ಒಟ್ಟು 3287 ಕಡೆಗಳಲ್ಲಿ , 121 ದಾಸರು , 2495 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇನ್ಯಾಕೆ ದೇವಿ ಮುನಿಸು ಮಾತಾಡೇ| ನಿನ್ನ ಹಿಡಿದ ಛಲ ಗೆಲಿಸಿದ ಬಳಿಕ ಪ ಘನ ಮಳೆಗರವ ಜೀಮ್ಯೂತಮ್ಯಾಲೇ|ತಾ| ಮುನಿಪ ಕೋಪದಿ ಪೋಗುತಲಿಹ| ಮನ ದೊಳಗಿದ್ದ ಚಾತಕನಂತೆ ನಿನ್ನ ಮ್ಯಾಲೆ| ವನರುಹ ನೇತ್ರ ನಾ ಮುನಿದುದು ಕಾಣೆ 1 ಸಂಗತಿಲ್ಲದೆ ನಿನ್ನಾಂಗ ನಟ್ಟುಳಿಯಿಂದ| ಭಂಗ ಗೊಂಡಿಹುದು| ತುಂಗ ಪಯೋಧರೆನ್ನಂಗ ತೋಷಿಸುವ ತಾ| ಲಿಂಗನ ಗೈಯೆ ನೀ ಮಂಗಳವದನೇ 2 ನಿನ್ನಿಂದಾಗಲಿ ಮತ್ತ ನನ್ನಿಂದಾಗಲಿ ಇನ್ನು ಮುನ್ನಾದ ಮನದ ಗಂಟು ಬಿಟ್ಟು| ಪನ್ನಗವೇಣಿ ಮಾತಾಡೇ ಸದ್ಗುಣದ ಸಂ| ಪನ್ನೇ ಮಹಿಪತಿ ಸುತಗೊಲಿದ ಶ್ರೀದೇವಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇನ್ಯಾತಕನುಮಾನವಯ್ಯಾ ಪ ಅನ್ಯಥಾ ಗತಿ ಕಾಣೆ ನಿನ್ನ ಚರಣಗಳಾಣೆ ಅ.ಪ. ನಾಶರಹಿತನೆ ನಮಗೆ ಏಸೇಸು ಕಲ್ಪಕ್ಕು ವಾಸ ಏಕತ್ರದಲ್ಲಿ ನೀ ಸಾಕ್ಷಿಯಾಗಿದ್ದು ದಾಸನಾದವಗಪ್ರ- ಯಾಸದಿ ಫಲಗಳುಣಿಸಿ ಲೇಶ ಘನಮಾಡಿ ಸಂತೋಷಪಡುವಾ ನಿನ್ನ ದ್ವೇಷಿ ನಾನಲ್ಲವಯ್ಯ ದೇಶಕಾಲಾದಿಗಳಿಗೀಶ ನೀನೆಂದರಿದು ದಾಸನಾಗಿರುವೆನೆಂದಾಶೆ ಪುಟ್ಟಿದ ಬಳಿಕ 1 ನಿತ್ಯ ತೃಪ್ತನೆ ನಿನ್ನ ಕೃತ್ಯಕೇನೆಂಬೆನೋ ಸತ್ಯಸಂಕಲ್ಪ ಹರಿಯೇ ಮೃತ್ಯುಮಾರಿಗಳೆನಗೆ ಹತ್ತಿಕೊಂಡದರಿಂದ ಸತ್ತುಪುಟ್ಟುವೆಯಿನ್ನು ದತ್ತಕರ್ತೃತ್ವ ಬೆನ್ಹತ್ತಿಕೊಂಡದರಲ್ಲಿ ಅತ್ಯಪರಾಧಿಯಂದತ್ತ ಮೊಗದಿರುಗದಿರು ಭೃತ್ಯವತ್ಸಲನೆಂದಗತ್ಯ ಮನಸೋತ ಬಳಿಕ 2 ವೇದವೇದ್ಯ ಸ್ವಗತ ಭೇದವರ್ಜಿತ ಪೂರ್ಣ ಮಾಧವ ಮಹಿದಾಸ ಆದಿನಾರಾಯಣ ವಿನೋದ ವಿಷ್ವಕ್ಸೇನ ಶ್ರೀದವಿಠಲಾ ನಿನ್ನ ಕ್ರೋಧ ವರರೂಪ- ವಾದ ವಾರ್ತೆಯು ಕೇಳಿ ಧೈರ್ಯಬಿಡದಾ ಬಳಿಕಿನ್ನು 3
--------------
ಶ್ರೀದವಿಠಲರು
ಇರಬಾರದೊ ಬಡವ ಜಗತ್ತಿನೊಳಗೆ | ಪರದೇಶಿ ಮಾನವಗೆ ದಿಕ್ಕು ಮತ್ತಾವನು ಪ ಪೊಡವಿಪತಿ ದೃಷ್ಟಿಗಳು ಒಳ್ಳೆವಲ್ಲಾವೆಂದು | ಬಿಡದೆ ಜನ ಪೇಳುವುದು ಸಿದ್ಧವಯ್ಯಾ | ಬಡವ ನಾನಯ್ಯ ನಾನಾ ಕಷ್ಟಬಟ್ಟೆರಡು | ಒಡವೆ ಸಂಪಾದಿಸಲು ಅಪಹರಿಸಿದ ನೋಡು 1 ದಿನ ಪ್ರತಿ ದಿನದಲ್ಲಿ ಕರಳು ಕಟ್ಟಿಕೊಂಡು | ಹಣದಾಸಿಯಿಂದ ನಾ ಘಳಿಸಿದ್ದೆನೊ | ಮನೆವುಗೆ ಬಂದು ಮಾಡಿಕೊಂಡೊಯ್ದಿಯಾ ಧರ್ಮವೇ | ವನಜನಾಭನೆ ನಿನ್ನ ದೊರೆತನಕೆ ಶರಣೆಂಬೆ2 ದೊರೆಗಳಾ ಲಕ್ಷಣವಿದೆ ಎಂದೆಂದಿಗೆ ತಮಗೆ | ಸರಿಬಂದ ಕಾರ್ಯಮಾಡುವರಲ್ಲದೇ | ನೆರೆಯವರದೇ ತಪ್ಪೇ ವಿಜಯ ವಿಠ್ಠಲರೇಯ | ಮರಳೆ ಮಾತಾಡಿದರೆ ಅಪರಾಧ ಹೊರಿಸುವರು 3
--------------
ವಿಜಯದಾಸ
ಇಲ್ಲಿ ಬಾರೋ ಹರಿ ತಾತ್ಸಾರ ಥರ ಪರಿ ಪ. ಬಿಲ್ಲಹಬ್ಬದ ನೆವನದಿಂದತಿ ಮಲ್ಲಕಂಸಾದಿಗಳ ಮಡುಹಿದ ಬಲ್ಲಿದನೆ ಲೋಕದಲಿ ಸರಿ ನಿನ- ಗಿಲ್ಲ ಶ್ರೀ ಭೂನಲ್ಲ ಕೃಪೆಯಿಂದ ಅ.ಪ. ಶ್ರೀ ಪಯೋಜಭವ ಶಿವ ಶಕ್ರಾದಿಗಳನ್ನು ಕಾಪಾಡಿ ಖಳಕುಲವ ಖಂಡಿಪ ಸರ್ವ ಭೂಪತಿ ತವ ಪಾದವ ನಂಬಿರಲೆನ್ನ ದುರಿತ ಮ- ಹಾಪಯೋಧಿಯೊಳಿಳಿಸಿದರೆ ಸುಜ- ನಾಪವಾದವು ಬಿಡದು ನಿನ್ನ ಪ- ದೇ ಪದೇ ಇನ್ನೆಷ್ಟು ಪೊಗಳಲಿ 1 ಕರ್ಮ ಕೊಡುವುದು ಫಲವೆಂಬ ನುಡಿಯನುಭವಸಿದ್ಧವು ಆದರು ಜಗ ದೊಡೆಯಗಾವದಸಾಧ್ಯವು ನೀ ಮಾಳ್ಪ ಚೋದ್ಯವು ನುಡಿ ಮನೋಗತಿಗಳುಕವೆಂಬೀ ಸಡಗರವು ವೇದ ಪ್ರಸಿದ್ಧವು ನಡೆಯಲೇಳಲು ಶಕ್ತಿ ಕುಂದಿದ ಬಡವನನು ಕೈಪಿಡಿದ ತವಕದೊಳ್ 2 ಬೆಟ್ಟದೊಡೆಯ ವೆಂಕಟೇಶ ನೀ ಗತಿ ಎಂದು ಘಟ್ಯಾಗಿ ನಂಬಿರುವ ದಾಸನ ಕೈಯ ಬಿಟ್ಟರೆ ಸರಿಯೆ ದೇವ ಸಜ್ಜನರ ಕಾವ ಸಟ್ಟಸ ಶಿಗಡಿ ನೀರ ಸುರಿಸುತ ಕಟ್ಟಿಕಟ್ಟಿಸುತದರ ಛಾಯ ದೊ - ಳಿಟ್ಟ ಗದ್ದಿಗೆಯಲ್ಲಿ ಕುಳಿತು ಸ- ಮೃಷ್ಟ ಸುಖವುಂಬರಸನಂದದಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಇಲ್ಲೆವೆ ನಿಧಾನವು ಶ್ರೀಗುರುವೆ ನಿಮ್ಮಲ್ಲೆವೆ ನಿಧಾನವು ಎಲ್ಲರಿಗಿದು ತಾ ದುರ್ಲಭವಾಗಿಹ್ಯ ಸುಲಭದಲಿ ಒಲಿದಿಹ್ಯ ಸದ್ಗುರು ನಮಗಿಲ್ಲೆ ನಿಧಾನವು ಧ್ರುವ ಪಾದ ಪದ್ಮವ ತಿಳಿದು ವೇದಕಗೋಚರವು ಸದ್ಗತಿ ಸುಖ ಸಾಧಿಸುವವ ಧನ್ಯನು ಶೋಧಿಸಿ ಅತ್ಮದಿ ಬೋಧೆಯಲಿ ನಿಜ ಅದಿತತ್ವದ ಗತಿ ಭೇದಿಸಿ ತಿಳಿದವಗಿಲ್ಲಿವೆ 1 ಖುಲ್ಲ ಮನುಜರಿಗಿದು ತಿಳಿಯದೆ ಇಲ್ಲದಂತಾಗಿಹುದು ಎಲ್ಲಾ ದೈವದ ಮೂಲವು ಬಲ್ಲವಗಿದು ಸೊಲ್ಲಿನೊಳಗಿಹುದು ಕಲ್ಲಿನೊಳಿಹ ದೈವಿಲ್ಲವೆ ಇಹ್ಯ ಪ್ರಾಣದೊಲ್ಲಭ ಗುರುನೆಂದಿಲ್ಲೆವೆ ತಿಳಿದುವಗಿಲ್ಲೆವೆ 2 ಸುತ್ತೇಳು ಸಾಗರದ ಪೃಥ್ವಿಲಿಹ್ಯ ನಿತ್ಯವುಳ್ಳ ದೈವೀತನು ಸುತ್ತ ಸನಕಾದಿಗಳು ಮತ್ತೆ ದೇವರು ತೆತ್ತೀಸ ಕೋಟಿಗಳು ಹತ್ತಿಲೆ ಹೊಳೆಯುತ್ತ ಚಿತ್ತದ ತುದಿಯಲಿ ಸತ್ಯಕೈಲಾಸವೆ ಇತ್ತ ವೈಕುಂಠವು ಇಲ್ಲೆವೆ 3 ಕಾಶಿ ರಾಮೇಶ್ವರವು ಸಕಲ ಕ್ಷೇತ್ರವಾಸವಾಗಿಲ್ಲಿಹವು ದೋಷನಾಶನ ಕೃಷ್ಣೆಯು ಮಿಗಿಲಾದ ಏಸು ತೀರ್ಥಗಳಿಹ್ಯವು ವಾಸವಾಗಿಹವು ಸೂಸುತ ನದಿಗಳು ಈಶನ ಚರಣದಲಿ ಭಾಸುದು ಕಂಡವಗಿಲ್ಲೆವೆ 4 ಚೆಂದುಳ್ಳ ದ್ವಾರಕೆಯು ಗೋಕುಲ ವೃಂದಾವನ ಕುರುಕ್ಷೇತ್ರವು ಒಂದೊಂದೇ ಕ್ಷೇತ್ರದಲಿ ವಾಸವಾಗಿ ನಿಂದು ಮಾಡಿದ ಪುಣ್ಯವು ಹಿಂದಿನ ಕರ್ಮವು ಹೊಂದದೆ ಗಳಿಸುವ ಮಂದಾಕಿನಿ ನದಿಯಿಂದ ಫಲಿಲ್ಲಿವೆ 5 ಬ್ರಹ್ಮಾಂಡ ನಾಯಕನು ಅದ್ವೈತ ಸುಖವು ಉಂಡವಗಿದು ಪಿಂಡ ಬ್ರಹ್ಮಾಂಡೈಕ್ಯವು ಮಂಡಲದೊಳು ಪಿಂಡಾಂಡದಿ ಕಂಡವಗಿಲ್ಲ್ಲೆವೆ 6 ಸಂದೇಹ ವೃತ್ತಿ ಹರಿದು ಸದಮಲಾನಂದ ಮುಕ್ತಿಯಲಿ ಬೆರೆದು ಒಂದು ಪಥsÀವನರಿದು ಜಗದೊಳು ದ್ವಂದ್ವಗಳನೆ ಮರೆದು ಎಂದಿಗಗಲದಂತೆ ಶ್ರೀಪಾದವನಿಂದ ಮಹಿಪತಿಗೆ ಇಲ್ಲೆವೆ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇವನೆವೆ ಮಾನವನು ನೋಡಿರೋ ಇವನೆವೆ ಮಾನವನು ಪ ದಾವನು ಶ್ರಿ ಹರಿ ಪಾವನ ನಾಮವ ಆವಾಗ ನೆನೆವುತ ಸಾವಧನಾದಾ ಅ.ಪ ಹಿಂದಿನ ಪುಣ್ಯದಲಿ ನಾನೀಗ ಬಂದೆನು ನರದೇಹದಲಿ | ಮುಂದಾವ ಗತಿಗಳೋ ಛಂದದ ತಿಳಿಯದು | ಮಂದರ ಧರ ಸಲಹೆಂದು ಮೊರೆಯಿಡುವ 1 ಇದ್ದಷ್ಟರೊಳುದಾವ ಶೇವೆಗೆ ಕದ್ದಿರ ತನುಮನವಾ | ಸಿದ್ಧರ ನೆರೆಯಲಿ ಶಿದ್ಧ ಬೋಧಾಮೃತ | ಬುದ್ಧಿಲಿ ಸೇವಿಸಿ ಗದ್ದಳವಾಗಾ 2 ಗುರು ಮಹಿಪತಿ ಸ್ವಾಮಿ ಚರಣಕ ಶರಣೆಂದವನು ಪ್ರೇಮಿ | ಗುರು ವಚನವನಂದದಿ ಧರೆಯೊಳು ನಡೆಯುತ | ಗುರು ಭಕ್ತಿ ಜಾಗಿಸಿ ಗುರುತನಕ ಬಂದಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇವರೇ ನಮ್ಮವರೂ ಇದು ಭಾಗ್ಯವುನಮಗ್ಹಗಲಿರಳೂ ಪ ಭವ ಸಮುದ್ರದಲಿ ಮುಳುಗಿಸಿ ಕಡೆಯಲಿ ಜವನಾಳ್ಗಳ ಕೈಗೊಪ್ಪಿಸಿ ಕೊಡುವ ಅ.ಪ ಧನಯೌವನ ಬಲವು | ದೇಹದ ಅನುಬಂಧಗಳಿರುವು ಮನೆಮಕ್ಕಳುವನಿತಾದಿಗಳೊಲಿವರೊ 1 ಕೇಳಿದ್ದಿಲ್ಲೆನಲೂ | ಇವನ ಹೀ- ಯಾಳಿಪರ್ ಸ್ವಜನಗಳೂ ಕಾಲಕಾಲದಿ ಬಾಡಿಗೆ ಎತ್ತಿನ ಪರಿ ಆಳಾಗಿದ್ದರೆ ಹಾ ಎಂದು ನಗುವ 2 ಇವರಾಸೆಯ ಮಾಡೀ | ನಾವುನ- ಮ್ಮವರನು ಹೋಗಾಡಿ ಕವಳಕೆ ಗತಿಯಿಲ್ಲದೆ ಪರಿಯಾಯಿತು ಕಡೆಹಾಯಿಸು ಗುರುರಾಮವಿಠ್ಠಲನೆ 3
--------------
ಗುರುರಾಮವಿಠಲ
ಇಷ್ಟಾರ್ಥ ಪಾಲಿಸಯ್ಯ ಪ ಭೃಷ್ಟನಾದೆನು| ಧರಣಿಯೊಳಗತಿ| ದುಷ್ಟಜನ ಸಂಸರ್ಗದಿಂದಲಿ| ಕೃಷ್ಣನಿನ್ನಯ| ದಾಸರಾಗಿಹ| ಶ್ರೇಷ್ಠ ಜನರನು| ಪೊರೆವ ತೆರದಿ 1 ಗತಿಹೀನನಾದೆನಯ್ಯ|| ಮತಿಯ ಪಾಲಿಸಿ | ಕರುಣದಿ ಸ| ದ್ಗತಿಯು ದೊರಕುವ| ತೆರದಿ ನಿನ್ನನು| ಪತಿಕರಿಸಿ ಪಿತ| ನಂತೆ ಪೊರೆವ 2 ಪಂಕಜನಾಭ ದೇವ| ವೆಂಕಟರಾಯ| ಕಿಂಕರರನು ಪೊರೆವ| ಕಿಂಕರಗೆ ಮತಿ| ದೋರಿ ಪೊರೆಯೈ| ಪಂಕಜಾಂಬಕ | ಪರಮಪಾವನ 3
--------------
ವೆಂಕಟ್‍ರಾವ್
ಇಷ್ಟು ಮಾಡಿ ಕೈ ಬಿಟ್ಟು ಕೂಡ್ರುವದು ಶಿಷ್ಟರ ನಡತೆಲ್ಲೆಲ್ಲೂ ಗುರುವೇ ಬಲು ಕಷ್ಟದೊಳಗೆ ನಾ ಮುಳುಗಿರುವೆ ನೀ ಕೊಟ್ಟ ಅಭಯದಿಂ ಬದುಕಿರುವೆ ಸಿಟ್ಟು ಮಾತ್ರ ನೀನಾಗ ಬೇಡ ಪೊರೆ ಜಿಷ್ಣುಸಾರಥಿಯ ಪ್ರೀಯ ಮಗುವೆ ಬಾ ಬಾ ಗುರುವೆ ಪ ಇತ್ತರು ಸರಿಯಿಲ್ಲ ಈ ಮಾತು ಹೊರಗೆ ಪೇಳುವವಲ್ಲಾ ನಾ ನಿದ್ದೆ ಪೂರ್ವದಲಿ ಅತಿ ಖುಲ್ಲಾ ಶಿಲೆಯನು ಸುಂದರ ಮೂರ್ತಿಗೈದತೆರ ಬಲು ವಿಧದಲಿ ಸಲಹಿದಿಯಲ್ಲ ಹರಿಬಲ್ಲಾ ಜ್ಞಾನವಿತ್ತಿ ಹರಿಪಾದದಲ್ಲಿ ಅಭಿಮಾನವಿತ್ತಿ ಸುಖವೆಲ್ಲಾ ಬಲುಹೇಯವೆಂದು ತಿಳಿಸಿದಿಯಲ್ಲಾ ಮೇಲ್ವರದಿ ರಂಗನೊಲಿಯುವ ಸೊಲ್ಲಾ ಅಸನ ವಸನಗಳು ಕೊಟ್ಟು ಕೊನೆಗೆ ತುಚ್ಛಿಸುವ ನಿನ್ನ ಗುಣ ತಿಳಿಯಲಿಲ್ಲಾ ಇದು ಥsÀರವಲ್ಲಾ ನಿನ್ನ ಪಾದವೇ ಸಡಗರ ಸಿರಿ ಮೇಲೆ ಸುರಪುರಿ ಜ್ಞಾನನಿಧಿ ಥsÉರಿ ಕಾಶಿ ಗಯಾ ಮಧುರಿ ಹರಿ ಓಂ ಓಂ ಓಂ ನಿನ್ನ ನಾಮ ದುರಿತವೆಂಬೊ ಕರಿ ಕುಲಕೆ ಘನ ಹರಿ ಪರಿ ತಿಳಿದೆನೆಲೊಧೊರಿ ಹರಿ ಓಂ ಓಂ ಓಂ ಇನ್ನಾದರು ಕೋಪವತ್ವರಿ ಕರುಣಿ ಕಣ್ತೆರಿ ಸುತಗೆ ಸುಖಗರಿ ತೋರೋ ನಿನ್ನ ಮಾರಿ ಹರಿ ಓಂ ಓಂ ಓಂ ಎನ್ನಯ ಬಿsÀಷ್ಟಗಳನ್ನು ನೀಡದಿರೆ ನಿನ್ನ ವಿಮಲ ಕೀರ್ತಿಗೆ ಗುರುವೆ ಕುಂದನ್ನು ಬಿಡದೆ ತಿಳಿ ನಾ ತರುವೆ ಸಿಟ್ಟು ಮಾತ್ರ ನೀನಾಗ ಬೇಡ ಪೊರೆ ಜಿಷ್ಣು ಸಾರಥಿಯ ಪ್ರಿಯ ಮಗುವೆ ಬಾ ಬಾ ಗುರುವೆ 1 ಪಂಥವೇ ಹೇ ಮಹಾಕಾಂತ ಪ್ರಿಯ ನಿನ್ನ ಸಂತತಿಯೊಳು ಸೂರಿಗಳೊಡೆಯ ನೀನೆಂತು ಪೊಂದಿದೈ ನಿರ್ಭಿಡಿಯಾ ಇದು ಸಂತರು ಕೇಳಿದರಾಶ್ಚರ್ಯ ವಂತರು ಆಗರೆ ಸಾಕು ಮುಂದೆಯನ್ನಂತರಂಗವೇ ತವನಿಲಯ ಆಗಲಿ ಜೀಯಾ ಕಂದನ ಕಾಯುವದಂತು ಸಹಜ ಸಿರಿ ಹಿಂದಕೆ ಪಾಂಡವನೆಂಭಿರಿಯಾ ಆ ಗಂಧರ್ವನ ಮಗನಾದ ಗಯಾ ತಾ ಬಂದು ಹೋಗಲವನನು ಮೊರೆಯ ಸಿಂಧು ಜಪನ ಸಹ ಲಕ್ಷಿಸದಲೆ ತ್ವರ ತಂದು ಕೊಟ್ಟನವನಿಗೆ ವಿಜಯಾ ಮೇಲ್ಹರಿಯದಯಾ ಇದು ಅಲ್ಲದೆ ಬಹು ಭಕ್ತರು ಜ್ಞಾನಯುಕ್ತರು ಸುಧಿಯ ಭೋಕ್ತರು ನೆನೆದವರ ದು:ಖ ಬಿಡಿಸಿದರು ಸುಧೆಯ ಬಡಿಸಿದರು ಹರಿ ಓಂ ಓಂ ಓಂ ಬಲು ಹಿತದಿ ಶುಭವ ಕೋರಿದರು ತಾಪ ಹೀರಿದರು ವಾಕ್ಯ ಸಾರಿದರು ಹರಿಯ ತೋರಿದರು ಹರಿ ಓಂ ಓಂ ಓಂ ನೀನಾದರೂ ಬಹಳರ ಪೊರದಿ ಈ ಹೀನ ಓರ್ವ ನಿನ್ನಗೆಯರವೆ ಮರಿಯಬ್ಯಾಡ ಕರುಣೆ ಕರವ ಮುಗಿವೆ ಸಿಟ್ಟು ಮಾತ್ರ ನೀನಾಗ ಬೇಡ2 ಪರ ಖರೆ ಗುರುವಿಲ್ಲದ ಗತಿಯನ್ನು ಧರೆತ್ರಯದಿ ತೋರು ತುಸು ನೋಡೋಣ ಗಿರಿಧರಿಯ ಬಿಟ್ಟು ನಿಲ್ಲುವುದೇನು ಗುರುವೆ ತ್ರಿಟಿಯ ಬಿಟ್ಟೊರುಷವಾಗುತದೆ ಹಿರಿಯರಿ ಪೇಳ ವದಿನ್ನೇನು ಹೇ | ಸುರಧೇನು ಗುರುವೆ ಸುಖದ ಖಣಿ ಗುರುತನುಮಣಿ ಮಣಿ ತಿಳಿದೆ ನಾ ಮನದಾಗೆ ಪರಕಿಸಿದೆನ್ನನು ಪೊರೆಯೆ ಯನುತ ಬಾ ಯ್ತೆರೆಯುತ ಮಣಿಸುವೆ ಶಿರನಿನಗೆ ಮೂಜಗದಾಗೆ | ನಿನ್ನಿಂದ ಎನಗೆ ಸದ್ಬುದ್ಧಿ ಯೋಗದಾಸಿದ್ಧಿ ಕಾರ್ಯದಾಸಿದ್ಧಿ ಸ್ವರ್ಗದಾಸಿದ್ಧಿ ಹರಿ ಓಂ ಓಂ ಓಂ ನಿನ್ನಿಂದ ಪಡೆದ ವಿಜ್ಞಾನ ಹರಿಯರಾ ಖೂನಾ ಲೋಕದೊಳು ಮಾನ ಮುಕ್ತಿ ಸೋಪಾನ ಹರಿ ಓಂ ಓಂ ಓಂ ನೀನೇವೆ ಯನಗೆ ಆಭರಣ ಝಗಝಗಿಪ ವಸನ ಶ್ರೀಹರಿಯ ಚರಣ ವಿರಜಾನದಿ ಸ್ನಾನ ಹರಿ ಓಂ ಓಂ ಓಂ ನಿನ್ನೊಮ್ಮೆ ನೆನಸೆ ಪವಮಾನ ಕಾಯ್ವ ಪ್ರತಿದಿನ ಇದಕೆ ಅನುಮಾನ ಇಲ್ಲ ಏನೇನ ಹರಿ ಓಂ ಓಂ ಓಂ ಗಡ ಕೇಳ್ವಡೆಯನೆ ಕಡೆ ನುಡಿಯನ್ನದು ಭಿಡೆಯ ಇಡದೆ ನಾನುಡಿವೆ ಎನ್ನ ಮರೆತರೆ ಮಂಗನು ನೀ ನಿಜವೆ 3
--------------
ಅಸ್ಕಿಹಾಳ ಗೋವಿಂದ
ಈ ಭಾಗ್ಯವೆ ನಿನ್ನದೊ ವರ ಭೋಗಿಶಯನಾ ಪ ಸೌಭಾಗ್ಯವೇ ನಿನ್ನ ಮಹಿಮೆ ತಿಳಿಯುವ ಯೋಗಅ.ಪ ನೀನಿಲ್ಲದಾಸ್ಥಾನ ಈ ನಳಿನಜಾಂಡದೊಳಿಲ್ಲ ನೀನೆಲ್ಲವನು ಬಲ್ಲೆ ನಿನ್ನತಿಳಿಯಗೊಡದೆ ಹೀನಮಾನವ ನಾನು ನಿನ್ನನವರತ ಮರೆತರು ನೀ ಎನ್ನ ಮರೆಯದಲೆ ಎನ್ನೊಳಗೆ ಇಹೆ ಎಂಬ 1 ನಿಲ್ಲಿಸಲು ನಿಲ್ಲುವೆನು ಮಲಗಿಸಲು ಮಲಗುವೆನು ತಿಳಿಸಿದರೆ ನಾ ತಿಳಿವೆ ತಿಳುವಳಿಕೆ ನೀನೆ ತಿಳಿಯಗೊಡಿಸೋಎನ್ನಕ್ರಿಯೆಗಳನು ದೇಹದ ನೆಳಲಂತೆ ನಿನಗೆ ನಾನಿಹೆನಯ್ಯ ದೇವಾ 2 ಈ ಜಗತ್ತಿನೊಳಗೆಲ್ಲ ಪೂಜ್ಯಪೂಜಕ ಪೂಜ್ಯ ಪೂಜೋಪಕರಣದೊಳು ನೀನೆ ನಿಂತು ಮೂರ್ಜಗತ್ಪತಿಯೆ ನಿನ್ನನರ್ಚಿಸುವ ಭಜಕರಿಗೆ ನೈಜಸುಖ ವ್ಯಕ್ತಿಯನು ಮಾಡುತಲಿ ಪೊರೆವೇ 3 ನೀರು ತೃಣವನು ಕೊಡಲು ಹರುಷದಿಂದಲಿ ಗೋವು ಕ್ಷೀರವನು ಕರೆದು ಜನರ ಪೊರೆವಂತೆ ಸೂರಿಗಳು ಮಾಳ್ವ ಅಪರಾಧಗಳೆಣಿಸದಲೆ ಕರುಣದಿಂದಲಿ ಅವರ ಪೊರೆವ ಶ್ರೀಹರಿಯೆ4 ಪನ್ನಗಾಚಲನಿಲಯ ನೀನೆ ಎನ್ನೊಳಗಿರಲು ಬನ್ನಪಡಲ್ಯಾತಕೆ ಚಿನ್ಮಯರೂಪ ಎನ್ನಂಥಜೀವರಿನ್ನೆಷ್ಟೋ ಬ್ರಹ್ಮಾಂಡದೊಳು ಘನ್ನಭಕುತಿಯನೀಡೋ ಶ್ರೀಉರಗಾದ್ರಿವಾಸವಿಠಲ 5
--------------
ಉರಗಾದ್ರಿವಾಸವಿಠಲದಾಸರು
ಈ ಮಾತುರ ನೀಯದಿದ್ದರೆ ನಿನ್ನ | ಧಾಮದಲ್ಲಿಗೆ ಪೋಗಿ ಸೇರಿ ಸುಖಿಪದೆಂತೋ ಪ ಹುಟ್ಟಿದಾರಭ್ಯದಿ ಹೊಟ್ಟಿ ಬಟ್ಟಿಯಲಿಂದ | ಕಷ್ಟ ಬಟ್ಟೆನೆಂದು ಹೇಳಲಿಲ್ಲಾ | ಸೃಷ್ಟೇಶ ಕಾಡುವ ಅಷ್ಟ್ಟ ಮಹಾಮದಗಳ ನಷ್ಟಗೊಳಿಸಿ ನಿನ್ನ | ನಿಷ್ಟಿಲಿಡೆಂದೆಲ್ಲದೆ 1 ಸತಿ ಸುತರಿಗೆ ಯೇನೋ | ಗತಿ ಗೋತ್ರವಿಲ್ಲೆಂದು | ಸತತ ನಿನ್ನ ಕೇಳಿ ದಣಿಸಿಲಿಲ್ಲಾ | ಪತಿತ ಪಾವನ ಎನಗೆ ಗತಿಯಾಗುವುದಕೆ | ಸುಪಥವನೆ ತೋರುವ | ಮತಿಕೊಡೆಂದೆನಲ್ಲದೆ2 ಕರುಣಿ ಬೇಡಿಕೊಂಬೆ | ಉರು ಕಾಲದಲಿ ನಿನ್ನ | ಶರಣರ ಸಂಗತಿಲೆನ್ನ ಇಟ್ಟು | ಪರಮ ಶುದ್ಧನ ಮಾಡಿ ವಿಜಯವಿಠ್ಠಲ ನಿನ್ನ | ಚರಣಸೇವೆ ನಿರಂತರ ಕೊಡೆಂದೆನಲ್ಲದೆ3
--------------
ವಿಜಯದಾಸ
ಈ ವೇಳೆಯಲಿ ಸಲಹದಿರುವರೆಯನ್ನ ಶ್ರಿ ವತ್ಸಲಾಂಛನ ಶ್ರಿತಕಲ್ಪತರು ಹರಿ ಪ ರತಿ ರಮಣಜನಕ ಭಾರತೀರಮಣ ಸನ್ನುತನೆ ದಿತಿ ತನಯ ಸಂಹಾರಾಚ್ಯುತ ಮುಕುಂದ ಪತಿತಪಾವನ ಭವದುರಿತ ಪಾಶ ಪರಿಹರಿಸೆ- ನ್ನುತ ನಿನ್ನ ಸ್ತುತಿಸೆ ಸದ್ಗತಿ ತೋರಿ ಗೋವಿಂದ 1 ಅಕಲಂಕ ಚರಿತ ತಾರಕರೂಪ ಸರ್ವೇಶ ಸಕಲಲೋಕ ಶರಣ್ಯ ಪ್ರಕಟ ಮಹಿಮಾ ವಿಕಸಿತಾಂಬುಜ ನೇತ್ರ ಪ್ರಕಟದಾನವ ಜೈತ್ರ2 ಮೊರೆ ಹೊಕ್ಕವರನು ಕಾಯ್ವ ಬಿರುದು ನಿನ್ನದು ಕೃಪಾ ಕರ ಗರಡಗಮನ ಕರಿವರದ ಶೌರಿ ಧರಣಿಧರ `ವರಹೆನ್ನೆ ಪುರನಿಲಯ’ ಶ್ರೀಮ ನೃಹರಿ ಪರಮ ಪುರುಷ ಶಿರಿಯರಸ ಹರುಷದಲಿ 3
--------------
ಹೆನ್ನೆರಂಗದಾಸರು
ಈ ಸೊಬಗು ಇನ್ನಾವ ಕ್ಷೇತ್ರದಲಿ ಕಾಣೆನಾ ಇಲ್ಲಿ | ವಾಸುದೇವ ಮುನಿಯಿದ್ದ ಕಾರಣ ಪ ರಾಜಧಾನಿಯ ನೋಡೆ ಇಂದ್ರಭವನಕೆ ಮೇಲು | ತೇಜದಲಿ ನೋಡೆ ಸೂರ್ಯನದೆ ಸೋಲು || ಪೂಜೆದಲಿ ನೋಡೆ ಸರ್ವ ಧರಣಿಗೆ ಮೇಲು | ಭೋಜನದಲಿ ನೋಡೆ ಅಮೃತಕೆ ಮೇಲು 1 ಉತ್ಸಾಹದಲಿ ನೋಡೆ ನಹಿ ಪ್ರತಿ ನಹಿ ಪ್ರತಿ | ಸತ್ಸಂಗತಿಯ ನೋಡೆ ಬುಧ ಸಂಗತಿ || ಸುಚರಿತೆಯ ನೋಡೆ ಶುದ್ಧ ಸತ್ವದ ನೀತಿ | ಮತ್ಸರ ಮೆರೆದು ನೋಡೆ ಇಲ್ಲೆ ಮುಕುತಿ 2 ಓಲಗದಲಿ ನೋಡೆ ಸತ್ಯಲೋಕಕೆ ಸಮ | ಪೇಳುವ ಕೀರ್ತನೆ ನೋಡು ವೇದಸ್ತೋಮ || ಬಾಲ ಉಡುಪಿಯ ಕೃಷ್ಣ ವಿಜಯವಿಠ್ಠಲರೇಯನ | ತಿಳಿದ ಮಾನವಗೆ ಫಲವು ನಿಷ್ಕಾಮಾ3
--------------
ವಿಜಯದಾಸ
ಈಗಲೊ ಇನ್ನಾವಾಗಲೊ ಈ ತನುವು ಪೋಗದಿರದು ಪ. ಭೋಗದಾಸೆಯ ಬಿಡಿಸಯ್ಯ ನಾಗಶಯನ ನಳಿನನಯನ ಅ.ಪ. ಎಂಬತ್ತು ನಾಲ್ಕು ಲಕ್ಷ ಯೋನಿಗಳಲಿ ಬಂದು ಅಂಬುಜಾಕ್ಷನೊಂದೆನಯ್ಯ ಅಂದಂದು ಮಾಡಿದ ಅಘದಿಕುಂಭೀಪಾಕ ಮೊದಲಾದ ಕುತ್ಸ್ಸಿತ ನರಕದಿ ಬಿದ್ದುಉಂಬ ದುಃಖವ ಬಿಡಿಸಯ್ಯ ಉದಧಿಶಯನ ಪುಣ್ಯಕಥನ 1 ಓದನ ಮಾತ್ರಕ್ಕೆ ಸಭೆಯೊಳುವಾದಿಸುವೆ ವೇದಶಾಸ್ತ್ರ ಉಪನ್ಯಾಸಂಗಳನು ಮಾಡುವೆಕ್ರೋಧರಹಿತನಾಗಿ ಅವರು ಕೊಡಲು ಕೊಂಡಾಡುವೆಆದರಿಸದಿದ್ದರವರ ಬೈದು ಬರುವೆ ಖಿನ್ನನಾಗಿ2 ದೇಶದೇಶಂಗಳಿಗೆ ಧನದ ಆಸೆಗಾಗಿ ಪೋಗಿ ಪೋಗಿಬ್ಯಾಸರದೆ ಕಂಡವರ ಕಾಡಿ ಬೇಡಿ ಬಳಲಿದೆಕಾಸಿನ ಲಾಭವು ಕಾಣೆ ಘಾಸಿಯಾದೆನಯ್ಯ ಶ್ರೀನಿ-ವಾಸ ನಿನ್ನ ಪೂಜಿಸದೆ ಮೋಸಹೋದೆನಯ್ಯ ನಾನು3 ಸ್ನಾನಮೌನಂಗಳನು ಮಾಡುವೆ ಸಕಲ ಜನರ ಮುಂದೆಮಾನವರಿಲ್ಲದಾಗಲೆ ಮೌನವಿಲ್ಲ ಮಂತ್ರವಿಲ್ಲಜ್ಞಾನವ ಪೇಳುವೆ ಮೋಸಕಟ್ಟ[ಲೆ]ಯ ಮಾಡಿಕೊಂಡುಧ್ಯಾನಿಸದೆ ಹೊಟ್ಟೆಯನ್ನು ಹೊರೆವೆ ನಿನ್ನ ಮರೆವೆ4 ಕರ್ಣ ಕೇಳದು ಅನ್ಯವಾರ್ತೆ[ಗೆ] ಹೊತ್ತುಸಾಲದುಇನ್ನು ಹೇಸಿಕೆ ಮನಕೆ ಬಾರದು ಮುಂದಿನ ಗತಿಗೆ ದಾರಿ ತೋರದು 5 ಕಂಬುಕಂಧರ ನಿನ್ನ ನೆನೆಯದೆ 6 ವೃದ್ಧನಾದೆನು ಪಲ್ಗಳೆಲ್ಲ ಬಿದ್ದವು ಕಣ್ಣುಕಾಣಬಾರದುಎದ್ದು ನಿಲ್ಲಲಾರೆನಯ್ಯ ಉದ್ಧರಿಸೊ ಹಯವದನತಿದ್ದಿ ಮನವ ನಿನ್ನ ಪಾದಪದ್ಮವ ನೆನೆವಂತೆ ಮಾಡೊಪೊದ್ದಿದವರ ಪೊರೆವ ಕರುಣಾಸಿಂಧು ಎನಗೆ ನೀನೆ ಬಂಧು 7
--------------
ವಾದಿರಾಜ
ಈತನೆ ಗತಿಯೆಂದು ನಂಬಿದೆನೆ ನಾ ನೀತನಂಥ ನಿಷ್ಕರುಣನ ಕಾಣೆ ಪಾತಕಹರ ಅ ನಾಥರಕ್ಷಕ ಮಹದಾತ ಪರಮಭಕ್ತ ಪ್ರೀತನೆಂಬುದ ಕೇಳಿ ಪ ಮರುಳಾಗಿವನ ಬೆನ್ಹತ್ತಿದೆನೆ ಮನೆ ಮಾರುಗಳೆಲ್ಲವ ತೊರೆದೆನೆ ಕರುಣವಿಲ್ಲ ತುಸು ಹೊರಳಿ ನೋಡುವಲ್ಲ ತಿರುತಿರುಗಿ ಮನಕರಗಿ ಸಾಕಾಯಿತು 1 ಜಾತಿಹೀನನೆಂಬುವೆನೇನೆ ಲೋಕ ನಾಥನಿಗೆ ಕುಲ ಅದೇನೆ ಈತನ ಹೊರ್ತು ಮತ್ತಾರಾಸೆನಗಿಲ್ಲ ನೀತಿಯೆ ಈತಗೆ ಜಾತಿಭೇದವೆಂಬ 2 ಹೊಲೆಯರ ಮನೆಯಲ್ಲುಂಡನೆ ಇವ ಗೊಲ್ಲರ ಕುಲದಲ್ಹುಟ್ಟಿದನೆ ಗೊಲ್ಲರ ನಲ್ಲೆಯರಲ್ಲಿ ಹೋಗಿ ಈತ ಗುಲ್ಲುಮಾಡಿ ಬೆಣ್ಣೆಗಳ್ಳನೆನಿಸಿಕೊಂಡ 3 ಪಾತರದವಳಲ್ಲಿಗ್ಹೋದನೆ ತಾ ನೀತಿವಂತನ ಕಟ್ಟೊಡ್ಹೆಸಿದನೆ ನೀತಿವಂತರು ಕೇಳಿರೀತನ ರೀತಿಯ ದಾತ ಜಗನ್ನಾಥ 4 ನಿಲ್ಲದು ಮನ ಘಳಿಗಿವನಲಿ ನಾ ಸಲ್ಲದ್ಹಾಂಗ್ಹೋದೆ ಮತ್ತೆಲ್ಲ್ಹೋಗಲಿ ಬಲ್ಲಿದ ಶ್ರೀರಾಮನೆಲ್ಲ್ಹೋದರು ಬಿಡೆ ಕಲ್ಲೆದೆಯವಗಾಗಿ ಪ್ರಾಣಹೋಗಲಿನ್ನು 5
--------------
ರಾಮದಾಸರು