ಒಟ್ಟು 1017 ಕಡೆಗಳಲ್ಲಿ , 68 ದಾಸರು , 626 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತುಂಗಭದ್ರ ನದಿ ತೀರದಿ ನೆಲಸಿಹನ್ಯಾರೆ ಪೇಳಮ್ಮಯ್ಯ ಪ. ರಂಗ ತಾನು ಇಲ್ಲಿರುತಿಹನಮ್ಮ ಅ.ಪ. ಶಂಖ ಚಕ್ರ ತ್ರಿಶೂಲವ ಧರಿಸಿಹನ್ಯಾರೇ ಪೇಳಮ್ಮಯ್ಯ ಶಂಕಿಸದಂದದಿ ತೋರುವನಮ್ಮ 1 ಈ ಪರಿರೂಪವ ಧರಿಸಲು ಕಾರಣವೇನೇ ಪೇಳಮ್ಮಯ್ಯ ಈ ಪರಿರೂಪವ ಧರಿಸಿಹನಮ್ಮ 2 ಪರಿ ಶುದ್ಧ ಸಾತ್ವಿಕರಿಗೆ ಹ್ಯಾಗೇ ಪೇಳಮ್ಮಯ್ಯ ಶುದ್ಧ ಜ್ಞಾನವನಿತ್ತು ಸಲಹುವನಮ್ಮ 3 ವಿಷ್ಣು ಭಕ್ತರ ಮನಸಿಗೆ ತೋರುವ ಮತಿ ಏನೇ ಪೇಳಮ್ಮಯ್ಯ ಬಿಟ್ಟಿರಲಾರದ ಗುಟ್ಟು ಕಾಣಮ್ಮ 4 ಪರಿ ಲೀಲೆ ಇದೇನೆ ಪೇಳಮ್ಮಯ್ಯ ಹರಿಯು ತಾನು ಒಲಿಯನು ಕಾಣಮ್ಮ 5 ಪರಿ ಹ್ಯಾಗೇ ಪೇಳಮ್ಮಯ್ಯ ಪರಿ ಧರಿಸುವದೊಂದರಿದೇನಮ್ಮ 6 ಹರಿಹರ ಕ್ಷೇತ್ರದಿ ನೆಲಸಿಹ ಸ್ವಾಮಿಯ ಭಜಿಸುವದ್ಹ್ಯಾಗೇ ಪೇಳಮ್ಮಯ್ಯ ಕರಕರೆ ಭವವನು ಕಳೆಯಬೇಕಮ್ಮ 7 ಶ್ರೀಸತಿ ಪಾರ್ವತಿ ಸಹಿತದಿ ನೆಲಸಿಹನ್ಯಾರೇ ಪೇಳಮ್ಮಯ್ಯ ಶೇಷಭೂಷಣ ಸಹ ಶ್ರೀನಿವಾಸ ಕಾಣಮ್ಮ 8
--------------
ಅಂಬಾಬಾಯಿ
ತೊಡಕ ಹರವ ಮಾಡಿಕೊಳ್ಳಿರೊ ಹುಟ್ಟಿ ಬಾಹ್ವ ಮನುಜರೆಲ್ಲ ಧ್ರುವ ನಾನು ನನ್ನದೆಂದು ಜ್ಞಾನಹೀನನಾಗಿ ಬಾಳುತಿಹ್ಯ ಗಾಣ-ದೆತ್ತಿನಂತೆ ಮುಂದೆಗಾಣದಿಹ್ಯ ಭ್ರಮೆಯದ 1 ಜೀವ ಶಿವ ದಾವದೆಂದು ಠಾವಿಕಿಲ್ಲ ದಿಹ್ಯದಾಗಿ ನಾವು ನೀವು ಎಂದು ಹ್ಯಾವ ಹೊಮ್ಮಿ ಹೊಡೆದಾಡುವ 2 ಸಂಚಿತ ಪ್ರಾರಬ್ಧ ಕ್ರಿಯಮಾಣದೊಳು ಸಿಲ್ಕಿ ಪ್ರ ಪಂಚ ಪರಮಾರ್ಥ ದಾವದೆಂದು ಮುಂಚೆ ತಿಳಿಯದ 3 ತನವು ತಾನೆಂದು ಘನವು ಮರೆದು ದಣಿದು ತಿರುಗುತಿಹ್ಯ ಮನದ ಮಾಯದೊಳು ಸಿಲ್ಕಿ ತನಗೆ ತಾಂ ತಿಳಿಯದೆ 4 ತೊಡಕು ಹರವ ಮಾಡಿಗೊಳ್ಳಿ ಪಡದು ಙÁ್ಞನಭಕ್ತಿಯಿಂದ ಮೂಢ ಮಹಿಪತಿಯನ್ನೊಡೆಯ ಬಿಡದೆ ನೆಲೆಗೊಳ್ಳುವ್ಹಾಂಗೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತ್ತಾತ್ವಿಕವಿವೇಚನೆ ಏಕ ಪಂಚಾಶದ್ವರ್ಣವಾಚ್ಯ ಶ್ರೀಕಳತÀ್ರನೆ ಸರ್ವಶಬ್ದಗೋಚರನಯ್ಯ ಪ ಕಾಯ ಕಾರ್ಯಕಾರಣವನನುಸರಿಸಿ ತ್ರಿಕರಣದೊಳಗಿದ್ದು ಕ್ರಿಯವ ನÀಡೆಸುವ ದೇವಅ.ಪ ಅಜಾನಂದೇಂದ್ರೇಶ ಶಿರ ಮುಖ ನೇತ್ರದೊಳು ನಿಜರೂಪ ಉಗ್ರ ಊರ್ಜ ಕರ್ಣದೊಳು ನಿಜ ಋತುಂಬರ ಋಘನಾಸದಲ್ಲಿ ಲೃಶಾ ಲೃಜ ವರ್ಣವಾಚ್ಯ ಗಂಡ ಸ್ಥಳದಲ್ಲಿಪ್ಪ 1 ಅನಂತಾರ್ಥಗರ್ಭನೆ ನೀ ವಾಚಿಯಲ್ಲಿ 2 ಕಪಿಲ ಖಪತಿ ಗರುಡ ಘರ್ಮ ದಕ್ಷಿಣಭುಜದೊಳ್ ಅಪರಿಚ್ಛಿನ್ನನೇ ನೀನು ಸಂಧಿಗಳಲಿ ಸುಫಲದಾತನೆ ಙಸಾರನಾಮದಲಿದ್ದು ಅಂಗುಲ್ಯಾಗ್ರದಲ್ಲಿ ನೀ ನಿರುತರಲಿ ನೆಲಸಿರ್ಪೆ 3 ಝೂಟಿತಾರ ವರ್ಣವಾಚ್ಯವ ಮಾಡಿ ನಿರುತದಲಿ ವಾಮಭುಜ ಸಂಧಿಗಳಲ್ಲಿರುವೆ ಬೆರಳ ಅಗ್ರದಿ ಞಮನಾಮದಲಿ ನೆಲೆಸಿರುವೆ 4 ಟಂಕ ಠಲಕ ಡರೌಕ ಢರಣಣಾಕ್ಮಕ ನೀ ನಾ ಟಂಕ ರಹಿತ ದಕ್ಷಿಣ ಪಾದದಲ್ಲಿ ಬಿಂಕವಿಲ್ಲದೆ ತಾರ ಥಪತಿ ದಂಡಿ ಧನ್ವೀ ನಮ್ಯನಾಮನೆ ವಾಮಪಾದ ಸಂಧಿಗಳಲ್ಲಿ 5 ಪರಫಲಿ ವರ್ಣವಾಚ್ಯ ದೇಹದಪಾಶ್ರ್ವ ಬಲಿ ಭಗನಾಮ ಪೃಷ್ಟ ಗುಹ್ಯದಲಿ ನಿರುತ ಮನ ವರ್ಣವಾಚ್ಯ ನೆನಿಸಿಹೆ ದೇವ ತುಂದಿ ಸ್ಥಾನದಲಿ ಎಂದೆಂದು ನಿಂದೆ6 ಯಜ್ಞ ಹೃದಯದಿ ರಾಮ ತ್ವಕ್‍ಲಕ್ಷ್ಮೀಪತಿ ರುಧಿರ ಶಾಂತಸಂವಿತ್ ಮಾಂಸದಲ್ಲಿ ಸುಜ್ಞ ಷಡ್ಗುಣ ಮಜ್ಜ ಸಾರತ್ಮ ಅಸ್ತಿಯು ಹಂಸ ಸ್ನಾಯುಳಾಳುಕ ನೀ ಪ್ರಾಣದಲ್ಲಿ 7 ಕ್ಷಕಾರವಾಚ್ಚ ಶ್ರೀ ಲಕ್ಷ್ಮೀ ನರಸಿಂಹ ಕ್ಷರ ಜೀವರಾ ದೇವ ಸರ್ವ ಸ್ಥಳದಲ್ಲಿಪ್ಪ ಶ್ರೀಕರಾರ್ಚಿತ ನಿನ್ನ ವಾಕ್ ಮನೋರೂಪಗಳು ಸಕಲ ಸಚ್ಛಾಸ್ತ್ರಾಗಮಗಳಾಗಿಹವೋ 8 ಸ್ವರವರ್ಣ ಸಂಯುಕ್ತ ಶಬ್ದವಾಕ್ಯದಿ ಸಕಲ ಪುರಾಣಾಗಮದಿ ಶಾಸ್ತ್ರ ಸರ್ವದಿ ನಿತ್ಯ ನಿರುತ ನಿನ್ನನುದಿನದಿ ಪೊಗಳುತಿಹವೋ 9 ಸ್ವಪ್ರಯೋಜನಕಾಗಿ ವರ್ಣ ಭೇದದಿ ವಾಕ್ಯ ಅಪ್ರಕೃತವಾಗೆಷ್ಟೋ ನಾನುಚ್ಚರಿಸಿದೆ ಸ್ವಪ್ರಯೋಜನ ರಹಿತ ಶ್ರೀವೇಂಕಟೇಶ ಶ್ರೀ ಉರಗಾದ್ರಿವಾಸ ವಿಠಲ ಜಗದೀಶ10
--------------
ಉರಗಾದ್ರಿವಾಸವಿಠಲದಾಸರು
ತ್ರಾಹಿ ತ್ರಾಹಿ ಗುರುನಾಥ ಎಂದು ತ್ರಾಹಿ ದೀನನಾಥ ಎಂದು ಸಾಹ್ಯ ಮಾಡಿಕೊಳ್ಳಿ ಬಂದು ಸೋಹ್ಯದೋರುವ ದೀನಬಂಧು ಧ್ರುವ ವ್ಯರ್ಥಗಳಿಯಬ್ಯಾಡಿ ಜನ್ಮ ಗುರ್ತು ಮಾಡಿಕೊಳ್ಳಿ ನಿಮ್ಮ ಸಾರ್ಥಕಿದೆ ಸಂತ ಧರ್ಮ ಅರ್ತುಕೊಳ್ಳಾನಂದೊ ಬ್ರಹ್ಮ 1 ಸಾರಿ ಚೆಲ್ಯದ ಹರಿರೂಪ ದೋರುವ ಗರುಕುಲದೀಪ ದೋರುತಿಹ್ಯದು ಚಿತ್‍ಸ್ವರೂಪ ಸೂರ್ಯಾಡಬಹುದು ಸ್ವಸ್ವರೂಪ 2 ಸ್ವಾರ್ಥ ಅತಿಹಿಡಿಯಬ್ಯಾಡಿ ಮತ್ರ್ಯದೊಳು ಮರ್ತುಬಿಡಿ ಕರ್ತು ಸ್ವಾಮಿಯ ಅರ್ತು ಕೂಡಿ ಬೆರ್ತು ನಿಮ್ಮೊಳು ನಿರ್ತ ನೋಡಿ 3 ಏನು ಹೇಳಲಿ ಹರಿಯ ಸು ಖೂನದೋರುದು ಸಂತ ಮುಖ ಙÁ್ಞನಿ ಬಲ್ಲೀ ಕೌತುಕ ಧನ್ಯವಾಯಿತು ಮೂರುಲೋಕ 4 ಹಿಡಿದು ನಿಜ ಒಂದು ಪಥ ಪಡೆದ ಮಹಿಪತಿ ಹಿತ ಒಡೆಯನಹುದಯ್ಯ ಈತ ಭುಕ್ತಿ ಮುಕ್ತಿದಾತ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತ್ರಾಹಿ ತ್ರಾಹಿ ತ್ರಾಹಿ ಎನ್ನಬೇಕು ಧ್ರುವ ಕಡ್ಡಿಮರೆಯಲ್ಯದ ನೋಡಿರೊ ಗುಡ್ಡ ಗುಡ್ಡಕಾಣಲರಿಯದವನ ಹೆಡ್ಡ ಹೆಡ್ಡನಾದರ ವಸ್ತುಕಾಗೇದಡ್ಡ ಅಡ್ಡಾಗಡ್ಡೇರಿಸಿದ ಶ್ರೀಗುರುದೊಡ್ಡ 1 ಅಡ್ಟಾUಡೆÀ್ಡಂಬುಕ ಅನುಮಾನ ಗುಡ್ಡವೆÀಂಬುವೆ ವಸ್ತು ತಾ ನಿಧಾನ ವಡ್ಡಗೊಂಡಿಹುದು ಕಾಣದ ಮನ ಅಡ್ಡಮರಿ ಬಿಡಿಸುವ ಗುರುಙÁ್ಞನ2 ಕಡ್ಡಿಮರೆಯು ಆಗಿಹ್ಯ ತಾ ಕಾರಣ ಅಡ್ಡ ಬಿದ್ದೆನಯ್ಯ ಗುರುವಿಗೆ ಶರಣ ದೊಡ್ಡ ಸ್ವಾಮಿ ನಮ್ಮ ಸದ್ಗುರು ಕರುಣ ವಡ್ಡುಗಳಿಸಿದ ಮಹಿಪತಿಗೆ ಪೂರ್ಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಗುರುನಾಥ ಬಾಹ್ಯಾಂತ್ರ ಪರಿಪೂರ್ಣ ನೀನೆ ಸದೋದಿತ ಸಹಕಾರ ನಿಜವಸ್ತು ನೀನೆ ಅಖಂಡಿತ ಗುಹ್ಯ ತಿಳಿಯದೊ ನಿನ್ನ ಸದ್ಗುರು ಸಮರ್ಥ 1 ಸೆರಗ ಸಿಲುಕದೆಂದು ತಿರುಗಿತು ವೇದ ಸರಸ್ವತಿ ಸ್ತುತಿಗೆ ತಾ ತೀರಲಿಲ್ಲ ಬೋಧ ವರಣಿಸಲಿಕ್ಕೆ ಶೇಷ ತಲೆಯು ಬಾಗಿದ ಮೊರೆ ಇಡುತಿಹುದೆಲ್ಲ ನಿನಗೆ ಗೋವಿಂದ 2 ಋಷಿಮುನಿಗಳಿಗೆ ತಾ ಪೆಸರೊಡೆಯದು ತುಸು ಕೊರತೆಲ್ಲ ತಾ ಪಸರಿಸಿಹ್ಯದು ಮಸಿ ಮಣ್ಣಾಯಿತು ಲೋಕ ಹೆಸರಿಗೆ ಬಂದು ದೆಸೆಗೆಟ್ಟಾಯಿತು ಬಹಳ ಉಸುರೊಡಿಯೆಂದು 3 ಮಾಡದ ಮಾಡಿತು ಲೋಕ ನೋಡೊ ನಿನಗಾಗಿ ಬಡದ ಭವಣೆಬಟ್ಟು ಹಿಡಿಯಲಿಕ್ಕೆ ಹೋಗಿ ಕೊಡಲಿಲ್ಲ ನಿಜಗುಟ್ಟು ಇವ್ಹನೀ ಅಡಗಿ ಯೋಗಿ 4 ಇದೆ ಮುಂದಣುವಾದ ನನ್ನದೇನು ಪಾಡು ಸಾಧಿಸಿ ಸದ್ಗುರು ಕೃಪೆ ನೀನೆ ದಂiÀiಮಾಡು ಒದಗಿ ಮಹಿಪತಿ ನೀ ದಯದಿಂದ ನೋಡು ಸದಮಲ ಸುಖವಾದ ಸುಧಾರಸವ ಕೊಡು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದತ್ತ ನಮ್ಮನಿ ದೈವ ಚಿತ್ತಮನದೊಳಗಿಹ್ಯ ಎತ್ತ ಹೋದರು ನಮ್ಮ ಹತ್ತಿಲಿಹನೊ 1 ನಿತ್ಯ ನಿಜ ಘನವಾಗಿ ಹೃತ್ಕಮಲದೊಳು ತಾಂ ಮುತ್ತಿನಂತೆ 2 ಗುತ್ತಳಿದು ಒಳಗ ತಾಂ ಪುಥ್ಥಳಿಯು ಹೊಳೆವ ಪರಿ ಮೊತ್ತವಾಗಿಹ್ಯ ಪೂರ್ಣ ನೆತ್ತಿವೊಳಗ 3 ದತ್ತವುಳ್ಳವನಿಗೆ ಹತ್ತಿಸಂಗಡ ಬಾಹ ವಿತ್ತ ಒಡಿವ್ಯಾಗೆ ತಾಂ ಕರ್ತುನಮ್ಮ 4 ದತ್ತಗಿಂದಧಿಕ ಮತ್ತೊಂದು ದೈವವು ಕಾಣೆ ಪೃಥ್ವಿಯೊಳು ಮಹಿಪತಿವಸ್ತು ಒಂದೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದತ್ತವಧೂತ ಶ್ರೀ ಗುರು ಸಾಕ್ಷಾತ ನಿತ್ಯವಾಗಿಹ್ಯ ನಿಜ ನಿರ್ಗುಣನೀತ ಪ ನಿರ್ಗುಣ ನಿಶ್ಚಲ ಗಗನಾಕಾರ ಸುಗುಣದಲಿ ತಾನೆ ಸಹಕಾರ 1 ಸಹಕಾರನಹುದು ಸದ್ಗುರುನಾಥ ಬಾಹ್ಯಾಂತ್ರದಲಿ ತಾನೆ ಪ್ರಖ್ಯಾತ 2 ಪ್ರಖ್ಯಾತನಹುದು ತ್ರಿಗುಣರಹಿತ ಮುಖ್ಯಮುನಿಗಳಿಗೆ ಮೋಕ್ಷ ಸುದಾತ 3 ದಾತನಹುದು ತ್ರೈಲೋಕ್ಯದೊಳೀತ ಈತನೆ ವಿಶ್ವದೊಳಗೆ ದೈವತ 4 ದೈವತನಹುದು ದೇವಾದಿಗಳಾತ್ಮ ಮೂರ್ತಿ ಶ್ರೀಹರಿ ಸರ್ವಾತ್ಮ 5 ಹರಿ ಸರ್ವಾತ್ಮನಾಗಿಹ ನಿಜಪೂರ್ಣ ಪರಿಪರಿ ಆಗುವ ಅಗಣಿತಗುಣ 6 ಅಗಣಿತಗುಣ ಅಗಾಧ ಅಪಾರ ನಿಗಮಗೋಚರ ನಿರುಮಪ ನಿರ್ಧಾರ 7 ನಿರ್ಧಾರನು ನಿಜನಿಷ್ಟರಪ್ರಾಣ ಸಾಧಕರಿಗೆ ಸದ್ಗತಿ ಸಾಧನ 8 ಸಾಧನದೊಡೆಯನಹುದು ಶಾಶ್ವತ ಆದಿದೇವ ಸಕಲಾಗಮ ಪೂಜಿತ 9 ಪೂಜಿತ ಬ್ರಹ್ಮಾದಿಗಳ ಕೈಯ ಮೂಜಗದೊಳು ರಾಜಿಸುತಿಹ 10 ರಾಜಿಸುತಿಹ ತಾ ರಾಜರಾಜೇಂದ್ರ ಸುಜನರ ದೃಷ್ಟಿಯೊಳಿಡದಿಹ ಸಾಂದ್ರ 11 ಸಾಂದ್ರವಾಗಿಹನು ಸಾರ್ವಭೌಮ ಇಂದ್ರಾಧಿಕÀರೊಂದಿತ ಮಹಿಮ 12 ಮಹಿಮನಹುದು ಮುನಿಜನ ಮಂದಾರ ಧ್ಯಾಯಿಸುವರ ನಿಜ ಸಾಕ್ಷಾತಾರ 13 ಸಾಕ್ಷಾತಾರ ಶ್ರೀಗುರು ಜಗದೀಶ ಮೋಕ್ಷಾಧಿಕರಿಗಳಾತ್ಮ ಉಲ್ಹಾಸ 14 ಉಲ್ಹಾಸವೆ ನಿಜ ವಸ್ತುವೆ ತಾನು ಕಲ್ಪದ್ರುಮ ನಿಜ ಕಾಮಧೇನು 15 ಕಾಮಧೇನುವಾಗಿ ರಕ್ಷಿಸುವ ಬ್ರಹ್ಮನಿಷ್ಠರ ಹೃದಯದಲಿ ಭಾಸಿಸುವ 16 ಭಾಸುವ ಭಾಸ್ಕರಕೋಟಿ ಪ್ರಕಾಶ ಋಷಿ ಮುನಿಗಳ ನಿಜಮಾನಸ ಹಂಸ 17 ಹಂಸನಾಗಿ ವಿಶ್ವಂಭರಿತ ಸೂಸುವ ಸರ್ವಾಂತ್ರಲಿ ಅನಂತ 18 ಅನಂತ ಕೋಟಿ ಬ್ರಹ್ಮಾಂಡನಾಯಕ ಅನುಭವಿಗಳಿಗೆ ದೋರುವ ಕೌತುಕ 19 ಕೌತುಕದೋರಿದ ಕರುಣದಲ್ಯನಗೆ ಜೀವಪಾವನಗೈಸಿದ ಜಗದೊಳಗೆ 20 ಜಗದೊಳು ಸ್ತುತಿಸುವೆನು ಅನುದಿನ ಶ್ರೀಗುರು ದತ್ತವಧೂತ ಪೂರ್ಣ 21 ಪೂರ್ಣ ಸ್ಮರಿಸುವೆನು ಮನದೊಳು ನೋಡಿ ಪುಣ್ಯ ಪ್ರಭೆಯ ನಿಜ‌ಘನ ಒಡಗೂಡಿ22 ಒಡಗೂಡಿದ ನಿಜಾನಂದದ ಗತಿಯು ಕ್ಷಿತಿಯೊಳು ಕೊಂಡಾಡಿದ ಮಹಿಪತಿಯು 23
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಯದೊಲವಿನ ಮೆಚ್ಚು ಧ್ರುವ ಮಾಡದ ಮಾಡಿಸಿತು ನೋಡಿದರೇನ ತಾಂ ನೋಡಿಸಿತು ಕೂಡದ ಕೂಡಿಸಿತು ಬಿಡದಾಗಿಹ್ಯದ ಬಿಡಿಸಿತು 1 ತನ್ನ ತಾನರಸಿತು ಇನ್ನೊಂದರನೆ ಮರೆಸಿತು ಭಿನ್ನ ಭೇದ್ಹರಿಸಿತು ಚಿನ್ಮಯದ ಸುಖ ಬೆರೆಸಿತು 2 ಕಾಣದ ಕಾಣಿಸಿತು ಉಣದೂಟನೆÀ ತಾ ಉಣಿಸಿತು ಅನುಮಾನಗಳಿಸಿತು ಘನ ಮಹಿಪತಿಗೆ ನುಡಿಸಿತು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಯವದೋರೋ ದೇವ ಭಕುತ ಭಯನಿವಾರ ಅಭವ ಪ ದಯವದೋರೋ ನಿನ್ನ ಪಾವನಪಾದ ಸು ಸೇವಕ ಜನಮಹಜೀವ ಜಾನಕೀಧವ ಅ.ಪ ಪಾಪಗೆಲಿಯ ಬಂದೆ ಸಂಸಾರ ಕೂಪದೊಳಗೆ ನಿಂದೆ ಕೋಪಜ್ವಾಲದಿ ಬೆಂದೆ ವಿಷಯ ತಾಪತ್ರಯದಿನೊಂದೆ ಆ ಪರಲೋಕದ ವ್ಯಾಪಾರ ಮರೆದಿಹ್ಯ ದ್ವ್ಯಾಪಕನಾಗಿ ಬಲುತಾಪಬಡುವೆ ತಂದೆ 1 ಅಂಗಮೋಹವ ಬಿಡಿಸೋ ನಿನ್ನವರ ಸಂಗವ ಕರುಣಿಸೊ ಭಂಗವ ಪರಹರಿಸೊ ಜಗದವ ರ್ಹಂಗಹನು ತಪ್ಪಿಸೊ ಮಂಗಳಾತ್ಮ ನಿನ್ನ ಮಂಗಳಾಮೂರ್ತಿ ಎನ್ನ ಕಂಗಳೋಳ್ನಿಲ್ಲಿಸಿ ಹಿಂಗದಾನಂದ ನೀಡು 2 ದೋಷದಾರಿದ್ರ್ಯ ಹರಿಸೊ ಮನದ ಅಶಾಪಾಶ ಬಿಡಿಸೊ ಹೇಸಿಪ್ರಪಂಚ ಗೆಲಿಸೊ ಸುಜನರಾ ವಾಸ ತೀವ್ರ ಪಾಲಿಸೊ ದೋಷನಾಶ ಜಗದೀಶ ಶ್ರೀರಾಮ ನಿನ್ನ ದಾಸಾನುದಾಸೆನಿಸಿ ಪೋಷಿಸು ಸತತ 3
--------------
ರಾಮದಾಸರು
ದಯವಿರಲಿ ದಯವಿರಲಿ ದಾಮೋದರ ಪ. ಸಯವಾಗಿ ಬಿಡದೆನ್ನ ಸಾಕುವ ಶ್ರೀಕೃಷ್ಣಅ.ಪ. ಹೋಗಿ ಬರುವೆನಯ್ಯ ಹೋದಹಾಂಗೆಲ್ಲಸಾಗುವವನಲ್ಲ ನಾ ನಿನ್ನ ಬಿಟ್ಟುತೂಗಿ ತೊಟ್ಟಿಲು ಕೊನೆಗೆ ಸ್ಥಳದಲ್ಲೆ ನಿಲ್ಲುವುದುಹ್ಯಾಗೆ ನೀ ನಡೆದಂತೆ ಹಾಗೆ ನಾ ನಡಕೊಂಬೆ 1 ಇದ್ದಲ್ಲೆ ಎನ್ನನುದ್ಧರಿಪ ಶಕ್ತಿ ಅ-ಸಾಧ್ಯ ನಿನಗೆಂದು ನಾ ಬಂದವನಲ್ಲನದ್ಯಾದಿ ಕ್ಷೇತ್ರಮೂರ್ತಿಗಳಲ್ಲಿ ನಿಜ ಜ್ಞಾನ-ವೃದ್ಧಜನರ ಹುಡುಕಿ ನಿನ್ನ ತಿಳಿಯಲು ಬಂದೆ 2 ಸತತ ಇದ್ದಲ್ಲೆ ಎನ್ನ ಸಲಹೊ ಅದರೊಳಗಾಗಿಅತಿಶಯವು ಉಂಟು ವಿಭೂತಿಯಲ್ಲಿಗತಿಯು ಸಾಧನಕೆ ಅಭಿವ್ಯಕ್ತ ಸಂದರ್ಶನದಿಸ್ಮøತಿಗೆ ವಿಶೇಷ ಮಾರುತಿರಮಣ ನಿನ್ನ 3 ನೋಡಿದೆನೆ ನಾ ನಿನ್ನ ನೋಡದೆ ಎಂದೆಂದುಪಾಡಿದೆನೆ ಆರಾರು ಪಾಡದೊಂದುಮಾಡಿದೆನೆ ಅರ್ಚನೆಯ ಮೀಸಲಾದುದು ಒಂದುಮೂಢಮತಿಯಲಿ ಮುಂದೆ ನಿಂದೆ ಕೈಮುಗಿದು 4 ಬಂದೆನೊ ನಾನಿಲ್ಲಿ ಬಹುಜನ್ಮದ ಸುಕೃತ-ದಿಂದ ನಿನ್ನ ಬಳಿಗೆ ಇಂದಿರೇಶಒಂದು ಮಾತ್ರವು ಇಟ್ಟು ಸಕಲವು ಅರ್ಪಿಸಿದೆಬಂಧನ ಕಡಿವ ಭಕುತಿಯು ಜ್ಞಾನ ನೀಡುವುದು 5 ಬಿನ್ನಪವ ಕೇಳು ಸ್ವಾಮಿ ಎನ್ನನ್ನೊಬ್ಬನ್ನೆ ಅಲ್ಲಎನ್ನ ಹೊಂದಿ ನಡೆವ ವೈಷ್ಣವರನಇನ್ನವರಿಗೆ ಬಾಹೊ ದುಷ್ಕರ್ಮಗಳ ಕೆಡಿಸಿಘನಗತಿಗೈದಿಸುವ ಭಕುತಿ ಕೊಡು ಕರುಣದಿ 6 ರಾಜರಾಜೇಶ್ವರ ರಾಜೀವದಳನಯನಮೂಜಗದೊಡೆಯ ಮುಕುಂದಾನಂದಈ ಜೀವಕೀದೇಹ ಬಂದದ್ದಕ್ಕು ಎನಗತಿ ನಿ-ವ್ರ್ಯಾಜದಿ ಸುರಗಂಗೆ ಸ್ನಾನವನು ಮಾಡಿಸೊ 7 ಎನಗೆ ಆವುದು ಒಲ್ಲೆ ಎಲ್ಲೆಲ್ಲಿ ಪೋದರುಕ್ಷಣ ಬಿಡದೆ ನಿನ್ನ ನೋಳ್ಪ ಜ್ಞಾನವ ಕೊಡೊಚಿನುಮಯಮೂರುತಿ ಗೋಪಾಲವಿಠಲಘನಕರುಣಿ ಮಧ್ವಮುನಿಮನಮಂದಿರನಿವಾಸ8
--------------
ಗೋಪಾಲದಾಸರು
ದಾತ ಅವಗುಣ ಧೂತ ಅವಗುಣ ಧೂತ ದೇವಾಧಿದೇವ ಶ್ರೀದೇವ ಅವಧೂತ ಧ್ರುವ ಜೀವದ ಜೀವ ದೇವರ ದೇವ ವಾಸುದೇವ 1 ಪ್ರಾಣಕ ಪ್ರಿಯ ಮುನಿಜನಾಶ್ರಯ ಙÁ್ಞನಿಗಳಿಗೆ ಸಾಹ್ಯ ಅನುಕೂಲ ನಮ್ಮಯ್ಯ 2 ಅನಾಥ ಬಂಧು ಘನಕೃಪಾಸಿಂಧು ಅನುದಿನ ದೊರೆವ ದೀನನಾಥನೆಂದೆಂದು 3 ಮನದ ಮಾಣಿಕ ಅಣುರೇಣುಕ ವ್ಯಾಪಕ ಅನಂತಕೋಟಿ ಬ್ರಹ್ಮಾಂಡ ನಾಯಕ 4 ಪರಮ ಉದಾರ ಕರುಣಾಸಾಗರ ತರಳ ಮಹಿಪತಿಸ್ವಾಮಿ ಇಹಪರ ಸಹಕಾರ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾತ ನೀನೆ ಸ್ವಾಮಿ ಶ್ರೀಗುರುನಾಥ ವರ್ಮ ತೋರಿಕೊಡುವ ನಿಮ್ಮ ಧರ್ಮಗುಣ ಪ್ರಖ್ಯಾತ ಧ್ರುವ ಧರೆಯೊಳು ಸರಿಯಗಾಣೆ ಗುರುಧರ್ಮದಿಂದಧಿಕ ಕರುಣಿಸಿ ಆನಂದದಿಂದ ತೋರುತಿಹ್ಯ ಬ್ರಹ್ಮಸುಖ ವರಮುನಿಗಳ ಪ್ರಿಯ ಶರಣಜನಪಾಲಕ ಪರಮ ಸುಪಥದೋರಿ ಹೊರೆವ ಪೂರ್ಣತಾರಕ 1 ಬಡವನಾಧಾರಿ ನೀನು ಒಡಿಯನಹುದೊ ನಿಶ್ಚಯ ಕೊಡುವ ಭಕ್ತಿ ಮುಕ್ತಿದಾತ ದೃಢಭಕ್ತರಾಶ್ರಯ ಒಡಲ ಹೊಕ್ಕಿಹೆ ನಿಮ್ಮ ಕಡೆಯಗಾಣಿಸೊ ನಮ್ಮಯ್ಯ ಪಿಡಿದು ನೀ ಎನ್ನ ಕೈಯ ಕೊಡು ತೋರಿ ನಿಮ್ಮ ಸೊಹ್ಯ 2 ಪೊಡವಿಯೊಳು ಕ್ಷಮೆ ಎನಗೆ ಕೊಡು ಕರುಣಾಕಟಾಕ್ಷ ನೋಡಿ ನಿಮ್ಮ ದಯದಿಂದ ನೀಡೊ ನಿಜ ಸುಭಿಕ್ಷ ಬಿಡದೆ ಎಂದೆಂದು ನೀನು ಮಾಡೊ ಸಂರಕ್ಷ ಮೂಢ ಮಹಿಪತಿಗಿನ್ನು ಪೂರಿಸೊ ಮನದಪೇಕ್ಷ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾವಲ್ಲಿ ಕೂತಿದ್ದೀಯೊ ರೋಗಿಷ್ಠ ಕಾಯ ಎನ್ನನು ಕಾಯ್ಕೊಂಡು ಪ ಜೀವಕಂಟಕನಾಗಿ ಹೇಯದಿಂದೊಡಗೂಡಿ ಆವಕಾಲದಿ ರೋಗದ್ಹೊರಳುತ ಎಲೆ ಖೋಡಿ ಅ.ಪ ಏನು ಕರ್ಮವ ಮಾಡಿದ್ದೋ ಪಾಪಾತ್ಮ ನೀ ಹೀನಸ್ಥಿತಿಯ ಪೊಂದಿದಿ ನಾನಾವಿಧದಿ ಮಹಬೇನೆಯಿಂ ನರಳುತ ನೀನೆನ್ನ ಜತೆಗೂಡಿ ಬನ್ನಬಡಿಸುವಿ ಪಾಪಿ1 ಹೊಲಸಿನ ದ್ವಾರದಿಂದ ಇಹ್ಯಕೆ ಬಂದಿ ಮಲಮೂತ್ರ ತುಂಬಿಕೊಂಡು ತೊಳೆಯದಿರಲು ನಿಮಿಷ ಹೊಲಸಿಕ್ಕಿನಾರುವಿ ತಿಳಿದುನೋಡಲು ನಿನ್ನ ಸಲಿಗೆಯಿಂ ನಾ ಕೆಡುವೆ 2 ಎನ್ನ ಜೊತೆಯ ಪೊಂದಿರ್ದ ಕಾರಣದಿಂ ನಾ ನಿನ್ನ ಕ್ಷೇಮವ ಬಯಸುವೆ ಎನ್ನಯ್ಯ ಶ್ರೀರಾಮನುನ್ನತಡಿಗಳ ನಂಬಿ ಸನ್ನುತಿಯಿಂ ಕ್ಷಮೆಬೇಡಿ ಧನ್ಯನಾಗೆಲೋದೇಹ್ಯ3
--------------
ರಾಮದಾಸರು
ದಾಸನು ನಾ ನಿನ್ನಯ ಬೇಸರಿಸದ ಸೇವಾ ವಾಸುದೇವನೆ ಮಾಡುವ ಮನವಾ ವಾಸುಕಿಶಯನ ನೀ ನೀಡು ದೃಢವಾ ಪ ಭಾಸುರಾಂಗಿಯ ಶ್ರೀಶನೆ ಬಡ ದಾಸನ ಸೇವೆಯು ಮನಕ್ಹ್ಯಾಂಗೆ ಬಂತು ಶ್ರೀಶನ ಕೌಸ್ತುಭಕೆ ಆಶೆ ತಂತು ಅ. ಪ. ಅನುಗಾಲದ ನಿನ್ನ ನಾಮದ ಸ್ಮರಣೆಯಾ ಮನಸಿಜ ಪಿತಗೆ ಮೆಚ್ಚು ಬಾ ಧ್ಯಾನ ಕೇಳಲು ಕಿವಿ ನಿಮಿರಿಸಿದಾ ಘನ ಪ್ರಲ್ಹಾದನ ಸ್ಮರಣೆಗೆ ನಿಂತಿರ್ದಾ- ಘನ ಸಂಪ್ರೀತನ ಎನ್ನೊಳ್ಯಾಂಗ ಕರುಣಿಸಿದಾ ಮೇಣ್ ಕರಣದಿಂದ ಗಾಯನ ಎನ್ನಯ ಕಾಯಜ ಪಿತಾ ನಿನಗೆ ಶ್ರಾವ್ಯವಾದುದು ಅರಿಯೆನು ನಾ 1 ಮೇಣ್ ಪ್ರೀಯವಾದುದು ಹರಿಯೇ ಸುರ ಮಾನಿಯೆ ಮಾಯೆಯ ಹರಿದು ರಕ್ಷಿಸೇಯಾ ನಿನ್ನ ಮನಕಾನಂದವಾಗುವುದಯ್ಯಾ 2 ಮತಿವಂತನೆ ನೀ ಮಾಡುವ ಹರಿಪೂಜೆ ಚಿತ್ತಜಪಿತ ಹರಿಗಾಯ್ತು ಕೇಳ್ ಮುದದಿ ಹೃದಯ ತುಂಬೀತು ಅತಿ ಮಾನಿನಿಯೆ ವಿಧಿಪೂಜಿತನಿಗೆ ಸರಿ ಪಾತೆನ್ನ ಪೂಜೆಯಾಯ್ತು ಶ್ರೀ- ಪತಿ ಶ್ರೀಹರಿಯ ಮನಕೆ ಬಂದೀತು 3 ಮಾನವ ನಿನ್ನಯ ಹರಿಧ್ಯಾನವ ರಮಾಧ- ವನು ತಾ ಕೈಕೊಂಡಾ ತನ್ನ ಹೃದಯಾರವಿಂದದೆಡೆಗೆ ಸೆಳೆಕೊಂಡಾ ಮುನಿಶುಕ ಮುಖ್ಯರ ಧ್ರುವಾದಿ ಭಕ್ತರಾ ಮನಗೊಂಡ ಹರಿಯೆನ್ನ ಧ್ಯಾನಕಿಂಬುಗೊಂಡಾ ಮನದೊಳಗೆಂತು ಆತುಕೊಂಡಾ 4 ಪುರುಷೋತ್ತಮ ಹರಿ ಪರಮ ದಯಾರ್ಣವ ಕರುಣದಿ ನಿನ್ನ ಕೈಪಿಡಿದಾ ನಿಜದಾಸನೆಂದೊಡಬಡಿದಾ ವರಮಹಾಲಕುಮಿಯೆ ಸಿರಿಹರಿಸತಿಯೆ ಅನುದಿನ ಎನ್ನ ಮನದಿ ನೆಲೆಸೆ 5
--------------
ನರಸಿಂಹವಿಠಲರು