ಒಟ್ಟು 857 ಕಡೆಗಳಲ್ಲಿ , 93 ದಾಸರು , 749 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಿರುಪತಿ ಯಾತ್ರೆಯ ಮಾಡಿ ತಿರುಪತಿ ಪ ತಿರುಪತಿಯಾತ್ರೆಯ ಮಾಡಿ ಮನದ ದುರಿತಪಾಪಗಳನೀಡಾಡಿ ಆಹ ಸ್ಮರಕೋಟಿ ತೇಜನ ದರುಶನಲಾಭವು ದೊರಕಿದ ಸುಜನರ ಚರಿತೆಯ ಕೇಳುತ್ತ ಅ.ಪ ಸುಟ್ಟು ಹೋಗುವದಿದು ಚಂದ ಮೆಟ್ಟು ಮೆಟ್ಟಿಲನೇರುವ ವೃಂದ ಜನ ಸೃಷ್ಟಿಗೊಡೆಯ ಗೋವಿಂದ ಆಹಾ ದಿಟ್ಟಮನದಿ ಪರಮೇಷ್ಠಿಪಿತನ ಪಾಡಿ ಗಟ್ಯಾಗಿ ಗೋವಿಂದ ಗೋವಿಂದನೆನುವರು1 ಗಾಳಿಗೋಪುರವನ್ನೆ ದಾಟಿ ಭಕ್ತ- ರಾ ಮಂಟಪಕೆ ಉಂಟೆ ಸಾಟಿ ತಾಳ ಮೇಳದವರ ಗಲಾಟೀಯಿಂದ ಶೋಭಿಪ ಪವನನಕೋಟಿ ಕೇಳಿ ನೋಡುತ್ತ ಭಕುತಿಸೂರ್ಯಾಡುತ್ತ ಮಹಿಮೆ ಕೊಂ- ಡಾಡುತ್ತ ಪಾಡುತ್ತ ಕುಣಿವ ಸಜ್ಜನರೆಲ್ಲ 2 ಸ್ವಾಮಿ ಪುಷ್ಕರಣಿಯ ಸ್ನಾನ ಮಾಡಿ ಆ ಮಹವರಹದೇವರನ್ನ ಕಾಮ- ಧೇನೆಂಬ ಶ್ರೀ ಗುರುಗಳನ್ನ ನೋಡಿ ಆ ಮಹಾ ಅಶ್ವತ್ಥರಾಜನ್ನ ಸ್ತುತಿಸಿ ನೇಮದಿ ದಿಗ್ಗಾವಿ ಆಚಾರ್ಯರಿಗೆ ನಮಿಸಿ ಶ್ರೀಧರನಾಲಯ ದ್ವಾರಕ್ಕೆ ಪೋಗಲು 3 ಮೂರು ದ್ವಾರಗಳನ್ನೆ ದಾಟಿ ಮು- ರಾರಿಯ ಗುಡಿಸುತ್ತ ಕೋಟೆಯಲ್ಲಿ ಸಾರುವ ಭಕುತರ ಭೇಟಿಯಿಂದ ಅ- ಪಾರ ಜನುಮದ ಪಾಪಮೂಟೆ ಪೋಗಿ ಬೇಗದಿ ವಿಮಾನ ಶ್ರೀನಿವಾಸನ ನೋಡಿ ಸಾಗರಶಯನನ ದರುಶನ ಕೊಡುಕೊಡು ಎಂದು 4 ಕೊಪ್ಪರಿಗೆಯು ಮನೆಯಂತೆ ಹಣ ತಪ್ಪದೆ ಸುರಿಯುವರಂತೆ ನ- ಮ್ಮಪ್ಪ ವೆಂಕಟಸ್ವಾಮಿಯಂತೆ ತಪ್ಪನಾಡುವರ ಶಿಕ್ಷಿಪನಂತೆ ಆಹಾ ಕ್ಷಿಪ್ರದಿ ಶ್ರೀಧರನಪ್ಪಣೆಯಂದದಿ ಅಪ್ರಮೇಯನ ಸೇವೆಗೊಪ್ಪುವ ಸುಜನರು 5 ಹೇಮದ್ವಾರದಿ ನಿಂತ ಜನರು ನಮ್ಮ ಸ್ವಾಮಿ ಶೃಂಗಾರ ನೋಡುವರು ಶ್ರೀನಿ- ವಾಸನೆ ಸಲಹು ಎಂಬುವರು ಪಾಹಿ ಪಾಹಿ ಶ್ರೀಪತಿ ಎನ್ನುತಿಹರು ಶ್ರೀಶ ಗೋವಿಂದ ಗೋವಿಂದ ಗೋವಿಂದ ಮಾಧವ ಮಾತುಳಾಂತಕ ದೇವ ಮಾತು ಲಾಲಿಸು ಎಂದು6 ಚರಣದಂದಿಗೆ ಗೆಜ್ಜೆವಲಿಯೆ ಪೊನ್ನ ಸರಪಳಿ ಪಾಡಗ ನಲಿಯೆ ಒಳ್ಳೆ ಜರದ ಪೀತಾಂಬರ ಹೊಳೆಯೆ ಪಟ್ಟೆ ವರವಲ್ಲಿ ಹೊಳೆಯುತ್ತ ಮೆರೆಯೆ ಆಹ ಸರಗಳು ವಲಿಯುತ್ತ ಪದಕಂಗಳ್ಹೊಳೆಯುತ್ತ ಉರದಲ್ಲಿ ಶ್ರೀದೇವಿ ಇರುವ ವೈಭವ ನೋಡಿ7 ವರಶಂಖು ಚಕ್ರ ಹಸ್ತದಲಿ ದಿವ್ಯ ಸಿರದಿ ಕಿರೀಟ ಮೆರೆಯುತಲಿ ಪಟ್ಟೆ ತಿಲುಕ ಕಸ್ತೂರಿ ಹೊಳೆಯುತಲಿ ಥಳ ಥಳ ಹೊಳೆವ ಮುಖಕಾಂತಿಯಲಿ ಅಹ ಕಡೆಗಣ್ಣ ನೋಟದಿ ಜಗವಮೋಹನ ಮಾಳ್ಪ ಅಗಣಿತ ಮಹಿಮನ ಸುಗುಣವ ಪಾಡುತ್ತ 8 ಕರುಣಿಗಳರಸನೆ ದೇವ ತನ್ನ ಶರಣು ಹೊಕ್ಕವರನ್ನೆ ಕಾವ ತನ್ನ ಭಜಕರಿಗಭಯವ ನೀವ ಇನ್ನು ಸರಿಯುಂಟೆ ಶ್ರೀರಮಾದೇವ ಅಹ ಪರಿಸರನೊಡೆಯನ ನಿರುತದಿ ಧ್ಯಾನಿಸಿ ದುರಿತಗಳಳಿದು ಸದ್ಗತಿಯ ಪಡೆವರೆಲ್ಲ 9 ಕಾಲಹರಣ ಮಾಡದಂತೆ ತ್ರಿ- ಧಾಮನ ಸ್ಮರಿಸುವ ಚಿಂತೆಯಲ್ಲಿ ಆಲಸ್ಯ ತೊರೆದಿಹರಂತೆ ಶ್ರೀನಿ- ವಾಸನೆ ಇದಕ್ಹೊಣೆಯಂತೆ ಅಹ ಕಾಲಕಾಲಕೆ ತಕ್ಕ ಲೀಲೆಯ ತೋರುವ ಪಾದ ಧ್ಯಾನಿಪ ಸುಜನರು 10 ಹತ್ತವತಾರದ ಹರಿಯು ತನ್ನ ಭಕ್ತರು ಸ್ತುತಿಸುವ ಧ್ವನಿಯ ಕೇಳಿ ಚಿತ್ತದಿ ನಲಿಯುವ ಪರಿಯು ಸುರರು ವಿಸ್ತರಿಸುವ ದಿನಚರಿಯು ಅಹ ಭಕ್ತರ ಸ್ತುತಿಸಲು ಮತ್ತವರಿಗೊಲಿಯುವ 11
--------------
ನಿಡಗುರುಕಿ ಜೀವೂಬಾಯಿ
ತಿಳಿಯ ಬರದೆಲೆ ಮನವೆ, ತೀರ್ಥ ಯಾತ್ರೆಯ ಫಲವು ಪ ಸುಲಭದಲಿ ಸದ್ಗತಿಯ ಸೂರೆಗೊಂಬುವರಿಗಲ್ಲದೆ ಅ ನೂರೆಂಟು ತಿರುಪತಿಯ ಯಾತ್ರೆಯನು ನಾನೊಲ್ಲೆವಾರದೊಂದ್ಹೊತ್ತು ಉಪವಾಸವನು ನಾನೊಲ್ಲೆಸಾರ ರೇಣುವೆಯುಂಡು ಕಡೆಯ ಬಾಗಿಲ ಕಾಯ್ವನೀರ ಗೌಡಿಯ ಮಗನ ಮಗನ ಮಗನೆನಿಸೆನ್ನ1 ಪಂಚಾನ್ನ ಪರಮಾನ್ನವಾವುದನು ನಾನೊಲ್ಲೆಚಂಚಲಗೊಳಿಸುವ ಭೋಗ ಭಾಗ್ಯವ ನಾನೊಲ್ಲೆಹಿಂಚದೆ ದಾಸೋಹ ಮಾಳ್ಪವರ ಮನೆಯ ಕಾಯ್ವಉಂಚ ಗೌಡಿಯ ಮಗನ ಮಗನ ಮಗನೆನಿಸೆನ್ನ2 ಪಟ್ಟಾವಳಿ ದುಕೂಲವನು ನಾನೊಲ್ಲೆಪಟ್ಟೆ ನಾಮದ ಬರಿಯ ಪ್ರದರ್ಶನ ನಾನೊಲ್ಲೆಸೃಷ್ಟಿಯೊಳು ನಿನ್ನ ಭಜಿಪ ಭಕ್ತರ ಮನೆ ಕಾಯ್ವಮುಟ್ಟುಗೌಡಿಯ ಮಗನ ಮಗನ ಮಗನೆನಿಸೆನ್ನ 3 ಮುತ್ತಿನಾಭರಣ ತಾಳಿ ಪದಕವ ನಾನೊಲ್ಲೆಸತ್ತಿಗೆಯ ನೆರಳಿನಲಿ ಸಾಗುವುದ ನಾನೊಲ್ಲೆನಿತ್ಯ ನಿನ್ನ ನೆನೆವರ ಮನೆಯ ಬಾಗಿಲ ಕಾಯ್ವತೊತ್ತುಗೌಡಿಯ ಮಗನ ಮಗನ ಮಗನೆನಿಸೆನ್ನ 4 ಆಶೆ ಪಾಶಗಳೆಂಬ ಜಂಜಾಟ ನಾನೊಲ್ಲೆದೇಶಾನುದೇಶಗಳ ತಿರುಗಾಟ ನಾನೊಲ್ಲೆಶ್ರೀಶಾದಿಕೇಶವನ ಭಜಿಪರ ಮನೆಯ ಕಾಯ್ವಕಸಗೌಡಿಯ ಮಗನ ಮಗನ ಮಗನೆನಿಸೆನ್ನ 5
--------------
ಕನಕದಾಸ
ತಿಳಿವರು ಮನುಜರು ತಿಳಿದೊಮ್ಮೆ ತಿಳಿಯರು ನಳಿನಾಕ್ಷ ನಾಶರಹಿತನಲ್ಲದಿಲ್ಲವೆಂದು ಪ ಅರ್ಕಜಂಬುಜ ಬಲ್ಲ .................. ಮಾರ್ಕಂಡೆಯ ಮುನಿ ಬಲ್ಲ ಮಹಿ ಬಲ್ಲಳು ಅರ್ಕ ತನುಜ ಬಲ್ಲ ಅಂಬರೀಷ ಬಲ್ಲ ದೇ ವರ್ಕಳವೊಡಿಯ ಮಾಧವನಲ್ಲದಿಲ್ಲವೆಂದು 1 ವಾಯುನಂದನ ಬಲ್ಲವಾ............. ಯತಿ ಬಲ್ಲ ಕರಿ ಬಲ್ಲನೊ ರಾಯ ಧರ್ಮಜ ಬಲ್ಲ ರಾಜ ರಾಜನು ಬಲ್ಲ ಮಾಯಾರೂಪತಾಳಿ ಹರಿಯಲ್ಲದಿಲ್ಲವೆಂದು2 ಗರುಡದೇವನು ಬಲ್ಲ ಗಂಗಾತನಯ ಬಲ್ಲ ಉರಗಾಧಿಪತಿ ಬಲ್ಲ ಉಮೆ ಬಲ್ಲಳು ................ಶರಣರಣ್ಣಪ್ಪ ಪರಮಾತ್ಮ -ಇಂ ದಿರಾಪತಿಯಲ್ಲದಿಲ್ಲವೆಂದು3 ಪಾರಾಶರನು ಬಲ್ಲ ಪ್ರಹ್ಲಾದ ಭಕ್ತ ಬಲ್ಲ ನಾರದಮುನಿ ಬಲ್ಲ ನರಬಲ್ಲನು ವಾರಿಜಸಖ ಬಲ್ಲ ವಶಿಷ್ಠ ತಪಸಿ ಬಲ್ಲ ಧಾರುಣಿಕರ್ತೃ ಶ್ರೀಧರನಲ್ಲದಿಲ್ಲವೆಂದು 4 ಬಲಿಚಕ್ರವರ್ತಿ ಬಲ್ಲ ಭೃಗುಋಷೇಶ್ವರ ಬಲ್ಲ ಕಳಸಸಂಭವ ಬಲ್ಲ.................. ಬಲ್ಲನು ಗಿಳಿಮುಖದವ ಬಲ್ಲ ಗೌತಮ ಮುನಿ ಬಲ್ಲ ಇಳಿಗೆ ಆಧಾರ ಶ್ರೀಕೃಷ್ಣನಲ್ಲದಿಲ್ಲರೆಂದು 5 ಉದಧಿರಾಯನು ಬಲ್ಲ ಉಧ್ಧವ ಯದು ಬಲ್ಲ ವಿಧುಶೇಖರ ಬಲ್ಲ ವಿದುರ ಬಲ್ಲ ಪದುಮನಾಭನೆ ಪರಗತಿಯಲ್ಲದಿಲ್ಲವೆಂದು 6 ಜನಕರಾಜನು ಬಲ್ಲ ಜಾಹ್ನವಿನದಿ ಬಲ್ಲಳು ದನುಜೋತ್ತಮ ಬಲ್ಲ ವಾಲ್ಖ್ಯ ಬಲ್ಲ ಅನುಸಾಲ್ವಪತಿ ಬಲ್ಲ ಅಜಮಿಳನು ಬಲ್ಲ ಜನಸ್ಥಿತಿಲಯ ಜನಾದರ್Àನ ಅಲ್ಲದಿಲ್ಲವೆಂದು7 ಜಮದಗ್ನಿ ಬಲ್ಲ ಜಾತವೇದಸ ಬಲ್ಲ ಸಾಮಾವರ್ತಿ ಬಲ್ಲ ಶಶಿ ಬಲ್ಲನು ಆ ಮಹಾಕಪಿ ಬಲ್ಲ ಅಕ್ರೂರನು ಬಲ್ಲ ರೋಮ ರೋಮ ಬ್ರಹ್ಮಾಂಡ ರಾಮನಲ್ಲದಿಲ್ಲವೆಂದು 8 ಪುಂಡರೀಕ ಬಲ್ಲ ದಾ................... ವಂದಾರವ ಬಲ್ಲ ಸಿರಿ ಬಲ್ಲಳು .............. ಆಶಾ ಶ್ರೀಶ ವಿಜಯವಿಠ್ಠಲೇಶನಲ್ಲದಿಲ್ಲವೆಂದು
--------------
ವಿಜಯದಾಸ
ತೆರಳಿದರು ಶ್ರೀ ಜಗನ್ನಾಥದಾಸಾರ್ಯರು ಸಿರಿಪತಿಯ ಸ್ಮರಿಸಿ ಹರಿಪುರಕೆ ಹರುಷದಲಿ ಪ ವರಶುಕ್ಲವತ್ಸರದ ಭಾದ್ರಪದ ಶಿತಪಕ್ಷ ಹರಿವಾರ ನವಮಿಯಲ್ಲಿ ಸುರಸಿದ್ಧ ಸಾಧ್ಯ ಸನ್ಮುನಿಗಣಾರ್ಚಿತ ಪಾದ ಹರಿಯೆ ಪರನೆಂದೆನುತಲಿ ಧರಣಿಯನು ತ್ಯಜಿಸಿ ಬಹುಮಾನಪೂರ್ವಕವಾಗಿ ಬೆರೆದು ಸುರಸಂದಣಿಯಲಿ ಪರಮಾರ್ಥವೈದಿ ಮನ ಹರಿಯ ಪಾದದಲಿಟ್ಟು ವರವಿಷ್ಣುದೂತ ವೈಮಾನಿಕರ ಒಡಗೂಡಿ 1 ಅತಿಪ್ರೇಮಿಗಳು ಹಸನ್ಮುಖರು ದಯೆ ಬೀರುವರು ಖತಿದೂರರಿವರು ಜಗದೀ ಮಿತಿಮೀರಿ ಶ್ರೀಹರಿಯ ಕಥೆ ನಾನಾ ಪರಿಯಲ್ಲಿ ಅತಿಶಯದಿ ಪೇಳಿ ಇಹಕೆ ಸತತವು ಶರಣರ್ಗೆ ಗತಿಯಾಗುವಂತೆ ಸ ತ್ವಥವಿಡಿಸಿ ಕರುಣದಿಂದ ಹಿತವಂತರೆನಿಸಿ ಸಮ್ಮತವಾಗಿ ಸರ್ವರಿಗೆ ಮತಿದೋರಿ ಕೊಟ್ಟು ಸದ್ಗತಿಯಗೋಸುಗವಾಗಿ 2 ಆಚರಣೆಯಲಿ ಒಂದರಘಳಿಗೆ ಬಿಡದೆ ಬಲು ಖೇಚರಾರೂಢ ಹರಿಯಾ ಸೋಚಿತಾರಾಧನೆಯ ಮಾಡಿ ಮರೆಯದಲೆ ಮಹಾ ವೈಚಿತ್ರ್ಯವನು ತೋರಿ ಈ ಚರಾಚರದಿ ಸಂಗೀತ ಸಾಹಿತ್ಯದಲಿ ಪ್ರಾಚಾರ್ಯವಂತರೆನಿಸೀ ಆ ಚತುರ್ದಶಭುವನಪತಿ ಶ್ರೀದವಿಠಲನ ಯೋಚನೆಯ ಬಿಡದೆ ಮಂಗಳ ಶಬ್ದವಾದ್ಯದಿಂ 3
--------------
ಶ್ರೀದವಿಠಲರು
ತೆರಳಿಪೋದರು ವಿಠ್ಠಲಾರ್ಯರಿಂದು ಮುರಹರನ ಚರಣವನು ಸ್ಮರಿಸುತಲಿ ಹರಿಪುರಕೆ ಪ ಸುರಪುರದಿ ಜನಿಸಿ ದೇವಾಂಶರೆಂದೆನಿಸಿದರು ಪುರುಹೂತನಂತೆ ಸಕಲೈಶ್ವರ್ಯದಿಂ ಗುರುರಾಘವೇಂದ್ರರೊಲಿವರಿಗೆ ಪಾತ್ರರೆಂದೆನಿಸಿ ನರಯಾನದಲಿ ಕುಳಿತು ಮೆರೆದರತಿ ವೈಭವದಿ1 ಬಂದ ಶಿಷ್ಯರಿಗೆ ನಿರುತ ಅನ್ನೋದಕವನಿತ್ತು ತಂದೆಯಂತೆ ಸಲಹಿ ಪ್ರೀತಿಯಿಂದ ಮಂದಹಾಸದಿ ಶಾಸ್ತ್ರಮರ್ಮಗಳ ಪೇಳಿಬುಧ ರೆಂದೆನಿಸಿದಂಥ ಮಹಾಮಹಿಮರಾನಂದದಲಿ2 ಭಾಗವತ ಪುರಾಣವ ಜನಕೆ ಅತಿಹಿತದಿ ಪೇಳಿ ದುಷ್ಕøತವ ಕಳೆದು ಗತಿಯೆಂದು ನಂಬಿದ ಭಕುತ ಜನಕೆಧರ್ಮಪ ದ್ಧತಿಗಳನು ಪೇಳುತ ಪ್ರತಿಮರೆಂದೆನಿಸಿ 3 ಭೂತಲದಿ ಜನಿಸಿ ಬಹು ಖ್ಯಾತಿಯನು ಪಡೆದು ನರ ನಾಥರಿಂದಲೆ ಮಾನ್ಯರಾಗಿ ಮೆರೆದು ಪ್ರೀತಿಯಿಂ ಭಜಿಪ ಶಿಷ್ಯೋತ್ತಮರನುದ್ದರಿಸಿ ಪತಿ ಬಳಿಗೆ ಪೋಗುವಾ ತುರದಿ4 ಮೋದದಿಂ ಪಿಂಗಲ ಸಮಾ ಮಾಘವದಿ ಪಂಚ ಮೀ ದಿನದಿ ಆದಿವಾರ ಸ್ವಾತಿಯೋಳ್ ಶ್ರೀದಕಾರ್ಪರ ನಾರಶಿಂಹ ವಿಠ್ಠಲನ ಪದ ಸಾದರದಿ ಧೇನಿಸುತ ಮೇದಿನಿಯ ತ್ಯಜಿಸಿ 5
--------------
ಕಾರ್ಪರ ನರಹರಿದಾಸರು
ತೋರಬಾರದೆ ನಿಮ್ಮ ಚರಿತೆಯನು ನರರೊಳು ನಗೆಗೀಡು ಮಾಡದ ಹಾಗೆ ಪ. ಕಲ್ಲೊಳು ಕಾಂತೆಯ ಮಾಡಿದವನೆಂ- ದೆಲ್ಲರು ಜಗÀದೊಳು ಪೇಳುವರು ಅಲ್ಲಿ ಮಾಡಿದ ಹಾಗೆ ಇಲ್ಲಿ ತೋರಿಸಿದರೆ ಬಲ್ಲಿದನೆನ್ನೊಡೆಯ ದೊಡ್ಡವನೆಂದು ಸಾರುವೆ 1 ಅಹಹ ಕುಬುಜೆಯಳ ತನುವನ್ನೆತ್ತಿ ಮಹಿಯೊಳು ಯುವತಿಯ ಮಾಡಿದೆಯೆಂಬರು ಬಹು ಪರಾಕ್ರಮವನ್ನು ಈಗ ತೋರಿಸಿದರೆ ಅಹುದೋ ಎನ್ನೊಡೆಯ ದೊಡ್ಡವನೆಂದು ಸಾರುವೆ 2 ನೀನೆ ಗತಿಯೆಂದು ಬಂದ ಭಕ್ತನ ಕ- ಣ್ಣುನವ ತಿದ್ದಿ ನಿಜವ ತೋರಿಸಯ್ಯ ದೀನದಯಾಳು ಹೆಳವನಕಟ್ಟೆ ರಂಗಯ್ಯ ದಾನಿ ಎನ್ನೊಡೆಯ ದೊಡ್ಡವನೆಂದು ಹೊಗಳುವೆ 3
--------------
ಹೆಳವನಕಟ್ಟೆ ಗಿರಿಯಮ್ಮ
ತ್ರಾಣಿ ಶ್ರೀ ಕೃಷ್ಣವೇಣಿ ಪ್ರಾಣಪತಿ ಪದಕಮಲ ಕಾಣಿಸು ಹೃದಯದಿ ತ್ರಾಣಿ ಶ್ರೀ ಕೃಷ್ಣ ವೇಣಿ ಪ ಯಮಧರ್ಮತನಯೆ ಶ್ರೀ ಕೃಷ್ಣ ಸಂಗದಿ ಜನಿಸಿ ಕಮಲ ಸಂಭವನ ಲೋಕದಲಿ ಮೆರೆದೆ ಸುಮನಸರ ನುಡಿಗೇಳಿ ಲೋಕಗಳ ದುರಿತೋಪ ಶಮನ ಗೊಳಿಸಲು ಬಂದೆ ತುಮಲ ಹರುಷದಲಿ 1 ಭೂತನಾಥನ ಜಟಾಜೂಟದಿಂದುದ್ಭವಿಸಿ ಶ್ವೇತಪಿಂಗಳ ಶೈಲಶಿಖರಕಿಳಿದೇ ಭೂತಳಕೆ ಭೂಷಣಳೆನಿಸಿ ಪೂರ್ವವನಧಿ ನಿ ಕೇತನವನೈದಿ ಸುಖಿಸಿದಿ ನಿನ್ನ ಪತಿಯೊಡನೇ 2 ಪ್ರಾಣಿಗಳು ನಿನ್ನ ಜಲಪಾನವನು ಗೈಯೆ ನಿ ತ್ರಾಣ ಸಂಹಾರ ವ್ಯಾಧಿಗೆ ಭೇಷಜಾ ಪ್ರಾಣ ಪ್ರಯಾಣ ಪಾಥೇಯವೆಂದರಿಯೆ ನಿ ರ್ವಾಣಪದವಿತ್ತು ಕಲ್ಯಾಣವಂತರ ಮಾಳ್ಪೆ 3 ಜನಪದಗಳಾಗಿ ಕಾನನವಾಗಿ ಮನ್ವಾದಿ ದಿನಗಳಲ್ಲಾಗಿ ಮತ್ತೇನಾಗಲೀ ಮನುಜ ಮಜನಗೈಯೆ ವಾಜಪೇಯಾದಿ ಮಖ ವನುಸರಿಸಿದಕೆ ಫಲವೇನು ತತ್ಪಲವೀವೆ 4 ಅರವತ್ತು ಸಹಸ್ರ ವರುಷಂಗಳಲ್ಲಿ ನಿ ರ್ಜರ ತರಂಗಿಣಿಯ ಮಜ್ಜನದ ಫಲವು ಗುರುವು ಕನ್ಯಸ್ಥನಾಗಿರಲು ಒಂದಿನ ಮಿಂದ ನರರಿಗಾ ಪುಣ್ಯಸಮನೆನಿಸಿ ತತ್ಫಲವೀವೇ 5 ಮನನಶೀಲ ಸುಯೋಗಿಗಳಿಗಾವ ಗತಿಯು ಇಹ ವನುದಿನದಿ ನಿನ್ನ ತೀರದಲಿ ಇಪ್ಪಾ ಮನುಜೋತ್ತಮರಿಗೆ ಆ ಗತಿಯಿತ್ತು ಪಾಲಿಸುವೆ ಅನುಪಮ ಸುಕಾರುಣ್ಯಕೆಣೆಗಾಣಿ ಜಗದೊಳಗೆ 6 ತಾಯೆ ಎನ್ನನುದಿನದಿ ಹೇಯ ಸಂಸಾರದೊಳ ಗಾಯಾಸ ಗೊಳಿಸದಲೆ ಕಾಯಬೇಕೊ ವಾಯುಪಿತ ಶ್ರೀ ಜಗನ್ನಾಥ ವಿಠ್ಠಲ ಹೃ ತ್ತೋಯಜದೊಳಗೆ ಕಾಂಬುಪಾಯ ಮಾರ್ಗವ ತೋರೆ 7
--------------
ಜಗನ್ನಾಥದಾಸರು
ದತ್ತವಧೂತ ಶ್ರೀ ಗುರು ಸಾಕ್ಷಾತ ನಿತ್ಯವಾಗಿಹ್ಯ ನಿಜ ನಿರ್ಗುಣನೀತ ಪ ನಿರ್ಗುಣ ನಿಶ್ಚಲ ಗಗನಾಕಾರ ಸುಗುಣದಲಿ ತಾನೆ ಸಹಕಾರ 1 ಸಹಕಾರನಹುದು ಸದ್ಗುರುನಾಥ ಬಾಹ್ಯಾಂತ್ರದಲಿ ತಾನೆ ಪ್ರಖ್ಯಾತ 2 ಪ್ರಖ್ಯಾತನಹುದು ತ್ರಿಗುಣರಹಿತ ಮುಖ್ಯಮುನಿಗಳಿಗೆ ಮೋಕ್ಷ ಸುದಾತ 3 ದಾತನಹುದು ತ್ರೈಲೋಕ್ಯದೊಳೀತ ಈತನೆ ವಿಶ್ವದೊಳಗೆ ದೈವತ 4 ದೈವತನಹುದು ದೇವಾದಿಗಳಾತ್ಮ ಮೂರ್ತಿ ಶ್ರೀಹರಿ ಸರ್ವಾತ್ಮ 5 ಹರಿ ಸರ್ವಾತ್ಮನಾಗಿಹ ನಿಜಪೂರ್ಣ ಪರಿಪರಿ ಆಗುವ ಅಗಣಿತಗುಣ 6 ಅಗಣಿತಗುಣ ಅಗಾಧ ಅಪಾರ ನಿಗಮಗೋಚರ ನಿರುಮಪ ನಿರ್ಧಾರ 7 ನಿರ್ಧಾರನು ನಿಜನಿಷ್ಟರಪ್ರಾಣ ಸಾಧಕರಿಗೆ ಸದ್ಗತಿ ಸಾಧನ 8 ಸಾಧನದೊಡೆಯನಹುದು ಶಾಶ್ವತ ಆದಿದೇವ ಸಕಲಾಗಮ ಪೂಜಿತ 9 ಪೂಜಿತ ಬ್ರಹ್ಮಾದಿಗಳ ಕೈಯ ಮೂಜಗದೊಳು ರಾಜಿಸುತಿಹ 10 ರಾಜಿಸುತಿಹ ತಾ ರಾಜರಾಜೇಂದ್ರ ಸುಜನರ ದೃಷ್ಟಿಯೊಳಿಡದಿಹ ಸಾಂದ್ರ 11 ಸಾಂದ್ರವಾಗಿಹನು ಸಾರ್ವಭೌಮ ಇಂದ್ರಾಧಿಕÀರೊಂದಿತ ಮಹಿಮ 12 ಮಹಿಮನಹುದು ಮುನಿಜನ ಮಂದಾರ ಧ್ಯಾಯಿಸುವರ ನಿಜ ಸಾಕ್ಷಾತಾರ 13 ಸಾಕ್ಷಾತಾರ ಶ್ರೀಗುರು ಜಗದೀಶ ಮೋಕ್ಷಾಧಿಕರಿಗಳಾತ್ಮ ಉಲ್ಹಾಸ 14 ಉಲ್ಹಾಸವೆ ನಿಜ ವಸ್ತುವೆ ತಾನು ಕಲ್ಪದ್ರುಮ ನಿಜ ಕಾಮಧೇನು 15 ಕಾಮಧೇನುವಾಗಿ ರಕ್ಷಿಸುವ ಬ್ರಹ್ಮನಿಷ್ಠರ ಹೃದಯದಲಿ ಭಾಸಿಸುವ 16 ಭಾಸುವ ಭಾಸ್ಕರಕೋಟಿ ಪ್ರಕಾಶ ಋಷಿ ಮುನಿಗಳ ನಿಜಮಾನಸ ಹಂಸ 17 ಹಂಸನಾಗಿ ವಿಶ್ವಂಭರಿತ ಸೂಸುವ ಸರ್ವಾಂತ್ರಲಿ ಅನಂತ 18 ಅನಂತ ಕೋಟಿ ಬ್ರಹ್ಮಾಂಡನಾಯಕ ಅನುಭವಿಗಳಿಗೆ ದೋರುವ ಕೌತುಕ 19 ಕೌತುಕದೋರಿದ ಕರುಣದಲ್ಯನಗೆ ಜೀವಪಾವನಗೈಸಿದ ಜಗದೊಳಗೆ 20 ಜಗದೊಳು ಸ್ತುತಿಸುವೆನು ಅನುದಿನ ಶ್ರೀಗುರು ದತ್ತವಧೂತ ಪೂರ್ಣ 21 ಪೂರ್ಣ ಸ್ಮರಿಸುವೆನು ಮನದೊಳು ನೋಡಿ ಪುಣ್ಯ ಪ್ರಭೆಯ ನಿಜ‌ಘನ ಒಡಗೂಡಿ22 ಒಡಗೂಡಿದ ನಿಜಾನಂದದ ಗತಿಯು ಕ್ಷಿತಿಯೊಳು ಕೊಂಡಾಡಿದ ಮಹಿಪತಿಯು 23
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಯ ಬಾರದ್ಯಾಕೊ ರಾಘವಾ ಪ ಕಾಯಬೇಕು ಯೆಂದು ಕೊರಗಿ ಮೊರೆಯಿಡೆ ನ್ಯಾಯವೇನು ಯೆನ್ನ ಮರತುಬಿಡುವದು ಅ.ಪ ಅಂದು ಅಜಮಿಳನು ಅಂತ್ಯಕಾಲದಲ್ಲಿ ಕಂದ ನಾರ ಬಾಯೆಂದು ಕರಿಯಲು ಅಂದ ಮಾತುಗಳಿಗೆ ಅತಿ ಹರುಷಿಸಿ ಬಂದ ಯಮನ ಬಾಧೆ ಬಿಡಿಸಲಿಲ್ಲವೇನೊ 1 ಹರಿಯೆ ಗತಿಯೆಂದು ಹೊಗಳು ಕಂದನ ಹರುಷವಿಲ್ಲದೆ ಪಿತ ಕಷ್ಟಪಡಿಸಲು ಊರು ತೋರದಂತಾ ಸ್ತಂಭದಿಂದ ಬಂದು ಮೂರು ಜಗವು ಅರಿಯೆ ಮನ್ನಿಸಲಿಲ್ಲವೇನೊ 2 ಸರ್ಪಶಯನನೆ ಸಾರ್ವಭೌಮನೆ ನಾಸಿಕ ಶ್ರೋತ್ರವಳಿದನೇ ಅಪ್ಪ ಗುರುವರ ವಿಜಯವಿಠ್ಠಲನೇ ಒಪ್ಪದಿಂದ ವಲಿವ ವರದರಾಜನೇ 3
--------------
ವಿಜಯದಾಸ
ದಯವಿರಲಿ ದಯವಿರಲಿ ದಾಮೋದರ ಪ. ಸಯವಾಗಿ ಬಿಡದೆನ್ನ ಸಾಕುವ ಶ್ರೀಕೃಷ್ಣಅ.ಪ. ಹೋಗಿ ಬರುವೆನಯ್ಯ ಹೋದಹಾಂಗೆಲ್ಲಸಾಗುವವನಲ್ಲ ನಾ ನಿನ್ನ ಬಿಟ್ಟುತೂಗಿ ತೊಟ್ಟಿಲು ಕೊನೆಗೆ ಸ್ಥಳದಲ್ಲೆ ನಿಲ್ಲುವುದುಹ್ಯಾಗೆ ನೀ ನಡೆದಂತೆ ಹಾಗೆ ನಾ ನಡಕೊಂಬೆ 1 ಇದ್ದಲ್ಲೆ ಎನ್ನನುದ್ಧರಿಪ ಶಕ್ತಿ ಅ-ಸಾಧ್ಯ ನಿನಗೆಂದು ನಾ ಬಂದವನಲ್ಲನದ್ಯಾದಿ ಕ್ಷೇತ್ರಮೂರ್ತಿಗಳಲ್ಲಿ ನಿಜ ಜ್ಞಾನ-ವೃದ್ಧಜನರ ಹುಡುಕಿ ನಿನ್ನ ತಿಳಿಯಲು ಬಂದೆ 2 ಸತತ ಇದ್ದಲ್ಲೆ ಎನ್ನ ಸಲಹೊ ಅದರೊಳಗಾಗಿಅತಿಶಯವು ಉಂಟು ವಿಭೂತಿಯಲ್ಲಿಗತಿಯು ಸಾಧನಕೆ ಅಭಿವ್ಯಕ್ತ ಸಂದರ್ಶನದಿಸ್ಮøತಿಗೆ ವಿಶೇಷ ಮಾರುತಿರಮಣ ನಿನ್ನ 3 ನೋಡಿದೆನೆ ನಾ ನಿನ್ನ ನೋಡದೆ ಎಂದೆಂದುಪಾಡಿದೆನೆ ಆರಾರು ಪಾಡದೊಂದುಮಾಡಿದೆನೆ ಅರ್ಚನೆಯ ಮೀಸಲಾದುದು ಒಂದುಮೂಢಮತಿಯಲಿ ಮುಂದೆ ನಿಂದೆ ಕೈಮುಗಿದು 4 ಬಂದೆನೊ ನಾನಿಲ್ಲಿ ಬಹುಜನ್ಮದ ಸುಕೃತ-ದಿಂದ ನಿನ್ನ ಬಳಿಗೆ ಇಂದಿರೇಶಒಂದು ಮಾತ್ರವು ಇಟ್ಟು ಸಕಲವು ಅರ್ಪಿಸಿದೆಬಂಧನ ಕಡಿವ ಭಕುತಿಯು ಜ್ಞಾನ ನೀಡುವುದು 5 ಬಿನ್ನಪವ ಕೇಳು ಸ್ವಾಮಿ ಎನ್ನನ್ನೊಬ್ಬನ್ನೆ ಅಲ್ಲಎನ್ನ ಹೊಂದಿ ನಡೆವ ವೈಷ್ಣವರನಇನ್ನವರಿಗೆ ಬಾಹೊ ದುಷ್ಕರ್ಮಗಳ ಕೆಡಿಸಿಘನಗತಿಗೈದಿಸುವ ಭಕುತಿ ಕೊಡು ಕರುಣದಿ 6 ರಾಜರಾಜೇಶ್ವರ ರಾಜೀವದಳನಯನಮೂಜಗದೊಡೆಯ ಮುಕುಂದಾನಂದಈ ಜೀವಕೀದೇಹ ಬಂದದ್ದಕ್ಕು ಎನಗತಿ ನಿ-ವ್ರ್ಯಾಜದಿ ಸುರಗಂಗೆ ಸ್ನಾನವನು ಮಾಡಿಸೊ 7 ಎನಗೆ ಆವುದು ಒಲ್ಲೆ ಎಲ್ಲೆಲ್ಲಿ ಪೋದರುಕ್ಷಣ ಬಿಡದೆ ನಿನ್ನ ನೋಳ್ಪ ಜ್ಞಾನವ ಕೊಡೊಚಿನುಮಯಮೂರುತಿ ಗೋಪಾಲವಿಠಲಘನಕರುಣಿ ಮಧ್ವಮುನಿಮನಮಂದಿರನಿವಾಸ8
--------------
ಗೋಪಾಲದಾಸರು
ದಾರಿಗಾಣದಯ್ಯ ಕಣ್ಣಿಗೆ ದಾರಿ ತೋರಿಸಯ್ಯಾ ಪ ಪಾರುಗಾಣದ ಸಂಸಾರ ವಾರಿಧಿಯಲಿ ಪಾರುಗಾಣಿಸಯ್ಯ ಮಾರನ ಪಿತನೇ ಅ.ಪ ಯಾರಿಗೆ ಮೊರೆಯಿಡಲಾರು ಕೈಹಿಡಿವರು ಧಾರಿಣಿಯೆ ಅಂಧಕಾರವಯ್ಯ ಸಾರಸನಾಭ ನೀ ಕಾರುಣ್ಯಾಮೃತ ಬೀರದಿದ್ದರೆ ಎನ್ನ ಗತಿಏನೋ ರಂಗ1 ಸತಿಸುತರೆನಗತಿ ಹಿತರೆಂದೆನ್ನುತೆ ಸತತ ನಂಬಿ ಸತ್ಪಥವನು ಮರೆತಂತೆ ಪತಿತನಾದೆನಗೆ ನೀ ಗತಿದೋರದಿದ್ದರೆ ಪತಿತನಾಗಿರುವುದೇ ಗತಿಯೊ ಮಾಂಗಿರಿರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದಾರಿಯ ತೋರೋ ಗೋಪಾಲ ಪ. ವಾರಿಜನಾಭ ವೈಕುಂಠÀಲೋಲಅ.ಪ. ಸಿಕ್ಕಿದೆ ಭವಕಾಡಿನೊಳಗೆಲೆಕ್ಕವಿಲ್ಲದ ಜಂತುಗಳಿಗೆದಿಕ್ಕೊಬ್ಬರಿಲ್ಲವೊ ಎನಗೆಕಕ್ಕಸವ ಕಳೆದು ನಿನ್ನಯ ಪಾದಗಳಿಗೆ1 ಗಜರಕ್ಷಕನು ನೀನೆಂದುಅಜರುದ್ರಾದಿಗಳಂದುನಿಜವಾಗಿ ಪೇಳಿದರೆಂದುಸುಜನÀರೊಡೆಯನೆ ಕೇಳಿದೆ ನಾನಿಂದು 2 ವರದ ಶ್ರೀಹಯವದನ ಬಾರೈಕರೆದೆನ್ನ ದಾರಿಯ ತೋರೈಪರಮ ಭಕ್ತರೊಳಿನ್ನಾರೈಪರಮಪುರುಷ ನೀನಲ್ಲದೆ ಗತಿಯಾರೈ 3
--------------
ವಾದಿರಾಜ
ದಾರಿಯ ವಿಡಿರಣ್ಣ | ಸ್ವಹಿತದ ದಾರಿಯ ಹಿಡಿರಣ್ಣಾ ಪ ದಾರಿಯ ವಿಡಿನಿಜ ಸಾರಿಹ ಶೃತಿಗಳ | ಚಾರು ಭಕುತಿಯಾ ಅ.ಪ ಬಲ್ಲವರಿಗೆ ಬೆಸಗೊಳ್ಳುತ ಮನಸಿನ | ಖುಳ್ಳತನದ ಗುಣವೆಲ್ಲವು ಹೋಗಿ | ಬಲ್ಲವರನು ಕಂಡು ಮೆಲ್ಲಡಿಗಳ ವಿಡಿ | ದುಳ್ಳ ಸಿದ್ಧಾಂತದ ಸೊಲ್ಲವ ಕೇಳಿ | ಉಲ್ಹಾಸದಿಂದಲಿ ಮೆಲ್ಲನ ಭ್ಯಾಸವ | ಮೆಲ್ಲನೆ ಮಾಡುತ ಸುಲ್ಲಭ ತೆರದಾ 1 ಕಂಡ ಪಥಕ ಹರಿದಂಡಲೆಯದೆನೆರೆ | ತಂಡಿಸುತಿಹ ಪಾಷಾಂಡ ಹೋಗಿ | ಚಂಡ ಸುಜ್ಞಾನದ ಲುಂಡನು ಭವದೃಢ | ಗಂಡು ಸದ್ಭೋಧದಿ ಪಂಡಿತನಾಗಿ | ಹಿಂಡ ಭಾಗವತರ ಮಂಡಲದೊಳು ಕೂಡಿ | ಪುಂಡರೀಕಾಕ್ಷನ ಕೊಂಡಾಡುತ ನಿಜ 2 ಹಿಂದಿನ ಸುಕೃತಗಳಿಂದ ನೃದೇಹದಿ | ಬಂದೆನು ನಾನಿನ್ನು ಮುಂದಣ ಗತಿಯಾ | ಹೊಂದುವೆ ನಾವದುಯಂದು ವಿಚಾರವಾ | ತಂದು ಸದ್ಭಾವಲಿಂದೇ ನಿಷ್ಠೆಯಲಿ ತಂದೆ ಮಹಿಪತಿ ಪ್ರಭುಪದ ಭವ ಬಂಧನ ಹರಿವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಾವನಿಹನೈಯ್ಯಾ ಕೃಷ್ಣಾ ಎನ್ನ ಕಾವವನು ನೀನಲ್ಲದೆ ಪ ನಾರಿ ದ್ರೌಪದಿ ನೆನೆಯಲು ಸಭೆಯಲ್ಲಿ ಶೀರಿ ದಾನವ ಮಾಡಿದೀ ಕೃಷ್ಣಾ ಘೋರ ದೂರ್ವಾಸ ಮುನಿಯು ನಡುವಿರುಳೆ ಹಾರೈಸಿ ಬರೆಯನ್ನವಾ ದೇವಾ ನಾರಿ ದ್ರೌಪದಿಯ ಮೊರೆಯ ದೊರೆಯು ಆಲಿಸೇ ಆ ರಾತ್ರಿ ಕಾಯ್ದ್ಯೋಬಲೆಯಾ 1 ಪರಿವಾರದಿಂದ ಕೂಡಿ ಕರಿರಾಜನಂಗ ನಾಟಕಂದೈದಲು ಭರದಿನೆಗಳಿಯು ಪಿಡಿಯಲು ಕಾಲನು ಇರದೆ ನಿನ್ನನು ಸ್ಮರಿಸಲು ದೇವಾ ಗರುಡವಾಹನನಾಗಿ ನೀನೈತಂದು ಕರುಣಿಸಿದ್ಯೋ ಕೊನೆಯ ಗತಿಯ 2 ದುರುಳ ಹಿರಣ್ಯಕನ ಶೀಳಿ ನರಹರಿಯೆ ತರಳ ಪ್ರಲ್ಹಾದನ ಪೊರೆದ್ಯೋ ದೇವಾ ಮರೆಯದಜಮಿಳ ನೆನೆಯಲು ಕೇಳ್ದು ನೀ ಪರಿಹರಿಸಿದೆ ಯಮಬಾಧೆಯ ದೇವಾ ನರಸಿಂಹವಿಠಲ ಸ್ವಾಮಿ ಧ್ರುವನನ್ನು ಪೊರೆದಂತೆ ರಕ್ಷಿಸೆನ್ನಾ 3
--------------
ನರಸಿಂಹವಿಠಲರು
ದಾಸನಾಗು ಹರಿಯ ದಾಸನಾಗು ಮೋಸಹೋಗದೆ ಭವಕೆ ಬ್ಯಾಸರಾಗು ಪ ಭಾನುಮಂಡಲ ಕಂಡು ಶ್ವಾನನುಬ್ಬರಿಪಂತೆ ಭೂನಾಥನಡಿವಿಡಿದು ಬಾಳ್ವೆ ನಿನಗೆ ಹೀನಮಾನವ ಕಂಡಣಕೆ ನುಡಿದರು ಸರಿಯೆ ಜ್ಞಾನನಿಧಿ ಹರಿಭಕುತಿಯ ಲೆಕ್ಕಿಸದೆ ಮಾಡು1 ಕಾಳುವೆಗ್ಗಳವಾಗೆ ಸುಮತಿ ಸಂಗ್ರಹಿಪಂತೆ ಬಾಳುವೆಯೊಳ್ಹರಿಸೇವೆ ಬಲು ಅಗ್ಗವಂತೆ ಕೀಳು ಜನರಲ್ಲಿ ಲೌಕಿಕತೆ ಮರುಳಾಗಿ ಸಂತೆ ಕೇಳುವವರಾರು ಹರಿಭಕುತಿ ಮಾಡುವವರು2 ಮಾರಿಗಾಹುತಿಯಾಗ್ವ ಕುರಿಮೇಕೆ ತೆರನಂತೆ ಘೊರ ಜವನನು ಮರೆತು ಕೊಬ್ಬುವವರಂತೆ ಶೇರು ನರಸಿಂಹವಿಠ್ಠಲನಂಘ್ರಿಕಮಲವಾ ಆರಾರು ಬಾಧೆಯಿಲ್ಲದೆ ಗತಿಯ ಕೊಡುವಾ 3
--------------
ನರಸಿಂಹವಿಠಲರು