ಒಟ್ಟು 352 ಕಡೆಗಳಲ್ಲಿ , 49 ದಾಸರು , 333 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮೂರು ತುಂಡಾದ ಹನುಮನ ನೋಡಿರÉ ಪ. ಮಾರುತಿಯ ಮರ್ಮವಿದರಿಂದರಿಯರೆ ಅ.ಪ. ಮೊದಲ ಕಟ್ಟೆಯ ದಡದಿ ಮೊದಲಿದ್ದ ಹನುಮನ ವಿಧಿವಶದಿ ಖಳರು ಕಿತ್ತೊಗೆಯೆ ಮದದಿ ಮೊದಲು ಕಟ್ಟೆಯು ನಿಲದೆ ಒಡೆದು ಪರಿಯಲು ತುಂಗೆ ಅದರೊಳಡಗಿದ್ದ ಕೆಲಕಾಲವೀ ರಾಯ 1 ದೇವರಿಲ್ಲದ ಭವನ ಕಂಡು ನಿಂದು ತಾವೆ ಸ್ಥಾಪಿಸುವೆವೆಂಬನಿತರೊಳು ಸ್ವಪ್ನದಲಿ ಪಾವಮಾನಿಯು ತನ್ನ ಇರುವು ತೋರಿದನೊ 2 ಬರುತ ಕಟ್ಟೆಯ ದಿಡಗಿನಲ್ಲಿ ನಿಂದು ಕರೆವಡೆ ಬರಲು ಮೂರು ತುಂಡು ಹನುಮರಾಯ ತರುತ ಸ್ಥಾಪಿಸಿ ಬಂಧಿಸಲು ದ್ವಾರವಾರದಲಿ ಕರನ್ಯೂನ ಸಾಕಾರ ಸರಿಯಾದನೀತ 3 ಮೂರು ಯುಗದಲಿ ತಾನು ಮೂರು ರೂಪವ ತಾಳಿ ಮೂರು ಮೂರ್ತಿಯ ಭಜಿಸಿ ಮೂರು ಆಶ್ರಮದಿ ದುರುಳ ಮತಗಳ ಮುರಿದು ಮೂರುದಶ ಏಳು ಗ್ರಂಥಗಳ ಸ್ಥಾಪಿಸಿದ 4 ಮೂರು ಗುಣಬದ್ಧ ಮೂರು ದೇಹದಿ ನೆಲಸಿ ಮೂರು ವಿಧ ಜಪದಿಂದ ಮೂರ್ಗತಿಯನೀವ ಮೂರು ಸ್ಥಾನದಿ ಮೂರು ಕೋಟಿರೂಪವ ಧರಿಸಿ ಮೂರು ಲೋಕದಿ ಮೆರೆವ ಮಾರುತಿಯ ಚರ್ಯ 5 ಮೂರು ನಾಡಿಯ ಮಧ್ಯೆ ಮೂರೈದುದಲ್ಲಿ ತೋರುವೊ ಹರಿರೂಪ ತೋರಿಸುವನು ಮೂರು ಅವಸ್ಥೆಗಳ ವಿೂರಿದ ಜಾಗ್ರತನು ಮೂರು ಕಾಲದಿ ಜೀವರನು ಕಾಯುವನ 6 ಮೂರು ಮಾರ್ಗಗಳಿಂದ ಮಾರುತಿಯ ತೋರುವೊ ದಾರಿಯಿಂದಲಿ ಹರಿಯ ಸಾರಿ ಭಜಿಸೆ ಸೇರಿಸುವ ಗೋಪಾಲಕೃಷ್ಣವಿಠ್ಠಲನ ಪುರವ ತಾರಿಸುವ ಭವವನಧಿ ಮೊದಲಗಟ್ಟೇಶ7
--------------
ಅಂಬಾಬಾಯಿ
ಮೂರು ನಾಮಗಳ ಧರಿಸಿರುವ ಕಾರಣವೇನು ಸಾರಿ ಪೇಳಲೊ ಈಗಲೆ ಪ. ಶ್ರೀ ರಮಾಪತಿ ಶ್ರೀನಿವಾಸ ವೆಂಕಟರಮಣ ಯಾರು ಇಟ್ಟರೋ ನಿನಗೆ ಈ ಮೂರು ನಾಮ ಅ.ಪ. ಶುದ್ಧ ವೈಷ್ಣವರೆಲ್ಲ ಶುದ್ಧ ಮೂರುತಿ ಎಂದು ಕರವ ಮುಗಿದು ಎದ್ದು ನೋಡಲು ನಿನ್ನ ಫಣಿಯೋಳೀ ತರವಿರಲು ಮಧ್ವಮತ ದೈವವೆಂದಿನ್ನು ತಿಳಿಯುವರೆ 1 ಮೂರುರೂಪನು ನಾನು ಮೂರು ಲೋಕಗಳಿಹವು ಮೂರು ಮಾಳ್ಪೆನು ಜಗವ ಮೂರು ಗುಣದಿ ಮೂರು ತಾಪವ ಗೆದ್ದು ಮೂರು ಮಾರ್ಗದಿ ಭಜಿಸೆ ಪಾರು ಮಾಡುವೆನೆಂದು ತೋರುವ ಸೊಬಗೊ 2 ಸಾಲದೆ ನಿನಗೆ ಸೌಂದರ್ಯಕೆ ಒಂದು ತಿಲುಕ ಪಾಲಸಾಗರಶಾಯಿ ಚಲುವಮೂರ್ತಿ ಕಾಲಕಾಲಕೆ ಜನರ ದೃಷ್ಟಿ ತಗುಲುವುದೆಂದು ಲೀಲೆಯಿಂದಲಿ ಹೀಗೆ ಧರಿಸಿದೆಯ ಪೇಳೊ 3 ಮೂರೆರಡು ಎರಡೊಂದು ಇಂದ್ರಿಯವನರ್ಪಿಸಲು ತೋರುವನು ನಿಜರೂಪ ಭಕ್ತಗೆಂದು ಸಾರುತ್ತಿದ್ದರು ವಾಯು ಅರಿಯದೆ ಭಜಿಸಿದರೆ ಮೂರುನಾಮವೆ ಗತಿ ಎನ್ನುವ ಬಗೆಯೊ 4 ಶ್ರೀಲೋಲ ಗೋಪಾಲಕೃಷ್ಣವಿಠ್ಠಲ ನಿನ್ನ ಈ ಲೀಲೆ ಬಗೆಯನು ಅರಿವವರ್ಯಾರೊ ವ್ಯಾಳಶಯನ ವೆಂಕಟೇಶ ಎನ್ನ ಮನದಿ ಕಾಲಕಾಲಕೆ ನಿನ್ನ ರೂಪವನೆ ತೋರೋ 5
--------------
ಅಂಬಾಬಾಯಿ
ಮೂರುತಿ ಪುಟ್ಟ ಮೂರುತಿ ಪ. ಸಾರುತಿ ಹರಿಗುಣ ಬೀರುತಿ ತ್ರಿಜಗದಿ ಅ.ಪ. ತ್ರೇತೆಯ ಯುಗದಲಿ ಜನಿಸಿ | ರಾಮ ದೂತಕಾರ್ಯಕೆ ಮನವಿರಿಸಿ ಪ್ರೀತಿಯೊಳ್ ರವಿಜನ ಉಳಿಸಿ | ಬಹು ಖ್ಯಾತಿಯ ವಾಲಿಯನಲ್ಲೇ ಅಳಿಸಿ ವಾತವೇಗದಿ ವನಧಿಯ ದಾಟಿ ಉಂಗುರ ಸೀತೆಗಿತ್ತು ಲಂಕೆ ವೀತಿಹೋತ್ರನಿಗಿತ್ತ 1 ದ್ವಾರಕಿನಿಲಯನ ಒಲಿಸಿ | ಬಲು ಧೀರ ಭೀಮಸೇನನೆನಿಸಿ ಸೋಮಕುಲದಲಿ ಜನಿಸಿ | ಬಲು ಕಾಮಿ ಕೀಚಕನನ್ನು ವರೆಸಿ ಕಾಮಿನಿಗೋಸುಗ ಕಾಮುಕ ಕುರುಕುಲ ಧೂಮವೆಬ್ಬಿಸಿದ ನಿಸ್ಸೀಮ ಸುಗುಣಧಾಮ 2 ಪುಟ್ಟಯತಿಯ ರೂಪತಾಳಿ | ಬಲು ಗಟ್ಟಿ ಗೋಪೀ ಗೆಡ್ಡೆ ಸೀಳಿ ಪುಟ್ಟ ಕೃಷ್ಣನ ಕಂಡು ತೋಳಿ | ನಿಂದ ನಿಷ್ಟೆಯೊಳ್ ನೆತ್ತಿಯೊಳ್ ತಾಳಿ ಕುಟ್ಟಿ ಕುಮತಗಳ ವೈಷ್ಣವಾಗ್ರಣಿಯಾದ 3 ಸಾಕಾಯಿತೇ ಸ್ವಾಮಿಕಾರ್ಯ | ಇಲ್ಲಿ ಬೇಕಾಯಿತೇ ಮೌನಚರ್ಯಾ ಆ ಕಾಲದ ಎಲ್ಲ ಶೌರ್ಯ ಉಡುಗಿ ಏಕಾಂತದಲಿ ಹರಿಚರ್ಯಾ ವಾಕು ಉಚ್ಚರಿಸದೆ ಈ ಕುಧರಜೆ ತೀರ ಏಕಾಂತವಾಸನೆ 4 ಅಪಾರಮಹಿಮನೆ ಹಂಪೆ | ಯಲ್ಲಿ ಪರಿ ಇರುವುದು ತಂಪೆ ಪತಿ ಪದಕಂಜ ಕಂಪೆ | ಇಲ್ಲಿ ನೀ ಪಾರಣೆಯೆ ಮಾಳ್ಪ ಸೊಂಪೆ ಗೋಪಾಲಕೃಷ್ಣವಿಠ್ಠಲದಾಸ ನಿನ್ನಲ್ಲಿ ಸ್ಥಾಪಿಸಿದರೆ ವ್ಯಾಸರೀಪರಿ ಯಂತ್ರದಿ 5
--------------
ಅಂಬಾಬಾಯಿ
ಮೂರ್ತಿ ಚಿನ್ಮಯಾತ್ಮಕ ರೂಪ ಸಂತತದಿ ನೆನೆವವರ ಸಲಹೊ ಕರುಣಿ ಪ. ತುಂಬಿ ಇರುತಿಹುದು ಎಂತು ನಿನ್ನಾಟ ಪೇಳ್ ನಿಗಮವೇದ್ಯ ಚಿಂತೆ ಎನಗೊಂದಿಲ್ಲ ಅಂತರಂಗದಿ ನೆಲೆಸಿ ಸಂತತದಿ ನಿನ ಧ್ಯಾನ ನೀಡೆಂಬೆನೊ 1 ದೇಶಾಧಿಪತಿಗಳಿಗೆ ಕೋಶ ತುಂಬದ ಚಿಂತೆ ದೇಶ ತಿರುಗುವನಿಗೆ ಹಣದ ಚಿಂತೆ ದೇಶಸ್ಥನಾದವಗೆ ರಾಜಭಟರಾ ಚಿಂತೆ ಕಾಶಿಯಲ್ಲಿರುವವಗೆ ಮನೆಯ ಚಿಂತೆ 2 ಜಾರಿಣಿಗೆ ವಿಟನೊಬ್ಬ ಬಾರದಿರುವ ಚಿಂತೆ ಚೋರನಿಗೆ ರವಿ ಮುಳುಗದಿರುವ ಚಿಂತೆ ಮಾರನಿಗೆ ಯೋಗಿಗಳ ಹೃದಯ ಭೇದಿಪ ಚಿಂತೆ ಪತಿ ಒಲುಮೆ ಪಡೆವ ಚಿಂತೆ 3 ಕರ್ಮತತ್ಪರರಿಗೆ ಹರಿಮರ್ಮವರಿಯದ ಚಿಂತೆ ಧರ್ಮಪುರುಷಗೆ ಕಲಿಬಾಧೆಯ ಚಿಂತೆ ವೇದಶಾಸ್ತ್ರಜ್ಞನಿಗೆ ವಾದಿಯ ಭಯ ಚಿಂತೆ ಹಾದಿ ನಡೆವಗೆ ದುಷ್ಟ ಜನರ ಚಿಂತೆ 4 ಸಾಧು ಸಜ್ಜನರಿಗೆ ಬಾಧೆ ಕೊಡುವರ ಚಿಂತೆ ಹಾದಿ ತಪ್ಪಿದ ಪಾಪಿಗೆ ಯಮನ ಚಿಂತೆ ವಾಣಿಜ್ಯತನದವಗೆ ಹಣವು ಗಳಿಸುವ ಚಿಂತೆ ಮಾನವಂತರಿಗೂನ ನುಡಿಯ ಚಿಂತೆ 5 ಇಂತೆಲ್ಲರಾ ಚಿಂತೆ ಇರಲಿ ಕೇಳ್ ಹರಿಯೆ ಚಿಂತೆ ಬಿಡಿಸೆನಗೆ ನೀನೊಲಿದು ದೊರೆಯೆ ಚಿಂತನೆಗೆ ಸಿಗದಿಹುದು ನಿನಗೆ ಸರಿಯೆ ಚಿಂತಿಪರಿಗೊಲಿವಂಥ ಸಿರಿಕಾಂತ ಹರಿಯೆ6 ಶಾಂತ ಮೂರುತಿ ಪರಮ ಕರುಣಾಳುವೆನ್ನುತಲಿ ಎಂತೆಂತೂ ಸಜ್ಜನರು ಸ್ತುತಿಪುದನು ಕೇಳುತಲಿ ಇಂತು ನಿನ ಪದವನಾನ್ಹಾರೈಸಿ ಬಂದರೂ ನಿಂತರೂ ಎದುರಲ್ಲಿ ನೀನೊಲಿಯಲಿಲ್ಲ 7 ಕರಮುಗಿದು ಎರಗಿದರೂ ಶಿರಬಾಗಿ ನಮಿಸಿದರೂ ಚರಣದಲಿ ತನುಮನ ಒಪ್ಪಿಸಿದರೂ ಕರಗಲಿಲವು ಮನಸು ಕರುಣಪುಟ್ಟಲು ಕಾಣೆ ಭರವಸೆಯು ನಿನ್ನಲ್ಲಿ ಮೂಡಲಿಲ್ಲ 8 ಶಿರದಿ ಕರವಿಡಲಿಲ್ಲ ತೊರೆದೆಯೊ ಜರಿದೆಯೊ ವರಭಕ್ತಿ ಸಾಲದೊ ಗುರುವಿಕೆಯೊ ದೊರೆತನವೊ ಅರಹೊಟ್ಟೆ ಜೀವಿಸುತ ಅರಿಯದೆ ಮತ್ತೊಂದು ಇರುಳು ಹಗಲಾಲ್ಪರಿವ ತೆರವು ತೋರದೊ ಮನಕೆ 9 ಸರಿಯಲ್ಲ ಸರಿಯಲ್ಲ ಕರುಣಾಳುವೆಂಬುವೋ ಬಿರುದುಳಿವ ತೆರವಿಲ್ಲ ಬಿಂಕಪಟ್ಟರೆ ಈಗ ಕರೆದು ಮನ್ನಿಸೊ ಪಾಂಡುರಂಗವಿಠ್ಠಲ ದೇವ ವರ ಪುಂಡಲೀಕಗೆ ಒಲಿದದ್ದು ನಿಜವಾಗೆ 10 ಪರಿಪರಿಯ ಭಕ್ತರನು ಪೊರೆದದ್ದು ನಿಜವಾಗೆ ಹರಿದಾಸ ಸಂತತಿಗೆ ಮನೆದೈವ ನಿಜವಾಗೆ ಸರಿಯಿಲ್ಲದಾ ದೈವ ನೀನೆಂದು ನಿಜವಾಗೆ ಹೊರವೊಳಗೆ ಒಂದಾಗಿ ಕರಪಿಡಿದು ಸಲಹಿನ್ನು 11 ಗುರುಕೊಟ್ಟ ವರಬಲದಿ ಶರಣು ಪೊಂದಿದೆ ನಿನಗೆ ಚರಣದಲಿ ಬಿದ್ದಿರುವೆ ಪರಮ ಪುರುಷನೆ ದೇವ ಸ್ಮರಪಿತನೆ ಗೋಪಾಲಕೃಷ್ಣವಿಠ್ಠಲ ನಿನ್ನ ಸ್ಮರಣೆ ಮಾಡಿದ ಮೇಲೆ ಭವದ ಭಯ ಉಂಟೆ 12
--------------
ಅಂಬಾಬಾಯಿ
ಮೋದದಲಿರಬೇಕಮ್ಮ | ಸುಮ್ಮನೆ ನೀನು ಮೋದದಲಿರಬೇಕಮ್ಮ ಪ. ಮೋದ ಶ್ರೀ ಗುರುಗಳ ಚರಣ ಕಮಲವನ್ನು ಮೋದದಿಂದಾಶ್ರಯಿಸಿ ಸುಖದಲಿರಲಿಬೇಕು ಲೋಕದ ಜನಗಳ ನುಡಿಗಳ ಲೆಕ್ಕಿಸದೆ ಲೋಕವಂದ್ಯನ ಚರಣ ಕಮಲವ ಸ್ಮರಿಸುತ ಅ.ಪ. ಪರಮಾತ್ಮನ ಕೃಪೆಗೆ ಕಾರಣವಿದು ಗುರುಕರುಣದ ಬಲವು ಅರಿಯದ ಮನುಜರ ಬಿರುನುಡಿಗೆ ಮನ ಕೊರಗಿಸದಂದದಿ ಹರುಷಪಡಲಿಬೇಕು 1 ಎಚ್ಚತ್ತು ನಡಿಯಬೇಕು | ಶ್ರೀ ಗುರುಸೇವೆ ಇಚ್ಛೆಯಿಂ ಮಾಡಬೇಕು ತುಚ್ಛ ಮಾತುಗಳಿಗೆ ಮನಕೊಡದೆ ಹರಿ ಮೆಚ್ಚುವಂದದಿ ಗುರು ಇಚ್ಛೆಯನರಿತು ನಡೆದು 2 ವಂದನೆ ನಿಂದ್ಯಗಳ | ಮೋಕ್ಷಾರ್ಥಿಯು ಒಂದಾಗಿ ಭಾವಿಸುತ ಮಂದರೋದ್ಧರನ ಮಾಯಕೆ ಮನದಿ ಮೋದಿಸುತ ಮಂದರಂದದಿ ಮನುಜರಿಗೆ ತೋರುತಲಿದ್ದು 3 ಮಾನವ ಜನ್ಮ ಸಾಧನ ಜನ್ಮವಮ್ಮ ಸಾಧಾರಣವಲ್ಲ ಸಾಧು ಸಜ್ಜನಸಂಗ ಸಾಧಿಸಿ ದುಷ್ಕರ್ಮ ಛೇದಿಸಬೇಕಮ್ಮ 4 ಚಿಂತೆಯನಳಿಯಬೇಕು | ಶ್ರೀ ಗುರು ಕರುಣ ಅಂತರ ತಿಳಿಯಬೇಕು ಸಂತತ ಗೋಪಾಲಕೃಷ್ಣವಿಠ್ಠಲನ ಅಂತರಂಗದಿ ಭಜಿಸಿ ಮುಕ್ತಿ ಸಾಧಿಸಬೇಕು 5
--------------
ಅಂಬಾಬಾಯಿ
ಯತಿಗಳ ಸ್ತುತಿ ಮಧ್ವಮುನಿಯೆ ಎನ್ನ ಉದ್ಧರಿಸಿನ್ನ ಪ. ಸದ್ಗುರುವೆ ನಿನ್ನ ಪದ್ಮಪಾದಗಳಿಗೆ ಕರ ಮಣಿ ಅ.ಪ. ವರಕಲ್ಪ ಕಲ್ಪದಲಿ ಹರಿಯ ಮೆಚ್ಚಿಸಿ ಸಿರಿವರನಲಿ ಜನಿಸಿ ವಾಯುವೆಂದೆನಿಸಿ ಸುರರೆಲ್ಲ ಮೊರೆಯಿಡೆ ಹರಿಯವತರಿಸಿ ಹರಿಯ ಸೇವೆಗೆ ನೀ ಮಾರುತಿ ಎನಿಸಿ ಶರಧಿ ಲಂಘಿಸಿ ಉಂಗುರ ಸೀತೆಗೆ ಇತ್ತು ದುರುಳನ ಪುರ ಸುರಮುಖನಿಗರ್ಪಿಸಿದೆ 1 ಚಂದ್ರವಂಶದಲಿ ಬಂದ್ಯೊ ಬಲಶಾಲಿ ನಂದಕಂದನ ಲೀಲೆ ಅಂದ ಪಾಡುತಲಿ ಬಂದಿತು ಕಲಹ ಅಲ್ಲಿ ದ್ವಂದ್ವ ಭಾಗದಲಿ ಅಂದು ಕೌರವರಲಿ ನಿಂದ್ಯೊ ದ್ವೇಷದಲಿ ಇಂದುಮುಖಿಗೆ ಸೌಗಂಧಿಕ ಇತ್ತು ಕುರು ನಂದನ ವಂಶವನಂದು ಛೇದಿಸಿದೆ 2 ದುರುಳರೆಲ್ಲರು ಬಂದು ಕಲಿಯುಗದಿ ನಿಂದು ಹರಿಯು ನರನು ಒಂದು ಅರುಹಲಿಂತೆಂದು ಸುರರೆಲ್ಲ ಬಲುನೊಂದು ಕ್ಷೀರಾಬ್ಧಿಗೆ ಬಂದು ಸಿರಿವರ ಪೊರೆಯೆಂದು ಮೊರೆಯಿಡಲಂದು ಹರಿ ನಿನಗರುಹಲು ಧರೆಯಲ್ಲಿಗೆ ಬಂದು ಸುರ ಭೂ ಶ್ರೇಷ್ಠನುದರದಲಿ ಜನಿಸಿದೆ 3 ಪರಮಾಯಿಗಳ ಮತ ತರಿದು ಕೆಡಹುತ್ತ ಹರಿ ಸರ್ವೋತ್ತಮೆನುತ ಧರೆಯೊಳ್ ಸಾರುತ್ತ ತರತಮ್ಯ ಸತ್ಯವೆನುತ ಪಂಚಭೇದೆನುತ ಸಿರಿರಮಣಗೆ ನರಭೃತ್ಯನೆನ್ನುತ್ತ ಪರಿ ಬೋಧಿüಸಿ ದುರುಳರ ಛೇಡಿಸಿ ಸರಸಿಜಾಕ್ಷಗೆ ಬಲು ಸಮ್ಮತನೆನಿಸಿ 4 ವೈಷ್ಣವಾಗ್ರಣೀ ಲೀಲೆ ಪೇಳಲಳವಲ್ಲ ಜಿಷ್ಣುಸಖನ ಲೀಲೆ ನುಡಿಸೆನಗೆ ಸೊಲ್ಲ ಕಷ್ಟಪಡುತಿಹೆನಲ್ಲ ಕರುಣವೇಕಿಲ್ಲ ಶ್ರೇಷ್ಠನೆ ಗೋಪಾಲಕೃಷ್ಣವಿಠಲ ಇಷ್ಟು ತಿಳಿಸುತ ಅಷ್ಟದಳದಲಿ ಶ್ರೇಷ್ಠದಿ ಪೂಜಿಪ ಗುಟ್ಟು ತೋರೆನಗೆ 5
--------------
ಅಂಬಾಬಾಯಿ
ಯಂತ್ರೋದ್ಧಾರಕನೆ | ಪಾಲಿಸೊ ಯಂತ್ರೋದ್ಧಾರಕನೆ ಪ. ಸಂತತ ತವ ಪದಕ್ರಾಂತಳಾಗಿರುತಿರೆ ಇಂತು ನಿರ್ದಯವೇಕೊ ಸಂತಸದಲಿ ಪೊರೆ ಅ.ಪ. ಯತಿಗಳಿಂದ ಸಂಸ್ಥಿತನೆನಿಸುತ ಅ- ಪ್ರತಿಮ ಮಹಿಮ ಈ ಕ್ಷಿತಿಯೊಳು ನೆಲಸಿಹ 1 ತುಂಗ್ರಭದ್ರ ತೀರ ಮಂಗಳ ಮಹಿಮನೆ ಕಂಗೊಳಿಸೆನ್ನಂತರಂಗದಲಿ ನೆಲಸುತ 2 ಮಂತ್ರಿವರ್ಯ ಮಾಹಂತ ಹರಿಪ್ರಿಯ ಎಂತು ವ್ಯಾಸರಿಲ್ಲಿ ಯಂತ್ರದಿ ಬಿಗಿದರೊ 3 ಹನುಮ ಭೀಮ ಶ್ರೀ ಮುನಿ ಮಧ್ವಾರ್ಯನೆ ಸನುಮತದಲಿ ಎನ್ನ ಮನದಿಚ್ಛೆ ಸಲಿಸೊ 4 ಬೆಟ್ಟದೊಡೆಯ ಬಹು ನಿಷ್ಠೆಯೊಳ್ ಸ್ತುತಿಸುವೆ ಇಷ್ಟ್ಯಾಕೆ ತಡೆ ಹಂಪೆ ಪಟ್ಟಣವಾಸಿಯೆ 5 ಕಾಮಿತ ಫಲದನೆ ಕಾಮಿನಿಗುಂಗುರ ನೇಮದಿಂದಿತ್ತೆಯೊ ರಾಮನ ದೂತನೆ 6 ಎಷ್ಟು ಮಾನವೊ ಬೆಟ್ಟೆಲಿ ಜಪಮಣಿ ದೃಷ್ಟಿಸೊ ಗೋಪಾಲಕೃಷ್ಣವಿಠ್ಠಲ ದಾಸ 7
--------------
ಅಂಬಾಬಾಯಿ
ಯಾಕೆ ದಯಬಾರದೊ ಕಾಂತೇಶ ಪ್ರಾಣೇಶ ಸಾಕಲಾರದೆ ಪೋದೆಯಾ ಎನ್ನನು ಪ. ಏಕಚಿತ್ತದಿ ನಿನ್ನ ಚರಣ ನಂಬಿ ಬರಲು ಭಾರತೀಶ ಅ.ಪ. ತೊಳಲಿ ಬಳಲಿ ಸುಖ ಸುಳಿವೆಂಬೋದರಿಯದೆ ನಳಿನಾಕ್ಷನ ದಾಸ ನಿನ್ನ ಕೀರ್ತಿ ಇಳೆಯೆಲ್ಲ ಪೊಗಳಲು ಸಲಹುವನೆಂತೆಂದು ಬಳಿಗೆ ಬರಲು ಮನಕರಗದೆ ತಂದೆ 1 ಅಂದು ಕನಸಿನಲ್ಲಿ ಶಿರದಲ್ಲಿ ಕರವಿಟ್ಟೆ ಇಂದೆಲ್ಲಿ ಪೋಯಿತೊ ಆ ಕರುಣ ತಂದೆ ಮುದ್ದುಮೋಹನ ಗುರುಗಳ ವಚನವ ಇಂದು ಒಲಿದೆನ್ನ ಕಾಯೊ2 ವಿೂಸಲ ದಾಸ್ಯಕೆ ಆಶೆ ಮಾಡಿದೆನೆಂದು ದೋಷವೆಣಿಸುವರೆ ಎನ್ನಲಿ ನೀ ಶೇಷಶಯನನೆ ಬಲ್ಲೆನೊ ಇದರ ಮರ್ಮ ಘಾಸಿಗೊಳಿಸದೆ ನೀ ಅಭಯವನೀಯೊ 3 ರಾಮದಾಸ್ಯವ ಬಯಸಿ ನೇಮದಿಂದಲಿ ಇದ್ದು ರಾಮನಾಗಮ ಕಂಡು ಎರಗಿ ನಿಂದು ಪತಿ ಪಾದ ದಾಸ ಸಿದ್ಧಿಯ ಪಡೆದು ಭೂಮಿಯೊಳು ಖ್ಯಾತನಾದೆಯೊ ಆಂಜನೇಯ 4 ಚಿತ್ತಿದಿ ಕೃಷ್ಣನ ದಾಸತ್ವ ಸಾಧಿಸಿ ಮತ್ತೆ ಮುನಿಯಾಗಿ ಗ್ರಂಥವ ರಚಿಸಿ ಚಿತ್ತದಿ ಗೋಪಾಲಕೃಷ್ಣವಿಠ್ಠಲನ ಪಾದ ನಿತ್ಯದಿ ಭಜಿಪೆ ನೀ ಮತ್ತೆನ್ನ ಕಾಯೊ 5
--------------
ಅಂಬಾಬಾಯಿ
ಯಾಕೆ ದಯವುಬಾರದು ಗೋಪಾಲಕೃಷ್ಣಾ ಪ ಕರುಣನಾದ ದೇವ ಅ.ಪ ಬಿಡದಾನಂದಾದಿ ಇನ್ನು ಇಂದಿರೆ ರಮಣ 1 ನಿನ್ನ ಧ್ಯಾನಾವೇಗತಿ ಎನ್ನುತ ನೀ ಎಂದೆಂದಿಗಾಪ್ತನು ಛಲದಾನಿ ಇರುವದು ನಿನಗೆ ಎನ್ನ ದಿವ್ಯದಾನಿಗಳರಸ 2 ತ್ರಿಜಗವಂದಿತಧೊರಿಯೆ ಸದ್ಗುಣಶೀಲ ಸುಜನರ ಭಾಗ್ಯನಿಧಿಯೆ ಜಲದೊಳು ಯಿ ----- ಸುರನುತ-----ತ ಪರಾಕ್ರಮ 3
--------------
ಹೆನ್ನೆರಂಗದಾಸರು
ಯಾಕೆನಗೆ ವೈರಾಗ್ಯ ಪುಟ್ಟಲಿಲ್ಲವೊ ದೇವ ಏನು ಪಾಪಿಯೊ ಜಗದಲಿ ಪ. ಸಾಕು ಸಾಕೀ ವಿಷಯ ಚಿಂತನೆಯ ಬಿಡಿಸಿನ್ನು ಲೋಕನಾಯಕನೆ ಸ್ವಾಮಿ ಅ.ಪ. ಅಸನವಸನಗಳಿಗೆ ಆಲ್ಪರಿದು ಅನ್ಯರಿಗೆ ಬಿಸಜನಯನನೆ ಕಾಲಹರಣೆಯನೆಗೈದೆ ವಸುದೇವಸುತ ನಿನ್ನ ಅರಘಳಿಗೆ ನೆನೆಯದಲೆ ಹಸಿವು ತೃಷೆಯಿಂ ಬಳಲಿ ಬೆಂಡಾದೆನಯ್ಯಾ 1 ಇಂದ್ರಿಯಗಳೆಲ್ಲವನು ಬಂಧನದೊಳಗೆ ಇರಿಸಿ ಇಂದಿರೇಶನೆ ನಿನ್ನ ಧ್ಯಾನಿಸದಲೆ ಮಂದಮತಿಯಿಂದ ನಾ ಮಮಕಾರದಲಿ ಬಿದ್ದು ಮಂದ ಜನರೊಡನಾಡಿ ಮಾಯಕೊಳಗಾದೆ 2 ಭಕ್ತಿಮಾರ್ಗವ ಕಾಣೆ ಜ್ಞಾನ ಮೊದಲೆ ಅರಿಯೆ ಮುಕ್ತಿಗೊಡೆಯನೆ ಎನ್ನ ಮುದದಿಂದ ಸಲಹೊ ಯುಕ್ತಯುಕ್ತಿಗಳರಿಯೆ ಸುತ್ತುತಿಪ್ಪೆನೊ ಭವದಿ ಶಕ್ತ ನೀ ಒಳಗಿದ್ದು ಎನ್ನ ಕಾಡುವರೆ 3 ಕರ್ಮಮಾರ್ಗವ ತೊರೆದು ನಿರ್ಮಲದಲಿ ನಿನ್ನ ಒಮ್ಮೆಗಾದರೂ ಮನದಿ ನೆನೆಯಲಿಲ್ಲ ರಮೆಯರಸನೆ ಶ್ರೀ ಗುರುಗಳಂತರ್ಯಾಮಿ ಕರ್ಮತ್ರಯಗಳ ಕಡಿದು ಕರುಣದಲಿ ಕಾಯೊ4 ಪಾಪರಹಿತನೆ ಎನ್ನ ಪಾಪ ಕರ್ಮಗಳೆಲ್ಲ ಪರಿ ನುಡಿದೆ ನೀ ಪರಿಹರಿಸಿ ಕಾಯೋ ಗೋಪಾಲಕೃಷ್ಣವಿಠ್ಠಲನೆ ನೀನಲ್ಲದಲೆ ಈ ಪಾಪಿಯನು ಕಾಯ್ವರಾರೊ ಶ್ರೀ ಹರಿಯೆ5
--------------
ಅಂಬಾಬಾಯಿ
ಯಾಕೆನ್ನನಿಲ್ಲಿಗೆ ಎಳೆ ತಂದ್ಯೊ ಹರಿ ತಪ್ಪೇನನೆಸಿಗಿದೆನೊ ಪ. ಜೋಕೆಯಿಂದಲಿ ಎನ್ನ ಕಾಯಬೇಕಲ್ಲದೆ ನೂಕಿದರೆನ್ನನು ಸಾಕುವರ್ಯಾರೊ ದೊರಿ ಅ.ಪ. ಯಾರಿಗೇನೆಸಗಿದೆ ಆರ ನಾ ದೂಷಿಸಿದೆ ಆರ ನಾ ನಿಂದಿಸಿದೆನೊ ಕಾರದಿ ನೋಡಿದೆನೊ ಈ ರೀತಿ ನೊಂದೆನು 1 ವಿಧಿ ಬರಹದೊಳಿನ್ನು ವಿಧಿಪಿತ ನಿನ್ನ ಕಾಣಲಿಲ್ಲ ಮದಗರ್ವ ಬಿಡಿಸೆನ್ನ ಸದಮಲ ಹೃದಯದಿ ಪದ ಪದುಮವ ತೋರಿ ಉದ್ಧರಿಸೆನ್ನನು 2 ಸೃಷ್ಟಿಕರ್ತನೆ ಕೇಳೊ ಕಷ್ಟವಪಡಲಾರೆ ದೃಷ್ಟಿಲಿ ನೋಡಿ ಕಾಯೊ ಎಷ್ಟು ಬೇಡಲೊ ನಾನು ಬೆಟ್ಟದೊಡೆಯ ಹರಿ ವೃಷ್ಣೀಶ ಗೋಪಾಲಕೃಷ್ಣವಿಠ್ಠಲ ದೊರಿ3
--------------
ಅಂಬಾಬಾಯಿ
ಯಾವ ಪಾಪಿಯ ದೃಷ್ಟಿ ತಾಕೀತೋ ಗೋಪಾಲಕೃಷ್ಣಗೆ ಪ. ಪಾಲು ಮೊಸರು ವೊಂದನಾದರು ಯಾವ ಕಾರಣದಿ ಕುಡಿಯಲೊಲ್ಲೆ ಪೇಳೋ ಯೆನಗೆ ಬಾಲಾ ಭೂಪಾಲ ಗುಣಶೀಲಾ 1 ದಾವಪುಣ್ಯವತಿಯ ಕಣ್ಣು ಹತ್ತಿತೋ ನೆಲುವಿಗಿಟ್ಟ ಬೆಣ್ಣೆಯ ಮುಟ್ಟುವುದಿಲ್ಲಾ ಬಟ್ಟಲಲ್ಲಿಡುವೆವೋ 2 ಕಪ್ಪವಾದರು ಇಡುವೇನು ಬಾ ಅಪ್ಪ ವೇಣುಗೋಪಾಲಾ ತುಪ್ಪ ಸಕ್ಕರಿ ನೀಡುವೆನು ಚಪ್ಪರಿಸು ನೋಡುವೆನು ಕಾಳಿಮರ್ಧನಕೃಷ್ಣಗೆ 3
--------------
ಕಳಸದ ಸುಂದರಮ್ಮ
ರಂಗನಂಗದ ಸಂಗ ಸುಖ ನೋಡ ಅಂಗನೆಲಕುಮಿಯ ಸಂಗದುರ್ಲಭವೆಈಅಂಗನೆಯರು ಮಾಡಿದ ಸುಕೃತವಂತೆ ಪ. ಗುಂಗುರಗೂದಲ ಮ್ಯಾಲೆ ಭೃಂಗದ ಮರಿಗಳು ರಂಗನ ಮುಖದ ರಸವನೆರಂಗನ ಮುಖದ ರಸವನೆ ಸÀವಿದುತಮ್ಮಂಗವ ಮರೆತು ಕುಳಿತಾರೆ ಬ್ರಹ್ಮಾದಿ ವಂದ್ಯ1 ಪಂಕಜನಾಭಗೆ ವಂಕಿ ಬಾಪುರಿ ಇಟ್ಟುಕಂಕಣ ಕಡಗ ಮೊದಲಾಗಿಕಂಕಣ ಕಡಗ ಮೊದಲಾಗಿ ರಂಗಗೆಅಲಂಕಾರ ಮಾಡಿ ಕೆಲದೆಯರು2 ಪಂಚಬೆರಳಿಗೆ ತಕ್ಕ ಮಿಂಚು ಮುದ್ರೆಗಳಿಟ್ಟುಪಂಚರತ್ನದಲಿ ರಚಿಸಿದಪಂಚರತ್ನದಲಿ ರಚಿಸಿದ ವಡ್ಯಾಣಕೆಂಚೆಯರು ಇಟ್ಟು ನಡುವಿಗೆ 3 ಶ್ರೀದೇವಿ ಅರಸಗೆ ಕ್ಯಾದಿಗೆ ಮುಡಿಸುತಊದಿನ ಕಡ್ಡಿಪರಿಮಳಊದಿನ ಕಡ್ಡಿಪರಿಮಳ ಮೂಸುತಮೋದ ಬಡುವವರು ಕಡೆಯಿಲ್ಲ4 ನೀಲವರ್ಣನ ಮುಂದೆ ಸಾಲು ದೀವಿಗೆಯಿಟ್ಟುಮ್ಯಾಲೆ ಚಾಮರವ ಸುಳಿಸುತಮ್ಯಾಲೆ ಚಾಮರವ ಸುಳಿಸುತಶಿರಮ್ಯಾಲೆ ಪೂಮಳೆಯ ಗರೆದಾರು 5 ಚಲ್ವ ರಂಗನ ಮುಂದೆ ಜಲಪಾತ್ರೆಯನ್ನಿಟ್ಟುಎಲೆಅಡಕಿ ತಬಕ ಫಲಗಳು ಎಲೆಅಡಕಿ ತಬಕ ಫಲಗಳ ತಂದಿಟ್ಟುಕೆಲದೆಯರು ಕೈಯ ಮುಗಿದಾರು 6 ಅಪಾರ ಮಹಿಮಗೆ ಧೂಪಾರತಿಯನೆತ್ತಿಭೂಪರಾಮೇಶ ಸಲುಹೆಂದುಭೂಪರಾಮೇಶ ಸಲುಹೆಂದುಗೋಪಾಲಕೃಷ್ಣಯ್ಯನ ಎದುರಲಿ ನಿಂತಾರು 7
--------------
ಗಲಗಲಿಅವ್ವನವರು
ರಂಗನಾಥನ್ನ ಈ ಕಂಗಳಿಂದಲಿ ಕಂಡು ಹಿಂಡು ಪ. ಮಂಗಳಾತ್ಮಕ ದೇವ ಮಮ ಸ್ವಾಮಿ ಸಲಹೆಂದು ಅಂಘ್ರಿಗಳಿಗೆರಗಿ ನುತಿಪೇ ಸ್ತುತಿಪೇ ಅ. ಮಾಂಡವ್ಯರಿಗೆ ವಲಿದು ಶ್ರೀನಿಕೇತನ ದೇವ ಗಂಡಕೀಶಿಲೆ ರೂಪದಲ್ಲಿ ಅಂಡಜವಾಹನನು ಉದ್ಭವಿಸಿ ಸ್ವರ್ಣಾದ್ರಿ ಎಂಬ ಸುಕ್ಷೇತ್ರದಲ್ಲೀ ಹಿಂಡುಭಕ್ತರ ಸೇವೆ ಕೈಯಕೊಳುತ ಬದಿಯಲ್ಲಿ ನಿಂದು ವಿಗ್ರಹ ರೂಪದಲ್ಲೀ ಕಂಡು ಪುಳಕಾಂಕಿತದಿ ಕರುಣ ಮೂರ್ತಿಯ ನುತಿಸಿ ಕೊಂಡಾಡಿ ದಣಿದೆ ನಿಂದೂ ಇಂದೂ 1 ಶಂಖಚಕ್ರಾಂಕಿತದ ಚತುರ್ಭಜವು ಶ್ರೀವತ್ಸ ಪಂಕಜಾಕ್ಷಿಯರುಭಯದಿ ಶಂಕೆಯಿಲ್ಲದ ಭಕ್ತರಿಗೆ ವಲಿವ ಸೌಂದರ್ಯಾ ಲಂಕಾರ ಉಡಿಗೆ ಮುದದಿ ಪಂಕಜಾಸನ ಮುಖ್ಯದಿವಿಜಗಣ ಸೇವಿತನು ಕಿಂಕರರಿಗೊಲಿವ ದಯದೀ ವಂಖಿ ಬಾಪುರಿ ತೋಳು ಕಡಗ ಕಾಲ್ಗೆಜ್ಜೆಗಳು ಕಂಕಣ ಕಿರೀಟ ನಿಟ್ಟಾ ದಿಟ್ಟಾ 2 ಆಗಮವ ಅಜಗಿತ್ತು ಸುರರಿಗಮೃತವಿತ್ತು ಭೂದೇವಿ ಭಯ ಬಿಡಿಸಿದಾ ಬೇಗ ಕಂಬದಿ ಬಂದು ಮಗುವ ರಕ್ಷಿಸಿ ಬಲಿಯ ಯಾಗದಲ್ಲಿ ಭೂ ಬೇಡಿದಾ ನೀಗಿ ಕ್ಷತ್ರಿಯ ಕುಲ ದಶಶಿರಿನ ಸಂಹರಿಸಿ ಮಾಗಧನ ಬಲವ ಮುರಿದಾ ಅಂಬರ ಕಲ್ಕಿ ಗೋಪಾಲಕೃಷ್ಣವಿಠಲಾ ಮಾಗಡಿ ತಿರುಮಲೇಶಾ ಶ್ರೀಶಾ 3
--------------
ಅಂಬಾಬಾಯಿ
ರತ್ನದೊಳಗಿದು ರತ್ನ ನವರತ್ನಗಳೊಳಗಿದು ರತ್ನ ಪ ಚಿತ್ತಜಪಿತನೆಂಬ ರತ್ನ ನಮ್ಮ ನಿತ್ಯಮುಕ್ತರಂಗರತ್ನ ಅ.ಪ ಭಕ್ತಪಾಲಕನೆಂಬ ರತ್ನ ಸತ್ಯಾಸಕ್ತ ವರದನೆಂಬ ರತ್ನ ಮುಕ್ತಿದಾಯಕ ರಾಮರತ್ನ ನಮ್ಮ ಯುಕ್ತಿಭರಿತ ಕೃಷ್ಣರತ್ನ1 ಗೋಪಾಲಕೃಷ್ಣನೆಂಬ ರತ್ನ ವರತಾಪಸವಿನುತ ಮಾರತ್ನ ಶ್ರೀಪತಿಯೆಂಬ ಜೀವರತ್ನ ನಮ್ಮ ಪಾಪವಿನಾಶಕರತ್ನ 2 ಚಾರು ವೇದದೊಳಿಹ ರತ್ನ ನಮ್ಮಶ್ರೀರಮಣ ಎಂಬರತ್ನ 3 ಕರಿರಾಜವರದ ಸುರತ್ನ ನಮ್ಮ ಕರುಣಾಕರಯೆಂಬ ರತ್ನ ಶರಣ ಜನರ ಹಸ್ತರತ್ನ ನಮ್ಮ ತರಳಧ್ರುವನ ಕಾಯ್ದ ರತ್ನ 4 ಪ್ರೇಮರಸಾನ್ವಿತ ರತ್ನ ಇದು ಶ್ರೀಮಾಂಗಿರಿರಂಗರತ್ನ ನಮ್ಮ ರಾಮದಾಸಾರ್ಚಿತ ರತ್ನ5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್