ಒಟ್ಟು 795 ಕಡೆಗಳಲ್ಲಿ , 79 ದಾಸರು , 646 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿತ್ಯ ಶುಭ ಮಂಗಳಂ ಭಯ ವಿನಾಶನದೇವ ಶ್ರೀನಿವಾಸನಿಗೆ ಪ. ಮಂಗಳಂ ಜಲಚರಗೆ ಮಂಗಳಂ ಗಿರಿಧರಗೆ ಮಂಗಳಂ ಭೂದೇವಿ ರಕ್ಷಕನಿಗೆ ಮಂಗಳಂ ನರಹರಿಗೆ ಮಂಗಳಂ ಮಾಣವಗೆ ಮಂಗಳಂ ಭಾರ್ಗವಗೆ ದಾಶರಥಿಗೆ 1 ಮಂಗಳಂ ಗೋಪಾಂಗನೆಯರ ಕಾಯ್ದವನಿಗೆ ಮಂಗಳಂ ತ್ರಿಪುರ ಸುರರಳಿದ ಹರಿಗೆ ಮಂಗಳಂ ಹಯವೇರಿ ಕಲಿಮುಖರ ಗೆಲಿದವಗೆ ಮಂಗಳಂ ಶ್ರೀಕೃಷ್ಣ ಶ್ರೀನಿವಾಸನಿಗೆ 2 ಆಪಾದಮೌಳಿ ಪಾವನರೂಪನಿಗೆ ಆಪನ್ನ ರಕ್ಷಕಗೆ ಆದಿರೂಪನಿಗೆ ಆಪದ್ಭಾಂಧವ ಶ್ರೀಗುರುಗಳಂತರ್ಗತಗೆ ಗೋಪಾಲಕೃಷ್ಣವಿಠ್ಠಲಮೂರ್ತಿಗೆ 3
--------------
ಅಂಬಾಬಾಯಿ
ನಿತ್ಯನಿರ್ಮಲನಿಗೆ ಜಯಮಂಗಳಂ ಶುಭ ಮಂಗಳಂ ಪ ಸತ್ಯಪರಾಕ್ರಮ ಸತ್ಯಚರಿತ್ರಗೆ ಸತ್ಯಕಾಮ ಪುರುಷೋತ್ತಮ ಹರಿಗೆ ಅ.ಪ ಮೂರುರೂಪದಲಿ ವಾರಿಯೊಳಿದ್ದಗೆ ಘೋರವದನ ಬ್ರಹ್ಮಚಾರಿಯಾದವಗೆ ವೀರರ ಕೊಂದಗೆ ಹನುಮವಿನುತಗೆ ಮಾರಜನಕ ಸುಕುಮಾರ ಹಯೇಶಗೆ 1 ವೇದಾಚಲ ಭೂಧರ ನರಹರಿಗೆ ಮೇದಿನಿಯಳೆದಗೆ ಮುನಿಸುತಗೆ ಕೋದಂಡೋತ್ಸುಕ ನಾದಪ್ರಿಯನಿಗೆ ಭೇದವ ಕಲ್ಪಿಸಿದಶ್ವವಾಹನಗೆ 2 ಮಂಗಳರೂಪಗೆ ಈರೈದವತಾರಗೆ ಅಂಗಜತಾತ ಶುಭಾಂಗನಿಗೆ ಮಾಂಗಿರಿಶೃಂಗನಿವಾಸ ರಥಾಂಗಗೆ ಗಂಗೆಯಪೆತ್ತ ಪನ್ನಂಗಶಯನಗೆ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಿಂದಿಸಿದ್ದು ಕುಂದಾದದ್ದೇನೊ ಮಂದಮತಿಗಳು ನಿಂದು ಸುಜನರಿಗೆಲ್ಲ ಪ. ಅಂದನುವಾಗಿಲ್ಲೆ ಇಂದಿರೇಶನು ಮಂದಗಮನೆ ದ್ರೌಪದಿಗೆ ಅ.ಪ. ಕಂದನೆಂದು ಕೌರವನ ಸೇವೆಗೆ ಆ ನಂದದಿಂದ್ಯವರ ಬೇಡೆಂದ ಮುನಿ ಬಂದರತ್ನವ ಬಿಟ್ಟನ್ನವ ಬೇಡಿಬಾರೆನೆ ಇಂದು ಮುಖಿ ಕೈಯಿಂದಿಡಿಸಿದ ಕೃಷ್ಣ 1 ಖಡ್ಗ ತೋರಿ ಬಳ ಪ್ರಹ್ಲಾದನಂಜಿಸೆ ಗುಡ್ಡ ಪೊತ್ತ ನರಹರಿಯಾಗ ಹೆಡ್ಡನೆ ತೋರುವೆನೆಂದು ಕಂಬದಿ ದೊಡ್ಡ ಮೃಗರೂಪದಲಂಜಿಸಿದ 2 ತೊಡೆಯನು ಬಿಡು ಎನುತೊಡನೆ ನೂಕಲು ಪೊಡವಿಯಲ್ಲಿಹುದು ನಡೆ ಬಾಲಕನೆನೆ ಕಡುಭಯದಲಿ ಧೃವ ಒಡನೆ ಹರಿಯ ಪಾದ ಬಿಡದೆ ಧ್ಯಾನಿಸೆ ದೃಢವರವಿತ್ತ ಹರಿ (ಕಡೆ ಹಾಯಿಸಲು) 3 ಕರಿಯ ಕಂಬದ ತೆರದಿ ನಿಲಿಸೆ ನಕ್ರ ಪೊರೆದವನಾರೋ ಹರಿಯಲ್ಲದೆ ಶರಣಾಗತ ಚಿಂತಾಮಣಿ ಎನೆ ಕರಿ ಪರಿದು ಚಕ್ರನಿ ನಕ್ರನ ಬೇಗ 4 ಏಕಾದಶಿವ್ರತ ಏಕಭುಕ್ತನ ನೀರೆಡಿಸೆ ಮಾನುನಿ ಬರಲು ಹರಿತಾ ಕರುಣಿಪನೆಂದು ತರಳನ ಶಿರಕೆ ಕೈಹಾಕೆ ಶ್ರೀ ಶ್ರೀನಿವಾಸನ ಸುತತಾ ಕರುಣಿಸಿದ 5
--------------
ಸರಸ್ವತಿ ಬಾಯಿ
ನಿನಗೆ ನಾ ಬ್ಯಾಡಾದನೆ ಘನಕೃಷ್ಣ ಮಾನಿನಿಯ ಕಿಂತ ಕೊನೆಯೆ ಪ ಎನ್ನ ಕಣ್ಣಿಗೆ ತೋರದೆ ಬೆನ್ನಲ್ಲಿ ಮಾನಿನಿಗೆ ನೀ ತೋರಿದ್ಯಾ ಮನ್ನಿಸುವ ನಿತ್ಯದಲಿ ಮುನ್ನ ನಿನಗೆ ನಾ ದ್ವೇಷಿಯಲ್ಲವೋ 1 ಒಳಗೆ ನೀನಿರುವಿ ಎಂದೂ ತಿಳಿದು ಬಲು ತೊಳಲಿ ಶರಣು ಬಂದರೆ ಪೊಳೆಯದಲೆ ಮನಸಿನೊಳಗೆ ಕೊಳಲು ಕರೆ ಬಾಲೇಗೆ ನೀ ತೋರಿದ್ಯಾ 2 ಸುಳ್ಳು ಇದು ಎಂದ್ಹೇಳಲು ಸಲ್ಲದೆಲೊ ಕಳ್ಳ ನೀನೆಂದು ಬಂದೆ ಪುಲ್ಲನಾಭನೆ ತೋರೆಲೊ ಮಲ್ಲನೆ ಗಲ್ಲ ಪಿಡಿದು ಮುದ್ದಿಪೆ 3 ನೀರದಸಮ ಕಾಂತಿಯ ನಾರಿಮಣಿ ಬೀರಿದಳೊ ಶ್ರೀಕೃಷ್ಣನೆ ಕರುಣಸಾಗರನೆಂಬೊದು ಮರೆತು ನೀ ದೂರ್ಹೋಗಿ ನಿಲ್ವರೇನೊ 4 ಮೂರು ವಯಸೆಂದ್ಹೇಳರೊ ಚಾರುತರಾಭರಣ ಇಟ್ಟಿಹನೆಂಬುರೊ ಈ ರೀತಿ ಅಬಲೆಯರು ನಿರುತದಲಿ ಧರೆಯೊಳಗೆ ಪೇಳ್ವುದರಿಯಾ5 ಎಂದಿಗಾದರು ನಿನ್ನನು ಪೊಂದದೆಲೆ ಇಂದಿರಾಧವ ಬಿಡುವನೆ ತಂದೆ ಶ್ರೀ ಮಧ್ವರಾಯ ಛಂದದಲಿ ಮುಂದೆ ತಂದೆಳೆವ ನಿನ್ನ 6 ನೀ ಬಿಟ್ಟರೇ ಕೆಡುವೆನೆ ಶ್ರೀ ಭೀಮನೊಬ್ಬ ಬಲ ಸಾಕೆಲೊ ಅಪಾರ ದೈವ ನಿನ್ನ ಕೊಬ್ಬುತ ತಬ್ಬಿ ನಾ ನಿನ್ನೊಲಿಸುವೆ7 ಮಾನದಿಂದಲಿ ತೋರೆಲೊ ನಿನಗಿದು ಘನತೆಯಲ್ಲವೊ ಜೀಯನೆ ಮುನ್ನ ಮಾಡ್ದುಪಕೃತಿ ಮರೆತೆಯಾ8 ಇನಿತು ವಂಚಿಸಿ ಪೋದರೆ ನಾ ನಿನ್ನ ಹೀನ ಗುಣದವನೆನ್ನುವೆ ಮನ್ನಿಸಿ ಸಲಹೋ ಬ್ಯಾಗ ಶ್ರೀ ನರಹರಿಯೆ ನಾ ಭಿನ್ನೈಸುವೆ9
--------------
ಪ್ರದ್ಯುಮ್ನತೀರ್ಥರು
ನಿನ್ನ ನಾಮವೆ ಘನವಆಗಿದೆ ನೆನೆವರಕಾವ ಕರುಣಿಯೆಂದು ಪ ಪಾದ ಯುಗವನಾ ಕಾಣಬಲ್ಲನೆ ಕೇಳಿ ಗರುಢಾ ರೂಢ ನಾಗಿ ಬಂದು ಗಜವ ಕಾಯ್ದವನೆಂದು 1 ಸಂಗದಿಂದಲಿ ಯಿರುತಿರಲು ಬಂದು ಯಮನ ದೂತರೆಳೆಯೆ ಭಯದಿ ತನ್ನ ನಂದನ ಕರೆದರೊಂದು ನಾಮವೆ ಕಾದುದೆಂದು 2 ದುರುಳ ಕಶ್ಯಪುಸುತನ ಭಾಧಿಸೆ ಮೊರೆಯಿಡಲದನುಕೇಳಿ ಭರದಿ ಕಂಬದಿ ಬಂದು ನರಹರಿಯಾಗಿ ನಿಂದು ಕರದೊಳವನ ಕೊಂದು ತರಳನ ಕಾಯ್ದೆಯೆಂದು 3 ಅಂಬುಧಿಶಯನ ನಿನ್ನ ರುಕ್ಮಾಂಗದ ಮೃತ್ಯವೆಂಬುದೆಲ್ಲವಗೆದ್ದು ಕುಂಭಿನಿಯೊಳು ಪೆಸರೊಡೆದರೆಂಬುದ ಕೇಳಿ 4 ಓಲಗದೊಳು ಶಾಲೆಯ ಸುಲಿಯೆ ದ್ರುಪದ ಭೀಮನಕೋಣೆ ಲಕ್ಷ್ಮೀ ಲೋಲ ಸೀರೆಯ ಸೆರಗ ಬೆಳೆಸಿದ ನಾಮವೆಂದು 5
--------------
ಕವಿ ಪರಮದೇವದಾಸರು
ನಿರುತದಿ ನೆನೆ ನರಹರಿಯ ನರಹರಿಯ ಶಿರಿಧೊರೇಯ ಪ ಪೋತ ಧ್ರುವನು ತಾ ತಾತನ ತೊಡಿಯಲಿ ಪ್ರೀತಿಲಿ ಕುಳಿತಿರೆ ಮಾತೆ ದೂಡಲತಿ ಸೋತು ಮನದಿ ಹರಿ ಸ್ತೋತ್ರವ ಗೈಯ್ಯಲಾತಗೆ ಪದ ನೀಡಿದಾ 1 ಕಡಿಗ್ಯಾದ ದ್ರೌಪದಿ ಮುಡಿಯ ಪಿಡಿದು ಖಳ ಬಿಡÉಳೆದೊಯ್ಯೊ ಕಡುದುರುಳ ಸಭೆಗೆ ಸಿಡಿದೆಳೆಯೆ ಶೀರೆಯನು ಒಡನೆ ಹರಿಯೆನಲುಡುವಾಸವಕ್ಷೈಸಿತು 2 ದುರುಳ ಹಿರಣ್ಯಕಶು- ಪಿರದೆ ಪೀಡಿಸಲು ಪರಿಪರಿಯಿಂದಲಿ ಹರಿಗೆ ಮೊರೆಯಿಡಲು ಕರುಳು ಬಗೆದ ನರಸಿಂಹವಿಠಲನು 3
--------------
ನರಸಿಂಹವಿಠಲರು
ನೀ ಕೈಯ ಬಿಡಬೇಡವೋ ನರಹರಿ ಪ ನೀ ಕೈಯ ಬಿಡಬೇಡ ನಾಕೆಟ್ಟರೂ ಬೇಡ ನೀ ಕೊಟ್ಟ ಫಲವಿನ್ನು ಸಾಕೋ ಮಾಂಗಿರಿರಂಗ ಅ.ಪ ನನ್ನ ಕಾಯುವ ಭಾಗ ನಿನ್ನದಾಗಿರಲಯ್ಯ ಇನ್ನಾವುದನು ಕೇಳ್ವುದೆನ್ನ ಭಾವದೊಳಿಲ್ಲ ಸನ್ನುತಾಂಗ ಕೃಷ್ಣ ಪನ್ನಗಶಯನ [ಉನ್ನತದಿ ಸದಾ ಭಜಿಸುವೆನು ನಿನ್ನ] 1 ಆಡುವಾ ನುಡಿಗಳು ನೋಡುವಾ ನೋಟವು ಮಾಡುವ ಕಾರ್ಯವು ನಿನ್ನದಾಗಿರಲು ಮೂಡಿಸು ಮನದಲ್ಲಿ ತವಪಾದಭಕ್ತಿಯ ಜೋಡಿಸಿ ಕೈಗಳ ಮುಗಿವೆನೋ ರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀ ಕೈಯ ಬಿಡಲು ಸಾಕುವರಾರಲೋ ಪ ಪಾದಸ್ಮರಿಸುತಲಿರುವವನ 1 ಸಂತತ ಪಾಲಿಸಿದೆ 2 ನರಹರಿಯನ್ನಯ 3
--------------
ಹೆನ್ನೆರಂಗದಾಸರು
ನೀ ಬಾರದಿರೆ ಬಾರನು ಶ್ರೀ ನರಹರಿ ಪ ನೀ ಬಾರದಿರೆ ಬಾರ ನೀರಜಾಕ್ಷನು ಹರಿನಾನು ನಂಬಿದೆ ನಿಮ್ಮ ನೀವು ಪಾಲಿಸಬೇಕು ಅ.ಪ. ನೀನು ಆತನ ಕಾಯ್ದಿ ತಾನು ಆತನ ಕಾಯ್ದನೀನು ಬಿಡಲು ಬಿಟ್ಟ ಭಾನುಸುತನ ಕೃಷ್ಣ 1 ನಿಮ್ಮ ಮಾತುಗಳನ್ನು ಒಮ್ಮೆ ಮೀರನು ಹರಿನಮ್ಮ ಬಿಡುವುದ್ಯಾಕೊ ಬ್ರಹ್ಮ ಪದಾರ್ಹನೆ 2 ಇಂದು ನಾಳೆನ್ನದೆ ಆನಂದತೀರ್ಥರೆ ನಮ-ಗಿಂದು ತೋರಿಸು ಹರಿಯ ಇಂದಿರೇಶನ ಪ್ರೀಯ 3
--------------
ಇಂದಿರೇಶರು
ನೀನಲ್ಲದಿನ್ನಾರು ಸಲಹುವರೊ ಎನ್ನ ಪ ನಾನು ನನ್ನದು ಎಂಬ ದುರಭಿಮಾನಿಯನ್ನಅ.ಪ. ಶ್ರೀಮದಾಚಾರ್ಯರ ಪುಸ್ತಕ ಭಂಡಾರವನು ಪ್ರೇಮದಿಂ ಧರಿಸುತ ವೃಷಭನಾಗಿರ್ದು ಚರಿಸಿ ಕಾಮಪಿತನೊಲಿಮೆಯಿಂ ಮರಳಿ ಜನಿಸಿ ಗುರುಗಳ ಆ ಮಹಾಭಾಷ್ಯವರುಹಿದ ಜಯತೀರ್ಥ ಗುರುವೆ 1 ಬಾಲತನದಲಿ ಸಕಲ ಲೀಲೆಗಳ ತೊರೆದು ಕಾಲುಂಗುಟಾಗ್ರದಿ ನಿಂದು ತಪವಗೈದು ಶ್ರೀಲೋಲನ ಮೆಚ್ಚಿದಂಥ ಧೀರ ದೈವ ಭೂ- ಪಾಲನಂಶದ ಶ್ರೀಪಾದರಾಜ ಗುರುವೆ2 ಪಿತನ ಮತ ಧಿಕ್ಕರಿಸಿ ಶ್ರೀಪತಿಯೆ ಪರನೆಂಬ ಮತಿಪÉೂಂದಿ ಶಿಶುತನದಲಿ ನರಹರಿಯ ಒಲಿಸಿ ಅತಿಹಿತನಾದ ಪ್ರಹ್ಲಾದದೇವನಂಶದಿಂ ಕ್ಷಿತಿಯೊಳುದ್ಭವಿಸಿದ ವ್ಯಾಸರಾಜ ಗುರುವೆ 3 ಈ ಧರೆಯೊಳೆಸೆಯುತಿಹ ಉಡುಪಿಯೊಳು ನೆಲಸಿರ್ಪ ಯಾದವ ತೀರ್ಥಾಯ ಪದ ಸರಸಿರುಹ ಭೃಂಗ ಮೋದ ತೀರ್ಥಾರ್ಯರ ಪದಕರುಹನಾದಂಥ ಸೋದೆಯೊಳ್ರಾಜಿಸುವ ವಾದಿರಾಜ ಗುರುವೇ 4 ಕಂತುಜನಕನಿಗತ್ಯಂತ ಪ್ರಿಯನಾದ ಮತಿ ವಂತನಾ ವ್ಯಾಸಮುನಿಯೆ ನೀನಾಗಿ ಬಂದು ಸಂತಸದಲಿ ಸಾಧು ಜನರಿಷ್ಟ ಪೂರೈಸುತ ಮಂತ್ರಾಲಯದಿ ಮೆರೆವ ರಾಘವೇಂದ್ರ ಗುರುವೆ 5 ಜಲಜಭವನೂರುಭವನಂಶದಲಿ ಜನಿಸಿ ಕಲಿಯುಗದಿ ಹರಿನಾಮವೆ ಗತಿಯೆಂದು ಸಾರಿ ಹಲವು ಪದ ಸುಳಾದಿಗಳ ರಚಿಸಿ ಸಜ್ಜನರ ಕಲುಷಗಳ ಕಳೆದ ಪುರಂದರದಾಸರಾಯ 6 ಸಕಲ ಋಷಿಗಳ ಸಂಶಯವ ಪರಿಹರಿಸಿ ವೇದ ಉಕುತಿಗಳಿಂದ ಹರಿಯೆ ಪರನೆಂದು ಸ್ಥಾಪಿಸಿ ಭಕುತಿ ವೈರಾಗ್ಯನಿಧಿ ಭೃಗುಮುನಿಯೆಂದೆನಿಸಿದ ಮುಕುತಿಪಥ ತೋರಿಸಿದ ವಿಜಯದಾಸರಾಯ 7 ಸೂತ್ರ ಪುರಾಣಗಳ ರಚಿಸೆ ದಾಸತ್ವವಹಿಸಿ ಸಕಲ ಗ್ರಂಥಗಳ ಬರೆದು ಶ್ರಿಶಗರ್ಪಿಸುತ ಲೇಸು ಜಗಕೆಗೈದಂಥ ಗ ಣೇಶಾವತಾರಿ ಗೋಪಾಲದಾಸರಾಯ 8 ಸಿರಿ ರಂಗೇಶವಿಠಲನ ಕಾಂಬ ತೃಷೆಯಲಿ ಹರಿಗೆ ಹರಿಕಥಾಮೃತಸಾರ ಪಾನಗೈಯಲಿತ್ತ ನರಹರಿಯ ಕೃಪಾಪಾತ್ರ ಸಹ್ಲಾದನಂಶದ ಗುರುವರ ಶ್ರೀ ಜಗನ್ನಾಥದಾಸರಾಯ 9
--------------
ರಂಗೇಶವಿಠಲದಾಸರು
ನೀನೆ ಎನಗಾಧಾರಿ ಶ್ರೀಹರಿ ನೀನೆ ಎನಗಾಧಾರಿ ಧ್ರುವ ಸಕಲ ಸುಖವ ಬೀರುವ ಉದಾರಿ ಭಕುತ ವತ್ಸಲ ಮುಕುಂದ ಮುರಾರಿ 1 ಅಂತರ್ಬಾಹ್ಯದ ಲೀಹ ನರಹರಿ ಕಂತುಪಿತನೆ ಪೀತಾಂಬರಧಾರಿ 2 ಹಿತದಾಯಕ ನೀನೆವೆ ಪರೋಪರಿ ಪತಿತಪಾವನ ಮಹಿಪತಿ ಸಹಕಾರಿ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀನೆ ದಯಾನಿಧಿಯು ಶ್ರೀ ಗುರುರಾಯ ನೀನೆ ದಯಾನಿಧಿಯು ಧ್ರುವ ಕರುಣದಿ ಕುಂತಿಯ ಪುತ್ರರಿಗೆ ಒಲಿದು ಕಾಳ ನಿರ್ಮಿಸಿ ಕೌರವರಳಿದು ಉಳಿಯದೆ ಇಳೆಯೊಳು ವಂಶವ ಸವರಿದ ಶೇಷಶಯನ ಶ್ರೀ ಕೇಶವ ನೀನೆ 1 ನರಗೊಲಿದು ನರಕಾಸುರನ ಮರ್ದಿಸಿ ನಾರಗನೆಂದಜಮಿಳನ ನೀ ತಾರಿಸಿ ನಾರದಗೊಲಿದು ನಾಟ್ಯವನಾಡಿದ ನರಹರಿಯು ನಾರಾಯಣ ನೀನೆ 2 ವೇದವ ಕದ್ದೊಯಿದಸುರನ ಸೀಳಿ ಮಚ್ಛವತಾರದ ರೂಪವ ತಾಳಿ ಮಾವನ ಕೊಂದ ಮಾನ್ಯರ ಮಡುಹಿದ ಮಾಧವ ನೀನೆ 3 ಗೋಕುಲದಲಿ ಪುಟ್ಟಿ ಧರೆಯೊಳು ಬೆರಳಲಿ ಗೋವರ್ಧನ ಗಿರಿಯನೆತ್ತಿ ಗೋಕುಲ ಕಾಯ್ದಿ ಗೋಪಿಯರಿಗೊಲಿದ ಗೋಪಾಲಕೃಷ್ಣ ಗೋವಿಂದನು ನೀನೆ4 ಸೃಷ್ಟಿನೆಲ್ಲ ಬೆನ್ನಿಲಿ ತಾಳಿದ ಶೇಷನ ಸಂ ಕಷ್ಟವ ಪರಿಹರಿಸಿದ ಶಿಷ್ಟ ವಿಭೀಷಣಗೊಲಿದು ಪಟ್ಟವಗಟ್ಟವು ವಿಷ್ಣವು ನೀನೆ 5 ಮದನನೊಲಿದು ಕಾಳಿಂಗನ ತುಳಿದು ಕದನದಲಿ ಬಾಣಾಸುರನಳಿದು ಮೇದಿನಿಯೊಳು ಮರೆ ಇಲ್ಲದೆ ದೈತ್ಯರ ಮರ್ದಿಸಿದ ಮಧುಸೂದನನು ನೀನೆ 6 ತ್ರಿಪುರವನಳಿದು ತ್ರಿಗುಣವ ತಾಳಿದ ತೆತ್ತೀಸ ಕೋಟಿ ದೇವರುಗಳಿಗಾಳಿದ ಅಕ್ರೂರಗೊಲಿದು ಚರಿತ್ರವದೋರಿದ ತ್ರಿಜಗಪತಿ ತ್ರಿವಿಕ್ರಮ ನೀನೆ7 ವಾಲಿಯನಳಿದು ವಾಲ್ಮೀಕಿಗೊಲಿದು ಬಲಿಚಕ್ರನ ಮುನಿಮುಂದಲಿ ಸುಳಿದು ಬ್ರಾಹ್ಮಣನಾಗಿ ದಾನವ ಬೇಡಿದ ಮಾನ್ನವಗೊಲಿದ ಶ್ರೀ ವಾಮನ ನೀನೆ 8 ಸೃಷ್ಟಿನೆಲ್ಲ ನಿರ್ಮಿಸಿ ವಕ್ಷ ಸ್ಥಳದಲಿ ಶ್ರೀ ಮಹಾಲಕ್ಷ್ಮಿಯ ಧರಿಸಿದ ಶ್ರೀನಿಧಿ ಶ್ರೀಪತಿ ಶ್ರೀಗುರುಮೂರುತಿ ಶ್ರೀದೇವಿಗೊಲಿದಿಹ ಶ್ರೀಧರ ನೀನೆ 9 ದಾಸರ ಕ್ಲೇಶಕಿಲ್ಮಿಷಗಳ ತೊಳೆದು ಅಂಬರಿಷ ರುಕ್ಮಾಂಗದಗೊಲಿದು ಶುಕ ಶೌನಕ ಪರಾಶರ ಮುನಿಗಳಿಗೆ ಹರುಷನಿತ್ತ ಹೃಷಿಕೇಶನು ನೀನೆ 10 ಕ್ಷಿತಿಯೊಳು ದೃಢ ಪತಿವ್ರತೆಗೊಲಿದು ಯತಿ ಮುನಿಗಳಿಗಿನ್ನು ಗತಿಗಳನಿತ್ತು ಪತಿತರ ತಾರಿಸಿ ಪಾವನಗೈಸಿದ ಪರಂಜ್ಯೋತಿ ಪದ್ಮನಾಭನು ನೀನೆ 11 ದೇವಕಿಗೊಲಿದು ಸ್ಥಾಪಿಸಿ ಧರೆಯೊಳು ದ್ವಾರಕಿಯಲಿ ನಿಜ ಲೀಲೆಯು ತೋರಿದ ದುರಿತ ವಿಧ್ವಂಸನ ದೇವಕಿ ಪುತ್ರ ದಾಮೋದರ ನೀನೆ 12 ಸಿದ್ದ ಶರಣರಿಗೊಲಿದ ಸದ್ಗತಿ ಸುಖಸಾಧನ ಸಹದೇವಗದೋರಿದ ಸಂಭ್ರಮದಿ ಸುಧಾಮಗ ಒಲಿದು ಸಂತೋಷವನಿತ್ತ ಸಂಕರುಷಣ ನೀನೆ 13 ವಸುಧಿಯೊಳು ಭಸ್ಮಾಸುರನ ಮರ್ದಿಸಿ ಭಾಷೆಯನಿತ್ತು ಭಕ್ತರ ಪಾಲಿಸಿ ಋಷಿ ವೇದವ್ಯಾಸಗೊಲಿದಾತನು ವಸುದೇವಸುತ ವಾಸುದೇವನು ನೀನೆ 14 ವಿದುರುದ್ಧವ ಗರುಡಗೊಲಿದು ಭೃಗುಮುನಿ ಕಪಿಲ ಯೋಗೇಂದ್ರನ ಸಲಹಿದ ಸ್ಥಿರಪದವಿತ್ತರೊಂದು ಮಂದಿಗೆ ಪ್ರಸನ್ನವಾದ ಪ್ರದ್ಯುಮ್ನನು ನೀನೆ 15 ಸೀತಾ ಸುದ್ದಿಯ ತಂದವಗೊಲಿದು ಹತ್ತು ತಲೆಗಳ ಇದ್ದವನಳಿದು ಕದ್ದುಬೆಣ್ಣೆಯ ಮುದ್ದೆಯ ಮೆದ್ದು ಉದ್ದವಗೊಲಿದ ಅನಿರುದ್ಧನು ನೀನೆ 16 ಸೋಕಿಸಿ ಪೂತಣಿಯ ಕಾಯವು ಹೀರಿದ ಭಕ್ತ ಪುಂಡಲೀಕನ ಸಲಹಿದ ಭಕ್ತಿಗೆ ಒಲಿದು ಮುಕ್ತಿಯನಿತ್ತ ಪರಮ ಪರುಷ ಪುರುಷೋತ್ತಮನು ನೀನೆ 17 ಅಕ್ಷಯವೆಂದು ರಕ್ಷಿಸಿ ಸಭೆಯೊಳು ದ್ರೌಪದಿ ಕರುಣಕಟಾಕ್ಷದಿ ಸಲಹಿದ ಭಕ್ತವತ್ಸಲನಾಗಿ ಗಜೇಂದ್ರಗೆ ಅಧೋಕ್ಷಜ ನೀನೆ 18 ನರನಾರಿಯು ನಾಂಟೀಶರನಾಗಿ ನಖಮುಖದಲಿ ಹಿರಣ್ಯಕನ ಸೀಳಿ ಭಕ್ತಪ್ರಹ್ಲಾದಗ ಒಲಿದು ಸ್ತಂಭದಿ ಪ್ರಕಟಿಸಿದ ನರಸಿಂಹನು ನೀನೆ 19 ಅನಿಳ ಸ್ನೇಹಿತ ಅಜಗ್ನಾನಗ ಒಲಿದು ಅಹಲ್ಯಾ ಶಾಪ ವಿಮೋಚನ ಮಾಡಿದ ನೆಚ್ಚಿದ ಧ್ರುವನ ನಿಜ ಭಕ್ತಿಗೆ ಒಲಿದು ಅಚಲ ಪದವಿತ್ತುಚ್ಯುತ ನೀನೆ 20 ಜಗದೊಳು ಭಕ್ತಜನರಿಗೆ ಒಲಿದು ಜಾಹ್ನವಿ ನಿರ್ಮಿಸಿ ಜನಕನ ಸಲಹಿದ ಸಾಧು ಸಜ್ಜನ ಮುನಿ ಸಂಜೀವನ ಜಾನಕೀಪತಿ ಜನಾರ್ಧನನು ನೀನೆ 21 ಅಂಗದಗೊಲಿದಾನಂದವನಿತ್ತು ಕುಂದದೆ ಕರೆದುಪಮನ್ಯುನ ಸಲಹಿದ ದಿನಕರ ಚಂದ್ರ ಕಳಿಯಗಳಿತ್ತು ಇಂದ್ರಗೆ ಒಲಿದ ಉಪೇಂದ್ರನು ನೀನೆ 22 ಧರೆಯೊಳು ಭಕ್ತನ ಜನ್ಮವು ಹರಿಸಿ ಹರಿಶ್ಚಂದ್ರನ ಕ್ಲೇಶವು ಪರಿಹರಿಸಿದ ಸುರಮುನಿಗೊಲಿದ ಶ್ರೀ ಹರಿಯು ನೀನೆ 23 ಕಾಳಿ ಮಥನವು ಮಾಡಿ ಕರುಣದಿ ಸುರರಿಗೆ ಅಮೃತವನಿತ್ತು ಸಲಹಿದ ಕಲ್ಕ್ಯಾವತಾರದ ಲೀಲೆಯ ತೋರಿದ ಕಪಟ ನಾಟಕ ಶ್ರೀ ಕೃಷ್ಣನು ನೀನೆ 24 ಸಂಧ್ಯಾನದ ಸಾಹಾಯವನಿತ್ತು ಕಾಯದಿ ಸದ್ಗತಿ ಸಾಧನದೋರಿದ ನರಕೀಟಕ ಮಹಿಪತಿ ತಾರಕ ಗುರುಮೂರ್ತಿಯ ಪರಮ ದಯಾನಿಧಿಯು ನೀನೆ 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀರಜಗಂಧಿಯೇ ಹೇಳೇ ಸುಳಿದವರಾರಮ್ಮಾ | ನೀರಜ ಶರಪತಿ ಕಾಣಮ್ಮಾ ಪ ಅರುಣನಖಾಂಗುಲಿ ಗುಲ್ಫ ಗೆಜ್ಜೆ ಕಾ- ಪುರ ನೂಪುರದ ಲೊಪ್ಪುವನವದಾರಮ್ಮಾ | ಸರಸಿಯೊಳಗಪೊಕ್ಕು ತಮನಸುವ ಬಗೆದು | ವರಶೃತಿ ತಂದವ ಕಾಣಮ್ಮಾ 1 ಕಲಿ ದಶನಂದದಿ ಜಂಘೆ ಪೊಂಬಾಳೆಯ | ಪರಿಯ ತೊಡೆಯುಳ್ಳುವ ದಾರಮ್ಮಾ | ಶರಧಿ ಮಥಿಸುವಂದುಗಿರಿನಿಲ್ಲದಿರೆ ಬಂದು | ಭರದಿ ಬೆನ್ನೆವಿತ್ತವ ಕಾಣಮ್ಮ2 ಕಾಂಚನ ವಸನನಿರಿಯ ಮ್ಯಾಲ ವಡ್ಯಾಣ ಮಿಂಚಿನ ಘಂಟೆಯ ದಾರಮ್ಮಾ | ಕ್ಷಿತಿ ವಯ್ದದನುಜನ ಶೀಳಿ ವಿ | ರಂಚಿ ಗುಳಹಿದವ ಕಾಣಮ್ಮಾ3 ಕಿರಿಡೋಳ್ಳಾತ್ರಿವಳಿಯ ನವರತ್ನ ಪದಕಿಹ | ಉರಸಿನ ವತ್ಸನವ ದಾರಮ್ಮಾ | ನರಹರಿ ರೂಪದಿ ಹಿರಣ್ಯಕನನು ಕೊಂದು | ಶರಣನ ಕಾಯ್ದವ ಕಾಣಮ್ಮಾ4 ಕೌಸ್ತುಭಹಾರ ಮೌಕ್ತಿಕದ ಕೊರಳಲಿಹ | ಹಸ್ತ ಕಡಗದವ ನಾರಮ್ಮಾ | ಸ್ವಸ್ತಿ ಎನುತ ಬಂದು ಬೇಡಿ ಬಲಿಯಾಗರ್ವ | ಸ್ವಸ್ತಿ ಮಾಡಿವನು ಕಾಣಮ್ಮಾ5 ಕ | ಪೋಲ ಹೊಳಹಿನವ ದಾರಮ್ಮಾ | ಏಳು ಮೂರು ಬಾರಿ ಕ್ಷತ್ರಿಯ ರಾಯರ ಸೋಲಿಸಿ ಬಂದವ ಕಾಣಮ್ಮಾ6 ಕರ್ಪೂರ ಕರಡಿಗಿ ಬಾಯಿ ಸಂಪಿಗೆಯಂತೆ | ತೋರ್ಪ ನಾಶಿಕದವ ದಾರಮ್ಮಾ | ದರ್ಪ ಮುರಿದು ರಾವಣನ ತಲಿಯ ಧರೆ | ಗೊಟ್ಟಿಸಿದವ ನಿವ ಕಾಣಮ್ಮಾ7 ಕುಡಿಗಂಗಳ ಭ್ರೂಲತೆಯ ಪೆರೆನೆಣೆಸಲು | ಪೊಡವಿಯೊಳಗ ನಂಬಿದ್ದ ಪಾಂಡವರನು | ಬಿಡದೆ ಸ್ಪಾಪಿಸಿದವ ಕಾಣಮ್ಮಾ8 ಕುರುಳು ಗೂದಲು ತಳಕದ ಮಾಲ್ಯ ಮೌಲಿಕ | ಧರಸಿದ ಮುಕುಟವ ದಾರಮ್ಮಾ | ತರಳನಾಗಿ ಮುಪ್ಪುರ ನಾರಿಯರ ವೃತ | ತ್ವರಿತದಿ ಅಳಿದವ ಕಾಣಮ್ಮಾ9 ನೋಡಲು ಮನಸಿಗೆ ಮೋಹನೆ ಮಾಡುವ | ಪ್ರೌಡದಿ ಮನವವ ದಾರಮ್ಮಾ | ರೂಢಿಲಿ ಕುದುರೆಯ ಏರಿ ಕಲಿಮಲವ | ಝಾಡಿಸಿದವನಿವ ಕಾಣಮ್ಮ10 ಸಹಜದಿ ಸವಿಸವಿ ಮಾತಲಿ ಸೋಲಿಸು | ತಿಹ ಸರ್ವರಿಗಿವ ದಾರಮ್ಮಾ | ಮಹಿಪತಿ ಸುತನ ಹೃದಯದಲಿ ನಿಂತು ತನ್ನ| ಮಹಿಮೆ ಬೀರಿಸುವವ ಕಾಣಮ್ಮಾ11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೂರೆಂಟು ನೆನೆದು ಫಲವೇನು ಈರೇಳು ಜಗದೊಡೆಯಹರಿಯನೊಮ್ಮೆ ನೆನೆ ಮನವೆ ಪ. ಧನದಾಸೆಗಳಲದಿರು ಭವದುಃಖ ಬಳಲದಿರುಜನಾರ್ದನನ ಮರೆಯದಿರು ಈ ತನುವ ಪೊರೆಯದಿರುಅನಘಜನರೊಡನಾಡು ದಿನದಿನ ಶುಭವಕೂಡುಇನಿತು ಜನಮವೆ ಸಾಕು ಇನ್ನು ಮುಕುತಿಯೆ ಬೇಕು 1 ಸಾಕು ದುರ್ಜನÀರಾಟ ಸಾಕು ಸತಿಯರ ಬೇಟಸಾಕು ಸವಿಯನ್ನದೂಟ ಸಾಕು ಘನಕೂಟಸಾಕು ದೇಶಕೆವೋಟ ಸಾಕು ಸಲೆ ಭವನೋಟಸಾಕದೆಲ್ಲ ಖಳಕೂಟ ಸಾಕುಮನೆ[ಮಠ] 2 ಕೇಳು ಹರಿಮಹಿಮೆಯನು ಪೇಳು ಹರಿನಾಮವನುಬಾಳು ಬಂದಷ್ಟರಿಂದ ತಾಳು ಹಸಿತೃಷೆಗಳಶ್ರೀಲಲನೆಯಾಳ್ದ ಹಯವದನ ಸಿರಿನರಹರಿಯಆಳುತನವನು ಬೇಡು ಕೀಳು ಬುದ್ಧಿಯ ದೂಡು 3
--------------
ವಾದಿರಾಜ
ನೆಚ್ಚದಿರು ಸಂಸಾರ ಕಡೆಗೆ ಹಾಕುವುದಲ್ಲ ಮಚ್ಚುಗೊಳಿಸುವುದು ವಿಷಯದಲಿ ಎಚ್ಚತ್ತು ಪ್ರವರ್ತಿಸು ಇನ್ನಾದರೂ ಸಿರಿ- ಅಚ್ಯುತನ ಪಾದವನು ನಂಬೊ ಪ್ರಾಣಿ ಪ ಪುಂಪೆಣ್ಗಳಿಂದ ಪುಟ್ಟಿದ ದೇಹವನು ತಿಳಿ ಕೆಂಪು ಬಿಳಿದಿನ ವರ್ಣ ಮಿಳಿತ ಇಂಪಾಗಿದೆಯೆಂದು ಹಿಗ್ಗದಿರೆಲವೊ ಹೊಲೆ- ಗಂಪು ನಾರುವುದು ಅದ ತೊಳೆಯದೆ ಇರಲು 1 ಜನಿಸಿದಾಕ್ಷಣ ಕಾಯು ಕಡಮೆಂದು ತಿಳಿಯದಲೆ ಜನನಿ ಜನಕರು ಸುಖಿಸುತಿಹರು ತನುಭ್ರಮಣವಲ್ಲದೆ ಚಿದ್ರೂಪ ಬಲ್ಲರೆ ಕೊನೆಗೆ ಏನಾಗುವುದೊ ಪ್ರಾಣಿ 2 ಗಳಿಸಿ ಧನ ತರುವಾಗ ಸುತ್ತ ನೆರೆದಿಹರೆಲ್ಲ ಭಳಿರೆ ಇವ ಮಹಾತ್ಮನೆಂದು ಘಳಿಗೆ ತೊಲಗಲು ಧನವು ಕರಗಿ ತಿಂದು ಪೋಗಿ ಹಳಿದು ಹಲ್ತೆರೆದು ಅಣಕಿಪರೋ-ಪ್ರಾಣಿ 3 ಹುಬ್ಬಿನಿಂದಲೆ ಹೊಡೆದು ಹೃದಯದ ಕಗ್ಗಂಟು ಕಬ್ಬು ಕಾರ್ಮುಕನಿಂದ ಬಿಡಿಸಿ ಉಬ್ಬಿಸ್ಯುಕ್ಕಿನ ತಂತಿಯಂತೆ ಮಾತುಗಳಾಡಿ ಉಬ್ಬಸವ ಬಡಿಸುವಳೊ ನಾರಿ ಪ್ರಾಣಿ 4 ಯೌವನವೊದಗಿದಾಗ ಏನೆಂದರೂ ಅಪ್ಪ ಅವ್ವಣ್ಣನೆಂದು ನಸುನಗುತ ಗವ್ವಳಿಕೆ ವೃದ್ಧಾಪ್ಯ ಬಂದೊದಗಲು ಇವನ ಬವ್ವನ ತೆರೆದಲಾಡಿಪರೋ-ಪ್ರಾಣಿ 5 ನಿಷ್ಠಕ್ಕೆ ದೇಹವನು ಮಾಡಿಕೊಂಡಂತೆ ನೀ ದುಷ್ಕರ್ಮಕೊಳಗಾಗದಿರೆಲೋ ನಿಷ್ಕಂಟಕವಾದ ಮಾರ್ಗದಲಿ ನರಹರಿಯ ನಿಷ್ಕಾಮದಲಿ ಭಜಿಸೊ ಮನವೆ ಪ್ರಾಣಿ 6 ಅಂ¨ಲಿಗೆ ಗೃಹಪಾಲ ಮನೆ ಮುಂದೆ ಹಗಲಿರುಳು ಹಂಬಲಿಸಿ ಬಿದ್ದಂತೆ ನೀನು ಕವಿ ಜೋತು ಬಿದ್ದು ಈ ಡಿಂಬವನು ಪೋಷಿಸದಿರೆಲವೊ-ಪ್ರಾಣಿ 7 ದೇಹಕ್ಕೆ ಬಲವಾಗಬೇಕೆಂದು ಎಲ್ಲರೊಳು ಕಂಡಲ್ಲಿ ಸ್ನೇಹಭಾವವನ್ನು ಬಯಸಿ ಕಾಯ ಪುಷ್ಟಿಯಿಂದ ಮೋಹಕ್ಕೆ ಒಳಗಾದೆಯಲ್ಲೋ-ಪ್ರಾಣಿ8 ಸ್ವಲ್ಪ ದಿನವುಳಿಯಿತು ಒಂದು ಸಾಧನ ಕಾಣೆ ಕಲ್ಪಾಯು ನಿನಗಿಲ್ಲವಲ್ಲೊ ಬಲ್ಪಂಥಗಳ ಮಾಡಿ ಭೋಗಪಡದಿರು ನಾಗ- ತಲ್ಪನ್ನ ಮೊರೆಹೋಗಲೋ-ಪ್ರಾಣಿ9 ದೇಶ ದೇಶವ ತಿರುಗಿ ಬಳಲಿ ಬಾಯಾರಿ ನೀ ಕ್ಲೇಶಕೊಳಗಾಗಿ ಹೊನ್ನುಗಳ ಏಸೇಸು ತಂದದ್ದು ಏನಾಯಿತೋ ಒಂದು- ಕಾಸು ನಾಳೆಗೆ ಕಾಣೆಯೋ-ಪ್ರಾಣಿ10 ಎಂದಿಗಾದರೋ ಇದೇ ಸಂಸಾರ ವಿಸ್ತಾರ ಒಂದಕ್ಕೆ ಒಂದೊಂದು ಅಧಿಕ ಬಂಧನವಲ್ಲದಲೆ ಲೇಶ ನಿರ್ಮಲ ಕಾಣೆ ಪೊಂದು ಸಜ್ಜನರಲ್ಲಿ ಮಂದ-ಪ್ರಾಣಿ11 ನಿತ್ಯ ಗಂಡಾಂತರದಿ ಬಿದ್ದು ಸಕಲಕ್ಕೆ ಕರ್ತೃ ನಾನೆಂದು ಕೂಗುವಿಯಲೊ ಮೃತ್ಯು ನಗುವುದು ನಿನ್ನ ಹೆಡತಲೆಯಲಿ ನಿಂದು ಚಿತ್ತದಲ್ಲಿ ತಿಳಿದು ತಲೆ ಬಾಗೊ-ಪ್ರಾಣಿ 12 ದೊಡ್ಡವನು ನಾನು ಎನಗೆಲ್ಲ ಜನರು ಬಂದು ಅಡ್ಡಬೀಳುವರೆಂಬ ಮಾತು ಹೆಡ್ಡತನ ತಾಳದಿರು ಕೊನೆಗೆ ಅನುಭವಕ್ಕು ಕಡ್ಡಿಯಂದದಿ ಮಾಳ್ಪರೋ-ಪ್ರಾಣಿ 13 ಕೋಟಿಯಾದರು ಕೇಳು ಅವರೋಕ್ಷಿಗಾದರೂ ಕೋಟಲೆಯೊಳಿರದೆ ಗತಿಯಿಲ್ಲ ತಾಟತೂಟಕ ಮಾಡಿ ಅವರಂತೆ ನುಡಿದು ಭವ ದಾಟಬೇಕೋ ಬೇಗ ಜಾಣ-ಪ್ರಾಣಿ14 ಆದರಿಸಿ ಸತಿಸುತರು ಬಂಧು ಬಳಗಕ್ಕೆ ಸಂ ಪಾದಿಸಿ ಧನ ಧಾನ್ಯ ತಂದು ಮೋದಪಡಿಸುವೆನೆಂದು ವಾದಿಸುವ ಮನುಜನ್ನ ಪಾದಕ್ಕೆ ಶರಣು ಸಾರೆಲವೋ-ಪ್ರಾಣಿ 15 ವನಧಿಯೊಳು ಸಪ್ತದ್ವೀಪದ ಮೃತ್ತಿಕೆ ಹಾಕೆ ದಣುವಿಕ್ಯಲ್ಲದೆ ಪೂರ್ಣವಹುದೆ ಇನಿತು ತಿಳಿಯೆಲ್ಲೆಲ್ಲಿ ತಂದ ಧನದಿಂದ ಭವ- ವನಧಿ ತುಂಬದು ಕಾಣೊ ಮರುಳೆ-ಪ್ರಾಣಿ 16 ನಿತ್ಯ ಬರೆದ ಲೆಖ್ಖವು ದಿವಾ ರಾತ್ರಿ ನೋಡುತಲಿದ್ದು ನಿನ್ನ ಪತ್ರ ಕರದಲಿ ಪಿಡಿದು ಈ ಮೂರ್ಖ ನರಮಹಿಷ- ಪುತ್ರನೆಂದು ನಸುನಗುವರಲ್ಲೋ-ಪ್ರಾಣಿ 17 ಎನಗೆ ತನಗೆಂದು ಯಮಭಟರು ಕರಗಳ ಹೊಯಿದು ಕಣಿದು ಭುಜ ಚಪ್ಪರುಸುತಿಹರೊ ಅನಿತರೊಳಗೆಚ್ಚರಿಕೆ ಎಚ್ಚತ್ತು ಹರಿಚರಣ ವನಜ ಧಾನ್ಯವ ಒಲವು ಮಾಡೊ-ಪ್ರಾಣಿ 18 ಶ್ರುತಿಗೆ ಅಪ್ರಾಮಾಣ್ಯ ಬಾರದಂತೆ ಮಧ್ವ ಮತಕೆ ವಿರೋಧವಾಗದಂತೆ ಕ್ಷಿತಿಯೊಳಗೆ ಸುಜನರಿಗೆ ಹಿತವಾಗುವಂತೆ ಶ್ರೀ- ಪತಿಯ ಸೇವಿಸಿ ಸುಗತಿ ಪಡೆಯೋ-ಪ್ರಾಣಿ 19 ಅರ್ಥಬಾರದು ನಿನ್ನ ಸಂಗಾತ ಕೇಳ್ ಕೊನೆಗೆ ವ್ಯರ್ಥಧಾವತಿ ಪ್ರಾಪ್ತಕರ್ಮ ತೀರ್ಥಯಾತ್ರೆಯ ಮಾಡಿ ನಿಸ್ಸಂಗನಾಗು ಯ_ ಥಾರ್ಥಾ ಜ್ಞಾನದಿಂದ ಬಾಳೊ ಪ್ರಾಣಿ20 ಶಿಥಿಲವಾಗಿ ಪೋಪ ದೇಹಕೆ ಮಮತಿಂದ ಮಿಥುನ ಭಾವಗಳನ್ನೆ ಬಯಸಿ ವ್ಯಥೆಪಟ್ಟು ಪಥತಪ್ಪಿ ನಡೆದು ನರಹರಿ ಸುಗಣ ಕಥೆಗೆ ವಿಮುಖನಾಗದಿರೆಲೊ-ಪ್ರಾಣಿ 21 ವನಗಿರೀ ನದಿ ಮೆದೆ ಹೊದರು ಗಹ್ವರ ಹುತ್ತ ವನರಾಶಿ ದ್ವೀಪ ಪಾತಾಳ ತನು ಮತ್ರ್ಯ ಸುರಲೋಕ ಜನನಿ ಜಠರದೊಳಿರಲು ಅಣು ಮಾತ್ರ ತಪ್ಪುವುದೆ ಬರಹ ಪ್ರಾಣಿ 22 ಹಲವು ಹಂಬಲ ಸಲ್ಲ ಆದ್ಯಂತಕಾಲದಲಿ ಗಳಿಸಿಕೋ ಪೂರ್ಣಾಯು ವಾಯು ಒಲಿಯದಲೆ ನಿನ್ನೊಳಗೆ ವಿಜಯವಿಠ್ಠಲರೇಯ ಸುಳಿಯ ಜಾಗ್ರತನಾ ಗೆಲೋ ಪ್ರಾಣಿ 23
--------------
ವಿಜಯದಾಸ