ಒಟ್ಟು 4120 ಕಡೆಗಳಲ್ಲಿ , 119 ದಾಸರು , 3273 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೆಂಕಟೇಶ ಕಲ್ಯಾಣ ಶ್ರೀವೆಂಕಟ ದೊರೆಯೆ ಪ ವಿಶ್ವಸೃಷ್ಟಿಯಗೈದಂಥ ತಾನಿನ್ನು ಅರಿಯೆನು ಎಂತೆನಲು ಅ.ಪ ಸುರವರ ನಾರೆಂದು ಅರಿಯೆಭೃಗುವು ತಾನು ಪತಿ ಹರ ವಿಧಿಗಳೆನೆಲ್ಲ ಬರುವ ಬಗೆಯ ಕಂಡು ಸುರತ ಕೇಳಿಯಸೋಗು ಧರಿಸಿ ಮಲಗಿರಲಂದು ಜರಿದುವದಿಯಲು ವಕ್ಷ ಹರಿಸಿ ದುಗುಡವ ಮುನಿಗೆ ವರಸಿ ಚರಣದ ಕಣ್ಣು ತರಿದು ಸಾಧನೆ ಅಧಿಕ ಸಿರಿಗೆ ಪ್ರೇರಿಸಿ ಕೋಪ ತೊರೆದು ಧಾಮವ ಬೇಗ ಧರೆಗೆ ಇಳಿಯುತ ಬಂದು ಗಿರಿಯ ಹುತ್ತವ ಸೇರಿ ಸುರಿಸೆ ವಿಧಿಯು ಪಾಲು ಕರುಣದಿಂದಲಿ ಕೊಂಡು ದೊರೆಯ ಸೇವಕ ಗೋವ ಹರಿಸೆ ಕೊಡಲಿಯ ನೆತ್ತೆ ಶಿರವನೊಡ್ಡುತ ರಕ್ತ ಧಾರೆ ಚಿಮ್ಮಿಸಿನಭದಿ ಬರಲು ಚೋಳನು ದೊರೆಗೆ ಕ್ರೂರ ಶಾಪವನಿತ್ತು ಕರೆಸಿಗುರುಗಳಮದ್ದು ತರಲು ಹೊರಟದೇವ ನಿರುತ ಚಿನ್ಮಯಗಾತ್ರ ಉರು ವೈದ್ಯ ಧನ್ವಂತ್ರಿ ನಿರುಪಮ ನಾಟಕದೆ 1 ಸಾಮ ವಿಶ್ವದ ಸಾರ್ವಬೌಮ ಬೇಡಿದೆ ರಚಿಸೆ ಧಾಮ ಕ್ರೋಢನ ಕಂಡು ಪ್ರೇಮದಿಂದಲಿ ಬಕುಳೆ ವಾಮ ಕಂದನು ಆಗಿ ಭಾಮೆ ಪಾಕವನುಂಡು ಕಾಮ ವರ್ಜಿತ ಪೂರ್ಣ ಕಾಮ ಕುದುರೆಯನೇರಿ ಕಾಮ ಬೇಟೆಯೋಳ್ ನಿಜ ಕಾಮಿನಿಯನು ಕಂಡು ದ್ಧಾಮ ಮೋಹವ ತೋರಿ ಭೂಮಿಜಾತೆಯ ಘಟಿಸೆ ಭಾಮೆ ಬಕುಳೆಯ ಕಳಿಸಿ ಧರ್ಮದೇವತೆಯೆನಿಸಿ ಜಾಮಾತ ಸನ್ನಾಹ ಜಾಣ್ಮಿಯಿಂದಲಿನಡೆಸಿ ಕಾಮಿತಾರ್ಥವ ಕೊಂಡು ಧಾಮ ಸೇರಲು ಬಕುಳೆ ಹೇಮಮಯ ದಾರಿದ್ರ ನೇಮದಾಟವ ತೋರಿ ಹೇಮಗರ್ಭನ ಕರಿಸೆ ಸೋಮಶೇಖರ ಕೊಡಿಸೆ ಹೇಮರಾಶಿಯ ತಂದು ಭೀಮರುಜೆಗಳ ನಟಿಸೆ ಸೋಮಸೋದರಿಕರಿಸಿ ಮಾಮನೋಹರಗೈದ ಸೀಮೆಇಲ್ಲದಂಥ 2 ಮದುವೆ ಹಬ್ಬಿಸಿ ಭಕ್ತ ಹೃದಯ ತುಂಬುವ ನಂದ ಮುದದಿ ಬೆಳೆಸೆ ಪಯಣ ವದಗೆ ಶುಕರಾತಿಥ್ಯ ಸದಯಗೊಳ್ಳುತ ತೃಪ್ತಿ ಬದಿಗರೆಲ್ಲರಿಗಿತ್ತು ಮದನಮೋಹನ ತೇಜ ಮದುವೆ ಊರನು ಸೇರಿ ಕುದಿವ ಕುತೂಹಲದಿ ಅದ್ಭುತ ಸ್ವಾಗತವ ಪದುಮಾವತಿಯ ತಂದೆ ಹೃದಯ ಪೂರ್ವಕ ನೀಡೆ ಆದರದಿ ಸ್ವೀಕರಿಸಿ ಪಾದದ್ವಂಧ್ವವ ನೀಡಿ ವೇಧಾದಿ ನಿಜವೃಂದ ಮೇದಿನೀ ಸುರವೃಂದ ಮೋದ ಮೆಲ್ಲಲು ಕೂಡಿ ವೇದ ಘೋಷವುಗೈಯೆ ವಾದ್ಯದುಂದುಭಿ ಮೊಳಗೆ ವೇದವೇದ್ಯನು ಮದುವೆ ವೇದಿಕೆಯನು ಏರಿ ಕಾದುಕೊಂಡಿಹ ಜನಕೆ ಸಾಧಿಸುತಲಭೀಷ್ಠ ಕರ ಸಾದರ ಪಿಡಿದಂಥ ಖೇದ ತರಿಯುತ ನಿಜ ಮೋದದಾನವ ಗೈವ 3 ತಿರುಪತಿ ತಿಮ್ಮಪ್ಪ ಸುರಗಣ ಜಗದಪ್ಪ ವರಸಮರಿಲ್ಲಪ್ಪ ಭರದಿ ಕಸಿವಕಪ್ಪ ಅರಿತವರಿಲ್ಲಪ್ಪ ಧರಿಸಿಹ ಸಿರಿಯಪ್ಪ ಕರುಣ ಸುರಿಸುವನಪ್ಪ ಉರುಗಗಿರಿಯಲ್ಲಿಪ್ಪ ಸುರತರು ಇವನಪ್ಪ ಗಿರಿಸಪ್ತ ದೊರೆಯಪ್ಪ ಹರಿಕೆ ಕೊಳ್ಳುವನಪ್ಪ ಅರಿಮಾರಿ ಸರಿಯಪ್ಪ ಶರಣರ ಪೊರೆಯಪ್ಪ ಕರೆಕರೆ ಬೇಡಪ್ಪ ಸ್ವರತ ಸುಖಮಯನಪ್ಪ ಅರವಿದೂರನಪ್ಪ ಮರೆವ ಶರಣರ ತಪ್ಪ ಸರ್ವಹೃದಯಗನಪ್ಪ ಪರಿಪೂರ್ಣಗುಣನಪ್ಪ ಅರಿಶಂಖುಧರನಪ್ಪ ಉರಿವ ರವಿಯಲ್ಲಿಪ್ಪ ಸರ್ವಮುಕ್ತರಿಗಪ್ಪ ಬಿರಿವ ಖಳರೆದೆಯಪ್ಪ ಮರುತ ಮಂದಿರನಪ್ಪ ಪರಿಮರ ಹೌದಪ್ಪ ಪೊರೆದೆ ಮಾಧವನಪ್ಪ ವರಲೀಲಾ ಮಯನಪ್ಪ ಪರಮ ಅದ್ಭುತನಪ್ಪ ಪರಮಾತ್ಮಹೌದಪ್ಪ ಕರಣ ಚೋದಿಪನಪ್ಪ ಕರಣಕ್ಕೆಸಿಗನಪ್ಪ ದುರಿತ ಪಾವಕನಪ್ಪ ಪರಮ ಪಾವನನಪ್ಪ ಹರನ ಅಪ್ಪನಿಗಪ್ಪ ಪರಮೋಚ್ಚಹೌದಪ್ಪ 4 ಬಾದರಾಯಣ ಪೂರ್ಣ ಭೋಧ ತೀರ್ಥರ ದೈವ ಮೋದ ಚಿನ್ಮಯಗಾತ್ರ ವೇದ ವಿಭಜಿಸಿ ನಿಂದ ಖೇದವಿದ್ಯೆಯ ಕೊಂದ ವಾದಿವಾರಿಣಿ ಸಿಂಹ ವಾದಿರಾಜರ ಹೃದಯ ಮೋದ ಹಯಮುಖ ಶುದ್ಧ ವೇದರಾಶಿಯತಂದ ವೇಧಗರುಹಿದ ಕರುಣಿ ಖೇದ ನೀಡುತಲಿದ್ದ ಆದಿದೈತ್ಯರ ಕೊಂದು ಮೇದಿನಿಯನು ಎಯ್ದೆ ಶ್ರೀಧರ ನರಸಿಂಹ ಗೋಧರಮಹಿದಾಸ ಕಾದುಕೊ ಶ್ರೀ ವಿಷ್ಣು ಭೇದ ವಿದ್ಯೆಯಮನಕೆ ಭೋಧಿಸು ವರ ಕಪಿಲ ಸಾಧು ಋಷಭದತ್ತ ಯಾದವ ಕುಲರನ್ನ ಕಾಯ್ದೆ ಗೋಪಿಯ ರನ್ನ ಸೀಳ್ದೆ ಕೌರವರನ್ನ ಪೇಳ್ದೆ ಪಾರ್ಥಗೆ ಗೀತೆ ಶುದ್ಧ ಜಯಮುನಿಹೃಸ್ಥ ಮಧ್ವ ಇಂದಿರೆನಾಥ ಮುದ್ದು ಕೃಷ್ಣವಿಠಲ ಬಿದ್ದೆ ಪಾದದಿ ಶರಣು 5
--------------
ಕೃಷ್ಣವಿಠಲದಾಸರು
ವೆಂಕಟೇಶ ಜಗದೀಶ | ವೆಂಕಟೇಶ || ವೆಂಕಟೇಶ ಜಗದೀಶ ಸದರುಶನ | ಶಂಖಪಾಣಿ ಅಕಳಂಕ ಚರಿತಾ ಪ ನಭಾಸ್ಥಾನನರಸಿಜನಾಭ ಭಜಕರ ಸು | ಲಭಾ ವಸುಧಾ ಶ್ರೀ ದುರ್ಗಾವ | ಭೂಷಣನ ಪಾಲಿಸಿದ ಪಾವನಕಾಯ | ದಾಸರುಗಳ ಕಾಹುವ ಶೇಷಭೂಷಾ 1 ದತ್ತ ವೈಕುಂಠ ಮಹಿದಾಸ ಹಯಗ್ರೀವ ಹಂಸಾ | ಸೂನು ತಾಪಸಾ | ಚಿತ್ತಜಪಿತ ದೇವೋತ್ತಮ ಆಗಮಾ | ಸ್ತೋತ್ರವಿನುತ ಜಗವ ಸುತ್ತಿಪ್ಪ ಸುರಗಂಗೆ | ಪೆತ್ತೆ ಮಂದರಗಿರಿ | ವಿತ್ತ ಸಂಪತ್ತು ಇತ್ತಾ 2 ಅಜಿತ ನಾರಾಯಣಾ ವಿಷ್ವಕ್ಸೇನ | ಗಜವರದ ಹರಿವಿದ್ಭಾನು | ಸುಜನಪಾಲ ಪಂಕಜದಳ ಲೋಚನ | ತ್ರಿಜಗದೈವವೆ ದನುಜಕುಲ ಮದರ್Àನ | ಅಜಕಾನನ ವಾಸ ವಿಜಯವಿಠ್ಠಲ ರವಿತೇಜ ವಿದ್ವದ್ ರಾಜಾ 3
--------------
ವಿಜಯದಾಸ
ವೆಚ್ಚಕುಂಟು ನಮಗೆ ಅಚ್ಯುತನಾಮ ನಿಶ್ಚಯದ ಧನವು ಧ್ರುವ ವೆಚ್ಚಮಾಡಿದರೆಂದಿಗೆ ಅಚ್ಚಳಿಯದು ನಿಶ್ಚಯದ ಬದಕು ಬಚ್ಚಿಟ್ಟುಕೊಂಡು ನಿಜ ಎಚ್ಚರಿಕಿಂದ ನಿಶ್ಚಿಂತದಲಿ ಉಂಬೆನು 1 ಸಂಚಿತ ಧನವು ಬಡತನವನು ಹಿಂಗಿಸಿತು ಒಡಿಯನಖಂಡ ಕೃಪೆಯಿಂದಲಿ 2 ಸಾದ್ಯವಾಯಿತು ಎನಗೆ ಸದ್ಗುರು ಕೃಪೆಯಿಂದ ನಿಜಧನವು ಮಾಡಿ ಸಾಧಿಸೊಕೊಂಬುವದು 3 ಕಟ್ಟಬಿಡಲಾಗುದು ವಿಟ್ಟಿ ಹ್ಯಧನಕೊಟ್ಟರೆಂದಿಗೆ ತೀರದು ಇಟ್ಟಿಹ ತನುಮನದಲಿ ಘಟ್ಯಾಗಿ ಕೇಳಿರೊ ಈ ಮಾತವ 4 ಅರುಹು ಅಂಜನವಿಟ್ಟಿ ತೋರಿದ ಗುರುಕರದಲಿ ಈ ಧನವು ಹರುಷವಾಯಿತು ಎನಗೆ ಧರೆಯೊಳು ತರಳಮಹಿಪತಿಗೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವೆಂದೆನುತ ಬಂದೆನು ನಾ ಪ ಬಂದಾ ಬಂದಜನಕಾನಂದ ಕೊಡುತಲಿ ವಂದಿಸಿ ಭಜಿಪರಘಂಗಳ ಕಳೆದು ಸಲಹುವಿಯೋ ಸದ್ಗುರು ರಾಘವೇಂದ್ರಾ 1 ಭೀತರಾಗುತ ನಿನ್ನಡಿಗಳ ಸೇವಿಸಲು ಆದರದಿಂದಲವರ ಭವ-ಭಯವ ಪರಿಹರಿಸಿ ಸಲಹಿ ಉದ್ಧರಿಸುವೆ ಗುರುರಾಘವೇಂದ್ರಾ 2 ದುಷ್ಟ ಜನರು ಕೂಡಿ ಕೆಟ್ಟಯೋಚನೆ ಮಾಡಿ ಗುಟ್ಟಾಗಿ ನಿಮ್ಮ ಪರೀಕ್ಷಿಸ ಬೇಕೆಂಧು ಜೀವ ವಿದ್ದವನ ನಿರ್ಜೀವನೆನುತ ತರಲು ಸತ್ಯದಿ ನಿರ್ಜೀವನನ್ನಾಗಿ ಮಾಡಿದೆ ಪ್ರಭವೆ 3 ಕುಹಕಿ ಜನರು ಎಲ್ಲಿ ವನಕೆತುಂಡನು ತಂದು ಚಿಗುರಿಸ ಬೇಕೆನುತಲಿ ಕೇಳಲು ಕಮುಂಡದೊಳಿದ್ದ ದಿವ್ಯೋದಕ ಪ್ರೋಕ್ಷಿಸಿ ಚಿಗುರಿಸಿ ಫಲ ಮಾಡ್ದೆ ಅದ್ಭುತ ಮಹಿಮಾ 4 ಮಾವಿನರಸದೊಳು ಮುಳುಗಿ ಮೃತನಾದಾ ಬಾಲಕನಿಗೆ ಪ್ರಾಣಗಳನಿತ್ತೆ ದಯದೀ ಭುವಿಯೊಳು ನಿಮ್ಮ ಮಹಿಮೆಗೆಣೆಕಾಣೆ ಮಂತ್ರಾಲಯದೊರೆ ಗುರು ರಾಘವೇಂದ್ರಾ 5 ``ಶ್ರೀರಾಘವೇಂದ್ರಾಯ ನಮಃ'' ಎಂಬ ದಿವ್ಯನಾಮವ ಮನುಜನು ಪ್ರತಿದಿನ ಭಜಿಸುತ್ತಲಿರಲು ಘೋರ ದುರಿತಗಳೆಲ್ಲ ದೂರವ ಮಾಡಿ ನಿನ್ನ ಚರಣಸೇವಕರನ್ನು ಸಲಹುವಿಯೋಗುರುವೇ6 ಶ್ರೀ ರಘುರಾಮನ ಪ್ರಿಯಭಕ್ತನಾದ ಶ್ರೀ ಗುರು ರಾಘವೇಂದ್ರರ ಚರಣ ಭಜಿಸಿರೊ ನಂಬಿದ ಭಕ್ತರ ಬೆಂಬಿಡದೆ ಸಲಹುವ ಘನ್ನಕೃಪಾನಿಧಿ ನಮ್ಮ ಗುರು ರಾಘವೇಂದ್ರಾ 7
--------------
ರಾಧಾಬಾಯಿ
ವೇಣು ವಿನೋದ ವಿಠಲ | ನೀನೆ ಪೊರೆ ಇವನಾ ಪ ದೈನ್ಯದಲಿ ತವ ದಾಸ್ಯ | ಕಾಂಕ್ಷೆಯಲಿ ಹಯಮೊಗನೆಗಾನ ಮಾಡಲು ನಿನ್ನ | ಪಾಸು ಕೂಲಿಸಿದೇ ಅ.ಪ. ಖಂಡೀ ಭವದ್ ಬಹುಲ | ಡಿಂಡೀರ ಜೃಂಬಣಸುಚಂಡೀ ಕೃತೋ ಎಂಬ | ಶೌಂಡಪದಯತಿಯಿಂಗೊಂಡು ಸುಸ್ವಪ್ನದಲಿ | ದಂಡವತ್ತರಗಿ ಮುದ-ಗೊಂಡು ತವ ಪಾಪಗಳ | ಖಂಡಿಸೀದವನಾ 1 ತೀರ್ಥಾಭಿಷೇಕದಿ ಪು | ನೀತನಾದಗೆ ಭಾವಿವಾತಾತ್ಮ ಮಹಿಮೆಗಳ | ದ್ಯೋತಕ ಸುಗ್ರಂಥಾಪ್ರೀತಿಯಿಂ ಪಡೆದಿಹನೊ | ಮಾತುಳಾಂತಕ ಹರಿಯೆಆತು ಕೈಪಿಡಿ ಇವನ | ಧಾತಾಂಡದೊಡೆಯಾ 2 ಲೌಕೀಕವನ್ನೆಲ್ಲ ವೈಧೀಕವೆಂದೆನಿಸಿ ಈತೋಕನಿಗೆ ಸುಜ್ಞಾನ | ಭಕುತಿ ಸಂಪದನಾನೀ ಕರುಣದಿಂ ಕೊಟ್ಟು | ಪ್ರಾಕ್ಕುಕರ್ಮಾವಳಿಯನೀ ಕಳೆಯೊ ಕರುಣಾಳು | ನಾಕನದಿ ಪಿತನೆ 3 ಬೋಧ ಬೋಧ ಮೂರುತಿಯೇ 4 ಅದ್ವೈತ ಭವ | ನೋವ ಪರಿಹರಿಸಯ್ಯಗೋವಳ ಪ್ರೀಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವೇಣುಧರ ವಿಠಲಾ | ನೀನೆ ಪೊರೆ ಇವಳಾ ಪ ಕಾಣೆ ನಿನ್ಹೊರತು ಕಾ | ರುಣ್ಯ ಮೂರುತಿಯೆ ಅ.ಪ. ಸ್ವಾಪದಲಿ ಗುರುರೂಪ | ರೂಪ ಸಮ್ಮುಖದಲ್ಲಿಗೋಪಕೃಷ್ಣಾಕೃತಿಯ | ಪಡೆದಿಹಳು ಇವಳುಶ್ರೀಪತಿಯೆ ನಿನ್ನೊಲಿಮೆ | ಆಪಾರವಿರುತಿರಲುಪ್ರಾಪಿಸುತ ಅಂಕಿತವ | ಒಪ್ಪಿಸಿಹೆ ನಿನಗೇ 1 ಪಥ ತೋರೋ ಹರಿಯೇ2 ಪತಿ ಸುತನೆ | ಕಾರುಣ್ಯ ತೋರಿ ಆ-ಪಾರ ದುಷ್ಕರ್ಮಗಳ | ಪಾರಗಾಣಿಪುದೋ |ಮಾರುತನ ಮತದಲ್ಲಿ | ಧೀರೆ ಎಂದೆನಿಸಿ ಸಂ-ಸಾರ ಸಾಗರವನ್ನು | ದಾಟಿಸೋ ಹರಿಯೇ 3 ಸೃಷ್ಟಿ ಸ್ಥಿತಿ ಲಯ ಕರ್ತ | ಕೃಷ್ಣಮಾರುತಿ ದೇವಅಷ್ಟಸೌಭಾಗ್ಯಗಳ | ಕೊಟ್ಟು ಕಾಪಾಡೋವಿಷ್ಟರಶ್ರವ ಹರಿಯೆ | ನಿಷ್ಠೆ ಆಚಾರದಲಿಕೊಟ್ಟು ಕೈಪಿಡಿ ಇವಳ | ಜಿಷ್ಣುಸಖ ಹರಿಯೇ 4 ಸರ್ವದಾ ತವ ಮಹಿಮೆ | ಶ್ರವಣ ಸುಖ ಸಾಧನವಹವಣೀಸಿ ತವನಾಮ | ವಜ್ರಾಂಗಿ ತೊಡಿಸೀಭವವನುತ್ತರಿಸತ್ಕಿ | ಬಿನೈಪೆ ಶ್ರೀ ಹರಿಯೆಸರ್ವ ಸುಂದರ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವೇದದ ಮೂಲ ಆದಿ ಅನುಕೂಲ ಸಾಧು ಜನರ ಸದ್ಛನ ಲೋಲ ಧ್ರುವ ಕೀಲ ಬುಧರಕನುಕೂಲ ಇದೇ ನಿಜ ನೋಡಿರೊ ಸಾಧಿಸಿ ಘನಸುಖಗೂಡಿರೊ 1 ಜ್ಞಾನದಾಸರ ಧ್ಯಾನದಂತರ ಖೂನದಾ ವಿವರ ಅನುಭವಾಧಾರ ಕಣ್ಣಾರ ಎನ್ನ ಮನೋಹರ 2 ಗುಹ್ಯ ಗೌಪ್ಯಸ್ಥ ಮಹಾಪ್ರಶಸ್ತ ಈಹ್ಯ ಸೌಭ್ಯಸ್ಥ ಮಹಿಮರ ತಸ್ತ ಸುವಸ್ತ ಶ್ರೀಗುರು ಸಮರ್ಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವೇದವ್ಯಾಸಾ ಶ್ರೀ ಹರೇ | ನಿನ್ನ ಶ್ರೀಪಾದಉದಕೇಜ - ತೋರಿಸೋ ಪ ಹರಣ ಪ್ರಬೋಧ ಮುದ್ರಾಂಕನ ಅ.ಪ. ಕಾಲ | ಸಕಲ ಸದ್ಗುಣಧಾಮ - ಶ್ರೀ ಭೂಮಿ ದುರ್ಗೆ ಲೋಲ ||ಧೃತ - ಕಾಮ ಜನಕ ನಿಸ್ಸೀಮ ಮಹಿಮ - ತ್ರಿಧಾಮದಲಿ ಭಕ್ತಸ್ತೋಮ ವಿರಿಸಿದೆ - ಶ್ರೀರಾಮಾ - ಸುಧಾಮ - ರಿಪು ಭೀಮಾ | ಸುರಸಾರ್ವಭೌಮ 1 ವಿಧಿ ಪುತ್ರಾನ್ವಿತಗೋತ್ರಾರಿ ಪ್ರಿಯ ಸತ್ಯಾವಲ್ಲಭಚಿತ್ರಾ - ಸುವಿಚಿತ್ರಾ - ಸಮಗಾತ್ರಾ | ತೋರಿಸುತವಗಾತ್ರ 2 ಚಿನುಮಯಗುಣ ವಪುಷಾ | ಅನಂತ ಶೀರ್ಷಾಅನಿಲ ಹೃದಯಾಂತರ್ಗತ ||ಧೃತ - ಮನಸಿಜ ಪಿತ ಗುರುಗೋವಿಂದ ವಿಠಲನೆತನುಮನಧನವೆಲ್ಲ ನಿನದಾಗಿರುವುದೊಮುನಿವಂದ್ಯಾ - ಮುಕುಂದ - ಗೋವಿಂದ | ಕೊಡು ಎನಗಾನಂದ3
--------------
ಗುರುಗೋವಿಂದವಿಠಲರು
ವೈಕುಂಠಗಿರಿಯವಾಸನ ಮಹಿಮೆ ಸ್ಮರಿಸು ಜೋಕೆಯಿಂದಲಿ ಪೊರೆವ ಶ್ರೀಹರಿಯ ಭಜಿಸು ಪ. ಭಕ್ತ ರಕ್ಷಕ ಹರಿಯು ಭಾಗ್ಯೋದಯದ ಸಿರಿಯು ಮುಕ್ತಿದಾಯಕ ದೇವ ಮುನಿವರದ ಕಾವ ಮುಕ್ತಿಯೋಗ್ಯರ ಸಂಗ ಮುದದಿಂದ ನೀಡೆಂದು ಭಕ್ತಿಯಿಂದಲಿ ಭಜಿಸೆ ಬಂದು ಪೊರೆಯುವನು 1 ಭಾರ ಬೆನ್ನೊಳು ವಹಿಸಿ ಕೋರೆ ಹಲ್ಲನು ತೆರೆದು ಕಂಭದಲಿ ಬಂದ ಮೂರಡಿಯ ಭೂ ಬೇಡಿ ಕ್ಷತ್ರಿಯ ಕುಲವನೆ ಸವರಿ ವೀರ ರಾವಣನಸುವ ಹೀರಿದ ಹರಿಯು 2 ಶ್ರೇಷ್ಠ ಯದುಕುಲದಲ್ಲಿ ಪುಟ್ಟಿ ಬತ್ತಲೆ ಕಲಿಯ ಕುಟ್ಟಿ ಜಗ ರಕ್ಷಿಸಿದ ಸೃಷ್ಟಿಕರ್ತ ದಿಟ್ಟ ಮೂರುತಿ ಸತತ ಕಾಯ್ವ ಶ್ರೀ ಗೋಪಾಲ- ಕೃಷ್ಣವಿಠಲ ಶ್ರೀನಿವಾಸ ಜಗದೊಡೆಯ 3
--------------
ಅಂಬಾಬಾಯಿ
ವೈಷ್ಣವನಾರೆಂದು ದೃಷ್ಟಿಸಿ ಸೃಷ್ಟಿಯೊಳು ವಿಷ್ಣುನರಿತವನೆ ವೈಷ್ಣವನು| 1 ಭಕ್ತಿರಸದೊಳು ಮುಣುಗಿ ಭಕ್ತಿಗೈದುವ ಗತಿಯ ಯುಕ್ತಿ ತಿಳಿದವನೆ ವೈಷ್ಣವನು 2 ಹರಿ ಪರಂದೈವೆಂದು ಹರಿಯ ಕೊಂಡಾಡುತಲಿ ಹರಿಯ ನೆನೆಯುವನೆ ವೈಷ್ಣವನು 3 ಹರಿ:ಓಂ ತತ್ಸದಿತಿಯೆಂಬ ಹರಿವಾಕ್ಯವನು ಅರಿತವನೆ ಪರಮ ವೈಷ್ಣವನು 4 ಹರಿಧ್ಯಾನ ನೆಲೆಗೊಂಡು ಹರಿನಾಮ ಬಲಗೊಂಡು ಹರಿಯ ಸ್ಮರಿಸುವವನೆ ವೈಷ್ಣವನು 5 ಪರದೆ ಇಲ್ಲದೆ ಪಾರ ಬ್ರಹ್ಮಸ್ವರೂಪನು ಗುರುತ ಕಂಡವನೇ ಪರಮ ವೈಷ್ಣವನು6 ಗುರುಕೃಪೆಯಿಂದ ಪರಗತಿ ಸಾಧನವು ಮುಟ್ಟಿ ಅರಿತು ಬೆರೆದನೆ ಪರಮ ವೈಷ್ಣವನು 7 ಮೂಲ ಮೂರುತಿಗ್ಯಾಗಿ ಮೇಲಗಿರಿಯನೇರುವ ಕೀಲ ತಿಳಿದವನೆ ವೈಷ್ಣವನು 8 ಉಂಟಾಗಿ ಇರುಳ್ಹಗಲಿ ಗಂಟ್ಹಾಕಿ ಹರಿಪಾದ ಬಂಟನಾದವನೆ ವೈಷ್ಣವನು 9 ಕಂಟಕ ನೀಗಿ ಮೂರು ಬಲೆಯನು ದಾಟಿ ಮೀರಿ ನಿಂದವನೇ ವೈಷ್ಣವನು 10 ಆಶಿಯನೆ ಜರಿದು ನಿರಾಶೆಯನು ಬಲಿದು ಹರಿದಾಸನಾದವನೆ ವೈಷ್ಣವನು 11 ದ್ವಾದಶನಾದವನು ಸಾಧಿಸಿ ಕೇಳುತಲಿ ಭೇದಿಸಿದವನೆ ವೈಷ್ಣವನು 11 ಅನುದಿನ ಘನಸುಖವು ಅನುಭವಿಸುವನೆ ವೈಷ್ಣವನು 12 ವಿಷ್ಣುಭಕ್ತಿಯ ಸುಖವು ಮುಟ್ಟಿ ಮುದ್ರಿಸಿ ಪುಷ್ಟವಾಗಿದೋರುವನೆ ವೈಷ್ಣವನು 13 ವಿಷ್ಣುಮೂರ್ತಿಯ ಧ್ಯಾನ ದೃಷ್ಟಾಂತ ಮಹಿಪತಿಗೆ ಕೊಟ್ಟಾ ಗುರು ಪರಮ ವೈಷ್ಣವನು 14
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವ್ಯರ್ತವಾಯಿತು ಜನುಮಾ | ಹರಿಭಕ್ತಿ | ಅರ್ಥಿಯ ನೆಲೆಗೊಳ್ಳದೇ ಪ ನೊಣ ಮಧು ಬಿಂದುದಲೀ ಕುಳಿತಂತೆ | ವಣ ವಿಷಯದ ಸುಖಕ | ಹೆಣಗುತ ನಿಶಿದಿನದೀ | ತಾಪತ್ರಯ | ಕುಣಿಯೊಳು ಹೊರಳುತಲೀ 1 ಅವನಿಲಿ ಸಂಸಾರದೀ ಸಂಟರ್ಘಾಳಿ | ರವದಿಯಾ ತೆರೆ ಶಿಲುಕೀ | ವಿಧಿ ಬರ | ಹ್ಯಾವ ತಿಳಿಯದೆ ಮರುಗೀ 2 ಭೋಗಿನಾ ತ್ಯಾಗಿಯಾಗಿ ಆಯುಷ್ಯ | ನೀಗಿ ಯಚ್ಚರವಿಲ್ಲದೇ | ಶ್ರೀ ಗುರುಮಹಿಪತಿ ಸುತಪ್ರಭು | ಭಾಗವತರ ಕೂಡದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವ್ಯರ್ಥ ದೂರುವರೀಶನಾ ವ್ಯರ್ಥದೂರುವರೈಯ್ಯಾ ಮರ್ತು ತಮ್ಮವಗುಣ ಮರ್ತ್ಯಲಾಭಾ ಲಾಭಾ ಕರ್ತ ಮಾಡುವೆನೆಂದು ಪ ಕಣ್ಣು ಕಿವಿ ನಾಲಿಗಿನ್ನು ನಾಶಿಕಕೊಟ್ಟು ಸನ್ನುತ ಹರಿಕಥೆ ಕೇಳು ಯನ್ನಸ್ತುತಿ ಸುನಿರ್ಮಾಲ್ಲ್ಯುನ್ನತ ತುಳಸಿ ವಾಸನಾಘ್ರಾಣಿಸೆಂದು ಮುನ್ನೆಂದನಲ್ಲದೇ ಆನ್ಯದೈವ ನೋಡೆಂದನೇ ಪಿಶುನರ ಅನ್ಯಾಯವ ಕೇಳೆಂದನೇ ಉದರಕಾಗಿ ಮಾನವ ಹೊಗಳೆಂದನೇ ಭೋಗದ ತನ್ನಗೋಸುಗ ದ್ರವ್ಯ ಆಘ್ರಾಣಿಸೆಂದನೆ 1 ಮಂಡಿತ ಸಿರಸದೋರ್ದಂಡ ಕರಚರಣ ಚಂಡ ಮನಗಳಿಂದಾ ಖಂಡ ನಮಿಸಿ ಸೇವೆ ಪುಂಡಲೀಕದ ಪರಿಗಂಡು ನೃತ್ಯಾದಿಯ ಬೋಧ ಮನನ ಪಂಡುಂಡ ಮಾಡೆಂದ ಮಂಡಿ ಬಿಗಿದರೆಂದನೇ ಜನರಿಗು ದ್ವಂದದಿ ಹೊಡಿಯಂದನೇ ಧನಿಕರ ಕಂಡು ಭ್ರಾಂತಿಗೆ ಬಿದ್ದು ಚಿಂತಿಸುಯಂದನೆ 2 ನಿತ್ಯ ವರಿತು ಸತ್ಯಜ್ಞಾನೌಷದ ಉತ್ತಮ ರಸಾಯನ ಅತ್ತಿತ್ತಲಾಗದೇ ಕೊಂಡು ಇತ್ತ ಭವರೋಗ ವಿಪತ್ತದ ಕಳೆಯೆಂದ ಮತ್ತ ಮಹಿಪತಿ ಸುತ ಹೃತ್ತಾಪಹಾರಿ ಕು ಚಿತ್ತ ನೀನಾಗೆಂದನೇ ಸತ್ಸಂಗ ನಿತ್ಯ ಮಾಡಿರೆಂದನೇ ಬರಿದೆನೀ ಮೃತ್ಯು ದೇವತೆ ಬಾಯ ತುತ್ತಾಗುಯಂದನೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವ್ಯರ್ಥ ನುಡಿವುದೇನು | ಅರ್ತು ಕೊಂಡಿರು ನೀ ಪ್ರಾಣಿ ಪ ಮುಕ್ತಿ ಮಾರ್ಗರಿಯದೇ ಬ್ರಹ್ಮ ನಾನೆಂದು | ಭಕ್ತಿ ಬಿಡುದು ಕುಂದು 1 ಕೂಲಿ ಮಾಡುತ ತಾ ಅರಸನೆಂದರ | ಇಳೆಯೊಳೆಲ್ಲರು ನಗರೇ ಪ್ರಾಣಿ 2 ಈಸಲರಿಯದವ ತೆಪ್ಪ ಬಿಡಲು | ಘಾಸಿಯಾಗನೇ ಹೇಳು ಪ್ರಾಣಿ 3 ಹೆಚ್ಚು ಕುಂದಿನ ಬಡಿವಾರಗಳಿಲ್ಲ | ಇಚ್ಚೆಯಗಳವಿಲ್ಲಾ ಪ್ರಾಣಿ 4 ಮಹಿಪತಿ ಸ್ವಾಮಿಯ ಕಂಡಿರು ಹೀಂಗ ಸಿಹಿಗಂಡ ಮೂಕನ್ಹಾಂಗ ಪ್ರಾಣಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವ್ಯಾಸ ತತ್ವಜ್ಞರ ಚರಿಯಾ ಮನಕಾಶ್ಚರಿಯಾ ಪರಮಹಂಸ ಕುಲಜ ಭುವನೇಂಧ್ರರ ತನಯಾ ಪ ಶೇಷಗಿರೀಶ್ವರ ಕೃಪಯಾ ಐಜಿ ವ್ಯಾಸವೆಂಕಟ ನರ- ಸಿಂಹಾಭಿಧೇಯ ಭೂಸುರೋತ್ತಮರಿಗೆ ತನಯಾ ನೆನಿಸಿ ಭಾಸುರ ಕೀರ್ತಿಯ ಪಡೆದ ರಾಮಾರ್ಯ 1 ವೇಣಿ ಸೋಮಪುರ ನಿಲಯ ಪಾಹಿ ಆನತ ಜನಸುರಧೇನೋ ಮಾಂಕೃಪಯಾ ವೇಣು ಗೋಪಾಲನ ಪ್ರೀಯ ಎಂದು ಸೂರ್ಯ 2 ಕೇಳಿವರ ಮಹಿಮೆ ಅಪಾರ ಗದ್ ವಾಲ ಭೂಪಗೆ ಬಂದ ಭಯ ಪರಿಹಾರ ಪೇಳಲು ಶ್ಲೋಕಾರ್ಥಸಾರ ಕೃಷ್ಣಾ ಮೇಲೆ ಪ್ರವಹಿಸಲು ಓಡಿತು ಶತೃನಿಕರ 3 ಭೃಂಗ ತನ್ನ ನೇಮದಿಂದಲಿ ಶೇವಿಪರ ಭವಭಂಗ ಪರ ಬ್ರಹ್ಮ ನಾನೆಂಬೊ ದುರ್ಮತ ಗಜಸಿಂಗ4 ನಂದ ನಂದನ ಗುಣಸ್ತವನ ಮಾಳ್ಪ ನಂದ ತೀರ್ಥರ ಮತಾಂಬುದಿ ಶೀತ ಕಿರಣ ಒಂದಾರು ಜನರೊಳು ಕರುಣ ಕೃತ ಮಂದ ನಂದಿನಿ ವ್ಯಜನಾದಿ ವ್ಯಾಖ್ಯಾನ 5 ಘನ್ನ ಮಹಿಮ ಜಿತಕಾಮಾ ಅ- ರಣ್ಯ ಕಾಚಾರ್ಯ ಸೇವಿತ ಪದ ಪದುಮ ಶುಭ ಗುಣಸ್ತೋಮ ಮನವೇ ಬಣ್ಣಿಸಲೊಶವೆ ಪಂಚಾಮೃತ ಮಹಿಮಾ 6 ವಾಸುದೇವನ ಗುಣತತಿಯ ಪೇಳಿ ದಾಸ ಜನರಿಗೆ ಪಾಲಿಸಿದಿ ಸನ್ಮತಿಯಾ ಭಾಸುರ ಕುಸುಮೂರ್ತಿರಾಯ ನೆನಿಸಿ'ಶ್ರೀಶಕಾರ್ಪರ ನರಹರಿ’ ಗತಿ ಪ್ರೀಯ 7
--------------
ಕಾರ್ಪರ ನರಹರಿದಾಸರು
ವ್ಯಾಸರಾಯರ ಚರಣವನೆ ಸೇವಿಸಿ ಪ ವ್ಯಾಸರಾಯರ ಚರಣ ಸರಸಿಜದ ಸೇವೆ ಬಲು ಮೀಸಲ ಮನದಿ ಮಾಡೆ ಆಶೆಪಾಶೆಯ ತೊರೆದು ಕ್ಲೇಶವೆಲ್ಲವ ಹರಿಸಿ ಭಾಸಿಸುವ ಬಿಡದಲೇ ಹೃದ್ದೇಶ ಖೇಶದೊಳಗೇ ಅ.ಪ. ಬನ್ನೂರು ಪುರದಲ್ಲಿ ಮುನ್ನೋರ್ವ ಬ್ರಾಹ್ಮಣನಮನ್ನೆಯೋಳ್ಳುದಿಸಲೂ ಸ್ವರ್ಣ ಪಾತ್ರೆಲಿ ತರಿಸಿಘನ್ನ ಮಹಿಮನ ತಂದು ಬ್ರಹ್ಮಣ್ಯ ಯತಿವರರು ತಮ್ಮ ಆಶ್ರಮದಿ ಪೊರೆಯೆ ||ಉನ್ನತದ ಗುಡ್ಡದಲಿ ಗವಿಯ ಮನೆಯಾಗಿರಲು ಚಿಣ್ಣನಾ ತೊಟ್ಟಿಲಿನ ಮೇಲಿನ ಗವಾಕ್ಷದಿಂಚೆನ್ನಗೋವ್ ದಿನದಿನದಿ ಪಾಲ ಕರೆಯುತ ಚಿಣ್ಣನನು ತಾ ಬಲು ಸಲಹಿತು 1 ತಾಪಸೋತ್ತಮರಾದ ಶ್ರೀಪಾದರಾಯರ ಸ-ಮೀಪದೊಳು ಆ ಪರಮ ಶಾಸ್ತ್ರ ವ್ಯಾಸಂಗದೀಭಾಪು ಭಾಪನೆ ಮೆರೆದು ಭಕ್ತಿ ಸುಪಥವ ಪಿಡಿದು ಮೈ ಮರೆದು ಕುಣಿಯುತಿರುವ ||ಶ್ರೀಪಾದ ಮುನಿಪ ತಾ ಮುಚ್ಚಳವ ತೆರೆಯದಿಹ ಸಂಪುಟವ ತೆರೆಯುತ್ತ ಶ್ರೀ ಪತಿಯನೆ ನೋದುತಶ್ರೀಪ ಶ್ರೀ ವೇಣುಗೋಪಾಲ ಕೃಷ್ಣನ್ನ ಕಾಣುತ್ತ ಕುಣಿ ಕುಣಿದಾಡಿದ 2 ಶಾಲಿಗ್ರಾಮವ ಪಿಡಿದು ತಾಳವನೆ ಹಾಕುತ್ತಬಲುಭಕ್ತಿ ಭರದಿಂದ ಘಲ್ಲು ಘಲ್ಲನೆ ಕುಣಿಯೆಖುಲ್ಲ ಜನರಿದರ ವಳ ಮರ್ಮವನೆ ತಿಳಿಯದಲೆ ಗುಲ್ಲುಗುಲ್ಲೆಂದು ನಗಲೂ || ಬಲ್ಲಿದ ಶ್ರೀಪಾದರಾಯರಿದ ಕೇಳಿ ಕಂಗಳಲಿ ಗಂಬನಿ ಗಲ್ಲದಲಿ ಕೈಯಿಡುತ ಸೊಲ್ಲ ಕೇಳಿರಿ ಸುಜನರೆಲ್ಲರು ಶ್ರೀ ಕೃಷ್ಣ ನಮ್ಮ ವ್ಯಾಸರೋಶನಾದನು 3 ಸಾರಥಿ ಹರಿಯನಿಜ ಮತವ ಬೋಧಿಸುತ ನಿಜ ಜನರ ಪೊರೆಯುತ್ತಕುಜನ ಕುತ್ಸಿತ ಮಾಯಿಮತ ಜೈಸಿಅಜನನಯ್ಯನ ಪ್ರೀತಿ ಸಂಪಾದಿಸಿ ||ಸುಜನ ಪಾಲಕ ಕೃಷ್ಣರಾಜನಿಗೆ ಕುಹುಯೋಗಗಜಬಜಿಸಿ ಬರುತಿರ್ಪುದನು ನಿಜ ಮನದಿ ತಿಳಿದುಗಜವರದ ನಂಘ್ರಿಯನೆ ಭಜಿಸುತ್ತ ವಿಜಯ ಪುರಿ ಸಿಂಹಾಸನವನೇರ್ಧರ 4 ಪರಿ ಗ್ರಂಥ ರಚನೆಯಲಿ ಕಳೆಯೆ ಕಾಲವಕಲು ಮನದ ಜನರಿವರ ಬಲು ಪರಿಯ ಮಹಿಮೆಗಳನೂ ತಾವ್ ತಿಳಿಯಲೊಶವೆ 5 ಇಂಪುಗೊಳ್ಳುತ ಮನದಿ ತಂಪಿನಿಂದಲಿ ಮೆರೆವಪಂಪೆ ಸುಕ್ಷೇತ್ರದಲಿ ಬಾಂಬೊಳೆಯ ಜನಕನ್ನಸಂಪ್ರೀತಿಯನೆ ಪಡೆದಿರುವ ಯಂತ್ರ ಉದ್ಧಾರರನ ಸ್ಥಾಪಿಸುತಲಿ||ನೋಂಪಿನಿಂದಲಿ ಬ್ರಾಹ್ಮಲಕ್ಷ ಗುಂಪಿಗೆ ಉಣಿಸಿ |ಸಂಪುಲ್ಲ ಲೋಚನನ ಶಂಫಲಿಯ ಪುರಗನನುಸಾಂಪ್ರದಾಯಕದಿಂದ ಸಂಪ್ರೀತಿ ಬಡಿಸಿದರ ಪದ ಪಾಂಸುವನೆ ಸಾರಿರೋ 6 ಪರಿ ಪರಿಯ ಪೂಜೆಯನೆ ಗೈಯ್ಯುತಲಿ ||ಶ್ರೀಶನ ಸುಪೂಜಾ ವಿಧಾನವನೆ ಗೈಸುತ್ತದೋಷದೂರನ ಸೇವೆ ಮೀಸಲಳಿಯದ ಮನದಿ ಒಸೆದು ತಾವ್ ಗೈಯ್ಯುತ ಭಾಸಿಸುವ ಸತ್ಕೀರ್ತಿಯುತರಾಗಿ ಮೆರೆಯುತಿಹರ 7 ಪುರಂದರ ವಿಠಲ ದಾಸನೆಂದೂದಾಸ ಪೀಠದಿ ನಿಲಿಸಿ ದಾಸ ಕೂಟವ ರಚಿಸಿ ಸತ್ಪಂಥವನೆ ಸಾರಿದ ||ಆಶುಕವಿತೆಯ ರಚಿಸಿ ಪ್ರಾಕೃತ ಸುಭಾಷೆಯಲಿಕೇಶವನ ಗುಣಧಿಯಲಿ ಲೇಸಾಗಿ ಈಸುತಲಿದಾಸರೊಡನಾಡುತಲಿ ಮೀಸಲಾಗಿರಿಸಿ ತನು ಕೇಶವನ ಗುಣ ಪೊಗಳಿದ 8 ಜಯ ಜಯತು ಶುಭಕಾಯ ಜಯ ಜಯತು ವ್ಯಾಸಾರ್ಯಜಯ ಮಧ್ವಮುನಿ ಪ್ರೀಯ ಜಯ ಚಂದ್ರಿಕಾಚಾರ್ಯಜಯತು ವಿದ್ವದ್ದಾರ್ಯ ಜಯತು ಸುರಮುನಿ ಪ್ರೀಯ ಜಯ ಜಯತು ಯತಿವರ್ಯನೆ ||ಕಾಯಭವ ಪಿತ ಗುರೂ ಗೋವಿಂದ ವಿಠ್ಠಲಗೆಪ್ರೀಯ ಗುರು ವ್ಯಾಸಾರ್ಯ ಸ್ತೋತ್ರವನು ಭಾವ ಶುದ್ಧಿಯೊಳಾವ ಭಜಿಸುವನವಗೆ ಭವವನಧಿ ಉತ್ತರಿಸೆ ನಾವೆಯೆನಿಸುವುದಿದು 9
--------------
ಗುರುಗೋವಿಂದವಿಠಲರು