ಒಟ್ಟು 3697 ಕಡೆಗಳಲ್ಲಿ , 112 ದಾಸರು , 1938 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಚ್ಚರ ಹಿಡಿ ಮನವೇ | ನಿಚ್ಚದಿ ಮೆಚ್ಚಿನ ಅಚ್ಚುತನಂಘ್ರಿ ಪ ಹಾಡುತಾ ನೋಡುತಾ ನೀಡದೊಳಾಡುತಾ ನಡೆ ನುಡಿಯೊಳು ಬಿಡ ದಡಿ ಗಡಿಗೊಮ್ಮೆ 1 ಹೇಳುತ ಕೇಳುತ ಮೇಳದಿ ಬಾಳುತ | ಕಳವಳದಳುಕಿನ ಡಳಮಳದೊಳಗೆ 2 ಬಂದದ ಛಂದವಿಂದೇ ಹೊಂದು ಮುಕುಂದನೆಂದು | ತಂದೆ ಮಹೀಪತಿ ಕಂದಗ ಬೋಧಿಸಿದ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಚ್ಚರ ಹೇಳುವೆ ನಾನೀಗ ನಿನಗೆ ಎಚ್ಚರಿಕೆಚ್ಚರಿಕೆಸಚ್ಚಿದಾನಂದನೆ ನೀನೆಂದು ತಿಳಿ ನಿನ್ನ ಎಚ್ಚರಿಕೆಚ್ಚರಿಕೆ ಪ ಈಷಣವೆಂದೆಂಬ ಕಾಡಿನೊಳಗೆ ಹೊಕ್ಕಿ ಎಚ್ಚರಿಕೆಚ್ಚರಿಕೆದೋಷಕಾರಿಗಳು ಇಂದ್ರಿಯನಾಯ್ಗಳು ಎಳೆದಾವು ಎಚ್ಚರಿಕೆಚ್ಚರಿಕೆ 1 ಅಷ್ಟಮದವೆಂಬ ಆನೆ ಕೈಗೆ ಸಿಕ್ಕಿ ಎಚ್ಚರಿಕೆಚ್ಚರಿಕೆದುಷ್ಟ ಪಂಚಕ್ಲೇಶದ ಪೊದೆಗೆ ಸಿಲುಕೀಯೆ ಎಚ್ಚರಿಕೆಚ್ಚರಿಕೆ2 ವ್ಯಸನಗಳೆಂಬ ಕುದುರೆಯ ಕಾಲೊಳಾದೀಯೆ ಎಚ್ಚರಿಕೆಚ್ಚರಿಕೆದುಶ್ಮನರಾರ್ವರ ಕಣ್ಣಿಗೆ ಬಿದ್ದೀಯೆ ಎಚ್ಚರಿಕೆಚ್ಚರಿಕೆ 3 ತಾಪತ್ರಯದ ಹಳ್ಳದಿ ಹರಿದುಹೋದೀಯೆ ಎಚ್ಚರಿಕೆಚ್ಚರಿಕೆಪಾಪವೆಂಟು ಪಾಶವೆಂಬ ಉರುಲಿಗೆ ತಗುಲೀಯೆ ಎಚ್ಚರಿಕೆಚ್ಚರಿಕೆ 4 ಸಂಸಾರ ನಂಬಲು ಕೆಟ್ಟುಹೋಗುವೆ ಎಚ್ಚರಿಕೆಚ್ಚರಿಕೆಹಂಸ ಚಿದಾನಂದ ಗುರುಹೊಂದೆ ಕಡೆಹಾಯುವೆ ಎಚ್ಚರಿಕೆಚ್ಚರಿಕೆ5
--------------
ಚಿದಾನಂದ ಅವಧೂತರು
ಎಚ್ಚರಾದರು ದೇವಗಣರಿಂದು ನಮ್ಮ ಲಕ್ಷ್ಮೀರಮಣ ಕೃಷ್ಣ ರಥವನೇರುವನೆಂದು ಪ. ಶಿಂಶುಮಾರ ಚಕ್ರದಂಶಮಕರ ತಿ- ಗ್ಮಾಂಶು ಸಂಕ್ರಮಿಸುವ ಸಮಯದಲಿ ಕಂಸಮರ್ದನ ಯದು ವಂಶಾಬ್ಧಿ ಚಂದ್ರ- ವಿಪಾಂಗಗಮನನಾಗಿ ವೀಧಿಗೆ ಬಹನೆಂದು 1 ಕಂದನ ಸಂಭ್ರಮ ತಂದೆಗೆ ಸುಖಕರ- ವೆಂದು ಪೇಳುವ ಮಾತ ನಿಜವ ದೋರಿ ಮಂದರಧರ ಮನ್ಮಥನ ಕೇತು ಬೆಳಗುವಾ- ನಂದದಿ ರಥವೇರುತ್ತಿಂದು ಬರುವನೆಂದು 2 ಮೋಕ್ಷದಾಯಕ ಕಮಲಾಕ್ಷ ಕೃಷ್ಣನ ಸ- ತ್ಕಟಾಕ್ಷ ಸಂಪಾದಿಪಪೇಕ್ಷೆಯಲಿ ತ್ರ್ಯಕ್ಷಾಧ್ಯಕ್ಷಲೋಕಾಧ್ಯಕ್ಷರೆಲ್ಲರು ಕೂಡಿ ಪಕ್ಷಿವಾಹನನನ್ನು ಈಕ್ಷಿಪ ತವಕದಿ 3 ಪೃಥೆಯ ಕುಮಾರನ ರಥವ ನಡಸುತತಿ- ರಥರನು ಗೆಲಿಸಿ ಸಾಮ್ರಾಜ್ಯವಿತ್ತ ಕಥೆಯ ಕೇಳ್ಪರ ಮನೋರಥಗಳ ಕೊಡುವ ಮ- ನ್ಮಥನ ಜನಕ ಮುಕ್ತಿ ಪಥವ ತೋರುವನೆಂದು 4 ಸಿದ್ಧಿ ವಿಘ್ನಮುಖ ದೋಷಭೇಷಜ ಭಕ್ತಿ ಸಿದ್ಧ ಜಪರಿಗೆ ಸಿದ್ಧಿಸುವನೆಂದು ಮಧ್ವಮುನಿಯು ತಂದಿಲ್ಲಿರಿಸಿ ಪೂಜಿಸಿದಂಥ ಸಿದ್ಧಾಂತವೇದ್ಯನಿರುದ್ಧನಿಲ್ಲಿಹನೆಂದು 5 ಧಾರುಣಿಯೊಳಗಿನ ವಿಷ್ಣುಭಕ್ತರ ಸಂಘ ಸೇರಿ ಸಂತೋಷದಿ ಜಯವೆನಲು ಪಾರಿವ್ರಾಜರು ಕೂಡಿ ಪರತತ್ವ ನುಡಿಯೆ ಸ- ರ್ಪಾರಿಯನೇರಿ ಸಮೀರೇಡ್ಯಬಹನೆಂದು 6 ಮಾಯಿಜನರ ಮುರಿದೊತ್ತುತ ತತ್ವರ- ಸಾಯನ ಸುಧೆಯ ಸಜ್ಜನರಿಗಿತ್ತು ವಾಯುಮುನಿಯು ಪ್ರತಿಷ್ಠೆಯ ಗೈದ ಪುರುಷಾರ್ಥ ದಾಯಕ ವೆಂಕಟರಾಯನೀತನೆಯೆಂದು 7
--------------
ತುಪಾಕಿ ವೆಂಕಟರಮಣಾಚಾರ್ಯ
ಎಚ್ಚರಿಕೆ ಎಚ್ಚರಿಕೆ ಅಚ್ಚುತ ಮೆಚ್ಚನು ಎಚ್ಚರಿಕೆ ಪ. ಇಚ್ಛಿಸದಿಹ ಸುಖ ಸ್ವಚ್ಛ ಭಕುತಿಯಲಿ ಹರಿ ಇಚ್ಚೆಯಲಿರು ಮನವೆಅ.ಪ. ಹಗಲು ಹಸಿ ಮುಂದಿರುಳು ನಿದ್ರೆ ಹಗೆಯಹುದೆಂದು ಬಗೆಯದೆ ನೀ ಜಗದೊಡೆಯನು ಸಿಗ್ಯಮಿಗೆ ಧ್ಯಾನಿಸದೆ ಅಘ ಪೋಗುವುದೆ ಮನವೆಚ್ಚರಿಕೆ 1 ಯಾಕೆಂತು ನೀ ಪರರ ಯೊಚಿಸುವೆ ನಿನ ಸಾಕುವನ್ಯಾರೆಂದು ಯೋಚಿಸದೆÉ ಆ ಕೈವಲ್ಯಾಧಿಪನೆಂದು ತಿಳಿ ಅ ನೇಕ ರೂಪಿಲಿಹ ಎಚ್ಚರಿಕೆ 2 ಪರಸಖನ ಎನಗೆ ಹರಿಯೆಂದ ತರಳನ ಸಲಹಿತು ನಾರಾಯಣ ನಾಮ ಗರುಡಗಮನ ಶ್ರೀ ಶ್ರೀನಿವಾಸನೆ ನಿರುತ ಮರೆಯದಿರು ಮನವೆಚ್ಚರಿಕೆ 3
--------------
ಸರಸ್ವತಿ ಬಾಯಿ
ಎಚ್ಚರಿಕೆ ಎಚ್ಚರಿಕೆ ಎಲೋ ದೇವ | ಎಚ್ಚರಿಕೆ ಎಚ್ಚರಿಕೆ | ಅಚ್ಚ ಕಲ್ಯಾಣ ಮೂರುತಿ ತಿರುವೆಂಗಳಾ ಪ ಅಜ ದ್ವಿಜಗಜ ಅಜಾಮಿಳ ಪರಿಪಾಲನೆಯಾ | ದ್ವಿಜ ರಾಜಾಂಗಾ ಗಂಗಜ ಭಕ್ತವರದನೆಯಾ | ಗಜ ಕುಜ ದನುಜ ಭೂ ಭುಜರ ಸಂಹಾರನೆಯಾ | ಪಂಕಜ ಹೃದಯಾರ್ಕನೆಯಾ1 ಪರಮೇಷ್ಠಿ ವಂದನೆಯಾ | ಶರಧಿ ತಾರಾ ಕರುಗಳ ಕಾಯಿದನೇಯಾ | ಎರಡೇಳು ಲೋಕ ಪೊರೆವಾ ಭಾರಣ ಹರಿಯಾ | ಶರಣು ಹೊಕ್ಕೆನು ಎನ್ನ ಮೊರೆ ವಿಚಾರಿಸೊಯಾ 2 ಜಯ ಜಯಾ ಚಿತ್ತಾವಾಧಾರು ಪರಾಕ್ರಮಯಾ | ಭಯ ನಿವಾರಣ ನಿಜ ಭಂಟರಿಗೆ ಬಂಟಯಾ | ನಯ ಮೂರುತಿ ನಮ್ಮ ವಿಜಯವಿಠ್ಠಲರೇಯಾ ಯಾ | ತ್ರಿಯಗುಣ ವಿರಹಿತ ಶೇಷಗಿರಿವಾಸಯಾ 3
--------------
ವಿಜಯದಾಸ
ಎಚ್ಚರಿಕೆಚ್ಚರಿಕೆ ಮನವೆ ಇನ್ನು | ಎಚ್ಚರಿಕೆಚ್ಚರಿಕೆ ಯಮನ ಪುರದ ಬಾಧೆ ಪ ಕಿಚ್ಚನಾದರು ಕೇಳಿ ದುಶ್ಚಿಂತನ ಬಿಡು ಅ.ಪ ಗಂಡ ಅತ್ತೆ ಮಾವ ಮೈದುನರ ಬೈವರ | ಖಂಡ ತುಂಡನೆ ಮಾಡಿ ಖಂಡವ ಕೊಯಿದು | ಕಂಡದೊಳಗೆ ಬೇಯ್ಸಿ ದಿಂಡುಗೆಡಹಿ ಕಟ್ಟಿ | ಮಂಡೆಯ ಒಡೆದು ಡಂಡದಿ ಶಿಕ್ಷಿಸಿ | ಹಿಂಡಿ ಹಿಪ್ಪೆಯ ಮಾಡಿ ಕೊಂಡೊಯ್ದು ಅಗ್ನಿಯ ಕುಂಡವ ಹೋಗಿಸುವರೊ-ಎದೆಯ ಮೇಲೆ | ಗುಂಡನೆ ಹೊರಿಸುವರೊ-ಬಾಯೊಳಗೆ | ಕೆಂಡವ ಸುರಿಸುವರೊ-ಕೋಟಿ ಜನ್ಮ ಚಂಡಾಲ ಯೋನಿಯಳಿಟ್ಟು ಬಾಧಿಸುವರೊ 1 ಉತ್ತಮ ಗುರು ಹಿರಿಯರುಗಳ ಬೈವರ | ತಿತ್ತಿಯ ಸುಲಿದು ಕತ್ತರಿಪ ಬಾಚೆಯ ತಂದು | ಕೆತ್ತಿ ಶರೀರಕ್ಕೆ ಹತ್ತೊ ನೀರನೆ ಚೆಲ್ಲಿ | ನೆತ್ತಿಯ ಕೊರೆದು ಖಾರವನೊತ್ತಿ ಹಾವಿನ ಹುತ್ತವ ಹೊಗಿಸಿ ವಿಷವನಿತ್ತು ಕೈ ಕಾಲು | ಕಿತ್ತು ಹೊಟ್ಟೆಯ ಕೊಯ್ವರೊ ಬೊಬ್ಬಿರಿ | ಯುತ್ತುರುಳು ಹಾಕುವರೊ ಬೆನ್ನೊಳಗೇ | ಎತ್ತಿ ಕರುಳ ತೆಗೆವರೊ ದೊಡ್ಡ ಬೆಟ್ಟ | ಹತ್ತಿಸಿ ತಲೆಕೆಳಗಾಗಿ ನೂಕಿಸುವರೊ 2 ಪರಧನ ಪರಸತಿ ಪರನಿಂದೆಗೆಳೆವರ | ಮರುಳುವ ಮರಳಿನೋಳ್ ಹೊರಳಿಸಿ ಅಸ್ಥಿಯ | ಮುರಿದು ಮುಟ್ಟಿಗೆ ಮಾಡಿ ಉರೆದ ಗುಂಡಿಗೆ ಸೀಳಿ | ಜಿಹ್ವೆ ಕೊರೆದು ತೈಲದೊಳಗೆ | ಅರಿವೆಯೆದ್ದಿ ಮೈಗೆ ಉರಿಯ ಸುತ್ತಲಿಕ್ಕೆ | ಉರವಣಿಸು ಕುಣಿಸುವರೊ-ಹೆರೆದಂಬಿಗೆ | ಗುರಿಮಾಡಿ ನಿಲಿಸುವರೊ ಉಕ್ಕಿನ ಕಂಭ | ಕ್ಕೊರಗಿಸಿ ನಿಲಿಸುವರೊ ಶೂಲಕೆ ಹಾಕಿ | ಎರಡು ಕಾಲೆಳೆದು ಕಾವಲಿ ಮೇಲೆ ನಿಲಿಸೀರೊ 3 ಹೆಣ್ಣುಮಾರಿ ಹೊನ್ನು ಕಟ್ಟಿದ ಮನುಜರ | ತುಂಬಿ | ಸುಣ್ಣದೊಳಗೆ ಹೂಳಿ ಜನ್ಮ ಕಳೆದು ಶಿರ | ವಣ್ಣಿಕಲ್ಲನೆ ಆಡಿ ಇನ್ನು ಉಕ್ಕಿನ ಕಾದ- | ಎಣ್ಣೆಯ ಸುರಿದು ನೀರನ್ನೆರದು ನರಮಾಂಸ- | ಉಣ್ಣೆಂದು ತಿನಿಸುವರೊ-ತಿತ್ತಿಯನಿಕ್ಕಿ | ಹಣ್ಣಣ್ಣು ಮಾಡುವರೊ-ಅಸೀಪತ್ರಾ- | ರಣ್ಯವ ಹೊಗಿಸುವರೊ-ಕ್ಷುಧೆಯೆನ್ನೆ | ತುಂಬಿ ಕುಟ್ಟಿ ಮೆಲ್ಲಿಸುವರೊ4 ವಾಸುದೇವನ ವಾಸರದಲ್ಲಿ ಉಂಬರ | ಹಾಸುಗಲ್ಲಿನ ಮೇಲೆ ಬೀಸಿ ಅಪ್ಪಳಿಸಿ ಆ- | ಕಾಶಕ್ಕೊಗೆದು ಖಡ್ಗ ರಾಸಿಯೋಳ್ ಬೀಳಲು | ಕೇಶ ಪಿಡಿದು ಕೆಡಹಿ ಘಾಸಿಸಿ ಬಾಯೊಳು | ತುಂಬಿ | ನಾಸಿಕ ಕೊಯ್ಸುವರೋ-ಕೀಸಿಸಿ ಗೂಟ | ಹೇಸದೆ ಬಡಿಸುವರೊ ಹಂದಿಯಂತೆ | ಈ ಶರೀರ ಸುಡಿಸವರೊ-ತಮಸಿನೊಳು | ಏಸು ಜನ್ಮಕೆ ಗತಿಯಲ್ಲವೆನಿಸುವರೊ 5 ಎಲ್ಲ ಒಂದೇ ಎಂಬ ಪಂಚ ಮಹಾಪಾತಕಿಯ | ಹಲ್ಲನ್ನು ಮುರಿದು ಗಂಟಲ ಶೀಳಿ ಅಂಗುಳಿಗೆ | ಮುಳ್ಳನ್ನು ತಂದೂರಿ ತಪ್ತ ಲೋಹದ ಮೇಲೆ | ಕುಳ್ಳಿರಿಸಿ ಕೊಡಲಿಯೊಳ್ ಎಲ್ಲವನು ಕಡಿದು | ಕೊಲ್ಲ ಬಡಿದು ಅಂಬಿನಲಿ ಚುಚ್ಚಿ ರಕ್ತ- | ಚೆಲ್ಯಾಡಿ ಬಗೆಯುವರೊ-ಉರಿಯ ಕೊಂಡ- | ದಲ್ಲಿ ಮುಳುಗಿಸಿಬಿಡವರೊ-ಹೊತ್ತು ಒಯ್ದು | ಕಲ್ಲುಗಾಣಕೆ ಹಾಕುವರೋ-ಕುಂಭೀಪಾಕ | ದಲ್ಲಿ ಕುದಿಸಿ ಬೇಯ್ಸಿ ಬೆಂಡು ಮಾಡುವರೊ6 ಒಂದು ನೋಡಿದರೊಂದು ಅಧಿಕ ಪಾಪಗಳಿವೇ- ನೆಂದು ಪೇಳಲಿ ಎನಗೊಂದಾದರಳವಲ್ಲ | ಹಿಂದಿನ ದುರ್ವಾರ್ತೆ ಮರೆದು ಮುಂದಾದರು | ನಂದತೀರ್ಥರ ಪಾದಾನಂದದಿ ಭಜಿಸಿ ಪು | ರಂದರನನು ಸರಿಸಿ-ವಿಜಯವಿಠ್ಠಲ | ನ್ಹೊಂದಿ ಪತಿಕರಿಸಿ-ಮುಕ್ತಿ ಮಾರ್ಗ- | ವಿಂದು ಆಶ್ರಿಯಿಸೊ ಗೋವಿಂದನ ಸ್ತುತಿಸಿ | 7
--------------
ವಿಜಯದಾಸ
ಎಚ್ಚರಿಲ್ಲೀ ಮನಕೆ ಯೋಚಿಸಿ ನೋಡದು ಚಿದ್ಫನಕೆ ಧ್ರುವ ನುಡಿದವು ಪರಮಾರ್ಥ ನಡೆಯೊಳಗಿಲ್ಲದೆ ನುಡಿದರ್ಥ ಹಿಡಿದು ವಿಷಯದ ಸ್ವಾರ್ಥಬಡುವುದು ಶ್ರಮತಾನೆ ವ್ಯರ್ಥ 1 ಓದುದು ವೇದಾಂತ ಭೇದಿಸಿ ತಿಳಿಯದೆ ಅದರಂತ ವಾದ ಮಾಡುದು ಭ್ರಾಂತ ಸಾಧಿಸಿ ನೋಡದು ತನ್ನೊಳು ತಾ 2 ಜನಕೇಳುದು ಬುದ್ದಿ ತನಗ ಮಾಡಿಕೊಳ್ಳದು ಸಿದ್ಧಿ ಕಾಣದ್ಹೇಳುದು ಸುದ್ಧಿ ಜ್ಞಾನಕ ಬಾರದು ತಾ ತಿದ್ದಿ 3 ತೊಟ್ಟು ಉತ್ತಮ ವೇಷ ಮುಟ್ಟಿಗಾಣದೆ ಸ್ವಪ್ರಕಾಶ ತುಟ್ಟಿಲಿ ಜಗದೀಶ ಗುಟ್ಟಿಲಿ ಬಲಿವದು ಧನದಾಶೆ 4 ಎಚ್ಚರಿಸಿತು ಖೂನ ನಿಶ್ಚಲ ಮಹಿಪತಿಗೆ ಗುರುಜ್ಞಾನ ಹುಚ್ಚುಗೊಂಡಿತು ಮನ ನೆಚ್ಚಿ ನಿಜಾನಂದದ ಘನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎಂಟಚ್ಚಮ್ಮ ಎಂದಿಗು ಬರಬೇಡಮ್ಮ ಪ ತುಂಟ ಪಟಿಂಗರ ಬಳಿಗೆ ಹೋಗಮ್ಮ ಅ.ಪ ನಿನ್ನ ಗಂಡ ಪಾಂಡವರನ್ನು ಬಾಧಿಸಿ ತನ್ನ ಬಾಯೊಳು ಹುಡಿಮಣ್ಣು ಹಾಕಿಕೊಂಡ 1 ಹುರಿದು ತಿಂಬ ಕಲಿಪುರಷ ಅಯ್ಯಯ್ಯೋ 2 ಗುರುರಾಮವಿಠಲಗೆ ಪರಮದ್ವೇಷಿಯು ಹರಿ ಶರಣರ ಬಾಧಿಸಿ ದುರಿತಗಳಿಸುವನು 3
--------------
ಗುರುರಾಮವಿಠಲ
ಎಂತಹದೋ ನಿನ್ನ ಸಂದುರಶನಾ | ಕಂತುವಿನ ಜನಕ ಉಡಪಿ ಕೃಷ್ಣರಾಯಾ ಪ ಓದನ ತಿಂದೆ | ಪರರ ದ್ರವ್ಯದ ತಂದೆ | ಪರ ಸತಿಯರಿಗೆ ನೊಂದೆ | ಗುರು ಹಿರಿಯರ ನಿಂದೆ | ಹಿರದಾಗಾಡಿದೆ ಮುಂದೆ | ಬರುತಿಪ್ಪ ಪಾಪದಿಂದೆ | ಪರಿಯಾಗಿ ಈ ಬಂದೆ | ಅರುಹು ತೊರದೆ ಬಂದೆ | ಕರುಣಿಸು ಜಗದ ತಂದೆ 1 ಸುಜನರ ಗುಣವ ಹಳಿದೆ | ಕುಜನರ ಸಂಗದಲಿ ಬೆಳಿದೆ | ಭಜನೆಗೆÀಟ್ಟು ಸುಳಿದೆ | ಪ್ರಜರನು ಪೊಗಳಿದೆ | ವೃಜ ಪುಣ್ಯಕೋಶ ಕಳಿದೆ | ಋಜುಮಾರ್ಗವ ತೊರದುಳಿದೆ | ರಜನಿಚರ ಮತಿಗಳಿದೆ | ವಿಜಯ ವಾರ್ತೆಗೆ ಮುಳಿದೆ | ತ್ರಿಜಗಪತಿ ಕೇಳಿದೆ 2 ಹರಿವಾಸರವ ಬಿಟ್ಟೆ | ದುರುಳರಿಗೆ ಧನ ಕೊಟ್ಟೆ | ಹರಿಭಕ್ತರ ತೊರೆದು ಕೆಟ್ಟೆ | ಹರಿಶ್ರವಣ ಬಚ್ಚಿಟ್ಟೆ | ಪರಮ ವ್ರತವ ಮೆಟ್ಟೆ | ಹರುಷದಲ್ಲಿಗೆ ಮನಮುಟ್ಟಿ | ಬಟ್ಟೆ | ವಿರಕುತಿಯನು ಬಿಟ್ಟೆ | ದುರಿತಕ್ಕೆ ಗುರುತಿಟ್ಟೆ | ಬಟ್ಟೆ 3 ಜ್ಞಾನವೆಂಬೋದೇ ಇಲ್ಲಾ | ಏನು ಪೇಳಲಿ ಸೊಲ್ಲಾ | ನೀನೆಂಬೋದಿಲ್ಲವಲ್ಲಾ | ಹಾನಿ ವೃದ್ದಿಗಳೆಲ್ಲಾ | ನಾನುಂಟೆ ಎಲ್ಲ ಸಲ್ಲಾ | ದಾನಾದೆ ಸತತ ಖುಲ್ಲಾ | ತಾ ನುಡಿಗೆ ಸೋತು ಚಿಲ್ಲಿ | ರಾನಡತಿ ಸಿರಿನಲ್ಲಾ | ನಾ ನಡದೆ ನೀ ಬಲ್ಲಾ | ದೇ ನೋಡು ಪ್ರತಿ ಮಲ್ಲಾ 4 ಅಪರಾಧಿ ನಾನಯ್ಯ | ಅಪವಾದದವನಯ್ಯ | ಕೃಪಣದಿಂದೆನ್ನ ಕಾಯಾ | ಉಪಜಯವಾಯಿತು ಪ್ರೀಯಾ | ಸ್ವಪನದಿ ಪುಣ್ಯ ಸಹಾಯಾ | ಲಪಮಾಡಲಿಲ್ಲ ಜೀಯಾ | ಕೃಪೆಯಲ್ಲಿ ಪಿಡಿ ಕೈಯಾ | ವಿಜಯವಿಠ್ಠಲರೇಯಾ | ಗುಪುತವಾದುದುಪಾಯಾ | ತಪಸಿಗಳ ಮನೋಜಯಾ 5
--------------
ವಿಜಯದಾಸ
ಎಂತು ಎನ್ನ ತಾರಿಸುವಿಯೋ ತಿಳಿಯದಿಂದಿಗೆ ಕಂತುಪಿತನೆ ಮುಕುತಿ ಮಾರ್ಗ ಹೊಂದುವೆನೆಂದಿಗೆ ಪ ಓದಿತತ್ವ ಶಾಸû್ರಗಳನು ಜನರಿಗ್ಹೇಳುವೆ ನಾನು ಮೇದನಿಯೊಳು ಬಲ್ಲವನೆಂಬ ಗರ್ವ ತಾಳುವೆ ಸಾಧು ಸಂತರ ನಡಿಯ ನುಡಿಯ ಮಹಿಮೆ ಕೇಳುವೆ ಮತ್ತೆ ಹಾದಿತಪ್ಪಿ ಕುಜನ ವೃತ್ತಿಯಲ್ಲಿ ಬಾಳುವೆ 1 ಸ್ವಾದ ಲಂಪಟ ದುರ್ವಿಷಯ ಬಿಡದ ಸಕ್ತನು ಕಪಟ ಕಲುಷ ಚಿತ್ತನು ಸಾಧಕಗುರು ಹಿರಿಯರ ಅನುಸರಿಸಿದ ಭಕ್ತರು ಸಾಧಿಪಕರ್ಮ ವೃತ್ತಗಳಲ್ಲಿ ಡಂಭಯುಕ್ತನು 2 ಒಂದು ಎರಡು ಹೇಳಲೇ ಎನ್ನತಪ್ಪವಾ ಹೃದಯ ಮಂದಿರ ಮೊಳಗಿಲ್ಲವಾಯಿತು ಜ್ಞಾನ ದೀಪವಾ ನೊಂದು ಬೆಂದು ತಾಪತ್ರಯದಿ ಸುಖದ ರೂಪವಾ ಬಗೆವೆ ನಿಂದು ಒಮ್ಮಿಗ್ಯಾರ ವಿಡಿಯೆ ಪಶ್ಚಾತ್ತಾಪವಾ 3 ಪತಿತಪಾವನ ದೀನೋದ್ಧರಣನೆಂಬ ಬಿರುದವಾ ಕ್ಷಿತಿಯೊಳಿನ್ನು ತಾಳಿದುದರ ಕೇಳು ಮಾಧವಾ ಮತಿವಿವೇಕದಿಂದೆ ಹಚ್ಚಿ ಭಕುತಿ ಸ್ವಾದವಾ ಗತಿಯ ಕೊಟ್ಟ ಕರಿಯೆ ನಾನು ನಿನ್ನ ಮರೆದವಾ 4 ನಿನ್ನ ಭಕ್ತರ ಮನಿಯ ನಾಯಿ ಯಂದು ಎನ್ನನು ಮುನ್ನಿನವರು ಉಂಡ ವೆಂಜಲ ಶೇಷವನ್ನನು ಇನ್ನು ಇಕ್ಕಿಸಿ ಸಲಹಬೇಕು ಮೂಢ ಚಿನ್ನನು ಘನ್ನ ಗುರು ಮಹಿಪತಿಸ್ವಾಮಿದಯ ಸಂಪನ್ನನು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂತು ಗತಿ ಎನಗಾಗುವದೊ ಶ್ರೀ | ಕಾಂತ ನಿನ್ನ ಭಕುತಿಯ ಕಾಣೆ ಪ ಸಂಸಾರ ಎಂಬುದು ಸುಖವೆಂದು ನಾನು | ಹಂಸನಂತೆ ನಲಿಯುತ್ತಲಿದ್ದೆ | ಕಂಸಾರಿ ನಿನ್ನ ನಾಮಸ್ಮರಣೆ ಒಳ್ಳೆ | ವಂಶರ ಕೂಡ ನಲಿಯಲಿಲ್ಲಾ 1 ಪಾತ್ರರ ಕಂಡರ ಪರಿಹಾಸ್ಯ ಕು | ಪಾತ್ರರ ನೋಡಲವರ ಶಿಷ್ಯಾ | ಕ್ಲೇಶ ಎನ್ನ | ಗಾತ್ರಗೋಸುಗ ಪೋಗೆ ಬಲು ತೋಷಾ 2 ವಿರಕ್ತಿ ಕೇಳಲು ತಲೆಶೂಲೆ ವಿ | ಹಾರ ಮಾಡುವಲ್ಲಿ ಅನುಕೂಲೆ | ವಾರಿಜಾಕ್ಷ ನಿನ್ನ ಕಥೆ ಬಿಡುವೆ ಬಹು | ಚಾರುವಾಕರ ಕೂಡ ಸುಖಬಡುವೆ 3 ಕಾಸು ಪ್ರಾಪುತವಾಗಿ ಬಚ್ಚಿಡುವೆ ಅದೆ | ಕಾಸು ಬೇಡಿದರೆ ಪ್ರಾಣವ ಕೊಡುವೆ | ಮೋಸ ಬುರುವದು ಕಾಣೆನಲ್ಲಾ ದು | ರಾಶೆಯಿಂದಲಿ ಬಾಳಿದೆನಲ್ಲಾ 4 ವೈಕುಂಠದಾಸರು ಬರೆ ಕುಗ್ಗುವೆನೊ | ಕುಂಟತನಕೆ ಬಹು ನಲಿದಾಟಾ ಗತಿ | ಉಂಟಾದದಕೆ ಉಚ್ಚಾಟ5 ತಂದೆ ತಾಯಿಗಳಲ್ಲಿ ವಂಚನೆ ಹೀನ | ಮಂದಿಕೂಡಾಪ್ತಾಲೋಚನೆ | ಕುಂದು ನುಡಿದೆ ಸಜ್ಜನರಿಗೆ ಆ | ನಂದ ಬಡಿಸುವೆ ದುರ್ಜನರಿಗೆ 6 ಹೆಂಡತಿ ಮುನಿದರೆ ಬೇಡಿಕೊಂಬೆ ಹರಿ | ಕೊಂಡರು ಮುನಿದರೆ ಪೋಗಲೆಂಬೆ | ಕೊಂಡು ಬಾಹ್ಯನೆ ಪರರವಡಿವೆ | ಪರರ ಕಂಡರೆ ಬೇಡವೆಂದು ನುಡಿವೆ 7 ಮಕ್ಕಳು ಹಸ್ತರೆ ಬಳಲುವೆನೊ ಭೂದೇ | ವಕ್ಕಳು ಹಸ್ತರೆ ನಗುವೆನೊ | ಮುಕ್ತಿಗಾಗುವ ನಾನಾ ಶ್ರವಣ ನೀಚ | ಉಕ್ತಿಗೆ ಮಾಡಿದೆ ಅನುದಿನಾ 8 ಜೀವನಕ್ಕೆ ಬೇಕಾದದೆ ಮಾಣಿದು | ಅಭಾವಾ ಮಾಡೆನು ನೀಚರ ಸೊಲ್ಲು9 ಹರಿ ನಿನ್ನ ಶುಚಿಮಾಡೆ ಹೀನ ನರರ ದೊಂಬಲು ತೆಗಿಯದೆ ಬಿಡೆ | ಅಗ್ರೋದಕ ತಾರೆ ನೀರು | ಹೊರುವೆನೊ ಹಣವೆಂದರೆ ಮಾರೆ 10 ಗಂಡಿಕಿಸಿಲಿ ತೊಳೆಯಲಿ ಮಿಡಿಕಿ ನಾನು | ಅಂಡವಲಿವೆ ಅಶನ ಹುಡುಕಿ | ಅಂಡಜವಾಹನ ನಿನ್ನ ಸೇವೆ ಕೈ | ಕೊಂಡು ಮಾಡದೆ ಪೋದೆ ಹೀಗೆವೆ11 ಗಂಧವ ತೆಗೆ ಎಂದರೆ ಅಳುವೆ | ಬಿದ್ದ | ಮಂದಿರಕೆ ಕದಡುತಳುವೆ | ಒಂದು ತುಲಸಿದಳ ತರಲಾರೆನೆಂದು | ಸಂದಿಗೊಂದಿ ಸುತ್ತಿದೆನೊ ದೊರೆ 12 ಧೂಪಾರತಿ ಏಕಾರುತಿ | ಮೂರ್ತಿ | ಪಾಪಾತಿಶಯದಿಂದಾ ನೋಡಲಿಲ್ಲ ಬಹು | ತಾಪತ್ರಯದಿಂದ ನೊಂದೆನಲ್ಲಾ 13 ಸಿರಿ | ದೇವನಿಗೆ ಯಿತ್ತು ಸುಖಬಟ್ಟು | ಆವಾವ ರುಚಿಗಳ ಭುಂಜಿಸದೆ ನಾನು | ಪಾವನಮತಿಯಾಗದೆ ಪೋದೆ 14 ಎಳೆದುಲಸಿ ನಿರ್ಮಾಲ್ಯವಾಸವಾ || ಬಳಿಯಲ್ಲಿಯಿಟ್ಟು ಕೈವಲ್ಯವಾ | ಘಳಿಸಿಕೊಳ್ಳದೆ ಬಲು ದುರ್ಗಂಧ ಬಂದು | ಭವ ಬಂಧಾ 15 ಹರಿಕಥೆಗೆ ಮೊಗ ತಿರುಹುವೆನೊ | ................................................... ಸ್ಮರಣೆ ಮಾಡುವಲ್ಲಿ ಅತಿ ಹೇಯಾ ದುರಾ | ಚರಿತೆಯ ಮಾಡುವಲ್ಲಿ ಬಲು ನ್ಯಾಯಾ 16 ಹರಿದಾಸರನಪ್ಪಿಕೊಳ್ಳದೆ ಪಾ | ಮರ ಸತಿಯೊಳನಪ್ಪ ತಾ ಪೊಳದೆ | ಧರೆಯೊಳು ನಾನು ನಡಿವಂಥ ಇಂಥಾ | ದುರುಳಾಟಕೇನೆಂಬೆ ಗುಣವಂತಾ 17 ನಿನ್ನಂಘ್ರಿಗೆ ಅಡ್ಡಬೀಳದೆ ತುತ್ತು | ಅನ್ನಕೆ ಎರಗುವೆ ಸೋಲದೆ | ಅನ್ಯಾಯ ಮಾಡುವಲ್ಲಿ ಆನಂದಾ ಸತಿಸ | ತ್ಪುಣ್ಯ ಮಾಡುವಲಿ ನಿಭಂಧಾ 18 ಸಾಧುಗಳೊಡನೆ ತಾಳುವೆ ದ್ವೇಷಾನಿತ್ಯ | ಕ್ರೋಧರ ಕಂಡರೆ ಬಲು ಹರುಷಾ | ಓದನಕೆ ವೇದವನೋದಿ ತಂದು | ವಾದಿಸುವೆನು ಸಭೆಯಲಿ ಕಾದಿ 19 ಸತಿಯಳ ಸಂಬಂಧಿಗಳ ಸಾಕುವೆನೊ ಮಾತಾ | ಪಿತರ ಕಡೆಯವರ ನೂಕುವೆನೊ | ಕರ್ಮ ಮಾಡೋರ ನೋಡಿ ಹೀನ | ವಕ್ರದವರು ಕಂಡು ಬಲು ಪಾಡಿ 20 ಪರಿ ಪರಿ ಹೊಸ | ಕೌತುಕ ಪೇಳೂವೆ ನೋಡಿರಿ | ಶ್ರಾತಾದಿಗಳು ಎಲ್ಲಿ ಧಿಕ್ಕರಿಸಿ ಯಿಂಥ | ಭೌತಿಕ ನೆಚ್ಚಿದೆ ಅನುಕರಿಸಿ 21 ಒಡಿವಿ ಮಾಡಿಸಿ ಮಡದಿಗೆ ಇಡದೆ ಅನ್ಯ | ಮಡದಿಯರಿಗೆ ಧನ ಸೂರೆವಿಡಿದೆ | ಬಡವರ ಕಂಡರೆ ಅಣಕಿಸುವ ಭಾಗ್ಯ | ಪಡದವರಿಗೆ ಬಾಗಿ ನಮಿಸುವೆ 22 ಧರ್ಮಕ್ಕೆ ಅಸೂಯಾ ಬಡುವೆ ಅ | ಧರ್ಮಕೆ ಹಿಗ್ಗಿ ಸುಖವ ಬಡುವೆ | ಷ್ಕರ್ಮಿಗಳ ಕೂಡಾಮಾನತನಾ 23 ವಿಧಿ ನಿಷೇದವನೆಣಿಸದಲೆ ನಾನು | ಉದರ ತುಂಬಿದೆ ಭೀತಿ ಗಣಸದಲೆ | ವದಗಿ ಬೀಳುವ ನರಕದ ಬಾಧೆ ಕೇಳಿ | ಹದುಳಕ್ಕೆ ಮನಮಾಡದೆ ಪೋದೆ 24 ಯಜಮಾನ ನಾನೆಂದು ಪೇಳಿಕೊಂಡು ದೋಷ | ವ್ರಜದಲಿ ಚರಿಸದೆ ದು:ಖವುಂಡು | ಇಂದು | ಸಿಂಧು 25
--------------
ವಿಜಯದಾಸ
ಎಂತು ಜೀವಿಸಲಯ್ಯ ಯಾದವೇಶ ಪ ಎನ್ನಸುವಿಗಸು ನೀನು ಭಿನ್ನ ಜ್ಞಾನದಿ ಎನ್ನ ಅ.ಪ ಬನ್ನ ಬಡಿಸುವಿ ಮಾಯ ಜೈಸಲರಿಯೆ ವಿಧಿ ವಾಯು ಶಿವ ಶಕ್ರ ಸುರನಿಕರ ನಿನ್ನಲ್ಲಿ ಸುಖಿಸುವರೊ ಅನ್ನೆಲ್ಲಿ ಅಸತೆಂದು 1 ನೀರಗುಳ್ಳೆಯಂತೆ ಸಂಸೃತಿಯ ಸುಖವೆಂದು ದಾರಿತೋರ್ವವ ನೀನು ಕಣ್ಣುಕಟ್ಟೆ ಆರು ಬಿಚ್ಚುವರಯ್ಯ ಆ ಪಟಲಕಿಕ್ಕಟ್ಟು ವಾರಿಜಾಸನನಯ್ಯ ವಂಚಿಸದೆ ಮೈದೋರು 2 ಕಾಮಾದಿ ಷಡ್ವರ್ಗ ದುಷ್ಕರಣ ದುಮ್ಮಾನದ ತಾಮಸದಿ ಸಿಗಬಿದ್ದು ಪಾಮರಾದೆ ವ್ಯೋಮಕೇಶನ ಮಿತ್ರ ಜಯೇಶವಿಠಲ ನೀ ಮನಸು ಮಾಡಲು ಆತ್ಮಾಪಿ ವೈಕುಂಠ 3
--------------
ಜಯೇಶವಿಠಲ
ಎಂತು ದೊರೆವುದೋ ಸಂತಸವೆಂತು ದೊರೆವುದೋ ಕಂತುಪಿತನ ಕರುಣವಿಲ್ಲದೆ ಪ ರಣಜಯವು ಹಣಪ್ರಾಪ್ತಿ ವನಿತೆಲಾಭವಿನಿತು ಎಲ್ಲ ವನಜನಾಭನೊಲಿಮೆಯಾಗೋತನಕ ಮಂದಮನುಜನಿಗೆ 1 ಕ್ಷೋಣಿಗೆಲುವ ತ್ರಾಣ ಬಲವು ಮಾಣದಿಹ್ಯ ನಾನಾ ಸೌಖ್ಯ ಜಾನಕೀಶ ಮೆಚ್ಚುವನಕ ಹೀನಭಾಗ್ಯ ಮಾನವನಿಗೆ 2 ಭೂಮಿಜನಕೆ ಬಾಗದಂಥ ಆ ಮಹ ಸುಕ್ಷೇಮ ಲಾಭ ಸ್ವಾಮಿ ಶ್ರೀರಾಮ ಪ್ರೇಮಸದನ ಪ್ರೇಮದೀಯದೆ ಪಾಮರರಿಗೆ 3
--------------
ರಾಮದಾಸರು
ಎಂತು ನಿನ್ನ ಮೆಚ್ಚಿಸುವೆನೊ ಎಲೊ ವೆಂಕಟಾ ಸಂತತ ಬಿಡದೆ ಎನ್ನ ಅಂತರಂಗದಲ್ಲಿ ಇರೊ ಪ ಕುಣಿದು ನಿನ್ನ ಮೆಚ್ಚಿಸುವೆನೆ | ಫಣಿಹಾರನೈಯನನ ಜನಕಾ | ಮಣಿದು ನಿನ್ನ ಮೆಚ್ಚಿಸುವೆನೆ | ಸನಕಾದಿಗಳ ಸುಪ್ರೇಮಾ 1 ಅನ್ನವಿತ್ತು ಮೆಚ್ಚಿಸುವೆನೆ | ನಿತ್ಯ ತೃಪ್ತ ನೀನು | ಹೆಣ್ಣನಿತ್ತು ಮೆಚ್ಚಿಸುವೆನೆ | ಹೆಣ್ಣುರೂಪ ನೀನೆ ಸ್ವಾಮಿ 2 ಅಪ್ಪ ನಿನ್ನ ಮೆಚ್ಚಿಸುವೆನೆ | ದರ್ಪಾಕ ಬೊಮ್ಮನ ತಂದೆ | ಅಪ್ಪ ನಿನ್ನ ಮೆಚ್ಚಿಸುವೆನೆ | ಸುಪ್ಪಾಣಿ ರಮೆಯರಸಾ 3 ಪಾಲು ಕುಡಿಸಿ ಮೆಚ್ಚಿಸುವೆನೆ | ಸದನ ನೀನು | ಮಾಲೆ ಹಾಕಿ ಮೆಚ್ಚಿಸುವೆನೆ | ಮಾಲೆ ಕೌಸ್ತಭ ಭೂಷಣಾ4 ಸೇವೆ ಮಾಡಿ ಮೆಚ್ಚಿಸುವೆನೆ | ಪಾವಮಾನಿ ತಾತ ನೀನು | ಕಾವುದು ವಿಜಯವಿಠ್ಠಲಾ 5
--------------
ವಿಜಯದಾಸ
ಎಂತು ಮರುಳಾದೆ ನೀ ಯದಿಯ ಬಿಗುವಿನಲಿ ತಿರುಗಿ | ಪಂಥದಲ್ಲಿ ಕೆಡಲಿಬೇಡ ಎರಡು ದಿನ | ಸಂತೆ ನೆರೆದಂತೆ ಮೂಢ ಇಪ್ಪದಿದು | ಸಂತತ ತೊರೆದು ಬಾಡೊ ಪ್ರಾಣಿ ಪ್ರಾಣಿ ಪ ವಿಂಚುಗೂಳನು ತಿಂದು ಮನೆ ಮನೆಗಳು ತಿರುಗಿ | ಸಂಚಿತಾರ್ಥವ ತಿಳಿಯದೆ ಮರುಳಾದ | ಪರ | ಪಂಚವನು ನೀ ಕಳಿಯದೆ ವ್ಯರ್ಥಾಯ | ವಂಚನಿಂದಲಿ ನಡೆದು ಬಾಯಿ ತೆರೆದು | ಹಲ್ಲನು | ಹಂಚಿಕೆ ತೋರಿದಂತೆ ಮೃತ್ಯುವಿನ | ಪಂಚದಲಿ ಸೇರಿದಂತೆ | ಆಗುವುದು | ಕಂಚು ಕೆಳಗೆ ಬಿದ್ದಂತೆ ಪ್ರಾಣಿ 1 ನುಗ್ಗು ನುಸಿಯಾಗದಿರು | ನೂಕು ನಿನ್ನಹಂಕಾರ | ಮುಗ್ಗದಿರು ಈ ಬಲಕಿಗೆ ಸ್ಥಿರವಾಗಿ | ಬಗ್ಗು ನಡೆವಳಿ ನಡೆದು | ವೆಗ್ಗಳದ ನಡೆವಳಿ ನಡೆದು | ವೆಗ್ಗಳದ ಧರ್ಮದಾ ಸುಗ್ಗಿಯಲಿ ದಿನವ ಹಾಕೊ | ಬಿಡು ಬಿಡು ಅಗ್ಗಳಿಕೆತನವೆ | ಸಾಕು ಆವಾಗ ತೆಗ್ಗಿಕೊಂಡಿರಲಿ ಬೇಕು | ಪ್ರಾಣಿ 2 ಇನ್ನಾದರೂ ಕೇಳು | ಪುಣ್ಯವಂತರ ಕೂಡು | ನಿನ್ನವರು ನಿನಗೆ ದಾರೊ | ಕಣ್ಣಾಗೆ ಎಣ್ಣೆ ಬಿದ್ದಂತೆ ಸಾರೊ ಬಾಯಿಂದ | ಬೆನ್ನಿಗೆ ಬಂದ ವಿಚಾರೊ ತುದಿಯಲಿ | ಮಣ್ಣು ಮಣ್ಣನೆ ಕಲಿತು ಹೋಗುವುದು ನಿಶ್ಚಯವು | ಚೆನ್ನಾಗಿ ಎಚ್ಚೆತ್ತುಕೋ ಈ ಮಾತಿಗೆ | ಖಿನ್ನನಾಗುವದೇತಕೊ ಸಾವಿರಕು | ಮುನ್ನಿಲ್ಲವೊ ಮನಸಿತೊ ಪ್ರಾಣಿ 3 ವೇದಶಾಸ್ತ್ರವನರಿಯೆ ಆದಿಪುರಾಣಗಳು | ಅದ್ವೈತ | ವಾದವರ ಕೂಡದಿರು ಇದೆ ಮಿಗಿ ಲಾದರು ಮರಿಯದಿರು ಉತ್ತಮ | ಸಿರಿ ವಿಜಯವಿಠ್ಠಲನ ಶ್ರೀ | ಪಾದವನು ಒಂದೇ ಭಕ್ತಿಯಿಂದಲಾ | ರಾಧಿಸು ಇದಕೆ ಯುಕ್ತಿ ಕಡಿಯದಲೆ | ಮಾಧವನು ಕೊಡುವ ಮುಕ್ತಿ ಪ್ರಾಣಿ4
--------------
ವಿಜಯದಾಸ