ಒಟ್ಟು 17313 ಕಡೆಗಳಲ್ಲಿ , 134 ದಾಸರು , 7747 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೇವನಹುದೊ ದೇವಾಧಿದೇವ ಕಾವಕರುಣ ಶ್ರೀ ವಾಸುದೇವ ಭಾವಿಕರಿಗೆ ಜೀವಕೆ ಜೀವ ಧ್ರುವ ಸಾಮಜಪ್ರಿಯ ಸುರಲೋಕಪಾಲ ಕಾಮಪೂರಿತ ನೀ ಸಿರಿಸಖಲೋಲ ಸಾಮಗಾಯನಪ್ರಿಯ ಸದೋದಿತ ಸ್ವಾಮಿನಹುದೊ ನೀನೆವೆ ಗೋಪಾಲ 1 ಅಕ್ಷಯ ಪದ ಅವಿನಾಶ ಪೂರ್ಣ ಪಕ್ಷಿವಾಹನ ಉರಗಶಯನ ಪಕ್ಷಪಾಂಡವಹುದೊ ಪರಿಪೂರ್ಣ ಲಕ್ಷುಮಿಗೆ ನೀ ಜೀವನಪ್ರಾಣ 2 ದಾತನಹುದೊ ದೀನದಯಾಳ ಶಕ್ತಸಮರ್ಥ ನೀನೆ ಕೃಪಾಲ ಭಕ್ತವತ್ಸಲನಹುದೊ ಮಹಿಪತಿ ಸ್ವಾಮಿ ಪತಿತಪಾವನ ನೀನವೆ ಅಚಲ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೇವನೀತ ಅವಧೂತ ಜೀವ ಜೀವ ಭಾವಭೋಕ್ತ ಕಾವ ದೈವ ಪ್ರಾಣನಾಥ ದೇವಾಧಿದೇವನೆ ಈತ 1 ಶ್ರೀದೇವ ದೇವ ನಿರ್ವಿಕಲ್ಪ ನಿರಾಕಾರ ನಿರ್ವಿಶೇಹ ನಿರಂತರ ಸರ್ವಸಾಕ್ಷಿ ಸರ್ವಾಧಾರ ಸರ್ವಾತೀತ ಸರ್ವೇಶ್ವರ 2 ಸಾಧುಜನರ ಹೃದಯ ಸದೋದಿತಾನಂದೋದಯ ಆದಿ ಅನಾದಿ ನಿಶ್ಚಯ ಇದೆ ಇದೆ ವಸ್ತುಮಯ 3 ಪತಿತಪಾವನ ಪೂರ್ಣ ಅತಿಶಯಾನಂದಗುಣ ಭಕ್ತಜನರುದ್ಧರÀಣ ಸತತ ಸುಖನಿಧಾನ 4 ಙÁ್ಞನಗಮ್ಯ ಗುಣಾತೀತ ಅನಾಥಬಂಧು ಗುರುನಾಥ ದಾತ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೇವರ ದೇವ ದಯಾಳು ಭಕ್ತ ಸಂಜೀವನೆ ಪರಮದಯಾಳು ವಂದಿತ ಇಂದಿರಾರಮಣ ಪ ಸಜಲ ಜಲದ ನಿಭಾಕಾಂತಿಯ ಮಿಗಿಸಿದೆ ನಿನ್ನ ಸರ್ವಾಂಗ ಭಜಿಸುವ ಭಕುತರಹೃದಯನಿವಾಸ 1 ಆಲಿಯೊಳಗೆ ನೋಡಿ ಭಕ್ತರ ಮೇಲೆ ಕೃಪೆಯಮಾಡಿ ತುಳಸಿವನಮಾಲ ಶ್ರೀ ಲೋಲ 2 ಸರಸಿಜಗದೆ ಶಂಖಾರಿ ಕರದೊಳು ಮೆರೆವ ಪೀತಾಂಬರಧಾರಿ ಮಣಿಮುಕುಟ ಕುಂಡಲನೆ 3 ಗೋಕುಲದೊಳಾಡುವನೇ 4 ತುರು ಬಲಿರುಗು ಕಹಳೆಕೊಂಬುಗಳ ಹೊನ್ನೇ ಸರಹಿನೊಳಗೆ ನಿಂದ ವೇಣುಗೋಪಾಲ ಕೃಷ್ಣ 5
--------------
ಕವಿ ಪರಮದೇವದಾಸರು
ದೇವರ ದೇವ ನಿನ್ನ ಬಲವಲ್ಲದೆ ಮತ್ತೆ ಆವ ಗ್ರಹಗಳಿಂದಲಿ ಉಂಟು ಎನಗೆ ಪ ಇಂದು ಬಲವೊ ಅರ ಅರ್ಕ ಬಲವು ವಂದನ ಗೈದು ಮಂತ್ರಿ ಬಲವೋ ಎನಗೆ ನಿಂದು ಕೊಂಡಾಡುವದು ಕಾವ್ಯ ಬಲವೊ 1 ಆರಾಧನೆ ಮಾಡುವುದು ಅಂಗಾರಕನ ಬಲವೊ ಸಾರಿ ಪೇಳುವದೆನಗೆ ಸೌಮ್ಯ ಬಲವೊ ಕಾರುಣ್ಯ ಕಡುಸೋನೆ ಎನಗೆ ಶೌರಿಬಲವೊ ಹಾರೈಸಿ ಹಿಗ್ಗುವದು ರಾಹು ಬಲವೊ 2 ಕೇಳುವ ಕಥಾಶ್ರವಣ ಕೇತು ಬಲವೊ ಎನಗೆ ವಾಲಗ ಮಾಡುವದು ತಾರಾಬಲವೊ ಸಿರಿ ವಿಜಯವಿಠ್ಠಲ ನಿನ್ನ ಆಳಾಗಿ ಬಾಳುವದು ಸರ್ವಬಲವು 3
--------------
ವಿಜಯದಾಸ
ದೇವರ ದೇವನೆ ಕಾಯೊ ದೇವಕಿನಂದನೆ ಕಾಯೊಜೀವರಾಸಿಗಳಿಗೆ ಸಂಜೀವನ ದೇವನೆ ಕಾಯೊ ಪ . ಮಕರಿ ಕೈಗೆಸಿಕ್ಕಿ ಮಾನಭಂಗಗೊಂಡ ದೀನಪ್ರಕೃತಿ ಬಂಧನದಿಂದ ಪಾಡು ಬಡುತ್ತಿದ್ದೆನಯ್ಯ 1 ಕಾಮವೆಂಬ ಕಡುವೈರಿ ಕಂಡಕಂಡಕಡೆಗೆನ್ನಸೀಮೆಯೊಳು ಸುಳಿವಂತೆ ಶ್ರೀಧರ ಮಾಡಿದ ನೋಡು 2 ಶ್ರೀ ಹಯವದನ ನೀನು ಶ್ರಿತಜನ ಕಾಮಧೇನುಮಹಂತನೆಂಬುದ ಕೇಳಿ ಮೆಚ್ಚಿಬಂದೆನಯ್ಯ ನಿನ್ನ 3
--------------
ವಾದಿರಾಜ
ದೇವರ ಪೂಜೆಯ ಮಾಡಿರೋ ಮಾಡಿ ಬಿಟ್ಟರು ಬಿಡಿ ಭೂದೇವರ ಪೂಜೆ ಮಿಗಿಲು ಬಿಡಬೇಡ ಪ ಉಂಬೋ ದೇವರ ನೋಡಿ ಕರೆತಂದೊಯ್ಯನೆ ಶಂಭು ಶ್ರೀಹರಿ ಎಂದು ಮನತಂದು ಕರು ಪಾದ ತೊಳೆದು1 ಮಾತನಾಡುವ ದೇವನಿವನೆಂದು ಸಂಪ್ರೀತಿಯಿಂದಲೆ ಈತ ಶಿವನೆಂದು ಜಾತಿ ಶ್ರೀ ಗಂಧ ಪುಷ್ಪವ ತಂದುಮನ ವೊತು ಪೂಜೆಯನು ಮಾಡಿರೋ ಎಂದು 2 ಎಡೆಮಾಡಿ ಷಡುರಸಾನ್ನವ ನಂದು ಉಣ ಬಡಿಸೆ ನಾರಿಯರಟ್ಟುದನುತಂದು ಕಡುಬು ಕಜ್ಜಾಯ ಘೃತವನಂದು ಜಗ ದೊಡೆಯ ನುಂಡನು ಸಾಕು ಬೇಕೆಂದು 3 ಹಸ್ತವ ತೊಳೆದ ಮೇಲ್ವೀಳ್ಯವ ಕೊಟ್ಟು ಮತ್ತೇನಾ ಪೋಪೆನೆಂದರೆ ಪೊಡಮಟ್ಟು ಚಿತ್ತೈಸಿ ಮರಳಿಬರಬೇಕು ದಯವಿಟ್ಟು ಎಂದು 4 ಪ್ರತಿಮೆಗಿಕ್ಕಿದರಲ್ಲೆ ಇಹುದು ಮತ್ತೆ ಕ್ಷತಿಗೆ ಹಾಕಲುಬೇಕು ಬೇಡೆನ್ನಾದಿಹುದು ಅತಿಥಿಗಿಕ್ಕಲು ಸಾಕು ಬೇಕೆನ್ನುತಿಹನು ಲಕ್ಷ್ಮೀ ಪತಿಗಿದು ಪೂಜೆ ಸಂಪೂರ್ಣವಾಗಿ 5
--------------
ಕವಿ ಪರಮದೇವದಾಸರು
ದೇವರಲ್ಲೇ ಸಜ್ಜನವರವನಿ | ಪ ಅಕುಲ ತನ್ನಂತಖಿಳದಿ ನೋಡುತಾ | ಸಕಲರ ಹಿತದಲಿ ಪ್ರಕಟದಿ ಬಾಳುತಾ | ಮಕ ಮಾವುಗಳ ವಿಕಳರಿಯರು 1 ಶಾಂತಿ ಶಮೆದಮೆದಾಂತಿ ತಿತಕ್ಷಾ | ಅಂತರ್ಬಹಿಯವಂತರು ಭಕ್ತಿಯ | ಪಂಥದಿ ನಡೆಯುತ ನಂತನ ಮೂರುತಿ | ಚಿಂತಿಸಿ ಮನ ವಿಶ್ರಾಂತಿಯಲಿಹರು 2 ಅಣುಪರಿ ಸದ್ಗುಣ ಮನುಜನ ಕಂಡರ | ವನಪರ್ವತ ಸಮವೆನೆ ಕೊಂಡಾಡುವ | ತನುಮನ ವಚನದಿ ಘನ ಪುಣ್ಯಾಮೃತ | ಮನಿಗುರು ಮಹಿಪತಿ ತನು ಭವಗಂದಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದೇವರಾಗಬಾರದೇನೆಲೇ ದೆವ್ವಿನಂಥ....... ದೇವರಾಗಬಾರದೇನೆಲೇ ಪ ದೇವರಾಗಬಾರದೇಕೋದೇವನ ಪಾದವನಂಬಿ ಕಾವುಮೀರಿ ಹೋದಮೇಲೆ ಬಾಯಬಿಟ್ಟರೆ ಬರುವುದೇನೆಲೆ ಅ.ಪ ತಂದ ಬುತ್ತಿ ಚೆನ್ನಾಗುಣ್ಣೆಲೆ ನೀನದನು ಒಲ್ಲೆ ನೆಂದರೆ ಬಿಟ್ಟ್ಹೋಗ್ವುದೇನೆಲೆ ಹೇ ಪಾಪಿ ನೀನು ಬಂದಹಾದಿ ನೋಡಿಕೊಳ್ಳೆಲೆ ಮುಂದಿದರಿಯೆಲೆ ಬಿಂದುಮಾತ್ರಸುಖಕೆ ಮೋಹಿಸಿ ಪರ್ವತಾಕಾರ ಪಾಪಹೊತ್ತು ಬಂಧಕ್ಕೀಡಾಗುವುದಿದೇನೆಲೆ 1 ನಾಶನಾಗಿ ಹೋಗುತಾದೆಲೇ ಈ ಜಗವು ಒಂದಿನ ಆಸೆಯೆಂಬ ಕುಳಿ ಧುಮುಕ ಬೇಡೆಲೆ ಮಹನೀತಿವಿಡಿದು ನಾಶವಾಗದಪದವಿ ಗಳಿಸೆಲೇ ಸೋಸಿನೋಡೆಲೆ ಮೋಸಮರವೆಯಿಂ ನಾಶವಾಗದೆ ಹೇಸಿಸಂಸಾರ ನಾಮ ಭಜಿಸಿ 2 ಉಟ್ಟ ಸೀರೆಬಿಟ್ಟು ಹೋಗಿದ್ದ್ಯಂತೆ ಹೇ ಹುಚ್ಚು....... ಎಷ್ಟೋಸಾರಿ ಹುಟ್ಟ್ಹುಟ್ಟಿದರಂತೆ ಈ ಕಾಯಧರಿಸಿ ಬಿಟ್ಟುಹೋಗೇದಸ್ತಿ ಪರ್ವತ್ಹೋಲ್ವಂತೆ ಕೆಟ್ಟು ಬಿದ್ದೈತೆ ದುಷ್ಟಭ್ರಷ್ಟತೆಗಳನ್ನು ಬಿಟ್ಟು ಶಿಷ್ಟಸಂಗಕೆ ಮನವಗೊಟ್ಟು ಸೃಷ್ಟಿ ಗೀರೇಳು ಸೂತ್ರನಾದ ದಿಟ್ಟ ಶ್ರೀರಾಮನಡಿಗೆ ಪೊಂದಿ 3
--------------
ರಾಮದಾಸರು
ದೇವರಾಜ ನುತನೆ ಖಗಪಾ | ಬಲ | ದೇವ ಚರಣ ಮಧುಪ ಪ ಭಾವಜಾರಿ ಸಮನು ಎನಿಪ | ತಾವಕನ್ನ ಸಲಹೊ ಕಾಶ್ಯಪ ಅ.ಪ. ಜಲಧಿ ಗಾರುಡ ಮುಖ ಕಾರುಣ್ಯದಿ | ಹೊರಡೂಡುತ | ಹಾರಿದೆ ವಿ | ಸ್ತಾರಾಮೆಗೆ 1 ಕೂರ್ಮ ದ್ವೇಷದಿಂದಾ | ನೆರೆಹೊರೇಯ ದುಃಖದಿಂದಾ |ಇರಲು ಕಳೆಯೆ ಗರುಡನಿಂದಾ | ವರಮುನಿ ಪೇಳ್ದ ಮುದದಲಿಂದಾ ||ಭಾರಿಲಿ ಇಹ | ಕೂರಮ ಕರ್ಯ | ಹರವ ಮೇಲೆ | ಢೋರದ ತರುಕ್ಹಾರಲದೂ | ದಾರಿತ ವಿ | ಸ್ತಾರದ ಮಹಿ | ಮೋರುಗುಣಿ2 ಅಮೃತ ಕಲಶ ತಂದಾ ||ಕಾರುಣಿ ದಿತಿ | ಜಾರಿಗೆ ಮಾತೆ | ಕಾರಾಗೃಹ | ತಾರಣ ಮುರವೈರಿಯ ವಹ | ತೋರೈ ಹೃ | ದ್ವಾರಿಜದಿ | ಶ್ರೀಹರಿಪದ 3
--------------
ಗುರುಗೋವಿಂದವಿಠಲರು
ದೇವಾ ದೇವಾ ಸಾರಂಗ ಪಾಣಿ ದೇವಾ ದೇವಾ ಸಾರಂಗ ಪಾಣೀ ಪ ದೇವ ದೇವ ಘನ ಶ್ರೀ ವಧುವಲ್ಲಭ ಸಾವಿರ ನಾಮದ ಪಾವನ ರೂಪಾ 1 ಭುವನವ ಪಿಡಿದೊಯ್ದನುಜನ ಹರಿ ಪವನಜ ಪ್ರೀಯಾ2 ಕುಂಜರ ಧ್ವಜಜನ ರಂಜಿಪ ಕದಲಿಗೆ ಅಂಜಿಕೆ ಹಾರಿಪ ಕುಂಜದ ಕರನೇ 3 ಸುಮನದಿ ಧರೆಯೊಳು ನಮನ ಕೃತಕ ಭಯ ಗಮನ ಸುರೇಶಾ4 ವಿಧಿ ತ್ರಿಪುರ ವಿನುತ ಪದ ಮಿಥುನದಯಾಳಾ5 ಹರಿಯೆಂದೊದರಲು ಸರಿಯಾದಿಗಳಿಗೆ ಅರಿಯ ದಂದದಿ ಬಂದು ಕರಿಯನು ಕಾಯ್ದೆ6 ನಂದನ ನಂದನ ಮಂದರಗಿರಿಧರಾ ನಂದನೆ ಮಹಿಪತಿ ನಂದನ ಪ್ರೀಯಾ||7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದೇವಾ ಬಾರಯ್ಯಾ ವೈಭವದಿ ರಥವನೇರಿ ಸೇವಿಸುವೆನು ಮಧ್ಭಾವದಿ ನೆಲಸೆಂದು ಪಾವನ ಮಣಿಪುರ ಠಾವಿನೊಳಿಹ ಭೂದೇವ ವರ್ಯ ಸಂಶೇವಿತ ಕೇಶವ ಪ ದೇವಗಂಗೆಯಪೆತ್ತ ಪಾವನಗಾತ್ರಧ್ರುವ ಭೂವರೋÀಪಾಸಿತನಾಗಿ ಈ ವಸುಧಿಗೆ ಬಂದು ಪಾವಮಾನ ಶಾಸ್ತ್ರದಿ ಕೋವಿದಯತಿ ವರ ಶ್ರೀ ವಿದ್ಯಾನಿಧಿ ತೀರ್ಥ ಸೇವಿತ ಸಂಸ್ಥಾಪಿತ ಸೇವಕ ಜನ ಸಂಭಾವಿತ ಕಾಮಿತ ವೀವ ಕಾವ ಸದಶಾವತಾರ ನಮೋ ಶ್ರಿವಿರಂಚಿಮುಖ ದೇವನ ಮಿತ ಕಂಚೀವರದನೆ ಪೊರೆ ಶ್ರೀ ವರಕೇಶವ 1 ಕಡು ಶೋಭಿಸುವ ಬಿಳಿಗೊಡೆ ಚಾಮರಾದಿಗಳ ಪಿಡಿದು ಶೇವಿಪ ಜನರೆಡಬಲದಿ ಬರೆ ಸುರರು ಪಂಥsÀವಿಡಿದು ವೇದಪಠಣ ಬಿಡದೆ ಮಾಡುತ ಬರೆ ನುಡಿವ ವಾದ್ಯಗಳಿಂದ ಸಡಗರದಲಿ ದ್ವಿಜಮಡದಿಯರಾರುತಿ ಪಿಡಿದು ಬೆಳಗುತಿರೆ ಕಡು ವೈಭವದಲಿ ಅಡಿಗೆರಗುವೆ ಪಾಲ್ಗಡಲ ಶಯನ ಮೂ- ರಡಿ ರೂಪನೆ ಜಗದೊಡೆಯ ಕೇಶವ 2 ನಂದ ತೀರ್ಥರ ಮತ ಸಿಂಧುವಿಗೆ ಪೂರ್ಣ ಚಂದ್ರರೆನಿಪಯತೀಂದ್ರ ಸತ್ಯ ಪ್ರಮೋದ ರಿಂದ ಪೂಜಿತ ಪದ ದ್ವಂದ್ವ ಮಧ್ಯದೊಳಿಹ ಮಂದಾಕಿನಿಗೆ ಪಿತನೆಂದು ತೋರಿಸಿದಂಥ ಇಂದಿರೆಯರಸನೆ ಮಂದರಧರ ಗೋ ವಿಂದ ಪಾಹಿ ಮುಕುಂದನೆ ಬಾಬಾ- ರೆಂದು ಕರೆವ ದ್ವಿಜ ವೃಂದಮಧ್ಯದಲಿ ಶ್ಯಂದನ ವೇರಿದ ಸುಂದರ ಕೇಶವ 3 ಅಂಬುಜನಾಭನೆ ನಿತಂಬದಿ ಪೊಳೆವ ಪೀ- ತಾಂಬರ ಧೃತ ಶಾತಕುಂಭ ಮಕುಟವದ- ನಾಂಬೋಜವನು ತೋರೋಕುಂಭೀನಸ ಪರಿಯಂಕ ಶಂಭ್ವಾದಿನಮಿತ ನೀಲಾಂಬುಧ ನಿಭಗಾತ್ರ ಕಂಬುಚಕ್ರಸುತ- ದಾಂಬುಜಧರ ಬಲು ಸಂಭ್ರಮದಲಿ ಮುನಿಕುಂಭಜ ಪೂಜಿತ ಕದಂಬ ದುರಿತ ಕಾದಂಬನಿ ಪವನ ಕೃ ಪಾಂಬುಧೆ ಕೇಶವ 4 ಗರುಡ ಮಾರುತರಿಂದ ಪರಶೇವಿತನೆ ಬಾರೊ ಶರಣು ಜನರ ಸುರತರುವೆ ಚನ್ನಕೇಶವ ಧರೆಯೊಳಧಿಕ ಮಣಿಪುರ ಪಂಡಿತಾಗ್ರಣಿ ಸನ್ನುತ ಸರಸಿಜಾಸನ ಪಿತ ಸಿರಿದೇವಿಯು ಈರೆರಡು ರೂಪದಲಿ ಕರದೊಳಗಾರುತಿ ವರಚಾಮರಗಳ ಧರಿಸಿ ಸಿರಿ ' ಕಾರ್ಪರ ನರಹರಿ ' ರೂಪನೆ ಮಾಂ ಪೊರೆವುದು ಕೇಶವ 5
--------------
ಕಾರ್ಪರ ನರಹರಿದಾಸರು
ದೇವಾದಿ ದೇವ ನಮೋ ಶ್ರೀ ಸತ್ಯದೇವ ಪ ದೇವಾದಿ ದೇವ ಹರಿ ಗೋವಿಂದ ಮುಕುಂದ ಭಾವಜನಕ ಸದ್ಭಾವುಕ ಜನಪ್ರಿಯ ಅ.ಪ. ಶ್ರೀಶಾ ಶಶಿಕೋಟಿ ಸಂಕಾಶ ಸುಶೋಭಿತ ದರಹಾಸ ಸುಜನ ಪರಿಪೋಷ ಸನ್ನುತ ಸರ್ವೇಶ ಈಶಾ ಈ ಸಮಸ್ತ ಜಗದೀಶನೆಂದು ನಿನ್ನ ನಾ ಸ್ತುತಿಸುವೆ ಮನದಾಸೆಯ ಸಲ್ಲಿಸೊ ವಾಸವಾದಿ ಸುರಮಹಿಮ ಪ ರೇಶ ಪೂರ್ಣಗುಣ ದಾಸಜನಾವನ ಕ್ಲೇಶವ ಕಳೆದಿನ್ನು ನೀ ಸರ್ವದ ಎನ್ನ ಪೋಷಿಸು ಕರಿಗಿರಿ ವಾಸ ಶ್ರೀ ನರಹರಿ 1
--------------
ವರಾವಾಣಿರಾಮರಾಯದಾಸರು
ದೇವಾದಿ ದೇವಗೆಭಕ್ತ ಸಂಜೀವಗೆಶ್ರೀ ವಿಘ್ನೇಶ್ವರಗೆ ಜಯವೆಂದುಜಯವೆಂದು ಪಾರ್ವತೀಪುತ್ರಗೆಪಾವನಗಾತ್ರಗೆಫಣಿಯಜ್ಞ ಸೂತ್ರಗೆಹೂವಿನಾರತಿಯ ಬೆಳಗಿರೆ 1 ಸಿಂಧುರಗಮನೆಯರುಕುಂದಾಭರದನೆಯರುಇಂದುಶೇಖರಗೆ ಜಯವೆಂದುಜಯವೆಂದು ಇಂದ್ರಾದಿವಂದ್ಯಗೆನಿರ್ಜಿತಚಂದ್ರಗೆ ಸದ್ಗುಣಸಾಂದ್ರಗೆಕುಂದಣದಾರತಿಯ ಬೆಳಗಿರೆ 2 ವಾರಣದವನೆಗೆಧೀರಹೇರಂಬಗೆರಾವಣಾಸುರನ ಜಯಿಸಿದಜಯಿಸಿದಶರಣ ಮಂದಾರಗೆಶರಧಿ ಗಂಭೀರಗೆಕೌಸ್ತುಭಹಾರಗೆಮೇರುವೆಯಾರತಿಯ ಬೆಳಗಿರೆ 3 ಸುರರು ಹೂಮಳೆಗರೆಯೆತರುಣಿಯರ್ಪಾಡಲುಸುರದುಂದುಭಿ ಮೊಳಗೆ ಜಯವೆಂದುಜಯವೆಂದುಸಿಂಧುರವರ್ನಗೆಶೂರ್ಪಸುಕರ್ನಗೆಸರ್ವತ್ರಪೂರ್ಣಗೆಕುರುಜಿನಾರತಿಯ ಬೆಳಗಿರೆ 4 ಪಂಕಜಾಂಬಿಕೆಯರುಭೋಂಕನೆ ಪಾಡಲುಶಂಕರನ ಪುತ್ರ ಜಯವೆಂದುಪಾವನವೇಷಗೆವರದ ಗಣೇಶಗೆಕುಂಕುಮದಾರತಿಯ ಬೆಳಗಿರೆ 5 ರಮ್ಯವಾದಲತಿಗೆಯರಸವ ಪಾದಕೆ ತೊಡೆದುಕಮ್ಮೆಣ್ಣೆಯನು ಕಂಠಕನುಲೇಪಿಸಿಸುಮ್ಮಾನದಿಂದ ಪಟವಾಸ ಚೂರ್ಣವತಳಿದುನಿಮ್ಮ ಪೂಜಿಸುವೆನು ಗೌರಿದೇವಿ 6 ವರಧೂಪದೀಪ ಪರಿಪರಿಯ ನೈವೇದ್ಯ ಭಾ-ಸುರ ಸುತಾಂಬೂಲ ಸೀಗುರಿದರ್ಪಣನಿರುಪಮ ಛತ್ರ ಚಮರಾದಿ ಸೇವೆಯನು ಸ್ವೀ-ಕರಿಸಿ ಪಾಲಿಸೆ ಎನ್ನ ಗೌರಿ ದೇವಿ ಜಯ 7 ಇಂತು ಪರಿಪರಿಯ ರಾಜೋಪಚಾರಗಳಿಂದಸಂತತವು ನಿಮ್ಮ ಪಾದವ ಪೂಜಿಸಿನಿಂತು ಕರವನೆ ಮುಗಿದು ಧ್ಯಾನಿಸುತ ನಲಿನಲಿದುಸಂತಸದಿ ನಿಮ್ಮ ಸ್ತುತಿಸುವೆನು ಗೌರಿ ಜಯ 8 ಮತ್ತೇಭಗಮನೆಗೆ ಮಾಹೇಂದ್ರಸನ್ನುತೆಗೆಅತ್ಯಂತ ಪರಮ ಪಾವನ ಚರಿತೆಗೆನಿತ್ಯ ಸೇವೆಯನು ಮಾಡುವರ ರಕ್ಷಿಸುವಂಥಪ್ರತ್ಯಕ್ಷಮೂರ್ತಿ ಶ್ರೀಗೌರಿ ನಿಮಗೆ ಜಯ9 ಕಲಕೀರವಾಣಿಗೆ ಕಾಳಾಹಿವೇಣಿಗೆಕಲಧೌತಕಮಲ ಶೋಭಿತಪಾಣಿಗೆನಳಿನದಳನೇತ್ರೆಗೆ ನಾರಾಯಣೆಗೆ ನಮ್ಮ-ನೊಲಿದು ರಕ್ಷಿಸುವಂಥಾ ಶ್ರೀಗೌರಿಗೆ ಜಯ 10 ಕುಂಭಸಂಭವನುತೆಗೆ ಜಂಭಾರಿಪೂಜಿತೆಗೆರಂಭಾಸುನರ್ತನಪ್ರಿಯೆಗೆ ಶಿವೆಗೆರಂಭೋರುಯುಗಳೆಗೆ ಬಿಂಬಾಧರೆಗೆ ನಮ್ಮಬೆಂಬಿಡದೆ ರಕ್ಷಿಸುವ ಗಿರಿಜಾತೆಗೆ ಜಯ 11 ಮುತ್ತೈದೆತನಗಳನು ನಿತ್ಯಸಂಪದಗಳನುಉತ್ತಮಾಂಬರ ಛತ್ರಚಾರಮವನುಅತ್ಯಂತ ಪ್ರೀತಿಯಿಂದಿತ್ತು ರಕ್ಷಿಸಿ ಭಕ್ತವತ್ಸಲೆ ಶ್ರೀ ಗೌರಿದೇವಿ ತಾಯೆ12 ಎಂದೆಂದು ಈ ಮನೆಗೆ ಕುಂದದೈಶ್ವರ್ಯವನುಚಂದವಾಗಿಹ ಪುತ್ರ ಪೌತ್ರರನ್ನುಸಾಂದ್ರಕೃಪೆಯಿಂದಿತ್ತು ಸಲಹೆ ಕೆಳದಿಯ ಪುರದಿನಿಂದ ಶ್ರೀ ಪಾರ್ವತಾದೇವಿ ತಾಯೆ ಜಯ 13
--------------
ಕೆಳದಿ ವೆಂಕಣ್ಣ ಕವಿ
ದೇವಾಧಿದೇವ ನೀನಹುದು ಸಾಕ್ಷಾತ ಭಾವಿಸುವರಾತ್ಮ ಭಜಕರ ಪ್ರಾಣದಾತ ಧ್ರುವ ಸುಜನ ಮನೋಹರ ಮೂಜಗ ಆಧಾರ ಭಜಕ ಭಯಹರ 1 ಕರುಣಸಾಗರ ಪರಮ ಉದಾರ ದುರಿತ ಸಂಹಾರ 2 ಬಾಹ್ಯಂತ್ರಲಿವ್ಹ ಇಹಪರ ಕಾವ ಮಹಿಪತಿಯ ರಕ್ಷಿಸುವ ಶ್ರೀ ದೇವ ದೇವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೇವಾಧಿದೇವ ನೀನಹುದೊ ಶ್ರೀಹರಿ ಕಾವಕರುಣ ನೀನೆ ಮುರಾರಿ ಧ್ರುವ ಕಮಲಭವಾರ್ಜಿತ ಕಾರುಣ್ಯ ಶೀಲ ವಿಮಲ ವಿರಾಜಿತ ಮದನಗೋಪಾಲ 1 ಕನಕಾಂಬರಧರ ಕಸ್ತೂರಿತಿಲಕ ಸನಕಾದಿವಂದ್ಯ ಶರಣ ರಕ್ಷಕ 2 ಅಗಣಿತ ಮಹಿಮ ಅವರುಜ ನೇತ್ರ ನೀನಹುದೊ ನಿಸ್ಸೀಮ 3 ಮುನಿಜನ ಪಾಲಕ ಮಾಮನೋಹರ ಘನಸುಖದಾಯಕ ಸು ಜನ ಸಹಕಾರ 4 ಭಾನುಕೋಟಿತೇಜ ನೀನೆ ಸುಹೃದಯ ದೀನದಯಾಳು ನೀನಹುದೊ ಮಹಿಪತಿಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು