ಒಟ್ಟು 6126 ಕಡೆಗಳಲ್ಲಿ , 131 ದಾಸರು , 3704 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವನಜನಾಭ ನೀನೆ ದಯಾನಿಧಿ ಮೂರು ಜಗದೊಳಗೆ ಮಣಿದುಬೇಡ್ವೆ ಕನಿಕರದೆನ್ನ ರಿಣಮುಕ್ತನೆನಿಸು ಬೇಗ ಪ ಭಾವಿಗಳ ಭಾವಪೂರ್ಣ ದೇವ ದೇವ ವಿಮಲಮಹಿಮ ಸಾವು ಹುಟ್ಟುಯಿಲ್ಲದ ಘನ ಸ್ವಾಮಿಯೆನ್ನ ಮಾಡೋ ಪಾವನ 1 ವೇದವೇದ್ಯನೀತ ಅ ನಾದಿಕಾಲದ್ವಸ್ತುವೇ ನೀ ಸಾಧುಸುಜನೈಕ್ಯನೆನ್ನ ಮೋದದಿಂದ ಸಲಹೋ ಮುದ 2 ಭೂಮಿಗಧಿಕ ನಿಸ್ಸೀಮ ಸುಖಧಾಮ ಭೀಮ ಗಂಭೀರ ಎನ್ನ ಕಾಮಿತಾರ್ಥ ಕರುಣೆಗೈದು ಪ್ರೇಮದಾಳೆನ್ನೊಡೆಯ ಶ್ರೀರಾಮ3
--------------
ರಾಮದಾಸರು
ವನಜನೇತ್ರೆ ಕನಕಗಾತ್ರೆ ಅನುವಿನಿಂ ಬಾ ಮಿತ್ರೆ ಪ. ವಿನಯದಿಂದ ಜನಕ ಸಾರುವ ಕೋಲನಾಡುವ ಅ.ಪ. ಆರ್ಯಮಾತೆಯ ಆರ್ಯಧರ್ಮದ ಸಾರವರಿಯುವ ವೀರಮಾತೆಯ ಭೂರಿಕೀರ್ತಿಯ ಪಾಡಿಸುಖಿಸುವ 1 ಬೇಗನೇಳಿರೆ ಭಾಗ್ಯೋದಯಮದೀಗ ನೋಡಿರೇ ಬೀಗಿಮಲಗುವ ರೋಗವುಳಿದು ಸರಾಗದೆ ಪಾಡಿರೇ 2 ಅವನೀಮಾತೆಯ ಭವಿತವ್ಯತೆಗೆ ತವಕಗೊಳ್ಳುತ 3 ಶುದ್ಧರಾಗಿ ತಿಲಕತಿದ್ದಿ ವೃದ್ಧರಂ ನಮಿಸಿರಿ4 ಶ್ರದ್ಧೆಯಿಂ ಕಾರ್ಯಸಿದ್ಧಿಗೊಯ್ಯಿರಿ ಸಿದ್ಧಾರ್ಥರೆನಿಸಿರಿ ಸದ್ಧರ್ಮ ದೀಕ್ಷಾಬದ್ಧರಾಗಿ ಸುಭದ್ರವಿಳೆಗೊದವಿರಿ5 ಅರಸರನ್ನು ಸರಸದಿಂದ ಹುರುಡಿಸಿರಿನ್ನು ಪುರುಷರೆನ್ನಿಸಿ ಕಾರ್ಯಮೆಸಗುವ ತೆರನ ತೋರಿಸಿ 6 ದೇಶದೇಳ್ಗೆಯೊಳಾಸೆಯಿರಿಸಿ ಲೇಸನೆಸಗಿರಿ ದೋಷಹರಣ ಶೇಷಗಿರೀಶಗೆ ಮೀಸಲಿರಿಸಿರಿ7
--------------
ನಂಜನಗೂಡು ತಿರುಮಲಾಂಬಾ
ವನಭೋಜನ ಊರ್ವಶಿ: ಇದೀಗ ಮನವು ಇಂದಿರಾಕ್ಷಿ ಇದೀಗ ಮನವುಪ. ಮಧುಸೂದನ ತನ್ನ ಸದನದಿಂದಲಿ ಒಮ್ಮೆ ಒದಗಿ ಪಯಣಗೈದು ಪದುಳದಿ ಮಂಡಿಪ1 ವಾಸುದೇವ ತಂಪಾಶುಗದಿಂದಾ- ಯಾಸವ ಬಿಡಿಸಿ ಸಂತೋಷಪಡಿಸುವಂತಿದೀಗ2 ಭಾಗವತರು ಅನುರಾಗದಿ ಕೂಡಿ ಸ- ರಾಗದಿ ಯೋಗಾರೋಗಣೆಮಾಡುವದೀಗ3 ಸತ್ಪಾತ್ರ ವಿಯೋಗ ಸು- ಕ್ಷೇತ್ರ ಸುಧಾಮಯ ಕೀರ್ತಿಯೆಂದಿನಿಸುವ 4 ತರುಗುಲ್ಮಾವಳಿ ಸುರಮುನಿಗಳು ಕಾಣೆ ಉರು ಪಾಷಾಣವೆಲ್ಲವು ಸಚ್ಚರಿತವು5 ರಂಭೆ : ಪೋಗಿ ಬರುವ ವನಕ್ಕಾಗಿ ನಾಗವೇಣಿ ಲೇಸಾಗಿ ಬೇಗ ನಾವುಪ. ಭಾಗವತಾದಿ ಸಮಾಗಮವಾದರೆ ಭಾಗ್ಯವಂತೆಯರ್ನಾವಾಗಿ1 ಹರಬ್ರಹ್ಮಾದಿ ನಿರ್ಜರರಿಗಸಾಧ್ಯವು ಹರಿಪ್ರಸಾದವೆಂದು ಸಾಗಿ ಬೇಗ2 ನಾರಿ ನಿನ್ನ ಉಪಕಾರ ಮರೆಯೆ ನಾ ಭೂರಿ ಪುಣ್ಯವಶಳಾಗಿ3 ಕಾಣದಿರಲು ಯೆನ್ನ ಪ್ರಾಣ ನಿಲ್ಲದು ಕಾಣೆ ಶ್ರೀನಿವಾಸನ ಭೇಟಿಗಾಗಿ4 ಊರ್ವಶಿ : ಅಭಿಷೇಕವನು ಗೈದರಾಗ ಮನಸಿಗನುರಾಗ ಪ. ವಿಭುಧೋತ್ತಮರೆಲ್ಲರು ಕೂಡುತ್ತ ಶುಭ ಋಗ್ವೇದೋಕ್ತದಿ ನಲಿಯುತ್ತಅ.ಪ. ಕ್ಷೀರಾರ್ಣವದೊಳಗಾಳಿದವಂಗೆ ಕ್ಷೀರಾಬ್ಧಿಯ ದುಹಿತೆಯ ಗಂಡನಿಗೆ ನೀರಜನಾಭನ ನಿಖಿಲ ಚರಾಚರ ಪೂರಿತ ಕಲ್ಮಷದೊರಗೆ ಕ್ಷೀರದ1 ಚದುರತನದಿ ಗೊಲ್ಲರೊಳಾಡಿದಗೆ ದಧಿಪಾಲ್ ಬೆಣ್ಣೆಯ ಸವಿದುಂಡವಗೆ ಮದನಜನಕ ಮಹಿಮಾಂಬುಧಿ ಕರುಣಾ- ಸ್ಪದ ಸತ್ಯಾತ್ಮ ಸನಾಥಗೆ ದಧಿಯ2 ಶ್ರುತಿಸ್ಮøತಿತತಿನುತ ರತಿಪತಿಪಿತಗೆ ಅತುಲಿತಗುಣ ಸೂನೃತಭಾಷಿತಗೆ ದಿತಿಸುತಹತ ಶೋಭಿತ ಮೂರುತಿ ಶಾ- ಶ್ವತವಾಶ್ರಿತ ವಾಂಛಿತಗೆ ಘೃತವ3 ಮಧುಸೂದನ ಮಂದರಗಿರಿಧರೆಗೆ ಮೃದುವಾಕ್ಯಗೆ ಮಂಗಲಾಂಗನಿಗೆ ಪದಮಳಾಕ್ಷ ಪರಾತ್ಪರವಸ್ತು ನೀ- ರದ ಶ್ಯಾಮಲ ನಿತ್ಯಾತ್ಮಗೆ ಮಧುವಿನ4 ಕರುಣಾಕರ ಕಮಲಜತಾತನಿಗೆ ದುರುಳ ಸುಬಾಹು ತಾಟಕಿ ಮರ್ದನಗೆ ನರಕಾಂತಕ ನಾರಾಯಣ ಸಕಲಾ- ಮರಪೂಜಿತಗೆ ಸರ್ವಾತ್ಮಗೆ ಸಕ್ಕರೆ5 ಎಳೆತುಳಸೀವನಮಾಲಾಧರಗೆ ಫಲದಾಯಕ ಪರಬ್ರಹ್ಮರೂಪನಿಗೆ ಕಲುಷರಹಿತ ನಿರ್ಮಲಚಾರಿತ್ರ್ಯ ನಿ- ಶ್ಚಲಿತಾನಂದ ನಿತ್ಯನಿಗಳ ನೀರಿನ6 ಕನಕಾಂಬರಧರ ಶೋಭತನಿಂಗೆ ಮನಕಾನಂದವ ಪಡಿಸುವನಿಂಗೆ ಚಿನಮಯ ಪರಿಪೂರ್ಣ ವಿಶ್ವಂಭರ ಜನಕಜಾ ವರನಿಗೆ ಕನಕಾನನೀಕದ7 * * * ವೆಂಕಟೇಶ ಕಣ್ಣ ಮುಂದೆ ನಿಂತಿದಂತಿದೆಪ. ಶಿರದೊಳು ರತ್ನಕಿರೀಟದ ಝಳಕ ಮೆರೆವ ಲಲಾಟದಿ ಕಸ್ತೂರಿತಿಲಕ ವರ ಕರ್ಣಕುಂಡಲಗಳ ಮಯಕನಕ ಚೆಲುವ ಚರಾಚರಭರಿತಜ ಜನಕ1 ಕಂಬುಕಂಠದಿ ಕೌಸ್ತುಭವನಮಾಲ ಇಂಬಾಗಿಹ ಭೂಷಣ ಶುಭಲೋಲ ಸಂಭ್ರಮಿಸುವ ಮೋಹನ ಗುಣಶೀಲ ಅಂಬುಜನಾಭಾಶ್ರಿತಜನಪಾಲ2 ಶಂಖಸುದರ್ಶನಗದಾಪದ್ಮ ಧಾರಿ ಕಂಕಣವೇಣುವಡ್ಯಾಣವಿಹಾರಿ ಬಿಂಕದ ಬಿರುದಾಂಕಿತ ಕಂಸಾರಿ ಶಂಕೆಯಿಲ್ಲದ ಭೂಷಣಾಲಂಕಾರಿ3 ಎಡಬಲದಲಿ ಮಡದಿಯರ ವಿಲಾಸ ಕಡುಬೆಡಗಿನ ಪೀತಾಂಬರಭೂಷ ಕಡಗ ಕಾಲಗೆಜ್ಜೆ ಅಂದುಗೆಯಿಟ್ಟು ತೋಷ ಒಡೆಯ ಶ್ರೀನಾರಾಯಣ ಸರ್ವೇಶ4 ಈ ರೀತಿಯಲಿ ಶೃಂಗಾರನಾಗುತ್ತ ಭೂರಿಭಕ್ತರ ಕಣ್ಮನಕೆ ತೋರುತ್ತ ನಾರದಾದಿ ಮುನಿವರ ಗೋಚರದ ಚಾರುಚರಣವನು ತೋರಿಸಿ ಪೊರೆದ5 * * * ಆರೋಗಣೆಯ ಗೈದನು ಶ್ರೀರಂಗ ಸಾರಸವಾದ ಸಮಸ್ತ ವಸ್ತುಗಳ ಪ. ಧೂಪದೀಪನೈವೇದ್ಯವಿಧಾನ ಶ್ರೀಪರಮಾತ್ಮ ಮಂಗಲಗುಣಪೂರ್ಣ1 ಸುರತರುವಿನ ಸೌಭಾಗ್ಯದ ತೆರನ ಮರಕತಮಯ ಹರಿವಾಣದೊಳಿದನ2 ಭಕುತರ ಸೌಖ್ಯವಿನ್ನೇನೆಂಬುವೆನು ಶಕುತ ಶ್ರೀಮಾಧವ ನಿರತ ತೋರುವನು3 * * * ಆರತಿ ಶ್ರೀನಿವಾಸಂ ಶ್ರೀವೆಂಕಟೇಶಂ ಗಾರತಿ ಶ್ರೀನಿವಾಸಂಪ. ಮಂಗಲಾಂಗ ನರಸಿಂಗ ಮನೋಹರ ರಂಗರಾಯ ಶ್ರೀಗಂಗಾಜನಕಗೆ1 ಮಾಧವ ಮಧುಹರ ಮೋದಭರಿತ ಜಗ- ದಾಧಾರ ವೇಣುನಾದವಿನೋದಗೆ2 ನಿತ್ಯನಿರಂಜನ ಸತ್ಯಸ್ವರೂಪಗೆ ಪ್ರತ್ಯಗಾತ್ಮಪರತತ್ತ್ವಸ್ವರೂಪಗೆ3 ಭೋಜನವ ಗೈದರು ಪ. ಮೂಜಗತ್ಪತಿಯ ಪ್ರಸಾದಪ್ರತಾಪದಿ ನೈಜವಾಗಿಹ ಪಾಪ ಮಾಜಿ ಹೋಗಾಡುತ್ತ1 ಜಿಹ್ವೆಗೆ ರುಚಿಕರವಪ್ಪುದ ಮಿಗಿಲಾದ ಶಾಕಪಾಕಗಳನ್ನು ಪಾತ್ರದಿ ತೆಗೆದು ಸಂತೋಷ ಬೆಡಗುಗಳ ತೋರುತ್ತ2 ಹಪ್ಪಳ ಸಂಡಿಗೆಯು ತಪ್ಪು ಒಗರ ಶಾಲ್ಯನ್ನಗಳೆಲ್ಲವ ತಪ್ಪದೆ ಸವಿದು ಬಾಯ್ ಚಪ್ಪರಿಸಿದರಾಗ3 ಹೋಳಿಗೆಯು ಕಾಯದ ಜಡಗಳು ಮಾಯಕವಾದವು ಆಯುರಾರೋಗ್ಯ ಸುಶ್ರೇಯ ಕಾರಣವಾಯ್ತು4 ಸುರರು ಉರಗ ಮಾನವರೆಲ್ಲರೂ ದೊರೆಯ ಪ್ರಸಾದವು ದೊರಕಿತು ಎನುತ ವಿ- ಸ್ತರವಾದ ತೋಷದಿ ಭರದಿಂದೊದಗುತಲಿ5
--------------
ತುಪಾಕಿ ವೆಂಕಟರಮಣಾಚಾರ್ಯ
ವನಭೋಜನ ಊರ್ವಶಿ:ಇದೀಗ ಮನವು ಇಂದಿರಾಕ್ಷಿ ಇದೀಗ ಮನವು ಪ. ಮಧುಸೂದನ ತನ್ನ ಸದನದಿಂದಲಿ ಒಮ್ಮೆ ಒದಗಿ ಪಯಣಗೈದು ಪದುಳದಿ ಮಂಡಿಪ 1 ವಾಸುದೇವ ತಂಪಾಶುಗದಿಂದಾ- ಯಾಸವ ಬಿಡಿಸಿ ಸಂತೋಷಪಡಿಸುವಂತಿದೀಗ 2 ಭಾಗವತರು ಅನುರಾಗದಿ ಕೂಡಿ ಸ- ರಾಗದಿ ಯೋಗಾರೋಗಣೆಮಾಡುವದೀಗ 3 ಸತ್ಪಾತ್ರ ವಿಯೋಗ ಸು- ಕ್ಷೇತ್ರ ಸುಧಾಮಯ ಕೀರ್ತಿಯೆಂದಿನಿಸುವ 4 ತರುಗುಲ್ಮಾವಳಿ ಸುರಮುನಿಗಳು ಕಾಣೆ ಉರು ಪಾಷಾಣವೆಲ್ಲವು ಸಚ್ಚರಿತವು 5 ರಂಭೆ : ಪೋಗಿ ಬರುವ ವನಕ್ಕಾಗಿ ನಾಗವೇಣಿ ಲೇಸಾಗಿ ಬೇಗ ನಾವು ಪ. ಭಾಗವತಾದಿ ಸಮಾಗಮವಾದರೆ ಭಾಗ್ಯವಂತೆಯರ್ನಾವಾಗಿ 1 ಹರಬ್ರಹ್ಮಾದಿ ನಿರ್ಜರರಿಗಸಾಧ್ಯವು ಹರಿಪ್ರಸಾದವೆಂದು ಸಾಗಿ ಬೇಗ 2 ನಾರಿ ನಿನ್ನ ಉಪಕಾರ ಮರೆಯೆ ನಾ ಭೂರಿ ಪುಣ್ಯವಶಳಾಗಿ 3 ಕಾಣದಿರಲು ಯೆನ್ನ ಪ್ರಾಣ ನಿಲ್ಲದು ಕಾಣೆ ಶ್ರೀನಿವಾಸನ ಭೇಟಿಗಾಗಿ 4 ಊರ್ವಶಿ :ಅಭಿಷೇಕವನು ಗೈದರಾಗ ಮನಸಿಗನುರಾಗ ಪ. ವಿಭುಧೋತ್ತಮರೆಲ್ಲರು ಕೂಡುತ್ತ ಶುಭ ಋಗ್ವೇದೋಕ್ತದಿ ನಲಿಯುತ್ತ ಅ.ಪ. ಕ್ಷೀರಾರ್ಣವದೊಳಗಾಳಿದವಂಗೆ ಕ್ಷೀರಾಬ್ಧಿಯ ದುಹಿತೆಯ ಗಂಡನಿಗೆ ನೀರಜನಾಭನ ನಿಖಿಲ ಚರಾಚರ ಪೂರಿತ ಕಲ್ಮಷದೊರಗೆ ಕ್ಷೀರದ1 ಚದುರತನದಿ ಗೊಲ್ಲರೊಳಾಡಿದಗೆ ದಧಿಪಾಲ್ ಬೆಣ್ಣೆಯ ಸವಿದುಂಡವಗೆ ಮದನಜನಕ ಮಹಿಮಾಂಬುಧಿ ಕರುಣಾ- ಸ್ಪದ ಸತ್ಯಾತ್ಮ ಸನಾಥಗೆ ದಧಿಯ 2 ಶ್ರುತಿಸ್ಮøತಿತತಿನುತ ರತಿಪತಿಪಿತಗೆ ಅತುಲಿತಗುಣ ಸೂನೃತಭಾಷಿತಗೆ ದಿತಿಸುತಹತ ಶೋಭಿತ ಮೂರುತಿ ಶಾ- ಶ್ವತವಾಶ್ರಿತ ವಾಂಛಿತಗೆ ಘೃತವ 3 ಮಧುಸೂದನ ಮಂದರಗಿರಿಧರೆಗೆ ಮೃದುವಾಕ್ಯಗೆ ಮಂಗಲಾಂಗನಿಗೆ ಪದಮಳಾಕ್ಷ ಪರಾತ್ಪರವಸ್ತು ನೀ- ರದ ಶ್ಯಾಮಲ ನಿತ್ಯಾತ್ಮಗೆ ಮಧುವಿನ 4 ಕರುಣಾಕರ ಕಮಲಜತಾತನಿಗೆ ದುರುಳ ಸುಬಾಹು ತಾಟಕಿ ಮರ್ದನಗೆ ನರಕಾಂತಕ ನಾರಾಯಣ ಸಕಲಾ- ಮರಪೂಜಿತಗೆ ಸರ್ವಾತ್ಮಗೆ ಸಕ್ಕರೆ 5 ಎಳೆತುಳಸೀವನಮಾಲಾಧರಗೆ ಫಲದಾಯಕ ಪರಬ್ರಹ್ಮರೂಪನಿಗೆ ಕಲುಷರಹಿತ ನಿರ್ಮಲಚಾರಿತ್ರ್ಯ ನಿ- ಶ್ಚಲಿತಾನಂದ ನಿತ್ಯನಿಗಳ ನೀರಿನ 6 ಕನಕಾಂಬರಧರ ಶೋಭತನಿಂಗೆ ಮನಕಾನಂದವ ಪಡಿಸುವನಿಂಗೆ ಚಿನಮಯ ಪರಿಪೂರ್ಣ ವಿಶ್ವಂಭರ ಜನಕಜಾ ವರನಿಗೆ ಕನಕಾನನೀಕದ 7 * * * ವೆಂಕಟೇಶ ಕಣ್ಣ ಮುಂದೆ ನಿಂತಿದಂತಿದೆ ಪ. ಶಿರದೊಳು ರತ್ನಕಿರೀಟದ ಝಳಕ ಮೆರೆವ ಲಲಾಟದಿ ಕಸ್ತೂರಿತಿಲಕ ವರ ಕರ್ಣಕುಂಡಲಗಳ ಮಯಕನಕ ಚೆಲುವ ಚರಾಚರಭರಿತಜ ಜನಕ1 ಕಂಬುಕಂಠದಿ ಕೌಸ್ತುಭವನಮಾಲ ಇಂಬಾಗಿಹ ಭೂಷಣ ಶುಭಲೋಲ ಸಂಭ್ರಮಿಸುವ ಮೋಹನ ಗುಣಶೀಲ ಅಂಬುಜನಾಭಾಶ್ರಿತಜನಪಾಲ 2 ಶಂಖಸುದರ್ಶನಗದಾಪದ್ಮ ಧಾರಿ ಕಂಕಣವೇಣುವಡ್ಯಾಣವಿಹಾರಿ ಬಿಂಕದ ಬಿರುದಾಂಕಿತ ಕಂಸಾರಿ ಶಂಕೆಯಿಲ್ಲದ ಭೂಷಣಾಲಂಕಾರಿ 3 ಎಡಬಲದಲಿ ಮಡದಿಯರ ವಿಲಾಸ ಕಡುಬೆಡಗಿನ ಪೀತಾಂಬರಭೂಷ ಕಡಗ ಕಾಲಗೆಜ್ಜೆ ಅಂದುಗೆಯಿಟ್ಟು ತೋಷ ಒಡೆಯ ಶ್ರೀನಾರಾಯಣ ಸರ್ವೇಶ 4 ಈ ರೀತಿಯಲಿ ಶೃಂಗಾರನಾಗುತ್ತ ಭೂರಿಭಕ್ತರ ಕಣ್ಮನಕೆ ತೋರುತ್ತ ನಾರದಾದಿ ಮುನಿವರ ಗೋಚರದ ಚಾರುಚರಣವನು ತೋರಿಸಿ ಪೊರೆದ 5 * * * ಆರೋಗಣೆಯ ಗೈದನು ಶ್ರೀರಂಗ ಸಾರಸವಾದ ಸಮಸ್ತ ವಸ್ತುಗಳ ಪ. ಧೂಪದೀಪನೈವೇದ್ಯವಿಧಾನ ಶ್ರೀಪರಮಾತ್ಮ ಮಂಗಲಗುಣಪೂರ್ಣ 1 ಸುರತರುವಿನ ಸೌಭಾಗ್ಯದ ತೆರನ ಮರಕತಮಯ ಹರಿವಾಣದೊಳಿದನ 2 ಭಕುತರ ಸೌಖ್ಯವಿನ್ನೇನೆಂಬುವೆನು ಶಕುತ ಶ್ರೀಮಾಧವ ನಿರತ ತೋರುವನು 3 * * * ಆರತಿ ಶ್ರೀನಿವಾಸಂ ಶ್ರೀವೆಂಕಟೇಶಂ ಗಾರತಿ ಶ್ರೀನಿವಾಸಂ ಪ. ಮಂಗಲಾಂಗ ನರಸಿಂಗ ಮನೋಹರ ರಂಗರಾಯ ಶ್ರೀಗಂಗಾಜನಕಗೆ 1 ಮಾಧವ ಮಧುಹರ ಮೋದಭರಿತ ಜಗ- ದಾಧಾರ ವೇಣುನಾದವಿನೋದಗೆ 2 ನಿತ್ಯನಿರಂಜನ ಸತ್ಯಸ್ವರೂಪಗೆ ಪ್ರತ್ಯಗಾತ್ಮಪರತತ್ತ್ವಸ್ವರೂಪಗೆ3 ಭೋಜನವ ಗೈದರು ಪ. ಮೂಜಗತ್ಪತಿಯ ಪ್ರಸಾದಪ್ರತಾಪದಿ ನೈಜವಾಗಿಹ ಪಾಪ ಮಾಜಿ ಹೋಗಾಡುತ್ತ1 ಜಿಹ್ವೆಗೆ ರುಚಿಕರವಪ್ಪುದ ಮಿಗಿಲಾದ ಶಾಕಪಾಕಗಳನ್ನು ಪಾತ್ರದಿ ತೆಗೆದು ಸಂತೋಷ ಬೆಡಗುಗಳ ತೋರುತ್ತ 2 ಹಪ್ಪಳ ಸಂಡಿಗೆಯು ತಪ್ಪು ಒಗರ ಶಾಲ್ಯನ್ನಗಳೆಲ್ಲವ ತಪ್ಪದೆ ಸವಿದು ಬಾಯ್ ಚಪ್ಪರಿಸಿದರಾಗ 3 ಹೋಳಿಗೆಯು ಕಾಯದ ಜಡಗಳು ಮಾಯಕವಾದವು ಆಯುರಾರೋಗ್ಯ ಸುಶ್ರೇಯ ಕಾರಣವಾಯ್ತು 4 ಸುರರು ಉರಗ ಮಾನವರೆಲ್ಲರೂ ದೊರೆಯ ಪ್ರಸಾದವು ದೊರಕಿತು ಎನುತ ವಿ- ಸ್ತರವಾದ ತೋಷದಿ ಭರದಿಂದೊದಗುತಲಿ 5 ಭೋಗವಿನ್ನಂತೆಯಿಲ್ಲಿ ರೋಗ ದುರಿತವೆಲ್ಲ ನೀಗಿತು ಎನುತನು- ರಾಗದಿ ಸವಿದುಂಡು ತೇಗಿದರೆಲ್ಲರು 6 ಪುಣ್ಯ-ಫಲದಿಂದ ದೊರಕಿತಲ್ಲೇ ನಲವಿಂದಾನತರು ಕೈ ತೊಳೆದ ನೀರಿನೊಳಿದ್ದ ಜಲಜಂತು ಸಹವು ನಿರ್ಮಲಿನವಾದವು ಕಾಣೆ 7 ಪಾವನವಾದರು ಹಿಂಡು ಉದ್ದಂಡ ಮೃಗಗಳೆಲ್ಲ &ಟಿb
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವನರುಹ ನಯನಾ | ವನಜೇಕ್ಷಣ ಪ್ರಿಯವನರುಹ ನಯನಾ | ಪ ತನುಮನ ಧನಗಳಾ | ನಿನಗರ್ಪಿಸುವಂಥಜನರ ಮನೋರಥ | ಅನುನಯದಿಂದಲೀವೆ 1 ಮನಸಿಜ ಜನಕನೇ | ಫಣಿಶೈಲ ಸದನನೇಅನಲಾಕ್ಷನ ಪ್ರಿಯ | ಗುಣ ಪರಿಪೂರ್ಣ 2 ಮನೆ ಮಗ ಮಡಧ್ಯಬಿ | ಮಾನವು ಪೋಗಲಿಲ್ಲಘನ ವಿಷಯಕೆ ಮನ | ಅನುಸರಿಸುವುದಯ್ಯ 3 ಕನಸು ಮನಸಿನೊಳು | ನಿನಪದ ಧ್ಯಾನವಅನುನಯದಿಂದಲಿತ್ತು | ಜನುಮ ಸಾರ್ಥಕ ಮಾಡೊ 4 ವ್ರಜ ಕರ ಪಿಡಿದು 5
--------------
ಗುರುಗೋವಿಂದವಿಠಲರು
ವನಿತೆಯರ ಆರತಿಕಂ||ಸಿರಿಧರಣಿಯರೊಡೆವೆರಸಿಯೆತಿರುಪತಿಯಧಿನಾಥನೊಲಿದು ಶಯ್ಯಾಸನದೊಳ್ುರುತಿರೆ ಸತಿಯರು ಹರುಷದಿಪರಿಪರಿಯಾರತಿಯನೆತ್ತಿ ನಡೆದರು ಮುದದಿಂಆವ ಜನ್ಮದ ಪುಣ್ಯ ಫಲಿಸಿತು ನಮಗೆದೇವಾಧಿದೇವ ಬಂದನು ನಮ್ಮ ಮನೆಗೆ ಪನೆನೆಯಲು ಮನದೊಳು ನೆಲೆಗೊಂಡನಮ್ಮ ಸನಿಯಕೆ ಕರೆದರೆ ುದಿರಾದನಮ್ಮಮನದ ಮಧ್ಯಕೆ ಮತ್ತೆ ಬರುವ ಕಾಣಮ್ಮವನಿತೆಯರಾರತಿಯ ತಂದೆತ್ತಿರಮ್ಮಾ 1 ಪಾದವ ತೊಳೆದು ಪನ್ನೀರಿಂದ ನಾನುಆದರದಿಂ ಹಸ್ತಕಿತ್ತು ಹಸ್ತವನುಪಾದಾವಧಾನವ ಪೇಳಲೈದಿದನುಮೋದದಿಂದಾರತಿಯಾ ತಂದೆತ್ತಿರಮ್ಮಾ 2 ತಿರುಪತಿುಂದ ಭಕ್ತರ ಪಾಲಿಸಲೆಂದುವರದ ವೆಂಕಟರಾಯ ತಾ ಬಂದನಿಂದುಗುರುವಾಸುದೇವಾರ್ಯನಾದನೀ ಬಂಧುತರುಣಿಯರಾರತಿಯ ತಂದೆತ್ತಿರಮ್ಮಾ 3ಓಂ ಯುಧ್ಠಿರಪ್ರತಿಷ್ಠಾತ್ರೇ ನಮಃ
--------------
ತಿಮ್ಮಪ್ಪದಾಸರು
ವರದ ನರಹರಿ ವಿಠಲ | ಪೊರೆಯ ಬೇಕಿವಳ ಪ ಕರಿವರದ ಶ್ರೀ ಹರಿಯೆ | ಕರುಣಿ ನೀನೆಂದರಿತುಮೊರೆಯಿಡುವೆ ನಿನ್ನಡಿಗೆ | ಮರುತಾಂತರಾತ್ಮಾ ಅ.ಪ. ದಾಸದೀಕ್ಷೆಯಲಿ ಮಹ | ದಾಶೆಯನು ಉಳ್ಳವಳಲೇಸಾಗಿ ಕೈಪಿಡಿದು | ನೀ ಸಲಹ ಬೇಕೋವಾಸವಾನುಜ ದಾಸ | ವೇಷದಿಂ ಸ್ವಪ್ನದಲಿಸೂಸಿ ಸೂಚಿಸಿದ ಉಪ | ದೇಶವಿತ್ತಿಹೆನೋ 1 ಮಧ್ವಮತ ಪದ್ಧತಿಗ | ಳುದ್ಧರಿಸಿ ಇವಳಲ್ಲಿಶ್ರದ್ಧೆಯಿಂ ತವಪಾದ | ಪದ್ಮಗಳ ಭಜಿಸೇಶುದ್ಧ ತತ್ವ ಜ್ಞಾನ | ಸದ್ಭಕ್ತಿ ವೈರಾಗ್ಯಮಧ್ವಾಂತರಾತ್ಮ ಅನಿ | ರುದ್ಧ ಪಾಲಿಪುದೋ 2 ಪತಿಯ ಕೈಂಕರ್ಯವನು | ಹಿತದಿಂದ ಮಾಳ್ಪಂಥಮತಿಯ ನೀ ಕರುಣಿಸುತ | ಕೃತ ಕೃತ್ಯಳೆನಿಸೋಕ್ಷೀತಿಭಾರಹರಣ ಶ್ರೀ | ಪತಿಯೆ ನೀ ಒಲಿದಿವಳಅತುಳ ವಿಭವದಿ ಮೆರೆಸಿ | ಗತಿಪ್ರದನು ಆಗೋ 3 ಸಂತತದಿ ತವನಾಮ | ಚಿಂತಿಸುವ ಸೌಭಾಗ್ಯವಂತೆಯೆಂದೆನಿಸಿವಳ | ಕಾಂತೆಯ ಸಖನೇಅಂತರಾತ್ಮಕ ನೀನೆ | ಅಂತರಂಗದಿ ತೋರಿಸಂತಸವ ನೀಡಯ್ಯ | ಪಂಥಭಿಧ ಹರಿಯೇ 4 ಸರ್ವಜ್ಞ ಸರ್ವೇಶ | ಸರ್ವವ್ಯಾಪಕ ದೇವನಿರ್ವಿಕಾರನೆ ಹರಿಯೆ | ದುರ್ವಿ ಭಾವ್ಯಾಸರ್ವವಿಧ ಪರತಂತ್ರ | ದರ್ವಿ ಜೀವಿಯ ಕಾಯೋಸರ್ವಸುಂದರ ಗುರೂ ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವರದೇಂದ್ರವಿಠಲರ ಹಾಡು ವಾಸುದೇವನ ಪುರ ಪ್ರವೇಶಿಸಿದರು |ಈಶ ಭಜಕ ಶ್ರೀಶ ಪ್ರಾಣೇಶದಾಸಾರ್ಯ ಪ ಉತ್ತಂಕ ಋಷಿಯಂತೆ ಉತ್ತಮ ಗುರುಪಾದ |ಅತ್ಯಂತ ಭಕ್ತಿಯಿಂ ಸ್ತುತಿಸಿ ಯಜಿಸಿ ||ಉತ್ತಮ ಶ್ಲೋಕ ಶ್ರೀ ಪುರುಷೋತ್ತಮನ ಗುಣವ |ನೃತ್ಯ ಗೀತದಿ ಪಾಡಿ ಮೃತ್ಯಲೋಕವ ತ್ಯಜಿಸಿ 1 ವಾಸ ವಾಸರದಲಿ ವಾಸುದೇವನ ಕಥೆಯ |ಭೂಸೂರರಿಗೆ ಪೇಳಿ ತೋಷದಿಂದ ||ವಾಸವಾದ್ಯಮರ ವಂದಿತನ ಪಾದದಿ ಭಕ್ತಿ |ಲೇಸಾಗಿ ತೋರಿ ಭವಕ್ಲೇಶವನು ಪರಿಹರಿಸಿ 2 ಅಬ್ಧನಂದನ ಭಾದ್ರಪದ ತಿಥಿ ಅಷ್ಟಮಿಯ |ಶುದ್ಧ ಭೌಮ್ಯವಾಸರದ ಉಷಃಕಾಲದಿ ||ಮುದ್ದು ಪ್ರಲ್ಹಾದನ್ನ ಪೊರೆದ ನರಹರಿರೂಪ |ಹೃದ್ಗುಹಾದಲಿ ನೋಡಿ ಹರುಷವನು ಬಡುತಲಿ 3 ದಾಸ ಕುಲ ಶ್ರೇಷ್ಠ ಗುರು ಪ್ರಾಣೇಶದಾಸರಿಂ |ಶ್ರೀಶ ಪ್ರಾಣೇಶ ವಿಠಲೆಂಬಂಕಿತಾ ||ಸೋಸಿನಿಂದಲಿ ಪಡೆದು ಶ್ರೀಶ ಮಹಿಮೆ ಉ- |ಲ್ಲಾಸದಿಂದಲಿ ಭಜಿಸಿ ಬೇಸರವನಳಿಯುತಾ 4 ಮರುತನೆ ಪರಮ ಗುರು, ಹರಿಯೆ ಪರದೇವತೆ |ಪುರಂದರರೆ ದಾಸರೆಂದರುಹಿ ಧರೆಗೆ ||ವರದೇಂದ್ರ ವಿಠಲನ ಚರಣವನು ಪೂಜಿಸಿ |ದರಣಿ ಸಾಧನವನ್ನು ತ್ವರಿತದಿಂದಲಿ ಮುಗಿಸಿ 5
--------------
ಶ್ರೀಶಪ್ರಾಣೇಶವಿಠಲರು
ವರಾಹಾವತಾರ ಜಯ ಜಯ ಯಜ್ಞವರಾಹ ಚಿನ್ಮಯ ಮೋದಾತ್ಮಕ ದೇಹ ಭಯವ ಪರಿಹರಿಸೀಗ ಆಲಯವನು ನಿಲಿಸುವ ರಾಗ ಪ. ಬ್ರಹ್ಮನ ನಾಸಿಕದಿಂದ ಪರಬೊಮ್ಮನು ಕಿಟಿಯಾದಂದ ಹಮ್ಮಿನ ದೈತ್ಯನ ಕೊಂದ ಈ ಕ್ಷಮ್ಮೆಯ ಸುಲಭದಿ ತಂದ 1 ಶಿಖಾಮಣಿ ರನ್ನ ಶ್ರೀ ಯಜ್ಞವರಾಹನೆ ನಿನ್ನ ಸುಜ್ಞತೆ ನಂಬಿದೆ ಮುನ್ನ ಸನ್ನøಗ್ಯನೆ(?) ನೀ ಸಲಹೆನ್ನ 2 ಶ್ರೀಪತಿ ವೆಂಕಟರಮಣ ಮಹದಾಪದ್ಗಣ ಹರಚರಣ ಭೂಪತಿ ತೋರಿಸು ಕರುಣ ಸಂತಾಪ ಬಿಡಿಸು ಸಚ್ಚರಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ವರೇಣ್ಯ ಪ ಶಂಕರಾಭರಣಾದ್ರಿ ವೆಂಕಟ | ಪಂಕಜಾಸನ ವಂದಿತಾಂಘ್ರಿಯೆಶಂಕೆ ಇಲ್ಲದೆ ಭಜಿಪ ಭಕುತರ | ಪಂಕಕಳೆ ಅಕಳಂಕ ಮೂರುತಿ ಅ.ಪ. ನೀರಜ ಮಂದರ ಧೃತ | ಸಿಂಧುಗತ ಹಿರಣ್ಯಾಕ್ಷ ಸಂಹೃತಕಂದನನು ಪಿತನಿಂದ ಸಲಹಿದ | ಇಂದ್ರಗವರಚುಪೇಂದ್ರ ಹರಿಯೇ ||ತಂದೆ ವಚನಕೆ ತಾಯ ಕಡಿದನೆ | ತಂದೆ ನುಡಿಗಡವಿಯನೆ ಸೇರ್ದನೆತಂದೆ ತಾಯ್ಗಳ ಬಂಧಹರ ಮುದ | ದಿಂದ ಮೋಹಕ ತುರಗವೇರ್ದ 1 ಸಿರಿ ಕಾಲ ಕರ್ಮ ಪಾದ ಪಲ್ಲವ | ಓಲೈಪ ಭಾಗ್ಯವ ಪಾಲಿಸೂವುದು 2 ಭವ ಕೂಪಾರ ದಾಟಿಪಧೀರ ಗುರು ಗೋವಿಂದ ವಿಠಲನ | ಅಪಾರ ಕರುಣವ ತುತಿಸಲಾಪನೆ 3
--------------
ಗುರುಗೋವಿಂದವಿಠಲರು
ವರ್ಣಿಸಲರಿಯೆ ನಿನ್ನ | ವರ್ಣಿಸಲರಿಯೆ ಗು | ಣಾರ್ಣವ ಹರಿಯೆ ಸೂ | ವರ್ಣ ಗಿರೀಶ ಸು | ಗಮನ ರಂಗಾ ಪ ಕುಂಡಲ ಮಿನುಗುವ ಹಸ್ತ ಕಂಕಣ ಬೆರಳುಂಗರ | ಕೌಸ್ತುಭ ಕಂಬು ಸೂದರು | ಶನ ಭುಜಕೀರ್ತಿ ಭೂ | ಷಣವಾದ ಶಿರ ಉರುವ ಒಪ್ಪಲು ಕಿಂ | ಕಿಣಿ ಕನಕಾಂಬರವ ಪೂಸಿದ ಗಂಧ | ಪುನುಗು ಜವ್ವಾದಿಯಿಂದೆಸೆವ ಸುರತರುವೆ 1 ಕಾಂಚಿದಾಮ ಥಳಿ | ಥಳಿಸುವ ಪದಕ ನ್ಯಾ | ತುಂಬಲು ಸೂಸುತಿರೆ ದಂತಾ | ಮಾತಾರಗಿಳಿಯಂತೆ ಶೋಭಿಸಿ | ಕಪೋಲ ಸುತ್ತಲು ಬೆಳಗುವ ಕಂಗಳ ನಾಸಕಾಂತಿ | ಸಿರಿ ತಿರುವೆಂಗಳಾ2 ಕಟಿ ಕರ ಎರಡೇಳು ಲೋಕ ಜಠರದೊಳಡಗಿರೆ | ಕರಿ ಪಲ್ಲಿನಂತೆ ಸುಂದರ ಜಂಘೆ ಗುಲ್ಫ ವಿ | ಪಾದ ನಖ ಪರಿ ಪರಿ ರೇಖೆಗಳ ಕಾಲಿಂದಿಗೆ | ನಿತ್ಯ ಮಂಗಳಾ 3 ನಿರಯ ತ್ತಮ ಜನ ಮನೋರಥ | ಗಮ ಸಿದ್ಧಾಂತನೆ ವಿ | ಕ್ರಮದಾನವ ಹರ | ಕೋಟಿ ಪ್ರಕಾಶಾ | ವೆಂಕಟೇಶಾ | ಅಪ್ರಾಕೃತ | ಪ್ರಮೆಯಭರಿತನಾದ | ಕುರುವಂಶ ವಿನಾಶಾ 4 ಭೂಗೋಳದೊಳಗಿದರಾಗಮ ತಿಳಿ | ದುರಗ ಗಿರಿ ಯಾತ್ರಿಗೆ | ಭೋಗದಾಶೆಯ ಬಿಟ್ಟು | ವೇಗದಿಂದಲಿ ನಿಜ | ಭವ ಸಾಗಿ ಬರಲು ಚನ್ನಾಗಿ ಜ್ಞಾನವ ನೀವುತ್ತ ಸಾಕುವಂಥ | ಶ್ರೀ ಗುರು ವಿಜಯವಿಠ್ಠಲ ಭಕ್ತರ ದಾತಾ5
--------------
ವಿಜಯದಾಸ
ವರ್ಣಿಸಲಳವೆ ಸುಗುಣಸಾಂದ್ರನ ಪ ಕರ್ಣಜನಕಕೋಟಿ ತೇಜಶ್ರೀಶ ಭಜಕ ಜಯ ಮುನೀಂದ್ರನ ಅ.ಪ ಸೂತ್ರ ನೇತ್ರದಿಂದಬದ್ಧಮಾಡಿ ಪಿಡಿದು ಕಡೆದುಶುದ್ಧ ಯುಕುತಿ ಸುಧೆಯ ತೆಗೆದನ ಶಿಷ್ಯ ಜನಕೆಶ್ರದ್ಧೆಯಿಂದಲದನು ಎರೆದನ ಕ್ರೋಧದಿಂದಕೃದ್ಧವಾದಿಗಳನು ಗೆಲಿದನ-ಜಯ ಮುನೀಂದ್ರನ 1 ಮಾನನೀಯ ಶೀಲರಾದಮಾನವರನು ಕರೆದು ಹರಿಯಧ್ಯಾನದಲ್ಲಿ ನಿಲಿಸಿ ಒಲಿಸಿಹಾನಿಯಿಲ್ಲದ ಮುಕುತಿ ಪಡೆದಜ್ಞಾನಮತವ ಜನಕೆ ಸಾರ್ದನ, ಶಿಷ್ಯಜನಕೆಸಾನುರಾಗದಿ ತತ್ವಪೇಳ್ದನಜಯ ಮುನೀಂದ್ರನ2 ಸರಸದಿಂದ ಮೂರ್ಯೋಳುವಿರಸ ದುಷ್ಟ ಭಾಷ್ಯಗಳನುಮುರಿದಕ್ಷೋಭ್ಯ ತೀರ್ಥಯತಿಪಕರಸಂಜಾತ ರಮ್ಯಚರಿತಶರಣ ಜನರ ಪೊರೆವ ಯತಿಪನ, ಶಿಷ್ಯಜನರಮರುಳ ಮೋಹತಿಮಿರ ದಿನಪನ, ನಮ್ಮ ಪರಮಗುರು ಶ್ರೀಕೃಷ್ಣ ಪಾದಭಜಕನಜಯ ಮುನೀಂದ್ರನ3
--------------
ವ್ಯಾಸರಾಯರು
ವರ್ಷ ವರ್ಧಂತಿಗಳು (ಆಚಾರ್ಯರ 21ನೇ ವರ್ಷದ ವರ್ಧಂತಿ ಸಮಯ) ನಿನ್ನ ನಂಬಿದೆ ಶರದಿಂದುವದನ ಎನ್ನ ಪಾಲಿಸು ವರಕುಂದರದನ ಮುನ್ನ ಪಾತಕಿಯಾದಜಾಮಿಳನು ತನ್ನ ಚಿಣ್ಣನ ಕರೆದರೆ ಮನ್ನಿಸಿದವನೆಂದು ಪ. ನರ ಧ್ರುವಾಂಬರೀಷ ಪ್ರಹ್ಲಾದ ಮುಖ್ಯರನ- ವರತ ನಿನ್ನನಾಧರಿಸಿದರವರ ಪೊರೆದನೆಂಬೀ ಮದಗರುವ ಭಾರದಲತಿ- ಕಿರಿದಾಗಿಹ ಎನ್ನ ಮರೆವುದುಚಿತವೆ 1 ಹತ್ಯ ಪ್ರಮುಖ ದುಷ್ಕøತ್ಯಗಳಿರಲಿ ನಿತ್ಯ ಪರಧನಾಸಕ್ತನಾಗಿರಲಿ ಭಕ್ತವತ್ಸಲ ನಿನ್ನ ಸ್ಮರಣೆ ಮಾತ್ರದಿ ಪಾಪ ಮುಕ್ತಿದೋರಲು ಪೂರ್ಣಶಕ್ತಿಯಾಗಿಹೆ ಎಂದು 2 ತುರುಗಳೆಣಿಸಿದಂತೆ ಕರುಗಳ ಗುಣವ ಮರೆದಂತೆ ಜನನಿ ತನ್ನಯ ಬಾಲನನುವ ಕರುಣಾಳು ನೀ ಮುನಿಸಿಂದ ಕರುಣಿಸದಿರೆ ಎನ್ನ ಪೊರೆವರಿನ್ಯಾರಿಹರುರಗಾದ್ರಿಯರಸ ಕೇಳ್ 3
--------------
ತುಪಾಕಿ ವೆಂಕಟರಮಣಾಚಾರ್ಯ
ವಲ್ಲಭೆ ಬಲು ಸುಲಭೆ ಪ ಮೂಕಾಸುರನ ಕೊಂದು ಮೂಕಾಂಬಿಕೆನಿಸಿದೆ ಶ್ರೀ ಕಮಲೆ ಎಲ್ಲಿನಾ ಕಾಣೆ ನಿನಗೆ ಸಮಾ 1 ಕೋಲ ಮುನಿಗೊಲಿದಮಲ ಮೃಗನಾಭಿ ಫಾಲೆ ಸಜ್ಜನರ ಪಾಲೆಬಾಲೆ ಜಾತರಹಿತೆ ಲೀಲೆ ನಾನಾ ಪುಷ್ಪಮಾಲೆ ಕಮಲಹಸ್ತೆ2 ಶಿವದುರ್ಗೆ ನೀನೆಂದು ಶ್ರವಣಮಾಡಲು ಮನುಜ ರವರವ ನರಕದಲ್ಲಿ ಬವಣೆಪಟ್ಟ ಮೇಲೆ ಸವಿಯದಂತೆ ತಮಸುನಿವಹದೊಳಗೆ ಇಪ್ಪನು 3 ಕಾಮತೀರ್ಥ ಬಳಿಯ ಪ್ರೇಮದಿಂದಲಿ ನಿಂದೆ ಸೀಮೆಯೊಳಗೆ ನಿನ್ನಯ ನಾಮಕೊಂಡಾಡಲು ತಾಮಸಗಳ ಕಳೆದು ನಿಷ್ಕಾಮ ಫಲ ಪಾಲಿಪೆ 4 ಧರೆಯೊಳು ಷೋಡಶಗಿರಿಯ ಪ್ರಾದೇಶ ಮಂ ನಿತ್ಯ ಸಿರಿ ವಿಜಯವಿಠ್ಠಲನ್ನಪರಮ ಪ್ರೀತಿ ಅರ್ಧಾಂಗಿ 5
--------------
ವಿಜಯದಾಸ
ವಶವಲ್ಲದೀ ಮನದ ದೆಸೆಯಿಂದೆ ನಾ ಬಲು ದೆಸೆಗೆಟ್ಟು ಬಳಲುವೆ ಕುಸುಮಾಕ್ಷ ಕಣ್ದೆರೆಯೊ ಪ ನಶಿಪ ಪ್ರಪಂಚ ಭ್ರಮಿಸಿ ಹಸಗೆಡಿಸಿ ನಿಜಧ್ಯಾನ ಪಶುವಿನಂತೆನ್ನನು ದಿಸೆದಿಸೆಗೆಳಿಪುದು ಅ.ಪ ಭುವಿಪರನೊಲಿಸರೆಲವದಿ ಭೂಮಿಯ ಪಡೆದೆ ಸವ ಜೋಡಿ ನೂಕಿತ್ತು ಜವದಿ ಕಟ್ಟುವುದು ಬುವಿಯೊಳು ಮಿಗಿಲೆನಿಸುವ ತೆರೆ ಮೇಲ್ಮಾಡಿ ಭವನ ರಚಿಸಿ ಕೋಟಿದ್ರವ್ಯಗಳಿಗಳುವುದು 1 ಮದುವ್ಯಾಗಿ ಪದ್ಮಿನಿಯ ವದನದೊಳ್ವದನಿಕ್ಕಿ ಮದನಕದನದಿ ಸುಖಿಸುವುದೊಂದು ಫ¼ಗಿ ಸದನ ಮುರಿದು ಸಂ ಪದವೆಲ್ಲ ತನ್ನಗೆ ಒದಗಿಬರಲೆನ್ನುವುದು 2 ತಡೆಯದೆ ವೈರಿಗಳ ಕಡುಕೋಪದಿಂ ತಂದು ಪಿಡಿದು ಕಂಬಕೆ ಕಟ್ಟಿ ಸುಡಿಸುವುದೊಡನೆ ಕಡುಗಲಿತನದಿಂದ ಪೊಡವಿಪರ ಸದೆಬಡಿದು ಪೊಡವಿ ಗೆಲಿದು ಒಂದೇ ಕೊಡೆಯಿಂದಾಳುವುದು 3 ಯಾತ್ರೆ ಮಾಡುವುದೊಮ್ಮೆ ಕ್ಷೇತ್ರದೊಳಗೆ ಕೂತು ನೇತ್ರಮಂ ಬಂಧಿಸಿ ಸ್ತೋತ್ರ ಮಾಡುವುದು ಮೂತ್ರದ್ವಾರದೆ ಬಂದ ಸೂತ್ರದ ಕಾಯಕ್ಕೆ ಧಾತ್ರಿ ಸೊನ್ನೆಂದೊಮ್ಮೆ ಖಾತ್ರಿ ಮಾಡುವುದು 4 ಯಾತರ್ಹಲವು ಪರಿಮಿತಿಯಿಲ್ಲದ್ಯೋಚಿಸಿ ಖತಿ ತಾಳಲಾರೆ ಅತಿಭ್ರಷ್ಟಮನದ ದುರ್ಮತಿ ನಿವಾರಿಸು ಗತಿ ನೀಡೆನಗೆ ಕೃಪೆಯಿಂ ಹಿತಭಕ್ತ ಶ್ರೀರಾಮ 5
--------------
ರಾಮದಾಸರು