ಒಟ್ಟು 496 ಕಡೆಗಳಲ್ಲಿ , 74 ದಾಸರು , 420 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾರಿಗುಸರಲೇನು ದುರಿತಾರಿ ನೀನೆ ರಕ್ಷಿಸು ಕಂ- ಸಾರಿ ನೀನೆ ರಕ್ಷಿಸು ಮುರಾರಿ ನೀನೆ ರಕ್ಷಿಸು ಪ. ಭಾರಿ ಭಾರಿ ನಿನ್ನ ಪದವ ಸೇರಿದವರ ಕಾಯ್ದ ದೊರೆಯೆ ಅ.ಪ. ಪತಿಗಳೈವರಿದಿರೆ ಪತಿವ್ರತೆಯ ಖಳನು ಸೆಳೆಯೆ ಲಕ್ಷ್ಮೀ- ಪತಿಯೆ ನೀನೆ ಕಾಯ್ದೆಯಲ್ಲದೆ ಗತಿಯದಾರು ತೋರ್ದರಯ್ಯ 1 ಪಿತನ ತೊಡೆಯೊಳಿದ್ದ ಸುತನ ಸತಿಯು ಕಾಲಿನಿಂದೊದೆಯೆ ಖತಿಯೊಳೈದಿ ಭಜಿಸೆ ಅತಿಶಯದ ವರವನಿತ್ತೆ 2 ದನುಜ ಕೋಪದಿಂದ ತನ್ನ ತನುಜನನ್ನು ಬಾಧೆಗೊಳಿಸೆ ಮನುಜ ಸಿಂಹನಾಗಿ ಭಕ್ತಗನುಪಮಾದ ಹರುಷವಿತ್ತೆ 3 ಮಕರ ಬಾಧೆಯಿಂದ ಕರಿಯು ಸಕಲಕರ್ತನೆನುತಲೊದರೆ ಅಖಿಳ ದೈವಂಗಳಿರಲು ಬಕವಿರೋಧಿ ನೀನೆ ಪೊರೆದೆ 4 ಕೂರ್ಮ ಕ್ರೋಢ ಸಿಂಹ ಬ್ರಾಹ್ಮಣೇಂದ್ರ ರಾಮಕೃಷ್ಣ ಬುದ್ಧ ಕಲ್ಕಿ ದಾನವಾರಿ ಸಲಹೊ ಎನ್ನ 5 ಸರ್ವಲೋಕ ಜನಕ ನಿನ್ನ ಸರ್ವಕಾಲದಲ್ಲಿ ನೆನೆವೆ ವಿನುತ ಸರ್ವಸೌಖ್ಯ ನೀಡು ಹರಿಯೆ 6 ಕಂಜಜೇಶ ಪನ್ನಗೇಶ ನಿರ್ಜರೇಶ ಮುಖ್ಯ ದಾಸವರದ ಶೇಷ ಭೂಧರೇಶ ಎನ್ನ ಸಲಹೊ ಬೇಗ 7
--------------
ತುಪಾಕಿ ವೆಂಕಟರಮಣಾಚಾರ್ಯ
ಯಾರು ಬಲ್ಲರು ವೆಂಕಟೇಶ ನಿನ್ನೊಳಿಹ ಚಾರು ಗುಣಶೀಲವೆಂಬ ವಾರಿಧಿಯ ಚಿಪ್ಪಿನೊಳು ಮೊಗೆದು ಬತ್ತಿಸುವಂಥ ವೀರನಾವನು ಜಗದೊಳು ಪ ಹದಿನಾಲ್ಕು ಲೋಕವನ್ನು, ನೀ ನಿನ್ನ ಉದರದೊಳಗಿರಿಸಿಕೊಂಡು ಉದಧಿಮಯವಾಗಿರ್ದ ಕಾಲದೊಳು ನಿನಗೊಂದು ಉದುರಿದೆಲೆಯೊಳು ನಿದ್ರೆಯಂತೆ 1 ಮಾಯೆ ಕಮಲಾಕರದೊಳು, ನಿನ್ನುದರ- ದಾಯತದಿ ತೋರಿ ನಿಲಲು ಮೋಹಿಸಲು ಆ ಕ್ಷಣದಿ ಕಾಯವಾಗಲು ಮೇಲೆ ಬಾಯಿ ನಾಲ್ಕಾಯಿತಂತೆ 2 ಅಲ್ಲಿ ತೋರಿದ ಸೊಲ್ಲನು, ಖಳನೋರ್ವ ನೆಲ್ಲವನು ಸೂರೆಗೊಳಲು ಮಲ್ಲನಾಗಿಯೆ ಜಲದಿ ಘಲ್ಲಿಸಿಯೆ ದೈತ್ಯನನು ಚೆಲ್ವಸಾರವ ಸೆಳೆದೆಯಂತೆ 3 ಅದರ ಆಧಾರದಿಂದ, ಸನಕಾದಿ- ಗುದಯವಾದುದುಯೆಲ್ಲವೂ ಮೊದಲ ಕಾಣದೆ ವೃಕ್ಷವದುರಿ ಬಿದ್ದುದ ನೋಡಿ ತುದಿಯೊಳಗೆ ಕದನವಂತೆ 4 ಒಳ ಹೊರಗೆ ನೀನೊಬ್ಬನೆ, ಹೊಳೆ ಹೊಳೆದು ಸುಳಿವ ಪರಿಯನು ಕಾಣದೆ ಮಲತಾಯಿ ಮಗನೊಳಗೆ ಕಲಹವಿಕ್ಕುವ ತೆರದಿ ಹೊಲಬುದಪ್ಪಿಯೆ ನಡೆವರಂತೆ 5 ಒಂದಿದರಿಂದೆರಡಾದುದು, ಮೂರಾಗಿ ಬಂದು ಇದಿರೊಳು ನಿಂದುದು ಒಂದು ಮಾತಿನೊಳೆರಡು ಸಂದೇಹಗಳ ತೋರಿ ಮಂದ ಬುದ್ಧಿಯ ಕೊಡುವೆಯಂತೆ 6 ಜಡವಾದ ಅಡವಿಯನ್ನು ಸಂಚರಿಸಿ ಒಡಲ ಹೊರೆವುದು ಕಡೆಯೊಳು ಎಡೆಯೊಳೊಪ್ಪಿಸಿ ಕೊಡುವಿಯಂತೆ 7 ನಂಬಿ ಬಂದವರ ನೀನು, ಮನದೊಳಗೆ ಹಂಬಲಿಸಿಕೊಂಡಿರುತಲೆ ಇಂಬಾಗಿ ಇಹಪರದಿ ಉಂಬ ಸಂಭ್ರಮವನ್ನು ಸಂಭವಿಸಿ ತೋರ್ಪೆಯಂತೆ 8 ಭೂಮಿಗೆ ವೈಕುಂಠವೆಂದು, ನಿಂತಿರುವ ಸ್ವಾಮಿಯೆನ್ನೆಡೆಗೆ ಬಂದು ಕ್ಷೇಮವನು ವರಾಹತಿಮ್ಮಪ್ಪ ಕರುಣದಿ ಕಾಮಿತಾರ್ಥವನೀಯೊ ಎಮಗೆ 9
--------------
ವರಹತಿಮ್ಮಪ್ಪ
ಯಾವ ಲೋಕಕೆ ಎನ್ನ ಎಳತಂದೆ ಹರಿಯೇ ದೇವಕೀ ಕಂದ ಗೋಪಾಲ ನಾನರಿಯೇ ಪ ನಳಧರ್ಮನೃಪ ಹರಿಶ್ಚಂದ್ರಾದಿಗಳು ಜನಿಸಿ ಖಳರನ್ನು ದಂಡಿಸೇ ಶಿಷ್ಟರನು ಹರಿಯೇ ಸಲಹ ಸುಜನರಿಗೆಲ್ಲ ಮಾನವಂ ಕೊಟ್ಟು ತಾ ವಿಳೆಯ ಸತ್ಯದೊಳಾಳಿದಾ ರಾಜ್ಯವಲ್ಲಾ 1 ಹಿಂದೆ ದುರ್ಜನರನ್ನು ತರಿಯಲೋಸುಗ ನೀನು ಅಂದದಿಂದೊಂಬತ್ತು ಅವತಾರವೆತ್ತಿ ಬಂದು ಸುಜನರ ಪೊರೆದು ಧರ್ಮವನು ನೆಲೆಗೊಳಿಸಿ ಚಂದದಿಂ ರಕ್ಷಿಸಿದ ಲೋಕವಿದು ಅಲ್ಲಾ 2 ಮನ್ನಿಸದೆ ಧರ್ಮವನು ನಿತ್ಯಕರ್ಮವ ಬಿಟ್ಟು ಹೀನ ಪಥಗಳ ಪಿಡಿದು ಬಂಜೆಯನು ಆಸೀ ಚನ್ನಕೇಶವ ನಿಮ್ಮ ನಾಮ ಸಂಕೀರ್ತನೆಯ ದೈನ್ಯದಿಂ ಗೈಯದ ರಾಜ್ಯವಿದು ಹರಿಯೇ 3
--------------
ಕರ್ಕಿ ಕೇಶವದಾಸ
ರಕ್ಷಿಸುವ ತಾಯಿತಂದೆ ರಘುಕುಲೋತ್ತಮ ರಾಮಚಂದ್ರ ಅಕ್ಷಯ ವಿತ್ತು ಭಕ್ತಜನರುಪೇಕ್ಷೆ ಮಾಡದೆ ಪ ಕಂದನೆಂದು ಖಳರ ಅನುಜರಂದದಿ ಕಾಯ್ದದೇವ ಸಿಂಧುಶಯನ ಶ್ರೀನಿವಾಸ ಶ್ರೀಧರಾಚ್ಯುತಾ ಎಳಿವೊ ವ್ಯಾಳ್ಯದಲ್ಲಿ ಬಂದು ಮಾನ ರಕ್ಷಿಸಿದಂಥಾ ಪರಮಪುರುಷ ಭಕ್ತವತ್ಸಲ 1 ಮತ್ತ ಸಲಹಬೇಕಂತ ಬಿರುದುವುಳ್ಳ ಧೀರ ಭಾನುಕೋಟಿತೇಜನಾ ಕರಿಯು ಕರಿಯೋ ಕಾಲದಲ್ಲಿ ಗರುಡನೇರಿ ಬಂದು ಪೊರೆದ ಕರುಣಾಸಾಗರ------ನಾಮನಯ್ಯನಾದ ದೀನಾ 2 ಇಂದು ಇರುವರೆಲ್ಲಾ ಅಂದು -- ಕರುಣಾವಿಟ್ಟು ಅತಿಶಯಾದಲಿ ಕುಂದು ಇಲ್ಲದೆ ಪಾಲಿಸು ಸ್ವಚ್ಛಂದದಿಂದ ಚ್ಯುತಿಯಿಲ್ಲದೆ ಇಂದಿರೇಶ `ಹೊನ್ನವಿಠ್ಠಲ ' ವಿಶ್ವಕರ್ತಾ ಬುಧವಂದ್ಯಾ3
--------------
ಹೆನ್ನೆರಂಗದಾಸರು
ರಕ್ಷಿಸೆ ಏಕನಾಥೆ ತಾಯೆ ದಯದಿಂದ ಎನ್ನನು ಸೊಕ್ಕಿದ ದೈತ್ಯ ಸಂಹಾರೆ ಶರಣ ಜನೋದ್ಧಾರೆ ಪ. ದುರಿತ ದುಃಖ ನಿವಾರಿ ಶರಣರ ಸಲಹುವ ದಾತೆ ಖಳರೆದೆಗಂತೆ ನಿಡಿ ಗುರುಳ ಬಾಲೆ ಪಲ್ಲವಪಾಣಿ ಸುರರ ನಾಯಕಿ ಅಖಿಲದೇವಮಾತೆ ವಿಖ್ಯಾತೆ 1 ಅಳುವಾಡುವ ರಂಗನ ಅದೇನರಿತು ಭಂಗ ಬಾಳ ಬಡಿಸಿದೆಯವ್ವ ಭಕ್ತರುದ್ಧಾರಿ ಕಾಳಗದೊಳು ಕಂಠೀರವೆ ಕರೆದಭಯವನೀವೆ ಸುಕೃತ ಪಂಥಗಾರ್ತಿ 2 ಹಿಂಡು ಭೂತಂಗಳಿಗೆಲ್ಲ ಹೆಚ್ಚಿನ ಬಿರುದನೆ ತಾಳ್ದೆ ಚಂಡಿ ಚಾಮುಂಡಿ ತ್ರೈಲೋಕ್ಯನಾಥೇ ಕಂಡು ನಮಿಸುವರ ಕಾಯ್ವೆ ಕಾಮಿತದಾತೆ 3 ಇಂದ್ರಾದಿ ದಿಕ್ಪಾಲಕರು ವಂದಿಸಿ ಸ್ತುತಿಮಾಡಲವರ ಬಂಧನವ ಪರಿಹರಿಸಿದೆಯೆ ಚಂದ್ರಮುಖಿಯೆ ಇಂದು ಬಂದ ಬಂಧನವ ಬಿಡಿಸಿ ಎಂದೂ ಎನ್ನ ನೀ ಕಾಯೆ ತಾಯೆ 4 ಮಲೆತ ಮಹಿಷಾಸುರನ ಕೊಂದೆ ಮಲೆಬೆನ್ನೂರಿನಲಿ ನಿಂದೆ ಬಲುನೇಮವಂತೆ ಸಂತೆಹರವಿಲೆ ನಿಂತೆ ಪುಲ್ಲಲೋಚನೆ ಪ್ರಖ್ಯಾತೆ ಪರಶುರಾಮನ ಮಾತೆ ಹೆಳವನಕಟ್ಟೆ ರಂಗನ ಸಹೋದರಿ5
--------------
ಹೆಳವನಕಟ್ಟೆ ಗಿರಿಯಮ್ಮ
ರಕ್ಷಿಸೊ ಶ್ರೀಶ ಶ್ರೀನಿವಾಸ ಪ ರಕ್ಷಿಸೆನ್ನ ಪದ್ಮಾಕ್ಷ ತ್ರಿಜಗದ ಧ್ಯಕ್ಷ ಖಳ ಜನಶಿಕ್ಷ ಪಾಂಡವ ಪಕ್ಷ ಕರುಣ ಕಟಾಕ್ಷದಲಿ ನೀ ವಾಹನ ಅ.ಪ. ಕೊಂಚ ಮತಿಯಲಿ ಕುಜನರ ಸೇರಿ ಸಂಚರಿಸುತಲಿ ದೀನನಾದೆ ಪಂಚಶರಸ್ಮರ ವಂಚಿಸುತ ಬಿಡೆ ಚಂಚಲಾಕ್ಷೇರ ಸಂಚು ನೋಟದ ಮಿಂಚಿಗೆನ್ನ ಮನ ಚಂಚಲಾಗುತೆ ವಂಚಿಸೆ ಯಮನಂಚಿಗೆ ಸಿಲುಕಿದೆ 1 ಕಿಟ್ಟಗಟ್ಟಿದ ಕಬ್ಬಿಣದಂತೆ ಕೆಟ್ಟ ಕಿಲ್ಬಿಷದ ರೂಪದಿ ಬಿದ್ದು ದಿಟ್ಟ ನಿನ್ನಯ ಗುಟ್ಟು ತಿಳಿಯದೆ ಪೊಟ್ಟೆ ಗೋಸುಗ ಕೆಟ್ಟ ಕುಜನರ ಘಟ್ಟನಾ ಕಾಲ್ಗಟ್ಟೆ ಬಹುಶ್ರಮ ಪಟ್ಟು ಭವದಿ ಕಂಗೆಟ್ಟೆ ಪ್ರತಿದಿನ 2 ಶ್ರೀ ಕಮಲೇಶ ಹೃತ್ಪದ್ಮದಿನೇಶ ಪ್ರಕಾಶ ಬೇಗನೆ ಬಂದು ಯಾಕೇ ತಡೆವೆನ್ನ ವಾಕ್ಕುಲಾಲಿಸಿ ಕರವ ಪಿಡಿ ದಾ ಕುಚೇಲನ ಸಾಕಿದಾಪರಿ ಕರ ಜಗನ್ನಾಥ ವಿಠಲ 3
--------------
ಜಗನ್ನಾಥದಾಸರು
ರಕ್ಷಿಸೋ | ಬೇಗನೆ ಬಂದು ರಕ್ಷಿಸೊ | ಪ ಕುಕ್ಷಿನಂಬಿದೆ ಕಲ್ಪಭೂಜ | ಆಹಾ ಪೇಕಿಸದೆನ್ನನು ಈಕ್ಷಿಸಿ ಕರುಣದಿ ಅ.ಪ ಕೇಶವ ಖಳಕುಲ ನಿಧನ | ನರ ಕೇಸರಿ ಶ್ರೀಹಯವದನ | ಗುರು ಪಾದ ನಳಿನ | ಸಮೀ ರಾಶನ ಪರ್ಯಂಕಶಯನ | ಆಹಾ ದಾಶರಥಿಯೆ ಭವದಾಶೆ ಬಿಡಿಸಿ ತವ | ದಾಸ ಜನರ ಸಹವಾಸದೋಳಿಟ್ಟನ್ನ 1 ಪಶುಪಾಲ ಮಿಸುನೀಯ ವಸನ | ಧ್ರುವ ಪಶುಪತಿ ಸುತ ಗುಣಪೂರ್ಣ | ದುಷ್ಟ ಶಿಶುಪಾಲ ಮದವಿಭಂಜನ | ಪಾಹಿ | ನಿರಂಜನ | ಆಹಾ | ವಸುಗರ್ಭನ ಪೆತ್ತ ಕುಸುಮದಳೇಕ್ಷಣ | ವಸುಮತಿಯೊಳು ಎನ್ನ ಪಿಸುಣನೆಂದೆನಿಸದೆ 2 ನಾಶರಹಿತ ವನಮಾಲ | ಧರ ಶ್ರೀಶಾಮಸುಂದರವಿಠಲ | ಗುಡಾ ಕೇಶ ವರದ ಸುಶೀಲ | ಪಾಕ | ಶಾಸನಾನುಜ ಗಾನಲೋಲ | ಆಹಾ | ಪೂಶರಪಿತ ಸ್ವಪ್ರಕಾಶ ಪರಮ | ವಿ ಲಾಸವ್ಯಾಸ ಮಹಿದಾಸ ಲೋಕೇಶನೆ 3
--------------
ಶಾಮಸುಂದರ ವಿಠಲ
ರಂಗ ಕರುಣಿಸೊ ಚರಣಾ ಶ್ರೀ ಪ ರಂಗಗರುಡತುರಂಗಸಿರಿಮನ ತುಂಗಭವಗಜ ಸಿಂಗರಿಪುಕುಲ ಭಂಗ ಮಹಿಮತರಂಗ ದೇವೋತ್ತುಂಗನಿಜನಿಸ್ಸಂಗ ನರಹರಿ ಅ.ಪ ದೇವಸಕಲ ಸೃಷ್ಠಿಯಗೈವ ಸುಸ್ವಭಾವ ದೇವ ತ್ರಿಭುವನ ಜೀವಭಕ್ತರ ಕಾವಶೃತಿತತಿ ಭಾವ ದೋಷಾಭಾವನಿಜಸುಖ ವೀವ ಬ್ರಾಹ್ಮಿಯ ಮಾವ ತರಿತರಿ ನೋವ ಪರಿಮರ 1 ಛೇಧಖಳಜನ ಖೇದ ಸಜ್ಜನ ಮೋದನಿರ್ಗತ ಭೇದ ಸಿರಿನುತ ಪಾದವ್ಯಾಹೃತಿ ನಾದಸಿರಿಜಗ ಭೇದ ಸುಖಮಯ ಸಾಧು ಶಿರಶ್ರೀ2 ಶ್ರೀಶ ನಿಜದಾಸ ಜನರ ಮನ ಉಲ್ಲಾಸಾ ಶ್ರೀಶ ತರಿತರಿ ಪಾಶ ಕೊಡುಕೊಡು ಲೇಸ ನಿಖಿಳರ ಭಾಸ ಸಿರಿಮನೆ ವಾಸ ವಿಶ್ವನು ಪೋಷ ಬ್ರಹ್ಮಸುಕೋಶ ನಿರ್ಗತ ನಾಶ 3 ಸತ್ಯ ನಿತ್ಯಾನಿತ್ಯ ಜಗರೂಪ ಸ್ವತಂತ್ರ ಕಳತ್ರ ಪರಮಪ ವಿತ್ರ ಚಿನ್ಮಯ ಭೃತ್ಯವತ್ಸಲ ನಿತ್ಯನೂತನ ಸತ್ಯವತಿಸುತ ಚಿತ್ತಮಂದಿರ 4 ವಿಶ್ವತೈಜಸ ಪ್ರಾಜ್ಞತುರಿಯ ಶರಣು ಅಶ್ವತ್ಥ ವಿಶ್ವವಿಶ್ವಗ ವಿಷ್ಣುಜಗ ಬಲ ವಿಶ್ವಪ್ರೇರಕ ಜಿಷ್ಣುಸಾರಥಿ ಕೃಷ್ಣವರಸ್ಥಿತ “ಕೃಷ್ಣವಿಠಲ” ಶಿಷ್ಟದೋಷಸಹಿಷ್ಣುವಂದಿಪೆ 5
--------------
ಕೃಷ್ಣವಿಠಲದಾಸರು
ರಮಣಿ ಕೇಳೆಲೆ ಮೋಹನ ಶುಭಕಾಯನ ಅಮರ ವಂದಿತ ರವಿಶತಕೋಟಿ ತೇಜನ ವಿಮಲ ಚರಿತ್ರದಿ ಮೆರೆವ ಶ್ರೀ ಕೃಷ್ಣನಕಮಲವದನೆ ನೀ ತೋರೆ ಪ ಬಾಯೊಳಗಿಹಳ ಗಂಡನ ನಿಜ ತಮ್ಮನತಾಯ ಪಿತನ ಮಡದಿಯ ಧರಿಸಿದನಸ್ತ್ರೀಯಳ ಸುತನ ಕೈಯಲಿ ಶಾಪಪಡೆದನದಾಯಾದಿಯ ಮಗನಸಾಯಕವದು ತೀವ್ರದಿ ಬರುತಿರೆ ಕಂಡುಮಾಯಾಪತಿ ಭೂಮಿಯನೊತ್ತಿ ತನ್ನಯಬೀಯಗನ ತಲೆಗಾಯಿದಂಥರಾಯನ ಕರೆದು ತೋರೆ 1 ನಾಲಗೆ ಎರಡರವನ ಭುಂಜಿಸುವನಮೇಲೇರಿ ಬಹನ ತಂದೆ ಇಹ ಗಿರಿಯನುಲೀಲೆಯಿಂದಲಿ ಕಿತ್ತೆತ್ತಿದ ಧೀರನಕಾಳೆಗದಲಿ ಕೊಂದನಲೋಲಲೋಚನೆಯ ಮಾತೆಯ ಪುತ್ರನಣುಗನಮೇಲು ಶಕ್ತಿಗೆ ಉರವನಾಂತು ತನ್ನವರನುಪಾಲಿಸಿದಂಥ ದಾತನಹ ದೇವನಲೋಲೆ ನೀ ಕರೆದು ತೋರೆ 2 ಉರಿಯೊಳು ಜನಿಸಿದವನ ನಿಜ ತಂಗಿಯಸೆರಗ ಪಿಡಿದ ಖಳನಣ್ಣನ ತಂಗಿಯವರನ ತಲೆಯನು ಕತ್ತರಿಸಿದ ಧೀರನಗುರುವಿನೊಳುದಿಸಿದನಶರವ ತಪ್ಪಿಸಿ ತನ್ನ ದಾಸರ್ಗೆ ಅನುದಿನಕರೆದು ವರವನಿತ್ತು ಮನ್ನಿಸಿ ಸಲಹುವಉರಗಗಿರಿಯ ವೆಂಕಟಾದಿಕೇಶವನ ಗರತಿ ನೀ ಕರೆದು ತಾರೆ 3
--------------
ಕನಕದಾಸ
ರಾಜಕುಲ ವನರಾಶಿ ರಾಜರಾಜೇಶ್ವರಾ | ರಾಜೀವ ನಯನ ಯದುರಾಜ ಎಲೊ ಭಾಪುರೆ ಪ ಗರಳ ಪೇರ್ಮೊಲೆಯಿತ್ತ ಅಸುರಿಯಳ ಸಂಹರಿಸಿ | ಮರಳಿ ಅವಳಿಗೆ ಉತ್ತಮ ಗತಿಯನಿತ್ತೆ | ದುರಳ ಶಕಟಾಸುರನ ಚರಣ ದುಂಗುಟದಲ್ಲಿ | ತರಳಾಟದಿಂದ ಮರ್ದಿಸಿದೆ ಎಲೆ ಭಾಪುರೆ 1 ವ್ರಜ | ಪುರವ ಪಾಲಿಸಿದೆ ಕಾಳಿಂಗನೈದು | ಸಿರದಲ್ಲಿ ತುಳಿದು ರಮಣ ದ್ವೀಪಕೆ ಕಳುಹಿ | ಪರಿಪರಿಯ ಖಳರ ಮರ್ದಿಸಿದೆ ಎಲೊ ಭಾಪುರೆ 2 ಕರೆಯ ಬಂದಾ ಕ್ರೂರ ಭಕ್ತನಿಗೆ ಯಮುನೆಯಲಿ | ಕರುಣದಿಂದಲಿ ನಿಜರೂಪ ತೋರಿ | ಮುರಿದು ಧರಿಗೆ ವರಿಸಿದೆ ಕಂಸನ ಎಲೆ ಭಾಪುರೆ 3 ವನಧಿಯೊಳು ಪುರ ಬಿಗಿದು ಕಾಲಯವನನ ಸದೆದು | ಅನಿಲ ಸುತನಿಂದ ಮಾಗಧನ ಕೊಲ್ಲಿಸಿ | ವನಿತೆಯರ ಸೆರೆ ಬಿಡಿಸಿ ಸೂತತನವನೆ ವೊಹಿಸಿ | ಫಲ್ಗುಣಗೆ ವಿಶ್ವರೂಪವ ತೋರಿದೆ ಎಲೊ ಭಾಪುರೆ 4 ಗುರು ಭೀಷ್ಮ ಶಲ್ಯ ಶಕುನಿ ಸುಬಲ ಭಗದತ್ತ | ತರಣಿಸುತ ದುಶ್ಶಾಸ ಕೌರವೇಶಾ | ಎರಡು ಬಲ ವ್ಯಾಜ್ಯದಲಿ ಭೂಭಾರನಿಳುಹಿ ಸಾ | ವಿರ ತೋಳ ಖಳನ ಭಂಗಿಸಿದೆ ಎಲೊ ಭಾಪುರೆ5 ದ್ವಾರಕಾಪುರದಲ್ಲಿ ನಾರದಗೆ ಸೋಜಿಗವ | ತೋರಿದೆ ಒಬ್ಬೊಬ್ಬ ನಾರಿಯಲಿ | ನಾರಿಯರ ಕೂಡ ಬಲು ಕ್ರೀಡೆಗಳನಾಡಿ ಅ | ವರ ಸಂತಾನವನು ಪಡದೆ ಎಲೊ ಭಾಪುರೆ 6 ವರ ಚಂದ್ರಹಾಸ ಮಿಗಿಲಾದ ಭೂಪಾಲಕರ | ಕರೆಸಿ ಪಾಂಡುವರ ಯಾಗವನೆ ಮುಗಿಸಿ | ಹರುಷದಲಿ ಯದುಕುಲವಾಸ ಮಾಡಿದೆ | ಪರಮ ಪುರುಷ ವಿಜಯವಿಠ್ಠಲನೆ ಎಲೆ ಭಾಪುರೆ 7
--------------
ವಿಜಯದಾಸ
ರಾಮ ರಕ್ಷಮಾಂ ರಾಮ ರಕ್ಷಮಾಂ ರಾಮ ರಕ್ಷಮಾಂ ರಾಮ ರಕ್ಷಾಮಾಂರಾಮ ರಕ್ಷಮಾಂ ಕಾಮಿತಾರ್ಥದ ಪ್ರೇಮಸಾಗರ ಶ್ರೀ ಮನೋಹರ ಪದಶರಥಾತ್ಮಜ ದಾನವಾಂತಕ ಶಶಿನಿಭಾನನ ಶತಮಖಾರ್ಚಿತಕುಶಿಕನಂದನ ವಶಮಖಾವನ ಶಶಿಮುಖೀತನೋಃ ಶಮಲವಾರಣ 1ಹರ ಶರಾಸನ ಹರ ಧರಾಸುತಾ ಕರ ಪರಿಗ್ರಹಾರಾಮ ನಿಗ್ರಹಗುರು ನಿಯೋಜಿತ ಗುಹ ಸುಪೂಜಿತ ವರ ವನಾಶ್ರಿತ ಭರತ ಪ್ರಾರ್ಥಿತ 2ಮೃಗ ನಿಷೂದನ ಖಗಪ ಪಾಲನ ಭಂಜನ ಶಬರಿ ಪಾವನಸುಗತಿ ದಾಯಕ ವಾಲಿಶಿಕ್ಷಕ ಮೃಗಪರಕ್ಷಕ ರಾಜ್ಯದಾಯಕ 3ಶರಧಿಬಂಧನ ಪುರ ವಿಮರ್ದನ ವರವಿಭೀಷಣ ಭಯನಿವಾರಣಧುರ ಧುರಂಧರ ದುಷ್ಟ ಖಳಸಹೋ ದರ ಶಿರೋಹರ ದೈತ್ಯಸಂಹರ 4ಧರಣಿಜಾನ್ವಿತ ದುರಿತ ವಾರಕ ಭರತವಂದಿತ ಪುರವರಸ್ಥಿತವರ ಮುನಿಸ್ತುತ ಸುರಸಮಾಶ್ರಿತ ತಿರುಪತೀಶ್ವರ ವೆಂಕಟೇಶ್ವರ 5ಓಂ ಕುಬ್ಜಾ ಕೃಷ್ಟಾಂಬರಧರಾಯ ನಮಃ
--------------
ತಿಮ್ಮಪ್ಪದಾಸರು
ರಾಮಚಂದ್ರನೆ ನಿನ್ನ ನಾಮಮೃತವು ಎನ್ನ ನಾಲಿಗೆಯೊಳು ನಿಲಿಸು ಪ ದಾನವಾಂತಕ ನಿನ್ನ ಧ್ಯಾನ ಬಿಡದೆ ಇತ್ತು ದೀನ ರಕ್ಷಕ ಹರಿ ಜಾನಕಿ ರಮಣನೆ ಅ.ಪ ಕ್ಷೀರವಾರಿಧಿ ಶಯನ ಶ್ರೀ ಹರಿಯನು ಸ್ಮರಿಸುತ ಧ್ಯಾನವ ಮಾಡಿ ಭಕುತಿಲಿ ನಾರದ ಹರ ಬ್ರಹ್ಮಾದಿ ಋಷಿ ಗಂಧರ್ವರು ಸುರರೆಲ್ಲರು ಕೂಡಿ ಮಾರಮಣನ ಕೊಂಡಾಡುತ ಸ್ತೋತ್ರವ ಮಾಡಿ ಪಾರುಮಾಡು ಜಗದೀಶನೆ ಎನುತಲಿ ತವಕದಿ ಶ್ರೀ ಭೂರಮಣನು ದೀನರ ನುಡಿಗಳ ಕೇಳುತ ಆಲೋಚಿಸುತಲಿ ಬೇಗದಿ ಭೂನಾಥನ ಮನೆಯೊಳಗವತರಿಸುವೆ ಎನ್ನುತವರಿಗೆಲ್ಲಾಭಯವ ನೀಡಿದ 1 ದಶರಥನುದರದಿ ಜನಿಸಲು ನಾಲ್ವರು ಅಂದು ಯಾಗಕೆ ಕೌಶಿಕನಲ್ಲಿ ವಿದ್ಯೆಗಳನ್ನು ಕಲಿಯುತ ಬಂದು ಶಶಿಮುಖ ಜಾನಕಿ ಕರಪಿಡಿದನು ತಾನಂದು ಅಯೋದ್ಯದಿ ಎಸೆವ ಸಿಂಹಾಸನವೇರುವ ಸಮಯದಿ ಬಂದು ರಸಕಸಿ ಮಾಡಲು ಕೈಕೇಯಿಯು ತಾ ಶಶಿಮುಖ ಸೀತೆಯ ಒಡಗೂಡುತಲಿ ಬಿಸಿಲು ಗಾಳಿಮಳೆಯೊಳು ವನಚರಿಸುತ ಸತಿಯು ಬೇಡೆ ಮಾಯಮೃಗವ ಬೆನ್ನಟ್ಟಿದ 2 ಶಶಿಮುಖ ಸೀತೆಯ ದಶಶಿರನೊಯ್ಯಲು ಕೇಳಿ ದಶರಥಸುತ ಅರಸುತ ಬಲು ಶೋಕವ ತಾಳಿ ಚಿಂತಿಸಿ ಎಸೆವ ಗಿರಿ ಗುಹೆಗಳ ಹುಡುಕಲು ಮಾರುತಿ ನೋಡಿ ಮುದ್ರಿಕೆ ವಸುಧೆ ತನಯಳಿಗರ್ಪಿಸೆ ಆಕೆಯು ಮುದ ತಾಳಿ ಚೂಡಾಮಣಿ ಕೊಡಲು ಶ್ರೀ ರಘುವೀರನು ಸೇತುವೆ ಕಟ್ಟುತ ಕ್ರೂರ ಖಳರನು ಸಂಹರಿಸಿದ ಕಮಲ-ನಾಭ ವಿಠ್ಠಲ ಅಯೋದ್ಯದಿ ಮೆರೆಯುವ 3
--------------
ನಿಡಗುರುಕಿ ಜೀವೂಬಾಯಿ
ರಾಮನ ನೆನ ಮನವೇ-ಹೃದಯಾ-ರಾಮನನೆನೆ ಮನವೇ ಪ ಸದ್ಗುಣ ಧಾಮನಾ ಸೀತಾ ಅ.ಪ. ದಶರಥ ನಂದನನಾ-ಧರಣಿಯೊಳಸುರರ ಕೊಂದವನ ಪಶುಪತಿ ಚಾಪವ ಖಂಡಿಸಿಮುದದಿಂ ವಸುಮತಿ ಸುತೆಯಂ ಒಲಿದೊಡಗೂಡಿದ-ರಾಮನ 1 ತಂದೆಯ ಮಾತಿನಲಿ-ವನಕೈತಂದು ಸರಾಗದಲಿ ಬಂದ ವಿರಾಧನ ಕೊಂದು ನಿಶಾಚರಿ ಯಂದವಳಿದು ಖಳವೃಂದವ ಸವರಿದ 2 ಸೀತೆಯನರಸುತಲಿ-ಕಬಂಧನ ಮಾತನು ಸರಿಸುತಲಿ ವಾತನಮಗನೊಳು ಪ್ರೀತಿಯಿಟ್ಟು ಪುರುಹೂತನ ಸುತನಂ ಘಾತಿಸಿ ದಾತನ-ರಾಮನ 3 ತರಣಿ ತನಯನಿಂದ-ಕಪಿಗಳ ಕರೆಸಿ ವಿಲಾಸದಿಂದ ತರುಣಿಯನರಸಲು ಮರುತನ ಮಗನಿಗೆ ಬೆರಳುಂಗುರವನು ಗುರುತಾಗಿತ್ತನ-ರಾಮನ4 ಗುರುತು ಕೊಂಡು ಅರಿಪುರವನು ಸುಟ್ಟುರುಹಿದ ವಾನರ- ವರನಿಗೆ ಸೃಷ್ಠಿಪಪದವಿತ್ತಾತನ-ರಾಮನ 5 ಶರನಿಧಿಯನು ಕಟ್ಟಿ-ಶತ್ರುನಿಕರವನು ಹುಡಿಗುಟ್ಟಿ ಶರಣನ ಲಂಕೆಗೆ ಧೊರೆಯನು ಮಾಡಿ ಸಿರಿಯನಯೋಧ್ಯಗೆ ಕರೆತಂದಾತನ-ರಾಮನ 6 ಸರಣಿಯ ಲಾಲಿಸುತ ಶರಣಾಭರಣ ಪುಲಿಗಿರಿಯೊಳು ನೆಲೆಸಿದವರದವಿಠ್ಠಲ ಧೊರೆ ಪರಮೋದಾರನ-ರಾಮನ 7
--------------
ಸರಗೂರು ವೆಂಕಟವರದಾರ್ಯರು
ರುಕ್ಮಿಣೀಶ ವಿಠಲ | ಕಾಪಾಡೊ ಇವನಾ ಪ ವಿಖನ ಸಾಂಡದ ದೊರೆಯೆ | ಅಖಳಂಕ ಮಹಿಮಾ ಅ.ಪ. ಸುಪಥದಲಿ ನಡೆವಂತ | ನಿಪುಣತರ ನಿವನೀಗೆಉಪದೇಶವಿತ್ತಿಹೆನೊ | ಅಪವರ್ಗದಾತಾ |ಕೃಪಣ ವತ್ಸಲ ನಿನ್ನ | ಕೃಪೆ ದೃಷ್ಟಿಯಲಿ ನೋಡಿಅಪೇಕ್ಷಿತವನಿತ್ತು | ನೀ ಪೋಷಿಸಿವನಾ 1 ಜ್ಞಾನವಿಜ್ಞಾನದಲಿ | ನೀನಿರುವ ತತ್ವವನುನೀನಾಗಿ ತಿಳಿಸುತ್ತ | ಕಾಪಾಡೊ ಹರಿಯೇ |ಶ್ರೀನಿವಾಸನೆ ದಯಾ | ಪೂರ್ಣ ನೀನಾಗುತ್ತಜ್ಞಾನಭಕ್ತಿಯನಿತ್ತು | ಕಾಪಾಡೊ ಹರಿಯೆ 2 ಎಲ್ಲೆಲ್ಲು ನೀನಿರುವೆ | ಸೊಲ್ಲನ್ನು ಅನುಭವಕೆಉಲ್ಲಾಸದಲಿ ಇತ್ತು | ಬಿಲ್ಲಾಳು ಎನಿಸೋಬಲ್ಲಿದರ ಕೂಟದಲಿ | ಬಿಲ್ಲಿ ನಂತರಿಸುತ್ತಮಲ್ಲಮರ್ದನಕೃಷ್ಣ | ಕಾಪಾಡೊ ಇವನ 3 ಸತಿಸುತರು ಹಿತರಲ್ಲಿ | ವ್ಯಾಪ್ತ ನೀನೆಂದೆಂಬಮತಿಯನೇ ಕರುಣಿಸುತ | ಅತಿಶಯವ ತೋರೀಮತಿಮತಾಂವರರಂಘ್ರಿ | ರತಿಯನ್ನೆ ಕರುಣಿಸುತಮತಿವಂತ ನೆನಸಿವನ | ಮಾರುತನ ಮತದೀ 4 ದೇವತವ ಮಹಿಮೆಗಳು | ಭಾವದಲಿ ಪೊಳೆಯಲ್ಕೆಕೋವಿದರ ಸಂಗವನು | ನೀ ವೊಲಿದು ಈಯೋ |ನೀ ವೊಲಿಯದಿನ್ನಿಲ್ಲ | ಗೋವುಗಳ ಪರಿಪಾಲದೇವ ದೇವೇಶ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ರುದ್ರ ಮಹದೇವ ವೀರಭದ್ರ ಭದ್ರ ಮಾರ್ಗೋಪದೇಶಿ ಅದ್ರಿಕುವರಿ ವಲ್ಲಭ ಪ ಕ್ಷುದ್ರ ಖಳರ ಉಪದ್ರವ ಪರಿಹರಿಸಿ ಉದ್ರೇಕ ಮಾಡು ಸುಜ್ಞಾನ ಭಕ್ತಿ ವೈರಾಗ್ಯವ ಕದ್ರುಜಧಾರಿ ರೌದ್ರ ಮೂರುತಿಯೆ ಅ.ಪ ಪೊಂದಿಸು ಹರಿಭಕ್ತರ ಸಂದಣಿ | ತ್ರಿಶೂಲಪಾಣಿ ವಂದಿಪೆನು ಸುರಾಗ್ರಣಿ ಬಂದಿಹ ವ್ಯಾಧಿಯ ಕಳೆಯೊ ಕಂದÀರ್ಪಹರ ಕರುಣಾಕರ ಶಿವನೆ 1 ದಾತ ಸಂಭೂತ ಭೂತಗಣಾಧೀಶ ವಿಖ್ಯಾತ ವಾತನೊಡೆಯನ ಗುಣ ಸಂಪ್ರೀತಿಯಲಿ ಪೊಗಳುವಂತೆ ಆತುರಮನ ನೀಡೊ ಯಾತರವನಲ್ಲವೊ 2 ನಿಟಿಲಾಕ್ಷಾಂಧಕಾಸುರ ಸಂಹಾರಿ | ಜಟಮಕುಟಧಾರಿ ಸ್ಪಟಿಕ ಹಾರಾಲಂಕಾರಿ ವಟು ವಿಜಯ ರಾಮಚಂದ್ರವಿಠಲನ ಸಂ ಪುಟದೊಳು ನಟಿಪಂತೆ ಪಟುತರ ಮಾಡೋ 3
--------------
ವಿಜಯ ರಾಮಚಂದ್ರವಿಠಲ