ಒಟ್ಟು 936 ಕಡೆಗಳಲ್ಲಿ , 83 ದಾಸರು , 722 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತೊರವಿ ನರಹರಿ ಸ್ತೋತ್ರ ಹರಿಯು ನಿಂದಿಹ ನೋಡೀ | ಭೂತಳದಿ ತೊರವಿಲಿಹರಿಯು ಇಂದಿರೆಗೂಡಿ | ಒಡವೆರೆಸಿ ಸರ್ವದಶರಣ ಜನರೊಡನಾಡೀ | ಸುಖವೀವ ನೋಡೀ ಪ ಹರಿಯೆ ಪರನೆಂಧ್ಹೇಳ್ಪ ಬಾಲಕೆದುರುಳ ಕಾಶ್ಯಪು ಪರಿಪರೀಯಲಿಕರ ಕೆರೆಯ ಗೊಡಲಾಗ ನರಹರಿತರುಳನುದ್ಧರ ಗೈದ ಶ್ರೀಹರಿ ಅ.ಪ. ಉದರ ಪೋಷಕ ಬೋಧಾ ಗುರುಶಂಡಮರ್ಕರು ಮುದದಿ ತಿಳುಹಲ ಗಾಧ | ಸರಿಸುತ್ತ ದೂರದಿಹದನ ಪೇಳಿದ ವೇದ | ಪ್ರತಿಪಾದ್ಯ ಶ್ರೀಹರಿವಿಧ ವಿಧವು ಕಾರ್ಯಗಾಧ | ಸೃಷ್ಠಿ ಲಯ ಮೊದಲಾದಅದುಭೂತವು ಎನೆ ಕಾರ್ಯ ಬಹಳವಗೈದು ಲೀಲೆಯ ತೋರಿ ಜಗದೊಳುಮುದವ ಬೀರುತ ಸಾಧು ಸಜ್ಜನಮೋದ ಬಡಿಸುವೆ ನೆಂದು ಪೇಳಿದ 1 ಕರಿಯಪದತಳ ತುಳಸೀ | ಪ್ರಹ್ಲಾದ ಬಾಲನಹಿರಿದು ಶರಧಿಯೊಳಿರಿಸೀ | ಮತ್ತವನು ಉಳಿದಿರೆಧರೆಯ ಗುಹೆಯೊಳಗಿರಿಸೀ | ಮೇಲ್ಕಿಲೆಯ ಮುಚ್ಚಲುಮರಳಿ ಬಂದನು ಜೀವಿಸೀ | ಹರಿಯ ವಿಶ್ವಾಸೀ ತರಳನಿಗೆ ಅಹಿಯಿಂದ ಕಚ್ಚಿಸಿಕರುಣಿ ಮಾತೆಯು ವಿಷವನೂಡಿಸೆಗರಸಹೋದರಿ ಪೊರೆಯಲವನನುತರಳನಿಂಧ್ಹರಿವರನುಯೆಂದ 2 ಬಂದ ಚಿಮ್ಮಲಿಗಿಂದ | ಭಕುತಂಗೆ ಪೇಳುತನಂದ ಹುಲ್ಲೆಸೆಯಂದ | ಅದು ಹತ್ತಿ ಉಳಿಯಲುನಿಂದಿಹೆ ತಾ ನಲ್ಲೆಂದ | ಅದರಂತೆ ಗೈಯಲುನಿಂದ ತೋರವಿಲಿ ಛಂದ | ಹರಿಯು ಬಹು ಆನಂದನಂದ ನಂದನನಾದ ಗುರು ಗೋ-ವಿಂದ ವಿಠಲನ್ನಕೇಸರಿಯುಚಂದದಿಂ ದೂವ್ರ್ಯಾಸ ಪೂಜಿತನಂದ ಕಂದ ಮುಕುಂದ ಶ್ರೀಹರಿ 3
--------------
ಗುರುಗೋವಿಂದವಿಠಲರು
ತೋರಿಸೊ ತವರೂಪ ತೋಯಜ ನೇತ್ರ ಪ ಮಾರಜನಕ ಕರುಣಾರಸಪೂರ್ಣನೆ ನಾರಾಯಣ ಭವತಾರಕ ಮಮ ಸ್ವಾಮಿ ಅ.ಪ. ದಶರಥ ನಂದನ ವಸುಮತಿ ರಮಣ ತ್ರಿ ದಶವಂದಿತ ಚರಣ ಪಶುಪತಿಧನುಭೇದನ ವಸುಧಾಸುತೆರಮಣ ಋಷಿಪತ್ನಿ ಶಾಪಹರಣ ಅಸಮಾ ವಲ್ಕಲ ಚೀರವಸನಾ ಭೂಷಣಸ್ವಾಮಿ ಬಿಸಜಾಪ್ತನ ಸುತಗೊಲಿದವನಗ್ರಜ ನಸುವನು ತೊಲಗಿಸಿ ಅಸುನಾಥನ ಸುತ ಗೊಸೆದು ಬಿಸಜಭವ ಪದವಿಯ ಕರುಣಿಸಿ ವಿಷಧಿಯ ಬಂಧಿಸಿದಸಮ ಸಮರ್ಥ 1 ದಿನಮಣಿವಂಶ ಮಸ್ತಕಮಣಿಯೆಂದೆನಿಸಿ ಮುನಿ ಕೌಶಿಕನ ಯಜ್ಞಫಲವಾಗಿ ರಕ್ಷಿಸಿ ಅನಲಾಕ್ಷಧನು ಮುರಿದು ಮುನಿಪತ್ನಿಯನು ಪೊರೆದು ಜನಕಸುತೆಯ ಕರವನು ಪಿಡಿದ ಧೀರ ಜನಕನಾಜ್ಞೆಯಿಂ ವನವ ಪ್ರವೇಶಿಸಿ ಇನಸುತಗೊಲಿಯುತ ಅನಿಲಜನಿಂದಲಿ ಘನಸೇವೆಯ ಕೊಂಡನಿಮಿಷ ವೈರಿಯ ಹನನಗೈದ ಹೇ ಅನುಪಮ ಶೂರ2 ಲೀಲಾಮಾನುಷರೂಪ ಭೂಲಲನಾಧಿಪ ಫಾಲಾಕ್ಷವಿನುತ ವಿಶಾಲಸುಕೀರ್ತಿಯು ತಾ ಆಲಸ್ಯವಿಲ್ಲದೆ ವಿಶಾಲವನವ ಪೊಕ್ಕು ವಾಲಿಯ ಸಂಹರಿಸಿ ಪಾಲಿಸಿ ಸುಗ್ರೀವನ ಲೋಲಲೋಚನೆಯಿಹ ಮೂಲವ ತಿಳಿದು ಬಂ ದ್ಹೇಳಿದ ಪವನಜಗಾಲಿಂಗನವಿತ್ತು ಖೂಳ ದಶಾಸ್ಯನ ಕಾಲನೆಂದೆನಿಸಿದ ಶ್ರೀಲೋಲನೆ ಶ್ರೀ ಕರಿಗಿರೀಶನೆ3
--------------
ವರಾವಾಣಿರಾಮರಾಯದಾಸರು
ತೋರು ನಿಜಜ್ಞಾನ ಸುಖವ ಮಾರನಯ್ಯ ಮರೆಯ ಬಿದ್ದೆ ಪ ಪಾರಮಾರ್ಥ ಪರಮ ಸವಿ ಚಾರಮೆನಿಪ ಪಾವನ ಸುಪಥ ಅ.ಪ ತೀರದಂಥ ಅಪಾರಭವದ ವಾರಧಿ ಈಸಿ ಘೋರಬಡುವೆ ನೀರಜಾಕ್ಷ ನಿಗಮವಿನುತ ಪಾರುಮಾಡು ಕಾರುಣ್ಯಶರಧಿ 1 ವಿಷಯಲಂಪಟ ಮುಸುಕು ಮುಸುಕಿ ವ್ಯಸನಚಿತೆಯೋಳ್ ಬಸವಳಿದೆ ಅಸಮಹಿಮ ತವಪಾದ ಕುಸುಮ ಮರೆದು ಕೆಟ್ಟೆನಭವ 2 ನಾಶಮತಿಯಿಂದಾಸೆಗೈದ ದೋಷಗಳನ್ನು ಕ್ಷಮಿಸಿ ಬೇಗ ಪೋಷಿಸಿಭವ ಶ್ರೀಶ ಶ್ರೀರಾಮ ದಾಸಜನರುಲ್ಲಾಸ ಪ್ರಭು 3
--------------
ರಾಮದಾಸರು
ತೋರುವ ಜಗದಯನೆ ಪ ಕ್ಷೀರಶರಧಿ ಸುಕುಮಾರಿಣಿ ಹರಿಸಹ ಚಾರಿಣಿ ಭುವನ ವಿದಾರಿಣಿ ರುಕ್ಮಿಣಿ ಅ.ಪ ಮಂದಹಾಸ ವಿಜಿತೇಂದುಕಿರಣೆ ಗಜ ಮಂದಗಮನೆ ಸಂಕ್ರಂದನ ವಂದಿತೆ 1 ಮಾರಜನನಿ ಕಂಸಾರಿಯ ರಾಣಿ 2 ಪಾಲಿಸು ಕಲ್ಯಾಣಿ ಲೀಲೆಯಿಂದ ವನಮಾಲಿಯುರದಿ ನಿ ತ್ಯಾಲಯಗೈದಿಹ ಬಾಲೆ ವರದನುತೆ 3
--------------
ವೆಂಕಟವರದಾರ್ಯರು
ತ್ರಯೋದಶಿಯ ದಿವಸ ಲೀಲೆ ಪೇಳುವದೇನೆ ಬಾಲೆ ಪರಮಾತ್ಮನ ಲೀಲೆ ಮೂಡ ಗಿರೀಶನು ಪಾಡಿಲ್ಲದ ಪ್ರಭೆ ಗೂಡಿದ ಮಂಟಪಕ್ಕೇರಿದ ವಿಸ್ತರ 1 ಕುಂದಣ ಪೂರಿತವಾ- ಹೇಮದ ಬಂದಿತವ- ಪ್ರಜ್ವಲದಿಂದಿರುವ ಶ್ರೇಷ್ಠವಾಗಿಹ ನಾಗರಹೆಡೆವದನದಿ ಇಷ್ಟದಿ ನೇತಾಡುವ ಸರಮಾಲೆಯ 2 ಶುಕಪಿಕ ಮುಂತಾಗಿಹ ಧ್ರುವಮಂಡಲ ಪರಿಯಲಿ ನೋಡುವರತಿ ಚಂದ ಸುತ್ತಲು ಶೋಭಿಪ ಮುತ್ತಿನ ಬಿಂತಿಯ ಪೊತ್ತು ವಿನೂತನವೆತ್ತಿದ ವಿಸ್ತರ 3 ಮಿನುಗುವದೋರಂತೆ ಕಾಣುವದೆಲೆ ಕಾಂತೆ ಕಾಣೆನು ಇದರಂತೆ ಚಾತುಷ್ಕಂಬದೊಳೂತು ನಡುವೆಯಿಹ ಕೌತುಕವಾಗಿಹನಾಥರದಾತನ 4 ಬರುವನು ಗೋವಿಂದ ಪೊರೆಯುವದಿದು ಚಂದ ಭಕ್ತರ ಕೈಯಿಂದ ಪೊಂಬಣ್ಣದ ದಿವ್ಯಾರತಿ ಕೊಳ್ಳುತ ಇಂಬಾಗಿಹ ಕರುಣಾಂಬುಧಿ ಭರಿತ 5 ವೇದವ ಲಾಲಿಪನು ಪ್ರೇಮನಾಗುತ ಸಂಗೀತಗಳನು ಕೇಳುತ ಸುತ್ತುವನು ತಾ ಮಮಕಾರದಿ ಬರುವನು ಮೇಣು ಕೋಮಲಕಾಯವ ಸಂತತ ಮಂಡಿಸಿ ಸಾಮಗಾನ ಲೋಲೋಪ್ತಿಯೊಳಿರುವನು 6 ಭಕ್ತರ ಸಮುದಾಯಕೆ ತದನಂತರ ಗೈದೇ- ಕಾಂತ ಸೇವೆಯ ತಾ ಕೈಕೊಂಡ ಸಂತಸದಲಿ ಶ್ರೀಕಾಂತನು ಭಕುತರ ಚಿಂತಿತವೆಲ್ಲ ನಿರಂತರ ಕೊಡುವನು 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತ್ರಯೋದಶಿಯ ದಿವಸ ಲೀಲೆ ಪೇಳುವದೇನೆ ಬಾಲೆ ಪರಮಾತ್ಮನ ಲೀಲೆ ಮೂಡ ಗಿರೀಶನು ಪಾಡಿಲ್ಲದ ಪ್ರಭೆ ಗೂಡಿದ ಮಂಟಪಕ್ಕೇರಿದ ವಿಸ್ತರ1 ಕುಂದಣ ಪೂರಿತವಾ- ಹೇಮದ ಬಂದಿತವ- ಪ್ರಜ್ವಲದಿಂದಿರುವ ಶ್ರೇಷ್ಠವಾಗಿಹ ನಾಗರಹೆಡೆವದನದಿ ಇಷ್ಟದಿ ನೇತಾಡುವ ಸರಮಾಲೆಯ2 ಶುಕಪಿಕ ಮುಂತಾಗಿಹ ಧ್ರುವಮಂಡಲ ಪರಿಯಲಿ ನೋಡುವರತಿ ಚಂದ ಸುತ್ತಲು ಶೋಭಿಪ ಮುತ್ತಿನ ಬಿಂತಿಯ ಪೊತ್ತು ವಿನೂತನವೆತ್ತಿದ ವಿಸ್ತರ3 ಮಿನುಗುವದೋರಂತೆ ಕಾಣುವದೆಲೆ ಕಾಂತೆ ಕಾಣೆನು ಇದರಂತೆ ಚಾತುಷ್ಕಂಬದೊಳೂತು ನಡುವೆಯಿಹ ಕೌತುಕವಾಗಿಹನಾಥರದಾತನ4 ಬರುವನು ಗೋವಿಂದ ಪೊರೆಯುವದಿದು ಚಂದ ಭಕ್ತರ ಕೈಯಿಂದ ಪೊಂಬಣ್ಣದ ದಿವ್ಯಾರತಿ ಕೊಳ್ಳುತ ಇಂಬಾಗಿಹ ಕರುಣಾಂಬುಧಿ ಭರಿತ5 ವೇದವ ಲಾಲಿಪನು ಪ್ರೇಮನಾಗುತ ಸಂಗೀತಗಳನು ಕೇಳುತ ಸುತ್ತುವನು ತಾ ಮಮಕಾರದಿ ಬರುವನು ಮೇಣು ಕೋಮಲಕಾಯವ ಸಂತತ ಮಂಡಿಸಿ ಸಾಮಗಾನ ಲೋಲೋಪ್ತಿಯೊಳಿರುವನು6 ಭಕ್ತರ ಸಮುದಾಯಕೆ ತದನಂತರ ಗೈದೇ- ಕಾಂತ ಸೇವೆಯ ತಾ ಕೈಕೊಂಡ ಸಂತಸದಲಿ ಶ್ರೀಕಾಂತನು ಭಕುತರ ಚಿಂತಿತವೆಲ್ಲ ನಿರಂತರ ಕೊಡುವನು7
--------------
ತುಪಾಕಿ ವೆಂಕಟರಮಣಾಚಾರ್ಯ
ತ್ರಾಹಿ ತ್ರಾಹಿ ತ್ರಾಹಿ ಎನ್ನಿ ಕೈಯ ಮುಗಿದೊಮ್ಮೆ | ಕೈ ... ತ್ರಾಹಿ ತ್ರಾಹಿ ತ್ರಾಹಿ ಎನ್ನಿ ಮನದಲಿನ್ನೊಮ್ಮೆ ಧ್ರುವ ಪುಣ್ಯಕ್ಷೇತ್ರವಹುದಿದು ಸಾರವಾಡಗ್ರಾಮ | ಸಾ... ಕಣ್ಣಾರೆ ಕಂಡು ಯಾತ್ರೆಗೆ ಬಾಹುದು ಬ್ರಹ್ಮಸ್ತೋಮ | ಬಾ... ಸಣ್ಣ ದೊಡ್ಡವರಿಗೆಲ್ಲ ಭಾಸುದು ಸಂಭ್ರಮ | ಭಾ... ದಣಿವು ಹಿಂಗಿ ದೋರುತಿಹುದು ಆನಂದೊಬ್ರಹ್ಮ 1 ಧರೆಯೊಳಧಿಕವಾದ ಕ್ಷೇತ್ರವಿದೆ ಕಾಶಿ | ಕ್ಷೇ... ಹರಿಯುತಿಹುದು ನೋಡಿ ಙÁ್ಞನ ಗಂಗೆಯು ಸೂಸಿ | ಙÁ್ಞ... ಸ್ಮರಣಿಯಿಂದ ಹರಿ ಸೇವ್ಯಾಹುದು ಪಾಪದರಾಶಿ | ಪಾ... ಗುರು ವಿಶ್ವೇಶ್ವರ ತಾರಿಸುತಿಹ ಕರುಣಿಸಿ 2 ಸರ್ವ ತೀರ್ಥ ಮಿಂದ ಫಲ ಬಾಹುದಿಲ್ಲೆ ನೋಡಿ | ಬಾ... ಪೂರ್ವ ಕರ್ಮಾದಿಗಳೆಲ್ಲ ಹೋದವಿಲ್ಲೆ ನೋಡಿ | ಹೋ... ಸರ್ವರು ಅರಿತು ನೀವು ಇದೆ ಯಾತ್ರೆಯ ಮಾಡಿ | ಇ... ನಿರ್ವಾಣ ಪರ್ವಣೀಯ ಫಲ ಬಾಹುದು ಕೈಗೂಡಿ3 ಪುಣ್ಯಗೈದ ವಿಶ್ವನಾಥ ಸತಿಸಹಗೂಡಿ | ಸ... ಜನುಮಾಂತ್ರದ ದೋಷಗಳದಿಲ್ಲೆ ನೋಡಿ | ಗ... ಘನ ಸುಖ ಪಡೆದುನುಮಾನ ಈಡ್ಯಾಡಿ | ಈ... ವರ್ಣಿಸಲಾಗುದು ಸ್ತುತಿ ಸ್ತವನ ಪಾಡಿ 4 ಮನವಿಟ್ಟು ಕೇಳಿ ಸ್ತುತಿ ಭಾವ ಭಕ್ತಿಯಿಂದ | ಭಾ... ಪುಣ್ಯಗೈತೆನ್ನ ಜೀವ ಅನುಭವದಿಂದ | ಅ... ಉನ್ಮನವಾಗಿ ದೋರಿತು ಬ್ರಹ್ಮಾನಂದ | ದೋ... ಧನ್ಯವಾದ ಮಹಿಪತಿ ಗುರು ಕೃಪೆಯಿಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಯದಿ ಎಮ್ಮನು ಸಲಹ ಬೇಕಯ್ಯ | ಮಳಖೇಡ ನಿಲಯ ದಯದಿ ಎಮ್ಮನು ಸಲಹ ಬೇಕಯ್ಯ ಪ ದಯದಿ ಎಮ್ಮನು ಸಲಹ ಬೇಕೈ | ವಿಯದಧಿಪ ಸದ್ದಂಶ ಸಂಭವ ಭಯ ವಿದೂರನ ತೋರು ಎನುತಲಿ | ಜಯ ಮುನೀಂದ್ರನೆ ಬೇಡ್ವೆ ನಿನ್ನನು ಅ.ಪ. `ಇಂದ್ರಸ್ಯನು ವೀರ್ಯಾಣ’ ಎಂದೆನುತ | ಇತ್ಯಾದಿಋಕ್ಕುಗಳಿಂದ ಬಹುತೆರೆ ನೀನು ಪ್ರತಿಪಾದ್ಯ ||ಅಂದು ಮೇಘದ ಜಲವು ಬೀಳದೆ | ಬಂಧಗೈದಹಿನಾಮ ದೈತ್ಯನಕೊಂದು ಉದ್ಧರಿಸಿರುವ ಪರಿಯಲಿ | ಮುಂದೆ ದುರ್ವಾದಿಗಳ ಖಂಡಿಪೆ 1 ವಾಲಿಯಂದದಿ ದೃಷ್ಟಿಮಾತ್ರದಲಿ | ಶತೃಗತಬಲಲೀಲೆಯಿಂದಪಹರಿಪೆ ನಿಮಿಷದಲಿ ||ಕಾಲ ತ್ರೇತೆಯಲಂದು ದುಷ್ಟರ | ವಾಲಿರೂಪದಿ ವಾರಿಸಿದ ಪರಿಕಾಲ ದ್ವಾಪರದಲ್ಲಿ ಪ್ರಾರ್ಥನೆ | ಲೀಲೆ ರೂಪಿಯು ಕೃಷ್ಣಸೇವಕ 2 ದೃಷ್ಟಿ ಮಾತ್ರದಿ ಕರ್ಣಗತ ಬಲವ | ಅಪಹರಿಸಿ ನೀನುಕ್ಲಿಷ್ಟ ಯುದ್ಧದಿ ಗಳಿಸಿ ನೀ ಜಯವ ||ಶ್ರೇಷ್ಠ ಕರ್ಣನ ಅಸುವ ಕೊಳ್ಳುತ | ಸುಷ್ಠು ಅರಿಬಲ ನಾಶಮಾಡುತಭ್ರಷ್ಟ ಕೌರವನೀಗೆ ದುಃಖದ | ಕೃಷ್ಣಗರ್ಪಿಸಿ ಕೈಯ್ಯ ಮುಗಿದೆಯೊ 3 ಕಾಲ ಕಲಿಯುಗದಲ್ಲಿ ಬಲ ಭೀಮ | ಮಧ್ವಾಭಿಧಾನದಿಮೂಲ ಮೂವತ್ತೇಳು ಸೂನಾಮ ||ಭಾಳ ಗ್ರಂಥಗಳನ್ನೆರಚಿಸೀ | ಕಾಲಟಿಜಕೃತಮಾಯಿ ಮತವನುಲೀಲೆಯಿಂದಲಿ ಖಂಡಿಸುತ್ತ | ಪಾಲಿಸುತ್ತಿರೆ ಸುಜನರನ್ನು 4 `ವೃಷಾಯ ಮಾಣೆಂಬ` ಋಕ್ಕಿನಲಿ ದೇವ ಇಂದ್ರಗೆವೃಷಭದಾಕೃತಿ ಪೇಳಿಹುದು ಅಲ್ಲಿ ||ವೃಷಭ ನೀನಾಗಂತೆ ಕಲಿಯಲಿ | ಎಸೆವ ಶ್ರೀ ಮನ್ಮಧ್ವ ಗ್ರಂಥದಹಸಿಬೆ ಚೀಲವ ಹೊತ್ತು ತಿರುಗುತ | ಅಸುಪತಿಯ ಸೇವಿಸಿದ ಮಹಿಮ5 ಅಗಸ್ತ್ಯ ಮುನಿ ಸಕಲ ತೀರ್ಥಗಳ | ಸಂಗ್ರಹಿಸಿ ಕರದಿಸಾಗಿ ಗಿರ್ಯಾನಂತ ಕಮಂಡೂಲ ||ವೇಗ ಕೆಳಗಿಟ್ಟಾಚಮನ ಅಲ್ಪ | ಕಾಗಿ ಸ್ವಲ್ಪವುದೂರ ಪೋಗಲುಕಾಗೆ ರೂಪದಿ ಬಂದು ಇಂದ್ರನು | ವೇಗ ಉರುಳಿಸೆ ಜಲವು ಹರಿಯಿತು 6 ದೆವರಾಜನು ಕಾಣಿಸಿ ಕೊಳಲು | ಮುನಿಯು ಆಕ್ಷಣದೇವ ಕಾರ್ಯದ ಭಾವ ತಿಳಿಯಲು ||ಓವಿ ತತ್ಕಾಗಿಣಿಯ ನಾಮದಿ | ಭೂವಲಯದೊಳ್ಬಾತಿಸಲಿ ಎನೆತೀವರಾಶೀರ್ವಾದ ದಿಂದಲಿ | ಪಾವನವು ತತ್ ಕ್ಷೇತ್ರ ವಾಯಿತು 7 ಪಾಂಡು ಮಧ್ಯಮನಾದ ಅರ್ಜುನನು | ಇಲ್ಯುದಿಸಿ ಪೊತ್ತಧೋಂಡು ರಘುನಾಥ ಪೆಸರನ್ನು || ಗೊಂಡು ನಾಯಕ ತನವ ಅಶ್ವಕೆ | ಅಂಡಲೆದು ಬರುತಿಲ್ಲಿ ಬಿಸಿಲಲಿ ಉಂಡು ಉಂಬುದ ಜಲವ ಪಶುಪರಿ | ಕಂಡು ಮುನಿ ಅಕ್ಷೋಭ್ಯ ಬೆಸಸಿದ 8 ಸ್ವಪ್ನ ಸೂಚಿಸಿದಂತೆ ಮುನಿಶ್ರೇಷ್ಠ | ನೀರ್ಗುಡಿದವ ನರೆ ಬಪ್ಪುವನು ತಮ ಪೀಠಕೆನ್ನುತ್ತ || ಸ್ವಲ್ಪ ಹಾಸ್ಯದಿ ಪಶುವು ಪೂರ್ವದಿ | ಒಪ್ಪುವೆಯಾ ನೀನೆನ್ನ ಸಾದಿಗೆ ನೆಪ್ಪು ಬಂದುದು ವೃಷಭ ಜನ್ಮದಿ | ಕೃಪ್ಪೆಗೈದಿಹ ಮಧ್ವರನುಗ್ರಹ 9 ಸಾದಿ ಭೂಪನು ಕಳುಹಿ ತನ್ನ ಸೈನ್ಯ | ಅಕ್ಷೋಭ್ಯ ಮುನಿಪರ ಪಾದಕೆರಗುತ ಆಶ್ರಮವು ತುರ್ಯ ||ಮೋದದಿಂದ್ಯಾಚಿಸಲು ಮುನಿವರ | ಆದಿಯಿಂದಲಿ ಬಂದ ಪೀಠಕೆಸಾದರದಿ ಪಟ್ಟಾಭಿಷಕ್ತನ ಗೈದು ಆಶೀರ್ವಾದ ಮಾಡಿದ 10 ಸುತನು ತುರ್ಯಾಶ್ರಮವ ಪೊತ್ತುದನ | ಕೇಳುತ್ತ ತಂದೆಅತುಳ ಕೋಪದಿ ನಿಂದಿಸಿದ ಮುನಿವರನ |ಸುತನ ಗೃಹ ಕೆಳತಂದು ಪತ್ನಿಯ | ಜೊತೆಯಲಿಡೆ ಏಕಾಂತ ಗೃಹದಲಿಅತುಳ ಸರ್ಪಾ ಕೃತಿಯ ಕಾಣುತ | ಭೀತಿಯಲಿ ಚೀರಿದಳು ಕನ್ಯೆಯು11 ಸೋಜಿಗದ ತನಯನ್ನ ಕೊಳ್ಳುತ್ತ | ಮುನಿವರರ ಬಳಿಗೆ ಯೋಜಿಸೀದನು ಕ್ಷಮೆಯ ಬೇಡುತ್ತ ||ಆರ್ಜವದ ಮುನಿ ಕ್ಷಮಿಸಿ ತಂದೆಯ | ಮಾಜದಲೆ ತಮ್ಮ ಶಿಷ್ಯಭೂಪಗೆಯೋಜಿಸಿದರನ್ವರ್ಥನಾಮವ | ಶ್ರೀ ಜಯಾಭಿಧ ತೀರ್ಥರೆನ್ನುತ 12 ಪರ ಕರಿ ಹರ್ಯಕ್ಷರಾದಿರಿ 13 ಮಧ್ವಭಾಷ್ಯಕೆ ಟೀಕೆ ರಚಿಸುತ್ತ | ಯರಗೋಳ ಗುಹೆಯಲಿಶುದ್ಧ ಭಾವದಿ ಇರಲು ಮದಮತ್ತ ||ವಿದ್ಯ ಅರಣ್ಯಭಿಧ ನೋಡೀ | ಮಧ್ವಕೃತ ಸನ್ಮಾನ ಲಕ್ಷಣಬುದ್ಧಿಗೇ ನಿಲುಕದಲೆ ಟೀಕೆಯ | ಪದ್ಧತಿಯ ಕಂಢರ್ಷಪಟ್ಟನು 14 ಮಾಧ್ವಭಾಷ್ಯವ ನೇರಿಸಿ ಗಜವ | ತಟ್ಟೀಕೆ ಅಂತೆಯೆಅದ್ಧುರೀಯಲಿ ಗೈದು ಉತ್ಸವವ ||ವಿದ್ಯವನ ಮುನಿಪೋತ್ತುಮನು ಬಹು | ಶುದ್ಧಭಾವದಿ ಗೈದು ಸಂತಸಬುದ್ಧಿಯಲಿ ಪರಿವಾರ ಸಹಿತದಿ | ಸದ್ದುಯಿಲ್ಲದೆ ಪೋದನಂದಿನ 15 ಹತ್ತೆರಡು ಮತ್ತೊಂದು ಕುಭಾಷ್ಯ | ವಿಸ್ತರದಿ ಖಂಡಿಸೆಕೃತ್ಯವೂ ಮಧ್ವಕೃತವನುವ್ಯಾಖ್ಯಾ ||ಮತ್ತಿದಕೆ ಸೂಧಾಖ್ಯ ಟೀಕವ | ವಿಸ್ತøತವು ನಿಮ್ಮಿಂದ ಜಯಮುನಿಮೊತ್ತದಿಂಧ್ಹತ್ತೆಂಟು ಗ್ರಂಥಕೆ | ಕೃತ್ಯವಾಯಿತು ನಿಮ್ಮ ಟೀಕೆಯು16 ಪಾದ ಪಾದ ತೋರ್ವುದು ||
--------------
ಗುರುಗೋವಿಂದವಿಠಲರು
ದಯವಿರಲಿ ದಯವಿರಲಿ ದಾಮೋದರ ಪ. ಸಯವಾಗಿ ಬಿಡದೆನ್ನ ಸಾಕುವ ಶ್ರೀಕೃಷ್ಣಅ.ಪ. ಹೋಗಿ ಬರುವೆನಯ್ಯ ಹೋದಹಾಂಗೆಲ್ಲಸಾಗುವವನಲ್ಲ ನಾ ನಿನ್ನ ಬಿಟ್ಟುತೂಗಿ ತೊಟ್ಟಿಲು ಕೊನೆಗೆ ಸ್ಥಳದಲ್ಲೆ ನಿಲ್ಲುವುದುಹ್ಯಾಗೆ ನೀ ನಡೆದಂತೆ ಹಾಗೆ ನಾ ನಡಕೊಂಬೆ 1 ಇದ್ದಲ್ಲೆ ಎನ್ನನುದ್ಧರಿಪ ಶಕ್ತಿ ಅ-ಸಾಧ್ಯ ನಿನಗೆಂದು ನಾ ಬಂದವನಲ್ಲನದ್ಯಾದಿ ಕ್ಷೇತ್ರಮೂರ್ತಿಗಳಲ್ಲಿ ನಿಜ ಜ್ಞಾನ-ವೃದ್ಧಜನರ ಹುಡುಕಿ ನಿನ್ನ ತಿಳಿಯಲು ಬಂದೆ 2 ಸತತ ಇದ್ದಲ್ಲೆ ಎನ್ನ ಸಲಹೊ ಅದರೊಳಗಾಗಿಅತಿಶಯವು ಉಂಟು ವಿಭೂತಿಯಲ್ಲಿಗತಿಯು ಸಾಧನಕೆ ಅಭಿವ್ಯಕ್ತ ಸಂದರ್ಶನದಿಸ್ಮøತಿಗೆ ವಿಶೇಷ ಮಾರುತಿರಮಣ ನಿನ್ನ 3 ನೋಡಿದೆನೆ ನಾ ನಿನ್ನ ನೋಡದೆ ಎಂದೆಂದುಪಾಡಿದೆನೆ ಆರಾರು ಪಾಡದೊಂದುಮಾಡಿದೆನೆ ಅರ್ಚನೆಯ ಮೀಸಲಾದುದು ಒಂದುಮೂಢಮತಿಯಲಿ ಮುಂದೆ ನಿಂದೆ ಕೈಮುಗಿದು 4 ಬಂದೆನೊ ನಾನಿಲ್ಲಿ ಬಹುಜನ್ಮದ ಸುಕೃತ-ದಿಂದ ನಿನ್ನ ಬಳಿಗೆ ಇಂದಿರೇಶಒಂದು ಮಾತ್ರವು ಇಟ್ಟು ಸಕಲವು ಅರ್ಪಿಸಿದೆಬಂಧನ ಕಡಿವ ಭಕುತಿಯು ಜ್ಞಾನ ನೀಡುವುದು 5 ಬಿನ್ನಪವ ಕೇಳು ಸ್ವಾಮಿ ಎನ್ನನ್ನೊಬ್ಬನ್ನೆ ಅಲ್ಲಎನ್ನ ಹೊಂದಿ ನಡೆವ ವೈಷ್ಣವರನಇನ್ನವರಿಗೆ ಬಾಹೊ ದುಷ್ಕರ್ಮಗಳ ಕೆಡಿಸಿಘನಗತಿಗೈದಿಸುವ ಭಕುತಿ ಕೊಡು ಕರುಣದಿ 6 ರಾಜರಾಜೇಶ್ವರ ರಾಜೀವದಳನಯನಮೂಜಗದೊಡೆಯ ಮುಕುಂದಾನಂದಈ ಜೀವಕೀದೇಹ ಬಂದದ್ದಕ್ಕು ಎನಗತಿ ನಿ-ವ್ರ್ಯಾಜದಿ ಸುರಗಂಗೆ ಸ್ನಾನವನು ಮಾಡಿಸೊ 7 ಎನಗೆ ಆವುದು ಒಲ್ಲೆ ಎಲ್ಲೆಲ್ಲಿ ಪೋದರುಕ್ಷಣ ಬಿಡದೆ ನಿನ್ನ ನೋಳ್ಪ ಜ್ಞಾನವ ಕೊಡೊಚಿನುಮಯಮೂರುತಿ ಗೋಪಾಲವಿಠಲಘನಕರುಣಿ ಮಧ್ವಮುನಿಮನಮಂದಿರನಿವಾಸ8
--------------
ಗೋಪಾಲದಾಸರು
ದರ್ಭಶಯನ ಶ್ರೀರಾಮದೇವರ ಸ್ತೋತ್ರ ಪಂಕ ಕಳೆಯೊ ಎನ್ನ | ಕರುಣಾರಸ ಪೂರ್ಣ ಪ ಲಂಕೇಶನನು ಜಗ್ವೊಲಿದ ಹರಿಯೇ | ಆಶ್ರಿತರಿಗೆ ಧೊರೆಯೇ ಅ.ಪ. ಭವ ವಿಮುಕ್ತನಹನೂಕವಿ ಜನ ನುತ ಸತ್ಪ್ರವರ ನಿನ್ನ ಲೀಲಾ | ಲೋಕ ಶಿಕ್ಷೆಗನುಕೂಲ |ತವಕದಿ ಗೈದೆ ವಿವಿಧ ಪೂಜೆಗಳನ್ನ | ನವ ಪಾಪಾಣಗಳನ್ನ 1 ಶರಧಿ ಸಿಂಧು ಪತಿಯ ನೋಡೀ | ದರ್ಭಶಯನ ಮಾಡೀಕಪ್ಪುಗೊರಳ ಸಖ ಕುಪಿತನಾಗೆ ನೀನೂ | ಬೆದರಿ ಬಿನ್ನವಿಸಿದನೂಒಪ್ಪಿ ಬಂಧಿಸಿದೇ ಸೇತುವೆಯನ್ನಾ | ಭಕ್ತರಿಗೆ ಪ್ರಸನ್ನಾ 2 ಸಿರಿ ಮಾಧವ ಶ್ರೀನಲ್ಲಾ | ಗುರು ಗೋವಿಂದ ವಿಠ್ಠಲ |ಮಾತು ಮಾತಿಗೆ ಕೊಡು ತವ ಲೀಲಾ | ಉಚ್ಚರಿಸುವ ಸೊಲ್ಲಾ 3
--------------
ಗುರುಗೋವಿಂದವಿಠಲರು
ದಾಮ ಶೋಭಿತ ವಿಠಲ | ಸಾಮ ಸನ್ನುತನೇ ಪ ಪ್ರೇಮದಿಂದಿವಳ ಮನ | ಕಾಮ ಪೊರೈಸೋ ಅ.ಪ. ಯೇಸೊ ಜನ್ಮದ ಪುಣ್ಯ | ರಾಶಿ ಫಲ ಒದಗುತಲಿದಾಸತ್ವ ದೀಕ್ಷೆಯನು | ಆಶಿಸುತ್ತಿಹಳೋ |ದಾಸವರ್ಯರು ವಿಜಯ | ದಾಸರುತ್ಸವದಿ ಸಂ-ತೋಷದಲಿ ಬಿನ್ನಹವ | ಲೇಸು ಗೈದಿಹಳೋ 1 ಸಾರ ಚಾರು ಮೂರುತಿಯೇ 2 ಆನಂದ ಮುನಿ ಮತದಿ | ಸ್ವಾನುಭವ ದೀಕೆಯನುಜ್ಞಾನ ಭಕ್ತ್ಯಾದಿ ಸಂ | ಧಾನ ತಿಳಿಸುತಲೀ |ಮಾನನಿಧಿ ಕೈ ಪಿಡಿದು | ದೀನಳನು ಪೊರೆಯೆಂದುಪ್ರಾಣ ಪ್ರಾಣನೆ ಬೇಡ್ವೆ | ದೀನ ವತ್ಸಲನೇ 3 ಸಾಧನದಿ ಸತ್ವತೆಯ | ಹಾದಿಯಲ್ಲಿಹಳೀಕೆಸಾಧುಗಳ ಕಂಡು ಹೃದ | ಯಾದ್ರ್ರ ಭಾವದಲೀ |ಮೋದ ಬಡಿಸುತ ಸೇವೆ | ಶ್ರೀಧರನಿಗರ್ಪಿಪಳುಹೇ ದಯಾಂಬುಧೆ ಸಲಹೊ | ಸಾಧು ಜನ ವಂದ್ಯಾ 4 ಸರ್ವಕಾಲವು ದೇಶ | ಸರ್ವಗುಣದ್ರವ್ಯದಲಿದುರ್ವಿಭಾವ್ಯನ ವ್ಯಾಪ್ತಿ | ಸ್ಛುರಣೆಯನು ಕೊಡುತಾ |ಸರ್ವಾಂತರಾತ್ಮಗುರು | ಗೋವಿಂದ ವಿಠ್ಠಲನೆದರ್ವಿ ಜೀವಿಯ ಹೃದಯ | ಗಹ್ವರದಿ ತೋರೋ 5
--------------
ಗುರುಗೋವಿಂದವಿಠಲರು
ದಾರಿಯ ತೋರೊ ಮುರಾರಿ ಮುಂದಣ ದಾರಿಯ ತೋರೊ ಮುರಾರಿಪ. ಕಂಸಾರಿ ಭವಾಂಜನ ಪಾರಾವಾರ ಉತ್ತಾರಣಗೈಯುವಅ.ಪ. ಮಾಯಾಶ್ರಿತನಾಗಿಹೆನಲ್ಲೊ ಮೋಕ್ಷೋ- ಪಾಯಭೇದಂಗಳ ಮರತೆನಲ್ಲೊ ಕಾಯಜಪಿತ ಕಮಲಾಯತಲೋಚನ ಕಾಯದೊಳಗೆ ಸನ್ನಾಯದಿ ನೋಡುವ 1 ದುಃಖವಿಲ್ಲದೆ ಸುಖವಿಲ್ಲ ಇದ ಒಕ್ಕಣಿಪರೆ ತುದಿಬುಡವಿಲ್ಲ ಸೊಕ್ಕಿ ನಡೆದು ಭವಯಿಕ್ಕುಳ ಬಾಯೊಳು ಸಿಕ್ಕಿದೆನಲ್ಲವೊ ರಕ್ಕಸವೈರಿಯೆ2 ಬಲ್ಲೆನೆಂಬರೆ ಬಲವಿಲ್ಲ ಭವ ಬಲ್ಲೆಯೊಳಗೆ ಸಿಲುಕಿದೆನಲ್ಲ ಕಲ್ಲೊಳಗ್ನಿ ಕಲಕಿರುವಂದದಿ ಮನ ದಲ್ಲಿ ನಿನ್ನ ಪದಪಲ್ಲವ ಭಜಿಸುವ3 ಸಾರರಹಿತ ಸಂಸಾರದಿ ಮಾಯಾ ನಾರಿ ಗೈದ ಮಮಕಾರದಿ ಘೋರ ದುರಿತವಪಹಾರಗೈವ ಲಕ್ಷ್ಮೀ ನಾರಾಯಣನು ಸೇರಿ ಸೇವಿಸುವಂಥ 4
--------------
ತುಪಾಕಿ ವೆಂಕಟರಮಣಾಚಾರ್ಯ
ದಾಸರ ಭಾಗ್ಯವಿದು-ಪುರಂದರ-ದಾಸರ ಭಾಗ್ಯವಿದು ಪ ತುಂಬಿ ಸೂಸುತಲಿದೆ ಅ.ಪ ಭೂಸುರ ಜನುಮದಿ ಬಂದು ಬೆಳೆದು ಉಪ- ದೇಶಗೊಂಡು ಮಧ್ವಮತ ಪೊಂದಿ ಲೇಸಾಗಿ ಭಕ್ತಿ ವಿರಕ್ತಿ ಜ್ಞಾನದ ವಿ- ಶೇಷವಾಗಿ ನಾ ಬಾಳುವದೆಲ್ಲ 1 ಸಜ್ಜನ ಸಂಗತಿ ಮಾಡಿ ದುರುಳಜನ ವರ್ಜನಗೈದು ಸತ್ಕರ್ಮಗಳ ಆರ್ಜಿಸಿ ನಾಮ ಮುದ್ರೆ ಹಗಲು ಇರಳು ನಿ ರ್ಲಜ್ಜನಾಗಿ ನಾ ಬಾಳುವುದೆಲ್ಲ 2 ಶ್ರವಣ ಕೀರ್ತನೆ ವಂದನೆ ಸ್ತೋತ್ರ ಹರಿನಾಮ ತವಕದಿಂದ ನುಡಿಯುವ ಕವನ ನವನವ ವಚನವು ಮಂತ್ರ ಸಂಕಲ್ಪವು ಸವಿದು ಸ್ಮರಿಸಿ ನಾ ಬಾಳುವುದೆಲ್ಲ 3 ಯಾತ್ರೆ ತೀರ್ಥ ದಿವ್ಯ ದಾನಧರ್ಮಂಗಳು ಕ್ಷೇತ್ರ ಮೆಟ್ಟಿ ಬಹ ಸಂಭ್ರಮವು ಮಿತ್ರರ ಕೂಡಾಡಿ ಹರಿಪರನೆಂದು ಸ- ತ್ಪಾತ್ರನಾಗಿ ನಾ ಬಾಳುವುದೆಲ್ಲ 4 ಹರಿದಿನದುಪವಾಸ ಜಾಗರಣೆ ಪಾರಣಿ ಗುರು ಹಿರಿಯರಲಿ ವಿಹಿತಸೇವೆ ಹಿರಿದಾಗಿ ಮಾಡೋಡು ಪರಿಪರಿಯಿಂದಲಿ ಹರುಷದಿಂದಲಿ ನಲಿದಾಡುವುದೆಲ್ಲ 5 ಷಡುರಸಭೋಜನ ದಿವ್ಯವಸನ ನಿತ್ಯ ಉಡುವುದು ಹೊದೆವುದು ಹಸನಾಗಿ ತಡೆಯದೆ ಜನರಿಂದ ಪೂಜೆಗೊಂಡು ಸುಖ- ಬಡಿಸುತಿರುವ ವಿಚಿತ್ರಗಳೆಲ್ಲ 6 ಮನವೆ ಹಿಗ್ಗದಿರು ಹಿಯ್ಯಾಳಿಕೆಯಿಂದ ಗುಣಿಸಿಕೊ ಸುಖವಾವುದು ಲೇಶ ನಿನಗೆ ಸ್ವತಂತ್ರ ಎಂಬುದು ಕಾಣೆನೆಂದಿಗು ಗುಣನಿಧಿ ವಿಜಯವಿಠ್ಠಲನ ಪ್ರೇರಣೆಯೆಲ್ಲ 7
--------------
ವಿಜಯದಾಸ
ದಾಸರ ಸಖ ಮಾಡಂದೆ ಎನ್ನ ಧ್ಯಾಸದಿರಗಲದೆ ಶ್ರೀಹರಿ ತಂದೆ ಪ ಕನಕರಾಯನು ನಿಜದಾಸ ನಿನ್ನ ಘನತರ ಪ್ರಸನ್ನತೆ ಪಡೆದನುಮೇಷ ಅನುದಿನ ನಿಮ್ಮಯ ಘನಮಹಿಮೆಯನು ತೋರಿ ಮುನಿವ್ಯಾಸರಾಯರ ಮನವ ತಣಿಸಿದಂಥ 1 ಘನ ಸತ್ಯ ಕಬೀರದಾಸ ತನ್ನ ತನುಮನಧನವನ್ನು ನಿನಗರ್ಪಿಸೀತ ವನಿತೆಯನೊತ್ತಿಟ್ಟು ತನುಜಾತನನು ಕೊಂದು ಉಣಿಸಿ ಸಂತರಿಂ ಸುತನ ಪ್ರಾಣವ ಪಡೆದಂಥ 2 ವಾಸನಳಿದು ಪುರಂದಾಸ ತನ್ನ ನಾಶಬುದ್ಧಿಗೆ ನಾಚಿ ನೀಗಿ ಮನದಾಸೆ ಸೋಸಿಲಿಂ ತವಪಾದಧ್ಯಾಸ ಬಲಿಸಿ ಜಗದೀಶ ಹೇಸದೆ ನಿಮ್ಮನು ಗಿಂಡಿಲ್ಹೊಡೆದಂಥ 3 ವರನಾಮದೇವ ನಿಜದಾಸ ತನ್ನ ಪರಮಸಂತರಿಗೆಲ್ಲ ಪಾಲಿಸಿ ಭಾಷ ಸಮ ಗೌಪ್ಯದಿಂ ಪಂಪಾಪುರಿಗೈದಿರಲು ನಿನ್ನ ತಿರುಗಿ ಕರೆದೊಯ್ದು ಇರವ ಪೂರೈಸಿದಂಥ 4 ಬಲ್ಲಿದ ತುಕಾರಾಮದಾಸ ಬಲು ಕ್ಷುಲ್ಲಕರುಪಟಳ ಸಹಿಸಿ ಮನದಕ್ಲೇಶ ಎಲ್ಲವ ನೀಗಿ ಹರಿ ಪುಲ್ಲನಾಭನ ಪಾದ ದಲ್ಲೆ ಮನ ನಿಲ್ಲಿಸಿ ಉಲ್ಲಾಸದಿರುವಂಥ 5 ಬಗೆಯ ತಿಳಿದು ಜಗನ್ನಾಥ ನಿಮ್ಮ ಸುಗುಣದರಿದು ವ್ಯಾಧಿ ಕಳೆದುಕೊಂಡು ಪ್ರಮಥ ನಿಗಮಗೋಚರ ನಿನ್ನ ಬಗೆಬಗೆ ಪೊಗಳುತ ಜಗದಮಾಯವ ಗೆಲಿದು ಸೊಗಸಿನಿಂ ನಲಿವಂಥ 6 ಉದಧಿಜಿಗಿದ ಹನುಮಂತ ಮಹ ಪದುಮಾಕ್ಷಿಯಳ ಕಂಡು ನಮಿಸಿದ ಬಲವಂತ ಸದಮಲಾಂಗಿಗೆ ತನ್ನ ಹೃದಯಸೀಳಿದ್ಹಟದಿಂ ಪಾದ ತೋರಿಸಿದಂಥ 7
--------------
ರಾಮದಾಸರು
ದಾಸರಾಗಿರೊ ವೈಷ್ಣವ ದಾಸರಾಗಿರೊ ದಾಸರಾಗಿ ಬಯಲಾಸೆಯ ನೀಗಿ ರ- ಮೇಶನ ಗುಣವಾರಾಶಿಯೊಳಿರಿಸುವ ಪ. ಸುಂದರ ಮಾನಾನಂದತೀರ್ಥಮತ ಸಾಂದ್ರ ಸುಖಾಂಬುಧಿಮಿಂದ ಮಹಾತ್ಮರ 1 ದಿವ್ಯಲೋಕಜನ ಭವ್ಯೋಭಯವಿಧ ಕಾವ್ಯರಚನ ಲಾತವ್ಯಯತೀಂದ್ರರ 2 ಸೀತಾಪತಿ ರಘುನಾಥನ ಮನದೊಳ- ಗಾತು ಭಜಿಪ ಗಣನಾಥ ಜನಕನ 3 ಶ್ರೀ ಮಹೇಶ ವಟು ವಾಮನ ಪದಯುಗ ಸಾಮಜವಾಹನ 4 ಕಾಕರಟನದೊಳ ಭೀಕರ ಮತವ ನಿ- ರಾಕರಿಸಿರುವ ಸುಧಾಕರ ಮೂರ್ತಿಯ 5 ತಂತ್ರ ದೀಪಿಕಾ ಯಂತ್ರವ ರಚಿಸಿದ ಮಂತ್ರಾಲಯವರ ಮಂತ್ರದೇವತೆಯ 6 ಗೋಪಿನಾಥನೆ ಭೂಪನೆಂದು ಸಂ- ತಾಪವ ಬಿಡಿಸುವ ಶ್ರೀಪಾದರ ಪದ 7 ಮಂದಕಲಿಯ ಕಾಲಿಂದಲೊರಿಸಿದ ಪು- ರಂದರದಾಸರ ಹೊಂದಿ ಹರಿಯ ನಿಜ8 ಸುಜನ ಹೃದಂಬುಜ ಸುಖಕರ ದಿನಮಣಿ ವಿಜಯರಾಜ ಪದ ಭಜನೆಯ ಮಾಡುತ 9 ಭಂಗುರ ಭವಭಯ ಭಂಗದ ಸುಗುಣ ತರಂಗನ ಒಲಿಸಿದ ಮಂಗಳ ಮಹಿಮರ 10 ಹರಿಕಥಾಮೃತದ ತೆರೆಗಳೊಳಾಡುವ ಪರತರಸಾರವ ಸುರಿದ ಮಹಾತ್ಮರ 11 ಸಿಡುಕರ ಸಂಸ್ಕøತಿ ಕಡಲೊಳು ಮುಳುಗಲು ಬಿಡದಲೆ ಕೈಪಿಡಿದೊಡೆಯನ ತೋರ್ಪರ 12 ಅರಿಷಡ್ವರ್ಗವ ತರಿದು ಬಿಸುಟು ಶ್ರೀ- ವರನ ಕೃಪಾರಸ ಸುರಿಸಿದ ಧನ್ಯರ 13 ಮೂಕನ ವಾಗ್ಮಿಯ ಮಾಡಿ ಮುರಾರಿಗೆ ಸಾಕ ಕೊಟ್ಟಿ ದೀನಾಕರದಾಸರ 14 ಮಾತಿಗೆ ಕಂಸಾರಾತಿನಲಿಯೆ ಜಗ ನ್ನಾಥರೆಂ¨ ವಿಖ್ಯಾತಿ ಪಡೆದವರ 15 ತಾಪತ್ರಯಗಳ ತಪ್ಪಿಸಿ ವೆಂಕಟ ಭೂಪನ ಸದಯಾರೋಪಗೈದವರು 16
--------------
ತುಪಾಕಿ ವೆಂಕಟರಮಣಾಚಾರ್ಯ