ಒಟ್ಟು 442 ಕಡೆಗಳಲ್ಲಿ , 79 ದಾಸರು , 404 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮೂಲನಾರಾಯಣ ವಟಪತ್ರಶಾಯಿ ಕಾಲಕಾಲಕೆ ವೊದಗಿ ನೀಯೆನ್ನ ಕಾಯೋ ಪ. ಎಂದೆಂದಿಗೂ ಎನಗೆ ತಂದೆ ನೀ ದೇವಾ ಯಿಂದೆನ್ನ ಕರಪಿಡಿಯೋ ಬಿಂದುಮಾಧವಾ ಅ.ಪ. ಸ್ವಚ್ಛ ಮನವಮಾಡು ಮತ್ಸರೂಪಕನೆ ತುಚ್ಛ ಮನಕೊಂದ ವಿಶ್ವವ್ಯಾಪಕನೆ 1 ಮುಂದೆನ್ನ ಉದ್ಧರಿಸು ಮಂಧರೋದ್ದರನೆ ಇಂದ್ರಾದಿ ಸುರರಿಂದ ವಂದ್ಯಾಸುರವರನೆ 2 ಹಿರಣ್ಯಾಕ್ಷನ ತರಿದಂಥ ಧೀರ ಭರಧಿ ವೇದವ ತಂದ ಮಹಿಮೆ ಅಪಾರ 3 ತರಳ ಪ್ರಹ್ಲಾದನ ತಲೆಗಾಯ್ದ ರೂಪ ಸರಳ ಮತಿಯನಿತ್ತು ಪಾಲಿಸು ಶ್ರೀಶ 4 ಬಲಿಯ ಸಿಕ್ಕನು ಮುರಿದೆ ಪ್ರಬು ನಿನ್ನ ಕೀರ್ತಿ ಯೊಳ ಎನ್ನ ಮನವಿಡು ವಾಮನಮೂರ್ತಿ 5 ಕ್ಷತ್ರಿಯ ಕುಂಭವ ಸವರಿದ ರಾಮ ಶತಷಟ್ಯಂದರ ಬಡಿದ ದಿವ್ಯ ನಾಮ 6 ದಾನವ ಕುಲಕುಟಾರ ಶ್ರೀ ರಾಮ ಮಾನಾಭಿಮಾನವು ನಿನ್ನದೋ ರಮ 7 ಮಲ್ಲರ ಗೆದ್ದಂಥ ದೂಕುಳ ವೈರಿ ಗೊಲ್ಲಬಾಲಕರ ಕೂಡಾಡಿದ ಶೌರಿ ಶೌರಿ 8 ತ್ರಿಪುರರ ಸ್ತ್ರೀಯರ ವ್ರತ ಕೆಡಿಸಿದ ಜಾಣ ಉಪಗಮನ ವೀಯೋ ವಿಶ್ವೇಶ ಸುಜ್ಞಾನ 9 ಕಲಿಮುಖದೈತ್ಯರ ಅಳಿಯುವ ಕಲ್ಕಿ ಸಲಹೋ ಬಳಲುವೆ ನಾನು ಭವದಿಂ ಶಿಲ್ಕಿ10 ಗುರು ಕಾಳೀಮರ್ಧನಕೃಷ್ಣ ಯಾವಾಗ್ಯು ಶರಣುಜನರಪಾಲ ಏನು ಬಂದಾಗ್ಯು 11
--------------
ಕಳಸದ ಸುಂದರಮ್ಮ
ಮೆಲ್ಲನೇಳಯ್ಯ ಮಣಿವೆ ಪ ನಲ್ಲುಲಿಗಳಿಂದ ಶುಕಪಿಕಗಳೆಚ್ಚರಿಸುತಿವೆ ಅ.ಪ ಅರುಣ ವರ್ಣದ ಗಗನಯೆಂಬ ಹರಿವಾಣವನು ಕರದಿ ಪಿಡಿದೆತ್ತೆ ನಿನಗಾರತಿಯ ಗೈಯಲು ತರಣಿ ನಿಂದಿರ್ಪ ತುಂಬುರು ನಾರದರು ಮುದದಿ ಪರಮಾತ್ಮ ಸುಪ್ರಭಾತಗಳ ಪೇಳುವರು 1 ಭೃತ್ಯ ದಿಕ್ಪಾಲಕರು ಅತ್ಯಧಿಕ ಭಕ್ತಿಯಿಂ ಕರವೆತ್ತಿ ಮುಗಿದು ನಿತ್ಯಕಾರುಣ್ಯ ಪರಿಪೂರ್ಣ ಸದ್ಭಕ್ತಗಣ ನುತ್ಯ ನೀನೇಳೆಂದು ನುತಿಸುತಿಹರು 2 ನಿನ್ನ ನಾಮವ ಭಜಿಸಿ ಪಾದಪೂಜೆಯ ಗೈದು ನಿನ್ನ ಕಾರುಣ್ಯ ದರ್ಶನಕೆ ಕಾದಿರುವಾ ಪನ್ನರೆಲ್ಲರ್ಗೆ ದರ್ಶನವ ನೀನೀಯಲು ಇನ್ನೇಕೆ ತಡ ಏಳು ಮಾಂಗಿರೀಶ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮೊರೆಯ ಲಾಲಿಸಬೇಕು ಮರುಗಿ ದಮ್ಮಯ್ಯಾವರದ ಸದ್ಗುರುರಾಯ ವಾಸುದೇವಾರ್ಯ ಪ *ಜನನೀಯ ಜಠರಾದಿ ಜಪಿಸಿದ ಸ್ಥಿತಿಯಾನೆನೆಯಾದೆ ಮರೆತಂಥ ನೀಚಾ ನಾನಯ್ಯಾಸನಿಹವನ ಸೇರಾದೆ ಸುಜ್ಞಾನರಡಿಯಾಕಣುಗೆಟ್ಟು ದಾರಿಯಕಾಣೆ ಗುರುರಾಯಾ 1ಕಾಮಾದಿ ರಿಪುಗಾಳ ಕೂಟದಿ ನಿಂದುಪ್ರೇಮಪಾಶದ ಕಟ್ಟು ಬಿಗಿಯಾಗಿ ಬಂದುಭೀಮಸಂಸಾರದಿ ಬಿದ್ದನಿವನೆಂದುನೀ ಮನಕೆಚ್ಚರ'ತ್ತು ಸೆಳಕೊಂಡು 2ಕೊಳಚೆಯೊಳಿಪ್ಪಾ ಸೂಕರ ವಾಸನೆಯುತೊಲಗಿ ಪೋಗಲಿಯೆಂದು ತೋರ್ಪುದೆ ಮತಿಯುಹೊಲೆದೇಹ ನಾನೆಂಬ ಹಳೆಯ ಸಂಗತಿಯುಬಲಿತಿದೆ ನೀನಿದ ಬಿಡಿಸಿ ಸನ್ಮತಿಯ 3ಸಾಲವ ತಂದು ಸ' ಸ'ಯಾಗಿ ತಿಂದೂಬಾಳುತಿರೇ ಕೊಟ್ಟವ ಬಡ್ಡಿ ಬೇಕೆಂದುಕೇಳಿ ಬಾಧಿಸಲೇತಕೆ ಕಡಗೈದೆನೆಂದುಆಲೋಚಿಪಂತೆಚ್ಚರಾುತೆನಗಿಂದು 4ಬರುವುದು ಸುಖವೆಂದು ಬಲುಯತ್ನಗೈದುಸೊರಗಿದೆನಲ್ಲದೆ ಸುಖಗಾಣೆ ನೊಂದುಕರಣಕೆಚ್ಚರವೊ ಕರುಣಿಸಲ್ಪ'ದುಕರಪಿಡಿದುಳುಹೆಂದು ಕೂಗಿದೆನಿಂದು 5ುೀ ದಯಾರಸಕೆ ನಾನೀವೆನೇನುವನುಪಾದಪದ್ಮವ ನಂಬಿ ಪಾಲಿಸೆಂಬುವನುಆದರಿಸುತ ಭಕ್ತಿಯಾನಂದವನ್ನುವೇದವೇದ್ಯನೆ ಕೊಟ್ಟು ಸಲಹು ನೀನಿನ್ನು 6ಪುಟ್ಟಿದಂದಿನಿಂದಾ ಮಡಿ ಮಡಿಯಾಗಿ ದುಡಿದುಘಟ್ಟಿಗತನವನು ಗಳಿಸಬೇಕೆಂದುಹೊಟ್ಟೆ ಹೊರಕರೊಳಾಡಿ ಹುಸಿಯನೆ ನುಡಿದುಕೆಟ್ಟು ಸುಖಗಾಣದೆ ಕೂಗಿದೆನಿಂದು 7ಸಾಕಾುತಯ್ಯಾ ಸಂಸಾರ ಕೋಟಲೆಯುನಾ ಕಾಣೆ ಸುಖವನು ನಿ'ುಷವಾದರೆಯುನೀಕರಿಸುವರಿಂದ ನಿರ್ವೇದ ಗತಿಯುಸೋಕಲು ನಿನ್ನೊಳು ಸಿಕ್ಕಿತು ಮತಿಯು 8ಧರೆಯೊಳಜ್ಞರ ನೋಡಿ ದಯದಿಂದ ಮುದದಿನರದೇಹದಾಳಿ ಚಿಕನಾಗಪುರವರದಿಒರೆದು ವೇದಾಂತರ್ಥವನು 'ಸ್ತರದಿ 1ಉದ್ಧರಿಸಿದೆ1 ವಾಸುದೇವಾರ್ಯ ಸುಖ ಪಥದಿ 9(ಈ) ಸಾಮಾಜಿಕ ಕೃತಿಗಳು
--------------
ವೆಂಕಟದಾಸರು
ಮೋದ ಪ್ರದ ನರಹರಿ | ವಿಠಲ ಪೊರೆ ಇವಳಾ ಪ ಪಾದ್ಯ ಪ್ರ | ಹ್ಲಾದ ರಕ್ಷಕನೇ ಅ.ಪ. ನೀನೇವೆ ಗತಿಯೆಂದು | ಆನೇಕ ವಿಧ ನಿನ್ನಸಾನುರಾಗದಿ ಪೊಗಳ್ವ | ಮಾನುನೀ ಮಣಿಗೇಜ್ಞಾನೋದಯವ ಗೈದು | ಕಾಣಿಸೋ ಸದ್ಗತಿಯಮಾನ ಮಾನ್ಯದ ಹರಿಯೆ | ಆನತೇಷ್ಟದನೇ 1 ಜೀವ ಅಸ್ವಾಂತಂತ್ರ | ದೇವ ನಿಜ ಸ್ವಾತಂತ್ರಈ ವಿಧದ ಸುಜ್ಞಾನ | ಓದಿ ಪಾಲಿಸುತಾ |ಕೇವಲಾನಂದ ಮಯ | ದೇವ ತವ ಸೇವೆಯನುಭಾವ ಭಕ್ತಿಯಲಿಂದ | ಗೈದ ಮನನೀಯೋ2 ನೆರೆಹೊರೆಯ ಜನರೇನು | ಮರಳಿ ಬಹು ಬಾಂಧವರುಹರಿ ನಿನ್ನ ಪರಿವಾರ | ಸರಿಯೆಂಬ ಮತಿಯಾಕರುಣಿಸುತ ತರಳೆಗೇ | ಪರುಷಾರ್ಥ ಸಾಧನದಪರಿಯನರುಹುತ ಪೊರೆಯೊ | ವರಲಕ್ಷ್ಮಿ ಪತಿಯೇ 3 ಸಾಧನ ಸುಜೀವಿಗಳ | ಕಾದು ಬಾಯ್ದೆರೆಯುತಿರೆಮೋದ ಬಡಿಸುವುದು ಚಿತ್ | ಸಾಧು ಜನವಂದ್ಯಾಮೋದ ಮುನಿ ಪಾದಾಬ್ಜ | ಆದರದಿ ವಂದಿಪಳೋಹೇ ದಯಾಂಬುಧೆ ಮನದಿ | ಮೈದೊರೊ ಹರಿಯೇ 4 ಬೋವ ನೀನಾದೇನೀ ವೊಲಿಯಲಿನ್ನೇನು | ಆವುದಾಸಾಧ್ಯವೋಪೂವಿಲ್ಲನಯ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಯಜನವಾಗಲಿ ನಾನು ಭುಜಿಸುವುದು ಎಲ್ಲ ಪ ಅಜಪಿತನೆ ಅದರ ಅನುಸಂಧಾನವನು ಅರಿಯೆ ಅ.ಪ ದೇಹವೆಂಬುದೆ ಯಜ್ಞಶಾಲೆಯಾಗಿ ಮಹಯಜ್ಞಕುಂಡವು ಎನ್ನ ವದನವಾಗಿ ಆವಹನೀಯಾಗ್ನಿಯು ಮುಖದಲ್ಲಿ ಹೃದಯದೊಳು ಗಾರ್ಹಸ್ಪತೀ ದಕ್ಷಿಣಾಗ್ನಿಯು ಸುನಾಭಿಯಲ್ಲಿ 1 ಅರಿ ಪಂಚಾಗ್ನಿಯೊಳು ಆಕ್ಷಣದಿ ಪ್ರಾಣಾದಿ ಪಂಚರೂಪಗಳು ಹೋತಾಉದ್ಗಾತಾದಿ ಋತ್ವಿಕ್ಕುಗಳಾಗಿ ನಿಂತಿಹರೆಂದು2 ಆಹುತಿಯ ಕೊಡತಕ್ಕ ಶೃಕಶೃಕ್‍ಶೃವಗಳು ಬಾಹುಗಳು ಇಹಭೋಜ್ಯವಸ್ತುವೆಲ್ಲ ಆಹುತಿಯು ದೇಹಗತ ತತ್ವರು ಪರಮಾತ್ಮ ಬ್ರಾಹ್ಮಣರು ಜೀವ ದೀಕ್ಷಿತನು ಬುದ್ಧಿತತ್ಪತ್ನಿ 3 ಅಹಂಮಮತಾದಿ ಅರಿಷಡ್ವರ್ಗಗಳು ವುಹಯಜ್ಞದ ಯೂಪಸ್ಥಂಭದ ಪಶುಗಳು ಅಹರಹ ಬಹ ನೀರಡಿಕೆಯು ಕುಡಿವನೀರೆಲ್ಲವು ಯಜನಕಾರ್ಯದ ಮಧ್ಯ ಪರಿಷಂಚಾಮಿ4 ಇಷ್ಟಾದರನುಸಂಧಾನವನೆ ಕೊಡುಕಂಡ್ಯ ಶ್ರೇಷ್ಠಮೂರುತಿ ಶ್ರೀ ವೇಂಕಟೇಶ ನಿಷ್ಠೆಯೆನ್ನೊಳಗಿಲ್ಲ ಉರಗಾದ್ರಿವಾಸವಿಠಲ ಹೊಟ್ಟೆಹೊರೆವುದು ನಿನಗೆ ತುಷ್ಟವಾಗಲಿ ದೇವ 5
--------------
ಉರಗಾದ್ರಿವಾಸವಿಠಲದಾಸರು
ಯತಿ ವರ್ಣನೆ ಕಾಶೀಮಠದ ಶ್ರೀ ಭುವನೇಂದ್ರರ ಸ್ತುತಿ ಕಂಡು ಕೃತಾರ್ಥನಾದೆ ಭುವನೇಂದ್ರರಂಘ್ರಿಯ ಕಂಡು ಕೃತಾರ್ಥನಾದೆ ಪ. ಕಂಡು ಕೃತಾರ್ಥನಾದೆ ಭೂ- ಮಂಡಲದಿ ಪೆಸರ್ಗೊಂಡು ಮೆರೆದಿಹ ಪುಂಡರೀಕದಳಾಕ್ಷ ಸತತಾ- ಖಂಡಸುಖ ಮಾರ್ತಾಂಡತೇಜರ ಅ.ಪ. ವಾರಿರುಹಭವಾಂಡದ ಭೂಮಧ್ಯ ವಿ- ಸ್ತಾರಜಂಬೂದ್ವೀಪದ ನವಖಂಡದೊಳ್ ಸಾರಭರತಖಂಡದÀ ಹಿಮಗಿರಿಯ ಪಾಶ್ರ್ವದ ತೋರ್ಪ ವಿಂಧ್ಯಾಚಲದ ಮಧ್ಯ ಭಾ- ಗೀರಥಿಯ ಪಶ್ಚಿಮ ಭೂಭಾಗದ ತೀರ ಕಾಶೀಮಠಸಂಸ್ಥಾನ ವಿ- ಚಾರಶಾಸ್ತ್ರವಿಶಾರದರ ಪದ 1 ವರ ರಾಜೇಂದ್ರ ಯತೀಂದ್ರರ ಕರಸಂಜಾ- ತರ ಗುರುಸುರೇಂದ್ರರ ಕರಕಮಲಮಧ್ಯದಿ ಧರಿಸಿರ್ದ ವಿಭುದೇಂದ್ರರ ಸರೋರುಹ ಕರಸಂಜಾತ ಮಹಾನುಭಾವರ ಕರುಣನಿಧಿ ಕಮನೀಯ ಸದ್ಗುಣ ಭರಿತ ಶ್ರೀಭುವನೇಂದ್ರರಂಘ್ರಿಯ 2 ಸುಂದರಮುಖಶೋಭೆಯ ಪೂರ್ಣಮಿ ಶುಭ ಚಂದ್ರಸನ್ನಿಭಕಾಂತಿಯ ಶೋಭಿಪ ನವ ಕುಂದರದನ್ತಪಂಕ್ತಿಯ ತಿಲಕದ ಛಾಯ ಮಂದಹಾಸಾನಂದ ಪುರಜನ ವೃಂದಪೂಜಿತಪಾದಪದ್ಮ ದ್ವಂದ್ವ ಸತತಾನಂದ ಸದ್ಗುಣ ಇಂದ್ರ ಶ್ರೀಭುವನೇಂದ್ರರಂಘ್ರಿಯ 3 ಶೃಂಗಾರರಸತೇಜರ ಯಮನಿಯಮಾದ್ಯ ಷ್ಟಾಂಗಯೋಗಸರ್ವಜ್ಞರ ಪಾಪಾತ್ಮರ ಕಂಗಳಿಗಗೋಚರ ಸತ್ಯಾವತಾರ ಮಂಗಳಾತ್ಮಕಸಂಗ ಸುಮಮನಸ ರಂಗ ಸಾಧ್ಯವೇದಾಂಕ ಕರುಣಾ ಪಾಂಗ ವಿಬುಧೋತ್ತುಂಗ ಅಂಗಜ ಭಂಗ ಶ್ರೀಯತಿಪುಂಗವರ ಪದ 4 ಎಷ್ಟೆಂದು ನಾ ಪೇಳಲಿ ಸದ್ಗುರುವರ- ರಿಷ್ಟಕೆ ತೋಷ ತಾಳಲಿ ದಾರಿದ್ರ್ಯದ ಕಷ್ಟವೆಲ್ಲ ಪರಿಹರಿಸಲಿ ದಯವಿರಲಿ ಎನ್ನಲಿ ಶ್ರೇಷ್ಠ ಗೌಡಸಾರಸ್ವತ ಸ- ಮಷ್ಟಿ ಕೊಂಕಣದೇಶವಿಪ್ರ ವಿ- ಶಿಷ್ಟ ಒಡೆತನ ಪಟ್ಟವಾಳುವ ಶ್ರೇಷ್ಠಯತಿವರರಂಘ್ರಿಕಮಲವ 5 ಆಶೆಯೊಂದುಂಟೆನಗೆ ಕಾವ್ಯವ ಓದ್ಯ- ಭ್ಯಾಸಗೈಯುವದು ಮಿಗೆ ಸನ್ನಿಧಾನದಿ ಪೋಷಿಸಿ ಎನ್ನ ಹೀಗೆ ರಕ್ಷಿಸಲು ಕಡೆಗೆ ಏಸು ಧನ್ಯನು ನಾನು ಕರುಣಾ ನಿಗಮ ವಿ- ಲಾಸರಂಘ್ರಿಗೆ ದಾಸದಾಸರ ದಾಸ ನಾನು ದಯಾಶರಧಿಯರ 6 ಸತತ ಸದ್ಯತಿಧರ್ಮದ ಪರಿಪಾಲಿಸಿ ಕ್ಷಿತಿಗತಿ ಪ್ರತಿವಾಸವನಂತೆಸೆವುತಾ ಮಿತ ಭಾಗ್ಯಸಂಪದವ ವಿಖ್ಯಾತವ ರತಿಪತಿಯ ಪಿತ ಕ್ರುತುಪಾಲಿತ ಸೂ- ನೃತಭಾಷಿತ ಲಕ್ಷ್ಮೀನಾರಾಯಣ ಸತತ ವೇದವ್ಯಾಸ ಶ್ರೀರಘು ಪತೀಚರಣಪೂಜಿತರ ಪದವನು 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಯತಿ ವರ್ಣನೆ ಕಾಶೀಮಠದ ಶ್ರೀ ಭುವನೇಂದ್ರರ ಸ್ತುತಿ ಕಂಡು ಕೃತಾರ್ಥನಾದೆ ಭುವನೇಂದ್ರರಂಘ್ರಿಯ ಕಂಡು ಕೃತಾರ್ಥನಾದೆಪ. ಕಂಡು ಕೃತಾರ್ಥನಾದೆ ಭೂ- ಮಂಡಲದಿ ಪೆಸರ್ಗೊಂಡು ಮೆರೆದಿಹ ಪುಂಡರೀಕದಳಾಕ್ಷ ಸತತಾ- ಖಂಡಸುಖ ಮಾರ್ತಾಂಡತೇಜರಅ.ಪ. ವಾರಿರುಹಭವಾಂಡದ ಭೂಮಧ್ಯ ವಿ- ಸ್ತಾರಜಂಬೂದ್ವೀಪದ ನವಖಂಡದೊಳ್ ಸಾರಭರತಖಂಡದÀ ಹಿಮಗಿರಿಯ ಪಾಶ್ರ್ವದ ತೋರ್ಪ ವಿಂಧ್ಯಾಚಲದ ಮಧ್ಯ ಭಾ- ಗೀರಥಿಯ ಪಶ್ಚಿಮ ಭೂಭಾಗದ ತೀರ ಕಾಶೀಮಠಸಂಸ್ಥಾನ ವಿ- ಚಾರಶಾಸ್ತ್ರವಿಶಾರದರ ಪದ 1 ವರ ರಾಜೇಂದ್ರ ಯತೀಂದ್ರರ ಕರಸಂಜಾ- ತರ ಗುರುಸುರೇಂದ್ರರ ಕರಕಮಲಮಧ್ಯದಿ ಧರಿಸಿರ್ದ ವಿಭುದೇಂದ್ರರ ಸರೋರುಹ ಕರಸಂಜಾತ ಮಹಾನುಭಾವರ ಕರುಣನಿಧಿ ಕಮನೀಯ ಸದ್ಗುಣ ಭರಿತ ಶ್ರೀಭುವನೇಂದ್ರರಂಘ್ರಿಯ2 ಸುಂದರಮುಖಶೋಭೆಯ ಪೂರ್ಣಮಿ ಶುಭ ಚಂದ್ರಸನ್ನಿಭಕಾಂತಿಯ ಶೋಭಿಪ ನವ ಕುಂದರದನ್ತಪಂಕ್ತಿಯ ತಿಲಕದ ಛಾಯ ಮಂದಹಾಸಾನಂದ ಪುರಜನ ವೃಂದಪೂಜಿತಪಾದಪದ್ಮ ದ್ವಂದ್ವ ಸತತಾನಂದ ಸದ್ಗುಣ ಇಂದ್ರ ಶ್ರೀಭುವನೇಂದ್ರರಂಘ್ರಿಯ3 ಶೃಂಗಾರರಸತೇಜರ ಯಮನಿಯಮಾದ್ಯ ಷ್ಟಾಂಗಯೋಗಸರ್ವಜ್ಞರ ಪಾಪಾತ್ಮರ ಕಂಗಳಿಗಗೋಚರ ಸತ್ಯಾವತಾರ ಮಂಗಳಾತ್ಮಕಸಂಗ ಸುಮಮನಸ ರಂಗ ಸಾಧ್ಯವೇದಾಂಕ ಕರುಣಾ ಪಾಂಗ ವಿಬುಧೋತ್ತುಂಗ ಅಂಗಜ ಭಂಗ ಶ್ರೀಯತಿಪುಂಗವರ ಪದ4 ಎಷ್ಟೆಂದು ನಾ ಪೇಳಲಿ ಸದ್ಗುರುವರ- ರಿಷ್ಟಕೆ ತೋಷ ತಾಳಲಿ ದಾರಿದ್ರ್ಯದ ಕಷ್ಟವೆಲ್ಲ ಪರಿಹರಿಸಲಿ ದಯವಿರಲಿ ಎನ್ನಲಿ ಶ್ರೇಷ್ಠ ಗೌಡಸಾರಸ್ವತ ಸ- ಮಷ್ಟಿ ಕೊಂಕಣದೇಶವಿಪ್ರ ವಿ- ಶಿಷ್ಟ ಒಡೆತನ ಪಟ್ಟವಾಳುವ ಶ್ರೇಷ್ಠಯತಿವರರಂಘ್ರಿಕಮಲವ5 ಆಶೆಯೊಂದುಂಟೆನಗೆ ಕಾವ್ಯವ ಓದ್ಯ- ಭ್ಯಾಸಗೈಯುವದು ಮಿಗೆ ಸನ್ನಿಧಾನದಿ ಪೋಷಿಸಿ ಎನ್ನ ಹೀಗೆ ರಕ್ಷಿಸಲು ಕಡೆಗೆ ಏಸು ಧನ್ಯನು ನಾನು ಕರುಣಾ ನಿಗಮ ವಿ- ಲಾಸರಂಘ್ರಿಗೆ ದಾಸದಾಸರ ದಾಸ ನಾನು ದಯಾಶರಧಿಯರ6 ಸತತ ಸದ್ಯತಿಧರ್ಮದ ಪರಿಪಾಲಿಸಿ ಕ್ಷಿತಿಗತಿ ಪ್ರತಿವಾಸವನಂತೆಸೆವುತಾ ಮಿತ ಭಾಗ್ಯಸಂಪದವ ವಿಖ್ಯಾತವ ರತಿಪತಿಯ ಪಿತ ಕ್ರುತುಪಾಲಿತ ಸೂ- ನೃತಭಾಷಿತ ಲಕ್ಷ್ಮೀನಾರಾಯಣ ಸತತ ವೇದವ್ಯಾಸ ಶ್ರೀರಘು ಪತೀಚರಣಪೂಜಿತರ ಪದವನು7
--------------
ತುಪಾಕಿ ವೆಂಕಟರಮಣಾಚಾರ್ಯ
ಯತಿಗಳು (ಶ್ರೀ ಬ್ರಹ್ಮಣ್ಯತೀರ್ಥರು) ಕೈಪಿಡಿದು ಪಾಲಿಸೈ ಬ್ರಹ್ಮಣ್ಯಗುರುವೇ ಪ ಅಯ್ಯನೀನೆಂದು ನಿನ್ನಡಿಗೆ ವಂದಿಸುವೇ ಅ.ಪ ಮೂಢವiತಿಗಳು ಬಂದು ಬೇಡಿ ಕೊಳ್ಳಲು ಕರುಣ ನೀಡಿ ನಿನ್ನವರನ್ನು ಕಾಯ್ದರೀತಿ ಗಾಢದಿಂದಲಿ ಬಂದು ಮೂಢನಾದೆನ್ನನು ಗೂಢದಿಂದಲಿ ಕಾಯೊ ಗುಣನಿಧಿಯೆ ಗುರುವೇ . . 1 ಪುರುಷೋತ್ತಮಾರ್ಯರ ವರಪುತ್ರನೆಂದೆನಿಸಿ ಹರುಷದಿಂದಲಿ ಬಂದ ಭಕ್ತಜನರ ಮೊರೆಯಲಾಲಿಸಿ ಸ್ವಾಮಿ ಸ್ಮರಣೆಯ ಕೊಟ್ಟೆನ್ನ ಹರುಷಪಡಿಸುವ ಗುರುವು ನೀನೆಂದು ನಾ ಬಂದೆ 2 ವರಕಣ್ವನದಿ ಕೂಲದಲಿ ಕಲ್ಮಷ ತೊಳೆದು ಸಾರ್ವಭೌಮನ ಗುಣವ ಸರ್ವದಾ ಪಾಡುತಲಿ ಸರ್ವಜನರನು ಕಾವೆ ಸರ್ವಕಾಲದಲಿ 3 ಸರ್ವಗುಣ ಪೂರ್ಣ ಬ್ರಹ್ಮಣ್ಯಪುರ ವಾಸ ನರಹರಿಯ ಪಾದವನು ಸ್ಮರಿಸಿನಿತ್ಯ ಸರಸದಲಿ ಅಬ್ಬೂರು ಪುರವಾಸಿಗಳನೆಲ್ಲ ಅರ್ಭಕರ ತೆರನಂತೆ ರಕ್ಷಿಸುವ ಗುರುವರ್ಯ 4 ಮಣಿದು ಬೇಡುವೆ ನಿನ್ನ ಚರಣದಾಶ್ರಯವಿತ್ತು ಅಣುಗನೆಂದೆನಿಸೆನ್ನ ಸಲಹಬೇಕೊ ಗುಣನಿಧಿ ಶ್ರೀ ಪ್ರಾಣನಾಥ ವಿಠ್ಠಲನ ಘನ ಚರಣ ಸ್ಮರಣೆಯ ನೀಯೊ ಗುರುವೆ 5
--------------
ಬಾಗೇಪಲ್ಲಿ ಶೇಷದಾಸರು
ಯತಿವರ್ಯ | ಯತಿವರ್ಯ ಪ ಯತಿ ಸುಧೀಂದ್ರಕರ | ಸುತನೆಂದೆನಿಸಿದ ಅ.ಪ. ಪರ | ಮಾರ್ಥವ ಯಾಚಿಪೆ 1 ಪಾದ್ಯ ಹರಿ | ಗುಣ ಸಂಪೂರ್ಣನಗುಣವರ್ಣನ ಸು | ಜ್ಞಾನವ ನೀಯೋ 2 ಪರಿಮಳಾರ್ಯ ತವ | ಚರಣಾರಾಧನೆಕರುಣಿಸಿ ಸುಧೆರಸ | ಎರೆವುದೆನಗೆ ಗುರು 3 ಅನ್ಯನಲ್ಲ ನಾ | ನಿನ್ನವರವನೈಘನ್ನ ಮಹಿಮ ಸಂ | ಪನ್ನ ಪೊರೆಯೊ ಗುರು 4 ಯೋಗಿವರ್ಯ ತವ | ಅಘಹರನಾಮಕೆಮಿಗಿಲಿಲ್ಲವೊ ಗುರು | ಬಾಗಿ ಭಜಿಪೆ ನಿನ 5 ಪರಿ | ಕಾಮ ಫಲಪ್ರದಪಾಮರ ಮನುಜನ | ನೀ ಮಾಣದೆ ಪೊರೆ 6 ಭೂಮಾರ್ಣವ ಗುರು | ಗೋವಿಂದ ವಿಠಲನಕಾಮಿಪೆ ಮೆನ್ಮನ | ಸೀಮೆಯಲಿರಿಸೋ 7
--------------
ಗುರುಗೋವಿಂದವಿಠಲರು
ಯದು ಕುಲಾಂಬುನಿಧಿ ಪೀಯೂಷಕ್ಷಕರ ಪಂಚಸಾಯಕಾನಂತ ಕಮನೀಯ ರೂಪಾ ಕಮಲಾಯತಾಕ್ಷನೆ ಬ್ರಹ್ಮ, ವಾಯು, ಸುರಮುನಿ ಮುಖ್ಯಧ್ಯೇಯ ವಿಷ್ಣೋ ಪ ಗೋತ್ರಾರಿ ಪುತ್ರನಿಜಮಿತ್ರ ಸುಪವಿತ್ರ ಚಾ ಕಳತ್ರ ಶುಭಗಾತ್ರಗತಿ ಸತ್ರತ್ರಿನೇತ್ರನುತ ಸಕಲಜಗ ಸೂತ್ರ ನೋಟಕ ತೋತ್ರವೇತ್ರ ಪಾಣೆ 1 ಭವ ಭವ ಭಂಗ ವರಗೋಪಾಂಗನಾ ಅಂಗ ಸಂಗಲೀಲಾರತ ಭುಜಂಗ ಪರಿಯಂಕ ಸುರ ತುಂಗ ಗಂಗಾಜನಕ ಸರ್ವಾಂತರಂಗ ಹರಿ ಮಂಗಳಾತ್ಮಕ ತಿರುವೆಂಗಳೇಶಾ 2 ನಂದಕಂದ ಶ್ರೀ ಮುಕುಂದ ದುರಿತಾಂಧ ಅರ ವಿಂದಭಾಂಧವ ದಿತಿ- ಜವೃಂದ ವ್ಯಾಳಖಗೇಂದ್ರ ತಂದೆ ಮಹಿಪತಿ ನಂದನ ಪ್ರಿಯ ಗೋವಿಂದ ಆ ನಂದ ಕಂದನೆ ಸಿಂಧುಶಯನ ದೇವಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯಮುನೇ ದುರಿತೋಪಶಮನೇ ಪ ಶರಣೆಂಬೆ ತವ ಪಾದಾಂಬುರುಹ ಯುಗಳಿಗೆ ದಿವಾ ಕರತನಯೆ ಸಪ್ತಸಾಗರ ಭೇದಿನೀ ಹರಿತೋಷ ಲಾಭ ಸುಂದರಿ ಸುಭಗೆ ನಿನ್ನ ಸಂ ದರುಶನಕೆ ಬಂದೆ ಭಕ್ತರ ಪಾಲಿಪುದು ಜನನಿ 1 ಮಕರಾದಿ ಮಾಸದಲಿ ವಿಖನಸಾವರ್ತ ದೇ ಶಕೆ ಬಂದು ವಿಜ್ಞಾನ ಭಕುತಿಯಿಂದಾ ತ್ರಿಕರಣದ ಶುದ್ಧಿಯಲಿ ಸಕೃತ ಸ್ನಾನದ ಗೈಯೆ ಸಕಲ ಸುಖವಿತ್ತು ದೇವಕೀಸುತನ ತೋರಿಸುವೆ 2 ಕನಕಗರ್ಭಾವರ್ತವೆನಿಪ ದೇಶದಲಿ ಸ ಜ್ಜನರ ಪಾಲಿಪೆನೆಂಬ ಅನುರಾಗದಿ ಪ್ರಣವಪಾದ್ಯಗೆ ವಿಮಲ ಮುನಿಯಂತೆ ನಿರುತ ಕುಂ ಭಿಣಿಯೊಳಗೆ ಸರಸ್ವತಿ ದ್ಯುನದಿಯಂದದಿ ಮೆರೆದೆ 3 ಜಮದಗ್ನಿ ಮುಖ್ಯ ಸಂಯಮಿಗಳನುದಿನದಿ ಆ ತಮ ತಮ್ಮೊಳಗೆ ರಮಾರಮಣ ದಾಮೋದರನ ಸುಮಹಿಮೆಗಳನು ಪೊಗಳುತಮಿತ ಮೋದದಲಿಹರು 4 ಪಿಂಗಳಾಧಿಷ್ಠಿತೆ ಶುಭಾಂಗಿ ಸುಮನವನಿತ್ತು ಕಂಗೊಳಿಸು ಎನ್ನಂತರಂಗದಲ್ಲಿ ತುಂಗ ಸುಮಹಿಮ ಜಗನ್ನಾಥ ವಿಠಲನ ಸುಗು ಣಂಗಳ ತುತಿಪುದಕೆ ಮಂಗಳ ಮತಿಯನೀಯೇ 5
--------------
ಜಗನ್ನಾಥದಾಸರು
ಯಾಕೆ ದಯಬಾರದೊ ಕಾಂತೇಶ ಪ್ರಾಣೇಶ ಸಾಕಲಾರದೆ ಪೋದೆಯಾ ಎನ್ನನು ಪ. ಏಕಚಿತ್ತದಿ ನಿನ್ನ ಚರಣ ನಂಬಿ ಬರಲು ಭಾರತೀಶ ಅ.ಪ. ತೊಳಲಿ ಬಳಲಿ ಸುಖ ಸುಳಿವೆಂಬೋದರಿಯದೆ ನಳಿನಾಕ್ಷನ ದಾಸ ನಿನ್ನ ಕೀರ್ತಿ ಇಳೆಯೆಲ್ಲ ಪೊಗಳಲು ಸಲಹುವನೆಂತೆಂದು ಬಳಿಗೆ ಬರಲು ಮನಕರಗದೆ ತಂದೆ 1 ಅಂದು ಕನಸಿನಲ್ಲಿ ಶಿರದಲ್ಲಿ ಕರವಿಟ್ಟೆ ಇಂದೆಲ್ಲಿ ಪೋಯಿತೊ ಆ ಕರುಣ ತಂದೆ ಮುದ್ದುಮೋಹನ ಗುರುಗಳ ವಚನವ ಇಂದು ಒಲಿದೆನ್ನ ಕಾಯೊ2 ವಿೂಸಲ ದಾಸ್ಯಕೆ ಆಶೆ ಮಾಡಿದೆನೆಂದು ದೋಷವೆಣಿಸುವರೆ ಎನ್ನಲಿ ನೀ ಶೇಷಶಯನನೆ ಬಲ್ಲೆನೊ ಇದರ ಮರ್ಮ ಘಾಸಿಗೊಳಿಸದೆ ನೀ ಅಭಯವನೀಯೊ 3 ರಾಮದಾಸ್ಯವ ಬಯಸಿ ನೇಮದಿಂದಲಿ ಇದ್ದು ರಾಮನಾಗಮ ಕಂಡು ಎರಗಿ ನಿಂದು ಪತಿ ಪಾದ ದಾಸ ಸಿದ್ಧಿಯ ಪಡೆದು ಭೂಮಿಯೊಳು ಖ್ಯಾತನಾದೆಯೊ ಆಂಜನೇಯ 4 ಚಿತ್ತಿದಿ ಕೃಷ್ಣನ ದಾಸತ್ವ ಸಾಧಿಸಿ ಮತ್ತೆ ಮುನಿಯಾಗಿ ಗ್ರಂಥವ ರಚಿಸಿ ಚಿತ್ತದಿ ಗೋಪಾಲಕೃಷ್ಣವಿಠ್ಠಲನ ಪಾದ ನಿತ್ಯದಿ ಭಜಿಪೆ ನೀ ಮತ್ತೆನ್ನ ಕಾಯೊ 5
--------------
ಅಂಬಾಬಾಯಿ
ಯಾಕೇ ನಿನೀಪರಿ | ಶೋಕ ಸಂಶಯವೀವೆರಾಕೇಂದು ವದನನೆ | ಏಕಮೇವನೆ ಹರಿಯೇ ಪ ಮಾ ಕಮಲಾಸನದಿ | ವೌಕಸ ವಂದ್ಯನೆತೋಕನೆನಿಸಿ ಎನ್ನ | ಸಾಕುವುದೆಲೊ ಘನ್ನಅ.ಪ. ನಿನ್ನ ನಾಮಗಳನ್ನ | ಮನ್ನದಿ ನೆನೆಯದೆಮನ್ನ ಮಾಡಿದುದಕ್ಕೆ | ಯನ್ನ ನೀ ಪರಿಯಾ |ದಣ್ಣಿಸೋದೊಳಿತಲ್ಲ | ಮನ್ನ ನಾಮಕನಾಗಿಮನ್ನವನೀಯದೆ | ಅನ್ಯಾಯ ಗೈಯುತ 1 ಮಾಯಾ ವಿನುತ ಶ್ರೀ | ಕಾಂತ ಮೂರುತಿಯೇ |ಅಂತು ನಿನ್ನಯ ಪಾದಾ | ಕ್ರಾಂತನಾಗಿರುವೆನೊಸ್ವಾಂತರಂಗದಲ್ಲಿ | ಶಾಂತೀಶ ನೆಲೆಸಯ್ಯ 2 ಮಂದಿಯ ಕೈಯಲ್ಲಿ | ನಿಂದಿಸಿ ಕುಂದಿಸಿಮಂದ ಭಾಗ್ಯನ ಮನ | ಸಂದೇಹ ಕಳೆಯಯ್ಯಕಂದರ್ಪಪಿತ ಗುರು | ಗೋವಿಂದ ವಿಠಲಯ್ಯಕುಂದೆಣಿಸದೆ ಕೈಯ್ಯಾ | ಇಂದೆ ನೀ ಪಿಡಿಯಯ್ಯ 3
--------------
ಗುರುಗೋವಿಂದವಿಠಲರು
ಯಾಚಿಸುವೆನು ನಿನ್ನನಿದಕೆ ಕರುಣಸಾಗರ ಗಮನ ಜಗತ್ಪಾಲ ಪ್ರಭುವರ ಪ ದೈನ್ಯರಾಹಿತ್ಯ ರಹಿತ ಜಾಡ್ಯರಹಿತವು ಪಾದ ಕಮಲರತಿ ಸದಾವಕಾಲವು 1 ಪ್ರಭುವೆ ನಿನ್ನ ಭೃತ್ಯನಾನಾದಿಕಾಲದಿ ಅಭಯವಿತ್ತು ಪಾಲಿಸೆನ್ನ ಹೇ ದಯಾನಿಧೆ 2 ತುಷ್ಟನಾದರೇನುರುಷ್ಟನಾರೇನೊಲೊ ಇಷ್ಟದೈವ ನಿನ್ನ ಹೊರತು ಗತಿಯ ಇಲ್ಲೆಲೊ 3 ತುಷ್ಟನಾದ ಬಳಿಕ ನೀನೆ ಹೇ ಕೃಪಾಕರ ಬಿಟ್ಟುನಿನ್ನ ಭಜೀಸಲ್ಯಾಕೆ ಯಿತರಕಾಯ್ವರ 4 ನೀನೆ ರೋಷವನ್ನು ತಾಳೆ ಸುಜನಬಂಧುವೆ ದೀನನನ್ನು ಕಾಯ್ವರಾರು ನೀನೆಯಲ್ಲವೆ 5 ದೋಷ ಕ್ಷಮಿಸುವಲ್ಲಿ ನಿನ್ನ ಪೋಲ್ವ ಅರಸರು ದೇಶಸರ್ವಗಳಲಿ ಪುಡುಕಲಲ್ಲೆ ದೊರಕರು 6 ಎನ್ನಸರಿ ಕೃತಘ್ನ ವಂಚನೀಯ ಮಾಳ್ಪನ ವನ್ನಜಾಭವಾಂಡದೋಳಾವಲ್ಲಿ ಕಾಣೆನಾ 7 ದೀನ ದಾಸ ನಿನಗೆ ನಾನು ಹೇ ಜಗತ್ಪತೆ ಮಾಣದೆಲ್ಲಿರಲ್ಲಿ ತೋರಿ ಪ್ರೇಮ ಸಾಮ್ಯತೆ 8 ಎನ್ನ ವಿಷಯ ಭಯವು ನಿನಗೆ ಲಕ್ಷವಾವುದು ಮನ್ನಿಸೆನ್ನ ಪೊರೆವ ಸರ್ವಭಾರ ನಿನ್ನದು 9 ಈಶಪೂರ್ಣಕಾಯ ನಿನಗಸಾಧ್ಯವಾವುದು ಆಶೆಯನ್ನದಾವಘನವು ನಿನಗೆ ತೋರ್ಪುದು 10 ದಾಸನಾಶೆಪೂರ್ತಿಸಲ್ಕಾಲಸ್ಯವುಚಿತವೋ? ಅಶಿಶಿಸುವನು ದಾಶಗೈವುದೇನು ನೀತವೋ? 11 ಲೋಕನಾಥ ಕರುಣ ಪೂರ್ಣನೇ ಪರಾತ್ಪರ ಯಾಕೆ ಯೊನ್ನೊಳಿನಿತು ನೀನು ನಿರ್ದಯಾಪರ 12 ಗರವತಾಯಿತನನುಜಗೀಯೆ ಅವುದೋಗತಿ ತರುಳನಲ್ಲಿ ಕರುಣಿಸುವದು ಕೃಷ್ಣ ಮೂರುತಿ 13 ದಾತ ಜ್ಞಾತನು ನಿನ್ನ ವಿನಹಾಭಿಷ್ಟಫಲದ ಕರ್ತೃ ಆವನು 14 ಲಕ್ಷ್ಮಿಪತಿಯ ಪೋಲ್ಪೋದಾರ ಸುಗುಣ ಶೀಲನ ಈಕ್ಷಿಸಲ್ಕೆ ಜಗದೊಳಾರನೆಲ್ಲಿ ಕಾಣೆನಾ 15 ನಿನ್ನ ಔದಾರ್ಯ ಸರ್ವರಲ್ಲಿ ಸಾಮ್ಯವು ಎನ್ನೊಳಿನಿತ್ತು ನಿನ್ನದ್ಯಾಕೆ ಕಾರ್ಪಣ್ಯವು 16 ಆರ್ತಬಂಧುವೆಂದು ನಿನಗೆ ಶರಣುಬಂದೆನು ಸಾರ್ಥಕವನು ಮಾಡುವಿಯೊ ಜರಿದೆ ಬಿರುದನು 17 ದೀನ ಬಂಧು ಕರುಣಸಿಂಧು ಸುಹೃದ್ಬಾಂಧವ ಹೀನ ಭವಾರ್ಣವದಿ ಮಗ್ನನಿರುವೆ ಭೂಧವ 18 ತಾರಿಸೈ ಭವಾಬ್ದಿಯಿಂದ ಇಂದಿರಾವರ ಸೂರಿಜನರ ಸಂಗವೆನ್ನಗೀಯೋಗಿರಿಧರ19 ಶ್ರೀನೃಸಿಂಹ ಸತತ ನೀನು ಸದಯ ಮೂರುತಿ ದೀನ ನನ್ನೊಳ್ಯಾಕೆ ನಿರ್ದಯವ ತೋರುತಿ 20 ಸಾಧುಗಳು ನಿರ್ಗುಣಿಗಳಲ್ಲಿ ದಯವÀ ಮಾಳ್ಪರು ಸಾದರದಲಿ ಸರ್ವರಲ್ಲಿ ಸದಯರಿಪ್ಪರು 21 ಧನ್ಯಜನಕೆ ನಿನ್ನನೀವುದೇನು ಅಚ್ಚರ ದ್ಯೆನ್ಯ ಬಡುವನನ್ನು ಪಾಲಿಸುವದು ಪರತರ 22 ಚಂದ್ರಚಾಂಡಾಲಗೃಹದ ಮೇಲೆಯಾದರು ಸುರತರು 23 ಈತೆರ ಶ್ರೀ ಪತಿಯೆ ಎನಗೆ ಪ್ರೀತನಾಗೆಲೋ ನೀತವಾಗಿ ಕರುಣದಿಂದ ಕರವಪಿಡಿಯಲೊ 24 ಪುನಃ ಪುನಃ ನಿನ್ನನಿದನೆ ಬೇಡಿಕೊಂಬೆನಾ ಮನದೊಳು ಪ್ರಸನ್ನನಾಗು ಜನಕಜಾರಮಣ25 ಪಂಚರಾತ್ರಾಗಮೋಕ್ತ ಈಸ್ತುತಿಯನು ವಿನುತ ಶ್ರೀ ರಾಮಚಂದ್ರನು 26 ಮುದದಿ ಮನಸಿನೊಳಗೆ ತಾನೆವದಗಿ ಪೇಳಿದ ಅದನೆ ಶ್ರೀವರದೇಶ ವಿಠಲ ನುಡಿಸಿ ಬರೆಸಿದ 27
--------------
ವರದೇಶವಿಠಲ
ಯಾರಿರಬಹುದೀತ ಗೆಳತೀ ಯಾರಿರಬಹುದೀತ ಪ ಯಾರೆಂದರಿಯದೆ ಪೋಗದೆ ಕೊರತೆ ಯಾರಿರಬಹುದೀತ ಅ.ಪ ಸಾವಿರ ಸಂಖ್ಯೆಯ ಗೋವಳರಿದ್ದರೂ ಯಾವನಿಗೀ ವಿಧ ಠೀವಿಯಿರುವುದೇ ಹಾವಭಾವಗಳ ನೋಡಲು ಈತನ ಗೋವಳ ವೇಷವದಾವ ಕಾರಣವೋ 1 ನಮಗೇತಕೆ ಈತನ ಗೋಜೆಂದರು ಕಮನೀಯನ ನೋಡುತ ನೋಡುತ ಬಲು ಮಮತೆಯು ಮನದಲಿ ಏರುತಲಿರುವುದು ಕಮಲನಯನೆ ನಾ ನಮಿಸುವೆ ಪೇಳೆ 2 ಸರಳನೋ ದುರುಳನೋ ಅರಿಯುವುದೆಂತೇ ಕರೆಯದೆ ಹೋದರೆ ಜರಿಯಲುಬಹುದೇ ಮುರಳಿಯ ನಾದದ ಕರೆ ಬಂದರೆ ನಾ ಬರವೆನೆಂದರು ಹೇ ಸರಸ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು