ಒಟ್ಟು 14110 ಕಡೆಗಳಲ್ಲಿ , 135 ದಾಸರು , 6022 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿತ್ಯ ತೃಪ್ತಾ ಅನ್ಯರಿಂದಲಿ ಎನಗೆ ಏನು ಪ್ರಯೋಜನವೊ ಪ ದರುಶನಕೆ ಬಂದವ ನಾನಲ್ಲವೆಂದು ನಾನಂದು ಹರಿ ನಿನಗೆ ನುಡಿದದ್ದು ಮನಸ್ಸಿನೊಳಗೆ ಇರುತಿಪ್ಪದೇನಯ್ಯಾ ಬಿನ್ನಪವೆ ಲಾಲಿಸು ಶರಣ ಜನರ ಅಭಿಪ್ರಾಯವೊಂದು ಬಗೆ ಇಪ್ಪದೊ1 ನಿರುತ ವ್ಯಾಪ್ತತ್ವ ಕರುಣತ್ವ ಅಣುಮಹತ್ತು ಸರುವ ಚೇತನ ಜಡ ಮತ್ತೆ ಮತ್ತೆ ಪರಿ ಪರಿಯಿಂದಲಿ ನಿನ್ನಲಿ ಉಂಟು ನಿನ್ನ ವರ ಮೂರ್ತಿಗಳ ಪೇಳದೆ ಇದಷ್ಟು ವಿನಯದಲಿ 2 ಧ್ಯಾನಕ್ಕೆ ನೀನು ಪ್ರಧಾನನೆಂದು ನುಡಿದೆ ಅಪ್ರಮೇಯ ಕ್ಷೋಣಿಜನಕಿಂತ ದ್ವಾರದವರು ವೆಗ್ಗಳವಾಗೆ ಏನೆಂಬೆ ತಿರುವೇಂಗಳೇಶ ನಿನ್ನಾಟಕ್ಕೆ 3 ಮಿಕ್ಕ ಮಂದಜನಕೆ ನಿನ್ನ ಭಕುತರ ಮೇಲೆ ಭಕುತಿ ಪುಟ್ಟುವುದಕ್ಕೆ ನಾ ಪೇಳಿದದ್ದು ಅಕಟಕಟ ನಿನ್ನ ದೊರೆತನಕೆ ಏನೆಂಬೆ ತಕ್ಕ ಮಾತುಗಳೇನೊ ಆಲೋಚಿಸಿ ನೋಡೆ 4 ಹೊನ್ನು ಹಣ ತೂಗಬೇಕಾದರೆ ಮೊದಲಿಗೆ ಚಿನ್ನ ಹಾಕುವರೇನೊ ಚಿನ್ಮಯರೂಪ ಮುನ್ನೆ ನಿನ್ನವರ ದರುಶನವಾದ ಮೇಲೆ ಪಾ ವನ್ನ ಶಾರೀರನೆ ನಿನ್ನ ಕಾಂಬುವದುಚಿತ 5 ಜರೆಮರಣರಹಿತ ಸುಜನರ ಪರಿಪಾಲಾ ನಿ ನಿತ್ಯ ವಜ್ರಪಂಜರಾ ಜರಗೆ ವರವಿತ್ತ ದನುಜರ ವಂಶನಾಶಾ ನಿ ರ್ಜರ ನದಿ ಜನಕಾಂಬುಜ ರವಿ ನಯನ ದೇವಾ 6 ಸ್ಥೂಲಮತಿಯಿಂದ ಪೇಳಿದೆನೆಂದು ಚನ್ನಾಗಿ ಲಾಲಿಸು ಲಲಿತಾಂಗಿ ಲಕುಮಿ ರಮಣಾ ನೀಲಗಿರಿ ನಿವಾಸ ವಿಜಯವಿಠ್ಠಲ ವೆಂಕಟವಾಲಗವ ಕೈಗೊಳ್ಳು ಎನ್ನ ಯೋಗ್ಗಿತವರಿತು7
--------------
ವಿಜಯದಾಸ
ನಿತ್ಯ ನಿತ್ಯದಲಿ ಧೂಪ ಪ ನಾನದಾರಿಹೆನೆಂದು ತಿಳಿದವಗೆ ಧೂಪನಾನು ಆತ್ಮವು ಎಂದು ಕಂಡವಗೆ ಧೂಪನಾನಾ ಜೀವ ಭ್ರಾಂತಿಯಳಿದವಗೆ ಧೂಪತಾನೆ ತಾನಾಗಿಹೆನೆಂದವಗೆ ಧೂಪ 1 ಸಂಸಾರದೊಳು ಇದ್ದು ಇಲ್ಲದವನಿಗೆ ಧೂಪಸಂಸಾರ ಸಂತೆಂದು ಕಂಡವಗೆ ಧೂಪಸಂಸಾರ ಲೇಪ ಅಂಟದವನಿಗೆ ಧೂಪಸಂಸಾರದೊಳು ಮುಕ್ತನಾದವಗೆ ಧೂಪ2 ಸೂರ್ಯ ಚಂದ್ರ ಸ್ವರದಿ ನಡೆದವಗೆ ಧೂಪಆರು ಚಕ್ರದಿ ನಡೆದವಗೆ ಧೂಪಭೋರೆನಿಪ ಓಂಕಾರ ಕೇಳ್ದವಗೆ ಧೂಪಧೀರ ಚಿದಾನಂದ ಗುರುವಾದವಗೆ ಧೂಪ 3
--------------
ಚಿದಾನಂದ ಅವಧೂತರು
ನಿತ್ಯ ನಿರುಪಮ ನಿತ್ಯ ಎನ್ನ ಚಿತ್ತದಿ ನಿಲಿಸು ಪ ಮರವೆ ಮಾಯದೆ ಕೆಟ್ಟ ಪರದೆಯೋಳ್ಸದಾ ಬೆರೆದು ಶ್ವಾನಸೂಕರನಂತೆ ಚರಿಸಿದೆ ಧರೆಭೋಗ ನೆಚ್ಚಿ ನರಜನ್ಮ ವಿವರಿಸಿ ನೋಡದೆ ಮರುಳತನದಿ ನರಕಿಯಾದೆ 1 ಮೃತ್ಯುಗೀಡಾದೆ ತವಭೃತ್ಯನೆನಿಸದೆ ಸುತ್ತಿ ಸುತ್ತಿ ಇಹ್ಯಕೆ ಪರಕೆ ಕತ್ತೆಯಂತೆ ತಿರುಗಿ ತಿರುಗಿ ಮರ್ತು ನಿನ್ನ ಚರಣ ಮತ್ರ್ಯದಿ ನಿತ್ಯಸುಖವ ಪಡೆಯದ್ಹೋದೆ 2 ಆದದ್ಹಾಗಿಹೋಯಿತಭವ ವೇದಾಗಮ್ಯ ಪದುಮನಾಭ ಪಾದನಂಬಿದೆ ಪಾಲಿಸಿನ್ನು ಮೋದದೆನ್ನನೆತ್ತಿ ಶ್ರೀರಾಮ 3
--------------
ರಾಮದಾಸರು
ನಿತ್ಯ ನಿರುಪಮ ಚಿದಾನಂದ ಕರುಣಾಬ್ಧಿ ನೀನೆ ದೊರಕೆ ನಿಲುಕೆ ಅಪಮಂಗಳನೆ ಮಂಗಳವನಿತ್ತೆ ಮನಸಿಗೆ ನೀನು ಅಂಗ ಮಂಗಳವಾುತುಹಿಂಗಿದವು ದುರಿತಗಳು ಸಂಗವಿದ್ದರು ಜಡದ ತೊಂಗವವ ಮನ ಮೀರಿತುನುಂಗುತಿದೆ ದೋಷಗಳ ಬಂದಡೊಡಬನ ತೆರದಿ ಭಂಗವೆಂಬುದು ಹೋುತುಅಂಗ ಲಿಂಗದ ಕಾಂತಿ ಹೊಂಗಿ ಹೊರಹೊಮ್ಮುತಿದೆ ರಂಗ ನಿನ್ನೊಲವಾುತು ುನಿತು 1ಹೊನ್ನಿನೊಳಗಿದ್ದ ಮಲಿನವನಗ್ನಿ ಕಳಚಿದರೆ ಮುನ್ನಿನಂದದಿ ಮಲಿನವೆಹೊನ್ನಾದ ಕಬ್ಬಿನವು ಕಬ್ಬಿನದ ಸಂಗದಲಿುನ್ನು ಕಬ್ಬಿನ ಭಾವವೆಬೆಣ್ಣೆ ಕ್ಷೀರದಿ ಬಂದು ಘೃತವಾದ ಬಳಿಕ ತಾ ಬೆಣ್ಣೆಯಲ್ಲದೆ ಕ್ಷೀರವೆನಿನ್ನ ಕೃಪೆುಂದ ಮಂಗಳನಾಮವನು ಸ್ಮರಿಸೆ ನಿನ್ನವಗೆ ದೋಷ ಬಹವೆ ಇಹವೆ 2ಬಾಳೆಯನು ಬಿತ್ತಿ ಪ್ರತಿ ದಿವಸ ನೋಡಿದಡಲ್ಲಿ ನೀಳವಾಗಿಹುದು ಸುಳಿಯುಕಾಲ ಬಂದರೆ ಗೊನೆಯು ಹಾಯ್ದು ಫಲವಾಗಿರಲು ಮೇಲೊಮ್ಮೆಯುಂಟೆ ಯೆಲೆಯುಕಾಲ ಕರ್ಮಾಧೀನವಾಗಿರುವ ಸಂಸಾರ ಲೋಲ ಮನಸಿನ ವೃತ್ತಿಯುಜಾಲದಿಂದಿರಲಲ್ಲಿ ನಿನ್ನಂಘ್ರಿ ಸ್ಮರಣೆುಂಮೇಲುಂಟೆ ಕರ್ಮಗತಿಯು ಸ್ಥಿತಿಯು 3ವೃತ್ತಿ ಮಾಯಾಕಾರ್ಯ ಮಾಯೆ ನಿನ್ನಾಧೀನ ವೃತ್ತಿ ಮಾಯೆಯು ಕಲ್ಪಿತಸುತ್ತಿ ಸುಳಿಸುಳಿದಾಡಿ ಸತ್ಯದಂದದಿ ತೋರಿ ಮತ್ತೆ ನಿನ್ನೊಳಗರ್ಪಿತಚಿತ್ತು ತಾನೆ ನಾಮರೂಪಾದ ಬಗೆುಂದ ಚಿತ್ತು ಚಿತ್ತಾಹುದುಚಿತಸತ್ಯಸಂಧನು ನೀನು ಚಿತ್ತವನು ಬಿತ್ತರಿಸಿ ವೃತ್ತಿಯಾುತು ಬೆಳೆಯುತಾ ಇರುತಾ 4ಮನದ ಸಂಶಯ ಬಿಡದು ಶ್ರವಣಮನನಾದಿಗಳನನುದಿನವು ಮಾಡುತಿರಲುಮನಕೆ ಸಾಕ್ಷಿಕನಾದ ನೀನು ಘನಮಾಯೆಯನು ಮನಕೆ ಮರೆಮಾಡುತಿರಲುಚಿನುಮಯನೆ ಮಾಯೆಯನು ಕಡೆಗೆ ತೆಗೆಯಲು ಜ್ಞಾನ ಜನಿಸುವುದು ನೀನು ಕೊಡಲುಇನಕೋಟಿಸಂಕಾಶ ಇಭರಾಜದುರಿತಹರ ಎನಲು ನಿಜವಾಗುತಿರಲು ನಿಲಲು 5ತರಣಿಕಿರಣಗಳಿಂದ ಜನಿಸಿದಾ ಮೇಘಗಳು ತರಣಿಯನು ಮುಚ್ಚಲಳವೆತರಣಿ ತಾನೆನದಿವನು ಹರಹಿ ಹಿಂದಕೆ ತೆಗೆಯೆ ನೆರೆ ಹಿಂಗಿ ಹೋಗದಿಹವೆಪರಮಪುರುಷನು ನೀನು ಸ್ಮರಿಸಿ ಮಾಯೆಯ ಬೀಸಿ ತಿರುಗಿಸಲು ಮಾಯೆಗಿರವೆದುರಿತವಾಗಿರೆ ಜನಕೆ ನೆರೆ ಭಕ್ತಿಯನು ನೀನು ಕರುಣಿಸಲು ಮತ್ತೆ ಭವವೆ ಧ್ರುವವೆ 6ಅರಣಿುಂದುದುಭವಿಸಿದನಲ ಮುನ್ನಿನ ತೆರದ ಅರಣಿಯಾಗಿಯೆ ತೋರ್ಪನೆಅರೆದು ತಿಲವನು ತೆಗೆಯೆ ತೈಲವನು ತಿಲ ಬಳಿಕ ಇರುವದೆ ತೈಲದೊಡನೆಬೆರೆದು ಕರ್ಪುರವಗ್ನಿಯೊಡನಾಡಿ ಬೇರ್ಪಟ್ಟು ಮೆರೆವುದೆಂತಗ್ನಿಯೊಡನೆತಿರುಪತಿಯ ವೆಂಕಟನೆ ನಿನ್ನ ಚರಣದೊಳಿಟ್ಟ ಶರಣ ಮುನ್ನಿನ ಮನುಜನೆಯಹನೆ 7ಓಂ ಪುಣ್ಯ ಶ್ಲೋಕಾಯ ನಮಃ
--------------
ತಿಮ್ಮಪ್ಪದಾಸರು
ನಿತ್ಯ ಪಾಡಿದವರ ಪ್ರಾಣ ಮಾಡು ಕಾರುಣ್ಯವ ಮಾತಾಡು ಮನ್ನಿಸಿ ರೂಢಿಯೊಳಗೆ ನಿನಗೀಡುಗಾಣೆನೊ ಕರ ಪಿಡಿವ ತಾರಾಕ್ಷರೂಢ ವೆಂಕಟರಾಯ ಪ ಯೋನಿ ಮೊಗದಿಂದ ವೃದ್ಧ ಹಾನಿ ದೇಹವ ತೆತ್ತು. ನಾನು ನಿನ್ನದು ಎಂದು ಹೀನ ಮತಿಯಿಂದಪಮಾನಕೊಳಗಾಗಿ ಏನು ಕಾಣದೆ ಪಾಪ ಕಾನನದೊಳು ಬಿದ್ದು ಙÁ್ಞನರಹಿತನಾದೆ ಕಾಣೆ ಲಾಭಕೆ ಮದ್ದು- ನೀಯಳ ಕಳಕೊಂಡ ಮಾನವನಂತೆ ನಿತ್ರಾಣಗೆಟ್ಟೆನೊ ಈ ಕ್ಷೋಣಿಯೊಳಗೆ ಪುಟ್ಟಿದಾಗ ವಿನೋದಿಯೆ ನೀನೆ ಗತಿ ಎಂದು 1 ನಿತ್ಯ ನಿನ್ನ ನಂಬಿದೆ ಬೆಚ್ಚಿಸಲಾರೆ ಬಲು ಅರ್ಚನೆ ಬಗೆಯಿಂದ ಮುಚ್ಚಿದಾವರ್ಕ ದೇಹ ಬಿಚ್ಚಿಯಿಟ್ಟು ದೇವಾ ಅಚ್ಚನಾಗ್ರಹದಿಂದ ಅಚ್ಯುತಾ ಶರಣೆಂದು ಅಚ್ಯುತಾ ಅಚ್ಯುತಾ ಚಚ್ಚರಾ ನಾಮಗಳುಚ್ಚರಿಸುವ ಧ್ಯಾನ ಬಿಚ್ಚದೆ ಒದಗಲಿ ಇಚ್ಛಾಕ ಮೂರುತಿ 2 ಧನ್ಯ ಸ್ವಾಮಿ ಕಾಸಾರಾಪುಣ್ಯ ಕಾನನವಾಸಾರಣ್ಯಗಳೆಲ್ಲಾದಿ ಅಲ್ಲ ನಿನ್ನ ಭಕ್ತರ ಕುಲಕೆ ಮಾನ್ಯರಹಿತನೆ ತಾ- ಮದನ ಲಾ- ವಣ್ಯ ಕ್ಷೀರವಾರಿಧಿ ಕನ್ಯ ಭೂ ಸತಿಪತಿ ಶೂನ್ಯ ನೀನೆಲೊ ದುರಿತಾ- ಸಿರಿ ವಿಜಯವಿಠ್ಠಲ ಹಿ- ರಣ್ಯೋದರ ಪಿತ ಸನ್ಯಾಯದಿಂದಲಿ 3
--------------
ವಿಜಯದಾಸ
ನಿತ್ಯ ಭಜಿಸು ದುರಿತಗಳಲ್ಲವು ತ್ಯಜಿಸು ಪ ಯದುಪತಿ ಕಥಾ ಬುಧರಿಗೆ ಎರೆದು ಸಾಧುವಕೀಣ್ಯರ ಮಮತೆಯ ‌ಘಳಿಸು 1 ಕವಿವರರೆನಿಸಿದ ಇವರ ಸುವಚನವಾ ಸವಿಯನು ಸಂತತ ಭಾವದಿ ಗ್ರಹಿಸು 2 ಕುಂಭಿಣೆ ತಳದೊಳು ಧನ್ಯನೆಂದೆನಿಸಲು 3 ಮಾನವಿ ನಿಲಯರ ನೀನೊಲಿಸುತಘುನ ಮಾನವ ಜನ್ಮ ಸಾರ್ಥಕಗೊಳಿಸು 4 ಶಾಮಸುಂದರ ಪ್ರೇಮವ ಪಡೆದಾ ಈ ಮಹಾ ಮಹಿಮರ ಸೇವಕನೆನಿಸೋ 5
--------------
ಶಾಮಸುಂದರ ವಿಠಲ
ನಿತ್ಯ ಮಂದಾರ ತರುವಂತೆಕುಂದದಲ ಭೀಷ್ಟಗಳ ಗರೆವ | ಸುರ ತರುವಾ ಪ ವಾಗೀಶ ಕರಜಾತ | ನಿಗಮಾರ್ಥ ಕೋವಿದರಭೋಗಿಶಯನನ ಭಕುತ | ಭಾಗ್ಯ ದಾತೃಗಳ |ಯೋಗಿ ಕುಲವರ್ಯ ಹೃ | ದ್ರೋಗ ನೀಗುವರಜಾಗು ಮಾಡದೆ ಭಜಿಪ | ಭಕ್ತರನು ಪೊರೆವರನು 1 ಭವ ಭವಣೆ ಹರಿಸು ವರ |ನವ ನವ ಸ್ತೋತ್ರಗಳ | ಕವನ ರೂಪದಿ ಪೇಳಿಪವನಾಂತರಾತ್ಮಕನ | ಪರಿತೋಷ ಗೈದವರಾ 2 ಗರಳ ಅಂಘ್ರಿ ಕಮಲಂಗಳನುನೆರೆನಂಬಿ ಸುಖಿಸುವರ | ಸುರವ ಭಯ ವಿರಹಿತರ 3 ಉಕ್ತಿಯನು ಸ್ವಪ್ನದಲಿ | ಶಕ್ತಹಯಮುಖಪೇಳೆಯುಕ್ತಿಮಲ್ಲಿಕೆ ಮಾಲೆ | ಮೌಕ್ತಿಕವ ನಿತ್ತವರ |ಭಕ್ತಿಪಥ ತೋರಿ | ಕು | ಯುಕ್ತಿಗಳನೇ ಕಳೆದುಮುಕ್ತಿ ಮಾರ್ಗವ ತೋರ್ವ | ಭಕ್ತಿಯೋಗಿಗಳಾ 4 ಮಾಯಿ ಶೈವರು ಶಾಕ್ತ್ಯ | ಅನ್ಯಮತಗಳಗೆದ್ದುಜಯ ಪತ್ರ ಘಂಟೆಗಳ | ವಿಜಯ ಸಾರಥಿಗಿತ್ತು |ಭಯ ವಿನಾಶನು ನಮ್ಮ | ತೋಯಜಾಂಬಕ ಸಿರಿಹಯ ವದನನರ್ಚಿಸುವ | ವಾದಿರಾಜರನೂ 5 ಅದ್ವೈತ ತಮ ಸೂರ್ಯಮೇದಿನೀ ಸುರವಂದ್ಯ | ಶ್ರೀವಾದಿರಾಜರನೂ 6 ಭಾವಿ ಮಾರುತಿಯ | ದಿನ ದಿನದಿ ಪ್ರಾರ್ಥಿಪರಭಾವ ಕೊಲಿಯುತ ತೋರ್ವ | ಹಯ ಮುಖಾತ್ಮಕನು |ಭಾವ ಜನಯ್ಯ ಗುರು | ಗೋವಿಂದ ವಿಠ್ಠಲನಭವ್ಯ ರೂಪವ ಹೃದಯ | ದವಕಾಶದೊಳಗೇ 7
--------------
ಗುರುಗೋವಿಂದವಿಠಲರು
ನಿತ್ಯ ಮಾರುತನ ರಾಣಿ | ಭಾರ ನಿನ್ನದೇ ವಾಣೀ ಪ ಅನುದಿನ | ಅಕಟನಿಲ್ಲದೆ | ಸಕಲ ಠಾವಿನಲ್ಲಿ ಅರ್ಭಕನಾಗಿ ತಿರುಗಿ ಪಾ | ಪಕೆ ಎರಗಿದೆ ಯಾತಕೆ ಬಾರದವನಾದೆ 1 ಆರನ್ನ ಕಾಣದೆ ನಿನ್ನನು ನಾ | ಸಾರಿದೆ ಮಾಣದೆ | ವಾರ ವಾರಕೆನ್ನ ಉದ್ಧಾರವ ಮಾಳ್ಪುದು | ಕಾರುಣ್ಯದಿಂದಲಿ ಶೃಂಗಾರವಾರಿಧಿ ವೇಗ 2 ನಿತ್ಯ | ಕೃತಿಯನಂದನೆ | ಸತತ ವಿಜಯವಿಠ್ಠಲನ ಪದಾಬ್ಜದಿ | ರತಿ ಆಗುವಂತೆ ಸುಮತಿಯನು ಕರುಣಿಸೇ 3
--------------
ವಿಜಯದಾಸ
ನಿತ್ಯ ಶಾರದಾ ಕೊಡು ಎನಗೆ | ಸಾರುವೆ ನಾ ನಿನ್ನ ಪ ಪುಂಡರೀಕ ನಯನೆ ಪುಂಡರೀಕನ ರಾಣಿ ಪುಂಡರೀಕ ಚರ್ಮಾಂಬರ | ಪುಂಡರೀಕನಾಥನುತೆ ಪುಂಡರೀಕವೆ ನಮಗೆ 1 ಶುಚಿ ಶರೀರಳೆ ಎನ್ನ ಶುಚಿಯ ಮಾಡುವ ಈ | ಶುಚಿಯೊಳಗೆ ನಿನ್ನ ಕೀರ್ತಿ ಶುಚಿಯಾಗಿ ಮನದಲ್ಲಿ | ಶುಚಿ ಜನ ಪೇಳುತಿದೆ | ಶುಚಿ ಮಾರ್ಗವನೆ ತೋರಿಸೆ 2 ಕೌಂಶಿಕ ವಾಣಿಯೆ ಕೌಂಶಿಕ ಬಿಂಬಸದನೆ | ಕೌಂಶಿಕವೇಣಿ ಕರುಣಿ | ಕೌಂಶಿಕ ವಿಜಯವಿಠ್ಠಲನಲ್ಲಿಕೌಂಶಿಕದವನ ಮಾಡು3
--------------
ವಿಜಯದಾಸ
ನಿತ್ಯ ಶುಭಮಂಗಲಂ ಪ ವಾತಜಾತನು ಆಗಿ ಖ್ಯಾತಿಯಲಿ ಮೆರೆದಗೆಸೇತುವೆಯ ಭರದಿಂದ ಲಂಘಿಸಿದಗೆಸೀತೆಯನು ವಂದಿಸುತೆ ಉಂಗುರವನಿತ್ತವಗೆದೈತ್ಯಪುರವನು ಭರದಲುರಿಸಿದವಗೆ 1 ವಸುಧೆಯಲಿ ಕುಂತಿನಂದನನಾಗಿ ಉದಿಸಿದಗೆಕುಸುಮವನು ತಂದು ದ್ರೌಪದಿಗಿತ್ತಗೆಕುಶಲತನದಲಿ ಕೌರವಾದಿಗಳ ಸಂಹರಿಸಿ-ದಸಹಾಯ ವೀರ ಶ್ರೀ ಭೀಮಸೇನಗೆ 2 ಮಧ್ಯಗೃಹದಾತನಾ ಸತಿಯಲ್ಲಿ ಉದಿಸಿದಗೆಬೌದ್ಧ ಚಾರ್ವಾಕ ಮಾಯ್ಗಳ ಜರಿದಗೆಮಧ್ವಶಾಸ್ತ್ರವನೆಲ್ಲ ಸಜ್ಜನರಿಗೊರೆದಗೆಮುದ್ದು ಶ್ರೀಆದಿಕೇಶವನ ಭಜಕಗೆ 3
--------------
ಕನಕದಾಸ
ನಿತ್ಯ ಶುಭಮಂಗಳಂ | ಪ್ರಿಯಕರಾನಂದ ಶ್ರೀ ತುಲಸಿ ಮಾತೆ ಪ ದಿನಕರನು ಉದಯಿಸಲಾಕ್ಷಣದಿ ಭಕ್ತರು ನಿನ್ನ | ನೆನೆದು ಭಕುತಿಯಲಿ ಜೀವನ ನೀಡುತಾ | ಪಣೆಗೆ ಮೃತ್ತಿಗೆ ತೀಡಿ ಪ್ರಣೀತರಾಗುತ ಪ್ರದ ಕ್ಷಣೆ ಮಾಡಿದವರ ಫಲವೆಣೆಸಲಳವೇ 1 ಹರಿಯನಾಗ್ರದಿ ತ್ರಿಪುರಹರನು ಮಧ್ಯದಿ ಬ್ರಹ್ಮ | ನಿರುವ ಮೂಲದಿನಾಕಚರರು ಮುದದೀ | ನಿರುತ ಶಾಖಂಗಳಲಿ ಚರಿಸುತ್ತಲಿಹರೆಂದು | ಧರಣಿ ಸುರರರ್ಚಿಪರು ಹರುಷದಿಂದಾ2 ಕಾರ್ತಿಕಶುದ್ಧ ಸುಮುಹೂರ್ತ ದ್ವಾದಶಿಯಲ್ಲಿ | ಅರ್ತಿಯಿಂದಲಿ ಸುಜನರರ್ತುತ್ವರದೀ | ನರ್ತನದಿ ತವನಾಮ ಕೀರ್ತನೆಯ ಪಾಡುತಲಿ | ಬೆರ್ತುನಿಂದವರ್ಗೆ ನೀ ಸಾರ್ಥಿ ಎನಿಪೆ 3 ಕಾಂತೆ ನಿನ್ನ ನುದಿನವನಂತ ಜನ ವಂದಿಸುತ | ಅಂತರಂಗದಿ ನಲಿದು ನಿಂತರವರಾ | ಚಿಂತೆಪರಿಪರಿಪೆ ಅಳಕಾಂತೆ ದುರಿತಘನಿಚಯ | ಪಾವಕ ಸುಸಂತ ವಿನುತೆ 4 ಅದಿಗಿಂದಿಗೆ ನೀನು ವೃಂದಾವನದಿ ಮಹಿಮೆ | ನಿಂದು ತೋರಿದೆ ಯೋಗಿವೃಂದ ವಂದ್ಯೆ | ತಂದೆ ಶ್ರೀ ಗಿರಿಧರನ ಕಂದನನುದಿನ ಸಲಹು | ಮಂದರೋದ್ಧಾರ ಪ್ರೀಯ ಕುಂದವದನೆ 5 ಅಂಕಿತ-ಗಿರಿಧರಕಂದ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿತ್ಯ ಶುಭಮಂಗಳಂ ಪ. ಹೃದಯವೆಂಬೀ ದಿವ್ಯ ಪದ್ಮಪೀಠದ ಮೇಲೆ ಪದ್ಮಾಕ್ಷಿ ಪದ್ಮೆಯನು ಕುಳ್ಳಿರಿಸಿ ಸದಮಲ ಭಾವದಿಂ ಮಧುಕೈಟಭಾಂತಕನ ಹೃದಯೇಶ್ವರಿಯ ಸೇವೆಗೈವೆ 1 ಜ್ಞಾನವೆಂಬುವ ದಿವ್ಯ ಜ್ಯೋತಿಯಂ ಮುಂದಿರಿಸಿ ಧ್ಯಾನವೆಂಬುವ ನಿಲುವುಗನ್ನಡಿಯ ನಿಲಿಸಿ ದಾನÀವಾಂತಕ ರಾಮಚಂದ್ರಮನ ಧ್ಯಾನಿಸುತ ಜಾನಕಿಯ ಬಲಗೊಂಬೆ ಭರದಿ 2 ನೇಮನಿಷ್ಠೆಯ ಶುದ್ಧ ಹೇಮಕಲಶದಿ ಮತ್ತೆ ಭಕ್ತಿರಸದ ಪನ್ನೀರ ತುಂಬಿ ನಾಮಸಂಕೀರ್ತನೆಯ ನಾರಿಕೇಳವ ಬೆರಸಿ ಶ್ರೀನಾರಿಗಭಿಷೇಕವ ಗೈವೆ 3 ಚಿತ್ತಶುದ್ಧಿಯ ಶುಭ್ರವಸ್ತ್ರದಿ ನೇವರಿಸಿ ಸತ್ವಗುಣದ ಪೀತಾಂಬರವನುಡಿಸಿ ಕಂಚುಕ ತೊಡಿಸಿ ಚಿತ್ತಜನ ಜನನಿಯರ ನೋಡಿ ನಲಿವೆ 4 ಅಂತಃಕರಣ ಶುದ್ಧಿಯ ಅರಿಸಿನವನು ಪೂಸಿ ಶಾಂತಗುಣದ ತಿಲಕ ತಿದ್ದಿ ನಂದಮಲ್ಲಿಗೆಯ ದಂಡೆಯನು ಮುಡಿಸುತ್ತ ಇಂದ್ರಿಯ ನಿಗ್ರಹದ ಗಂಧ ಹಚ್ಚುವೆನು 5 ಪಂಚಭೂತಾತ್ಮಕದ ಛತ್ರಿಯನು ಪಿಡಿದೆತ್ತಿ ಪಂಚನಾದಗಳೆಂಬ ವಾದ್ಯಗಳ ನುಡಿಸಿ ಪಂಚೇಂದ್ರಿಯಂಗಳೇ ಪಂಚಭಕ್ಷ್ಯಗಳಾಗಿನಿ ರ್ವಂಚನೆಯಿಂದಾರೋಗಿಸೆಂಬೆ 6 ರೇಚಕವೆಂಬ ವ್ಯಜನದಿಂ ಬೀಸಿ ತಾರಕ ಚಾಮರವ ಪಿಡಿದು ಕುಂಭಕವೆಂಬ ಪನ್ನೀರಿನಿಂ ತೋಯ್ಸಿ ತಾರಕ ಬ್ರಹ್ಮನರಸಿಯಂ ಸೇವಿಸುವೆ 7 ಭೋಗಭಾಗ್ಯವನೀವ ಭಾಗ್ಯಲಕ್ಷ್ಮಿಗೆ ವೈರಾಗ್ಯದ ತಟ್ಟೆಯನು ಪಿಡಿದು ಭಾವದೀವಿಗೆಯ ಕರ್ಪೂರದಾರಿತಯೆತ್ತಿ ಬಾಗಿವಂದಿಪೆ ತಾಯೆ ಕರುಣಿಸೆಂದು 8 ವರದಾತೆ ಭೂಜಾತೆ ಸುವಿನೀತೆ ಸುವ್ರತೆ ವರಶೇಷಗಿರಿವಾಸದಯಿತೆ ಮಹಿತೇ ಸೆರಗೊಡ್ಡಿ ಬೇಡುವೆನು ಕರಪಿಡಿದು ಸಲಹೆಂದು ನೆರೆನಂಬಿ ನೆನೆನೆನೆದು ನಲಿವೆನಿಂದು 9
--------------
ನಂಜನಗೂಡು ತಿರುಮಲಾಂಬಾ
ನಿತ್ಯ ಶುಭಮಂಗಳಮಂ ಪ ಧರೆಯೊಳು ನಿನ್ನಂಥಾ ತರುಣಿ ಮಣಿಯಳಾ ಕಾಣೆಹರಿಯ ವಕ್ಷಸ್ಥಳದಿ ಇರುವೆ ನೀನುಕರವೆತ್ತಿ ಮುಗಿಯುವೆನು ಸಿರಿಯೆ ತವ ಸೌಭಾಗ್ಯಎರಡು ಕಣ್ಣಿಗೆ ತೋರೆ ವರಮಹಾಲಕ್ಷ್ಮಿ1 ಜರದ ಪೀತಾಂಬರವು ಚರಣದೊಳಗಲಿಯುತಲಿಸಿರಿವಂತೆ ಮೂರು ಹೆಜ್ಜೆ ಬರುವಳಾಗಿಸೆರಗೊಡ್ಡಿ ಬೇಡುವೇನು ಹೆರಳಿನಲಿ ಮುಡಿದಿರುವಮರುಗು ಮಲ್ಲಿಗೆ ಚಂಪಕ ಸರಗಳನ್ನು ನೀಡೆ 2 ಇಂದುಮುಖಿ ನಿನ್ನಗಾರ್ತಿಯ ತಂದು ನಿಂದಿಹೆ ನಿಜಸುಂದರಾ ಮೃದು ಕೀರ್ತಿ ಪಾಡುತಿಹೆನೆಚಂದ್ರಶೇಖರ ಸುರರಿಂದ ವಂದಿತ ಚರಣಇಂದಿರೇಶನ ಸಹ ಬಂದಿಲ್ಲೆ ತೋರಿಸುಮುಖ3
--------------
ಇಂದಿರೇಶರು
ನಿತ್ಯ ಸು- ಮಂಗಳೆಗತಿಶಯದಿ ಪ ಮಂಗಳಾರತಿ ಎತ್ತಿ ತುಂಗಮಹಿಮ ಶ್ರೀ ರಂಗನ ರಾಣಿಗೆ ಅಂಗನೆ ತುಳಸಿಗೆ ಅ.ಪ. ಕಡಲೊಳು ಸುಧೆ ಹಿಡಿದು | ಬಂದನು ಕಡು ಕರುಣಿಯು ಒಲಿದು ಕುಡಿಗಣ್ಣಿನ ಜಲ ಸಡಿಲಲು ಕಲಶದಿ ಒಡನೆ ಜನಿಸಿದಂತ ಮಡದಿ ಶ್ರೀ ತುಲಸಿಗೆ 1 ಸುರರು ಪೂಮಳೆಗರೆಯೆ | ಹರುಷದಿ ಕರವ ಪಿಡಿಯೆ ವರವನು ಪಡೆದಳು ಶರಣರ ಪೊರೆಯಲು ಧರೆಯೊಳು ಬಂದಿಹ ಕರುಣಿ ಶ್ರೀ ತುಳಸಿಗೆ 2 ನಿತ್ಯ | ಸೇವಿಪ ಸಕಲ ಜನಕೆ ಸತ್ಯ ಭಕುತಿ ಮುಕುತಿಯಿತ್ತು ಸುಕೃತರ ಮಾಡುವ ಲಕುಮಿಕಾಂತನ ಪ್ರೇಮಸಕುತೆ ಶ್ರೀ ತುಳಸಿಗೆ 3
--------------
ಲಕ್ಷ್ಮೀನಾರಯಣರಾಯರು
ನಿತ್ಯ ಚಿದಾತ್ಮಕ ಸತ್ಯ ರುಕ್ಮಿಣಿಯರು ಜೊತ್ತಿಲಾಡುತ ತಮ್ಮ ಪತಿಯ ಉತ್ತಮಗುಣಗಣ ವರ್ಣಿಸುವದಕನುವೃತ್ತರಾಗುತ ವಾದಿಸಿದರು ಪ. ಅಕ್ಕ ಕೇಳರಿಗಳ ವಶರಾಗಿ ಸೆರೆಯೊಳು ಸಿಕ್ಕಿದವರ ಮಗನಿವನು ಚಿಕ್ಕತನದಿ ಗೋವ ವಕ್ಕಲಿಗರು ಬಾಯೊ- ಳಿಕ್ಕಿದನ್ನವನುಂಡದೇನು 1 ನಿರಪರಾಧಿಯನೀತ ತರಿದನೆಂಬಕೀರ್ತಿ ಬರದಂತೆ ಸೆರೆಯೊಳುದಿಸಿದ ಸುರರೆಲ್ಲ ಗೋಪರಾಗಿರುವುದರಿತು ಸೇವ- ಕರಿಗೊಲಿವುತ್ತಲಿ ಮೆರೆವ 2 ಪಾಂಡುಕುಮಾರನ ಭಂಡಿ ಹೊಡಲು ಪಾಲ ನುಂಡನು ವಿದುರನ ಗೃಹದಿ ಗಂಡರಾಳುವ ಗರತೇರ ನೆರೆದವನ ಹೆಂಡರಾಗಿರುವದಿನ್ನೆಂತು 3 ಭಕ್ತವತ್ಸಲನೆಂಬ ಬಿರುದ ತೋರುವದತಿ ಶಕ್ತಿ ಹರಿಗೆ ಶೋಭಾಕರವು ತೊತ್ತಿನ ಮಗನಿಂದಲಿತ್ತ ಕೌರವನೆಂಬ ತತ್ವ ತೋರಿದನಲ್ಲವೇನೆ 4 ಧರೆಯನಾಳದೆ ತನ್ನ ಪರಿವಾರ ಸಹಿತಾಗಿ ಶರಧಿಯೊಳಗೆ ವಾಸವಾಗಿ ದುರುಳ ಜರಾಸಂಧ ಬರುವ ಭೀತಿಯ ತಾಳಿ ಲ್ಲಿರುವ ಕಾರಣವೇನೆ ಜಾಣೆ 5 ಈರೆಂಟು ಮತ್ತೊಂದು ಭಾರಿ ಸಮರದಲ್ಲಿ ಬಾರುಹದ್ರಥನನ್ನು ಗೆಲಿದ ಧೀರನೀತನು ಭಕ್ತ ಮಾರುತಿಯಲಿ ಜಯ ತೋರಲಂತಿರುವನು ಕಾಣೆ 6 ಜಾರ ಚೋರರಿಗೆಲ್ಲ ಗುರು ನಿಮ್ಮ ಪತಿಯೆಂದು ವೂರನಾರಿಯರೆಲ್ಲ ನುಡಿವ ಕ್ರೂರ ಮಾತನು ಕೇಳಲಾರೆನಕ್ಕಯ್ಯ ಯಿ ನ್ಯಾರಿಗೆಂದುತ್ತರ ಕೊಡುವೆ 7 ಘತಿತ ಪಾವನ ಪದ್ಮಜಾತಜನಕ ಶ್ರೀ ಪತಿ ಸುಜನಾನಂದದಾಯಿ ವಿತತ ವಿಡಂಬನ ತೋರುವ ವೆಂಕಟ ಪತಿ ದೋಷಹರ ಶೇಷಶಾಯಿ 8 ಹಸೆಗೆ ಕರೆವ ಮತ್ತು ಆರತಿಯ ಹಾಡುಗಳು
--------------
ತುಪಾಕಿ ವೆಂಕಟರಮಣಾಚಾರ್ಯ