ಒಟ್ಟು 1345 ಕಡೆಗಳಲ್ಲಿ , 99 ದಾಸರು , 1083 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೇಳಿದ್ಯಾ ಈ ಕೌತುಕ ಕೇಳಿದ್ಯಾ ಕೇಳಿದ್ಯಾ ಕೌತುಕವನ್ನು ಈಗ ಪ ಪೇಳುವೆ ನಾ ನಿಮಗಿನ್ನು ಆಹಾ ಜಾರ ಚೋರ ಕೃಷ್ಣ ಅ.ಪ. ಕರೆಯೆ ಬಂದಿಹನೊಬ್ಬ ಚೋರಾ ತನ್ನ ಕಿರಿಯಯ್ಯನಂತೆ ಅಕ್ರೂರಾ ಊರ ಹೊರ ಹೊಳಿಯಲಿ ಬಟ್ಟ ತೇರಾ ಆಹಾ ಹಿರಿಯನೆಂದು ಕಾಲಿಗೊರಗೋರಾ ರಾಮಕೃಷ್ಣರ ಭರದಿ ಅಪ್ಪಿಕೊಂಡು ಮರುಳು ಮಾಡಿದ ಸುದ್ದೀ 1 ಸೋದರಮಾವನ ಮನೆಯೋಳ್ ಬೆಳ - U್ಫದ ನಾಳಿನ ದಿನದೋಳ್ ಕೃಷ್ಣ ಪೋದರೆ ನೆರೆದ ಜನರೋಳ್ ಆಹಾ ಕಾದುವ ಮಲ್ಲರ ಮೇಲ್ಹಾರ ಬಿಲ್ಹಬ್ಬ ಸಾಧಿಸಿ ಸಮಯಕ್ಕೆ ಹೋದೆವೆಂಬ ಅರ್ತಿ 2 ಹುಟ್ಟಿದ ಸ್ಥಳವಂತೆ ಮಧುರೀ ಕಂಸ - ನಟ್ಟುಳಿಗಾಗಿ ತಾ ಬೆದರೀ ಇ - ಲ್ಲಿಟ್ಟಳಾತನ ತಂಗಿ ಚದುರೀ ತೋರಿ ಕೊಟ್ಟರೆ ತನ್ನನು ಬೆದರೀ ಆಹಾ ಇಷ್ಟು ಸ್ನೇಹವು ಶ್ರೀದವಿಠಲ ಮಾವನ ಭೆಟ್ಟಿಗಾಗಿ ಒಡಂಬಟ್ಟು ಹೋಗುವನಂತೆ 3
--------------
ಶ್ರೀದವಿಠಲರು
ಕೇಳಿದ್ಯಾ ಕೌತಕವನ್ನು ಕೇಳಿದ್ಯಾಪ ಕೇಳಿದ್ಯಾ ಕೌತಕವನ್ನು ನಾಕೇಳಿದೆ ನಿನಗಿಂತ ಮುನ್ನ ಆಹಾಚಾಳಿಕಾರ ಕೃಷ್ಣ ಪೇಳದೆ ಮಧುರೆಗೆಕೋಳಿ ಕೂಗದ ಮುನ್ನ ನಾಳೆ ಪಯಣವಂತೆಅ.ಪ. ಕರೆಯ ಬಂದಿಹನಂತೆ ಕ್ರೂರ ತಮ್ಮಕಿರಿಯಯ್ಯನಂತೆ ಅಕ್ರೂರ ಪುರಹೊರವಳಯದಿ ಬಿಟ್ಟು ತೇರ ಆಹಾಹಿರಿಯನೆಂದು ಕಾಲಿಗೆರಗಲು ರಾಮಕೃ-ಷ್ಣನ ಠಕ್ಕಿಸಿಕೊಂಡುಮರುಳುಮಾಡಿದ ಬುದ್ಧಿ 1 ಸೋದರ ಮಾವನ ಮನೆಗೆ ಬೆಳ-ಗಾದರೆ ನಾಳಿನ ಉದಯ ಪರ-ಮಾದರವಂತೆ ತ್ವರೆಯ ಅಲ್ಲಿ ತೋರಿದ ಮನಕೆ ನಾರಿಯ ಆಹಾಸಾದಿಮಲ್ಲ ಮೊದಲಾದ ಬಿಲ್ಲಹಬ್ಬಸಾಧಿಸಿಕೊಂಡು ಬರುವೆನೆಂದು ಸುದ್ದಿ 2 ಹುಟ್ಟಿದ ಸ್ಥಳವಂತೆ ಮಧುರೆ ಕಂಸ-ನಟ್ಟುಳಿಗಾರದೆ ಬೆದರಿ ತಂ-ದಿಟ್ಟ ತನ್ನ ತಂದೆ ಚದುರೆ ತೋರಿಕೊಟ್ಟಳು ಭಯವನ್ನು ಬೆದರಿ ಆಹಾಎಷ್ಟು ಹೇಳಲಿ ರಂಗವಿಠಲನು ಮಾವನಭೆಟ್ಟಿಗಾಗಿ ಒಡಂಬಟ್ಟು ಪೋಗುವ ಸುದ್ದಿ3
--------------
ಶ್ರೀಪಾದರಾಜರು
ಕೇಳೆ ನಂದನ ಕಾಂತೆ ಹೇಳೆ ಮಗಗೆ ಬುದ್ದಿ ಬಾಲೆಯರನು ಇರಗೊಡನೆ ದಮ್ಮಯ್ಯ ಪ ಕುತ್ತಿಗೆಯೊಳಗಣ ಮುತ್ತಿನ ಸರಗಳ ಕಿತ್ತು ಹರಿದು ಚೆಲ್ಲಿ ಪೋದ ದಮ್ಮಯ್ಯ 1 ಕಟ್ಟಿದ ಕರುಗಳ ಬಿಟ್ಟು ಒಲೆಯ ಮೇಲೆ ಇಟ್ಟ ಪಾಲ್ಗಳನೆಲ್ಲ ಕುಡಿದ ಗೋಪಮ್ಮ 2 ಪಿಕ್ಕದೊಳಿಹ ಬೆಣ್ಣೆ ಚೊಕ್ಕನೆಲ್ಲವ ಮೆದ್ದು ಮರ್ಕಟಗಳಿಗಷ್ಟನಿತ್ತ ದಮ್ಮಯ್ಯ 3 ಬೇಡವೆಂದರೆ ಛಲಗೇಡಿ ಹಿಡಿದು ಎನ್ನ ನೋಡಿ ಮೋಸವ ಮಾಡಿ ಹೋದ ದಮ್ಮಯ್ಯ 4 ಮರುತಾತ್ಮಜ ಕೋಣೆ ಲಕ್ಷ್ಮೀರಮಣಗೊಮ್ಮೆ ನಾರಿ ನೀ ಬುದ್ದಿಯ ಹೇಳೆ ದಮ್ಮಯ್ಯ 5
--------------
ಕವಿ ಪರಮದೇವದಾಸರು
ಕೈಲಾಸದಾಶೆಯಲ್ಲಿಹುದೊಶೈಲೇಂದ್ರಸುತೆಯರಸ ಶಿವನ ಒಲವಿಲ್ಲದವಗೆ ಪ. ಗುರುಹಿರಿಯರರಿಯದಗೆ ಪರಗತಿಯ ತೊರೆದವಗೆವರಧರ್ಮಪಥವ ಮರೆದವಗೆದುರುಳರನೆ ಪೊರೆದು ಪರಸತಿಯ ನೆರೆದವಗೆ 1 ದೀನಜನರೊಡನಾಡಿ ಹೀನಕರ್ಮವ ಮಾಡಿಆನೆಂಬ ಮಮತೆಯನೆ ಕೂಡಿದಾನವನೆ ಬೇಡಿ ದುರ್ದಾನಕೆ ಮರುಳಹಗೆ 2 ಅನಾಚಾರಂಗಳ ಬಿಡÀದೆ ಮನೆಗೆ ಬಂದರು ಕೊಡದೆಧನದ ಗಂಟುಗಳನು ಕಡಿಯದೆಅನುಸರಿಸಿ ನಡೆಯದೆ ಪರರ ಜರಿದು ನುಡಿವವಗೆ 3 ವಾದಿರಾಜನ ನುಡಿಯ ಹಿತವೆಂದು ಲಾಲಿಸದೆಕ್ರೋಧಮಯನಾಗಿ ದೂಷಿಪಗೆಪಾದಕೆರಗದೆ ಜನನಿಯನಾದರಿಸದವಗೆ 4 ಹಯವದನನಲ್ಲೆಂದು ತಾನೆಲ್ಲ ಬಲ್ಲೆಯೆಂದುದಯವುಳ್ಳವರ ದೈವನೆನದೆ ಈಸ್ವಯಂಭು ಲಿಂಗದ ಕಲ್ಲೇ ದೈವವೆಂಬುವಗೆ 5
--------------
ವಾದಿರಾಜ
ಕೈಲಾಸನಾಥ ಮಹೇಶ ಈಶ ಶೈಲೇಶ ತನಯೇಶ ಬಾಲಾರ್ಕ ಸಮಭಾಸ ಪ ಶೂಲಾಕ್ಷ ಡಮರುಗಳಿಂದ ಶೋಭಿಪ ಹಸ್ತ ತಾಲಾಂಕನನುಜನೊಳ್ಸಮರಗೈದೀರ್ಪ ಫಾಲಾಕ್ಷದಿಂದಲಿ ಕಾಮನ ದಹಿಸಿರ್ಪ ಶೂಲಿಯ ಮಹಿಮೆಯನೇನು ಬಣ್ಣಿಸಲಿ 1 ವಿಷ್ಣುಭಕ್ತರೊಳಗತಿ ಪ್ರೇಮವಿರುವ ಕೃಷ್ಣ ದ್ವೈಪಾಯನರ ಸುತರಾಗಿ ಶೋಭಿಪ ಸನಕಾದಿಗಳ ಶಿಷ್ಯ ದುರ್ವಾಸರೆನಿಪ 2 ನಂಜುಂಡನೆನಿಸಿರ್ಪ ಪ್ರಖ್ಯಾತ ಮಹಾದೇವ ಕಂಜಜಾತನ ಸುತನೆನಿಸಿರ್ದ ದೇವ ರಾಜೇಶ ಹಯಮುಖ ಭಕ್ತಪುಂಗವ ನೀನು ಅಂಜಲಿ ಬಂಧದಿಂ ನಮಿಪೆ ನಿನ್ನಡಿಗೆ 3
--------------
ವಿಶ್ವೇಂದ್ರತೀರ್ಥ
ಕೈವಲ್ಯಪತಿ ವಿಠಲ | ಇವಳ ನೀ ಸಲಹೋ ಪ ದೇವದೇವೊತ್ಮತವ | ದಾಸ್ಯಕಾಂಕ್ಷಿಪಳಾ ಅ.ಪ. ಗುರುಗಳೊಂದಗೆ ಯಾತ್ರೆ | ಭರದಿ ಸ್ವಪ್ನದಿಗೈದು |ಮರಳಿ ಕೊಲ್ಹಾಪುರದ | ಶಿರಿರಮೆಯ ಕಂಡೂ |ಮರುತ ದರ್ಶನದಿಂದ | ವರಸು ಉಪದೇಶಕ್ಕೆತರುಣಿ ಶುದ್ಧಳು ಇಹಳು | ಉರಗಾದ್ರಿವಾಸಾ 1 ತೈಜಸನು ನೀನಾಗಿ ನೈಜದಂಕಿತ ಪ್ರಾಪ್ತಿಮಾಜದಲೆ ಸೂಚಿಸಿಹೆ | ಭ್ರಾಜಿಷ್ಣು ಮೂರ್ತೇ|ಯೋಜಿಸಿದೆ ಅದಕಾಗಿ | ತರಳೆಗಂಕಿತವನ್ನುರಾಜಿಸೋ ಮನದಿ ತವ | ನೈಜರೂಪವನೂ 2 ತರತಮದ ಸುಜ್ಞಾನ | ಹರಿಗುರೂ ಸದ್ಭಕ್ತಿಮರುತ ಮತ ದೀಕ್ಷೆಯನು | ಪರಮ ವೈರಾಗ್ಯಕರುಣಿಸುತ ಸಂಸಾರ ಶರಧಿಯನೆ ದಾಂಟಿಸೊಅರವಿದೂರನೆ ಹರಿಯೆ | ಪ್ರಾರ್ಥಿಸುವೆ ನಿನ್ನಾ 3 ಕರ್ಮ ನಿಷ್ಕಾಮದಲಿ | ಪೇರ್ಮೆಯಲಿ ಚರಿಪಂತೆಭರ್ಮಗರ್ಭನ ಪಿತನೆ | ಸನ್ಮನವನಿತ್ತೂ |ನಿರ್ಮಮತೆ ನೀಡಿ | ಕರ್ಮನಿರ್ಲೇಪದಲಿಹಮ್ರ್ಯ ವೈಕುಂಠವನು | ಗಮಿಪ ತೆರಮಾಡೋ 4 ಭಾವುಕರ ಪರಿಪಾಲ | ಭೂವೈಕುಂಠಲೋಲದೇವದೇವೋತ್ತಮನೆ | ಗೋವಿಂದ ಮೂರ್ತೇ |ನೀ ವೊಲಿಯದಿಲ್ಲ ಗುರು | ಗೋವಿಂದ ವಿಠ್ಠಲನೆಸೇವಕಳ ಪೊರೆಯಲ್ಕೆ | ಪ್ರಾರ್ಥಿಸುವೆ ಹರಿಯೇ 5
--------------
ಗುರುಗೋವಿಂದವಿಠಲರು
ಕೊಟ್ಟಿಗೋತ್ಸವ ಗೀತೆ ಕೊಟ್ಟೊಗೋತ್ಸವ ನೋಡಿ ಸೃಷ್ಟಿಗೀಶ್ವರನ ಪ. ವಾಸುದೇವನ ಸಹಸ್ರಸ್ತಂಭಮಂಟಪವ ದಾಸರು ಬಂದು ಶೃಂಗಾರವ ಮಾಡಿ ದೇಶದ ಮೇಲುಳ್ಳ ಬೊಂಬೆಗಳನು ರಚಿಸಿ ಲೇಸಾದ ಮೇಲುಕಟ್ಟುಗಳ ಕಟ್ಟಿದರು 1 ಸೃಷ್ಟಿಗೀಶ್ವರನಾದ ರಂಗನಾಥನಿಗೆ ಕೊಟ್ಟಿಗೋತ್ಸವವನ್ನು ನಡೆಸಬೇಕೆನುತ ಕಟ್ಟಿ ಕಂಕಣವನ್ನು ನಾಲ್ಕುವೇದಗಳಿಂದ ಭಟ್ಟರು ಓದಿ ಪೇಳಿದರು ಸಂಭ್ರಮದಿ 2 ವಜ್ರದ ಕಿರೀಟವಿಟ್ಟು ರತ್ನದಂಗಿಯ ತೊಟ್ಟು ಅರ್ಜುನಸಖ ಸಂಭ್ರಮದಲಿ ಪೊರಟು ಸ್ವರ್ಗದ ಬಾಗಿಲೊಳಗೆ ತಾ ನಿಂದು ಮೂರ್ಜಗವೆಲ್ಲ ಮೋಹಿಸುತಲೆ ಬಂದು 3 ಮಂದಹಾಸದಲಿ ನಿಂದು ಮಂಟಪದಲಿ ಬಂದ ಆಳ್ವಾರರಿಗಾಸ್ಥಾನವಿತ್ತು ಚಂದದಿಂದ ದಿವ್ಯ ಪ್ರಬಂಧವ ಕೇಳಿ ಒಂದುಅಂಕಣ ಬಿಡದೆ ಬಂದ ಶ್ರೀರಂಗ 4 ಸಂಕ್ರಾಂತಿಯಲಿ ಶಂಕರನ ಪ್ರಿಯನು ಶಂಕೆ ಇಲ್ಲದೆ ಆಭರಣವನು ಧರಿಸಿ ಪಂಕಜಮುಖಿಯರೊಡಗೊಂಡು ಹರುಷದ ಲಂಕಾರವಾಗಿ ಬಂದನು ಮಂಟಪಕೆ 5 ಮತ್ತೆ ಮರುದಿನದಲ್ಲಿ ಭಕ್ತವತ್ಸಲನು ಮುತ್ತಿನಅಂಗಿ ಮುಂಡಾಸನಳವಡಿಸಿ ಮುತ್ತಿನಛತ್ರಿ ಚಾಮರ ಸೂರೆಪಾನದಿ ಮುತ್ತರಸಿಯ ಮಂಟಪಕೆ ನಡೆತಂದ 6 ಅರ್ಥಿಯಿಂಬಂದು ತಾ ಅಶ್ವವನೇರಿ ಮತ್ತೆ ಬೇಟೆಯಮೃಗವನೆ ಕೊಂದು ಸಂ ಕ್ರಾಂತಿಯ ಪಾರ್ವೇಟೆಯನಾಡಿ ಸಂತೋಷದಿ ಬಂದ 7 ನಾರಿವೇಷವ ಆಳ್ವಾರರಿಗೆ ಧರಿಸಿ ಪೇರಿಯ ತಾ ಬಿಟ್ಟು ತೇಜಿಯನೇರಿ ಚೋರತನವ ಮಾಡಿದ ಭಕ್ತರಿಗೆ ಮೂಲಮಂತ್ರವ ಪೇಳಿ ಮುಕ್ತಿಯನಿತ್ತ 8 ಮಿಂದು ಮಡಿಯನುಟ್ಟು ಅಂದು ರಾತ್ರಿಯಲಿ ಹ ನ್ನೊಂದು ವಿಧ ಭಕ್ಷ್ಯಗಳನು ತಾ ಗ್ರಹಿಸಿ ಬಂದ ಆಳ್ವಾರರಿಗೆ ಮುಕ್ತಿಯನಿತ್ತು ಬಂದು ಆಸ್ಥಾನದಿ ನಿಂದ ಶ್ರೀರಂಗ 9 ಭಕ್ತರು ಮಾಡಿದ ಪ್ರಬಂಧವನೆಲ್ಲ ಭಕ್ತಿಯಿಂದಲೆ ಪೇಳಿದ ಆಚಾರ್ಯರಿಗೆ ಯುಕ್ತಿ ತೋರಿದ ಪರಾಶರವ್ಯಾಸರಿಗೆ ಬ್ರಹ್ಮ ರಥವನಿತ್ತ ಬ್ರಹ್ಮಾಂಡರೂಪ 10 [ಶೌ]ರಿಯು ತಾನಿರಲು ಮೇಘಮಂಡಲದಂತೆ ತೋರುವುದು ತಾರಕೆಯಂತೆ ಮೈಯುಡುಗೆ ವಾರಿಜನಾಭನ ಮುತ್ತಿನಂಗಿಯ ನೋಡು ವವರಿಗೆ ತಾ ಆನಂದವಾಗಿಹುದು 11 ಕ್ಷೀರಸಾಗರದಲ್ಲಿ ಪವಡಿಸಿಹ ಹರಿಗೆ ಕ್ಷೀರಬಿಂದುಗಳು ಮೈಯೊಳಗೆ ಬಿದ್ದಂತೆ ವಾರಿಜನೇತ್ರಗೆ ವಜ್ರದನಾಮವು ಧರಿಸಿದರು ಹೇಮದ ಪಾದಹಸ್ತಗಳ 12 ಮುತ್ತಿನಂಗಿಸೇವೆ ನೋಡಬೇಕೆನುತ ಹತ್ತುಸಾವಿರ ಪ್ರಜೆ ಬಂದು ನಿಂತಿರಲು ಇತ್ತು ಕಾಣಿಕೆಯನು ನೋಡಿ ವೆಂಕಟರಂಗನ ಮುಕ್ತರಾದೆವೆಂದು ಭಕ್ತರು ನುಡಿದರು 13
--------------
ಯದುಗಿರಿಯಮ್ಮ
ಕೊಡಬೇಕು ದಾನಗಳ ಸತ್ಕಾರ್ಯಕೆಬಿಡಬೇಕು ಕೈಸಡಿಲು ಮೋಕ್ಷಸಾಧನೆಗೆ ಪಬೇಡದಲೆ ಕೊಡುವವರು ರೂಢಿಯೊಳಗುತ್ತಮರುಬೇಡಿದರೆ ಕೊಡುವ ದಾನಿಯು ಮಧ್ಯಮಬೇಡಿದರು ಕಾಡಿದರು ಕೊಡದವರು ಅಧಮರುಕೊಡೆದೆ ಬಡಬಡಿಸುವವರು ಮೂರ್ಖ ಅಧಮಾಧವುರು 1ದುಡ್ಡು ಇದ್ದರೆ ಮಾತ್ರ ದೊಡ್ಡವರು ಅನಬೇಡದುಡ್ಡಿದ್ದು ದಾನ ಧರ್ಮವು ನಡೆಯಬೇಕುದುಡ್ಡು ಕಾಯುವ ಸರ್ಪಕ್ಕೆ ಇಹ'ಲ್ಲ ಪರ'ಲ್ಲಬಿದ್ದು ಹೋದರೆ ಅವರ ಬಾಯೊಳಗೆ ಮಣ್ಣು 2ಧನಿಕರಿಗೆ ಭೂಷಣವು ದಾನಧರ್ಮವು ಸದಾಧನ'ದ್ದ ಜಿಪುಣತಾ ಜೀವಂತ ಹೆಣವುಧನ'ದ್ದು ದಾನಮಾಡುವ ಪುಣ್ಯವಂತರಿಗೆಘನಮ'ಮ ನಮ್ಮ ಭೂಪತಿ'ಠ್ಠಲನೊಲಿಯುವನು 3ತಾುಯ ಹರಕೆ
--------------
ಭೂಪತಿ ವಿಠಲರು
ಕೊಡುವುದನೆ ಕೊಡುಮತ್ತೆ ಎಷ್ಟಾದರಭವ ಪ ಅಸುವನೀಗಲು ನಾನ್ಹಸಗೆಟ್ಟು ಬೇಡದ ಅಸಮಶುಚಿಮನ ನೀಡೊ ಕುಸುಮಾಕ್ಷ ಹರಿಯೆ 1 ಅತಿಶಯದ ಬಡತನವು ಸತತ ಪೀಡಿಸಲೆನಗೆ ಗತಿಯಿಲ್ಲದವವೆನುತ ಸತಿಸುತರು ಜರಿಲಿ ಧೃತಿಗುಂದಿ ಮತಿಗೆಟ್ಟು ವ್ಯಥೆಬಡುವ ಸ್ಥಿತಿಯನ್ನು ಹಿತದಿಂದ ತೊಲಗಿಸೈ ರತಿಪತಿಪಿತನೆ 2 ಬಿರುಕಿನೊಳು ಬಂದು ಈ ಮುರುಕು ಕಾಯದ ಇರುವು ಹರಕೊಂಡು ಹೋಗಲಿ ಹರಿ ಕರುಣದೋರೊ ನರಕಿಯೆನಿಸುವ ಮಹ ತಿರಕಿ ಸಂಸಾರದ ಮರುಕವನು ಪರಿಹರಿಸೊ ಪರಕೆ ಪರತರನೆ 3 ಊರು ನಾ ಸೇರಿರಲಿ ಅರಣ್ಯದೊಳಗಿರಲಿ ಮೀರಿದ ರೋಗದಿಂ ಘೋರ ಬಡುತಿರಲಿ ಆರೈಸದಾರನ್ನು ಸಾರಸಾಕ್ಷನೆ ನಿನ್ನ ಪಾರನಾಮದ ಸವಿ ಸುಸಾರ ಎನಗಿರಲಿ 4 ಕೊಡೋಧರ್ಮ ನಿನ್ನದಿದೆ ಬೇಡುವುದು ನನ್ನ ಧರ್ಮ ಕೊಡುವುದಾದರೆ ನೀನೆ ಕೊಡು ಎನಗೆ ಇದನು ಪೊಡವಿಯವರಿಗೆ ಬಾಗಿ ಬೇಡದ ಪದವಿಯನು ಪಿಡಿವೆ ತವಪಾದ ಎನ್ನೊಡೆಯ ಶ್ರೀರಾಮ 5
--------------
ರಾಮದಾಸರು
ಕೊರವಂಜಿ ಪದ ಬಾರೆ ಸತ್ಯಭಾಮೆ ತೋರೆ ನಿಮ್ಮ ಸುಹಸ್ತದ ಠೇವೆ ಧ್ರುವ ಸರ್ಕನೆ ಬಾರವ್ವಾ ಅರಿಕ್ಯುಳ್ಳ ಗರತಿ ಕರವ ಕೊರವತಿ ತಾರ್ಕಣ್ಯ ಬರುತಾದ ಪರಮ ಸುವಾರ್ತಿ ತರ್ಕರಹಿತ ವಸ್ತು ಕರಕೊ ಸುಮೂರ್ತಿ 1 ಓಯವ್ವ ಅವ್ವ ಬಾರೆ ನಮ್ಮವ್ವ ದೈವುಳ್ಳ ಗರತಿ ನೀನವ್ವ ದೈವ ಬರುದೆ ನಿನ್ನೊಳಗವ್ವ ಕೈದೋರೆ ಕೈದೋರೆ ಕೈದೋರೆ ನಿಮ್ಮ 2 ಕೈದೋರೆ ಕೈದೋರೆ ಕೈದೋರೆ ನಿಮ್ಮ ಕೈಯ ಲಕ್ಷಣ ನೋಡಿ ಹೇಳುವೆನಮ್ಮ ಅಯ್ಯ ಬರುತಾನೆ ಆಶೇಲಿ ನಿಮ್ಮ ಕೈಗೊಟ್ಟು ಕೇಳೆ ನಿಜ ಗುಹ್ಯವರ್ಮ 3 ಸುಳ್ಳು ಮಾತನಾಡಿ ಒಡಲ ಹೊರಳವಲ್ಲ ಬಲ್ಲಷ್ಟು ಬೊಗಳುವೆ ವಿಷಯ ದಾಸ್ಯವಳಲ್ಲ ಉಳ್ಳಷ್ಟು ಹೇಳುವೆ ಕೇಳೆ ಶಿವ ಸೊಲ್ಲ ಹೇಳುವ ಮಾತಿದು ಘನ ಗುರು ತಾ ಬಲ್ಲ 4 ಕೊರವಂಜಿ ಮಾತಿದು ಕಿವಿಗೊಟ್ಟು ಕೇಳಮ್ಮ ಬರುತಾನ ಉದರಲಿ ಹುಟ್ಟಿ ಸಗುಣ ನಿಮ್ಮ ತಾರಿಸುವ ಸ್ವಾಮಿ ಪತಿತ ಪಾವನ ನಿಮ್ಮ ಹರಷದೋರುವ ನಿತ್ಯಾನಂದೋ ಬ್ರಹ್ಮ 5 ಎಂದ ಮಾತನೆ ಕೇಳಿ ಬಂದಳು ಭಾವೆಮ್ಮ ಚೆಂದ ಉಳ್ಳ ಸುರಸ ವಾಕ್ಯ ಕೇಳಿದಳೊಮ್ಮೆ ಬಂದು ಹರುಷದಿ ಪೂರ್ಣ ಸಂದಿಸಿಟ್ಟಳು ಪ್ರೇಮ ಒಂದೆ ನಿಜಸುಮಾತ್ಹೇಳ್ಯೆಂದಳು ನೇಮ 6 ಎಲ್ಲಿಂದ ಬಂದೆವ್ವ ಸೊಲ್ಲ ಬೀರುತ ಶಿವ ಬಲ್ಲ ಮಹಿಮಳೆಂದು ನಾನರಿಯೆನವ್ವ ಇಲ್ಲೆವೆ ಕಂಡೆ ನಾ ಸೊಲ್ಲಿನ ಮಹಿಮರು ಎಲ್ಲ ನೆಲೆನಿಭೇಳೌವ್ವ 7 ಸರಿಯ ಬಂದರ ನಿನ್ನ ಮರಿಯೆನವ್ವ ಎಂದು ಖರೆ ಉಳ್ಳ ಮಾತನೆ ಹೇಳೆ ನಿಜ ಒಂದು ಹಿರಿಯರಗೀ ಮಾತು ಸರಿಯ ಬಾವ್ಹಾಂಗಿಂದು ಬೀರವ್ವ ನಿಜಸಾರವಿಂದು 8 ಲಕ್ಷ ಎಂಬತ್ತುನಾಲ್ಕು ಗ್ರಾಮವ ನೋಡಿ ಲಕ್ಷಿಸುತ ಬಂದ ಲಕ್ಷಣ ನಿಜಗೂಡಿ ಲಕ್ಷುಮಿ ಕರದೋರುತದ ನಿಮ್ಮೊಳೊಡಮೂಡಿ ಅಕ್ಷಯಾನಂದ ಬರುತಾನೆ ಇದರಿಡಿ 9 ಕರ ಕೊಟ್ಟಳು ಸುಶೀಲೆ ವರ ಕೃಪೆಯಲಿ ಕೊರವಂಜಿ ಮಾತಲಿ ಅರಿತಳು ತಾ ತನ್ನಲಿ ಪರಮಾನಂದ ಲೀಲೆ ಬೆರದಳು ಕೇಳಿ 10 ನುಡಿಯುವ್ವ ಸಲಲಿತವಾದ ನಿಜವಾಕ್ಯ ಬಡುವಂತೆ ಹರುಷವು ನೋಡಿ ತ್ರಯಲೋಕ್ಯ ಬಡಸವ್ವ ನನಗಿಂದು ಇದೆ ನಿಜ ಮುಖ್ಯ ಕುಡಲಿಕ್ಕೆ ನಿನಗಿದು ಶಕ್ಯ 11 ಮನದಂತೆಯಾದರ ನೆನದೇನವ್ವ ನಿಮ್ಮ ಅನುಕೂಲಾಗುವ ಪುಣ್ಯ ಪೂರ್ವಾರ್ಜಿತ ನಮ್ಮ ಸಾನುಕೂಲಾಗುವಂತೆ ಬೇಡಿಕೊಳ್ಳಮ್ಮ ನೆನಿ ಎಕನಾತಿ ಎಲ್ಲಮ್ಮ 12 ಒಡಮೂಡಿ ಬಂದರ ಉಡಿಯ ತುಂಬೇನವ್ವ ಜಡಿತಾಭರಣದುಡಿಗಟ್ಟೆ ನಿನಗವ್ವ ಹಿಡಿಯದೆ ಅನುಮಾನ ನುಡಿ ನಿಜ ಸಾರವ್ವ ಕುಡಲಿಕ್ಕೆ ನಿಧಾನದವ್ವ 13 ಕೈಯ ಲಕ್ಷಣದಲಿ ಶ್ರೇಯ ತೋರುತಲ್ಯದ ದಯ ಉಳ್ಳ ಮಹಿಮದ ಸೋಹ್ಯ ಬೀರುತಲ್ಯದ ಭಯವಿಲ್ಲದ ಭಾಗ್ಯ ಅಚಲ ತಾನಾಗ್ಯದ ಜಯಜಯಕಾರ ಭಾಸುತದ 14 ಪುಣ್ಯ ಪ್ರಭೆಯ ಚೆನ್ನಾಗಿ ಭಾಸುತಲ್ಯದೆ ಕಣ್ಣಿಗೆ ಸುಚಿನ್ಹ ಹೊಳವುತದೆ ಚಿನ್ನುಮಯದ ಸುಪುತ್ಥಳಿ ಬರುತದೆ ಬಣ್ಣ ಬಣ್ಣದ ಸುಖ ಬೀರುತದೆ 15 ಅಂಗದೊಳಗ ನಿಮ್ಮ ರಂಗ ಬರುತಾನಮ್ಮ ಕಂಗಳಿಗಿದರಿಡುತದೆ ಹರುಷವು ನಿಮ್ಮ ಭವ ಬಂಧದ ದುಷ್ಕರ್ಮ ಮಂಗಳಕರಾನಂದೊ ಬ್ರಹ್ಮ 16 ನಿನ್ನ ಭಾಗ್ಯಕ ಸರಿ ಇಲ್ಲೆ ಸಂಜೀವನಿ ಚೆನ್ನಾಗಿ ಕೇಳೆ ನೀ ಭಾವೆಗುಣಮಣಿ ಧನ್ಯವಾಯಿತು ನಿನ್ನಂದೆವೆ ಯತಿಮುನಿ ನಿನ್ನೊಳಗುಂಟು ದೇವಶಿಖಾಮಣಿ 17 ಭಾವೆ ನಿನ್ನಿಂದ ಪಾವನ್ನವಾಯಿತು ಜಗ ದೇವಾಧಿದೇವ ಮೂಡುವ ನಿನ್ನೊಳಗೀಗ ಕಾವಕರುಣ ಪ್ರತ್ಯಕ್ಷವಾಗುವ ಯೋಗ ಸುವಿದ್ಯ ಭಾಸುವ ದಿವ್ಯಭೋಗ 18 ಉಂಡ ಊಟ ಕಂಡ ಕನಸು ಪಿಂಡಲಕ್ಷಣ್ಹೇಳುವೆ ಮಂಡಲೊಳಗ ಮಂಡಿಸಿಹ್ಯ ಮಹಿಮೆ ನೀನಗ್ಹೇಳುವೆ ಹಿಂಡದೈವದೊಡಿಯ ನಿನ್ನೊಡಲೊಳಗ ತಾಳುವೆ ಪಂಡಿತರಿಗೆ ಪ್ರಿಯವಾದಾಗ್ಯ ಖಂಡನೀನೆ ಬಾಳುವೆ 19 ನೀನೆ ಜಗಕ ತಾರಿಸುವ ದೈವದೋರಿಕುಡುವೆ ನೀನೆ ಭಕ್ತಜನರ ಜನ್ಮಸಾರ್ಥಕವು ಮಾಡುವೆ ಜ್ಞಾನಗಮ್ಯವಾದ ವಸ್ತುಹಿಡದು ನೀನೆ ಕುಡುವೆ ನಿತ್ಯ ಆಡುವೆ 20 ಅಮ್ಮ ನಿಮ್ಮೊಳು ಘಮ್ಮನ್ಹೊಳುವ ತಮ್ಮ ಬರುತಾನ ಸುಮ್ಮಾನಿಹ್ಹಾ ಸಮೀಪಲೆ ಧಿಮ್ಮ ಹಿಡಿದ ಹಮ್ಮಿನೊಳು ಘುಮ್ಮವಾದರು ಬ್ರಹ್ಮಾದಿಗಳೆ ನಮ್ಮ ನಿಮ್ಮದೆಂಬು ಭ್ರಮೆ ಸುಮ್ಮನ್ಯಾಕಿದೊ ಅಮ್ಮಕೇಳೆ 21 ಬಯಕಿ ಲಕ್ಷಣ ನಿನ್ನ ಹೇಳ್ಹೆನವ್ವಾ ತಾಯಿ ಮಾಯಿಕ ಗುಣ ಸುಟ್ಟು ತಿಂದೇನೆಂಬುದು ಬಾಯಿ ಕೈಕಚ್ಚಿಲೆ ಶುದ್ದಿಲ್ಲಾದವರ ತಾಳದು ಸೋವಿ ಐರಾವತ ಬರುತಾನ ನಿನ್ನೊಳು ಪನ್ನಂಗಶಾಯಿ 22 ಬಾಹ್ಯನಿಷ್ಟರ ಕಂಡು ಬದಿಗೆ ಬರಗುಡಿ ನೀನು ಅಹಂಭಾವಕ ಹೇಸಿ ವಾಕರಿಸುವೆ ನೀನು ಗುಹ್ಯ ಹೇಳುವೆ ನಾನು ಸಾಹ್ಯ ಮಾಡುವ ಶ್ರೀಗುರು ತಾನು 23 ಕಾಮಕ್ರೋಧ ಕರದು ತಿಂದೇನೆಂಬುದು ಬಯಕಿ ನೇಮದಿಂದಲಿ ಮದ ಮತ್ಸರನೆ ನೂಕಿ ಪ್ರೇಮವಿಲ್ಲದವರ ಎಂದಿಗಾದರ ಸೋಕಿ ವರ್ಮಿಕರಿಗೆ ನೀ ಕೈಯಗುಡುವಾಕಿ 24 ಆಸಿ ಎಂಬುದು ಅಟ್ಟುಅರದೇನೆಂಬುದು ಬ್ಯಾಗ ಹುಸಿನುಡಿವೆಂಬದು ಹುರವಾದೀಗ ಹಸನಾದ ಬಯಕೀದು ಋಷಿ ಮುನಿಗಳ ಯೋಗ ಲೇಸು ಲೇಸು ನಿನ್ನ ಅಂತರಂಗ 25 ಧನ್ಯವಾದ ರಾಜಯೋಗವ ಬಯಸುದು ಉನ್ಮನವಾಗಿ ಊರ್ಜಿತವಾದೇನೆಂಬುದು ಸ್ವಾನುಭವದ ಸುಖ ಸೂರ್ಯಾಡೇನೆಂಬುದು ಭಿನ್ನ ಭೇದಕ ಕಣ್ಣ ತ್ಯರಿಯದಿದು 26 ವಾಸುದೇವನ ಭಕ್ತಿ ಆಶ್ರೈಸೇನೆಂಬುದು ಶ್ವಾಸೋಚ್ಛ್ವಾಸಕ ಒಮ್ಮೆ ಬಯಸುವುದು ವಿಷಯ ಪ್ರಪಂಚಕ ಹೇಸಿ ತಾ ಜರೆವುದು ಕುಸುಮನಾಭನ ಸೇವೆ ಇಚ್ಛಿಸುವದು 27 ಒಮ್ಮೆ ಸರಸ್ವತಿ ಕೂಡ ಸರಸಾಡೇನೆಂಬುದು ಒಮ್ಮೆ ಲಕ್ಷುಮಿ ಕೂಡ ಲೋಲಾಡೇನೆಂಬುದು ಒಮ್ಮೆ ಪಾರ್ವತಿ ಕೂಡ ಪವಡೀಸೆನೆಂಬುದು ಒಮ್ಮೆ ಏನುನೊಲ್ಲ್ಯೆನೆಂಬುದು 28 ಹೇಳೇನೆಂದರೆ ನಿನ್ನ ಬಯಕಿಯ ಉಲ್ಹಾಸ ತಿಳಿಯದಿನ್ನೊಬ್ಬರಿಗ ಗರ್ಭದ ಸುವಾಸ ಉಲವುತದೆ ನಿನ್ನೊಳು ಸುಪ್ರಕಾಶ ಥಳಥಳಗುಡುತಿಹ್ಯ ಬಾಲವೇಷ 29 ಧನ್ಯ ಧನ್ಯ ನಿನ್ನ ಗರ್ಭಹೊಳುವ ಹೊಂಬಣ್ಣವು ಒಡಲು ನಿನ್ನ ಪುಣ್ಯ ಪಾವನ್ನವು ಧನ್ಯ ಧನ್ಯ ನಿನ್ನ ದರುಷಣದ ಜೀವನವು ಧನ್ಯ ಧನ್ಯ ನಿನ್ನ ಕಂಡ ಜನರ ಜೀವಪ್ರಾಣವು 30 ಭಾವೆ ನಿನ್ನಿಂದ ಖ್ಯಾತಿಪಡೆದ ಪ್ರಹ್ಲಾದನು ದೇವ ದೇವ ಬಂದು ಸ್ತಂಭದೊಳು ಮೂಡಿದನು ಆವಾವ ಠಾವಿನೊಳು ಬಂದು ರಕ್ಷಿಸಿದನು ಜೀವ ಜೀವ ತಾನೆ ಅಗಿ ಪ್ರಾಣನುಳಹಿದನು 31 ನಿನ್ನ ಬಲಗೊಂಡು ದ್ರೌಪದಿಯ ಖ್ಯಾತಿಪಡೆದಳು ಪುಣ್ಯ ಉಳ್ಳ ಮಹಿಮನಂಘ್ರಿ ಕಣ್ಣಾರ ಕಂಡಳು ಚೆನ್ನಾಗಿ ಬಂದು ಸ್ವಾಮಿ ಲಜ್ಜೆಗಾಯ್ದು ಸಭೆಯೊಳು ಬಣ್ಣ ಬಣ್ಣ ವಸ್ತ್ರ ಪೂರಿಸಿದಾನೇಕಗಳು 32 ಸ್ತುತಿಯು ಮಾಡಲು ನಿನ್ನ ಯತಿಮುನಿಗಳವಲ್ಲ ಗತಿಯ ಪಡೆದರು ಸಕಲ ಮುನಿಜನರೆಲ್ಲ ಅತಿ ಹರುಷವು ಕೂಡಿದರು ಜಗದೊಳಗ್ಯಲ್ಲ ಹಿತದೋರುತಿದೆ ವಸ್ತು ಮಯವೆಲ್ಲ 33 ಹೊಳೆವ ಸುಳಿವ ಚೆಲುವ ನಿನ್ನೊಳಗ ನಲುವನೆ ಕಳವಿಲೊಯಿದ ವೇದನುಳುಹಿದವನು ಬೆಳೆವನೆ ಭಾರ ತಾಳಿದವನು ಉಲುವನೆ ನೆಲವ ಗೆದ್ದ ಬಲಿಯು ನಿನ್ನೊಳಗೆ ಒಲುವನೆ 34 ಸೀಳಿ ದೈತ್ಯನ ಕೊಂದ ಶೂರ ಘಮಗುಡತಾನೆ ಅಳದು ಭೂಮಿಯ ಕೊಂಡು ಬೆಳದವ ಬರುತಾನೆ ತಿಳಿದು ಪಿತರ ಸೂಡುಕೊಂಡವ ಬರುತಾನೆ ಬಲುಪರಾಕ್ರಮದವ ತೋಳುತಾನೆ 35 ತಾಂ ಸಂಚರಿಸ್ಹ್ಯಾನ ನಿನ್ನೊಳಗ ಮೂಡಿ ಬರುತಾನೆ ಬ್ಯಾಗೆ ನಗುತ ಬರುತಾನೆ ಈಗ ಕೈಯಗೊಟ್ಟು ಬರುತಾನೆ ನಿನಗೆ 36 ಸಾಧೀಸಿ ಕೇಳೆ ಕಿವಿಗೊಟ್ಟು ಒದುಗುವ ತಾಂ ಇದರಿಟ್ಟು ಉದಿಯವಾಗುವ ದಯವಿಟ್ಟು ಸದ್ಬಕ್ತರಿಗೆ ಕೈಯಗೊಟ್ಟು 37 ಹುಟ್ಟುವ ಶಿಶುವಿನ ಘಟಣಿಯ ಬಹಳ ಗುಟ್ಟೊಡಿಯಲು ತಾಂ ಮುಟ್ಟನು ತಾಳ ಕಟ್ಟುವ ದೈತ್ಯರ ದಿಟ್ಟ ಮಾ ಸಾಳ ದೃಷ್ಟಿಸಿ ನೋಡುವ ನಿಷ್ಠರ ಮೇಳ 38 ಶಿಶುವಿನ ಲಕ್ಷಣ ಬಲು ಅಗಾಧ ಪರಿ ಮಾಟವು ಋಷಿಗಳ ಬೋಧ ಹಸು ನೀರಡಿಸರವುದು ಶ್ರೀಪಾದ ಬಸುರಿನ ಬಯಕಿದು ಬಲುಸುಸ್ವಾದ 39 ಘಮಗುಡುತದೆ ಅನಾಹತದ ಧ್ವನಿಯು ಕ್ರಮ ತಿಳಿವದು ಸುಯೋಗದ ಮನಿಯು ಧಿಮಿಗುಡುತದ ಆನಂದದ ಖಣಿಯು ಭ್ರಮ ಬಿಡಿಸುವ ಘನ ಚಿಂತಾಮಣಿಯು 40 ಹುಟ್ಟಿ ಬರುತಾನಿವ ಶಿಷ್ಟರ ಮನಿಲಿವ ದುಷ್ಟ ಮರ್ದನ ದೇವ ನಿಷ್ಠರಿಗೆ ಕಾವ ಎಷ್ಟೆಂದ್ಹೇಳಲವ್ವ ಸೃಷ್ಟಿಗಧಿಕನಿವ ಮುಟ್ಟಿ ಮುದ್ರಿಸುವ ದಿಟ್ಟೆದೆ ಕೂಸವ್ವ 41 ವರ್ಣಿಸಲಾಗದು ಶಿಶುವಿನ ವಿವರಣ ದಣಿಯಿತು ಕೊಂಡಾಡಿ ವೇದಸುಪುರಾಣ ಖೂನ ತಿಳಿಯದು ತಾನು ಶಾಸ್ತ್ರಕ ಸಂಪೂರ್ಣ ದ್ಯಾನ ಮೋನಕ ದೂರಗಮ್ಯ ಸ್ಥಾನ 42 ಗುಟ್ಟು ತಿಳಿಯದ ವಸ್ತು ಹುಟ್ಟಿಬಾಹುದು ಕೇಳಿ ಉಂಟಾಗುವದು ನಿನ್ನೊಳು ನೆನದಾಗಳೆ ಘಟ್ಯಾಗಿ ಅನುಭವಿಸುತ ನೀನೆ ಬಾಳೆ ದೃಷ್ಟಿಯೊಳೀಗುಟ್ಟು ಆರೀಗ್ಹೇಳೆ 43 ಬಸುರು ಬಯಕೆಂಬುದು ಹೆಸರಿಸಲಳವಲ್ಲ ಹಸನಾಗಿ ಅನುಭವಿಸುವ ಪುರುಷನೆ ಬಲ್ಲ ವಾಸುದೇವನ ಕಾಣದಿಹ್ಯದೆ ಕಣ್ಣಲ್ಲ ಆಸಿ ಅಳಿದವರೆ ತಾಂ ತಿಳಿದರೆಲ್ಲ 44 ಹುಟ್ಟುವ ಲಕ್ಷಣ ಕೇಳೆ ನೀ ಕಿವಿಗೊಟ್ಟು ಮುಟ್ಟಿ ಮುದ್ರಿಸಿಹ್ಯ ಗುರು ಕಟಾಕ್ಷವ ಕೊಟ್ಟು ಇಟ್ಟುಕೊ ಈ ಮಾತು ಆರಿಗ್ಹೇಳೆ ಬಿಟ್ಟು ಗಂಟು ಕಟ್ಟಿದ ಮಾತು ಹೇಳೆಬಿಟ್ಟು 45 ಆಲಕ್ಷವೆಂಬ ಸುನಕ್ಷತ್ರದಲಿ ಪುಟ್ಟಿ ಸುಲಕ್ಷಣದಲಿ ಬರುತಾನೆ ಜಗಜಟ್ಟಿ ನೆಲಯುಗೊಂಡಾಡಿಸಿ ಮನಮುಟ್ಟಿ 46 ಜನ್ಮನಾಮೆಂಬುದು ಕೂಸಿನ ನಿರ್ಗುಣ ಸಮಸ್ತರಿಗೆ ನಡವ ನಾಮವೆ ಸಗುಣ ಬ್ರಹ್ಮಾನಂದದಿ ಲೋಲ್ಯಾಡುವ ಪರಿಪೂರ್ಣ ಕಮಲನಯನ ಸ್ವಾಮಿ ರಮಾರಮಣ 47 ಕೂಸು ಎಂದರ ತಾನು ಕೂಸು ಎನಲಾಗದು ವಾಸವಾಗ್ಯಾಡುದು ವಿಶ್ವಲಿದು ಹೆಸರನೇಕಪರಿಯಲಿ ಕರಿಸಿಕೊಂಡು ಲೇಸು ಲೇಸಾಗಿ ತಾ ಆಡುವುದು 48 ಹಿಂದ ಅಡಿದ ಆಟ ಮಂದದೆ ಆಡುದು ಎಂದಿಗ್ಯದರ ಗುಟ್ಟು ತಿಳಿಯಗುಡುದು ಒಂದಿಸಿದವರ ತನ್ನೊಳು ಕೂಡಿಕೊಂಬುದು ಒಂದೆ ವಸ್ತುವಾಗಿ ತೋರುವುದು 49 ಹೇಳುವೆ ಕೇಳೆ ಶಿಶುವಿನ ಆಟ ತಿಳಿಯಲು ಜಗದೊಳು ಬಲು ಅವ್ಹಾಟ ನೆಲಿ ತಿಳಿದವರಿಗೆ ತೋರುದದು ನೀಟ ನಲಿನಲಿದಾಡುವ ಸಲಲಿತದಾಟ 50 ಒಮ್ಮೆ ನೀರನೆ ಚಲಿಪಿಲಿ ಮಾಡುವ ಒಮ್ಮೆ ಬಾಗಿ ಜಗನೆಗುವ ಒಮ್ಮೆ ಹಲ್ಲಿಲೆ ಬೇರನೆ ಅಗಳುವ ಒಮ್ಮೆ ಬರುತಲಿ ಗುರುಗುಡುವ 51 ಒಮ್ಮೆ ಬಲು ಗಿಡ್ಡಾಗಿ ತೋರುವ ಒಮ್ಮೆ ಪರಾಕ್ರಮ ಹಿಡುವ ಒಮ್ಮೆ ವನದೊಳಗಾಡುತ ಹೋಗುವ ಒಮ್ಮೆ ಕಡವ ಬೆಣ್ಣೆಯ ಮೆಲುವ 52 ಒಮ್ಮೆ ಬತ್ತಲೆ ತ್ರಿಪುರದಲಿ ಸುಳಿವ ಒಮ್ಮೆ ಏರುವ ತಾ ಹಯವ ಒಮ್ಮೊಮ್ಮಾಗುವ ತಾನೆವೆ ಸಗುಣವ ಒಮ್ಮೊಮ್ಮಾಗುವ ನಿರ್ಗುಣವ 53
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೊಳಲೇನು ಪುಣ್ಯವ ಮಾಡಿ ರಂಗನ ಬಳಿಗೆ ಬಂದಿತೇ ಪ ನಳಿನ ನೇತ್ರೆಯರ ಮನಸು ಎಲ್ಲಾ ಸೆಳೆದು ಪೋದೀತೇ ಅ.ಪ. ವನಜನಾಭನು ಯಮುನೆಯಲ್ಲಿ ಕೊಳಲನೂದುವಮನಸು ನಿಲ್ಲದ ನಡೀರೆ ಪೋಗೋಣ ಕೇಳಿ ನಾದವ 1 ಇಂದು ಗೋವುಗಳ 2 ಎಂಥ ರಾಗ ಮಾಡುವೋನು ಕಂತುಪಿತನುಅಂತರಂಗಕೆ ಸುಖವನಿತ್ತು ಭ್ರಾಂತಿಗೊಳಿಸುವ 3 ಕುಂಡಲ ಹಾರಪದಕ ಧರಿಸಿ ಕುಳಿತಿಹಸರಸಿಜಾಕ್ಷಿಯರೆ ನೋಳ್ಪ ಜನಕೆ ಹರುಷ ಕೊಡುತಿಹ 4 ಸಿರಿಯು ಬಂದು ಮುರಳಿಯಾಗಿ ಮರುಳು ಮಾಡುವನೆಪರರಿಗಿಂಥ ಸುಖವುಂಟೆಂದು ಭ್ರಾಂತಿಗೊಳಿಸುವನೆ ] 5 ಇಂದು ನಮ್ಮೊಳು ಸರಸವಾಡುವನೆ 6
--------------
ಇಂದಿರೇಶರು
ಕೋಲು ಕೋಲೆನ್ನ ಕೋಲೆ ಕೋಲು ಕೋಲೆನ್ನ ಕೋಲೆ ಕೋಲು ಶ್ರೀಹರಿಯಾ ಬಲಗೊಂಬೆ ಕೋಲೆ ಪ ಮೊದಲು ನಮ್ಮ ಗುರು ರಘುಪತಿಯ ಪಾದಕ್ಕೆ ಮುದದಿಂದ ಎರಗಿ ಬಿನ್ನೈಪೆ ಕೋಲೆ ಮುದದಿಂದ ಎರಗಿ ಬಿನ್ನೈಪೆ ಮನದಲ್ಲಿ ಪದಮನಾಭನ್ನ ತೋರೆಂದು ಕೋಲೆ1 ಜನುಮ ಜನುಮದಲ್ಲಿ ಅನಿಮಿತ್ಯ ಬಂಧು ನೀಯನಗೀಯೋ ನಮ್ಮ ಸೇವೆಯ ಕೋಲೆ ಎನಾಗಿಯೋ ನಿಮ್ಮ ಸೇವೆಯ ತವ ಪಾದವನು ಧ್ಯಾನ ಮರಿಯಾದೆ ಕೋಲೆ2 ಮೂಢನಾದ ಎನ್ನನೋಡಿ ಕರುಣವನು ಮಾಡಿ ಹರಿಚರಣ ತೋರಿದ ಕೋಲೆ ಮಾಡಿ ಹರಿಚರಣ ತೋರಿದ ನಿಮ್ಮ ದಯ ಕೀಡುಂಟೆ ಜಗದಿ ಗುರುವರ್ಯ ಕೋಲೆ3 ಪತಿಪಾದ ಮಹಿಮೆ ತೋರಿಸಿ ಕೋಲೆ ಪತಿಪಾದ ಮಹಿಮಾ ತೋರಿಸಿ ಸ ದ್ಗತಿ ಪಥsÀವನ್ನು ವಿಡಿಸಿದ ಕರುಣಿಯೆ ಕೋಲೆ 4 ಅನಾಥ ರಕ್ಷಕ ಆಪತ್ತು ಬಾಂಧವ ಶ್ರೀನಿವಾಸನ್ನ ನಿಜದಾಸ ಕೋಲೆ ಶ್ರೀನಿವಾಸನ್ನ ನಿಜದಾಸ ಮಮಕುಲ ಸ್ವಾಮಿಗೆ ನಮಿಪೆ ಮನದಲ್ಲಿ ಕೋಲೆ 5 ಲಕುಮೀಶ ಹರಿ ದೇವಕಿ ತನಯಗೆ ಸಕಲಾ ಕರ್ಮಗಳಾ ಅರ್ಪಿಸೆ ಕೋಲೆ ಸಕಲಾ ಕರ್ಮಗಳಾ ಅರ್ಪಿಪೆ ನಮ್ಮಗುರು ಸುಖನಿಧಿಗಳಿಗೆ ನಮಿಸುವೆ ಕೋಲೆ 6 ಆನಮಿಸುವೆ ಮಹಾನುಭಾವ ಗುರು ನೇಮಕಲ್ಲಾರ್ಯರ ಚರಣಕ್ಕೆ ಕೋಲೆ ನೇಮಕಲ್ಲಾರ್ಯರ ಚರಣಕ್ಕೆ ಕೋಸಗಿ ಸ್ವಾಮಿರಾಚಾರ್ಯರ ಪಾದಕ್ಕೆ ಕೋಲೆ 7 ಪುರಂದರಾದಿ ದಾಸವರ್ಯರ ಸುಂದರ ಚರಣಕ್ಕೆ ಎರುಗುವೆ ಭರದಿಂದ ಕೋಲೆ ಭರದಿಂದ ಮುದಮುನಿ ಇವರನ್ನು ತೋರಿ ಪೊರೆಯಂದು ಕೋಲೆ 8 ಅಂದದಿಂದ ಆನಂದತೀರ್ಥ ರಾಘ ವೇಂದ್ರಾದಿ ಸಕಲ ವಿಭುದಾದಿ ಕೋಲೆ ರಾಘವೇಂದ್ರಾದಿ ಸಕಲ ವಿಭುದ ಆ ಕರ್ಮಂ ದೀಗಳಿಗೆ ನಮಿಸುವೆ ಕೋಲೆ 9 ವಾದಿರಾಜರ ದಿವ್ಯ ಪಾದಕ್ಕೆ ನಮಿಸುವೆ ಸಾಧಿಸಿ ಕೊಡಲಿ ಸತತಾದಿ ಕೋಲೆ ಸಾಧಿಸಿ ಕೊಡಲಿ ಸತತಾದಿ ಹರಿದಾಸ ರಾದವರ ಸೇವೆಯನಗೆಂದು ಕೋಲೆ 10 ಗಣಪಾದಿಗಳು ಸುರಮುನಿ ಪಾದಗಳಿಗಾ ನಮಿಸುವೆ ಮನಸಿಜ ಸುರಪಾಗ ಕೋಲೆ ನಮಿಸುವೆ ಮನಸಿಜ ಸುರಪಾಗ ಭೂತ ಗಣಪತಿ ಶೇಷರಪಾದ ಕಮಲಕ್ಕೆ ಕೋಲೆ 11 ಭಾರತೀವಾಣಿ ಗುರು ಮಾರುತಿ ಪಾದಕೆ ಪರಿ ಮಣಿಯುವೆ ಕೋಲೆ ಪರಿ ಮಣಿಯುತ ಹರಿಪಾದ ತೋರುತ ಮನದಲ್ಲಿ ನಿಲಿಸೆಂದು ಕೋಲೆ 12 ಲಕ್ಷ್ಮೀದೇವಿಯೆ ಲಕ್ಷಣವಂತಿಯೆ ಪಕ್ಷಿವಾಹನನ ಅರ್ಧಾಂಗಿ ಕೋಲೆ ಪಕ್ಷಿವಾಹನನ ಅರ್ಧಾಂಗಿ ಭವದಿಂದ ರಕ್ಷಿಸಲೆನ್ನ ತವಕಾದಿ ಕೋಲೆ 13 ಶಿರಿಗೋವಿಂದವಿಠಲ ವಿಶ್ವವ್ಯಾಪಕ ಮರುತಾಂತರ್ಗತನೆ ಮುರರಿಪು ನಮ್ಮ ಗುರುವರ್ಯರ ಪ್ರೀಯ ಸಲಹಯ್ಯ ಕೋಲೆ14
--------------
ಅಸ್ಕಿಹಾಳ ಗೋವಿಂದ
ಕೌಸಲ್ಯಾ ಸುಕುಮಾರ ಭಾಸಿತ ಕೋದಂಡಧರ ವಾಸವನುತ ರಣಧೀರ ಭೂಮಿಸುತಾ ಮೋಹಕ 1 ಮುನಿಕೌಶಿಕ ಮಖಪಾಲನ | ಜನಕಸುತಾ ಮನಮೋಹನ ಭವ ಖಂಡನ ಘನದಾನವ ಸತಿಭಂಜನ 2 ಭರತಾರ್ಚಿತ ವರಚರಣ | ಖರದೂಷಣ ಸಂಹರಣ ಮರುತಾತ್ಮಜ ಮಣಿಭೂಷಣ | ಶರಣಾಗತ ಮನತೋಷಣ3 ಲಂಕಾಧಿಪಕುಲನಾಶಕ | ಕಿಂಕರವಾನರಪೋಷಕ ಪಂಕೇರುಹ ಲೋಚನಾಕಳಂಕ [ಶಮನ] ಮಾಂಗಿರಿ ನಾಯಕ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕ್ಷಿತಿಭಾರ ಹರಣನೇ ಶ್ರೀಜಾನಕೀ ಪತಿಯೇ |ಶಿತಿಕಂಠ ಸಖ ಹರಿಯೇ ಪ ಅತಿ ವಿಮಲನಂತಾರ್ಕ ನಿಭ ಪದಾಗತಿ ವಹನೆ ಪೊರೆ ಶ್ರೀರಾಮಚಂದ್ರಾನೇ ಅ.ಪ. ಪರಮ ಮಂಗಳ ನಾಮ | ಪರಿಹರಿಸಿ ಸಂಸೃತಿಯನಿರುತ ಮಹದಾನಂದ | ಪ್ರದವೆನಿಪುದೋ ||ಮರುತಾಂತರಾತ್ಮ ತವ | ನಾಮ ಸುಧೆ ಸುಖ ಸವಿದುಇರುವಂತೆ ಮಾಡಯ್ಯ | ಕರುಣ ನಿಧಿಯೇ 1 ಕಮಲ ಸಂಭವನಯ್ಯ | ಸುಮನಸರಿಗತಿ ಪ್ರೀಯಕಮಲದಳ ನೇತ್ರನೇ | ಕಾಮಿತ ಪ್ರದನೇ ||ಭ್ರಮ ಮೂರ ಪರಿಹರಿಸೊ | ಕಮಲಾಪ್ತ ಕುಲಜನೇಶಮದಮಾನ್ವಿತನೆನಿಸಿ | ವಿಮಲ ಮತಿ ಈಯೋ 2 ದಶಕಂಠ ಹರ ನಿನ್ನ | ಯಶವನ್ನೆ ಪೊಗಳಲುಶೇಷ ವಿಪ ರುದ್ರಾದಿ | ಗಸದಳವು ಇಹುದೂ |ಕಸರು ಕರ್ಮಾದಿಗಳ | ಕೆಸರು ಕಳೆ ಪ್ರಾರ್ಥಿಸುವೆಅಸಮ ಮಹಿಮನೆ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಖಳರನು ತರಿವಾ ಬಗಳಾಂಬೆಗೆಕಮಲದಾರತಿ ಬೆಳಗಿರೆ ಪ ಅರಿ ಎಂಬ ಶಬ್ಧವು ಕಿವಿಗೆ ಬೀಳಲುಸರಿದವು ಸರಿದವು ಖಡ್ಗದಿಂ ಕೆಂಗಿಡಿಭರದಿಂದರಿಯನೆ ತುಡುಕಿಯೆ ಮುಂದಲೆತರಿದಳಾಗಲೆ ತಲೆಯ ಬಗಳಾಂಬೆಮುರಿದಳಾಗಲೆ ತಲೆಯ ಬಗಳಾಂಬೆ1 ಕಡಿಯುತ ಅವುಡನು ಅರಿಯನು ದೃಷ್ಟಿಸಿಝಡಿಯುತ ಮುದ್ಗರ ಹಿಡಿದು ನಾಲಗೆಮೃಡಹರಿ ಬ್ರಹ್ಮರು ಅಹುದಹುದೆನೆಹೊಡೆದಳಾಗಲೆ ಅರಿಯ ಬಗಳಾಂಬಪುಡಿಯ ಮಾಡಿದಳರಿಯ ಬಗಳಾಂಬ 2 ಕಾಲಲಂದುಗೆ ಗೆಜ್ಜೆ ಕಂಠಾಭರಣವುಮೇಲೆ ಸರಿಗೆವೋಲೆ ಮೂಗುತಿ ಹೊಳೆಯಲುಲೋಲ ಚಿದಾನಂದ ರೂಪಿಣಿ ಬಗಳೆಯುಪಾಲಿಸಿದಳು ಭಕ್ತರ ಬಗಳಾಂಬಲಾಲಿಸಿದಳು ಭಕ್ತರ ಬಗಳಾಂಬ 3
--------------
ಚಿದಾನಂದ ಅವಧೂತರು