ಒಟ್ಟು 4540 ಕಡೆಗಳಲ್ಲಿ , 127 ದಾಸರು , 2949 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ಮರಿಸು ಸಂತತ ಹರಿಯನು ಮನವೇ ಪ ಸ್ಮರಿಸು ಸಂತತ ಹರಿಯ ಕರುಣಾಳುಗಳ ದೊರೆಯ ಸರಸಿಯೊಳಗಂದು ಕರಿಯ ನರನ ಸಂಗರದೊಳಗೆ ಕಾಯ್ದು ದೊರೆಯ ಜಗದೀಶ ಅ.ಪ. ಪರ ಸೌಖ್ಯ ದಾನಿಗಳರಸನೆಂದು ಸಾನುರಾಗದಿ ನಂಬಿದ ಜನಕೆ ಸುರ ಮೋದ ಸಲಿಸುವ ಶ್ರೀಮ ಪತಿ ಸಾಮ ಗಾನ ಲೋಲನ ಪ್ರಸಾದಾ ಪಾದಾ 1 ಎಲ್ಲೆಲ್ಲಿ ನೋಡೆ ಮತ್ತಲ್ಲಲ್ಲಿ ನೆಲೆಸಿಹನು ಬಲ್ಲಿದನು ಭಾಗ್ಯವಂತ ನಂಬಿದವರಿ ಗಲ್ಲದೆ ಒಲಿಯ ಭ್ರಾಂತಾ ದುಷ್ಟ ಜನ ರೊಲ್ಲ ನಿಶ್ಚಯ ಮಹಂತಾರೊಡೆಯ ಕೈ ವಲ್ಯದಾಯಕನ ಇಂಥಾ ಪಂಥಾ 2 ಅಣುವಿನೊಳಗಣುವಹನು ಘನಕೆ ಘನತರನಹನು ಅಣು ಮಹದ್ವಿಲಕ್ಷಣಾ ಕಲ್ಯಾಣ ಗುಣಜ್ಞಾನ ಘನಲಕ್ಷಣಾ ಸಂಪೂರ್ಣ ಮನ ಮುಟ್ಟಿ ಕರೆದಾಕ್ಷಣಾ ಬಂದೊದಗಿ ಕುಣಿವ ಲಕ್ಷ್ಮೀ ವಕ್ಷನಾ ಅನಪೇಕ್ಷನಾ 3 ಚೆಲುವರೊಳಗತಿ ಚೆಲುವ ಸುಲಭರೊಳಗತಿ ಸುಲಭ ಒಲಿವ ಸರಿ ಬಂದ ತೆರದಿ ಗುಣಕರ್ಮ ಕುಲಶೀಲಗಳನೆಣಿಸನರಿದೀ - ಭಕುತಿ ಫಲವ ಕೊಡೆ ತಾ ತವಕದಿ ಶಬರಿ ಎಂ ಶರಧಿ ಭರದೀ 4 ನೋಡಿ ನೋಡಿಸುತಿಹನು ಮಾಡಿ ಮಾಡಿಸುತಿಹನು ನೀಡಿ ನೀಡಿಸುವ ಪಿಡಿವಾ ಪಿಡಿಸುವನು ಬೇಡಿ ಬೇಡಿಸುವ ಬಡವರೊಡೆಯ ಕೊಂ ಡಾಡುವರ ಒಡನಾಡುವಾ ಈ ಮಹಿಮೆ ಗೀಡೆಂದು ಆವ ನುಡಿವಾ ಕೆಡುವಾ 5 ಕೋದರಾದ್ಯಮರ ವ್ರಾತಾ ಸಹಿತ ಮಹ ದಾದಿ ಪೃಥ್ವಂತ ಭೂತಾದೊಳು ನಿಲಿಸಿ ಕಾದುಕೊಂಡಿಹ ವಿಧಾತಾ ಅಂಡತ್ರಿದ ಶಾಧಿಪನ ಸೂತ ಸಚ್ಚರಿತಾ 6 ನಿಗಮ ಸಂಚಾರ ಶ್ರೀ ಜಗನ್ನಾಥವಿಠಲರೇಯಾ ತನ್ನ ಪಾ ದಗಳ ಧ್ಯಾನಿಪರ ನೋಯಾಗೊಡದಂತೆ ಮಾಯಾ ರಮಣ ನಮ್ಮ ನಗಲಿ ಸೈರಿಸನು ಪ್ರಿಯಾ ಧ್ಯೇಯಾ 7
--------------
ಜಗನ್ನಾಥದಾಸರು
ಸ್ಮರಿಸುವರ ಪಾಲಿಪ ಬಿರುದು ಭಕುತರ ಪೊರೆವ ಕರುಣಿಯೆಪ ಪರಿಪರಿವಿಧದಲಿ ಪರಿತಪಿಸುವರನು ಕರವಿಡಿದುದ್ಧರಿಸುತ ಸಂತೈಸುವ ಉರಗಾದ್ರಿವಾಸ ವಿಠ್ಠಲ ಸಂತೈಸು ಚರಣಕಮಲಗಳಿಗೆರಗಿ ಭಿನ್ನೈಸುವೆ1 ಮಂದಮತಿಯು ನಾನೆಂದು ವಂದಿಪರ ಬಂಧನ ಕಳೆಯುತ ಮುಂದೆ ಗತಿಯು ತೋರಿ ತಂದೆ ವೆಂಕಟೇಶ ವಿಠ್ಠಲ ಭಕುತರ ಸಂದಣಿ ಪೊರೆಯುವರೆಂಬ ಬಿರುದು ದೇವ 2 ಆಶಾಪಾಶಗಳಿಗೊಳಗಾಗಿಹ ಮನ- ದಾಸೆ ಪೂರೈಸುತ ನೀ ಸಲಹೈ ಗುರು ವಾಸುದೇವ ವಿಠ್ಠಲ ಹರಿ ಭಕುತರ ದಾಸ್ಯವ ಕೊಟ್ಟು ಉಲ್ಲಾಸ ಒದಗಿಸುತ 3 ಮೊದಲೆ ನಿನ್ನಯಪಾದ ಹೃದಯದಿ ಭಜಿಸದೆ ಒದಗಿದ ಪಾಪದಿ ಹೆದರÀುತಲಿದೆ ಮನ ಪದುಮಜಾಂಡ ಸೃಜಿಸಿದ ಪರಮಾತ್ಮನಿ- ಗದ್ಭುತವೇ ಪಾಮರರನು ಪೊರೆವುದು 4 ಮಣಿದು ಬಿನ್ನೈಸುವೆ ಪವನಮತವÀ ತೋರಿ ಬಿನಗು ಬುದ್ಧಿಗಳ ಗಮನಕೆ ತಾರದೆ ಕಮಲನಾಭ ವಿಠ್ಠಲ ತವ ಕರುಣದಿ ಮನದ ಕ್ಲೇಶಗಳ ಕಳೆದು ಉದ್ಧರಿಸುತ 5
--------------
ನಿಡಗುರುಕಿ ಜೀವೂಬಾಯಿ
ಸ್ಮರಿಸುವುದು ಗುರು ಸಂತತಿಯನೂ ಪ ನಿತ್ಯ | ಗುರುವರ್ಯ ಸಂತತಿಯ ಹರಿಕರುಣವೂ ದೊರಕಿ | ಸರ್ವ ಆಮಯ ಹರವು ಪರಮ ಪುರುಷಾರ್ಥಕ್ಕೆ ವರ ಮಾರ್ಗವೆಂದೆನಿಪ ಸದ್ಭಕ್ತಿ ಜ್ಞಾನಪ್ರದವು ಅ.ಪ. ಆದಿ ಮೂರುತಿ ಹಂಸ | ಪಾದಾನುವರ್ತಿ ವಿಧಿಆದಿವಿಧಿ ಸುತರು ಸನ | ಕಾದಿ ಪದ ಪದ್ಮಗಳಮೋದದಿಂ ಭಜಿಪ ದೂ | ರ್ವಾಸ ತತ್ಕರಜ ಸುಜ್ಞಾನ ನಿಧಿಗಳ ಪಾದವ ||ಆದರದಿ ಗರುಡವಾಹನ ತೀರ್ಥ ಕೈವಲ್ಯರಾದರಿಸಿ ಜ್ಞಾನೇಶ ತತ್ಕರಜ ಪರತೀರ್ಥಪಾದಾಬ್ಜ ಸೇವಿಸುವ ಸತ್ಯ ಪ್ರಾಜ್ಞ ಕರಜ ಪ್ರಾಜ್ಞ ತೀರ್ಥರು ಯತಿಗಳ 1 ಅಚ್ಯುತ ಮಾಧವ ತೀರ್ಥ | ಆಕ್ಷೋಭ್ಯ ತೀರ್ಥರೂತತ್ಕರಜ ಪರವಾದಿ | ಗಜಸಿಂಹ ಜಯತೀರ್ಥಯತಿಗಳಾ ವಿದ್ಯಾಧಿ | ರಾಜ ಸತ್ಕವೀಂದ್ರರು ವಾಗೀಶ ರಾಮಚಂದ್ರ 2 ಅತ್ಯಂತ ಮಹಿಮರೆನೆ | ವಿಭುದೇಂದ್ರ ವಿದ್ಯೆನಿಧಿಮತ್ತವರ ಕರಜಾತ | ರಘುನಾಥ ರಘುವರ್ಯಭೃತ್ಯ ವೇದವ್ಯಾಸ | ತೀರ್ಥ ವಿದ್ಯಾಧೀಶ ವೇದನಿಧಿ ಸತ್ಯವ್ರತರ ||ಸತ್ಯನಿಧಿ ಸತ್ಯನಾಥಾಖ್ಯ ಸತ್ಯಾಭಿನವಸತ್ಯ ಪೂರ್ಣಾಖ್ಯ ಯತಿ | ಸತ್ಯ ವಿಜಯಾರ್ಯ ವರಸತ್ಯ ಪ್ರಿಯ ತೀರ್ಥಾಖ್ಯ | ಸತ್ಯ ಬೋಧಾಖ್ಯಮಹ ಸತ್ಯ ಸಂಧಾಖ್ಯ ಮುನಿಯ 3 ಸತ್ಯವರ ಸತ್ಯಧರ್ಮಾಖ್ಯ ಸತ್ಯಸಂಕಲ್ಪಸತ್ಯ ಸಂತುಷ್ಟಾಖ್ಯ | ಸತ್ಯ ಪರೆಯಣ ತೀರ್ಥ ಸತ್ಯ ಕಾಮಾಖ್ಯ ಯತಿ | ಸತ್ಯೇಷ್ಟ ಕರಜರೆನೆ ಸತ್ಯ ಪರಾಕ್ರಮ ತೀರ್ಥರ || ಸತ್ಯ ವೀರಾಖ್ಯಯತಿ | ಸತ್ಯಧೀರಾಖ್ಯರಂತತ್ಕರಜ ಶಿರಿಸತ್ಯ | ಜ್ಞಾನಾಖ್ಯ ಅಗ್ನ್ಯಂಶದುಸ್ತಿಮಿರ ಮಾಯ್ಮತದ | ಮಾರ್ತೆಂಡರೆಂದೆನಿಪ ಶಿರ ಸತ್ಯ ಧ್ಯಾನಾಖ್ಯರ4 ನಿತ್ಯ ಗುರು ಗೋವಿಂದ ವಿಠಲ ತಾ ಪೊರೆವ ಸತ್ಯ 5
--------------
ಗುರುಗೋವಿಂದವಿಠಲರು
ಸ್ಮರಿಸುವೆನು ಸದ್ಭಕ್ತಿಯಲಿ ಶ್ರೀರಾಮನ ಗುಣಧಾಮನ ಸಿರಿವಿರಿಂಚಾದ್ಯಮರಗಣ ಸಂಸ್ತುತ್ಯನ ಸಂತೃಪ್ತನಾ ಪ ಆದಿಯಲಿ ಝಷನಾಗಿ ನಿಗಮವ ತಂದನ ಮುನಿವಂದ್ಯನ ಭೂಧರಾಧರ ದಿವಿಜರಿಗೆ ಸುಧೆಗರೆದನ ಸುರವರದನ ಕಾದು ಕಿಟರೂಪದಲಿ ಭೂಮಿಯ ತಂದನ ಗುಣವೃಂದನ ಬಾಧಿಸಿದ ರಕ್ಕಸನ ತರಿದು ಪ್ರಲ್ಹಾದನ ತಾ ಪೊರೆದನ 1 ತುಳಿದನ ಅವಗೊಲಿದನ ಕೊಡಲಿ ಪಿಡಿದಾ ಕ್ಷತ್ರಿಕುಲ ವಿರಾಮನ ಭೃಗು ರಾಮನ ಮೃಡನೊರದಿ ಯುನ್ಮತ್ತ ದೈತ್ಯರು ಬಾಧಿಸೆ ಧರಿ ಪ್ರಾರ್ಥಿಸೆ ಜಡಜ ಪೀಠಾದ್ಯಮರರಾ ಮೊರೆ ಕೇಳ್ದನ ಧರೆಗಿಳಿದನ 2 ದಶರಥನ ಸತಿಯುದರದಲಿಯವತರಿಸಿದ ಮುದಗರಿಸಿದ ಬಿಸರುಹಾಪ್ತನ ವಂಶವನು ಉದ್ಧರಿಸಿದ ಮೈಮರಸಿದ ದಶದಿಶೆದಿ ಸುರರೆಲ್ಲ ಪೂಮಳೆಗರೆದರು ಸುಖಸುರಿದರು ಅಸಮಲೀಲೆಯ ತೋರ್ದರಘುಕಲಚಂದ್ರನ ಸುಖಸಾಂದ್ರನ 3 ಗಾಧಿಸುತನಧ್ವರವ ಕಾಯ್ದ ಸಮರ್ಥನ ಜಗಕರ್ತನ ವೇದಧನು ಮೊದಲಾದ ಕಲೆಗಳ ತಿಳಿದನ ಮುನಿಗೊಲಿದನ ಹಾದಿಯಲಿ ಶಿಲೆಯಾದ ಅಹಲ್ಯಳ ಪೊರೆದನ ಸಿರಿವರದನ ಮೋದದಲಿ ಹರಧನು ಮುರಿದ ಗಂಭೀರನ ಬಹುಶೂರನ 4 ಜನಕಭೂಪತಿ ತನುಜಳೆನಿಸಿದಸೀತೆಯ ಭೂಜಾತೆಯಾ ಘನಹರುಷದಲಿ ವಲಿಸಿಕರವನು ಪಿಡಿದನ ಯಶಪಡೆದನ ದನುಜರುಪಟಳತೋರಲಾಕ್ಷಣ ಸೀಳ್ಪನ ಸುರರಾಳ್ದನ ತನಗೆ ತಾನೇ ಸೋಲಿಸಿದ ಜನಮೋಹನ ಖಗವಾಹನ 5 ಜನಕನಾಜ್ಞವ ಪಾಲಿಸಿದ ದಯವಂತನ ಅಘಶಾಂತನ ಅನುಜಸತಿಸಹ ಪುರದಿ ತಾಪೊರಮಟ್ಟನ ಅತಿಧಿಟ್ಟನ ವನದಿ ಬಹು ಮುನಿಗಳ ಕಾರಾರ್ಚಿತನಾದನ ಸುಪ್ರಸಾದನ ಅನುಜ ಭರತಗೆ ದಯದಿ ಪಾದುಕೆ ಕೊಟ್ಟನ ಸಂತುಷ್ಟನ 6 ಮನುಜರಂದದಿ ಸತಿವಿಯೋಗವತೋರ್ದನ ಕುಜನಾರ್ದನ ವನಿತೆಯಂಜಲ ಫಲಗಳನು ತಾಮೆದ್ದನ ಶ್ರುತಿಸಿದ್ಧನ ದನುಜರಿಪು ಹನುಮಂತನನು ಸಾರೆ ಗರೆದನ ಕರುಣಿಸಿದನ ವನಜ ಸಖಸುತನೊಡನೆ ಸಖ್ಯವ ಮಾಡ್ಡನ ವರನೀಡ್ಡನ 7 ಲೀಲೆಯಿಂದಲಿ ತಾಳ ಮರಗಳ ಸೀಳ್ದನ ನೆರೆಬಾಳ್ದನ ವಾಲಿಯನು ಸಂಹರಿಸಿದತಿಬಲವಂತನ ಶ್ರೀಕಾಂತನ ಮೇಲೆನಿಪ ರಕ್ಕಸರನೆಲ್ಲರ ತುಳಿದನ ಅಸುಸೆಳೆದನ ಶ್ರೀಲತಾಂಗಿಯ ಕ್ಷೇಮವಾರ್ತೆಯ ಕೇಳ್ದನ ಮುದತಾಳ್ದನ 8 ಗಿರಿಗಳಿಂದಲಿ ಶರಧಿಯನು ಬಂಧಿಸಿದನ ಸಂಧಿಸಿದನ ಹರಿಗಳೆಲ್ಲರ ಕೂಡಿಲಂಕೆಯ ಸಾರ್ಧನ ರಣದಿರ್ದನ ಉರುಪರಾಕ್ರಮಿ ರಾವಣನ ಶಿರಕಡಿದನ ಹುಡಿಗೆಡೆದನ ವರವಿಭೀಷಣ ಭಕ್ತಗಭಿಷೇಚಿಸಿದನ ಪೋಷಿಸಿದನ 9 ಸಿರಿಸಹಿತ ಪುಷ್ಪಕವನೇರಿದ ಚಲುವನ ಅತಿ ಪೊಳೆವನ ತ್ವರದಿಶೃಂಗರಿಸಿದ ಅಯೋಧ್ಯಕೆ ಬಂದನ ಅಲ್ಲಿ ನಿಂದನ ಭರತ ಪ್ರಾರ್ಥಿಸಲಾಕ್ಷಣದಿ ಮೊರೆ ಕೇಳ್ದನ ಧರಿಯಾಳ್ದನ ಸರಸಿಜಾಸನ ಪ್ರಮುಖರಾರ್ಚನೆ ಕೊಂಡನ ಕೋದಂಡನ 10 ಮರುತಸುತನಿಗೆ ಅಜನ ಪದವಿಯನಿತ್ತನ ಬಹುಶಕ್ತನ ಚರಣಸೇವಕ ಜನಕಭೀಷ್ಟದಾತನ ವಿಖ್ಯಾತನ ನಿರುತ ಸನ್ಮುನಿಹೃದಯ ಮಂದಿರ ವಾಸನ ಜಗದೀಶನ ಸ್ಮರಣೆ ಮಾತ್ರದಿ ದುರಿತರಾಶಿಯ ತರಿದನ ಸುಖಗರೆವನ 11 ದೇವಕೀ ವಸುದೇವ ಸುತನೆಂದೆನಿಪನ ಜಗಕಧಿಪನ ಮಾವನನು ಸಂಹರಿಸಿ ಶಕಟನ ಕೊಂದನ ಆನಂದನ ಗೋವು ಕಾಯುತ ಗಿರಿಯ ಬೆರಳಲಿ ಆಂತನ ಬಹುಶಾಂತನ ಗೋವ್ರಜದಿ ಗೋಪಿಯರ ವಸನವ ಕಳೆದನ ಅಹಿತುಳಿದನ 12 ಲೋಕನಾಥನು ಪಾರ್ಥಸಾರಥಿಯಾದನ ಸುಪ್ರಮೋದನ ನೇಕ ಪರಿಭಗವತ್ಸುಗೀತೆಯ ಪೇಳ್ದನ ತಮಸೀಳ್ದನ ಆ ಕುರು ಕುಲವ ತರಿದ ಪಾಂಡವ ಪ್ರಾಣನ ಸುಪ್ರವೀಣನ ಆಕುರುಪ ಭೀಷ್ಮನಿಗೆ ಮುಕ್ತಿಯ ಕೊಟ್ಟನ ಅತಿಶ್ರೇಷ್ಟನ 13 ಕಪಟನಾಟಕ ನಗ್ನರೂಪದಿ ನಿಂತನ ನಿಶ್ಚಿಂತನ ತ್ರಿಪುರದಲಿ ಜಲಜಾಕ್ಷಿಯರ ವ್ರತ ಭÀಂಗನ ನಿಸ್ಸಂಗನ ಕೃಪಣವತ್ಸಲ ತುರಗವೇರಿ ತಾನಡೆದನ ಅಸಿಪಿಡಿದನ ಅಪರಿಮಿತ ಬಹುಕ್ರೂರ ಯವನ ವಿಘಾತನ ಪ್ರಖ್ಯಾತನ 14 ಈ ವಿಧದಿ ಬಹುಲೀಲೆ ಗೈವ ಸುಚರಿತನ ಜಗಭರಿತನ ಭಾವಶುದ್ಧಿಲಿ ಭಜಿಸುವವರಘಕಡಿವನ ಗತಿಕೊಡುವನ ಪಾವಮಾನಿ ಮತಾನುಗರ ಕರಪಿಡಿವನ ಭವತಡೆವನ ದೇವತತಿ ಸದ್ವಿನುತ ವರದೇಶ ವಿಠಲನ ನಿಷ್ಕುಟಿಲನ 15
--------------
ವರದೇಶವಿಠಲ
ಸ್ಮರಿಸೆಲವೋ ಸ್ಮರಿಸೆಲವೋ ಮನವೇ | ನಿರುತದಿ ಗುರುಮಹೀಪತಿ ಪಾದಾ ಪ ಆದ್ಯಾತ್ಮದಘನ ವಿದ್ಯೆಯ ಸಾಧಿಸಿ | ಸಿದ್ಧರ ನಡುವೆ ಪ್ರಸಿದ್ಧರಾದವರ 1 ನೆಟ್ಟನೆ ಶರಣರ ಪುಟ್ಟಿಸಿರಧಿಕಾ | ಬಿಟ್ಟುಪದೇಶವ ಕೊಟ್ಟು ಸಾಕುವರಾ 2 ಧಾರುಣಿಯೊಳು ಸಂಸಾರ ಮಾಡಿದರ | ಸಾರಸಜಲದಂತೆ ರಚಿಸಿದರಾ 3 ಯೋಗಧಾರುಣದಿ ಸಾಗಿಪದಿನಗಳು | ಭಾಗವತಾಗ್ರಣಿ ಎನಿಪಶ್ರೀಗುರುಪಾದಾ4 ವಿತ್ತಜನರು ತಂದಿತ್ತರೆ ಹಿಡಿಯದೆ | ನಿತ್ಯವ್ಯಯವ ಪವಡಿಸುತಿಹರವರಾ5 ಯುಕ್ತದಿ ವಿಷಯಾಸಕ್ತಿಯತ್ಯಜಿಸಿ | ವಿ ರಕ್ತಿ ಬೆಳಿಸಿ ಸುಮುಕ್ತಿ ಪಡೆದವರಾ 6 ಸ್ವಸ್ಥದಿ ನಾಲ್ಕು ಅವಸ್ಥೆಯ ಮೀರಿ | ಸ ಮಸ್ತರಲಿ ನಿಜ ವಸ್ತು ಕಂಡವರಾ7 ಕಾಖಂಡಕಿ ಸ್ಥಳ ಶ್ರೀಕರವಂದ್ಯೆ | ನಿ ರಾಕರಿಸದೆ ಅಂಗೀಕರಿಸಿದರಾ 8 ಎಂದೆಂದಿಗೂ ಹೊರಗೊಂದಿನ ಹೋಗದೆ | ಮಂದಿರದೊಳಗಾನಂದದಲಿಹರಾ9 ತಾಪತೃಯದಾ ಭವಪರಿಹರಿಸುತ | ತಾಪೋರೆದನು ಗುರು ಶ್ರೀಪತಿಗುರುಪಾದಾ 10 ಅಂಕಿತ-ಗುರುಶ್ರೀಪತಿ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸ್ಮಾರ್ತರ ನಿಂದನೆ ಮಾಡುವ ಕೆಟ್ಟ ಧೂರ್ತನ ಬಾಯ ಮೇಲೆ ಹೊಡೀ ಹೊಡೀ ಪ ಕರ್ತಾರ ಸ್ವರ ಸಮನೆನಿಸುವವರ ಪುರು- ಷಾರ್ಥಯುತ ಶೃತಿ ಶಾಸ್ತ್ರ ಪ್ರವರ್ತರ ಅ.ಪ ಪ್ರಮಾಣವನುಸರಿಸುವರ ವಿಹಿತವಾಗಿ ತಮ್ಮಂತೆ ಸರ್ವರನು ವಿಶೇಷದಿಂದರ್ಚಿಸುವವರ ಪ್ರಕಾಶಿಸುವವರ ಕರ್ಮ ಸಮ್ಯಜ್ಞಾನವಸಂಪಾದಿಸುವರ 1 ವೇದಾಭ್ಯಾಸದಿ ಕಾಲವ ಕಳೆಯುತ ವಿಹಿತರಿವರೆನಿಸಿಕೊಳ್ಳುವರ ಭೇದಾಭೇದಗಳರಿಯುತಲೀ ಬ್ರಹ್ಮವಾದದಲಿ ಸಂತೋಷಿಪರ ಪ್ರೀತಿಯ ಮಾಡುವರ ಹೃದ್ಗುಹೆಯಲಿ ನೋಳ್ಪರ 2 ನಂಬಿರುವವರ ವಿಧಿ ಪರೇಶನಲ್ಲಿಸಮನ್ವಯಿಸುವರ ಭಕ್ತಿಯಲಿ ಪೂಜಿಪರಾ ಸಂಪಾದಿಸೆ ಪಾತ್ರರಾದವರ 3
--------------
ಗುರುರಾಮವಿಠಲ
ಸ್ವಹಿತ ಸುಪಥ ಸಾಧನ ಪಡೆದು ಸ್ವಸುಖಗೂಡಿರೊ ವಿಹಿತ ಮರೆದು ವಿಭ್ರಮಾಚರಿಸಬ್ಯಾಡಿರೋ ಧ್ರುವ ದಾರು ತಿಳಿದು ನೋಡಿರೊ ಜ್ಞಾನ ಹೀನರಾಗಿ ಗರ್ವ ಹಿಡಿಯಬ್ಯಾಡಿರೊ ಸ್ವಾನುಭವಾಮೃತವನ್ನುಂಡು ಸವಿ ಸೂರ್ಯಾಡಿರೊ ನಾನು ನೀನು ಎಂಬ ಬಿನಗುಭ್ರಮ ಈಡ್ಯಾಡಿರೊ 1 ಮನದ ಕೊನಿಯಲಿದ್ದ ಘನದಾಶ್ರಯವು ಮಾಡಿರೊ ತನುವು ಲಂಪಟ್ಹಿಡಿದು ತನ್ನ ಮರಿಯಬ್ಯಾಡಿರೊ ಜನುಮ ಸಫಲವಾಗುವ ಸುಜಾಗ್ರತಿಯ ಪಡೆಯಿರೊ ನೆನವು ನೆಲೆಯಗೊಂಡು ನಿಜದಾಶ್ರಯದಲಿ ನಡೆಯಿರೊ2 ಮರ್ತು ಮೈಯ ವ್ಯರ್ಥ ದಿನವಗಳಿಯಬ್ಯಾಡಿರೊ ನಿರ್ತದಿಂದ ಅರ್ತ ಭಾವದರ್ಥಿ ನೋಡಿರೊ ಕರ್ತು ಭಾನುಕೋಟಿತೇಜನ ಗುರ್ತು ಮಾಡಿರೊ ಅರ್ತು ಮಹಿಪತಿ ಸ್ವಾಮಿಪಾದ ಬೆರ್ತುಕೂಡಿರೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಗತವು ಸ್ವಾಗತವು ಯೋಗಿವರ್ಯರಿಗೆ ||ವಿಶ್ವೇಶ ತೀರ್ಥ ಶ್ರೀ ವಿದ್ಯ ಮಾನ್ಯರಿಗೇ ಪ ಪ್ರೊದಟೂರು ಜನನಿಮ್ಮ | ಮೋದಮಯ ಆಗಮಕೆಆದರದಿ ಕಾದಿಹರು | ವೇದ ಘೋಷಿಸುತ |ಹೇದಯಾ ಪರಿಪೂರ್ಣ | ಸಾದುಗಳೆ ನಮಿಸುವೆವುಮೋದ ಪ್ರಮೋದ ಗುಣ | ಬೋಧಿಪುದು ನಮಗೇ 1 ಸಿರಿ ಮೂರ್ತಿ | ಗುರುರಾಘವೇಂದ್ರಾ |ವರಸು ಬೃಂದಾವನವ | ಸ್ಥಿರ ಪಡಿಸಿ ನಿಮ್ಮಾಮೃತಕರದಿಂದಲಿಂದೀಗ | ವರ ಮಹೂರ್ತದಲೀ 2 ವತ್ಸರವು ಆನಂದ | ವೈಶಾಖ ಸ್ಥಿತ ದಶಮಿವಾತ್ಸಲ್ಯ ಯತಿಗಳು | ಸುಸ್ಥಿರವು ಆಗೀ |ವತ್ಸಾರಿ ಹರಿಭೃತ್ಯ | ವತ್ಸಲತಯಿಂನಿಂದುಸುಸ್ಥಿರವು ಆಗಿಹುದು | ಭೃತ್ಯರಿಗೆ ವರದಾ 3 ಪತಿ ಮಹಿಮೆ | ಈಂಟಿ ಮುದ ಹೊಂದೇ 4 ಪಾದ | ಪಾಂಸುಗಳ ಧರಿಸೀಕೇವಲಾನಂದಮಯ | ಭಾವದೊಳು ಇಹೆವುಗುರುಗೋವಿಂದ ವಿಠಲ ಪವ ತಾವರ್ಯಾ ಶ್ರೀತರೇ 5
--------------
ಗುರುಗೋವಿಂದವಿಠಲರು
ಸ್ವಾಗತವು ಸ್ವಾಗತವು ಯೋಗಿವರ್ಯಾ ಪ ಪಾದ ಪಂಕಜವಾ ಅ.ಪ. ಯೋಗಿ ಜನ ವಂದ್ಯ ಭವರೋಗಾಹಿ ಖಗನೆನಿಪನಾಗ ಭೂಷಣ ಸಖನ ಯೋಗ ನಿರತಾ |ಆಗು ಹೋಗುಗಳೆರಡು ಸಹಿಸುವಲಿ ನಿಷ್ಠಾತಕಾಗಿನಿಯ ತಟವಾಸ ರಚಿತ ಸುಧೆ ಭರಿತಾ 1 ನಿತ್ಯ ನಿಜಯತಿ ಚರ್ಯಸ್ತುತ್ಯ ಪರಮೌದಾರ್ಯ ಯೋಗ ಧುರ್ಯಾ |ಸತ್ಯಾತ್ಮ ಪರಯುಗ್ಮ ಭಕ್ತಿಯಲಿ ಚಾತುರ್ಯಪ್ರತ್ಯಹರ್ರಾಮ ಪದ ಅರ್ಥ ಕೈಂಕರ್ಯಾ 2 ಭಾವಜನಯ್ಯ ಗುರು ಗೋವಿಂದ ವಿಠಲ ಪದಭಾವದಲಿ ಭಜಿಪಂಥ ಗುರುವರೇಣ್ಯಾ |ಪಾವನವು ನಿಮ್ಮ ಪದ ತೊಳೆದುದಕ ಶಿರಧೃತವುಪಾವಿಸಿತು ನಮ್ಮ ಕುಲ ನಾ ಪರಮ ಧನ್ಯಾ 3
--------------
ಗುರುಗೋವಿಂದವಿಠಲರು
ಸ್ವಾಮಿ ಗುರು ಗೋವಿಂದ ವಿಠಲ ಪೊರೆ ಇವನಾ ಪ ಶ್ರೀಮನೋಹರನಂಘ್ರಿ | ಕಮಲಕಾಂಕ್ಷಿಪನಾ ಅ.ಪ. ಶರಧಿ | ಮೇಶ ಮಧ್ವೇಶಾ 1 ತುಂಗೆ ತೀರದಿ ಧವಳ | ಗಂಗೆ ತಟವಾಸಯತಿಪುಂಗವರ ಕರುಣಾ | ಪಾಂಗ ವೀಕ್ಷಣವಾಮಂಗಳ ಸ್ವಪ್ನದಲಿ | ಕಂಗಳಿಂದಲಿ ಕಂಡುಸಂಗ ಸಾಧುಗಳ ಉ | ತ್ತುಂಗ ಬಯಸುವನೋ 2 ಜಲಜನಾಭನ ಭಜಿಸೆ | ಕುಲವು ಪ್ರಾಧಾನ್ಯಲ್ಲಹಲವಾರು ದೃಷ್ಠಾಂತ | ಕೇಳಿ ಬರುತಿಹುದೋಸುಲಭ ನೀನೆಂತೆಂದು | ಬಲವಿನಿಂ ಪ್ರಾರ್ಥಿಸುವೆತಿಳಿಪುವುದು ಮರುತಮತ | ಹಲವು ತತ್ವಗಳಾ 3 ಪಾದ್ಯ | ಚೀರ್ಣ ಸತ್ಕತಿಯವನುಪೂರ್ಣಗೈಸಿವನ ಪ್ರಾಚೀನ ಕರ್ಮಗಳಾ 4 ನಾಮಾಧಿಕಾರಿ ಇವ | ನಾಮಸ್ಮøತಿ ಸರ್ವದಾನೇಮದಿಂ ಫಲಿಸಿವಗೆ | ಸೋಮಧರನುತನೇಕಾಮಜನಕನೆ ಗುರೂ | ಗೋವಿಂದ ವಿಠಲಯ್ಯಈ ಮಾತು ಸಲಿಸೆಂದು | ಸ್ವಾಮಿ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ಸ್ವಾಮಿ ನಿನಗೆ ಶರಣನೆಂಬೆ ಸೋಮನಾಥಾ ಸಕಲ ಕಾಮಿತಾರ್ಥವಿತ್ತು ಸಲಹೊ ಸೋಮನಾಥಾ ಪ. ಹರಿಯ ಕರುಣಾ ಬಲದಿ ನೀನು ಸೋಮನಾಥಾ ಸರ್ವ ಸುರರಿಗೆಲ್ಲ ಧೊರೆಯಾಗಿರುವಿ ಸೋಮನಾಥ ಪಾದ ನಂಬಿ ಸೋಮನಾಥ ಮೊರೆಯ ಹೊಕ್ಕೆ ನಿಂದು ಬಂದು ಸೋಮನಾಥ 1 ವಿಘ್ನರಾಜ ನಿನ್ನ ಮಗನು ಸೋಮನಾಥಾ ಬೇಗ ಭಸ್ಮಗೈಸು ವೈರಿಗಳನು ಸೋಮನಾಥಾ ಮಗ್ನನಾದೆ ಮಹಾಂಬುಧಿಯೊಳ್ ಸೋಮನಾಥಾ ಸರ್ವ ವಿಘ್ನವೋಡಿಸೈ ಕೃಪಾಳೊ ಸೋಮನಾಥ 2 ಶಂಕರ ಕೈಪಿಡಿಯೊ ತ್ರಿಪುರ ಬಿಂಕವಾರಿ ಶ್ರೀ- ವೆಂಕಟಾದ್ರಿನಾಥನ ಮನೋನುಸಾರೀ ಕಿಂಕರನೆಂದೆನಿಸೆನ್ನ ಮೃಗಾಂಕಧಾರೀ ಪಾದ- ಪಂಕಜವ ನೀಡು ಸರ್ವಾತಂಕಹಾರೀ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ವಾಮಿ ಭಜನೆ ಮಾಡೊ ಮನುಜ ಪ್ರೇಮದಿಂದಲಿ ಪಾದ ಹಿಡಿದು ಪ ಬಂಧು ಬಳಗ ಭಾಗ್ಯವೆಂಬ ಬಯಲು ವಸ್ತುವೊ ಹಿಂದು ಮುಂದೇನು ಬರುವರು ಯಾರು ಇಲ್ಲವೊ ಎಂದು ತಿಳಿದು ಹರಿಯ ಮನದಿ ಮರೆಯಬೇಡವೊ ಇಂದಿರೇಶ ಸಕಲಕರ್ತ ವೆಂಕಟಾದ್ರಿ ನಿಲಯನಾದ 1 ನಿತ್ಯನೇವÀು ನಿಷ್ಠೆಯಿಂದ ನಿಜವು ತಿಳಿದು ನಿ ಸತ್ಯವಂತರ ಸಂಗ ಬಿಡದೆ ಸರ್ವಕಾಲದಿ ಭೃತ್ಯರಿಗೆ ಭೃತ್ಯನಾಗಿ ಪೂರ್ಣಭಾವದಿ ಮರಿಯದ್ಹೋಗಿ ಬಿಡದೆ 2 ಗಾನಲೋಲ ಕರುಣಾಸಾಗರ ಘನವಿಲಾಸನ ಭಾನುಕೋಟಿ ತೇಜನಾದ ಪರಮ ಪುರುಷನಾ ಶರಧಿ ಧ್ಯಾನದಲಿ ಚಿತ್ತವಿಟ್ಟು ಧೇನು ಪಾಲಕ ದಿವಿಜವಂದ್ಯನ 3
--------------
ಹೆನ್ನೆರಂಗದಾಸರು
ಸ್ವಾಮಿ ವೆಂಕಟರಮಣ ಭೂಮಿಪಾಲಕ ದೇವ ಸಂಜೀವ ಪ ಸುರರು ಅಸುರರೆಲ್ಲ ಶರಧಿಯ ಮಥಿಸಲು ಸಿರಿಯು ಜನಿಸಿ ಬಂದು ಹರಿಯ ಸೇರಿದಳು 1 ಸತಿ ಕುಸುಮಮಾಲೆಯನು ಅತಿ ಹರುಷದಿ ಜಗತ್ಪತಿಗೆಯಿಕ್ಕಿದಳು 2 ವಾರಿಧಿಯಾಕ್ಷಣ ಧಾರೆಯನೆರೆಯಲು ವಾರಿಜಾಂಬಕ ಲಕ್ಷ್ಮಿ ಒಡನೆ ನಿಂದಿರಲು 3 ಫಣ್ಭಿಹ್ತ್ರ1ಸೆಮಣಿಯೊಳು ರಮಣಿಯನೊಡಗೊಂಡು ಗುಣನಿಧಿಯು ಒಪ್ಪಿರಲು ತರುಣಿಯರೆಲ್ಲ 4 ಪಚ್ಚವ ಧರಿಸಿ ನವ ಸ್ವಚ್ಛವಾಗಿಯೆ ತುಳಿದು ಅಚ್ಯುತ ಮಹಾಲಕ್ಷ್ಮಿಗಚ್ಚಬೇಕೆನುತ 5 ಸಣ್ಣ ಮಲ್ಲಿಗೆ ಎಣ್ಣೆ ಬಣ್ಣವಾದರಿಸಿನವ ಪುಣ್ಯವಂತೆಗೆ ಕೈಗರ್ಣವ ಕೊಡಲು 6 ಸಿರಿ ತನ್ನ ತಲೆಗೆ ಪ್ರೋಕ್ಷಿಸಿಕೊಳಲು ಹರಿಯು ಮೆಚ್ಚಿದನು 7 ಗಟ್ಟಿಯಾದರಿಸಿನವ ಬಟ್ಟಲೆಣ್ಣೆಯಗೂಡಿ ಮುಟ್ಟಲಂಜಿಯೆ ನಿಲಲು ಸೃಷ್ಟಿಪಾಲಕನ 8 ಅಂಗೈಯ ಅರಿಸಿಣವ ಮುಂಗೈಗೆ ಒರಸುತ್ತ ರಂಗನ ಸಿರಿಮೊಗವ ಕಂಗಳಿಂದೀಕ್ಷಿಸುತ 9 ಅಭಯ ಹಸ್ತವನಿತ್ತ ತ್ರಿಭುವನದೊಡೆಯನು ಅಬುಜಲೋಚನೆ ಮುಖಾಂಬುಜಕೆ ತಿಮುರಿದಳು 10 ಸತಿ ಕೈಯ ಅರಿಶಿಣವ ಪತಿಯಾದಿಕೇಶವನ ನುತಿಸಿ ಊರಿದಳು 11 ಸಿರಿಯೆನೆತ್ತಿದ ಕೈಯ ಹರಿ ತಾನು ತೋರಿಸಲು ಸಿರಿ ನಾರಾಯಣ ಎಂದು ಅರಿಶಿಣವ ತಿಮುರೆ 12 ಶಂಖವ ಧರಿಸಿದ ಪಂಕಜಾಕ್ಷನೆ ವಿಷ್ಣು ವೆಂಕಟೇಶನ ಕರಪಂಕಜಕೆ ತಿಮುರೆ 13 ಕದನದೊಳ್ ಖಳರನು ಸದೆದು ಮರ್ದಿಸಿ ಗೆಲಿದು ಮಧುಸೂದನ ಶ್ರೀವತ್ಸದೆದೆಯ ತೋರೆನುತ 14 ಚಕ್ರವ ಪಿಡಿದು ಪರಾಕ್ರಮಿಯೆನಿಸಿಯೇ ಅಕ್ರೂರಗೊಲಿದ ತ್ರಿವಿಕ್ರಮಗೆ ತಿಮುರೆ 15 ವಾಮನನನಾಗೆ ಶ್ರಮವನು ಪಟ್ಟೆನುತ ಭೂಮಿಯ ಅಳೆದ ಪಾದವಿತ್ತಲು ತಾರೆನುತ16 ಕಾದಲನು ಕಾಣುತ್ತ ಪಾದವನಿತ್ತನು ಶ್ರೀಧರನೆನುತಲಿ ಅರಸಿನವ ತಿಮುರೆ 17 ವಾಮಪಾದವ ಕಂಡು ಭಾಮಿನಿ ತಾರೆನೆಲು ಸೋಮಸನ್ನಿಭ ಹೃಷಿಕೇಶ ತಾನಿತ್ತ 18 ಪದ್ಮಬÁಂಧವ ತೇಜ ಪದ್ಮಸಂಭವ ಪೂಜ ಪದ್ಮನಾಭಗೆ ಪದ್ಮಗಂಧಿ ತಾ ತಿಮುರೆ 19 ಆ ಮಹಾ ನಾಮದ ದಾಮೋದರನ ಕಂಡು ಭಾವೆ ಮಹಾಲಕ್ಷುಮಿ ವೀಳ್ಯವ ಕೊಡಲು 20 ವಾಸುದೇವನು ತನ್ನ ಅರಸಿ ಮಾಲಕ್ಷ್ಮಿಗೆ ಪೂಸಿದನರಿಸಿನದ ಎಣ್ಣೆಯ ಮೊಗಕೆ 21 ಪಂಕಜಾಕ್ಷನ ಕಂಡು ಕಂಕಣದ ಹಸ್ತವನು ಕುಂಕುಮದೆಣ್ಣೆಯ ಸಂಕರ್ಷಣ ತಿಮುರೆ 22 ಬುದ್ಧಿವಂತೆಯ ಎಡದ ಮುದ್ದು ಹಸ್ತವ ನೋಡಿ ಉದ್ಧರಿಸಿ ನವ ಪ್ರದ್ಯುಮ್ನ ನಗುತ 23 ಅನಿರುದ್ಧ ನಗುತಲೆ ಘನಕುಚಮಂಡಲಕೆ ಅರಿಸಿನವ ತಿಮುರೆ 24 ಪುರುಷರೊಳು ಉತ್ತಮನು ಹರುಷವನು ತಾಳಿಯೆ ಅರಸಿ ಮಹಾಲಕ್ಷುಮಿಗೆ ಅರಿಸಿನವ ತಿಮುರೆ 25 ಅಧೋಕ್ಷಜನು ತನ್ನ ತುದಿವೆರಳ ಅರಿಸಿನವ ಪದುಮನೇತ್ರೆಯ ಪದದೊಳಗೆ ಮಿಡಿದಿರ್ದ 26 ನಾರಸಿಂಹನು ಸತಿಯ ಮೋರೆಯಿಂದಾರಭ್ಯ ಓರಣವಾಗಿಯೇ ಅರಿಸಿನವ ತಿಮುರೆ 27 ನೆಚ್ಚಿಯೆ ಹರಿ ತಾನು ಅಚ್ಚ ಕರ್ಪೂರದೆಲೆಯ ಅಚ್ಯುತ ಕೊಡಲು 28 ಮನದಿ ಲಜ್ಜಿತೆಯಾಗಿ ಘನಮಹಿಮ ಮುನಿವಂದ್ಯ ತನಗೆ ವಲ್ಲಭ ನಿಜನಾದನೆನುತ 29 ಆ ಪರಮಹಿಮನು ರೂಪಸಂಪನ್ನ ದ- ಯಾಪರನಾಗಿಯೆ ಉಪೇಂದ್ರ ತಾನೊಲಿದು 30 ಹರಯೆಂಬ ನಾಮದಿ ಹರದಿ ಮಾಲಕ್ಷ್ಮಿಯ ವರಸಿದ ಶ್ರೀಹರಿಯು ಹರದಿಯರ್ಪೊಗಳೆ31 ಬೆಟ್ಟದೊಡೆಯನೆನಿಸಿ ದೃಷ್ಟಿಗೋಚರವಾದ ಶ್ರೀಕೃಷ್ಣ ಮಾಲಕ್ಷುಮಿಗೆ ಆರತಿಯ ತಿಮುರೆ 32 ವರಮಹಾಲಕ್ಷುಮಿಗೆ ವರಾಹತಿಮ್ಮಪ್ಪಗೆ ಅರಸಿನದೆಣ್ಣೆಯ ರಚಿಸಿದ ಪರಿಯು 33
--------------
ವರಹತಿಮ್ಮಪ್ಪ
ಸ್ವಾಮಿ ಸಗುಣ ನಿರ್ಗುಣ ಬಾರಯ್ಯ ಬ್ರಹ್ಮಾನಂದ ಸುಖವು ದೋರಯ್ಯ ಧ್ರುವ ಕಣ್ಣು ಬಡೆಯುತದೆ ನಿಮ್ಮ ನೋಡೇನೆಂದು ಪುಣ್ಯಚರಣ ಸುಪ್ರಭೆದೋರೋ ನೀ ಬಂದು ಧನ್ಯಧನ್ಯಗೈಸುವದೋ ಕೃಪಾಸಿಂಧು ಎನ್ನೊಡೆಯ ನೀನಹುದೋ ದೀನಬಂಧು 1 ಅನುದಿನ ಸುಸೇವೆ ನಿಮ್ಮ ಮಾಡೇನೋ ಕ್ಷಣಕ್ಕೊಮ್ಮೆ ಸ್ವರೂಪ ನಾನೋಡೇನೋ ಘನ ಸುಖದೊಳು ನಾ ಬೆರೆದಾಡೇನೋ ನೆನೆವಂಥ ದಾಸರ ನಿಮ್ಮ ಕೂಡೇನೋ 2 ಹೃದಯದೊಳು ನಿಜವಾಗಬೇಕಿಗ ಸದಾಸರ್ವದಾ ಮಾಡೋ ಏನ್ನೊಳೀವ್ಹಾಂಗ ಪಾದಪದ್ಮಕ್ಯೋಗ್ಯ ಮಾಡೋ ಮಹಿಪತಿಗೆ ಇದೆ ಪುಣ್ಯ ನೋಡಯ್ಯ ಕುಲಕೋಟಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ಸದ್ಗುರುದಯವೆ ತಾ ನಿಜ ನೇಮ Pರಿಗಿದೇವೆ ಹಿತಗುಜ ಸಮಸ್ತ ಜನರಿಗಿದೆ ಸುಬೀಜ ಪ್ರೇಮವಿಟ್ಟವರಿಗ್ಹೊಳೆವದು ಸಹಜ 1 ಗುರು ಉಪಾಸನೆ ಎಲ್ಲಕೆ ಮೇಲು ಸುರಜನರಿಗಿದೊಂದೇ ಕೀಲು ಅರಿತವರಿಗೆ ಮುಕ್ತಿ ಬಾಗಿಲು ತ್ಯರ ತಿಳಿಯದವರಿಗಿದೇ ಸೋಲು 2 ನಂಬಿ ನಡೆಯಬೇಕು ಸದ್ಗುರುಪಾದ ಇಂದುದೋರಿಕೊಡುವದು ಸುಬೋಧ ಗುಂಭಗುರುತಾಗಿದೋರುದು ಸ್ವಾದ ಹಂಬಲಿಸಿಕೊಳಬೇಕು ಸುಪ್ರಸಾದ 3 ಗುರುಮಾರ್ಗವೆಂಬುದೆ ಸಾಕ್ಷಾತ್ಕಾರ ಸೂರೆಗೊಂಡು ಮ್ಯಾಲೆ ಸುಖಸಾಗರ ಮರುಳ ಬಲ್ಲವೇನಿದರ ವಿಚಾರ ಶರಣಜನರಿಗಿದೇ ಸಹಕಾರ 4 ಗುರುಕೃಪೆಯಾದವಗೆ ಪ್ರಾಂಜಳ ಸಾರಾಯ ಕೊಂಬುವನೆ ತಾ ವಿರಳ ಅರಿಯೋ ಮಹಿಪತಿ ನಿನ್ನೊಳು ಸಕಳ ಹರುಷವಾಗೆದಿಂತು ಈ ಸುಖಕಲ್ಲೋಳ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು