ಟ ನದಿತಟಗಳು ಅಹನೀನಿಟ್ಟ ಚಳಿಗಾಳಿ ನೀಕೊಟ್ಟ ಮಳೆಬೆಳೆನೀನಿಟ್ಟ ಉತ್ಪತ್ತಿ ಸ್ಥಿತಿಲಯ ಸಕಲವು 1ನಿನ್ನ ಅಡಿಯೆ ಮಹಾಕ್ಷೇತ್ರಹರಿನಿನ್ನ ನುಡಿಯೆ ವೇದಮಂತ್ರಹರಿನಿನ್ನ ದೃಢವೆ ಸತ್ಯಯಾತ್ರೆಹರಿನಿನ್ನ ಬೆಡಗು ಸ್ಮ್ರತಿಶಾಸ್ತ್ರ ಅಹನಿನ್ನ ಅರಿವೆನಿತ್ಯನಿನ್ನ ಮರವೆಮಿಥ್ಯನಿನ್ನ ಕರುಣ ಎಲ್ಲ ಪ್ರಾರಬ್ಧಗಳ ಗೆಲವು 2ನಿನ್ನ ನಾಮವೆ ಕ್ಷೇಮಕವುಹರಿನಿನ್ನ ನಾಮವೆ ಭವಗೆಲವುಹರಿನಿನ್ನ ನಾಮವೆ ಚಾರುಪದವುಹರಿನಿನ್ನ ನಾಮದ ಬಲವೆ ಬಲವುಹರಿನಿನ್ನ ನಾಮ ಗಾಯತ್ರಿ ನಿನ್ನ ನಾಮತಾರಕನಿನ್ನ ನಾಮ ಭಕ್ತಿ ಯುಕ್ತಿ ಎನ್ನಯ್ಯ ಶ್ರೀರಾಮ 3
--------------
ರಾಮದಾಸರು
ನಿನ್ನನಾಶ್ರಯಿಸುವೆ - ನಿಗಮಗೋಚರನಿತ್ಯಬೆನ್ನ ಬಿಡದಲೆ ಕಾಯೊ ಮನದಿಷ್ಟವೀಯೋ ಪಕುಂದಣದ ಆಶ್ರಯವು ನವರತ್ನಗಳಿಗೆಲ್ಲಚಂದಿರನ ಆಶ್ರಯ ಚಕೋರಗಳಿಗೆ ||ಕಂದರ್ಪನಾಶ್ರಯ ವಸಂತ ಕಾಲಕ್ಕೆ ಗೋವಿಂದ ನಿನ್ನಾಶ್ರಯವು ಮರಣಕಾಲದೊಳು 1ಹಣ್ಣುಳ್ಳ ಮರಗಳು ಪಕ್ಷಿಗಳಿಗಾಶ್ರಯವುಪುಣ್ಯನದಿಗಳು ಋಷಿಗಳಿಂಗೆ ಆಶ್ರಯವು ||ಕಣ್ಣಿಲ್ಲದಾತನಿಗೆ ಕೈಗೋಲಿನಾಶ್ರಯವುಎನ್ನಿಷ್ಟ ಪಡೆಯುವರೆ ನಿನ್ನ ಆಶ್ರಯವು 2ಪತಿವ್ರತಾವನಿತೆಗೆ ಪತಿಯೊಂದೆ ಆಶ್ರಯವುಯತಿಗಳಿಗನುಶ್ರುತದಿ ಪ್ರಣವದಾಶ್ರಯವು ||ಮತಿವಂತನಿಗೆಹರಿಸ್ತುತಿಗಳೇ ಆಶ್ರಯವುಹಿತವಹುದು ಪುರಂದರವಿಠಲನಾಶ್ರಯವು 3
--------------
ಪುರಂದರದಾಸರು
ನಿಲ್ಲಬೇಕಯ್ಯಾ ನೀನು ಕೃಷ್ಣಯ್ಯಾನಿಲ್ಲಬೇಕಯ್ಯಾ ನೀನು ಪನಿಲ್ಲಬೇಕಯ್ಯಾ ನೀಮಲ್ಲಮರ್ದನಸಿರಿವಲ್ಲಭಎನ್ನ ಹೃದಯದಲಿ ಸತತಅ.ಪಸುಪ್ಪಾಣಿಮುತ್ತಿಟ್ಟು ನೋಡುವೆ ನಿನ್ನಚಪ್ಪಾಳಿ ತಟ್ಟುತ ನಾ ಪಾಡುವೆ ||ಅಪ್ಪ ಶ್ರೀ ಕೃಷ್ಣ ನಿನ್ನನೆತ್ತಿ ಮುದ್ದಿಸಿಕೊಂಬೆಸರ್ಪಶಯನ ಕೃಪೆ ಮಾಡೆಂದು ಬೇಡುವೆ 1ಚೆಂದದ ಹಾಸಿಗೆ ಹಾಸುವೆಪುನಗುಗಂಧದ ಕಸ್ತೂರಿಯ ಪೂಸುವೆ ||ತಂದು ಮುದದಿ ಮುತ್ತಿನ ಹಾರ ಹಾಕುವೆಅಂದದಿಂದಲಿ ನಿನ್ನನೆತ್ತಿ ಮುದ್ದಿಸಿಕೊಂಬೆ 2ನೀಲದ ಕಿರೀಟವನಿಡುವೆ ಬಲುಬಾಲಲೀಲೆಗಳನು ಪಾಡುವೆ ||ಚೆಲ್ವ ಶ್ರೀಪುರಂದರವಿಟ್ಠಲರಾಯನೆನಿಲ್ಲು ಎನ್ನ ಮನದಲಿ ಒಂದೇ ಗಳಿಗೆ 3
--------------
ಪುರಂದರದಾಸರು
ನೀ ಎನ್ನ ಸಲಹೋದಾತಶ್ರೀನಾಥಪ.ಅಣುರೇಣು ತೃಣ ವ್ಯಾಪ್ತ ಅಕಳಂಕ ನಿರ್ಲಿಪ್ತವನರುಹಾಸನ ಪ್ರೀತ ವೈಕುಂಠಕರ್ತ1ತಾಪಸಜನ ಪೂಜ್ಯ ತರಣಿಕೋಟಿತೇಜಶ್ರೀಪರಮೋತ್ತಮ ಸಕಲಾಂತರಾತ್ಮ 2ಬ್ರಹ್ಮಾಂಡಸಂರಕ್ಷ ಭಾಗವತರ ಪಕ್ಷಹಮ್ಮಿನ ಖಳರೊದ್ದಹರಿಅನಿರುದ್ಧ3ಸ್ವರ್ಣಮುಖರೀ ತೀರ ಸನ್ನಿಧಿ ಮಂದಿರಪೂರ್ಣಮಹಿಮ ವಟಪರ್ಣಾಶ್ರಯ ಕೃಷ್ಣ 4ಸ್ವಾಮಿ ಪುಷ್ಕರವಾಸಶುಭಮಂದಸ್ಮಿತಹಾಸಪ್ರೇಮಾಬ್ಧಿಅಹರ್ನಿಶಿಪ್ರಸನ್ವೆಂಕಟೇಶ5
--------------
ಪ್ರಸನ್ನವೆಂಕಟದಾಸರು
ನೀ ಕಾಯ್ದರೆ ಕಾಯ್ದಾ ಬಗೆಯಲ್ಲದೆ ಬೇರೆಏಕಮತಿ ಎನ್ನೊಳಿಲ್ಲಶ್ರೀಕಾಂತ ಕರುಣಿ ನೀನಕ್ಲಿಷ್ಟ ಕಾಣಯ್ಯಬೇಕೆಂದು ಸಾಕುತಿಹೆ ಹರಿಯೆ ಪ.ವೇದ ಶಾಸ್ತ್ರ ಪುರಾಣ ಸಾರಾರ್ಥ ತಿಳಿದರಿಯೆಸಾಧನ ಸುಮಾರ್ಗವರಿಯೆಆದರದಿ ಭಕುತಿ ಬಲಿದೊಮ್ಮೆ ಪೂಜಿಸಲರಿಯೆಮಾಧವಮುರಾರಿ ಕೃಷ್ಣಾ ತುಷ್ಟಾ1ಮನ ಮರ್ಕಟವು ತನ್ನ ಮತಿಯಲ್ಲಿ ವಿಷಯ್ಯೆಂಬವನಕೆ ಮೆಚ್ಚಿದೆ ನೋಡಯ್ಯವನಚರತ್ವವನೀಗಿಕ್ಷಣವಾರೆ ತವಚರಣವನಜರಸವುಣ್ಣದಲ್ಲೈ ರಂಗಯ್ಯ 2ಜನುಮ ಜನುಮದ ತಾಯಿ ತಂದೆಗುರುಬಂಧುನನ್ನನು ಗತಿಗಾಣಿಪ ದಾತನೆಎನ್ನಭವತಪ್ಪುಗಳನರಸದಿರು ಅರಸಿದರೆನಿನಗುಚಿತೆ ಪ್ರಸನ್ವೆಂಕಟೇಶ ಶ್ರೀಶ 3
--------------
ಪ್ರಸನ್ನವೆಂಕಟದಾಸರು