ಒಟ್ಟು 448 ಕಡೆಗಳಲ್ಲಿ , 68 ದಾಸರು , 355 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಾಮಸುಂದರ ಪೊರೆಯೊ ರಘುರಾಮಾ ಕಾಮಿತ ಫಲವಿತ್ತು ಪ ಸೋಮಧಾಮ ಸುತ್ತಾಮ ಸುರಾರ್ಚಿತ ಕರುಣದಿ ದಯವಿತ್ತು ಅ.ಪ. ತಟಿತ್ಕೋಟಿ ನಿಭ ಹಾಟಕಾಂಬರನೆ ಘಟಿತವಾದ ಈ ಜಟಿಲ ಶರಧಿಯೊಳು ನಟ ನಡುವೆ ಸಿಲುಕಿ ಗುಟಕ ನೀರು ಕುಡಿದ ಈ ಪುಟ [ಟ್ಟ] ಪುರುಷನ ಮೇಲೆ ದೃಷ್ಟಿ ಇಟ್ಟು ನೋಡಿದರೆ ಪಟುಲವೇನೋ ವಟಪತ್ರಶಯನನೆ ನಟವಳಿಯೊಳು ಈ ಭಕುತ ಕಟಕಿಯ ಮಾಡೆ 1 ಚಂಡ ವಿಕ್ರಮ ಕೋದಂಡ ದೀಕ್ಷಾ ಖಂಡ ಮಹಿಮಾರಾಮಾ ದುರಿತವೇಕೋ ಗಂಡ ಕಂಠೀರವನೆ ಡಿಂಗರಿಗಾತಿ ಪ್ರೇಮಾ ಅಂಡಜವಾಹನ ಪಾಂಡವ ಮೂರುತಿ ಕುಂಡಲಗಿರಿಧಾಮಾ 2 ಘನಚರಿತ ಪ್ರಸನ್ನ ದಯಾಂಬುಧಿ ಇನ್ನಾದರೂ ಈ ಚಿಣ್ಣಗೆ ಚೆನ್ನಾಗಿ ದೃಷ್ಟಿಯಿಟ್ಟು ಕೃಪೆಮಾಡು ಸನ್ನುತಿಸುವೆ ಮುನ್ನಾ ಕಣ್ಣೆತ್ತಿ ನೋಡದೆ ಅನ್ನ ದೈªಂಗಳ ಬಿನ್ನವಿಸುವೆ ನಿನ್ನಾ ಮನ್ಮಥಪಿತ ಭೋ ಮಹಾನಿಧಿವಿಠಲ ಅಹರಹದಿ ನಿನ್ನಾ ಚನ್ನಾ 3
--------------
ಮಹಾನಿಥಿವಿಠಲ
ಶಿಸ್ತಿಗೆ ಅಲಂಕಾರವು ಪ ಗೃಹಸ್ಥರಲ್ಲಿ ವ್ಯಾಜ್ಯವು ನಾಸ್ತಿ ಭಕ್ಷ್ಯ ಭೋಜ್ಯವು ಅ.ಪ ನೀರು ತುಪ್ಪ ಬಡಿಸುತ 1 ಹಪ್ಪಳ ಮುರಿದು ಹಾಕಿಸಿ ಅತಿಥಿಗಳನು ನೂಕಿಸಿ ತುಪ್ಪದ ಸೌಟು ತೋರಿಸಿ ಉಪ್ಪು ಚಟ್ನಿ ಹೆಚ್ಚಿಸಿ 2 ಮೂರು ಗಂಟೆಯೂಟವು ಮೂಢತನದೋಡಾಟವು ವೋರೆ ವೋರೆ ನೋಟವು ಸಾರು ಅನ್ನಾ ಕಾಟವು 3 ಎಣ್ಣೆ ವಗ್ಗರಣೆ ಎಲ್ಲಕು ಅನ್ನ ಹೊತ್ತಿ ಇರುವುದು ಸನ್ನೆ ಸೈಯಿಗೆಯೇ ಬಲ 4 ಸಾಲದಡಿಗೆ ಕಾಯಿಪಲ್ಯ ಬೇಯಲಿಲ್ಲ ವೊಂದಾದರು ರಾಯ ಗುರುರಾಮವಿಠಲ ಬಲ್ಲ ಉ- ಪಾಯಗಾರರು ಬೀಗರು 5
--------------
ಗುರುರಾಮವಿಠಲ
ಶುಂಠನಿಗೆ ಉಂಟೆ ವೈಕುಂಠಾ | ಬಂಟನಿಗೆ ಉಂಟೆ ಒಡತನವು ಪ ಕಳ್ಳನಿಗೆ ಉಂಟೆ ಪರರು ಒಡವೆ ಗಳಿಸಿದ ಕಷ್ಟ | ಸುಳ್ಳನಿಗೆ ಉಂಟೆ ಮಿತಿಯಾದ ಭಾಷೆ|| ಕೊಲ್ಲುವನಿಗೆ ಉಂಟೆ ದಯಾದಾಕ್ಷಿಣ್ಯದ ಮಾತು | ಕ್ಷುಲ್ಲಕನಿಗೆ ಉಂಟೆ ಗುಣ ಭಾರಿ ಬುದ್ಧಿಗಳು 1 ಉಪವಾಸಿಗೆ ಉಂಟೆ ಅನ್ನ ಆಹಾರದ ಚಿಂತೆ | ತಪಸಿಗೆ ಉಂಟೆ ಇಹದ ವ್ಯಾಕುಲ || ಕೃಪಣನಿಗೆ ಉಂಟೆ ದಾನ-ಧರ್ಮದ ಚಿಂತೆ | ಚಪಳನಾರಿಗೆ ಉಂಟೆ ತನ್ನ ಮನೆವಾರ್ತೆ 2 ರುಚಿ | ಹಾದಿ ಬಿಟ್ಟವಗುಂಟೆ ಮನದ ಧೈರ್ಯ || ವೇದನೆಬಡುವಗುಂಟೆ ಅನ್ನಿಗರ ಸಂಧಾನ | ಕ್ರೋಧದವಗುಂಟೆ ಬಲು ಶಾಂತ ನೀತಿ 3 ಕಾಮಾತುರಗೆ ಉಂಟೆ ಭವಕುರಿತ ಲಜ್ಜೆಗಳು | ನೇಮ ನಿತ್ಯಗೆ ಉಂಟೆ ಮನದರೋಗ || ಹೇಮಾತುರಗೆ ಉಂಟೆ ಗುರು ಬಾಂಧವ ಸ್ನೇಹ | ತಾಮಸಿಗೆ ಉಂಟೆ ಶುಭಕರ್ಮ ಸದ್ಭಕ್ತಿ 4 ದಾನಿಗೆ ಉಂಟೆ ಇಂದಿಗೆ ನಾಳಿಗೆಂಬೋದು | ಜ್ಞಾನಿಗೆ ಹತ್ಯಾದಿ ದೋಷ ಉಂಟೆ | ಸಿರಿ ವಿಜಯವಿಠ್ಠಲ ಸ್ವಾಮಿಯ ಧೇನಿಸುವಗುಂಟೆ ದಾರಿದ್ರ್ಯ ದುಷ್ಕರ್ಮ5
--------------
ವಿಜಯದಾಸ
ಶ್ರವಣ ಮಂಗಳನೀವುದೊ ಎನ್ನ ಕರ್ಣಗಳಿಗಾ- ನಂದ ಕೊಡುವುದು ಶರಣ ಜನರಿಗೆ ಬಂದ ದುರಿತಗಳ್ಹರಣ ಮಾಡುವುದು 1 ಭರಣ ಭೂಷಿತನಾದ ಲಕ್ಷ್ಮೀರಮಣ ನೀಲಾ- ವರಣ ನಿನ್ನ ಝಣ ಝಣಂದಿಗೆ ನಾದ ನೂಪುರ ಚರಣಕ್ವಂದಿಸುವೆ 2 ಕಮಲನಾಳದಿ ಪುಟ್ಟಿದಾತನ ಜನನಿ ಪತಿ ಜಗಜ್ಜನಕ ನಿನ್ನ ವನಜಪಾದಕೆ ನಮಿಸುವೆನೊ ಈ ಮನವು ನಿನ್ನಲ್ಲಿ 3 ನಿಲಿಸಿದರೆ ನಾ ನಿನ್ನ ನಾಮವ ನೆನೆಸಿದರೆ ಫÀಲಫಲಿಸಿ ಬಾಹೋದು ಒಲಿಸುವನು ವೈಕುಂಠಪತಿ ನೀ ಮನಸು ಮಾಡುವರೆ 4 ಘನಮಹಿಮ ಗಾಂಧಾರಿ ಸುತರನು ಹನನ ಮಾಡಿದ ಪವನ ಪ್ರಿಯನೇ ಜನುಮ ಜನುಮದಿ ನಿನ್ನ ಬಿಡೆ ನಾ ಜಗದ ವಲ್ಲಭನೆ 5 ಪತಿ ನಿನ್ನ ಸುಂದರಾಂಗವನು ತೋರದಲೆ ಭವ ಭಂಗ ಬಿಡಸುವು- ದ್ಯಾತಕೋ ಶ್ರೀರಂಗ ಪೇಳಿನ್ನು 6 ಚಕ್ರದಂದದಿ ತಿರುಗೊ ಎನಮನ ಚಕ್ರಧಾರಿಯೆ ನಿನ್ನ ಕಾಣದೆ ಶಕ್ರಸುತನ ಸಖನೆ ದಯಮಾಡ್ಹಕ್ಕಿವಾಹನನೆ 7 ಅನ್ನದಾತನು ಇರಲುಕಾಣದೆ ಅನ್ಯರಿಗೆ ಬಾಯ್ತೆರೆಯಲ್ಯಾತಕೆ ಪನ್ನಗಾದ್ರಿಶಯನ ನೀ ಸಲಹೆನ್ನ ಶ್ರೀಹರಿಯೆ 8 ಸರ್ವಗುಣ ಸಂಪನ್ನ ಸರ್ವೋತ್ತಮನೆ ಸರ್ವ ವ್ಯಾಪಾರಗಳನು ಸರ್ವಕಾಲದಿ ನಡೆಸುತಿರುವ ಸರ್ವರಾಧಾರಿ 9 ವರಮಹಾಲಕ್ಷ್ಮೀಪತಿಯೆ ವಾರಣವರದ ನಿನ್ನ ಸುರ ವಿರಿಂಚನಾ ಹರನು ವೀಣಾ- ಪಾಣಿನಾರದ ಬರಿದೆ ನಮಿಸುವರೆ 10 ಪರಮ ಕರುಣಾಶರಧಿ ಎನ್ನ ದುರಿತಗಳ ನೀ ದೂರ ಮಾಡುವೆ ಬಿರುದು ನಿನ್ನದÀು ಬಿಡದೆ ಭೀಮೇಶಕೃಷ್ಣ ಸಲಹೆನ್ನ 11
--------------
ಹರಪನಹಳ್ಳಿಭೀಮವ್ವ
ಶ್ರೀ ಕೃಷ್ಣ ಚರಿತ್ರೆ ಅಧ್ಯಾಯ ಒಂದು ರಾಗ:ಸೌರಾಷ್ಟ್ರ ತಾಳ:ತಿವಿಡೆ ಸ್ವರ ಋಷಭ ಶ್ರೀ ರಮಣ ಚರಣಾರವಿಂದವ ಆರಡಿ ಪರಿಯಾಗಿ ಸೇವಿಸಿ ಶ್ರೀ ರಮಾ ಬ್ರಹ್ವಾದಿ ಗುರುಪದ ಸೇರಿ ಸೇವಿಸುವೆ| ನಾರಿಮಣಿ ಶಿರಿದೇವಿ ಅಪಾರ ಮಹಿಮೆಯ ತಿಳಿವುದಕೆ ಪೂರ ಮನಗಂಡಿಲ್ಲ ಮತ್ತಿನ್ನಾರು ಬಲ್ಲವರು 1 ಆರಗೊಡವಿನ್ನೇನು ಮತ್ತಿನ್ನಾರು ದೂರಿದರೇನುಸರ್ವವು ಪೂರಮಾಡುವ ನಮ್ಮ ಗುರುಗಳ ಪೂರದಯವಿರಲು| ಮನದಲಿ ಘೋರತರ ಅಭಿಲಾಷೆ ಯೋಗ್ಯತೆ ಮೀರಿ ಇರುವುದು 2 ಮನಸಿನಲಿ ಮಾತ್ಸರ್ಯವಿಲ್ಲದೆ ಘನಕವೀಶ್ವರಗಳಿಗೆವಂದಿಸಿ ಅನುಸರಿಸಿ ಭಾಗವತವನು ಬಹುವಿನುತ ದಶಮ ಸ್ಕಂದದರ್ಥವ ಕನ್ನಡಿ ತೋರಿಸಿದಂತೆ ಸ್ಪಷ್ದದಿ ಕನ್ನಡಿಲ್ಹೇಳುವೆನು 3 ಪದ್ಯ ಭಾರ ಆಘೋರದುಃಖವನು ಶ್ರೀ ರಮೇಶನ ಸ್ತುತಿಸುತಿರುವ ಕಾಲದಲಿ| ಸಾರ ಸಾರಿ ಹೇಳಿದನು ವೃಂದಾರ ಕರುಗಳಿಗೆ 1 ಪದ, ರಾಗ:ಯರಕಲಕಾಂಬೋದಿ ಅಟತಾಳ ಸ್ವರಧೈವತ ಕೇಳಿರೋ ಭೋ ದೇವತೆಗಳಿರಾ ಹೇಳುವೆ ಹರಿಭಾವವ ಹೇಳಿರೋ ನಿಮ್ಮವರಿಗೆಲ್ಲಾ ಭಾಳ ಸಂತೋಷದಿಂದಲೇ ಪ ಇಷ್ಟುದಿವಸ ಭೂದೇವಿ ಕಷ್ಟವ ಬಟ್ಟಳು ಬಹಳ ಸ್ಪಷ್ಟವಾಗಿ ಆಕೆಯಾ ಕಷ್ಟವು ದೂರಾಗುವುದಿನ್ನು || ವಿಷ್ಣುನಾಜ್ಞೆಯಲಿ ನೀವು ವೃಷ್ಣಿ ಕುಲದಲ್ಹುಟ್ಟಿರೋ|| ವಿಷ್ಣುತಾ ದೇವಕಿಯಲ್ಲಿ ಕೃಷ್ಣನಾಗಿ ಹುಟ್ಟುವಾ1 ಪದ ಈ ವಚನವ ಕೇಳಿ ದೇವತಿಗಳಾಗ ಹರಿಸೇವೆ ಆಗಲಿಯೆಂಬೋ ಭಾವದಲಿ ಜನಿಸಿದರು| ಈ ವಸುಧಿಯೊಳಗವರು ಭಾವಕನು ಕಶ್ಯಪ ವಿಭಾವಸುವನ ಪೋಲ್ವ ವಸು ದೇವನಾದನು ಅದಿತಿದೇವಿ ತಾ ಜನಿಸಿದಳು ದೇವಕಿಯು ಆಗಿ| ದೇವ ಪೂಜಕನು ವಸುದೇವ ತಾ ಪ್ರೀತಿಯಲಿ ದೇವಕಿಗೆ ಕೊಟ್ಟ ಸದ್ಭಾವದಲಿ ಬೇಕಾದ್ದು ದೇವಕಿಯಲಿ ವಸುದೇವ ರಥವೇರಿದನು ಆವಾಗ ಕಂಸ ತಾ ತೀವ್ರ ನÀಡಿಸಲಾವತ್ತಿಗಾಯಿತಲ್ಲೆ ವಿಯದ್ವಾಣಿ ಪದ, ರಾಗ(ದೇಸಿ) ಅಟತಾಳ, ಸ್ವರಷಡ್ಜ ಕೇಳು ಕಂಸನೆ ನಿನಗೇಳುವೆ ನಾ ಬಂದು| ಕೇಳು ಕಂಸಾ|| ಬಹಳ ದಿವಸ ಬಾಳಿ ಇರುವವನಲ್ಲ ಕೇಳು ಕಂಸ ಪ ಮಂಗಳಾಂಗಿಯು ಈಕೆ ತಂಗಿ ಎಂದೆನಬೇಡ ಕೇಳು ಕಂಸಾ| ತಂಗಿಯ ಮಗನೇ ನಿನ್ನಂಗಕ್ಕೆ ವೈರಿಯು ಕೇಳು ಕಂಸಾ|| 1 ಭಂಡ ನಾನೆಂದು ಉತ್ಕಂಠಿದಿಂದರ ಬೇಡ ಕೇಳು ಕಂಸಾ| ಎಂಟನೆಯವ ನಿನ್ನ ಘಂಟಸಿ ಕೊಲ್ಲುವನು ಕೇಳು ಕಂಸಾ|| 2 ವೈರಿ ದಾವಾತಿದ್ದಾನೆಂದೆನ ಬೇಡ ಕೇಳು ಕಂಸಾ| ಶುದ್ಧ ಅನಂತಾದ್ರೀಶ ಅವತಿಳಿ ಕೇಳು ಕಂಸಾ|| 3 ಪದ್ಯ ನುಡಿದಿರುವ ಆ ಸತ್ಯವಾಣಿಯ ಕೇಳಿ ಮೃತ್ಯುಗಂಜಿಕೀನ್ನ ಹೊತ್ತುಗಳೆಯದಲೆ ಆ ಹೊತ್ತು ಕೊಲಬೇಕೆಂದು ಸತ್ವರದಿ ಕೇಶದಲಿ ಒತ್ತಿ ಹಿಡಿದು ಕತ್ತಿ ಹಿರಿದೆತ್ತಿದನು ಕÀಂಸಾ| ಆ ವೃತ್ತಿಯನು ತಿಳಯುತಲೆ ಅತ್ಯಂತವಾಗಿ ತನ್ನ ಚಿತ್ತದಲಿ ಮಿಡುಕಿ ಮದಮತ್ತ ಕಂಸಗೆ ನುಡಿದ ಒತ್ತಿ ಈ ಪರಿಯಾ || 1 ಪದ, ರಾಗ:ಆನಂದಭೈರವಿ ಆದಿತಾಳ ಬೇಡಲೊ ನೋಡಿ ಈಕೆಯಲಿ ಮಾಡು ಮಮತೆಯನು ಮಾಡಬೇಡ ಹಿಂಸಾ|| ಪ ಯಾಕೆಕೊಲ್ಲುವಿಯೋ ನೀ ಕರುಣಿಸು ಸಣ್ಣಾಕಿ ನಿರ್ಮಲಾಂಗಿ|| 1 ಕೊಂದರೆ ಎನಗೆ ಕೇಡು | ಮತ್ತದರಿಂದ ನಿನಗೆ ಕೇಡು ತಿಳಿದು ನೋಡು|| 2 ಏಸು ದಿವಸ ನೀನು ಬದುಕುವಿ ನಾಶವಿಲ್ಲವೇನು| ಮೋಸವಾಗದಿರು ಶ್ರೀಶ ಅನಂತಾದ್ರೀ ಕೋಪಿಸುವನು 3 ಆರ್ಯಾ ಬಹಳ ರೀತಿಯಲಿ ಹೇಳಿಕೊಂಡರೂ ಕೇಳಲಿಲ್ಲ ಕಂಸನು ಶೌರಿಯು ಹೀಗೆ || 1 ಪದ, ರಾಗ:ಅನಂದ ಭೈರವಿ ತಾಳ:ಆದಿ ಬೇಡಿದ್ದು ಕೊಡುವೆನು ನಾನು| ಪ ಜೇವ ಹತ್ಯವೇ ಮುಂಚೆ ಕೇವಲ ನಿಂದ್ಯದು ಸ್ತ್ರೀ ವಧಕಂತು ಇನ್ನು ದಾವುದು ಸರಿಯದು || 1 ಹುಟ್ಟುದರೀಕೆಯ ಹೊಟ್ಟೆ | ಮಕ್ಕಳು ಘಟ್ಟಿ ಮನಸು ಮಾಡಿ ಕೊಟ್ಟುಬಿಡುವೆನು ಕೇಳು || 2 ಬಲ್ಲಿದಾನಂತಾದ್ರಿವಲ್ಲಭನ ಆಣಿ|| 3 ಪದ, ರಾಗ:ಯರಕಲಕಾಂಬೋಧಿ ಶೌರಿಯ ವಚನವ ಕೇಳಿ ವೈರಿಯ ಕಂಸನು ಆಗ ಮೋರೆಯ ತೆಗ್ಗಿಬಿಟ್ಟನು ನಾರಿಯ ಕೊಲ್ಲುವದು | ವೈರಿಯ ಭಯ ಕಳೆವುತ ನಾರಿಯ ಕರಕೊಂಡು ||1 ಮುಂದಾ ದೇವಕಿಯಲಿ ಕಂದನು ಆದಾಕ್ಷಣಕೆ ತಂದೊಪ್ಪಿಸಿದನು ಕಂಸಗೆ ನೊಂದ ವಸುದೇವ| ಮುಂದಾ ಕಂಸನ ನೋಡಿ| ಮನನ ಹಾಸ್ಯದಿ ಮತ್ತ ಕಂದನ ತಿರಿಗಿ ಒಪ್ಪಿಸಿ ಆಗಂದನು ಈ ಪರಿಯು || 2 ಶಿಷ್ಟನೆ ನೀಕೇಳೈ ಬಂದಿಷ್ಟಿಲ್ಲಿವನಿಂದೆನಗೆ| ಸ್ಪಷ್ಟದಿ ನಿನಗ್ಹೇಳುವೆ ಎನಗಷ್ಟಮನೇ ವೈರಿ| ದುಷ್ಟನ ಮಾತಿಗೆ ಶೌರಿಯು ತುಷ್ಟನು ಇದು ಎಂದು || 3 ಪದ, ರಾಗ:ಕನ್ನಡ ಕಾಂಬೋದಿ ತಾಳ:ಬಿಲಂದಿ ಮುಂದ ಶೌರಿಯು ತನ್ನ ಮಂದಿರಕ್ಕೆ ಪೋಗಲು ಬಂದ ನಾರದನು ಆಗಲ್ಲೆ ಕಂಸ ಇದ್ದಲ್ಲೆ || 1 ಮಾಡಿದಾ | ಮಾತನಾಡಿದಾ|| 2 ಸುದ್ದಿಯಂಬೋದ್ಹುಟ್ಟಿತು | ಕೆಲಸ ಕೆಟ್ಟಿತು|| 3 ದಾವ ಮೊತೇನ್ಹೇಳಲಿ ದೇವದೇವ ಶ್ರೀಹರಿ ದೇವಕಿಯಲ್ಲಿ ಪುಟ್ಟುವಾ| ನಿನ್ನ ಕೊಲ್ಲುವಾ|| 4 ಅಸುರರಾದವರುಗಳಾ ಅಸುಗಳನ್ನೆ ಹೀರುವಾ ವಸುಧಿ ಭಾರವನಿಳಿಸುವಾ ಕೀರ್ತಿ ಬೆಳಿಸುಮವಾ|| 5 ನಂದಗೋಪಾದಿUಳೆÀಲ್ಲ ನಂದ ಬಾಂದವರು ಮತ್ತು ಮುಂದ ವಸುದೇವಾದಿಗಳು | ದೇವತಿಗಳು|| 6 ಇನ್ನಕೇಳು ಇವರ ಹೊರ್ತು ಅನ್ನರಾದವರು ಎಲ್ಲಾನಿನ್ನ ಅನುಸರಿಸೆ ಇರುವುವರು | ಅಸುರರೇ ಅವರು|| 7 ಮೂಲದಲ್ಲೇ ಮುಂಚೆ ನೀ ಕಾಲನೇಮಿಯೆನಿಸಿ ಈ ಕಾಲಕ್ಕೆ ಕಂಸನಾಗಿರುವಿ | ಮೈಮರ್ತು ಇರುವಿ || 8 ನಿನ್ನ ಪೂರ್ವ ವೈರಿಯು ಚನ್ನಿಗಾನಂತಾದ್ರೀಶಾ ನಿನ್ನ ಕೊಲ್ಲುವನೆಂಬುದದು |ನಿನಗೆ ತಿಳಿಯದು || 9 ಧಿಟ್ಟ ನಾರದನು ಮುನಿಮುಟ್ಟಿ ಬಂದ್ಹೀಂಗನಲು ಥಟ್ಟನೆ ಕಂಸ ಭಯಬಟ್ಟು ಅವರಿಬ್ಬರಿಗೆ ಘಟ್ವ ಬೇಡಿಯ ಬಿಗಿದು ಹುಟ್ಹುಟ್ಟದವರನ್ನ ಬಿಟ್ಟು ಬಿಡುದಲೆÀ ಕೊಂದ ಹುಟ್ಟಿದಾಕ್ಷಣಕೆ|| ಹುಟ್ಟುಗ್ರ ಸೇನನಲಿ ಹುಟ್ಟಿದಾರಭ್ಯ ಬಹು ದಿಟ್ಟಾದ ಸ್ನೇಹವನು ಬಿಟ್ಟ ಆ ಕಂಸ ಕಂಗೆಟ್ಟು ಬಹುಕಾಸೋಸಿ ಬಟ್ಟವನ ಬಂದಿಯ ಲ್ಲಿಟ್ಟುತಾನೆ ಆದ ಪಟ್ಟಕಾಧಿಪತಿಯು|| 1 ಪದ:ರಾಗ:ಶಂಕರಾಭರಣ ಸ್ವರ:ಷಡ್ಜ, ತಾಳ:ಆದಿ ಯೂದವರನ್ನು ಬಹುಪೀಡಾ ಬಡಿಸೀದಾ || 1 ದುಷ್ಟನ ಕೈಯೊಳು ಸಿಕ್ಕು ಶಷ್ಟ ಬಡಲಾರೆವು ಎಂದು ಅಷ್ಟೂರು ನಿಲ್ಲದೆ ದೇಶಭ್ರಷ್ಟರಾಸರು|| 2 ಅನುಬಂಧಿಗಳೆಂಬುವರು ಅನುರಾಗದಿಂದಲ್ಲೆ| ಅವನ ಅನುಸರಿಸಿಕೊಂಡಿರುತಿಹರು ಅನುದಿನದಲ್ಲಿ||3 ಕ್ರೂರಾಗಿ ಇರುವೊನು ಕಂಸಾ ನಾರಿ ದೇವಕ್ಕಿ ದೇವಿಯು ಆರು ಮಹಾಕಾಳಿಯ ಹರೊ ಆಜ್ಞೆಯಿಂದ ಕೀಳುತು ರೋಹಿಣಿ ಗರ್ಭದೊಳಿಟ್ಟಳು|| 4 ದೇವಕಿದೇವಿಯು ವಸುದೇವಾದಿಗಳೆಲ್ಲ ಗರ್ಭ ಸ್ರಾವವಾಯಿತೆಂದೊದರಿದರು ಆ ವ್ಯಾಳ್ಯದಲ್ಲಿ|| 5 ಎಂಟನೆ ಗರ್ಭಾಗಿ ಶ್ರೀ ವೈಕುಂಠೇಶ | ನಿಂತಾನು ಸಾಧು ಕಂಟಕರನ್ನು ಕೊಲ್ಲುವೆ ನೆಂದುತ್ಕಂಠದಿಂದಲಿ || 6 ಶಂಜಾಕ್ಷಿ ದೇವಕಿ ದೇವಿ ಶಂಜನಾಭನುದರವೆಂಬೋ ಪಂಜರದೊಳಿರಲು ತೇಜಃ ಪುಂಜಳಾದಳು7 ಇಂಥಾಕಿಯ ಕಂಡು ಕಂಸಾನಂತಾದ್ರೀಶ ಗರ್ಭದಲ್ಲಿ ನಿಂತಾನೆಂದು ತಿಳದೀಪರಿ ಚಿಂತಿ ಮಾಡಿದಾ|| 8 ಪದ:ರಾಗ:ಶಂಕರಾಭರಣ ಏನು ಮಾಡಲಿ | ನಾ ಇನ್ನೇನು ಮಾಡಲಿ | ಏನು ಮಾಡಲೇನು ವಿಷ್ಟು ತಾನೆ ಬಂದಿನ್ನೇನು ಗತಿ ಇನ್ನೇನು|| ಪ ವೀರರೊಳಗೆ ಸೇರಿ ಎನ್ನ ಮಾರಿ ಹ್ಯಾಂಗ ತೋರಲಿನ್ನೇನು ||1 ತಂಗಿ ವಧ ಜಗಂಗಳೊಳಗೆ ಅಮಂಗಳಿದು ಸು
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ವನಿತೆ ವೈನತೇಯ ವಾರುತೆ ದೇವಾದಿ ವರವಿನುತೆ ಕಾವದು ಯೆನ್ನ ನೀ ವದಿಗಿ ಮುನ್ನೆ ಈವದು ವರ ಆವದುವಲ್ಲೆ ರಾಜೀವ ಚರಣದ ಸೇವೆಯ ಪಾಲಿಸು ಕೋವಿದರೊಡನೆ ಪ ಸಮಸ್ತಲೋಕ ವಂದಿತೆ ಸಂತತ ಮತ್ತೆ ತಾಮಸ ಜ್ಞಾನ ಹರತೆ ಸಾಮಗಾಯನ ಪ್ರೀತೆ ಸಕಲವಿದ್ಯಾತೀತೆ ರೋಮ ರೋಮ ಗುಣ ಭರಿತೆ ರಾಮನ್ನ ಪದ ನಾಮವನ್ನು ನಾ ಮರೆಯದಂತೆ ನೀ ಮನಸು ಕೊಡು ಹೇಮಾಂಬರೆ ಕಾಂಚಿದಾಮೆ ಅಮಮ ನಿ- ವನಧಿ ಸೋಮೆ ಕಾಮ ಜನನಿ ತ್ರಿಧಾಮೆ ಪುಣ್ಯನಾಮೆ ಕೋಮಲಾಂಗಿ ಸತ್ಯಭಾಮೆ ರಮೆ ಪೂರ್ಣ ಕಾಮೆ ಸುರಸಾರ್ವಭೌಮೆ 1 ಚಂದನ ಗಂಧಲೇಪಿನೀ ಚತುರವಾಣೀ ಮಂದಹಾಸಗಮನೀ ಗಂಧಕಸ್ತೂರಿ ಜಾಣಿ ಗಂಭೀರ ಗುಣಶ್ರೇಣಿ ಸಿಂಧುತನಯೇ ಕಲ್ಯಾಣಿ ಇಂದಿರೆ ಪದ್ಮಮಂದಿರೆ ಕಂಬು ಕಂಧರೆ ಸರ್ವಸುಂದರೆ ಮಾಯೆ ಬಂದೆನು ಕರುಣದಲಿಂದ ನೋಡು ಶತ - ಕಂಧರÀರಿಪು ಸುಖಸಾಂದ್ರ ನಿರಾಮಯೆ ಹಿಂದಣ ಕಲ್ಮಷ ವೃಂದಗಳೋಡಿಸಿ ನಿಂದೆ ನಮೋನಮೋ ಯೆಂದೆ 2 ನಿತ್ಯ ಸಲ್ಲಾಪೆ ಅನ್ನಂತಾನಂತ ರೂಪೆ ಕನ್ಯಾಮಣಿಯೆನಿಪೆ ನಿನ್ನ ಕಡೆಗಣ್ಣಿನ ನೋಟ- ವನ್ನು ಹರಹಿ ಹಿರಣ್ಯಗರ್ಭಾದಿ- ಅನುದಿನ ಧನ್ಯನ ಮಾಳ್ಪಳೆ ಅನ್ಯರಿಗೆ ಕಾರ್ಪಣ್ಯ ಬಡದಂತೆ ಚನ್ನ ವಿಜಯವಿಠ್ಠಲನ್ನ ಪೂಜಿಪ ಗುರು ರನ್ನೆ ಪುರಂದರರನ್ನ ಪೊಂದಿಸು ಸಂ-ಪನ್ನೆ ಯೆನ್ನ ಪ್ರಾಸನ್ನೆ 3
--------------
ವಿಜಯದಾಸ
ಶ್ರೀನಿವಾಸ ಗುರು ಗುಣಾಧೀಶ | ಪಾಲಿಸೊ ಭಕ್ತರ ತೋಷ ನಾ ನಿನ್ನ ದಾಸ ಪ ಏನಾದರು ಎನ್ನ ಹೀನತೆ ಎಣಿಸದೇಸಾನುರಾಗದಿ ನಿನ್ನ ಅಧೀನದೊಳಗಿರುವುದು ಅ.ಪ. ನಿತ್ಯ 1 ಅಗ್ನಿಹೋತ್ರವ ನಡೆಸುವ ತೆರದಿ | ಆಗ್ಯನ್ನನು ಮುದದಿಸುಜ್ಞಾನಿ ನೀನೇ ಕರಗಳ ಪಿಡಿದೀ | ಅಜ್ಞಾನವ ಬಿಡಿಸೀವಿಘ್ನವಗೊಳಿಸದೆ ಸರ್ವಜ್ಞ ಪಾದದೀಮಗ್ನನ ಮಾಡು ಪ್ರಾಜ್ಞ ಶಿರೋಮಣಿ2 ನಿನ್ನ ನಂಬಿದ ಪಾಮರ ನಾನು | ಪಾವನ್ನ ನೀನುಎನ್ನ ಗುಣ ದೋಷಗಳನ್ನು | ಮನ್ನಿಸುವಾದೇನು ಅನ್ನಂತ ಪಾಪಿ ನಾನು ನೀನಾದರೊ ದಯವನ್ನು ಮಾಡುನಿನ್ನ ಪೊಂದಿದೆ ಮಹಾನುಭಾವ 3 ಪಾತಕಿ ನಾನಾದರೂ ನಿನ್ನಚರಣಕ್ಕೆ ಸುತ್ತಿದ ಬಿರಿದು ಬಿಡುವುದುಂಟೇ4 ಅನ್ಯರಿಗಾನು ಎರಗುವನಲ್ಲ | ನೀ ಬಲ್ಲಿ ಎಲ್ಲಮನ್ನಿಸಿ ದಯದಿ ಎನ್ನಯ ಸೊಲ್ಲ ಶಿರಿ ಲ-ಕ್ಷ್ಮೀ ನಲ್ಲ ಎನ್ನ ಪಿಡಿಯೊ ಮೋ-ಹನ್ನ ವಿಠಲನ್ನ ತೋರಿ ಪಾವನನೆನಿಸುವುದು 5
--------------
ಮೋಹನದಾಸರು
ಶ್ರೀನಿವಾಸ-ಶ್ರೀನಿವಾಸ-ಶ್ರೀನಿವಾಸ ಪ ಶ್ರೀನಿವಾಸ ನಾನಿಹೆ ನಿನ್ನ ದಾಸ-ನಿನ್ನ ದಾಸ ನಿನ್ನದಾಸ ಅ.ಪ. ಈಶ, ತರಿಯುವೆ ಕ್ಲೇಶಾ ಕೊಡುಲೇಶ, ಕೊಡುಲೇಶ ಜೀಯ, ಸಡಗರ ದೈವ ಬಡವನು ನಾನು ಕೊಡುವುದು ಏನು, ಅಡಿಗಳನೀಡು, ಇಡುವೆನು ಮೌಳಿ, ಇಡುವೆನು ಮೌಳಿ ಘನಸುಖದಾತ, ಚಿನ್ಮಯಗಾತ್ರ, ವನರುಹ ನೇತ್ರ, ಅನಿಲನಸೂತ್ರ ಅನುದಿನ ತನುಮನನಾಥ ತನುಮನನಾಥ ಕುಂದುಗಳಳಿದು, ಕಂದನ ಸಲಹೋ ಕಂದನ ಸಲಹೋ 1 ವೇದವ್ಯಾಸ, ವಾದಾಗಾರ, ಬೋಧಿಸಿವಿದ್ಯೆ ಸಾಧನೆಗೈಸೋ ವೇಧನ ತಂದೆ ವೇಧನತಂದೆ ಸೋದರ ಪ್ರಜೆಗಳು ದೈತ್ಯರ, ಖೇದವನೀಡ್ಡೆ ಖೇದವನೀಡ್ದೆ ಧೀರವರಾಹ, ಯಾಗಶರೀರ, ಬಹುಗಂಭೀರ ಶೃತಿಗಳಸಾರ ಸಾರ ಸಾರಕೆ ಸಾರ ಕಂಭದಿಬಂದೆ ಕಂದನ ಪೊರೆದೆ ಕಂದನ ಪೊರೆದೆ 2 ಬಲಿಯೆಡೆನಿಂದ ಬೇಡುವೆನೆಂದ ಬೇಡುವೆನೆಂದ ಮೂರಡಿಯಿಂದ ಬೆಳೆಯುತ ಬಂದ ಬೆಳೆಯುತ ಬಂದ ಭೂಮಿಯು ಮುಗಿಯೆ ಶಿರವನ್ನೀಯೆ, ಭಕ್ತನಕಾಯೆ, ಬಾಗಿಲಕಾಯ್ದೆ, ಬಾಗಿಲಕಾಯ್ದೆ ವಿಪ್ರರ ಪೊರೆದ, ವರಸಮರಿಲ್ಲ ವರಸಮರಿಲ್ಲ ಭಾರ್ಗವರಾಮ, ಋಷಿಗಣಸ್ತೋಮ, ದೈತ್ಯವಿರಾಮ, ಸತ್‍ಜನಪ್ರೇಮ, ಮಂಗಳ ನಾಮ ಮಂಗಳನಾಮ 3 ತಾರಕನಾಮ, ಕಲಿಗಿವ ಭೀಮ, ದಶರಥರಾಮ, ಸೀತಾರಾಮ ಜಯಜಯರಾಮ ಜಯಜಯರಾಮ ಲಕ್ಷ್ಮಣನಣ್ಣ, ಸಗುಣಸಂಪನ್ನ, ಜಗಕಿವ ಅನ್ನ, ಬಿಡಬಿಡಬೆನ್ನ ಪ್ರಾಣನೆ ಅನ್ನ, ಕೇವಲನಣ್ಣ, ರವಿಶಶಿಕಣ್ಣ, ಸಿದ್ಧವಿದಣ್ಣ ಆಗಿಸಿ ಯಾಗ, ಸಾಗುತ ಬಂದ ಸಾಗುತ ಬಂದ ಕೊಂದನು ಖಳರ, ಮುಂದಕೆ ನಡೆದ 4 ಮುಟ್ಟಿ, ಕಳ್ಳನ ಮೆಟ್ಟಿ ರಾಜ್ಯವಕೊಟ್ಟ ಜಗಜ್ಜಟ್ಟಿಜಗಜ್ಜಟ್ಟಿ ನಿಜಮುನಿಇವನೆ, ನಿಜವಿಧಿ ಇವನೆ, ಸರ್ವೇಶ, ಸರ್ವೇಶ ಬೆಣ್ಣೆಯ ತಿಂದ ಪೋರನು ಎನಿಸಿ, ಚೋರನು ಎನಿಸಿ ಎನಿಸಿ, ಕ್ರೂರನು ಎನಿಸಿ, ನಾರೇರ ವರಿಸಿ, ಭೂರಿದನೆನಿಸಿ, ಲೀಲೆಯ ತೋರ್ದ 5 ಊರಿಗೆ ಬಂದೆ, ಜರೆಸುತ ಬಂದು, ಬಹುಮಡಿನೊಂದು, ಮರಳಿಯು ಬಂದು ಕದನಕೆ ನಿಂದ, ಬಲುಭಂಢ, ಬಲುಭಂಢ ರಾತ್ರಿಯಲೊಂದು ಸಾಗಿಸಿ ಬಂದು, ವೊಕ್ಕೂ, ತಾಮುಕುಂದ ತಾಮುಕುಂದ, ಸೂತ, ಜಗವಿಖ್ಯಾತ ಕೊಲ್ಲಿಸಿದಾತ ಸರ್ವಸಮರ್ಥ, ಸರ್ವಸಮರ್ಥ ಕಾಲದಿ ಭೇದ ಇಲ್ಲವು ಎಂದು ವಿಭುಶರಣೆಂಬೆ, ವಿಭುಶರಣೆಂಬೆ 6 ವೇದಸುವೃಂದ, ತ್ರಿಪುರರಕೊಂದ, ಬಲ್ಲ, ಎಲ್ಲವ ಬಲ್ಲ ನಿತ್ಯವಿದೆಲ್ಲ, ತಿಳಿದವರಿಲ್ಲ, ಸಾರಿಸಾಕಲ್ಯ ಜಗವನೆಲ್ಲ, ಬಿಗಿದಿಹನಲ್ಲ, ನಾಮದಿನಲ್ಲ, ನಾಮದಿನಲ್ಲ, ಆದಿಯು ಇಲ್ಲ, ಮಧ್ಯವು ಇಲ್ಲ, ಕೊನೆತಾನಿಲ್ಲ, ಖೇದವು ಇಲ್ಲ, ಮೋದವೆ ಎಲ್ಲ, ಭಗನಿಹನಲ್ಲ ಅಪಜಯವಿಲ್ಲ, ಶ್ರೀಗಿವನಲ್ಲ, ಅಪ್ರತಿಮಲ್ಲ, ಪ್ರಕೃತಿಯು ಅಲ್ಲ, ಸ್ವಾಮಿಯು ಇಲ್ಲ, ತಾನೇ ಎಲ್ಲ ಪ್ರೇರಿಪನೆಲ್ಲ, ಭಿನ್ನನು ನಲ್ಲ, ಸರ್ವೋತ್ಕøಷ್ಠ 7 ಕುಜನರ ಮುರಿಯೆ, ಎನಿಸಿ, ಧರ್ಮವನುಳುಹಿ, ಭಕ್ತರಿಗೊಲಿದು, ಪೊರೆವುದು ಸತ್ಯ, ಪೊರೆವುದು ಸತ್ಯ, ಸತ್ಯರ ಸತ್ಯ, ಸಂತರ ಮಿತ್ರ, ಪರಮ ಪವಿತ್ರ, ಲೋಕವಿಚಿತ್ರ ಸುಖಚಾರಿತ್ರ, ಮಂಗಳಗಾತ್ರ, ನಿಖಿಳಸುಭರ್ತ, ಭಕ್ತರ ಭೃತ್ಯ ನತ ಜನಪಾಲ, ವೇದಗಳೆಲ್ಲ, ಶಬ್ದಗಳೆಲ್ಲ, ಘೋಷಗಳೆಲ್ಲ ನಾಮಗಳೆಲ್ಲ, ಇವನನೆ ಎಲ್ಲ, ಪೊಗಳುವವಲ್ಲ, ಮುಕ್ತರಿಗೆಲ್ಲ, ಪ್ರಕೃತಿಯ ಸತ್ತಾ, ಸಕಲವ ನೀತ, ನೀಡುವ ದಾತ, ಸರ್ವಸುವ್ಯಾಪ್ತ, ಸರ್ವಸ್ವತಂತ್ರ8 ವೇದವ್ಯಾಸ, ಬದರೀನಿವಾಸ, ವೇದಸ ಪೀಠ, ಸಾಧಿಸುವಂತ್ಯ ಮೋದಕವೀಂದ್ರ, ಮಧ್ವನಪೋಷ, ಆದರವೀಯೊ ಪಾದಗಳಲ್ಲಿ ವೇದಗಳಳಿಯೆ, ವಿಧಿ ಮುಖಸುರರು, ಪಿಡಿದರು ಪಾದ ಮಾಧವ ನೀನು ಮೇದಿನಿಗಿತ್ತೆ ಸೂತ್ರ ಗೈದ ಮಹೇಶ, ವೇದಕುಮಿಗಿಲು, ಭಾರತಕರ್ತ, ಭಾರತ ಕರ್ತ ಛಂದದಸುಕಾಯ ಕುಡಿಸೈ ಜೀಯ ಹರಿಸುತಮಾಯ, ಹರಿಸುತಮಾಯ, ಹರಿಸುತಮಾಯ 9 ಶ್ರೀ ಇಹವಕ್ಷ, ಜ್ಞಾನಸುಪಕ್ಷ, ಸರ್ವಾಧ್ಯಕ್ಷ, ದಿವಿಜರಪಕ್ಷ ಬೃಹತೀಭಕ್ಷ, ತಾನಿರಪೇಕ್ಷ, ಆಶ್ರಿತರಕ್ಷ, ಕರುಣ ಕಟಾಕ್ಷ, ಕರುಣಿಸು ರಕ್ಷ, ನೀಜಗರಕ್ಷ, ಅಜಗರ ಶೈಯ್ಯ, ಮನ್ಮಥನಯ್ಯ ಭವಬಿಡಿಸಯ್ಯ, ಭಯಹರಿಸಯ್ಯ ದಯಮಾಡಯ್ಯ ಶರಣುಪರೇಶ ಇಚ್ಛೆ ಅನೀಶಾ, ಕಳೆಕಳೆ ಆಶಾ, ಕಡಿಕಡಿಪಾಶಾ, ನಾಬಡದಾಸ, ತೈಜಸ ಶರಣು, ಪ್ರಾಜ್ಞನೆ ಶರಣು, ತುರ್ಯನೆ ಶರಣು, ಕಪಿಲನೆ ಶರಣು ಶರಣು ಅನಂತ, ಶರಣು ಅನಂತ 10 ವೆಂಕಟರಮಣ, ಕಿಂಕರನಾನು, ಸಂಕಟಹರಿನೊ ಶಂಕರತಾತ ತಿದ್ದೊ, ಪಂಕಜನಯನ ದಡ್ಡನು ನಾನು ಭಕ್ತಿಗಡ್ಡೆಗೆಸೇರಿಸು ಪ್ರಾಣನ ಆಣೆ ರಾಜರ ಆಣೆ ಜಯಮುನಿ ಆಣೆ, ಗುರುಗಳ ಆಣೆ, ಉರಗಾದ್ರಿವಾಸ, ಪದ್ಮಜಳೀಶ, ಹರಿಸುತ ದೋಷ, ಚರಣದಿವಾಸ, ನಿರುತಲೀಯೊ, ಕರುಣವ ಸುರಿಸಿ, ಮರುತನ ಮತದ ಅರುಹುತಲೆನಗೆ, ಸಂತತ ವೆಂಬೆ, ಸಂತತವೆಂಬೆ, ಸಂತತವೆಂಬೆ ನಂದದಿ ಪಠಿಸೆ ನಂದವು ಶಾಶ್ವತ, ಜಯಮುನಿಹೃಸ್ಥ, ಮಧ್ಯರಮೇಶ ಶ್ರೀಕೃಷ್ಣವಿಠಲ ವಲಿಯುವ ಸಿದ್ಧ, ವಲಿಯುವ ಸಿದ್ಧ 11
--------------
ಕೃಷ್ಣವಿಠಲದಾಸರು
ಶ್ರೀಪತಿಯ ನೈವೇದ್ಯ ಕೊಡುವದು ಧೂಪದಾಂತರ ಭೂಮಿಶೋಧನ ಆಪದಿಂ ಮಂಡಲವ ಮಾಡುತ ರಂಗವಲಿ ಹಾಕಿ ಸೂಪ ಅನ್ನವು ಅಗ್ನಿಕೋಣದಿ ಆ ಪರಮ ಅನ್ನವನು ಈಶಾ ನ್ಯಾಪೆಯಾಲೇಹಗಳ ನೈರುತದಲಿ ಇಟ್ಟು ತಥಾ 1 ವಾಯುದಿಶದಲಿ ಉಪಸುಭೋಜ್ಯವು ವಾಯಸಾನ್ನದ ಮಧ್ಯ ಘೃತಸಂ ಸ್ತೂಯಮಾನ ನಿವೇದನವು ಈ ಕ್ರಮದಿ ಹೀಂಗಿಟ್ಟು ಬಾಯಿಯಿಂದಲಿ ದ್ವಾದಶ ಸ್ತುತಿ ಗಾಯನದಿ ನುಡಿಯುತಲಿ ಈ ಕಡೆ ಆಯಾ ಅಭಿಮಾನಿಗಳು ದೇವತೆಗಳನು ಚಿಂತಿಸುತ 2 ಓದನಕ ಅಭಿಮಾನಿ ಶಶಿಪರ ಮೋದನಕ ಅಭಿಮಾನಿ ಭಾರತಿ ಆದಿವಾಕರ ಭಕ್ಷ ಕ್ಷೀರಾಬ್ಧೀಜೆ ಸರ್ಪಿಯಲಿ ಸ್ವಾದುಕ್ಷೀರಕ ವಾಣಿ ಮಂಡಿಗಿ ಲೀ ದ್ರುಹಿಣನವನೀತ ಪವನಾ ದಾದಧಿಗೆ ಶಶಿವರುಣ ಸೂಪಕೆ ಗರುಡ ಅಭಿಮಾನಿ 3 ಶಾಕದಲಿ ಶೇಷಾಮ್ಲ ಗಿರಿಜಾ ನೇಕನಾಮ್ಲದಿ ರುದ್ರಸಿತದಲಿ ಪಾಕಶಾಸನ ಶೇಷುಪಸ್ಕರದಲ್ಲಿ ವಾಕ್ಪತಿಯೂ ಈ ಕಟು ಪದಾರ್ಥದಲಿ ಯಮ ಬಾ ಹ್ಲೀಕ ತಂತುಭದಲ್ಲಿ ಮನ್ಮಥ ನೇಕ ವ್ಯಂಜನ ತೈಲ ಪಕ್ವದಿ ಸೌಮ್ಯನಾಮಕನೂ 4 ಕೂಷುಮಾಂಡದ ಸಂಡಿಗಿಲಿ ಕುಲ ಮಾಷದಲಿ ದಕ್ಷ ಪ್ರಜಾಪತಿ ಮಾಷ ಭಕ್ಷದಿ ಬ್ರಹ್ಮಪುತ್ರನು ಲವಣದಲಿ ನಿಋತಿ ಈ ಸುಫಲ ಷಡ್ರಸದಿ ಪ್ರಾಣ ವಿ ಶೇಷ ತಾಂಬೂಲದಲಿ ಗಂಗಾ ಆ ಸುಕರ್ಮಕೆ ಪುಷ್ಕರನು ಅಭಿಮಾನಿ ದೇವತೆಯೂ 5 ಸಕಲ ಭಕ್ಷ್ಯಗಳಲ್ಲಿ ಉದಕದಿ ವಿಶ್ವ ಮೂರುತಿ ಮುಖದಲೀ ನುಡಿ ಅಂತಿಲೀ ಶ್ರೀ ಕೃಷ್ಣ ಮೂರುತಿಯ ನಖ ಚತು ಪದಾರ್ಥದಲಿ ಆ ಸ ಮ್ಯಕು ಚತುರವಿಂಶತಿ ಅಭಿಮಾ ನಿಕರ ಚಿಂತಿಸಿ ಸರ್ಪಿ ಸಹ ಶ್ರೀ ತುಳಸಿಯನು ಹಾಕಿ6 ಕ್ಷೀರ ದÀಧಿ ಕರ್ಪೂರ ಸಾಕ ರ್ಜೀರ ಪನಸ ಕಪಿಥ್ಥ ಪಣ್ಕದ ಳೀರಸಾಲ ದ್ರಾಕ್ಷ ತಾಂಬೂಲದಲಿ ಚಿಂತನೆಯೂ ಪೂರ ಶಂಖದಿ ಉದಕ ಓಂ ನಮೊ ನಾರೆಯಣಾ ಅಪ್ಟಾಕ್ಷರವು ತನ ಮೋರೆ ಮುಚ್ಚಿ ಶತಾಷ್ಟವರ್ತಿಲಿ ಮಂತರಿಸಿ ತೆರೆದೂ7 ಸೌರಭೀ ಮಂತ್ರದಲಿ ಪ್ರೇಕ್ಷಿಸಿ ಮೂರೆರಡು ಮೊದಲಾಗಿ ಶಂಖವು ಅಂತಿಮಾಡಿ ತಥಾ ಪೂರ್ವ ಆಪೋಶನವು ಹೇಳಿ ಅ ಪೂರ್ವ ನೈವೇದ್ಯವು ಸಮರ್ಪಿಸಿ ಸಾರ್ವಭೌಮಗ ಉತ್ತರಾಪೋಶನವು ಹೇಳಿ ತಥಾ 8 ಪೂಗ ಅರ್ಪಿಸಿದಂತರದಿ ಅತಿ ಬ್ಯಾಗದಲಿ ಲಕ್ಷ್ಯಾದಿ ನೈವೇ ದ್ಯಾಗ ಅರ್ಪಿಸಿ ತಾರತಮ್ಯದಿ ಉಳಿದ ದೇವರಿಗೆ ಸಾಗಿಸೀ ಶ್ರೀ ಹರಿಯ ಸಂಪುಟ ದಾಗ ನಿಲ್ಲಿಸಿ ವೈಶ್ವದೇವವು ಸಾಗಿಸೀ ಶ್ರೀ ವಿಜಯವಿಠಲನ ಧೇನಿಸುತ ಮುದದಿ9
--------------
ವಿಜಯದಾಸ
ಶ್ರೀರಾಮರ ಪೂಜಿಸಲಿಲ್ಲ - ಮೈಮರೆತೆನಲ್ಲ ಪ ಬಾಲತ್ವದಲಿ ಬಲು ಲೀಲೆಯಿಂದಲಿ ನಾನುಕಾಲವ ಕಳೆದೆನಲ್ಲ - ಮೈಮರೆತೆನಲ್ಲ 1 ಸತಿಸುತರೆ ಎನಗೆ ಗತಿಯೆಂದು ತಿಳಿದು ನಾನುಮತಿಗೆಟ್ಟು ಭ್ರಾಂತನಾದೆನಲ್ಲ - ಮೈಮರೆತೆನಲ್ಲ 2 ಹೊನ್ನ ಗಳಿಸಿ ಪರರಿಗೆ ಅನ್ನವಿಕ್ಕಲಿಲ್ಲಚೆನ್ನಕೇಶವನ ನಂಬಲಿಲ್ಲ - ಮೈಮರೆತೆನಲ್ಲ3
--------------
ಕನಕದಾಸ
ಶ್ರೀಲಕ್ಷ್ಮೀನಾರಾಯಣ ಸ್ತುತಿ ಗುಣಪೂರ್ಣಾಚ್ಯುತೋ ವಿಷ್ಣುಃ ಅಪ್ರಾಕೃತರೂಪವಾನ್ ಅನ್ನದಾತಾ, ಧನದಾತಾ ಆಯುಷಾÀ್ಯರೋಗ್ಯದೋ ಹರಿಃ ಚಕ್ಷುದಾತಾ ಜ್ಞಾನದಾತಾ ದೇಹಿ ತ್ವಮಿ ಭಕ್ತಿ ಸದಾ ಮದಾದರ್ಭಿಹಿಃ ಸರ್ವತ್ರ ತ್ವಮೇವ ಜ್ವಲತಿ ಸದಾ ತ್ವತ್ಕøಪಯಾ ಏವ ಪಶ್ಯಾಮಿ ಭೋ ವಾಮನ ಭಾಮನಾ ಮದ್‍ಹೃಸ್ಥ ಹರಿಣಾವೇ ಕ್ರಿಯಾದರ್ಶನ ಚಿಂತನಂ ವಾಯು ಯಜ್ಞಸ್ಯ ಪಾದಸ್ತೇಃ ಮನ್ಮನತಿಚ್ಛಾಮೀಚ ವಾಯುಯಜೇ ಸದಾತೀಕ್ಷು ಯಜ್ಞನಾಮಾ ಶ್ರೀಯಃ ಪತಿಃ ಶ್ರೀ ಲಕ್ಷ್ಮೀನಾರಾಯಣಾಭ್ಯಾಂ ಸದಾ ವಂದೇ ಮಮಸ್ವಾಮಿಃ
--------------
ಪ್ರಸನ್ನ ಶ್ರೀನಿವಾಸದಾಸರು
ಸಂಗಬೇಡವೈ ಆಶಾ ಪ ಸಂಗದಿಂದ ನಿನಗೆ ಅಂಗವೇ ಭಂಗವಾಹುದೈ ಅ.ಪ ಇದ್ದ ಕಡೆ ಇರಲೀಸದು | ಅ ಶುದ್ಧ ಮನುಜನಾದರೆಯು ಅ - ವಿದ್ಯದಿ ಮುಳುಗಿಸುವುದು 1 ನೋಡಿದುದು ಬಯಸುವುದು | ಬಲು ಮೋಡಿಯಿಂ ತಿರುಗಿಸುವುದು ಮಾಡಿಸಿ ಮಾಡಿಸಿ ದಣಿಸುವುದು 2 ಹಣವಿದ್ದರು ಕಳೆವುದು | ದುರ್ ಮನದಿ ಸಾಲ ಮಾಡಿಸುವುದು ಗುಣಿಯಲಿ ದುರ್ಗುಣವೇ ಕಾಣಿಸಿ ಹೆಣಕೆ ಸಮವೆಂದೆನಿಸುವುದು 3 ಬೋಧೆಯ ಕೇಳಲೀಯದು | ಮನೋ ವ್ಯಾಧಿಯಲ್ಲಿ ಕೃಶಿಸುವುದು ಹಾದಿ ಹೋಕರ ಕಂಡವರಂತೆ ಸಾಧನವ ಮಾಡಿಸುವುದು 4 ಅನ್ನಬಾರದನ್ನಿಸುವುದು ತಿನ್ನಬಾರದ್ದು ತಿನ್ನಿಸುವುದು ನನ್ನದೂ ನಾನೆಂಬ ಗರ್ವದಿ ಇನ್ನೂ ಮುನ್ನೆ ಕೆಡಿಸುವುದು 5 ಆಗೋ ಕಾರ್ಯ ಮಾಡಲೀಯದು ಹೋಗದೂರಿಗೇ ಹೊರಡಿಸುವುದು ಭೋಗಗಳೊಳಪೇಕ್ಷೆ ಪುಟ್ಟಿಸಿ ರೋಗದಿ ಬಳಲಿಸುವುದು 6 ಕೋಪಾದಿಗಳು ಹೆಚ್ಚುವುದು ಪಾಪಬುದ್ದಿ ಪುಟ್ಟುವುದು ಶರಣರಿಗಿದು ಸಲ್ಲದು 7
--------------
ಗುರುರಾಮವಿಠಲ
ಸಂತೋಷವೆಂತು ನಾ ವರ್ಣಿಪೆನು ಎನ್ನಂತರಂಗವ ಸಂತೋಷವೆಂತು ನಾ ವರ್ಣಿಪೆನು ಪ ಕಂತೆ ಜೀವನವÀ ತೊರೆದು ಸಂತತ ನಿನ್ನ ಭಜಿಸುವ ಅ.ಪ ಲೇಸು ಜೀವನದ ಆಸೆಗೆ ಬೆರಗಿ ಮೋಸದಿ ದಿನ ದಿನನೂರಾರು ಮಿತ್ರ ಬಾಂಧವ ಜ ಸಾಸಿರ ದುಷ್ಕøತಿಗಳನು ರಚಿಸಿ ಕರವ ನೀಡಿದೆ 1 ನರು ಯಾರೆನ್ನವುದಕೆ ಕಾರಣರಾದರೋ ನಾನರಿಯೆ ನೀರಜಾಕ್ಷನೆ ನಿನ್ನಯ ಸಾರಸೇವೆಯನು ಮಾಡಿದ 2 ಅನ್ನವನರ್ಜಿಸುವ ಬಗೆ ಹೊರತು ಇನ್ನೊಂದನರಿಯದೆ ಸಣ್ಣತನದಲಿ ದಿನ ಕಳೆಯುತಿರೆ ಮಾನ್ಯ ಯೋಗವನರುಹಿ ಪ್ರಸನ್ನ ಶ್ರೀಹರಿಯ ನುತಿಸುವ 3
--------------
ವಿದ್ಯಾಪ್ರಸನ್ನತೀರ್ಥರು
ಸತ್ಯವಂತರ ಸಂಗವಿರಲು ತೀರ್ಥವ್ಯಾತಕೆನಿತ್ಯ ಜ್ಞಾನಿಯಾದ ಮೇಲೆ ಚಿಂತೆಯಾತಕೆ ಪ ಕಾಲ ಬದುಕಲ್ಯಾತಕೆಮಾನಿನಿಯ ತೊರೆದ ಮೇಲೆ ಭೋಗವ್ಯಾತಕೆ 1 ಮಾತು ಕೇಳದೆ ಮಲೆತು ನಡೆವ ಮಕ್ಕಳ್ಯಾತಕೆಪ್ರೀತಿಯಿಲ್ಲದೆ ಎಡೆಯಲಿಕ್ಕಿದ ಅನ್ನವ್ಯಾತಕೆನೀತಿಯರಿತು ನಡೆಯದಿರುವ ಬಂಟನ್ಯಾತಕೆಸೋತ ಹೆಣ್ಣಿಗೆ ಓತು ನಡೆಯದ ಪುರುಷನ್ಯಾತಕೆ 2 ಸನ್ನೆಯರಿತು ನಡೆಯದಿರುವ ಸತಿಯು ಯಾತಕೆಮನ್ನಣಿಂದ ನಡೆಸದಿರುವ ದೊರೆಯು ಯಾತಕೆಮುನ್ನ ಕೊಟ್ಟು ಪಡೆಯದಿನ್ನು ಬಯಸಲ್ಯಾತಕೆಚೆನ್ನ ಆದಿಕೇಶವನಲ್ಲದ ದೈವವ್ಯಾತಕೆ 3
--------------
ಕನಕದಾಸ
ಸತ್ಯವತಿಸೂನು ವೇದವ್ಯಾಸ ಲಕುಮಿಶಾ | ನಿತ್ಯ ನಿನ್ನ ನೆನೆಸುವ ಭೃತ್ಯರೊಡನೆ ಪೊಂದಿಸು ದೇವ ಪ ವಾಸುಕಿ ಇಲ್ಲಿ ಮದನಾರಿಯ ವಲಿಸಿ | ತನ್ನ ಬದುಕುವಗೋಸುಗ ಉಪಾಯದಲಿ ನಿಂದರೆ | ವೈರಿ ತಾರಕನ್ನ ಸದೆದು | ಇಂದ್ರಾದ್ಯರ ಕೂಡ ಮುದದಿಂದ ಸ್ಥಿರವಾಗಿ ಮೆರೆದ 1 ಷಣ್ಮೊಗನು ಸತತ ತಾನು ಅನ್ನದಾನ ಮಾಡುತ ಹಾ | ವನ್ನನಾಗುದಕ್ಕೆ ಪ್ರಸನ್ನ ಮೋದದಲಿ | ನಿನ್ನ ಪೊಲಿಸಿಲ್ಲಿಗೆ ಬಾಹಾ | ದೆನ್ನ ಭಕುತಿಗೆ ಮೆಚ್ಚಿ | ವಾಸುದೇವ 2 ಕಲಿಯುಗದೊಳಗೆ ವಿಪ್ರಕುಲದಲಿ ಮಾರುತಿ ಎನಿಸಿ | ಬಲು ಮಾಯಿಗಳ ಮೋಹನ ಶಾಸ್ತ್ರವಳಿದು ಬದರಿಯ | ಬಳಿಗೆ ಬಂದು ಶಿಲಾಪ್ರತಿಮೆಗಳನೆ ಪಡೆದು ತಂದು | ಪೊಳೆವಂದದಲಿ ಇಳೆಯೊಳಗೆನಲು 3 ಅಂದಿನಾರಭ್ಯ ಪಾರ್ವತಿನಂದನ ಕುಕ್ಕೆಪುರದಲ್ಲಿ | ನಿಂದು ಸರ್ವರಿಂದ ಪೂಜೆ ಚಂದದಿ ಕೊಳುತಾ | ಮಂದ ಕುಷ್ಟರೋಗಗಳ ಹಿಂದುಮಾಡಿ ಓಡಿಸಿ | ಗೋ ಪಾದ ಧ್ಯಾನದಿಂದ ಲೋಲಾಡುತಲಿರೆ 4 ಮರುತದೇವ ಸಂಪುಟಾಕಾರವಾದ ನೀನದರೊಳು | ಚಾರು ಸಿಲೆ ರೂಪವಾದ ಪಾರಾಶರ ಋಷಿ | ಧಾರುಣಿಗೆ ರಹಸ್ಯವ ತೋರಿಕೊಳುತಲಿ | ಮಾರ ಗೊಲಿದ ವಿಜಯವಿಠ್ಠಲಾ 5
--------------
ವಿಜಯದಾಸ