ಒಟ್ಟು 5694 ಕಡೆಗಳಲ್ಲಿ , 129 ದಾಸರು , 3453 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಂದೇ ಗೋಪಾಲಂ ಕೃಷ್ಣಾನಂದ ಜಲಪಾಲಂ ಮಂದಹಾಸ ಮುನಿವೃಂದ ವಿಶಾಲಂ ಇಂದಿರೇಶ ಯದುನಂದನ ಬಾಲಂ ಪ ಸಾರಿದನು ಸಾರಂ ಕೃಷ್ಣ ಚಾರು ಮೋಹನಾ ಕಾರಂ ಸಾರೋದ್ದಾರಂ ಸುಜನಮಂದಾರಂ ಶ್ರೀರಮಣೀ ಮುಖ ಚಂದ್ರ ಚಕೋರಂ 1 ಕಾಂಚೀ ಮಣಿಹಾರಂ ಕೃಷ್ಣ ವಾಂಛಿತದನುಸಾರಂ ಪಂಚಭೂತ ಪಂಚಸ್ಯಾಕಾರಂ ಪಾಂಚ ಜನ್ಯ ಭೃಗುಲಾಂಛನ ಧಾರಂ 2 ಚಾಪಲ ಗುಣಧಾಮಂ ಕೃಷ್ಣ ಗೋಪೀಜನ ಕಾಮಂ ನೀ ಪರಮಾತ್ಮ ಸ್ವರೂಪ ಸುನಾಮಂ ಶ್ರೀಪತಿ ಯದು ಕುಲದೀಪ ನಿಸ್ಸೀಮಂ 3 ಪಾಂಡವ ಸಾಕಾರಂ ಕೃಷ್ಣ ಪಂಡಿತನುಸಾರಂ ಚಂಡ ಕಿರಣ ಮಣಿಕುಂಡಲ ಧಾರಂ ಮಂಡಲದೊಡೆಯ ಉದ್ದಂಡತಿ ಶೂರಂ 4 ಶರಣರ ಭವದೂರಂ ಕೃಷ್ಣ ಸುರಜನ ಸಾಕಾರಂ ಹರಿಸೂನು ಕೋಣೆ ಲಕ್ಷ್ಮೀಶ ಶೃಂಗಾರಂ ಪರಮಾತ್ಮಕ ಸದ್ಗುರು ಮಂದಾರಂ 5
--------------
ಕವಿ ಪರಮದೇವದಾಸರು
ವಂದೇ ವಂದೇ ವಂದೇ ನಾರಾಯಣ ಗುರುದೇವಾ ವಂದೇ ವಂದೇ ವಂದೇ ಪರಿಪೂರ್ಣ ಬ್ರಹ್ಮರೂಪ ಪರಮಾತ್ಮ ಜ್ಞಾನದೀಪ ತಾಪ ಪರಿಹರಿಪ ಜ್ಞಾನಿ ಭೂಪ ಶಿರವಿಡುವೆ ಚರಣಯುಗದೀ ಗುರುದೇವ ಎನ್ನಮನದಿ ಪರತತ್ವ ತಿಳಿವ ತೆರದಿ ಕರುಣಿಪುದು ನೀನೇ ಮುದದಿ ಜಾಗರಣ ಕನಸು ನಿದ್ರಾ ಆಗುಗಳನರಿಯುತಿರ್ದಾ ಈ ಗತಿಗಳೆಲ್ಲ ಮೀರ್ದಾ ಆ ಘನವೆ ನಿರ್ವಿಕಲ್ಪ ಅದೇ ನೀನು ಎಂದು ಪೇಳ್ದೀ ಇದು ಎಲ್ಲ ಮಿಥ್ಯವೆಂದಿ ಇದೊ ಮರಣಭಯವ ಕಳೆದಿ ನಿಜಬೋಧವಚನ ಬಲದಿ ಮರೆದಿರ್ದ ತತ್ವವಿದನು ಪರತತ್ವ ಶೋಧಕರನು ಬೊಧಿಸುತ ನೀ ನಿಜವನು ತೋರಿಸುತ ಕಾಯುವವನು ವರಜ್ಞಾನ ಜಗದಲೆಲ್ಲಾ ಮರೆದಾಡಿ ತಮವನೆಲ್ಲಾ ಪರಿಹರಿಸಲೆಂದು ನೀನೇ ಗುರುಶಂಕರನಿಗೆ ಪೇಳ್ದೀ ವಂದೇ ಶಂಕರಾ ಗುರುದೇವಾ ವಂದೇ ಶಂಕರ ಗುರುದೇವಾ ಪಾವನಚರಣಾ ತೋರೈ ಕರುಣಾ ಜ್ಞಾನಾಂಬುಧಿ ಪೂರ್ಣಾ ವಂದೇ
--------------
ಶಂಕರಭಟ್ಟ ಅಗ್ನಿಹೋತ್ರಿ
ವಂದೇ ಶಂಕರ ಗುರುದೇವಾ ವಂದೇ ಶಂಕರ ಗುರುದೇವಾ ಪಾವನ ಚರಣಾ ತೋರೈ ಕರುಣಾ ಜ್ಞಾನಾಂಬುಧಿ ಪೂರ್ಣಾ ವಂದೇ ನಿರಂಜನ ಸತ್ಯ ಸ್ವರೂಪಾ ಪ್ರತ್ಯಗಾತ್ಮನೇ ಆನಂದರೂಪಾ ನೀಡೈ ಘನಜ್ಞಾನಾ ಬೋಧಾ ಬೇಡುವೆ ನಿನ್ನೊಳ್ ಗುರುವೇ ವಂದೇ ಆತ್ಮಸ್ವರೂಪವ ಬೋಧಿಸಿ ಎನ್ನ ಮುಕ್ತ ಮಾಡುನೀ ಶ್ರೀ ಗುರುದೇವಾ ನಾರಾಯಣಪದದಾ ಜ್ಞಾನಾ ಸಾರಿದ ಶಂಕರ ಗುರುವೇ ವಂದೇ
--------------
ಶಂಕರಭಟ್ಟ ಅಗ್ನಿಹೋತ್ರಿ
ವನಜ ಮುಖಿಯರ ಮನದಿಷ್ಟಾರ್ಥವನೀವನ - ಶ್ರೀ ಕೃಷ್ಣ ಎನ್ನಿರೊಮನು ಮುನಿಜನರನು ಅನುದಿನದೊಳು ಪೊರೆವನ - ಶ್ರೀ ಕೃಷ್ಣ ಎನ್ನಿರೊ ಪ ಪಣ್ಣ ಕೊಯ್ದನನುಜಗೆ ಸಹಾಯನಾದನ _ ಶ್ರೀ ಕೃಷ್ಣ ಎನ್ನಿರೊಸಣ್ಣ ಸೀರೆಯ ನಲ್ವೆಣ್ಣು ರೂಪಾದನ _ ಶ್ರೀ ಕೃಷ್ಣ ಎನ್ನಿರೊಅಣ್ಣನ ವೈರಿಯ ಮಗನ ಕೊಂದಾತನ _ ಶ್ರೀ ಕೃಷ್ಣ ಎನ್ನಿರೊಬಣ್ಣಿಸಲರಿಯೆ ನಾನಿವನ ಮಹಿಮೆಯ _ ಶ್ರೀ ಕೃಷ್ಣ ಎನ್ನಿರೊ 1 ಮುತ್ತಯ್ಯನಿರೆ ಮೊಮ್ಮಗಗೆ ಪಟ್ಟಗಟ್ಟಿದನ _ ಶ್ರೀ ಕೃಷ್ಣ ಎನ್ನಿರೊಹೆತ್ತವಳಿರೆ ತಾಯ ಬೇರೆ ಪಡೆದಾತನ _ ಶ್ರೀ ಕೃಷ್ಣ ಎನ್ನಿರೊಮತ್ತೇಭಗಾಮಿನಿಗಾಗಿ ವನವಾಸ ಪೋದನ _ ಶ್ರೀ ಕೃಷ್ಣ ಎನ್ನಿರೊಮತ್ತೆ ಹಿರಣ್ಯಕಗೆ ಕಂಬದಲಿ ತೋರ್ದನ - ಶ್ರೀ ಕೃಷ್ಣ ಎನ್ನಿರೊ 2 ಉಗುರು ಕೊನೆಗಳಿಂದ ನಗವನೆತ್ತಿದನ _ ಶ್ರೀ ಕೃಷ್ಣ ಎನ್ನಿರೊಬೊಗಸೆಗಂಗಳ ಬಾಲೆಯರ ತಂದಾತನ _ ಶ್ರೀ ಕೃಷ್ಣ ಎನ್ನಿರೊಮಗಳ ಗಂಡನ ಶಿರವನೆ ಛೇದಿಸಿದನ _ ಶ್ರೀ ಕೃಷ್ಣ ಎನ್ನಿರೊಸುಗುಣ ತನ್ನ ಕಾಗಿನೆಲೆಯಾದಿಕೇಶವನ _ ಶ್ರೀ ಕೃಷ್ಣ ಎನ್ನಿರೊ 3
--------------
ಕನಕದಾಸ
ವನಜಗಂಧಿಯೆ ನಿನ್ನ ಮನದಸಂದೆಗೆವನ್ನು ಸನುಮತದಿ ಪೇಳಿನ್ನು ಮುನಿಸಿದೇನು ಚಾಡಿಮಾತನು ಕೇಳಿ ರೂಢಿಯಿಂ ಖತಿತಾಳಿ ಕಾಡುತಿಹುದೇಂ ಚಾಳಿ ರೌದ್ರಕಾಳಿ ಸೂಚನೆಯ ಕೊಡದಿಂತು ವಾಚನದಿ ಬಿರುಸಾಂತು ರಾಚುತಿರ್ಪೆಯದೇನೆ ನಾಚದಿಂತು ಮಾನವತಿನೀನೆಂದು ನಾನು ನಂಬಿರಲಿಂದು ಏನು ಮಾಡಿದೆನೆಂದು ಜರಿದೆ ಬಂದು ಸಾಕು ಸಾಕೀಬಗೆಯ ಕಠಿಣವಾಕ್ಕು ಕೋಕಿಲಾರವೆ ನಿನ್ನೊಳಿರುವ ಸೊರ್ಕು ಸಾಕುಮಾಡಿಹುದೆನ್ನ ನೋಡು ಮುನ್ನ
--------------
ನಂಜನಗೂಡು ತಿರುಮಲಾಂಬಾ
ವನಭೋಜನ ಊರ್ವಶಿ: ಇದೀಗ ಮನವು ಇಂದಿರಾಕ್ಷಿ ಇದೀಗ ಮನವುಪ. ಮಧುಸೂದನ ತನ್ನ ಸದನದಿಂದಲಿ ಒಮ್ಮೆ ಒದಗಿ ಪಯಣಗೈದು ಪದುಳದಿ ಮಂಡಿಪ1 ವಾಸುದೇವ ತಂಪಾಶುಗದಿಂದಾ- ಯಾಸವ ಬಿಡಿಸಿ ಸಂತೋಷಪಡಿಸುವಂತಿದೀಗ2 ಭಾಗವತರು ಅನುರಾಗದಿ ಕೂಡಿ ಸ- ರಾಗದಿ ಯೋಗಾರೋಗಣೆಮಾಡುವದೀಗ3 ಸತ್ಪಾತ್ರ ವಿಯೋಗ ಸು- ಕ್ಷೇತ್ರ ಸುಧಾಮಯ ಕೀರ್ತಿಯೆಂದಿನಿಸುವ 4 ತರುಗುಲ್ಮಾವಳಿ ಸುರಮುನಿಗಳು ಕಾಣೆ ಉರು ಪಾಷಾಣವೆಲ್ಲವು ಸಚ್ಚರಿತವು5 ರಂಭೆ : ಪೋಗಿ ಬರುವ ವನಕ್ಕಾಗಿ ನಾಗವೇಣಿ ಲೇಸಾಗಿ ಬೇಗ ನಾವುಪ. ಭಾಗವತಾದಿ ಸಮಾಗಮವಾದರೆ ಭಾಗ್ಯವಂತೆಯರ್ನಾವಾಗಿ1 ಹರಬ್ರಹ್ಮಾದಿ ನಿರ್ಜರರಿಗಸಾಧ್ಯವು ಹರಿಪ್ರಸಾದವೆಂದು ಸಾಗಿ ಬೇಗ2 ನಾರಿ ನಿನ್ನ ಉಪಕಾರ ಮರೆಯೆ ನಾ ಭೂರಿ ಪುಣ್ಯವಶಳಾಗಿ3 ಕಾಣದಿರಲು ಯೆನ್ನ ಪ್ರಾಣ ನಿಲ್ಲದು ಕಾಣೆ ಶ್ರೀನಿವಾಸನ ಭೇಟಿಗಾಗಿ4 ಊರ್ವಶಿ : ಅಭಿಷೇಕವನು ಗೈದರಾಗ ಮನಸಿಗನುರಾಗ ಪ. ವಿಭುಧೋತ್ತಮರೆಲ್ಲರು ಕೂಡುತ್ತ ಶುಭ ಋಗ್ವೇದೋಕ್ತದಿ ನಲಿಯುತ್ತಅ.ಪ. ಕ್ಷೀರಾರ್ಣವದೊಳಗಾಳಿದವಂಗೆ ಕ್ಷೀರಾಬ್ಧಿಯ ದುಹಿತೆಯ ಗಂಡನಿಗೆ ನೀರಜನಾಭನ ನಿಖಿಲ ಚರಾಚರ ಪೂರಿತ ಕಲ್ಮಷದೊರಗೆ ಕ್ಷೀರದ1 ಚದುರತನದಿ ಗೊಲ್ಲರೊಳಾಡಿದಗೆ ದಧಿಪಾಲ್ ಬೆಣ್ಣೆಯ ಸವಿದುಂಡವಗೆ ಮದನಜನಕ ಮಹಿಮಾಂಬುಧಿ ಕರುಣಾ- ಸ್ಪದ ಸತ್ಯಾತ್ಮ ಸನಾಥಗೆ ದಧಿಯ2 ಶ್ರುತಿಸ್ಮøತಿತತಿನುತ ರತಿಪತಿಪಿತಗೆ ಅತುಲಿತಗುಣ ಸೂನೃತಭಾಷಿತಗೆ ದಿತಿಸುತಹತ ಶೋಭಿತ ಮೂರುತಿ ಶಾ- ಶ್ವತವಾಶ್ರಿತ ವಾಂಛಿತಗೆ ಘೃತವ3 ಮಧುಸೂದನ ಮಂದರಗಿರಿಧರೆಗೆ ಮೃದುವಾಕ್ಯಗೆ ಮಂಗಲಾಂಗನಿಗೆ ಪದಮಳಾಕ್ಷ ಪರಾತ್ಪರವಸ್ತು ನೀ- ರದ ಶ್ಯಾಮಲ ನಿತ್ಯಾತ್ಮಗೆ ಮಧುವಿನ4 ಕರುಣಾಕರ ಕಮಲಜತಾತನಿಗೆ ದುರುಳ ಸುಬಾಹು ತಾಟಕಿ ಮರ್ದನಗೆ ನರಕಾಂತಕ ನಾರಾಯಣ ಸಕಲಾ- ಮರಪೂಜಿತಗೆ ಸರ್ವಾತ್ಮಗೆ ಸಕ್ಕರೆ5 ಎಳೆತುಳಸೀವನಮಾಲಾಧರಗೆ ಫಲದಾಯಕ ಪರಬ್ರಹ್ಮರೂಪನಿಗೆ ಕಲುಷರಹಿತ ನಿರ್ಮಲಚಾರಿತ್ರ್ಯ ನಿ- ಶ್ಚಲಿತಾನಂದ ನಿತ್ಯನಿಗಳ ನೀರಿನ6 ಕನಕಾಂಬರಧರ ಶೋಭತನಿಂಗೆ ಮನಕಾನಂದವ ಪಡಿಸುವನಿಂಗೆ ಚಿನಮಯ ಪರಿಪೂರ್ಣ ವಿಶ್ವಂಭರ ಜನಕಜಾ ವರನಿಗೆ ಕನಕಾನನೀಕದ7 * * * ವೆಂಕಟೇಶ ಕಣ್ಣ ಮುಂದೆ ನಿಂತಿದಂತಿದೆಪ. ಶಿರದೊಳು ರತ್ನಕಿರೀಟದ ಝಳಕ ಮೆರೆವ ಲಲಾಟದಿ ಕಸ್ತೂರಿತಿಲಕ ವರ ಕರ್ಣಕುಂಡಲಗಳ ಮಯಕನಕ ಚೆಲುವ ಚರಾಚರಭರಿತಜ ಜನಕ1 ಕಂಬುಕಂಠದಿ ಕೌಸ್ತುಭವನಮಾಲ ಇಂಬಾಗಿಹ ಭೂಷಣ ಶುಭಲೋಲ ಸಂಭ್ರಮಿಸುವ ಮೋಹನ ಗುಣಶೀಲ ಅಂಬುಜನಾಭಾಶ್ರಿತಜನಪಾಲ2 ಶಂಖಸುದರ್ಶನಗದಾಪದ್ಮ ಧಾರಿ ಕಂಕಣವೇಣುವಡ್ಯಾಣವಿಹಾರಿ ಬಿಂಕದ ಬಿರುದಾಂಕಿತ ಕಂಸಾರಿ ಶಂಕೆಯಿಲ್ಲದ ಭೂಷಣಾಲಂಕಾರಿ3 ಎಡಬಲದಲಿ ಮಡದಿಯರ ವಿಲಾಸ ಕಡುಬೆಡಗಿನ ಪೀತಾಂಬರಭೂಷ ಕಡಗ ಕಾಲಗೆಜ್ಜೆ ಅಂದುಗೆಯಿಟ್ಟು ತೋಷ ಒಡೆಯ ಶ್ರೀನಾರಾಯಣ ಸರ್ವೇಶ4 ಈ ರೀತಿಯಲಿ ಶೃಂಗಾರನಾಗುತ್ತ ಭೂರಿಭಕ್ತರ ಕಣ್ಮನಕೆ ತೋರುತ್ತ ನಾರದಾದಿ ಮುನಿವರ ಗೋಚರದ ಚಾರುಚರಣವನು ತೋರಿಸಿ ಪೊರೆದ5 * * * ಆರೋಗಣೆಯ ಗೈದನು ಶ್ರೀರಂಗ ಸಾರಸವಾದ ಸಮಸ್ತ ವಸ್ತುಗಳ ಪ. ಧೂಪದೀಪನೈವೇದ್ಯವಿಧಾನ ಶ್ರೀಪರಮಾತ್ಮ ಮಂಗಲಗುಣಪೂರ್ಣ1 ಸುರತರುವಿನ ಸೌಭಾಗ್ಯದ ತೆರನ ಮರಕತಮಯ ಹರಿವಾಣದೊಳಿದನ2 ಭಕುತರ ಸೌಖ್ಯವಿನ್ನೇನೆಂಬುವೆನು ಶಕುತ ಶ್ರೀಮಾಧವ ನಿರತ ತೋರುವನು3 * * * ಆರತಿ ಶ್ರೀನಿವಾಸಂ ಶ್ರೀವೆಂಕಟೇಶಂ ಗಾರತಿ ಶ್ರೀನಿವಾಸಂಪ. ಮಂಗಲಾಂಗ ನರಸಿಂಗ ಮನೋಹರ ರಂಗರಾಯ ಶ್ರೀಗಂಗಾಜನಕಗೆ1 ಮಾಧವ ಮಧುಹರ ಮೋದಭರಿತ ಜಗ- ದಾಧಾರ ವೇಣುನಾದವಿನೋದಗೆ2 ನಿತ್ಯನಿರಂಜನ ಸತ್ಯಸ್ವರೂಪಗೆ ಪ್ರತ್ಯಗಾತ್ಮಪರತತ್ತ್ವಸ್ವರೂಪಗೆ3 ಭೋಜನವ ಗೈದರು ಪ. ಮೂಜಗತ್ಪತಿಯ ಪ್ರಸಾದಪ್ರತಾಪದಿ ನೈಜವಾಗಿಹ ಪಾಪ ಮಾಜಿ ಹೋಗಾಡುತ್ತ1 ಜಿಹ್ವೆಗೆ ರುಚಿಕರವಪ್ಪುದ ಮಿಗಿಲಾದ ಶಾಕಪಾಕಗಳನ್ನು ಪಾತ್ರದಿ ತೆಗೆದು ಸಂತೋಷ ಬೆಡಗುಗಳ ತೋರುತ್ತ2 ಹಪ್ಪಳ ಸಂಡಿಗೆಯು ತಪ್ಪು ಒಗರ ಶಾಲ್ಯನ್ನಗಳೆಲ್ಲವ ತಪ್ಪದೆ ಸವಿದು ಬಾಯ್ ಚಪ್ಪರಿಸಿದರಾಗ3 ಹೋಳಿಗೆಯು ಕಾಯದ ಜಡಗಳು ಮಾಯಕವಾದವು ಆಯುರಾರೋಗ್ಯ ಸುಶ್ರೇಯ ಕಾರಣವಾಯ್ತು4 ಸುರರು ಉರಗ ಮಾನವರೆಲ್ಲರೂ ದೊರೆಯ ಪ್ರಸಾದವು ದೊರಕಿತು ಎನುತ ವಿ- ಸ್ತರವಾದ ತೋಷದಿ ಭರದಿಂದೊದಗುತಲಿ5
--------------
ತುಪಾಕಿ ವೆಂಕಟರಮಣಾಚಾರ್ಯ
ವನಭೋಜನ ಊರ್ವಶಿ:ಇದೀಗ ಮನವು ಇಂದಿರಾಕ್ಷಿ ಇದೀಗ ಮನವು ಪ. ಮಧುಸೂದನ ತನ್ನ ಸದನದಿಂದಲಿ ಒಮ್ಮೆ ಒದಗಿ ಪಯಣಗೈದು ಪದುಳದಿ ಮಂಡಿಪ 1 ವಾಸುದೇವ ತಂಪಾಶುಗದಿಂದಾ- ಯಾಸವ ಬಿಡಿಸಿ ಸಂತೋಷಪಡಿಸುವಂತಿದೀಗ 2 ಭಾಗವತರು ಅನುರಾಗದಿ ಕೂಡಿ ಸ- ರಾಗದಿ ಯೋಗಾರೋಗಣೆಮಾಡುವದೀಗ 3 ಸತ್ಪಾತ್ರ ವಿಯೋಗ ಸು- ಕ್ಷೇತ್ರ ಸುಧಾಮಯ ಕೀರ್ತಿಯೆಂದಿನಿಸುವ 4 ತರುಗುಲ್ಮಾವಳಿ ಸುರಮುನಿಗಳು ಕಾಣೆ ಉರು ಪಾಷಾಣವೆಲ್ಲವು ಸಚ್ಚರಿತವು 5 ರಂಭೆ : ಪೋಗಿ ಬರುವ ವನಕ್ಕಾಗಿ ನಾಗವೇಣಿ ಲೇಸಾಗಿ ಬೇಗ ನಾವು ಪ. ಭಾಗವತಾದಿ ಸಮಾಗಮವಾದರೆ ಭಾಗ್ಯವಂತೆಯರ್ನಾವಾಗಿ 1 ಹರಬ್ರಹ್ಮಾದಿ ನಿರ್ಜರರಿಗಸಾಧ್ಯವು ಹರಿಪ್ರಸಾದವೆಂದು ಸಾಗಿ ಬೇಗ 2 ನಾರಿ ನಿನ್ನ ಉಪಕಾರ ಮರೆಯೆ ನಾ ಭೂರಿ ಪುಣ್ಯವಶಳಾಗಿ 3 ಕಾಣದಿರಲು ಯೆನ್ನ ಪ್ರಾಣ ನಿಲ್ಲದು ಕಾಣೆ ಶ್ರೀನಿವಾಸನ ಭೇಟಿಗಾಗಿ 4 ಊರ್ವಶಿ :ಅಭಿಷೇಕವನು ಗೈದರಾಗ ಮನಸಿಗನುರಾಗ ಪ. ವಿಭುಧೋತ್ತಮರೆಲ್ಲರು ಕೂಡುತ್ತ ಶುಭ ಋಗ್ವೇದೋಕ್ತದಿ ನಲಿಯುತ್ತ ಅ.ಪ. ಕ್ಷೀರಾರ್ಣವದೊಳಗಾಳಿದವಂಗೆ ಕ್ಷೀರಾಬ್ಧಿಯ ದುಹಿತೆಯ ಗಂಡನಿಗೆ ನೀರಜನಾಭನ ನಿಖಿಲ ಚರಾಚರ ಪೂರಿತ ಕಲ್ಮಷದೊರಗೆ ಕ್ಷೀರದ1 ಚದುರತನದಿ ಗೊಲ್ಲರೊಳಾಡಿದಗೆ ದಧಿಪಾಲ್ ಬೆಣ್ಣೆಯ ಸವಿದುಂಡವಗೆ ಮದನಜನಕ ಮಹಿಮಾಂಬುಧಿ ಕರುಣಾ- ಸ್ಪದ ಸತ್ಯಾತ್ಮ ಸನಾಥಗೆ ದಧಿಯ 2 ಶ್ರುತಿಸ್ಮøತಿತತಿನುತ ರತಿಪತಿಪಿತಗೆ ಅತುಲಿತಗುಣ ಸೂನೃತಭಾಷಿತಗೆ ದಿತಿಸುತಹತ ಶೋಭಿತ ಮೂರುತಿ ಶಾ- ಶ್ವತವಾಶ್ರಿತ ವಾಂಛಿತಗೆ ಘೃತವ 3 ಮಧುಸೂದನ ಮಂದರಗಿರಿಧರೆಗೆ ಮೃದುವಾಕ್ಯಗೆ ಮಂಗಲಾಂಗನಿಗೆ ಪದಮಳಾಕ್ಷ ಪರಾತ್ಪರವಸ್ತು ನೀ- ರದ ಶ್ಯಾಮಲ ನಿತ್ಯಾತ್ಮಗೆ ಮಧುವಿನ 4 ಕರುಣಾಕರ ಕಮಲಜತಾತನಿಗೆ ದುರುಳ ಸುಬಾಹು ತಾಟಕಿ ಮರ್ದನಗೆ ನರಕಾಂತಕ ನಾರಾಯಣ ಸಕಲಾ- ಮರಪೂಜಿತಗೆ ಸರ್ವಾತ್ಮಗೆ ಸಕ್ಕರೆ 5 ಎಳೆತುಳಸೀವನಮಾಲಾಧರಗೆ ಫಲದಾಯಕ ಪರಬ್ರಹ್ಮರೂಪನಿಗೆ ಕಲುಷರಹಿತ ನಿರ್ಮಲಚಾರಿತ್ರ್ಯ ನಿ- ಶ್ಚಲಿತಾನಂದ ನಿತ್ಯನಿಗಳ ನೀರಿನ 6 ಕನಕಾಂಬರಧರ ಶೋಭತನಿಂಗೆ ಮನಕಾನಂದವ ಪಡಿಸುವನಿಂಗೆ ಚಿನಮಯ ಪರಿಪೂರ್ಣ ವಿಶ್ವಂಭರ ಜನಕಜಾ ವರನಿಗೆ ಕನಕಾನನೀಕದ 7 * * * ವೆಂಕಟೇಶ ಕಣ್ಣ ಮುಂದೆ ನಿಂತಿದಂತಿದೆ ಪ. ಶಿರದೊಳು ರತ್ನಕಿರೀಟದ ಝಳಕ ಮೆರೆವ ಲಲಾಟದಿ ಕಸ್ತೂರಿತಿಲಕ ವರ ಕರ್ಣಕುಂಡಲಗಳ ಮಯಕನಕ ಚೆಲುವ ಚರಾಚರಭರಿತಜ ಜನಕ1 ಕಂಬುಕಂಠದಿ ಕೌಸ್ತುಭವನಮಾಲ ಇಂಬಾಗಿಹ ಭೂಷಣ ಶುಭಲೋಲ ಸಂಭ್ರಮಿಸುವ ಮೋಹನ ಗುಣಶೀಲ ಅಂಬುಜನಾಭಾಶ್ರಿತಜನಪಾಲ 2 ಶಂಖಸುದರ್ಶನಗದಾಪದ್ಮ ಧಾರಿ ಕಂಕಣವೇಣುವಡ್ಯಾಣವಿಹಾರಿ ಬಿಂಕದ ಬಿರುದಾಂಕಿತ ಕಂಸಾರಿ ಶಂಕೆಯಿಲ್ಲದ ಭೂಷಣಾಲಂಕಾರಿ 3 ಎಡಬಲದಲಿ ಮಡದಿಯರ ವಿಲಾಸ ಕಡುಬೆಡಗಿನ ಪೀತಾಂಬರಭೂಷ ಕಡಗ ಕಾಲಗೆಜ್ಜೆ ಅಂದುಗೆಯಿಟ್ಟು ತೋಷ ಒಡೆಯ ಶ್ರೀನಾರಾಯಣ ಸರ್ವೇಶ 4 ಈ ರೀತಿಯಲಿ ಶೃಂಗಾರನಾಗುತ್ತ ಭೂರಿಭಕ್ತರ ಕಣ್ಮನಕೆ ತೋರುತ್ತ ನಾರದಾದಿ ಮುನಿವರ ಗೋಚರದ ಚಾರುಚರಣವನು ತೋರಿಸಿ ಪೊರೆದ 5 * * * ಆರೋಗಣೆಯ ಗೈದನು ಶ್ರೀರಂಗ ಸಾರಸವಾದ ಸಮಸ್ತ ವಸ್ತುಗಳ ಪ. ಧೂಪದೀಪನೈವೇದ್ಯವಿಧಾನ ಶ್ರೀಪರಮಾತ್ಮ ಮಂಗಲಗುಣಪೂರ್ಣ 1 ಸುರತರುವಿನ ಸೌಭಾಗ್ಯದ ತೆರನ ಮರಕತಮಯ ಹರಿವಾಣದೊಳಿದನ 2 ಭಕುತರ ಸೌಖ್ಯವಿನ್ನೇನೆಂಬುವೆನು ಶಕುತ ಶ್ರೀಮಾಧವ ನಿರತ ತೋರುವನು 3 * * * ಆರತಿ ಶ್ರೀನಿವಾಸಂ ಶ್ರೀವೆಂಕಟೇಶಂ ಗಾರತಿ ಶ್ರೀನಿವಾಸಂ ಪ. ಮಂಗಲಾಂಗ ನರಸಿಂಗ ಮನೋಹರ ರಂಗರಾಯ ಶ್ರೀಗಂಗಾಜನಕಗೆ 1 ಮಾಧವ ಮಧುಹರ ಮೋದಭರಿತ ಜಗ- ದಾಧಾರ ವೇಣುನಾದವಿನೋದಗೆ 2 ನಿತ್ಯನಿರಂಜನ ಸತ್ಯಸ್ವರೂಪಗೆ ಪ್ರತ್ಯಗಾತ್ಮಪರತತ್ತ್ವಸ್ವರೂಪಗೆ3 ಭೋಜನವ ಗೈದರು ಪ. ಮೂಜಗತ್ಪತಿಯ ಪ್ರಸಾದಪ್ರತಾಪದಿ ನೈಜವಾಗಿಹ ಪಾಪ ಮಾಜಿ ಹೋಗಾಡುತ್ತ1 ಜಿಹ್ವೆಗೆ ರುಚಿಕರವಪ್ಪುದ ಮಿಗಿಲಾದ ಶಾಕಪಾಕಗಳನ್ನು ಪಾತ್ರದಿ ತೆಗೆದು ಸಂತೋಷ ಬೆಡಗುಗಳ ತೋರುತ್ತ 2 ಹಪ್ಪಳ ಸಂಡಿಗೆಯು ತಪ್ಪು ಒಗರ ಶಾಲ್ಯನ್ನಗಳೆಲ್ಲವ ತಪ್ಪದೆ ಸವಿದು ಬಾಯ್ ಚಪ್ಪರಿಸಿದರಾಗ 3 ಹೋಳಿಗೆಯು ಕಾಯದ ಜಡಗಳು ಮಾಯಕವಾದವು ಆಯುರಾರೋಗ್ಯ ಸುಶ್ರೇಯ ಕಾರಣವಾಯ್ತು 4 ಸುರರು ಉರಗ ಮಾನವರೆಲ್ಲರೂ ದೊರೆಯ ಪ್ರಸಾದವು ದೊರಕಿತು ಎನುತ ವಿ- ಸ್ತರವಾದ ತೋಷದಿ ಭರದಿಂದೊದಗುತಲಿ 5 ಭೋಗವಿನ್ನಂತೆಯಿಲ್ಲಿ ರೋಗ ದುರಿತವೆಲ್ಲ ನೀಗಿತು ಎನುತನು- ರಾಗದಿ ಸವಿದುಂಡು ತೇಗಿದರೆಲ್ಲರು 6 ಪುಣ್ಯ-ಫಲದಿಂದ ದೊರಕಿತಲ್ಲೇ ನಲವಿಂದಾನತರು ಕೈ ತೊಳೆದ ನೀರಿನೊಳಿದ್ದ ಜಲಜಂತು ಸಹವು ನಿರ್ಮಲಿನವಾದವು ಕಾಣೆ 7 ಪಾವನವಾದರು ಹಿಂಡು ಉದ್ದಂಡ ಮೃಗಗಳೆಲ್ಲ &ಟಿb
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವರಕವಿಗಳ ಮುಂದೆ ನರಕವಿಗಳ ವಿದ್ಯೆ ತೋರಬಾರದು - ಈಧರಣಿಯ ಕಲ್ಲಿಗೆ ಶರಣೆಂದು ಪೂಜೆಯ ಮಾಡಬಾರದು ಪ ಪಾಪಿಗಳಿದ್ದಲ್ಲಿ ರೂಪುಳ್ಳ ವಸ್ತುವ ತೋರಬಾರದು - ಬಹುಕೋಪಿಗಳಿದ್ದಲ್ಲಿ ಅನುಭವಗೋಷ್ಠಿಯ ಮಾಡಬಾರದು1 ಅಡಿ ಸತ್ತ ಮಡಕೆಗೆ ಜೋಡಿಸಿ ಒಲೆಗುಂಡು ಹೂಡಬಾರದು - ಬಹುಬಡತನ ಬಂದಾಗ ನೆಂಟರ ಬಾಗಿಲ ಸೇರಬಾರದು2 ಹರಿಯ ನಿಂದಿಸಿ ಹರ ಘನನೆಂದು ನರಕಕ್ಕೆ ಬೀಳಬಾರದು - ತಾಪರರನು ಬೈದು ಪಾತಕಕೆ ಮುನ್ನೊಳಗಾಗಬಾರದು 3 ಮಡದಿ ನುಡಿಯ ಕೇಳಿ ಜಗಳಕೊಬ್ಬರ ಕೂಡೆ ಹೋಗಬಾರದು - ಬಾ-ಯ್ಬಡಿಕರು ಇದ್ದಲ್ಲಿ ವಸ್ತಿ ಬಿಡಾರವ ಮಾಡಬಾರದು 4 ಮುಂದೆ ಭಲಾ ಎಂದು ಹಿಂದೆ ನಿಂದಿಪರನ್ನು ಕೂಡಬಾರದು - ನಮ್ಮತಂದೆ ಬಾಡದಾದಿಕೇಶವನ ಸ್ಮರಣೆಯ ಬಿಡಬಾರದು5
--------------
ಕನಕದಾಸ
ವರದ ಗುರು ಗೋವಿಂದ ವಿಠಲ ಪೊರೆ ಇವನಾ ಪ ತರಳನನು ಒಪ್ಪಿಸಿಹೆ | ಕರಪಿಡಿಯೊ ಹರಿಯೆ ಅ.ಪ. ಮರುತ ಮತದಲಿ ಭಾವಿ | ಮರುತರೆಂದೆನಿಸುತಿಹಗುರುರಾಜ ಸಚ್ಚರಣ | ಕರುಣ ಪಾತ್ರಾಇರುವ ಈ ಶಿಶುವ ತವ | ಚರಣ ಕಮಲಂಗಳಿಗೆಅರ್ಪಿಸುತ ಭಿನ್ನವಿಪೆ | ನಿರುತ ಪೊರೆಯೆಂದು 1 ಗುರು ಹಿರಿಯರ ಸೇವೆ | ನಿರುತ ಗೈಯ್ಯುವ ಮನವಕರುಣಿಸುತ ಧರೆಯೊಳಗೆ | ಮೆರೆಸೊ ಕೀರ್ತಿಯಲೀಬರ ಬರುತ ವೈರಾಗ್ಯ | ಹರಿ ಗುರೂ ಸದ್ಭಕ್ತಿಉರುತರದ ಸುಜ್ಞಾನ | ಪರಿಪಾಲಿಸಿವಗೇ 2 ಭೃತ್ಯ ವತ್ಸಲನೇ 3 ಸರ್ವಗುಣ ಸಂಪೂರ್ಣ | ಸರ್ವವ್ಯಾಪ್ತ ಸ್ವಾಮಿನಿರ್ವಿಕಾರನೆ ದೇವ | ಶರ್ವ ವಂದ್ಯಾಸರ್ವದಾ ಸರ್ವತ್ರ | ದುರ್ವಿಭಾವ್ಯನೆ ಹರಿಯೆಪ್ರವರ ತವ ಸಂಸ್ಮರಣೆ | ಸರ್ವದಾ ಈಯೋ 4 ಜೀವ ಪರತಂತ್ರತೆಯ | ಭಾವುಕಗೆ ಅರಿವಿತ್ತುಭಾವದೊಳು ಮೈದೋರೊ | ದೇವದೇವೇಶಾಈ ವಿಧದ ಭಿನ್ನಪವ | ನೀ ವೊಲಿದು ಸಲಿಸುವುದುಮಾವಿನೋದಿಯೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವರದ ನರಹರಿ ವಿಠಲ | ಪೊರೆಯ ಬೇಕಿವಳ ಪ ಕರಿವರದ ಶ್ರೀ ಹರಿಯೆ | ಕರುಣಿ ನೀನೆಂದರಿತುಮೊರೆಯಿಡುವೆ ನಿನ್ನಡಿಗೆ | ಮರುತಾಂತರಾತ್ಮಾ ಅ.ಪ. ದಾಸದೀಕ್ಷೆಯಲಿ ಮಹ | ದಾಶೆಯನು ಉಳ್ಳವಳಲೇಸಾಗಿ ಕೈಪಿಡಿದು | ನೀ ಸಲಹ ಬೇಕೋವಾಸವಾನುಜ ದಾಸ | ವೇಷದಿಂ ಸ್ವಪ್ನದಲಿಸೂಸಿ ಸೂಚಿಸಿದ ಉಪ | ದೇಶವಿತ್ತಿಹೆನೋ 1 ಮಧ್ವಮತ ಪದ್ಧತಿಗ | ಳುದ್ಧರಿಸಿ ಇವಳಲ್ಲಿಶ್ರದ್ಧೆಯಿಂ ತವಪಾದ | ಪದ್ಮಗಳ ಭಜಿಸೇಶುದ್ಧ ತತ್ವ ಜ್ಞಾನ | ಸದ್ಭಕ್ತಿ ವೈರಾಗ್ಯಮಧ್ವಾಂತರಾತ್ಮ ಅನಿ | ರುದ್ಧ ಪಾಲಿಪುದೋ 2 ಪತಿಯ ಕೈಂಕರ್ಯವನು | ಹಿತದಿಂದ ಮಾಳ್ಪಂಥಮತಿಯ ನೀ ಕರುಣಿಸುತ | ಕೃತ ಕೃತ್ಯಳೆನಿಸೋಕ್ಷೀತಿಭಾರಹರಣ ಶ್ರೀ | ಪತಿಯೆ ನೀ ಒಲಿದಿವಳಅತುಳ ವಿಭವದಿ ಮೆರೆಸಿ | ಗತಿಪ್ರದನು ಆಗೋ 3 ಸಂತತದಿ ತವನಾಮ | ಚಿಂತಿಸುವ ಸೌಭಾಗ್ಯವಂತೆಯೆಂದೆನಿಸಿವಳ | ಕಾಂತೆಯ ಸಖನೇಅಂತರಾತ್ಮಕ ನೀನೆ | ಅಂತರಂಗದಿ ತೋರಿಸಂತಸವ ನೀಡಯ್ಯ | ಪಂಥಭಿಧ ಹರಿಯೇ 4 ಸರ್ವಜ್ಞ ಸರ್ವೇಶ | ಸರ್ವವ್ಯಾಪಕ ದೇವನಿರ್ವಿಕಾರನೆ ಹರಿಯೆ | ದುರ್ವಿ ಭಾವ್ಯಾಸರ್ವವಿಧ ಪರತಂತ್ರ | ದರ್ವಿ ಜೀವಿಯ ಕಾಯೋಸರ್ವಸುಂದರ ಗುರೂ ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವರದ ನಿನ್ನ ರೂಪ ಶ್ರೀ ನಿರುತ ನೋಡುವರೆ ಶ್ರೀ ಸರಸಿಜಭವ ಸಕಲ ಪ ಸುರರು ಮನುಗಳು ಮುನೀಶ್ವರರು ಶ್ರುತಿತತಿ ಯರು ದಿಗ್ವರರು ತಾಕ್ಷ್ರ್ಯಕನ ಮತ[ದವರು] ಅ.ಪ ಪರಭಕ್ತರಿಗೆ ದುಸ್ತರವಾದೊಡೆಯು ಕಾಡುವರಿಷಡ್ವರ್ಗವನೂ ತೊರೆದು ಹೃದಯದಿ ತೀರ್ಥ ಚರಣಾರವಿಂದಗಳಿಂ ನಿರಿಸಿ ಪೂಜಾತಪವನುರೆ ಚರಿಸಿ ವ್ರತಗಳಿಂ1 ಧರೆಯನಳೆದಂಗವೇನಯ್ಯ ಅಂದು ನರನಿಂಗೆ ತೋರಿದುದೆ ಜೀಯಾ ಶರಣರುಗಳೊದೆಯುವ ಕಾಯಾ ನಿನ್ನ ನಿರುಗೆಯನು ತೋರಿಸಲು ಒಡೆಯ ಕಾಣ 2 ಅರಿಯಬರುವುದಿಲ್ಲೀ ಚಿತ್ರಮಯ ಅಲ್ಪ ನರನರಿತರಿಯದವನು ನೆಲೆಯಾ ನೋಡ ಮಾಯಾ ವೇಲಾ ಪುರಿವಾಸ ವೈಕುಂಠ ಚೆನ್ನಕೇಶವರಾಯಾ 3
--------------
ಬೇಲೂರು ವೈಕುಂಠದಾಸರು
ವರದ ವೆಂಕಟ ಶ್ರೀನಿವಾಸ ಪ ಕರುಣದಿ ಪಿಡಿಯೊ ಎನ್ನ ಶೇಷಗಿರೀಶಾಅ.ಪ. ಘೋರ ಭವದಿ ನೊಂದೆನು ಇಂದು ಭಾರ ನಿನ್ನದು ಎಂದು ಸಾರಿ ಬೇಡಿದೆ ನಿನಗೆ ಭಕ್ತಬಂಧು ದೂರಮಾಡಲು ಬೇಡ ಕರುಣಾ ಸಿಂಧು ವಾರಿಜಾಸನ ವಂದ್ಯ ನೀರಜನಯನನೆ ಶರಣರ ಪೊರೆಯುವ ಸುರ ದ್ರುಮನೆ ಪರಿಪರಿ ಭವಣೆಯ ತರಿಮಹಿದಾಸನೆ ಚರಣ ಸೇವಕರ ಸೇವಕನೆನಿಸೊ ಶ್ರೀಶನೆ ದುರುಳ ಅಸುರನ ಶಿರವ ತರಿದು ತರಳ ಪ್ರಹ್ಲಾದನ ಪೊರೆದೆ ಎಂದು ಸುರರು ಪೊಗಳವುದನ್ನು ತಿಳಿದು ಭರದಿ ಬಂದು ಶಿರವ ನಮಿಸುವೆ ನಿಂದು 1 ಸಿರಿ ಅಜಭವಾದಿ ವಂದಿತ ಚರಣ ಪರಿಮಿತಿಯಿಲ್ಲದ ಗುಣ ಗಣ ಪೂರ್ಣ ನೀರಜ ಭವಾಂಡೋದಯಕೆ ಕಾರಣ ದುರಿತ ಹರಣ ಕ್ರೂರಜನ ಕುಠಾರ ದೇವನೆ ಗರುಡಗಮನ ಭೀಮರೂಪನೆ ಅರಗಳೆಣಿಸದೆ ಪೊರೆಯಂ ಬೇಗನೆ ಕರವ ಮುಗಿದು ಸಾರಿ ಬೇಡುವೆ ಕರಿಯ ತೊಡರನು ತರಿದು ನಕ್ರನ ಶಿರವ ಸೀಳಿದ ಕರುಣಿ ಕೃಷ್ಣನೆ ಸೀರೆ ಪಾಲಿಸಿ ಪೊರೆದ ದಾತನೆ ಮರಳಿ ಬರುವ ಭವವ ಬಿಡಿನೊ ರಂಗನೆ 2 ನಂಬಿದವರ ಕಲ್ಪವೃಕ್ಷ ನಂಬದವರ ಕಲುಷಕೆ ಶಿಕ್ಷಾ ಇಂಬಾಗಿ ಸರ್ವತ್ರ ಸುಜನರ ರಕ್ಷಾ ತುಂಬಿದ ವೈಭವದಿ ಮೆರೆಯೊ ದಕ್ಷಾ ಕಂಬುಕಂಠನೆ ನಿನ್ನ ನಂಬಿದೆ ಅಂಬರದಲಿ ಕಾಣೆಂದು ಬೇಡಿದೆ ಬಿಂಬನ ನಾಮನುಡಿಸೆಂದು ಕೇಳಿದೆ ಶಂಬರವೈರಿ ನಿನ್ನ ಚರಣವ ಸಾರಿದೆ ಶಂಭುವಂದಿತ ತುಂಬುರ ಪ್ರಿಯ ನಂಬಿ ಭಜಿಸುವೆ ತುಂಬು ಮನದೊಳು ಅಂಬುಜಾಕ್ಷನೆ ಜಯತೀರ್ಥ ಮುನೀಂದ್ರ ಬೆಂಬಲವಾಯುಗ ಶ್ರೀ ಕೃಷ್ಣವಿಠಲಾ 3
--------------
ಕೃಷ್ಣವಿಠಲದಾಸರು
ವರದೇಂದ್ರವಿಠಲರ ಹಾಡು ವಾಸುದೇವನ ಪುರ ಪ್ರವೇಶಿಸಿದರು |ಈಶ ಭಜಕ ಶ್ರೀಶ ಪ್ರಾಣೇಶದಾಸಾರ್ಯ ಪ ಉತ್ತಂಕ ಋಷಿಯಂತೆ ಉತ್ತಮ ಗುರುಪಾದ |ಅತ್ಯಂತ ಭಕ್ತಿಯಿಂ ಸ್ತುತಿಸಿ ಯಜಿಸಿ ||ಉತ್ತಮ ಶ್ಲೋಕ ಶ್ರೀ ಪುರುಷೋತ್ತಮನ ಗುಣವ |ನೃತ್ಯ ಗೀತದಿ ಪಾಡಿ ಮೃತ್ಯಲೋಕವ ತ್ಯಜಿಸಿ 1 ವಾಸ ವಾಸರದಲಿ ವಾಸುದೇವನ ಕಥೆಯ |ಭೂಸೂರರಿಗೆ ಪೇಳಿ ತೋಷದಿಂದ ||ವಾಸವಾದ್ಯಮರ ವಂದಿತನ ಪಾದದಿ ಭಕ್ತಿ |ಲೇಸಾಗಿ ತೋರಿ ಭವಕ್ಲೇಶವನು ಪರಿಹರಿಸಿ 2 ಅಬ್ಧನಂದನ ಭಾದ್ರಪದ ತಿಥಿ ಅಷ್ಟಮಿಯ |ಶುದ್ಧ ಭೌಮ್ಯವಾಸರದ ಉಷಃಕಾಲದಿ ||ಮುದ್ದು ಪ್ರಲ್ಹಾದನ್ನ ಪೊರೆದ ನರಹರಿರೂಪ |ಹೃದ್ಗುಹಾದಲಿ ನೋಡಿ ಹರುಷವನು ಬಡುತಲಿ 3 ದಾಸ ಕುಲ ಶ್ರೇಷ್ಠ ಗುರು ಪ್ರಾಣೇಶದಾಸರಿಂ |ಶ್ರೀಶ ಪ್ರಾಣೇಶ ವಿಠಲೆಂಬಂಕಿತಾ ||ಸೋಸಿನಿಂದಲಿ ಪಡೆದು ಶ್ರೀಶ ಮಹಿಮೆ ಉ- |ಲ್ಲಾಸದಿಂದಲಿ ಭಜಿಸಿ ಬೇಸರವನಳಿಯುತಾ 4 ಮರುತನೆ ಪರಮ ಗುರು, ಹರಿಯೆ ಪರದೇವತೆ |ಪುರಂದರರೆ ದಾಸರೆಂದರುಹಿ ಧರೆಗೆ ||ವರದೇಂದ್ರ ವಿಠಲನ ಚರಣವನು ಪೂಜಿಸಿ |ದರಣಿ ಸಾಧನವನ್ನು ತ್ವರಿತದಿಂದಲಿ ಮುಗಿಸಿ 5
--------------
ಶ್ರೀಶಪ್ರಾಣೇಶವಿಠಲರು
ವರಾಹ | ವಿಠಲ ಪೊರೆ ಇವನ ಪ ಮೋದ ಮುನಿ ಸನ್ನುತನೆ | ಆದಿ ಮೂರುತಿಯೇ ಅ.ಪ. ಸ್ವೋಚಿತಸು ಕರ್ಮದಲಿ | ಊಚ ದೀಕ್ಷೆಯನಿತ್ತುನೀಚೋಚ್ಚತರತಮವ | ವಾಚಿಸಿವನಲ್ಲೀಪ್ರಾಚೀನ ದುಷ್ಕರ್ಮ | ಮೋಚನೆಯಗೈಸವ್ಯಸಾಚೀ ಸಖನೆ ಹರಿಯೆ | ಕೀಚಕಾರಿ ಪ್ರೀಯಾ 1 ಸತಿ ಸುತರು ಬಂಧುಗಳು | ಹಿತ ಅಹಿತರಿವರಲ್ಲಿವ್ಯಾಪ್ತ ಶ್ರೀ ಹರಿಯೆಂಬ | ಮತಿಯ ಕೊಟ್ಟವಗೇ ||ಸತತ ತವನಾಮಾ | ಮೃತದ ಸವಿದೋರೋವಿತತ ಮಹಿಮೋ ಪೇತ | ಪ್ರತಿ ರಹಿತ ದೇವಾ2 ಪಥ ಚಾರು ಭವ ಕೂಪಾರ | ಪಾರು ಮಾಡಯ್ಯಾ3 ಸಾರ | ವಾರವಾರಕೆ ಉಣಿಸಿದಾರಿ ದೀಪಕನಾಗೊ | ಮಾರಮಣನೆ ದೇವಾತಾರಕನು ನಿನ್ಹೊರತು | ಆರು ಇಲ್ಲವುಯೆಂದುಪ್ರಾರ್ಥಿಸುವೆ ನಿನ್ನಡಿಗೆ | ವೀರರಘು ಪತೆಯೇ4 ಪತಿ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವರ್ಣಿಸಲು ಸಾಧ್ಯವೆ ಧರೆಯೊಳಿನ್ನು ಗುರುವರ್ಯಸುಶೀಲೇಂದ್ರ ತೀರ್ಥರ ಮಹಿಮೆಯನ್ನು ಪ ಭಾನುನಂದನನಂತೆ ದೀನ ಮಾನವರಿಗೆ ಸಾನುರಾಗದಿ ಕೊಡುವ ದಾನ ನೋಡಿ || ಏನು ಹೇಳಲಿ ದಿವಿಜಧೇನು ಭೂರುಹಮಣಿ ಕ್ಷೋಣಿಯೊಳು ಜಡಪಶು ರೂಪ ತಾಳಿದವು 1 ಪರಮಠಾಧೀಶರು ಪರಿಪರಿಯಲಿಂದವರ ಪರಮ ಔದಾರ್ಯಗುಣ ಪರೀಕ್ಷಿಸುತಲಿ ಬೆರಳು ಕಚ್ಚುತಲಿ ಬೆರಗಾಗಿ ಜಗದೊಳಗೆ ಸರಿ ಇವರಿಗಿಲ್ಲೆಂದು ಶಿರದೂಗಿ ಹೊಗಳಿದರು 2 ಧೀಮಂತ ಜನರೊಡೆಯ ಶ್ರೀಮಂತಮಂದಿರದ ಸ್ವಾಮಿಗಳ ಪೂರ್ಣ ಪ್ರೇಮ ಪಡೆದು | ತಾಮರಸ ಭಾವ ಪೂಜ್ಯ ಶಾಮಸುಂದರ ಮೂಲ ರಾಮ ಮೂರ್ತಿಯನು ಭೂಮಿಯೊಳು ಮೆರೆಸಿದರು 3
--------------
ಶಾಮಸುಂದರ ವಿಠಲ