ಒಟ್ಟು 3819 ಕಡೆಗಳಲ್ಲಿ , 122 ದಾಸರು , 2723 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯಯ್ಯ ರೋಗನಿಕಾಯಕಳೆದು ನಿನ್ನಕಾಯಿಕೊಂಡವರ ಕೂಡ ||ಈ ಯಣಕವೇ ಮೆಚ್ಚರೋ ಯತಿಗಳು ಆದ-ದ್ದಾಯಿತೋ ಶ್ರೀಶ ಗುಣಿ ಹೇ ಕರುಣೀ ಪಮೃತ್ಯುಂಜಯಾರಾಧ್ಯ ಮೃತ್ಯುವಿಗೆ ಮೃತ್ಯುಸತ್ಯ ನೃಸಿಂಹನೆಂದು ||ಸತ್ಯವತಿಯ ವರಪುತ್ರ ಪೇಳಿರಲು ತಾಮತ್ತೂ ಬರೆದಿಹ ಮಧ್ವ ಪ್ರಸಿದ್ಧ1ಧನುವಂತ್ರಿ ಧನುವಂತ್ರಿಯೆನೆ ವ್ಯಾಧಿ ಪರಿಹಾರ-ವೆನುತಿಹ ವಚನಗಳು ||ಗಣನೆಗೆ ಬಾರವೋ ಪ್ರಣತ ಜನರನಿಷ್ಟುದಣಿಸಲು ತಿಳಿದುನೋಡುದಯ ಮಾಡು 2ಪ್ರಾಣಮತದೊಳಿಪ್ಪ ಪ್ರಾಣಿಗಳಿಗೆ ಬಲಜ್ಞಾನಾರೋಗ್ಯಪ್ರದರಾ ಕ್ಷೋಣಿಯೊಳಿನ್ನಾರಾ ||ಕಾಣೆ ನಿನ್ನುಳಿದು ಶ್ರೀಪ್ರಾಣೇಶ ವಿಠಲರೇಯ ಸುಜೆÕೀಯ 3
--------------
ಪ್ರಾಣೇಶದಾಸರು
ಕಾಯೊ ಗೋವಿಂದ ಕಾಯೊ ಮುಕುಂದಮಾಯದ ತಡಿಯ ತಪ್ಪಿಸೊ ನಿತ್ಯಾನಂದ ಪ.ನಾನಾ ಯೋನಿಯ ಸುತ್ತಿ ನೆಲೆಗಾಣದಂತಾದೆನೀನೊಲಿದಿಂದೀ ಜನ್ಮವ ಪಡೆದೆಜ್ಞಾನ ಹೊಂದಲಿಲ್ಲ ಧರ್ಮದಾಚರಣಿಲ್ಲಏನು ಗತಿಯೊ ಎನಗೆ ಮುಂದೆಸಿರಿನಲ್ಲ1ಮರ್ಕಟಗೆ ಹೊನ್ನಕೊಡ ದೊರೆತಂತಾಯಿತುಮೂರ್ಖವೃತ್ತಿಯಲಿ ಆಯುಷ್ಯ ಹೋಯಿತುನರ್ಕಸಾಧನ ಘನವಾಗಿದೆ ಪುಣ್ಯ ಸಂಪರ್ಕವ ಕಾಣೆನೈ ಕರುಣಿಗಳರಸ 2ಎನ್ನ ತಪ್ಪಿನ ಹೊಳೆ ಒಳಗೊಂಬುದು ಒಂದೆನಿನ್ನ ದಯದ ಶರಧಿಯಲ್ಲದೆಇನ್ನೇನು ಮಾರ್ಗವು ಸಿಲುಕದು ತಂದೆ ಪ್ರಸನ್ನವೆಂಕಟಪತಿಹರಿದೀನಬಂಧು3
--------------
ಪ್ರಸನ್ನವೆಂಕಟದಾಸರು
ಕಾಸು ಕನಕದಾಸೆಯಾದುದೇ | ಹರಿಗೆ |ದಾಸ ಜನರನೆಲ್ಲ ಮರೆತನೇ ಕಡೆಗೆಪವಾಸುದೇವನು ಶ್ರೀನಿವಾಸನೆನಿಸಿಕೊಂಡು |ಶೇಷಗಿರಿಯ ಮೇಲೆ ವಾಸವಾಗಿರುವವಗೆಅ.ಪಛಪ್ಪನ್ನದೇಶದ ಕಪ್ಪವ ತರಿಸುವ | ಒಪ್ಪಿ ಜನರಸರ್ವ ತಪ್ಪಪಾಲಿಸುವ |ಸರ್ಪಶಯನ ನಮ್ಮ ತಾಪತ್ರೆ ಘನವೆನಲು |ಅರ್ಪಿತವಹುದೇತಿಮ್ಮಪ್ಪ| ವೆಂಕಟ ಪತಿಗೆ ||ಕಾಸು||1ಶನಿವಾರ ಶನಿವಾರ ಮನೆ ಮನೆ ಭಿಕ್ಷೆಗೈದು |ಮಿನುಗುವ ಡಬ್ಬಿಯೊಳಿಟ್ಟು ಜನರು ಪೂಜಿಸೆ ನಲಿದು |ವನಜಾಕ್ಷ ನಿನಗೆಂದು ಕಣಜಕ್ಕೆ ಸುರಿಯೆ ತಂದು |ಮನುಮಥ ಪಿತಗೆ ನಮ್ಮ ನೆನಪು ಎಂತಹುದೋ ||ಕಾಸು||2ಗಂಧಚಂದನನಾಮತೀರ್ಥ ಪ್ರಸಾದ |ಸುಂದರವಾಹನಹರಕೆ ವಿನೋದ |ಚಂದದಿ ನೋಡಲ್ ಹರಿಯ ಧನವಿಲ್ಲದಾಗದ |ಸುಂದರಾಮೂರ್ತಿಗೋವಿಂದಗೆ ಸಾರ್ವದಾ3xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಕೃಷ್ಣ ಇನ್ಯಾತರ ಶ್ರೇಷ್ಠನೆಸ್ತನ ಕೊಟ್ಟ ನಾರಿಯ ಕೊಂದು ಬಿಟ್ಟಾನೆ ಪ.ಅರ್ಜುನ ಯಾತರ ಭಂಟನೆನಿರ್ಲಜ್ಯದಿ ಧನುಷ್ಯ ಕೆಳಗಿಟ್ಟಾನೆÉ ಅ.ಪ.ಏನೇನೂ ಧೈರ್ಯವಿಲ್ಲವೊ ಕೃಷ್ಣಗೆಬಲು ಮೀನಿನಂತ ಚಂಚಲವೊ 1ಇಷ್ಟು ಎದೆಗಾರನಲ್ಲವೊ ಪಾರ್ಥಯುದ್ಧ ಬಿಟ್ಟರೆ ನಗುವರಲ್ಲವೊ 2ಸೊಲ್ಲುಸಾಲವ ಕೊಡುವೊನಲ್ಲವೊದೊಡ್ಡ ಕಲ್ಲು ಹೊರಿಸಲು ನಾಚಿಕೆ ಇಲ್ಲವೊ 3ಹೆಣ್ಣು ಬಾಳ್ವೆ ಬಲು ಹೊಲ್ಲೊಹರಡು ಸಣ್ಣವಲ್ಲವೊ ನಿನಗಲ್ಲವೊ 4ತಲೆದೂಗೊ ಲಕ್ಷಣ ಹೊಲ್ಲವೊಅತಿ ಮಲೆತು ನಡೆವ ಬುದ್ದಿ ಅಲ್ಲವೊ 5ವೇಷಗಾರಿಕೆ ಬಲು ಹೊಲ್ಲವೊವಿಶೇಷ ಪರಾಕ್ರಮ ಅಲ್ಲವೊಅರ್ಜುನ6ಬಿರಿಗಣ್ಣು ಲಕ್ಷಣ ಹೊಲ್ಲವೊದೊಡ್ಡ ಉರಿಮಾರಿಪುರುಷನಲ್ಲವೊ7ಮರುಳುತನ ಬಲು ಹೊಲ್ಲವೊಮಕ್ಕಳ ಕೊರಳು ಕೊಯ್ದರೆ ನಾಚಿಕೆ ಇಲ್ಲವೊ ಅರ್ಜುನ 8ತಿರುಕತನ ಬಲು ಹೊಲ್ಲವೊಅತಿ ಹರಕ ನೀ ಪುರುಷನಲ್ಲವೊ ಕೃಷ್ಣ 9ಚೋರತನದಿಂದ ಬಲು ಕೆಟ್ಯೊನಿನ್ನ ಧೀರತನವ ತೋರಿಸಿ ಬಿಟ್ಯೊ 10ಕೊಡಲಿಗಡುಕತನ ಹೊಲ್ಲವೊಛಲ ಹಿಡಿದರೆ ಬಿಡುವನಲ್ಲವೊ ಕೃಷ್ಣ 11ಅಹಲ್ಯದೇವಿಯ ಕೆಡಿಸಿದನೆಂದುಬಹು ಭೋಳೆ ಬುದ್ದಿಹೇಳಲೊನಿಂದುಅರ್ಜುನ12ನಾರಿಯ ಒಬ್ಬಗೆ ಒಪ್ಪಿಸಿಕೊಟ್ಯೊನೀ ಊರು ಕೇರಿ ಹಂಬಲ ಬಿಟ್ಯೊ ಕೃಷ್ಣ 13ವೈರಾಗ್ಯವ ತೋರಿಕೊಂಡೆಲ್ಲೊನಾಗನಾರಿಯ ಕೂಡಿಕೊಂಡೆಲ್ಲೊ ಪಾರ್ಥ 14ಪೋರತನವು ಬಲು ಅಲ್ಲವೊ ಕೃಷ್ಣನಿನ್ನ ಜಾರತನವ ಬಿಡಲ್ಲಿವೊ 15ದಾರಿದ್ರ್ಯತನ ಬಲು ಹೊಲ್ಲವೊದೊಡ್ಡ ವೀರನೆಂಬೊ ಗರವು ಅಲ್ಲವೊ ಅರ್ಜುನ 16ಅನ್ನವಸ್ತ್ರವು ನಿನಗಿಲ್ಲವೊಬಹು ಮಾನ್ಯನೆಂಬೊ ಗರವು ಅಲ್ಲವೊ ಕೃಷ್ಣ 17ರಾಜ ಲಕ್ಷಣ ನಿನಗಿಲ್ಲವೊರೂಪಮಾಜುಕೊಂಡ ಬುದ್ಧಿ ಅಲ್ಲವೊ ಅರ್ಜುನ18ದ್ವಂದ್ವ ಯುದ್ಧವÀ ಮಾಡಿದವನಲ್ಲವೊಕುದುರೆ ಚಂದಾಗಿ ಏರಿ ಓಡಲು ಬಲ್ಯೊ ಕೃಷ್ಣ 19ಕರೆದರೆ ಯುದ್ಧಕ್ಕೆ ಹ್ಯಾಗೆಂದುನೀನುತಿರುಗಿದಿ ತೀರ್ಥಯಾತ್ರೆಗಳೆಂದು ಅರ್ಜುನ 20ಕೃಷ್ಣ ಅರ್ಜುನರ ಈ ಸಂವಾದಸಂತುಷ್ಟ ರಾಮೇಶ ಕೊಡುವಮೋದ21
--------------
ಗಲಗಲಿಅವ್ವನವರು
ಕೃಷ್ಣ ನೀನೆ ರಕ್ಷಿಸೆನ್ನ |ಪಕ್ಷಿಗಮನ | ಲಕ್ಷ್ಮೀರಮಣ ||ಸೃಷ್ಟಿಗೊಡೆಯಾ ಜಿಷ್ಣುಪ್ರೀಯ |ದುಷ್ಟ ಹನನಾ ಶಿಷ್ಟ ಸ್ಮರಣಾ 1ಯಮಿಕುಲಾಳಿ | ಹೃದಯನಿಲಯಾಕಮಲನಯನಾ ವಿಮಲಚರಣಾ ||ಸುಮನಸಾದೀ | ನಮಿತ ಪಾದಂಕುಮುದಸಖನಾ ಸಮಸುವದನಾ 2ತಂದೆ ತಾಯೀ | ಯಂದ ಸಲಹೋಇಂದಿರೇಶಾ ಸುಂದರಾಸ್ಯ ||ವಂದಿಸುವೆ ಗೋವಿಂದ ನಿನಗೆ |ಸಿಂಧುವಾಸಾ ಬಂಧನಾಶಾ ||ಕೃಷ್ಣ||
--------------
ಗೋವಿಂದದಾಸ
ಕೃಷ್ಣ ಮಂತ್ರವ ಜಪಿಸೊ - ಏ ಮನುಜ |ಕೃಷ್ಣ ಮಂತ್ರವ ಜಪಿಸೊ ಪ.ವೈಷ್ಣವೋತ್ತಮನಾಗಿ ವಿಷ್ಣುವೆ ಗತಿಯೆಂದು ಅಪಜಪತಪಾನುಷ್ಟಾನ ಸ್ನಾನಕ್ಕೆ ಈ ಮಂತ್ರ |ಕಪಟಬುದ್ದಿಗಳನ್ನು ಕಟ್ಟುವ ಮಂತ್ರ ||ಉಪದೇಶದಲಿ ಜ್ಞಾನಕೊಟ್ಟು ಸಲಹುವ ಮಂತ್ರ |ಸುಪವಿತ್ರ ಮಾಡಿ ಸ್ವರ್ಗ ಸೂರೆಗೊಡುವ ಮಂತ್ರ 1ಸಕಲ ಸಾಧನೆಗಳಿಗೆ ಸಾರಭೂತದ ಮಂತ್ರ |ನಿಖಿಳ ದೇವರಿಗೆಲ್ಲ ಸಾಕ್ಷಿ ಭೂತದ ಮಂತ್ರ ||ಭಕುತಿಯಲಿ ದ್ರೌಪದಿಯ ಭಜಿಸಿದ ಈ ಮಂತ್ರ |ಮುಕುತಿಯ ಕೊಟ್ಟು ಜನರ ಪೋಷಿಸುವ ಮಂತ್ರ 2ಭಾವಿಸಲಣುರೇಣು ಪರಿಪೂರ್ಣವಾದ ಮಂತ್ರ |ಜೀವಗಳಿಗೆಲ್ಲ ಸಂಜೀವ ಮಂತ್ರ ||ಪಾವನ ಮಾಡಿ ಪಾಲಿಪುದೀ ಮಂತ್ರ |ದೇವ ಪುರಂದರವಿಠಲ ಮಹಾ ಮಂತ್ರ 3
--------------
ಪುರಂದರದಾಸರು
ಕೃಷ್ಣನ ನೆನೆವನೆ ಅಜ್ಞಾನಿ | ಸ್ವಾಮಿ |ಕೃಷ್ಣನ ಮರೆವನೆ ಸುಜ್ಞಾನೀ ಪಕೃಷ್ಣನಅನುದಿನಸ್ಮರಣೆಗೈವನೆ | ದುಷ್ಟ |ಕೃಷ್ಣನ ಪರಿಪರಿ ಜರೆವನೆ ಶ್ರೇಷ್ಠ ಅ.ಪಕೃಷ್ಣನ ಸ್ಮರಿಸೀಗ ಬದುಕಿದರುಂಟೇ |ಕೃಷ್ಣನ ನಂಬೀಗ ಜನಿಸಿದರುಂಟೇ ||ಕೃಷ್ಣ ಸೇವೆಯನಿತ್ಯಮಾಡುವನೆ ತುಂಟ |ಕೃಷ್ಣನಾಜೆÕಗೆ ತಪ್ಪಿ ನಡೆವನೆ ಬಂಟ 1ದುರುಳರ ಕಂಡು ತಾ ಪೊರೆವನೆ | ಕೃಷ್ಣ |ಶರಣರ ನೋಡೀಗ ಮುರಿವನೇ ಕೃಷ್ಣ ||ಮೊರೆಯಿಟ್ಟು ಕರೆದರೆ ಬಾರನೆ ಕೃಷ್ಣ |ಕರುಣದಿ ಇಷ್ಟಾರ್ಥ ಕೊಡನೇ ಶ್ರೀಕೃಷ್ಣ 2ಧನ್ಯನೆ ಕೃಷ್ಣನ ನೆನೆವನೆ ಪಾಪಿ |ಮೌನದಿ ಕೃಷ್ಣ ಎಂಬನೇ ಮೂಗ ಕೋಪಿ ||ಮಾನ್ಯನೇ ಕೃಷ್ಣನ ನೋಡದ ಕುರೂಪಿ |ಮುನ್ನ ಗೋವಿಂದದಾಸರಿಗೆಲ್ಲ ಗೋಪಿ 3
--------------
ಗೋವಿಂದದಾಸ
ಕೃಷ್ಣೇತಿ ಮಂಗಳಂ ದಿವ್ಯನಾಮ ಪಇಷ್ಟರಿಂದಲಿ ಭವಬಂಧನನಷ್ಟವಾಗಿ ಹೋಹುದೋ ಅ.ಪನಾರದಮುನಿ ತಾನು ನರಕ ಪಟ್ಟಣಕೆ ಹೋಗಿವಾರೀಜನಾಭ ಎಂದು ಒದರಿದಾಗ ||ಘೋರ ಪಾತಕವೆಲ್ಲ ದೂರವಾಗಿ ಹೋಯ್ತುಸೂರೆಯಾಯಿತು ಸ್ವರ್ಗಲೋಕವೆಲ್ಲ 1ಅಜಮಿಳನು ಈ ನಾಮ ಅಂತ್ಯಕಾಲಕೆ ಸ್ಮರಿಸೆನಿಜಪದವಿಯೈದಿದನು ನಿಮಿಷದಲಿ ||ಭುಜಗಭೂಷಣನು ತಾ ಶ್ರೀರಾಮನಾಮವನಿಜಕಾಂತೆಯನು ಕರೆದು ಉಪದೇಶವಿತ್ತ 2ಪಂಚಪಾಂಡವರನು ಪರಿಪಾಲಿಸಿತು ನಾಮಪಾಂಚಾಲೀ ಮೊರೆಕೇಳಿ ಪೊರೆಯಿತು ನಾಮ ||ವಂಚನೆ ಮಾಡಿ ಕೌರವರ ಮಡುಹಿ ನಿ -ಶ್ಚಿಂತೆಯಲಿ ಪಾಂಡವರ ಪಟ್ಟಗಟ್ಟಿದ ನಾಮ 3ಸರಸಿಯೊಳಗೆ ಮುಳುಗಿ ಅರಿಯ ಬಾಧೆಗೆ ಸಿಲುಕಿಕರಿರಾಜ ಹರಿಯೆಂದು ಮೊರೆಯಿಡಲು ||ತ್ವರಿತದಿಂದಲಿ ಬಂದು ಕರಿಯನುದ್ಧರಿಸುತಕರಿರಾಜವರದನೆಂದೆನಿಸಿಕೊಂಡ ನಾಮ 4ಧ್ರುವ ತನ್ನ ತಂದೆ ತೊಡೆಯ ಮೇಲೇರಲು ಪೋಗೆಅವನ ಮಲತಾಯಿ ಗರ್ಜಿಸಿದಳಾಗ ||ಧ್ರುವ ಸುಖಬಿಟ್ಟು ವನಕೆ ಪೋಗಿ ತಪ ಮಾಡಿಸವಿಯಾದಚಲಪದವ ಪಡೆದನಾಗ 5ಹಿರಣ್ಯಕಶಿಪು ತನ್ನ ಮಗನ ಬಾಧೆಯ ಪಡಿಸೆಗಿರಿಯ ಶಿಖರದಿಂದೀಡಾಡಲು ||ನರಹರೆ ನರಹರೆ ರಕ್ಷಿಸೆಂದನ್ನಲುನರಸಿಂಹ ರೂಪದಿಂದವನ ಪಾಲಿಸಿದ 6ಕಂದನ ಅಪರಾಧವ ಕೇಳದೆ ನೃಪನು ತಾನಂದತಿ ದಾರುಣ ಕಡಹದೋಳು ಕೆಡಹೆ ||ಅಂದು ಸುಧನ್ವ ಶ್ರೀಕೃಷ್ಣನೆಂದೆನಲಾಗಿಬೆಂದು ಕಂದಿವ ಎಣ್ಣೆ ತಣ್ಣೀರಾಯಿತು 7ಅಸುರ ಬಾಧೆಗೆ ಸಿಲುಕಿ ಅಶೋಕವನದಲಿಶಶಿಮುಖಿ ಬೀಜಮಂತ್ರವ ಜಪಿಸೆ ||ಅಸುರನ ಕೊಂದು ಅಶೋಕವನವ ಬಿಡಿಸಿವಸುಧೀ ಸುತೆಯ ಸಲಹಿದ ರಾಮನಾಮ 8ಪರಿಪರಿ ಭಕ್ತರನು ಪಾಲಿಸಿತು ಈ ನಾಮಪರಮ ಮಂಗಲವು ಪಾವನವು ಈ ನಾಮ ||ಸುರರು ಬ್ರಹ್ಮಾದಿಗಳು ಸ್ರೋತ್ರ ಮಾಡುವ ನಾಮಧರೆಯೊಳುಸಿರಿಪುರಂದರ ವಿಠಲ ನಾಮ9
--------------
ಪುರಂದರದಾಸರು
ಕೇಶವ ನಾರಾಯಣಮಾಧವ -ಹರಿ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ವಾಸುದೇವಎನಬಾರದೆ ?ಪ.ಕೇಶವನ ನಾಮವನುಏಸುಬಾರಿ ನೆನೆದರೂ |ದೋಷಪರಿಹವಪ್ಪುದು - ಏ ಜಿಹ್ವೆ ಅಪಜಲಜನಾಭನ ನಾಮವು - ಈ ಜಗ - |ದೊಳು ಜನಭಯಹರಣ ||ಸುಲಭವೇದ್ಯನೆನಲೇಕೆ ಸುಖಕೆ ಸಾಧನವಿದು |ಬಲಿಯೆಂಬ ಭಕ್ತನು ಬಗೆದು ರಸವನುಂಡು ಹೇಜಿಹ್ವೆ1ಹೇಮಕಶ್ಯಪ ಸಂಹಾರ - ಭಕ್ತರು ನಿನ್ನ |ನಾಮವ ಸವಿದುಂಬರು ||ವಾಮನ ವಾಮನನೆಂದು ವಂದಿಸಿದವರಿಗೆ |ಶ್ರೀಮದನಂತ ಪುರಂದರವಿಠಲನುಕಾಮಿತ ಫಲವೀವನು - ಹೇಜಿಹ್ವೆ3
--------------
ಪುರಂದರದಾಸರು
ಕೇಶವ ಬಾ ನಾರಾಯಣ ಬಾ ಬಾಮಾಧವಬಾ ಮಧುಸೂದನ ಬಾಪಗೋವಿಂದ ಬಾ ಬಾ ಗೋಪಾಲ ಬಾ ಬಾಗೋವರ್ಧನ ಗಿರಿಧಾರಿಯೆ ಬಾ ಅ.ಪರಂಗನೆ ಅಂದಿಗೆ ಗೆಜ್ಜೆಯಕಟ್ಟಿಚುಂಗುಬಿಟ್ಟು ರುಮಾಲನೆ ಸುತ್ತಿಶೃಂಗಾರದ ಹಾರ ಪದಕಗಳ್ಹಾಕಿಅಂಗಳದೊಳಗಾಡಲು ಕಳುಹುವೆನು 1ಚಂಡು ಬುಗುರಿ ಗೋಲಿ ಗಜ್ಜುಗ ಹರಿಯೆಗುಂಡು ಬಿಂದಲಿನಿಟ್ಟಿ ಕರದಲಿ ಕೊಡುವೆಹಿಂಡುಗೋಪಾಲರ ಕೂಡಿಸುವೆಪುಂಡರಿಕಾಕ್ಷನೆ ಪಾಲಿಸು ದೊರೆಯೆ 2ಹಸುಳೆ ನಿನಗೆ ಹೊಸ ಬೆಣ್ಣೆಯ ನೀವೆಬಿಸಿ ಬಿಸಿ ಕಡುಬು ಕಜ್ಜಾಯವ ಕೊಡುವೆಶಶಿಮುಖಿಯರ ಕೂಡಾಡದಿರೆನುವೆಮೊಸರು ಬೆಣ್ಣೆ ಪಾಲ್ಸಕ್ಕರೆ ಕೊಡುವೆ 3ಜರದವಲ್ಲಿ ಅಲಂಕರಿಸುತ ನಲಿವೆಪರಿಪರಿ ಗೆಳೆಯರ ಕೂಡಿಸಿ ಕೊಡುವೆಮುರಳಿ ನುಡಿಸೆನ್ನುತಕರಮುಗಿವೆಪರಮಾತ್ಮನೆ ಜಗನ್ಮೋಹನ ಹರಿಯೆ 4ಕಮಲಭವೇಂದ್ರಾದ್ಯಮರರು ಪೊಗಳೆಕಮಲಪುಷ್ಪ ಮಲ್ಲಿಗೆ ಮಳೆ ಕರೆಯೆಕಮಲನಾಭ ವಿಠ್ಠಲ ಶ್ರೀಹರಿಯೆಶ್ರಮ ಪರಿಹರಿಸೆನ್ನುತ ಪ್ರಾರ್ಥಿಸುವೆ 5
--------------
ನಿಡಗುರುಕಿ ಜೀವೂಬಾಯಿ
ಕೇಳು ಶ್ರೀ ಕೃಷ್ಣ ಕಥೆಯ ಬಾಳು ವೈಷ್ಣವರಪಾಳಿಕೆ ಭಕುತಿಯಿಂದಾಳಾಗಿ ಎಲೆ ಮನುಜ ಪ.ಖೂಳರೊಳು ಮಾತಾಡದೇಳು ಹರಿಭಟರಡಿಗೆಬೀಳು ಭಗವಜ್ಜನರ ಮ್ಯಾಳದೆದುರಿನಲಿಹೇಳು ಕೀರ್ತನೆ ನಾಮದೋಳಿಗಳ ತನುಮನದಿಊಳಿಗಮಾಡುಬಿಡದಾಳು ಕರಣಗಳ1ಕೂಳು ಕಾಸಿನ ಸವಿಗೆ ಕೀಳು ಮಾನಿಸರ ಹೊಗಳಿಕೋಳು ಬಂಧನ ಹೋಗದಿರು ಮನದಾಳಿಗೊಳಗಾಗಿಏಳೆರಡು ಭುವನಗಳ ಆಳುವ ಪಿತನಗುಣದೇಳಿಗೆಗೆ ಹರುಷವಂ ತಾಳು ಅನ್ಯವ ಮರೆದು 2ಗಾಳಿಯಸೊಡರುದೇಹ ನಾಳೆಗೆನ್ನದೆ ಸುಧೆಯಮೇಳೈಸಿಕೊಂಡು ಭವವೇಳಿಲಿಸು ನೀಜಾಳು ಭಾಷ್ಯಗಳಗತಿಹಾಳೆಂದು ಗುರುಮಧ್ವಹೇಳಿದಂತಿರುತಲಿ ದಯಾಳು ಪ್ರಸನ್ವೆಂಕಟನ 3
--------------
ಪ್ರಸನ್ನವೆಂಕಟದಾಸರು
ಕೇಳೆ ಯಶೋದೆ ನಿನ್ನ ಬಾಲಕನಾಟಗಳೂ |ಹೇಳಿಕೊಂಡರೆ ಸುಳ್ಳೇ ಕಾಣಿಸಿತಮ್ಮ ಪನೀರೊಳಾಡುವನಲ್ಲೆ, ಪೋರರ ಕೂಡಿಕೊಂಡು |ಮಾರಿಯೆಂಬೊದೇನು ಸಾರಿ ಬಾಹೊದೆ 1ಎಲ್ಲರಂತುಂಡು ಮನೆಯಲ್ಲಾಡಬಾರದೆ |ಕಲ್ಲೆತ್ತುವನೆ ಯಂಥ ಬಲ್ಲಿದನಂತೆ 2ನಿಮ್ಮ ಹಿತಾರ್ಥನಾಗಿ ಸಮ್ಮೀಸಿ ಪೇಳಿದರೆ |ಬೊಮ್ಮನ ಮಗನಂತೆ ನಮ್ಮನ್ನೇ ಬೈವ 3ಮೂರು ಕಣ್ಣವಪರನಾರೇರ ಮುಟ್ಟಲಾರ |ಊರೊಳಗಿವ ಬಲು ಮೀರಿದನಮ್ಮ 4ಸಣ್ಣವನೆನಬೇಡ ನಿನ್ನ ಮಗನಗೋಪಿ|ಅನ್ನಿಥವಾಡೆವೆಮ್ಮ ಚಿನ್ನಗಳಾಣೆ 5ಬೆಂಕಿಗಂಜದೆ ನಿರಾತಂಕದರೊಳಗಿಹ |ಮಂಕುತನವ ನೋಡೆ ಪಂಕಜನೇತ್ರೆ6ಇನ್ನೊಂದು ಮಾತು ಕೇಳೆ ಮೊನ್ನೆ ಮೊನ್ನೆ ಒಬ್ಬ |ಹೆಣ್ಣಿನ ಕೊಂದನಲ್ಲೆ ಅನ್ಯಾಯ ನೋಡೆ 7ಕಿತ್ತಿದನೊಂದು ಮರ ಮತ್ತೆರಡು ಮೂರೀದ |ಮತ್ತಗಜವ ಕೊಂದುನ್ಮತ್ತನ ನೋಡೆ 8ಸದ್ಯ ಹೋಗಲೀನಿತು ಇದ್ದೊಬ್ಬವನು | ಅಪ್ರ-ಬುದ್ಧನಾಗಬಾರದು ಬುದ್ಧಿಯ ಹೇಳೇ 9ಅಧಮರೊಡನೆನಿತ್ಯಕದನಮಾಡುವದೇಕೆ |ಮಧುಸೂದನನ್ನು ಒಳ್ಳೆ ಹದನದಲ್ಲೀಡೆ 10ಕಾಣ ಬಂದದ್ದಾಡಲು ಪ್ರಾಣೇಶ ವಿಠಲಗೆ |ಹೀನ ತೋರುವದಮ್ಮಾ ಏನನ್ನಬೇಕೆ 11
--------------
ಪ್ರಾಣೇಶದಾಸರು
ಕೊಟ್ಟುರಾಯ ಸಂತುಷ್ಟನಾದಕೃಷ್ಣನರಸಿಯರಿಗೆ ಶ್ರೇಷ್ಠದ ಉಚಿತವ ಪ.ನೀಲಮಾಣಿಕದೊಸ್ತ ಸಾಲದೆ ಹಿಡಿದೇಜಿಮೇಲು ಜರತಾರಿಪಟ್ಟಾವಳಿಮೇಲು ಜರತಾರಿಪಟ್ಟಾವಳಿಉಚಿತವನೀಲಾದೇವಿಗೆ ದೊರೆ ಕೊಟ್ಟ 1ಸಾರಾವಳಿಯ ಸೀರೆ ಥೋರ ಮುತ್ತಿನ ವಸ್ತಹಾರಭಾರಗಳು ಹಿಡಿದೇಜಿ ಮೊದಲಾಗಿಹಾರಭಾರಗಳು ಹಿಡಿದೇಜಿ ಚಾಮರವನಾರಿ ಭದ್ರಾಗೆ ದೊರೆಕೊಟ್ಟ 2ಮುತ್ತಿನ ಝಲ್ಲೆ ವಸ್ತ ಮತ್ತೆ ಕುದುರೆಯ ಸಾಲುಛsÀತ್ರಚಾಮರ ದಿವ್ಯಪಟ್ಟಾವಳಿಛsÀತ್ರಚಾಮರ ಉಚಿತವಮಿತ್ರವಿಂದಾಗೆ ದೊರೆ ಕೊಟ್ಟ 3ಬರಿಯ ಮಾಣಿಕದೊಸ್ತ ಜರದಪಟ್ಟಾವಳಿಸೀರೆತುರುಗ ತಂಬಟಿಯು ಮೊದಲಾಗಿತುರಗತಂಬಟಿಯು ಮೊದಲಾಗಿಹೆಗ್ಗಾಳೆಹರದಿಕಾಲಿಂದಿಗೆ ದೊರೆಕೊಟ್ಟ4ಲಕ್ಷ ಮಾಣಿಕದೊಸ್ತ ಪಕ್ಷಿಯಂತೆಹಾರುವಕುದುರೆಲಕ್ಷ ಸೂರ್ಯರ ಬೆಳಕಿಲೆಲಕ್ಷ ಸೂರ್ಯರ ಬೆಳಗುವ ಉಚಿತವಲಕ್ಷಣದೇವಿಗೆ ದೊರೆಕೊಟ್ಟ 5ಪಚ್ಚ ರತ್ನದವಸ್ತ ಅಚ್ಚ ಜರತಾರಿ ಸೀರೆಹೆಚ್ಚಿನ ಧನ ಕುದುರೆ ರಥಗಳುಹೆಚ್ಚಿನ ಧನ ಕುದುರೆ ರಥ ಜಾಂಬವಂತಿಅಚ್ಯುತನ ಮಡದಿಗೆ ದೊರೆಕೊಟ್ಟ 6ಹದಿನಾರು ಸಾವಿರ ಚದುರೆಯರುಅದ್ಭತ ವಸ್ತ ರಥಗಳುಅದ್ಭುತ ವಸ್ತ ರಥಗಳು ರಾಮೇಶನಸುದತೆಯರಿಗೆ ದೊರೆ ಕೊಟ್ಟ 7
--------------
ಗಲಗಲಿಅವ್ವನವರು
ಕೊಂಡಾಡಲಳವೆ ಕರುಣಾನಿಧಿ ಕಾವನದಂಡ ಸಂಜಿತ ಗುರುಸತ್ಯನಾಥರ ಕೀರ್ತಿ ಪ.ಶ್ರೀ ವಾಸುದೇದ ತಾ ಭಾವಿಸಿ ಚಿತ್ತದಿಭೂವಲಯಕೆ ಸುಜನಾವಳಿಗಾಶ್ರಯವೀವೆನೆನುತ ಶುಭದೇವವೃಕ್ಷವನಟ್ಟೆಈವರ ಪರಮಹಂಸಾವಲಂಬನ ತಾಳ್ದುಶ್ರೀ ವಾಯುಮತದಿ ತತ್ವವೆ ಲಕ್ಷಿಸುವ ಪ್ರೇಕ್ಷಾವಂತರಾಗಿಹ ಜೀವಕೋಟಿಗಳ ಕೃಪಾವಲೋಕನದೊಳಿಟ್ಟ ಅಪೇಕ್ಷಿತಭಾವಾರ್ಥಗಳನೆ ಕೊಟ್ಟು ನಂಬಿದಸೇವಕರ್ಗಭಯವಿಟ್ಟ ಗುರುರಾಯನ 1ಭಾನುತೋರುವ ಮುನ್ನೆ ಸ್ನಾನವ ಮಾಡಿ ಸುಮ್ಮಾನದಿಂದಲಿ ನೇಮ ಮೌನದೊಳಿದ್ದು ಶ್ರೀಮಾನಾಥನಂಘ್ರಿಯ ಮಾನಸದಲಿ ದೃಢಧ್ಯಾನದಿಂ ಬಲಿದುಗೀರ್ವಾಣಭಾಷ್ಯಾಮೃತಪಾನವ ಜನರಿಗೆ ಸಾನುರಾಗದಲಿತ್ತುನಾನಾ ತತ್ವಾರ್ಥ ವ್ಯಾಖ್ಯಾನವ ಜನರಿಗೆತಾನಂದು ಬೋಧಿಸಿದತಾಮಸಜ್ಞಾನವನೋಡಿಸಿದ ಆ ಕಾಮಧೇನುವೆನಿಸಿ ಎಸೆದ ಗುರುರಾಯನ 2ಭೇದವರ್ಜಿತ ಮತ್ತವಾದ ಕುಂಭಿಯಕುಂಭಭೇದಕಸಿಂಗಹಲಾಧಾರಿಹರಿಸಗುಣೋದರ ಸಾಕಾರಮಾಧವಹರನುತಪಾದನೆನುತಸೂತ್ರವೇದ ಪುರಾಣದಿಸಾಧಿಸಿ ಕುತ್ಸಿತವಾದಿಗಳಪಾದಾಕ್ರಾಂತರ ಮಾಡಿ ಮೇದಿನಿಯೊಳು ಜಯನಾದಭೇರಿಯ ಹೊಯಿಸಿದ ಮುಕ್ತಿಯಸಾಧನ ತೋರಿಸಿದ ಭ್ರಷ್ಟಂಕುರೋದಯ ಮಾಣಿಸಿದ ಗುರುರಾಯನ 3ಕಾಲಕಾಲಕೆ ಧರ್ಮ ಪಾಲಿಸಿ ಯಾಚಕಜಾಲಕೆ ಮನ್ನಿಸಿ ಮೂಲ ಮಂತ್ರೋಪದೇಶಪೇಳಿ ಪೂತರ ಮಾಡಿ ಹಾಲು ಸಕ್ಕರೆ ತುಪ್ಪಹೋಳಿಗ್ಯನ್ನವನಿಕ್ಕಿ ಮೇಲೆ ದ್ರವ್ಯವನಿತ್ತುಪಾಲಿಸಿ ತಾಯಿತಂದೆಗಳ ಹಂಬಲ ಬಿಡಿಸಿ ಲೋಕದವರಿಗಭಿಲಾಷಾ ಪೂರ್ಣಾನುಕೂಲಚಿಂತಾಮಣಿಯ ಯತಿಕುಲಮೌಳಿಮಕುಟಮಣಿಯ ವಿರತಿಭಾಗ್ಯಶಾಲಿ ಸುಗುಣಖಣಿಯ ಗುರುರಾಯನ 4ಮಣ್ಣು ವನಿತೆಸತಿಹೊನ್ನಿನ ಬಯಕೆಯಘನ್ನತೆಜರಿದುಪಾವನ್ನಮಹಿಮನಾದಚೆನ್ನ ಸತ್ಯನಿಧಿ ತೀರಥನ್ನ ಕರೋದ್ಭವತನ್ನಾಕಷೆಂಬುವಭಿನ್ನವಚಂದ್ರಿಕೆಯನ್ನು ಪ್ರಕಾಶಿಸಿ ಪೂರ್ಣಚಂದ್ರಮನಂತೆಉನ್ನತ ಕಳೆಯುತ ಚಿನ್ಮಯ ವರದ ಪ್ರಸನ್ನ ವೆಂಕಟಾಧಿಪನ ಭಜಿಸಿನಿತ್ಯಧನ್ಯನೆನಿಸುತಿಪ್ಪನ ಸತ್ಯಾಭಿನವರನ್ನನ ಪೊರೆದÀಪ್ಪನ ಗುರುರಾಯನ 5
--------------
ಪ್ರಸನ್ನವೆಂಕಟದಾಸರು
ಕೋಲಕೋಲೆಂದು ಕೋಮಲೆಯರೆಲ್ಲರಕಾಲುಗೆಜ್ಜೆಯು ಘಿಲ್ಲು ಘಿಲುಕೆಂದು ಇಲ್ಲೆ ಪ.ಸಿಂಧುಶಯನನ ಚಂದದಲೆ ನೋಡಿಆನಂದ ಭಾಷ್ಪದ ಬಿಂದು ಉದುರುತ ಪಾಡಿಮಂದಹಾಸದಿ ಮನೆಗೆ ಬಾರೆನಲುಕೂಡಿಕೊಂಡು ಕೃಷ್ಣನ ಸಭೆಯ ಪ್ರವೇಶಮಾಡಿ 1ಕರಲಾಘವ ಧರ್ಮ ಕೊಟ್ಟನು ರಾಜ ಶ್ರೇಷ್ಠನು ಮನನರಹರಿಯಲ್ಲಿಟ್ಟಿಹನು ವರಸಿಂಹಾಸನ ಏರಿದಶ್ರೇಷ್ಠ ತೋರಿದ ಬಲುಹರುಷ ಬೀರಿದರಾಜಗೋಪಾಲನ ನೋಡುವ ವರವ ಬೇಡುವ 2ಜಳಕುಜಳಕುರಂಗ ಜಳಜಳಿಸುತ ಬರಲುಬೆಳಕು ತುಂಬಿತು ಬಹಳೆಮಂದಿರದಲಿಥಳಕು ಥಳಕನೆ ಹೊಳೆವ ಸಿಂಹಾಸನದÀಲಿಕುಳಿತ ಕೃಷ್ಣನು ಅಣಕಿಸಿ ಸೂರ್ಯನ 3ಭೇರಿತುತ್ತೂರಿನಾನಾಪರಿವಾದÀ್ಯವಸಾರಿ ಕುಳಿತ ಧೀರ ಮುರಾರಿಚಾರುಮಲ್ಲಿಗೆ ಮಳೆಗರೆದ ಸುಖಸುರಿವರರಾಯರು ಏನು ಧನ್ಯರೆÉ ರಾಜಗೋಪಾಲನ್ನ ನೋಡುವ 4ಹಲವು ರಾಯರು ಹಲವು ಯಾದವರುಬಲುಸೊಗಸಿಲೆ ಬಂದು ಕುಳಿತಾರೆ ಅವರುಹಲಧರನ ಹತ್ತಿರೆ ರಾಮೇಶನವರುಜಲಜಾಕ್ಷನ ನೋಡುತಲೊಪ್ಪುತಿಹರು 5ಕಡು ಚಲ್ವ ರಾಮೇಶನ ಮಡದಿಯರುಉಡುರಾಜಮುಖಿಯರು ನಡೆದು ದ್ರೌಪತಿಸುಭದ್ರೆಯರ ಮಾನÀ ಶುದ್ಧೆಯರಹರಿಯ ಅಡಿಗೆರಗುವ ರಾಜಗೋಪಾಲನ ನೋಡುವ 6
--------------
ಗಲಗಲಿಅವ್ವನವರು