ಒಟ್ಟು 4461 ಕಡೆಗಳಲ್ಲಿ , 126 ದಾಸರು , 3134 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸುಖಿಯಾದೆನು ಶ್ರೀ ಪಾದಾ ಹೊಂದಿ ಗುರುವಿನಾ ಪ ಸರಿತ ಮಹಾನದಿಯೊಳು ಬೆರೆತಂತೆ | ನೆರೆ ಕೀಟಕ ಭೃಂಗಿ ಬೆರೆಸಿದಂತೆ 1 ಬಡವಗ ನಿಧಾನವ ದೊರೆತಂತೆ | ಪೊಡವಿ ಬೆಳೆಗೆ ಘನ ಮಳೆಗರೆದಂತೇ ಜಡ ಮತಿಗೇ ಶಾರದೆ ಒಲಿದಂತೆ 2 ತಂದೆ ಮಹೀಪತಿ ಕಂದಗ ವಲಿದು | ಛಂದದಿ ಭಕುತಿಯ ದಾರಿಗೆ ತಂದು | ಬಂದದ ಸಾರ್ಥಕ ಮಾಡಿದೆ ನಿಂದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸುಗುಣೆಯ ಕೂಟವೆ ಕೂಟ ಪ ಹಗಲಿರುಳೆನ್ನದೆ ಬಗೆ ಬಗೆ ರತಿಯೊಳು ಸೊಗಯಿಸಿ ದೇಹ ಧಾತುಗಳನು ಕೆಡಿಸುವ ಅ.ಪ ಗನುದಿನ ಬಾಧಿಪ 1 ಮಾಡಿ ಹಾಸಿಗೆ ಮಂಚಾದಿಗಳಲಿ ರೂಢಿಸಿ ಕಾಮಿನಿ ಕೂಡುವ ತೆರದೊಳೋ ಲಾಡಿ ಶರೀರದ ನಾಡಿಯ ನಿಲ್ಲಿಸುವ 2 ನಿದ್ರೆಯ ಸಮಯವ ನೋಡುತ ಮುದ್ದಾಡುತ ನಮ್ಮ ನೊದ್ದಾಡಿಸುತಿಹ 3 ತೊಗಲಿನ ನರಕ್ಕೆ ತಗಲೆ ನಿದ್ರೆಯ ನಗಲಿಸಿ ಬೇಗದಿನುಸುಳಿ ಕದ್ದೋಡುವ4 ತೊಗಟೆ ರಕ್ತದ ಸುವಿನೋಡಿ ಬುಗುಟೆದ್ದ ಗಾಯವ ವಿಗಟವ ಮಾಡುವ 5 ಕಪಟ ಕಾಟಕರ್ಮದ ನಿಸರ್ಗದಲ್ಲಿನ ಬಲು ಕೋಟಲೆಯುಂಬೆ ನಿನ್ನ ಕೂಟದ ಜನರಿಗೆ 6 ಬಿರುದನು ಪೊಗಳುತ ನಿಂದೆ ವರದವಿಠಲ ನಿನ್ನ ಶರಣರಾದವರಿಗೆ 7
--------------
ವೆಂಕಟವರದಾರ್ಯರು
ಸುಗ್ಗಿ ಸುಕಾಲಾಯಿತು ಜಗದೊಳಗೆ ಅಗ್ಗಳತ್ಯಾಯಿತು ಗುರುದಯಲೆನಗೆ ಧ್ರುವ ಭಕ್ತಿ ಭೂಮಿಯು ಕೈಗೊಟ್ಟಿತು ಪೂರ್ಣ ತತ್ವೋಪದೇಶ ತಿಳಿಯಿತು ನಿಧಾನ ಭಕ್ತರಿಗಿದರಿಡುವದು ಅನುದಿನ ಮುಕ್ತಿಯ ಫಲ ಮುನಿಜನರಾಭಣ 1 ಮಳೆಗರಿಯಿತು ಮಹಾಗುರುದಯ ಕರುಣ ಬೆಳೆಬೆಳೆಯಿತು ಮಹಾ ಸುಙÁ್ಞನದ ಸ್ಫುರಣ ತಿಳಿಯಿತು ಬರವಿದು ಭವಬಂಧನ ಕಳೆಯಿತು ಕಾಂಕ್ಷೆ ಹುಟ್ಟುವ ಹೊಂದುಣ2 ಮನೋಹರವಾಯಿತು ಗುರುಕೃಪೆಯಿಂದ ಜನವನದೊಳು ಕಾಣಿಸಿದ ಗೋವಿಂದ ಅನುಭವ ಸುಖವಿದು ಬ್ರಹ್ಮಾನಂದ ಘನಸುಖಪಡೆದ ಮಹಿಪತಿ ಇದರಿಂದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸುಜನ ಜನ ವತ್ಸಲನ ಸೋಮ ಸೂರ್ಯರ ನಯನ ಸುಗುಣಿ ಗುಣ ಗಂಭೀರನ |ಭುಜಗ ಭೂಷಣ ಕಂಕಣನ ಭುವನ ರಕ್ಷಕನ ಭುಜ ಚತುಷ್ಕಾಯುಧಗಳಿಂದೆಸೆವ ಶುಭ್ರ ರದನ ವಿಜಯ ಮೂರುತಿ ವಿಘ್ನವಿಪಿನ ದಾಹಕನ ವಿಘ್ನೇಶ್ವರಗೆ ಸಹಸ್ರನಮನ 1 ನೀನೆ ಶಾಶ್ವತ ರೂಪ ನಿನ್ನ ಕೀರ್ತಿ ಪ್ರತಾಪ ಖೂನ ಕಂಡುಉಸುರೆನೆಂದರೆ ಶ್ರುತಿಗಳಾಲಾಪ ಮೌನಗೊಂಡವು ಮಿಕ್ಕ ಶೇಷಾದಿಕರ ಸ್ಫೂರ್ತಿ ನಿಂತು ಹೋಗಿರಲು ಗಣಪ | ........................... ನಗೇಶನ ಮಾರ್ಗದ ಕೀಲ ಕೃಪೆ ಮಾಡಿ ತೋರಿದರು ಶ್ರೀನಾಥ ಶ್ರೀಹರಿಯ ಚಾರಿತ್ರ್ಯ ಪೇಳಿಸಲಿಕೆ ಆಧಾರ ನೀನೇ ಸತ್ಯ 2 ಇಂತು ವಿಘ್ನೇಶ್ವರನ ಬಲಗೊಂಡ ಬಳಿಕ ಸಮನಂತರದೊಳಾ ಶಾರದಾಂಬಿಕೆ ಶ್ರೀಪಾದ ಅಂತರಂಗದ ಪೀಠದಾಸನಕೆ ಕರಕೊಳಲು ಬಂದೊದಗು ಜಿವ್ಹಾಗ್ರದಿ | ನಿಂತು ನಡಿಸುವ ನಿನ್ನ ಶಕ್ತಿ..................................... ವಂತೆ ವಿಶ್ರಾಂತೆ ಪಾವನ ಮೂರ್ತೆ ಪ್ರಖ್ಯಾತೆ ವರದಾತೆ ಲೋಕ ಮಾತೆ 3 ಸುಜನ ಭುಜಗ ತ್ರಿಜಗ ಜೀವರ ಜನನಿ ತ್ರಿತಾಪ ಸಂಹಾರಿಣಿ ತ್ರಿದೇಹ ಸಂಚಾರಿಣಿ | ದ್ವಿಜತುರಂಗ ಗಮನಿ ದಿವ್ಯಾಂಬರಾಭರಣಿ ರಜ .........................ಗಜಗಮನಿ ಗಂಧರ್ವಗಾನ ಲೋಲಿನಿ ವಾಣೀ ರತ್ನ ಕೃತಾಂಗಿ ಅನುಕೂಲಿನಿ 4 ಹಸ್ತಿ ಕೃಮಿ ಕೀಟ ಭೃತ್ವಲಯದೊಳಗುಳ್ಳ ...................................... ಕೇವಲ ಪರಬ್ರಹ್ಮ ಸ್ಫುರಣಸ್ಫೂರ್ತಿಯು ತೋರದಾರಿಂದ ಗುರುವಿನ್ಹೊರತು 5 ಜಲಧಿ ಎಂದು ಮೊರೆ ಹೊಕ್ಕೆ ನಿನ್ನ ಶ್ರೀ ಚರಣ .......... ಮಾಡಿ ರಚಿಸುವ 6
--------------
ಭೀಮಾಶಂಕರ
ಸುಜನ ಬುಧಗೇಯ ಮೇದಿನೀ ಸುರವಂದ್ಯ ಶ್ರೀಪಾದರಾಯ ಪ ಸಕಲಶಾಸ್ತ್ರ ಕಲಾಪ ಸನ್ಯಾಸ ಕುಲದೀಪಸಕಲ ಸತ್ಯಸ್ಥಾಪ ಸುಜ್ಞಾನದೀಪಪ್ರಕಟ ಪಾವನರೂಪ ಅರಿಕುಜನ ಮತಲೋಪನಿಕಟ ವರ್ಜಿತ ಪಾಪ ಕೀರ್ತಿ ಪ್ರತಾಪ 1 ಭೃಂಗ ಶುಭ ಚರಿತಾಂಗ ಷಟ್ಫಾಸ್ತ್ರಸÀಂಗ 2 ಸಿರಿಕೃಷ್ಣ ದಿವ್ಯ ಪಾದಾಬ್ಜ ಚಿಂತಾಲೋಲವರ ಹೇಮವರ್ಣಮುನಿಪತಿಯ ಸುಕುಮಾರಗುರುತಿಲಕ ಶ್ರೀಪಾದರಾಯ ಅಮಿತೋದ್ಧಾರಶರಣ ಜನ ಸುರಧೇನು ಭಕ್ತಮಂದಾರ 3
--------------
ವ್ಯಾಸರಾಯರು
ಸುಜ್ಞಾನ ಸಮುದ್ರ ಮಧ್ವಮುನಿರಾಯ || ನಿವಾರಿಸಿದ | ಮಧ್ವ ಮುನಿರಾಯಾ ಪ ಸಂಕರನಾದಾ | ಮಧ್ವರಾಯಾ || ಗುಣಗಳಲ್ಲ ಕೆಡಿಸಿದಾ | ಮಧ್ವರಾಯಾ 1 ಹರಿಯಿಲ್ಲ ಗುರುವಿಲ್ಲ ಹರನು ಪುಸಿ ಎಂದು || ಮಧ್ವ | ಅವ | ಪರದೈವ ತಾನೆ ಎಂದು ಧರೆಯೊಳು ತಿರುಗಿದ | ಮಧ್ವ 2 ಮಿಥ್ಯ ಅಹಂ ಬ್ರಹ್ಮ ಜಗಕೆಂದ | ಮಧ್ವ || ಅವ | ಸತಿ ಒಂದೆ ಎಂದು ಮಧ್ವ 3 ಜಾತಿಧರ್ಮವೆಲ್ಲ ತೊರೆದು | ಜಾತಿ ಸಂಕರವಾಗೆ ಮಧ್ವ || ಮಿಥ್ಯ ಪಾತಕವೆ ತುಂಬಿತು | ಮಧ್ವರಾಯ 4 ಪೇಳಲು | ಮಧ್ವ ||ಬೊಮ್ಮ | ಪರಿಹರ ಕಾಣದೆ ಹರಿಗೆ ಬಿನ್ನೈಸಿದ | ಮಧ್ವ5 ಜಯ ತನಯನ್ನ ಕರೆದು | ದಯದಿಂದ ಪೇಳಲು | ಮಧ್ವ || ವೇಗ | ಪ್ರಿಯದಲ್ಲಿ ಬಂದು ಮಧ್ಯಗೇಹನಲ್ಲಿ ಅವತರಿಸಿದ | ಮಧ್ವ 6 ಮುಖ್ಯ ಶಿಷ್ಯ ತಿಪ್ಪಣ್ಣ ಅವಧಾನಿ ಸೋತು ವೈಷ್ಣವನಾಗೆ | ಮಧ್ವ || ಸಂಕರ ಮೂಲಿಯ ಪೊಕ್ಕ | ಮಧ್ವ 7 ಶುಂಠ ಮಿಕ್ಕ ರಕ್ಕಸರ ಗಂಟಲ ಮುರಿದುವಟ್ಟಿ | ಮಧ್ವ || ಉಂಟು ಮಾಡಿದನು ವೈಕುಂಠ ಪತಿದೇವವೆಂದು | ಮಧ್ವ8 ಮರುತ ಮತ ಉಧ್ಧರಿಸಿ | ಗುರುಕುಲ ತಿಲಕನಾದ | ಮಧ್ವ ||ಶಿರಿ ವಿಜಯವಿಠ್ಠಲನ್ನ ಚರಣಾಬ್ಜ ಭೃಂಗನಾದ ಮಧ್ವ 9
--------------
ವಿಜಯದಾಸ
ಸುಜ್ಞಾನಿ ನಡೆ ಬೇರೆ ಅಜ್ಞಾನಿ ನಡೆ ಬೇರೆ ಜ್ಞಾನದಿಂದ ಪ್ರಮಾಣಿಸಿ ನೋಡಲು ಪ ಸುಜ್ಞಾನಿ ನುಡಿಯದರ ಕಡೆತನಕ ಅಜ್ಞಾನಿ ನುಡಿ ಸದಕ ಸುಜ್ಞಾನಿಯನುಡಿ ಒಂದೆ ನಿರ್ಧಾರ ಅಜ್ಞಾನಿಯ ನುಡಿ ಪದರುದರ 1 ಸುಜ್ಞಾನಿ ಬಾಳು ಭವಲೂಟಿ ಕಡೆತನ ಅಜ್ಞಾನಿ ಬಾಳು ಸುಳ್ಳು ಮುಷ್ಟಿ ಸುಜ್ಞಾನಿಯ ವರ್ತನೇ ವಜ್ರದಗಟ್ಟಿ ಅಜ್ಞಾನಿವರ್ತನೆ ಗಾಳಿಯ ಮೊಟ್ಟೆಮೊಟ್ಟೆ 2 ಸುಜ್ಞಾನಿಗೆ ಮುಕ್ತಿಪಟ್ಟ ಕಡೆತನ ಅಜ್ಞಾನಿಗೆ ಮೃತ್ಯುಕಾಟ ಅಜ್ಞಾನಿಕಾಣುವ ಯಮನಗೂಟ ಸುಜ್ಞಾನಿ ಕಾಣುವ ಶ್ರೀರಾಮನಾಟ ಆಟ 3
--------------
ರಾಮದಾಸರು
ಸುಂದರಿಯರು ಅಂದದಾರತಿ ಬೆಳಗಿ ಕುಂದರದನ ದಿವ್ಯ ಮಂದಸುಹಾಸೆಗೆ ಇಂದಿರಾಪತಿ ಹರಿಗೆ ಪ ಭಂಗ ನಿರ್ಮಲ ಗುಣ ಸಂಗರಹಿತ ಹರಿಗೆ 1 ಮಹಿಮ ನಾದ ವಿನೋದ ಹರಿಗೆ 2 ಪೀತಾಂಬರಾಚ್ಯುತ ಧಾತೃಕಾರಣ ನಿಜ ವಾತ್ಸಲ್ಯ ಭಕ್ತ ಹರಿಗೆ 3 ಜಂಭಾರಿ ಸೋದರ ಗಂಭೀರದಾಕಾರ ಸ್ತಂಭ ತನುಜ ಹರಿಗೆ 4 ಮಾನವಿವರ್ಜಿತ ಮಾನವಪೂಜಿತ ಧೇನುನಗರ ಹರಿಗೆ 5
--------------
ಬೇಟೆರಾಯ ದೀಕ್ಷಿತರು
ಸುಧಾಮ ಪ್ರಿಯ ವಿಠಲ | ಬದಿಗ ಪೊರೆ ಇವಳಾ ಪ ವಿಧಿ ಭವಾದ್ಯರ ಜನಕ | ಮುದ ಪ್ರದನೆ ದೇವಾ ಅ.ಪ. ಧೀನ ಜನ ಬಂಧೋ |ಹೀನಾಯ ಕಳೆದು ಮುನಿ | ಮಾನಿನಿಯ ಸಲಹಿದೆಯೋ ಜ್ಞಾನಿಜನ ನಿನ್ನ ಕಾ | ರುಣ್ಯ ಸ್ಮರಿಸುವರೋ 1 ಪಥ | ನೀನೆ ತೋರಿರುವೆ 2 ಸಾಧುಜನ ಸಂಗವನು | ನೀದಯದಿ ಕೊಟ್ಟಿವಳಆದಿ ವಿರಹಿತ ಭವದ | ಬಾಧೆ ಪರಿಹರಿಸೋಮೋದ ತೀರ್ಥರ ಮತದಿ | ಉದಿಸಿಹಸುಕಾರಣದಿಭೇದ ಪಂಚಕ ತಿಳಿಸಿ | ಸಾಧನವಗೈಸೋ3 ಕೃತಿ ರಮಣ ದೇವಾ 4 ಆರ್ತಳಾಗಿಹ ಸ | ತ್ಪಾರ್ಥನೆಯ ಕೈಕೊಂಡುಪೂರ್ತಿಗೈ ಆಭೀಷ್ಟ | ಪಾರ್ಥಸಖ ದೇವಾ |ಗೋಪ್ತ ಗುರು ಗೋವಿಂದ | ವಿಠಲ ಮದ್ಬಿನ್ನಪನಸಾರ್ಥಕವ ಮಾಡೆಂದು | ಪ್ರಾರ್ಥಿಸುವೆ ಹರಿಯೇ 5
--------------
ಗುರುಗೋವಿಂದವಿಠಲರು
ಸುನಾಮ ಕೇಶವ ಮಾಧವ ನಾಶನ ಭವನಿಧಿಬಂಧನ ಪ ಬೋಲೋ ರಾಧಾಕೃಷ್ಣ ಸುಲೀಲ ಪಾಲಯ ಕುಲಕೋಟಿ ಪಾವನ ಅ.ಪ ವೃಂದಾವನ ಮಾಲಾನಂದ ಲೀಲಾ ಇಂದಿರೆಪ್ರಿಯ ಮಣಿಮಾಲನ ಸಂದರಮಂದರ ಮಂದಿರ ದೇವಕಿ ಕಂದ ಮುಕ್ಕುಂದ ಗೋಪಾಲನ1 ನೀಲಶ್ಯಾಮ ಭವಮಾಲಹರಣ ದಯ ಆಲಯ ಭಜನಾನಂದನ ಕಾಲ ಕುಜನ ಕುಲಶೀಲ ಶಿಷ್ಟಪ್ರಿಯ ಲೋಲಗಾನ ಹರಿ ಗೋವಿಂದನ 2 ಅಮಿತಮಹಿಮ ಅಸುರಮರ್ದನ ಕಮಲನಾಭ ಕರಿಪಾಲನ ಕಾಮಿತದಾಯಕ ಸುಮಶರಪಿತ ಮಮ ಸ್ವಾಮಿ ಶ್ರೀರಾಮ ಮುಕ್ತಿ ಸೋಮನ 3
--------------
ರಾಮದಾಸರು
ಸುನಾಮ ಗುರುವಂದಿತ ಶ್ರೀರಾಮ ಪ ಅಹಿಭೂಷಣ ನುತರಾಮ | ಮಹಿಜಾಪ್ರಿಯ ಶ್ರೀರಾಮ ಅ.ಪ ದಶರಥೇಂದ್ರ ಸುಕುಮಾರ | ನಿಶಿಚರಾಳಿ ಸಂಹಾರ | ಕೌಶಿಕ ಭಯ ಪರಿಹಾರ | ಪರಮಶೂರ ಶ್ರೀರಾಮ 1 ಮುನಿಗೌತಮ ಸತಿಪಾವನ | ಜನಕಾತ್ಮಜ ಮನಮೋಹನ | ಮುನಿಸನ್ನುತ ಸುರಜೀವನ | ವನಜೇಕ್ಷಣ ಶ್ರೀರಾಮ 2 ಜನಕಜಾ ಸುಮಿತ್ರಜಾಯುತ | ವನವನಾಂತರ ಸಂಚರಿತ | ಸನಕಾನತ ಶ್ರೀರಾಮ 3 ಭರತಾನತ ಪೂಜ್ಯಪಾದ | ಪರಮಾದ್ಭುತ ಶರ ವಿನೋದ | ಸುರಭೀಕರ ದೈತ್ಯಸೂದ | ಅಭಯಪ್ರದ ಶ್ರೀರಾಮ 4 ಖಚರಾಧಿಪ ಪ್ಲವಗೇಶ್ವರರಾಮ ವರದಾಯಕ ಭಯಹಾರಕ ರಾಮ | ಶುಭಕಾರಕ ಶ್ರೀರಾಮ 5 ನಿಶಿಚರ ಕಾಲಾಂತಕ ರಣಭೀಮ | ಸನ್ನುತ ಶ್ರೀರಾಮ 6 ಭುವನೋದ್ಧಾರಣ ಕಂಕಣ ರಾಮಾ | ಭುವನಾನಂದದ ಶ್ರೀರಾಮಾ 7 ದಾವಾನಲ ಸಮರಂಜಕ ರಾಮಾ | ರಾವಣಕುಲ ವಿಧ್ವಂಸಕ ರಾಮಾ | ಸೀತಾನಾಯಕ ಶ್ರೀರಾಮಾ 8 ರಾಕಾಚಂದ್ರ ಸುಧಾಕರ ರಾಮಾ | ಏಕಚಕ್ರಾಧಿಪ ರಘುರಾಮ | ಲೋಕಸುಖಂಕರ ಶ್ರೀರಾಮ 9 ಅಂಗದ ಹನುಮತ್ಸೇವಿತರಾಮ | ಮಂಗಳಕರ ಸೀತಾರಾಮ | ಮಾಂಗಿರಿನಿಲಯ ಶುಭಾನ್ವಿತ ರಾಮ | ಜಗವಂದಿತ ಶ್ರೀರಾಮ10
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸುರಮುನಿವಂದ್ಯಜಯತುಗಣನಾಥ ಪ ಅಗಜೆಯರಸ ಕುಮಾರ ಹರಿಪೂಜಿತ ಜಗದ ಜೀವರುದ್ಧಾರ ಸಿದ್ಧಿ ವರದಾಕಾರ ಜಯತು ಜಯತು 1 ಗಮನ ಶಿರದಿ ಮಣಿಗಣ ಮಕುಟ ಜ್ವಲಿಸೆ ಗಜವದನ ಕರದಿ ಪಾಶಾಂಕುಶವ ಧರಿಸಿ ಭಕ್ತರಿಗಿಷ್ಠ ವರಗಳನು ಪಾಲಿಸುತಲಿರುವ ಗಣನಾಥ 2 ಅಡಿಗಡಿಗೆ ನೆನೆಗಡಲೆ ಗೊನೆಯ ಬಾಳೆಯ ಹಣ್ಣು ಮೂರ್ತಿ ಜಯತು ಜಯತು 3
--------------
ಕವಿ ಪರಮದೇವದಾಸರು
ಸುರರ ಮೊರೆಯನೆಲ್ಲ ಕೇಳಿ ತರಳನೆ ವನದಿ ನರಹರಿ ರೂಪವ ತಾಳಿ ತೋರುತ ಧಾಳಿ ದುರುಳನ ಒಡಲನು ನಖದೊಳು ಸೀಳಿ ಕರುಳ ಮಾಲೆಯನು ಕೊರಳೊಳು ಧರಿಸಿದ ಸಿರಿವರಗಾರತಿಯ ಬೆಳಗಿರೆ ಶೋಭಾನೆ 1 ದುರಿತಾದ್ರಿಗಳನು ತರಿವ ಸ್ಮರಿಸುವ ದಾಸರ ಪೊರೆವ ಕರುಣಾಮೃತವನು ಶಿರದೊಳು ಸುರಿವಾ ಅರಿಪುಂಜವ ಕತ್ತರಿಸುತ ಮೆರೆವ ಕರವ ಪ್ರಲ್ಹಾದನ ಶಿರದೊಳಗಿರಿಸಿದ ಸರಸ ವರಗಾರತಿಯ ಬೆಳಗಿರೆ ಶೋಭಾನೆ 2 ಸುಲಲಿತ ಪದ್ಮೆಯ ವಕ್ಷ ಸ್ಥ ಳದಲಿ ನೆಲೆಗೊಳಿಸಿದಗೆ ಕಳವಳಿಸುವ ಭಕ್ತೌಘನ ಬೇಗದಿ ಸಲಹುತಹೋಬಲ ನಿಲಯದಿ ಶೋಭಿಪ ಚೆಲುವ ಶೇಷಗಿರಿ ವರನಿಗೆ ರತ್ನದ ತಳಿಗೆಯೊಳಾರತಿಯ ಬೆಳಗಿರೆ ಶೋಭಾನೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸುವ್ವಿ ಶ್ರೀ ದೇವಿರಮಣ ಸುವ್ವಿ ಸರ್ಪರಾಜಶಯನ ಹರಣ ಸುವ್ವಿ ನಾರಾಯಣ ಪ ಭವ್ಯಚರಿತ ದುರಿತವಿಪಿನ ಹವ್ಯವಾಹನ ಭವೇಂದ್ರಾದಿ ಸೇವ್ಯಮಾನ ಸುಪ್ರಸಿದ್ಧ ಸುಲಭsÀ ಮೂರುತಿ ಅವ್ಯಯಾಮಿತ ಸುಖಾತ್ಮ ದಿವ್ಯ ಮಹಿಮೆ ತುತಿಪೆ ಸುವಿವೇಕಿಗಳಿಗೆ ಕೊಡುವುದಮಿತ ಮೋದವ 1 ವಾಸವಾದ್ಯಮರ ವಾರಾಶಿ ಶಾರದೇಂದು ಮಧ್ವ ದೇಶಿಕಾರ್ಯ ಚಿತ್ತ ಸಿಂಹಪೀಠಮಧ್ಯಗ ದೇಶಕಾಲ ವ್ಯಾಪ್ತ ಸರ್ವೇಶ ಸಾರ್ವಭೌಮ ಶ್ರೀಮ ಹೀ ಸಮೇತ ಕೃಷ್ಣ ಕೊಡಲಿ ಎಮಗೆ ಮಂಗಳ 2 ಕಮಲ ಸಂಭವನ ವೇದ ತಮನು ಒಯ್ಯತಿರಲು ಲಕ್ಷ್ಮೀ ಶರಧಿ ಮಥನದಿ ಕಮಠ ರೂಪಿನಿಂದ ಸುರರಿಗಮೃತವಿತ್ತು ಕಾಯ್ದ ಅಖಿಳ ಸುಮನಸೇಂದ್ರ ಸ್ವಾಮಿ ಕೊಡಲಿ ಎಮಗೆ ಮಂಗಳ 3 ಕನಕ ಲೋಚನನ ಸದೆದು ಮನುಜಸಿಂಹ ವೇಷನಾದ ದ್ಯುನದಿ ಪಡೆದು ಜನನಿ ಕಡಿದು ವನವ ಚರಿಸಿದ ಜನಪ ಕಂಸನ್ನೊದೆದು ತಿರಿಪುರವನಿತೆಯರ ಸುವ್ರ್ರತ ವಿನುತ ಕಲಿ ದೇವರಾಜ ಎಮ್ಮ ಸಲಹಲಿ 4 ಪಾಹಿ ಪಾವನ ಚರಿತ್ರ ಪಾಹಿ ಪದ್ಮ ಪತ್ರನೇತ್ರ ನಿಗಮ ಗಾತ್ರ ಮಾಂ ಪಾಹಿ ಸಜ್ಜನಸುಮಿತ್ರ ಪಾಹಿ ದೋಷದೂರ ಸುಗುಣ ಪಾಹಿ ಜಗನ್ನಾಥ ವಿಠಲ ಜಯ ತ್ರಿಧಾಮಗ 5
--------------
ಜಗನ್ನಾಥದಾಸರು
ಸುವ್ವಿ ಸುವ್ವಿ ನಮ್ಮ ಶ್ರೀರಮಣಗೆ ಸುವ್ವಿ ಸುವ್ವಿ ಸುವ್ವಿ ನಮ್ಮ ಶ್ರೀರಮಣನೆನೆಸಿದ ವಿನೋದಿ ಹರಿ ಸರ್ವೋತ್ತಮಗೆ ಸುವ್ವಿಪ. ಹರಿಗೆ ಶರಣೆಂಬೆ ಸಿರಿಗೆ ಶರಣೆಂಬೆ ಪರಮೇಷ್ಠಿ ಗುರುಗಳಿಗೆ ಶರಣೆಂಬೆ ಸುವ್ವಿ ಪರಮೇಷ್ಠಿ ಗುರುಗಳಿಗೆ ಹರಿ ಪರನೆಂದು ಪೇಳ್ವ ಶ್ರೀಮದಾನಂದತೀರ್ಥರಿಗೆ ಸಾಸೀರ ಶರಣೆಂಬೆ 1 ವಾಸುದೇವ ಪರ ಸಂಕರ್ಷಣ ಅತಿಕ್ರೂರಸಂಹಾರಕಾರ ಸುವ್ವಿ ಸಂಕರ್ಷಣ ಅತಿಕ್ರೂರಸಂಹಾರಕಾರ ಪ್ರದ್ಯುಮ್ನ ಬೊಮ್ಮ ಕುಮಾರನಂತೆ ಸುವ್ವಿ 2 ಸೂಕರ ನರಹರಿ ಕಾಯ ವಾಮನ ಭಾರ್ಗವ ರಾಮನೆನಿಪ ಭೂಪ ಕೃಷ್ಣ ಸುವ್ವಿ ವಾಮನ ಭಾರ್ಗವ ರಾಮನೆನಿಪ ಭೂಪ ಕೃಷ್ಣನಾದ ಬೌದ್ಧ ಕಲ್ಕಿ ರೂಪ ಪ್ರಸಿದ್ಧವಂತೆ ಸುವ್ವಿ3 ಮುಖ್ಯಪ್ರಾಣ ಆವಲ್ಲಿ ನಾರಾಯಣ ಇವರಿಬ್ಬರ ಗುಣವನರಿಯದವನೆ ಸುವ್ವಿ ಇವರಿಬ್ಬರ ಗುಣವ ಅರಿಯದವನೆ ಗೌಣನೆಂಬರ್ಥದಲಿ ಬ್ರಹ್ಮಸೂತ್ರ [ದಂಬಂತೆ] ಸುವ್ವಿ4 ಆತ್ಮನು ಅತಂತ್ರ ಪರಮಾತ್ಮನು ಸ್ವತಂತ್ರ ದುಃ- ಖಾತ್ಮನು ಜೀವಾತ್ಮ ಪರಮಾತ್ಮನಲ್ಲ ಸುವ್ವಿ ದುಃ- ಖಾತ್ಮನು ಜೀವಾತ್ಮ ಪರಮಾತ್ಮನಲ್ಲ ವಾದಿ ಜ್ಞಾನಾನಂದಕ ಹರಿಗೆ ಸಮರಿಲ್ಲ ಸುವ್ವಿ 5 ಜಡದಲ್ಲಿ ಜೀವಾತ್ಮ ಜಡ ಜೀವರÀಲಿ ಪರಮಾತ್ಮ ಕ್ರೀಡೆಯಿಂದ ಏಕಾತ್ಮ ಬಿಡದಿಹ ಸುವ್ವಿ ಕ್ರೀಡೆಯಿಂದ ಏಕಾತ್ಮ ಬಿಡದಿಹುದು ವಾದಿ ದ್ವಾಸುಪರ್ಣ ವೆಂಬೋ ಶ್ರುತಿ ಲೇಸು ಲೇಸು ಸುವ್ವಿ 6 ಜಡ ಹರಿಗಳ ಭೇದ ಜೀವ ಜೀವಕೆ ಭೇದ ಜೀವೇಶ್ವರಗೆ ಭೇದ ಶರೀರ ಭೇದ ಸುವ್ವಿ ಜಡ ಜೀವರಿಗೆ ಭೇದ ಶರೀರ ಭೇದ [ವೆನ್ನಿ] ಜಡಜೀವ ಭೇದ ಪಂಚಭೇದಗಳು ಸುವ್ವಿ 7 ಪಂಚಭೇದಗಳೆಂಬ ಪ್ರಪಂಚದಲಿ ಸಕಲ ವೈಕುಂಠದೊಳಗಿನ ವಿವರ ಒಂದುಂಟು ಕೇಳು ಸುವ್ವಿ ವೈಕುಂಠÀದೊಳಗಿನ ವಿವರ ಒಂದುಂಟು ಕೇಳು ವಾದಿ ಸಾಕು ಸಾಕು ನಾಲ್ಕುವಿಧ ಮುಕ್ತಿಯುಂಟಲ್ಲಿ ಸುವ್ವಿ 8 ಶ್ರವಣಕೀರ್ತನ ಹರಿಸ್ಮರಣೆ ಸೇವನ ಪೂಜನ ವಂದನ ಹರಿದಾಸ್ಯ ಸಖ್ಯಮಾತ್ಮನಿವೇದನೆ ಸುವ್ವಿ [ಹರಿದಾಸ್ಯ ಸಖ್ಯಮಾತ್ಮ ನಿವೇದನೆಗಳು ತಮ್ಮ] ಅರ್ಥ ಕೂಡೊಂಬತ್ತುಭಕ್ತಿ ಸತ್ಯ ಉಂಟು ಸುವ್ವಿ 9 ಜೀವೇಶ[ನೊಂದು] ಹರಿನಿರ್ಗುಣನೆಂದು ಅಪೂರ್ಣ ಗುಣನೆಂದು ಬ್ರಹ್ಮಾದಿಗಳೊಂದು ಸುವ್ವಿ ಬ್ರಹ್ಮಾದಿಗಳೊಂದು ಸಮರಧಿಕಾರ ಅವತಾರ ಎಲ್ಲ ಒಂದೆ ಎಂಬುವಗೆ ಸುವ್ವಿ 10 ಅವತಾರವೆಲ್ಲ ಅಂಶವತಾರವೆಂದ ಹರಿಭಕ್ತರಲ್ಲಿ ಕೋಪ ಸುವ್ಯಕ್ತವಾಯಿತು ಸುವ್ವಿ ಕೋಪ ಸುವ್ಯಕ್ತವಾಯಿತು ವಾದಿ ಹರಿಭಕ್ತರೊಡನೆ ಕೋಪಂಗಳು ವ್ಯರ್ಥವಾಯಿತು ಸುವ್ವಿ 11 ಪಂಚಮಹಾಭೂತ ದೇಹ ಸಂಚಯರೆಲ್ಲ ಸಂಚಿತಾದಾ ಕರ್ಮಗಳ ಸಂಚಯರೆಲ್ಲ ಸುವ್ವಿ ಸಂಚಿತಾದಾ ಕರ್ಮಗಳ ಸಂಚಯರೆಲ್ಲ ಮುಕ್ತರ ದೇಹವೆಲ್ಲ ಸುಖದ ಸಂದೋಹವಂತೆ ಸುವ್ವಿ 12 ಶರೀರದಲ್ಲಿ ಎಪ್ಪತ್ತೆರಡು ಸಾವಿರ ನಾಡಿಗಳಲ್ಲಿ ಪಿರಿಯವಾದವು[ನೂರೊಂದು] ಐದು ಸುವ್ವಿ ಪಿರಿಯವಾದವು[ನೂರೊಂದು] ಐದು ಮೂರು ಒಂದು ಈ ಪರಿಯಾಗಿ ಇಪ್ಪುವಂತೆ ಸುವ್ವಿ 13 ಇಳಾನಾಡಿ ಸಾವಿರ ಸೀಳುಮಾಡಿ ಅದರೊಳು ಸೀಳುಮಾಡಿದರೇಳು ವಿರಳನಂತೆ ಸುವ್ವಿ ಸೀಳುಮಾಡಿದರೇಳು ವಿರಳನಂತೆ ನಾಡಿಯಲ್ಲಿ ರಕ್ತವರ್ಣನಾಗಿ ನಾರಾಯಣನಿಹ್ಯ ಸುವ್ವಿ 14 ಒಂದುನಾಡೀ ಪೆಸರು ಸುಷುಮ್ನನಾಡಿಯೆಂಬರು ಅದರಂತರ ಕಡೆಯಲಿ ರಂಧ್ರವಂತೆ ಸುವ್ವಿ ಅದರಂತರ ಕಡೆಯಲಿ ರಂಧ್ರÀ್ರವಂತೆ ನಾಡಿಯಲಿ ಕಮಲ ಮಧ್ಯದಲಿ ತಾ ವಿಮಲನಂತೆ ಸುವ್ವಿ 15 ನಾಡಿ ಮೂಲದೊಳು ನಾಲ್ಕುದಳದ ಕಮಲವುಂಟು [ನೀಲ]ವರ್ಣದಿಂದ ಸಂಪೂರ್ಣನಂತೆ ಸುವ್ವಿ [ನೀಲ]ವರ್ಣದಿಂದ ಸಂಪೂರ್ಣ[ನೀಲವರ್ಣ ಅನಿರುದ್ಧ] ನಲ್ಲಿ ತಾ ವಾಸನಂತೆ ಸುವ್ವಿ 16 ಪೊಕ್ಕುಳಲಿ ಆರುದಳ ಇಕ್ಕ್ಕು ರೀತಿಯಿಂದಲೇಳು [ಬಿಂಕನಾದ] ಸಂಕರ್ಷಣ ಮುಖ್ಯನಂತೆ ಸುವ್ವಿ [ಬಿಂಕನಾದ ಸಂಕರ್ಷಣ] ಮುಖ್ಯನಂತೆ ಜೀವಗೆ ಪಿಂಗಳ ವರ್ಣನಾಗಿ ಹಿಂಗದಿಹ ಸುವ್ವಿ 17 ಇಡಾನಾಡಿ [ಉದೀಚಿ] ಪಿಂಗಳ ದಕ್ಷಿಣದಲಿ ಪ್ರತೀಚಿ [ವಜ್ರಿಕೋ ಪೂರ್ವಾ ಅಂತೆ] ಸುವ್ವಿ ಪ್ರತೀಚಿ ವಜ್ರಿಕೋದೀಚಿ ಬ್ರಹ್ಮನಾಡಿ ಸುತ್ತಾ ಪಂಚನಾಡಿಗಳ ಪಂಚರೂಪಗಳೆ ಸುವ್ವಿ 18 ಎಂಟುದಳ ಕೆಂಪು ಉಂಟು ಹೃದಯ ಕಮಲದಲಿ ವೈಕುಂಠಪತಿ ಚತುರನ ಮಂಟಪವೆ ಸುವ್ವಿ ವೈಕುಂಠಪತಿ ಚತುರನ ಮಂಟಪದ ಮಧ್ಯದಲಿ ವಾಯು ಜೀವರಿಗೆ ಸಹಾಯನಂತೆ ಸುವ್ವಿ 19 ಕೂದಲ ಕೊನೆಯ ಹತ್ತು ಸಾವಿರ ವಿಧವನೆಮಾಡಿ ಜೀವ ಪರಿಮಾಣ ಒಂದೆ ಕಂಡ್ಯ ಸುವ್ವಿ ಜೀವ ಪರಿಮಾಣ ಒಂದೆ ಕಂಡ್ಯ ಚತುರನ ಅಂಗುಷ್ಟದÀಷ್ಟು ಜೀವ [ಅಂಶನಂತೆ] ಸುವ್ವಿ 20 ಸ್ಥೂಲಾಂಗುಷ್ಠ ಪರಿಮಾಣ ಪ್ರಾಜ್ಞನಾದ ನಾರಾಯಣ ಹೃದಯಕಮಲದ ಒಳಗೆ ವಿಮಲನಂತೆ ಸುವ್ವಿ ಹೃದಯಕಮಲದ ಒಳಗೆ ವಿಮಲನಂತೆ [ಜೀವಂಗಾ ರೂಪದಲಿ] ಹರಿ ತಾ ರಕ್ಷಿಪನಂತೆ ಸುವ್ವಿ 21 ಹೃದಯಾಕಾಶದಲಿ ಪ್ರಾದೇಶ ಪರಿಮಾಣ ಆದಿ ಪುರುಷನಿಹ್ಯ ಈ ವಿಧವಾಗಿ ಸುವ್ವಿ ಆದಿ ಪುರುಷನಿಹ್ಯ ಈ ವಿಧವಾಗಿ ಜೀವಗೆ ಗೃಹದೋಪಾದಿಯಲಿ ಹರಿ ರಕ್ಷಕನಂತೆ ಸುವ್ವಿ 22 ಕಂಠದೇಶದಲಿ ಉಂಟು ತೈಜಸಮೂರ್ತಿ ಕರ ಹತ್ತೊಂಬತ್ತು ಶಿರಗಳು ಸುವ್ವಿ ಕರ ಹತ್ತೊಂಬತ್ತು ಶಿರಗಳು ಮಧ್ಯದಲ್ಲಿ ಕರಿಮುಖ ಹಸ್ತಿಯಾಗಿಪ್ಪನಂತೆ ಸುವ್ವಿ 23 ಕಿರುನಾಲಗೆಯಲ್ಲಿ ಎರಡುದಳ ಕಮಲ ಅರವಿಂದ ಪದ್ಮದಲಿ ನಾರಾಯಣನಿಹ್ಯ ಸುವ್ವಿ ಅರವಿಂದ ಪದ್ಮದಲಿ ನಾರಾಯಣನಿಹ್ಯ ಹರಿಯು ರೂಪವೆಲ್ಲವಾಗಿ ಇಪ್ಪನಂತೆ ಸುವ್ವಿ 24 ದÀಕ್ಷಿಣಾಕ್ಷಿಯಲಿ ಲಕ್ಷಣ ವಿಶ್ವಮೂರ್ತಿ ಶಿಕ್ಷಕನಾಗಿ ಜೀವರ ವಂಶರಕ್ಷಕನಂತೆ ಸುವ್ವಿ ಜೀವರ ವಂಶರಕ್ಷಕನನ್ನೆ [ಜಾಗರವ ಕಾಣಿಸೋನಷ್ಟೆ] ವಾಣಿ ನಿಪುಣನಂತೆ ಸುವ್ವಿ 25 ಈ ದೇವರು ಪ್ರಾಜ್ಞನಾದ ಹರಿಯ ಕೂಡಿ ನಿದಾನಿಸಲು ಜೀವಂಗೆ ಸುಖತೇಜಸವು ಸುವ್ವಿ ನಿದಾನಿಸಲು ಜೀವಂಗೆ ಸುಖತೇಜಸವು ಅನೇಕಾಗಿ ತೈಜಸನಲ್ಲಿ ಸ್ವಪ್ನಭಾಗ್ಯ ಸುವ್ವಿ 26 ಹುಬ್ಬುಗಳ ಮಧ್ಯದಲಿ ಶುಭ್ರ ನಾಲ್ಕುದಳ ಕಮಲ ಅನಿರುದ್ಧ ನೀಲಾಭ್ರವರ್ಣ ಸುವ್ವಿ ಅನಿರುದ್ಧ ನೀಲಾಭ್ರವರ್ಣನಾಗಿ ಹರಿ ಅಲ್ಲಿ ಅದೃಶ್ಯವಾಗಿರುವನಂತೆ ಸುವ್ವಿ 27 ಶಿರದಲ್ಲಿ ಶುಭ್ರ ಹನ್ನೆರಡುದಳ ಕಮಲ ಅರುಣವರ್ಣನಾದ ನಾರಾಯಣನಿಹ್ಯ ಸುವ್ವಿ ಅರುಣವರ್ಣನಾದ ನಾರಾಯಣನಿಹ್ಯ ಹರಿಯು ಈ ಪರಿಯಲಿ ತಿಳಿದವರಧಿಕರಂತೆ ಸುವ್ವಿ 28 ಬ್ರಹ್ಮಹತ್ಯ ಶಿರಸ್ಕಂಚ ಸ್ವರ್ಣಸ್ತೇಯ ಭುಜದ್ವಯಂ ಸುರಾಪಾನ ಹೃದಾಯುಕ್ತಂ ಗುರುತಲ್ಪ ಸುವ್ವಿ ಸುರಾಪಾನ ಹೃದಾಯುಕ್ತಂ ಗುರುತಲ್ಪ ಕಟಿದ್ವಯಂ ಪಾದ ಪಾಪರೂಪಗಳೆ ಸುವ್ವಿ29 ಪಾತಕ ಪ್ರತ್ಯಂಗಗಳು ಉಪಪಾತಕ ರೋಮಂಗಳು ಪಾಪಪುರುಷ ರಕ್ತನೇತ್ರ ನೀಲಪುರುಷ ಸುವ್ವಿ ಪಾಪಪುರುಷ ರಕ್ತನೇತ್ರ ನೀಲಪುರುಷನಾಗಿ ವಾಸ ವಾಮಕುಕ್ಷಿಯಲಿ ನ್ಯಾಸವಂತೆ ಸುವ್ವಿ 30 ಪುರುಷ ಷೋಡಶನಾದ ಷಟ್ಕೋಣದಲ್ಲಿ ಪ್ರದ್ಯುಮ್ನನಿಹ್ಯ ತ್ರಿಕೋಣದಲಿ ಧ್ಯಾನ ಸಂಕರ್ಷಣ ಕೊಡುವ ಸುವ್ವಿ ತ್ರಿಕೋಣದಲಿ ಧ್ಯಾನ ಸಂಕರ್ಷಣ ಕೊಡುವ ದೇಹ ಪವಿತ್ರ [ವಾಸುದೇವರಲ್ಲಿ ಸುವ್ವಿ]31 ಹನ್ನೆರಡಂಗುಲಮೇಲೆ ಹನ್ನೆರಡುದಳ ಕಮಲ [ಪ್ರಪÀನ್ನರಿಗೆ] ಮೋಕ್ಷ ಪ್ರಸನ್ನ ಕೊಡುವ ಸುವ್ವಿ [ಪ್ರಪÀನ್ನರಿಗೆ] ಮೋಕ್ಷ ಪ್ರಸನ್ನ ಕೊಡುವ ತುರಿಯ ಸಿತದಳದಲ್ಲಿ ನಿಧಾನಿಸಲು ಸುವ್ವಿ 32 ಮುಖ್ಯಪ್ರಾಣನೆಂಬೊ ಗುರುವು ಹರಿಗೆ ಸಖ್ಯನಾದ ಬಂದ ದುಃಖ ಪರಿಹರಿಸಿ ಸುಖಬಡಿಸುವ ಸುವ್ವಿ ಬಂದ ದುಃಖ ಪರಿಹರಿಸಿ ಸುಖಬಡಿಸುವ ಮಾರುತನು ಹನುಮ ಭೀಮಸೇನ ರೂಪಗಳು ಸುವ್ವಿ 33 ಮೂರನೆ ಅವತಾರ ಆನಂದತೀರ್ಥರು ವೀರವೈಷ್ಣವರಿಗೆ ಆದಿಗುರುಗಳು ಸುವ್ವಿ ಪಾದ ನೆನೆದರೆ ಘೋರ ಸಂಸಾರವನು ನೀಗಿಸುವನು ಸುವ್ವಿ 34 ಘೋರ ಸಂಸಾರವನು ನೀಗಿಸುವ ಹಯವದನ ತನ್ನ ಪಾದದ ಸಮೀಪದಲಿಟ್ಟು ಸಲಹುವ ಸುವ್ವಿ ಪಾದದ ಸಮೀಪದಲಿಟ್ಟು ಸಲಹುವ ಹಯವದನ ಖೇದಗಳ ಬಿಡಿಸಿ ರಕ್ಷಿಸುವ ಸುವ್ವಿ 35
--------------
ವಾದಿರಾಜ