ಒಟ್ಟು 6420 ಕಡೆಗಳಲ್ಲಿ , 135 ದಾಸರು , 4140 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾನವ ನೀನುವಾದಿರಾಜರ ಪೂಜಿಸೋ ಪ ಶಾರ್ವರಿ ವತ್ಸರದೀ | ಜನಿಸಿ ಗೌರಿಗರ್ಭ ಸುಧಾಂಬುಧಿಲೀ ||ಪುರಬಾಹ್ಯ ಪುಟ್ಟಿದ | ಕಾರಣದಿಂದಲಿವರಯತಿ ವಾಗೀಶ | ಕರಜನೆನಿಸಿ ಮೆರೆದ 1 ವಿನುತ ಸಿರಿ ಹರಿಯ ಪೂಜಿಸಿದ 2 ವಾಲಿ ಭಂಡಾರವನೂ | ಶೋಧಿಸೆ ಅಲ್ಲಿಶೀಲ ಇನಜಾರ್ಚಿಸಿದ ||ಲೀಲ ವಿಗ್ರಹ ರಾಮ | ವಿಠಲ ಮೂರ್ತಿಗಳನ್ನಕೋಲಾಹಲದಿ ತಂದು | ಭಾಳ ಪೂಜಿಸಿದ 3 ವ್ಯಾಸರಾಜಾರ್ಚಿತನಾ | ದೇವನವೇದವ್ಯಾಸರಿಂದಲಿ ಗಳಿಸಿದಾ |ವ್ಯಾಸಮುಷ್ಠಿಕೆಯ ವಿ | ಶ್ವಾಸದಿಂದಲಿ ಪೊಂದಿಶ್ರೀಶ ಉಡುಪಿನ ಕೃಷ್ಣ | ವಾಸ ಸ್ಥಾನಕೆ ಬಂದ 4 ಕವಿಕುಲ ಸಭೆಯೊಳಗೇ | ಪೂಣೆಯ ಪುರದಿನವರಸಲಂಕಾರದೀ ||ಕವನ ರಚಿಸಿ ರುಕ್ಮಿ | ಣೀಶ ವಿಜಯ ಗ್ರಂಥಕವಿ ಕುಲೋತ್ತಂಸ | ತಾನೆನಿಸುತ್ತ ಮೆರೆದಂಥ 5 ಪಂಢರಿ ಪುರ ಮಾರ್ಗವ | ಸವೆಸುತ ಬರೆಪುಂಡು ಸೈನಿಕರ್ ಬರಲೂ ||ಪುಂಡಲೀಕಗೆ ವರದ | ಪುಂಡರೀಕಾಕ್ಷನಹಿಂಡು ಶ್ವೇತಾಶ್ವಗಳಿಂದ ವಾರಿಸಿದಾ 6 ಹರಿವಾಣ ಪೂರಣವ ||ಹಯವದನನು ಬಂದು | ಜಯ ಘೋಷದಲಿ ಮೆದ್ದುದಯ ದೃಷ್ಟಿ ತೋರಿದ | ಭಾವಿ ಮಾರುತರ 7 ಪಾದ | ಬಿಸಜವ ಕಂಡರ 8 ಬೊಮ್ಮ ರಕ್ಕಸನಾಗೀ 9 ಸಕಲ ಶಿಷ್ಯರವೆರಸಿ | ರಾಜರು ಬರೆರಕ್ಕಸ ಕರೆದ ವಾದಕ್ಕೇ ||`ಆಕಾಮವೈ` ಕೋ ನಸ್ನಾತನೆಂದೆನೆ ಅವಕಾಕು ರಂಡೆಯ ಪುತ್ರ | ತೋಕ ನೀನೆಂದ 10 ಮೇನೆ ಪಾಲಕಿ ಹೊರುವ | ನರೆಯಣ ಭೂತಯಾನ ವಾಹಕನಾದನೂ ||ಆನೆಂತು ಬಣ್ಣಿಪೆ | ಮುನಿಕುಲ ದಿನಮಣಿವೇಣುಗಾನ ಪ್ರಿಯ | ಕೃಷ್ಣ ಸೇವಕರಾ 11 ಆ ಮಹ ನೇತ್ರಾವತಿ | ಸಂಗಮವೆನ್ನಕೌಮಾರ ನದಿ ಸನಿಯದಿ ||ಈ ಮಹಾ ಮಹಿಮರು | ಸಾಸಿರ ಲಿಂಗದನೇಮದ ಪೂಜೆಗೆ | ನಿರ್ಮಿಸಿದರು ತೀರ್ಥ 12 ಪಾದ್ಯ | ಸ್ವರ್ಣ ಗರ್ಭನ ಪಿತಪೂರ್ಣಗೆ ಸುಪ್ರೀಯ | ಗಸದಳವೇನಿದು13 ಗರಳ ಮಿಶ್ರಿತ ನೈವೇದ್ಯ | ಪಾಚಕತೆರೆಹರಿಗೆ ಸಮರ್ಪಿಸಿದಾ ||ಸಿರಿಪತಿ ಕಂಠದೋಳ್ | ಕರಿಯ ವರ್ಣವ ಕಂಡುಅರಿತು ಸೇವಿಸಿದನು | ಹರಿಯ ಪ್ರಸಾದವ 14 ಸಿರಿ ಕೃಷ್ಣ | ನಂಘ್ರಿಗರ್ಪಿಸಿದ 15 ಅರಿಯು ಮುತ್ತಲು ಪುರವ | ಸೋದಾಧಿಪಮೊರೆಯ ಹೊಕ್ಕನು ರಾಜರ ||ಭರದಿ ನಾರಾಯಣ | ವರ ಭೂತನನ ಕಳುಹಿಅರಿಭಯ ವಾರಿಸಿ | ಪೊರೆದ ನಾಯಕನಾ 16 ಸೋದೆಯಲ್ಲೋರ್ವ ಶೈವ | ಬಲುಗರ್ವದಿವಾದ ಮಾಡುತಲವನೂ ||ವೇದ ಮತವ ಬಲು | ವಿಧದಿ ದೂಷಿಸಿ ಕಡುಬಾಧೆ ಪಡಿಸುತಲಿದ್ದ | ಬುಧಜನ ವೃಂದವ 17 ಭೃತ್ಯ ಭಾವದಿ | ವಿಜಯ ಪತ್ರವನಿತ್ತುನಿಜ ಬಿರುದುಗಳವರ | ಪದಕೆ ಅರ್ಪಿಸಿದ 18 ತ್ರಿವಿಕ್ರಮಾಲಯ ಸ್ಥಾಪನೆ | ರಚಿಸಿ ಮೆರೆದ ದಿವ್ಯ ಶಾಲೀವಾಹನ್ನ ||ಸಾವಿರೈನೂರ್ನಾಲ್ಕು | ಚಿತ್ರ ಭಾನುವಿನಲ್ಲಿರವಿಯು ಮೇಷಾರ್ಧದಿ | ಚರಿಸುವ ದಿನದಿ 19 ರಥದಿಮೂರ್ತಿಯ ಸೇರಿಸಿ | ಬದರಿಯಿಂದಭೂತ ನರೆಯಣ ಬರುತಿರೆ ||ಪಥದಿ ರಕ್ಕಸ ಸೆಣೆಸೆ | ಪೃಥುಕು ಆಯುಧ ಬಿಟ್ಟುರಥದ ಗಾಲಿಯಲಿಂದ | ಹತಗೈದನವನ 20 ವೇದಾರ್ಥ ಬೃಂಹಿತದ | ಬಹು ಗ್ರಂಥಗಳ್‍ಪದ ಪದ್ಯ ಸೂಳ್ಹಾದಿಯ ||ಸೋದೆ ಮಠದಿ ನಿಂದು | ವಾದಿರಾಜರು ರಚಿಸಿಬುಧರಿಗಾನಂದವ | ಮುದದಿ ಪಾಲಿಸಿದ 21 ತ್ರಿವಿಕ್ರಮ ರಥೋತ್ಸವದಿ | ಕರೆಯಲು ಬಂದದಿವಿರಾಜ ಜನರು ಕಳುಹಿ ||ಭವ್ಯ ಸು ಪಂಚ ವೃಂದಾವನಗಳ ರಚಿಸಿದಿವಿರಾಜ ಗರುಹಿದರ್ ತಮ್ಮಯ ಬರವನು 22 ಶಾರ್ವರಿ ವತ್ಸರದೀ | ಫಾಲ್ಗುಣ ವದ್ಯಮೂರನೆ ದಿವಸದಲ್ಲೀ ||ವರ ವೃಂದಾವನ ಪೊಕ್ಕು | ಗುರು ಗೋವಿಂದ ವಿಠಲನನಿರುತ ಧ್ಯಾನದೊಳಲ್ಲಿ | ವರವ ಪಾಲಿಸುತಿಹರ 23
--------------
ಗುರುಗೋವಿಂದವಿಠಲರು
ಮಾನವ ಪ ಸ್ಮರಿಸಿ ಜೀವಿಸು ರಂಗವಲಿದ ದಾಸರ ಪಾದ ಶರಧಿ ಚಂದಿರನಾದ ಮೊರೆ ಹೊಕ್ಕ ಶರಣಘುಕರಿಗೆ ಕೇಸರಿಯಾದ ಪರಮ ಸಾಧು ಸಹ್ಲಾದ ಅ.ಪ ತರಣಿ ತನಯನ ಸೂತ ಪುರಂದರಾರ್ಯರ ಗೃಹದಿ ತರಳನೆಂದೆನಿಸಿದಾತ ಮರುತ ದೇವನ ಪದಕೆ ಬರುವ ಯತಿಗಳ ದೂತ ವರದೇಂದ್ರ ತೀರ್ಥರಿಗೆ ಪ್ರೀತ || ಗುರುಧೇನು ಪಾಲ ವಿಜಯ ದಾಸವರ್ಯರ ಮಮತ ಭರಿತನಾಗುತ ಪೋಗಿ ಹರಿಣಾಂಕ ಭಾಗದಲಿ ತ್ವರಿತ ಸಿರಿ ಜಗನ್ನಾಥ ವಿಠಲಾಂಕಿತ ಪಡೆದಾತ ನಮಗೀತ ಗತಿ ಪ್ರದಾತ 1 ದುರಿತ ವಿದೂರ ಮೂರ್ಹತ್ತು ಶರಯುಗ್ಮ ಗ್ರಂಥಗಳ ಸುವಿಚಾರ ತೋರಿ ಬರುತಿಹ ದಿವ್ಯ ಹರಿಕಥಾಮೃತಸಾರ ಸಾರಿದಂಥ ಸುಧೀರ || ಕಾರುಣ್ಯದಲಿ ಪೊರೆವ ಧರಣಿಸುರ ಪರಿವಾರ ಸುಜನ ಕೋರಿಕೆಯ ಮಂದಾರ ಭೂರುಹದ ತೆರದಿ ಘುನ ಸೂರೆ ಕೊಡುವನುದಾರ ದುರಿತವಿಪಿನ ಕುಠಾರ 2 ಇವರ ಕವನ ಪಠಣ ಶ್ರವಣ ಮನನಗಳಿಂದ ಲವಕೇಶವಾಗದು ಜವನ ಭವನದ ಬಂಧ ಅವಿವೇಕತಮದಿ ವರಚರಿತೆ ತಿಳಿಯದೆ ನಿಂದೆ ಗೈದ ಮನಜ ದಿವಾಂಧ | ಭುವನದೊಳು ಬೆಳಗುತಿಹ ಇವರ ಮಹಿಮಾನಂದ ವಿವರಿಸಲು ಎನಗೊಶವೆ ಅವನಿಯೊಳು ನಾ ಮಂದ ಇವರ ಸನ್ನಿಧಿಯಲ್ಲಿ ಸಕಲ ನದಿಗಳ ವೃಂದ ನೆಲಸಿಹವು ನಲವಿಂದ 3 ಮೆರೆವ ಮಾನವಿ ಪುರದಿ ಇರುವ ಸ್ತಂಭದಿ ಜಾಣ ಎರಡೆರಡು ಸಚ್ಛಾಸ್ತ್ರವರಿತ ಘನ್ನ ಪ್ರವೀಣ ಪರವಾದಿಗಳ ವಾಗ್ಧುರದಿ ಗೆದ್ದ ಧುರೀಣ ಹರಿಗೆ ಪಂಚಪ್ರಾಣ || ಅರುಹಲೇನಿವರ ಚರಣನಂಬಿದ ಸುಜನ ಪರಮಭಾಗವತರೆನಿಸಿ ನಿರುತ ಹರಿಪದ ಧ್ಯಾನ ಪರರಾಗಿ ಮೆಟುತಲಿ ಮುಕುತಿಪಥ ಸೋಪಾನ ಸೇರಿದರು ನಿಜ ಸ್ಥಾನ 4 ಶಾಮಸುಂದರ ವಿಠಲ ಸ್ವಾಮಿಗತಿ ಪ್ರಿಯದಾಸ ಶ್ರೀಮದಕ್ಷತೆ ಗಂಧ ನಾಮದ್ವಾದಶ ಭೂಷ ತಿಮಿರ ದಿನೇಶ ಭೂಮಿ ವಿಬುಧರ ಪೋಷ || ಈ ಮಹಾತ್ಮರ ಚಾರುಧವಲಕೀರ್ತಿಪ್ರಕಾಶ ಸೋಮಸುಪ್ರಭೆಯಂತೆ ಪಸರಿಸುತÀ ಸಕಲದೇಶ ಸುಜನ ಕುಮುದ ವಿಕಾಸ ಗೊಳಿಸಿಗರೆದುದುಲ್ಹಾಸ 5
--------------
ಶಾಮಸುಂದರ ವಿಠಲ
ಮಾನವ ಶ್ರೀಗುರುಚರಣವ ಮಾಡುತ ಪೂಜೆಯ ತೋಷದಲಿ ಪ ಬೇಡುತ ನಿಜಸುಖ ಆಜ್ಞಾಚಕ್ರದೊ ಳಾಡುತ ಪರಮನೆ ನೀನಾಗಿ ಅ.ಪ ಸತ್ತು ಹುಟ್ಟಿ ಈ ಪೋಗುವದೇಹವ ನಿತ್ಯವು ಎನ್ನುತ ಪೋಷಿಸದೆ ಸತ್ಯಪ್ರಬಂಧವ ಶ್ರೀಹರಿಪಾದವ ನೆತ್ತಿಲಿ ಪೊತ್ತರ ಮಗನಾಗಿ 1 ಚಿತ್ತವ ಚಲಿಸದೆಸಿದ್ದಾಪುರದೊಳ ಗಿತ್ತರೆ ಬಂಧುರಸಿದ್ಧಿಗಳೂ ಅರ್ಥಿಯಿಂದ ಬಂದೊದಗುವ ಫಲಗಳ ವ್ಯರ್ಥವ ಮಾಡದೆ ಶೀಘ್ರದಲಿ 2 ಹರಿಯಜ ರುದ್ರರು ಈಶ ಸದಾಶಿವ ಪರತರಮೂರ್ತಿಯ ಧ್ಯಾನಿಸುತ ಗುರುವನೆ ಯಜಿಸುತ ಭಜಿಸುತ ಸರ್ವರು ಗುರುವೇಯಾಗಿಹ ತೆರದಲ್ಲಿ 3 ತತ್ವಮಸಿಯ ಬೋಧಾಮೃತ ಸೇವಿಸಿ ಮೃತ್ಯುವ ಜೇಸುತ ಧೈರ್ಯದಲಿ ಪೃಥ್ವಿಯೊಳೀಮಹದೇವನಪುರದೊಳು ಭಕ್ತರ ಪೊರೆಯುವ ದೊರೆಯನ್ನೆ 4
--------------
ರಂಗದಾಸರು
ಮಾನವ ಸಿಂಗನ ಪಾಡಿರೈ ಪ ಇಂಗಡಲಜೆಪತಿ | ಮಂಗಳ ಚರಿತ ಭು ಜಂಗಶಾಯಿ ಶುಭಾಂಗ ಅ.ಪ ಲಾಲಿಸಿ ದೇವ | ಮಹಾನುಭಾವ | ಅವತರಿಸಿದನು ಅಸುರಾಂತಕ | ಪ್ರೇಮದಲಿ ಗೋಕುಲದಲ್ಲಿ | ವಿಧಿ ಕುಲ ಜಾತ 1 ತಂದೆ ತಾಯ್ಗಳ ಬಂಧನ ಬಿಡಿಸಿದ ಧೀರ | ಭಕ್ತಮಂದಾರ | ಒಂದೆ ಬೆರಳಲಿ ಗೋವರ್ಧನ ಶೈಲವನು | ತಾ ಧರಿಸಿದನು ಮದವನು ಮುರಿದ | ಮೋದವಗರೆವ ಕರವ | ಕರುಣದಿ ಪಿಡಿವ 2 ಶ್ವೇತ ವಾಹನ ಸೂತ ಕಾಮಜನಕ ಸತ್ಯಭಾಮೆ ರಮಣ ಗೋಪಾಲ | ಸ್ವಾಮಿ ಕುಲಾಲ ಭೀಮಗೊಲಿದ ನಿಸ್ಸೀಮ ಮಹಿಮಾ ಶ್ರೀ ಗೌರಿ | ಮಾತುಳವೈರಿ ಹೇಮಾಂಬರಧರ ಶಾಮಸುಂದರ ವಿಠಲ | ಧೃತವನಮಾಲ3
--------------
ಶಾಮಸುಂದರ ವಿಠಲ
ಮಾನವ ಸಿರಿಯು ನಾಕಪತಿ ಮೊದಲಾದವರಿಗಸ್ಥಿರವು ಪ ಧನಕನಕ ವಸ್ತುವಾಹನವೊಂದು ಸ್ಥಿರವಲ್ಲ ಕನಸಿನಂದದಿ ಭಾಳ್ವೆ ಅಭ್ರಮಿಂಚು ತನುವಿನಲಿ ಹರಿಯ ಸೆರೆವಿಡಿದು ಕೊಂಬುದೆ ರೊಕ್ಕ ಚಿನುಮಯನ ಪಾಡುವುದೆ ಸಕಲ ಬದುಕು 1 ಇಂದು ನೀನರಿದು ಜ್ಞಾನದಿ ನಡೆವುದೆ ಮೋಕ್ಷ ಸಿಂಧು ಶಯನನ ನಾಮ ವೈಕುಂಠವೋ ಕಂದರ್ಪನುಪಟಳವ ಕಟ್ಟುವುದೆ ಕೈಲಾಸ ಮಂದರ ಧರನ ನೆನೆವುದೆ ಸಕಲವಸ್ತು 2 ಭಕ್ತವತ್ಸಲನ ನೆನವುದೆ ಸಕಲ ಸಂಪತ್ತು ಚಿತ್ತ ಶುದ್ಧಿಯಾಗುವುದೆ ಸಕಲ ಭಾಗ್ಯ ಉತ್ತರಿಸಿದರೆ ಭವದಸಕಲಪದವಿ3
--------------
ಕವಿ ಪರಮದೇವದಾಸರು
ಮಾನವನ್ಯಾಕದ್ಯೋ ಎಲೊ ಎಲೋ ಮಾನವನ್ಯಾಕದ್ಯೋ ಪ ಮಾನವನ್ಯಾಕದ್ಯೋ ಹೀನನೆ ಥೂಥೂ ಮಾನವಜನುಮದ ಖೂನವ ತಿಳಿಯದೆ ಅ.ಪ ನರನಾಗವತರಿಸಿಬಂದಿಹ್ಯ ಪರಿಯನು ಶೋಧಿಸಿ ಅರುಹುಗೂಡಿ ಸಿರಿವರನ ಕಥಾಮೃತ ಪರಮಭಕ್ತಿಯಿಂದ ಶ್ರವಣಮಾಡದ 1 ತನುನಿಜವಲ್ಲೆನಿಸಿ ಸತತದಿ ತನುಧನರ್ಪಿಸಿ ಘನತರಭಕುತಿಲಿ ವನಜನಾಭನ ಘನಸತ್ವಚರಿತವನು ಮನನ ಮಾಡದ 2 ಮಂದಮತಿಯ ಹರಿದು ಜಗಕೆ ಬಂದ ಕುರುಹು ತಿಳಿದು ಸಿಂಧುಶಯನ ಮಮತಂದೆ ಶ್ರೀರಾಮನ ಬಂಧುರಂಘ್ರಿ ನಿಜಧ್ಯಾಸವ ರುಚಿಸದ 3
--------------
ರಾಮದಾಸರು
ಮಾನವಾತ್ಮರೆ ನಿಮ್ಮ ಮಾನಸ ಪೂಜೆಯಿಂಮಾನವನಿಗೆ ಮೋಕ್ಷ ಸಾಧಿಸೀರಿ ಪ ರತ್ನ ನಿರ್ಮಿತ ಸುಚರಿತ್ರ ಮಂಟಪವನ್ನುಸತ್ಯಭಾಮೆಯ ಪತಿಗಿತ್ತು ಪೂಜಿಸುವೆ1 ಆಸನ ನೀಡುವೆ ಶೇಷಶಯನನೆ ಇಲ್ಲಿವಾಸ ಮಾಡಿ ಎನ್ನ ಸೇವೆ ಸ್ವೀಕರಿಸು2 ಧ್ಯಾನ ಮಾಡುವೆ ನಿನ್ನ ಗಾನ ಮಾಡುವೆ ನಿನ್ನಜ್ಞಾನ ಭೂಷಣ ಶೋಭಿತಾನನಾಂಬುಜ 3 ಧೃತ ವೇಣುಗೋಪಾಲ ಬಾರೋ ಮನಸಿಗೆ ತೋರೊಮೂರುತಿ ನಿನ್ನಯ ಸಮೀರ ಸಂಸ್ತುತನೆ 4 ಅಘ್ರ್ಯ ನೀಡುವೆ ನಾನು ಅನಘ್ರ್ಯ ವಸ್ತುಗಳಿಂದಸ್ವಘ್ರ್ಯಗ್ರಹಣ ಮಾಡೋ ಭರ್ಗ ಸೇವಿತನೆ 5 ಪಾದ್ಯ ನೀಡುವೆ ವೇದ ವೇದ್ಯ ಮಹಿಮನೇ ಮುನ್ನಾವದ್ಯ ಕಳೆದು ಭವದಿಂದ ಉದ್ಧರಿಸೆನ್ನ 6 ಆಚಮನವ ನೀಡುವೆ ಹೇ ಚತುರಾನನೇಶವಾಚಾಮಗೋಚರ ಮೋಚಕ ಹೇತು 7 ಸುದತಿ ಮೋಹನ ತವಮಧುಪರ್ಕವನೀವೆ ಮುದದಿ ಸ್ವೀಕರಿಸು 8 ಮತ್ತೆ ಆಚಮನವನಿತ್ತು ಪೂಜಿಪೆ ಕರವೆತ್ತಿ ಮುಗಿವೆ ಸರ್ವಭಕ್ತ ಪೋಷಕನೆ 9 ಗಂಗೆ ಯಮುನೆ ಗೋದಾ ತುಂಗೆ ಜಲವ ತಂದಿಹೆ ಅ-ನಂಗ ಜನಕ ಮಾಡೋ ಅಭ್ಯಂಗ ಸ್ನಾನ 10 ನಿರಿಗೆಗಳನೆ ಹಾಕಿ ಜರದ ಪೀತಾಂಬರ ಗ-ರುಡವಾಹನ ನೀನು ಧರಿಸು ಮಧ್ಯದಲಿ 11 ಹಾರ ಕಿರೀಟ ಕಾಂಚಿ ನೀರ ನೂಪುರ ಸು-ಕೇಯೂರ ನೂಪುರನೀವೆ ಧಾರುಣಿಪತಿಗೆ 12 ಸ್ವರ್ಣ ರಚಿಸಿದ ಸೂತ್ರವನು ಕೊಡುವೆ ಲಕ್ಷ್ಮೀರನ್ನ ಸೌರಭ ಗಂಧವನು ಸ್ವೀಕರಿಸು 13 ವಾಸುದೇವನೆ ದಿವ್ಯ ನಾಸಿಕೇಂದ್ರಿಯದಿಂದಈಸು ಧೂಪದ ಗಂಧ ವಾಸನೆ ಗ್ರಹಿಸೋ 14 ಮರುಗು ಮಲ್ಲಿಗೆ ಜಾಜಿ ಸುರಗಿ ಸೇವಂತಿಗೆಸುಮಗಳ ಪರಿಮಳ ಧರಿಸೋ ಮಧ್ಯದಲಿ 15 ಹತ್ತು ಅಂಗಗಳಿಂದ ಉತ್ತಮ ಸುಧೂಪವಎತ್ತುವೆ ನಿನಗೆ ಸರ್ವೋತ್ತಮ ಹರಿಗೆ16 ಆಕಳ ಘೃತದ ಅನೇಕ ದೀಪಗಳ್ಹಚ್ಚಿಶ್ರೀಕರ ತವ ಮುಖಾವಲೋಕಿಸುತ್ತಿಹೆನು 17 ಏಕಾರತಿ ಗೋಪಿಪ್ರೀತನೆ ಬೆಳಗುವೆನಾಕ ನಾಯಕ ಸುರಲೋಕ ಸೇವಿತನೆ 18 ಆರು ವಿಧದ ಅನ್ನ ಸಾರು ಪಾಯಸ ಭಕ್ಷ್ಯಭೂರಿ ಶಾಕಗಳೀವೆ ನೀರಜಾಂಬಕನೆ 19 ಮಾರಜನಕನೆ ಮುತ್ತಿನಾರತಿ ಬೆಳಗುವೆಶ್ರೀರಾಮನೆ ನಿನ್ನ ಮೋರೆಯ ತೋರೊ20 ಛತ್ರ ಚಾಮರ ವ್ಯಜನ ದರ್ಪಣ ಪರ್ಯಂಕಕರ್ಪುರ ತಾಂಬೂಲವಿತ್ತು ಪೂಜಿಸುವೆ 21 ಹತ್ತಾರು ಉಪಚಾರ ಚಿತ್ರ ಚರಿತನೆ ನಿನಗೆಅರ್ಥಿಯಲಿ ಕೊಡುವೆನು ಮುಕ್ತಿ ನೀಡೆನಗೆ 22 ಇಂದಿರೇಶನೆ ನಿನ್ನ ಮುಂದೆ ತುತಿಪನೆ ನಿಂತುನಂದಬಾಲನೆ ಕೃಪೆಯಿಂದ ನೋಡೆನ್ನ 23
--------------
ಇಂದಿರೇಶರು
ಮಾನವಿ ದಾಸರ | ನಿ ಸೇರೋಹೀನ ಮನುಜ ನಿನ್ನಘವನೆ ನೀಗುವ ಪ ಕೃತ ಯುಗದಲಿ ಹಿರಣ್ಯಜನೆನಿಸೀವಿತತ ಮಹಿಮ ಹರಿಯನೆ ಭಜಿಸೀ ||ಸತತದಿ ಸುಜನರ ಸಂತವಿಸಿ ಸಿರಿಪತಿಯ ಸೇವಿಸೆ ಸಹ್ಲಾದ ನೆನಿಸಿದಾ 1 ಎರಡೊಂದ್ಯು ಯುಗದಲಿ ಶಲ್ಯನಾಗಿ ಜನಿಸೀಕುರುಪಗೆ ಋಣರೂಪ ಸೇವೆ ಸಲಿಸಿ ||ಉರುತರ ಭಕುತಿಲಿ ಶೌರಿಯ ನೆನೆಯುತಹರಿಪದ ಸೇರಿದ ನೃಪಕುಲ ಮೌಳೀ 2 ವರಕಲಿಯಲಿ ದ್ವಿಜನಾಗವತರಿಸೀನರಮೃಗಾಖ್ಯಸುತ ಶ್ರೀನಿವಾಸನೆನಿಸೀ ||ವರದೇಂದ್ರ ಯತಿಯಲಿ ತರ್ಕವ ಕಲಿತುದುರುಳರ ಮುರಿದತಿ ಗರ್ವದಿ ಮೆರೆದಾ 3 ಭೃಗ್ವಂಶಜ ವಿಜಯಾಖ್ಯ ದಾಸ ಬಂಧೂಋಗ್ವಿನುತನ ಪ್ರಾಕೃತದೊಳು ಪಾಡೆ ||ದಿಗ್ಗಜ ಗರ್ವದಿ ಗೆಜ್ಜೆಯ ಕಟ್ಟಿದಅಗ್ಗದ ನಟನಿವನೆನುತಲಿ ಜರೆದಾ 4 ದಾಸರ ನಿಂದ್ಯದಿ ಬಂದುದು ಅಪಮೃತ್ಯುದೋಷನೀಗೆ ಗೋಪಾಲರ ಭಜಿಸೆನ್ನ ||ಔಷಧ ಪೇಳಲು ದಾಸರ ನಾಲ್ದಶವರ್ಷಾಯುಷ್ಯವ ಪೊಂದಿದವರನಾ5 ಇಂದು ಭಾಗದಲಾನಂದದಿ ಮೀಯೇಬಂದೊದಗಿತು ಜಗನ್ನಾಥ ನಾಮಾ ||ಪೊಂದುತ ಅಂಕಿತ ಕುಣಿಯುತ ಪಾಡುತಇಂದಿರೆಯರಸನ ಛಂದದಿ ತುತಿಸಿದ 6 ಪಾವನತರ ಹರಿಕಥೆ ಸುಧೆ ರಚಿಸೀಪವನ ಮತದವರನ್ನುತ್ತರಿಸೀ ||ಪವನನ ಹೃತ್ಕಂಜದಿ ನೆಲೆಸಿಹ ಗುರುಗೋವಿಂದ ವಿಠಲ ಪದಾಬ್ಜವ ಸೇರಿದ 7
--------------
ಗುರುಗೋವಿಂದವಿಠಲರು
ಮಾನಸ ಪೂಜೆಯನು ಮಾಡು | ಧ್ಯಾನ ಪೂರ್ವದಿಂದ ಕುಳಿತು ಪ ಜ್ಞಾನ ಭಕುತಿಯ ವಿಡಿದು ಲಕುಮಿ | ಪ್ರಾಣನಾಥನ ಪ್ರೇರಣೆಯಿಂದ ಅ.ಪ ಕಾಮ ಕ್ರೋಧವ ಹಳಿದು ವಿಷಾದವೆಂಬೋ | ಸ್ತೋಮಗಳನು ತೊರೆದು ರಜೋ ಮೊದಲಾದ || ತಾಮಸದ ಬುದ್ಧಿ ಬಿಟ್ಟು ನೇಮನಿತ್ಯ ತೀರಿಸಿಕೊಂಡು | ಈ ಮನಸ್ಸು ಇಟ್ಟು 1 ಹೃದಯ ಪದುಮದೊಳಗೆ ಹರಿಯ ಪದುಮ ಪದಗಳಿಟ್ಟು | ದೇಹ ಕದಲದಂತೆ ಇದ್ದು ಜ್ಞಾನ ಉದಿತವಾದ ದೃಷ್ಟಿಯ || ಹದುಳದಿಂದ ತಿಳಿದು ಅಂತರವೆಲ್ಲವನು ನೋಡಿ | ಕದವ ತೆರೆದು ಕೊಟ್ಟ ಮುದದಿ ದೃಢವ ಸಂಪಾದಿಸಿ2 ನೀಲ ರತುನದಂತೆ ಹೊಳೆವ ಪಾಲಸಾಗರತನುಜೆ | ಮೇಲು ಮಂಗಳರಮಣನಾದ ಮೇಲುಗಿರಿಯ ತಿಮ್ಮನ || ತವಕ ಬೀಳದಲೆ ಪೂಜೆ ವಿಧಾ | ಸಾಲುಗಳನು ತಿಳಿದು ವಿಶಾಲ ಬುದ್ಧಿ ಯುಕುತಿಯಿಂದ 3 ವೇದ ಮಂತ್ರಗಳನು ಪೇಳಿ ಆದಿಯಲ್ಲಿ ಪೀಠಪೂಜೆ- | ಯಾದ ತರುವಾಯ ವಿನೋದದಿಂದಲಾವರಣ || ಆದರಣೆಯಿಂದ ಬಳಿಕ ಮಾಧÀವರಿಗೆ ಸಕಲ ಭೂಷ- | ಣಾದಿಗಳನು ರಚಿಸಿ ಪುಣ್ಯಹಾದಿಯನು ತಪ್ಪದೆ 4 ದೋಷರಾಶಿಗೆ ದ್ವೇಷನಾಗಿ ಈ ಶರೀರವÀ ಘಾಸಿಮಾಡದೆ | ಪಾದ || ಲೇಸಿನಿಂದ ಭಜನೆಗೈದು ವಾಸವಾಗು ಪದದಲ್ಲಿ | ಶ್ರೀಶ ವಿಜಯವಿಠ್ಠಲರನ್ನ ದಾಸ-ದಾಸರ ದಾಸನೆಂದು5
--------------
ವಿಜಯದಾಸ
ಮಾನಿನಿ ಬಲು ನುಡಿಯೋದುಚಿತವೆಭಲಾ ಭಲಾ ಎನಿಸು ಅನುಗಾಲ ಪ. ಬಂದ ಜನರು ಬಲು ಚಂದಾಗಿ ಕುಳಿತಿಹರು ಚಂದಿರವದನೆ ಸುಭದ್ರಾಚಂದಿರವದನೆ ಸುಭದ್ರಾ ನಿನ್ನ ಮುಖಕುಂದಿತಾಕೆಂದು ಕಮಲಾಕ್ಷ 1 ಬಲ್ಲೆ ಭಾಷೆ ನಿನ್ನ ಕ್ಷುಲ್ಲತನದ ಬುದ್ಧಿಮಲ್ಲಿಗೆಯಂಥ ಸುಕುಮಾರಿಮಲ್ಲಿಗೆಯಂಥ ಸುಕುಮಾರಿ ಗರತಿಗೆ ಹೊಲ್ಲ ಮಾತುಗಳ ನುಡಿಯೋರೆ2 ಮಾನುಳ್ಳ ಮಗಳಿಗೆ ನಾನಾ ಮಾತುಗಳಂದಿ ಏನೆಂಬೋರಿದಕೆ ಜನರೆಲ್ಲಏನೆಂಬೋರಿದಕೆ ಜನರೆಲ್ಲ ಸತ್ಯಭಾವೆಮಾನಾಪಮಾನ ನಿನಗಿಲ್ಲ3 ಮದ್ಗುಣಕಿ ಹೂವು ಉದ್ದಾದರೇನ ಮುದ್ದು ಮಲ್ಲಿಗೆಯ ಸರಿಯೇನ ಮುದ್ದು ಮಲ್ಲಿಗೆಯ ಸರಿಯೇನ ಭಾವೆ ಸುಭದ್ರಾಗೆ ನೀನು ಸರಿಯೇನ 4 ತಂಗಿಗಾಡಿದ ಮಾತು ರಂಗರಾಮೇಶ ಕೇಳಿಬಂಗಾರದಂಥ ಗುಣನಿಧಿಬಂಗಾರದಂಥ ಗುಣನಿಧಿ ಸುಭದ್ರೆಗೆವ್ಯಂಗ್ಯ ಮಾತುಗಳ ನುಡಿವೋರೆ5
--------------
ಗಲಗಲಿಅವ್ವನವರು
ಮಾನಿಸರಿಗೊಶವಲ್ಲ ಪೊಗಳಿ ಪೇಳುವುದು ಪ ಮೇಧಾದಿ ಮುನಿ ತನ್ನ ತಪೋಸಿದ್ಧಿಗೆ ಸರ್ವ | ಮೇದಿನಿ ತಿರುಗಿ ಬರುತಲಿ ಇತ್ತಲು | ಸಾಧನಕೆ ಸೌಮ್ಯವಾದ ಭೂಮಿಯನು ನೋಡಿ ಇವ | ಮಣಿ ಮುಕ್ತಿ ತೀರದಲಿ1 ನೆಸಗಿದ ತಪಕೆ ಮೆಚ್ಚಿ ಹರಿ ಒಲಿದ ತೀವ್ರದಲಿ | ಬಿಸಿಜದಳ ಲೋಚನೆ ಲಕುಮಿಯಿಲ್ಲೀ || ಎಸೆವ ಮಂಜರಿ ವೃಕ್ಷದಲಿ ವಾಸವಾಗಿ | ವಸುಧಿಯೊಳು ವಾಸವಾಗಿ ಅಗ್ರದಲಿ ಮೆರೆದನು 2 ಪರಮೇಷ್ಠಿ ಬಂದು ಈ ಕ್ಷೇತ್ರದಲಿ ನಿಂದು ಚ ಪರಮ ಗತಿ ಕೊಡು ಎಂದು ಸ್ತುತಿಸಿದನು ಹರಿಯ3 ಇಲ್ಲಿಗೆ ಬಂದು ಸತ್ಕರ್ಮವನು ಮಾಡಿದಡೆ | ಎಲ್ಲ ಕ್ಷೇತ್ರದಲಿ ಮಾಡಿದ ಫಲಕಿಂತ | ಎಳ್ಳಿನಿತು ಮಿಗಿಲೆನಿಸಿ ಪುಣ್ಯ ತಂ | ದುಣಿಸುವುದು | ಎಲ್ಲೆಲ್ಲಿ ಇದ್ದರು ಸ್ಮರಣೆ ಮಾಡಿರೊ ಜನರು 4 ಸುಗಂಧ ಪರ್ವತವಾಸ ಪುರುಷೋತ್ತಮ | ನಿಗಮಾದಿಗಳಿಗೆ ಅತಿದೂರತರನೋ | ಸುಗುಣನಿಧಿ ವಿಜಯವಿಠ್ಠಲರೇಯ ಸರ್ವದ | ಗಗನದಲಿ ಪೊಳೆವನು ಬ್ರಹ್ಮಾದಿಗಳ ಸಹಿತಾ 5
--------------
ವಿಜಯದಾಸ
ಮಾಮನಿಶಂಹೃದಾ ಪ ಮಾಂಡವ್ಯಸೇವ್ಯಪದ 1 ಪುಂಡರೀಕ ಶ್ರಿತ ಪಾಂಡುತನಯ ಭೋ 2 ವಂದಿತ ಪದಯುಗ 3 ಸದ್ಧರ್ಮಶೀಲಹರಿ 4 ವ್ಯಾಘ್ರನಾಮ ದೈತ್ಯಾಗ್ರನಿಗ್ರಹಣೋತ್ರಸೇನ ತನಯಾಗ್ರವಿದಾರಣ5 ವನಮಾಲನರಹರೆ 6 ಸುಕುಮಾರ ಶರೀರ 7 ಸನಂದವಂದಿತ 8 ಖಂಡಪರಶು ಕೊದಂಡವೇತಂಡ ಹಸ್ತಭುಜದಂಡರಘೂದ್ವಹ 9 ಲಂಬಮಾನಚರಣಾಂಬುಜಕೇಶವ 10 ಪಾರಿಜಾತವರದಾರ್ಯವಿಠಲ ಶ್ರೀ 11
--------------
ಸರಗೂರು ವೆಂಕಟವರದಾರ್ಯರು
ಮಾಯ ಮೋಹಿಗಳಿಗೆಲ್ಲ ಭವಬಂಧಳಿಯುವುದೇ ಕಾಯ ಶುದ್ಧಲ್ಲದವಗೆ ಕರ್ಮಬಂಧ್ಹರಿಯುವುದೇ ಪ ಮುಣುಗು ಕಲಿತಿರುವನು ದಣಿವಿನಿಂ ಮುಕ್ತಹನೆ ಕುಣಿತಕಲಿತಿರುವವ ಮನದಿ ನಾಚುವನೆ ಒನಪು ಕಲಿತಿರುವಗೆ ಮನಸಿಜ ದೂರನೆ ಮನೆಮನೆ ತಿರುಗುವನು ಘನತೆಗೆ ಬಹನೆ 1 ಪಾದ ತಾಡಣೆಯು ತಪ್ಪುವುದೆ ಕೇಡುಗಾರಿಗೆ ಸುಖದ ಜಾಡು ತಿಳಿಯುವುದೆ ಕಾಡಡವಿಲಿರುವವಗೆ ರೂಢಿಯ ಸುದ್ದಿಹುದೆ ನಾಡ ಮಾತಾಡುವಗೆ ಕೇಡು ತಪ್ಪುವುದೆ 2 ನಿಂದಕಗೆ ಮುಂದಿನ್ನು ಹಂದಿಜನ್ಮ ತಪ್ಪುವುದೆ ಛಂದಸ್ಸರಿಯದವಗೆ ಕವಿತದಂದ ತಿಳಿಯುವುದೆ ಮಂದಿಗೋಷ್ಠಿಗ್ಹೋಗುವಗೆ ಕುಂದೊದಗದಿರುತಿಹ್ಯದೆ ತಂದೆತಾಯನ್ಹಳಿಯುವಗೆ ಬಂಧ ತಪ್ಪುವುದೆ 3 ಮೋಸಕಾರಿಗೆಮಶಾಪವು ತಪ್ಪುವುದೆ ಆಶಕಾರಿಗೆ ಮಹನಾಶ ಬಿಡುತಿಹ್ಯದೆ ದೇಶದೇಶ ತಿರುಗುವಗೆ ಘಾಸಿಯು ತಪ್ಪುವುದೆ ದಾಸಜನ ದೂಷಕಗೆ ಈಶನೊಲಿಮಿಹ್ಯದೆ 4 ಸುಗುಡಿಗೆ ಪತಿಸರಸ ಸೊಗಸಾಗಿ ಕಾಣುವುದೆ ಜಗಳಗಂಟಿಗೆ ವ್ರತದ ಬಗೆಯುಶೋಭಿಪುದೆ ಸುಗುಣೆಯರೊಡನಾಟ ಷಂಡನಿಗೆ ಸಲ್ಲುವುದೆ ಸುಗುಣ ಸಂಗಿಲ್ಲದೆ ನರಕ ಭುಗಿಲು ತಪ್ಪುವುದೆ 5 ಕಪಟತ್ವ ನೀಗದೆ ತಪವೃದ್ದಿಯಾಗುವುದೆ ಕೃಪಣತ್ವ ಬಿಡದವಗೆ ತಾಪತ್ರಳಿಯುವುದೆ ಜಪವಿಲ್ಲದೆ ವಿನಾ ಸುಫಲದೊರಕುವುದೆ ಗುಪಿತವನು ತಿಳಿಯದವಗಪರೋಕ್ಷವಿಹ್ಯದೆ 6 ಮಾನವನ ಗುಣರಿಯದೆ ಜ್ಞಾನ ಸ್ಥಿರವಾಹುದೆ ಜ್ಞಾನವಿಲ್ಲದೆ ಬೇರೆ ಧ್ಯಾನ ಸಿದ್ದಿಪುದೆ ದೀನನಾಥ ಮಮ ಪ್ರಾಣೇಶ ಶ್ರೀರಾಮನಡಿ ಖೂನವರಿಯದೆ ಮುಕ್ತಿ ಜಾಣೆ ಸುಖಬಹುದೆ 7
--------------
ರಾಮದಾಸರು
ಮಾಯಮತವೊಳಿತಲ್ಲ ನಿನಗೆನಾಯಿ ಜನ್ಮವು ಬಾರದೆ ಬಿಡದಲ್ಲ ಪ ಜಗಕೆ ಕಾರಣ ದೇವ ತಾನಿರಲುಬೊಗಳಿಕೊಂಬೆ ಭೇದವಿಲ್ಲೆಂದುತೆಗೆವನು ಯಮ ಬೆನ್ನ ಚರ್ಮ ಇದುನಗೆಯಲ್ಲ ಕೇಳೋ ತಿಳಿಯೊ ದುಷ್ಕರ್ಮ 1 ಭೇದವಿಲ್ಲೆಂದು ತಿಳಿದು ನೀಮಾದಿಗರ ಮನೆಯಲ್ಲಿ ಉಣಲೊಲ್ಲೆ ಯಾಕೊಸಾಧಿಸಿ ನೋಡಲು ನಿನಗೆ ಇಷ್ಟುಬದುಕುಂಟಾದರು ಉಸುರಲಿನ್ಯಾಕೋ 2 ಅಕ್ಕತಂಗಿಯರಿರಲು ನೀನುರೊಕ್ಕವಿಕ್ಕಿ ಮದುವೆ ಆಗುದ್ಯಾಕೊಚಿಕ್ಕ ತಂಗಿತಾಯಿ ಮೊದಲು ನಿನ್ನಲೆಕ್ಕದಲ್ಲಿ ನೋಡಲು ಒಂದಲ್ಲವೇನೋ3 ಸಂಕರ ಮತಕೆ ನೀ ಹೊಂದಿ ಪಂಕದೊಳು ಬೀಳಬೇಕಲ್ಲೊಸಂಕಟಗೊಳಗಾದಿಯಲ್ಲ ನಿನ್ನಬಿಂಕವ ಮುರಿವರು ಯಮನವರಲ್ಲೊ4 ಇನ್ನಾದರು ಭೇದಮತವನುಚೆನ್ನಾಗಿ ತಿಳಿಯೋ ರಂಗವಿಠಲನುತನ್ನ ದಾಸ್ಯವನು ಕೊಟ್ಟುಉನ್ನತ ಪದವೀವನು ನಿನಗೆ 5
--------------
ಶ್ರೀಪಾದರಾಜರು
ಮಾಯವಾಯಿತು ರತುನ | ಮರೆ ಮೋಸಮಾಡಿ ಪ. ಮಾಯವಾಯಿತು ಎನ್ನ ಮೋಹದ ಮಮ ಗುರುವೆಂತೆಂಬ ರತುನ ನೋಯಲೇಕಿದಕಿನ್ನು ನೃಹರಿ ಉ- ಪಾಯದಿಂದಪಹರಿಸಿವೈದನು ಅ.ಪ. ಕರಗತವಾಗಿ ಇತ್ತು | ಪ್ರಕಾಶವು ಧರಣಿಯಲ್ಲಿ ವ್ಯಾಪಿಸಿತ್ತು ಪರಿಪರಿ ಸಜ್ಜನಕೆ ತತ್ವದ ವರ ಸುಧೆಯನುಣಿಸುತ್ತಲಿತ್ತು ಕರಕರದು ಅಂಕಿತವ ಕೊಡುತಲಿ ಪರಮ ಸಾಧನಗೈಸುತಿತ್ತು 1 ಸುಂದರವಾಗಿ ಇತ್ತು | ದುರ್ಜನರಿಗದ ರಂದ ತೋರದಲೆ ಇತ್ತು ಒಂದೊಂದೂ ಗುಣ ವರ್ಣಿಸಲು ಈ ಮಂದ ಮತಿಗಳವಲ್ಲವಿನ್ನು ತಂದೆ ಮುದ್ದುಮೋಹನಾರೆಂ- ತೆಂದು ಜಗದಲಿ ಮೆರೆಯುತಿತ್ತು 2 ಮಾಸಿ ಪೋದಂಥ ಹರಿ | ದಾಸಕೂಟ ತಾ ಸ್ಥಾಪಿಸುತ ಈ ಪರಿ ವಾಸುದೇವನ ಗುಣಮಣಿಗಳ ರಾಶಿಭೂತದಿ ಅರುಹಿ ಶಿಷ್ಯರ ಸಾಸಿರಾನೂರ್ಮೇಲೆ ಹೆಚ್ಚಿಸಿ ತಾ ಸೂರೆಗೊಂಡಾನಂದವನು3 ಗತಶಾಲಿ ಸಾಹಸ್ರವು | ಮೇಲೆಂಟು ಶತವು ಮತ್ತರವತ್ತೆರಸುವು ವತ್ಸವಿಕ್ರಮ ಪ್ರಥಮ ಮಾಸವು ಪ್ರಥಮ ಪಕ್ಷದ ರಾಮನವಮಿ ಹಿತದಿ ಮಂಗಳವಾರ ಸೂರ್ಯನ ಗತಿಯು ನೆತ್ತಿಯೊಳೋರೆ 4 ಎಷ್ಟು ಪೊಗಳಲಳವು | ಆನಂದ ರತ್ನದ ಗುಟ್ಟರಿಯದು ಜಗವು ಶ್ರೇಷ್ಠ ಗೋಪಾಲಕೃಷ್ಣವಿಠಲನು ಕೊಟ್ಟು ಕಳುಹಿಸಿ ಧರೆಯೊಳ್ಮೆರಸಿ ಥಟ್ಟನೇ ತಾ ಕರೆಸಿಕೊಂಡು ಶ್ರೇಷ್ಠ ಶಯ್ಯೆಯ ಮಾಡಿಕೊಂಡನು 5
--------------
ಅಂಬಾಬಾಯಿ