ಒಟ್ಟು 4256 ಕಡೆಗಳಲ್ಲಿ , 116 ದಾಸರು , 2832 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡೊ ನೋಡೊ ರಂಗ ತನ್ನಖೋಡಿತನ ಬಿಡದೋಡು ಚಿತ್ತವು ಪ.ಎಳೆ ಎಳೆದು ನಾನೆ ಬಳಲಿದೆ ತಾ ತನ್ನತಿಳಿದ ಕಡೆಯಲಿ ಸುಳಿದಾಡಿತುಒಲಿದು ಭಕುತಿಯ ಬಲಿದಿರೆಂದರೆಛಲದಿ ಶುಭಮಾರ್ಗ ಕೊಳದು ದಾತಾರ 1ಕ್ಷಣದೊಳಾರೆ ನಾರಾಯಣ ದಾಮೋದರಮುನಿಧ್ಯೇಯನೆ ನಿನ್ನ ನೆನೆದಾಡದೆಹಣಿದಾಡೆನ್ನೊಳು ಒಣ ಧ್ಯಾನಿಸುತಿದೆಜನದೂಷಣದೊಳು ದಣಿದಾಡುತಿದೆ 2ಇನ್ನಾವಗೆ ಪೇಳಲೆನ್ನ ಒಡಲ ಮಾತಎನ್ನ ಒಡೆಯ ಪಾವನ್ನಕಾಯ ಪ್ರಸನ್ನ ವೆಂಕಟರನ್ನ ಒಲಿಯೊ ನೀಅನ್ಯ ವಿಷಯಕೆ ದೈನ್ಯವಾಗಿದೆ 3
--------------
ಪ್ರಸನ್ನವೆಂಕಟದಾಸರು
ನ್ಯಾಯದ ನುಡಿ ನರಲೀಲೆಗಿದು ಬಲ್ಲವರಲಿ ಸಲ್ಲದುನ್ಯಾಯದ ನುಡಿ ನರಲೀಲೆಗಿದು ಪ.ಮಾಯಾತೀತ ಮನೋಭವತಾತ ಪರಾಯಣ ತವಗುಣನಾನೆಂತರಿವೆನುಅ.ಪ.ಬಲಿಯನು ಮೆಟ್ಟಿದಬಾಂಬೊಳೆಪುಟ್ಟಿದಪಾದಶ್ರೀದಚೆಲುವೆ ರಮಾಕರನಳಿನಾಶ್ರಯಕರಮಾದಜಲಜಭವಾದಿ ಸುರಾಳಿಗಳರ್ಚಿಪಸುಲಲಿತ ತವ ಪದದೊಲವೆಂತರಿವೆನು 1ಶರಣಾಗತಜನ ದುರಿತನಿವಾರಣ ನೀನು ಇನ್ನೇನುತರುಣೀಮಣಿಯಳ ಸೆರೆಯನು ಬಿಡಿಸುವದಿನ್ನುಕರುಣಾಕರ ನಿನ್ನ ಸ್ಮರಿಸುವಳನುದಿನಸ್ಥಿರಚರಜೀವಾಂತರ ಪರಿಪೂರ್ಣನೆ2ಆಕ್ಷೇಪಿಸದಿರು ರಕ್ಷಿಸು ರಘುಕುಲಚಂದ್ರ ರಾಜೇಂದ್ರಲಕ್ಷ್ಮೀನಾರಾಯಣ ಸದ್ಗುಣ ಗಣಸಾಂದ್ರಈಕ್ಷಿಸು ಕರುಣಾಕಟಾಕ್ಷದಿ ಪೂರ್ವದಲಕ್ಷಣ ಹೊಂದಲಿ ಲಕ್ಷ್ಮಣಾಗ್ರಜನೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪಂಕಜ ಮುಖಿಯರೆಲ್ಲರು ಬಂದು ಲಕ್ಷ್ಮೀ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ವೆಂಕಟರಮಣಗಾರತಿಯತ್ತಿರೆ ಪ.ಮತ್ಸ್ಯಾವತಾರಗೆ ಮಂದರೋದ್ಧಾರಗೆಉತ್ಸಾಹದಿ ಭೂಮಿ ತಂದವಗೆ ||ವತ್ಸಗಾಗಿ ಕಂಬದಿಂದಲಿ ಬಂದಉತ್ಸವ ನರಸಿಂಹಗಾರತಿಯೆತ್ತಿರೆ 1ವಾಮನ ರೂಪದಿ ದಾನ ಬೇಡಿದವಗೆನೇಮದಿ ಕೊಡಲಿಯ ಪಿಡಿದವಗೆ ||ರಾಮನಾಗಿ ದಶಶಿರನನು ಕೊಂದಸ್ವಾಮಿ ಶ್ರೀ ಕೃಷ್ಣಗಾರತಿಯೆತ್ತಿರೆ 2ಬತ್ತಲೆ ನಿಂತಗೆ ಬೌದ್ಧಾವತಾರಗೆಉತ್ತಮ ಅಶ್ವವನೇರಿದಗೆ ||ಭಕ್ತರ ಸಲಹುವ ಪುರಂದರವಿಠಲಗೆಮುತ್ತೈದೆಯರಾರತಿಯೆತ್ತಿರೆ 3
--------------
ಪುರಂದರದಾಸರು
ಪಟ್ಟಸಾಲೆÉ ಮೇಲೆ ರಂಗಮ್ಮ ನಕ್ಕು ನಲಿದುದಟ್ಟಸಾಲಿಕ್ಕಲಿ ಕಲಿತ ಪ.ಕೈಯವಿಡಿದುಗೋಪಿಮುಂಗೈಯ ಮುರಾರಿ ಮಗನಥೈಯ ಥೈಯಯೆಂದು ಕಂದನ ಹಣೆಗೆ ಹಣೆಯೊತ್ತಿಪ್ರಿಯದಿ ಹೊಂಗೆಜ್ಜೆಕಾಲ ಒಯ್ಯನಡಿಯಿಡಿಸೆನೀಲಮೈಯನಜನಯ್ಯನ ಮುದ್ದಿಸಲು ಬಂಗಾರದ 1ಬಾಯ ಜೊಲ್ಲುಂಗುರುಗುರುಳೆಳೆಯ ಪಲ್ಲ್ವಾಧರ ಮದ್ದಿಕಾಯಿ ಅರಳೆಲೆ ಮಾಗಾಯಂದುಗೆ ಒಪ್ಪೆಮಾಯಾರಸವನ್ನೆಶೋದೆ ತಾಯಿಗುಣಿಸುವ ಬಾಲನಾಯಕವೃಂದಾರಕಪಾಲಕ ರತ್ನಮಯದ2ಬಾಳೆಯಂತೆ ಬಳುಕಿ ನಡೆವ ಬಾಲಕೃಷ್ಣ ಬಳಲ್ದನೆಂದುಆಲಂಗಿಸಲೊಲ್ಲದಂಬೆಗಾಲನಿಕ್ಕುವಮೇಲೆ ಪ್ರಸನ್ವೆಂಕಟೇಶನ ಲೀಲೆಗೆಸುರರುಮೆಚ್ಚೆಲಾಲಿಸಿ ನಂದನನ ನಿವಾಳಿಸಿಕೊಂಡಳು ನಿವರ್iಳ 3
--------------
ಪ್ರಸನ್ನವೆಂಕಟದಾಸರು
ಪತಿಭಕುತಿಯಿಲ್ಲದಿಹ ಸತಿಯ ಸಂಗವ್ರತಗೆಟ್ಟು ಸುಖ ಪಡೆಯಲಿಲ್ಲವೊ ರಂಗ ಪ.ಗಂಡ ಬಂದರೆ ಎದ್ದುನಿಲ್ಲದೆ ಆ ಕ್ಷಣದಿಕಂಡಾಡಿ ಏಕವಚನಂಗಳನಾಗಅಂಡಲೆದು ಮಾರ್ಮಲೆಂದು ಕಾಡಿಬೇಡುವ - ಇಂಥಭಂಡುದೊತ್ತಿನ ಕೂಟ ಏಳುನಾಗರ ಕಾಟ 1ಒಂದು ತಂದರೆ ಮನೆಗೆ ಹತ್ತಾಗಿ ಭಾವಿಸದೆತಂದರೆ ಹತ್ತು ಮನೆಯೊಳಗೊಂದ ಮಾಡಿಇಂದಿಗೆ ಇಲ್ಲವೆಂದು ಮುಖವ ತಿರುಹುತಲಿ ಮದದಿಂದ ಹೋಹಳು ನಾರಿ ಬಹು ದೊಡ್ಡಮಾರಿ2ಮಕ್ಕಳಿಗೆ ಇಡಲಿಲ್ಲ ಮರಿಗಳಿಗೆ ತುಡಲಿಲ್ಲಇಕ್ಕುವಡೆ ಬೆಳ್ಳಿ - ಬಂಗಾರವಿಲ್ಲಚಿಕ್ಕವಳು ನಾ ನಿನ್ನ ಕೈಪಿಡಿದು ಕೆಟ್ಟೆನೆಂಬಮೂರ್ಖ ತೊತ್ತಿನ ಸಂಗ ಕುಲಕೆಲ್ಲಭಂಗ3ತಾಯನು ಹೊರಡಿಸು ತಂದೆಯನು ತೆರಳಿಸುದಾಯಾದಿಯನು ಮನೆಯಲಿರಿಸಬೇಡಬಾಯಿನ್ನುಮನೆ ಕಟ್ಟಿ ಬೇರಿರುವ ನಾವೆಂಬಮಾಯಾಕಾತಿಯ ಸಂಗ ಅಭಿಮಾನಭಂಗ4ಇಷ್ಟನೆಲ್ಲವ ಬಿಟ್ಟು ಕೆಟ್ಟೆನೈ ನಾನಿಂದುಕಷ್ಟ ಸೆರೆಯೆನುವೆನೆ ಈ ಪರಿಯಲಿಸ್ಪಷ್ಟಿಗಾಧಿಕನಾದ ದಿಟ್ಟ ಶ್ರೀಪುರಂದರವಿಠಲ ಪಶ್ಚಿಮದ ರಂಗಧಾಮ 5
--------------
ಪುರಂದರದಾಸರು
ಪಥ ನಡೆಯದೈಯ ಪರಲೋಕಕೈದುವರೆ, ಮ ಪ.ನ್ಮಥನೆಂಬ ಕಳ್ಳ ಮಾರ್ಗವಕಟ್ಟಿಸುಲಿಯುತಿರೆಅಗಿಳಿವಿಂಡು ಕೋಗಿಲೆ ವಸಂತ ಮಾರುತಭ್ರಮರ <?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಬಲವೆರಸಿಮದನ ಮಾರ್ಗವ ಕಟ್ಟಲುಬಲವುಳ್ಳ ಭಟರು ಬಲು ಸನ್ಯಾಸಿ ಯೋಗಿಗಳುಸುಲಿಸಿಕೊಂಡರು ಕೆಲರು ಸಿಕ್ಕಿದರು ಕೆಲರು 1ತನು ರೋಮ ಗಿಡ ವೃಕ್ಷ ತಳಿತ ಭುಜಲತೆ ಮೆರೆಯೆಘನ ಸಿಂಹಖಗ ಮೃಗಗಳಟ್ಟಿಣಿಸುವವನಿತೆಯರ ಕಾಯಕಾಂತಾರದಲಿ ದುರ್ಗಮಸ್ತನ ಪರ್ವತದ ಕಣಿವೆಯಲಿಕಟ್ಟಿಸುಲಿಯುತಿರೆ2ಕಾಳಗದೊಳಿದಿರಲ್ಲ ಸುರನರೋರಗರ ಕಟ್ಟಾಳು ಮನ್ಮಥನ ಛಲದಂಕ ಬಿರುದುಪೇಳಲೆನ್ನಳವಲ್ಲ ಪುರಂದರವಿಠಲನಆಳು ಸಂಗಡವಿದ್ದರವಗೆ ಭಯವಿಲ್ಲ 3
--------------
ಪುರಂದರದಾಸರು
ಪವಡಿಸು ಪರಮಾತ್ಮಾ ಶ್ರೀ ಶ್ರೀಶಾಪವಡಿಸು ಪರಮಾತ್ಮಾ ಪಪರಮಭಕ್ತರನು ಪೊರೆಯುವ ದೇವನೆಅ.ಪರನ್ನಮಂಟಪದೊಳು ಕನ್ನಡಿಯಂದದಿಸ್ವರ್ಣವರ್ಣದಲಿಹ ಪನ್ನಂಗ ಕಾದಿಹ 1ಸುತ್ತಲು ತುಂಬುರರು ನಾರದರು ಸ್ತೋತ್ರವ ಮಾಡಿಅತ್ಯಂತ ಹರುಷದಿ ಚಿತ್ತೈಸೆಂದೆನುವರು 2ಥಳಥಳಿಸುವ ದಿವ್ಯತಾರೆಗಳಂದದಿಲಲನೆಶ್ರೀ ಭೂದೇವಿಯರು ಸೇವಿಪರು ನಿನ್ನ3ವೇದವ ಕದ್ದನ ಭೇದಿಸಿ ಅಜನಿಗೆವೇದವ ತಂದಿತ್ತು ಆದರಿಸಿದ ದೇವ 4ಮುಳುಗಿದ ಗಿರಿಯನು ಧರಿಸಿ ಬೆನ್ನಲಿ ಬೇಗಸುರರಿಗೆ ಅಮೃತವ ಕುಡಿಸಿದಮಾಧವ5ಸುರಮುನಿಗಳಿಗೆಲ್ಲಾ ಅಭಯವ ನೀಡುತವರಹರೂಪತಾಳಿ ಬಳಲಿ ದಣಿದು ಬಂದಿ6ಕಂದನಿಗಾಗಿ ದೊಡ್ಡ ಕಂಬದಿಂದುದಿಸಿ ಖಳನಕೊಂದು ಕರುಳ ವನಮಾಲೆ ಧರಿಸಿ ದಣಿದಿ 7ಮೂರಡಿ ಭೂಮಿಯ ಬೇಡಿ ಬಲೀಂದ್ರನದೂಡಿ ಪಾತಾಳಕೆ ಬಹಳ ಬಳಲಿ ಬಂದಿ 8ಭೂಮಿ ಪಾಲಕರನ್ನು ಸೋಲಿಸಿಬಾರಿಬಾರಿವಾರಿಜಾಕ್ಷ ಶ್ರೀರಾಮರಿಗೊಲಿದೆಯೊ 9ಸೇತುವೆಯನ್ನುಕಟ್ಟಿದೂರ್ತರಾವಣನ ಕುಲವಘಾತಿಸಿ ಕೊಂದ ರಘುನಾಥನೆ ಬಳಲಿದೆ 10ವಸುದೇವ ಕಂದನೆ ಶಿಶುರೂಪಿನಿಂದಲಿಅಸುರೆ ಪೂತಣಿ ಅಸುಹೀರಿ ಬಳಲಿ ಬಂದಿ 11ತಿದ್ದಿ ತ್ರಿಪುರಾಸುರರ ಮರ್ದಿಸಿ ಸುಜನರಿಗೆಮುದ್ದು ತೋರಿದ ಸುಪ್ರಸಿದ್ಧ ಮೂರುತಿ ಬೇಗ 12ಕರದಿ ಖಡ್ಗವ ಧರಿಸಿ ಸಿರದಿ ಕಿರೀಟ ಹೊಳೆಯೆಇಳೆಯ ಮನುಜರಿಗೆಲ್ಲ ಸುಲಭನಂದದಿ ತೋರ್ಪಿ 13ಮಂಗಳಚರಿತ ವಿಹಂಗವಾಹನ ಸುರಗಂಗೆಯಪಿತ ಸಾಧುಸಂಗವಂದಿತ ದೇವ 14ಗರುಡಗಮನ ಕೃಷ್ಣ ಉರಗನ್ಹಾಸಿಗೆಯೊಳುಸಿರಿದೇವಿ ಸಹವರ ಕಮಲನಾಭ ವಿಠ್ಠಲ 15
--------------
ನಿಡಗುರುಕಿ ಜೀವೂಬಾಯಿ
ಪಾದಕಂಡು ಪಾವನಾದೆನು ಶ್ರೀಗಿರಿಯ ನಿಲಯನಪಾದಕಂಡು ಪಾವನಾದೆನು ಪಪಾದಕಂಡು ಪಾವನಾದೆನುಮಾಧವನ ಪ್ರಸಾದ ಪಡೆದೆನುಹಾದಿಗಾಣದೆಪರಮದುರ್ಭವಬಾಧೆಯೊಳು ಬಿದ್ದು ತೊಳಲಿ ಬಳಲುತಮೇದಿನಿಯೊಳು ಜನುಮ ತಾಳಿಭೇದಮತದ ಹಾದಿಬಿಟ್ಟು ಅ.ಪನೀಲಬಣ್ಣದೊಪ್ಪುವ ಸುಂದರ ಶುಭಕಾಯಇಂದಿರೆಲೋಲತ್ರಿಜಗಮೋಹನಾಕಾರ ಕೊರಳಪದಕಮಾಲಕೌಸ್ತುಭಮುಕುಟಮಣಿಹಾರ ರತ್ನದುಂಗುರಕಾಲೊಳ್ಹೊಳೆಯುವ ಗೆಜ್ಜೆಸರಪಳಿಶೀಲವೈಷ್ಣವ ನಾಮ ಪಣೆಯಲಿಕಾಳರಕ್ಕಸಕುಲಸಂಹಾರನಪಾಲಸಾಗರಕನ್ನೆವರನಪಾಲಮೂಲೋಕಸಾರ್ವಭೌಮನಮೇಲು ಭೂವೈಕುಂಠದಲ್ಲಿ 1ಉಟ್ಟದುಕೂಲ ಶಲ್ಯ ಜರತಾರ ಕೈಯಲ್ಲಿ ಕಂಕಣಪಟ್ಟ ರತ್ನದ ನಡುವಿಗುಡಿದಾರ ವರ್ಣಿಸುವರಾರುಸೃಷ್ಟಿಯೊಳಗೀತ ಮೀರಿದವತಾರ ಇನಕೋಟಿ ಪ್ರಭಾಕರಬಿಟ್ಟು ವೈಕುಂಠ ಇಹ್ಯಕೆ ಸಾಗಿಬೆಟ್ಟದ ಮೇಲೆ ವಾಸನಾಗಿಕೊಟ್ಟು ವರಗಳ ಮೂರು ಜಗಕೆಶೆಟ್ಟಿಯಂದದಿ ಕಾಸುಕೊಳ್ಳುವದುಷ್ಟಭ್ರಷ್ಟ ಶಿಷ್ಟರೆಲ್ಲರಇಷ್ಟದಾಯಕದಿಟ್ಟ ದೇವನ 2ಒಂದೆ ಮನದಲಿ ಸಕಲ ಸೇವಕರು ಭಯಭಕುತಿಯಿಂದಬಂದು ಹರಕೆಯ ತಂದು ನೀಡುವರು ತುಂಬರನಾರದರೊಂದಿಗಾನದಿಂ ಪಾಡಿ ಪೊಗಳುವರು ಆನಂದ ಕೋರುವರುಹೊಂದಿ ಭಜಿಸುತ ಸಪ್ತಋಷಿಗಣಬಂದು ಇಳಿವರು ಬಿಡದೆಅನುದಿನವಂದ್ಯ ನಿಗಮಾದಿಬಂಧು ಭಜಿಪರಕಂದುಗೊರಳಾದಿ ಬ್ರಹ್ಮಸುರರಿಂಗಂಧಪರಿಮಳಕುಸುಮದ್ರವ್ಯಗಳಿಂದ ಸೇವೆಯ ಗೊಂಬದೇವನ 3ಉದಯಕಾಲದಿ ಬಾಲನವತಾರ ಮಧ್ಯಾಹ್ನಕಾಲದಿಸದಮಲಾಂಗ ಯೌವನಾಕಾರಸುಸಂಧ್ಯಾಕಾಲದಿಮುದುಕನಾಗಿ ಕಾಂಬ ಮನೋಹರ ಬಹುಮಹಿಮಗಾರಪದುಮವದನ ಮದನನಯ್ಯಪದುಮವತಿಯ ಪ್ರಾಣಪ್ರಿಯಒದಗಿಬಂದ ಭಕುತಜನರನುಸುದಯದಿಂದ ಕರೆದು ಪ್ರಸಾದಮುದದಿ ನೀಡುತ ಕೃಪೆಯದೋರಿಸದಮಲಸಂಪದವನೀವನ 4ತೀರದೀತನ ಲೋಕಶೃಂಗಾರ ಏರಿ ನೋಡಲುಪಾರಗಿರಿತುದಿ ಗಾಳಿಗೋಪುರ ಮುಂದೆ ನಡೆಯಲುದಾರಿಯಲಿಕೊಳ್ಳಏಳು ವಿಸ್ತಾರ ಪರಮಪರತರತೋರುವ ಮಹ ಗುಡಿಯು ಗೋಪುರದ್ವಾರ ಚಿನ್ನದ ಕಳಸ ಬಂಗಾರಗಾರುಮಾಡದೆ ದಾಸಜನರನುತಾರತಮ್ಯದಿ ಪೊರೆಯಲೋಸುಗುಸೇರಿಧಾರುಣಿ ವೈಕುಂಠವೆನಿಸಿದಧೀರವೆಂಕಟ ಶ್ರೀಶ ರಾಮನ 5
--------------
ರಾಮದಾಸರು
ಪಾಲಯ ಸೀತಾರಾಮಭೌಮಪ.ದಶರಥನಂದನ ದಶಮುಖಭಂಜನ ತ್ರಿದಶಭಯಶಮನ ಸುಸ್ಮಿತವದನ 1ವಾತಜನುತ ಪಾತಕಹರ ವಿಧಿತಾತ ಪುನೀತಪದ ಭೂತಪವರದ 2ಇನಕುಲರಕ್ಷ ದೀನಜನರಕ್ಷಮುನಿಜನತೋಷ ಪ್ರಸನ್ವೆಂಕಟೇಶ 3
--------------
ಪ್ರಸನ್ನವೆಂಕಟದಾಸರು
ಪಾಲಯಾಲ್ಮೇಲಮಂಗಪ್ರಿಯ ಪರಮಗೇಹಖಳಜಾಲಕೋಲಾಹಲಗೋಕುಲ ಗೋಪಾಲಬಾಲಲೀಲಾಲೋಲಲೋಲಚೆನ್ನಪ.ಆದಿಪೋತ್ರಾವತಾರ ಅಮಿತ ಸುಗುಣೋದಾರಭೂಧರಭೂಪವೈರಿ ಭ್ರಾತಶೌರಿಕುದಶಾಸ್ಯವಿದಾರ ದಯೋದಧಿ ಶ್ರೀಪಾದಾರಾಧಕಾಧಾರಮರ ಪಾದಪಾಧಿಪಾಧಿಪ 1ಆನತಘ ವಿದಾರ ಅಂಬುಧರಸುಂದರಏಣಾಂಕರವಿಕಾಶ ಯದುಕುಲೇಶವನಜನಯನಮಾಮನೋಹರಮುನಿಧ್ಯಾನಮೌನಗಾನ ಲೀನ ಮಾನುಷಮೃಗ ನಮೋ 2ಪನ್ನಗರಾರಾತಿಗಮ್ಮಪಾರಾವಾರಮಹಿಮಘನ್ನಜೀವಾತಿದೂರ ಗೋಸಂಗೋಚರಮನ್ಮಥ ಗಣ್ಯಲಾವಣ್ಯ ಕಾರುಣ್ಯಧಿ ಸ್ವರ್ಣವರ್ಣಚಿನ್ಮಯ ಪ್ರಸನ್ನವೆಂಕಟೇಶ ಮಾಂ 3
--------------
ಪ್ರಸನ್ನವೆಂಕಟದಾಸರು
ಪಾಲಿಸಂಬುಧಿಶಾಯಿ ವ್ಯಾಳಕಶಿಪುಶಾಯಿಪಾಲಿಸು ವಾರಿಧಿüಕೂಲದಿ ದರ್ಭಶಾಯಿ ಮೂಲ ವಟಪತ್ರಶಾಯಿ ಪ.ವೇದೋದ್ಧಾರ ದಯಾಳು ಭೂಧರಧರ ದಯಾಳುಮೇದಿನಿಅಂತರ್ಮಾಲಾದಂಡಶುಭಕುಠಾರಧಾರಿಯೆ ದಯಾಳುಕೋದಂಡಧರ ದಯಾಳುಸ್ವಾದವೇಣುಧರ ದಯಾಳು ಸಮಾಧಿ ವ್ರತಧರ ಧರ್ಮಾಧರ ವಿಶ್ವಾಧರಮಾಧವನಿತ್ಯದÀಯಾಳು1ಪಂಚಜನನವೈರಿವಂಚಕಾಸುರವೈರಿಕಾಂಚನನೇತ್ರಕ ಯದುಪತಿ ಬಲಿಮದಚಂಚಲ ಖಳವೈರಿಪಂಚದ್ವಯಾಸ್ಯನವೈರಿಪಂಚಪಾರ್ಥಾರಿತವೈರಿಪಂಚಬಾಣಾರಿವೈರಿ ಪಂಚಪಾತಕವೈರಿ ಸಂಚಿತಘಕೆವೈರಿ2ಸರನಿಕೇತನಿವಾಸ ಗಿರಿತಳ ಸನ್ನಿವಾಸ ವರಸ್ವಾಮಿಪುಷ್ಕರಸಿರಿಅಹೋಬಲ ನೃಪಾಗರ ತ್ರಿಜಗನಿವಾಸಸರಯೂತೀರ ನಿವಾಸ ಶರಧಿಮಂದಿರವಾಸಸುರವಿರೋಧಿಸದನಪರಮಶಂಬಲವಾಸ ಪರಸನ್ನವೆಂಕಟವಾಸ3
--------------
ಪ್ರಸನ್ನವೆಂಕಟದಾಸರು
ಪಾಲಿಸು ನಮ್ಮನು ಪರಬ್ರಹ್ಮ ಶ್ರೀ-ಲೋಲಾನಂತ ಗುಣಾಲಯನೇ ಪ.ನೀಲಾಭ್ರದಾಭ ಕಾಲನಿಯಾಮಕಮೂಲೇಶ ಪುರುಷ ಮೂರ್ಲೋಕಾಧಿಪ ಅ.ಪ.ಉತ್ತಮ ಗುಣಗಳು ಬತ್ತಿಪೋದುವೈದೈತ್ಯರ ಗುಣವು ಪ್ರವರ್ಧಿಪುದುಚಿತ್ತಸಾಕ್ಷಿ ತವ ಭಕ್ತಿಕಥಾಮೃತನಿತ್ಯನಿತ್ಯಸವಿಸುತ್ತ ಹಿಂಬಾಲಿಸೆ1ಭಾಗವತಜನರ ಯೋಗಕ್ಷೇಮ ಸಂಯೋಗೋದ್ಯೋಗಿ ನೀನಾಗಿರಲುಕೂಗುವಾಸುರರ ಕೂಡೆ ಕೂಡಿಸದೆಭೋಗಿಶಯನಭವರೋಗಭೇಷಜನೆ2ಪಾವನಕರ ನಾಮಾವಳಿ ವರ್ಣಿಪಸೇವಕ ಜನರ ಸಂಭಾವಿಸುವಕೇವಳಾನಂದ ಠೀವಿಯ ಪಾಲಿಸುಶ್ರೀವಾಸುದೇವ ದೇವಕೀತನಯ] 3ಶುದ್ಧತಮೋಗುಣಬದ್ಧ ದೈತ್ಯ ಪ್ರ-ಸಿದ್ಧರಾಗಿಹರು ಮದ್ಯಪರುಬುದ್ಧಿಜ್ಞಾನ ಸಮೃದ್ಧಿ ಭಕ್ತಿಯಿಂ-ದುದ್ಧರಿಸೈಗುರುಮಧ್ವವಲ್ಲಭನೆ4ಕೇಶವಾಚ್ಯುತ ಪರೇಶ ಹೃದ್ಗುಹನಿ-ವಾಸ ವಾಸವಾದ್ಯಮರನುತಶ್ರೀಶ ಶ್ರೀವೆಂಕಟೇಶ ಭಕ್ತಜನರಾಶ್ರಯಸ್ಥಿತದಿನೇಶಶತಪ್ರಭ5ಮಂಗಲ ಜಗದೋತ್ತುಂಗರಂಗಮಾತಂಗವರದ ನೀಲಾಂಗ ನಮೋಅಂಗಜಪಿತಲಕ್ಷ್ಮೀನಾರಾಯಣಸಂಗೀತಪ್ರಿಯವಿಹಂಗತುರಂಗನೆ6
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪಾಲಿಸು ಬಾಲಗೋಪಾಲ ಕೃಪಾಳು ನೀಪಾಲಿಸು ಬಾಲಗೋಪಾಲ ಬಾಲಕಲೀಲಾ ವಿಶಾಲ ಮಾಲೋಲಜ ಲಲಿತ ಬಾಲಗೋಪಾಲ ಪ.ರಂಗು ರನ್ನುಂಗುರದಂಗುಲಿ ಸಂಜÕದಿಪೊಂಗೊಳಲ ಸಂಗೀತ ರಂಗಮಂಗಳ ಭಾಂಗ ತ್ರಿಭಂಗ ಗೋಜಂಗುಳಿಸಂಗವ ಹಿಂಗದ ರಂಗಅಂಗಜತಿಂಗಳ್ಪತಂಗ ರೂಪಂ ಗೆಲ್ವತುಂಗೋಜ್ವಲಾಂಗ ಶ್ರೀರಂಗಮಂಗಳಪಾಂಗ ಗುಣಂಗಳ್ತರಂಗ ಆಸಂಗಿ ಜಗಂಗಳ್ಗೆ ರಂಗ 1ಕೆಂದಾವರ್ಯಂದದಿ ಸುಂದರ ದ್ವಂದ್ವಾಂಘ್ರಿಚೆಂದುಳ್ಳ ತಂದೆ ಗೋವಿಂದಬಂದಿ ಕಾಲಂದುಗೆ ಪೊಂದುಡುಗಿಂದೆಸೆವನಂದನ ಕಂದ ಗೋವಿಂದನಂದವ್ರಜ ಹೊಂದಿದವೃಂದಾರಕೇಂದ್ರಗೋವೃಂದದಿ ನಿಂದ ಗೋವಿಂದಇಂದಿರಜ ಇಂದುಮೌಳೀಂದ್ರ ಮುನೀಂದ್ರಾದಿವಂದಿತ ನಂದ ಗೋವಿಂದ 2ಉನ್ನತ ಪುಣ್ಯ ಗೋಗನ್ನೇರ ಮನ್ನಿಪಚೆನ್ನಿಗ ಚಿನ್ನಪಾವನ್ನಪನ್ನಗಔನ್ನತ್ಯ ಭಿನ್ನ ದಯಾರ್ಣವ ಜಗನ್ನ ಮೋಹನ್ನಪಾವನ್ನಸನ್ಮುನಿಜನ್ನ ಭಾರ್ಯಾನ್ನವನುಣ್ಣುವಚಿನ್ಮಯ ಪುಣ್ಯಪಾವನ್ನಸ್ವರ್ಣಗಿರಿ ನಿಕೇತನ್ನ ನೀ ಧನ್ಯ ಪ್ರಸನ್ನವೆಂಕಟರನ್ನಪಾವನ್ನ3
--------------
ಪ್ರಸನ್ನವೆಂಕಟದಾಸರು
ಪಾಲಿಸೆನ್ನ ಮಂದಬಾಲಿಶನ್ನಪಾಲಗಡಲೊಡೆಯ ಸಿರಿಲೋಲ ಪ.ಅಂಬುರುಹಸಂಭವ ತ್ರಿಯಂಬಕ ಶೇಷಾಂಬರಗದಂಭೋಳಿಸಂಭೃತನುತಾಂಘ್ರಿ 1ಅಷ್ಟಕೃತ್ಯ ಅಷ್ಟವಿಭವ ಅಷ್ಟ ಭೋಗ್ಯಥೇಷ್ಟ ಶಕ್ತಅಷ್ಟಹರಿತ ಶ್ರೇಷ್ಠವರ್ಯ ಶ್ರೇಷ್ಠ 2ದ್ಯುಗ ಶಶಿಭಾಯುಗನಯನ ಜಗಜಠರಘಹರಾಹಿನಗನಿಲಯ ಜಘನಕಟಿಪಾಣಿ 3ಕಿರೀಟ ಕುಂಡಲರಿದರಕೇಯೂರಕೌಸ್ತುಭಸಿರಿವತ್ಸವರಾಂಬರ ಮನೋಹರ ಮೇಖಲಧಾರಿ 4ದ್ರೌಪದಿ ಮುನಿವಧು ಬಾಲಧ್ರುವ ಪ್ರಹ್ಲಾದ ವಿಭೀಷಣೋದ್ಧವಾಕ್ರೂರ ಮುಖ್ಯವಮಾನಹಾರಿ 5ಋಗ್ಯಜುಸಾಮನಿಗಮಧರವಗೋಚರ ಮುನಿಗಣ ಸುಮನಗೇಹನಂತ ಸುಗುಣಾನಂದ ಪೂರ್ಣ 6ಮಧು ಕೈಟಭ ಮದನೇಮಿ ಜಲಂಧರಕಂಬುಸದನಖಳಾಬುಧಿ ಕುಲಾಂತಕ ದ್ವಿಜೋಪಕಾರಿ 7ಋಷಿ ಹನುಮ ರಸಗಾಯನ ತೋಷಭರಿತ ಹಾಸವದನಪ್ರಸನ್ನ ವೆಂಕಟೇಶ ನಮೋ ಸ್ವಾಮಿ 8
--------------
ಪ್ರಸನ್ನವೆಂಕಟದಾಸರು
ಪಾಲಿಸೈ ವಿಶಾಲಗುಣಭರಿತ ನಿನ್ನಯ ಚರಿತಕಾಲಭೈರವ ನುತಿಪೆ ನಾ ಸತತಕಾಲಕಲ್ಪಿತ ಲೀಲೆಯರಿತು ಸು-ಶೀಲತನವನು ಮೆರೆಯಲೋಸುಗಸ್ಥೂಲಸೂಕ್ಷ್ಮಾಕೃತಿಯ ಧರಿಸಿದಮೂಲಿಕಾ ಶ್ರೀನಿವಾಸ ಭೈರವ 1ಪರಮಪಾವನ ಕ್ಷೇತ್ರದಲ್ಲಿರುತ ಐತಂದು ಮತ್ತಾ-ವೀರ ಶ್ರೀರಾಮನ ಸೇತು ನೋಡುತ್ತಧರೆಯ ಸಂಚರಿಸುತ್ತ ಬರುತಿರೆಮಿರುಪ ಶೇಷಾಚಲ ನಿರೀಕ್ಷಿಸಿಭರದಿ ಗಿರಿಮೇಲಡರಿ ಶ್ರೀಶನಚರಣಕಾನತನಾಗಿ ಸ್ತುತಿಸಿದೆ 2ಸುರವರೇಶನು ನಿನಗೆ ಪ್ರೀತಿಯಲಿ ಮಂತ್ರತ್ವದಲ್ಲಿಇರಿಸಿ ಮೆರೆಸಿದೆ ಕೀರ್ತಿಕರವಲ್ಲಿತ್ವರಿತದಿಂ ನೀನೆಲ್ಲ ದೇಶದಪರಿಪರಿಯ ಕಾಣಿಕೆಯ ತರಿಸುತಹರಿಯ ದರುಶನಗೈವ ಮೊದಲೆಹರುಷದಿಂದಲಿ ಪೂಜೆಗೊಂಬುವೆ 3ಶರಣರನು ನೀ ಕಾಯ್ವೆ ಮಮತೆಯಲಿ ಅಲ್ಲಲ್ಲಿರುತಲಿಧರಿಸಿ ಮೃದುತರವಾದ ವಾಕ್ಯದಲಿಕರೆಸಿ ಒಬ್ಬೊಬ್ಬರ ವಿಚಾರಿಸಿಸರಸದಿಂದಲಿ ಪೊಗಳಿಕೊಳ್ಳುತನರರ್ಗೆ ಸೋಂಕಿದೆ ಭೂತಪ್ರೇತದಭಯಗಳನು ಪರಿಹರಿಸಿ ಪಾಲಿಪೆ 4ಭೂತಳದೊಳಧಿಕವಾಗಿರ್ಪ ಕಾರ್ಕಳಕಧಿಪಖ್ಯಾತ ವೆಂಕಟಪತಿಗೆ ಸಖಿಯಷ್ಪಖ್ಯಾತಿಯಿಂ ದೊರೆಯಿದಿರಿನಲಿ ಸಂ-ನಿಧಿಸನ್ನುತನಾಗಿ ಮೆರೆದಿಹೆಓತು ಕರುಣದೊಳೊಲಿದು ಪಾಲಿಪದಾತಲಕ್ಷ್ಮೀನಾರಾಯಣಾಪ್ತನೆ5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ