ಒಟ್ಟು 19050 ಕಡೆಗಳಲ್ಲಿ , 136 ದಾಸರು , 7377 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾಸನಾಗೋ ಭವಪಾಶನೀಗೋ - ವಿಶೇಷನಾಗೋ ಪ ಏಸೊ ಕಾಯಂಗಳ ಕಳೆದು ಎಂಬತ್ತ್ನಾಲ್ಕು ಲಕ್ಷ ಜೀವರಾಶಿಯನ್ನು ದಾಟಿ ಬಂದೆ ಈ ಶರೀರ ತಾನಲ್ಲ ತನ್ನದಲ್ಲಆಶೆಯು ತರವಲ್ಲ ಸ್ಥಿರವಲ್ಲ ಮುಂದೆ ಬಾಹೋದಲ್ಲಆಶಾಕ್ಲೇಶ ದೋಷವೆಂಬ ಅಬ್ಧಿಯೊಳು ಮುಳುಗಿ ಯಮನಪಾಶಕ್ಕೊಳಗಾಗದೆ ನಿರ್ದೋಷಿಯಾಗೊ - ಸಂತೋಷಿಯಾಗೊಅ ಕಾಶಿ ವಾರಣಾಸಿ ಕಂಚಿ ಕಾಳಹಸ್ತಿ ರಾಮೇಶ್ವರಏಸು ದೇಶ ತಿರುಗಿದರೆ ಬಾಹೋದೇನೊ - ಅಲ್ಲಿ ಆಹೋದೇನೊದೋಷನಾಶೆ ಕೃಷ್ಣವೇಣಿ ಗಂಗೆ ಗೋದಾವರಿ ಭವನಾಶಿ ತುಂಗಭದ್ರೆ ಯಮುನೆ ವಾಸದಲ್ಲಿ - ಉಪವಾಸದಲ್ಲಿಮೀಸಲಾಗಿ ಮಿಂದು ಜಪತಪ ಹೋಮನೇಮಗಳಏಸು ಬಾರಿ ಮಾಡಿದರೂ ಫಲವೇನೊ - ಇದು ಚೆಲುವೇನೊವಾಸುದೇವನೆಂಬ ಒಳಗಿಹ ಹಂಸನ ಸೇರಿಲೇಸನುಂಡು ಮೋಸಗೊಳದೆ ಮುಕ್ತನಾಗೊ - ನೀ ಶಕ್ತನಾಗೊ1 ಅತ್ತಲೋ ಇತ್ತಲೋ - ಎತ್ತಲೋ ಈ ಸಂಸಾರಬತ್ತಲೆಗೆ ಬತ್ತಲೆ ನಿತ್ಯವಲ್ಲ - ಪರಿಮಿತಿ ಇಲ್ಲಕತ್ತಲೆ ಕಾವಳದೊಳು ಕಾಣಲಾರದೆ ನೀನುಸತ್ಯವೆಂಬ ದಾರಿಯನು ಸೇರಲಿಲ್ಲ - ಲೇಸು ತೋರಲಿಲ್ಲಉತ್ತಮ ಅ ಉ ಮ ಎಂಬ ಓಂಕಾರ ಬೀಜಾಕ್ಷರಚಿತ್ತದಲಿ ಗ್ರಹಿಸು ನೀ ಬಿಡಬೇಡ - ಬಿಟ್ಟು ಕೆಡಬೇಡಹೊತ್ತಾರೆಯಲೊ ಬೈಗಿನಲೊ ಆಗಲೊ ಈಗಲೊ ಕಾಯನಿತ್ಯವೆಂದು ಸ್ಥಿರವೆಂದು ನಂಬಬೇಡ - ನಿನಗೆ ಡಂಬ ಬೇಡ 2 ಆಯಿತೊ ಹೋಯಿತೊ ಏನಾಯಿತೊ ಈ ದೇಹಕ್ಕೆತಾಯಿ ಯಾರೊ ತಂದೆ ಯಾರೊ ಮಡದಿ ಯಾರೊ ಮಕ್ಕಳ್ಯಾರೊಮಾಯದೊಳು ಸಿಲುಕಿ ಬಲು ಕಾಲದಿಂದ ಶ್ರೀರಘುರಾಯನೆಂಬ ವಸ್ತುವಿನ ಸ್ಮರಣೆ ಬಿಟ್ಟು - ಭವದಿ ಮಮತೆ ಇಟ್ಟುನಾಯ ಬಾಯ ಅರಿವೆಯಂತೆ ನಾನಾ ಕೋಟಲೆಯಲಿ ಬಿದ್ದುಬಾಯಿ ಬಾಯಿ ಬಿಡುತಲಿ ಸಾವುದೇನೊ - ನೀ ನೋವುದೇನೊತ್ರಾಯಿ ತ್ರಾಯಿ ತ್ರಾಯಿಯೆಂದು ತ್ರೈಲೋಕ್ಯದೊಡೆಯ ಪುಣ್ಯದಾಯಕನ ಹೊಂದಿ ನೀ ಧನ್ಯನಾಗೊ - ಮುಕ್ತ ಮಾನ್ಯನಾಗೊ 3 ಸಿರಿ ಕಮಲೇಶನನ್ನುಒಂದು ಬಾರಿ ಅರುಹಿಂದ ನೆನೆಯಲಿಲ್ಲ - ಮನ ತಣಿಯಲಿಲ್ಲಬಂದು ಬಂದು ಭ್ರಮೆಗೊಂಡು ಮಾಯಾಮೋಹಕೆ ಸಿಕ್ಕಿನೊಂದು ಬೆಂದು ಒಂದರಿಂದ ಉಳಿಯಲಿಲ್ಲ - ಬಂಧ ಕಳೆಯಲಿಲ್ಲಸಂದೇಹವ ಮಾಡದಿರು ಅರಿವು ಎಂಬ ದೀಪ ಹಿಡಿದುಇಂದು ಕಾಣು ದೇಹದಲಿ ಪಿಂಡಾಂಡ - ಹಾಗೆ ಬ್ರಹ್ಮಾಂಡಇಂದಿರಾ ರಮಣನ ಧ್ಯಾನವನ್ನು ಮಾಡಿ ವಿವೇಕದಿ ಮುಕುಂದನಿಂದ ಮುಕುತಿಯ ಬೇಡು ಕಂಡ್ಯ - ನೀ ನೋಡು ಕಂಡ್ಯ 4 ತುಂಬಿ ಲಂಡ
--------------
ಕನಕದಾಸ
ದಾಸನಾದ ಮೇಲೆ ಈಶ ದೂರುಂಟೆ ಆಸೆನೀಗಲು ಸುಖದ ರಾಶಿ ಬೇರುಂಟೆ ಪ ದೋಷಕ್ಕಂಜಿದಮೇಲೆ ಸನ್ಮಾರ್ಗ ಬೇರುಂಟೆ ಕ್ಲೇಶ ನೀಗಿದಮೇಲೆ ಪುಣ್ಯ ಇನ್ನುಂಟೆ ಹೇಸಲು ಪ್ರಪಂಚಕೆ ಸತ್ಸಂಗ ಬೇರುಂಟೆ ವಾಸನ್ಹಿಂಗಿದಮೇಲೆ ವೈರಾಗ್ಯವುಂಟೆ 1 ಜ್ಞಾನಗೂಡಿದಮೇಲೆ ಮತ್ತೆ ತೀರ್ಥಗಳುಂಟೆ ಧ್ಯಾನವಿಡಿದಮೇಲೆ ಅನ್ಯಮೌನುಂಟೆ ಹೀನಗುಣ ತೊಳೆದಮೇಲಿನ್ನು ಸ್ನಾನಗಳುಂಟೆ ಮಾನಸವು ಶುದ್ಧಿರಲು ಬೇರೆ ಮಡಿಯುಂಟೆ 2 ಕೈವಲ್ಯ ಇನ್ನುಂಟೆ ಶರಣು ಪೊಂದಿದಮೇಲೆ ಪರಮಾರ್ಥ ಬೇರುಂಟೆ ಅರಿವನರಿತರೆ ಬೇರೆ ಪರಲೋಕ ಇರುಲುಂಟೆ ಶರಣರೊಲಿದಮೇಲ್ಹರಿಚರಣ ಹೊರತುಂಟೆ 3 ಸಫಲನಾದಮೇಲೆ ವ್ರತನೇಮ ಬೇರುಂಟೆ ಗುಪಿತವರಿತಮೇಲೆ ಪರತತ್ವವುಂಟೆ ಅಪರೂಪ ಧ್ಯಾನಿರಲು ತಪ ಬೇರೆ ಇರಲುಂಟೆ ಅಪರೋಕ್ಷಜ್ಞಾನ್ಯಾದ ಮೇಲೆ ಮಿಕ್ಕಸಾಧನುಂಟೆ 4 ಮಾನಹೋದಮೇಲೆ ಮರಣ ಬೇರಿರಲುಂಟೆ ನಾನತ್ವ ಪೋದಮೇಲೆ ಸತ್ಕರ್ಮವುಂಟೇ ಧ್ಯಾನದಾಯಕ ಮಮಪ್ರಾಣ ಶ್ರೀರಾಮನಡಿ ಖೂನ ತಿಳಿದ ಮೇಲೆ ಮುಕ್ತಿ ಬೇರುಂಟೆ 5
--------------
ರಾಮದಾಸರು
ದಾಸನಾದೆನು ಶ್ರೀಶ ದಾಸನಾದೆನು ವಾಸುದೇವನಂಘ್ರಿ ಪಿಡಿದು ಹೇಸಿ ವಿಷಯ ಸುಖವನಳಿದು ದಾಸನಾದೆನು ಶ್ರೀಶ ದಾಸನಾದೆನು ಪ ಭಾರ ಪೊತ್ತು ಕೋರೆಯಿಂದಲಿಳಿಯ ಪಿಡಿದು ಘೋರ ರೂಪವನ್ನು ತಾಳ್ದ ನಾರಸಿಂಹನನ್ನು ನುತಿಪ 1 ತಿರಿದು ನೋಡಿ ಪರಶುವಿಡಿದು ಭರದಿ ಪತ್ತು ತಲೆಯನಳಿದು ಮರಳು ಕಂಸನನ್ನೆ ತುಳಿದ ವರದ ಕೃಷ್ಣನನ್ನೆ ಭಜಿಪ ದಾಸ 2 ದಿಟ್ಟ ಶ್ರೀ ನರಸಿಂಹ ವಿಠ್ಠಲನ್ನ ಪಾಡುವಂಥ ದಾಸ 3
--------------
ನರಸಿಂಹವಿಠಲರು
ದಾಸರ ದೂಷಿಪರೊ ಕುಜನರು ಹರಿ- ದಾಸರ ನಿಂದಿಪರೊ ಪ ಏಸೇಸು ಜನುಮದ ದೋಷರಾಶಿಗಳೆಲ್ಲ ನಾಶವಗೈÀವ ಶ್ರೀಕೇಶವನಣುಗರ ಅ.ಪ ಮಂದಮತಿಗಳೆಲ್ಲರೂ ಸಜ್ಜನರ ನಿಂದನೆಯೊಳಗಿಹರೊ ಮುಂದಿನ ಬವಣೆಗಳೊಂದೆಣಿಸದಲೆ ಮು- ಕುಂದನ ಭಕುತರ ಸಂದಣಿ ಸೇವಿಪ 1 ಇಂದಿರೇಶನ ಗುಣವ ಪಾಡುತಲಿ ಆ- ನಂದದೊಳೋಲ್ಯಾಡುವ ನಂದಕಂದನ ಲೀಲೆಯಿಂದ ಹಗಲಿರುಳು ಮು- ಕುಂದನ ಕುಣಿಸುವರೊ ದಣಿಯುವರೊ 2 ಆರು ಮಂದಿಗಳ ಗೆದ್ದು ಹೃದಯದಲ್ಲಿ ಶ್ರೀ- ಮಾಧವನನು ಕಾಂಬರ ಶ್ರೀಧರನಂಘ್ರಿಗಳಾದರದಿಂ ಭಜಿಸಲು ಸಾಧು ಗುರುಗಳು ಇವರು ಸುಂದರರು 3 ಸುರಮುನಿವರ ಪ್ರಿಯನ ಭಕ್ತರಿಗೆಲ್ಲ ವರಗಳ ಕೊಡುತಿಹನ ಪರಮಪಾವನ ಮೂರುತಿಯನೆ ಕೊಂಡಾಡುತ ದುರಿತಗಳಳಿಯುವರ ಪಾವನರ 4 ಕರೆದು ಭಕ್ತರ ಸಲಹುವ ಕರುಣದೊಳು ಮೂ- ಪರಮ ಗುರುಗಳ ಮುಖ್ಯ ಕಾರಣವು ಪಡೆದವರು ಶ್ರೀ-ಕಮಲನಾಭ ವಿಠ್ಠಲನೆನ್ನುವರು5
--------------
ನಿಡಗುರುಕಿ ಜೀವೂಬಾಯಿ
ದಾಸರ ನೋಡಿರೈ ಮನದಭಿಲಾಷೆಯ ಬೇಡಿರೈ | ಭಾಸುರ ಕಾರ್ಪರಾಧೀಶನಾ ಸನ್ನಿಧಿ ವಾಸ ಕೃತನತ ಪೋಷಾ || ಹಿಂದೆ ಪ್ರಲ್ಹಾದನು ಮಾತೆಯ ಗರ್ಭದೊಳಿರಲು ಮುಂದೆ ಈತ ಹರಿಭಕ್ತಾಗ್ರೇಸರನೆಂದು ಮನಸ್ಸಿಗೆ ತಂದು | ಛಂದದಿ ಹರಿಪರನೆಂಬೊ ತತ್ವ ಬೋಧಿಸಿದ ಜ್ಞಾನವ ಗರೆದ || ವೃಂದಾರಕ ಮುನಿಯೆಂದಿವರನು ಭಾವಿಸುತ ಅಭಿವಂದಿಸುತ 1 ಬೋಧ ಸಚ್ಛಾಸ್ತ್ರ ಧರ್ಮವ ಮುದದಿ ತಿಳಿಗನ್ನಡದದಿ ಸತಿ ಸುಳಾದಿ ರೂಪದಿ ವಿರಚಿಸಿ ದಯದಿ ಸಾರುತ ಜಗದಿ | ಬಲುವಿಧ ಭವದೊಳು ಬಳಲುವ ಸಜ್ಚನ ಕೊಲಿದ ಕಲುಷವ ಕಳೆದ | ಇಳೆಯೊಳು ಇವರು ಪೇಳಿದ ವಚನವು ವೇದ ದೊಳಗಿನ ಸ್ವಾದ 2 ಈ ಮಹಾಕ್ಷೇತ್ರದ ಸ್ವಾಮಿ ನರಸಿಂಹ ಪಾದ ಅರ್ಚಕರಾದ | ಭೀಮಾರ್ಯರ ಸದ್ಭಕ್ತಿಗೆ ನೆಲಸಿಹರಿಲ್ಲಿ ಅನುದಿನದಲ್ಲಿ || ನೇಮದಿ ತನ್ನನು ಸೇವಿಪ ಭಕುತರ ಕರವ ಕರುಣದಿ ಪಿಡಿವ || ಜಗದೊಳು ಮೆರೆದ 3
--------------
ಶಾಮಸುಂದರ ವಿಠಲ
ದಾಸರ ಭಾಗ್ಯವಿದು ಪ ತಂದೆ ಮುದ್ದು ಮೋಹನ ದಾಸರ ಭಾಗ್ಯವಿದು ಅ.ಪ. ಕರಿಗಿರಿ ನರಹರಿ ಸಂದರ್ಶನವು | ನರಹರಿ ಭಕುತರ ವಿಹಿತದಸೇವೆ |ಪರಿಪರಿ ಗೈಯ್ಯುತ ಹಿಗ್ಗುತ ನಾನು | ಧರಿಸಿರುವಂಕಿತ ಭಾಗ್ಯವು ಎಲ್ಲಾ 1 ಉರುಗಾದ್ರಿವಾಸನ ಶರಣರ ಕೂಡೆ | ಸರಸದಿ ಕೇಳುತ ಹರಿ ಮಹಿಮೆಯನುಉರುತರ ಸುಖಸಂತೋಷದಿ ಕೀರ್ತನೆ | ಹಿರಿದಾಗಿ ಪಾಡುತ ನರ್ತಿಪುದೆಲ್ಲ2 ಭವನಿಧಿ ದಾಟಿಪ ಹವಣೆಯು ಎನಿಸುವ | ಭುವನ ಮೋಹನನ | ಗುಣರೂಪಗಳನವನವ ಕೀರ್ತನೆ ಸ್ತವನದಲಿ ಗುರು | ಗೋವಿಂದ ವಿಠಲ ನುಡಿಸುವುದೆಲ್ಲಾ 3
--------------
ಗುರುಗೋವಿಂದವಿಠಲರು
ದಾಸರ ಭಾಗ್ಯವಿದು-ಪುರಂದರ-ದಾಸರ ಭಾಗ್ಯವಿದು ಪ ತುಂಬಿ ಸೂಸುತಲಿದೆ ಅ.ಪ ಭೂಸುರ ಜನುಮದಿ ಬಂದು ಬೆಳೆದು ಉಪ- ದೇಶಗೊಂಡು ಮಧ್ವಮತ ಪೊಂದಿ ಲೇಸಾಗಿ ಭಕ್ತಿ ವಿರಕ್ತಿ ಜ್ಞಾನದ ವಿ- ಶೇಷವಾಗಿ ನಾ ಬಾಳುವದೆಲ್ಲ 1 ಸಜ್ಜನ ಸಂಗತಿ ಮಾಡಿ ದುರುಳಜನ ವರ್ಜನಗೈದು ಸತ್ಕರ್ಮಗಳ ಆರ್ಜಿಸಿ ನಾಮ ಮುದ್ರೆ ಹಗಲು ಇರಳು ನಿ ರ್ಲಜ್ಜನಾಗಿ ನಾ ಬಾಳುವುದೆಲ್ಲ 2 ಶ್ರವಣ ಕೀರ್ತನೆ ವಂದನೆ ಸ್ತೋತ್ರ ಹರಿನಾಮ ತವಕದಿಂದ ನುಡಿಯುವ ಕವನ ನವನವ ವಚನವು ಮಂತ್ರ ಸಂಕಲ್ಪವು ಸವಿದು ಸ್ಮರಿಸಿ ನಾ ಬಾಳುವುದೆಲ್ಲ 3 ಯಾತ್ರೆ ತೀರ್ಥ ದಿವ್ಯ ದಾನಧರ್ಮಂಗಳು ಕ್ಷೇತ್ರ ಮೆಟ್ಟಿ ಬಹ ಸಂಭ್ರಮವು ಮಿತ್ರರ ಕೂಡಾಡಿ ಹರಿಪರನೆಂದು ಸ- ತ್ಪಾತ್ರನಾಗಿ ನಾ ಬಾಳುವುದೆಲ್ಲ 4 ಹರಿದಿನದುಪವಾಸ ಜಾಗರಣೆ ಪಾರಣಿ ಗುರು ಹಿರಿಯರಲಿ ವಿಹಿತಸೇವೆ ಹಿರಿದಾಗಿ ಮಾಡೋಡು ಪರಿಪರಿಯಿಂದಲಿ ಹರುಷದಿಂದಲಿ ನಲಿದಾಡುವುದೆಲ್ಲ 5 ಷಡುರಸಭೋಜನ ದಿವ್ಯವಸನ ನಿತ್ಯ ಉಡುವುದು ಹೊದೆವುದು ಹಸನಾಗಿ ತಡೆಯದೆ ಜನರಿಂದ ಪೂಜೆಗೊಂಡು ಸುಖ- ಬಡಿಸುತಿರುವ ವಿಚಿತ್ರಗಳೆಲ್ಲ 6 ಮನವೆ ಹಿಗ್ಗದಿರು ಹಿಯ್ಯಾಳಿಕೆಯಿಂದ ಗುಣಿಸಿಕೊ ಸುಖವಾವುದು ಲೇಶ ನಿನಗೆ ಸ್ವತಂತ್ರ ಎಂಬುದು ಕಾಣೆನೆಂದಿಗು ಗುಣನಿಧಿ ವಿಜಯವಿಠ್ಠಲನ ಪ್ರೇರಣೆಯೆಲ್ಲ 7
--------------
ವಿಜಯದಾಸ
ದಾಸರ ಮೊರೆ ಲಾಲಿಸೋ ವೆಂಕಟಾಚಲ ವಾಸ ಬಿನ್ನಪ ಲಾಲಿಸೊ ಪ ಲೇಸು ಭಕುತಿಯು ಮಾಡದಲೆ ಬಲು ಘಾಸಿಯಾಗುತ ಮನದಿ ನೊಂದು ದಾಸನಾಗದೆ ಕ್ಲೇಶಪಟ್ಟೆನೊ ಈಸುದಿನಗಳ ಕಳೆದೆನೊ ವೃಥಾ1 ತಳಿರು ಪೋಲುವ ನಿನ್ನಯ ಪಾದ- ಕ್ಕೆರಗದೆನ್ನಯ ಸಿರವು ದಣಿಯನೋಡದೆ ನಿನ್ನನು ಮಹಾಪಾಪ ಗಳನೆ ಮಾಡುತ ನೊಂದೆನು 2 ಅನಿಮಿಷೇಶನೆ ನಿನ್ನ ಮಹಿಮೆಯ ಕ್ಷಣಬಿಡದೆ ಧ್ಯಾನವನೆ ಮಾಡುವ ಅನಲಸಖತನಯನಿಗೆ ನಮಿಸುವೆ ಕ್ಷಣ ಬಿಡದೆ ಎನ್ನ ಪೊರೆವ ಕರುಣಿ3 ಕಟಿಯ ಕಾಂಜಿಯ ದಾಮವು ನವರತ್ನದ ಸ್ಫ್ಪಟಿಕ ಮುತ್ತಿನ ಹಾರವು ಲಕುಮಿ ಧರಿಸಿದ ವಕ್ಷ ಕೌಸ್ತುಭಹಾರ ಸ್ಫುಟದಿ ಶೋಭಿಪ ಉರವು 4 ವಟುವಿನಂದದಿ ಪ್ರಕಟನಾಗುತ ಕುಟಿಲ ದಿತಿಜರಿಗಖಿಳ ವಿಧ ಸಂ- ಕಟಗಳನೆ ಸಂಘಟನೆ ಮಾಡುವ ನಟನ ತೆರ ವಟಪತ್ರಶಾಯಿ 5 ನೊಸಲ ಕಸ್ತೂರಿ ತಿಲಕ ರಂಜಿಸುವ ಚಂ- ಪಕವ ಪೋಲುವ ನಾಸಿಕ ಎಸೆದು ಶೋಭಿಪ ಮೌಕ್ತಿಕ ಪೋಲುವ ದಂತ ನಸುನಗುತಿಹ ಹಸನ್ಮುಖ6 ಶಶಿಯ ಧರಿಸಿದ ಅಸಮ ಭಕುತನು ನಿಶಿಹಗಲು ತನ್ನ ಸತಿಗೆ ಬೆಸಸಿದ ಅತಿಶಯದ ಮಹಿಮೆಯನೆ ಕೇಳುವ ಮತಿಯ ಕೊಡು ಮನ್ಮಥನ ಪಿತನೆ 7 ಚಿತ್ತದೊಳಗೆ ನಿನ್ನಯ ಪಾದಾಂಬುಜ ಭಕ್ತಿಯಿಂದಲಿ ಕಾಂಬುವ ಭಕ್ತಜನರ ವೃಂದವ ಕರುಣದಿ ಕಾಯ್ವ ವಿಷ್ಣು ಮೂರುತಿ ಕೇಶವ 8 ಎತ್ತನೋಡಿದರಿಲ್ಲ ನಿನ್ನ ಸಮ ಉತ್ತಮರ ಕಾಣುವುದೆ ಮಿಥ್ಯವೊ ಸತ್ಯವಿದು ಪುರುಷೋತ್ತಮನೆ ಎನ್ನ ಚಿತ್ತದಲಿ ನಲಿನಲಿದು ಶ್ರೀಶ 9 ಕಮಲಸಂಭವ ಪಿತನೆ ಪ್ರಾರ್ಥಿಸುವೆ ಶ್ರೀ- ರಮೆಧರೆಯರಿಂ ಸೇವ್ಯನೆ ಕ್ಷಣಬಿಡದಲೆ ನಿನ್ನನೆ ಚಿಂತನೆ ಮಾಳ್ಪ ಸುಜನರಿಗೊಲಿಯುವನೆ 10 ಶ್ರವಣ ಮನನಕೆ ಒಲಿವ ದೇವನೆ ದಿನದಿನದಿ ನಿನ್ನ ಮಹಿಮೆ ತೋರು ಶ್ರೀ- ಕಮಲನಾಭ ವಿಠ್ಠಲನೆ ಕರುಣದಿ ಶ್ರಮವ ಹರಿಸುಸುಧಾಮ ಸಖನೆ11
--------------
ನಿಡಗುರುಕಿ ಜೀವೂಬಾಯಿ
ದಾಸರ ಶಿಶು ನಾನು ಶ್ರೀಹರಿ ದಾಸರು ಶಿಶು ನಾನು ಪ ಹೇಸಿ ಪ್ರಪಂಚದ ವಾಸನಳಿದು ಜಗ ದೀಶನ ಶ್ರೀಪಾದದಾಸಾನುದಾಸರ ಅ.ಪ ಮರವೆ ಮಾಯ ತರಿದು ಲೋಕ ದರಿವಿನೊಳಗೆ ಬೆರೆದು ಪರಿಪರಿಯಿಂದಲಿ ನರಹರಿ ಚರಣವ ಸ್ಮರಣೆಯೊಳಿಟ್ಟು ಬಲು ಹಿರಿಹಿರಿ ಹಿಗ್ಗುವ 1 ಮೋಸಕ್ಲೇಶವನಳಿದು ಭವದ ಆಶಾಪಾಶತುಳಿದು ಸೋಸಿಲಿಂದ ಅನುಮೇಷ ಬಿಡದೆ ಹರಿ ಸಾಸಿರ ನಾಮಮಂ ಬೇಸರದ್ಹೊಗಳುವ 2 ಸತ್ಯ ಸನ್ಮಾರ್ಗಬಿಡದೆ ಮನವಂ ಎತ್ತ ಕದಲಗೊಡದೆ ನಿತ್ಯ ನಿರ್ಮಲಾತ್ಮ ಕರ್ತು ಶ್ರೀರಾಮನ ಅರ್ತು ಭಜಿಸುವಂಥ 3
--------------
ರಾಮದಾಸರು
ದಾಸರ ಸಖ ಮಾಡಂದೆ ಎನ್ನ ಧ್ಯಾಸದಿರಗಲದೆ ಶ್ರೀಹರಿ ತಂದೆ ಪ ಕನಕರಾಯನು ನಿಜದಾಸ ನಿನ್ನ ಘನತರ ಪ್ರಸನ್ನತೆ ಪಡೆದನುಮೇಷ ಅನುದಿನ ನಿಮ್ಮಯ ಘನಮಹಿಮೆಯನು ತೋರಿ ಮುನಿವ್ಯಾಸರಾಯರ ಮನವ ತಣಿಸಿದಂಥ 1 ಘನ ಸತ್ಯ ಕಬೀರದಾಸ ತನ್ನ ತನುಮನಧನವನ್ನು ನಿನಗರ್ಪಿಸೀತ ವನಿತೆಯನೊತ್ತಿಟ್ಟು ತನುಜಾತನನು ಕೊಂದು ಉಣಿಸಿ ಸಂತರಿಂ ಸುತನ ಪ್ರಾಣವ ಪಡೆದಂಥ 2 ವಾಸನಳಿದು ಪುರಂದಾಸ ತನ್ನ ನಾಶಬುದ್ಧಿಗೆ ನಾಚಿ ನೀಗಿ ಮನದಾಸೆ ಸೋಸಿಲಿಂ ತವಪಾದಧ್ಯಾಸ ಬಲಿಸಿ ಜಗದೀಶ ಹೇಸದೆ ನಿಮ್ಮನು ಗಿಂಡಿಲ್ಹೊಡೆದಂಥ 3 ವರನಾಮದೇವ ನಿಜದಾಸ ತನ್ನ ಪರಮಸಂತರಿಗೆಲ್ಲ ಪಾಲಿಸಿ ಭಾಷ ಸಮ ಗೌಪ್ಯದಿಂ ಪಂಪಾಪುರಿಗೈದಿರಲು ನಿನ್ನ ತಿರುಗಿ ಕರೆದೊಯ್ದು ಇರವ ಪೂರೈಸಿದಂಥ 4 ಬಲ್ಲಿದ ತುಕಾರಾಮದಾಸ ಬಲು ಕ್ಷುಲ್ಲಕರುಪಟಳ ಸಹಿಸಿ ಮನದಕ್ಲೇಶ ಎಲ್ಲವ ನೀಗಿ ಹರಿ ಪುಲ್ಲನಾಭನ ಪಾದ ದಲ್ಲೆ ಮನ ನಿಲ್ಲಿಸಿ ಉಲ್ಲಾಸದಿರುವಂಥ 5 ಬಗೆಯ ತಿಳಿದು ಜಗನ್ನಾಥ ನಿಮ್ಮ ಸುಗುಣದರಿದು ವ್ಯಾಧಿ ಕಳೆದುಕೊಂಡು ಪ್ರಮಥ ನಿಗಮಗೋಚರ ನಿನ್ನ ಬಗೆಬಗೆ ಪೊಗಳುತ ಜಗದಮಾಯವ ಗೆಲಿದು ಸೊಗಸಿನಿಂ ನಲಿವಂಥ 6 ಉದಧಿಜಿಗಿದ ಹನುಮಂತ ಮಹ ಪದುಮಾಕ್ಷಿಯಳ ಕಂಡು ನಮಿಸಿದ ಬಲವಂತ ಸದಮಲಾಂಗಿಗೆ ತನ್ನ ಹೃದಯಸೀಳಿದ್ಹಟದಿಂ ಪಾದ ತೋರಿಸಿದಂಥ 7
--------------
ರಾಮದಾಸರು
ದಾಸರ ಸಂಗವನಾ | ದಾಸರ ಸಂಗವ ಬೇಡುವೆ ನಾ | ಹರಿದಾಸರ ಸಂಗವನಾ ಪ ದಾಸರ ಸಂಗವ ಬೇಡುವೆ ನಾನಿನ್ನಾ | ಅನುದಿನ ಲೇಶನಿಸೀ ವಾಸುದೇವಚ್ಚುತ ಹರಿಯಂದು ನೆನೆಯುತ | ಹೇಸಿ ಜನರ ಮನಿ ಆಶೆಯ ಜರಿದಾ 1 ತಾಳ ಮೃದಂಗ ವೀಣಾದಿಯ ಸುಜನರ | ಮೇಳದಿ ಶ್ರೀಹರಿ ಚರಿತವನು | ಹೇಳುತ ಕೇಳುತ ಆನಂದ ಬಾಷ್ಪದಿ | ಆಳಿಯ ಹರುಷದಿ ತನುವನೆ ಮರೆವಾ 2 ವಂದ್ಯರು ಎಂದರಾನಂದವ ಬಡುತಲಿ | ಇಂದಿರೇಶನ ವಲುಮೆಯಂತಿಹದೋ | ಎಂದು ಮನದೊಳು ಸಂದೇಹ ಬಗಿಯದೆ | ವಂದಿಸಿ ಮುಂದಕ ಬಂದಪ್ಪಿಕೊಳುವಾ 3 ಸರ್ವರೊಳಗ ಹರಿ ಇರ್ವನು ಯನುತಲಿ | ಉರ್ವಿಲಿ ನಿಂದೆಯ ಜರಿದಿಹನು | ಗರ್ವವ ಹಿಡಿಯದೆ ಬಾಗಿದ ಭಕುತಿಯ | ಸುರ್ವಸಾರಾಯದ ಪರ್ವವನುಂಬಾ 4 ನಡಿಲೇಸು ನುಡಿಲೇಸು ಹಿಡಿದ ನೆರೆಲೇಸು | ಭವ ನಿಲ್ಲದು | ಸಾರಥಿ | ದೃಢದಲಿ ಕಂಡು ನನಗಿದೆ ಲೇಸು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಾಸರಾಗಿರಿ ದಾಸರಾಗಿರಿ ದಾಸರಾಗಿರಿ ಬೇಗನೆ ಪ. ದಾಸರಾಯರ ಪದವ ನಂಬಿ ವಾಸುದೇವಗೆ ಬೇಗನೆ ಅ.ಪ ದುಷ್ಟಮನ ಕಲ್ಮಷವ ಕಳದು ಸೃಷ್ಟಿಕರ್ತನ ಭಜನೆ ಮಾಡುತ ಕಷ್ಟಗಳನೀಡಾಡಿರಿ 1 ತಂದೆ ಮುದ್ದುಮೋಹನರೆಂ- ತೆಂದು ಮೆರೆಯುವ ಗುರುಗಳ ದ್ವಂದ್ವ ಪಾದವ ಭಜಿಸಿ ಈ ಭವ ಬಂಧನವನೀಗಾಡುತ 2 ಜನನ ಮರಣ ನೀಗುವುದಕೆ ಕೊನೆಯ ಮಾರ್ಗವು ದಾಸತ್ವ ಘನಮನದಿ ಸ್ವೀಕಾರ ಮಾಡಿ ವನಜ ನಯನನ ಪಾಡಿರಿ 3 ಅಂಕಿತವ ಸ್ವೀಕಾರ ಮಾಡಿರಿ ಶಂಕಿಸದೆ ಶ್ರೀಗುರುಗಳಿಂ ಶಂಖ ಚಕ್ರಾಂಕಿತನ ಗುಣಮನ ಪಂಕಜದೊಳು ಸ್ಮರಿಸಿರಿ 4 ಆದಿಯಿಂದಲಿ ಇಹುದು ಜೀವಗೆ ಶ್ರೀಧರನ ದಾಸತ್ವವು ಈ ಧರ್ಮ ತಿಳಿಯದಲೆ ಗರ್ವದಿ ಹಾದಿ ತಪ್ಪಲಿ ಬೇಡಿರಿ 5 ಜಗದೊಡೆಯ ಶ್ರೀ ಹರಿಯು ಸರ್ವದ ನಿಗಮಗಳಿಗಾಧಾರನು ಬಗೆಬಗೆಯ ಜೀವರೊಳಗಿರುತಲಿ ಸುಗುಣವಂತರ ಪೊರೆವನು 6 ಈ ಪರಿಯ ದಾಸತ್ವ ಹೊಂದಿ ನಿ ರ್ಲೇಪರಾಗಿರಿ ಕರ್ಮದಿಂ ಗೋಪಾಲಕೃಷ್ಣವಿಠ್ಠಲನು ರೂಪ ತೋರ್ವನು ಹೃದಯದಿ 7
--------------
ಅಂಬಾಬಾಯಿ
ದಾಸರಾಗಿರೊ ವೈಷ್ಣವ ದಾಸರಾಗಿರೊ ದಾಸರಾಗಿ ಬಯಲಾಸೆಯ ನೀಗಿ ರ- ಮೇಶನ ಗುಣವಾರಾಶಿಯೊಳಿರಿಸುವ ಪ. ಸುಂದರ ಮಾನಾನಂದತೀರ್ಥಮತ ಸಾಂದ್ರ ಸುಖಾಂಬುಧಿಮಿಂದ ಮಹಾತ್ಮರ 1 ದಿವ್ಯಲೋಕಜನ ಭವ್ಯೋಭಯವಿಧ ಕಾವ್ಯರಚನ ಲಾತವ್ಯಯತೀಂದ್ರರ 2 ಸೀತಾಪತಿ ರಘುನಾಥನ ಮನದೊಳ- ಗಾತು ಭಜಿಪ ಗಣನಾಥ ಜನಕನ 3 ಶ್ರೀ ಮಹೇಶ ವಟು ವಾಮನ ಪದಯುಗ ಸಾಮಜವಾಹನ 4 ಕಾಕರಟನದೊಳ ಭೀಕರ ಮತವ ನಿ- ರಾಕರಿಸಿರುವ ಸುಧಾಕರ ಮೂರ್ತಿಯ 5 ತಂತ್ರ ದೀಪಿಕಾ ಯಂತ್ರವ ರಚಿಸಿದ ಮಂತ್ರಾಲಯವರ ಮಂತ್ರದೇವತೆಯ 6 ಗೋಪಿನಾಥನೆ ಭೂಪನೆಂದು ಸಂ- ತಾಪವ ಬಿಡಿಸುವ ಶ್ರೀಪಾದರ ಪದ 7 ಮಂದಕಲಿಯ ಕಾಲಿಂದಲೊರಿಸಿದ ಪು- ರಂದರದಾಸರ ಹೊಂದಿ ಹರಿಯ ನಿಜ8 ಸುಜನ ಹೃದಂಬುಜ ಸುಖಕರ ದಿನಮಣಿ ವಿಜಯರಾಜ ಪದ ಭಜನೆಯ ಮಾಡುತ 9 ಭಂಗುರ ಭವಭಯ ಭಂಗದ ಸುಗುಣ ತರಂಗನ ಒಲಿಸಿದ ಮಂಗಳ ಮಹಿಮರ 10 ಹರಿಕಥಾಮೃತದ ತೆರೆಗಳೊಳಾಡುವ ಪರತರಸಾರವ ಸುರಿದ ಮಹಾತ್ಮರ 11 ಸಿಡುಕರ ಸಂಸ್ಕøತಿ ಕಡಲೊಳು ಮುಳುಗಲು ಬಿಡದಲೆ ಕೈಪಿಡಿದೊಡೆಯನ ತೋರ್ಪರ 12 ಅರಿಷಡ್ವರ್ಗವ ತರಿದು ಬಿಸುಟು ಶ್ರೀ- ವರನ ಕೃಪಾರಸ ಸುರಿಸಿದ ಧನ್ಯರ 13 ಮೂಕನ ವಾಗ್ಮಿಯ ಮಾಡಿ ಮುರಾರಿಗೆ ಸಾಕ ಕೊಟ್ಟಿ ದೀನಾಕರದಾಸರ 14 ಮಾತಿಗೆ ಕಂಸಾರಾತಿನಲಿಯೆ ಜಗ ನ್ನಾಥರೆಂ¨ ವಿಖ್ಯಾತಿ ಪಡೆದವರ 15 ತಾಪತ್ರಯಗಳ ತಪ್ಪಿಸಿ ವೆಂಕಟ ಭೂಪನ ಸದಯಾರೋಪಗೈದವರು 16
--------------
ತುಪಾಕಿ ವೆಂಕಟರಮಣಾಚಾರ್ಯ
ದಾಸರಾಯ ಪುರಂದರದಾಸರಾಯ ಪ. ಘಾಸಿಗೊಳಿಸದೆ ಇತ್ತು ಕರುಣಿಸಿ ವಾಸುದೇವನ ಕೃಪೆಗೈಸಿರಿ ಅ.ಪ. ದಾಸಕೂಟಕೆ ಮೊದಲನೆ ಗುರು ದೊಷವರ್ಜಿತ ಭಕ್ತರೆನಿಸಿ ಆಶಪಾಶವೆ ತೊರೆದು ಹರಿಯ ದಾಸತನವನು ತೋಷದಲಿ ಕೊಂಡು ಕೇಶವನು ಸರ್ವೋತ್ತಮನು ಎನ್ನುತ ಶ್ರೀಶನ ಗುಣಗಳನೆ ಪೊಗಳುತ ಭೂಸುರರ ರಕ್ಷಿಸುತ ಭಕ್ತರ ಕ್ಲೇಶಗಳೆÉದಂಥ ಗುರುವರ 1 ವೀಣೆ ಕರದಲಿ ಗಾನಮಾಡುತ ಜಾಣತನದಲಿ ಕೃಷ್ಣನೊಲಿಸುತ ಆನಂದದಲಿ ನರ್ತಿಸುತ್ತ ಧ್ಯಾನದಲಿ ಶ್ರೀ ಹರಿಯ ನೋಡುತ ಆನನವ ತೂಗುತ್ತ ವೇದ ವಿ- ಧಾನದಲಿ ಪದಗಳನೆ ರಚಿಸುತ ಮೌನಿವ್ಯಾಸರ ಶಿಕ್ಷೆಯಿಂದಲಿ ದಾನವಾಂತಕ ಹರಿಯನೊಲಿಸಿದ 2 ಪಾಪಿಗಳ ಪಾವನಗೈಸುತ ಶ್ರೀ ಪತಿಯ ಅಂಕಿತವ ನೀಡುತ ಈ ಪರಿಯಲಿ ಮೆರೆದ ಮಹಿಮೆಯ ನಾ ಪೇಳಲಳವಲ್ಲವಿನ್ನು ನಾ ಪಿರಿಯರಿಂ ಕೇಳಿದುದರಿಂ ದೀಪರಿ ನುಡಿದಿರುವೆನಲ್ಲದೆ ಗೋಪಾಲಕೃಷ್ಣವಿಠ್ಠಲನ ರೂಪ ನೋಡುತ ಸುಖಿಸುವಂಥ 3
--------------
ಅಂಬಾಬಾಯಿ
ದಾಸರಾಯ ವಿಜಯದಾಸರಾಯ | ದೋಷವೆಣಿಸದೆ ಸದಾ ಪೋಷಿಸು ಕರುಣದಿ ಪ ಸಕಲಜಗತ್ತಿಗೆ ಲಕುಮೀಶಪರೆನೆಂದು ಮಖವಾಚರಿಪ ಮುನಿ ನಿಕರಕೆÉ ಸಾರಿದ 1 ಜ್ಞಾನಿ ಶಿರೋಮಣಿ ಧೇನುಪಾಲಾರ್ಯರ | ಮಾನಸ ಕುಮುದಕೆÉ ಏಣಾಂಕನೆನಿಸಿದ 2 ಮುದ ತೀರ್ಥಾಗಮ ಮರ್ಮ ಮಧುರ ಕನ್ನಡದಲಿ ವಿಧ ವಿಧ ರಚಿಸಿದ ಸದಮಲ ಸುಚರಿತ್ರ 3 ಬೇಸಿಗೆ ಬಿಸಲೊಳು ರಾಸಭ ತೃಷೆಯಿಂದ | ಷಾಸಿಯಾಗಿರೆ ಜಲಪ್ರಾಶನಗೈಸಿದ ದಾಸರಾಯ 4 ನಿಷ್ಟೆಯಿಂದಲಿ ಮನ ಮುಟ್ಟಿ ಭಜಿಪರಿಗೆ ಇಷ್ಟಾರ್ಥಗರೆಯುವ ಪುಟ್ಟ ಬದರಿವಾಸ 5 ಪೊರೆವ ಚಿಪ್ಪಶಿಖರನಿಲಯ 6 ಪಾಮರನಾದೆನಗೆ ಶಾಮಸುಂಧದರ ಸ್ವಾಮಿ ನಾಮಾಮೃತಪಾನ ಪ್ರೇಮದಿ ನೀಡಯ್ಯ ದಾಸರಾಯಾ 7
--------------
ಶಾಮಸುಂದರ ವಿಠಲ