ಒಟ್ಟು 1100 ಕಡೆಗಳಲ್ಲಿ , 102 ದಾಸರು , 994 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುಚರಣ ಪೂಜೆಯನು 'ರಚಿಸುವೆನೀಗಪರಮಾತ್ಮನೆಂದೆಂಬ ಸ್ಥಿರಮನದಿ ಬೇಗ ಪವರಮಂತ್ರರೂಪದಲಿ ಗುರು ತಾನು ದಯದಿಂದಭರದಿಂದ ಹೃದಯಮಂದಿರಕೆ ಬರಲಾಗಿಗುರುತರದಹಂಕಾರಶಯನದಿಂ ಮುರಿದೆದ್ದುಬರುವೆನಿದಿರಾಗಿ ಕರೆತರುವೆನೊಡಗೂಡಿ 1ಬ್ರಹ್ಮಕಮಲದಲೊಡೆದು ಜ್ಞಾನನಾಳದಿ ಕೂಡಿರಮ್ಯದಳವೆಂಟುಳ್ಳ ಕಮಲ ಮಧ್ಯದಲಿನಮ್ಮ ಗುರುಮೂರ್ತಿಯನು ಸಂಭ್ರಮದಿ ಕುಳ್ಳಿರಿಸಿವೊಮ್ಮನದಲಘ್ರ್ಯಾದಿಗಳನು ಭಕುತಿಯಲಿತ್ತು 2ಕರಗಳೆರಡುಳ್ಳ ಹರಿ ನಯನವೆರಡರ ಹರನುವರಮುಖ'ದೊಂದರಲಿ ವಾಗೀಶನೆನಿಸಿಪರಿಹರಿಸಿ ಗುಣಗಳನು ಪರಬ್ರಹ್ಮವಾಗಿರುವಗುರುವರನ ಮೂರ್ತಿಯನು ನೆರೆ ನೋಡಿ ಮನದೊಳಗೆ 3ಅ'ವೇಕವಂ ಪರಿದ ಗುರುಪದಕೆ ಪಾದ್ಯವನುಸು'ವೇಕವೆಂಬಘ್ರ್ಯವನು ಸ'ತ ಕೊಟ್ಟುಅ'ವೇಕದಿಂ ಬಂದ ಜೀವಭಾವವ ಬಿಡಿಸಿಕ'ವರನು ನೀನೆಂಬ ಶುದ್ಧಾಚಮನದಿಂದ 4ಪರಮಪಾವನರೂಪ ಸ್ನಾನದುಪಚಾರದಲಿಎರಡಿಲ್ಲವೆಂದೆಂಬ ಶುಭ್ರ ವಸ್ತ್ರದಲಿಬರೆದು ತಾ ಜೀವರೊಳು ಸೂತ್ರಾತ್ಮನಾದಡೆಯು ಬೆರೆಯದಿಹನೆಂತೆಂಬ ಸೂತ್ರೋಪಚಾರದಲಿ 5ಶರಣಾಗತರ ಕಾಯ್ವ ಗುಣಗಣಗಳಾಭರಣಪರಿಪರಿಯ ಕಾಮಗಳ ಹೊದ್ದದನುಲೇಪನೆರೆ ನಿವಾರಿತವಾದ ವಾಸನಾಕ್ಷಯ ಪುಷ್ಪಸರಗಳೀ ಪರಿಭಾವನೆಗಳೆಂಬ ಭಕ್ತಿಯಲಿ 6ಜಡ ದುಃಖ ಪುಸಿಗಳಿಗೆ ಬೇರೆಂಬ ಧೂಪದಲಿಎಡೆಬಿಡದ ಜ್ಯೋತಿಃಸ್ವರೂಪ ದೀಪದಲಿಬಿಡದ ಸುಖದನುಭವದ ದಿವ್ಯ ನೈವೇದ್ಯದಲಿಜಡಕೆ ಮಂಗಳ'ತ್ತ ಬಗೆಯ ತಾಂಬೂಲದಲಿ 7ನಿತ್ಯ ಪ್ರಕಾಶದಲಿ ಪೊಳೆವ ಮಂಗಳ ದೀಪಸತ್ಯದಾಧಾರದಲಿ ಸುಳಿವ ಕರಣಗಳಮತ್ತೆ ಸತ್ಯದೊಳಿರಿಸುತಿಹ ಮಂತ್ರಪುಷ್ಪದಲಿಸುತ್ತುವರಿದಿಹ ವಸ್ತುವೆಂದು ಬಲವಂದು 8ಘನ ಮ'ಮನಂಘ್ರಿಯಲಿ ತನು ಮನಾದಿಗಳನ್ನುನಿನಗೆ ಸಂದುದೆನುತ್ತಲಿತ್ತು ನ'ುಸುತ್ತಾಕನಕಮಯವಾದ ಶ್ರೀ ತಿರುಪತಿಯ ವೆಂಕಟನತನುರೂಪ ನೀಲಕಂಠಾರ್ಯರನು ಬಿಡದೆ 9ಓಂ ಸನಾತನಾಯ ನಮಃ
--------------
ತಿಮ್ಮಪ್ಪದಾಸರು
ಗುರುವರÀ ತುಲಸೀರಾಮಯ್ಯಾ ಪೂರ್ವದ್ವಾರಗುರುಸ್ತುತಿ ಮಂಪಾಲಯಾ 'ಜಿತೇಂದ್ರಿಯಾ ಪಪುರಪುರವರ ತವ ತಿರುತಾರೊತ್ಸವನಿರತಸೇವಕೃತನುತ ಜನವೈಭವ 1ಪತಿತಜನಾವನ ಪದ್ಮಸುಲೊಚನಪ್ರಥಮಾಶ್ರಮ ಘನಕೃತಮುಖರಂಜನ 2ವೆಂಕಟಲಕ್ಷಾಂಬ ಸುಗರ್ಭೊದ್ಭವ ಪಂಕಜಭ' ಸಂಪದಯುತಪ್ರಭಾವ 3ಕೇಶವಪದನಿಜ ದಾಸಸ್ವರೂಪಾಆಶಯೇಶಯ ಜಿತವರಪ್ರತಿಭಾ 4ಶುಕಮುನಿ ವಾಗ್ಭರಿಸೂನೃತಚರಿತಸಕಲಪಂಡಿತೊತ್ತಮಜನ'ನುತ 5ಮ'ಸೂರ್ಪುರವರ ಮ'ಪತಿಸಮುಖಅ'ಪತಿರೀತ್ಯಾ ಹರಿಗುಣಕಥಕಾ 6ಚಾಮನೃಪಾಲ ಸುಜ್ಞಾನಬೊಧಿನೀಸಮಾಜಶೇಖರ ಸಾತ್ವಿಕಧೀಮಣಿ 7ಶ್ರೀರಾಮೋತ್ಸವ ಸೇವಾಬ್ದಪ್ರತಿಸಾರ್ಥಶತಂ ನಿಷ್ಕನ್ನಾ ರ್ಕತ 8ಭಗವದಾಂಶ ಸಂಭೂತ ಕೃಪಾಕರಅಗಣಿತ ಸುಗುಣಾಲಂಕೃತಧೀವರ 9ಮಂಗಳಕರ ಗುರುತುಲಸೀರಾಮಾರಂಗಸ್ವಾ'ುದಾಸ ಹೃದಯಸುಧಾಮಾ 10
--------------
ಮಳಿಗೆ ರಂಗಸ್ವಾಮಿದಾಸರು
ಗುರುವಿನ ಚರಣವ ನೆನೆವುತಲನುದಿನ ಪರದೊಳು ದೈವದ ನೆಲೆ ನೋಡು ಪ ಗುರುವಿನ ಕರುಣಕಟಾಕ್ಷವದಲ್ಲದೆ ನರರಿಗೆ ದೊರಕದು ಪರಸುಖವು ಹಿರಿಯರ ಅಭಿಮತವಿಲ್ಲದ ಗೃಹದೊಳು ಕರೆಕರೆಯಾಗಿದೆ ಕೌತುಕವು 1 ಸ್ಥಿರವಾಗಿ ನಿಲ್ಲದ ಮನವು ಭ್ರಮೆಯೊಳು ನೆರೆವುದು ತನ್ನೊಳು ಘಾತಕವು ಸೆರೆವಿಡಿಯಲು ಹರಿವಿಡಿದಿಹನಾತನ ತೊರೆವುದು ಭವಭಯ ಸೂತಕವು 2 ಯೋಗಿಯ ಹೃದಯದಿ ಸಕಲಾಗಮ ಸಮ ನಾಗಿಯೆ ತೋರ್ಪುದು ಧೃಢವಾಗಿ ಸಾಗರ ಸುತ್ತಿದ ಭೂಭಾಗದ ಸರಿ ಯೋಗಿಯ ದೃಷ್ಟಿಯೆ ಘನವಾಗಿ 3 ಬಾಗಿದ ಕಬ್ಬಿನ ಕೋಲೊಳು ರುಚಿಕರ ವಾಗಿಯೆ ತೋರುವ ಪರಿಯಾಗಿ ರಾಗಿಯ ಶಿಲೆ ತಾ ಬಳಲಿದೆನೆನುತಲೆ ಭಾಗೆಯ ಕೊಂಬುದೆ ಸಮವಾಗಿ 4 ನಂಬದಿರಂಬರ ವಾದಿಯ ಅಂಶಕ ತುಂಬಿದ ಕುಂಭ ದೃಢದಿಂದ ಅಂಬರದೊಳಗಣ ಮೇಘಕೆ ವಾಯುವು ಬೆಂಬಲವಾಗಿಹ ದಯದಿಂದ 5 ಸಂಭ್ರಮದಿಂದಲಿ ಗರ್ಜಿಸಿ ನಾಲ್ದೆಸೆ ಅಂಬಿಸಿ ಪೋಗುವ ಪರಿಯಿಂದ ಅಂಬುಜಭವ ಬರೆದಕ್ಷರ ಮಾಸಲು ಅಂಬರ ಬಯಲಹ ತೆರದಿಂದ 6 ಶುದ್ಧವಶುದ್ಧವು ಆಗಿಹ ಪೃಥಿವಿಯ ಬದ್ಧವಾಗಿಯೆ ತೊಳೆದವರಾರು ಅಬ್ಧಿಯ ಮಧ್ಯದಿ ಎದ್ದ ವಾರಿಗಳನು ತಿದ್ದಿಯೆ ಪಸರಿಸುವವರಾರು 7 ಇದ್ದರೆ ಸರ್ವರ ಭವನದೊಳಗ್ನಿಯ ಮೆದ್ದವ ಶುದ್ದವೆಂಬವರಾರು ಹೊದ್ದಿದ ಮೂರುತಿ ನಾಲ್ದೆಸೆಯೊಳಗಿರೆ ಬದ್ಧವಾಗಿಯೆ ಕಟ್ಟಿಕೊಳಲ್ಯಾರು 8 ಬಯಲೊಳಗಿರುತಿಹ ಬಹು ಝೇಂಕಾರವ ನಯದೊಳು ನೋಡಿದರೇನುಂಟು ಬಯಲೊಳು ಮೂರಕ್ಷರವನೆ ಬಿತ್ತಲು ಮೈಲಿಗೆ ತಳಿಸುವ ಬೆಳೆಯುಂಟು 9 ಸಿರಿ ಸೊಬಗನು ಜಯಿಸುವ ಹಯವನು ಏರುವ ಬಗೆಯುಂಟು ದಯದೊಳು ಶ್ರೀ ಗುರು ವಿರಚಿಸಿಯಿತ್ತರೆ ಕ್ರಮವಿಕ್ರಯದೊಳು ಫಲವುಂಟು 10 ಬೇಡನು ಸಲಹಿದ ಆಡು ತಾ ಯಾಗಕೆ ಬೇಡವೆಂಬವರಾರು ಶಾಸ್ತ್ರದಲಿ ಕಾಡಿನೊಳಿರುತಿಹ ಮೃಗವಾಲದ ಸಿರಿ ನೋಡು ನೀ ನಿತ್ಯದಿರಾಸ್ತ್ರದಲಿ 11 ಕೋಡಗನಾದರು ನೋಡಿಯೆ ಭಜಿಸಲು ಕೂಡುಗು ಹರಿಯ ಪರತ್ರದಲಿ ಕೂಡಿಕೊಂಡರೆ ಪರಬೊಮ್ಮನ ಮನದಲಿ ಆಡದು ಮಾಯದ ಸೂತ್ರದಲಿ 12 ಮೃಗ ಗೋರೋಚನ ಸಹ ಉತ್ತಮವಾಗಿಹ ಮುತ್ತುಗಳು ನಿತ್ಯದಿ ಕ್ರಯಗಟ್ಟಿ ಉಣ್ಣದೆ ಹುಲ್ಲನು ಕಿತ್ತು ಮೆದ್ದಾಡುವ ಅವಸ್ಥೆಗಳು13 ಮೃತ್ಯುವ ಕಾಣದೆ ಬೊಮ್ಮವನಡಗಿಸಿ ಎತ್ತಲಾದರು ಪೋದ ವಸ್ತುಗಳು ಭಕ್ತರಿಗಲ್ಲದೆ ಮನವಪರೋಕ್ಷದ ವಸ್ತುವ ಕಾಣದು ನಿತ್ಯದೊಳು 14 ಜ್ಯೋತಿರ್ಮಯವಾಗಿಹ ವಸ್ತುವಿನೊಳು ಸೂತಕ ಹೊದ್ದುವುದೇನುಂಟು ಜಾತಿವಿಜಾತಿಯೊಳೊಲಿದಿಹ ಶಿವನವ ದೂತರ ನಂ[ಬ]1ದರಾರುಂಟು 15 ಓತು ಆಶುದ್ದವನುಂಡರು ಕವಿಲೆಯೊ ಳ್ಮಾತಿನ ವಾಸಿಯದೇನುಂಟು ನೀತಿ ವಿಹೀನರೊಳುದಿಸಿದ ಲವಣದ ಧಾತು ಕೂಡದೆ ಸವಿಯೇನುಂಟು 16 ಧಾರುಣಿ ಭಾರವ ಮಿತಿಗಟ್ಟಿ ತಕ್ಕಡಿ ಗೇರಿಸಿ ತೂಗಲು ಬಹುದೀಗ ವಾರಿಧಿಯನು ಮುಕ್ಕುಳಿಸಿಯೆ ಬತ್ತಿಸಿ ತೋರಿಸಲಪ್ಪುದು ಬಹು ಬೇಗ 17 ಧಾರುಣಿಯೊಳು ಗುರುಕರುಣದ ಅಳತೆ ಮು ರಾರಿಗು ಸಿಲುಕದು ಅದು ಈಗ ತೋರಿತು ಅಲ್ಲಿ ವರಾಹತಿಮ್ಮಪ್ಪ ಕು ಮಾರರು ವಾಜಿಯ ತಡೆದಾಗ 18
--------------
ವರಹತಿಮ್ಮಪ್ಪ
ಗುರುವಿನರಿಯದಾರಂಭ ತೋರುವುದ್ಯಾತಕೆ ಡಂಭ ಸುರಮುನಿಗಳಿಗಿದು ಗುಂಭ ಗುರುಮಾರ್ಗವಾಗಿರಾಲಂಬ 1 ಹೃದಯದೊಳಿರಲಙÁ್ಞನ ತುದಿನಾಲಗಿಲ್ಯಾತಕ ಙÁ್ಞನ ಇದು ನಿಜ ಮೋಹಿಸು ಖೂನ ಸಾಧಿಸುದಲ್ಲ ನಿಧಾನ 2 ಅಳಿಯದೆ ಕಾಮಕ್ರೋಧ ಹೊಳುವದ್ಯಾತಕೆ ಬೋಧ ತಿಳಿಯದೆ ಶ್ರೀಗುರುಪಾದ ಬೆಳಿಸುವದ್ಯಾತಕೆ ವಿವಾದ 3 ತತ್ವನರಿಯದ ಕವಿತ್ವ ಯಾತಕಿದು ಅಹಮತ್ವ ಸತ್ವದೊಳಾಗದೆ ಕವಿತ್ವ ಮಿಥ್ಯವಿದ್ಯಾತಕೆ ಮಹತ್ವ 4 ಆಶಿಯನಳಿದರೆ ಸಾಕು ವೇಷದೋರುದ್ಯಾತಕೆ ಬೇಕು ಹಸನಾದರ ರಸಬೇಕು ಭಾಸುದು ಮಹಿಪತಿ ಘನಥೋಕು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುಸ್ತುತಿ ರಾಘವೇಂದ್ರ ಸಲಹೊ ಗುಣಸಾಂದ್ರ ಪ ಭಗವದ್ಗೀತಾ ವಿವರಣ ತಂತ್ರದೀಪ ನಿಗಮತತಿಗೆ ಖಂಡಾರ್ಥವ ರಚಿಸಿ ಖಗರ್ಥಗಳನು ಅತಿ ಸ್ಫುಟವಾಗಿ ವಿವರಿಸಿ ಖಗವಾಹನ ತೋರಪಡಿಸಿದ ಧೀರ 1 ಧರಣಿ ವಿಜರರಿಗೆ ವರಗಳ ಕೊಡುವಂಥ ಸುರತರುವೆ ನಿಂಗೆ ಕರಗಳ ಮುಗಿದು ಪರಮಪುರುಷ ಹರಿಚರಣ ಕಮಲದಲಿ ಸ್ಥಿರವಾದ ಭಕುತಿಯ ಬೇಡುವೆ ಧೀರ 2 ಚಂಡ ಕುಮತಗಳ ಖಂಡಿಸಿ ಬುಧಜನ ಮಂಡಲದೊಳಗೆ ಪ್ರಚಂಡನೆಂದೆನಿಸಿ ಕುಂಡಲಿಶಯನ ಪಾದಮಂಡಿತ ಹೃದಯ ಭೂ ಮಂಡಲದೊಳಗೆ ಅಖಂಡಲನಾದ 3 ಶ್ರದ್ಧೆಯಿಂದಲಿ ವರ ಮಧ್ವಾಚಾರ್ಯರ ಮತ ಪದ್ಧತಿ ಬಿಡದಂತ ಬುದ್ಧಿಯನಿತ್ತು ಉದ್ಧರಿಸಯ್ಯ ಕೃಪಾಬ್ಧಿಯೇ ಬುಧಜನಾ ರಾದ್ಯಚರಣ ಪರಿಶುದ್ಧ ಚರಿತ್ರ 4 ಕಾಮಜನಕನಾದ ನಾಮಗಿರೀಶ್ವರಿ ಸ್ವಾಮಿ ನೃಹರಿಪಾದ ತಾಮರಸಂಗಳ ಪ್ರೇಮದಿ ಪೂಜಿಪೆನೆಂಬೊ ಕಾಮಿತವರ ನೀಡೊ ಶ್ರೀ ಮತ್ಸುಧೀಂದ್ರಕರ ತಾಮರಸಭವನೆ 5
--------------
ವಿದ್ಯಾರತ್ನಾಕರತೀರ್ಥರು
ಗೋಪಾಲ ಪಾಲಿಸೊ ನಿನ್ನ ಪಾದಸೇವಕನಿವನೆಂದು ನೀ ಭಾವಿಸಿ ಗೋಪಾಲ ಪಾಲಿಸೊ ಪ ನಾರಿಜನರುಟ್ಟ ಸೀರೆ ಸೆಳೆದು ತಾ ಭಾರಿ ಮರವನ್ನೇರಿ ವಿನೋದವ ತೋರಿದ ಸುರರಿಪು ವೈರಿಯೇ ಎನ್ನಯ ಕೋರಿಕೆ ನಡಸಲಿನ್ಯಾರಿಗೆ ಬೇಡಲೊ 1 ತುಂಗಫಣಿಫಣ ಶೃಂಗದೊಳು ಚರ ಣಂಗಳ ಕುಣಿಸು ಭುಜಂಗಮವರನಿಗೆ ಭಂಗಪಡಿಸಿ ಕೃಪಾಪಾಂಗದಿ ಸಲಹಿದ ಮಂಗಳಮಹಿಮ ರಥಾಂಗಧರ ಬಾಲ 2 ಬಂಧು ಬಳಗ ನೀನೆಂದು ತಿಳಿದು ಮ ತ್ತೊಂದನೆಣಿಸದೆ ಇಂದಿರಾರಮಣನೆ ಎಂದೆಂದಿಗೂ ಸಲಹೆಂದು ನಾ ಬೇಡುವೆ ಸಿರಿ 3 ಖಿನ್ನ ನಿಜ ಜನರನ್ನು ಸಲಹುವ ಪನ್ನಗಶಯನ ಪ್ರಸನ್ನ ಹೃದಯನಾಗಿ ಎನ್ನ ಮನೋರಥವ ಪೂರೈಸುವ ರನ್ಯರು ಯಾರಯ್ಯ ಚಿನ್ಮಯ ಮೂರುತಿ 4 ಕಾಮಜನಕನೆ ನಾಮಗಿರಿ ಸಿರಿ ಸ್ವಾಮಿ ನೃಸಿಂಹನೆ ಕಾಮಿತ ಕೊಡುವಂಥ ಕಾಮಧೇನು ಚಿಂತಾಮಣಿ ಎನ್ನಯೋಗ ಕ್ಷೇಮವು ನಿನ್ನದಯ್ಯ ಸೋಮಕುಲಾಧಿಪ 5
--------------
ವಿದ್ಯಾರತ್ನಾಕರತೀರ್ಥರು
ಗೋಪಾಲಕೃಷ್ಣರಾಯ ತಾಪತ್ರಯಗಳೆಲ್ಲ ನೀ ಪರಿಹರಿಸು ಜೀಯ್ಯಾ ಪ ವಿದ್ಯಾಶ್ರೀ ಸಿಂಧುತೀರ್ಥ ಶುದ್ಧ ಪದ್ಧತಿಯಿಂದ ಶುದ್ಧ ಪೂರ್ವಕ ನಿನ್ನ ಭಜಿಪೆನು ಅನುದಿನ ಮುದ್ದುಮೋಹನ ನೀನು ತಿದ್ದಿ ಸರ್ವರ ಹೃದಯ ಬದ್ಧನಾಗಿರುತಿ ಪ್ರಸಿದ್ಧ ಮೂರುತಿ ವೇಣು 1 ಸುರಪನ ಗರ್ವವ ಹರಣವ ಮಾಡಿ ನೀ ವರವಿತ್ತೆ ಕಾಳಿಂಗ ಉರಗನಿಗೆ ಸುರರ ವೃಂದಗಳೆಲ್ಲ ಪೊರೆವುತ ಸರ್ವದಾ ವರ ಕಲ್ಪತರುವೆಂದು ಮೆರೆಯುವಿ ಧರೆಯೊಳು 2 ಗಿರಿಯನು ಪೊತ್ತು ನೀ ಪೊರೆದಿಹ ತುರುಗಳ ಮರೆಯೋದು ಯನ್ನನು ಸರಿಯೆನೊ ಹರಿಯೆ ಶರಣ ರಕ್ಷಕ ಬೇಗ ಕರುಣಾಳು ಕಾಯಯ್ಯ ಶ್ರೀವತ್ಸಾಂಕಿತನಾದ ವರಜಾರಚೋರ ವೇಣು 3
--------------
ಸಿರಿವತ್ಸಾಂಕಿತರು
ಗೋಪಾಲದಾಸರು ಕರದಾಗ ಬಾರದೇ ವೈದುಗ ಬಂದು ಬೋಧಿಸಿ ಮಾರ್ಗವ ತೋರಿಸಿ ಹೃದಯದಿ ಪಾದನಿಲ್ಲಿಸಿ ಮಂದನ ಪೋಷಿಸಿ ಭಂಗವ ಬಿಡಿಸುತಾ ಮಂಗಳ ಮೂರುತಿ ನಿನ್ನ ಮಹಿಮೆಗೆಣೆಗಾಣೆ ಧವಳ ಗುಣವಂತ ತಂದೆವರದಗೋಪಾಲವಿಠಲರೇಯನ ದಾಸನೆಂದೆನಿಸದೆಯನ್ನ 1 ವೈರಿ ಬನ್ನ ಭವ ಬನ್ನ ಪಡುತಿರೆ ಕಣ್ಣು ಕಾಣದೆ ಕರುಣವ ಬೀರುತ ಪಾಣಿಯ ಪಿಡಿದು ವೀಣಾವನಿತ್ತು ಗಾನವ ಪೇಳಿ ಗುಣವಂತನೆಂದೆನಿಸಿದೇ ಎನ್ನ ಅಣ್ಣಾ ಅಣ್ಣಾ ಭಾಗಣ್ಣ ಗಜಮುಖ ರೂಪದಿ ಬಂದು ಪಾಲಿಸಿದೈನಿನ್ನಾ ಕರುಣಾರಸಕೆಣೆಯುಂಟೆ ಯೆಣೆಯುಂಟೆ ನಿನ್ನ ದೇನಿಪರೊಳಗಿಟ್ಟುಶಿರಿಯರಮಣ ತಂದೆವರದಗೋಪಾಲನ ತೋರೋ 2 ನೂರಾರು ಸಾವಿರ ನಾರಿಯರೊಡಗೂಡಿ ಬೆಡಗು ಮಾಡೆ ನಾರಿಯಾಗಿ ನಿನ್ನಡಿಗಳ ಪೂಜಿಸಿ ಗರುಡನಂತೆ ನನ್ನ ಹೆಗಲೀನ ಕೂಡಿಸಿಕೊಂಡುತಿರುಗುವೆ ನೀತಿ ಕಪಿಯಂತೆ ನಿನ್ನ ಕಪ್ಪಾದಿ ವಲಿಸುವೆ ಕಮತವ ಮಾಡಿಸಿ ಮರ್ಮವ ಘಾಡಿಸಿ ಶರ್ಮವ ಗೂಡಿಸಿ ಚರ್ಮವ ತೊಡಿಸಿ ಕರ್ಮವ ಕೆಡಿಸಿಮೃಡನೊಡೆಯ ವಂದಿತ ತಂದೆವರದಗೋಪಾಲವಿಠಲನಡಿಗಳ ಧೇನಿಸುವಂತೆ ಮಾಡೋ 3 ಅಂಬರ ಭೋಜನೆ ಕಂಬುಕಂಧರನಿಂದ ಡಿಂಗರಪಾಲಿಪ ಡಿಂಬದಿ ಪೊಳೆಯುವಅಂಬಾರಮಣಸುತ ಭೀಮಾಂತರ್ಯಾಮಿ ತಂದೆವರದಗೋಪಾಲ ವಿಠಲನ ನಿಜ ಕೊಂಡಾ 4 ನಿಗಮ ನಿಧಿ ಕೃಷ್ಣಾಂತರ್ಯಾಮಿ ಲಕುಮಿ ಅರಸತಂದೆವರದಗೋಪಾಲವಿಠಲನ ವಾರಿಜದಲ್ಲಿ ತೋರೋ 5 ಜತೆ :ಆವಾಗ ಬಂದು ನೀ ಕಾವದಿರೇ ಸೇವಕನಾಗಲ್ಯಾಕೋ ಭಾವಜಪಿತ ತಂದೆವರದಗೋಪಾಲವಿಠಲರೇಯನ ದೂತ
--------------
ತಂದೆವರದಗೋಪಾಲವಿಠಲರು
ಗೋಪಾಲವಿಠಲ ನೀ ಕಾಪಾಡೊ ಎನ್ನನುಅಪಾರ ಜನುಮದಿ ಪೊಂದಿ ಇಪ್ಪೆ ನಿನ್ನ ಪ. ಉದಿತ ತರಣೀನಿಭ ಪದಪದ್ಮ ನಿನ್ನಯಹೃದಯದೊಳಗಿರಿಸಿ ಮುದದಿಂದ ಧ್ಯಾನಿಪಸದಯುಗಳ ಪಾದಪದುಮಸೇವೆಯನುಒದಗಿ ಪಾಲಿಸೊ ಶಶಿವದನ ಸಂ(ಕಂ)ಸದನನೆ 1 ವಾಸುದೇವನೆ ಎನ್ನ ದೋಷಿಯೆಂತೆಂದರೆಆಸರಿನ್ನ್ಯಾರು ನಿನ್ನ ದಾಸರದಾಸಗೆದಾಸವಿನುತ ಹೀಗುದಾಸೀನ ಮಾಡಲುದಾಸಜನರು ನಿನ್ನ ಲೇಶವು ಮೆಚ್ಚರು 2 ಪಿರಿಯರೆಲ್ಲರು ನಿನ್ನ ಚರಣವ ಪೂಜಿಸಿಪರಮಾನುಗ್ರಹ ಪರಿಪಾಲಿಸಿಪ್ಪರೆನ್ನನಿರುತದಿಬೇಡುವೆ ಗೋಪಾಲವಿಠಲ ಶ್ರೀಲೋಲನೆದೊರೆಯೆ ನಿನ್ನ ಮೂರುತಿ ಬರವೆನ್ನ ಮನಸಿಗೆ 3
--------------
ಗೋಪಾಲದಾಸರು
ಗೋಪಿ ಚಂದನದಿಂದ ಎ ನ್ನೊಡೆಯ ಮಧ್ವಾರ್ಯ ಹೃದಯವಾಸಾ ಕೃಷ್ಣ ಪ. ಮೃಡಸಖ ನಿನ್ನಯ ರೂಹವ ತೋರೆ ಕಡಲಿಂದೊಡನೆ ಬಂದೆ ಆನಂದತೀರ್ಥರ ಮುಂದೆ ನಿಂದೆ ಅ.ಪ. ಗೆಜ್ಜೆ ಕಾಲ್ ಕಡಗ ಸಜ್ಜಿನಿಂದಿಟ್ಟು ಮಜ್ಜಿಗೆ ಕಡಗೋಲು ನೇಣು ಸಹ ಸಜ್ಜನರ ಸಲಹಲು ಮಧ್ವಾರ್ಯರ ಮುಂದೆ ಗೆಜ್ಜೆ ಧ್ವನಿ ಮಾಡಿ ಕುಣಿಯುತ ಕೃಷ್ಣ 1 ಉಟ್ಟ ಪೀತಾಂಬರ ಉಡಿಗೆಜ್ಜೆ ವಡ್ಯಾಣ್ಯ ಇಟ್ಟು ಕೌಸ್ತುಭಹಾರ ತುಳಸಿಮಾಲಾ ಕೊಟ್ಟು ಅಭಯ ಹಸ್ತ ಸಲಹುವೆನೆಂಬಾ ಬಿರುದಿಟ್ಟು ಕಂಕಣ ತೊಟ್ಟು ಶ್ರೀ ಕೃಷ್ಣ 2 ಮಕರಕುಂಡಲ ಕಿರೀಟ ಶೋಭಿಸುತಲಿ ಅಕಳಂಕ ಚರಿತ ಶ್ರೀ ಶ್ರೀನಿವಾಸ ನಿಖಿಲ ಬ್ರಹ್ಮಾಂಡದೊಳೆಲ್ಲೆಲ್ಲು ಕಾಣೆ ಸಕಲ ದೇವರ ದೇವಾ ಶ್ರೀ ಕೃಷ್ಣ ಪ್ರಭುವೆ 3
--------------
ಸರಸ್ವತಿ ಬಾಯಿ
ಗೋವಿಂದ ಗೋವಿಂದ ಕೃಷ್ಣ ಹರಿ ಪ ಗೋವಿಂದ ಮುಕುಂದ ಗೋಪಾಲಕೃಷ್ಣ ಅ.ಪ ಕಡೆಗಣ್ಣಿಲಿಂದೊಮ್ಮೆ ನೋಡೋ ನಿ-ನ್ನಡಿಗೆರಗುವೆನೋ ನೀ ದಯಮಾಡೋಬಿಡದೆನ್ನ ನಿನ್ನವರೊಳು ಕೂಡೋ ಎ-ನ್ನೊಡೆಯ ನಿತ್ಯಾನಂದ ನೀ ನಲಿದಾಡೋ 1 ಮಕ್ಕಳಿಗೊಡೆಯ ನೀನಾಗಿ ಹಸುಮಕ್ಕಳ ಕೂಡೆ ನೀನಾಡ ಹೋಗಿಸಿಕ್ಕದೆ ಬಹು ದಿನಕಾಗಿ ದಿಂಧಿ-ಮಿಕ್ಕೆಂದು ಕುಣಿಸುವೆ ಬಾ ಚೆನ್ನಾಗಿ2 ಹೃದಯ ಕಮಲದೊಳಗೆನ್ನ ನಿನ್ನಪದಕಮಲವನೀ ದಯೆಗೈಯೊ ಮುನ್ನಚದುರಕುಣಿಯೊ ಚೆಲ್ವರನ್ನ ವಿ-ಬುಧರೊಡೆಯನೆ ನಿತ್ಯಾನಂದ ಕೃಷ್ಣ 3
--------------
ವ್ಯಾಸರಾಯರು
ಗೋವಿಂದ ನಿನ್ನಾನಂದದಲ್ಲಿಡೋ ಗೋವಿಂದ ಪ ಗೋವಿಂದ ಹೃದಯಾರವಿಂದದಲ್ಲಿ ಇಂದೂ ಮುಂದೂ ಚರಣಾರವಿಂದ ತೋರೊ ಅ.ಪ ಬೆಟ್ಟದ ದರುಶನ ಲಾಭವು ಕಷ್ಟ ಪಟ್ಟರು ದೊರೆಯಲಸಾಧ್ಯವು ನೋಡೆ ಸುಟ್ಟು ಹೋಗುವುದಘರಾಶಿಯು ಪಟ್ಟ ಶ್ರಮವು ಇಷ್ಟಾರ್ಥವು ದಿಟ್ಟ ಮನವ ಕೊಟ್ಟು ಅಟ್ಟುರಿಯ ಕಳೆದು ಮೆಟ್ಟು ಮೆಟ್ಟಲನೇರಿ ದಿಟ್ಟಿಪರೋ ನಿನ್ನ1 ಪದುಮಜಾಂಡ ಕೋಟಿ ನಾಯಕ ದೇವ ಶ್ರೀದ ಸೃಷ್ಟಾದ್ಯಷ್ಟ ಕರ್ತೃ ನೀನೆ ಆದ್ಯಂತ ಜಗದಾಧಾರಕ ಅಂತರಾತ್ಮಕ ವಿಶ್ವವ್ಯಾಪಕ ಆದಿಮೂಲ ಚತುಷ್ಪಾದ ಎಂದೆನಿಸಿ ತ್ರಿ- ಪಾದ ಇಳೆಯೊಳಿಟ್ಟೆ 2 ಸದಮಲಾತ್ಮಕನೇ ದೇವ ಸರ್ವದಾ ಎಲ್ಲಾ ಹದಿನಾಲ್ಕು ಲೋಕವ ಧರಿಸಿದೆ ದಿವ್ಯ ನೆಲೆಸಿದೆ ಸರ್ವರ ಹೃದಯದ ಪದುಮದಲಿ ಪೊಳೆದು ತ್ರಿಜಗವಂದಿತನಾಗಿ ಮೇದಿನಿಯೊಳು ಮೆರೆಯುತಿಹೆ 3 ಧ್ವಜವಜ್ರಾಂಕುಶಯುಕ್ತಲಾಂಛನ ದೆÉೀವ ಅಬ್ಜಭವಾರಾಧ್ಯ ಚರಣದಿವ್ಯ- ಅಬ್ಜಸಖಕೋಟಿಕಿರಣ ಪಾದಾಭರಣದಿಂದ ಕಿರಣಾ ತಾ ಝಗಝಗಿಸುತ್ತ ನೂಪುರ ಕಾಲಂದಿಗೆ ಗೆಜ್ಜೆ ಸಜ್ಜುಗೊಂಡಿಹ ಮೂರ್ಜಗದೊಡೆಯನೆ ಹರಿ 4 ತಟಿತಕೋಟಿನಿಭಸಮಕಾಯ ಕಟಿಯ ದಿವ್ಯರತ್ನಖಚಿತದಟ್ಟಿಯಾ ತೊಟ್ಟ ಪಟ್ಟೆಪೀತಾಂಬರ ಬಟ್ಟೆಯಾ ಸೊಂಟಪಟ್ಟಿಯ ಇಟ್ಟ ಪರಿಯಾ ಅಟ್ಟಹಾಸದಿ ನಿಂದ ಸೃಷ್ಟಿಗೊಡೆಯ ಮನೋ- ಭೀಷ್ಟದಾಯಕ ಬೆಟ್ಟದೊಡೆಯನೆ 5 ಕರಚತುಷ್ಟಯದಲ್ಲಿ ಮೆರಯುವಾ ಶ್ರೀ ಸು- ದರ್ಶನ ಶಂಖದಿಂದಿರುವಾ ದೀನ ಶರಣಜನರಿಗಭಯ ಹಸ್ತವಾ ಕರೆದು ನೀಡುವ ಕಾಮಿತಾರ್ಥವ ಪರಿಪರಿ ಭಾಪುರಿ ಭುಜಗಾಭರಣಾದಿಗಳ ಧರಿಸಿರುತ ಭಕ್ತಜನರಘ ಹರಿಸುವಾ6 ವಕ್ಷಸ್ಥಳದಲ್ಲಿ ಶ್ರೀವತ್ಸವೂ ಕಂಠ ದಕ್ಷಿಣದಲ್ಲಿ ತೋರ ನಕ್ಷತ್ರದಂತಿಹ ಹಾರವೂ ಕುಕ್ಷಿ ಅಂದವೂ ಮೋಕ್ಷದಾತೃವು ಅಕ್ಷರ ವಾಚ್ಯತ್ರ್ಯಕ್ಷಾದಿ ಸುರವಂದ್ಯ ಈ ಕ್ಷಿತಿಗಿಳಿದು ಪ್ರತ್ಯಕ್ಷನಾಗಿ ನಿಂದೆ 7 ಮಂದಹಾಸಮುಖ ಅರವಿಂದ ದಂತ ಚಂದಕರ್ಣಕುಂಡಲದಿಂದ ಕೆಂದುಟಿಯಿಂದ ಒಪ್ಪುವ ಚೆಂದ ಪೊಂದಿ ಮಕುಟ ಸರ್ವಾಲಂಕಾರ ಪರಿಪೂರ್u ಬಂಧ ಮೋಚನ ಹರಿ ಶ್ರೀ ವೇಂಕಟೇಶನೆ 8 ಪರಿಪರಿ ಮುಕ್ತಜೀವರುಗಳು ಇಲ್ಲಿ ಪರಿವಾರ ತರುಲತೆ ಶಿಲೆಗಳು ಇನ್ನು ವಿರಜೆ ಮೊದಲಾದ ಸರ್ವತೀರ್ಥವು ಸ್ವಾಮಿ ತೀರ್ಥವೂ ಮೋಕ್ಷದಾತೃವೂ ಭವ ಶಕ್ರಾದಿನುತಉರಗಾದ್ರಿವಾಸವಿಠಲ ಜಗದೀಶನೆ 9
--------------
ಉರಗಾದ್ರಿವಾಸವಿಠಲದಾಸರು
ಚಂಡನಾಡಿದ ಹರಿ ಚಂಡನಾಡಿದ ಪ ಪುಂಡರೀಕ ಕುಸುಮಮಯದ ಅ.ಪ. ಸಾರ ಸೊಬಗಿನಿಂದ ನೋಡಿ ಕರವ ನೀಡಿ ಪಾರಿಜಾತ ಕುಸುಮಮಯದ 1 ಸೊಂಪಿನಿಂದ ಮಂದಹಾಸ ಪೆಂಪುದೋರೆ ಸಿರಿಯಮ್ಮೆ ಗಂಪಿನಿಂದ ರಮೆಯು ಸಹಿತ ಚಂಪಕದ ಕುಸುಮಮಯದ 2 ಪುಲ್ಲನಯನ ಪರಿಮಳವ ಚೆಲ್ವ ಚಂದ್ರ ಕಿರಣದಂತೆ ಚೆಲ್ವನಾಂತ ಸರಸಮಾನ ಮಲ್ಲಿಗೆಯ ಕುಸುಮಮಯದ 3 ದಿವ್ಯ ಮಾಧುಪ ಝೇಂಕೃತಿಯು ಭವ್ಯಮಾಗೆ ದಿವಿಜರೆಲ್ಲ ದಿವ್ಯಮೆಂದು ಪೊಗಳೆ ಸುಖದಿ ನವ್ಯ ಜಾಜಿ ಕುಸುಮಮಯದ 4 ಶ್ರೀನಿವಾಸ ಸಕಲ ಹೃದಯ ಶ್ರೀನಿವಾಸ ಧೇನುನಗರಶ್ರೀನಿವಾಸ ವೆಂಕಟೇಶ ಶ್ರೀನಿವಾಸ ಕುಸುಮಮಯದ 5
--------------
ಬೇಟೆರಾಯ ದೀಕ್ಷಿತರು
ಚಂದಲಾ ಪರಮೇಶ್ವರಿ ವಂದಿಸುವೆನು ಚಂದಲಾ ಪರಮೇಶ್ವರಿ ಪ ಚೆಂದಾಗಿ ಮನಸಿಗಾನಂದ ನೀಡುವ ನಿನ್ನಮುಂದೆಯೆ ಕಂದ ತಾ ಬಂದು ನಿಂದಿಹೆನವ್ವ ಅ.ಪ. ಘನದಯಾವಂತೆ ಕಾಯೆ ಇದು ನಿನ್ನಅನುಗ್ರಹವೆಂಬೆ ತಾಯೆಕನಸಿನೊಳಿರಲಿಲ್ಲ ಮನಸಿನೊಳಿರಲಿಲ್ಲಜನನಿ ನೀನೆ ಕರೆಸಿ ದರುಶನವಿತ್ತವ್ವ 1 ಸನಿತೆಯೊಳ್ಬಂದು ನಿಂತು ದಯಾಮೃತವಹನಿಸುವಿ ಜನರಿಂಗಿತುಜನರ ಪಾವನ ಮಾಡಿ ಘನ ಸಂತಸ ನೀಡಿಅನುದಿನ ಜನ ಪಾಡಿ ಕುಣಿಯುವಂತೆ ಕೃಪೆ ಮಾಡೆ 2 ಸದಯಾಮೂರ್ತಿಯು ನೀ ಸತ್ಯ ನಿನ್ನಯ ಪಾದಪದುಮಕೆ ಮಣಿಯುವೆ ನಿತ್ಯಗದುಗಿನ ವೀರನಾರಾಯಣನೆನ್ನಯಹೃದಯದಿ ಸತತ ನಿಲುವಂತೆ ಕರುಣಿಸೌ 3
--------------
ವೀರನಾರಾಯಣ
ಚನ್ನಕೇಶವ ಇನ್ನೇನಿನ್ನೇನಿನ್ನು ಯನಗಿನ್ನೇನಿನ್ನೇನಿನ್ನು ಪ. ಚನ್ನಕೇಶವನಿವನನ್ನು ಹೃದಯದೊಳ್ ಚೆನ್ನಾಗಿ ನೆಲಸಿರಲಿನ್ನೇನ ಬೇಡುವೆ 1 ಭುವಿಜಾತೆಯೆನ್ನ ಮಾತೆ - ಭುವಿನಾಥನೆನ್ನ ತಾತ ಇವರೆನ್ನೊಳಿರುತಿರೆ ಭವಕ್ಲೇಶ ಪರಿದಿರೆ 2 ಅಂಡಜವಾಹನಾಖಂಡಲಾರ್ಚಿತನ ಪುಂಡರೀಕಾಕ್ಷನ ಕಂಡು ಕೊಂಡಾಡಿದೆ 3 ಧರೆಯೊಳಧಿಕ ಶೇಷಗಿರಿಯೊಳು ನೆಲಸಿರ್ಪ ವರದ ಶ್ರೀನರಹರಿ ವರದನೆನ್ನೊಳಿರೆ 4
--------------
ನಂಜನಗೂಡು ತಿರುಮಲಾಂಬಾ