ಒಟ್ಟು 6459 ಕಡೆಗಳಲ್ಲಿ , 126 ದಾಸರು , 3912 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾಕೆ ನೀನು ಹೀಗೆ ಮಾಡುವಿ ವೀರ ಹನುಮ ಯಾಕೆ ನೀನು ಹೀಗೆ ಮಾಡುವಿ ಪ. ಯಾಕೆ ನೀನು ಹೀಗೆ ಮಾಡುವಿ ಜೋಕೆಯಿಂದ ಸಲಹೊ ಎಂಬ ವಾಕು ಕೇಳದೇನೋ ನಿನಗೆ ಬಿಂಕ ಅ.ಪ. ಸತ್ಯವಂತನೆಂಬ ವಾಕು ಎತ್ತ ಪೋಯಿತೀಗ ಬಿರುದು ಒತ್ತಿ ಒತ್ತಿ ಕೇಳಿದರೂ ಉತ್ತರವÀ ಕಾಣೆನಲ್ಲೊ 1 ಒಡೆಯ ರಾಮಭಂಟನೆನಿಸಿ ಒಡವೆ ವಸ್ತು ಇಟ್ಟುಕೊಂಡು ಬಡಿವಾರದಲಿ ನಿಂತರೀಗ ಬಡವರೆಮ್ಮ ಗತಿಯದೇನೊ 2 ವೀರ ಉಡುಪು ಧರಿಸಿಕೊಂಡು ವೀರ ಭೀಮನೆನಿಸಿಕೊಂಡು ಮೋರೆ ಎತ್ತಿ ನೋಡದಿರಲು ದಾರಿಯಾವುದೆಮಗೆ ಪೇಳು 3 ಮುನಿಯ ರೂಪ ತಾಳಿ ಮತ್ತೆ ಮೌನಧರಿಸಿ ನಿಂತರೀಗ ಮಾನತನದಿ ತುತಿಸುವೆಮಗೆ ಏನು ಮುಂದೆ ಗತಿಯು ಇನ್ನು 4 ಬೇಡಲಿಲ್ಲೊ ನಿನ್ನ ಒಡವೆ ಬೇಡಲಿಲ್ಲೊ ನಿನ್ನ ಭಾಗ್ಯ ಆಡೊ ಒಂದು ಮಾತು ಎನಲು ಮಾಡಿರುವೆ ಮನವ ಕಲ್ಲು 5 ಏನು ಸೇವೆ ಮಾಡಲೀಗ ಏನು ನಿನ್ನ ಸ್ತುತಿಸಲೀಗ ಏನು ಧ್ಯಾನ ಮಾಡಲೀಗ ಏನು ತಿಳಿಯದಲ್ಲೊ ಎನಗೆ 6 ಶುದ್ಧವಾದ ನಿನ್ನ ಒಂದು ಮುದ್ದು ಮಾತು ಕೇಳೆನೆಂದು ಒದ್ದಾಡುವೆನೊ ಮನದಿ ಬಹಳ ಇದ್ದಿಯಾಕೊ ಸುಮ್ಮನಿನ್ನು 7 ಮನದಿ ಎನಗೆ ದೃಢವು ಇಲ್ಲ ಹನುಮ ನಿನಗೆ ದಯವು ಇಲ್ಲ ಮುನಿಸು ಮಾಡೆ ನೀನು ಸಲ್ಲ ಘನವೆ ನಿನಗೆ ಪೇಳೊ ಸೊಲ್ಲ 8 ನಿನ್ನ ಹೊರತು ಪೊರೆವರಿಲ್ಲ ಮನ್ನಿಸಿನ್ನು ಕಾಳಿನಲ್ಲ ನಿನ್ನ ಕೀರ್ತಿ ಜಗದಿ ಬಹಳ ಉನ್ನತದಲಿ ಮೆರೆಸೊ ಮಲ್ಲ 9 ಅನ್ನಕೊಡಿಸಿ ಇಟ್ಟುಕೊಂಡು ಮನ್ನಿಸುವೆನೆಂಬೋ ಇಂಥ ಭಿನ್ನನಾದ ನುಡಿಗೆ ನಾನು ಇನ್ನು ಒಪ್ಪಲಾರೆ ಕಂಡ್ಯ 10 ಕದರುಮಂಡಲಿಗಿ ಹನುಮ ಹೆದರಲಾರೆ ನಿನಗೆ ಇನ್ನು ಒದಗಿ ಪಾಲಿಸೆಂದು ಬೇಡೆ ಹೃದಯ ಕರಗದಲ್ಲೊ ನಿನಗೆ 11 ನಿರುತ ನಿನ್ನ ದಾಸಳೆನಿಸಿ ಚರಿಸುವಂಥ ಎನಗೆ ಒಲಿದು ಅರುಹದಿರಲು ಒಂದು ವಾಕು ಬಿರುದು ಉಳಿವುದೇನೊ ಇನ್ನು 12 ಇಷ್ಟ ಸಲಿಸದಿರೆ ಗೋಪಾಲ ಕೃಷ್ಣವಿಠ್ಠಲಗ್ಹೇಳಿ ನಾನು ಕಟ್ಟಿ ಹಾಕಿಸುವೆನೊ ಎನ್ನ ಮೂರ್ತಿ 13 ಗುರುಗಳಾಜ್ಞೆಯಿಂದ ನಾನು ಹರುಷದಿಂದ ಬಳಿಗೆ ಬರಲು ಗರುವದಿಂದ ನಿನ್ನ ನೇತ್ರ ತೆರದು ನೋಡದಿರುವರೇನೊ 14 ತಂದೆ ನೀನೆ ಸಲಹೊ ಎಂದು ಬಂದು ನಿನ್ನ ಅಡಿಗೆ ಎರಗೆ ಒಂದು ಮಾತನಾಡದಂಥ ಕುಂದು ಏನು ಪೇಳೊ ಇನ್ನು15 ಬೇಡ ಬೇಡ ಛಲವು ಇನ್ನು ಪಾಡಿಪೊಗಳುವಂತೆ ದಯವ ಮಾಡು ಎನ್ನ ಮೊರೆಯ ಕೇಳಿ 16
--------------
ಅಂಬಾಬಾಯಿ
ಯಾಕೆ ಪುಟ್ಟಿಸಿದಿ ಇನ್ನು ಎಲೊ ಹರಿಯೆ | ಲೋಕ ದೊಳಗನುಗಾಲ ತಿರಿದು ತಿಂಬುವಂತೆ ಮಾಡಿ ಪ ಒಡಲಿಗಾಗಿ ಒಬ್ಬನ ಸಂಗಡ ಹೋಗಲು | ಕೊಡುವವನು ಇಲ್ಲೆಂದು ಪರಿಹರಿಸುವ || ಸುಡು ಈ ಶರೀರವ ಬಳಲಲಾರೆನೊ ವಿಷದ, ಮಡುವನಾದರು ಧುಮುಕಿ ಮರಣವಾಗುವೆ ರಂಗಾ 1 ಪ್ರತಿದಿನವೂ ಅನ್ನ ಕೊಡುವವನ ಬಾಗಿಲಿಗ್ಹೋಗೆ | ಹುತವಾಗುವನು ಎನ್ನ ನೋಡುತಲಿ || ಪರಿ ಬದುಕಿ ಇಹೋದಕಿಂತ | ಹತವಾಗಬಹುದಂಬಿನ ಮೊನೆಗೆ ಬಿದ್ದು ರಂಗಾ 2 ಎಲ್ಲಿ ಬೇಡಿದಲ್ಲವೆಂಬೋ ಸೊಲ್ಲಿಲ್ಲಿದೇ | ಒಲ್ಲೆನೋ ಸಾಕು ಈ ನರ ಜನ್ಮವು ಸಿರಿ ವಿಜಯವಿಠ್ಠಲ ನಿ- | ನ್ನಲ್ಲಿ ದೂತರ ಸಂಗದಲ್ಲಿ ಸುಖಬಡಿಸೊ 3
--------------
ವಿಜಯದಾಸ
ಯಾಕೆ ಪುಟ್ಟಿಸಿದಿ ನೀ ಸಾಕಲಾರದೆ ಜಗ-ದೇಕ ಕಾರಣಪುರುಷನೆ ಕೃಷ್ಣ ಪ ವಾಕು ಚಿಂತಿಸೆ ಇಂಥಕಾಕು ಮಾಡುವುದುಚಿತವೆ ಕೃಷ್ಣ ಅ.ಪ. ಒಡಲಿಗನ್ನವ ಕಾಣೆ ಉಡಲು ಅರಿವೆಯ ಕಾಣೆಗಡಗಡನೆ ನಡುಗುತಿಹೆನೋ ಕೃಷ್ಣಮಡದಿ ಮಾತೆಯರ ಬಿಟ್ಟು ಒಡಹುಟ್ಟಿದವರ ಬಿ -ಟ್ಟಡವಿ ಪಾಲಾದೆನಲ್ಲೋ ಕೃಷ್ಣಕುಡುತೆ ಕೊಡುವವರಿಲ್ಲ ನುಡಿಯ ಕೇಳುವರಿಲ್ಲಬಡತನವು ಕಂಗೆಡಿಸಿತೋ ಕೃಷ್ಣಕಡೆ ಹಾಯಿಸುವರ ಕಾಣೆ ನಡುಮಡುವಿನೊಳು ಕೈ ಬಿಡದೆ ದಡವನು ಸೇರಿಸೋ ಕೃಷ್ಣ 1 ಕೊಟ್ಟವರ ಸಾಲವನು ಕೊಟ್ಟು ತೀರಿಸದವರಪೊಟ್ಟೆಯೊಳು ಪುಟ್ಟಲಾಯ್ತೋ ಕೃಷ್ಣಎಷ್ಟು ಜನುಮದಿ ಮನಮುಟ್ಟಿ ಮಾಡಿದ ಕರ್ಮಕಟ್ಟೀಗ ಉಣಿಸುತಿಹುದೋ ಕೃಷ್ಣಸೃಷ್ಟಿಯೊಳಗೆನ್ನಂಥ ಕೆಟ್ಟ ಪಾಪಿಷ್ಠ ಜನಘಟ್ಟಿಸಲಿಲ್ಲವೇನೋ ಕೃಷ್ಣವಿಠ್ಠಲನೆ ನಿನ್ನ ಮನಮುಟ್ಟಿ ಭಜಿಸಿ ಹಿಂದೆಎಷ್ಟು ಜನ ಬದುಕಲಿಲ್ಲೋ ಕೃಷ್ಣ 2 ಆಳು ದೇಹವು ಗೇಣು ಕೀಳಾಗಿ ಪಲ್ಕಿರಿದುಖೂಳ ಜನರ ಮನೆಗೆ ಕೃಷ್ಣಹಾಳು ಒಡಲಿಗೆ ತುತ್ತು ಕೂಳಿಗೆ ಹೋಗಿ ಅವರವಾಲೈಸಲಾರೆನಲ್ಲೋ ಕೃಷ್ಣಬಾಳು ಈ ಪರಿಯಾದ ಮ್ಯಾಲೆ ಭೂಮಿಯಲಿ ಬಹುಕಾಲ ಕಳೆಯುವುದುಚಿತವೆ ಕೃಷ್ಣಆಲಸ್ಯ ಮಾಡದಲೆ ಈ ವ್ಯಾಳ್ಯದಲಿ ಅರಿತುಪಾಲಿಸಲು ಬಹು ಕೀರ್ತಿಯೋ ಕೃಷ್ಣ 3 ಸಿರಿ ಅರಸನೆಂದು ಶ್ರುತಿ ಸಾರುತಿದೆಬಂದುದೀಗೇನು ಸಿರಿಯೋ ಕೃಷ್ಣಒಂದೊಂದು ನಿಮಿಷ ಯುಗಕಿಂತಧಿಕವಾಗುತಿದೆಮುಂದೋರದ್ಹಾಂಗಾಯಿತೋ ಕೃಷ್ಣಸಂದೇಹವಿಲ್ಲ ಗೋವಿಂದ ಶ್ರೀಪದದಾಣೆತಂದೆ ನೀ ರಕ್ಷಿಸದಿರೆ ಕೃಷ್ಣಮುಂದೆ ಭಜಿಸುವರು ಹೀಗೆಂದು ವಾರುತೆ ಕೇಳಿಬಂದುದಪಕೀರ್ತಿ ಮಾತು ಕೃಷ್ಣ 4 ವತ್ಸರ ಈರೀತಿ ಕಾಲಕಳೆದೆನೋ ಕೃಷ್ಣವ್ಯರ್ಥವಾಯಿತು ಜನುಮ ಸಾರ್ಥಕಾಗದು ಕಣ್ಣುಕತ್ತಲೆಗವಿಸಿತಲ್ಲೋ ಕೃಷ್ಣಇತ್ತ ಬಾರೆಂತೆಂದು ಹತ್ತಿಲಿಗೆ ಕರೆದೊಂದುತುತ್ತು ಕೊಡುವರ ಕಾಣೆನೋ ಕೃಷ್ಣವಿಸ್ತರಿಸಲಾರೆ ಇನ್ನೆತ್ತ ಪೋಗಲೊ ನಿನ್ನಚಿತ್ತವ್ಯಾತಕೆ ಕರಗದೋ ಕೃಷ್ಣ 5 ಆರು ಗತಿ ನಿನಗಧಿಕರಾರು ಧಾರುಣಿಯೊಳಗೆತೋರಿಸೈ ಕರುಣನಿಧಿಯೆ ಕೃಷ್ಣಈರೇಳು ಲೋಕಕಾಧಾರವಾದವಗೆ ಬಲುಭಾರವಾದವನೆ ನಾನು ಕೃಷ್ಣಮೀರಿ ನುಡಿಯಲು ಹದಿನಾರೆರಡು ಪಲ್ಗಳುಬೇರು ಕಳಕಳಯಿತೋ ಕೃಷ್ಣತೋರು ಬಂಕಾಪುರದ ಧಾರುಣಿಪುರವಾಸವೀರ ನರಸಿಂಹದೇವ ಕೃಷ್ಣ 6 ಹರಿಯಾತ್ರೆ ಮಾಡಲಿಲ್ಲ ಹರಿಮೂರ್ತಿ ನೋಡಲಿಲ್ಲಹರಿದಾಸ ಸÀಂಗವಿಲ್ಲ ಕೃಷ್ಣಹರಿಸ್ಮರಣೆ ಮಾಡಲಿಲ್ಲ ಸುರನದಿಯ ಮೀಯಲಿಲ್ಲಧರಣಿ ಸಂಚರಿಸಲಿಲ್ಲ ಕೃಷ್ಣಅರಿತರಿತು ಮನ ವಿಷಯಕೆರಗಿ ಹರುಷವ ತಾಳಿಬರಿದಾಯಿತಾಯುವೆಲ್ಲ ಕೃಷ್ಣಮರುತಾಂತರ್ಗತ ಸಿರಿಯರಸ ಹರಿಯೆಂದುಹರುಷಾಬ್ದಿ ಮಗ್ನನಲ್ಲ ಕೃಷ್ಣ7 ಹರಿನಾರಾಯಣನೆಂದು ಕರವೆತ್ತಿ ಮುಗಿದೊಮ್ಮೆ ಮೈ ಮರೆದು ನಟಿಸಲಿಲ್ಲ ಕೃಷ್ಣಹರಿಸ್ಮರಣೆ ಸ್ಮರಿಸಿ ಸಿರಿತುಳಸಿ ಪುಷ್ಪವನುಕರವೆತ್ತಿ ನೀಡಲಿಲ್ಲ ಕೃಷ್ಣಸರ್ವಜ್ಞರಾಯರು ವಿರಚಿಸಿದ ಗ್ರಂಥವನುದರುಶನವೆ ಮಾಡಲಿಲ್ಲ ಕೃಷ್ಣಸ್ಮರಿಸಲಾರದ ಪಾಪ ಸ್ಮರಣೆಪೂರ್ವಕ ಮಾಡಿಸ್ಥಿರಭಾರನಾದೆನಲ್ಲೋ ಕೃಷ್ಣ 8 ದುರುಳಜನರೊಡನಾಡಿ ಹರಿಣಾಕ್ಷಿಯರ ಕೂಡಿಸರಿ ಯಾರು ಎಂದು ತಿರುಗಿ ಕೃಷ್ಣನಿರುತ ಕ್ಷುದ್ರವ ನೆನೆಸಿ ನೆರೆದೂರ ಮಾರಿ ಹೆಗ್ಗೆರೆಗೋಣನಂತೆ ತಿರುಗಿ ಕೃಷ್ಣಪರರ ಅನ್ನವ ಬಯಸಿ ಶರೀರವನೆ ಪೋಷಿಸಿಶಿರ ಒಲಿದು ಶಿಲೆಗೆ ಹಾಯಿದು ಕೃಷ್ಣಶರಣವತ್ಸಲನೆಂಬೊ ಬಿರುದು ಪಸರಿಸುವಂಥಕರುಣ ಇನ್ನೆಂದಿಗಾಹುದೊ ಕೃಷ್ಣ 9 ಉರಗ ಫಣಿ ತುಳಿಯಲೊಎರಡೊಂದು ಶೂಲಕ್ಹಾಯಲೊ ಕೃಷ್ಣಕೊರಳಿಗ್ಹಗ್ಗವ ಹಾಕಿ ಮರವೇರಿ ಕರಬಿಡಲೋಗರಗಸದಿ ಶಿರಗೊಯ್ಯಲೋ ಕೃಷ್ಣಕರುಣವಾರಿಧಿ ಎನ್ನ ಕರಪಿಡಿದು ಸಲಹದಿರೆಧರೆಯೊಳುದ್ಧರಿಪರ್ಯಾರೋ ಕೃಷ್ಣ 10 ಎಷ್ಟು ಹೇಳಲಿ ಎನ್ನ ಕಷ್ಟ ಕೋಟಿಗಳನ್ನುಸುಟ್ಟೀಗ ಬೇಯ್ಯುತಿಹವೋ ಕೃಷ್ಣಕಷ್ಟಬಟ್ಟ ಮಗನೆಂದು ದೃಷ್ಟಿ ನೀರೊರೆಸೆನ್ನಪೊಟ್ಟೆಯೊಳ್ಪಿಡಿವರ್ಯಾರೊ ಕೃಷ್ಣಕೃಷ್ಣನಾಮ ವಜ್ರಕ್ಕೆ ಬೆಟ್ಟ ದುರಿತವು ನೀಗಿಥಟ್ಟನೆ ಬಂದು ನೀನು ಕೃಷ್ಣಇಷ್ಟವನು ಸಲಿಸಿ ಗುಟ್ಟ್ಟಲಿ ಶ್ರೀರಂಗವಿಠಲ ಎನ್ನ ಕಾಯೋ ಕೃಷ್ಣ 11
--------------
ಶ್ರೀಪಾದರಾಜರು
ಯಾಕೆ ಬರವಲ್ಲಿ ಭಕುತನವಸರಕೆ ಪ ಬೇಕಿಲ್ಲೆ ಭಕ್ತವತ್ಸಲನೆಂಬ ಬಿರುದೀಗ ಅ.ಪ ಸುರಮುನಿ ನುಡಿಕೇಳಿ ನಾರಿ ಸತ್ಯಭಾಮೆ ಹರಿ ನಿನ್ನ ದಾನಮಾಡೆ ವರ ವೀಣ ಪುಸ್ತಕ ಹೊರಿಸಿ ಕರೆದೊಯ್ದನೇನೊ 1 ಮಾತೆಯ ಹಂಗಣೆಯ ಮಾತಿಗೆ ಖತಿಗೊಂಡು ಪೋತ ಧ್ರುವ ಅರಣ್ಯ ಪೋಗೆ ಕಾಯ ಪೋದ್ಯಾ 2 ಕುರುಪ ಧರ್ಮಾದ್ಯರ ಕರೆಸಿ ಪಗಡೆಯಾಡೆ ಸರಸಿಜಾಕ್ಷಿಯ ಸೀರೆಯ ಕಾಯ ಪೋದ್ಯಾ 3 ಹಿರಣ್ಯಾಕ್ಷನನುಜ ತರಳನ ಬಾಧಿಸೆ ಥೋರ ಕಂಬದಿ ಒಡೆದು ನರಮೃಗ ರೂಪನಾಗಿ ಪೋದ್ಯಾ 4 ನೀರಡಿಸಿ ಗಜರಾಜ ಸರೋವರಕೆ ಬರಲು ನಕ್ರ ಪಿಡಿದೆಳೆಯೆ ಕಾಯ ಪೋದ್ಯಾ 5 ವರವೇದ ಶಾಸ್ತ್ರ ತೊರದು ಪರಮ ನೀಚಳ ಕೂಡಿ ಮರಣ ಕಾಲದಲ್ಲಜಮಿಳ ನಾರಗನೆಂದು ಕರೆಯೆ ಪೋದ್ಯಾ 6 ಕರುಣಿ ವಿಜಯ ರಾಮಚಂದ್ರವಿಠಲ ಅವರ ಸರಿ ನಾನಲ್ಲವೊ ತವ ಚರಣ ಸೇವಕರ ಸೇವಕನೊ 7
--------------
ವಿಜಯ ರಾಮಚಂದ್ರವಿಠಲ
ಯಾಕೆ ಬಾರನೇ ರಂಗಯ್ಯ ಯಾಕೆ ಬಾರನೇ | ಲೋಕವೀರೇಳು ವ್ಯಾಪಕ ಸುಖವವಿರಲು ಮನೆಗೆ ಧ್ರುವ ಸ್ಮರನ ಬಾಣದ ಮೊನಿಗೆ | ಗುರಿಯಮಾಡಿ ತಾಯೆನೆಗೆ | ಸಾರುವರೇ ಎನ್ನಗಲಿ ತರಳೆಯಂದರುವುತಲಿ 1 ಕಡೆಗೆ ಕರುಣಾಳು ನಮ್ಮ ವಡಿಯಾನೊಳೂ ತಪ್ಪಿಲ್ಲಮ್ಮಾ | ಪೊಡವಿಲೆ ಪೆಣ್ಣೊಡಲೆ ವಿಡಿಯಬಾರದು ಬಾಲೆ 2 ಎನ್ನ ಮನಾ ಎನೊಲ್ಲದು ಕಣ್ಣಿಗೆ ನಿದ್ರೆಬಾರದು | ಸನ್ನುತ ಮಹಿಪತಿ ಪ್ರೀಯಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಯಾಕೆ ಮೈ ಮರೆತಿದ್ದೆ ಹೇಳೋ ಎಲೆ ಮರುಳೆ ಜೋಕÉ ತೀರೀತು ನಿನ್ನ ಬಾಳು ಪ ನಿಟ್ಟೆಲುಗಳಿಂದ ಕೈ ಕಾಲ್ಗಳೆಂಬುವನು ಮಾಡಿ ಚಿಟ್ಟೆಲುಗಳನು ಸಂದಕೂಡಿ ಪಟ್ಟಿನಲ್ಲಿ ತನುಪುರವ ಕಟ್ಟಿದರು ನರದಿಂದ ಪಟ್ಟಣವ ನಿರ್ಮಿತವ ಮಾಡಿ ಅಷ್ಟಪುರ ಕಲ್ಲಲ್ಲಿ ನವಕವಾಟವ ರಚಿಸಿ ದುಷ್ಟದುರ್ಜನರೆಲ್ಲ ಕೂಡಿ ಕಟ್ಟಿದರು ಜೀವನಿಗೆ ಇವರ ಕೂಡಾಡಿ 1 ರಕ್ತಮಾಂಸವು ಚರ್ಮಪೂಡಿ ಮತ್ತೆ ಮಲ ಮೂತ್ರ ಕ್ರಿಮಿ ಕೀಟ ರುಜೆಬಾಧೆಯಲಿ ವಿಸ್ತರದಲಿದಕೆÉ ನಲಿದಾಡಿ ವ್ಯರ್ಥದಲಿ ದಿನವ ನೀಗಾಡಿ ಅಸ್ಥಿರದ ದೇಹವನು ನಚ್ಚಿಭವ ಶರಧಿಯೊಳು ಕುಸ್ತರಿಸಿ ಬಿದ್ದು ಈಜಾಡಿ 2 ಹೊಲಸು ಹೆಬ್ಬಡಿಕೆ ನಾರುವನರಕ ಕೀವು ಕ್ರಿಮಿ ಯಲು ನರಂಗಳು ಮಜ್ಜೆ ಮಾಂಸ ಕೊಳಕು ನಾರುವ ಹಡಿಕೆಗೆಳಸುತಿಹ ನಾಯಂತೆ ಬಲಿದಿಹುದು ನಿನ್ನ ಮೇಲಂಶ ಬಳಲಿ ಬಸವಳಿದೆಲೋನ ಪುಂಸ ಕೊಳೆಯ ಮೇಧ್ಯದ ಪುಂಜ ತನುವಿದನು ನೆರೆನಂಬಿ ಫಲವಿಲ್ಲ ಹರಿಯಧ್ಯಾನಿಸೋ ಪರಮಹಂಸ 3 ಸತಿ ಹೊಂದುವರು ನಿನ್ನ ಕಣ್ಣಾರೆ ಕೇಳ್ವೆ ಕಿವಿಯಿಂದ ಗುರಿಯಾಗಿ ಇಂದಿರೇಶನ ಪೂಜಿಸಲು ನಾಕೈಯಾರೆ4 ಇದರೊಳಗೆ ಬಾಲ್ಯಕೆನೊರ್ಯ ಯೌವ್ವನವೆಂಬ ಉದಯಾಸ್ತಮಾನ ಪರಿಯಂತರವು ಸುದತಿ ಸುತರಲಿ ಮೋಹವಿರಿಸಿ ದಣಿಯದಿರು ಮನವ ನೆರೆನಿಲಿಸಿ ಲಕ್ಷ್ಮೀರಮಣನನು ಹೃದಯದೊಳುಸ್ಮರಿಸಿ 5
--------------
ಕವಿ ಪರಮದೇವದಾಸರು
ಯಾಕೆ ಮೈಮರೆದೆ ನೀನು ಪ. ಯಾಕೆ ಮೈಮರೆದೆ ಶ್ರೀ ಹಯವದನನ ಪಾದವನುಬೇಕೆಂದು ಬಿಡದೆ ಭಜಿಸೊ ನಿನ್ನಕಾಕು ವ್ಯಸನಗಳ ತ್ಯಜಿಸೊ ಈ ದೇಹತಾ ಕಂಡ ಕನಸೋ ಸ್ಥಿರವಲ್ಲ ಇನ್ನುನೀ ಕೇಳದಿರೆ ನಿನ್ನ ಮನಸೋ ಪ್ರಾಣಿ ಅ.ಪ. ಪರಹೆಣ್ಣುಗಳ ನೋಡಿ ಪಾತಕಿಗಳ ನೀಡಾಡಿಹರಿದೆದ್ದು ಕಡೆಗೆ ಕರೆವೆ ಎಲೆಮರುಳೆ ಹರುಷದಿಂದವಳ ನೆರೆವೆ ಅಕಟಕಟದುರುಳ ಜೀವನೆ ನಿನಗೆ ತರವೆ ಮತ್ತೊ-ಬ್ಬರಿಗೆ ಬರಿದೆ ನೀ ಹೇಳುವೆಲ್ಲೊ ಶಾಸ್ತ್ರಗಳನೊರದೊರದು ಕೇಳ್ವೆಯಲ್ಲೊ ನೀ ಹೋಗಿನರಕದೊಳು ಬೀಳ್ವೆಯಲ್ಲೊ ಪ್ರಾಣಿ 1 ಧನವ ಕೂಡಿಸಿಕೊಂಡು ದಾನ ಧರ್ಮವ ಮಾಡ-ದೆನಗಾರು ಸಾಟಿಯೆಂಬೆ ಇಷ್ಟಜನರ ಬಿಟ್ಟೊಬ್ಬನುಂಬೆ ಎಲೊ ಎಲೊಮುನಿದು ಸಕಲರ ಮುನಿಯಗೊಂಬೆ ಆಧನವು ಮನಶುದ್ಧವಾಗಿ ಇಹುದೆ ಅದು ಸಾವದಿನದೆ ಸಂಗಡ ಬಾಹುದೆ ಕುಬೇರನಬಿಟ್ಟು ಕಡೆಗೆ ಹೋಹುದೆ ಪ್ರಾಣಿ 2 ಅಳೆವ ಕೊಳಗದ ಮಾಟ ಆತ್ಮನಿನ್ನೋಡಾಟ ಸರ-ಕಳೆದ ಬಳಿಕ ನೋಡೊ ದೇಹ ತಾ-ನುಳಿಯದು ಹಮ್ಮು ಮಾಣೊ ಎಲೆ ಮರುಳೆಗಳಿಸಿರೋ ಧರ್ಮಗಳ ವ್ಯರ್ಥ ಕೆಡಬ್ಯಾಡೊ ದಿನಮಾನಗಳ ಕಳೆಯದಿರು ನಿತ್ಯವಲ್ಲ ಇದಕೆಉಳಿದರ್ಥ ಕೆಲಸಕಿಲ್ಲ ಹಿಂದೆಉಳಿದವರೊಬ್ಬರಿಲ್ಲ ಪ್ರಾಣಿ 3 ಕೊಲೆ ದೋಷವೆಂದರಿಯೆ ಕೊಸರು ಒಬ್ಬನ ಜರೆವೆಇಳೆಯೊಳದಾವನೀತ ನಿನಗೆ ನೀತಿಳಿದುಕೊ ನಿನ್ನಮಾತ ನೀಖಿಲಗೊಳಬೇಡ ಆಭಾಸ ಸೂಚಿಸಿ ಜರೆವರೆಕೊಲೆಗೆ ಗುರಿಯಾದೆ ಕಾಣೊ ಈ ಕೋಪಹೊಲೆಗೆ ಸರಿಯಲ್ಲವೇನೊ ನಿನ್ನಹುಳುಕು ಬುದ್ಧಿಯನು ಮಾಣೊ ಪ್ರಾಣಿ 4 ಮರೆದು ಕಳೆ ಕ್ರೋಧವನು ಮಾಡದಿರು ಲೋಭವನುಗುರುಹಿರಿಯರಾದವರಿಗೆರಗೂ ಅನಾ-ಥರಿಗೆ ಚೆನ್ನಾಗಿ ಮರುಗೊ ಇದೆಪರಮಗತಿಯ ಸೆರಗೊ ಭಕ್ತರಿಗೆಸಿರಿಯರಸ ಹಯವದನನೊಡೆಯ ಲೋಕಪರನಿಂದಕರಿಂಮುಕ್ತಿಪಡೆಯೊ ಭಜಿಸಿದುರಿತ ಸಂಕಲೆಯ ಕಡಿಯೊ ಪ್ರಾಣಿ 5
--------------
ವಾದಿರಾಜ
ಯಾಕೆ ಸುಮ್ಮನೆ ಹೊತ್ತ ಕಳೆವಿರಿ ಲೋಕವಾರ್ತೆಯಲಿ ಶ್ರೀಕರನ ಸರ್ವತ್ರ ಸ್ಮರಿಸುತ ನಾಕ ಭೂಗತ ಸೌಖ್ಯ ಬಯಸದೆ ಏಕಚಿತ್ತದಿ ನಂಬಲನುದಿನ ಸಾಕುವನು ಸಕಲೇಷ್ಟದಾಯಕ ಪ. ಸ್ನಾನ ಜಪ ದೇವಾರ್ಚನ ವ್ಯಾಖ್ಯಾನ ಕರ್ಮಗಳು ದಾನ ಧರ್ಮ ಪರೋಪಕಾರ ನಿಜಾನುಪಾಲನವು ಏನು ಮಾಡುವುದೆಲ್ಲ ಲಕ್ಷ್ಮೀಪ್ರಾಣನಾಯಕ ಮಾಳ್ಪನೆಂದರಿ- ದಾನು ನನ್ನದು ಎಂಬ ಕೀಳಭಿಮಾನ ತಾಳದೆ ಧ್ಯಾನ ಮಾಡಿರಿ 1 ಪೊಟ್ಟಿಯೊಳಗಿಂಬಿಟ್ಟು ಚೀಲದಿ ಕಟ್ಟಿ ಬಿಗಿದಿರುವ ಕಾಲದಿ ಕೊಟ್ಟು ಬುತ್ತಿಯನಿಟ್ಟು ಬಾಯೊಳು ಧಿಟ್ಟ ತಾ ಪೊರೆವ ವಿಠಳ ಕರುಣಾಳು ಕಾಯನೆ ಥಟ್ಟನೊದಗುವ ತನ್ನ ದಾಸರ ಮಾಡುವ ರಾಜನಿರುತಿರೆ 2 ಪಾಪವೆಂಬುದೆ ಪಂಕಜಾಕ್ಷ ರಮಾಪತಿಯ ಮರವು ಪುಣ್ಯ ಕಲಾಪವೆಂಬುದೆ ಪೂರ್ವ ಗಿರಿವರ ಭೂಪತಿಯ ನೆನಪು ಈ ಪರಿಯ ಶ್ರುತ್ಯರ್ಥಸಾರ ಪದೇ ಪದೇ ಮನದಲ್ಲಿ ಗ್ರಹಿಸುತ ತಾಪ ಹೊಂದದೆ ಭೂಪರಂತಿರಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಯಾಕೆÀ ಬಾರ ಸಖಿ ತ್ರಿವಿಕ್ರಮನ್ಯಾಕೆ ಬಾರ ಸಖಿ ಅ-ನೇಕ ಮಹಿಮ ವಿವೇಕನಿಲಯ ಮೂ-ಲೋಕ ಮೋಹನಮೂರ್ತಿ ಮುಕ್ತಶೋಕ ಪ. ಕರ್ಮ ವಿಮೋಚನಮುಂಜÉರಗ ಪಿಡಿದೆಳೆಯೆಸಂಜೆ ಬರಲೆಂದು ಸವಿನುಡಿಯ ನುಡಿವಕುಂಜರನ ಭಯಭೇದಿ ಬಹಳ ವಿನೋದಿ ಸಕಲರಿಗಾದಿ ಸುಗುಣನಿಧಿ 1 ನಿನ್ನಿನಿರುಳು ನಿನ್ನ ನೇಮಿಸದ ಮುನ್ನಮನ್ನಿಸಿ ಮನೆಗೆ ಬಂದಾತಅನ್ಯವರಿಯದ ಅಬಲೆ ನಾನೆಂದೀಗಕಣ್ಣಾರ ತಾ ಕಂಡನಲ್ಲ ಪುಸಿಯಿನ್ನು ಸಲ್ಲ ಸಕಲವು ಬಲ್ಲ ಎನ್ನ ನಲ್ಲ2 ಇಂದಿರೆಯನು ಬಿಟ್ಟು ಇರವ ಎನ್ನೊಳಗಿಟ್ಟುಎಂದೆಂದು ಎತ್ತಿಕೊಂಡಾತಕುಂದದೆ ತಾನಿಂದು ಕೂಡಿದರೆ ಬಂದುತಂದು ಹಯವದನನೊಲಿಸು ಸ್ನೇಹವ ಬಲಿಸು ಮದನನೊಲಿಸು ಎನಗೊಲಿಸು 3
--------------
ವಾದಿರಾಜ
ಯಾಕೆನಗೆ ವೈರಾಗ್ಯ ಪುಟ್ಟಲಿಲ್ಲವೊ ದೇವ ಏನು ಪಾಪಿಯೊ ಜಗದಲಿ ಪ. ಸಾಕು ಸಾಕೀ ವಿಷಯ ಚಿಂತನೆಯ ಬಿಡಿಸಿನ್ನು ಲೋಕನಾಯಕನೆ ಸ್ವಾಮಿ ಅ.ಪ. ಅಸನವಸನಗಳಿಗೆ ಆಲ್ಪರಿದು ಅನ್ಯರಿಗೆ ಬಿಸಜನಯನನೆ ಕಾಲಹರಣೆಯನೆಗೈದೆ ವಸುದೇವಸುತ ನಿನ್ನ ಅರಘಳಿಗೆ ನೆನೆಯದಲೆ ಹಸಿವು ತೃಷೆಯಿಂ ಬಳಲಿ ಬೆಂಡಾದೆನಯ್ಯಾ 1 ಇಂದ್ರಿಯಗಳೆಲ್ಲವನು ಬಂಧನದೊಳಗೆ ಇರಿಸಿ ಇಂದಿರೇಶನೆ ನಿನ್ನ ಧ್ಯಾನಿಸದಲೆ ಮಂದಮತಿಯಿಂದ ನಾ ಮಮಕಾರದಲಿ ಬಿದ್ದು ಮಂದ ಜನರೊಡನಾಡಿ ಮಾಯಕೊಳಗಾದೆ 2 ಭಕ್ತಿಮಾರ್ಗವ ಕಾಣೆ ಜ್ಞಾನ ಮೊದಲೆ ಅರಿಯೆ ಮುಕ್ತಿಗೊಡೆಯನೆ ಎನ್ನ ಮುದದಿಂದ ಸಲಹೊ ಯುಕ್ತಯುಕ್ತಿಗಳರಿಯೆ ಸುತ್ತುತಿಪ್ಪೆನೊ ಭವದಿ ಶಕ್ತ ನೀ ಒಳಗಿದ್ದು ಎನ್ನ ಕಾಡುವರೆ 3 ಕರ್ಮಮಾರ್ಗವ ತೊರೆದು ನಿರ್ಮಲದಲಿ ನಿನ್ನ ಒಮ್ಮೆಗಾದರೂ ಮನದಿ ನೆನೆಯಲಿಲ್ಲ ರಮೆಯರಸನೆ ಶ್ರೀ ಗುರುಗಳಂತರ್ಯಾಮಿ ಕರ್ಮತ್ರಯಗಳ ಕಡಿದು ಕರುಣದಲಿ ಕಾಯೊ4 ಪಾಪರಹಿತನೆ ಎನ್ನ ಪಾಪ ಕರ್ಮಗಳೆಲ್ಲ ಪರಿ ನುಡಿದೆ ನೀ ಪರಿಹರಿಸಿ ಕಾಯೋ ಗೋಪಾಲಕೃಷ್ಣವಿಠ್ಠಲನೆ ನೀನಲ್ಲದಲೆ ಈ ಪಾಪಿಯನು ಕಾಯ್ವರಾರೊ ಶ್ರೀ ಹರಿಯೆ5
--------------
ಅಂಬಾಬಾಯಿ
ಯಾಕೆನ್ನ ಎದುರಲಿ ನಿಲ್ಲುವುದಿಲ್ಲೋ ಯಾಕೆನ್ನಯ ಕರೆ ಕೇಳುವುದಿಲ್ಲೋ ಪ ಯಾಕೆನ್ನ ಅರ್ಚನೆಗೊಲಿಯುವುದಿಲ್ಲೋ ಯಾಕೆನ್ನೊಳು ದಯಮಾಡುವುದಿಲ್ಲೋ ಅ.ಪ ತರಳ ಧೃವನ ಮೊರೆ ಕೇಳಿಸಿತಲ್ಲ ಕರಿ ಎತ್ತಿದ ಸುಮ ಕಾಣಿಸಿತಲ್ಲ ಅರಿ ಅನುಜನ ಸೇವೆ ಹಿರಿದಾಯ್ತಲ್ಲಾ ಕರುಣ ಎನ್ನೊಳಗೇಕೆ ಬರದೋ ಕೃಷ್ಣಯ್ಯ 1 ಅಗಣಿತ ಗೋಪಿಯರೆಡೆಯಲಿ ನಲಿದೆ ನಗಧರನಾಗಿ ಗೋಪಾಲರ ಪೊರೆದೆ ಖಗನಿದ್ದೆಡೆಗೇ ಭರದಲಿ ನಡೆದೆ ನಗುಮೊಗದರಸ ಮಾಂಗಿರಿಯ ರಂಗಯ್ಯ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಯಾಕೆನ್ನನಿಲ್ಲಿಗೆ ಎಳೆ ತಂದ್ಯೊ ಹರಿ ತಪ್ಪೇನನೆಸಿಗಿದೆನೊ ಪ. ಜೋಕೆಯಿಂದಲಿ ಎನ್ನ ಕಾಯಬೇಕಲ್ಲದೆ ನೂಕಿದರೆನ್ನನು ಸಾಕುವರ್ಯಾರೊ ದೊರಿ ಅ.ಪ. ಯಾರಿಗೇನೆಸಗಿದೆ ಆರ ನಾ ದೂಷಿಸಿದೆ ಆರ ನಾ ನಿಂದಿಸಿದೆನೊ ಕಾರದಿ ನೋಡಿದೆನೊ ಈ ರೀತಿ ನೊಂದೆನು 1 ವಿಧಿ ಬರಹದೊಳಿನ್ನು ವಿಧಿಪಿತ ನಿನ್ನ ಕಾಣಲಿಲ್ಲ ಮದಗರ್ವ ಬಿಡಿಸೆನ್ನ ಸದಮಲ ಹೃದಯದಿ ಪದ ಪದುಮವ ತೋರಿ ಉದ್ಧರಿಸೆನ್ನನು 2 ಸೃಷ್ಟಿಕರ್ತನೆ ಕೇಳೊ ಕಷ್ಟವಪಡಲಾರೆ ದೃಷ್ಟಿಲಿ ನೋಡಿ ಕಾಯೊ ಎಷ್ಟು ಬೇಡಲೊ ನಾನು ಬೆಟ್ಟದೊಡೆಯ ಹರಿ ವೃಷ್ಣೀಶ ಗೋಪಾಲಕೃಷ್ಣವಿಠ್ಠಲ ದೊರಿ3
--------------
ಅಂಬಾಬಾಯಿ
ಯಾಕೆನ್ನೊಳಿಂತು ನಿರ್ದಯವೆಲೊ ದೇವ ನೀ ಕರುಣದಿ ನೋಡದಿರಲು ಮತ್ತಾವ ಕಾವ ಪ ಗಜರಾಜನ ನೀ ಸಲಹಲಿಲ್ಲೇ ಅಂದು ನಿಜಭಕ್ತ ಪ್ರಹ್ಲಾದನ ಪೊರೆಯಲಿಲ್ಲೇ ಪರಿ ಎಲ್ಲ ಬಲ್ಲೆ ನಿನ್ನ ಭಜನೆಯೊಳಿಹ ಎನ್ನನೇಕೆ ನೋಡಲೊಲ್ಲೆ 1 ದ್ರೌಪದಿ ಕರೆಯಲಕ್ಷಯ ವಸ್ತ್ರವ ಕೊಟ್ಟೆ ನೀನು ಶಾಪದ ಶಿಲೆಯ ಕುಲಕೆ ತರಲಡಿಯಿಟ್ಟೆ ಪಾಪಿ ಅಜಮಿಳನ ಅಘಗಳ ಸುಟ್ಟೆ ಸ್ವಾಮಿ ಶ್ರೀಪದಗ್ರಸ್ತನಾದೆನ್ನ ನೀ ಕೈಬಿಟ್ಟೆ 2 ಬಿಡಬೇಡೆನ್ನ ಕೈಯ ಶ್ರೀನಿವಾಸ ಬಹು ಬಡವ ನಾನಹುದು ಮಧ್ವಗೃಹವಾಸ ಕಡುಪಾಪಿ ನಾನಲ್ಲವೊ ರಂಗೇಶವಿಠಲ ದೃಢವಾಗಿ ನಂಬಿಹೆನೊ ನಿನ್ನ ಸರ್ವೇಶ 3
--------------
ರಂಗೇಶವಿಠಲದಾಸರು
ಯಾಕೆನ್ನೊಳು ಪಂಥಾ ಶ್ರೀಕಾಂತಾ ಪ. ಯಾಕೆ ಪಂಥ ಲೋಕೈಕನಾಥ ದಿ- ವಾಕರಕೋಟಿಪ್ರಭಾಕರ ತೇಜನೇ ಅ.ಪ. ಪೂರ್ವಾರ್ಜಿತ ಕರ್ಮದಿಂದಲಿ ಇರ್ವೆನು ನರಜನ್ಮ ಧರಿಸುತ ಗರ್ವದಿಂದ ಗಜರಾಜನಂತೆ ಮತಿ ಮರ್ವೆಯಾಯ್ತು ನಿನ್ನೋರ್ವನ ನಂಬದೆ ಗರ್ವಮದೋನ್ಮತ್ತದಿ ನಡೆದೆನು ಉರ್ವಿಯೊಳೀ ತೆರದಿ ಇದ್ದೆನಾದರೂ ಸರ್ವಥಾ ಈಗ ನಿಗರ್ವಿಯಾದೆಯಹ ಪರ್ವತವಾಸ ಸುಪರ್ವಾಣ ವಂದಿತ 1 ಯಾರಿಗಳವಲ್ಲ ಮಾಯಾ ಕಾರ ಮಮತೆ ಸಲ್ಲ ಸಂತತ ಸಾರಸಾಕ್ಷ ಸಂಸಾರಾರ್ಣವದಿಂದ ಪಾರಗೈದು ಕರುಣಾರಸ ಸುರಿವುದು ನತ ಮಮ ಕಾರ ಹೋಯ್ತೆ ಕಡೆಗೆ ಏನಿದು ಭಾರಿ ಭಾರಿ ಶ್ರುತಿ ಸಾರುವುದೈ ದಯ ವಾರಿಧಿ ನೀನಿರಲ್ಯಾರಿಗುಸುರುವುದು 2 ಬಾಲತ್ವದ ಬಲೆಗೆ ದ್ರವ್ಯದ ಶೀಲವಿತ್ತೆ ಎನಗೆ ಆದರೂ ಪಾಲಿಸುವರೆ ನಿನಗಾಲಸ್ಯವೆ ಕರು- ಸಾಲದೆರಡು ಮೂರು ನಿನ್ನಯ ಮೂಲ ಸಹಿತ ತೋರು ಮುನಿಕುಲ ಪಾಲ ಶ್ರೀಲಕ್ಷ್ಮೀನಾರಾಯಣ ಗುಣ ಶೀಲ ಕಾರ್ಕಳ ನಗರಾಲಯವಾಸನೇ 3
--------------
ತುಪಾಕಿ ವೆಂಕಟರಮಣಾಚಾರ್ಯ
ಯಾಕೆಮ್ಮನಗಲಿ ಪರಲೋಕ ಸೇರಿದೆ ಗುರು ಐಕೂರು ನರಸಿಂಹಾರ್ಯ ಪ ಲೌಕಿಕವ ಬಿಟ್ಟು ಸುವಿವೇಕ ನಡೆವ ವಾಕು ಪೇಳ್ವರ ಕಾಣೆ ಲೋಕದೊಳು ನಿನ್ಹೊರತು ಅ.ಪ ಅತಿಮಂದರಾದೆಮಗೆ | ಶ್ರುತಿ ಶಾಸ್ತ್ರ ಪುರಾಣ ಕಥೆ ದಾಸ ಕವಿತೆ ಸತತ ಪೇಳಿ ಮತಿವಂತರೆನಿಸಿ ಸ್ಪÀತ್ವಥ ಪಡಿಸಿ ಮುಂದೆ ಸ ದ್ಗತಿ ಕಾಣಿಸದೆ ಜಗದಿ ಹತಭಾಗ್ಯರನು ಮಾಡಿ 1 ಸಾಧುವರ್ಯನೆ ನಿಮ್ಮ ಪಾದವೇ ಗತಿ ಎಂದು ಸಾದರದಿ ನಿರುತ ನೆರೆನಂಬಿದಂಥ ಸೋದರಿಯರು ಪಂಚ ಭೇದ | ತರತಮಜ್ಞಾನ ಬೋಧಿಸುವರಿಲ್ಲೆಂದು ಖೇದದಿಂದಿರುತಿಹರು 2 ಸೂರಿವರ ನಿನ್ನಗಲಿದಾರಭ್ಯ ಧರೆಯೊಳಗೆ ನೀರಿಂದ ದೂರಾದ ಮೀನಿನಂತೆ ಘೋರ ದುಃಖದಿ ಮುಳುಗಿ ಪಾರುಗಾಣದೆ ದಿಕ್ಕು ತೋರದಾಗಿಹುದೀಗ ಬಾರೋ ಮನಮಂದಿರದಿ 3 ತನುವು ತ್ಯಜಿಸಿದರೇನು | ಅನಿಮಿಷಾಂಶನೆ ನಮ್ಮ ಕನಸು ಮನನಿನೊಳಗೆ ಸುಳಿದಾಡುತ ಕೊನೆಯಲ್ಲಿ ಹರಿನಾಮ | ಅನುಗ್ರಹಿಸುವೆವು ಎಂಬ ಘನ ಅಭಯ ನೀಡೆಂದು ಮಣಿದು ಪ್ರಾರ್ಥಿಪೆನಯ್ಯ 4 ಪುಣ್ಯಪುರುಷನೆ ನಮಗೆ ಇನ್ನಾವ ಬಯಕಿಲ್ಲ ಜನ್ಮ ಜನ್ಮಕೆ ನಿನ್ನ ಚರಣಾಬ್ಜವ ಚನ್ನಾಗಿ ಸೇವಿಸುವ ಘನ್ನ ಸುಖಗರಿಯೆಂದು ನಿತ್ಯ 5 ನಿನ್ನಿಂದ ಸತ್‍ಶ್ರವಣ | ನಿನ್ನಿಂದ ಅಘಹರಣ ನಿನ್ನಿಂದ ಶ್ರೀವಾಯು ಹರಿಯಕರುಣ ನಿನ್ನಿಂದ ಉಪದೇಶ \ ನಿನ್ನಿಂದ ಭವನಾಶ ನಿನ್ನಿಂದ ಬಿಂಬ ದರ್ಶನವು ನಮಗಿನ್ನು 6 ಪಾಮರರ ಅಪರಾಧ ನೀ ಮನಕೆ ತಾರದಲೆ ಹೇಮ ಕಾಮಿನಿ ಭೂಮಿ ಈಮೂರರ ವ್ಯಾಮೋಹವನೆ ಬಿಡಿಸಿ | ಶಾಮಸುಂದರ ಭಕ್ತ ಸ್ತೋಮ ಸಂಗದೊಳಿಟ್ಟು ಪ್ರೇಮದಲಿ ಪಿಡಿಕೈಯ್ಯ 7
--------------
ಶಾಮಸುಂದರ ವಿಠಲ