ಒಟ್ಟು 3819 ಕಡೆಗಳಲ್ಲಿ , 122 ದಾಸರು , 2723 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಾಪಡೆದು ಬಂದುದಕುಪಾಯವೇನು |ಕೋಪದಲಿ ಶ್ರೀಪತಿಯ ಶಾಪಿಸಿದರೇನು ಪ.ಅನ್ನವಸ್ತ್ರವಿಲ್ಲವೆಂದು ಅತಿ ಕ್ಲೇಶಪಟ್ಟರೇನು |ಧಾನ್ಯಧನಗಳ ಬೇಡಿ ಧರೆಗಿಳಿದರೇನು |ಎಣ್ಣಿಯನು ಪೂಸಿ ಹುಡಿಯೊಳಗೆ ಹೊರಳಿದರೇನು |ತನ್ನ ತಲೆ ಅಡಿಮಾಡಿ ತಪವ ಮಾಡಿದರೇನು 1ಸರಿಯ ಸುಜನರ ಕಂಡು ಕರುಬಿ ಕೊರಗಿದರೇನು |ಬರಿಮಾತುಗಳನಾಡಿ ಭ್ರಷ್ಟನಾದರೆ ಏನು ||ಇರುಳು ಹಗಲೂ ಹೋಗಿ ಆರ ಮೊರೆಯಿಟ್ಟರೇನು |ಅರಿಯದ - ಮನುಜರಿಗೆ ಆಲ್ಪರಿದರೇನು 2ಹೋಗದೂರಿನ ದಾರಿಕೇಳಿ ಮಾಡುವದೇನು |ಮೂಗನ - ಕೂಡ ಏಕಾಂತವೇನು ||ಯೋಗೀಶ ಪುರಂದರವಿಠಲನ ನೆನೆಯದವ |ತ್ಯಾಗಿಯಾದರೆ ಏನು ಭೋಗಿಯಾದರೆ ಏನು 3
--------------
ಪುರಂದರದಾಸರು
ತಿಂಗಳಿಗೆ ತಿಂಗಳಿಗೆ ಬರುತಿಹ | ಪಿಂಗಳರ ನಾಮವನು ಬರೆವೆನು |ಇಂಗಿತಜÕರು ಕೇಳ್ವುದು ಉದಾಶನವ ಮಾಡದಲೆ ಪಧಾತ ಚೈತ್ರಕೆ ಆರ್ಯಮಾಯೆಂಬಾತ ವೈಶಾಖಕೆ ಸುಜೇಷ್ಠಕೆ |ನಾಥನೆನಿಸುವಮಿತ್ರಆಷಾಢಕ್ಕೆ ಬಹ ವರುಣ ||ಖ್ಯಾತನಾಗಿಹ ಶ್ರಾವಣಕೆಪುರುಹೂತಭಾದ್ರಪದಕೆ ವಿವಸ್ವಾನೆ |ಭೂತಿಯುತನಾಗಿರುವ ತ್ವಷ್ಟ್ರಾಶ್ವೀನ ಮಾಸದಲಿ 1ಹರಿದಿನಪ ಕಾರ್ತೀಕ ಮಾಸದಿ |ಇರುತಿಹನು ಮಾರ್ಗಶಿರದಿಸವಿತೃ|ವರದ ಭಗ ಪುಷ್ಯದಲಿ ಪೂಷಾ ಮಾಘಮಾಸದಲಿ ||ಸುರನದಿಯೆ ಮೊದಲಾಗಿಹ ಐ |ವರಿಗೆ ಸಮಪರ್ಜನ್ಯ ಫಾಲ್ಗುಣ |ಕರಿತು ಇಂತು ಯಥಾವಿಧಿಯೊಳಘ್ರ್ಯವನು ಕೊಟ್ಟು ಜಪವ 2ಮಾಡುತಿಹ ಧನ್ಯರಿಗೆ ಪಾಪಗ |ಳೋಡಿ ಸುತ ದಯದಿಂದ ಯೇನೇನೆ |ಬೇಡಿದಿಷ್ಟವ ಕೊಟ್ಟು ಕರ್ಮಕೆ ಸಾಕ್ಷಿ ತಾನಾಗಿ ||ಮಾಡುವನು ಸಂರಕ್ಷಣೆಯ ಒಡ | ನಾಡುವನುಬಿಡನೊಂದರೆಕ್ಷಣ |ಈಡುಇಲ್ಲದ ಮಹಿಮಶ್ರೀ ಪ್ರಾಣೇಶ ವಿಠಲನು 3
--------------
ಪ್ರಾಣೇಶದಾಸರು
ತಿಳಿಯನು ಎಂದೆಂದಿಗನ್ಯ | ರಂಗಒಲಿದ ದಾಸರು ಜಗನ್ಮಾನ್ಯ ||ಅಲವಮಹಾತ್ಮರೆಂಬ ಪುಣ್ಯ | ಕೀರ್ತಿಗಳನಿತ್ಯಕೇಳ್ವನರಧನ್ಯ ಪಹಿರಣ್ಯಕಶ್ಯಪುಜ ಸಹ್ಲಾದನೇವೇ |ಎರಡನೆ ಜನ್ಮ ಶಲ್ಯನಾದ ||ಗುರುವಾದಿರಾಜರನರ್ಚಿಸಿದ |ಪುರಂದರದಾಸರಾಯರಲ್ಲುದಿಸಿದ1ಅಯ್ದನೆಯ ರೂಪವೀಗಿಂದಂತೆ |ಬಹುದು ಏಳು ಜನ್ಮ ಮುಂದಂತೆ ||ಮೋದಾಭಿವೃದ್ಧಿಗೇನೋ ಅಂತೇ ಎಂಬ |ವಾದಿಗಿದೆಲ್ಲ ಅಂತಿಗಂತೆ 2ದಾಸಕೂಟಸ್ಥರಿಗೀ ಮಾತು ಕೆಲವು |ದೇಶಗಳಲ್ಲಿ ಅನುಭವವಾಯ್ತು ||ಈ ಸುಕಥಾಲಾಪ ವಲ್ಲ್ಯಾಯಿತು ಶ್ರೀ ಪ್ರಾ |ಣೇಶ ವಿಠಲನಲ್ಲಿಹನಾತು 3
--------------
ಪ್ರಾಣೇಶದಾಸರು
ತೇಲಿಸೊ ಇಲ್ಲ ಮುಳುಗಿಸೊ- ನಿನ್ನ-|ಪಾಲಿಗೆ ಬಿದ್ದೆನೊಪರಮದಯಾಳೊಪಸತಿ-ಸುತ-ಧನದಾಶೆ ಎಂತೆಂಬ ಮೋಹದಿ |ಹಿತದಿಂದ ಅತಿನೊಂದು ಬಳಲಿದೆನೊ ||ಗತಿಯನೀವರ ಕಾಣೆ ಮೊರೆಯ ಲಾಲಿಸೊ ಲಕ್ಷ್ಮೀ-|ಪತಿನಿನ್ನ ಚರಣದ ಸ್ಮರಣೆಯಿತ್ತೆನ್ನ1ಜರೆರೋಗ ದಾರಿದ್ರ್ಯ ಕಶ್ಮಲವೆಂತೆಂಬ |ಶರಧಿಯೊಳಗೆ ಬಿದ್ದು ಮುಳುಗಿದೆನೊ ||ಸ್ಥಿರವಲ್ಲ ಈ ದೇಹ ನೆರೆನಂಬಿದೆನು ನಿನ್ನ |ಕರುಣಾಭಯವನಿತ್ತು ಪಾಲಿಸೊ ಹರಿಯೆ 2ದೋಷವುಳ್ಳವ ನಾನು ಭಾಷೆಯುಳ್ಳವ ನೀನು |ಮೋಸ ಹೋದೆನೊ ಭಕ್ತಿರಸವ ಬಿಟ್ಟು ||ದಾಸರ ಸಂಗವಿತ್ತು ಪಾಲಿಸೊ ಹರಿಯೆ 3
--------------
ಪುರಂದರದಾಸರು
ತೋಳೆಂಬೆನು ತೋಳೆ ಲಕುಮಿಯಾಲಂಗಿಪ ತೋಳೆಬಾಲರತ್ನ ತೋಳನ್ನಾಡೈ ಬಾಲಕೃಷ್ಣ ನಾಡೆ ಪ.ಕಂದಿ ಕುಂದ್ಯಾಕ್ರಂದಿದ ನಾಗನಬಂದೆತ್ತಿದ ತೋಳೆನೊಂದ ಕಂದನೆಂದು ತೊಡೆಯಲಿಹೊಂದಿಸಿಕೊಂಡ ತೋಳೆ 1ಹರಧನುಜರಿದುಮುರಿದವಿಕ್ರಮಬಿರುದಾಂಕನ ತೋಳೆಮರೆಯದೆ ಕರೆದರರಿದಂಬರವವರಧಿಸ್ಯುಡಿಸಿದ ತೋಳೆ 2ದಾಸವಂಶ ವಿಪೋಷ ರಿಪುಜನನಾಶಕಾರಣ ತೋಳೆಶೇಷಗಿರೀಶ ಪ್ರಸನ್ವೆಂಕಟವಾಸ ರಂಗನ ತೋಳೆ 3
--------------
ಪ್ರಸನ್ನವೆಂಕಟದಾಸರು
ತ್ರುಟಿಗೆ ಕ್ಷಣಕೆ ನೆನೆಮನವೇ - ಹರಿಯ |ತ್ರುಟಿಗೆ ಕ್ಷಣಕೆ ನೆನೆಮನವೆ ಪತ್ರುಟಿಗೆ ಕ್ಷಣಕೆ ನೆನೆ ಕ್ಷಣಕೆ ಲವಕೆ ನೆನೆ |ಘಟಿಗೆ ಘಟಿಗೆ ನೆನೆ, ಇರುಳು ಹಗಲು ನೆನೆ ಅ.ಪಜಠರದಿ ಜಗತಿಗೆ ಹಿರಿಯ-ಜಗ |ನ್ನಾಟಕಮೋಹ ಸೂತ್ರಧಾರಿಯ ||ಪಟು ಹಿರಣ್ಯಾಕ್ಷ ಸಂಹಾರಿಯ |ನಿಷ್ಠುರನಾದ ಕಂಸಾರಿಯ 1ರಣಿತ ಕಂಕಣ ನೂಪುರಿಯ-ರು |ಕ್ಮಿಣಿಯನಾಳುವ ದೊಡ್ಡ ದೊರೆಯ ||ಗುಣನಿಧಿ ಗೋವರ್ಧನಧಾರಿಯ-ನೀ- |ಕರುಣಿಯು ಅವನೆಂದರಿಯ 2ನವನೀತದಧಿತಸ್ಕರಿಯ -ಈ |ಭವಹರಒಡೆಯನೆಂದರಿಯ ||ಜವನು ಕೇಳಲು ನಿನ್ನ ಮೊರೆಯ -ಚಿಹಿ |ಅವನ ನಾಲಗ್ಗೆ ಮುಳ್ಳು ಮುರಿಯ 3ಮನಕಭಾಗಿಗೆ ಶ್ರುತಿಯರಿಯ -ದಂಥ |ಘನಪಾಪಿಗಳಿಗವ ದೊರೆಯ ||ನೆನೆವರ ಪಾಲಿಪುದ ಮರೆಯ -ಸು |ಮ್ಮನೆ ಇರಲವ ನಮ್ಮ ಪೊರೆಯ4ಸ್ಮರಿಸಲು ಯಮ ನಿನ್ನ ದಾರಿಯ -ಹೋಗ |ವರಭಾರತಿಪತಿ ಮರೆಯ |ಪುರಂದರವಿಠಲ ದೊರೆಯ -ನೆನೆ-ದಿರೆ ಯಮ ನಿನ್ನನು ಕೊರೆಯ 5ತ್ರುಟಿಗೆ ಕ್ಷಣಕೆ ನೆನೆಮನವೇ-ಹರಿಯತ್ರುಟಿಗೆ ಕ್ಷಣಕೆ ನೆನೆಮನವೇ ||
--------------
ಪುರಂದರದಾಸರು
ದಾಟು ಭವಾಟವಿಯನ್ನು ಮನುಜ ನೀದಾಟು ಭವಾಟವಿಯನ್ನುಕೈಟಭಾಂತಕನಾಮಪಾತಕರೊಡಗೂಡಿನೀಟಾಗದಂದದ ಪಾಟಿಯ ಕೇಳಿನ್ನು ಪ.ಹೆಣ್ಣೆಂಬ ಹೆದ್ದೋಳ ತಿರುಗುತಿವೆ ಬಲುಪುಣ್ಯಮಾರ್ಗವ ನಡಿಗುಡವುಬಣ್ಣ ಬಣ್ಣದ ಮೃತ್ಯುಗಳೆಂಬ ಹೆಬ್ಬುಲಿಕಣ್ಣಲಿ ಕಂಡರೆ ಬಿಡವುಸಣ್ಣಮಕ್ಕಳು ನೆಂಟರಿಷ್ಟ ನರಿಗಳರ್ಥಪೆಣ್ಣಿನ ನಾತಕೆ ಓಡ್ಯಾಡುವುವುಹಣ್ಣುಕಾಯಿಗಳೆಲ್ಲ ವಿಷಮಯವಾಗಿಹ ಅರಣ್ಯದ ಖಳರೆಂಬ ಗಿಡವು 1ಆರಿಂದ್ರಿಯ ಕಳ್ಳರೆಂಬ ಕಾಮವೆಂಬಚೋರನಾಯಕನುಪಟಳವುಭೂರಿಕಾಲದ ಧರ್ಮವೆಂಬ ದ್ರವ್ಯವೆಲ್ಲಸೂರ್ಯಾಡಿಸುಲಕೊಂಬ ಹಯವುಮೂರು ಬಗೆಯಿಂದ ಸುಡುತ ಕಂಗೆಡಿಸುವದಾರುಣತರ ದಾವಾನಳವುಚೀರುವ ನಿಂದಕ ಝಲ್ಲಿಕದುಶಾಸ್ತ್ರ ನಿಸ್ಸಾರ ಘೂಕಗಳ ರವವು 2ಅಡ್ಡಡ್ಡ ಬಂದು ಅಜ್ಞಾನ ಕಾಳೋರಗವೆಡ್ಡುಗೊಳಿಸಿ ಕಚ್ಚುತಿವೆದೊಡ್ಡೆಂಟು ಮದವೆಂಬೊ ಮದ್ದಾನೆ ಎದೆಯೆಂಬಗುಡ್ಡದೊಳಗೆ ಸುತ್ತುತಿವೆಹೆಡ್ಡನೆಂದು ಚುನ್ನವಾಡಿ ಮನೋಬುದ್ಧಿಗಡ್ಡದ ಕಪಿ ಕಾಡುತಿವೆ 3ಜನ್ಮಮರಣ ಹಸುತೃಷೆಜರಾವ್ಯಾಧಿಯೆಂಬುಮ್ಮಳಿಕೆಯ ಪೊರೆಯುಂಟುಹಮ್ಮುಮಮತೆ ಎಂಬ ತಲೆಹೊರೆ ಭಾರಾಗಿಒಮ್ಮೆಗಿಳಿಯಲಿಲ್ಲ ಗಂಟುಸ್ವರ್ಮಂದಿರವೆ ಹೆಬ್ಬೆಟ್ಟನಾಯಕನರ್ಕಕಮ್ಮರಿಗಳು ಇಪ್ಪತ್ತೆಂಟುಸನ್ಮಾನ ರಾಗಭೋಗಗಳೆಂಬ ಬಯಲಾಸೆಯ ಮೃಗತೃಷ್ಣೆಯ ನಂಟು 4ಅಲ್ಲಿಗಲ್ಲಿಗೆ ಸುಖದು:ಖನೆಳಲುಬಿಸಲಲ್ಲಿಗಲ್ಲಿಗೆ ಪ್ರಿಯತರುವುಬಲ್ಲಿದರಿಂದಾಹ ಭಯದಂತೆ ಸೂಚಿಪಕಲ್ಲುಕೊಳ್ಳಗಳ ನಿರ್ಝರವುಕೊಲ್ವಾರಿನೃಪದೂತರೆಂಬ ಸೂಕರಮೋಹÀಹಲ್ಲೊಳಗಘಕೂಪದಿರವುಕ್ಷುಲ್ಲಕ ಪಿಸುಣರೆಂಬುವ ಋಕ್ಷಬಿಡಾಲಹೊಲ್ಲನಖಿಗಳ ಸಂಚರವು 5ಈಷಣತ್ರಯಯಂತ್ರ ಏಳು ಪ್ರಾಕಾರದಿದ್ವೇಷಿಗಳಿದ್ದ ದುರ್ಗಗಳುದೂಷಣ ಸ್ತುತಿ ಎಂಬ ಕಾಕಪಿಕೋಕ್ತಿ ಪ್ರದೋಷದ ಮಳೆ ಮಂಜುಗಳುನೈಷಧನುಂಡು ಕೊಬ್ಬಿದ ಇಂದ್ರಿಯಗೋಳಕಮೂಷಕಗಳಿಹ ಬಿಲಗಳುದೋಷ ದುರ್ವಾರ್ತೆ ದುರಿತವೆಂಬ ಕ್ರವ್ಯಾದಘೋಷಣ ಭಯಂಕರಗಳು 6ಈ ರೀತಿಕಾಂತಾರದಾಟುವ ಧೀರಗೆಮಾರುತಿ ಮತ ಪಕ್ಷ ಬೇಕುನಾರಾಯಣನೆ ಸರ್ವೋತ್ತಮನೆಂದೆಂಬತೋರ ಗಧಾಯುಧ ಬೇಕುಘೋರಾದ್ವೈತ ಕಕ್ಷವ ಛೇದಿಸುವ ಸುಕುಠಾರ ತತ್ವಗಳಿರಬೇಕುಸಾರಜÕಜನಪ್ರಭು ಪ್ರಸನ್ವೆಂಕಟಕೃಷ್ಣನಾರಸಿಂಹನಸ್ಮøತಿಬೇಕು7
--------------
ಪ್ರಸನ್ನವೆಂಕಟದಾಸರು
ದಾರಿಯ ತೋರೊ ಮುಕುಂದ - ಹರಿ-|ನಾರಾಯಣ ಗೋವಿಂದ ಪಬಂದೆನು ಬಹುಜ್ಮನದಲಿ -ನಾ-|ಬಂಧನದೊಳು ಸಿಲುಕುತಲಿ ||ಮುಂದಿನದಾವುದು ಪಯಣ -ತೋರೊ-|ಇಂದುನೀ ಇಂದಿರೆರಮಣ1ಗತಿಯಿಲ್ಲದವರಿಗೆ ನೀನೆ -ಸದ್-|ಗತಿಯೆಂದು ಸ್ತುತಿಮಾಡಿದೆನೊ ||ಗತಿಯೆಂದು ನಂಬಿದೆ ನಿನ್ನ |ಸತುವ ತೋರು ನರಹರಿಯೆ ಗೋವಿಂದ 2ಮಡವಿನೊಳಗೆ ಧಮುಕಿದೆನೆ -ಇನ್ನು-ಕಡಹಾಯಿಸುವರ ನಾ ಕಾಣೆ ||ಹಡೆದ ತಾಯಿ - ತಂದೆ ನೀನೆ -ಕೈ-|ಹಿಡಿದು ಸಲಹೊ ಎನ್ನೊಡೆಯ ಮುರಾರಿ 3ಮಿಕ್ಕಿ ಬರುವ ಹೊಳೆಯೊಳಗೆ -ನಾನು-|ಸಿಕ್ಕಿದೆ ನಡುನೀರೊಳಗೆ ||ಕಕ್ಕುಲಾತಿನಿನಗಿರದೆ |ಭಕ್ತವತ್ಸಲ ನೀ ದಯಮಾಡೋ 4ಕುಕ್ಷಿಯೊಳಗೆ ಇಂಬಿಟ್ಟು -ಎನ್ನ-|ರಕ್ಷಿಸಿ ಸಲಹಬೇಕು ||ಅಕ್ಷಯಅನಂತ ಮಹಿಮನೆ - ನೀನು |ಪಕ್ಷಿವಾಹನನೆಪುರಂದರವಿಠಲ5
--------------
ಪುರಂದರದಾಸರು
ದಾಸನೆಂತಾಗುವೆನು ಧರೆಯೊಳಗೆ ನಾನು |ವಾಸುದೇವನಲಿ ಲೇಸ ಭಕುತಿಯ ಕಾಣೆ ಪ.ಗೂಟನಾಮವ ಹೊಡೆದು ಗುಂಡು ತಂಬಿಗೆ ಹಿಡಿದು |ಗೋಟಂಚುಧೋತರ ಮುಡಿಯನುಟ್ಟು ||ದಾಟುಗಾಲಿಡುತ ನಾಧರೆಯೊಳಗೆ ಬರಲೆನ್ನ |ಬೂಟಕತನ ನೋಡಿ ಭ್ರಮಿಸದಿರಿ ಜನರೆ 1ಅರ್ಥದಲ್ಲಿಯ ಮನಸು ಆಸಕ್ತವಾಗಿದ್ದು |ವ್ಯರ್ಥವಾಯಿತು ಜನ್ಮ ವಸುಧೆಯೊಳು ||ಅರ್ತಿಯಿಂದಲಿ ಹರಿಯ ಅರ್ಚಿಸಿದ್ದಿಲ್ಲ ನಾ |ಸತ್ಯ - ಶೌಚಗಳರಿಯೆ ಸಜ್ಜನರುಕೇಳಿ2ಇಂದಿರೇಶನ ಪೂಜೆ ಬಂದು ಮಾಡಿದ್ದಿಲ್ಲ |ಸಂಧ್ಯಾನ - ಜಪ - ತಪವೊಂದನರಿಯೆ||ಒಂದು ಸಾಧನ ಕಾಣೆ ಪುರಂದರವಿಠಲನ |ದ್ವಂದ್ವಪಾದವ ನಂಬಿ ಅರಿತು ಭಜಿಸಿದರೆ 3
--------------
ಪುರಂದರದಾಸರು
ದೇವರನಾಮ - ಶ್ರೀ ಸೇತುಮಾಧವ ಸ್ತೋತ್ರ62-1ಸೇತುಮಾಧವ ವಿಭುವೇ | ನಿನ್ನಯ ದಿವ್ಯವೃತತಿಜ ಪದಯುಗಳ |ಸತತ ನಂಬಿದೆ ಎನ್ನ ಹಿತದಿ ಪಾಲಿಸಿ ಸದಾಕೃತ ಕೃತ್ಯ ಧನ್ಯನ ಮಾಡಿ ಸಲಹೋ ಸ್ವಾಮಿ ಪಪುಟ್ಟಿದಾರಭ್ಯ ನಿನ್ನ | ನಾಮವ ಒಂದು |ತೃಟಿಯು ಭಜಿಸಲಿಲ್ಲವೋ |ವಿಠ್ಠಲರಾಯ ಪರಮೇಷ್ಟಿಯ ಪಿತ ಎನ್ನಕಷ್ಟಗಳಳಿದು ಸಲಹೋ ಸರ್ವೋತ್ಕøಷ್ಟ ||ಕೃಷ್ಣ ಕೃಷ್ಣಾವರದ ಅಜಮಿಳಭ್ರಷ್ಟತನವ ಎಣಿಸದೇ ಬಹುನಿಷ್ಟವಿಪ್ರಸುಧಾಮಗೊಲಿದತ್ರಿಧಾಮ ನಮೋ ಮಧ್ವೇಷ್ಟಪಾಹಿ1ಸೇತು ಸರ್ವಾಶ್ರಯನೇ | ನೀನೊಬ್ಬನೇ |ಮುಕ್ತಾ ಮುಕ್ತಾಶ್ರಯನು |ತ್ರಾತನೀನೇವೆ ಯೆಂದರಿತವರ ಭೀತಿಹರಪಾತ ಸರ್ವೋತ್ತಮ ಜಗದೇಕ ಈಶದ್ಯುಧರಾ ಪಾತಾಳ ಸರ್ವಾಧಾರನಾಗಿಹಪ್ರಭುವೇ ನಿನ್ನಯ ಅತಿ ಅಗಾಧಸುಮಹಿಮೆ ಅನಂತವು |ಮೋದಮಯ ದಶಶತಸಹಸ್ರಾನಂತರೂಪನೇ ||2ಹೀನಮಂದನು ನಾನೆಂದು | ದೂರನೀ ||ಎನ್ನ ಮಾಡದೇ ಸಲಹೋ |ಎನ್ನ ಹಿರಿಯರು ನಿನ್ನಚ್ಛನ್ನ ಭಕ್ತರೋಘನದಯಾಂಬುಧೇ ಗಂಗಾಜನಕ ಪಾವನ ನಾಮಾ |ಮನೋವಾಕ್ಕಾಯದಿ ನಿಂತು ಎನ್ನೊಳುನೀನೆ ಮಾಡಿ ಮಾಡಿಸುವುದೆಲ್ಲನಿನಗೆ ಸುಪ್ರೀತಿಯಾಗಲೋ ಮುಕ್ -ಕಣ್ಣ ವಿಧಿಪ ಶ್ರೀ ಪ್ರಸನ್ನ ಶ್ರೀನಿವಾಸ ಶ್ರೀಶ || 3
--------------
ಪ್ರಸನ್ನ ಶ್ರೀನಿವಾಸದಾಸರು
ದೇವಿಯನೆತ್ತಿದನಾರೆಲಮ್ಮಾ ನಮ್ಮದೇವ ಸಿರಿಪತಿ ಕಾಣೆಲಮ್ಮಾದೇವಿ ನಮ್ಮ ದೇವರು ಬಂದರು ಕಾಣಮ್ಮ ಪ.ಕಣ್ಣೆವೆ ಇಕ್ಕದೆ ಮಾತಿಗೆ ಮನವಿಟ್ಟಸಣ್ಣದೊಡ್ಡನಾಹನಾರೆಲಮ್ಮಉನ್ಮತ್ತಖಳಸೋಮಕನವೈರಿಹೊಸ ಹೊನ್ನಬಣ್ಣದ ಮಚ್ಛವತಾರಿ ಅಲ್ಲೇನಮ್ಮ 1ಸಾರಿಸಾರಿಗೆ ಉಯ್ಯಾಲಿಡುತಲಿ ಮುಸುಡನುತೋರಿ ಜಾರಿದವನಾರೆಲಮ್ಮಆರಿಗು ಮೀರಿದಮಂದರಬೆನ್ನಲಿಭಾರಾಂತ ಶ್ರೀಕೂರ್ಮನಲ್ಲೇನಮ್ಮ 2ಘರ್ಘರಿಸುತ ಕಾಲಕೆದರಿ ಜಗದಗಲಭೋರ್ಗರೆವುತಲಿಹನಾರೆಲಮ್ಮದುರ್ಘಟ ದೈತ್ಯನ್ನ ದಂಷ್ಟ್ರದಿ ಚುಚ್ಚಿದನಘ್ರ್ಯವರಾಹದೇವನಲ್ಲೇನಮ್ಮ3ಕೂಗುತÀ ಕೊಲ್ಲುತ ಕಿಡಿಯನುಗುಳುತಲಗುಬಗೆದವನಾರೆಲಮ್ಮನೀಗಿದುಷ್ಟನ ಶರಣಾಗತ ಶಿಶುರಕ್ಷಯೋಗಿನರಹರಿ ಅಲ್ಲೇನಮ್ಮ4ಭೂಮಿ ಆಕಾಶಕೆ ಒಬ್ಬನೆ ಹಬ್ಬುತಸೀಮೆಯ ಮುಚ್ಚುವನಾರೆಲಮ್ಮಹೇಮಹೋಮದಿಮತ್ತಬಲಿಯನೊತ್ತ್ಯಾಳಿದಸಾಮದ ವಾಮನನಲ್ಲೇನಮ್ಮ 5ಸಾವಿರ ಕೈಯ್ಯವನಳಿದು ಕಡಿದು ತಾನೆಹೇವದಟ್ಟಿವನಾರೆಲಮ್ಮಈ ವಸುಧೆಯ ಭಾರವಿಳುಹಿದ ವೀರ ಭೂದೇವಕುಲದ ರಾಮನಲ್ಲೇನಮ್ಮ 6ಕರಡಿಕೋಡಗಕೊಂಡು ಕಡಲೊಳಗಾಡಿದಹುರುಡಿಲ್ಲದ ಬಿಲ್ಲನುಳ್ಳನಾರೆಲಮ್ಮಸರಕುಮಾಡಿ ರಕ್ಕಸರನೊದ್ದಸಮೀರಜವರದ ಸೀತಾರಾಮ ಅಲ್ಲೇನಮ್ಮ 7ಬಂಡಿ ಕುದುರಿ ಗೂಳಿ ಹಕ್ಕಿ ಸೀಳಿ ಗೊಲ್ಲಹೆಂಡಿರೊಳಾಡುವನಾರೆಲಮ್ಮಪಾಂಡವಪಾಲ ರುಕ್ಮಿಣಿ ವಿಜಯನುಬಂಡಿಕಾರ ಕೃಷ್ಣನಲ್ಲೇನಮ್ಮ 8ಉಡುಗೆಯನುಡದಂತರಾಟದಿ ಕದ ತಪ? ವಿದ್ದಮಡದೇರ ಕೆಡಿಸಿದನಾರೆಲಮ್ಮಮೃಡಸುರರುಬ್ಬಸಬಡಿಸುವ ಬೌದ್ಧರಕೆಡಿಪ ಮೋಹನ ಬುದ್ಧನಲ್ಲೇನಮ್ಮ 9ವಾಜಿಯನೇರಿ ಠೇವಿಡಿದು ಗಡಬಡಿಸಿಮೂಜಗ ಸುತ್ತುವನಾರೆಲಮ್ಮಮಾಜಿದ ಪುಣ್ಯವನೆತ್ತಿ ಕಲಿಯ ಕೊಂದಸೋಜಿಗದ ಕಲ್ಕಿ ಅಲ್ಲೇನಮ್ಮ 10ಮುಗ್ಧರಾಗಲಿ ಪ್ರೌಢ ಬಂಟರಾಗಲಿ ಕರೆದರೆದ್ದೋಡಿ ಬಂದವನಾರೆಲಮ್ಮಸಿದ್ಧಪುರುಷ ಪ್ರಸನ್ವೆಂಕಟಪತಿಸಾಧಿಸಿ ಪಾಡಿದಲ್ಲಿದ್ದನಮ್ಮ 11
--------------
ಪ್ರಸನ್ನವೆಂಕಟದಾಸರು
ಧನವಗಳಿಸಬೇಕಿಂತಹದು - ಈಜನರಿಗೆ ಕಾಣಿಸದಂತಹದು ಪ.ಕೊಟ್ಟರೆ ತೀರದಂತಹದು - ತನ್ನಬಿಟ್ಟು ಅಗಲಿ ಇರದಂತಹದುಕಟ್ಟಿದ ಗಂಟನು ಬಯಲೊಳಗಿಟ್ಟರೆಮುಟ್ಟರು ಆರು ಅಂತಹದು 1ಕರ್ಮವ ನೋಡಿಸುವಂತಹದುಧರ್ಮವ ಮಾಡಿಸುವಂತಹದುನಿರ್ಮಲವಾಗಿದೆ ಮನಸಿನೊಳಗೆ ನಿಜಧರ್ಮವ ತೋರಿಸುವಂತಹದು 2ಅಜ್ಞಾನವು ಬಾರದಂತಹದು - ನಿಜಸುಜ್ಞಾನವ ತೋರುವಂತಹದುವಿಜಾÕನಮೂರ್ತಿ ಪುರಂದರವಿಠಲನಪ್ರಜೆÕಯನ್ನು ಕೊಡುವಂತಹದು 3
--------------
ಪುರಂದರದಾಸರು
ಧನ್ಯ ಧನ್ಯ ನಂದಗೋಕುಲ ಪ.ಆ ನಂದವ್ರಜದ ಪೂರ್ವಪುಣ್ಯವೇನೊಆ ನಂದನಾ ಗೋಪಿಕಂದನಾ ಕಿಶೋರಾನಂದವೇನೊಆನಂದಮುನಿವರದನಾನಂದವೇನೊ ಅ.ಪ.ಗೋವರೆಳೆಯಮ್ರ್ಯಾಳ ನಿವಹದಲ್ಲಿನಿಂತು ರಂಗ ಕೋಹುಕ್ಕಕೋಹೊಹವಳಿ ಹಂಡಿ ಕಾಳಿ ಬಾ ಕೋಹುಕ್ಕ ಕೋಹೊಧವಳಿ ಚಿಂಚಿ ಕಪಿಲೆ ಬಾ ಕೋಹುಕ್ಕ ಕೋಹೊಗೌರಿ ಮೈಲಿ ನೀಲಿ ಬಾಯೆಂದುವಿವರಿಸಿ ಕರೆದು ತೃಣದ ಕವಳವನ್ನೀಡುವಾಆವಿನ್ನಾವ ಸಂಚಿತೊ ಪಾವÀನೆಂತೊ ಪುಲ್ಲಿನಾ 1ಅಮ್ಮೆಶೋದೆ ಕಟ್ಟಿದ ನಿರ್ಮಲ ಕಲ್ಲಿಯ ಬುತ್ತಿಡೋಹಕ್ಕಡೋಹೋತÀಮ್ಮ ಬನ್ನಿರುಣ್ಣ ಬನ್ನಿ ಡೋಹಕ್ಕಡೋಹೊನಮ್ಮ ಬುತ್ತಿ ನಿಮ್ಮ ಬುತ್ತಿ ಡೋಹಕ್ಕಡೋಹೊನಮ್ಮ ನಿಮ್ಮುಪ್ಪಿನಕಾಯಿ ಡೋಹಕ್ಕಡೋಹೊಕಮ್ಮಗಿಹುದೆಂದು ಕೊಡುವ ಒಮ್ಮೆ ಸೆಳೆದು ಮೆಲ್ಲುವಾ ಉತ್ತಮ್ಮರಾವ ಜೀವರೊ ಧರ್ಮದೊದಗೆಂತುಟೊ 2ಮಾಧವಮಂಜುಳ ಶಬ್ದದೂದುವ ಸುವರ್ಣವೇಣುನಾದಸ್ವಾದ ಲುಬ್ಧರಾದರಾ ಗೋಪಕನ್ಯೇರುನಾದಸ್ವಾದ ಲುಬ್ಧವಾದವಾ ಗೋವತ್ಸವುನಾದಸ್ವಾದ ಲುಬ್ಧವಾದವಲ್ಲಿ ವೃಕ್ಷವುಆದರಿಪ ನಾರಿಯರಗಾಧ ತಪವಲ್ಲವೆಪಾದಪ ಪಶುಗಳೆಲ್ಲ ಆ ದೇವರ್ಕಳಲ್ಲವೆ 3ತುರುವ ಮೇಯಿಸಿ ವ್ರಜಕೆ ಮರಳಿಸಿಗೋಪಾಲರೇಯ ಹೈಯಿ ಹೈಯೆಂದುತರುಬಿ ತಡೆಯಿರೆನ್ನುತ ಹೈಯಿ ಹೈಯೆಂಬಸ್ವರದಿ ಕೊಳಲನೂದುತ ಹೈಯಿ ಹೈಯೆಂದುಭರದಿಚೆಂಡು ಚಿಮ್ಮುತ ಹೈಯಿಹೈಯೆಂದುಧರೆಯ ಮೇಲಿಂಬಾಡುವ ಕರದ ದಂಡಿಗೇರುವತರಳರಾವ ಭಾಗ್ಯರೊ ಧರಣಿ ಯಾವ ಮಾನ್ಯಳೊ 4ಒಪ್ಪುವ ಗೋಧೂಳಿ ಮೈಯಲಿಪ್ಪ ಪೊಂದೊಡಿಗೆ ಚೆಲ್ವಶಾಮಲಾಮಲಾಂಗಗುಪ್ಪಾರತ್ಯೆತ್ತಿದರು ಶಾಮಲಾಮಲಾಂಗಗೆಕುಪ್ಪಿರಿವ ಕರುಗಳ ಶಾಮಲಾಮಲಾಂಗದÀರ್ಪಿನಾವ ರಂಬಿಸೆ ಶಾಮಲಾಮಲಾಂಗಕ್ಷಿಪ್ರಪಾಲ್ಗರೆದು ನಂದ ಗೋಪಾಂಗನೆಯರೀವ ನಮ್ಮಪ್ಪ ಪ್ರಸನ್ನವೆಂಕಟಾಧಿಪ್ಪನೆಂದು ಕಾಂಬೆನಾ 5
--------------
ಪ್ರಸನ್ನವೆಂಕಟದಾಸರು
ಧನ್ಯನಾದೆನೀದಿನ ನಿನ್ನ ಕಂಡ ಕಾರಣ ಪ.ಪನ್ನಗಾದ್ರಿವಾಸ ಸುಪ್ರಸನ್ನನಾದ್ದರಿಂದ ನಾ ಅ.ಪ.ವ್ರತನೇಮ ಜಪ ತಪ ಹಿತಮಾದುದೈ ಸುತಪಕೃತಿಪತಿ ತವ ಕೃಪಾಶತಧೃತಿಲೋಲುಪಾ 1ವಿದಿಭವಾದಿಗಳಿಂದ ವಿನಮಿತ ವಿಶ್ವಾನಂದಪದುಮನಾಭ ಗೋವಿಂದ ಪವನನಯ್ಯ ಮುಕುಂದ2ಪ್ರೀಯ ತಪೋವಾಸನನೀಯುವ ದೇವರ ದಾನತೋಯಜಾಕ್ಷಲಕ್ಷ್ಮೀನಾರಾಯಣ ಪರಾಯಣ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಧನ್ಯರಲ್ಲವೆ ಬಹು ಮಾನ್ಯರಲ್ಲವೆ ಪಸನ್ನುತಾಂಗ ಹರಿಯಚರಣಕಣ್ಣಿನೋಳ್ಕಂಡು ಹಿಗ್ಗುವರು ಅ.ಪಭಿನ್ನಭೇದವಳಿದು ಪರರತನ್ನ ಸ್ವರೂಪತಿಳಿದುಪರಮಪನ್ನಂಗಶಾಯಿ ಉನ್ನತಚರಿತವನ್ನು ಬರೆದು ಪಾಡುವವರು 1ವಿಷಮಸಂಸಾರ ಕನಸೆಂದುವಿಷಯಸುಖಕೆ ಮೋಹಿಸದೆಕುಸುಮನಾಭನ ಅಸಮನಾಮರಸನೆಯಿಂದ ಪೊಗಳುವರು 2ಕಡುಬಂಧ ಈ ಜಡಭವದಜಡರನಳಿದು ದೃಢವಹಿಸಿಒಡೆಯ ಶ್ರೀರಾಮನಡಿಯ ಭಕುತಿಪಡೆದು ಆನಂದದಾಡುವವರು 3
--------------
ರಾಮದಾಸರು