ಒಟ್ಟು 412 ಕಡೆಗಳಲ್ಲಿ , 69 ದಾಸರು , 357 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯತಿರಾಜ ಯತಿರಾಜ ಮಾಧವೇಂದ್ರ ಗುರು ಸಾರ್ವಭೌಮ ಪ್ರಭು ಪ ಧಾರುಣಿಯೊಳಗಪಾರವಾದ ವಿದ್ಯಾ ವಾರಿಧಿಚಂದ್ರಮ ವೈರಾಗ್ಯಮೂರುತಿ1 ಶಿಷ್ಟಶಿರೋಮಣಿ ಕಟ್ಟಳೆಯಿಂದ ಬಲು ದಿಟ್ಟತನದಿ ಯತಿಪಟ್ಟವೇರಿದನೀತ 2 ಭೇದದಿಂದತಿಶಯ ವಾದಿಪ ಮಹದು ರ್ವಾದಿಗಳನು ಗೆದ್ದು ನೀ ಸಾಧಿಸಿದಧಿಕಾರ 3 ಅಧಮರ ಉಪಟಳಕೆದೆಪೊಡೆಯದೆ ನಿಜ ಸದಮಲ ವೈಕುಂಠಪದವಿಗೆ ನಡೆದನು 4 ಮಧ್ವಶಾಸ್ತ್ರ ಪ್ರಸಿದ್ಧ ಪದ್ದತಿಗಳ ಸಿದ್ಧಿಪಡೆದು ಪರಿಶುದ್ಧನೆನಿಸಿಕೊಂಡ 5 ಗುರುವೆಂದೆನಿಸಿ ಭೂಸುರರನುದ್ಧರಿಸೀತ ಸ್ಥಿರವಾಗಿ ನಿಂತನು ಮೆರೆವ ಬುದ್ಧಿನ್ನಿಯೊಳು 6 ಪರಮಭಕ್ತಿಯಿಂದ ನಿರುತ ಸೇವೆಗೈದು ವರವ ಬೇಡಿರೆಲೋ ಭರದಿ ಕೊಡುವ ಮೆಚ್ಚಿ 7 ಆಸೆರಹಿತನನುಮೇಷ ಪೂಜಿಸಿರೊ ದೋಷ ದಾರಿದ್ರ್ಯವ ನಾಶಮಾಡುವನು 8 ಸ್ವಾಮಿ ಕೃಷ್ಣ ಶ್ರೀರಾಮನಾಮಾಮೃತ ಪ್ರೇಮದಿಗರೆಯುವ ಕಾಮಧೇನು ಸತ್ಯ 9
--------------
ರಾಮದಾಸರು
ಯಾಕುಪೇಕ್ಷಿಸುವಿ ಕರುಣೈಕನಿಧಿ ನರಸಿಂಹ ವೈರಿ ಪುಂಜನನ ಶ್ರೀಕರನೆ ನೀನೆನಗೆ ಶರಣೆಂದು ನಂಬಿದೆನು ಸಾಕಬೇಕಯ್ಯ ದಾಸರನು ಪ. ಹುಡುಗ ಪ್ರಲ್ಹಾದ ಜಗದೊಡೆಯ ನೀನಹುದೆಂಬ ನುಡಿಯಲಾಲಿಸುತವನ ಪಿತನು ಕಡಿವೆನೆಂದೆದ್ದು ಮುಂದಡಿಯಿಟ್ಟು ಮುಂದರಸಿ ದೃಢ ಮುಷ್ಟಿಯಿಂದ ಖಂಬವನು ಬಡಿಯುತಿರೆ ಶತಕೋಟಿ ಸಿಡಿಲಂತೆ ಗರ್ಜಿಸುತ ಘುಡುಘುಡಿಸಿ ಬಂದು ದೈತ್ಯನನು ಪಿಡಿದೆತ್ತಿ ತೊಡೆಯ ಮೇಲ್ ಕೆಡಹಿ ದಶನಖದಿಂದ ಒಡಲ ಬಗೆದನೆ ನೀಚರನು 1 ನರಸಿಂಹನೆಂಬ ಈರೆರಡು ವರ್ಣವ ಜಪಿಸೆ ದುರಿತ ದೂರೋಡುತಿಹವೆಂದು ಸರಸಿಜೋದ್ಭವ ಶಂಭು ಸುರನಾಥ ಮುಖ್ಯಮುನಿ ವರರು ಕೊಂಡಾಡುತಿಹರಿಂದು ಅರಿತದನು ತ್ವತ್ಪಾದ ಸರಸಿಜವೆ ಶರಣೆಂದು ದೊರೆ ನಿನ್ನ ನಂಬಿಕೊಂಡಿಹೆನು ಅರಿಭಾವ ಸಾಧಿಸುವ ದುರುಳರನು ಪಿಡಿದವರ ಕರುಳ ತೆಗೆದೆತ್ತಿ ಬೀರದನು 2 ಅತಿ ಸೂಕ್ಷ್ಮಯಂದಗ್ನಿ ಗತಿಯನ್ನುಪೇಕ್ಷಿಸಲು ವಿತತವಾಗುವುದು ಕ್ಷಣದೊಳಗೆ ಜತನ ಮಾಡುವರದರ ಗತಿಯನಳಿಸುವುದು ಸ- ಮ್ಮತವಾಗಿರುವುದು ಜಗದೊಳಗೆ ಪತಿತಪಾವನ ಶೇಷಗಿರಿರಾಜ ನೀ ಯೆನಗೆ ಗತಿಯಾಗಿ ಸಲಹುವುದರಿಂದ ವಿತಥಾಭಿಲಾಷೆಯಾತತಾಯಿಗಳ ತ್ವರೆಯಿಂದ ಹತಮಾಡಿಸು ಶ್ರೀ ಮುಕುಂದ 3
--------------
ತುಪಾಕಿ ವೆಂಕಟರಮಣಾಚಾರ್ಯ
ಯಾಕೆ ದಯಬಾರದೊ ಕಾಂತೇಶ ಪ್ರಾಣೇಶ ಸಾಕಲಾರದೆ ಪೋದೆಯಾ ಎನ್ನನು ಪ. ಏಕಚಿತ್ತದಿ ನಿನ್ನ ಚರಣ ನಂಬಿ ಬರಲು ಭಾರತೀಶ ಅ.ಪ. ತೊಳಲಿ ಬಳಲಿ ಸುಖ ಸುಳಿವೆಂಬೋದರಿಯದೆ ನಳಿನಾಕ್ಷನ ದಾಸ ನಿನ್ನ ಕೀರ್ತಿ ಇಳೆಯೆಲ್ಲ ಪೊಗಳಲು ಸಲಹುವನೆಂತೆಂದು ಬಳಿಗೆ ಬರಲು ಮನಕರಗದೆ ತಂದೆ 1 ಅಂದು ಕನಸಿನಲ್ಲಿ ಶಿರದಲ್ಲಿ ಕರವಿಟ್ಟೆ ಇಂದೆಲ್ಲಿ ಪೋಯಿತೊ ಆ ಕರುಣ ತಂದೆ ಮುದ್ದುಮೋಹನ ಗುರುಗಳ ವಚನವ ಇಂದು ಒಲಿದೆನ್ನ ಕಾಯೊ2 ವಿೂಸಲ ದಾಸ್ಯಕೆ ಆಶೆ ಮಾಡಿದೆನೆಂದು ದೋಷವೆಣಿಸುವರೆ ಎನ್ನಲಿ ನೀ ಶೇಷಶಯನನೆ ಬಲ್ಲೆನೊ ಇದರ ಮರ್ಮ ಘಾಸಿಗೊಳಿಸದೆ ನೀ ಅಭಯವನೀಯೊ 3 ರಾಮದಾಸ್ಯವ ಬಯಸಿ ನೇಮದಿಂದಲಿ ಇದ್ದು ರಾಮನಾಗಮ ಕಂಡು ಎರಗಿ ನಿಂದು ಪತಿ ಪಾದ ದಾಸ ಸಿದ್ಧಿಯ ಪಡೆದು ಭೂಮಿಯೊಳು ಖ್ಯಾತನಾದೆಯೊ ಆಂಜನೇಯ 4 ಚಿತ್ತಿದಿ ಕೃಷ್ಣನ ದಾಸತ್ವ ಸಾಧಿಸಿ ಮತ್ತೆ ಮುನಿಯಾಗಿ ಗ್ರಂಥವ ರಚಿಸಿ ಚಿತ್ತದಿ ಗೋಪಾಲಕೃಷ್ಣವಿಠ್ಠಲನ ಪಾದ ನಿತ್ಯದಿ ಭಜಿಪೆ ನೀ ಮತ್ತೆನ್ನ ಕಾಯೊ 5
--------------
ಅಂಬಾಬಾಯಿ
ಯಾತಕವನಿಯೊಳ್ ಜನಿಸಿದೆ ನಾನು ಸಾರ್ಥಕೇನು ನಾನು ಕೋತಿ ಸಾರ್ಥಕೇನು ಪ ಶರಧಿ ಹಾರಿ ಉರಿವಿಲಂಕೆಯನರಿವೆನೇನೊ ವಾರ್ತೆ ತಿರುಗಿ ಮಾರ್ಗವ ಮಾಡಿ ಮಾತೆಯ ತರುವೆನೇನೊ 1 ಕಿತ್ತು ಸಂಜೀವನವ ಬೆಟ್ಟಲ್ಲಿರಿಸುವೆನೇನೊ ರಾಮ- ರ್ಹತ್ತಿಸ್ವಾಹನನಾಗಿ ಖ್ಯಾತಿಪಡೆವೆನೇನೊ 2 ಇಂದಿರೇಶ ಕೊಡಲು ಪದವಿ ಒಲ್ಲೆಂಬೆನೇನೊ ರಾಮ- ರೆಂಜಲೆಲೆಗ್ಹಾರೈಸಿ ಕದ್ದೊಯ್ದುಂಬೆನೇನೊ 3 ಮುನ್ನ ಹರಿಯ ಸೇವೆಗೆಂದು ಜನಿಸಿದೆನೇನೊ ಧರೆಯೊಳ್ ಧರ್ಮ ಮೀರದೆ ನಡೆದು ಖ್ಯಾತಿ ಪಡೆವೆನೇನೊ 4 ರಾಜಸೂಯಯಾಗಾಶ್ವಮೇಧ ಸಾಧಿಸುವೆನೇನೊ ರಾಜ್ಯ ಭೇದಿಸಿ ಶತ್ರುಗಳಿಗೆ ಭಯವ ತೋರುವೆನೇನೊ 5 ಕ್ಲೇಶಮನಕಿಲ್ಲದೆ ವನವಾಸ ಸಹಿಸುವೆನೇನೊ ಅಜ್ಞಾತ- ವಾಸೊಂದುಕ್ಷಣ ಪರಿಯಂತರ ಚರಿಸುವೆನೇನೊ 6 ಭಿಕ್ಷೆತನಕೊಂಬೊ ಸಜ್ಜನರಿಗೆ ನಮಿಸುವೆನೇನೊ ಬೋರೆ- ವೃಕ್ಷಮೂಲದಲ್ಲಿ ಆವಾಸ ಬಯಸುವೆನೇನೊ7 ಪಾದಕ್ಕೆರಗುವೆ ಪ್ರಾಣೇಶ ನೀ ಪಾಲಿಸುವ್ಯೇನೊ ಜ್ಞಾನ ಆದಿಮೂರುತಿ ವೇದವ್ಯಾಸನ ಒಲಿಸುವೆನೇನೊ 8 ಬಿಟ್ಟು ಚಲಿಸದೆ ನಿನ್ನಲ್ಲೆ ಮನಸಿಟ್ಟೇನೇನೊ ವಾ- ಸಿಷ್ಠ ಭೀಮೇಶಕೃಷ್ಣನ ಭಜಿಸುತ್ತಿರುವೆನೇನೊ 9
--------------
ಹರಪನಹಳ್ಳಿಭೀಮವ್ವ
ಯೋಗಿ ವಲ್ಲಭನ ಅನುರಾಗವನು ಪಡೆದವಗೆ ಲಾಗವೆಲ್ಲವು ದೊಡ್ಡ ಯೋಗವಾಗುವುದು ಪ ಹೋಗಿ ಗಂಗೆಯ ತೀರದಲಿ ಬಾವಿ ತೋಡಿದರೂ ಬೇಗ ಸಿಗುವುದು ದಿವÀ್ಯ ಬಲಮುರಿಯ ಶಂಖವು ಅ.ಪ ಮಾಧವನ ಪರಮ ಕರುಣವ ಪಡೆದ ಮನುಜನಿಗೆ ಹೋದ ಕಡೆಗಳಲಿ ದೊರೆಕುವುದಾದರೆ ಮೂದಲಿಸುವರ ಮನವು ಕಾದ ಬೆಣ್ಣೆಯು ಕರಗಿ ಹೋದ ತೆರದಲಿ ಕ್ಷಣದಿ ಸಾಧುವಾಗುವುದು 1 ವೇದಾಂತ ರಾಜ್ಯದಲಿ ಜ್ಞಾನಭಕುತಿಗಳಿಂದ ಮೋದ ಪಡಿಸುವನು ಕಾದ ಮರುಭೂಮಿಯಲಿ ಸಕಲ ಸಂಪತ್ತುಗಳ ಸಾಧಿಸುವ ಬೇಧಿಸುವ ವಿಘ್ನರಾಶಿಗಳನ್ನು 2 ಕುರುಡ ನೋಡುವನೆಲ್ಲ ಕಿವುಡ ಕೇಳುವನೆಲ್ಲ ಗುರುವರ ಪ್ರಸನ್ನ ನೀ ಮರುಕ ತೋರಿದರೆ ಕರಡಿ ಕೈ ಗೊಂಬೆಯಾಗುವುದು ಕೈಗೊಂಬೆಯು ತ್ವರಿತದಲಿ ಕಲ್ಪತರುವಾಗಿ ಕೊಡುವುದು ಫಲವ 3
--------------
ವಿದ್ಯಾಪ್ರಸನ್ನತೀರ್ಥರು
ರಾಘವೇಂದ್ರಯತಿಗಳು ಗುರುರಾಯರ ನಂಬಿರೋ ರಾಘವೇಂದ್ರ ಗುರುರಾಯರ ನಂಬಿರೋ ಜಗದೊಳು ಪ. ಗುರುರಾಯರ ನಂಬಿ ವರಗಳ ಬೇಡಿರೊ ನರಹರಿ ಪದ ಧ್ಯಾನಿಪ ಕರುಣವ ಬೀರುವಂಥ 1 ಆದಿ ಪ್ರಹ್ಲಾದರು ಮೋದದಿ ಹರಿಪದ ಆದರದಿಂದ ಜಗಕೆ ಸಾಧಿಸಿ ಬೀರಿದರೊ 2 ದ್ವಿತೀಯ ವ್ಯಾಸರಾಜ ಸ್ತುತ ಬ್ರಹ್ಮಣ್ಯಾರ್ಯ ಕರ ಗತಪುರುಷೋತ್ತಮ ಗುಹ ಪಥದೊಳಗಿಪ್ಪರ 3 ತೃತೀಯ ರಾಘವೇಂದ್ರ ಪತಿತ ಪಾವನ ನಾಮ ರತ್ನ ಖಚಿತವಾಗಿದೆ ಭಕ್ತ ಸುಚರಿತರೆಲ್ಲ ಬೇಗ 4 ಭೂತ ಪ್ರೇತಗಳ ಪ್ರೀತಿಯೊಳಳಿದು ಶ್ವೇತ ಕುಷ್ಠಗಳ ದೂರ ಮಾಳ್ಪವರ 5 ಪಾದ ಪಂಕಜ ದುರಿತ ದೂರ ಶ್ರೀ ಶ್ರೀನಿವಾಸನ ಭಜಿಪ ಗುರು 6
--------------
ಸರಸ್ವತಿ ಬಾಯಿ
ರಾಮಚಂದ್ರನು ಶೋಭಿಪನಿಂದು ಸದ್ಭಕ್ತಬಂಧು ಪ ಸಾರಸಾಕ್ಷನು ಸಾಮಜವರದನು ಭೂರಿಫಲಪ್ರದ ಭೂಮಿಜೆಯುತನು ಅ.ಪ ಧರೆಯಭಾರವ ತಾಕಳೆಯಬಂದು ಕಾರುಣ್ಯಸಿಂಧು ನರರೂಪವ ಧರಿಸುತ್ರ ನಿಂದು ಕೋದಂಡವ ಪಿಡಿದು ದುರುಳ ದೈತ್ಯರ ಶಿರವನೆ ತರಿದು ಪರಿಪರಿ ವಿಧದಲಿ ಶರಣರಿಗೊಲಿಯುತ ದುರಿತ ಸಂಕುಲವ ಪರಿಹರಿಸಿ ಪೊರೆವ ಶ್ರೀ 1 ಸೂರ್ಯಸುತನ ಸೈನ್ಯದವರ ಸುಮನಸರ ಧೈರ್ಯದಿಂ ಸಮರಗೈದವರ ವೀರಾಧಿವೀರರ ಕಾರ್ಯವ ಸಾಧಿಸಿದಾ ವಾನÀರರ ಪಾರವಶ್ಯರನು ಪರಮೇಷ್ಠಿಯಿಂದ ಧಾರೆಯನೆರೆದಮೃತದಿ ಬದುಕಿಸಿದ ಶ್ರೀ 2 ಘನವಂತ ವಿಭೀಷಣಂಗೆ ಅನುವನು ತೋರಿ ಸಾರಿ ಅನುಜಾತ ಭಕುತಂಗೆ ಅನುಗ್ರಹಬೀರಿ ಆನಂದವೇರಿ ಜನನಿಯರಾಶೀರ್ವಚನವ ಪಡೆದು ಸನುಮತದಿಂ ಪುರಜನರೊಲುಮೆಯೊಳು ದಿನಕರಪ್ರಕಾಶ ಜಾನಕಿನಂದ ಜಾಜೀಶ್ರೀಶ ಶ್ರೀ 3
--------------
ಶಾಮಶರ್ಮರು
ರಾಮನಾಮವ ಪಾಡೆಲೊ ಮನುಜಾ ಪ ರಾಮನಾಮವ ಪಾಡಿ ಈ ಸಭೆಯೆಲ್ಲಾ ನೋಡಿ ಕಾಮಾಕಲಭಿಮಾನನು ಕಾಮಿನಿಗೇಳಿದ ಸೀತಾ 1 ಸಾಧಿಸಿದಾರೊಳು ನೀ ಸಂಭ್ರಮವಾಗೊ ಯೆಲೊ ಶೋಧಿಸಿ ನಿನ್ನೊಳು ನಿಜಸಾಧನ ಕೇಳುವ ಸೀತಾ 2 ಇಂತೀ ಪರಿಯೊಳು ಮಹದಂತರವಿಹುದಿದಾ ಹಂತವರ ಕಂಡು ನೀ ವೇದಾಂತದೊಳು ನಿಂದು 3 ಭರತಪುರೀಶನನ್ನು ಮರೆತರಾಗುವುದುಂಟೆ ಅರಿತು ನೋಡಿಕೊಂಡು ನೀ ಪರಮತತ್ವವಿದೆಂದು 4
--------------
ಚನ್ನಪಟ್ಟಣದ ಅಹೋಬಲದಾಸರು
ವಂದಿಸುವೆನು ನಿತ್ಯದೊಳು ವಂದಿಸುವೆನು ಪ ವಂದಿಸುವೆ ಗುರುಮಧ್ವರಾಯನಷ್ಟಾಂಗದೊಳು ನಿಂದಿರ್ದ ವೈಷ್ಣವಮತಚಂದ್ರವಾರಿಧಿಗೆ ಅ.ಪ ಕ್ರೋಧವರ್ಜಿತನಾಗಿ ವೈರಾಗ್ಯವನು ತೊಟ್ಟು ಬಾಧಿಸುವ ಇಂದ್ರಿಯಂಗಳನೆಲ್ಲ ಬಲಿದು ಆಧರಿಸಿ ಕ್ಷಮೆ ದಮೆ ಶಾಂತ ಸದ್ಗುಣದಿಂದ ಮಾಧುರ್ಯದೊಳು ಜನರ ಪ್ರೀತಿಕರನಾದವಗೆ 1 ಭಯವಿವರ್ಜಿತನಾಗಿ ಬಹುಲೋಭವನು ತೊರೆದು ಕ್ಷಯ ಮಾಡಿ ಮೋಹವನು ಹಿಂದುಗಳೆದು ನವವಿಧದ ಜ್ಞಾನವನು ದಶಲಕ್ಷಣಗಳಿಂದ ನಿಯತವತಿ ಕೈಕೊಂಡನಕ್ಷರ ತ್ರಯದೊಳು 2 ಏಳು ಕೋಟಿಯ ಮಹಾ ಮಂತ್ರ ಬಾಹ್ಯದ ಕೋಟೆ ನಾಲಿಗೆ ವಶಮಾಡಿ ನವದ್ವಾರಗಳು ಮೂಲಾಗ್ನಿಯಿಂ ಸುಟ್ಟು ದಶವಾಯುಗಳ ಕದವ ಸಾಲು ನಾದಗಳೆಂಬ ಕಹಳೆವಿಡಿದವಗೆ 3 ದಶವಿಧದ ಘೋಷಗಳ ಬಿಂದು ಪ್ರತಾಪದಿಂ ದಶಮನಾಗಿಯೆ ಮುಂದೆ ಡೆಂಕಣಿಯ ಹಾರಿ ಗಸಣಿಯನು ಬಿಟ್ಟು ಕಳೆಯಿಂದೇಳು ಧಾತುಗಳ ಎಸೆವ ದುರ್ಗಾಂತರಕೆ ತಾಗಲಿಟ್ಟವಗೆ 4 ಒಂದು ಮುಹೂರ್ತದಲಿ ವ್ಯಸನಗಳನು ಹೂಳಿ ಬಂಧಿಸಿಯೆ ಚಂದ್ರಾರ್ಕ ವೀಧಿಗಳ ಪ್ರಣವದೊಳು ಮುಂದೆ ಮೂಲಾಧಾರವೆಂಬ ಅರಮನೆ ಪೊಕ್ಕು ನಿಂದು ನಿಯಮದಿ ಸುಲಿದನದಿಷ್ಠಾನದರಮನೆಯ 5 ಪ್ರತ್ಯಾಹಾರದಿಂ ಮಣಿಹಾರಕದ ಮನೆಯ ಕಿತ್ತು ಕಿಚ್ಚಂ ಹಾಕಿ ಧ್ಯಾನ ಯೋಗದಿ ಬಂದ ಮತ್ತೆ ಸಂಶುದ್ಧ್ದವೆಂಬರಮನೆಯ ಕೋಲಾಹಲದಿ ಉತ್ತಮದ ಅಂಬಿಕಾ ಯೋಗದಿಚ್ಛೆಯೊಳು 6 ಜ್ಞಾನ ಮಂಟಪವೆಂಬ ರಾಜ ಮನೆಯೊಳು ನಿಂತು ಮನದೊಳು ಮೂಲ ಬಂಧದಿ ಆರು ಶಕ್ತಿಗಳ ಹೀನವಾಗಿಹ ಗುಣತ್ರಯವೆಂಬ ಗೊಲ್ಲರನು ವ- ಡ್ಯಾಣ ಬಂಧದಿ ಇರಿವುತಲಿ ಕ್ಷಿಪ್ರದಲಿ 7 ಖೇಚರಿಯ ಯೋಗದಿಂ ಕರಣ ಚತುಷ್ಟಯದ ನೀಚ ಪ್ರಧಾನಿಗಳ ನೆಗಳವನಿಕ್ಕಿ ಕಾಲ ಕರ್ಮದ ಕಣ್ಣುಗಳ ಕಿತ್ತು ಯೋಚನೆಯ ಮಾಡಿದನು ವೀರಾಸನದೊಳು 8 ಮಾಯಾ ಪ್ರಪಂಚವೆಂಬನ್ಯಾಯ ನಾಯಕರ ಕಾಯ ಉಳಿಸದೆ ಸವರಿ ವಾಸ್ತಿಯಿಂದನುಗೈದು- ಪಾಯದಿಂದಾರು ವಿಕಾರಗಳ ಕೈಗಟ್ಟಿ ಬಾಯ ಹೊಯ್ದ ಗುರುವಿಗೆರಗುವೆನು ನಾನು 9 ಇಪ್ಪತ್ತೊಂದು ಸಾವಿರವಾರು ನೂರಾದ ಉತ್ಪವನ ಉಶ್ವಾಸ ನಿಶ್ವಾಸಗಳನೆಲ್ಲ ತಪ್ಪಿಸದೆ ಕುಂಭಕದಿಂದ ಬಂಧಿಸಿಕೊಂಡು ಒಪ್ಪುವನು ಅರೆನೇತ್ರದಿಂದ ಬೆಳಗುವನು 10 ಮುನ್ನೂರ ಅರುವತ್ತು ವ್ಯಾಧಿಗಳ ಲವಳಿಯಿಂ ಬೆನ್ನ ಬೆಳೆಸಿ ಕಪಾಲ ಭೌತಿಯಿಂದಷ್ಟಮದ ವರ್ಣಾಶ್ರಮಂಗಳನು ಏಕವನು ಮಾಡಿಯೆ ನಿರ್ಣಯಿಸಿಕೊಂಡು ತಾ ನೋಡುವವಗೆ 11 ನುತಿಕರ್ಮದಿಂದಷ್ಟ ಆತ್ಮಕರ ಆಸನವ ಜೊತೆಗೂಡಿ ಜಾತ ಮಧ್ಯದ ದೃಷ್ಟಿಯಿಂದ ಅತಿವೇಗದೊಳು ನಡೆವ ಅವಸ್ಥಾತ್ರಯವೆಂಬ ಕೃತಿ ಕುದುರೆಗಳ ಯುಕುತಿಯಲ್ಲಿ ಪಿಡಿದವಗೆ 12 ನಾದದಿಂ ಪಂಚಕ್ಲೇಶ ಪ್ರಭುಗಳನು ಹೊಯ್ದು ಕಾದು ಇರುತಿಹ ಹರಿಗಳಾರು ಬಿಂದುವಿನಿಂ ಸಾಧಿಸುತ ಮಂತ್ರಭ್ರಮಣದಿಂದ ಮಲತ್ರಯದ ಆದಿ ಕರಣಿಕನನ್ನು ಹಿಡಿದವನಿಗೆ13 ದಾತೃತ್ವದಿಂ ಸತ್ಯಲೋಕವನು ತಾ ಕಂಡು ಕಾತರದಿ ಆಕಾರದುರ್ಗವನು ಹತ್ತಿ ಓತಿರುವ ತಿರಿಕೂಟವೆಂಬ ಬಾಗಿಲ ದಾಟಿ ಈ ತೆರದ ಮಹಾದುರ್ಗವನು ಕಂಡವಗೆ 14 ಅಣು ಮಾತ್ರ ಸೂಕ್ಷ್ಮದೊಳು ನೋಡಿ ತಾ ಜ್ಞಾನದೊಳು ಕುಣಿಯೊಳಗೆ ಆ ಪರಂಜ್ಯೋತಿ ಆಗಿರುತಿಪ್ಪ ಗುಣನಿಧಿಯು ವರಾಹತಿಮ್ಮಪ್ಪರಾಯನನು ಕಣು ಮನದಿ ದೃಢವಾಗಿ ನೋಡಿ ಸುಖಿಯಾದವಗೆ 15
--------------
ವರಹತಿಮ್ಮಪ್ಪ
ವಾದಿರಾಜ ಅಸ್ಮದ್ಗುರು ವಾದಿರಾಜ ಪ ವಾದಿರಾಜ ತವ ಪಾದಕಮಲಕಭಿ ವಾದನ ಮಾಳ್ಪೆ ಸಮೋದವಿತ್ತು ಕಾಯೊ 1 ಸಾರಿದರಿಗೆ ಕಲ್ಪ ಭೂರುಹ ದಂತೆ ಮ ನೋರಥ ಸಲಿಸುವ ಸೂರಿಗಳರಸೇ 2 ಭೇದ ಪಂಚಕವನು ಸಾಧಿಸಿ ಕುಮತಕು ವಾದಿಗರ್ವಾದ್ರಿ ವಿಭೇದನ ಗೈದೆ 3 ದೇಶಿಕವರ್ಯ ವಾಗೀಶ ಕುವರನೆ ಕ್ಲೇಶ ಹರಿಸು ಅಘನಾಶ ಗೈದು 4 ಸಿರಿ ಜಗನ್ನಾಥವಿಠಲನ ಸುಗುಣಗಳನುದಿನ ಪೊಗಳಿ ಹಿಗ್ಗುವೊ 5
--------------
ಜಗನ್ನಾಥದಾಸರು
ವಾದಿರಾಜಗುರು ನಿಮ್ಮಡಿಗೆರಗುವೆ ಸಾದರದಿಂದಲಿ ಮಂದನ ಕೈಪಿಡಿಯೋ ಪ ಸಾಧುಜನಾಶ್ರಯ ಮೇದಿನೀಸುರತರು ಪಾದವಪಿಡಿದಿಹೆ ಬೋಧಿಸು ವಿಜ್ಞಾನ ಅ.ಪ. ಕಾದಿಡೆ ಸುಜನಕೆ ಮಧ್ವಾಗಮನಿಧಿ ಸಾದರದುದಿಸಿದಿ ಬುಧಜನಕುಲಮೌಳಿ ಬೂದಿಯ ಮಾಡುತ ದುರ್ಮತಜಾಲವ ಮಾಧವ ಮಧ್ವರ ಸೇವೆಯ ಸಲ್ಲಿಸಿದೇ 1 ಕವಿತಾವನಿತೆಯ ಕುಣಿಸುತ ಶಾಸ್ತ್ರವ ನವವಿಧ ರಸದಿಂ ಪೇಳಿದೆ ಶಿಷ್ಯರಿಗೆ ಭುವಿಯಲಿ ಮೆರೆದೆಯೋ ಮಧ್ವಾನುಜ ತೆರ ಪವನ ಮತಾಬ್ಧಿಯ ಸೋಮನೆ ಶರಣೆಂಬೆ2 ರಿಕ್ತಬ್ರಹ್ಮನ ಭಕ್ತರ ನೊಲ್ಲನು ಯುಕ್ತಿಗಳೆಂಬುವ ಮಲ್ಲಿಗೆ ಪಟ್ಟಲಿ ಶಕ್ತಯತೀಂದ್ರನೆ ಅಡಗಿಸಿ ಸರ್ವೋ- ದ್ರಿಕ್ತನ ಗುಣಗಣ ಸಾಧಿಸಿ ನೀ ಮರೆದೇ3 ತೀರ್ಥಕ್ಷೇತ್ರವ ಪಾವನಗೈಯ್ಯಲು ಸುತ್ತುತನೀಡಿದೆ ತೀರ್ಥಪ್ರಬಂಧವನೂ ಪಾರ್ಥಿವ ಮೊರೆಯಿಡೆ ಅಕ್ಷತೆನೀಡುತ ಶತ್ರುಗಳಳಿಸುತ ಪೊರೆದೆಯೊ ಕರುಣಾಳು4 ಅರವತ್ನಾಲ್ಕು ಕಲಾಜ್ಞನೆ ಗುಣನಿಧಿ ಸುರಗಣಗಚ್ಚಿರಿಯೇ ಸರಿ ತವ ಮಹಿಮ ಹರಿಸಿದೆ ಮೃತ್ಯುವ ರಾಜನ ಅಳಿಯಗೆ ಸಿರಿಪತಿ ವ್ಯಾಸರ ಕಂಡೆಯೊ ಪ್ರತ್ಯಕ್ಷ5 ಗುಂಡಕ್ರಿಯೆ ವೈಕುಂಠ ವರ್ಣನೆ ಕಂಡಕಂಡಪದ ಪುಂಜವ ಪಾಡುತಲೀ ಕೂಡದು ಭಾಷಾ ಸಡಗರ ವೆಂಬುದ ಪಂಡಿತನಿಕರಕೆ ತೋರಿದೆ ಯತಿತಿಲಕಾ6 ಜಂಗಮಗರುವನ ಭಂಗಿಸೆ ತವಕದಿ ಇಂಗಿಸಿ ಸಲಹಿದೆ ವಿಪ್ರರ ಕಷ್ಟಗಳ ಗಂಗಾಪಿತ ತ್ರಿವಿಕ್ರಮ ದೇವನ ಮಂಗಳ ಸುರಿಸಲು ಸ್ವಾದಿಲಿ ಸ್ಥಾಪಿಸಿದೆ7 ಗೋಧರ ಹಯಮುಖ ಸಾಕ್ಷಾತ್ತಿ ಎಂಬುವ ಛಂದದಿ ನೀಡಿದ ಓದನವೆಂತೆನೆ ಸಾಧ್ಯವೆ ಶೇಷನು ಪೊಗಳಲು ನಿಮ್ಮನು ಮಂದಿರನವನಿವ ನೆನ್ನುತ ಕೈ ಪಿಡಿಯೋ8 ಇಂದ್ರನ ದೂತರ ತಡೆಯುತ ದಿನತ್ರಯ ಚಂದದಿ ಕುಳಿತೆಯಾ ಬೃಂದಾವನದೊಳಗೆ ಇಂದಿಗು ನೋಳ್ಪರು ಬುಧಜನ ನಿಮ್ಮನು ವೃಂದಾರಕಗಣ ವಂದಿತ ಚರಣಯುಗ9 ಸುಂದರ ಹಯಮುಖ ರಾಮನು ಕೃಷ್ಣನು ವೇದವ್ಯಾಸರು ಹನುಮಾದಿ ತ್ರಯರು ಮಧ್ಯದಿ ಕುಳಿತಿಹ ನಿನ್ನ ಸುನಾಲ್ಕೆಡೆ ನಿಂದಿಹರೆಂಬುದು ಸಿದ್ಧವು ಮಹಮಹಿಮಾ 10 ಬೃಂದಾವನ ಪಂಚದಿ ಹರಿ ತಾನಿಹ ಚಂದದಿ ಸೇವೆಯ ಕೊಳ್ಳುತ ನಿನ್ನಿಂದ ಸುಂದರ ದಶಗಳ ಪಂಚನುರೂಪವ ವಂದಿಸಿ ನೋಡುತ ನೆನೆಯುವೆ ಏನೆಂಬೆ11 ಗಂಗಾಪಿತ ತ್ರಿವಿಕ್ರಮದೇವನ ಹಿಂಗದೆ ನೆನೆಯುವೆ ಲಕ್ಷಾಭರಣವನು ರಂಗಗೆ ನೀಡಿದೆ ನಮ್ಮಯ ಭವವನು ಇಂಗಿಸೆ ಕಷ್ಟವೇ ಗುರುವರ ದಯಮಾಡೋ12 ಜಯಮುನಿ ಹೃದಯದಿ ವಾಯುವಿನಂತರ ಜಯದಿಂ ನಲಿಯುವ ಶ್ರೀಕೃಷ್ಣವಿಠಲನ ದಯದಿಂ ತೊರಿಸು ಭಾವೀಜಯಾಸುತ ಹಯಮುಖ ಕಿಂಕರ ನಮಿಸುವೆ ಭೂಯಿಷ್ಠಾ13
--------------
ಕೃಷ್ಣವಿಠಲದಾಸರು
ವಾಯ ದೇವರ ಮಹಿಮಾ ವರ್ಣನೆ ಮೂರವತಾರ , ಷಟ್ಪದಿ ಶ್ರೀರಮೇಶ ವಿಧೀರ ವಿಪವೃತ್ರಾರಿ ವಿನುತ ಸರ್ವಾಧಾರ ನಿರುಪಮನೆ ಸ್ವತಂತ್ರಗುಣಾರ್ಣವ ಪ್ರಭುವೇ | ಪತಿ ಓಂಕಾರ ವ್ಯಾಹೃತಿ ವಾಚ್ಯ ಸರ್ವಪ್ರೇರಕ ಬಲಸುಭಾಸಕ ಹರಿಯೆ ವಾಗ್ರಸನೆ ನಮಿಪೆ 1 ಆಪ್ತನೆಂದರೆ ಪ್ರಾಣ ಸರಿ ಪರಮಾಪ್ತ ಹರಿಯ ಯಥಾರ್ಥಜ್ಞಾನ ಪ್ರಾಪ್ತಿ ಮಾಡಿಸಿ ವಿಷ್ಣು ಕರುಣವ ಕೊಡಿಸುವನು ತಾನು | ಆಪ್ತ ನೆನ್ನೆಯಥಾರ್ಥ ಪೇಳುವ ಮತ್ತೆ ನಿಶ್ಚಯ ಜ್ಞಾನವುಳ್ಳವ ಶಕ್ತ ಕರುಣ ಪಟುತ್ವಯುತನಿರ್ವಂಚನೆಗಳಿಂದ 2 ಶಿಷ್ಯ ವಾತ್ಸಲ್ಯ ಯುತ ಗುರುಸರಿ ವಿಶ್ವ ಜನಕನ ಪ್ರಥಮ ಭಕ್ತಶ್ವಾಸಗಿಂತಲು ಬೇರೆಯವನಿಲ್ಲ ಪವಮಾನನವ | ದೋಷ ಸಂಶಯ ರಹಿತ ಹರಿ ವಿಶ್ವಾಸ ಪಾತ್ರ ವಿಶೇಷ ಮಹಿಮಸುರಾಶ್ರಯ ನಿವನು ವಂಶನೆ ನಿಸುವ ಸೂತ್ರಗಾನಮಿಪೆ 3 ಯಾವ ಜ್ಞಾನ ಬಲ ಸ್ವರೂಪ ಸುದೇವ ಕ್ರೀಡಾದಿ ಗುಣಯುತ ಭವನಾವಿಕ ಪ್ರಭು ವಾಯುವಿನಗುಣ ಚರಿತೆ ವೃಂದಗಳ | ಪಾವನ ಬಳಿತ್ಥಾದಿ ಶೃತಿಗಳು ಸಾವಧಾನದಿ ಪೊಗಳುವವೊ ಆಭಾವಿ ಬ್ರಹ್ಮನ ಮೂಲ ರೂಪವುಜ್ಞಾನ ಬಲಮಯವು 4 ಮೂಲ ರಾಮಾಯಣ ವಿಶೇಷವ ಪೇಳುವ ಹನುಮನೇ ಪ್ರಥಮ ನಿಹಖೂಳ ದಿತಿ ಜನ ಸೈನ್ಯ ಮಾರಕ ಭೀಮ ನೆರಡೆನ್ನಿ | ಶೀಲ ಸಖಗಳ ನೀವ ಶಾಸ್ತ್ರವ ಪಾಲಿಸಿದ ಗುರು ಮಧ್ವರಾಯರೆ ಮೂಲ ಮುಖ್ಯ ಪ್ರಾಣ ದೇವನ ಮೂರನೆಯ ರೂಪ 5 ಪ್ರಾಣ ನೀತ್ರಯ ರೂಪಗಳು ಸಮವೆನ್ನುವದು ಸರ್ವ ವಿಷಯದಿ ಮುಕ್ಕಣ ಪ್ರಮುಖರ ಜ್ಞಾನ ದಾತೃವಿಗಿನ್ನು ಸಮವುಂಟೆ | ಜ್ಞಾನ ವಾಚಕ ಹನುಮ ಶಬ್ದವು ಪೂರ್ಣ ಹರಿ ಸಂದೇಶವೈದನು ಜಾನಕಿಗೆ ನಿರ್ದೋಷ ವಾಕ್ಯಗಳನ್ನು ಧೀಮಂತ 6 ಪಂಚರಾತ್ರಾಗಮ ಪುರಾಣ ವಿರಂಚಿ ಜನಕನ ತೋರ್ಪವೇದವು ವಂಚಿಸದ ಇತಿಹಾಸಗಳು ಕೂಡುತಲಿ ಸಪ್ತಗಳ | ಮಿಂಚಿಸುತ ಸುಜ್ಞಾನ ಪಾಪದ ಸಂಚಯ ತರಿವ ಕಾರಣದಿ ಬಲಿವಂಚಕನ ಭಕ್ತರು ಕರೆಯುವರು ಸಪ್ತಶಿವ ವೆಂದು7 ಶಾಸ್ತ್ರ ವಚನಕೆ ಮಾತೃ ವೆಂಬರು ಸಪ್ತ್ರ ಶಿವಕರ ಮಾತೃಗಳ ಧರಿಸಿಪ್ಪ ನಿವನೆಂದು | ಖ್ಯಾತನಾಗಿಹ ಭೀಮ ನಾಮದಿ ತೀರ್ಥವೆನ್ನಲು ಶಾಸ್ತ್ರವಿದಿತವು ಮತ್ತೆ ಮಧುವೆನೆ ಸುಖವು ಮುಕ್ತಿಯನೀವ ಶಾಸ್ತ್ರವನು 8 ಇತ್ತ ದೇವನೆ ಮಧ್ವನೆಂಬರು ಸುತ್ತುತೀತ್ರಯ ನಾಮದರ್ಥವ ನಿತ್ಯ ತಿಳಿಯುತ ಪಠಿಸಿ ಪಾಡಲುವಾಯು ದೇವನನು | ಭಕ್ತ ಬಾಂಧವನಾತ ವಲಿಯುತ ತತ್ವವೇತ್ತನ ಮಾಳ್ವ ನಿಶ್ಚಯ ಭೃತ್ಯನಾನೆಂತೆಂದು ಮಧ್ವರ ಸಾರಿ ಭಜಿಸುತಿರಿ9 ಪ್ರೌಢ ಮಧ್ವಗೆ ಪೂರ್ಣ ಪ್ರಜ್ಞನೆ ಈತ ಶ್ರುತಿ ಸಿದ್ದ | ಬೀಡು ಮಾಡಿಹ ವಿದ್ಯೆ ನೂಕುತ ತೊಂಡ ನೆಂದಿವರಡಿಗೆ ಬೀಳಲು ಪಾಂಡುರಂಗನ ಬಿಚ್ಚಿ ತೋರುವ ಗೋ ಸಮುದ್ರದಲಿ10 ಏನ ಪೇಳಲಿ ಏನಪೇಳಲಿ ಜ್ಞಾನನಿಧಿ ಸರ್ವಜ್ಞ ಗುರುವರ ತಾನು ಗೈದ ಮಹೋಪಕಾರವ ಮುಕ್ತಿಯೋಗ್ಯರಿಗೆ | ಜ್ಞಾನ ಬಾಹುದೆ ಬಿಟ್ಟರೀತನ ಶೂನ್ಯವೆ ಸರಿ ಎಲ್ಲ ಆತಗೆ ಮನ್ನಿಸುವನೆ ಅನನ್ಯವನು ಹರಿ ಶರಣು ಆಚಾರ್ಯ 11 ಈತನೇ ಆನಂದ ತೀರ್ಥನು ಈತನೇ ಆಚಾರ್ಯ ನಿಶ್ಚಯ ಈತನೇ ಸರಿಮಾತರಿಶ್ವನು ವಾಯುವಿನರೂಪ | ಈತ ಚರಿಸುವ ಶಾಸ್ತ್ರವ್ಯೂಹದಿ ದೈತ್ಯರಿಂದಾಚ್ಛಾದಿತ ಗುಣಯುತ ಆತ್ಮಪೂರ್ಣಾನಂದ ದೇವನ ಶಾಸ್ತ್ರಮಥಿಸುತಲಿ 12 ಸಾರ ವೃಂದಕ್ಕೆ ಚುಚ್ಚುವನು ದುರ್ವಾದಿ ಮತಗಳ ಕೆಚ್ಚೆದೆಯವನು ಗರ್ಜಿಸುತವೇದೋಕ್ತವಾಕ್ಯಗಳ | ಹೆಚ್ಚು ಹೆಚ್ಚೇ ಸರಿಯು ವಿಷ್ಣುವು ಸ್ವಚ್ಛ ಪೂರ್ಣಾನಂದ ಸುಖಮಯ ಪೃಚ್ಛ ಪರಿವಾರ ಸರಿ ವಿಧ್ಯಾದಿಗಳು ಹರಿಗೆಂದು 13 ಕಚ್ಚಿಲತೆಗಳ ಬಿಸುಡುವಂದದಿ ನುಚ್ಚು ಮಾಡುವ ಪ್ರಶ್ನೆನೀಕವ ಅಚ್ಚನಾರಾಯಣನೆ ಪ್ರೇರಕ ನಿವಗೆ ಜನಕನಿಹ | ಮೆಚ್ಚು ಮಗ ಶ್ರೀ ಲಕ್ಷೀ ದೇವಿಗೆ ರಚ್ಚೆತನುವನು ಕಿತ್ತುವೋಡಿಸಿ ಹೆಚ್ಚಿಸುವ ಸುಜ್ಞಾನ ದೀಪವ ಹರಿಯ ಪ್ರಧಮಾಂಗ14 ಕೊಟ್ಟು ಉಂಗುರ ಸುಟ್ಟುಲಂಕೆಯ ಬಿಟ್ಟು ಕಾಮವ ಮೆಟ್ಟಿಖಳರನು ಜಟ್ಟಿ ಹನುಮನು ಪಟ್ಟ ಪುತ್ರನ ಪದವಿ ಸಾಧಿಸಿದ | ಹುಟ್ಟಿ ಕುಂತಿಲಿ ಕುಟ್ಟಿ ಕುರುಕುಲ ಇಟ್ಟು ಮನದಲಿ ದಿಟ್ಟ ಕೃಷ್ಣನ ಅಟ್ಟಿ ಹಾಸದಿ ಮೆರೆದ ಭೀಮನು ಜ್ಞಾನ ಭಾಸ್ಕರನು15 ಹುಟ್ಟು ಸಾವಿನ ಕಟ್ಟು ಬಿಡಿಸಲು ಘಟ್ಟ ದಡಿಯಲಿ ಭಟ್ಟನೆನಿಸುತ ಬಟ್ಟೆ ತವಕದಿ ಭ್ರಷ್ಟದಸ್ಯುಗಳ | ಕೆಟ್ಟ ಮತಗಳ ಸುಟ್ಟು ವಾದದಿ ಸೂತ್ರ ಭಾಷ್ಯವ ನೆಟ್ಟ ಸಂತರ ಮನದಿ ವಿಷ್ಣುವ ಶ್ರೇಷ್ಠಗುರುಮಧ್ವ16 ಏಕೆ ಭಯ ನಮಗಿನ್ನು ನಿರಯದ ಏಕೆ ಸಂಶಯ ಮುಕ್ತಿ ವಿಷಯದಿ ಏಕೆ ಕಳವಳ ಮಧ್ವರಾಯರ ಶಾಸ್ತ್ರ ಪೀಯೂಷ | ಜೋಕೆಯಿಂ ಪ್ರತಿದಿನವು ಸೇವಿಸೆ ಶ್ರೀಕಳತ್ರನು ಕೈಯ ಬಿಡುವನೆ ನಾಕಪತಿಯಿಂಬಿಟ್ಟು ಸಲಹುವ ಶಾಸ್ತ್ರಸಿದ್ಧವಿದು 17 ಹೆಚ್ಚು ಮಾತೇಕಿನ್ನು ಹರಿಮನ ಮೆಚ್ಚುಯೆನಿಸಿಹ ಮಧ್ವರಾಯರು ಬಿಚ್ಚಿತೋರಿದ ತೆರದಿ ಶೃತಿಗಳ ಭಜಿಸಿಖಳ ಜನಕೆ | ಬಚ್ಚಿಡುತ ವಿಜ್ಞಾನ ಮರ್ಮವ ನುಚ್ಚು ನೂಕುತ ದುರ್ಮತಕಿಡಿರಿ ಕಿಚ್ಚು ಕಮಲೇಶ ನೊಲಿಮೆಗೆ ಬೇರೊಂದು ಪಥವಿಲ್ಲ 18 ನಮ್ಮಹಿರಿಯರ ಖಿನ್ನನುಡಿಗಳ ನೊಮ್ಮನದಿ ನೀವೆಲ್ಲ ಕೇಳಿರಿ ರಮ್ಮೆಯರಸಗೆ ಸಮ್ಮತದ ಸಚ್ಛಾಸ್ತ್ರದರ್ಪಣವ | ಹೆಮ್ಮೆಯಿಂದಲಿ ಕೊಟ್ಟು ಬಂದೆವು ಒಮ್ಮೆಯಾದರು ನೋಡುವರೆ ಈ ನಮ್ಮ ಸಂತತಿ ಹಾ ಹರಿ ಹರೀಯೆಂಬ ಕ್ರಾಂತಿಯುತ19 ಉಣ್ಣಿರುಣ್ಣಿರಿ ಮಧ್ವಕಂದರೆ ಭವ ಹುಣ್ಣುವಳಿಯಿರಿ ಅಣ್ಣ ಪ್ರಾಣನದಯವ ಯಾಚಿಸಿಘನ್ನ ಶಾಸ್ತ್ರಾನ್ನ | ಅನ್ನ ಶೃತಿಗಳು ವಿವಿಧ ಸ್ಮøತಿಪ ಕ್ವಾನ್ನ ಪಾಯಸ ಗೀತೆ ಭಕ್ಷ್ಯಗಳೆನ್ನಿ ಬಗೆ ಬಗೆ ಸರ್ವ ಮೂಲವ ಸೂತ್ರಗಳೆ ಸಾರು 20 ತುಪ್ಪವೆನ್ನಿರಿ ನ್ಯಾಯ ಸುಧೆಯನು ಗೊಪ್ಪರಾಜರ ಗ್ರಂಥ ಹಲ್ಪವು ಅಪ್ಪರಾಯರ ವಾಣಿ ಕ್ಷೀರವು ದಾಸ ಸಾಹಿತ್ಯ | ತಪ್ಪದೆಲೆ ತಿಂಬಂಥ ತಿಂಡಿಯು ಚಪ್ಪರಿಸಿ ಭಾರತದ ಕೂಟನು ವಪ್ಪುವನು ಶ್ರೀ ಕೃಷ್ಣ ದೇವನು ಭಕ್ತ ನುಣ್ಣಲಿವ 21 ಎಂತು ಪೊಗಳಲಿ ನಿಮ್ಮ ಗುರುವರ ಹಂತ ಸುರಗಣ ವೆಲ್ಲ ನಿಮ್ಮಡಿ ನಿಂತು ಪಡೆದರು ಜ್ಞಾನ ಪ್ರಾತರ್ನಾಮಕನೆಶರಣು | ಕಂತೆ ಮತಗಳ ನಾಶಗೈದನ ನಂತ ಮಹಿಮನೆ ದೀನ ನಾನಿಹೆ ಕುಂತಿ ನಂದನ ನೀನೆ ತಿಳಸೈ ಸಕಲ ಶಾಸ್ತ್ರಾರ್ಥ 22 ಮೂರ್ತಳೆನಿಸುವ ಚಂದ್ರಮಾನಿನಿನಾಥ ಸೂರ್ಯ ನೊಳ್ ಆದಿತ್ಯ ನಾಮದಿ ನಿಂತು ದಿಕ್ಪತಿಗಳಿಗೆ ಶಕ್ತಿಗಳ | ಇತ್ತು ಸೃಷ್ಠಿಯ ಕಾರ್ಯ ವೆಸಗುವೆ ಉತ್ತರಾಯಣ ಪಗಲು ಮಾನಿಯೆ- ನಿತ್ಯ ಪ್ರೇರಿತ ನೀಪ್ರಜಾಪತಿನಾಮ ಹರಿಯಿಂದ 23 ಖ್ಯಾತ ಮೂರ್ತಾ ಮೂರ್ತ ಧಾರಕೆ ತತ್ವಪತಿಗಳ ಪೋಷತನುವಲಿ ಮೃತ್ಯುಹಾಗಶನಾಪಿಪಾಸಾಪಾನ ನಾಮಗಳ | ಎತ್ತಿ ನಡಿಸುವೆ ದೇಹ ಕಾರ್ಯವ್ರಾತ ಬಿಡಲೇನೊಂದು ನಡೆಯದು ಮಾತರಿಶ್ವನೆ ನಿಧಿಗು ಆರ್ಯುರ್ದಾತ ನೆನಿಸಿರ್ಪೆ 24 ಅನ್ನ ವಿಧಿಯಿಂ ಕೊಂಬೆ ಸಮಸರಿ ಯನ್ನ ಬ್ರಹ್ಮಗೆ ಜೀವ ಗಣತಾವುಣ್ಣಲಾರರು ನಿನ್ನ ಬಿಡೆ ಪ್ರಾಣದಿ ಪಂಚಕನೆ | ಸ್ವಪ್ನ ನಿದ್ರಾ ಸಮಯದೊಳ್ ಹರಿಯನ್ನು ಕೂಡಿರೆ ಕರಣಪರು ಘನಯಜ್ಞ ನಡಿಸಿ ಸರ್ಮರ್ಪಿಸುವೆ ನೀನೊಬ್ಬ ದೇವನಿಗೆ 25 ನಿನ್ನ ನಂಬಿದ ಭಕ್ತನಿಗೆ ಭವ ಹುಣ್ಣು ಮುಟ್ಟದು ವಿಷ್ಣು ವಲಿಯುತ ಮನ್ನಿಸುವ ಹರಿಯಾಜ್ಞೆಯಿಂಮುಕ್ತಿದನು ನೀ ಹೌದು | ವಿಶ್ವ ವಂಶನೆ ನಿನ್ನ ಮಹಿಮೆಯಗಣ್ಯ ಸಿದ್ಧವು ನಿನ್ನ ಧೊರೆ ಹರಿ ಒಬ್ಬ ಜೀವೋತ್ತುಮನೆ ಅಶರೀರ26 ಜ್ಞಾನ ಬಲ ಐಶ್ವರ್ಯಗಳು ಪರಿಪೂರ್ಣ ಸರಿ ವೈರಾಗ್ಯ ಹಾಗೆಯೆ ಪ್ರಾಣನಿನ್ನಲಿ ಕರಿಸುವೆಯೊ ಆಧ್ಯರ್ಧ ನಾಮದಲಿ | ಮಾನ್ಯ ವಿಷ್ಣುಸಹಾಯ ನಿನಗೈನ್ಯೂನ ವಿಲ್ಲವು ಯಾವ ತೆರದಲುಕಾಣೆ ಅಪಜಯ ಜೀವ ಸಾಧನೆಯೆಲ್ಲ ನಿನ್ನಿಂದ 27 ಶೇಷಗಸದಳ ನಿನ್ನ ಪೊಗಳಲು ಶೇಷ ಸರಿ ಬಡದಾಸನಹೆ ವಿಶ್ವಾಸದಿಂ ಸಂವತ್ಸರನೆ ನೀಕಾಯಬೇಕೆಂಬೆ | ಏಸು ಜನ್ಮಗಳನ್ನು ಕೊಟ್ಟರು ಶ್ವಾಸ ಪತಿತವ ಮತದಿ ಪುಟ್ಟಿಸಿ ದಾಸ ಭಾಗ್ಯವ ನೀಡು ಹರಿಯೊಳ್ ಶುದ್ಧ ಭಕ್ತಿಯುತ28 ಎರಡು ಸಹ ಮೂವತ್ತು ಲಕ್ಷಣ ವಿರುತಿಹ ಜಗದ್ಗುರುವೆ ವಿಷ್ಣುವಿಗೆರಡು ಎರಡು ಸರಿಯೆಂತೆಂದು ಸ್ಥಾಪಿಸಿ ಎರಡು ವಿದ್ಯೆಗಳಿರವು ತೊರುವ ಲೆರಡು ಸುಖಗಳ ಪಡೆಯೆಸಾಧನ ಮಾರ್ಗ ನೀಡ್ವೆಬತ 29 ಸರ್ವ ಶಕ್ತನೆ ಶರ್ವ ವಿನುತನೆ ಸರ್ವ ಸರ್ವಗ ಹಿರಿಯ ತನಯನೆ ಸರ್ವ ಜಗದಾಧಾರ ಪೋಷಕ ಸರ್ವ ತೋವರನೆ | ಸರ್ವ ಕಾಲದಿ ಸರ್ವ ದೇಶದಿ ಸರ್ವ ಗುಣದಿಂ ಹರಿಯ ಯಜಿಸುವ ಸರ್ವ ಸದ್ಗುಣ ಪೂರ್ಣ ದೋಷವಿದೂರ ಸರ್ವಜ್ಞ 30 ಹಿಂದೆ ಪೂರ್ವಜರೆಲ್ಲ ಕೂಡುತಲೊಂದು ಪಾಯವಗೈದು ಮೃತ್ಯುವತಂದು ದಿವಿಜ ವೃಂದಕೆ ಕುಂದು ವದಗಿಸಲು | ಕಂದುತಳಿಯಲ್ ನಿಖಿಲ ಸುರಗಣ ಕುಂದು ಮೃತ್ಯುವ ಗೈದು ಪುಡಿಪುಡಿ ವಂದನಾರ್ಹನು ಒಬ್ಬನೀನೇ ಯೆಂದು ಸ್ಥಾಪಿಸಿದೆ 31 ಪಾಹಿ ಅಮ ಶುಚಿ ಯೊಗ ಕ್ಷೇಮನೆ ಪಾಹಿ ಅಮರಲಲಾಮ ಅನಿಲನೆ ನಿರವದ್ಯ | ಪಾಹಿ ಸತ್ಯ ವಿಶುದ್ಧ ಸತ್ವನೆ ಪಾಹಿ ಲಕ್ಷ್ಮೀ ಪುತ್ರ ಭೃತ್ಯನೆ ಪಾಹಿ ಜೀವಗ ಬಾದರಾಯಣಪ್ರೀಯ ಮಹರಾಯ 32 ಪಾಹಿ ಹನುಮನೆ ಭೀಮ ಮಧ್ವನೆ ಪಾಹಿ ದುರ್ಮತ ಧ್ವಾಂತ ಸೂರ್ಯನೆ ಪಾಹಿ ನತಜನ ಪಾಲ ಪ್ರಾಣನೆ ಪಾಹಿ ಶ್ರೀಸುತನೆ | ಪಾಹಿ ಜಗದಾಧಾರ ಸೂತ್ರನೆ ಪಾಹಿ ಸಾಮನೆವಂಶ ದೂರನೆ ಪಾಹಿ ಹರಿಯಚ್ಛಿನ್ನ ಭಕ್ತನೆ ಪಾಹಿ ವಿಜ್ಞಾನ 33 ಪಾಹಿ ಋಜುಪತಿ ವಾಯುಕೂರ್ಮನೆ ಪಾಹಿ ಜೀವ ಲಲಾಮ ಗುಣನಿಧಿ ಪಾಹಿ ಶುಚಿ ಸರ್ವಜ್ಞ ಸಾಮಗಭಾವಿ ಶತಮೋದ | ಪಾಹಿ ಸತ್ಯನೆ ಕಲಿವಿದಾರಣ ಪಾಹಿ ಗುರು ಗೋವತ್ಸ ರೂಪಿಯೆ ಪಾಹಿ ಮಿಷ್ಣು ಪದಾಬ್ಜಮಧುಕರ ಭಾರತೀ ಕಾಂತ 34 ಪಾಹಿ ಅಮೃತನೆ ವಿಶ್ವರಜ್ಜುವೆ ಪಾಹಿ ಬೃಹತೀ ಛಂದ ಮಾನಿಯೆ ಪಾಹಿ ಹಂಸೋಪಾಸಕ ಪ್ರಭು ಆಖಣಾಶ್ಮಸಮ | ಪಾಹಿ ಸಾಯಂಖ್ಯಾತ ಜೀವಗ ಪಾಹಿ ಜಗಚೇಷ್ಠಾ ಪ್ರವರ್ತಕ ಪಾಹಿ ಅನಿಲನೆ ಶೇಷವಿಪಶಿವ ವಂದಿತಾಂಘ್ರಿಯುಗ 35 ಪಾಹಿ ಪರಿಸರ ಪಂಚ ಕೋಶಗ ಪಾಹಿ ಗುಣನಿಧಿ ಕೊವಿದೋತ್ತಮ ಪಾಹಿ ನಮಿಸುವೆ ಅಣುಮಹದ್ಘನ ರೂಪ ವಿಖ್ಯಾತ | ಪಾಹಿ ವಿಶ್ವಗ ವ್ಯಸನ ವರ್ಜಿತ ಪಾಹಿ ಹರಿಯನು ನಿತ್ಯನೋಳ್ಪನೆ ಪಾಹಿ ವಿಷ್ಣುದ್ವಾರ ಶರಣೈ ಪಾಹಿ ಹರಿ ಸಚಿವ 36 ಜಯ ಜಯವು ಶ್ರೀ ಹನುಮ ಭೀಮಗೆ ಜಯ ಜಯವು ಶ್ರೀ ಮಧ್ವರಾಯಗೆ ಜಯ ಜಯವು ತತ್ವೇಶರರಸಗೆ ಮುಖ್ಯಪ್ರಾಣನಿಗೆ | ಜಯ ಜಯವು ಜಯತೀರ್ಥ ಹೃಸ್ಥಗೆ
--------------
ಕೃಷ್ಣವಿಠಲದಾಸರು
ವಾಯಸ ಸಿದ್ಧಿ ಕೊಟ್ಟಾವಮ್ಮ ಒಲಿದಾಳೆ ದೂತೆ ಶ್ರೀಶನ ದಯ ಸೂಸಿತುಳುಕುತ ಶ್ರೇಯಸ್ಸು ಬರಲೆಂದು ಪ. ಶುದ್ಧ ಮುತ್ತು ರತ್ನದವಸ್ತ ತಿದ್ದಿಸೀರಿ ಕುಪ್ಪುಸ ತೊಟ್ಟುಬದ್ಧವಾದ ತಳಪಿಲಿಂದ ಮುದ್ದು ಸುರಿಯುತ1 ಪುಂಡರಿಕಾಕ್ಷನ ಪಾದಕೆ ದಂಡಪ್ರಣಾಮವ ಮಾಡಿ ಕೊಂಡಾಡಿ ಕೃಷ್ಣನ ನಡೆದಳು ಪಾಂಡವರರಮನೆಗೆ2 ಭಾವೆ ರುಕ್ಮಿಣಿ ದೇವಿಯರಿಗೆ ಭಾವ ಭಕ್ತಿಯಿಂದ ನಮಿಸಿ ಸ್ವಾಮಿ ಕಾರ್ಯ ಸಾಧಿಸಿ ನಿಸ್ಸೀಮಳು ನಡೆದಾಳೆÉ 3 ಅಂದಣ ಏರಿದಳು ದೂತೆ ಬಂದವು ನೀರಿನ ಕುಂಭಚಂದದ ಸೇವಕರು ಮಾರ್ಗ ಮುಂದೆ ನಡೆದರು 4 ಹಾಲು ಮೊಸರು ಹಲವು ಫಲ ಸಾಲುಸಾಲು ಮುತ್ತೈದೆಯರು ಮೇಲಾದ ವಿಪ್ರರು ಮೇಲೆ ಮೇಲೆ ಬಂದರು5 ಧೀರ ಧರ್ಮರಾಯನ ಸಭೆüಯ ದ್ವಾರಪಾಲಕಳಾಗಿ ದೂತೆ ವೀರ ಮುದ್ರಿಕೆಯ ಕೊಟ್ಟು ನೀರೆ ನಡೆದಳು6 ಶ್ರೀದೇವಿ ದೂತೆ ರಾಮೇಶನ ಪಾದಸ್ಮರಣೆಯ ಮಾಡಿಮೋದಭರಿತಳಾಗಿ ರಾಯನ ಪಾದಕ್ಕೆರಗಿದಳು 7
--------------
ಗಲಗಲಿಅವ್ವನವರು
ವಾಯುದೇವರು ಇದು ಏನು ಕೌತುಕವೊ ಹನುಮರಾಯ ಪದುಮನಾಭನ ದಯಾಪಾತ್ರ ಶುಭಕಾಯ ಪ. ಅಂಜನೆಯ ಸುತನಾಗಿ ಅಂದು ಶ್ರೀ ರಾಮರಡಿ ಕಂಜಗಳ ಸೇವಿಸುತ ಮುದ್ರಿಕೆಯನು ಕಂಜಾಕ್ಷಿಗಿತ್ತು ಕ್ಷೇಮವನರುಹಿ ಬಂದಾಗ ಸಂಜೀವ ನಿನಗಿಷ್ಟು ತೊಡಿಗೆ ಕೊಟ್ಟಳೆ ದೇವಿ 1 ಮರುವಾರ್ತೆ ತಂದು ರಾಮಗರುಹಿ ಸೇತುವೆಯ ಗಿರಿಯಿಂದ ಕಟ್ಟಿ ಕಾರ್ಯವ ಸಾಧಿಸೆ ಸಿರಿಸಹಿತ ಶ್ರೀ ರಾಮ ರಾಜ್ಯಕೆ ಬಂದಾಗ ಮರುತ ನಿನಗಿಷ್ಟು ಆಭರಣ ಕೊಟ್ಟನೆ ಪೇಳು 2 ಎಲ್ಲೆಲ್ಲಿ ನಿನ್ನ ಕೀರ್ತಿಯ ಕೇಳೆ ಕೌಪೀನ ವಲ್ಲದಲೆ ಮತ್ತೊಂದರ್ಹಂಬಲಿಲ್ಲ ಮಲ್ಲ ವೈರಾಗ್ಯದಲಿ ಎಂಬುದನು ಕೇಳಿದೆನು ಇಲ್ಲಿ ನೋಡಲು ಇಷ್ಟು ವೈಭವವ ಪಡುತಿರುವೆ 3 ರಾತ್ರೆಯಲಿ ಕೀಚಕನ ಕೊಲ್ಲಲೋಸುಗ ಅಂದು ಮಿತ್ರೆ ರೂಪವ ಧರಿಸಿ ಶೃಂಗರಿಸಿಕೊಂಡು ಕತ್ತಲೊಳು ನೋಡಿಕೊಳ್ಳಲು ಆಗಲಿಲ್ಲೆಂದು ಹಸ್ತ ಕಡಗ ಹರಡಿ ಇಟ್ಟು ಮೆರೆಯುವೆಯೊ 4 ಹುಟ್ಟುತಲೆ ಸಂನ್ಯಾಸ ತೊಟ್ಟು ಬ್ಯಾಸತ್ತೊ ನಡು ಪಟ್ಟಿ ಉಡುದಾರ ಉಡುಗೆಜ್ಜೆ ಕಾಲ್ಗಡಗ ಇಟ್ಟು ನಾನಾ ಬಗೆ ಕದರುಂಡಲಿಯಲಿ ನೆಲಸಿ ಶ್ರೇಷ್ಠ ಗೋಪಾಲಕೃಷ್ಣವಿಠ್ಠಲನ ಪ್ರಿಯನಾದಿ 5
--------------
ಅಂಬಾಬಾಯಿ
ವಿಜಯದಾಸರ | ದಿವ್ಯ ವಿಜಯ ನೆನೆವರ ಪ ವಿಜಯಸಾರಥಿಯ ಮನದಿ ಭಜಿಪ ಸತ್ವರ ಅ.ಪ. ಆದಿದೇವನ | ಒಲುಮೆ ಸಾಧಿಸಿದನ ಮೋದ ಭರಿತನ 1 ಮನದಿ ಹರಿಯನು | ಸತತ ಕುಣಿಸಿ ನಲಿವನು ಅಮೃತ ಖಣಿ ವಿಶಿಷ್ಟನು 2 ಭಕ್ತಿಯುಕ್ತಿಯ | ಮಹಾವಿರಕ್ತಿ ಉಕ್ಕುತ ಭಕ್ತ ಜನರಿಗೆ ಬಿಂಬ ವ್ಯಕ್ತಿ ಮಾಡಿದ 3 ತುಂಬಿ ವೈಭವ ಕದಂಬ ಸಲಹುವ 4 ಭಾರತೀಪತಿ | ಇವರ ವೀರಸಾರಥಿ ಸಾರಿ ಭಜಿಪರ ಸಕಲ ಭಾರವಹಿಸುವ 5 ಅಪರೋಕ್ಷ ಕೊಡುವನು ತ್ರಕ್ಷವಲ್ಲಭಾ ಇವರ ದಕ್ಷರೆನಿಸಿಹ 6 ದಾಸರತ್ನನಾ | ದಯವ ಲೇಸು ಪಡೆಯಲು ಸೂಸಿ ಬರುವನು ಶ್ರೀ ಜಯೇಶವಿಠಲ 7
--------------
ಜಯೇಶವಿಠಲ