ಒಟ್ಟು 3287 ಕಡೆಗಳಲ್ಲಿ , 121 ದಾಸರು , 2495 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೃಥಾಮಾಡಬೇಡ ಈ ಜನ್ಮವು ಸದಾಬರದು ಮೂಢಾ ಪಅಧೋಕ್ಷಜನ ಮೃದು ಪಾದಾರವಿಂದಗಳಯಥಾರ್ಥದಿಂ ಭಜಿಸಿ ಕೃತಾರ್ಥನಾಗದೆ 1ಸುಧಾರದನಗೃಹಪದಾರ್ಥದಾಶದಿಂಮದಾಂಧದಿಂಗುರುಬುಧಾಳಿ ಸೇರದೆ2ಪಿತಾ ಮಾತಾ ಹಿತ ಸುತಾದಿ ಬಂಧುಗಳ್ಹಿತಾರ್ಥರೆಂದು ಪರಗತೀ ನೀ ಕಾಣದೆ 3ಹರೆದುರಿತಪರಿಹರೆ ತುಲಸಿರಾಮಧೊರೆಯೆಂದು ನೀ ಮೊರೆಹೊಕ್ಕಡೆ 4
--------------
ತುಳಸೀರಾಮದಾಸರು
ವೃಂದಾವನದಲಿ ನಿಂತ ಸುಯತಿವರನ್ಯಾರೇ ಪೆÉೀಳಮ್ಮಯ್ಯ ಪವಂದಿಪ ಜನರಿಗೆ ನಂದ ಕೊಡುವೊ ರಾಘ -ವೇಂದ್ರ ಮುನಿವರನೀತ ನೋಡಮ್ಮ ಅ.ಪಇಂದಿರೆ ರಮಣನ ಛಂದದಿ ಭಜಿಸ್ಯಾ-ನಂದದಲಿಹನ್ಯಾರೇ ಪೇಳಮ್ಮಯ್ಯಾನಂದತೀರ್ಥಮತ ಸಿಂಧುವರಕೆ ಬಾಲ -ಚಂದಿರನೆನಿಸಿಹನ್ಯಾರೇ ಪೇಳಮ್ಮಯ್ಯಮಂದಜನವಹರಿ ಕಂದುಗೊರಳರವೃಂದದಿ ಶೋಬಿಪನ್ಯಾರೆ ಪೇಳಮ್ಮಯ್ಯಹಿಂದೆ ವ್ಯಾಸಮುನಿ ಎಂದು ಕರೆಸಿದ ರಾಘ -ವೇಂದ್ರ ಗುರುವರ - ನೀತ ನೋಡಮ್ಮ 1ನತಿಸುವ ಜನರಿಗೆ ಸತಿಸುತರನು ಬಲುಹಿತದಲಿ ನೀಡುವನ್ಯಾರೇ ಪೇಳಮ್ಮಯ್ಯಪ್ರತಿದಿನ ತನ್ನನು ಮತಿಪೂರ್ವಕ ಬಲುತುತಿಪರ ಪಾಲಿಪನ್ಯಾರೇ ಪೇಳಮ್ಮಯ್ಯಮತಿಯುತಪಂಡಿತ ತತಿಯಭಿಲಾಷವಸತತ ಪೂರ್ತಿಪನ್ಯಾರೇ ಪೇಳಮ್ಮಯ್ಯಕ್ಷಿತಿಸುರರಿಗೆ ಸದ್ಗತಿದಾಯಕ ಮಹಯತಿಕುಲವರ ಗುರುರಾಯ ಕಾಣಮ್ಮ 2ಮಾತೆಯು ಸುತರಲಿ ಪ್ರೀತಿಗೊಳಿಸುವತಾತನ - ತೆರದಿಹನ್ಯಾರೇ ಪೇಳಮ್ಮಯ್ಯಪ್ರೇತನಾಥ ಮಹ ಭೂತಗಣಗಳಭೀತಿಯ ಬಿಡಿಸುವನ್ಯಾರೆ ಪೇಳಮ್ಮಯ್ಯಭೂತಳ ಜನಕೃತಪಾತಕಕಾನನವೀತಿಹೋತ್ರತೆರನ್ಯಾರೇ ಪೇಳಮ್ಮಯ್ಯದಾತಗುರು ಜಗನ್ನಾಥವಿಠಲ ನಿಜದೂತ ಜನಕ ಮಹದಾತನೀತಮ್ಮ 3
--------------
ಗುರುಜಗನ್ನಾಥದಾಸರು
ವೃಂದಾವನದಲಿನಿಂದುರಾಜಿಪನ್ಯಾರೆ ಪೇಳಮ್ಮಯ್ಯಪಬಂದ ಜನರಘ - ವೃಂದ ತಳೆದು ಅ -ನಂದವಕೊಡುವೊ ರಾಘವೇಂದ್ರ ಕಾಣಮ್ಮ ಅ.ಪಮತಿರಹಿತರಿಗೆಶುಭಮತಿಯನುವಿತತ ಮಹಿಮ ಗುರುವರ್ಯ ಕಾಣಮ್ಮ 1ಸೃಷ್ಟಿ ಜನಗಳಿಗಭೀಷ್ಟವ ನೀತಮ್ಮಾ 2ದಾತಗುರುಜಗನ್ನಾಥವಿಠಲಗತಿಪ್ರೀತಿಕರ ಯತಿನಾಥ ಕಾಣಮ್ಮ 3
--------------
ಗುರುಜಗನ್ನಾಥದಾಸರು
ವೃಂದಾವನದಲಿನಿಂದುರಾಜಿಪನ್ಯಾರೇ ಪೇಳಮ್ಮಯ್ಯಪಬಂದ ಜನರಘ ವೃಂದ ಕÀÀÀÀಳೆದು ಆ -ನಂದವಕೊಡುವೊ ರಾಘವೇಂದ್ರ ಕಾಣಮ್ಮ ಅ.ಪಮತಿಹೀನರಿಗತಿ ಮತಿಯನು ನೀಡುತ -ಅತುಲ ನೆನಿಪ ಗುರುರಾಯ ಕಾಣಮ್ಮ 1ಇಷ್ಟನಾದ ಗುರುರಾಯ ಕಾಣಮ್ಮ 2ದಾತಗುರುಜಗನ್ನಾಥವಿಠಲಗತಿಪ್ರೀತಿಕರ ಶುಭರಾಯ ನೀತಮ್ಮ 3
--------------
ಗುರುಜಗನ್ನಾಥದಾಸರು
ವೆಂಕಟರಮಣ ವೇದಾಂತಕೋಟಿವಂದ್ಯಶಂಕರಪ್ರಿಯಪತಿಏಳೆನ್ನುತಪ.ಪಂಕಜಮುಖಿಪದ್ಮಾವತಿ ಸರ್ವಾ-ಲಂಕಾರದ ನಿದ್ದೆ ಸಾಕೆನ್ನುತ ಅ.ಪ.ಮಂಗಲಚರಿತ ಭುಜಂಗಶಯನ ನಿ-ನ್ನಂಗದಾಯಾಸವ ಪರಿಹರಿಸಿಪೊಂಗಲಶದಿ ಉಷ್ಣೋದಕ ಗಂಧ ತೈಲಾ-ಭ್ಯಂಗಮಾಡುವರೇಳು ಶೃಂಗಾರದ ಮೂರ್ತಿ 1ದಧಿಯ ಪೃಥುಕದಲಿ ಹದಗೈದು ಮಧುರದಿಮಧುಸೂದನ ನಿನ್ನ ಪದದ ಮುಂದೆಸದ್ ಹೃದಯರು ತಂದಿಹರು ಸಮರ್ಪಿಸೆಮದಜನಕ ನಿನ್ನ ಓಲೈಸುವರಯ್ಯ 2ಸಣ್ಣಕ್ಕಿಯನು ದಿವ್ಯಾನ್ನ ಪಾಕವ ಮಾಡಿಚೆನ್ನಾದ ಗೋಕ್ಷೀರವನ್ನು ತಂದುಉನ್ನತ ಮಹಿಮನೆ ಉಣ್ಣೆಂದು ಲಲಿತ ಸು-ವರ್ಣಪಾತ್ರೆಯೊಳು ತಂದಿಹರು ಶ್ರೀಹರಿಯೇ 3ವಿಧವಿಧ ಷಡುರಸಭರಿತ ಮನೋಹರಸುಧೆಗೆಯಿಮ್ಮಡಿ ಮಧುರತ್ವದಲಿಮೃದುವಾದ ಉದ್ದಿನ ದೋಸೆಯ ಸವಿಯೆಂದುಪದುಮನಾಭನೆ ನಿನ್ನ ಹಾರೈಸುವರಯ್ಯ 4ಸಕ್ಕರೆಕದಳಿಉತ್ತಮ ಫಲಗಳ ತಂದುರಕ್ಕಸವೈರಿಯೆ ನಿನ್ನ ಮುಂದೆಚೊಕ್ಕಟವಾಗಿಡೆ ಲೆಕ್ಕ ಲೇಖನಗಳಒಕ್ಕಣಿಪರುವಾಸುದೇವನೀನೇಳಯ್ಯ5ಸಾರಹೃದಯ ಗೌಡಸಾರಸ್ವತವಿಪ್ರಭೂರಿವೇದಾದಿ ಮಂತ್ರದ ಘೋಷದಿಶ್ರೀರಮಣನೆ ದಯೆದೋರೆಂದು ಕರ್ಪೂರ-ದಾರತಿಯನು ಪಿಡಿದಿಹರು ಶ್ರೀಹರಿಯೇ 6ಭಾಗವತರು ಬಂದು ಬಾಗಿಲೊಳಗೆನಿಂದುಭೋಗಿಶಯನಶರಣಾದೆನೆಂದುಜಾಗರದಲಿ ಮದ್ದಳ ತಾಳರಭಸದಿರೇಗುಪ್ತಿರಾಗ ಸಂಗೀತ ಪಾಡುವರಯ್ಯ 7ಕರುಣಾಸಾಗರ ನಿನ್ನ ಚರಣದ ಸೇವೆಯಕರುಣಿಸೆಂದೆನುತಾಶ್ರಿತ ಜನರುಕರವಮುಗಿದು ಕಮಲಾಕ್ಷ ನಿನ್ನಯ ಪಾದ-ಸ್ಮರಣೆಗೈಯುತ ನೋಳ್ಪಾತುರದಿಂದ ಹರುಷದಿ 8ನಾನಾ ಜನರು ಬಂದುಕಾಣಿಕೆಕಪ್ಪವಶ್ರೀನಿವಾಸನೆ ನಿನ್ನ ಪದಕೆ ಒಪ್ಪಿದಾನವಾಂತಕ ನಿನ್ನ ದಯವೊಂದೆ ಸಾಕೆಂದುಧ್ಯಾನಮಾಳ್ಪರು ದಯಮಾಡೆಂದು ಹರಿಯೇ 9ನೀನೆ ಗತಿಯೆಂದು ನಿನ್ನ ನಂಬಿಹರು ಲ-ಕ್ಷ್ಮೀನಾರಾಯಣ ಪುರುಷೋತ್ತಮನೆಮಾನದಿ ಭಕ್ತರ ಸಲಹಯ್ಯ ಸಂತತಶ್ರೀನಿವಾಸನೆ ಬೇಗ ಏಳು ಶ್ರೀಹರಿಯೆ 10
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವೆಂಕಟೇಶನ ಮಹಿಮೆಯ ಹೊಗಳುವಕಿಂಕರಧನ್ಯನಯ್ಯಪ.ಇಳೆಯ ಭಕ್ತರ ನೋಡಿದ ವೈಕುಂಠದಿಂದಿಳಿದು ಶ್ರೀಸಹಿತ ಬಂದಸಲೆ ಸುವರ್ಣಮುಖರಿಯ ತೀರವಒಲಿದು ನಿಂತನು ತಿಮ್ಮ್ಮಯ್ಯ 1ಭೂವರಾಹ ಸ್ವಾಮಿಯ ಸನ್ನಿದಶ್ರೀವತ್ಸಲಾಂಛನಿಹಶ್ರೀವಿಮಾನಸಹಿತ ದೇವಾಧಿದೇವ ತಾನಿಲ್ಲಿ ನಿಂತ 2ಸ್ವಾಮಿ ಪುಷ್ಕರಿಣಿಯೆಂಬ ತೀರ್ಥದನಾಮದ ಮಹಿಮೇನೆಂಬೆಆ ಮಹಾ ದುಷ್ಕøತವು ಸ್ನಾನದನೇಮದಲ್ಲೋಡುವುದು 3ರಾಜಾಧಿರಾಜನಿತ್ಯಉಪಚಾರಪೂಜೆ ಲೋಕಾರ್ಥದೊಳು ತಾಮೂಜಗಕಾನಂದವವರಕರುಣಾಜಲಧಿ ಕೊಡುವ 4ನಿತ್ಯಸ್ವಾರಿಗೈದುವಸುರಋಷಿಮೊತ್ತದಿ ಚರಿಪದೇವಮತ್ತೆ ಆ ಲಕ್ಷ್ಮಿಯ ಕೂಡ ಮುನಿವದೊಂದರ್ತಿಯ ಬುಧರು ನೋಡಿ 5ನುಡಿವ ಸಾವಿರ ಪೇರ್ಗಂಟೆ ಉಬ್ಬುಬ್ಬಿಹೊಡೆವರ್ಯೊಡೆ ಜಾಗಟೆಬಡಿವ ಕರಡೆ ಭೇರಿಯು ಮುಂದೆ ಉಗ್ಗಡಿಪ ಸಾಮಗಾನವು 6ಚಿತ್ರವರ್ಣದ ಸತ್ತಿಗೆ ಸಾಲ್ಗಳುಸುತ್ತಲು ಕೈ ದೀವಿಗೆಉತ್ತಮ ವಾಹನವೇರಿ ವಿಶ್ವದಕರ್ತಬಂದನು ಉದಾರಿ7ಉದಯ ತೋಮಾಲೆ ಸೇವೆ ಪುಳುಕಾಪುಮೊದಲಾದ ದಿವ್ಯಸೇವೆಒದಗಿದವಸರಂಗಳು ನೈವೇದ್ಯಮೃದುಭಕ್ಷ್ಯವರಪೊಂಗಲು8ಅತಿರಸ ಮನೋಹರವುದಧ್ಯನ್ನಅತಿರುಚಿ ಅನ್ನವಾಲವುಕ್ಷಿತಿಯ ಮೇಲಿಹ ಭಕ್ತರು ಶ್ರೀಲಕ್ಷ್ಮೀಪತಿಗೆ ಅರ್ಪಿಸುತಿಹರು 9ಹೂವಿನಂಗಿಯ ತೊಡುವಮೃಗಮದಲಾವಣ್ಯ ತಿಲಕಿಡುವಕಾವನಂತರ ತೇಜವ ಗೆಲ್ಲುವಸಾವಿರ ಹೆಸರ ದೇವ 10ತಪ್ಪದೆ ನುಡಿವಂದನು ಮುಡಿಪಿನಕಪ್ಪವೆಣಿಸಿ ಕೊಂಬನುಚಪ್ಪನ್ನ ದೇಶಸ್ತರು ಬಂದು ಸಮರ್ಪಣೆ ಮಾಡುವರು 11ಕೊಟ್ಟ ವಾಕ್ಯಕೆ ತಪ್ಪನು ವರಭಯವಿಟ್ಟು ಸಾಕುತಲಿಪ್ಪನುಇಷ್ಟಾರ್ಥದಾತನಯ್ಯ ವಿಶ್ವದಶಿಷ್ಟರೊಡೆಯ ತಿಮ್ಮಯ್ಯ 12ಕಿರೀಟ ಕುಂಡಲವಿಟ್ಟನು ತಿಮ್ಮಯ್ಯಕರುಣ ನೋಟದ ಚೆಲ್ವನುಅರಿಶಂಖವನು ಧರಿಸಿದ ಹಾರಕೇಯೂರ ಕೌಸ್ತುಭದಲೊಪ್ಪಿದ 13ತೋಳಬಂದಿಯು ಕಂಕಣಮುದ್ರಿಕೆಕೀಲುಕಡಗಒಡ್ಯಾಣನೀಲಮಾಣಿಕ ಪಚ್ಚದ ಮುತ್ತಿನಮಾಲೆಗಳಿಂದೊಪ್ಪಿದ 14ಮಣಿಮಯ ಕವಚ ತೊಟ್ಟ ಗಳದಲಿಮಿನುಗುವಾಭರಣವಿಟ್ಟಕನಕಪೀತಾಂಬರವು ಕಟಿಯಲ್ಲಿಅಣುಗಂಟೆಗಳೆಸೆದವು 15ರನ್ನದಂದುಗೆಯನಿಟ್ಟಿಹ ಪಾದಕೆಪೊನ್ನಹಾವುಗೆಮೆಟ್ಟಿಹಘನ್ನ ದೈತ್ಯರ ಸೋಲಿಪ ಬಿರುದಿನಉನ್ನತ ತೊಡರಿನಪ್ಪ 16ದಿನಕೆ ಸಾವಿರ ಪವಾಡ ತೋರುವಜನಕೆ ಪ್ರತ್ಯಕ್ಷ ನೋಡಘನಶಾಮ ತಿರುವೆಂಗಳ ಮೂರ್ತಿಯಮನದಣಿಯೆ ಹೊಗಳಿರೆಲ್ಲ 17ಭೂವೈಕುಂಠವಿದೆಂದು ಸಾರಿದಭಾವಿಕ ಭಕ್ತ ಬಂಧುಶ್ರೀ ವಾಯುಜಾತ ವಂದ್ಯ ಶ್ರೀನಿವಾಸಗೋವಿಂದ ನಿತ್ಯಾನಂದ 18ಸೇವಕಜನರಪ್ರಿಯಅರುಣರಾಜೀವಲೋಚನ ತಿಮ್ಮಯ್ಯದೇವಶಿಖಾಮಣಿಯು ಬ್ರಹ್ಮಾದಿದೇವರಿಗೆ ದೊರೆಯು 19ಕಶ್ಚಿಜ್ಜೀವನೆನ್ನದೆ ನನ್ನನುನಿಶ್ಚಯದಲಿ ಹೊರೆವನುಆಶ್ಚರ್ಯಚರಿತ ನೋಡಿ ಶರಣರವತ್ಸಲನ ಕೊಂಡಾಡಿ 20ಆರಾಶ್ರಯಿಲ್ಲೆನಗೆ ದ್ರಾವಿಡವೀರನೆ ಗತಿಯೆನಗೆಭೂರಿಪ್ರಸನ್ವೆಂಕಟಪತಿ ಸುಖತೀರಥವರದ ನಮೊ 21
--------------
ಪ್ರಸನ್ನವೆಂಕಟದಾಸರು
ಶಂಕರ ಶಿವಶಂಕರ ಶಿವಶಂಕರ ಶಿವಶಂಕರಕಿಂಕರೇಷ್ಟಪ್ರಧಾನಶೀಲ ವೃಷಾಂಕ ಮಹಲಿಂಗೇಶ್ವರ ಪ.ವ್ಯೋಮಕೇಶಭವಾಬ್ಧಿತಾರಕ ರಾಮನಾಮೋಪಾಸಕಸಾಮಜಾಜಿನವಸನಮಂಡನ ಸ್ವಾಮಿ ತ್ರಿಜಗನ್ನಾಯಕಭೀಮಬಲ ಸುತ್ರಾಮಮುಖ ಸುರಸ್ತೋಮ ವಿನುತಪದಾಂಬುಜಸೋಮಸೂರ್ಯಾನಲಯನ ನಿಸ್ಸೀಮ ಮಹಿಮ ಮಹಾಭುಜ 1ಭಜಕಜನಸೌಭಾಗ್ಯದಾಯಕ ವಿಜಯಪಾಶುಪತಾಸ್ತ್ರದಭುಜಗಭೂಷಣ ಭುವನಪೋಷಣ ರಜತಗಿರಿಶಿಖರಾಸ್ಪದವೃಜಿನಹಾಮಲ ಸ್ಫಟಿಕಸನ್ನಿಭ ಕುಜನವಿಪಿನದವಾನಲವಿಜಿತಕಾಮ ವಿರಾಗಿಯೋಗಿ ವ್ರಜಕುಟುಂಬ ಮಹಾಬಲ 2ನೀಲಕಂಠ ನಿರಾಮಯಾಭಯಶೂಲಧರ ಸುಮನೋಹರಶೈಲರಾಜಸುತಾಧರಾಮೃತಲೋಲ ಲೋಕಧುರಂಧರಕಾಲಕಾಲ ಕಪಾಲಧರಕರುಣಾಲವಾಲಮಹೇಶ್ವರಪಾಲಿತಾಖಿಳಸಿದ್ಧ ಮುನಿಜನಜಾಲ ಜಾಹ್ನವಿಶೇಖರ 3ಕೃತ್ತಿವಾಸಗಿರೀಶ ಶ್ರುತಿತತ್ತ್ವಾರ್ಥಬೋಧ ಗುಣೋದಯದೈತ್ಯಮೋಹಕ ಶಾಸ್ತ್ರಕೃತ್ಪ್ರಮಥೋತ್ತಮ ವಿರತಾಶ್ರಯಸತ್ಯಸಂಕಲ್ಪಾನುಸಾರ ನಿವೃತ್ತಿಮಾರ್ಗ ಪ್ರವರ್ತಕಮೃತ್ಯುಹರ ಹರಮೃಡನಮೋಸ್ತುನಮೋ&bಜquo;ಸ್ತು ಸುಮನನಿಯಾಮಕ 4ಪಂಡಿತೋತ್ತಮ ಪವನಶಿಷ್ಯ ಮೃಕಂಡುತನಯಭಯಾಪಹಚಂಡಿಕಾಧವ ಶಿವ ದಯಾರ್ಣವಖಂಡಪರಶುಸುರಾರಿಹಚಂಡಭಾನುಶತಪ್ರಕಾಶಾಖಂಡವೈರಾಗ್ಯಾಧಿಪಕುಂಡಲೀಂದ್ರ ಪದಾರ್ಹನಗ ಕೋದಂಡವಿದೃಶ ಮಹಾನ್‍ತಪ 5ಮಂಗಲಪ್ರದ ದಕ್ಷಕೃತಮುಖಭಂಗ ಭಾಗವತೋತ್ತಮಜಂಗಮಸ್ಥಾವರಹೃದಿಸ್ಥ ಶುಭಾಂಗ ಸತ್ಯಪರಾಕ್ರಮಲಿಂಗಮಯ ಜಯಜಯತು ಗಿರಿಜಾಲಿಂಗಿತಾಂಗಸದೋದಿತಸಂಗರಹಿತಾಚ್ಯುತಕಥಾಮೃತ ಭೃಂಗವತ್ಸೇವನರತ 6ಭರ್ಗಭಾರ್ಗವಋಷಿಪ್ರತಿಷ್ಠಿತ ಸ್ವರ್ಗಮೋಕ್ಷ ಫಲಪ್ರದನಿರ್ಗತಾಖಿಲದುರಿತ ಭೂಸುರವರ್ಗಪಾಲನಕೋವಿದದುರ್ಘಟಿತಧುರಧೀರ ಭವಸಂಸರ್ಗದೂರ ಸನಾತನನಿರ್ಗುಣೈಕಧ್ಯಾನಪರ ಸನ್ಮಾರ್ಗಭಕ್ತಿನಿಕೇತನ 7ಚಾರುಪಾವಂಜಾಖ್ಯಕ್ಷೇತ್ರಾಧಾರದಾಂತದಯಾಕರನೀರಜಾಸನತನಯ ಲಕ್ಷ್ಮೀನಾರಾಯಣಕಿಂಕರವಾರಿನಿಧಿಗಂಬೀರ ದೀನೋದ್ಧಾರ ಧಾರ್ಮಿಕಜನಹಿತವಾರಣಾಸ್ಯಕುಮಾರಗುರು ಗೌರೀರಮಣ ಸುದೃಢವ್ರತ 8
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶರಣಾಗತನಾದೆನು ಶಂಕರ ನಿನ್ನಚರಣವ ಮರೆಹೊಕ್ಕೆನು ಪ.ಕರುಣಿಸೈ ಕರಿವದನಜನಕಾ-ವರಕದಂಬಪೂಜ್ಯ ಗಿರಿವರ-ಶರಸದಾನಂದೈಕವಿಗ್ರಹದುರಿತಧ್ವಾಂತವಿದೂರದಿನಕರಅ.ಪ.ಹಸ್ತಿವಾಹನವಂದಿತ ವಿಧುಮಂಡಲ-ಮಸ್ತಕಗುಣನಂದಿತಸ್ವಸ್ತಿದಾಯಕ ಸಾವiಗಾನಪ್ರ-ಶಸ್ತ ಪಾವನಚರಿತ ಮುನಿಹೃದ-ಯಸ್ಥಧನಪತಿಮಿತ್ರ ಪರತರ-ವಸ್ತು ಗುರುವರ ಶಾಸ್ತಾವೇಶ್ವರ 1ಮಂದಾಕಿನೀಮಕುಟಶಿವ ಶಿವ ನಿತ್ಯಾ-ನಂದಮ್ನಾಯ ಕೂಟಚಂದ್ರಸೂರ್ಯಾಗ್ನಿತ್ರಿಲೋಚನಸಿಂಧುರಾಸುರಮಥನ ಸ್ಥಿರಚರ-ವಂದಿತಾಂಘ್ರಿಸರೋಜ ಉದಿತಾ-ರ್ಕೇಂದುಶತನಿಭ ನಂದಿವಾಹನ 2ನೀಲಕಂಧರ ಸುಂದರ ಸದ್ಗುಣವರು-ಣಾಲಯ ಪರಮೇಶ್ವರಕಾಲಕಾಲಕಪಾಲಧರ ಮುನಿ-ಪಾಲ ಪದ್ಮಜವಂದಿತಾಮಲ-ಲೀಲ ಡಮರು ತ್ರಿಶೂಲಪಾಣಿ ವಿ-ಶಾಲಮತಿವರ ಭಾಳಲೋಚನ 3ಮಾರಸುಂದರ ಸಂಕರ ಶ್ರೀಲಕ್ಷ್ಮೀ-ನಾರಾಯಣಕಿಂಕರಮಾರಹರ ಮಹನೀಯ ಶ್ರುತಿಸ್ಮøತಿ-ಸಾರವಿಗತಾಮಯ ಮಹೋನ್ನತವೀರ ರಾವಣಮದನಿಭಂಜನಚಾರುತರವರಭಾರಪುರಹರ4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶರಣು ನಿನ್ನ ಚರಣಗಳಿಗೆ ಭಾರತೀಶನೆ |ಕರವಪಿಡಿದು ಸಲಹೋ ಬಿಡದೆ ಭಾರತೀಶನೆ ಪಎಲ್ಲ ಕಡೆಗೆ ವ್ಯಾಪ್ತ ನೀನೆ ಭಾರತೀಶನೆ |ಅಲ್ಲಿ ವಿಷವ ಕುಡಿದೆಯೆಂದು ಭಾರತೀಶನೆ ||ಗೆಲ್ಲಿಸಿದೆಯೊ ಸರ್ವ ಸುರರ ಭಾರತೀಶನೆ |ಬಲ್ಲಿದನು ನಿನಗೆಣೆ ಯಾರೋ ಭಾರತೀಶನೆ1ಅಂಜನಾ ಕುಮಾರನಾಗಿ ಭಾರತೀಶನೆ |ಕಂಜನಾಭನಂಘ್ರಿ ಭಜಿಸಿ ಭಾರತೀಶನೆ ||ಲಿಂಜದುದಧಿದಾಟಿ ಪೋಗಿ ಭಾರತೀಶನೆ |ಸಂಜಿ ಚರರ ಸಂಹರಿಸಿದೆಯೊ ಭಾರತೀಶನೆ2ಕುಂತಿ ಜಠರದಿಂದ ಜನಿಸಿ ಭಾರತೀಶನೆ |ಹಂತ ಕೌರವರನ ತರಿದಿ ಭಾರತೀಶನೆ ||ಕಂತುಪಿತನ ಕರುಣ ಪಡೆದೆ ಭಾರತೀಶನೆ |ಅಂತಗಾಣೆ ನಿನ್ನ ಮಹಿಮೆಗೆ ಭಾರತೀಶನೆ 3ಯತಿಯರೂಪಇಳಿಯೊಳಾಗಿ ಭಾರತೀಶ£ É |ಮತಿಯ ಸರ್ವ ಬುಧಂಗಿತ್ತೆ ಭಾರತೀಶನೆ ||ಸತತ ನಿನ್ನ ಪೂಜಿಪರಿಗೆ ಭಾರತೀಶನೆ |ಗತಿಯ ಕೊಡುವೆ ದೋಷ ಕಳೆದು ಭಾರತೀಶನೆ 4ಘನ್ನ ಪ್ರಾಣೇಶ ವಿಠಲ ನಾಳೆ ಭಾರತೀಶನೆ |ಬಿನ್ನಪವನು ಲಾಲಿಸುವದೋ ಭಾರತೀಶನೆ ||ನಿನ್ನ ದಾಸನೆನಿಸಬೇಕೋ ಭಾರತೀಶನೆ |ಅನ್ಯ ವಿಷಯವೊಂದನೊಲ್ಲೆ ಭಾರತೀಶನೆ 5
--------------
ಪ್ರಾಣೇಶದಾಸರು
ಶರಣು ಭಾರತೀ ತಾಯೆ |ಕರವಬಿಡದಲೆ ಕಾಯೆ ||ಮರುತದೇವನ ರಮಣಿ | ಸುರ ನದಿಯ ಭಗಿನಿ ಪಪ್ರದ್ಯುಮ್ನ ದೇವಸುತೆ | ರುದ್ರಾದಿ ಸುರ ವಿನುತೆ ||ಭದ್ರ ವಿಗ್ರಹೆ ದಯಾ ಸ | ಮುದ್ರೆ ಕುಲಿಶೆ ||ಅದ್ರಿಯೋಪಮ ದೋಷ | ಕಿದ್ದ ದುರ್ಮತಿಕ್ಲೇಶ||ವೊದ್ದು ನಿನ್ನವನೆನ್ನು | ಬುದ್ಧಿ ಕೊಡು ಇನ್ನೂ 1ನೀರಜಾಂಬಕೆ ಯನಗೆ | ತೋರು ಸಾಧನ ಕುನಗೆ |ಜಾರಿಸು ಭಕುತಿಯನ್ನು | ತೋರು ಕರುಣಾ ||ವಾರಿಧಿಹರಿಯಪಾದ| ಆರಾಧಿಸಲುಮೋದ|ವಾರವಾರಕೆ ಈಯೇ |ವಾರಣಗಮನೆಯೇ 2ಪ್ರಾಣೇಶ ವಿಠಲನ | ಧ್ಯಾನದೊಳಗಿರಿಸು ಮನ |ವಾಣೀ ಪದವೈದುವಳೇ |ಮಾನನಿನ್ನದೆಲೆ ||ಹೀನ ವಿಷಯಗಳೊಲ್ಲೆ | ನೀನೇ ಸ್ವಾಂತದಿ ನಿಲ್ಲೆ |ಕ್ಷೋಣಿಯೊಳಗತಿ ಮಾನೀ | ಜ್ಞಾನೀ ಅಹಿವೇಣೀ 3
--------------
ಪ್ರಾಣೇಶದಾಸರು
ಶರಣು ಶರಣು ಜಯ ಮುನಿರಾಯ ಸ್ವಾಮಿಶರಣಾಗತ ತಾತ್ವಿಕ ಪ್ರಿಯ ಪ.ಶ್ರೀ ಮಧ್ವಗುರು ದಯವನು ಪಡೆದು ಅದೇ ಮಹಿಮನ ಮನೆಯೊಳು ಬಂದುನೇಮದಿ ತುರ್ಯಾಶ್ರಮ ಬಲಿದೆ ಈಭೂಮಿಗಿಂದ್ರನಪರಿ1ಅಶ್ರುತ ಪ್ರಭೆ ಬುಧರೊಳು ಬೀರಿ ನಾನಾ ಶ್ರುತಿಯರ್ಥ ಪ್ರಕಟದೋರಿಶಾಶ್ವತಕ್ಷಾದಿ ತ್ರಿಪ್ರಮಾಣವ ನಿಜಾಶ್ರಿತರಿಗೆ ಪೇಳಿದೆ ಅನುವ 2ವೇದಾಂಬುಧಿಯೊಳು ಸುಧೆದೆಗೆದೆ ರಾಮಪಾದಕರ್ಪಿಸಿ ಬುಧಜನಕೆರೆದೆಕೈದುಗಳಂತೆ ಪ್ರಮೇಯಾರ್ಥವಿಡಿದೆ ಜಯನಾದದಿಂ ದುರ್ವಾದಿಗಳನ್ಯೆಚ್ಚಿದೆ 3ಮರುತಮತದ ವಿಬುಧರ ನೆರಹಿಸಿಮೂರೇಳರಿ ಬಲವ ಜರಿದಟ್ಟಿದೆಅವರಬಿರುದು ಸೀಳಿದೆ ಈ ಧರೆಯ ವೈಷ್ಣವರಭಯವ ಕಳೆದೆ4ಈ ಕ್ಷೋಣಿಯೊಳು ಪ್ರತಿವರ್ಜಿತನೆ ಶ್ರೀಅಕ್ಷಯಪ್ರಜÕ ಕೃಪಾನ್ವಿತನೆಅಕ್ಷೋಭ್ಯತೀರ್ಥರ ತನಯನೆವಿಶ್ವಕುಕ್ಷಿಪ್ರಸನ್ನವೆಂಕಟಪ್ರಿಯನೆ5
--------------
ಪ್ರಸನ್ನವೆಂಕಟದಾಸರು
ಶರಣು ಶರಣು ರಾಮ ರಘುಕುಲಶರಣು ಪೂರಣಸೋಮಕರುಣಾಪಾಂಗದಿ ಶರಣಾಗತರ ಭಯಹರಣಾಹಲ್ಯೋದ್ಧರಣ ಕಾರಣ ಸುಚರಣ ಪ.ದಂಡಕದನುಜನ ದಂಡಿಸಿದಗಣಿತಚಂಡ ರುಚಿರಕೋದಂಡಕರಕುಂಡಲಮಂಡಿತಗಂಡಸುತಂಡ ಬೊಮ್ಮಾಂಡ ಕೋಟಿರಕ್ಷಾಪುಂಡರೀಕಾಕ್ಷ1ದೂಷಣ ಖರಾಂತಕ ದಶಶಿರದಮನ ತ್ರಿದಶರ ಪೊರೆದ ಜಗದೀಶವರದಬಿಸಜಭವಸಮೀರಪಶುಗಮನಾದಿ ಸುರೇಶನುತಪದನೆ ಅಶೇಷದುರಿತಾರಿ 2ದುಷ್ಟಜನಮರ್ದನ ಜಠರಜನ ನರಸಿಂಹಚಟುಲದ್ವಿಜಾರ್ಚಿತಪಟು ದೇವತೃಟಿಯೊಳು ನೆನೆವರ ಕುಟಿಲವಾರಕವಿಶ್ವನಾಟಕ ಪ್ರಸನ್ನವೆಂಕಟ ರಘುರಾಮ 3
--------------
ಪ್ರಸನ್ನವೆಂಕಟದಾಸರು
ಶರಣು ಶರಣು ಶೇಷಗಿರಿವರದ ದೇವಶರಣು ಶರಣು ಲಕ್ಷ್ಮೀವರ ಮುದದಶರಣಾಗತ ಭಯಸಂಹಾರ ಕಾರಣಕರುಣ ಕರಣ್ಯನಂತಕಿರಣಘವಾರಣ ಸುವಾರಣಉದ್ಧರಣಜಹರನುತಚರಣಪ.ಕೃತಸೇವ್ಯಾಮಲ ಅವ್ಯಾಕೃತಗಾತ್ರ ದೇವಪೃಥುರಾಜಪಾಲಾಂಬುಜಾಯತ ನೇತ್ರಯತಿ ಹೃದಯ ಗುಹ್ಯಾಂಗೀಕೃತೋತ್ತುಂಗಹೃತಕ್ಷಿತಿ ಜಾತ ಸತಿಪ್ರತತಿಗೃಹೀತಾವಿತಥÀಶ್ರುತಿಸ್ಮøತಿಗೀತ ಪ್ರೀತ ರತಿಪತಿಪಿತನೆ1ಸೋಮಕುಲಾಬ್ಧಿ ರಾಕಾಸೋಮಕಾಶ ದೇವಸಾಮಜಪಕ್ಷ ಸುರಸ್ತೋಮ ಪೋಷಕಕಾಮಿತಾರ್ಥಪ್ರದಾತ ಸ್ವಾಮಿತೀರ್ಥಧಾಮತ್ರಿಧಾಮ ಸುಮನಸಾಮೋದಪ್ರೇಮಧಿ ಶ್ರೀಮತ್ನಾಮ ನಿಸ್ಸೀಮ 2ಹನುಮನಿಮೇಷ ಋಷಿಗಾನಪ್ರಿಯ ದೇವಸನಕಸನಂದನ ಸನಾತನಧ್ಯೇಯಮಣಿಮಯಕನಕಭೂಷಣಾಂಕ ಭೂಮುನಿಜನ ಧ್ಯಾನ ಲೀನ ಅಣುರೇಣು ಪೂರ್ಣಪ್ರಸನ್ನವೆಂಕಟನಗಪಾ ಪುನಃಪುನಾನುದಿನ 3
--------------
ಪ್ರಸನ್ನವೆಂಕಟದಾಸರು
ಶಾಶ್ವತ ಭಾಗವತರು ನಗರೆ ಮತಿಮಿಶ್ರರ ನೋಡಿ ಕೈ ಹೊಡೆದು ಪ.ಮಾಧವನಲ್ಲದೆ ಆ ದೈವೀದೈವಾದಿಗಳ ಹಿರಿಯರು ನಂಬರುಆದರವರ ಬಿಟ್ಟರೆ ಈ ಧನಧಾನ್ಯವುಹೋದರೆ ಕೆಟ್ಟೆವೆಂಬರ ನೋಡಿ 1ಕೃಷ್ಣನೆ ಸುಖದಾಯಕನಿರೆ ಸತಿಯಳುಹುಟ್ಟಿದ ಶಿಶುವಿನ ದೆಸೆಯಿಂದ ಎನ್ನಕಷ್ಟವೆ ಹೋಯಿತು ತುಷ್ಟಿಯೊಳಿಹೆನುಸೃಷ್ಟಿಗೆ ನಾ ಸುಖಿಯೆಂಬನ ನೋಡಿ 2ನಾರಾಯಣ ದಾತಾರನು ವಿಶ್ವಕೆತೋರುತಿರಲು ನರಧನಿಕರನುಆರಾಧಿಸಿ ನಾಭೂರಿಧನಾಢ್ಯನುಆರೆನಗೆದುರಿಲ್ಲೆಂಬನ ನೋಡಿ 3ಶ್ರೀ ಗುರುವರ ಸುಖಯೋಗಿಯ ಸಂತತಿಯೋಗಿಗಳಂಘ್ರಿಯ ನಂಬಿರದೆಆಗುರುಈ ಗುರುವೇ ಗತಿಯೆನುತಲಿಭೂಗುರುವಾಗಿಹ ರೋಗಿಯ ನೋಡಿ 4ಬೂಟಕತೋಟಕ ಭಕುತಿಗೆ ದ್ವಾದಶಗೂಟಬರೆಗೆ ಬುಧರೊಪ್ಪುವರೆ ಜಗನ್ನಾಟಕ ಪ್ರಸನ್ವೆಂಕಟೇಶನ ಗುಣಗಣಭಟರೆನಿಪ ವೈಷ್ಣವರಹ ಸಜ್ಜನ 5
--------------
ಪ್ರಸನ್ನವೆಂಕಟದಾಸರು
ಶಿರಿರಮಣ ದಯದಿಂದ ಮಂತ್ರಾಘ್ರ್ಯ ಕೊಡುವ ಬಗೆ |ಪರಮೇಷ್ಠಿಗೊಲಿದು ಪೇಳಿದನು ಇಂತೂ ಪಅಷ್ಟಾಕ್ಷರದಿ ಮಂತ್ರಾಘ್ರ್ಯ ಸಾಲಗ್ರಾಮ |ವಿಟ್ಟು ಸದ್ ಭಕ್ತಿಯಲಿ ಶಂಖದಿಂದಾ ||ಕೊಟ್ಟವಗೆ ಸಂತುಷ್ಟನಾಗಿ ಎನ್ನಯ ಸದನದೋ- |ಳಿಟ್ಟು ಸಂತೈಸುವೆನು ಬ್ರಹ್ಮ ಕೇಳೂ 1ಸತ್ಯಭಾಮಾದಿ ಮಿಕ್ಕಾದ ಮಂತ್ರಾಘ್ರ್ಯವನು |ಮತ್ಪಾದ ಜಲದಿಂದ ಪಾತ್ರಿಯಲ್ಲೀ ||ಹಸ್ತದಿಂ ಕೊಡಬೇಕು ಎನ್ನ ಪ್ರೀತಿ ಎಲೊ ಇದು |ಸತ್ಯಲೋಕಾಧಿಪನೆ ಕೇಳು ಮುದದೀ 2ಎನ್ನ ಮಂತ್ರಾಘ್ರ್ಯ ಹಸ್ತದಲಿ ಪಾತ್ರಿಯೊಳೀಯೆ |ಅನ್ಯಾಯವೆಷ್ಟೆಂದು ಪೇಳಲೀಗಾ ||ವನ್ನಜಾಸನ ಎನಗರಕ್ತವೆರದಂತಹದೊ |ಮುನ್ನವರ ಕ್ಲೇಶಕ್ಕೆಎಣಿಕೆಇಲ್ಲಾ 3ಅದರಿಂದ ತಿಳಿದು ಸಾಲಗ್ರಾಮವಿಟ್ಟು ಶಂ- |ಖದಲಿ ಕೊಡಬೇಕು ಎನ್ನಘ್ರ್ನಗಳನೂ ||ವಿಧಿಕಾಷ್ಟಗತವಹ್ನಿಮಥಿಸೆ ತೋರ್ವಂತೆ ಸ- |ರ್ವದ ತೋರ್ವೆ ನಾನು ಸಾಲಗ್ರಾಮದೀ 4ಶ್ರೀ ನಾರಿ ಪ್ರಮುಖ ಮಂತ್ರಾಘ್ರ್ಯ ಶಂಖದಲಿ ಕೊಡೆ |ನಾನೊಪ್ಪೆನವರ ಭಂಗವ ಬಡಿಸುವೇ ||ವಾಣೀಶ ತಿಳಿಯಂದು ಸ್ಮಿತ ವದನದಿಂದ ಶ್ರೀ |ಪ್ರಾಣೇಶ ವಿಠಲ ನಿರೂಪಿಸಿದನೂ 5
--------------
ಪ್ರಾಣೇಶದಾಸರು