ಒಟ್ಟು 19050 ಕಡೆಗಳಲ್ಲಿ , 136 ದಾಸರು , 7377 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಿಳಿದು ನೋಡೊ ನಿನ್ನೊಳಗೆ ನಿಜಬಣ್ಣ ಬೆಳಗಿನೊಳು ಬೆಳಗುದೋರುತಿಹ್ಯ ಜಗಜೀವನ ಧ್ರುವ ಒಳಗೆ ವಿಷ ಮ್ಯಾಲೆ ವೇಷ ಇಳೆಯೊಳ್ಯಾಕೆ ಸೋಗು ತಾಪ ತಿಳಿದು ನಿಜವಾಗು 1 ಕೈಯೊಳು ಜಪ ಮೈಯೊಳು ಕೋಪ ಬಾಯೊಳಗ್ಯಾಕ ಮಂತ್ರ ದೇಹ್ಯೊಳಗಿಹ್ಯ ಸೋಹ್ಯವ ತಿಳಿದು ಧ್ಯಾಯಿಸೊ ಸೂತ್ರಾಂತ್ರಾ 2 ಮುಸುಕಿನೊಳು ಹಸಕವಿಟ್ಟು ಠಸಕ ದೋರಬ್ಯಾಡೊ ಉಸುರಿನೊಳು ಹಸನಗೊಂಡು ಮೀಸಲು ಮನಮಾಡೊ 3 ಹಿಡಿದು ಜನ ಪಡೆದಗುಣ ಒಡನೆ ಕೂಡೊ ಸುಪಥ ಹಿಡಿದು ಗುರುಪಾದ ಮಹಿಪತಿ ನೋಡೊ ಸ್ವಹಿತ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಿಳಿದು ವಿಚಾರಿಸು ವಿಶ್ವದಲ್ಲಿ ಹಲವು ಜೀವಿಗಳೊಂದೆ ಪ್ರಕಾರ ಚರಿಸುವದು ಪ ಇರವು ನೊಣ ಪೋದರೆ ಏನಾದರೂ ಕ್ಲೇಶ ಬರುವುದೇ ಪ್ರತ್ಯಕ್ಷ ನೋಡಿದರು ಭರದಿಂದ ಆಲಿಸು ದೇಹ ಮಾತುರ ಬ್ಯಾರೆ ಇರುವದಲ್ಲದೆ ಒಳಗೆ ಚೇತನಾಡುವದೊಂದೆ 1 ಕೂಡಿಕೊಂಡವು ತಮ್ಮತಮ್ಮೊಳಗೆ ಭೂತಗಳು ಆಡಲೇನದು ಪೂರ್ವದ ನಿರ್ಮಾಣ ನಾಡೊಳಾಗಿದ್ದನಿತೆ ಸಮ್ಮಂಧವಲ್ಲದೆ ಬೀಡು ತೊರದಾಮ್ಯಲೆ ಬಿಂಕವೆತ್ತಣದೊ 2 ಹರಿಮಾಯದಿಂದಲಿ ನಾನು ನನ್ನದು ಎಂಬ ಗರುವಿಕೆ ಪುಟ್ಟುವದು ಮೋಹ ಪೆಚ್ಚಿ ನಿರಯದೊಳಿಳಿಯದೆ ವಿಜಯವಿಠ್ಠಲನ ಸ್ಮರಣೆಯಲಿ ಕುಣಿದಾಡು ಎಲ್ಲ ಸಮನ ನೋಡು3
--------------
ವಿಜಯದಾಸ
ತಿಳಿದುಕೊಳ್ಳಿ ಖೂನ ಬಲ್ತು ನಿಜ ಜ್ಞಾನ ಧ್ರುವ ಹಾದಿ ಅದೆ ಹಿಂದಗಾಧ ಅದೆ ಮುಂದೆ ಭೇದಿಸಿನ್ನು ತಿಳಿದುಕೊಳ್ಳಿ ಗುರುಕೃಪೆಯಿಂದ 1 ಲಬ್ಧ ಅದೆ ಹಿಂದೆ ಶಬ್ದ ಅದೆ ಮುಂದೆ ಲಬ್ಧವಾಗಿ ಕೇಳಿಕೊಳ್ಳಿ ಗುರುದಯದಿಂದ 2 ಅರ್ಥ ಅದೆ ಹಿಂದೆ ಸ್ವಾರ್ಥ ಅದೆ ಮುಂದೆ ಅರ್ತು ಇದೆ ಕೇಳಿಕೊಳ್ಳಿ ಗುರು ಜ್ಞಾನದಿಂದೆ 3 ಗುಂಭ ಅದ ಹಿಂದೆ ಡಂಭ ಅದೆ ಮುಂದೆ ಇಂಬು ಇದೇ ತಿಳಿದುಕೊಳ್ಳಿ ಗುರು ಜ್ಞಾನದಿಂದೆ 4 ನೋಟ ಅದೆ ಮುಂದೆ ಕೂಟ ಅದೆ ಹಿಂದೆ ನೀಟವಾಗಿ ಗುರುವಿಗೆ ಕೇಳಬೇಕು ಒಂದೆ 5 ಮನವು ಅದೆ ಮುಂದೆ ಘನವು ಅದೆ ಹಿಂದೆ ತನುವಿನೊಳು ಮಾಡಿಕೊಳ್ಳಿ ಖೂನ ನಿಜ ಒಂದೆ 6 ದೇಹ್ಯ ಅದೆ ಮುಂದೆ ಸೋಹ್ಯ ಅದೆ ಹಿಂದೆ ಸೋಹ್ಯ ದೋರಿಕೊಡುವ ಮಹಿಪತಿ ಗುರು ತಂದೆ7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಿಳಿಯ ಬರದೆಲೆ ಮನವೆ, ತೀರ್ಥ ಯಾತ್ರೆಯ ಫಲವು ಪ ಸುಲಭದಲಿ ಸದ್ಗತಿಯ ಸೂರೆಗೊಂಬುವರಿಗಲ್ಲದೆ ಅ ನೂರೆಂಟು ತಿರುಪತಿಯ ಯಾತ್ರೆಯನು ನಾನೊಲ್ಲೆವಾರದೊಂದ್ಹೊತ್ತು ಉಪವಾಸವನು ನಾನೊಲ್ಲೆಸಾರ ರೇಣುವೆಯುಂಡು ಕಡೆಯ ಬಾಗಿಲ ಕಾಯ್ವನೀರ ಗೌಡಿಯ ಮಗನ ಮಗನ ಮಗನೆನಿಸೆನ್ನ1 ಪಂಚಾನ್ನ ಪರಮಾನ್ನವಾವುದನು ನಾನೊಲ್ಲೆಚಂಚಲಗೊಳಿಸುವ ಭೋಗ ಭಾಗ್ಯವ ನಾನೊಲ್ಲೆಹಿಂಚದೆ ದಾಸೋಹ ಮಾಳ್ಪವರ ಮನೆಯ ಕಾಯ್ವಉಂಚ ಗೌಡಿಯ ಮಗನ ಮಗನ ಮಗನೆನಿಸೆನ್ನ2 ಪಟ್ಟಾವಳಿ ದುಕೂಲವನು ನಾನೊಲ್ಲೆಪಟ್ಟೆ ನಾಮದ ಬರಿಯ ಪ್ರದರ್ಶನ ನಾನೊಲ್ಲೆಸೃಷ್ಟಿಯೊಳು ನಿನ್ನ ಭಜಿಪ ಭಕ್ತರ ಮನೆ ಕಾಯ್ವಮುಟ್ಟುಗೌಡಿಯ ಮಗನ ಮಗನ ಮಗನೆನಿಸೆನ್ನ 3 ಮುತ್ತಿನಾಭರಣ ತಾಳಿ ಪದಕವ ನಾನೊಲ್ಲೆಸತ್ತಿಗೆಯ ನೆರಳಿನಲಿ ಸಾಗುವುದ ನಾನೊಲ್ಲೆನಿತ್ಯ ನಿನ್ನ ನೆನೆವರ ಮನೆಯ ಬಾಗಿಲ ಕಾಯ್ವತೊತ್ತುಗೌಡಿಯ ಮಗನ ಮಗನ ಮಗನೆನಿಸೆನ್ನ 4 ಆಶೆ ಪಾಶಗಳೆಂಬ ಜಂಜಾಟ ನಾನೊಲ್ಲೆದೇಶಾನುದೇಶಗಳ ತಿರುಗಾಟ ನಾನೊಲ್ಲೆಶ್ರೀಶಾದಿಕೇಶವನ ಭಜಿಪರ ಮನೆಯ ಕಾಯ್ವಕಸಗೌಡಿಯ ಮಗನ ಮಗನ ಮಗನೆನಿಸೆನ್ನ 5
--------------
ಕನಕದಾಸ
ತಿಳಿಯದಾಯಿತು ವಯಸು ಕಳೆದು ಹೋಯಿತು ಪ ಕಳವಳಿಸುತ ಕಡೆಗಾಣದೆ ಬಳಲಿ ತೊಳಲಿ ಪಾಪ ಹೆಚ್ಚಿ ಅ.ಪ ಸತಿಸುತರೆಂಬ ಬಲೆಗೆ ಸಿಲುಕಿ ಅತಿಶಯ ಮೋಹದಲಿ ಮುಳುಗಿ ಪಥಿಕರಾಡುವಂತೆ ನಡೆದು ಪತಿತನಾಗಿ ನಿಜದ ಮರ್ಮಾ 1 ಕೆಲದಿನ ಆಟದಿ ಲಲನೆಯರ ಕೂಟದಿ ಹಲವು ವಿದ್ಯೆಯ ಕಲಿತು ಪರರ ಒಲಿಸಿ ಸ್ತ್ರೋತ್ರಮಾಡಿ ಬೇಡಿ ಫಲವ ಕಾಣಲಿಲ್ಲ ಕೊನೆಗೆ ಹಲುಬಿ ಹಲುಬಿ ಬಾಯಿನೊಂದು 2 ನೀತಿ ಹೇಳುತಾ ಪರರ ನಿಂದೆಗೆಯ್ಯುತಾ ಗುರುಮುಖದಲಿ ಪರಮತತ್ವ 3 ಮತ್ತನಾಗುತ ದುರಾಸಕ್ತನೆನಿಸುತ ನಿತ್ಯಕರ್ಮವನ್ನು ತೊರೆದು ಸತ್ಯಶಮದಮಗಳ ಮರೆದು ಚಿತ್ತದಲಿ ನಿರ್ಮಲನಾಗದೆ ಚಿಂತಿಸುತಲಿ ನಿಜದ ನೆಲೆಯ 4 ಗುರುರಾಮವಿಠಲನ ಶ್ರೀಚರಣಕಮಲ ಸ್ಮರಣೆಗೈದು ಹೊರಗು ಒಳಗು ಒಂದೆ ವಿಧದಿ ಚರಿಸಿ ಸೌಖ್ಯಪಡೆವ ಬಗೆಯ 5
--------------
ಗುರುರಾಮವಿಠಲ
ತಿಳಿಯದು ಅಟಾ ಶ್ರೀಹರಿ ನಿನ್ನಾ| ನಳಿನ ಸಂಭವ ಮೊದಲಾದ ನಿರ್ಜರರಿಗೆ ಪ ಮೊತ್ತವೆನಿಪ ಕ್ಷೀರ ಸಾಗರ ಮಧ್ಯಲಿ| ಉತ್ತಂಗವಾದ ಶೇಷನ ಮಂಚದ ಮ್ಯಾಲೆ| ಸುತ್ತಸನಕಾದಿ ಭಾಗವತರ ಸಂಗ| ನಿತ್ಯವೆರಸಿ ಕ್ರೀಡಿಸುವದ ಬಿಟ್ಟು| ಮತ್ತೆ ವನದೊಳಾಡುವರೇ ತೃಣಗಳ| ಕಿತ್ತಿ ಹಾಸಿಕೆ ಮಾಡುವರೇ ಕಪಿಸಂಗ ಅತ್ಯಂತ ದಲ್ಹಿಡುರೇ ಕುಬ್ಸಿಯಾ| ವತ್ತಿನೀ ಅಳುವರೇ1 ಗಂಭೀರವಾದ ಸುರವರದಿಂದ ನಾರದ| ತುಂಬುರ ಮಾಳ ಗೀತವ ಕೈಕೊಂಡು| ಕೌಸ್ತುಭ ಮಾಲೆಯ ಹಾಕಿ| ವಾಹನ ಬಿಟ್ಟು| ಕೊಂಬು ಕೊಳನ ನೂದುರೇ ಗುಂಜಿಯಾ ವಣಿ ಬಿಂಬಸರವ ಹಾಕುತೀ ಕಲಿಯಾದಾ| ಕಂಬಳಿ ಯನುರೆ ಪೊದ್ದು ವಸ್ತ್ರದಿ ಮರ| ಸಂಭ್ರಮ ವೇಸರೇ 2 ಸುಜನ ಸಮರ್ಪಿಪ ಊಟವ| ದಯದಿಂದ ಕೈಕೊಂಡು ತೃಪ್ತನಾಗಿ| ಶ್ರೀಯಾ ಕುಚ ಕೊಡಮ್ಯಾಲ ಕರವನಿಟ್ಟು| ಜಯವಿಜಯ ವೆಂಬದ್ವಾರ ಪಾಲರಿರೆ| ಗೋವಲ್ಲರೆಂಜಲ ತಿಂಬುದೇ ಸರಗಹಗ| ಕೈಯ್ಯಲಿಂದ ತೊಳೆವರೇ ಮುದದಿ| ಬಲಿಯ ಬಾಗಿಲ ಕಾವುರೇ ಮಹಿಪತಿ ನಂದನ ಜೀವನ-ನೋ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಿಳಿಯದೆ ಬೊಗಳುವದೆಲ್ಲಲ್ಲಲ್ಲ ನಿಜ ತಿಳಿದರೆ ವಲಿತಾ ಬ್ಯಾರಿಲ್ಲ ಪ ಮುಲ್ಲ ಶಾಸ್ತ್ರದ ಮೂಲವ ತಿಳಿಯದೆ ಜೊಳ್ಳುಕೂಗಿಗೆ ಮುಕ್ತಿಲ್ಲಿಲ್ಲ ಅ.ಪ ಭ್ರಷ್ಟತ್ವವಳಿಯುದೆ ಅಲ್ಲಲ್ಲ ಮುಂದೆ ನಿಷ್ಠನಾಗಲು ಕಷ್ಟ ಇಲ್ಲಲ್ಲ ದುಷ್ಟತನಳಿದುಳಿ ಬಿಸ್ಮಿಲ್ಲ ಸತ್ಯ ಶಿಷ್ಟರೊಳಾಡ್ವುದೆ ಸೊಲ್ಲಲ್ಲ 1 ಕಾಲನ ಗೆಲುವದೆ ನಿಜಮೌಲ ವನ ಮಾಲನ ಭಜನದೆ ತಿಳಿ ಲಾಯಿಲಾ ನೀಲಶಾಮನ ಮಹದಾಲಯದಿಟ್ಟು ಸು ಶೀಲನಾದವನೆ ಮಹದ್ದೌಲ 2 ಮಹಮ್ಮದನಾಗ್ವದೆ ಸೊಲ್ಲಲ್ಲ ತನ್ನ ಅಹಮ್ಮದನಾಗ್ವದೇಕರ್ಬಲ ಅಹಂ ವಹಂ ನೀಗಿ ರಾಮರಹೀಂ ನೆಲೆ ತಿಳಿ ಭವಜನುಮ ಮುಂದಿಲ್ಲಲ್ಲ 3
--------------
ರಾಮದಾಸರು
ತಿಳಿಯದೊ ನಿನ್ನಾಟ ತಿರುಪತಿಯ ವೆಂಕಟ ಪ. ನೀರೊಳು ಯಳವ ಮೋರೆಯ ನೆಳಲ ನೋಡುವಿ ಸುಳಿವರಂಬುಧಿ ಇಳೆಯನಾಳುವ ಭಳಿರೆ ಭಾರ್ಗವ ಖಳನ ಛೇದಿಸಿ ಕೊಳಲ ದನಿಯನು ನಳಿನಮುಖಿಯರಿಗೆ ನಾಚಿಸುವದಿದೊಳಿತೆಯೇಳು ಹವಣಗಾರನೆ 1 ಆರುಬಲ್ಲರು ನಿನ್ನ ಶ್ರೀ ಲಕ್ಷ್ಮಿಯ ಮನಸಿಗೆ ತೋರದಿಹ ಪರಬ್ರಹ್ಮ ಉಳಿದವರು ಬಲ್ಲರೆ ನೀರಜಾಸನ ಬೊಮ್ಮಾ ಇದು ನಿಮ್ಮ ವರ್ತಿ ಭಾರ ಬೆನ್ನಲಿ 2 ಭೂರಿ ಮಾರ ಜನಕನೆ ಮೆರಿವೆ ಕೋಮಲಾಂಗನೆ 3 ಸಕಲ ಮಾಯವಿದೇನೊ ತ್ರಿವಿಕ್ರಮನ ಪಾಲಿಸಿ ಸಕಲನುಳಿಹಿದೆ ನೀನು ಭಕುತಿಯಿಂದಲಿ ಸ್ತುತಿಪರಿಗೆ ಸುರಧೇನು ಸುಮನಸರ ಭಾನೂ ಅಖಿಳವೇದೋದ್ಧಾರ ಗಿರಿಧರ 4 ನಿಖಿಳ ಭೂಮಿಯ ತಂದ ನರಹರಿ ಯುಕುತಿಯಲಿ ಆಳಿದೆ ಭಕ್ತವೃಂದಕೆ ಸುಖವ ತೋರುವ ವೇಣು ಗೋಪಾಲನೆ ರುಕುಮನನುಜೆಯ ರಮಣ ಬೌದ್ಧನೆ ಲಕ್ಷುಮಿಯರಸನೆ ಕಲ್ಕಿ ರೂಪನೆ 5 ನಿನ್ನ ರೂಪವಿದೆಲ್ಲಾ ನೋಡುವರಿಗೆ ಕಣ್ಣು ಸಾಸಿರವಿಲ್ಲಾ ಪಾಡಿ ಪೊಗಳಲು ರಂನ್ನಘಾತಿದೆನಲ್ಲಾ ಕಂಣಮುಚ್ಚದೆ ಬೆಂನ್ನ ತೋರುವೆ ಮಂಣ ಕೆÉದಿರದಿ 6 ಚಿಂಣಗೊಲಿದನೆ ಸಂಣವಾಮನ ಪುಣ್ಯಪುತ್ರನೆ ಹಂಣುಸವಿದನೆ ಬೆಂಣೆಗಳ್ಳನೆ ಹೆಂಣುಗಳ ವ್ರತಗಳೆವ ಹೆಳವನಂದು ಗೆಲಿಸಿದ ರಂಗ ದೇವೋತ್ತುಂಗನೆ 7
--------------
ಹೆಳವನಕಟ್ಟೆ ಗಿರಿಯಮ್ಮ
ತಿಳಿಯದೋ ನಿನ್ನಾಟ ತಿರುಪತಿಯ ವೆಂಕಟ ಪ ಪೊಳೆವ ನೀರೊಳು ಗೆಲುವ ಮೋರೆಯನೆಲವ ನೋಡುವ ಸುಳಿವ ಕಂಬದಿ |ಇಳೆಯನಳೆಯುವ ಭಳಿರೆ ಭಾರ್ಗವ ಖಳನ ಛೇದಿಸಿ ಕೊಳಲ ಧ್ವನಿಗೆ ||ನಳಿನಮುಖಿಯರ ನಾಚಿಸುವ ಬಲು ಹಯದಳದ ಬಹು ಹವಣಿಗಾರನೆ ಅ .ಪ. ಬೊಮ್ಮ ಭಾರ ಬೆನ್ನಿಲಿಕೋರೆ ದಾಡೆಯ ನಾರಸಿಂಹನೆ |ಧರೆಯ ಬೇಡಿದ ಧೀರ ಪುರುಷನೆವಾರಿ ಬಂಧನ ಮಾರಜನಕನೆ ||ನಾರಿಯರ ವ್ರತವಳಿದು ಕುದುರೆಯನೇರಿ ಮೆರೆಯುವ ಸುಂದರಾಂಗನೆ 1 ಅಖಿಳ ಭೂಮಿಯ ತಂದ ನರಹರಿ |ಯುಕುತಿಯಲಿ ನೆಲನಳೆದ ಭಾರ್ಗವಮುಕುತಿಗೋಸುಗ ಫಲವ ಸವಿದನೆ ||ರುಕುಮನನುಜೆಯ ರಮಣ ಬೌದ್ಧನೆಲಕುಮಿ ರಮಣನೆ ಕಲ್ಕಿರೂಪಿಯೆ 2 ಬನ್ನ ಬಡುಕನೆ ||ಹೆಣ್ಣುಗಳ ವ್ರತ ಕೆಡಿಸಿ ತೇಜಿಯಬೆನ್ನನೇರಿದ ವ್ಯಾಸ ವಿಠ್ಠಲ* 3
--------------
ವ್ಯಾಸವಿಠ್ಠಲರು
ತಿಳಿಯಲೋ ರನ್ನಾ ನಿನ್ನೊಳು ನಿನ್ನ ಪ ಅನ್ನವ ನೀಡು ತುಪ್ಪವ ಕೊಡುಚೆನ್ನಾಗಿ ಉಣ್ಣುವವನಾರೋ ಅವನಾರೋ 1 ಹೋಳಿಗೆ ಹಿಸುಕಿ ಹಾಲೊಳು ಕುಸುಕಿಹೋಳಿಗೆ ಉಂಬವನ್ಹೆಸರೇನೋ ಹೆಸರೇನೋ2 ಜಡಕೆಯು ಇಲ್ಲಾ ಇದೆಲ್ಲಾಮೃಢ ಚಿದಾನಂದ ನೀನೆನ್ನು ನೀನೆನ್ನು 3
--------------
ಚಿದಾನಂದ ಅವಧೂತರು
ತಿಳಿಯಿರೋ ಸಮ್ಮಿಂದ ಹೇಳುವೆ ಸುಧಾನಂದ ಪ ಉಂಬವ ತಾನಾರು ಉಣಬಲ್ಲವನಾರುಸಂಭವಿಸುವನಾರು ಸಮನಿಸಿ ಇಂಬಾಗಿಹನಾರು 1 ಕಣ್ಣಿಂದಲೆ ನೋಡಿ ನೋಡುವ ಕಣ್ಣು ಕಾಂಬುದೆ ಖೋಡಿಕಣ್ಣೊಳಗದೆ ನೋಡಿ ಕಂಡಾ ಕಣ್ಣಹುದೆಂದಾಡಿ 2 ಕಿವಿಯಿಂದಲೆ ಕೇಳಿ ಕಿವಿಯನು ಕಿವಿಯೆ ಗಯ್ಯಾಳಿಕಿವಿಯೆ ದಿವಾಳಿ ಕಿವಿಗಾ ಕಿವಿಗರಿವಹುದ್ದೇಳಿ 3 ನಾಲಗೆ ನುಡಿಯಿರಲಿ ನುಡಿವುದೆ ನಾಲಗೆ ಬರಿ ತೊಗಲುನಾಲಗೆಯೊಳಗಿರಲು ಮೂಲದ ನಾಲಗೆಯಲಿ ಬರಲು 4 ಮೂಗಿನ ಮೂಲಕ ಪ್ರಾಣ ಅರಿವಡೆ ಮೂಗು ಬಲ್ಲುದೆ ಕೋಣಮೂಗರಿದವ ಜಾಣ ಮೂಗದು ನಿರ್ವಾಣ5 ತನುವಿನ ಒಳಗಿರ್ದು ಚೇತನ ಜನಿಸುತಲಿರುತಿರ್ದುಇನಿತಾದಲಿರ್ದು ಬೆಳಗುವ ತಾನೆ ತಾನಿರ್ದು 6 ರೂಪಕೆ ವಿರಹಿತನೆ ತೋರ್ಪಾ ರೂಪವೇ ತಾನಿಹನಾಲೇಪಕೆ ದೂರಿಹನಾ ಚಿದಾನಂದಪತಿ ಗುರುವವನಾ7
--------------
ಚಿದಾನಂದ ಅವಧೂತರು
ತಿಳಿಯೊ ಮನವೆ ಯುಕ್ತಿಯ ಕಳಿಯೋ ನೀ ವಿಷಯಾಸಕ್ತಿಯ ಬಲಿಯೊ ಭಕ್ತಿಯ ಧ್ರುವ ಪಥ ಹೊಂದು ಈಗ ಹಣ್ಣು ಶರೀರಾಗದಾಗ ನಿನ್ನೊಳು ತಿಳಿ ಬ್ಯಾಗ 1 ಬಲವು ದೇಹಲಿದ್ದಾಗ ಬಲಿಯೊ ಭಾವ ಭಕ್ತಿಲೀಗ ನೆಲೆ ನಿಭಗೊಂಬುವ್ಹಾಂಗೆ ಸಲೆ ಮರೆಹೊಗು ಹೀಂಗ 2 ಬಂದ ಕೈಯಲಿ ಬ್ಯಾಗ ಹೊಂದು ಸದ್ಗುರು ಪಾದೀಗ ಎಂದೆಂದಗಲದ್ಹಾಂಗ ಸಂಧಿಸು ಘನ ಹೀಂಗ 3 ಸೋಹ್ಯದೋರುವ ಕೈಯ ಧ್ಯಾಯಿಸೊ ನೀ ಶ್ರೀಹರಿಯ ನ್ಯಾಯ ನಿನಗೆ ನಿಶ್ಚಯ ಇಹಪರಾಶ್ರಯ 4 ಗುರುಪಾದ ಕಂಡಾಕ್ಷಣ ಎರಗೊ ಮಹಿಪತಿ ಪೂರ್ಣ ಹರಿಯೊ ಅಹಂಭಾವಗುಣ ಬೆರಿಯೊ ನಿರ್ಗುಣ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಿಳಿಯೋ ಮನವೇ ನಿಜ ಘನವಾ | ಕಳಿಯೋ ಹಮ್ಮಿನ ಅವಗುಣವಾ ಪ ಸದ್ಗುರು ಶರಣವ ನೀ ಬ್ಯಾಗ | ಸದ್ಗುಣದಲಿಹುದು ಜಗದೊಳಗ | ತದ್ಗತ ಬೋಧವರೆದು ಈಗ | ಸದ್ಗತಿ ಕಾಣಿಸುವದು ನಿನಗ 1 ಪಿಡಿಯದೆ ನಾನಾ ಬಯಕೆಯನು | ತಡೆಯದೆ ಬಿಡು ಕುಜನಾಶ್ರಯನು | ಇಡು ಗುರು ಪದ ಭಕುತಿಯನು | ಪಡೆ ದೃಷ್ಟಿಯ ಘನ ಸಮತೆಯನು 2 ಬ್ಯಾರೆ ಬ್ಯಾರೆ ನಗದಾಕಾರಾ | ತೋರಿದರೇನದು ಬಂಗಾರಾ | ಈ ರೀತಿ ಮಾಯದ ವ್ಯವಹಾರಾ | ಈರೇಳು ಜಗ ಚಿನ್ಮಯ ಸಾರಾ 3 ಗೋಡಿಯಿಂದಲಿ ಚಿತ್ರಗಳೆಲ್ಲಾ | ರೂಢಿಸಿ ದೋರಿತು ಜನರೆಲ್ಲಾ | ಆಡಲು ಯರಡಕ ಹೊರತಿಲ್ಲಾÀ | ನೋಡಲಾಯಿತು ತಾನೇಯಲ್ಲಾ 4 ಹಾಲುಕ್ಕಿದ ಸೋರೆಯ ಪರಿಯಾ | ಜ್ಯಾಳಿಸಬ್ಯಾಡಾ ಯುವ ಬರಿಯಾ | ಕೇಳಿಕೋ ಮಹಿಪತಿ ಸುತ ಧೋರಿಯಾ | ಬಾಳು ಗಳೆದು ದುಸ್ತರಿಯಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಿಳಿವರು ಮನುಜರು ತಿಳಿದೊಮ್ಮೆ ತಿಳಿಯರು ನಳಿನಾಕ್ಷ ನಾಶರಹಿತನಲ್ಲದಿಲ್ಲವೆಂದು ಪ ಅರ್ಕಜಂಬುಜ ಬಲ್ಲ .................. ಮಾರ್ಕಂಡೆಯ ಮುನಿ ಬಲ್ಲ ಮಹಿ ಬಲ್ಲಳು ಅರ್ಕ ತನುಜ ಬಲ್ಲ ಅಂಬರೀಷ ಬಲ್ಲ ದೇ ವರ್ಕಳವೊಡಿಯ ಮಾಧವನಲ್ಲದಿಲ್ಲವೆಂದು 1 ವಾಯುನಂದನ ಬಲ್ಲವಾ............. ಯತಿ ಬಲ್ಲ ಕರಿ ಬಲ್ಲನೊ ರಾಯ ಧರ್ಮಜ ಬಲ್ಲ ರಾಜ ರಾಜನು ಬಲ್ಲ ಮಾಯಾರೂಪತಾಳಿ ಹರಿಯಲ್ಲದಿಲ್ಲವೆಂದು2 ಗರುಡದೇವನು ಬಲ್ಲ ಗಂಗಾತನಯ ಬಲ್ಲ ಉರಗಾಧಿಪತಿ ಬಲ್ಲ ಉಮೆ ಬಲ್ಲಳು ................ಶರಣರಣ್ಣಪ್ಪ ಪರಮಾತ್ಮ -ಇಂ ದಿರಾಪತಿಯಲ್ಲದಿಲ್ಲವೆಂದು3 ಪಾರಾಶರನು ಬಲ್ಲ ಪ್ರಹ್ಲಾದ ಭಕ್ತ ಬಲ್ಲ ನಾರದಮುನಿ ಬಲ್ಲ ನರಬಲ್ಲನು ವಾರಿಜಸಖ ಬಲ್ಲ ವಶಿಷ್ಠ ತಪಸಿ ಬಲ್ಲ ಧಾರುಣಿಕರ್ತೃ ಶ್ರೀಧರನಲ್ಲದಿಲ್ಲವೆಂದು 4 ಬಲಿಚಕ್ರವರ್ತಿ ಬಲ್ಲ ಭೃಗುಋಷೇಶ್ವರ ಬಲ್ಲ ಕಳಸಸಂಭವ ಬಲ್ಲ.................. ಬಲ್ಲನು ಗಿಳಿಮುಖದವ ಬಲ್ಲ ಗೌತಮ ಮುನಿ ಬಲ್ಲ ಇಳಿಗೆ ಆಧಾರ ಶ್ರೀಕೃಷ್ಣನಲ್ಲದಿಲ್ಲರೆಂದು 5 ಉದಧಿರಾಯನು ಬಲ್ಲ ಉಧ್ಧವ ಯದು ಬಲ್ಲ ವಿಧುಶೇಖರ ಬಲ್ಲ ವಿದುರ ಬಲ್ಲ ಪದುಮನಾಭನೆ ಪರಗತಿಯಲ್ಲದಿಲ್ಲವೆಂದು 6 ಜನಕರಾಜನು ಬಲ್ಲ ಜಾಹ್ನವಿನದಿ ಬಲ್ಲಳು ದನುಜೋತ್ತಮ ಬಲ್ಲ ವಾಲ್ಖ್ಯ ಬಲ್ಲ ಅನುಸಾಲ್ವಪತಿ ಬಲ್ಲ ಅಜಮಿಳನು ಬಲ್ಲ ಜನಸ್ಥಿತಿಲಯ ಜನಾದರ್Àನ ಅಲ್ಲದಿಲ್ಲವೆಂದು7 ಜಮದಗ್ನಿ ಬಲ್ಲ ಜಾತವೇದಸ ಬಲ್ಲ ಸಾಮಾವರ್ತಿ ಬಲ್ಲ ಶಶಿ ಬಲ್ಲನು ಆ ಮಹಾಕಪಿ ಬಲ್ಲ ಅಕ್ರೂರನು ಬಲ್ಲ ರೋಮ ರೋಮ ಬ್ರಹ್ಮಾಂಡ ರಾಮನಲ್ಲದಿಲ್ಲವೆಂದು 8 ಪುಂಡರೀಕ ಬಲ್ಲ ದಾ................... ವಂದಾರವ ಬಲ್ಲ ಸಿರಿ ಬಲ್ಲಳು .............. ಆಶಾ ಶ್ರೀಶ ವಿಜಯವಿಠ್ಠಲೇಶನಲ್ಲದಿಲ್ಲವೆಂದು
--------------
ವಿಜಯದಾಸ
ತಿಳಿವಳಿಕೆಯಲಿ ನಡಿ ಮನುಜಾ ಯಮ-ನಲಿ ಆಗೊ ಭವಣೆಯು ತಪ್ಪದು ನೈಜಾ ಪ. ಸುಳ್ಳು ಮಾತುಗಳಾಡೋರಿಲ್ಲೆ ನಿನ್ನಹಲ್ಲು ಕಿತ್ತಿಸಿ ಕಡಿ ಘಾಕುವರಲ್ಲೆಕಳ್ಳತನವ ಮಾಡೋದಿಲ್ಲೆ ಬೆನ್ನಸೆಳ್ಳಿಯಬ್ಬಿಸೆ ಕೈಯ ಕಡಿಸುವರಲ್ಲೆ 1 ದತ್ತಾಪಹಾರ ಮಾಡೋದಿಲ್ಲೆ ಜಿಂಹ್ವಕತ್ತರಿಸುವರೆಲೊ ಅಂತಕರಲ್ಲೆವೃತ್ತಿಛೇದನ ಮಾಡೋದಿಲ್ಲೆ ನಿನ್ನಎತ್ತಿ ಹಾಕುವರೊ ಕುಂಭೀಪಾಕದಲ್ಲೆ 2 ಪರಸತಿಯರನಪ್ಪೋದಿಲ್ಲೆ ನಿನ್ನಉರಿವ ಉಕ್ಕಿನ ಕಂಭ ತೆಕ್ಕಿಸೋರಲ್ಲೆಮರವಿ ಮೋಸವ ಮಾಡೋದಿಲ್ಲೆ ನಿನ್ನಪರಿಪರಿ ಭವಣಿಯ ಬಡಿಸುವರಲ್ಲೆ 3 ಪ್ರಾಣಹಿಂಸೆಯ ಮಾಡೋದಿಲ್ಲೆ ಕಲ್ಲಗಾಣದೊಳಗೆ ಇಕ್ಕಿ ತಿರಗಿಸೋರಲ್ಲೆಮಾನಿನಿಯರ ನೋಡೋದಿಲ್ಲೆ ಶಸ್ತ್ರಪೋಣಿಸಿ ಕಂಣಾ ಮೀಟಿಸುವರೋ ಅಲ್ಲೆ 4 ಹೇಸಿ ವಿಷಯ ನಂಬೋದಿಲ್ಲೆ ಸೀಸ ಕಾಶಿ ಹೊಯ್ಯುವರೆನೊ ನಿನ್ನ ಬಾಯಲ್ಲೆದೂಷಣ ನಿಂದಗಳಿಲ್ಲೆ ಬಲುದೋಷಿಯೆನ್ನುತ ನಿನ್ನ ಘಾಸಿಪರಲ್ಲೆ 5
--------------
ಐಹೊಳೆ ವೆಂಕಟೇಶ