ಒಟ್ಟು 712 ಕಡೆಗಳಲ್ಲಿ , 88 ದಾಸರು , 649 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾನೇನಂದನೆ ಭಾವಕಿ ಒಳ್ಳೆಆನಂದಮಯ ಹರಿಹರ ಮುನಿದಿತ್ತಬಾರ ಪ ರಮಣಿ ಕುಚ ಕುಂಕುಮಾಂಕಿತ ವಕ್ಷವಾರಿಧಿಶಯನ ಶ್ರೀವಾಸವಾರ್ಚಿತನಾರದನುತ ಪಂಕಜದೈತ್ಯ ಸಂ-ಹಾರ ಶ್ರೀ ಹರಿಹರನೆಂದೆನಲ್ಲದೆಮಾರಮರ್ಧನನೆಂದೆನೆ ಮೆರೆವ ಸರ್ಪಹಾರ ಕುಂಡಲನೆಂದೆನೆ ಶೋಭಿಸುವ ವೈಯ್ಯಾರ ವಿಭೂಷಣ ಶಂಕರನೆಂದೆನಲ್ಲದೆ 1 ಮಡದಿಯೋರ್ವಳ ನುಡಿ ಕಳ್ಳನೆಂದೆನಲ್ಲದೆ ಮಿಗೆಜಡೆದಲೆಯವನೆಂದನೆ ಪುಲಿದೊಗಲದೃಢದಿ ಹೊದ್ದಿಹನೆಂದೆನೆ ತ್ರೈಲೋಕ್ಯದೊಡೆಯ ಮುರಾರಿ ಮಹದೇವನೆಂದೆನಲ್ಲದೆಧರೆಯನಳೆದು ಕ್ಷತ್ರಿಯರ ಕೊಂದು ಶರಧಿಯನಿರದೆ ಕಟ್ಟಿದ ಕೃಷ್ಣ ಬಹುರೂಪವರಕವಿಗುರುವ ಕರದಿ ಪಿಡಿದು ರಕ್ಷಿಪಬಿರುದಿನ ರಾಯ ರಾವುತನೆಂದೆನಲ್ಲದೆ2 ಗಿರಿಜಾರಮಣನೆಂದೆನೆ ಗುಹಾರಣ್ಯವಾಸಎರಡು ರೂಪದಲಿರುವ ಮೂರುತಿಯೆಂದೆ ನಾ ನಂಬಿದ-ವರಪೊರೆವ ಶ್ರೀಹರಿಹರಲಿಂಗನೆಂದನಲ್ಲದೆ3
--------------
ಕೆಳದಿ ವೆಂಕಣ್ಣ ಕವಿ
ನಾನ್ಯಾಕೆ ಚಿಂತಿಸಲಿ ನಾನ್ಯಾಕೆ ಧೇನಿಸಲಿ ತಾನಾಗಿ ಶ್ರೀರಾಘವೇಂದ್ರಯತಿ ಒಲಿದ ಪ ಪೋರತನದವನು ಎರೆಡು ತೆರೆಗಳಲ್ಲಿ ದೂರಾಗಿ ಮೊರೆಯು ಅಲ್ಲವೆಂದು ಕಾರುಣ್ಯದಿಂದ ತಮ್ಮಯ ಗುರುತುಗಳ ತೋರಿ ಧೀರ ತಾ ಕರವನು ಪಿಡಿದ ಬಳಿಕ 1 ಜಗದೊಳಗೆ ಪದಾರ್ಥಗಳು ಗುಣದಿ ಭುಂಜಿಸುವಂಗೆ ಅಗದಂಕರನು ತಾನು ಬಳಿಗೆ ಬಂದು ಬಗೆಬಗೆಯಿಂದಲಿ ಸುರಸ ಪದಾರ್ಥಗಳು ಸೊಗಸಾಗಿ ಉಣಿಸಲು ಚಿಂತೆಯುಂಟೆ2 ಪೂರ್ಣಜಲ ಹರಿವ ವಾಹಿನಿ ಕಂಡು ಬೆದರುವಗೆ ಕರ್ಣಧಾರನು ತಾನೆ ಬಂದು ನಿಂದು ತೂರ್ಣದಲಿ ಕರಪಿಡಿದು ಹರಿಗೋಲ ಒಳಗಿಟ್ಟು ಫೂರ್ಣಿಸಲು ಅವನಿಗೆ ಚಿಂತೆಯುಂಟೆ 3 ತನ್ನಯ ಹಿತವು ತಾ ವಿಚಾರಿಸಲವಂಗೆ ಚನ್ನಾಗಿ ಪರಮ ಗುರು ತಾನೆ ಬಂದು ಸನ್ಮಾರ್ಗವನು ತಾನೆ ಪೇಳುವೆನೆನಲು ಇನ್ನು ಆಯಾಸವುಂಟೆ ಅವನಿಗೆ 4 ಏಸು ಜನ್ಮದಲಿ ಅರ್ಚಿಸಿದೆನೊ ನಾ ಇನ್ನು ಪಾದ ಪದುಮ ಲೇಸಾಗಿ ಈ ಸುಕೃತದಿಂದೆನ್ನ ಹರಿದಾಸ ಈ ಸುಗುಣ ಗುರುರಾಯ ಎನಗೆ ಒಲಿದ 5
--------------
ವ್ಯಾಸತತ್ವಜ್ಞದಾಸರು
ನಾರಾಯಣ ನಾರಾಯಣ ನಾರಾಯಣ ನಾರಾಯಣ ನಾರಾಯಣ ನರಹರಿಯೆ ಪ. ನಾರಾಯಣ ನರಹರಿಯೆ ಹಯವದನ ಸ್ವಾಮಿ ನೀ ಎನಗೆ ದಯವಾಗೊ ಅ.ಪ. ನಿಗಮವ ಕದ್ದೊಯ್ದ ದುಗುಡ ದೈತ್ಯನ ಕೊಂದು ಆಗಮವ ತಂದು ಅಜಗಿತ್ತೆ ಆಗಮವ ತಂದು ಅಜಗಿತ್ತೆ ಹಯವದನ ಆದಿಮೂರುತಿಯೆ ದಯವಾಗೊ 1 ಕೂರ್ಮರೂಪದಿ ಬಂದು ಆ ಗಿರಿಯನೆತ್ತಿದ ಪ್ರೇಮದಿ ಸುರರಿಗಮೃತವ ಪ್ರೇಮದಿ ಅಮೃತವನಿಕ್ಕಿದ ಹಯವದನ ಸ್ವಾಮಿ ನೀ ಎನಗೆ ದಯವಾಗೊ 2 ಕ್ರೋಡರೂಪದಿ ಬಂದು ಮೂಢದೈತ್ಯನ ಕೊಂದು ರÀೂಢಿಯ ನೆಗಹಿ ಜಗಕಿತ್ತೆ ರÀೂಢಿಯ ನೆಗಹಿ ಜಗಕಿತ್ತೆ ಹಯವದನ ಪ್ರೌಢ ನೀ ಎನಗೆ ದಯವಾಗೊ 3 ಶಿಶುವ ಬಾಧಿಸುತಿರ್ದ ಕಶಿಪನ್ನ ಸೀಳಿದಿ ಕುಶಲದಿಂ ಕರುಳ ಮಾಲೆಯ ಕುಶಲದಿಂ ಮಾಲೆ ಧರಿಸಿದ ಹಯವದನ ಬಿಸಜಾಕ್ಷ ಎನಗೆ ದಯವಾಗೊ 4 ವಾಮನರೂಪದಿ ಬಂದು ಭೂಮಿ ಓರಡಿ ಮಾಡಿ ವ್ಯೋಮಕ್ಕೆ ಚರಣವ ನೀಡಿದೆ ವ್ಯೋಮಕ್ಕೆ ಚರಣವ ನೀಡಿದ ಹಯವದನ ವಾಮನ ಎನಗೆ ದಯವಾಗೊ 5 ಕೊಡಲಿಯ ಪಿಡಿದು ಕಡಿದೆ ದುಷ್ಟನೃಪರ ಹಡೆದ ತಂದೆಯ ಮಾತು ಸಲಿಸಿದೆ ಹಡೆದ ತಂದೆಯ ಮಾತು ಸಲಿಸಿದ ಹಯವದನ ಒಡೆಯ ನೀ ಎನಗೆ ದಯವಾಗೊ 6 ಸೀತೆಗೋಸ್ಕರ ಪೋಗಿ ಸೇತುವೆಯ ಕಟ್ಟಿದೆ ಭೂತ ರಾವಣನ ಮಡುಹಿದೆ ಭೂತ ರಾವಣನ ಮಡುಹಿದೆ ಹಯವದನ ಖ್ಯಾತ ನೀ ಎನಗೆ ದಯವಾಗೊ 7 ಗೊಲ್ಲರ ಒಡನಾಡಿ ಬಲ್ಲಿದಸುರÀನ ಕೊಂದು ಮಲ್ಲರೊಡನಾಡಿ ಮಡುಹಿದೆ ಮಲ್ಲರೊಡನಾಡಿ ಮಡುಹಿದ ಹಯವದನ ಫುಲ್ಲಾಕ್ಷ ಎನಗೆ ದಯವಾಗೊ 8 ತ್ರಿಪುರರ ಸತಿಯರಿಗುಪದೇಶವನಿಕ್ಕಿ ತ್ರಿಪುರರನೆಲ್ಲ ಮಡುಹಿದೆ ತ್ರಿಪುರರನೆಲ್ಲ ಮಡುಹಿದ ಹಯವದನ ನಿಪುಣ ನೀ ಎನಗೆ ದಯವಾಗೊ 9 ತೇಜಿಯನೇರಿ ರಾಹುತನಾಗಿ ನೀ ಮೆರೆದೆ ಮೂರ್ಜಗಕ್ಕೆ ಕಲ್ಕಿಯೆಂದೆನಿಸಿದೆ ಮೂರ್ಜಗಕ್ಕೆ ಕಲ್ಕಿಯೆಂದೆನಿಸಿದೆ ಹಯವದನ ಭೋಜ ನೀ ಎನಗೆ ದಯವಾಗೊ 10 ವಾದಿರಾಜರಿಗೊಲಿದು ಸ್ವಾದೆಪುರದಲಿ ನಿಂದು ವೇದದ ಕಥೆಯನರುಹಿದೆ ವೇದದ ಕಥೆಯನರುಹಿದ ಹಯವದನ ಮಾಧವ ನೀ ಎನಗೆ ದಯವಾಗೊ 11
--------------
ವಾದಿರಾಜ
ನಾರಾಯಣ ವಿಠ್ಠಲನೆ ನೀನಿವನ ಕಾಪಾಡೊ ಹರಿಯೆ ಪ ನೀರಜಾಸನವಂದ್ಯ ಪೋರ ನಿನ್ನವನೆಂದುಕಾರುಣ್ಯದಲಿ ಕೈಪಿಡಿದು ಕಾಪಾಡೊ ಹರಿಯೇ ಅ.ಪ. ಜ್ಞಾನಾಯು ರೂಪಕ ಸು | ವಾಯುದೇವನೊಳಿದ್ದುನೀನಿವಗೆ ಜ್ಞಾನಾಯು ಸಂಪದವನೀಯೋ |ಮೌನಿಕುಲ ಸನ್ಮಾನ್ಯ ಪೂರ್ಣಪ್ರಜ್ಞರ ಮತದಿ ಜ್ಞಾನಿ ಎಂದೆನಿಸಿವನ ಕಾಪಾಡೊ ಹರಿಯೆ 1 ಗೋವುಗಳೊಳುದ್ಗೀಥ ಕಾವ ಕರುಣಿಯೆ ದೇವಭಾವದಲಿ ನೀನಿದ್ದು ಉದ್ಧರಿಸೊ ಹರಿಯೇ |ಆವ ಭವವನಧಿ ಲಕ್ಷ್ಮೀ ನರಹರಿಯೇನೋವುಗಳ ಪರಿಹರಿಸೊ ಪವನ ಪ್ರೀಯ 2 ಹೆಂಚು ಹಾಟಕದಲ್ಲಿ ಸಮಬುದ್ಧಿ ನೀನಿತ್ತುಪಂಚ ಪಂಚಿಕೆ ತತ್ವ ತರತಮವ ತಿಳಿಸುತ್ತಮಿಂಚಿನಂತಿವನ ಹೃತ್ಪಂಕಜದಿ ಪೊಳೆಯೊವಾಂಛಿತ ಪ್ರದನೆ ಗುರು ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ನಾರಾಯಣನು ನಾರಿಯಾದನು ನಾರಾಯಣನು ನಾರಿಯಾಗಲು ಉಗರು ಕಾಂತಿ ಪೋಗಿ ಸಾರಸುಂದರವ ತಿರಸ್ಕರಿಸೆ ಶೃಂಗಾರಸ ನಿಧೆ ಪ ಸುರರಸುರ ಕರೆಸಿ ವೈರೆವ ಮರೆಸಿ ಸ್ನೇಹದಿಂದಿರಿಸಿ ಈ ಕುಲ ವರಿಸಿ ನಿಮ್ಮೊಳು ಬೆರಸಿ ಸುಖವಂಕುರಿಸುವಂತೆ ಸಂಚರಿಸೆಂದು ಸರಸದಿಂದಲಾದರಿಸೆ ಸುರರ ಧರಿಸಿ ಬಿಡದುದ್ಧರಿಸುವೆ ನಿದ್ರಿ ತರಿಸಿ ದೈತ್ಯರ ವರಿಸೆಂದು ಸಿರಿ 1 ದಿತಿಜಾದಿತಿ ಜ್ಯಾತ ತತಿಗಳನು ಸ ಅಮೃತ ಬಪ್ಪದಕ್ಕೆ ಹಿತವ ಪೇಳುವೆನೆಂದತಿಶಯದಿಂದ ಚತುರಾತುಮ ಮಾರುತ ಪಿತಾ ಕ್ಷಿತಿಯೊಳು ನೂರು ಶತ ಯೋಜನ ಪರ್ವತ ಮಂದಾರುಂಟು ಜತೆಯಲಿ ಏಕಮತರಾಗಿ ಪೊಲ್ ಜಾತವ ಕಿತ್ತೆತ್ತಿಸಿತಾಬ್ಧಿಯೊಳು ಮಥಿüಸೆಂದು 2 ಹರಿ ನಿರೂಪವÀ ಧರಿಸಿ ಎಲ್ಲರು ಗಿರಿಯ ಬಳಿಗೆ ಹರಿದರಾಗಲೆ ಕಿರಿ ಬೆರಳ ಅಬ್ಬರದಾಟವು ಬೊಬ್ಬಿರುವ ಧ್ವನಿ ಭೀಕರ ಕರಿ ಶರಧಿ ಮಿಕ್ಕ ಗೋತುರ ಸಪ್ತದ್ವೀಪ ತರು ಮೃಗಾದಿ ಜೀವರು ತಲ್ಲಣಿಸೆ ಗಿರಿ ವೆಗ್ಗಳಿಪ ಭರಕಂದು3 ಸುತ್ತ ಈ ಪರಿಯಾಗುತ್ತಿರೆ ಇತ್ತ ಪ ರ್ವತವಲ್ಲಾಡಿಸಿ ಕಿತ್ತಿ ತೆಗೆದೆತ್ತಿ ಹೊತ್ತರಿತ್ತಂಡದಿ ಚಿತ್ತ ಮಾರ್ಗವನು ಹತ್ತಿ ಬರಲು ದೇವತೆಗಳು ಹೊತ್ತರದ್ರಿಮೂಲ ಎತ್ತಲಾರದಲೆ ತತ್ತಳಗೊಂಡು ಮಾರುತ್ತ ಅಡಿಗಡಿ ಎತ್ತಿಡಲರಿದು ದೈತ್ಯರ ವಂಚಿಸಿ ಆ ದಿತ್ಯರಿಗಿರಿಸಿದುತ್ತಮನೊ4 ವನಧಿsಯೊಳದ್ರಿ ದನುಜ ಮರರ ಗುಣವಿಳಹಿ ಸ ರ್ಪನ ತಂದೀಗ ನೇಣನೆ ಮಾಡಿದರು ಸುರರು ಬಾಲನು ದೈತ್ಯಯರು ಹೂಣಿಕೆಲಿ ವಿನಯದಿಂದ ಮಥಿüಸುವಾಗ ವದನದನಿಲಕೆ ಅನಿಮಿಷರು ತಲ್ಲಣಿಸೆ ಹರಿ ತನ್ನನು ನಂಬಿದವರ ಕಾಯಿದ ವಂಚನೆಯಿಂದ5 ಉಭಯ ಜನರು ಗಂಭೀರವಾದ ಕ್ಷೀರಾಂಬುಧಿ ಕಟವ ರಭಸಗೈದು ಕಕುಭದಲಿ ಪ್ರತಿ ಶಬ್ದಪುಟ್ಟಿ ಉ ದುಭವಿಸಿದವು ಶುಭಾ ಶುಭ ಪ್ರಭು ಧನ್ವಂತ್ರಿ ಸುಲುಭ ರಸ ತಾರೆ ವಿಭುದರೊಳಗೆ ಗಲಭೆಯ ಬೀಸಿ ಅ ನಿಬರು ಒಯ್ಯಲು ಋಭುಜಾದ್ಯರು ಅಬುಜಾಪ್ತ ಪೋದನಭವಾಗೆ6 ಹರಿ ತಿಳಿದ ಭಕ್ತರ ಮನೋಕ್ಲೇಶ ಸಿರಿ ಸ್ತುತಿಗಗೋಚರನೆನ್ನಲು ಧರಿಸಿ ಬಂದನು ಮಿರುಗುತಿಪ್ಪ ಸುಂ ದರ ನಾರೀ ರೂಪ ಪರದೈವ ಕುಸುಮ ಪೊಂಗೆಜ್ಜೆಯ ಸರಪಳಿಯ ಮೇಲೊಲಿವ ಕಾಂಚಿದಾಮ ಶರತ್ಕಾಲದ ಚಂದಿರನಂತೆ7 ಸಣ್ಣವನಾರಾ ಮೋಹನ್ನಕರವು ಪಾ ಕೌಸ್ತುಭ ರನ್ನ ವನಮಾಲೆ ಚಿನ್ನದ ಸರ ಶೋಭನ ಕರಡಿಗೆ ಚನ್ನಗೋಡಿ ಸರ ಬಣ್ಣ ಸರ ರನ್ನದಪದಕ ಕನ್ನಡಿ ಮಲಕು ಚನ್ನಪ ನ್ಯಾವಳ ಮುನ್ನೆ ಸರ್ವಹಾರ ಮೂರ್ತಿ 8 ಮುತ್ತಿನ ಚಿಂತಾಕ ಮುತ್ತಿನೋಲೆ ಜಾತ ಮುತ್ತಿನ ಮೂಗುತಿ ಮುತ್ತಿನಕ್ಷತಿಯು ಮುತ್ತಿನ ಸೂಸುಕಾ ಮುತ್ತಿನ ಜಡೆಯು ಮುತ್ತಿನ ಗೊಂಚಲು ಮತ್ತೆ ತೋಳು ಮುತ್ತು ಮೇಲಗೊಪ್ಪು ಕತ್ತಲೆ ಸೋಲಿಪ ಕಸ್ತೂರಿ ತಿಲಕಾ ನೆತ್ತಿಯ ಬೈತಲು ಸುತ್ತ ತಳಪು ಸುರೋತ್ತಮ ಚಂದ್ರಮಾ ನಿತ್ಯಾನಂದ ಪರುಷೋತ್ತಮನು 9 ನೀಲಗೂದಲು ಸುಫಲಾದಿ ಶ್ರವಣ ಭ್ರೂಲಾದಿಕÀವು ಚಂ ಕಪೋಲ ನಾಸಿಕ ತಾಂಬುಲದ ವದನ ನಾಲಿಗೆತಳ ವಿಶಾಲ ಭುಜ ಕಂದರ ಸುಂಡಾಲಾಕಾರವಾದ ತೋಳು ಕರತಳ ಪಾಲು ಬಪ್ಪ ಸ್ತನ ಸ್ಥೂಲೋದರ ನಾಭಿ ಲೀಲಾ ನಡವು ಪಂ ಚಳ ಊರು ಜಾನು ಲೋಲಾಡುತಾ 10 ಹರಡಿ ಕೈಕಟ್ಟು ಬೆರಳುಂಗುರವ ವರ ಕಂಕಣಾದಿ ಸರಿಗೆ ತಾಯಿತ ಸರ ಹುಲೆಯುಗರು ಎಣ್ಣೆ ನೂಲು ತರುಳಹಾರ ಚೌರಿಯಿಂದ ಪರಿಪರಿ ಚಿತ್ರ ಬರೆದ ಕಂಚುಕಾ ಸರಿಸರಿ ಬಂದಾಭರಣ ಧರಿಸಿ ಅರೆ ಶರಗು ಗಹ್ವರದಿ ಮಾಡುತ್ತ ಮರಿಯಾನೆ ಬಪ್ಪ ತೆರದಂತೆ 11 ಗಂಧ ಪಚ್ಚಿಕೊಂಡು ಒಂದು ಕರದೊಳು ಗಂಧ ವಿಳ್ಯವು ಮತ್ತೊಂದು ಕರದೊಳು ಕಂದುಕ ಪುಟಿಸುತ್ತೊಂದೊಂದು ಹೆಜ್ಚೆಯನು ನಿಂದಲ್ಲಿ ನಿಲ್ಲದೆ ಚಂದದಿಂದ ಬಂದಬಂದಂತೆ ಪೂ ಮಂದರಾದಿ ಮುಡಿಯಿಂದ ಉದರಲು ಮಂದಹಾಸದಿಂದ ವೇಗ ನಡೆ ತಂದು ಸಮೀಪದಿ ನಿಂದನು ಖಳರಿಗೊಂಡಿ ಮಾರಿ12 ದುರುಳ ಸಮೂಹ ಪರವಶನಾಗಿ ಬೆರಗಾಗಿ ನಿಲ್ಲೆ ಪರಿ ಏನೆನಲು ಇರದೆ ಪೇಳಲು ಶಿರವದೂಗುತ್ತಾತಾರವೆಂದ ಭರ ಯೌವ್ವನ ಸ್ತ್ರೀ ಪರಪುರಷರ ಸರಿತದಲ್ಲಿಗೆ ಚರಿಸಬಾರದು ಎರಡು ಬಲದವರು ಕರದಿ ಲೋಚನವ ಮುಚ್ಚಿ ಸಾಗಿರೆ ಪಂಙÂ್ತ 13 ಬಡಿಸೂವೆನೆ ಒಡನೆ ತಮ್ಮಯ ಪಡೆ ಸಮ್ಮತ ಸಾಲ್ಹಿಡಿದು ಕುಳ್ಳಿರೆ ನಡುವೆ ಪಿಯೂಷ ಪಿಡಿದು ದುಷ್ಟರ ಕಡಿಗೊಂದು ಬಿಂದು ಬಡಿಸದೆ ದೃಢ ಭಕ್ತರಿಗೆ ಕುಡಿಸುತ್ತಿರಲು ಬಡ ರಾಹು ತಾನು ದುಡುಗಿ ಸುರರಾ ಎಡೆಯೊಳಿರಲು ಕುಡಿತಿಯೊಳು ತಾ ಬಡಿಸಿ ಚಕ್ರವಾ ತುಡುಕಿದ14 ಓರ್ವನ ತರಿದು ಈರ್ವಗೆ ಮಾಡಿದ ಊರ್ವಿಗೆ ಕೆಡಹಿ ಗರ್ವ ಮುರಿದು ಸರ್ವಬಗೆಯಿಂದ ನಿರ್ವಾಹ ಕರ್ತನು ಓರ್ವನಲ್ಲದೆ ಮತ್ತೋರ್ವನಾರೊ ಗೀರ್ವಾಣ ಜನರ ನಿರ್ವಾಧಿಕವೊಹಿಸಿ ಪರ್ವತೆಡೆಯಿದ್ದ ದು ರ್ವಿಷಯಾಬ್ಧಿಗೆ ಚೀರ್ವನಾಗಿದ್ದ ವಿಜಯವಿಠ್ಠಲ ನಿರ್ವಾಣೇಶ15
--------------
ವಿಜಯದಾಸ
ನಾರಾಯಣಾ ಕರುಣಾ ಘನಚರಣಕ್ಕೆರಗುವೇ ಸ್ಮರಣೆಯೊಳಗೆ ಮನ ಒಲಿಯಿಸಿ ಪ್ರೇರಣೆ ಮಾಡುವಾ ಪ ನನ್ನ ನಿಜವನರಿಯದೆ ನಾ ಅನ್ಯ ಯೋನಿಯೊಳಗೆ ತಿರುಗಿ ಬನ್ನ ಬಡುವುದನ್ನು ತಿಳಿದು ನಿನ್ನ ಬಿಡೆನೆನ್ನೆ 1 ಭಾವಭಕ್ತಿಯಿಂದ ಪಿಡಿದು ನೋಯದಂತರದೊಳಗಿಳಿದು ಸಾವಧಾನದಿ ಸೇವೆಮಾಳ್ಪೆ ಭಾವ ಬಲಿದು ನಾ 2 ಎಲ್ಲಿಯೂ ಪರಿಪೂರ್ಣ ನೀನೆ ಸೊಲ್ಪಗೊಡಲಶಕ್ಯ ನಾನೈ ಬಲ್ಲಿದವರಿಂದೆಲ್ಲಾ ಅರಿಶ ಘುಲ್ಲನಾಭನೇ 3 ನಾದದ ಮೊದಲಿನ ಮೂಲದಿ ಭೇದಭಾವವೆಲ್ಲ ಅಳಿದು ಆದಿಶಾಂತಿ ಸುಖವನೀವ ನಾದಿ ಶ್ರೀಗುರು 4
--------------
ಶಾಂತಿಬಾಯಿ
ನಾಲ್ಕನೆಯ ಸಂಧಿ ಶಶಿಹಾಸ ಕಾಳಿಯನೊಲಿಸಿ ಪೊಸತಾಗಿ ತೋರಿತಾಶ್ಚರ್ಯ ಮಿಥ್ಯದ ವಿಷವನು ಉಣಿಸಿ ಕೃತ್ಯವೆ ಪಥ್ಯವಾದುದನು 1 ಕರುಣದ ಬಗೆಯ ತನುಜೆಯು ವಿಷಯು 2 ವಿಷಯೆ ಇದ್ದೆಡೆಗೆ ತಲೆಯ ತಗ್ಗುವಳು 3 ಪನ್ನಗಧರನ ಕೃಪೆಯಿಂದ ಸನ್ಮಾನವನೆ ಮಾಡಿದರು 4 ಜಾರಿದ ಕುರುಳನೋಸರಸಿ ಚಾರುಮಾಣಿಕಖಚಿತ ಪೀಠಕ್ಕೆ 5 ಹರಸಿ ಅಕ್ಷತೆಗಳನಿಟ್ಟು ಅರಸಿನಗಳ ತಿವರಿದರು 6 ಮಜ್ಜನ ತಂಬಿಗೆಯ ಲೋಕುಳಿಯ ಬೆನ್ನಲೋಕುಳಿಯನೆರೆದರು 7 ಮುಡಿಮೈಗಳನೋಸರಿಸಿ ದುಕೂಲವ ಬಡನಡುವಿಗೆ ಅಳವಡಿಸಿ ಜಡಿತದಾಭರಣಕರಡಿಗೆಯನು ತಂದಿಡುವರು ಇಕ್ಕೆಲದಲ್ಲಿ8 ಪಾಟಿಸಿ ತುರುಬನೋಸರಿಸಿ ಮಧ್ಯದಲಿ ಇಡುವರು 9 ಬೆಳಗುವ ಮೂಗುತಿಯ ಮಂದ ಗಮನೆಯರು ಹರುಷದಲಿ 10 ಮೂಗುತಿಯನಿಕ್ಕುವರು ಕೋಕಿಲಗಾನೆ ಕುಟಿಲಕುಂತಳದಾನೆ ಬಾಗಿದ ಬಾವುಲಿಗಳಲಿ11 ಇಟ್ಟರು ತೋಳ ಚಳರಕ್ಷೆ ಮಣಿಗಳ ಗಟ್ಟಿಕಂಕಣ ಚಳಕಗಳ ಬೆರಳ ಮುದ್ರಿಕೆಯು 12 ಕಡಗ ಮುತ್ತಿನ ಹತ್ತೆ ಕಡಗ ಎಡೆಪಣಿಚಿಂತಾಕದ ಸರಿಗೆಯ ತಂದಿಡುವರಂಗನಗೆ ನಾರಿಯರು 13 ಕಂಠೀಸರ ಬಿಲ್ಲಸರವು ಸರಸಿಜ ಗಂಧಿಯರೊಲಿದು 14 ಕಣಕಾಲುಗಳೆಸೆವ ಭಾವಕಿಯ ಸಾಲುಗಂಟೆ ಗೆಜ್ಜೆ ಸರಪಳಿ ಘಲಿರೆಂಬ ಕಾಲಂದಿಗೆಯನಿಡುವರು15 ಉಂಗುರ ಮುದ್ರಿಕೆಯಿಟ್ಟು ಮಂದಗಮನೆಗೆ ಒಪ್ಪಿದವು 16 ಸಾರಿಸಿ ಅಂಗಕ್ಕೆ ತಿಗುರಿ ಹಾವುಗೆಯನೆ ಮೆಟ್ಟಿಸಿದರು 17 ನಾರಿಯರೆಡಬಲದಲಿ ಕರವಿಡಿಯಲು ಚಾರುವದನೆ ಚಂಚಲಾಕ್ಷಿ ಬಂದೇರಿದಳೊಜ್ರದಂದಣವ 18 ಹೊತ್ತರು ಕಳಸ ಕನ್ನಡಿಯ ಹೊತ್ತಿದ ಕಾಳಂಜಿಯವರು 19 ಜಗಜಗ ಬೆಳಕುಗಳು ತುಂಬಿ ಜಗಜಗಿಸುವ ಜೊ‑ಂಪಿನ ಸುರೆಪಾನವು ನೆಗಪಿದವಗಣಿತವಾಗ20 ಉದುರು ಬಾಣ ಪುಷ್ಪಬಾಣ ಸದನದಿ ನಡೆತಂದಳಬಲೆ 21 ಹೊನ್ನಂದಣವನೆ ಇಳಿಸುವರು ಬಂದಳು ವಿವಾಹ ಮಂಟಪಕೆ 22 ಪಿಡಿದಳು ಮದನನರ್ಧಾಂಗಿ23 ಮುಕುಂದಗರ್ಪಿತವಾಗಲೆಂದು ಮಂದಾರಮಾಲೆ ಹಾಕಿದರು 24 ಪೊರೆಯಲಿ ತಂದು ನಿಲ್ಲಿಸಿದರು ಅರುಹಬೇಕೆಂದು ಕೇಳಿದರು 25 ಎನ್ನ ಪರಮ ಗುರುವೆಂದ 26 ಸಮಯವು ಲಗ್ನವೆಂದೆನುತ ಬ್ರಾಹ್ಮಣೋತ್ತಮರು ಹೇಳಿದರು 27 ಸಮಯವು ಲಗ್ನವೆಂದೆನುತ ಮೇಲೆ ಸೂಸಿದನು 28 ಶತಪತ್ರನಯನೆ ಸಮಗಾತ್ರೆ ಚಮತ್ಕಾರದಿಂದ ಸೂಸಿದಳು 29 ಸೊಡರುಗಳನೆ ಹಚ್ಚುವರು ಪಿಡಿದರು ಇತ್ತಂಡದಲ್ಲಿ 30 ಮುತ್ತೈದೆಯರೆಲ್ಲ ಅಲಂಕರದಿ ವಿಷಯೆ ಸಂಭ್ರಮದಿ 31 ಕೈಯಿಂದ ತೋರುವರು ಸುತ್ತ ನಕ್ಷತ್ರದ ಮಧ್ಯದಿ ಕಂಡಳು ಪ್ರತ್ಯಕ್ಷದಿಂದರುಂಧತಿಯ 32 ದಿನಕರ ಪ್ರತಿಬಿಂಬದಂತೆ ಅನುಕೂಲಗಳನೆ ಮಾಡಿದರು 33 ಮಾಡಿದನು ಶ್ರೀಪತಿಯ ಆಜ್ಯತಂಡುಲ ಆಪೋಶನೆ ಮಾಡಿದ ನಿರ್ಜರಪತಿ ಮೆಚ್ಚುವಂತೆ34 ಎಡೆಮಾಡಿ ಚಪ್ಪರದೊಳಗೆ ಭೋಜನಕೆ ಕುಳ್ಳಿರಿಸಿ 35 ಉಪ್ಪಿನೆÀಸರುಕಾಯಿ ಪರಿಪರಿ ಶಾಕವು ಹಪ್ಪಳ ಬಾಳಕಗಳನು ಅಪ್ಪಲು ಅತಿರಸ ಸೂಪಾಕ್ಷತಶಾಲ್ಯನ್ನ ಚಪ್ಪರದಲಿ ಬಡಿಸುವರು 36 ಕಾಮಿನಿಯರು ಕನಕದ ಹರಿವಾಣದಿ ಶಾವಿಗೆ ಪರಮಾನ್ನಘೃತವ ಭೂಮಕ್ಕೆ ಬಡಿಸಿದರಾಗ 37 ರಾಜೀವ ಮುಖಿ ತನ್ನ ಪತಿಗೆ ಮ- ಹಾಜನರೆಲ್ಲ ಉಂಡು ಕೈತೊಳೆದರು ಹೂಜಿಯಲ್ಲುದಕವ ಪಿಡಿದು38 ಸಂಭ್ರಮದಿಂದ ಸೂಸಿದರು39 ವಾಸುದೇವ ಕೃಷ್ಣ ಎನುತ ಮದನ ವಿಲಾಸದಿಂದಲಿ ನಿದ್ರೆಗೈದ 40
--------------
ಹೆಳವನಕಟ್ಟೆ ಗಿರಿಯಮ್ಮ
ನಿಗಮ ಆಗಮಗೋಚರ ಜಗನ್ಮೋಹ ಜಗದೀಶ ಪಾಲಿಸು ಎನ್ನ ಪ ಖಗವರಗಮನ ಜಗದ ಜೀವನ ಪೊಗಳುವೆ ನಗಧರ ಅನಘನೆ ನಿನ್ನ ನಗೆ ಮೊಗದೋರೆನಗಗಲದೆ ಅನುದಿನ ನಗಜನಮಿತ ಮಿಗಿಲಗಣಿತ ಮಹಿಮ ಅ.ಪ ಕದನಕಂಠೀರವ ಉದಧಿಸದನ ಮಹ ಅಧಮಕುಲದ ಮದಸಂಹರ ಹದಿನಾರುಸಾವಿರ ಸುದತಿಯರ ಮನ ವಿಧ ವಿಧ ಸುಲಿದ ಸುಂದರ ಸದಮಲರಾಧೇಯ ಮದನಕದನದಿಂ ಕದಲದ ಆನಂದ ಮಂದಿರ ಕುದುರೆ ತಿರುವಿ ಪಾದಪದುಮದಾಸನ ಘೋರ ಕದನಗೆಲಿಸಿದ ಗಂಭೀರ ಯುದುಕುಲಪಾವನ ಮದನನಯ್ಯ ರಮಾ ಪದುಮಾವತಿಯ ಪಂಚಜೀವನಸದನ ಪದುಮವದನ ಸದಸದುಗುಣಗಳ ಸದ್ಹøದಯ ಉದಯ ಮುದ ವುದಯಾಗೆನ್ನೊದನದಿ1 ನಲಿದು ನಲಿದು ಪೊಂಗೊಳಲುನೂದುವ ಬಲುಚೆಲುವ ಚಿದ್ರೂಪನಾಟಕ ಒಲದು ಭಜಕಜನರ್ಹೊಲಬು ತಿಳಿವ ಚಿ ತ್ಕಳಾಭರಿತ ವಿಶ್ವವ್ಯಾಪಕ ಜಲಜಮಿತ್ರ ಕೋಟಿಕಳೆಕಿರಣಗಳಿಂ ಖಳಕುಲಭೀತ ಸುಫಲಪ್ರದ ಪರತರ ಇಳೆಮಂಡಲತ್ರಯ ಪಾಲಕ ಕಲಿಮಲಹರ ನಿರ್ಮಲನಿಜಚರಿತ ಮಲಿನ ಕಳೆದು ನಿರ್ಮಲನೆನಿಸೆನ್ನ ಒಲಿದುಪಾಲಿಸು ಸ್ಥಿರ ಚಲಿಸಿದಚಲಮನ ಸುಲಭಭಕುತ ಬಲ ವಿಲಿಸಿತಕರುಣಿ 2 ಸಿಡಿಲುಕೋಟಿಸಮ ಫಡಫಡಸ್ತಂಭವ ಒಡೆದು ಮೂಡಿದ ತ್ರಿವಿಕ್ರಮ ಕಡುರೋಷದಿ ಕೆಂಗಿಡಿಗಳನುಗುಳುವ ಕಡುಗಲಿಗಳಗಲಿ ನಿಸ್ಸೀಮ ಘುಡುಘುಡಿಸುತ ಆರ್ಭಟಿಸುತ ದುರುಳನ ಒಡಲಬಗಿದ ಕಡುಪರಾಕ್ರಮ ಗಡಗಡ ನಡುಗುವ ದೃಢತರ ಬಾಲನ ಪಿಡಿದು ಪೊರೆದ ಭಕ್ತ ಸುಖಧಾಮ ಉಡುಮಂಡಲ ವರಗಡರಿದ ಶಾಪವ ತಡೆಯದೆ ಹಡೆಹಾಯ್ಸ್ಹಿಡಿದೆಲೋಕವರ ಜಡಜಭವ ತೊಡರನು ಗಡ ಕಡಿದೆನ್ನಯ ನುಡಿಯೊಳೊಡೆದು ಮೂಡು ಒಡೆಯ ಶ್ರೀರಾಮ ಪ್ರಭು 3
--------------
ರಾಮದಾಸರು
ನಿತ್ಯ ಶುಭಮಂಗಳಂ ಪ. ಹೃದಯವೆಂಬೀ ದಿವ್ಯ ಪದ್ಮಪೀಠದ ಮೇಲೆ ಪದ್ಮಾಕ್ಷಿ ಪದ್ಮೆಯನು ಕುಳ್ಳಿರಿಸಿ ಸದಮಲ ಭಾವದಿಂ ಮಧುಕೈಟಭಾಂತಕನ ಹೃದಯೇಶ್ವರಿಯ ಸೇವೆಗೈವೆ 1 ಜ್ಞಾನವೆಂಬುವ ದಿವ್ಯ ಜ್ಯೋತಿಯಂ ಮುಂದಿರಿಸಿ ಧ್ಯಾನವೆಂಬುವ ನಿಲುವುಗನ್ನಡಿಯ ನಿಲಿಸಿ ದಾನÀವಾಂತಕ ರಾಮಚಂದ್ರಮನ ಧ್ಯಾನಿಸುತ ಜಾನಕಿಯ ಬಲಗೊಂಬೆ ಭರದಿ 2 ನೇಮನಿಷ್ಠೆಯ ಶುದ್ಧ ಹೇಮಕಲಶದಿ ಮತ್ತೆ ಭಕ್ತಿರಸದ ಪನ್ನೀರ ತುಂಬಿ ನಾಮಸಂಕೀರ್ತನೆಯ ನಾರಿಕೇಳವ ಬೆರಸಿ ಶ್ರೀನಾರಿಗಭಿಷೇಕವ ಗೈವೆ 3 ಚಿತ್ತಶುದ್ಧಿಯ ಶುಭ್ರವಸ್ತ್ರದಿ ನೇವರಿಸಿ ಸತ್ವಗುಣದ ಪೀತಾಂಬರವನುಡಿಸಿ ಕಂಚುಕ ತೊಡಿಸಿ ಚಿತ್ತಜನ ಜನನಿಯರ ನೋಡಿ ನಲಿವೆ 4 ಅಂತಃಕರಣ ಶುದ್ಧಿಯ ಅರಿಸಿನವನು ಪೂಸಿ ಶಾಂತಗುಣದ ತಿಲಕ ತಿದ್ದಿ ನಂದಮಲ್ಲಿಗೆಯ ದಂಡೆಯನು ಮುಡಿಸುತ್ತ ಇಂದ್ರಿಯ ನಿಗ್ರಹದ ಗಂಧ ಹಚ್ಚುವೆನು 5 ಪಂಚಭೂತಾತ್ಮಕದ ಛತ್ರಿಯನು ಪಿಡಿದೆತ್ತಿ ಪಂಚನಾದಗಳೆಂಬ ವಾದ್ಯಗಳ ನುಡಿಸಿ ಪಂಚೇಂದ್ರಿಯಂಗಳೇ ಪಂಚಭಕ್ಷ್ಯಗಳಾಗಿನಿ ರ್ವಂಚನೆಯಿಂದಾರೋಗಿಸೆಂಬೆ 6 ರೇಚಕವೆಂಬ ವ್ಯಜನದಿಂ ಬೀಸಿ ತಾರಕ ಚಾಮರವ ಪಿಡಿದು ಕುಂಭಕವೆಂಬ ಪನ್ನೀರಿನಿಂ ತೋಯ್ಸಿ ತಾರಕ ಬ್ರಹ್ಮನರಸಿಯಂ ಸೇವಿಸುವೆ 7 ಭೋಗಭಾಗ್ಯವನೀವ ಭಾಗ್ಯಲಕ್ಷ್ಮಿಗೆ ವೈರಾಗ್ಯದ ತಟ್ಟೆಯನು ಪಿಡಿದು ಭಾವದೀವಿಗೆಯ ಕರ್ಪೂರದಾರಿತಯೆತ್ತಿ ಬಾಗಿವಂದಿಪೆ ತಾಯೆ ಕರುಣಿಸೆಂದು 8 ವರದಾತೆ ಭೂಜಾತೆ ಸುವಿನೀತೆ ಸುವ್ರತೆ ವರಶೇಷಗಿರಿವಾಸದಯಿತೆ ಮಹಿತೇ ಸೆರಗೊಡ್ಡಿ ಬೇಡುವೆನು ಕರಪಿಡಿದು ಸಲಹೆಂದು ನೆರೆನಂಬಿ ನೆನೆನೆನೆದು ನಲಿವೆನಿಂದು 9
--------------
ನಂಜನಗೂಡು ತಿರುಮಲಾಂಬಾ
ನಿನಗೆ ನಾ ಬ್ಯಾಡಾದನೆ ಘನಕೃಷ್ಣ ಮಾನಿನಿಯ ಕಿಂತ ಕೊನೆಯೆ ಪ ಎನ್ನ ಕಣ್ಣಿಗೆ ತೋರದೆ ಬೆನ್ನಲ್ಲಿ ಮಾನಿನಿಗೆ ನೀ ತೋರಿದ್ಯಾ ಮನ್ನಿಸುವ ನಿತ್ಯದಲಿ ಮುನ್ನ ನಿನಗೆ ನಾ ದ್ವೇಷಿಯಲ್ಲವೋ 1 ಒಳಗೆ ನೀನಿರುವಿ ಎಂದೂ ತಿಳಿದು ಬಲು ತೊಳಲಿ ಶರಣು ಬಂದರೆ ಪೊಳೆಯದಲೆ ಮನಸಿನೊಳಗೆ ಕೊಳಲು ಕರೆ ಬಾಲೇಗೆ ನೀ ತೋರಿದ್ಯಾ 2 ಸುಳ್ಳು ಇದು ಎಂದ್ಹೇಳಲು ಸಲ್ಲದೆಲೊ ಕಳ್ಳ ನೀನೆಂದು ಬಂದೆ ಪುಲ್ಲನಾಭನೆ ತೋರೆಲೊ ಮಲ್ಲನೆ ಗಲ್ಲ ಪಿಡಿದು ಮುದ್ದಿಪೆ 3 ನೀರದಸಮ ಕಾಂತಿಯ ನಾರಿಮಣಿ ಬೀರಿದಳೊ ಶ್ರೀಕೃಷ್ಣನೆ ಕರುಣಸಾಗರನೆಂಬೊದು ಮರೆತು ನೀ ದೂರ್ಹೋಗಿ ನಿಲ್ವರೇನೊ 4 ಮೂರು ವಯಸೆಂದ್ಹೇಳರೊ ಚಾರುತರಾಭರಣ ಇಟ್ಟಿಹನೆಂಬುರೊ ಈ ರೀತಿ ಅಬಲೆಯರು ನಿರುತದಲಿ ಧರೆಯೊಳಗೆ ಪೇಳ್ವುದರಿಯಾ5 ಎಂದಿಗಾದರು ನಿನ್ನನು ಪೊಂದದೆಲೆ ಇಂದಿರಾಧವ ಬಿಡುವನೆ ತಂದೆ ಶ್ರೀ ಮಧ್ವರಾಯ ಛಂದದಲಿ ಮುಂದೆ ತಂದೆಳೆವ ನಿನ್ನ 6 ನೀ ಬಿಟ್ಟರೇ ಕೆಡುವೆನೆ ಶ್ರೀ ಭೀಮನೊಬ್ಬ ಬಲ ಸಾಕೆಲೊ ಅಪಾರ ದೈವ ನಿನ್ನ ಕೊಬ್ಬುತ ತಬ್ಬಿ ನಾ ನಿನ್ನೊಲಿಸುವೆ7 ಮಾನದಿಂದಲಿ ತೋರೆಲೊ ನಿನಗಿದು ಘನತೆಯಲ್ಲವೊ ಜೀಯನೆ ಮುನ್ನ ಮಾಡ್ದುಪಕೃತಿ ಮರೆತೆಯಾ8 ಇನಿತು ವಂಚಿಸಿ ಪೋದರೆ ನಾ ನಿನ್ನ ಹೀನ ಗುಣದವನೆನ್ನುವೆ ಮನ್ನಿಸಿ ಸಲಹೋ ಬ್ಯಾಗ ಶ್ರೀ ನರಹರಿಯೆ ನಾ ಭಿನ್ನೈಸುವೆ9
--------------
ಪ್ರದ್ಯುಮ್ನತೀರ್ಥರು
ನಿನ್ನ ಚಂದ್ರಕೋಟಿ ತೇಜ ಚಕ್ರಧರನ ಭೃತ್ಯಾ ಪ ತ್ರಿದಶ ದೈತ್ಯರು ಕೂಡಿ ತೀವ್ರದಿಂದಲಿ ತಾವು ಮಂದರ ಶೈಲ ತವಕದಿ ತಂದಾಗ ಉದಧಿಯೊಳಿಟ್ಟು ಸರ್ಪವನೆ ಸುತ್ತಿದರು ಪಿಡಿದು ಮುದದಿಂದ ಕಟಿಯಲು ಮುನಿದು ಮಹರೋಷದಿ ಅದು ನೋಡಿ ಮದನಾರಿ ಕಂಗೆಡಲು ಅಂಜದೆ ನೀನು ಸುರರು ಸುಖಬಡಲು 1 ವಾತನ ಸುತನಾಗಿ ವಾಲಿಯ ತಮ್ಮನ ಕೂಡಿ ಭೂತಳಾಧಿಪ ರಾಮಚಂದ್ರನ ಪದವಾರಿ ಜಾತಕ್ಕೊಂದನೆ ಮಾಡಿ ವೃತ್ತಾಂತವನು ಪೇಳಿ ಆತುರದಲಿ ಪುರಹೂತನಂದನ ನಿ ರ್ಭೀತನ ಕೊಲ್ಲಿಸಿ ಶರಧಿಯನು ಹಾರಿ ಸೀತೆಗುಂಗುರ ಕೊಟ್ಟು ಬೆಳೆದ ಚಲ್ವ- ವಾತಹತಮಾಡಿ ಲಂಕಾಪುರವ ಸುಟ್ಟ 2 ಪಾಂಡುಚಕ್ರವರ್ತಿ ಕುಂತಿಯಲಿ ಜನಿಸಿ ಮಂಡಲದೊಳು ಮಹಾಶೂರನೆನಿಸಿ ವಿಷ ಉಂಡು ದಕ್ಕಿಸಿಕೊಂಡು ಉರಗಲೋಕದಲ್ಲಿದ್ದು ತಾಂಡ ಭಾದಿಯ ಗೆದ್ದು ಹಿಡಿದು ಹಿಡಂಬನ ಹಿಂಡಿ ಬಕಾಸುರನ ಖಂಡರಿಸಿ ಕೀಚಕನ ಮಂಡಲದೊಳಗೆ ನಿಂದೆ ವಿರಾಟನ್ನ ದಿಂಡುಗೆಡುಹಿ ಕದನದಲಿ ವೇಗ ಕೊಂದೆ 3 ಬುದ್ಧಿಹೀನರಾಗಿ ಬಾಳಿದ ಮನುಷ್ಯರ ಶುದ್ಧಾತ್ಮರನ ಮಾಡಿ ಶುಭವೇಗದಲಿ ಶ್ರೀ ಮುದ್ರೆಧಾರಣ ಕೊಟ್ಟು ಜ್ಞಾನಾಂಬುಧಿಯೊಳಿಟ್ಟು ಅದ್ವೈತ ಮತ ಕಾಲಿಲೊದ್ದು ಪರವಾದಿ ಎದ್ದೋಡಿ ಬಂದು ತಿರುಗಿ ನಿಮ್ಮ ಉದ್ಧರಿಸಿ ಅವರವರ ದೋಷ ಹೋಯಿತು ಕರಗಿ4 ಭೂವ್ಯೊಮ ಪಾತಾಳದೊಳಗೆ ಎದುರುಗಾಣೆ ವಾಯು ಹನುಮ ಭೀಮ ಮಧ್ವನೆಂದಿನಿಸಿದೆ ಕಾಯಜ ಜನಕನ ಪದವ ಪೂಜಿಸಿ ಅಂಬು ಜೆಯನ ಪದವಿ ಪಡೆದು ಹರ ಇಂದ್ರಾದಿಗಳಿಗೆ ನಾಯಕನೆನಿಸಿದೆ ನಾನಾ ದುರಿತವಾಗಿ ಮಾಯಿಗಳೆಲ್ಲ ತರಿದೆ ಸುಭಕುತರ ಆಯತದಿಂದ ಪೊರೆದೆ ವಿಜಯವಿಠ್ಠಲರಾಯ ವೆಂಕಟನ ಒಲಿಮೆಯಿಂದಲಿ ಮೆರೆದೆ5
--------------
ವಿಜಯದಾಸ
ನಿನ್ನ ಚಿತ್ತ ನಿನ್ನ ಚಿತ್ತ ನಿನ್ನ ಚಿತ್ತವೋ ಪ. ಬನ್ನ ಬಡಿಸಬೇಡವಿನ್ನು ಭಯವ ಬಿಡಿಸಿ ಕಾಯೊ ಎನ್ನ ಅ.ಪ. ಘನ್ನ ಮನಸು ಮಾಡಿ ಈಗ ಎನ್ನ ಸಲಹಿದರೆ ಜಗದಿ ನಿನ್ನ ಕೀರ್ತಿಯು ಉನ್ನತದಲಿ ಮೆರೆವುದಿದೆಕೊ ಬನ್ನ ಬಡಿಸಬೇಡವಿನ್ನು ಘನ್ನಮಹಿಮ ಕೇಳು ಸೊಲ್ಲ ಇನ್ನು ಸುಮ್ಮನಿರಲು ಸಲ್ಲ ಘನಮಹಿಮನೆ 1 ಬುದ್ಧಿ ಭ್ರಮೆಯಿಂದ ನಾನು ಪೊದ್ದಿರುವ ಭಯವ ಬಿಡಿಸಿ ನಿದ್ದೆಯಲಿ ತಿಳಿಸಿದ್ವಾರ್ತೆ ಶುದ್ಧಗೊಳಿಸುತ ಮುದ್ದುಕೃಷ್ಣ ಅಭಯ ತೋರಿ ಉದ್ಧರಿಸಿದರೆ ಎನ್ನ ಶ್ರದ್ಧೆಯಿಂದ ನಿನ್ನ ಕೀರ್ತಿ ಮಧ್ವಮತದಿ ಸಾರುವೆನು2 ಬೆದರಿಸುವ ಪರಿಯದೇನು ಬದಿಗನಾಗಿ ಅರಿಯದೇನು ಹೃದಯದಲ್ಲಿ ನಿಂತ ಮೇಲೆ ಎನ್ನದಿನ್ನೇನು ಪದುಮನಾಭ ನಿನ್ನ ನಂಬಿ ಪದೋಪದಿಗೆ ನೆನೆಸುತಿರಲು ವಿಧ ವಿಧದಿ ಪರಿಕಿಸುವ ವಿಧವನರಿಯೆ ಪದುಮೆಯರಸ3 ಉಡಲು ಉಣಲು ಆಸೆಯಿಲ್ಲ ತೊಡಲು ಇಡಲು ಮಮತೆಯಿಲ್ಲ ಎಡದ ಬಲದ ನೆಂಟರಭಿಮಾನವಿಲ್ಲವು ಎಡರು ಬರಲು ಭಯವು ಇಲ್ಲ ಬಿಡಲು ದೇಹ ಅಂಜಿಕಿಲ್ಲ ನಡುವೆ ಕರೆವುದುಚಿತವಲ್ಲ ಮೃಡನ ಸಖನೆ ಕೇಳೊ ಸೊಲ್ಲ 4 ನಿರ್ದಯವನು ಮಾಡಲಿಕ್ಕೆ ಮಧ್ಯಮಧಮಳಲ್ಲವಿನ್ನು ಮಧ್ವಮುನಿಯ ಮತದಿ ಜನಿಸಿ ಶುದ್ಧ ಭಾವದಿ ಶುದ್ಧ ಸಾತ್ವಿಕರು ತಂದೆ ಮುದ್ದುಮೋಹನ ಗುರುಗಳಿಂದ ಪೊದ್ದಿ ದಾಸ್ಯರೀಗ ಜಗದಿ ಬದ್ಧ ಕಂಕಣಧರಿಸಿ ಮೆರೆವೆ 5 ಒಡೆಯ ನೀನು ಎನ್ನ ಧರೆಗೆ ಬಿಡದೆ ತಂದು ಜನ್ಮವಿತ್ತು ಬಿಡದೆ ಕಾಯ್ವ ಗುರುಗಳನ್ನು ಅಗಲಿಸುತ್ತಲಿ ಅಡಿಗಡಿಗಭಯವ ತೋರಿ ಪಿಡಿದು ಕೈಯ್ಯ ಸಲಹದಿರಲು ಅಡಿಗಳಾರದಿನ್ನು ನಾನು ಪಿಡಿಯೆ ಕಡಲಶಯನ 6 ನಾಥರಾರು ಎನಗೆ ಇಲ್ಲ |ಅ- ನಾಥಗಳನ್ನು ಮಾಡಿ ನಿನ್ನ ಮೂತಿ ತಿರುಹಿ ಸಲಹದಿರಲು ಪಾತಕಲ್ಲವೆ ಪಾತಕಾದಿ ದೂರನೆಂಬೊ ಖ್ಯಾತಿ ಸಟೆಯದಾಯ್ತು ಈಗ ನೀತಿಯರಿತು ಪೊರೆಯದಿರಲು ಜಾತರಹಿತ ಜಗದಿ ಸಲಹು 7 ದಾಸತನದಿ ಮೆರೆವೊದೊಂದು ಆಸೆಯಿಲ್ಲದಿನ್ನು ಬೇರೆ ಆಸೆಯೊಂದು ಇಲ್ಲ ಕೇಳು ನಾಶರಹಿತನೆ ಪಾಶಕರ್ಮ ಹರಿಸಿ ನಿನ್ನ ದಾಸಳೆಂದು ಮೆರೆಸೆ ಜಗಕೆ ಈಶನೆಂದು ನಿನ್ನ ಮೆರೆಸಿ ಆಸೆ ಪೂರೈಸಿಕೊಂಬೆ 8 ಮೃತ್ಯುವಿಗೆ ಮೃತ್ಯುವಾಗಿ ತುತ್ತುಮಾಡಿ ಜಗವ ನುಂಗಿ ಮತ್ತೆ ಬ್ರಹ್ಮಾಂಡ ಸೃಜಿಸಿ ಪೆತ್ತು ಜೀವರ ಭಕ್ತ ಜನಕೆ ಬಂದ ಎಡರು ಮೃತ್ಯುಗಳನು ಕಾಯ್ದ ದೇವ ಮೃತ್ಯು ಮೃತ್ಯು ಶರಣು ನೃಹರಿ ಮೃತ್ಯು ಹರಿಸಿ ಕಾಯೊ ಶೌರಿ9 ಬಿಡಲಿಬೇಡ ಕೈಯ್ಯ ಇನ್ನು ಬಿಡದೆ ಕಾಯೊ ಶರಣು ಶರಣು ಒಡೆಯ ಶ್ರೀ ಗೋಪಾಲಕೃಷ್ಣವಿಠ್ಠಲಾತ್ಮಕ ಕಡೆಗೆ ನಿನ್ನ ಪಾದಸೇವೆ ಬಿಡದೆ ಕೊಡುವ ದೃಢವ ಬಲ್ಲೆ ಕರವ ಪಿಡಿಯೊ 10
--------------
ಅಂಬಾಬಾಯಿ
ನಿನ್ನ ನಂಬಿದವರ ಕಾಯೊ ನಿಜವುಳ್ಳ ದೇವ ಎನ್ನನು ಉದ್ಧರಿಸಿ ಕಾಯೊ ಕರುಣಿವೆಂಕಟ ಪ. ಸುರಪತಿಯು ಮುನಿದು ಮಳೆಗರೆಯಲೇಳು ದಿನವೂ ಬಿಡದೆ ತುರುಗಳೆಲ್ಲ ಸೊರಗಿ ಬಾಯ ಬಿಡುತಿರಲು ಬೆರಳಿನಿಂದ ಗೋವರ್ಧನ ಗಿರಿಯನ್ನೆತ್ತಿ ಗೋವ್ಗಳನು ದ್ಧರಿಸಿ ಕಾಯ್ದೆ ಕರುಣಾಸಿಂಧು ಕಮಲಲೋಚನ 1 ಮಡುವಿನೊಳಗೆ ಮಲೆತನೀರ ಕುಡಿಯ ಬಂದಾಗಜವ ನೆಗಳು ಪಿಡಿದು ಕಾಲಕಚ್ಚಿ ಭಂಗಬಡಿಸುತ್ತಿರಲು ತಡೆಯಲಾರದೆ ಪ್ರಾಣ ಬಿಡುವ ಸಮಯದಲ್ಲಿ ಬಂದು ಕೆಡಹಿ ಚಕ್ರದಿಂದ ನೆಗಳ ಕರಿಯ ಸಲಹಿದೆ2 ಮಂದ ತುತ್ತು ಮಾಡಿ ಪಿಡಿದು ಕುದುರೆ ಕ್ರೂರ ದಂತದಿ ಕತ್ತರಿಸುವ ಸಮಯದಲ್ಲಿ ಕಡೆಮಾಡಿ ಕಾಯೆನ್ನ ಕರ್ತು ಹೆಳವನಕಟ್ಟೆ ಕರುಣಿ ವೆಂಕಟ 3
--------------
ಹೆಳವನಕಟ್ಟೆ ಗಿರಿಯಮ್ಮ
ನಿನ್ನ ನೀ ತಿಳಿದು ನೋಡೊ ಪ್ರಾಣಿ ಧ್ರುವ ನಿನ್ನ ನೀ ತಿಳಿಯೊ ನೀ ಭಿನ್ನಬೇದವಳಿದು ಚೆನ್ನಾಗ್ಯನುಭವದಲಿ ಉನ್ಮನವಾಗಿ 1 ನಾನಾರು ಎಂದು ನೀ ಖೂನ ತಿಳಿದು ನೋಡೊ ಘನ ಗುರು ಕೃಪೆಯಿಂದಲಿ ತನುವಿನೊಳು 2 ಎಲ್ಲಿಂದ ಬಂದ್ಯೊ ನೀ ಎಲ್ಲಿಗ್ಹೋಗುವಿ ಮುಂದೆ ಇಲ್ಲೆವೇ ತಿಳಿದು ನೋಡೊ ಸುಲಭದಿಂದ 3 ಬಂದೆ ನಾ ತಂದೆ ನಾ ಬಂದು ಘಳಿಸಿದೆ ನಾ ಹೊಂದಿಕಿ ಹೊಲಬು ನೋಡೊ ಸಂಧಿಸಿ ಘನ 4 ನಡೆದೆ ನಾ ನುಡಿದೆ ನಾ ಹಿಡಿದೆ ನಾ ಪಡೆದೆ ನಾ ಒಡನೆ ನಿನ್ನೊಳು ನೀ ನೋಡೊ ಪಿಡಿದು ನಿಜ 5 ತಾನೇನು ತನುವೇನು ತನ್ನೊಳಗಿಹುದೇನು ಮನಮುಟ್ಟಿ ಘನವ ನೋಡೊ ಚಿನ್ನುಮಯನ 6 ಏನುಂಟು ಏನಿಲ್ಲ ಅನಿಮಿಷದಲಿ ನೋಡೊ ಘನಕ ಘನವ ಬೆರೆದು ಸನ್ಮತವಾಗಿ 7 ಮರ ಹುಟ್ಟಿ ಮರಬಿದ್ದ ತೆರನಾಗದಿರೊ ನೀನು ಎರಗೊ ಶ್ರೀಗುರುಪಾದಕ ಕರಿಗಿ ಮನ 8 ಎಡಬಲ ನೋಡದೆ ಪಿಡಿದು ಸದ್ಗುರು ಪಾದ ಬೋಧ ನೋಡಿ ನಿನ್ನೊಳು9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿನ್ನನ್ನೆ ನಂಬಿದೆನೊ ಪನ್ನಂಗಶಾಯಿ ಎನ್ನ ನೀ ಕಾಯಬೇಕೊ ಪ ದೀನದಯಾಳು ದೇವ ನೀನೆ ಕಾಯದೆ ಬಿಟ್ಟ ರಿನ್ನಾರು ಕಾಯ್ವರು ಎನ್ನನೀ ಜಗದೊಳುಅ.ಪ ಉನ್ನತ ಹೃದಯನೆ ಮುನ್ನ ನಾ ಮಾಡಿದ ಗನ್ನಗತಕತನವನ್ನು ದಯದಿ ಕ್ಷಮಿಸು ಇನ್ನೀಭವದಿ ಎನಗೆ ನಿನ್ನಯ ಸನ್ನುತಿ ಯನ್ನು ಪಾಲಿಸಿ ಸತತ ಬನ್ನಬಡಿಸದೆ ಕಾಯೊ 1 ಶರಣಾಗತರಕ್ಷಣಾನಾಥಜನಬಂಧುವೇ ಕರುಣದಿ ನಿಮ್ಮಂಥ ದೇವರನುಕಾಣೆ ದುರಿತದೂರನೆ ಎನ್ನ ದುರಿತದುರ್ಗಣವನ್ನು ಪರಿಹರಿಸಿ ಸಲಹಯ್ಯ ಶರಣುಜನರ ಪ್ರೀಯ 2 ಕೈಯ ಪಿಡಿದು ಪೊರೆಯೊ ಬಿಡದೆನಮ್ಮಯ್ಯ ಜಗ ದಯ್ಯ ಶ್ರೀರಾಮ ವಿಜಯವಿಠಲರಾಯ ಕೈಯ ಮುಗಿದು ಮರೆಹೊಕ್ಕು ಬೇಡುವೆಯ್ಯ ಜೀಯ ದಯದಿ ಕಾಯೊ ಪಂಢರಿರಾಯ 3
--------------
ರಾಮದಾಸರು