ಒಟ್ಟು 8611 ಕಡೆಗಳಲ್ಲಿ , 132 ದಾಸರು , 4839 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರನ್ಯಾತಕ ಯದು ವೀರಾ|ಪದಾಂಬು ಜವದೋರಾ| ದಯರಸವಾಬೀರಾ| ಸಾರಿದವರಿಗಿನ್ನುದರಾವಾಗಿರಾ ಧೀರಾ ಪ ಮಂದ ಮುಗುದೆಯು ನಾನೆಂದು ಅರಿತು ಮೊದಲಿಂದು| ಕೈಯ್ಯ ಪಿಡಿದು ಬಂದು| ಕುಂದಾಲಿಸುವ ದಯಸಿಂಧು|ಉಚಿತ ವೇನಿಂದು 1 ಎನ್ನ ಬಿನ್ನಹ ಹೇಳಲೇ ಜಾಣೇ| ತಾಪಕೌಷಧಕಾಣೆ| ಕ್ಷಣಯುಗವ ನಿನ್ನಾಣೆ| ಮನ್ನಿಸಿ ತಂದು ತೋರಿನ್ನೆನೆ ಬಾರೇ ಪ್ರವೀಣೇ 2 ಶರಣ ಹೊಕ್ಕವರೆಂದು ಮರೆಯಾ|ನೆಂಬ ಮಾತಿದು ಖರೆಯಾ ಬಂದು ಕೂಡಿದ ತ್ವರಿಯಾ| ಗುರು ಮಹಿಪತಿ ಸ್ವಾಮಿಚರಿಯಾ ಬೊಮ್ಮತಾನರಿಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರಮ್ಮ ಭಾಗ್ಯನಿಧಿಯೆ | ಸಿರಿಯೆ ಪ ಬಾರಮ್ಮ ನಿನ್ನ ಪಾದಾರವಿಂದ ತೋರಲು ಅ.ಪ ಸರಸಿಜಾಕ್ಷನ ವಕ್ಷ ಮಂದಿರೆ ಇಂದಿರೆ ಸರಸಿಮುದವೆರಸಿ ನಿನ್ನರಸನೊಡನೆನೀ 1 ಸೀತಾರುಕ್ಮಿಣ್ಯಾದ್ಯವತಾರಿಣಿ ಬುಧ- ವ್ರಾತ ಮನಃ ಪದ್ಮ ವಿಹಾರಿಣಿ ಚೇತೋದ್ಭವ ಜನನೀ ಶ್ರೀತರುಣೀಮಣಿ 2 ಬ್ರಹ್ಮರುದ್ರೇಂದ್ರಾದಿ ಸುರಸೇವಿತೆ ಬ್ರಹ್ಮಾಣಿ ಗಿರಿಜಾ ಶಚೀವಂದಿತೆ ಪರ- ಬ್ರಹ್ಮ ಗುರುರಾಮವಿಠಲನ ದಯಿತೆ 3
--------------
ಗುರುರಾಮವಿಠಲ
ಬಾರಯ್ಯ ಗುರುದೇವರಾಯ ಶ್ರೀ ಹರಿಯೆ ನಮ್ಮಯ್ಯ ಗುರು ಭಕ್ತಜನ ಪ್ರಿಯ ಧ್ರುವ ನೀರೊಳು ಪೂಕ್ಕು ನಿಗಮನ ತಂದಿ ಬಾರಯ್ಯ ಧರಿಯ ಬೆನ್ನಿಲಿ ಪೊತ್ತು ನಿಂದಿ ನೀ ಬಾರಯ್ಯ ಧಾರುಣಿಯ ಗೆದ್ದು ಹಿರಣ್ಯಕನ ಕೊಂದಿ ಬಾರಯ್ಯ ಎಂದೆನಯ್ಯ ಗುರುತಂದೆಬಾರಯ್ಯ 1 ಮೂರು ಪಾದವನಳಿದುಕೊಂಡಿ ನೀ ಬಾರಯ್ಯ ಶಿರಗಳನೆ ಚೆಂಡಾಡಿ ಸಿರಿ ತಂದಿ ಬಾರಯ್ಯ ಗಿರಿಯೆನೆತ್ತಿ ನಿಂದಿ ಬಾರಯ್ಯ ಶ್ರೀ ಹರಿ ಮುಕುಂದಯ್ಯ ಗೋವಿಂದ ಬಾರಯ್ಯ 2 ಬರಿಯ ಬೆತ್ತಲೆ ಆಗಿ ವ್ರತವಳಿದಿ ಬಾರಯ್ಯ ಏರಿ ಕುದುರಿಯನೆ ರಾವುತನಾದಿ ಬಾರಯ್ಯ ಪರಮಭಕ್ತರನು ಹೊರಿಯಲಿ ಬಂದಿ ಬಾರಯ್ಯ ಪರಿಪರಿ ರೂಪವಾದಯ್ಯ ತರಳ ಮಹಿಪತಿ ಪ್ರಾಣದೊಡೆಯ ಬಾರಯ್ಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಾರಯ್ಯ ಬಾ ಬಾ ಯದುಕುಲರಾಯ | ಹೇ ಭಾಗವತಪ್ರಿಯ ಪ ಸಾರಸಾಕ್ಷ ಕರುಣಾರಸಪೂರಿತ ಮಾರಜನಕ ಭವತಾರಕ ಮುರಹರ ಅ.ಪ. ಬೃಂದಾರಕ ಬೃಂದ ಸುವಂದಿತ ಚರಣ | ಭುಜಗೇಂದ್ರಶಯನ ವಿಹಗೇಂದ್ರಗಮನ ಮಂದಹಾಸ ಬಲುಸುಂದರವದನಾ | ಶುಭಗಣಪೂರ್ಣ ಮಂದರಧರ ಗೋವಿಂದ ಭಜಕ ಜನ ಮಂದಾರನೆ ಮುಚುಕುಂದವರದ ರಾ ಕೇಂದುಕುಲಜಲಧಿ ಚಂದಮನೆನಿಸುವ ಇಂದಿರೆಯರಸ ಶ್ರೀ ಕರಿಗಿರೀಶನೇ 1
--------------
ವರಾವಾಣಿರಾಮರಾಯದಾಸರು
ಬಾರಯ್ಯ ಬಾರಯ್ಯ ಭಕ್ತವತ್ಸಲ ಹರಿ ಶ್ರೀಕೃಷ್ಣ ಪ ಭಕ್ತರು ಬಂದು ದ್ವಾರದಿ ನಿಂದು ಭಕ್ತಿಲಿ ಹಾಡುತ ಪಾಡುತಲಿರುವರು ಮುಕ್ತಿದಾತ ನೀನಲ್ಲದೆ ಸರ್ವ- ಶಕ್ತರಿನ್ಯಾರಿಹರೈ ಎನ್ನುತ ಪೊಗಳ್ವರು 1 ತಾಳಮೇಳದವರೆಲ್ಲರು ನಿನ್ನಯ ಊಳಿಗ ಮಾಡಬೇಕೆನುತಲಿ ಬಂದು ವೇಳೆ ವೇಳೆಗೆ ತಮ್ಮ ಸೇವೆಯ ಸಲಿಸುತ ಭಾಳ ಸಂಭ್ರಮದಿಂದ ಹಾರೈಪರೊ ಹರಿ 2 ತುಂಬುರು ನಾರದರ್ವೀಣೆಯ ನುಡಿಸಲು ರಂಭಾದ್ಯಪ್ಸರ ಸ್ತ್ರೀಯರು ನರ್ತಿಸೆ ವಿಶ್ವ ಕು- ಟುಂಬಿಯೆ ಬಾ ಬಾರೆನ್ನುತ ಸ್ತುತಿಪರು3 ಅಂಬರದಲಿ ದೇವತೆಗಳೆಲ್ಲರು ನೆರೆದು ತುಂಬಿ ಪುಷ್ಪವೃಷ್ಟಿಗಳನೆ ಮಾಡುತ ಕುಸುಮ ಮಳೆ ಗಂಭೀರದಿ ಸುರಿಸುತ ಪ್ರಾರ್ಥಿಸುವರು 4 ಅತ್ರಿ ವಸಿಷ್ಠ ಗೌತಮ ಮೊದಲಾಗಿ ರಾತ್ರಿಹಗಲು ಎಡೆಬಿಡದಲೆ ಸ್ತುತಿಸುತ ವೃತ್ರಾರಿಯ ಸುತನಿಗೆ ಸಾರಥಿಯೆ ವಿ- ಚಿತ್ರ ವ್ಯಾಪಾರಿ ಶ್ರೀಹರಿ ಎಂದು ಪೊಗಳ್ವರು 5 ಅಣುಮಹದ್ರೂಪನೆ ಘನಮಹಿಮನೆ ನಿನ್ನ ಮಣಿದು ಬೇಡಿ ಕೈಮುಗಿಯುತ ಸ್ತುತಿಪರು ಪ್ರಣವ ಪ್ರತಿಪಾದ್ಯನೆ ನಿನ್ನ ಗುಣಗಳ ಎಣಿಸಲಸಾಧ್ಯವೆನುತ ಕೊಂಡಾಡ್ವರು 6 ನವನವ ರೂಪದಿ ನಲಿಯುವ ದೇವನೆ ನವವಿಧ ಭಕುತರು ನಮಿಸುತ ಕರೆವರು ಭುವನ ಮೋಹನ ಸುಂದರಮೂರ್ತಿಯೆ ಎಂದು ಕವಿಗಳು ಪೊಗಳುತ ಕುಣಿಯುತಲಿರುವರು 7 ಎಡಬಲದಲಿ ಶ್ರೀ ಭೂದೇವಿಯರಿರೆ ಬಿಡದೆ ಛತ್ರಚಾಮರಗಳಿಂದೊಪ್ಪುತ ತಡಮಾಡದೆ ಬಾ ಮಡದಿಯರ ಸಹಿತದಿ ದಡ ದಡ ಬಾರೆಂದು ಬಡ ಬಡ ಕರೆವರು 8 ವಿಶ್ವರೂಪಕ ವಿಶ್ವನಾಮಕ ವಿಶ್ವತೋಮುಖ ವಿಶ್ವನಾಟಕ ವಿಶ್ವವ್ಯಾಪಕ ವಿಶ್ವಾಧಾರಕ ವಿಶ್ವ ಕುಟುಂಬಿಯೆ ವಿಶ್ವಾಸದಿ ಬಾ 9 ವಿರೋಧಿಕೃತು ಸಂವತ್ಸರ ಬರುತಿರೆ ಪರೋಪಕಾರವ ಮಾಡುತ ಸುಜನರು ವಿರೋಧಿಗಳ ದೂರಿಡುತಲಿ ಶ್ರೀ ಹರಿ ಸರೋಜದಳ ನೇತ್ರನÀ ಸ್ತುತಿಸುವರು 10 ಕಮಲಾಕ್ಷಿಯ ಒಡಗೂಡುತ ಬಾ ಬಾ ಕಮಲಾಸನ ಜನಕನೆ ಹರಿ ಬಾ ಬಾ ಕಮಲನಾಭ ವಿಠ್ಠಲ ಬೇಗ ಬಾರೆಂದು ಸುಮನಸ ವಂದ್ಯನ ಸ್ಮರಿಸುತ ಕರೆವರು11
--------------
ನಿಡಗುರುಕಿ ಜೀವೂಬಾಯಿ
ಬಾರಯ್ಯ ಬೇಗ ಶ್ರೀ ಶ್ರೀನಿವಾಸ ಭಕ್ತರ ನುಡಿಗೆ ಪ. ಬಾರೋ ನಿನ್ನ ಮುಖ ತೋರೊ ತ್ವರಿತದಲಿ ಸಾರಸಾಕ್ಷ ನಿನ್ನ ಸಾರಿದೆನಯ್ಯ ಅ.ಪ. ವೈಕುಂಠದಿಂದ ಬಂದೆಯೊ ಗಿರಿಗೆ | ಲಕ್ಷ್ಮಿಯು ತಾ ಪೋಗೆ ಬೇಕಾಗಲಿಲ್ಲವೊ ಅರಮನೆ ನಿನಗೆ | ಮುನಿಗಳ ವರದನಿಗೆ ಬೇಕಾದ್ವೈಭವ ನೀ ಕೈಕೊಳುತ ಸಾಕುತಲಿಪ್ಪೆಯೊ ನೀ ಕರೆದವರನು 1 ಶ್ರೀಸ್ವಾಮಿ ಪುಷ್ಕರಣಿಯ ದಡದಲ್ಲಿ | ನೀ ವಾಸಿಸುತಲ್ಲಿ ಸೇವಾದಿಗಳನು ಬಗೆಬಗೆ ಕೊಳ್ಳುತಲಿ | ಸುಜನರ ಪೊರೆಯುತಲಿ ಈ ವಿಧದಿಂದಲಿ ಭಾವಜನಯ್ಯನೆ ಪಾವಕಸಖನೊಳು ಪಾವನನಾಗಿಹೆ 2 ವರ್ಣಿಸಲರಿಯೆ ನಿನ್ನನು ದೊರೆಯೆ | ಲೋಕದಿ ಅಚ್ಚರಿಯೆ ಘನ್ನ ಸುಮಹಿಮನೆ ಬೇಡುವದರಿಯೆ | ನೀನೆ ಕೈಪಿಡಿಯೆ ಮುನ್ನ ಮಾಡಿದ ಘನ್ನ ಪಾಪಗಳು ಇನ್ನಿರಲಾರವೊ ಮನ್ನಿಸಿ ಪೊರೆಯೊ 3 ಜಗಸೃಷ್ಟಿಯಿಂದ ಜೀವರ ಮಾಳ್ಪೆ | ಜೀವರ ಸೃಷ್ಟಿಪೆ ತ್ರಿಗುಣಾದಿಗಳಿಂದ ತಿರುಗಿಸುತಿರ್ಪೆ | ಕರ್ಮದ ತೆರೆಮಾಳ್ಪೆ ವಿಗಡ ದೇಹದೊಳು ಬಗೆ ಬಗೆ ದೇವರು ತಗಲಿ ನಿನ್ನ ಪದನಗಧರ ಕಾಣರೊ 4 ಕಣ್ಣ ಬಿಟ್ಟಿರುವೆ ಬೆನ್ನೊಳೆ ಬೆಟ್ಟವೆ | ಮಣ್ಣ ತಿನುತಿರುವೆ ಚಿಣ್ಣ ನಿನಗೊಲಿದು ಚಿಣ್ಣನಾಗ್ವೆ | ಬೆನ್ನೊಳು ಪರಶುವೆ ಹಣ್ಣು ಕೊಟ್ಟವಳಿಗೆ ಒಲಿದು ಗೋಪಿಯರ ಕಾಯ್ದು ಬಣ್ಣಗೆಟ್ಟು ಹಯವನ್ನೇರಿದೆ5 ಆಕಾಶರಾಯನ ಮಗಳ ತಂದೆ | ಈ ಗಿರಿಯಲಿ ನೀನೆ ಸಾಕುವ ಬಿರುದು ನಿನ್ನದೆಂದೆ | ನೀ ಕಾಯಲೆಬೇಕೆಂದೆ ನೂಕಿ ಎನ್ನ ಭವತಾಪನೀಗಲೆ ಶ್ರೀಕಳತ್ರ ನಿನ್ನ ಭಕ್ತರೊಳಿಡಿಸೊ 6 ಅಪಾರಮಹಿಮ ಅದ್ಭುತಚರಿತ | ಶೇಷಾದ್ರಿಯೊಳ್ ನಿರುತ ವ್ಯಾಪಾರ ಮಾಡುತ ಗುಪ್ತದೊಳಿರುತ | ನಿಜ ಭಕ್ತಗೆ ಕಾಣುತ್ತ ಪರಿ ಅದ್ಭುತ ಚರಿತೆಯ ತೋರುವ ಗೋಪಾಲಕೃಷ್ಣ ವಿಠ್ಠಲನೆ ನೀ ಕಾಯೊ 7
--------------
ಅಂಬಾಬಾಯಿ
ಬಾರಯ್ಯ ಭಕ್ತವತ್ಸಲ ಶ್ರೀ ಗುರು ಮುದ್ದುಕೃಷ್ಣ ಮದನಗೋಪಾಲ ಧ್ರುವ ಯಾದವಕುಲತಿಲಕ ಶ್ರೀದೇವದೇವ ಸಾಧುಜನರ ಪಾಲಕ ಉದ್ಧವ ಪ್ರಾಣಪೋಷಕ ಆದಿಕೇಶವ ಸದಮಲ ಸುಖದಾಯಕ 1 ಇಂದೀವರದಳನಯನ ನಂದಕುಮಾರ ಸುಂದರ ಶುಭವದನ ಮಾಧವ ಮಧುಸೂದನ ಮಂದರಧರ ವೃಂದ ಗೋಕುಲೋದ್ಧರಣ 2 ಮುರಹರ ಸಂಕರುಷಣ ಉರಗಶಯನ ತೋರಯ್ಯ ನಿಮ್ಮ ಚರಣ ಬಾರಯ್ಯ ನಾರಾಯಣ ಗರುಡವಾಹನ ಹೊರೆಯಾ ಮಹಿಪತಿ ಪ್ರಾಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಾರಯ್ಯ ಭಾಗಣ್ಣನೇ | ಯನ್ನಯ ಮನಕೆ ಬಾರಯ್ಯ ಭಾಗಣ್ಣನೆಕರೆ ಕರೆ ಮನದ ವಿಷಾದವ ಕಳೆದು ಶ್ರೀಹರಿಯಲಿ ಮನವಿತ್ತು ಕರುಣಿಪುದಯ್ಯ ಅ.ಪ. ಗೋಪಾಲ ವಿಠಲನ ಭಜಕನೇ | ಹೇ ಉಮಾಪತಿಸುತ ಬಲುತ್ಯಾಗ ಶೀಲನೆ |ಶಾಪದಿ ನೊಂದ ಶ್ರೀನಿವಾಸಪ್ಪಗೆಆಪಾರಾಯುಷ್ಯವಿತ್ತು ಸಲಹೀದ 1 ತಡವು ಇನ್ಯಾತಕಯ್ಯಾ | ಗುರುಮಡದಿಯ ಸಲಹಿದ ಹರಿಯಾ |ಒಡಲೊಳು ತೋರಿಸಿ ಸಲಹೆಂದು ಬೇಡುವೆಕಡು ದಯಾನಿಧೆ ಅಡಿಗೆರುಗುವೆನಯ್ಯಾ 2 ಸಕಲ ಶಾಸ್ತ್ರದಿ ಬಲು ನಿಪುಣಾ | ಮಂತ್ರಸಕಲವ ಚಕ್ರದಿ ರಚಿಸಿದ ಧಿಷಣಾ |ಲಕುಮಿಯರಸ ಗುರು ಗೋವಿಂದ ವಿಠಲನೆಸಕಲಕ್ಕು ದೇವನೆಂದರುಹಿದ ಗುರುವೇ 3
--------------
ಗುರುಗೋವಿಂದವಿಠಲರು
ಬಾರಯ್ಯ ಯದುಕುಲತಿಲಕ ತೋರಯ್ಯ ನಿನ್ನ ಮುದ್ದು ಮುಖವಓರಂತೆ ಮುದ್ದಿಸಿ ಯಶೋದೆ ಕುಮಾರನೆ ಬಾರೆಂದಳೈಪ. ಅಂದವಾದ ನಿನ್ನ ಮುದ್ದುಮುಖದ ಚೆಂದವನ್ನು ತಾ ನೋಡಿಕಂದಿಕುಂದಿ ಇಂದಿರೆಯು ಮರುಳಾಗಿ ಕಂದ ನಿನ್ನ ಪೊಂದೇನೆಂದಳೈ 1 ಕೃಷ್ಣ ನಿನ್ನ ಮಕ್ಕಳಾಟಿಕೆ ಶ್ರೇಷ್ಠರಿಗೆ ಮೋಹನವಾಯಿತುದುಷ್ಟಮತಮಾತಂಗಕ್ಕೆ ಅಟ್ಟುವೊ ಸಿಂಹದ ಮರಿಯೆ2 ಇಂಥ ಹಯವದನನ ಇಂಥ ದೇವರ ನಾ ಕಾಣೆಪಂಥವೇನೊ ಎನ್ನ ಕೂಡೆ ದಿನಮಣಿ ತಿಂತಿಣಿಯೆ ಬಾರೆಂದಳೈ3
--------------
ವಾದಿರಾಜ
ಬಾರೆ ಗೌರಿ ಪೂಜಿಸುವೆನು ಸಾರಸಾಂಬಕಿ ಸಾರುವೆ ಸಂಸಾರದಿ ಸುಖದೋರೆ ವಿಧುಮುಖಿ ಪ ಕುಸುಮ ಗಂಧ ಪರಿಮಳ ಚಂದದಿ ಸಮರ್ಪಿಸುವೆನು ಪುಷ್ಪಫಲಗಳ1 ಮಂಗಳೆಂದು ಪಾಡುತ ಬೆಳಗುವೆನು ಆರುತಿ ಮಂಗಳಗೌರಿಯೆ ಕೊಡು ಸೌಭಾಗ್ಯ ಸಂತತಿ2 ಮಂಗಳ ಪ್ರದಾತೆ ಗಿರಿಸಂಭೂತೆ ಸುರನುತೆ ಮಂಗಳಾಂಗಿ ಕುರು ಕರುಣಾಮಯಿ ನಮೋಸ್ತುತೆ 3 ನಿತ್ಯ ಮಾಡಿಸೆ ಪುತ್ರ ಪೌತ್ರಾದಿ ಸಂಪದವಿತ್ತು ರಕ್ಷಿಸೆ 4 ರತಿಯ ಪತಿಯ ಪಿತಗೆ ಸದಾಪ್ರತಿಮೆಯೆನಿಸುವ ಅತಿಥಿಗಳನು ಸೇವಿಸುವ ಸುಮತಿಯ ಕೊಡು ಜವ5 ಸಡಗರದಿ ನಿಮ್ಮಡಿಯ ಶೇವೆ ಬಿಡುದೆ ಮಾಡುವೆ ಮೃಡನ ರಾಣಿ ಕೊಡುವರಗಳ ಗಡನೆ ಬೇಡುವೆ 6 ಶರಣು ಜನರ ಪೊರೆವ ಕಾರ್ಪರ ನಾರಸಿಂಹನ ಚರಣ ಕಮಲಯುಗದಿ ಭಕುತಿ ಇರಲಿ ಅನುದಿನಾ 7
--------------
ಕಾರ್ಪರ ನರಹರಿದಾಸರು
ಬಾರೈ ನಿನ್ನ ಮುದ್ದು ಮೊಗವನು ತೋರೈ ಯದುಕುತಿಲಕ ಎಂ-ದೋರಂತೆ ಮುದ್ದಿಸಿ ಯಶೋದೆÉ ಕುಮಾರನ ಬಾಯೆಂದಳೈ ಪ. ಥೈ ಥೈ ಥೈ ಥೈ ಥೈಯಿಥೈಯಿ ಥೈಯಿ ಥೈಯಿ ಥೈಯಿಥೈ ಥೈ ಥೈಯೆಂದು ಕೃಷ್ಣನ ಪಾಡಿದಳೆ1 ಕೃಷ್ಣ ನಿನ್ನ ಮಕ್ಕಳಾಟಿಕೆ ಕಷ್ಟರಿಗೆ ಕಾಲಕೂಟವಾಯಿತುದುಷ್ಟದೈತ್ಯ ಮತ್ತ ಮಾತಂಗಗಳಟ್ಟುವ ಸಿಂಹದ ಮರಿಯೆ 2 ದೀಪ್ತೋಷ್ಣ ಕಿರಣನು ಬರೆ ಕತ್ತಲೆಯತ್ತಲೆ ಪೋಪುದುಮತ್ತಿತ್ತ ಸುತ್ತಮುತ್ತಸುಳಿವುದೆ ಚಿತ್ತಜನ ಪೆತ್ತ ಹರಿಯೆ 3 ಚೆಂದದ ನಿನ್ನ ಚೆಲ್ವ ಸಿರಿಮೊಗದಂದವನು ತನಗಿಲ್ಲವೆಂದುಕಂದಿಕುಂದಿದಳಿಂದಿರೆ ಮರುಳಾಗಿ ಕಂದ ನಿನ್ನ ಹೊಂದಿ ನಿಂದಳೊ 4 ಇಂಥ ಸಿರಿಹಯವದನ ನಿನ್ನಂಥದೇವನು ದಾವನುಪಂಥವೇ ನಿನ್ನಗೂಡೆ ಗುಣಮಣಿತಿಂತಿಣಿಯಂತೆ ನೀನು 5
--------------
ವಾದಿರಾಜ
ಬಾರೈ ಪ್ರಭುವೆ ಬಾರೈ ಪ್ರಭುವೆ ಪ ತೋರೈ ಹರಿಪಾದವ ಗುರುವೆ ಕಮಲ ನಂಬಿದೆ ಭವ ಬಂಧನ ಹರಿಸಿ ಕರುಣದಿ ಜವನ ಭವನ ಬಿಡಿಸೋ ದೀನ ದಿವಿಜ ತರುವೆ1 ಹರಿಕಥಾ ಸುಧಾ ಸಾರ ವರ ರಹಸ್ಯವ ಪೊರೆ ಕರುಣದಿಂದಲರುಹಿಸದಾ ಪೊರೆಯೋ ವಿಭುವೆ 2 ಸುಂದರ ಸುಪ್ರೇಮ ಪಾತ್ರ ಕಂದನನುದಾಶಿಸುವದು ತಂದೆಗೆ ಥರವೆ 3
--------------
ಶಾಮಸುಂದರ ವಿಠಲ
ಬಾರೊ ಕೃಷ್ಣ ಬಾರೊ ಕೃಷ್ಣ ಬಾರೊ ಕೃಷ್ಣ ಮನದಸದನಕೆ ಪ ತೊರೊ ಕೃಷ್ಣ ತೊರೊಕೃಷ್ಣ ತೊರೊಕೃಷ್ಣ ಚರಣ ಬಡವಗೆ ಅ ಶಿರವ ನಿಡುವೆ ಚರಣದಲ್ಲಿದುರಿತಹರಣ ಕರುಣಭರಿತನೆ ಪೊರೆವ ಧರಣಿ ಧರಿಪನೆ 1 ಸಿರಿಯಮದದಿ ಮರೆತೆ ನಿನ್ನ ಕರೆದು ಪೊರೆಯೊ ಶರಣರಕ್ಷಕಾ ಅಳಿವೆ ಕ್ಷೇಮ ಧಾಮನೆ 2 ವೇದವಿನುತ ಮೋದಭರಿತ ಸಾಧುಚರಿತ ಆದಿ ಕಾರಣಾ ಕಾಯೊ ಬಂಧನೀಡ್ವನೇ3 ನೀರಜಾಕ್ಷ ವಾರಿನಿಲಯ ಸೂರಿಗಮ್ಯ ಪೂರ್ಣಧಾಮನೆ ಸರ್ವನಾಮ ಸರ್ವಕರ್ಮ ಸರ್ವಶ್ರೇಷ್ಟಸರ್ವ ಪ್ರೇರಕಾ 4 ಇಂದಿರೇಶ ನಂದಪೂರ್ಣ ಸುಂದರಾಂಗ ಬಂಧಮೋಚಕ ಕುಂದುರಹಿತ ವಂದನಾರ್ಹ ಬಿಂದು ಬಿಂಬ ಕಂಧರಾಶ್ರಯ 5 ಭುವನ ವಿತತ ಭುವನಮೂಲ ಭುವನ ಪಾಲ ಭುವನನಾಶಕ ಭುವನ ಭಿನ್ನ ಸ್ತವನ ಪ್ರೀಯ ಕವನವರಿಯೊ ಕವಿಬಿರೀಡಿತ ಭಕುತಿದಾಯಕ ಶಕುತ “ಶ್ರೀಕೃಷ್ಣವಿಠಲ” ಯುಕುತಿ ಗೊಲಿಯ ಲಕುಮಿನಾಯಕ
--------------
ಕೃಷ್ಣವಿಠಲದಾಸರು
ಬಾರೊ ಬಾರೊ | ಕರುಣಾಕರ ರಂಗನೆ ಬಾರೊ ||ತೋರೊ ತೋರೊ ಚರಣಾರ ವಿಂದವನೆ ಪ ಇಂದಿರೆ ರಮಣನೆ ಬಾರೊಸಿಂಧು ಶಯನ ಅರವಿಂದ ನಯನ | ಎನ್ನ ತಂದೆ ತಾಯಿ ಬಾರೊ 1 ಸರ್ಪಶಯನ ಬಾರೊ | ಕಂದರ್ಪನಯ್ಯಾ ಬಾರೋಶೂರ್ಪಕರ್ಣ ಪ್ರಿಯ ಭ | ಕ್ತಾರ್ಪಿತಾಲ್ಪಕೊಳ್ವ ಬಾರೋ2 ದೋಷ ದೂರ ಬಾರೊ | ಮಧ್ವೇಶ ವದಗಿ ಬಾರೋಶ್ರೀಶ ಮುದ್ದು ಮೋಹಾಭಿಧ | ಗುರು ಗೋವಿಂದ ವಿಠ್ಠಲ ಬಾರೋ 3
--------------
ಗುರುಗೋವಿಂದವಿಠಲರು
ಬಾರೊ ಬಾರೊ ರಂಗ-ಬಾರೊ ನಮ್ಮನೆಗೆ ಪ ಬೋರನ್ಹಾಕುವೆ ನಡೆಮುಡಿಯ ನಿಮ್ಮಡಿಗೆ ಅ.ಪ ಪರಿಮಳಾಂಬುವಿನಿಂದ-ಪದವ ತೊಳೆಯುವೆನೊ ವರಗಂಧಾಕ್ಷತೆಯನು-ಭರದಿ ಧರಿಸುವೆನೋ 1 ಹೊಸಪಟ್ಟೆಯನು ತಂದು-ಹೊಂದಿಸಿ ರಾಜಿಸುವೆ ಕುಸುಮದಿಂದರ್ಚಿಸಿ ಕೂಡೆ ಸಂತಸವ 2 ಕುಂಕುಮಾಗಿಲು ದಿವ್ಯ ಗುಗ್ಗುಲಹೊಗೆಯ ಬಿಂಕದಿಂದರ್ಪಿಸುವೆನು ಭೋಗಿಸಯ್ಯಾ 3 ಮೇಲೆ ಸದ್ಭಕ್ಷ್ಯ ತಾಂಬೂಲವರ್ಪಿಸುವೆ ಲಾಲಿತ ಮಹಮಂಗಳಾರತಿಯೀವೆ 4 ಬಿಡದೆ ಸಾಷ್ಟಾಂಗವ ನಿಡುವೆ ರಮೇಶ ಪೊಡವಿಯೊಳ್ ಮಹದೇವಪುರದ ಶ್ರೀಹರಿಯೆ5
--------------
ರಂಗದಾಸರು