ಒಟ್ಟು 9531 ಕಡೆಗಳಲ್ಲಿ , 132 ದಾಸರು , 5434 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಂಪಾಪುರಾಧಿಪ ಶ್ರೀ ವಿರೂಪಾಕ್ಷ ನೀ ಪಾಲಿಪುದೆಮ್ಮನು ಪ ಶ್ವೇತ ಭಾಪುರೆ ಸುರಕುಲ ದೀಪ ಸದಾಶಿವ ಪಾದ ಸಮೀಪದ ಸೇವಕ ಅ.ಪ. ಹರಿಪಾದೋದಕ ಶಿರದಲಿ ಧರಿಸಿದ ಹರಿಕಥಾಮೃತ ಮಳೆಗರೆವೆ ನೀ ಕರುಣಿ ಸಂಕರುಷಣನ ಚರಣಾಬ್ಜ ಧೂಳಿ ಶ- ರೀರ ಲೇಪನದಿಂದ ವರ ತೇಜಯುತನೆ ಮುರಹರಗೆರಗದ ನರನಿಗೆ ನರಕವು ಸ್ಥಿರವೆಂದು ಸುರವರ ಭೇರಿ ಭೋರಿಡುತಿರೆ ನಿರುತ ಅವನ ಪದ ಮೆರೆಯದೆ ಮನಗೊಂಡೆ ಶರಣು ಅಮರನುತ ಗುರು ಶಿರೋಮಣಿಯೆ1 ದೇಶಕ್ಕೆ ದಕ್ಷಿಣ ಕಾಳಿಯೆನಿಸುವ ವಿ- ಶೇಷ ಸ್ಥಳದೊಳು ವಾಸವಾಗಿ ಅ- ದೋಷನಾಶನ ಸಂತೋಷದಿ ಗಿರಿಜೆಗೆ ಶ್ರೀಶನ ಮಂತ್ರೋಪದೇಶವ ಮಾಡಿದೆ ದಾಶರಥಿಯ ನಿಜದಾಸರೆನಿಸುವರ ಪೋಷಿಪೆ ಶಿವ ಪರಮೇಶ ಕೃಪಾಳೊ 2 ಕಂದುಗೊರಳ ಜೀಯ ಸಿಂಧೂರ ಮೊಗನಯ್ಯ ಕಂದರ್ಪಹರ ಭಕ್ತಬಾಂಧವ ಕಾಯೊ ಇಂದಿರೆರಮಣ ಗೋವಿಂದನ ಪಾದಾರ- ವಿಂದ ಭೃಂಗನೆ ಭವದಿಂದ ಕಡೆಗೆ ಮಾಡೊ ನಂದಿವಾಹನ ಎನ್ನ ಹಿಂದಣ ಕಲುಷಿತ ವೃಂದಗಳೋಡಿಸುವ ಇಂದುಧರ ಅರ- ಸಿರಿ ವಿಜಯವಿಠ್ಠಲನಕುಂದದೆ ಭಜಿಪ ಆನಂದವ ಕರುಣಿಸು 3
--------------
ವಿಜಯದಾಸ
ಪಯಸಾಗರ ಶಯನನೆ ಭಜಿಪೆನು ನಿನ್ನ ಭವಸಾಗರದಾಟಿಸು ಶ್ರೀಹರಿ ಎನ್ನ ಪ. ಹಿಂದೆ ಮುಂದೆ ಗತಿ ನೀನೆಂದು ನಂಬಿರುವೆ ಇಂದಿರೆಯರಸನೆ ಎಂದಿಗಾದರು ಕಾಯೊ ತಂದೆ ಬಂದು ಎನ್ನ ಬಂಧನ ಬಿಡಿಸೊ 1 ಕರುಣಾಸಾಗರ ವರದಮೂರುತಿ ನಿನ್ನ ಸ್ಮರಣೆಯೆನಗೆ ನೀ ನಿರುತದಿ ನುಡಿಸು ಪರಮಪಾಮರನಿಗೆ ನಿನ್ನ ಚರಣವ ತೋರೊ 2 ಪುಟ್ಟಿಸಿದವನೀ ಕಷ್ಟ ಪಡಿಸುವುದು ಇಷ್ಟವೆ ನಿನಗದು ಕೃಷ್ಣಮೂರುತಿ ಸೃಷ್ಟೀಶ ಶ್ರೀ ಶ್ರೀನಿವಾಸ ದೊರೆಯೆ 3
--------------
ಸರಸ್ವತಿ ಬಾಯಿ
ಪರಬೊಮ್ಮನ ಧ್ಯಾನಿಸು ಕಂಡ್ಯಾ ಸೋಹಂ ಎನುತಿರಕಂಡ್ಯಾ ಪ ಒಂದು ನಿಮಿಷ ಸುಖವಿಲ್ಲ ವಿಧಿ ಏಳೇಳೆಂದು ಎಳೆವರಲ್ಲ ಗೋವಿಂದನೆ ತಾ ಬಲ್ಲ 1 ಯೋನಿಯೊಳಗೆ ಜನಿಸಿ ನಾನದನೆಲ್ಲವ ನುಳಿದು ಈಗಳು ನರಮಾನವನೆಂದೆನಿಸಿ ಏನೋ ಪುಣ್ಯದಿ ಪುಟ್ಟಿದೆ ನಿಲ್ಲಿ ನಿಧಾನದಿ ಸಂಚರಿಸಿ ಆನಂದ ಮಯನೆನಿಸಿ 2 ಎಲ್ಲಾ ಜನ್ಮದೊಳ್ಳಿತು ನೀನಿದರಲ್ಲಿ ಸಾಧಿಸುಗತಿಯಾ ಹೊಲ್ಲದ ತನುವಿದ ನಂಬಿ ನೀ ಕೆಡದಿರು ಪೊಳ್ಳೆ ನಿನಗೆ ತಿಳಿಯ ಬಲ್ಲಡೆ ಜಿಹ್ವೆಯೊಳಗೆ ನೀ ನಿರಂತರ ಸೊಲ್ಲಿಸು ಶ್ರೀಹರಿಯ ಲಕ್ಷ್ಮೀನಲ್ಲನ ಪೋಗು ಮರೆಯ 3
--------------
ಕವಿ ಪರಮದೇವದಾಸರು
ಪರಮ ಕರುಣಾಕರನೆ ಕರಪಿಡಿದು ಸಲಹೆನ್ನ ವರ ತಂದೆ ಮುದ್ದುಮೋಹನರೊಡೆಯನೆ ಪ. ಸಿರಿಯರಸ ಶ್ರೀ ಶ್ರೀನಿವಾಸ ಶ್ರೀ ಕೃಷ್ಣಹರೆ ಪರಮದಯಾಳು ದೇವ | ದೇವಅ.ಪ. ನಿರುತ ನೀ ಸ್ವಪ್ನದಲ್ಲಿ ಪರಿಪರಿಯ ರೂಪದಲಿ ತ್ವರಿತದಲಿ ತೋರಿ ಕಾಯ್ದೆ ಪರಮಪಾವನಮೂರ್ತಿ ಗುರು ಅಂತರ್ಯಾಮಿಯೆ ಕರಕರೆಯ ಬಿಡಿಸಿ ಸಲಹೊ | ದೇವ 1 ವಿಶ್ವತೈಜಸ ಪ್ರಾಜ್ಞ ತುರಿಯ ರೂಪಗಳಿಂದ ನೀ ಸ್ವಪ್ನಗಳನೆ ತೋರ್ವೆ ವಿಶ್ವೇಶ ಎನ್ನೊಳಗೆ ಸಾಕ್ಷಿಯಾಗಿರುತ್ತಿರ್ದು ವಿಶ್ವಮಯ ಚೇಷ್ಟೆ ಮಾಳ್ಪೆ | ದೇವ 2 ಈ ಶರೀರದೊಳಗೆ ಶ್ರೀ ತೈಜಸನೆ ನೀನು ವಾಸವಾಗಿರುತಲಿರ್ದು ನಾಶರಹಿತನೆ ಮೋಹಪಾಶದಲಿ ಸಿಲುಕಿಸಿ ಮೋಸಪಡಿಸುವರೆ ಎನ್ನ | ದೇವ 3 ಬಿಡಿಸೊ ದುರ್ವಿಷಯಗಳ ತಡವಾಕೊ ಹರಿ ಇನ್ನು ಒಡಲಿಗೊಡೆಯನೆ ಶ್ರೀಹರಿ ಕೊಡು ನಿನ್ನ ಪದಸೇವೆ ನುಡಿಸು ನಿನ್ನಯ ನಾಮ ಪಡಿಸು ಸುಖ ಅನವರತದಿ | ದೇವ 4 ಸ್ವಪ್ನ ವ್ಯಾಪಾರದಲಿ ಅಪ್ರತಿಮಮಹಿಮೆಗಳ ಕ್ಷಿಪ್ರದಿಂದಲಿ ತೋರಿದೆ ಸಪ್ತಫಣಿಮಂಡಿತನೆ ಒಪ್ಪದಿಂದಲಿ ಎನ್ನ ತಪ್ಪನೆಣಿಸದಲೆ ಕಾಯೋ | ದೇವ 5 ನೀತ ಗುರುಗಳ ದ್ವಾರ ಪ್ರೀತನಾದ ಹರಿಯೆ ಪಾತಕವÀ ಕಳದೆ ಸ್ವಾಮಿ ವಾತಜನಕನೆÀ ನಿನ್ನ ಖ್ಯಾತಿ ಪೊಗಳಲು ಅಳವೆ ಪ್ರೀತನಾಗಿದ್ದು ಸಲಹೊ | ದೇವ 6 ಶ್ರೀಪತಿಯೆ ಪರಮಪಾವನಮೂರ್ತಿ ವಿಖ್ಯಾತ ನೀ ಪ್ರೀತಿಲೀಲೆ ತೋರ್ದೆ ಕಾಪಾಡಿದೆಯೊ ಎನ್ನ ಶ್ರೀ ಗುರುಗಳೊಳಗಿರ್ದು ಗೋಪಾಲಕೃಷ್ಣವಿಠ್ಠಲ ದೇವ 7
--------------
ಅಂಬಾಬಾಯಿ
ಪರಮ ಕಾರುಣ್ಯ ಗುರು ಕರುಣಿಸೆನಗ್ಹರಿ ಪದವ ಶರಣೆಂದು ನಮಿಪೆ ನಿಮಗೆ ಪ. ಹರಿಯ ದಾಸತ್ವದಲಿ ವರದೀಕ್ಷೆಯನೆ ಕೊಟ್ಟು ಕರುಣಿಸಿ ಕೃಪೆಗೈದಿರಿ ಗುರುವೆ ಅ.ಪ. ಅಂಕಿತವ ಮೊದಲಿತ್ತು ಹೃದಯಾಂಕದಲಿ ನಿಲಸಿ ಮಂಕುಬುದ್ಧಿಯ ತೊಲಗಿಸಿ ಶಂಖ ಚಕ್ರಾಂಕಿತನ ಪದಕಮಲವನು ಮನ ಪಂಕಜದೊಳಗೆ ತೋರಿ ಶಂಕರಾರ್ಚಿತನ ಕೃಪೆ ಎನ್ನೊಳಾಗಲಿ ಎಂದು ಶಂಕಿಸದೆ ವರವಿತ್ತಿರಿ ಗುರುವೆ 1 ಶ್ರೀನಿವಾಸನು ನಿಮ್ಮೊಳ್ ಸಾನುರಾಗದಿ ನೆಲಸಿ ತಾನಿತ್ತ ದಾಸತ್ವವ ಏನೆಂಬೆ ಈಗಭಿಮಾನವ ತೊರೆ ಎನುತ ತಾ ನುಡಿಸುತಿಹನು ನಿಮ್ಮೊಳ್ ಮಾನಾಭಿಮಾನ ಹರಿ ಗುರುವಶವಾಗಿರಲು ನಾನಳುಕಲಿದಕೇತಕೆ ಗುರುವೆ 2 ಸ್ವಪ್ನದಲಿ ದಾಸತ್ವ ಸಿದ್ಧಿಸಲಿ ಎಂದೆನುವ ಅಪ್ರತಿಮ ನುಡಿ ಕೇಳಿದೆ ಕ್ಷಿಪ್ರದಿಂದಲಿ ಕರುಣಿಸಿದಿರೆನಗಾಗಿದನಿನ್ನು ತಪ್ತವಾಯಿತು ಭವದ ದುರಿತ ಆಪ್ತಗುರು ನಿಮ್ಮಂಥ ಮಹಿಮರನು ನಾ ಕಾಣೆ ಗುಪ್ತದಲಿ ಜಗದಿ ಮೆರೆವ ಗುರುವೆ 3 ಇತ್ತಿರೆನಗೊಂದೊಂದೆ ದಾಸತ್ವ ಸಾಮಗ್ರಿ ಅತ್ಯಧಿಕ ಕರುಣೆಯಿಂದ ನಿತ್ಯವಾಗಿರಲಿ ಹರಿದಾಸತ್ವ ಇಹ ಪರದಿ ಸತ್ಯವಂತರ ಕೃಪೆಯಲಿ ನಿತ್ಯದಲಿ ನೀತ ಗುರು ನಿಮ್ಮಿಂದ ನಿಜ ರೂಪ ವ್ಯಕ್ತವಾಗಲಿ ಜ್ಞಾನದೀ ಗುರುವೆ 4 ಸಿರಿ ತಂದೆ ಮುದ್ದುಮೋಹನದಾಸರಾಯ ಗುರುವೆ ನಿಮ್ಮ ಕರುಣದಿ ಪರಿ ಪರಿ ಭವಪಾಶ ದುರಿತಗಳು ದೂರಾದವು ಪರಮ ಸಾತ್ವಿಕರೆ ಸಿರಿವರನ ಪದ ಭಜಿಪಂಥ ವರದೇವತಾಂಶರೆನಿಪ ಗುರುವೆ 5 ಮಂದರಿಗೆ ಬಹು ಮಲಿನರಂದದಲಿ ತೋರುತ ಕಂದರ್ಪಪಿತನ ಸ್ಮರಿಪ ಒಂದೊಂದು ವ್ಯಾಪಾರ ಅರಿಯಲಳವಲ್ಲಿನ್ನು ಮಂದಮತಿಯಾದ ಎನಗೆ ಬಂದು ಭೂಲೋಕದಲಿ ಸಜ್ಜನರನುದ್ಧರಿಪ ತಂದೆ ನಿಮ್ಮರಿವರ್ಯಾರೊ ಗುರುವೆ 6 ಅರಿಯೆ ಅನ್ಯರನಿನ್ನು ಶ್ರೀ ಗುರುವೆ ಕರುಣಿಸಿರಿ ವರಜ್ಞಾನ ಸುಧೆಯನಿತ್ತು ವರಶೇಷಶಯನನ ನಿರುತ ಸೇವಿಸುವಂಥ ಪರಮಭಾಗ್ಯವ ಕರುಣಿಸಿ ಸಿರಿವರ ಗೋಪಾಲಕೃಷ್ಣವಿಠ್ಠಲನ ರೂಪ ತ್ವರಿತದಿಂ ತೋರಿ ಪೊರೆಯೊ ಗುರುವೆ 7
--------------
ಅಂಬಾಬಾಯಿ
ಪರಮ ಗುರುವೆ ನಿನ್ನ ಪರಿಪರಿ ಮುನ್ನ ಅರಿತಷ್ಟು ವರ್ಣಿಸುವೆ ಕೊಡು ದೃಢ ಜ್ಞಾನ ಪ. ಪರಮ ವೈರಾಗ್ಯಶಾಲಿ ಪರಿಪರಿ ಲೀಲೆ ತೋರಿದ್ಯೋ ಜಗದಲಿ ಕಾರುಣ್ಯಶಾಲಿ 1 ಗುರುಗಳ ಕರುಣದಿ ಒಲಿದ್ಯೊ ಸ್ವಪ್ನದಿ ಪರಮಾತ್ಮನಾ ಹಾದಿ ತೋರೆನಗೆ ಮೋದಿ 2 ಕರ್ಮಜ ನೀನೆಂದು ನುಡಿವರೊ ಇಂದು ಮರ್ಮ ಮನದಿ ನಿಂದು ತೋರೋ ದಯಾಸಿಂಧು 3 ಅಗ್ರಜ ಬಳ್ಳಾಪುರದಿ ಉಗ್ರತಾಪದಿ ವಿಗ್ರಹ ರಚಿಸಿದೆ ಶ್ರೀಘ್ರದೊಳ್ ದಯದಿ 4 ಪ್ರೀತಿಯಿಂ ಯತಿಶೀಲಾ ನೀತಿಯ ಪಾಲನ ನೀ ತೋರೋ ಗೋಪಾಲಕೃಷ್ಣವಿಠಲನ 5
--------------
ಅಂಬಾಬಾಯಿ
ಪರಮ ಪದವಿಯೆ ಶ್ರೀರಂಗಂಪರವಾಸುದೇವರೆ ಶ್ರೀರಂಗಂ ಪ ವೇದನಾಲ್ಕು ಶೃಂಗಾರವಾದಓಂಕಾರ ವಿಮಾನವೆ ಶ್ರೀರಂಗಂಸಾಧಿಸಿ ಪೂರ್ವಾಚಾರ್ಯರು ನೆಲಸಿಹಆದಿ ವಿಮಾನವೆ ಶ್ರೀರಂಗಂ 1 ಸತ್ಯಲೋಕದಲಿ ಬ್ರಹ್ಮನು ಪೂಜಿಪವಸ್ತು ವಿಮಾನವೆ ಶ್ರೀರಂಗಂಭಕ್ತಿಗೆ ಇಕ್ಷ್ವಾಕುರಾಯಗೊಲಿದು ಬಂದಉತ್ತಮಾಯೋಧ್ಯವೆ ಶ್ರೀರಂಗಂ2 ತ್ರೇತಾಯುಗದಿ ವಿಭೀಷಣನಿಗೆ ರಘುನಾಥನು ಕೃಪೆ ಇತ್ತ ಶ್ರೀರಂಗಂಪ್ರೀತಿಸಿ ದಕ್ಷಿಣಭೂಮಿಯೊಳಗೆ ರಂಗನಾಥ ನೆಲಸಿಹ ಶ್ರೀರಂಗಂ 3 ಮುನ್ನ ಕಾವೇರಿ ಉಭಯ ಮಧ್ಯದೊಳಿನ್ನು ಶೋಭಿಪುದೆ ಶ್ರೀರಂಗಂಸನ್ನುತ ಭಕ್ತರ ಸಲಹುವ ಬಿರುದಿನೊಳಿನ್ನು ತೋರುವುದೆ ಶ್ರೀರಂಗಂ4 ಶೇಷನ ಮೇಲೆ ಪವಳಿಸಿ ಲಂಕಾದೇಶವ ನೋಡುವ ಶ್ರೀರಂಗಂಶ್ರೀಸಿರಿನಾಯಕೀ ರಮಣಕೇಶವರಾಯರ ಮಹಿಮೆಯೆ ಶ್ರೀರಂಗಂ 5
--------------
ಕನಕದಾಸ
ಪರಮ ಪಾಪಿಷ್ಠ ನಾನು ಪ ನರಹರಿಯೆ ನಿಮ್ಮ ನಾಮ ಸ್ಮರಣ ಮಾಡದಲೆ ನರಕಕ್ಕೆ ಗುರಿಯಾದೆನೋ ಹರಿಯೆ ಅ.ಪ. ಹೊಸಮನೆಯ ಕಂಡು ಬಲು ಹಸಿದು ಭೂಸುರರು ಬರೆ ಕೊಸರಿ ಹಾಕುತ ದಬ್ಬುತ ಶಶಿಮುಖಿಯೆ ಬಾರೆಂದು ಅಸಮಸದಿ ಬಣ್ಣಿಸಿ ವಶವಾಗಿ ಅವಳೊಲಿಸುತ ದಶಮಿ ಏಕಾದಶಿ ದ್ವಾದಶೀ ದಿನತ್ರಯದಿ ಅಶನವೆರಡ್ಹೊತ್ತುಣ್ಣುತ ಘಸಘಸನೆ ತಾಂಬೂಲ ಪಶುವಿನಂದದಿ ಮೆದ್ದು ಕುಸುಮ ಗಂಧಿಯ ರಮಿಸುತ ಸತತ 1 ಕೆರೆ ಭಾವಿ ದೇವಾಲಯವ ಕೆಡಿಸಿ ದಿವ್ಯ ಹಿರಿದಾಗಿ ಮನೆ ಕಟ್ಟದೆ ನೆರೆ ನಡೆವ ಮಾರ್ಗದೊಳು ಅರವಟ್ಟಗೆಗಳನ್ನು ಧರಧರದಿ ಬಿಚ್ಚಿ ತೆಗೆದೆ ಪರಮ ಸಂಭ್ರಮದಿಂದ ಅರಳಿಯಾ ಮರ ಕಡಿಸಿ ಕೊರೆಸಿ ಬಾಗಿಲು ಮಾಡಿದೆ ಏಕ ಮಂದಿರವ ಮುಗಿಸಿ ಹರುಷ ಚಿತ್ರವ ಬರೆಸಿ ಪರಿಪರಿಯ ಸುಖ ಸಾರಿದೇ ಮೆರೆದೆ 2 ಸಾಕಲ್ಯದಿಂದ ಸಾಲಿಗ್ರಾಮದ ಅಭಿಷೇಕ ಆಕಳ ಹಾಲಲಿ ಮಾಡದೆ ನಾಕೆಂಟು ನಾಯಿಗಳ ಸಾಕಿ ಮನೆಯೊಳು ಬದುಕ ಬೇಕೆಂದು ಹಾಲು ಹೊಯ್ದೆ ಕಾಕು ಬುದ್ಧಿಗಳಿಂದ ಗುಡಿ ಗುಡಿ ನಸಿ ಪುಡಿ ಹಾಕಿ ಭಂಗಿಯಾ ಸೇದಿದೆ ಲೋಕ ನಿಂದಕ ನಾಗಿ ಪಾಪಕ್ಕೆ ಕೈ ಹಚ್ಚಿ ಅ ನೇಕ ಜೂಜುಗಳಾಡಿದೇ ಬಿಡದೆ 3 ಸ್ನಾನ ಸಂಧ್ಯಾನ ಅತಿಮೌನ ಗಾಯಿತ್ರಿ ಜಪ ಭಾನುಗಘ್ರ್ಯವನು ಕೊಡದೆ ಹೀನತ್ವ ವಹಿಸಿ ದಾನ ಧರ್ಮವ ಮಾಡದೆ ಶ್ವಾನನಂದದಿ ಚರಿಸಿದೇ ಶ್ರೀನಿವಾಸನೆ ನಿನ್ನ ಅನುಪೂರ್ವಕ ಪೂಜೆ ನಾನೊಂದು ಕ್ಷಣಮಾಡದೇ ಬೇನೆ ಬಂದಂತಾಗೆ ಹೀನ ಸಕೇಶಿಯ ಕೈಲೆ ನಾನ ವಿಧಾನ್ನ ತಿಂದೇ ನೊಂದೇ 4 ಭಾಗವತ ಕೇಳಲಿಕೆ ಆದರವೆ ಪುಟ್ಟಲಿಲ್ಲಾ ವಾದಿಗಳ ಮತವಳಿದ ಮಧ್ವ ಸಿದ್ಧಾಂತದ ಹಾದಿಗೆ ಹೋಗಲಿಲ್ಲ ಶೋಧಿಸಿದ ಚಿನ್ನಕೆ ಸಮರಾದ ವೈಷ್ಣವರ ಪಾದಕ್ಕೆ ಬೀಳಲಿಲ್ಲ ವೇದ ಬಾಹಿರನಾಗಿ ಅಪಸವ್ಯ ಮನನಾಗಿ ಓದಿಕೊಂಡೆನೋ ಇದೆಲ್ಲ ಸುಳ್ಳ 5 ಉತ್ತಮ ಬ್ರಾಹ್ಮಣರ ವೃತ್ತಿಗಳನೆ ತೆಗಸಿ ಬ್ರ ಹ್ಮಹತ್ಯಗಾರನು ಎನಿಸಿದೆ ಮತ್ತೆ ಮದುವೆ ಮುಂಜಿ ಸಮಯಕ್ಕೆ ನಾ ಪೋಗಿ ಸತ್ತ ಸುದ್ದಿಯ ಪೇಳಿದೆ ವಿತ್ತವಿದ್ದವರ ಬೆನ್ಹತ್ತಿ ದೂತರ ಕಳುಹಿ ಕುತ್ತಿಗೆಯ ನಾ ಕೊಯ್ಸಿದೆ ನಿತ್ಯ ಕಲ್ಲೊಡೆಯುತಿರೆ ಮೃತ್ಯು ದೇವತೆಯೆನಿಸಿದೆ ಬಿಡದೇ 6 ಕ್ಷಿತಿಯೊಳಗೆ ಇನ್ನಾರು ಹಿತವ ಬಯಸುವವರೆನಗೆ ಗತಿಯೇನು ಪೇಳೊ ಕೊನೆಗೆ ಸತತ ತವ ಧ್ಯಾನದಲಿ ರತನಾಗಿ ಇರುವ ಸ ನ್ಮತಿಯ ಪಾಲಿಸಯ್ಯ ಎನಗೆ ಪತಿತಪಾವನನೆಂಬ ಬಿರಿದು ಅವನಿಯ ಮೇಲೆ ಶ್ರುತಿ ಸಾರುತಿದೆಯೋ ಹೀಗೆ ಶಿತಕಂಠನುತ ಜಗನ್ನಾಥವಿಠ್ಠಲ ನಿನಗೆ ನುತಿಸದೆ ಬೆಂಡಾದೆ ಕಾಯೋ ಹರಿಯೆ 7
--------------
ಜಗನ್ನಾಥದಾಸರು
ಪರಮ ಪಾವನಕಾಯ ಗುರುರಾಯ ಜೀಯ ವರ ಭಾಗವತರ ಪ್ರಿಯ ಸುರರ ಸಹಾಯ ಪ. ಶ್ರೀ ತಂದೆ ಮುದ್ದುಮೋಹನ ದಾಸರೆಂದೆನಿಸಿ ವಾತ ಜನಕನ ಒಲಿಸಿ ವೈರಾಗ್ಯ ಧರಿಸಿ ಖ್ಯಾತಿಯನು ಪಡೆದ ಅನಾಥ ರಕ್ಷಕ ಸ್ವಾಮಿ ನೀತ ಗುರು ನಿಮ್ಮ ಪದಕೆ ನಾ ತುತಿಸಿ ನಮಿಪೆ 1 ಘನ ಅಂಶದಲಿ ನೆಲಸಿ ಅನವರತ ಸಲಹುವೊ ಮನವ ಮಾಡಿರಬಲೆ ಅಂಜಿ ಬೆದರೆ ಘನ ಜ್ಯೋತಿ ಸ್ವೀಕರಿಸಿ ತನುವಿಗಭಯ ತೋರಿ ಮನದಿ ಪದವನೆ ನಂಬೆ ರಕ್ಷಿಸಿದ ಗುರುವೆ 2 ಅಪಮೃತ್ಯು ಬಂದು ಬಹು ಅಪರಿಮಿತ ಭಯಪಡಿಸಿ ಸುಪಥ ಕಾಣದೆ ನಿಮ್ಮ ಪದವ ನಂಬಿರಲು ಸ್ವಪ್ನದಲಿ ನಿಜರೂಪ ಗುಪ್ತದಿಂದಲಿ ತೋರಿ ಆಪತ್ತು ಪರಿಹರಿಪೆನೆಂದಭಯವಿತ್ತ 3 ಪರಿಪರಿ ಅಪಮೃತ್ಯು ಪರಿಹಾರವನೆಗೈದು ಪರಮ ಹರುಷದಿ ಕಾಯ್ದು ಆಯುವನೆ ಇತ್ತು ಕರಕರೆಯ ಬಿಡಿಸಿ ಕಾಯ್ದಂಥ ಘನ ಚರಿತೆಯನು ಅರಿತು ವರ್ಣಿಸಲರಿಯೆ ಪರಮ ಪ್ರಿಯ ದೊರೆಯೆ 4 ಆಪನ್ನ ರಕ್ಷಕರೆ ಶ್ರೀ ಪತಿಯ ತೋರುವ ಘನಶಕ್ತರೆ ಕಾಪಾಡುವೋ ಕರ್ತರೆಂದು ನಾ ನಂಬಿರುವೆ ಗೋಪಾಲಕೃಷ್ಣವಿಠ್ಠಲನ ನಿಜ ಪ್ರಿಯರೆ 5
--------------
ಅಂಬಾಬಾಯಿ
ಪರಮ ಪುರುಷ ಹರಿ ಗೋವಿಂದ - ಸಿರಿವರ ನಾರಾಯಣ ಗೋವಿಂದ ಪ ನಿಶೆವೆಸರಸುರನ ಉಸಿರ ತೊಲಗಿಸಿದೆಕುಸುಮ ಶರನ ಪಿತ ಗೋವಿಂದವಸು ಪೂರಿತ ಶ್ರುತಿ ಮಸುಳಿಸದೆ ತಂದೆಬಿಸಜ ಸಂಭವನಯ್ಯ ಗೋವಿಂದ 1 ಮಂದರ ಸಿರಿ ಗತವಾಗದ ಮುನ್ನಕ್ಷಿತಿ ಪೆತ್ತನಯ್ಯ ಗೋವಿಂದ 2 ಭೂತಳವೆರಸಿ ರಸಾತಳಕಿಳಿದಿಹಪಾತಕನ ಕಂಡೆ ಗೋವಿಂದಆತನೊಡನೆ ಕಾದಾತನ ಗೆಲಿದು ಮ-ಹೀತಳವನು ತಂದೆ ಗೋವಿಂದ 3 ದುರುಳಾಸುರನ ನಡುಗರುಳ ಮಾಲೆ ಮುಂ-ಗೊರಳೊಳು ಧರಿಸಿದೆ ಗೋವಿಂದಗರಳ ಕೊರಳನು ಬೆರಳೆತ್ತಿ ಪೊಗಳಲುತರಳಗೊಲಿದೆ ನೀ ಗೋವಿಂದ4 ವಾಮನನಾಗಿ ನಿಸ್ಸೀಮ ಬಲಿಯ ಕೈಯಭೂಮಿಯನಳೆಕೊಂಡೆ ಗೋವಿಂದತಾಮರಸ ಪದದಿ ಕನಕ ಗರ್ಭಯೋಗವ್ಯೋಮ ಗಂಗೆಯ ತಂದೆ ಗೋವಿಂದ 5 ಸುರ ಪಶುವಿಗೆ ಋಷಿಯನು ಕೊಂದನ ಬಹುಕರ ಬಲ ಮುರಿದೆಯೊ ಗೋವಿಂದತರ ಹರಿಸದೆ ವಸುಧೆಯ ಒಡೆತನ ಭೂಸುರರಿಗೆ ನೀಡಿದೆ ಗೋವಿಂದ 6 ತ್ರಿಣಯನ ತಾತ್ಪರ್ಯ ರಾವಣನ ಶಿರರಣದೊಳುರುಳಿಸಿದೆ ಗೋವಿಂದಕ್ಷಣಮೆಣಿಸದೆ ಸದ್ಗುಣವಂತ ವಿಭೀ-ಷಣಗಭಯವಿತ್ತೆ ಗೋವಿಂದ 7 ಕ್ರತು ಸಿರಿ ಭೂಭಾರೋತ್ತಾರಣ ಬಲಯುತ ಗೋವಿಂದ 8 ಕಥೆಯನು ನಿರ್ಮಿಸಿ ಪತಿವ್ರತೆಯರ ಘನವ್ರತಗಳ ಕೆಡಿಸಿದೆ ಗೋವಿಂದಜತೆಯಗಲದ ಪುರ ತ್ರಿತಯ ಗೆಲಿದು ದೇ-ವತೆಗಳ ಸಲಹಿದೆ ಗೋವಿಂದ 9 ಜಾಜಿಯ ಮರಕತ ತೇಜಿಯನೇರಿ ವಿ-ರಾಜಿಪ ರಾವುತ ಗೋವಿಂದಸೂಜಿಯ ಬೆನ್ನೊಳು ರಾಜಿಪ ತೆರದಿ ಸ-ಹಜರೊಳಡಗಿರ್ಪ ಗೋವಿಂದ 10 ಮೇದಿನಿಗೋಸುಗ ಕಾದಿ ಕಲಹದಿ ವಿ-ರೋಧಿಗಳ ಕೊಂದೆ ಗೋವಿಂದಸಾಧುಗಳಿಗೆ ಸುಖವೀಯುವ ಬಾಡದಶ್ರೀಧರ ಕೇಶವ ಗೋವಿಂದ 11
--------------
ಕನಕದಾಸ
ಪರಮ ಪುರುಷನ ಮೊದಲು ನಮಿಸುತಚರವವೈದಿದ ದೈವತಂಗಳಿಗೆರಗುವೆನು ಕ್ರಮದಿಂದ ಕೂಡುತಧರಣಿ ತಳದಲ್ಲಿ 1 ದರ್ಭ ಮುಖ ವಿಸ್ತರದಿ ಹಾಕುತಪದ್ಮ ಮೊದಲಾಸನದಿ ಪ್ರಾಂಗ್ಮುಖಇದ್ದರಗ್ರ್ಯಾಳ ಸಮ್ಮುಖ ಶ್ರದ್ಧೆ ಮಾಡುವುದು 2 ಕೂರ್ಮ ಆಸನಈಸು ಚಿಂತಿಸಬೇಕು ಎಂಬೋಭಾಷೆ ರಾಜಿಪುದು 3 ಧಾರುಣಿ ಮಂತ್ರದಲಿ ಕೂಡುತನಾರಸಿಂಹ ಸುದರ್ಶನಾಸ್ತ್ರದಿಆರು ದಿಕ್ ದಿಗ್ಬಂಧನಾಡಿಯಸೂರಿ ಮಾಡುವುದು 4 ನಾಗಭೂಷಾಜ್ಞೆಯಲಿ ಭೂತಗಳ್‍ಹೋಗಲೆಂಬುವ ಮಂತ್ರ ಪಠಿಸುತಯೋಗಿಗಳ ಪ್ರಾರ್ಥಿಸುತ ಸಂತತಯಾಗ ಮಾಡುವದು 5 ಹರಿಯ ಗುರುಗಳ ನಮನಗೋಸುಗಕರವ ಮನವನು ಶೋಧಿಸೂವುದುಎರಡು ಬೀಜಾಕ್ಷರದಿ ನಾಂಕುಎರಡು ಸ್ಥಾನದಲಿ 6 ಬ್ರಹ್ಮಹತ್ಯಾ ಮಂತ್ರದಿಂದಲಿತಮ್ಮ ವಾಮಾಂಗವನೆ ಮುಟ್ಟುತಅಧರ್ಮ ಪುರುಷನ ಚಿಂತಿಸುವುದುಕರ್ಮ ಕರ್ತೃಕನು 7 ಶೋಕ್ಷ ನಾಭಿಲಿ ಪಾಪ ಪುರುಷನನಾಶ ಹೃದಯದಿ ಭಸ್ಮ ತ್ಯಜಿಸುತಲೇಸು ವರುಣದಿ ಸುಧೆಯ ವೃಷ್ಟಿಲಿಸೂಸುವುದು ತನುವ 8 ಹೀಗೆ ನಿತ್ಯದಿ ಕಾಮಿನೀಯರುಬಾಗಿ ಪತಿಯಲೆ ಕಾರ್ಯ ಮಾಡುತನಾಗಶಯನ ನಕ್ಷರದ ತತ್ಸುಖಭೋಗ ಬಯಸುವುದು9 ನಾರಿಯರು ಗುರು ಮಂತ್ರದೀಪರಿಪೂರ್ವದಲೆ ಮಾಡುತ ಕೃಷ್ಣನಆರು ವರ್ಣವ ಪಠಿಸುತಲೆ ಗೃಹಕಾರ್ಯ ಮಾಡುವುದು 10 ರಾಮ ಮೊದಲಾದನ್ಯ ಮಂತ್ರಗಳ್‍ಕಾಮಿನೀಯರು ಜಪಿಸುತಲೆ ನಿಜಕಾಮದಿಂದಲೆ ಯೋಗ್ಯತಾವನುನೇಮದಿಂದಿರಲು 11 ತಾರತಮ್ಯವು ಪಂಚಭೇದವುಭೂರಿ ಭಕುತಿಲಿ ಭಜಿಸಿ ಕೃಷ್ಣನಆರು ವರ್ಣವು ಪಠಿಸುತಲೆ ತನ್ನು -ದ್ಧಾರ ಮಾಡುವನು12 ವಾಸು ಮಾಡುತಲೆನ್ನ ಮನದೊಳುಆಶು ಭೇದಕ ಸ್ತ್ರೀಜನಂಗಳಿಗೀಶ ಮಾಡಿದ ಇದನ ಇಂದಿ-ರೇಶಗರ್ಪಿಸುವೆ 13
--------------
ಇಂದಿರೇಶರು
ಪರಮ ಲಾಲಿಸು ಪುರಾಣವನು ನೀನುದ್ಧರಿಸಿ ಲೋಕಗಳಾಳ್ವ ಧರ್ಮಸಾರವನು ಪಸ್ಟೃಯ ಕ್ರಮವ ಸೂಚಿಸಲು ಮಾಯೆಯಷ್ಟಪ್ರಕೃತಿಯಾಗಲದು ಸರ್ಗ ಮೊದಲುಅಷ್ಟರಾಧಾರದ ಮೇಲೂ ಭೂತಪುಟ್ಟಿಸಿದ ಭೌತಿಕ ಪ್ರತಿಸರ್ಗವೆನಲು 1ವಿವರಿಸುತಿರೆ ವಂಶಗಳನು ಮತ್ತುವಿವಿಧ ಮನುಗಳಹ ವಿಸ್ತಾರವನ್ನುಅವರ ವಂಶಾವಳಿಗಳನು ಪೇಳಿಧ್ರುವವಾದ ಪುರುಷಾರ್ಥ ದಾರಿದೋರ್ಪುದನು 2ಇಹ ಪರಗಳ ಸುಖದಿರವ ಮೋಕ್ಷಬಹ ಯುಕ್ತಿ ಸಹ ಪೇಳ್ವ ಬಹು ಗ್ರಂಥದೊಲವಅಹುದೆಂದು ತಿರುಪತಿಯಾಳ್ವ ಬಹುಮಹಿಮ ವೆಂಕಟನಾಥ ಮನ್ನಿಸು ದೇವಾ 3 ಓಂ ಯೋಗಿನಾಂ ಪತಯೇ ನಮಃ
--------------
ತಿಮ್ಮಪ್ಪದಾಸರು
ಪರಮ ಸಂತೋಷವಿದು| ದುರ್ಗಾ| ಪರಮೇಶ್ವರಿಯನು| ಸೇವಿಸುತಿರುವುದು ಪ ಪರಮ ಕಲ್ಯಾಣಿಯ ಸ್ಮರಿಸುತಲಿ|| ಪರಮಾನಂದದಿ| ಚರಣವ ಸ್ಮರಿಸುತ| ದುರಿತಗಳನು ಪರಿ| ಹರಿಸುತಲಿರುವುದು 1 ಮನವೊಲಿದೆಮ್ಮನು| ಸಲಹುವಳು|| ವಿನಮಿತಶರಣರ | ಜನನಿಯಂತಿರಲು| ತನುಮನಧನವನ್ನರ್ಪಿಸುತಿರುವುದು2 ವಿಂದ ಸಂದೋಹವ | ಚಂದದಲಿ|| ಚಂದಿರಮುಖಿಪದ|ದ್ವಂದ್ವದೊಳರ್ಪಿಸಿ| ವಂದಿಸಿ ದೇವಿಯ| ಪೂಜಿಸುತಿರುವುದು3 ಮಹಿಮೆಯ ಸ್ಮರಿಸುತ | ಭಕುತಿಯಲಿ || ಶಂಕರಿ ದೇವಿಯ | ಕಿಂಕರರಾಗುತ| ಇಹಪರ ಸುಖವನು | ಸಾಧಿಸುತಿರುವುದು 4
--------------
ವೆಂಕಟ್‍ರಾವ್
ಪರಮ ಸುಗುಣಸಾಂದ್ರ ಗುರುರಾಘವೇಂದ್ರ ಪ ಕರುಣಾಳೋ ಮುನಿ | ವಂಶಸುಧಾಕರ | ಗುರುರಾಜ ಪ್ರಭೋ | ಶ್ರೀ ರಾಘವೇಂದ್ರ ಅ.ಪ ಮುರುಕುಮಂಟಪದೊಳು | ಹರಕುಚಿಂದಿಯನ್ಹೊದ್ದು | ಉರಿಯ ಬೆಳಕಿನಲ್ಲಿ | ಪರಿಮಳ ರಚಿಸಿದೆ || ಗುರುಗಳಾಕ್ಷಣ ಕಂಡು | ಪರಮಸಂಭ್ರಮದಿಂದ | ಪರಿಮಳಾಚಾರ್ಯನೆಂಬ | ಬಿರುದಿತ್ತು ಕರೆದರೊ 1 ಜಡಮತಿ ಬ್ರಾಹ್ಮಣ | ಮಿಡುಕಿ ನಿರೂಪಿಸೆ | ವಡನೆ ಗಂಧವ ತೇದೆ | ಅನಲನ ಜಪಿಸುತೆ || ಒಡಲ ಬೇಗೆಯಿಂ ಜನರು | ಬಡಬಡಿಸಿದ ಕಂಡು | ಕಡಲರಸನ ದಯದಿ | ಕಡುಶಾಂತಿ ಇತ್ತೆಯೊ2 ಬಾದರಾಯಣಮುನಿ | ಭೇದಮತವ ಬಿತ್ತೆ | ಮೋದತೀರ್ಥರು ತರುವ | ಸಾದರಗೈದರೊ || ಸ್ವಾದಫಲಂಗಳು | ನಿನ್ನಿಂದ ತೋರ್ದವು | ಸಾಧುಜನಾರ್ಚಿತ | ಶ್ರೀಶಕೇಶವಪ್ರಿಯ 3
--------------
ಶ್ರೀಶ ಕೇಶವದಾಸರು
ಪರಮಪದವಿಯನೀವ ಗುರುಮುಖ್ಯ ಪ್ರಾಣನಧರೆಯೊಳಗುಳ್ಳ ಮಾನವರೆಲ್ಲ ಭಜಿಸಿರೊ ಪ ಅಂದು ತ್ರೇತಾಯುಗದಿ ಹನುಮನಾಗವತರಿಸಿಬಂದು ದಾಶರಥಿಯ ಪಾದಕೆರಗಿಸಿಂಧುವನು ದಾಂಟಿ ಮುದ್ರಿಕೆಯಿತ್ತು ದಾನವರವೃಂದಪುರ ದಹಿಸಿ ಚೂಡಾಮಣಿಯ ತಂದವನ1 ದ್ವಾಪರಯುಗದಲಿ ಭೀಮಸೇನನೆನಿಸಿಶ್ರೀಪತಿಯಪಾದ ಕಡು ಭಜಕನಾಗಿಕೋಪಾವೇಶದಲಿ ದುಶ್ಶಾಸನನನು ಸೀಳಿಭೂಪನ ಜಲದೊಳಗೆ ಕರೆಕರೆದು ಜರೆದವನ 2 ಕಲಿಯುಗದಲಿ ತುರೀಯಾಶ್ರಮವನೆ ಧರಿಸಿಕಲುಷದ ಮಾಯಿಗಳನೆ ಸೋಲಿಸಿಖಿಲವಾದ ಮಧ್ವಮತವನು ಬಲಿದೆನಿಸಿ ಕಾಗಿನೆಲೆಯಾದಿಕೇಶವನೆ ಪರದೈವನೆಂದವನ 3
--------------
ಕನಕದಾಸ