ಒಟ್ಟು 319 ಕಡೆಗಳಲ್ಲಿ , 65 ದಾಸರು , 293 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸತ್ಯ ಸಂಕಲ್ಪ ನೀನಹುದೆಲೊ ಜಗದೊಳು ಭೃತ್ಯವತ್ಸಲ ಹರಿಯೆ ಪ. ನಿತ್ಯ ತೃಪ್ತನೆ ವ್ಯಾಪ್ತ ಜಗದಿ ಹರಿಯೆ ದೊರೆಯೆ ಅ.ಪ. ಜನನ ಮರಣ ವಿದೂರನೆ ದೇವಕಿ ತನಯ ರುಕ್ಮಿಣೀಶ ಘನಭವ ವನಧಿಯ ದಾಟಿಸಿ ಸಲಹೋ ವನಜ ನಯನ ದೇವ ಸತತದಿ 1 ಕಮಲಾಕ್ಷ ಕಮಲೇಶ ಕಮಲಪಾಣಿ ಪದ ಕಮಲವೆನಗೆ ತೋರೊ ಕಮಲನಾಭ ಹೃತ್ಕಮಲದಿ ನಿಲ್ಲೊ ಕಮಲಮುಖನೆ ದೇವ ಶ್ರೀಹರಿ 2 ಭಕ್ತಕಮಲ ಬಂಧು ವ್ಯಾಪ್ತ ದಯಾಸಿಂಧು ಉತ್ತಮನೆ ನೀನೆಂದು ಎತ್ತ ನೋಡಲು ಸುರರೆತ್ತಿ ಕೈ ಪೊಗಳಲು ಮತ್ತೆ ನಿನಗೆ ಸರಿಯೆ ಜಗದೊಳು 3 ಶ್ರೀನಿವಾಸನೆ ಕಾಯೊ ಮಾನನಿಧಿಯೆ ಎನ್ನ ಹೀನ ಕರ್ಮವ ಕಳೆಯೊ ಶ್ರೀನಿಧಿ ದ್ರೌಪದಿ ಮಾನ ಕಾಯ್ದನೆ ಗಾನಲೋಲ ಕೃಷ್ಣ ನರಹರಿ 4 ಸಂಕರ್ಷಣನೆ ಮನ ಪಂಕಜದಲಿ ನಿಂತು ಶಂಕಿಸದಲೆ ಕಾಯೊ ಪಂಕಜಮುಖ ಹರಿ ಗೋಪಾ- ಲಕೃಷ್ಣವಿಠ್ಠಲ ಶಂಖ ಚಕ್ರಧರನೆ ಪೊರೆಯೊ ನೀ5
--------------
ಅಂಬಾಬಾಯಿ
ಸರಸಿಜನಾಭ ಪ. ಉಡುಪಿಯ ಕೃಷ್ಣನೇ ಅ.ಪ. ಏನು ಕಾರಣವನ್ನು ತೋರಿದ್ಪೊ ಶ್ರೀನಿವಾಸನೆ ನಿನ್ನ ಮಹಿಮೆಯ ಪೊಗಳಲು ನಾ ಶಕ್ತಳಲ್ಲಾ ಭಕ್ತವತ್ಸಲಾ 1 ನಿನ್ನ ನೋಡಿ ಧನ್ಯಳಾದೆನೊ ಸನ್ನುತಾಂಗನೇ ಎನ್ನ ಮೇಲೆ ಕರುಣವ ತೋರಿ ನಿನ್ನ ದರುಶನವಿತ್ಯೋ ದೇವಾ 2 ಮಾಡಿಸೊ ಧ್ವಂದ್ವಕಾರ್ಯ ನಿನ್ನದೆಂಬ ಸೊಲ್ಲ ಪಾಲಿಸು 3 ನಿನ್ನ ನಾಮದ ಸ್ಮರಣೆಯನ್ನು ಮರಿಯದೆ ನುಡಿಸೆನೆಗೆ ಕರುಣಾನಿಧಿಯೇ4 ನಿನ್ನ ಪಾದದ ಧ್ಯಾನವು ನಿರಂತರವಿರಲೆನೆಗೆ ನಿನ್ನ ಕಡೆಯಾಕಣ್ಣಲಿ ನೋಡೊ ರಮಾವಲ್ಲಭವಿಠಲನೆ ಕರುಣದಿ5
--------------
ಸರಸಾಬಾಯಿ
ಸಿಂಗನಾ ಏರಿದ ನರಸಿಂಗ ತೋಮರವ ಪಿಡಿದು | ರಂಗ ವೈಭೋಗದಿಂದ | ನಲಿದು ಚತು | ರಂಗ ಬೀದಿಯೊಳು ಮೆರೆದಾ ಪ ಮುತ್ತಿನ ಕಿರೀಟ ಮೇಲೆ ಎತ್ತಿದ ಸತ್ತಿಗೆ ಪೊಳೆಯ | ವಾಹನ ರಥ | ಹತ್ತಿ ಬರುವ ಪುರದ ಜನಗಳು 1 ಸನಕಸನಂದನ ಸನತ್ಸುಜಾತ ಸನತ್ಕುಮಾರ | ಮುನಿವರರು ವೇದ ಘೋಷಣೆ ಉಚ್ಚರಿಸುತ್ತ | ಅನಿಮಿಷರಾಗಿ ಇಚ್ಚೈಸುತಾ 2 ಗಂಧರ್ವಾದಿ ಗಾಯನಾ ನಾರಂದನು ಪಾಡುತ್ತ ಬರೆ | ಎಂದು ತುಂಬರನು ಹಾಡಿ ಪಾಡುತಾ 3 ವೇಶ್ಯ ಜನರು ರಂಭೆ ಊರ್ವಶಿ ಪಾತ್ರ ಮಾಡುತಿರೆ | ದಾಸಾನುದಾಸರು ಪಾಡುತಾ | ಸಲಹೊ ಶ್ರೀನಿ ವಾಸನೆಂದು ಬೇಡಿಕೊಳುತಾ 4 ಮಂಗಳಪಾಂಗ ಸಾಂಗೋಪಾಂಗದಿಂದ ಒಪ್ಪೆ ಅಲಮೇ ವೆಂಗಳೇಶ ಶ್ರೀ ವೆಂಕಟೇಶಾ 5
--------------
ವಿಜಯದಾಸ
ಸುವ್ವಿ ಸುವ್ವಿ ನಮ್ಮ ಶ್ರೀರಮಣಗೆ ಸುವ್ವಿ ಸುವ್ವಿ ಸುವ್ವಿ ನಮ್ಮ ಭೂರಮಣಗೆ ಸುವ್ವಿ ಸುವ್ವಿ ಎಂದು ಪಾಡಿ ಸಜ್ಜನರೆಲ್ಲ ಕೇಳಿ ಪ. ಹರಿಗೆ ಶರಣೆಂಬೆ ಸಿರಿಗೆ ಶರಣೆಂಬೆ ವರ ವಾಣಿರಮಣಗೆ ಶರಣೆಂಬೆ ಸುವ್ವಿ ವರ ವಾಣಿರಮಣಗೆ ಶರಣೆಂದು ಪೇಳಿದ ಗುರುವಾದಿರಾಜೇಂದ್ರನ ಕೃತಿಯೆಂದು ಸುವ್ವಿ 1 ¥ಕ್ಕಿವಾಹನ್ನ ಜಗಕ್ಕೆ ಮೋಹನ್ನ ರಕ್ಕಸದಾಹನ್ನನಿವ ಸುವ್ವಿ ರಕ್ಕಸದಾಹನ್ನನಿವ ತನ್ನ ಮರೆ- ಹೊಕ್ಕರ ಕಾಯ್ವ ಪ್ರಸನ್ನನಿವ ಸುವ್ವಿ 2 ಯಶೋದೆಯ ಕಂದ ತನ್ನ ವಿಷವನುಣ್ಣೆಂದ ಕರ್ಕಶದ ಪೂತನಿಯ ಶಿಶುವಾಗಿ ಸುವ್ವಿ ಕರ್ಕಶದ ಪೂತನಿಯ ಶಿಶುವಾಗಿ ಕೊಂದ ನಮ್ಮ ಎಸೆವ ಗೋವಿಂದ ಪಾಲಿಸ ಬಂದ ಸುವ್ವಿ 3 ಶಕಟಾಸುರನ್ನ ಮೆಟ್ಟಿ ಕೊಂದ ಬಲು ವಿಕಟ ದೈತ್ಯನ್ನ ಕೊರಲೆತ್ತಿ ಸುವ್ವಿ ವಿಕಟದೈತ್ಯನ್ನ ಕೊರಲೆತ್ತಿ ಕೊಂದು ಸರ್ಪನ ಮ- ಸ್ತಕದಮೇಲೆ ನಲಿವುತ ನಿಂದ ಸುವ್ವಿ4 ಕರುಗಳ ಕಣ್ಣಿಯ ಬಿಡುವಾಗ ನಾರಿಯರೆಲ್ಲರು ಪೊರವಡಲು ತಾ ಪೊಕ್ಕು ಪಾಲ್ಮೊಸರನೆ ಸುವ್ವಿ ಪೊರವಡಲು ತಾ ಪೊಕ್ಕು ಪಾಲ್ಮೊಸರನೆ ಸುರಿದು ಅವರ್ಬರಲು ಬೆಣ್ಣೆಯ ಕೊಂಡೋಡುವ ಸುವ್ವಿ 5 ಮತ್ತಿಯ ಮರಗಳ ಕಿತ್ತುವಾಗ ಅಲ್ಲಿ ಭೃತ್ಯರಿಗೊಲಿದು ವರವಿತ್ತ ಸುವ್ವಿ ಭೃತ್ಯರಿಗೊಲಿದು ವರವಿತ್ತ ತನ್ನ ಮಿತ್ರಜನಕಾಗಿ ಗಿರಿಯೆತ್ತಿದನೆ ಸುವ್ವಿ 6 ವೃಂದಾವನದಿ ನಿಂದು ಚಂದದಿ ನಲಿವಾಗ ತನ್ನ [ಕೊಂದಪೆ]ನೆಂದು ಬಂದ ಬಕನ ಸುವ್ವಿ [ಕೊಂದಪೆ]ನೆಂದು ಬಂದ ಬಕನ ಸೀಳಿ ಪುಲ್ಲಂದದಿ ಕೊಂದು ಬಿಸುಟಾನೆ ಸುವ್ವಿ 7 ಕಲ್ಪತರುವಂತೆ ನಮ್ಮ ತನ್ನಧರಿಂದ ಕೊಳಲನೂದುವ ಚೆಲುವಗೆ ಸುವ್ವಿ ಕೊಳಲನೂದುವ ಚೆಲುವ ಗಾನಲೋಲ ಗೋ- ಪಾಲಕೃಷ್ಣನಿಗೆ ಶರಣೆಂಬೆ ಸುವ್ವಿ 8 ರಂಗ ರಾಸಕ್ರೀಡೆಯೆಂಬ ಶೃಂಗಾರರಸ ಬಸಿವ ಮಂಗಳ ವಿಲಾಸವನು [ರಚಿಸಿದ]ಸುವ್ವಿ ಮಂಗಳ ವಿಲಾಸವನು ರಚಿಸಿದಾತನ ಕಂಡು ದೇ ವಾಂಗನೆಯರೆಲ್ಲರು ತನುವ ಮರೆತರು ಸುವ್ವಿ 9 ಮಧುರೆಗೆ ಪೋಗಿ ಮಲ್ಲರಸುವ ನೀಗಿ ಮದಾಂಧ ಮಾವನ್ನ ಮಡುಹಿದ ಸುವ್ವಿ ಮದಾಂಧ ಮಾವನ್ನ ಮಡುಹಿದ ಶ್ರೀಕೃಷ್ಣ ಮುದದಿ ತನ್ನವರ ಮುದ್ದಿಸಿದ ಸುವ್ವಿ 10 ಧರ್ಮವ ಬಿಡಬೇಡ ದುಷ್ಕರ್ಮ ಮಾಡಬೇಡ ದುರ್ಮನವ ಬಿಡದೆ ಹರಿಯಲಿಡು ಸುವ್ವಿ ದುರ್ಮನವ ಬಿಡದೆ ಹರಿಯಲಿಡು ಮನವ ಕಾಮಿನಿಯೊಳಾಡಿ ಕೆಡಬೇಡ ಸುವ್ವಿ 11 ದುರುಳರ ನೋಡಿ ದೂರಕ್ಕೋಡು ಹರಿ- ಶರಣಡಿಗೆ ಪೊಡಮಡು ಸುವ್ವಿ ಶರಣರಡಿಗೆ ಪೊಡಮಡು ಶ್ರೀಕೃಷ್ಣನ ಸು- ಚರಿತವ ಪಾಡುವರೊಳಗಾಡು ಸುವ್ವಿ 12 ಏರಲರಿಯದವ ಮರನೇರಿ ಬಿದ್ದು ಸಾವಂತೆ ನೀರ ಮೀನುಗಳು ಕರಗುವಂತೆ ಸುವ್ವಿ ನೀರ ಮೀನುಗಳು ಕರಗುವಂತೆ ಮನುಜ ನೀ ಬಾರದ ಭಾಗ್ಯಕ್ಕೆ ಹೋರಬೇಡ ಸುವ್ವಿ 13 ಹಿಂದೆ ಪುಣ್ಯದ ಬೀಜವ ಕುಂದದೆ ಬಿತ್ತಿದರೆ ಇಂದು[ಬಾಹದೈಶ್ವರ್ಯ ಮುಂದಿಪ್ಪೋದು] ಸುವ್ವಿ ಇಂದು [ಬಾಹದೈಶ್ವರ್ಯ ಮುಂದಿಪ್ಪೋದು] ಬರಿದೆ ನೀ ನೊಂದು ವಿಧಿಯ ಬೈದರೆ ಎಂದೆಂದು ಕೆಡುವೆ ಸುವ್ವಿ 14 ದುರುಳ ಕೀಚಕ ಕೆಟ್ಟ ಪರಧನಕೆ ಮರುಳಾಗಿ ಕುರುರಾಯ ಸುವ್ವಿ ಪರಧನಕೆ ಮರುಳಾಗಿ ಕುರುರಾಯ ಕೆಟ್ಟನೆಂದು ಒರೆವ ಭಾರತವ ನಿರುತ ಕೇಳು ಸುವ್ವಿ 15 ವಾದಿಯೂ ಹರಿಯಾದ ಪ್ರತಿವಾದಿಯೂ ಹರಿಯಾದ ಭೇದವಿಲ್ಲವೆಂಬ ಮತದಲ್ಲಿ ಸುವ್ವಿ ಭೇದವಿಲ್ಲವೆಂಬ ಮತದಲ್ಲಿ ತಾನೊಬ್ಬನೇ ಕಾದಿ ಗೆದ್ದಾನೆಂತು ಬಿದ್ದಾನೆಂತು ಸುವ್ವಿ 16 ಎಲ್ಲ ಒಂದಾಂದರೆ ಶಾಲ್ಯಾನ್ನನುಂಬುವರು ಪುಲ್ಲನ್ಯಾಕೆ ಮೆದ್ದು ಬದುಕರು ಸುವ್ವಿ ಪುಲ್ಲನ್ಯಾಕೆ ಮೆದ್ದು ಬದುಕರು ಸ್ಥಳಚರರು ಜಲದೊಳು ಚರಿಸೆ ಅಳುವದ್ಯಾಕೆ ಸುವ್ವಿ 17 ವರ್ತಿಯ ಸಂಸಾರ ವ್ಯವಹಾರಕ್ಕೀಗ ಸ- ರ್ವತ್ರ ಜೀವ ಭೇದವುಂಟೆಂಬುವಗೆ ಸುವ್ವಿ ಸ- ರ್ವತ್ರ ಜೀವ ಭೇದವುಂಟೆಂಬುವಗೆ ಭೇದ ಸತ್ಯವಾದರೈಕ್ಯ ಎತ್ತಿಹೋದು ಸುವ್ವಿ 18 ಅತ್ತೆ ಸೊಸೆಯರಿದ್ದಾಗ ಮನೆಯೊಳು ಮತ್ಸರವು ಕತ್ತೆನಾಯಿಗಳಂತೇಕೆ ಬೆರಸರು ಸುವ್ವಿ ಕತ್ತೆನಾಯಿಗಳಂತೇಕೆ ಬೆರಸರು ಅದರಿಂದ ಪ್ರತ್ಯೇಕ ಜೀವರ ಇರವು ಸುವ್ವಿ 19 ಮಿಥ್ಯಾ ಭೇದಾದರೆ ಅದು ಶುಕ್ತಿರೂಪದಂತೆ ತ- ನ್ನರ್ಥವ ತಾ ಕಾಣಲರಿಯನು ಸುವ್ವಿ ತ- ನ್ನರ್ಥವ ತಾ ಕಾಣಲರಿಯನು ಅದರಿಂದ ನಾ- ವೆತ್ತಿದ ದೂಷಣೆಗೆ ಉತ್ತರವಿಲ್ಲ ಸುವ್ವಿ 20 ಬೊಮ್ಮ ಮಿಥ್ಯವಲ್ಲವೋ ನಿನ್ನ ಮಿಥ್ಯ ಶಶಶೃಂಗ ಸತ್ಯವಲ್ಲ ಸುವ್ವಿ ಮಿಥ್ಯಶ ಶಶೃಂಗ ಸತ್ಯವಲ್ಲ ಶೃಂಗ್ಯೆರಡು ಜ- ಗತ್ತಿನೊಳು ಕೂಡವು ಕುಯುಕ್ತಿಯ ನಿನಗಾವ ಕಲಿಸಿದ ಸುವ್ವಿ 21 ಸತ್ತ ಪೆಣನುಂಟು ಸಾಯದ ವಸ್ತುಂಟು ಸತ್ತು ಸಾಯದ ಮತ್ರ್ಯರಿಲ್ಲ ಸುವ್ವಿ ಸತ್ತು ಸಾಯದ ಮತ್ರ್ಯರಿಲ್ಲ ಮತ್ರ್ಯನಾಗಿ ನಿನ್ನ [ಮಿಥ್ಯಾವಾದ]ವೆಂತು ನಿತ್ಯವಹುದು ಸುವ್ವಿ 22 ಸತ್ಯವೆಂದರುಂಟು ಮಿಥ್ಯವೆಂದರಿಲ್ಲ ಎಂ- ಬರ್ಥ ತಾ ಕೂಡಲರಿಯದು ಸುವ್ವಿ ಎಂ- ಬರ್ಥ ತಾ ಕೂಡಲರಿಯದು ಅದರಿಂದ ಅರ್ಥವಪೇಳೆ ಮಿಥ್ಯಕೆ ನಾಮಾಂತರ ಸುವ್ವಿ23 ಭರ್ತೃಯಿಲ್ಲದವಳ ಮುತ್ತೈದೆಯೆಂಬಂತೆ ನಿನ್ನ ಮಿಥ್ಯಜಗಕಿಟ್ಟ ಸತ್ಯನಾಮ ಸುವ್ವಿ ಮಿಥ್ಯಜಗಕಿಟ್ಟ ಸತ್ಯನಾಮ ನಿನ್ನ ಯುಕ್ತಿಶೂನ್ಯನೆಂದು ಸುತ್ತ ನಗುತಿಪ್ಪುದು ಸುವ್ವಿ 24 ಇಲ್ಲ ಜಗವೆಂಬುದನು ಈಗ ಕಂಡದ ಕಾರಣ ಇಲ್ಲವಾತನ ವಾದಕ್ಕೆ ಪೊಗಳಲರಿಯದು ಸುವ್ವಿ ಇಲ್ಲವಾತನ ವಾದಕ್ಕೆ ಪೊಗಳಲರಿಯದ ಹೊಲೆಯನ [ಎಲ್ಲರರಿಯದಿದ್ದರೆ] ಹೊಲೆಜಾತಿ ಹೋಕ ಸುವ್ವಿ 25 ಗಿರಿಯ ಪಿರಿಯ ಗುಹೆಯೊಳು ದಳ್ಳುರಿಯ ಬೇಗೆಗೆ ಬೆಂದ ಕರಿಯನರಿಯದ ಕಾರಣ ಮರನ ಮುರಿವುದೆ ಸುವ್ವಿ ಕರಿಯನರಿಯದ ಕಾರಣ ಮರನ ಮುರಿವುದೆ ವಾದಿಯೀ ಪರಿಯಲಿ ನಿನ್ನ ಮಿಥ್ಯದಿ ಕಾರ್ಯವಾಗದು ಸುವ್ವಿ 26 ಹಳೆಯ ಮಲವೆಲ್ಲವು ಮಲವೆ ಅಲ್ಲದೆ ಮತ್ತೆ ಜಲಜಾಕ್ಷಿಯರ ಸಂಗಕ್ಕೆ ಪರಿಮಳವೀವುದೆ ಸುವ್ವಿ ಜಲಜಾಕ್ಷಿ ್ಷಯರ ಸಂಗಕ್ಕೆ ಪರಿಮಳವೀವುದೆ ಶೂಲದಿ ಸತ್ತ[ಪೆಣನು] ಸುಳಿವುತಿಪ್ಪುದೆ ಸುವ್ವಿ 27 ನಾಸ್ತಿಯೆಂಬ ವಸ್ತುವ ನಾಸ್ತಿಯೆಂದರಿಯದೆ ಆಸ್ತಿಯೆಂದು ಕಂಡರೆ ಅತಿಮೂರ್ಖ ಸುವ್ವಿ ಆಸ್ತಿಯೆಂದು ಕಂಡರೆ ಅತಿಮೂರ್ಖ ಅಕಟಕಟ ಜ- ಗತ್ತಿನ ಮಹಂತರ ಉನ್ಮತ್ತರ ಮಾಡಿದ ಸುವ್ವಿ 28 ಏಕಾಕಿ ನ ರಮತೆಯೆಂಬ ವೇದವಾಕ್ಯ ವಿ- ವೇಕಿಗಳೆಲ್ಲ ಬಲ್ಲರು ಸುವ್ವಿ ವಿ- ವೇಕಿಗಳೆಲ್ಲ ಬಲ್ಲರು ಅದರಿಂದ ನಿನ್ನ ಮುಕ್ತಿ ಏಕಾಕಿಯಾದರೆ ಶೋಕಕ್ಕೊಳಗಾದೆ ಸುವ್ವಿ 29 ಲೋಕದೊಳು ಹಾಳೂರ ಹಂದಿಯ ಬೇಸರದೆ ನೋಡೊ ನಿ- ನ್ನ ಕೈವಲ್ಯದ ಘಸಣೆ ಸಾಕು ಸಾಕು ಸುವ್ವಿ ನಿ- ನ್ನ ಕೈವಲ್ಯದ ಘಸಣೆ ಸಾಕು ಸಾಕು ನಮ್ಮ ಶ್ರೀ ವೈಕುಂಠದ ವಾಸನೆ ಲೇಸು ಸುವ್ವಿ 30 ಅಲ್ಲಿ ಸಹಬ್ರಹ್ಮಣಾ ಸರ್ವಕ ಮಂಗಳೆಂಬಾರಂತೆ ಅಲ್ಲಿ ಸರ್ವೇನಂದತಿ ಎಂಬ ಶ್ರುತಿಯು ಸುವ್ವಿ ಅಲ್ಲಿ ಸರ್ವೇನಂದತಿ ಎಂಬ ಶ್ರುತಿಯು ನೀ ಕೇಳು ಎಲ್ಲ ಮತ್ರ್ಯರಲ್ಲಿ ಹರಿಯನುವ್ರತರಂತೆ ಸುವ್ವಿ 31 ಅಲ್ಲಿ ನರ ನಾರಿಯರು ಚಿನುಮಯ ಚೆಲುವರಂತೆ ಅಲ್ಲಿ ಚತುರ್ಬಾಹುಗಳಾಗಿಪ್ಪರಂತೆ ಸುವ್ವಿ ಅಲ್ಲಿ ಚತುರ್ಬಾಹುಗಳಾಗಿಪ್ಪರಂತೆ ಅವರ ಶ್ರೀ- ವಲ್ಲಭ ಲಾಲಿಸಿ ಪಾಲಿಸುವನಚಿಂತೆ ಸುವ್ವಿ 32 ನಗರ ಕೃಷ್ಣಗೆ ಘನೋದಕದ ಮೇಲೆ ಮಿಂಚುತಿಪ್ಪುದು ಸುವ್ವಿ ಘನೋದಕದ ಮೇಲೆ ಮಿಂಚುತಿಪ್ಪುದು ಅಲ್ಲಿ ಮನೆ ಮನೆಯಲಿ ಮುಕ್ತರ ಸಂದಣಿ ಸುವ್ವಿ34 ಇಂತು ಹಯವದನ ನಿಶ್ಚಿಂತ ಜಗತ್ಕಾಂತ ಸಂತರನು ಸದಾ ಸಲಹುವ ಸುವ್ವಿ ಸಂತರನು ಸದಾ ಸಲಹುವ ಮಾರಾಂತರ ಕೃ- ತಾಂತನ ಬಳಿಗೆ ಕಳುಹುವ ಸುವ್ವಿ 35
--------------
ವಾದಿರಾಜ
ಸುಳಾದಿ ಧ್ರುವತಾಳ ಶ್ರೀನಿವಾಸನೆ ನೀನು ಬ್ಯಾಗನೆ ಬಂದು ಸಾನುರಾಗದಿ ಸಂಸಾರ ಬಿಡಿಸೋ ಭಾನುಕೋಟಿ ಪ್ರಕಾಶಭಾಗ್ಯನಿಧಿಯೆನ್ನ ಮಾನವ ಕಾಯ್ವುದು ಮಂಗಳಾಂಗನೆ ಏನೇನು ಕಾರ್ಯಗಳು ನಿನ್ನಾಧೀನವಾಗಿರಲು ನಾನುನನ್ನದು ಎಂದು ಮಮತೆಯನೆ ಕೊಟ್ಟು ಅನ್ಯಾಯದಿಂದ ಎನ್ನzಣಿಸುವುದು ದಾನವಾಂತಕರಂಗ ಮುದ್ದುಮೋಹನವಿಠಲ ನೀನೆಗತಿಯೆಂದವಗೆ ನಿರ್ಭಯವೊ ಹರಿಯೆ 1 ಮಠ್ಯತಾಳ ಎನ್ನಪರಾಧಗಳು ಅನಂತವಿರುವದನ್ನು ನಿನ್ನಸ್ಮರಣೆ ಒಂದೆ ಸಾಕೊ ಹರಿಯೆ ಬನ್ನ ಬಡಿಸುವದ್ಯಾಕೊ ಮನ್ಮನದಲಿಪೊಳೆದು ಚೆನ್ನಾಗಿ ಸಲಹೋಘನ್ನಮಹಿಮಾ ಮುದ್ದುಮೋಹನವಿಠಲನೇ 2 ತ್ರಿವಿಡಿತಾಳ ಬಿಂಬನೆನೆಸಿಕೊಂಡು ಪ್ರತಿಬಿಂಬಗಳೊಳಗೆಕಾರ್ಯ ಅಂಭ್ರಣಿಸಹಿತವಾಗಿ ನೀಮಾಡಿ ಮಾಡಿ ಸೂವಿ ಅಂಬುಜನಾಭಾನೆ ಎನ್ನಾಡಂಭಕ ಭಕುತಿ ಬಿಡಿಸಿ ಸಂಭ್ರಮದಿಂದ ಕಾಯೊ ಕರುಣಾನಿಧೆ ಶಂಬರಾರಿಯಜನಕ ಮುದ್ದುಮೋಹನವಿಠಲ ಕಂಬದಿಂದಲಿ ಬಂದು ಭಕುತನ್ನಸಲಹಿದ ದೇವ 3 ಅಟ್ಟತಾಳ ಏನೇನುದಾನ ಅನಂತ ಮಾಡಲೇನು ಕಾನನದಲಿ ಪೋಗಿ ತಿರುಗಿತಿರುಗಿದಂತೆ ಜ್ಞಾನದಿಂದಲಿ ತಾರತಮ್ಯಾನುಸಾರ ನಿನ್ನ ಧ್ಯಾನವನ್ನ ಒಂದು ಕ್ಷಣವಾದರೂತೋರಿಸೊ ವಾನರ ವಂದ್ಯ ಮುದ್ದುಮೋಹನವಿಠಲ ನಾನಾವಿಧದಿಂದ ನಂಬಿದೆನೊ ಹರಿಯೇ4 ಆದಿತಾಳ ನೀನೆ ಅನಾಥಬಂಧು ನೀನೆ ಅದ್ಭುತಮಹಿಮ ನೀನೆ ಅಸುರಾಂತಕ ನೀನೆ ಅಮರಾದಿವಂದ್ಯ ನೀನೆ ಭವರೋಗ ವೈದ್ಯ ನೀನೆ ಭಕ್ತವತ್ಸಲ ನೀನೆ ಪರಿಪೂರ್ಣ ಸುಖ ನೀನೆ ಪರಂಜ್ಯೋತಿ ನೀನೆ ಪರಬ್ರಹ್ಮ ನೀನೆ ಪುರುಷೋತ್ತಮ ನೀನೆ ಪುಣ್ಯೈಶ್ವರ್ಯ ನೀನೆ ನಿರ್ಮಲ ಜ್ಞಾನ ನೀನೆ ಶಶಿ ಕೋಟಿಲಾವಣ್ಯ ನೀನೆ ಮುದ್ದುಮೋಹನ ವಿಠಲ ನೀನೆ ವೇಗದಿ ಬಂದು ನೀನೆ ರಕ್ಷಿಸು ಎನ್ನನು 5 ಜೊತೆ ಸ್ವಾಮಿ ಪುಷ್ಕರಣಿವಾಸ ಕಾಮಿತಫಲದಾನೆ ಶ್ರೀಮನೋಹರ ನಮ್ಮ ಮುದ್ದುಮೋಹನ ವಿಠಲ
--------------
ಮುದ್ದುಮೋಹನವಿಠಲದಾಸರು
ಸೆರೆಯೊಳಗೆ ಹರಿಸೆರೆಯೆ ಮುಖ್ಯಾ ಭಾವದೊಳಗೆ ಗುರುಭಾವನÉಯೆ ಮುಖ್ಯಾ ಪ ----ದೊಳಗೆ ಪ್ರಥಮ -----ರಾರÉೀ ಮುಖ್ಯಾ ಸೇವನೆಯೊಳಗೆ ಪುಣ್ಯ ಸೇವನೆ ಮುಖ್ಯಾ ದೇವರೊಳಗೆ ವಿಷ್ಣು ದೇವಾರೆ ಮುಖ್ಯಾವು ಯಾವ ಶಾಸ್ತ್ರಗಳಿಗೂ ವೇದವೇ ಮುಖ್ಯಾ 1 ವನದೊಳು ಫಲವುಳ್ಳಾ -----ಮುಖ್ಯಾ ದೀನದಾನವರೊಳಗೆ -----ದೀನನೆಂಬುವದೇ ಮುಖ್ಯ ಜನರೊಳು ಸಾಧು ಸಜ್ಜನರಾದವರೇ ಮುಖ್ಯಾ ಮನೆಗೆ ಹಿರಿಯನಾದ ಯಜಮಾನನೇ ಮುಖ್ಯಾ 2 ಮಾಸಗಳೊಳು ಚೈತ್ರಮಾಸವೆ ಮುಖ್ಯವು ವಾಸನೆಯೊಳು ಲಕ್ಷ್ಮೀವಾಸನೆ ಮುಖ್ಯ ಭೂಸುರರೊಳಗೆಲ್ಲ ಪೂರ್ಣ ಪಂಡಿತರೆ ಮುಖ್ಯ ವಾಸು ದೇವರಿಗೆ ----ದಾಸನೆ ಮುಖ್ಯ 3 ಸ್ಥಾನದೊಳಗೆ ಗಂಗಾಸ್ಥಾನವೇ ಮುಖ್ಯವು ಧೇನುಗಳೊಳು ಕಾಮಧೇನುವೇ ಮುಖ್ಯ ಜ್ಞಾನದಲ್ಲಿ ಹರಿಸರ್ವೋತ್ತಮ ಜ್ಞಾನವೆ ಮುಖ್ಯ ಗಾನದೊಳಗೆ ಸಾಮಗಾನವೇ ಮುಖ್ಯ 4 ವೃಕ್ಷಗಳೊಳು ತುಲಸೀ ವೃಕ್ಷವೇ ಮುಖ್ಯವು ಭಿಕ್ಷಗಳೊಳು ಯತಿ ಭಿಕ್ಷವೇ ಮುಖ್ಯವು ಪಕ್ಷಿಗಳೊಳು ಗರುಡ ¥ಕ್ಷಿಯೇ ಮುಖ್ಯ ಲಕ್ಷಾಧಿಕಾರರಿಗೆ ಲಕ್ಷ್ಮೀಯೆ ಮುಖ್ಯ 5 ಪರ್ವತಗಳೊಳು ಮೇರು ಪರ್ವತವೆ ಮುಖ್ಯ ಉರೆಗೆ ಮಳೆ ಬೆಳೆ ಉರುವೆ (ಬರುವೆ?) ಮುಖ್ಯ ಮರ್ಯಾದೆ ನ್ಯಾಯಗಳಿಗೆ ಹಿರಿಯರಾದವರೇ ಮುಖ್ಯ ಸರ್ವಾಧಿಕಾರರಿಗೆ ಸರ್ವಸಮತವೆ ಮುಖ್ಯ 6 ಕ್ಷೇತ್ರಗಳೊಳು ಕುರುಕ್ಷೇತ್ರವೆ ಮುಖ್ಯ ಯಾತ್ರಿಗಳೊಳು ಗಂಗಾಯಾತ್ರಿಯೆ ಮುಖ್ಯ ಸೂತ್ರಗಳೊಳು---------ಮುಖ್ಯವು ಸ್ತೋತ್ರಗಳೊಳು ಹರಿಸ್ತೋತ್ರವೇ ಮುಖ್ಯ 7 ಗ್ರಾಮಗಳೊಳು ಸಾಲಿಗ್ರಾಮವೇ ಮುಖ್ಯ ಭೂಮಿಗಳೊಳು ಪುಣ್ಯ ಭೂಮಿಯೇ ಮುಖ್ಯ ಆರು-------ಳಿಗೆಲ್ಲ ಆರೋಗ್ಯವೆ ಮುಖ್ಯ ಕಾಮುಕ ಸ್ತ್ರೀಯರಿಗೆಲ್ಲ ಕಾಮಪುರುಷನೇ ಮುಖ್ಯ 8 ಸನ್ಮಾರ್ಗಗಳೊಳಗೆ ಸನ್ಯಾಸಿ ಮಾರ್ಗವೆ ಮುಖ್ಯ ಅನಿಮೇಷಾ ಜಾಗರದೊಳಗೆ ಅನಿಮೇಷರೆ ಮುಖ್ಯ ಧನ್ಯ `ಹೆನ್ನೆ ವಿಠ್ಠಲನ ' ದಯವು ಇದ್ದರೆ ಮುಖ್ಯ 9
--------------
ಹೆನ್ನೆರಂಗದಾಸರು
ಸೇರಿ ಬದುಕುವೆ ನಮ್ಮ ಸ್ವಾಮಿಯಂಘ್ರಿಯನುಭೂರಿ ದೋಷಗಳನ್ನು ಬಯಲ ಮಾಳ್ಪುದನು ಪನಿರ್ಗುಣದ ರೂಪವದು ನಿಲುಕದೆಂದಿಗೂ ಮನಕೆದುರ್ಗುಣದ ಪುಂಜಕ್ಕೆ ದೊರಕುವುದೆ ಹುಡುಕೆಅರ್ಗಳದ ವೃತ್ತಿಗಳಲಾಳಿ ಮುಳುಗಿರಲಿದಕೆಮುಗ್ಗಿ ಮೋಹಿಪ ನಾನು ಮಥಿಸಲಿನ್ನೇಕೆ 1ಸಗುಣಮೂರ್ತಿಯ ನೋಡೆ ಸ್ಥಿರದಿ ಬುದ್ಧಿಯು ನಿಲದುಅಗಣಿತದ ವಾಸನೆಯೊಳತಿಬದ್ಧವಡೆದುಬಿಗಿ ಭದ್ರವಾಗಿರಲು ಬಹು ಕರ್ಮವೆಳೆದೆಳೆದುಬಗೆಯದನು ನೆರೆ ನೋಡಿ ಬಿಟ್ಟದನು ಜರೆದು 2ಧ್ಯಾನಿಪರು ಧ್ಯಾನಿಸಲಿ ಧೈರ್ಯದಲಿ ಬ್ರಹ್ಮವನುಜ್ಞಾನಿಗಳು ತಿಳಿಯಲಾ ಗೂಢ ತತ್ವವನುಮಾನರಹಿತರು ಹರಿಗೆ ಮಾಡಲಾ ಕರ್ಮವನುನಾನೊಂದನೊಡಬಡೆನು ನೋಡಿ ಕಠಿಣವನು 3ವೇದಶಾಸ್ತ್ರಗಳೋದಿ ವಾದಿಸಲಿ ವಾದಿಗಳುಸಾಧಿಸಲಿ ಸ್ವರ್ಗವನು ಸಕಲ ಶ್ರೌತಿಗಳುಬೋಧಿಸಲಿ ಪರರಿಂಗೆ ಬಹುತತ್ವಭೇದಿಗಳುಮಾಧವನಿಗೆರಗುವದೆ ಮತವೆನಗೆ ಕೇಳು 4ಪಾದಪದ್ಮವನಂಬಿ ಪಡೆದರಮಿತರು ಗತಿಯ ಓದಿದವರೈದಿದರು ವಾಸನೆಯ ಬಗೆಯಕಾದು ರಕ್ಷಿಪುದಂಘ್ರಿ ಕೊಡುವುದಮಿತದ ಸಿರಿಯವಾದಿಸದೆ ನಂಬಿದೆನು ವಿಧಿಜನಕನಡಿಯ 5ಇದು ತಾನೆ ಲೋಕಗಳನೆಲ್ಲವಾಳುವ ದೊರೆಯುಇದು ತಾನೆ ಯೋಗಿಗಳಿಗಿದಿರಾದ ಬಗೆಯುಇದು ವಿಷಯದೊಳಗಿರುವರೆಬ್ಬಿಸುತ್ತಿಹ ಸುಧೆಯುಇದನೆ ನಾನಂಬಿದೆನು ಯಾಕೆ ಕರೆಕರೆಯು 6ತರುಬಿ ನಿಂದಿದೆ ಲೋಕ ತತ್ಪಾದಪದ್ಮವನುಹೊರೆಯುತಿಹುದಾ ಜನವ ಹೊಣೆಯಾಗಿ ತಾನು ತಿರುಪತೀಶ್ವರ ನನಗೆ ತೋರ್ದನೀ ಮತಿಯನ್ನುವರದೇಶ ನನಗೊಲಿದವೊಡೆಯ ವೆಂಕಟನು 7ಓಂ ತೀರ್ಥಪಾದಾಯ ನಮಃ
--------------
ತಿಮ್ಮಪ್ಪದಾಸರು
ಸ್ವಾಮಿ ಯಾತಕೆನ್ನೊಳುಪೇಕ್ಷೆ ಮಾಡುವಿ ದೀನನಾಥ ಸುಮ್ಮನೆ ನಿಂತು ನೋಡುವಿ ಪ. ನಡೆವನ ಕಣ್ಣ ಕಟ್ಟಿ ಕೆಡಹುವುದುಚಿತವೆ ಒಡೆಯ ನಿನ್ನಡಿಗಳ ಪೊಗಳುವ ಪಾಡಿ ನುಡಿವ ಕಾರ್ಯಕೆ ಬಾಡಿ ಬಳಲುತ ನಾ ನಿತ್ಯ ನೋಡುತ ಬಡವನ ಬಿಡದಿರು ಕಡಲಶಯನ ನಿಜ ಮಡದಿ ಸಹಿತನಾಗಿ ಶ್ರೀಶನೆ ಕೃಪೆ ಕಂಜಕರ ಶ್ರೀನಿವಾಸನೆ1 ಭಾವಜ ಪಿತ ನಿನ್ನ ಸೇವೆ ಮಾಳ್ಪರಿಗೆಂದು ನೋವ ನೀಡದೆ ಕಾವ ಬಿರುದನು ಭವ ಸಾರÀ ನೀ ಮರೆವುದು ನೀತಿಯೆ ಎನ್ನ ನೀ ವಿಧ ಮಾಳ್ಪುದು ಖ್ಯಾತಿಯೆ ಪಾವನ ಚರಿತ ಪುರಾಣ ಪುರುಷ ಮಹ ದೇವ ನೀ ಕರಪಿಡಿದೆನ್ನನು ಕರು- ಣಾವಲಂಬನವಿತ್ತು ಪೊರೆವುದು 2 ದುರುಳ ಭಾವನೆಯಿಂದ ಸರಿದು ಹೋಗುವ ಪಂಚ ಕರಣಕೆ ನೀನರಸನಲ್ಲವೆ ಭಕ್ತಾ- ಭರಣಕೆ ನಿನ್ನೊಳಿರಿಸು ಮಾರ್ಗವನಂತ:- ಕರಣಕೆ ತರಿದು ಪಾಪಗಳನು- ದ್ಧರಿಸೆನ್ನ ವೆಂಕಟಗಿರಿವರ ದೀನಾರ್ತಿ ಚಕ್ರಧರ ಸಕಲಾನಂದ ಕಾರಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ವಾಮೀ ರಕ್ಷಿಸು ಸುಬ್ರಹ್ಮಣ್ಯ ಕಾಮಿತಪ್ರದ ಸುರಸ್ತೋಮಾಗ್ರಗಣ್ಯಪ. ಜನ್ಮ ಜನ್ಮಾಂತರದ ಕರ್ಮಾನುಸಾರದಿಂ ದುರ್ಮತಿಗೆಳಸಿಯಹಮ್ಮಮತೆಯಲಿ ದುರಿತ ದೂರವಿರಿಸು ನಿರ್ಮಲಜ್ಞಾನೋಪದೇಶವನಿತ್ತೆನ್ನ1 ಪ್ರತ್ಯಗಾತ್ಮನ ನಾಮ ಕೀರ್ತನೆ ಗೈಯುತ್ತ ಭಕ್ತಿಸೌಭಾಗ್ಯವಿರಕ್ತಿಯ ನೀಡು ಭೃತ್ಯವತ್ಸಲ ಭವಭಯಹರ ಗಿರಿಜಾ- ಪುತ್ರನೆ ಪರಮಪವಿತ್ರ ಸುಚರಿತ್ರನೆ2 ಸುರಲೋಕವನು ಕಾವ ಧುರಧೀರ ಪ್ರಭು ನಿನಗೀ ನರಲೋಕವನು ಕಾವದುರು ಕಷ್ಟವೇನು ಪರಿಶುದ್ಧ ಸ್ಥಾನಿಕಧರಣೀಸುರಕುಲ- ಗುರುವೆಂದು ಚರಣಕ್ಕೆ ಶರಣಾಗತನಾದೆ3 ಸಾಕುವಾತನು ನೀನೆ ಸಲಹುವಾತನು ನೀನೆ ಬೇಕು ಬೇಡೆಂಬುವರ ನಾ ಕಾಣೆ ದೊರೆಯೆ ಲೋಕೇಶ ಸುಕುಮಾರ ಶೋಕಮೋಹವಿದೂರ ನೀಕರಿಸದೆಯೆನ್ನ ಸ್ವೀಕಾರ ಮಾಡಯ್ಯ4 ಪೃಥ್ವಿಯೊಳ್ಪಾವಂಜೆ ಕ್ಷೇತ್ರಾಧಿವಾಸನೆ ಸುತ್ರಾಮಾದಿ ಸುರಮೊತ್ತ ಪೂಜಿತನೆ ಕರ್ತ ಲಕ್ಷ್ಮೀನಾರಾಯಣನ ಸಾರೂಪ್ಯನೇ ದೈತ್ಯದಲ್ಲಣ ವಲ್ಲೀದೇವಿ ಮನೋಹರನೆ5
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ವೀಕರಿಸೈ ಕರುಣಾಕರ ಶ್ರೀವರ ಲೋಕವಂದಿತ ಪ್ರಭುವೆ ಪ ಮಾಕಮಲಾಸನ ನಾಕಪಾಲವಂದ್ಯ ಮಾತುಳಾಂತಕ ಮಧುಸೂದನ ಶ್ರೀಹರಿ ಅ.ಪ ಮಾವು ಮಾದಳ ದ್ರಾಕ್ಷ ಬಾಳೆ ಕಿತ್ತಳೆ ಮೊದಲಾದ ಫಲಗಳೆಲ್ಲ ಮಾಧವ ನೀನಿದನಾರೋಗಣೆ ಮಾಡು ಶ್ರೀ ರಮಣಿಯ ಪ್ರಿಯ ಶ್ರೀನಿವಾಸನೆ ಬೇಗ 1 ನಾನಾ ವಿಧದ ಫಲ ಹಾಲು ಸಕ್ಕರೆ ಬೆಣ್ಣೆ ನಾರಾಯಣ ನಿನಗೆ ಬಾಲೆ ಲಕುಮಿ ಪರಮಾದರದಿಂದಲಿ ಸೇವೆಗೆ ಪರಮಾನ್ನವನರ್ಪಿಸುವಳು2 ತನುವೆಂಬೊ ತಟ್ಟೆಯೊಳಿರಿಸಿ ಫಲವ ನಿ- ರ್ಮಲಮನವೆಂಬ ವಸ್ತ್ರವನ್ಹೊದಿಸಿ ಸನ್ಮತವೆಂಬ ಸಾರಣೆಮಾಡಿ ನಮ್ಮ ಗುರುಕರುಣದ ರಂಗವಲಿಯನ್ಹಾಕುವೆ 3 ನವವಿಧ ಭಕುತಿಯ ನಳನಳಿಸುವ ವೀಳ್ಯ ಚಲುವ ಶ್ರೀ ಹರಿ ನಿನಗೆ ಸವಿನಯ ನುಡಿಗಳ ಮಂತ್ರ ಪುಷ್ಪಗಳು ಸನಕಾದಿವಂದ್ಯ ಸರ್ವೇಶ ಶ್ರೀ ಕೃಷ್ಣ 4 ಕ್ಷೀರ ಸಾಗರವಾಸಿ ಶ್ರೀ ಭೂರಮಣನೆ ಮಾರಜನಕ ಹರಿಯೆ ಕಾರುಣ್ಯಸಾಗರ ಕಮಲನಾಭ ವಿಠ್ಠಲ ಪಾರುಗಾಣಿಸೊ ಭವಸಾಗರದಿಂದಲಿ5
--------------
ನಿಡಗುರುಕಿ ಜೀವೂಬಾಯಿ
ಸ್ವೀಕರಿಸೈ ವೀಳ್ಯಮಿದನು ಶ್ರೀಕರಾಬ್ಜಪಾಣಿಯಿಂ ಪ. ಲೋಕನಾಥ ಪಾಲಿಸೆನ್ನ ಶ್ರೀಕಟಾಕ್ಷದಿಂದಲೆ ಅ.ಪ. ಪಚ್ಚಕರ್ಪೂರಯಾಲದಿಂದ ಹೆಚ್ಚು ವಾಸನೆಯನುತಳೆದ ಅಚ್ಯುತನೆ ವೀಳ್ಯಮಿದನು ಮೆಚ್ಚಿ ನೀಡುತಿರುವೆನು 1 ತಟ್ಟೆಯನ್ನು ಪಿಡಿದು ಎನ್ನ ರಟ್ಟೆಗಳಿದು ನೊಂದವೈ ಸಿಟ್ಟುಮಾಡದೀಗ ದಯದಿ ದಿಟ್ಟಿಸೈ ಮದೀಶನೇ 2 ಲಲಿತಗಾತ್ರ ಎನ್ನೊಳಿಂತು ಚಲಮಿದೊಳ್ಳಿತೇನೆಲೈ ಜಲಜನೇತ್ರ ಶೇಷಶೈಲನಿಲಯ ನಿನ್ನ ನಮಿಪೆನೈ 3
--------------
ನಂಜನಗೂಡು ತಿರುಮಲಾಂಬಾ
ಹರನಮಃ ಪಾರ್ವತೀ ಪತೆಯೇ ನಮೋ ಹರನಮಃ ಪಾರ್ವತೀ ಪತೆಯೇ ಪ ಹರಹರ ಶಂಕರ ಶಂಭೋ ಮಹಾದೇವ ಹರನಮಃ ಪಾರ್ವತೀ ಪತೆಯೇ ಅ.ಪ ಹರಿಯ ಪಾದೋದಕ ಶಿರದಲಿ ಧರಿಸಿದ ಪರಮ ವೈಷ್ಣವ ನಿನ್ನ ಚರಣಗಳಿಗೆ ನಮೋ 1 ಅತ್ರಿಯ ಪತ್ನಿಯ ಉದರದಿ ಜನಿಸಿದ ದತ್ತನಾಮಕ ಹರಿ ಭ್ರಾತ ದೂರ್ವಾಸನೆ 2 ಹರಿಯು ಪ್ರಸನ್ನನಾಗುವ ತೆರದಲಿ ಮನ ಕರುಣಿಸೋ ಉರಗಭೂಷಣ ಗಿರಿಜಾಪತೆ 3
--------------
ವಿದ್ಯಾಪ್ರಸನ್ನತೀರ್ಥರು
ಹರಿಗೆ ನಾ ಮೊರೆಹೊಕ್ಕೆನೊ ದಯಾಳು ಶ್ರೀ- ಹರಿಗೆ ನಾ ಮೊರೆಹೊಕ್ಕೆನೊ ಹರಿಗೆ ನಾ ಮೊರೆಹೊಕ್ಕೆನೊ ಪೊರೆಯ ಬೇಕೆಂದಿನ್ನು ಜರಿದು ನೋಡುವರೇನೊ ಪರಮ ದಯಾಳು ಪ ವೆಂಕಟರಮಣನೆ ಕಿಂಕರರಿಗೆ ಬಂದ ಸಂಕಟ್ಹರಣ ಮಾಡಲಂಕಾರ ಮೂರುತಿ 1 ಸದ್ಯೋಜಾತನು ತಪವಿದ್ದ ಸ್ಥಳದಿ ಬಂದು ಅನಿರುದ್ಧ ಮೂರುತಿಯೆನೆ 2 ಶೇಷಶಯನ ನೀ ಆದಿಶÉೈಲವಾಸನೆ ದಾಸರಿಗೊಲಿವಂಥ ಭೀಮೇಶಕೃಷ್ಣನೆ 3
--------------
ಹರಪನಹಳ್ಳಿಭೀಮವ್ವ
ಹರಿನಾಮದರಗಿಳಿಯು ದೊರಕಿತಿಂದು ವರ ಹಿರಿಯರಾ ಕರುಣದಿಂದೆನಗೆ ಪ. ಸಾರ ಹಾದಿಯಲಿ ವರದ ಮಾಧವನೆಂಬ ಸಾಧಿಸಿ ಕಂಸನ ಗೆದ್ದ ಗೋವಿಂದ 1 ದುಷ್ಟರನು ಶಿಕ್ಷಿಪ ವಿಷ್ಣುವಿನ ನಾಮವು ಕಷ್ಟವನು ಪರಿಹರಿಪ ಮಧುಸೂಧನ ಇಷ್ಟ ಮೂರುತಿ ತ್ರಿವಿಕ್ರಮನ ನಾಮವು ಉತ್ಕøಷ್ಟ ವಾಮನನೆಂಬ ಕಠ್ಠಾಣಿ ಮುತ್ತಿನ 2 ಭವ ಚಂದಿರಾನನನಾದ ದಾಮೋದರನಾ 3 ವಾಸುದೇವ ಎಂಬ ಸಂಕಟವ ಪರಿಹರಿಪ ಪ್ರದ್ಯುಮ್ನನೆಂಬುವನ ಎನ್ನ ಸಂಕುಚಿತ ಮಂಕನಳಿವ ಅನಿರುದ್ಧನ 4 ಪರಮ ಪದವಿಯನಿತ್ತು ಪೊರೆವ ಪುರುಷೋತ್ತಮನ ಪರರ ಬೇಡಿ ಸದ್ವಸ್ತು ಅಧೋಕ್ಷಜನಾ ವರ ಜ್ಞಾನಿಗಳ ಮಾನಸ ನಾರಸಿಂಹನ ಪರಮಪುರುಷನೆಂಬ ಅಚ್ಚುತನ್ನಾ 5 ಮುದ್ದು ಮುಖದೊಳು ತಿಲಕ ತಿದ್ದಿದ ಜನಾರ್ಧನನ ಹದ್ದುವಾಹನನಾದ ಉಪೇಂದ್ರನ ಮುದ್ದು ರಮೆಯರಸ ಶ್ರೀ ಶ್ರೀನಿವಾಸನೆಂಬುವನ 6
--------------
ಸರಸ್ವತಿ ಬಾಯಿ
ಹರಿಮಣಿವರ್ಣ ವಿಠ್ಠಲಾ ನಿನ್ನವನೊ ಪರಮ ಪ್ರೀತಿಯಿಂದ ಪಾಲಿಸ ಬಾರಯ್ಯ ಪ ಪಂಕಜ ದಳ ಕೂಡಿತು ನೋಡು ಮುದರಿಕೊಂಡವು ಕುಮುದವೆಂಬೊ ಕಣ್ಣು ಪದುಮನಾಭನೆ ನಿನ್ನ ನಖವೆಂಬೊ ರವಿ ವದನವೆಂಬೊ ಚಂದ್ರÀಮಾ ಉದಿಸಲಿ 1 ಬಿರಿದಾಗಿ ಕಿವಿ ಎಂಬೊ ಮನೆ ಇಪ್ಪವು ಸ್ಪರಿಶ ಮಾಡುವೆನೆಂದು ಕಲಿ ಸುಳಿದಾ ಕರ್ಣ ಮಂದಿರವೆ ತುಂಬಲಿ ಕಲಿ ಅಡಗಿ ಪೋಪಾ 2 ನಾಸಾ ದುರ್ವಾಸನೆಗೆ ಇಚ್ಛೆ ಮಾಡಿತು ಹೇಸಿಗೆ ರಸಗಳಿಗೆ ಜಿವ್ವೆ ಪೋಗುದದು ಪೂಸಿದಾ ಗಂಧ ದಿವ್ಯವಾಸನೆ ಬರಲಿ ಲೇಸು ನಿನ್ನ ನಾಮರಸ ಸುರಿಸುವಂತೆ ಮಾಡು3 ನೀನಲ್ಲದೆ ತುಲಾ ಕಾವೇರಿಯೊಳಗೆ ಸ್ನಾನ ಜಪ ತಪಗಳು ಮಾಡುವದೇಕೆ ಸಿರಿ ಪ್ರಾಣರಿಗೆ ಪ್ರಾಣನಾದ ಬಲು ಮೋಹನಾ 4 ಈ ಕ್ರೋಧನಾಬ್ಧ್ದ ಆಶ್ವಿಜ ನಿನ್ನ ಪಕ್ಷದ ಏಕಾದಶಿ ರಾತ್ರಿಯೊಳು ಬಾ ಹೃದಯದೊಳಗೆ ಯಾಕೆ ಕೂಡದಯ್ಯ ಜೀಯಾ ಪೇಳೊ ಎನ್ನೊಡಿಯ ಲೋಕ ಚರಿಸುವದೇನು ನಿನ್ನ ಪೋಗಾಡಿ 5 ಧವಳಗಂಗಿಯೊಳಂದು ಬಿದ್ದು ಬಂದಾಗ ಕವಿ ವಾದಿರಾಜಗೊಲಿದು ಬರಲಿಲ್ಲವೇ ಅವರ ದಾಸಾನುದಾಸನು ಸತತ ನಾನು ತವಕದಿಂದಲಿ ಬಾರೊ ಭಕ್ತವತ್ಸಲಾ6 ಅರ್ಚಿಸಬಲ್ಲನೆ ದೇವ ನಿನ್ನನುದಿನಾ ಗಚ್ಚರಿತವಂದಲ್ಲವೆ ಮತ್ತಾವದರಿಯೆ ಅಚ್ಯುತದಾಸರ ಪ್ರೀಯ ವಿಜಯವಿಠ್ಠಲ ಬೆಚ್ಚಿಸಿದೋಪಾದಿಯಲ್ಲಿ ಪೊಂದಿ ಬಾರಯ್ಯ 7
--------------
ವಿಜಯದಾಸ