ಒಟ್ಟು 56123 ಕಡೆಗಳಲ್ಲಿ , 139 ದಾಸರು , 12212 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಲ ಪ ಏಳು ಏಳು ಎಂದು ಯಮನ ಆಳು ಬಂದು ಪಾಶವಿಕ್ಕಿ ಕಲ್ಲು ಮುಳ್ಳು ಮೇಲೆ ಎಳೆದು ಒಯ್ವ ಹೊತ್ತು 1 ಅಷ್ಟಪುರದ ಕಾವಲವರು ಕಟ್ಟ ಕಡೆಗೆ ತೊಲಗೆ ಬಾಯ ಬಿಟ್ಟು ಹೊರಗೆ ಜೀವ ಕೆಂಗಟ್ಟು ಹೋಗುವಂಥಕಾಲ 2 ದಾರಿಯೊಳಗೆ ಪಾಪಿಗಳನು ಘೋರ ಬಡಿಸಿ ದಂಡದಿಂದ ಗೊಯ್ವ ಹೊತ್ತುವ್ಯಾಳ್ಯಾ 3 ಹೆಂಡಿರಿಲ್ಲ ಮಕ್ಕಳಿಲ್ಲ ಬಂಧು ಬಳಗವಿಲ್ಲವಲ್ಲಿ ಕಾಲ 4 ಬುದ್ದಿವಂತರಾದರೆಚ್ಚರಿದ್ದು ಪಾಪವನ್ನು ಮಾಡ ಭವನಗೆಲವ ಹೊತ್ತು 5
--------------
ಕವಿ ಪರಮದೇವದಾಸರು
ಕಾಲ ಬಂತು ಪ್ರಜೆಗೆ ಎಷ್ಟು ಪೇಳ್ವರೇನು ಕೆಲಸ ದಿಟ್ಟ ಅರಿಗಳನು ಕುಟ್ಟಿ ತೆಗೆಯದಿದ್ದಮೇಲೆ ಪ ದಂಡು ಬಂತು ಎಂದು ಜನರು ಗಂಡು ಹೆಣ್ಣು ಮಕ್ಕಳೆಲ್ಲ ಕಂದುಗಳನು ಕಟ್ಟಿ ಗೋವಿನ ಹಿಂಡ ನೆಲ್ಲ ದಾರಿಗೊಳಿಸಿ ಕಂಡ ಕಡೆಗೆ ಹೋಗಿ ಸೇರಿಕೊಂಡುಯಿರಲು ಸೋವಿನಿಂದ ದಂಡಿನವರು ದಾರಿಗಟ್ಟಿಕೊಂಡು ಸುಲಿದು ಕಡಿದ ಮೇಲೆ 1 ಅಲ್ಲಿ ಬಂತು ಇಲ್ಲಿ ಬಂತು ಎಂದು ಬೆದರಿಕೊಂಡು ಕುಣಿಗಳಲ್ಲಿ ಭತ್ತಭಾಂಡವಿಕ್ಕಿ ನಿಲ್ಲದೆಲ್ಲ ಊರಬಿಟ್ಟು ಕಲ್ಲು ಮುಳ್ಳು ಗುಡ್ಡಕಾನಿನಲ್ಲಿ ಸೇರಿಕೊಂಡು ಬಚ್ಚಿಯಿಟ್ಟ ವಸ್ತು ವಡವೆ ಅಲ್ಲಿ ನಷ್ಟವಾದ ಮೇಲೆ 2 ಮತ್ತೆ ಕುದುರೆಯಿಲ್ಲ ಮಂದಿಹೊತ್ತು ಪ್ರಜೆಗಳನ್ನು ಮಾರ್ಗ ದೊತ್ತಿನಲ್ಲಿ ತರುಬಿ ನಿಂದು ಕತ್ತಿಯನ್ನು ಕಿತ್ತು ಗೋಣ ಬರಿಸಿ ಯಾವತ್ತು ವಡವೆ ವಸ್ತುಗಳನು ಮತ್ತು ಮತ್ತು ಸುಲಿದಮೇಲೆ 3 ಮುಟ್ಟು ಪಟ್ಲೆ ಸಹಿತವರಡಿಯೆತ್ತ ಕೊಟ್ಟು ಬೀಳ ಭೂಮಿ ನಷ್ಟ ತೆತ್ತು ಹಳೆಯ ಅರಿವೆ ಬಟ್ಟೆಗಟ್ಟಿ ಬೀದಿ ಬದಿಗೆ ಹಿಂಡು ಗುರಿಯ ಕೆಟ್ಟ ಗೌಡಿ ದ್ವಿಗುಣಿಸಂಕ ತೆತ್ತು ಕೊಟ್ಟು ಪ್ರಜೆಗೆ ಘಟ್ಟ ಬೆಟ್ಟ ವಾಸ ವಾದಮೇಲೆ 4 ಇಕ್ಕಿ ಕದವ ರಾಜ್ಯವನ್ನು ಹೊಕ್ಕು ಅರಿಗಳೆಲ್ಲ ಸುಲಿದು ಸೊಕ್ಕಿನಿಂದ ಪಾಳ್ಯವನ್ನು ಹೊಕ್ಕರಯ್ಯ ನಮ್ಮ ಕಡೆಗೆ ದಿಕ್ಕಕಾಣೆ ಪ್ರಜೆಗಳನ್ನು ರಕ್ಷಿಸುವರು ಬೇರೆಉಂಟು ನಂಬಿ ಜನರು 5
--------------
ಕವಿ ಪರಮದೇವದಾಸರು
ಕಾಲ ಬಂದಿತೋ ಬಂದ ಭವದೊಳು ಚಿಂತೆಯೊಳಗೆ ದಿನ ಸಂದಿತು ಪ ತುಪ್ಪ ಪಣಕೆ ಸೇರು ಉಪ್ಪೆಂಟು ಸಿದ್ದೆಯು ಮುಪ್ಪಾಗ ಕೊಂದೆ ಕೊಳಗಬತ್ತ ಸೊಪ್ಪ ಪಣಕೆ ಮಾರುವುದು ಅಚ್ಚೇರು 1 ವ್ಯಾಪಾರ ಸಾಪಾರ ತುಟ್ಟಿಸಿದರು ಕೊಳ್ಳ ಲಾಪರೆ ಫಣವೊಂದೆ ಕಟ್ಟಿಲ್ಲ ರೂಪಾಯಿ ಕೊಡೆ ಪುಲಿಚರಮ ಪಾಪವು ಸುಲತಾಗಿ ಪಣವ ಕೊಡೆಂಬರು 2 ದುಡ್ಡು ಕೊಡಲು ಬೇಡ ಬೈಯುತ ಆನೆ ಗೂಡಿನ (ಆನೆಗೊಂದಿ) ದುಡ್ಡತಾರೆಂಬರು ದೊಡ್ಡ ಮೊಳೆ ಪಣವಿದು ಸಣ್ಣ ಮೊಳೆಯಿಂಗಿ ? ಹೆಡ್ಡ ಹೋಗೆಂದದ್ದ ಬಿಸುಟರು ಫಣವ 3 ತಪ್ಪಿ ಹೇಳುವೆನೆ ನಮ್ಮಪ್ಪ ದುರ್ಭಿಕ್ಷವು ಎಪ್ಪತ್ತು ವರುಷ ಕೊದಗಿ ಬಂತು ಇಪ್ಪತ್ತು ವರುಷಕೀಕಾಲ ಬಂದಿದ್ದರೆ ಕನಿಷ್ಟಕ್ಕೆ ಗಣಿಸಿ ಸುಕ್ಷಾಮವ ಮರೆವೆನು 4 ಧಾರಣೆ ಪಾರಣೆ ಶಿವರಾತ್ರಿ ಹರಿದಿನ ಓರಂತೆ ಬಡವಗೆ ನೆಲೆಯಾಯಿತು ಕ್ಷೀರಾಬ್ದಿ ಶಯನ ಲಕ್ಷ್ಮೀನಾರಾಯಣನು ತನ್ನ ಸೇರಿದ ಜನರ ಕಣ್ಣಲಿ ನೋಡುತೊಲಿದ 5
--------------
ಕವಿ ಪರಮದೇವದಾಸರು
ಕಾಲ ವ್ಯರ್ಥ ಹರಿಯನೇಕ ಗುಣಗಳ ಪೊಗಳಿ ಪುರುಷಾರ್ಥ ಪ ಸತಿಸುತರ ನೆಚ್ಚಿ ಕೆಡಬ್ಯಾಡಾ ನಿನ್ನ ಸಂ- ಗತಿಲೇ ಬಾಹರು ಇದನು ತಿಳಿಯೋ ಕ್ಷಿತಿಪತಿಯ ನೆನೆಯದಿರಬ್ಯಾಡಾ ಲಕ್ಷ್ಮೀ ಪತಿಯೊಬ್ಬನೇ ಗತಿ ಎಂದು ತಿಳಿ ಗಾಢಾ 1 ಇಂದೆ ಇದ್ದವ ನಾಳೆಗಿಲ್ಲಾ ಅದ ರಿಂದ ಜಗದೀಶನನು ಹಿಂದೆ ಕಳೆದ ಆಯು ಬರೋದಿಲ್ಲಾ ಇನ್ನು ಮುಂದೆ ನರಜನ್ಮ ಬರುವುದು ಭರವಸಲ್ಲಾ 2 ಸತ್ತ ನಂತರ ಬಳಗ ನಿನ್ನ ತೀವ್ರ ಹೊತ್ತು ಹೊರಗ್ಹಾಕಿರೆನ್ನುವರೋ ತಿಳಿಯನ್ನಾ ಮಿಥ್ಯ ಸುಖಕೊಳಗಾಗದಿನ್ನಾ ಏಕ ಚಿತ್ತದಿಂ ಭಜಿಸೋ ಹನುಮೇಶ ವಿಠಲನಾ 3
--------------
ಹನುಮೇಶವಿಠಲ
ಕಾಲ ವ್ಯರ್ಥ ಪ ಘನ್ನ ನಿರಯಕೆ ವೈವೋ ಸಾಧನವೋ ಗೋಪಾಲ ಅ.ಪ ಸುರರು ಬಲ್ಲರೈ ಚದುರ ತತ್ವೇಶಗಣ ಬಲ್ಲರಯ್ಯಾ ವಿಧಿಪಿತನೆ ನಿನ್ನ ಬಿಟ್ಟನ್ಯತ್ರ ಮನವಿರಲು ನಿಧನ ನೋವಿಗೆ ಮಿಗಿಲು ಪದುಮ ಮುಕ್ತರು ಸಾಕ್ಷಿ1 ಬಂಧಿಸಲು ನೀ ನಮ್ಮ ಬಿಡಿಸಿಕೊಂಬುವರುಂಟೆ ಅಂಧತಮಸಿನ ಭೋಗದಿಂದಾಹುದೊ ಸಿಂಧು ಚಿನ್ಮಯ ಕಾಯ ತಂದೆ ನಿನ್ನಯ ಕರುಣ ಉಂಬುವನೆ ಬಹುಧನ್ಯ 2 ಗೋ ಗೊಲ್ಲರಲಿ ಕರುಣ ಸುರಿದ ದೀನ ಬಂಧು ಭಾಗ್ಯಪಾಲಿಸು ಭಕ್ತಿಯೋಗವಿತ್ತು ರೋಗದಲಿ ಬಲು ನೊಂದೆ ಭಯವನ್ನು ಹೀರುವುದು ನಾಗತಲ್ಪ ಜಯೇಶವಿಠಲನೆ ಉದ್ಧರಿಸು 3
--------------
ಜಯೇಶವಿಠಲ
ಕಾಲ - ನಾಮಕಾ | ತ್ರಿಸಂಧ್ಯಾಕಾಲ - ಚಾಲಕಾ ಪ ಕಾಲ ಕರ್ಮಗಳಿ | ಗಾಲಯ ರೂಪನೆಬಾಲನ ಬಿನ್ನಪ | ಪಾಲಿಸಬೇಕೈ ಅ.ಪ. ಭವ | ಭಂಗದೊಳಗೆ ಮಹಮಂಗನ ತೆರನಹೆ | ಶೃಂಗಾರ ಮೂರ್ತೇ 1 ಕಾಯಾ - ನಿ ಹಿತಾ | ನಾಡಿಗಳಲಿಧೇಯಾ - ವಿಹಿತಾ ||ಆಯಾ ನಾಡಿಗತ | ಧೇಯ ತೀರ್ಥ ಧ್ಯಾನೊಪಾಯ ತಿಳಿಸಿ ಕಾಯೊ | ವಾಯು ಬೃಹತಿ ಪ್ರಿಯ 2 ಸ್ನಾನಾ ಪಾವನಾ | ತವ ಮಹಿಮಾಧ್ಯಾನೋಪಾಸನಾ ||ತ್ರಾಣವೀಯೊ ನಿತ್ರಾಣನೆನಗೆ ಜಗತ್ರಾಣ ಪ್ರಾಣ ಗುರು ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ಕಾಲ ಕರ್ಮವ ಕಾಲಿಲೊದೆದವ | ಕತ್ತಲಿಗಂಜುವನೇ | ಆಲಿಯ ಮೇಲಕೆ ನಿಲಿಸಿದ ಪುರುಷನು | ಬಾಲೆರ ಬಯಸುವನೇ ಪ ಅಮೃತ ನದಿಯೊಳು ತೃಪ್ತ್ಯಾದ ಮಹಾತ್ಮನು | ಅಂಬಲಿ ಸುರಿಯುವನೇ | ಕುಂಭಕ ವಾಯುವ ನಿಲಿಸಿದ ಸಜ್ಜನ | ಕುಂಭಿನಿಗುದಿಸುವನೇ1 `ತತ್ತ್ವಮಸಿ’ ಮಹಾವಾಕ್ಯವ ತಿಳಿದವ | ಮಿಥ್ಯಕೆ ಮೆಚ್ಚುವನೇ | ನಿತ್ಯನಿತ್ಯದಿ ಇರುವವನೂ | ಅನಿತ್ಯಕೆ ಮೆಚ್ಚುವನೇ 2 ಭವ ಮೂರ್ತಿ ಭವತಾರಕ ಭಜಕನು | ಭೇದವ ಮಾಡುವನೇ 3
--------------
ಭಾವತರಕರು
ಕಾಲ ಕಳೆಯಬೇಡ ಮನವೇ ಮೂಳನಾಗಬೇಡ ಪ ಕಾಳು ಕತ್ತಲೆಂಬ ಹಾಳು ಸಂಸಾರ ಮಾಯಾ ಜಾಲ ಮೋಹಿಸಿ ಹೊತ್ತು ಹಾಳುಮಾಡಿಕೊಂಡು ಅ.ಪ ನಿನ್ನೊಳು ಹುಡುಕಾಡಿ ಹರಿಯ ಉನ್ನತಕೃಪೆ ಪಡಿ ಕಣ್ಣುಮುಚ್ಚಿ ಪರರ್ಹೆಣ್ಣಿನ ಹೊಲೆಮೈ ಬಣ್ಣಕೆ ಮನಸೋತು ಠೊಣ್ಯನೆನಿಸಿಕೊಂಡು 1 ನೋಡಿ ತಿಳಿದು ಭವಮೂಲ ಹುಡುಕಾಡಿ ಹಿಡಿಯೋ ನಿಜವ ರೂಢಿಸುಖಕೆ ಮನನೀಡಿ ಸನ್ಮಾರ್ಗದ ಜಾಡು ತಿಳಿಯದೆಮತಾಡಣೆಗೊಳಪಟ್ಟು 2 ಅರಿತು ಶ್ರೀರಾಮಚರಣ ನಿರುತದಿ ಗುರುತು ಹಿಡಿಯೋ ಜಾಣ ಪರಲೋಕ ಸಾಧನ ಸುರತು ಷರತು ಮಾಡಿಕೊಂಡು ಪರಕೆ ಪರಮ ಪರತರ ಮುಕ್ತಿ ಸುಖ ಸುರಿ 3
--------------
ರಾಮದಾಸರು
ಕಾಲ ಕಾಯೋನೀ ಬಹುಮುಖಾ ಪರಿ ಹರಿಯೇ ಪ ನಾನಲ್ಲ ಪುರುಷೋತ್ತಮ ಬೆಳೆದೆ ನಾ ಪರಮಾತ್ಮ ಪರಿ 1 ಕೆಲವು ದಿವಸಾಯಿತು ಸಂಶಯವೆಂಬುದು ತಿಳಿದು ಜನಕನೇ ಹಿಂಸೆಯೊಳಗೆ ಬಿದ್ದು ಈ ಪರಿಯಿಂದ 2 ನಾನು ಭಗವಂತಾ ನಾಡಿಯೊಳಗಾದಂಥಾ ಮಂದರಧರ ಶ್ರೀ ಮಧುಸೂದನ ಗೋವಿಂದ `ಹೆನ್ನೆವಿಠ್ಠಲ’ ರಾಮಾ 3
--------------
ಹೆನ್ನೆರಂಗದಾಸರು
ಕಾಲ ಚಕ್ರವನೇರಿ ಭಾಸಿಪ ಬಾಲ ಸೂರ್ಯನ ವಂದಿಪೆ ಪ ಕಾಲ ರೂಪನೆ ಬಾಲ ಚಂದ್ರನೆ ಪೂಜಿಪೆ ಅ.ಪ. ಸೃಷ್ಟಿ ರೂಪನೆ ವೃಷ್ಟಿದಾಯಕ ಶ್ರೇಷ್ಠ ಭೂಮಿಯ ಪುತ್ರನೆ ಕಷ್ಟಹರ ಸುಜ್ಞಾನ ಮೂರುತಿ ಇಷ್ಟದಾಯಕ ಸೌಮ್ಯನೆ 1 ದೇವಗಣಗುರು ಕ್ಷೇಮದಾಯಕ ಜೀವವರ ಗುರು ಪಾಲಿಸೈ ದೇವಶುಕ್ರನೆ ಕಾವ್ಯರೂಪನೆ ಕಾವ್ಯ ಸೇವನೆ ಪೋಷಿಸೈ 2 ಪುಂಗವರ ಮಹಿಮಾಂಗ ಶನಿ ಸನ್ಮಂಗಳಾತ್ಮಕ ದೇವನೆ ಮಂಗಳವನೆಸಗೆಂದು ವಂದಿಪೆ ರಾಹುವೆ ವರಕೇತುವೆ 3 ಶ್ರೀನಿವಾಸನೆ ಪಾಲಿಸುವುದೆಂದೀ ನವಗ್ರಹ ಭಕ್ತಿಯಿಂಧೇನುನಗರ ಜನೇಶನೇವರ ವೇಂಕಟೇಶನೆ ಪೋಷಿಸೈ 4
--------------
ಬೇಟೆರಾಯ ದೀಕ್ಷಿತರು
ಕಾಲ ತಪ್ಪದು ನಿನಗೆಂದಿಗು ಮರುಳೆಒಳ್ಳಿತಾಗಿ ಕೇಳಿಕೋ ಹಿರಿಯರನು ಮರುಳೆನಾಳೆ ನಾಡದೋ ಆವಾಗಲೋ ತನು ನಿತ್ಯವಲ್ಲಕಾಲಕೆ ಸಿಕ್ಕಬೇಡ ಮರುಳೆ ಪ ಆಳುವ ಮಠಪತಿ ಊರಲ್ಲಿ ತನ್ನನ್ನುಹೂಳ್ಯಾರು ಎನಬಾರದೆ ಮರುಳೆಮೂಳ ಸಂಸಾರ ನೆಚ್ಚಲು ಕೆಡುವೆಆಲೋಚನೆ ಮಾಡಿಕೋ ಮರುಳೆ 1 ಮನವುಳ್ಳವರು ಇಹರೆ ಸಂಸಾರವೇನೆಂಬೆ ನೀನು ಸಂಗವ ಮರೆವೆ ಮರುಳೆಮಾನಿನಿ ಸುತರ ಮೋಹಕೆ ಬಿದ್ದುನಿನಗಾಗುವ ಮಾನಹಾನಿಯ ಕಾಣೆ ಮರುಳೆ 2 ಸಂಸಾರಕಾಂಕ್ಷೆಯ ಮನದಿ ತ್ಯಾಗವ ಮಾಡುಸಂಸಾರವಿದು ಮಾರಿಯು ಮರುಳೆಹಂಸ ಚಿದಾನಂದ ಸದ್ಗುರು ಹೊಂದಿಯೇನೀ ಸದಾಸುಖಿಯಾಗು ಮರುಳೆ 3
--------------
ಚಿದಾನಂದ ಅವಧೂತರು
ಕಾಲ ಮೃತ್ಯುವು ಸ್ತ್ರೀಯಲ್ಲದಲೆ ಕಾಯುವವಳು ತಾನಲ್ಲಣ್ಣ ಕಾಳಕವೀಶ್ವರ ಬಲ್ಲನು ತಾನೇನ ಕಾಳ ಕಿಚ್ಚಿನ ಕುಂಡವಣ್ಣ ಪ ಮಲ ಮೂತ್ರವು ಮಜ್ಜೆಯು ಮೇದಸ್ಸು ಮೇಲೆ ಚರ್ಮ ಹೊದ್ದಿಹೆವಣ್ಣಎಲುಬುಗಳಡಕಲಿ ನರಗಳ ಬಿಗಿವು ಎಡದೆರ ಅಪಿಲ್ಲದೆ ಇಹುದಣ್ಣ ಬಲು ಹೊಲಸಿನ ಮಡುವದು ಮತ್ತೆ ಬಗೆಬಗೆಯ ಕ್ರಿಮಿಗಳು ಮನೆಯೊಳಣ್ಣ ಹೊಲೆಮಯವಿರುವ ಸ್ತ್ರೀಯ ವರ್ಣಿಪೆನು ಹೇವ ಮಾರಿಯು ಕಾಣಣ್ಣ 1 ಕಳಸ ಕುಚವು ಎದೆಎಂಬನ ಬಾಯಲಿ ಕರಿಯ ಮಣ್ಣನೆ ಹಾಕಣ್ಣ ಹೊಳೆವ ಕಂಗಳು ಎಂಬನ ಮೋರೆಗೆ ಹುಡಿಯನೀಗಲೆ ಚೆಲ್ಲಣ್ಣಬಳಕು ನಡೆಯಂತೆಂದು ಬೊಗಳುವನ ನಿಲಿಸದೆ ಅಲ್ಲಿಂದಟ್ಟಣ್ಣಚೆಲುವಿನ ಸುಂದರ ಚೇಷ್ಟೆಗೆ ನಲಿವನ ಚಪ್ಪಲಿಯಿಂದಲಿ ಕುಟ್ಟಣ್ಣ 2 ಬ್ರಹ್ಮಧ್ಯಾನವ ಮಾಡುವುದಕ್ಕೆ ಬ್ರಹ್ಮರಾಕ್ಷಸವು ಇದು ಅಣ್ಣಹಮ್ಮಳಿದು ಯೋಗಾಭ್ಯಾಸದಲಿರೆ ಹೃದಯದಲಿ ಹರಿದಾಡುವುದಣ್ಣಬ್ರಹ್ಮೇತಿಯು ತಾನಿವನ ಸಂಗದಿ ಭವಭವತಿರುಗುವುದ ಬಿಡದಣ್ಣಸಮ್ಮತದಲಿ ಚಿದಾನಂದ ಹೊಂದಿಯೆ ಸೀಮಂತಿನಿಯ ಬಿಡಬೇಕಣ್ಣ 3
--------------
ಚಿದಾನಂದ ಅವಧೂತರು
ಕಾಲ ಸಜ್ಜನರಿಗನ್ನಕಿಲ್ಲದ ಸಾವಕಾಲ ಪ ಅರಮನೆಯ ಬಾಗಿಲನು ಕಾದು ಕೊಂಡಿರ್ದು ನೃಪ ವರನೊಡನೆ ಮಾತುಕಥೆಗಳ ನಡೆಸುತ ವರಮಂತ್ರಿಯಾಗಿ ರಾಜಾಧಿ ಕಾರಂಗಳನು ಕಾಲ 1 ಅಡಗಡಿಗೆ ಮಂತ್ರಿಗಳನಾಶ್ರಯಿಸಿ ಕೋವಿದರು ಗಡಿಗಳನು ಕೊಡಿಸೆನಗೆ ತನಗೆನ್ನುತ ಕಾಲ 2 ಮತ್ತಿವರನಾಶ್ರಯಿಸಿ ಕೆಲರು ಮಣಿಹಂಗಳನು ಪೊತ್ತು ಸೀಮೆಯ ಗ್ರಾಮಗಳ ನೋಡುತ ಇತ್ತ ಕುಳ ಸ್ಥಳ ವಂಚನೆಗಳೆಂದು ಬಂದ ಕಾ ಕಾಲ 3 ಬುಡಗಳನ್ನು ಗೈದೆ ಹಾಳ್ಮಾಡಿ ಕೊಂಡಿರ್ದರಿಗೆ ಕಡ ಮೊದಲುಗಳ ಕೊಟ್ಟು ಪೋಗೆಂಬರು ಅಡೆಯಂಚು ಮೂಲೆಗೆಳಗೈದು ಕುಳದೆರಿಗೆಯನು ಕಾಲ ಕಾಲ 4 ಚಾಡಿ ಕೋರರು ಹೆಚ್ಚಿ ಕೆಡಿಸಿವರ ರಾಜ್ಯವನ್ನು ರೂಢಿ ಪತಿಗಳಿಗೆಲ್ಲ ಕಿವಿಯೇ ಕಣ್ಣು ನೋಡಿದರೆ ಮರುತ ಸುತ ಕೋಣೆ ಲಕ್ಷ್ಮೀರಮಣ ನಾಡಿಸಿದ ವೋಲು ಜಗವಾಡುತಿಹುದು 5
--------------
ಕವಿ ಪರಮದೇವದಾಸರು
ಕಾಲಕಾಲದಲಿ ಕೇಶವನೆನ್ನಿರೊ ಬಾಲ ಮುಕುಂದ ಮಾಧವನೆನ್ನಿರೊ ಧ್ರುವ ಉದಯಕಾಲದಲಿ ಅನಂತಮಹಿಮನೆನ್ನಿ ಮಧ್ಯಾಹ್ನದಲಿ ಪದ್ಮನಾ¨sನೆನ್ನಿ ಸಂಧ್ಯಾಸಾಯಂಕಾಲದಲಿ ಶ್ರೀಧರನೆನ್ನಿ ಸದಾ ಕಾಲದಲಿ ಶ್ರೀ ಹರಿಯೆನ್ನಿರೊ 1 ಏಳುತ ಮಚ್ಛಾವತಾರ ಅಚ್ಯುತನೆನ್ನಿ ಮಲಗುತ ಶೇಷಶಯನನೆನ್ನಿರೊ ಹೇಳುತ ವಿಷ್ಣುವರಾಹವತಾರನೆನ್ನಿ ಕೇಳುತ ಕೃಷ್ಣಾವತಾರನೆನ್ನಿ 2 ನಡೆಯುತ ಸುಗುಣ ನಿರ್ಗುಣ ಸರ್ವೋತ್ತಮನೆನ್ನಿ ನುಡಿಯುತ ನಾರಯಣನೆನ್ನಿರೊ ಮಾಡುತ ಕೃಷ್ಣನಿರ್ಮಿತ ದಾಮೋದರನೆನ್ನಿ ಕೂಡುತ ಕೂರ್ಮಾವತಾರನೆನ್ನಿ3 ಆಡುತ ಗರುಡವಾಹನ ತ್ರಿವಿಕ್ರಮನೆನ್ನಿ ಬೇಡುತ ಸ್ವಾಮಿ ವಾಮನನೆನ್ನಿರೊ ನೋಡುತ ವಾರಿಜನೇತ್ರ ಪ್ರಸಿದ್ದನೆನ್ನಿ ಪಾಡುತ ಪರಮಾತ್ಮನೆನ್ನಿರೊ 4 ಉದ್ಯೋಗದಲಿ ಸಹಕಾರನಿರುದ್ದನೆನ್ನಿ ಉದರ ಕಾಯದಲಿ ಉಪೇಂದ್ರನೆನ್ನಿ ಮೇದಿನೊಯೊಳು ಹರಿಮಧುಸೂದನನೆನ್ನಿ ಆದಿ ಅಂತಿಮ ಅಧೋಕ್ಷಜನೆನ್ನಿರೊ 5 ಹೃದಯಕಮಲದೊಳು ಹೃಷೀಕೇಶನು ಎನ್ನಿ ಶಬ್ದಜಿಹ್ವೆಲಿ ಜನಾರ್ಧನನೆನ್ನಿರೊ ಬುದ್ಧಿಯಲಿ ಸಿದ್ಧಬೌದ್ದಾವತಾರನೆನ್ನಿ ಅದಿಅನಾದಿ ಗೋವಿಂದನೆನ್ನಿ 6 ಅನುದಿನ ಮನದೊಳು ಘನಮಹಿಮನು ಎನ್ನಿ ತನುವಿನೊಳು ಪುರುಷೋತ್ತಮ ನಾನೆನ್ನಿ ಅನ್ನವುದಕ ಸೇವಿಸುವ ಹರಿಭೋಕ್ತನೆನ್ನಿ ಘನಭೂಷಣದಿ ಸಂಕರುಷಣನೆನ್ನಿ 7 ಸತಿಪತಿ ಸಂಯೋಗದಲಿ ಪ್ರದ್ಯುಮ್ನನೆನ್ನಿ ಪತಿತಪಾವನ ಪರಬ್ರಹ್ಮನೆನ್ನಿ ಭಕ್ತವತ್ಸಲ ನರಸಿಂಹಾವತಾರನೆನ್ನಿ ಮುಕ್ತಿದಾಯಕ ದೇವೋತ್ತಮನೆನ್ನಿರೊ 8 ಪಾವನಮೂರುತಿ ಪರಶುರಾಮನೆನ್ನಿ ಜೀವಸಂಜೀವ ಶ್ರೀ ರಾಮನೆನ್ನಿ ಭವಭಯನಾಶ ಕಲ್ಕ್ಯಾವತಾರನೆನ್ನಿ ಮಹಿಪತಿಗುರು ವಾಸುದೇವನೆನ್ನಿ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಲಕಾಲದಿ ಕರುಣಿಗಳರಸನಾದ ರಾಮಾ ಎನಬಾರದೇ | ಜಗ | ಪಾಲಕ ನಿನಗಿಹಪರಗಳ ನೀವಾ ಪ ಪಂಚಾಗ್ನಿಯಲಿ ದೇಹ ಬಳಲಿಸುವದ್ಯಾತಕ | ರಾಮಾ ಎನಬಾರದೇ | ಪ್ರ | ಪಂಚ ತೊರೆದು ವನವಾಸ ಹಿಡವುದ್ಯಾಕ | ರಾಮಾ ಎನಬಾರದೇ || ಒಂಟಿ ಕಾಲಿನ ಯೋಗಧಾರಣವ್ಯಾಕ | ರಾಮಾ ಎನಬಾರದೇ | ಪುಣ್ಯ | ಸಂಚಿಸೆ ಕೃಚ್ಛೆ ಚಾಂದ್ರಾಯಣಿ ವೃತವ್ಯಾಕ | ರಾಮಾ ಎನಬಾರದೇ 1 ರಾಮಾ ಎನಬಾರದೇ | ಅ| ಖಂಡದಿ ಛಟಪಟ ಕರ್ತಬೋಧಗಳ್ಯಾಕ ರಾಮಾ ಎನಬಾರದೇ || ಮಂಡೆ ಬೋಳಿಸಿ ಭಿಕ್ಷಾನ್ನ ಬಯಸುವದ್ಯಾಕ | ರಾಮಾ ಎನಬಾರದೇ | ಜಗ | ಭಂಡರಂದದಿ ಬತ್ತಲೆ ತಿರುಗುವುದ್ಯಾಕ | ರಾಮಾ ಎನಬಾರದೇ 2 ಉಂಬಾಗ ಉಡುವಾಗ ಕೊಂಬು ಕೊಡುವಾಗ | ರಾಮಾ ಎನಬಾರದೇ | ಸರ್ವಾ | ರಂಭದಿ ಸತಿಸುತಲಾಲನೆ ಮಾಳ್ಪಾಗ | ರಾಮಾ ಎನಬಾರದೇ || ತಿಂಬು ತಾ ಕಳಿಸುತಾ ಎಡಹುತಾಣಕಿಸುತಾ ರಾಮಾಎನಬಾರದೇ | ಇದು | ಸಂಭ್ರಮದಲಿ ಮಹಿಪತಿ ಸುತ ಸಾರಿದಾ ರಾಮಾ ಎನಬಾರದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು