ಒಟ್ಟು 1446 ಕಡೆಗಳಲ್ಲಿ , 98 ದಾಸರು , 1132 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃಷ್ಣವೇಣಿ ಕಲ್ಯಾಣಿ ನಿತ್ಯ ಸಾಗರನ ರಾಣಿ ಪ ಅಜನ ನಿರೂಪದಲಿ ಜಾಬಾಲಿಮುನಿ ಬಂದು ಭಜಿಸಿದನು ನಿನ್ನ ಬಲುದಿವಸಂಗಳು ನಿಜವಾಗಿ ಹರನ ಜಡೆಯಲ್ಲಿ ಉದ್ಭವಿಸಿದೆ ತ್ರಿಜಗದೊಳಗೆ ಮೆರೆದೆ ತ್ರಿದಶಾಮರವಂದಿತೆ 1 ಕನ್ಯಾರಾಶಿಗೆ ಜೀವ ಬಂದು ಪ್ರಾಪುತನಾಗೆ ಹನ್ನೆರಡು ವರುಷಕೆ ಒಮ್ಮೆ ಬಿಡದೇ ಮನ್ನಿಸಿ ಭಕುತಿಯಿಂದ ಒಂದು ಮಜ್ಜನಮಾಡೆ ಧನ್ಯನ ಮಾಳ್ಪೆ ಬಲು ಘನ್ನ ತರಂಗಿಣಿ 2 ಎತ್ತ ನೋಡಿದರತ್ತ ನಾಲ್ಕುವರೆ ಯೋಜನವು ಕ್ಷೇತ್ರ ಪುಣ್ಯದೇವಿಯೆನಿಸಿಕೊಂಬೆ ಸ್ತುತಿಸಲಳವೇ ನಿನ್ನ ಮಹಿಮೆಯ ಅನುಗಾಲ ಮತ್ತಗಜಗಮನೆ ಮಲದೂರೆ ಮುಕ್ತಿಧಾರೆ 3 ಪೋಗದ ಪಾಪಗಳಿರಲು ನಿನ್ನ ದರುಶನವು ಬಾಗಿಲ ಕಾಯ್ವ ಭಾಗ್ಯವ ಕೊಡು ಕರುಣದಲಿ 4 ಕಲಿಯುಗಕೆ ನೀನೇ ವೆಗ್ಗಳವೆಂದು ಬುಧಜನರು ಒಲಿದು ಕೊಂಡಾಡುವರು ಸತತದಲ್ಲಿ ಜಲನಿಧಿಯ ಎರಡು ಮೊಗದಲಿ ಮೆರೆದೆ ಮಹತಟಿನಿನೆಲೆಗೊಳಿಸು ವಿಜಯವಿಠ್ಠಲ ಚರಣದಲ್ಲಿ 5
--------------
ವಿಜಯದಾಸ
ಕೆಡದಿರು ಕಡುಮೋಹದಡವಿಬಿದ್ದು ಮನ ಕೆಡುವ ಶರೀರ ಜಡದೃಶ್ಯವಿದು ಪ ಜಲದ ಮೇಲಿನ ಗುರುಳೆಯಂತೆ ಈ ದೇಹ್ಯ ಗಳಿಗೆ ಚಲಿಸಿ ಒಡೆದು ನೆಲಕೆ ಬೀಳುವುದು ಬಳಿದ ಕಸದತೆರಗಳಿಗೆ ನಿಲ್ಲದೆ ಇದನು ಎಳೆದುಹಾಕುವರಂತ್ಯ ಕಾಲದಲಿ 1 ಕ್ಷಿತಿಯೊಳಿರುವ ತನಕ ಸತಿಸುತರೆಲ್ಲರು ಸತತ ಹಿತದಿ ಬಲುಪೂಜೆ ಮಾಳ್ಪರು ಸತ್ತ ಬಳಿಕ ತಮಗ್ಹತ್ತಿತ್ತು ಮುಟ್ಟೆಂದು ಹಿತದವರೆಲ್ಲ ಮುಟ್ಟುತೊಳಕೊಂಬರು2 ಗಳಿಸಿದ ಧನಮಾನ್ಯ ಬಲುಸಂಪದವೆಲ್ಲ ಉಳಿವುದು ಎಲ್ಲ ಇಲ್ಲೇ ಜತೆಯಲಿ ಬರದೇನು ತಿಳಿದು ಶ್ರೀರಾಮನ ಚರಣಕಮಲಧ್ಯಾನ ಗಳಿಸಿ ಘನಮುಕ್ತಿ ಪಡಕೊಳ್ಳೆಲೊ 3
--------------
ರಾಮದಾಸರು
ಕೇಶವನೊಲುಮೆಯು ಆಗುವ ತನಕ ಹರಿದಾಸರೊಳಿರುತಿರು ಹೇ ಮನುಜ ಪ ಕ್ಲೇಶಪಾಶಂಗಳ ಹರಿದು ವಿಲಾಸದಿಶ್ರೀಶನ ನುತಿಗಳ ಪೊಗಳುತ ಮನದೊಳುಅ ಘಾಸಿ ಮಾಡಿದ ಪಾಪಕಾಶಿಗೆ ಹೋದರೆ ಹೋದೀತೆಶ್ರೀಶನ ಭಕುತರ ದೂಷಿಸಿದಾ ಫಲಕಾಸು ಕೊಟ್ಟರೆ ಬಿಟ್ಟೀತೆಭಾಷೆಯ ಕೊಟ್ಟು ನಿರಾಶೆಯ ಗೈದ ಫಲಕ್ಲೇಶಗೊಳಿಸದೆ ಇದ್ದೀತೆಭೂಸುರಸ್ವವ ಹ್ರಾಸ ಮಾಡಿದ ಫಲಏಸೇಸು ಜನುಮಕು ಬಿಟ್ಟೀತೆ 1 ಜೀನನ ವಶದೊಳು ನಾನಾ ದ್ರವ್ಯವಿರೆದಾನಧರ್ಮಕೆ ಮನಸಾದೀತೆಹೀನ ಮನುಜನಿಗೆ ಜ್ಞಾನವ ಬೋಧಿಸೆಹೀನ ವಿಷಯ ಅಳಿದ್ಹೋದೀತೆಮಾನಿನಿ ಮನಸದು ನಿಧಾನವಿರದಿರೆಮಾನಾಭಿಮಾನಗಳುಳಿದೀತೆಭಾನುಪ್ರಕಾಶನ ಭಜನೆಯ ಮಾಡದಹೀನಗೆ ಮುಕುತಿಯು ದೊರಕೀತೆ2 ಸತ್ಯಧರ್ಮಗಳ ನಿತ್ಯವು ಬೋಧಿಸೆತೊತ್ತಿನ ಮನಸಿಗೆ ಸೊಗಸೀತೆತತ್ವದ ಅರ್ಥವ ವಿಚಿತ್ರದಿ ಪೇಳೆಕತ್ತೆಯ ಚಿತ್ತಕೆ ಹತ್ತೀತೆಪುತ್ಥಳಿ ಬೊಂಬೆಯ ಚಿತ್ರದಿ ಬಣ್ಣಿಸಿಮುತ್ತು ಕೊಟ್ಟರೆ ಮಾತನಾಡೀತೆಕತ್ತುರಿ ತಿಲಕವನೊತ್ತಿ ಫಣೆಯೊಳಿಡೆಅರ್ತಿಯ ತೋರದೆ ಇದ್ದೀತೆ 3 ನ್ಯಾಯವ ಬಿಟ್ಟನ್ಯಾಯವ ಪೇಳುವನಾಯಿಗೆ ನರಕವು ತಪ್ಪೀತೆಬಾಯಿ ಕೊಬ್ಬಿನಲಿ ಬಯ್ಯುವ ಮನುಜಗೆಘಾಯವಾಗದೆ ಬಿಟ್ಟೀತೆತಾಯಿತಂದೆಗಳ ನೋಯಿಸಿದವನಿಗೆಮಾಯದ ಮರಣವು ತಪ್ಪೀತೆಮಾಯಾಜಾಲವ ಕಲಿತ ಮನುಜನಿಗೆಕಾಯ ಕಷ್ಟವು ಬಿಟ್ಟೀತೆ 4 ಸಾಧು ಸಜ್ಜನರ ನೋಯಿಸಿದ ಮಾಯಾವಾದಿಗೆ ನರಕವು ತಪ್ಪೀತೆಬಾಧಿಸಿ ಪರರರ್ಥವ ದೋಚುವವಗೆವ್ಯಾಧಿಯು ಕಾಡದೆ ಬಿಟ್ಟೀತೆಭೇದವೆಣಿಸಿ ಬಲು ಕ್ಷುದ್ರವ ಕಲಿತರೆಮೋದವೆಂದಿಗು ಆದೀತೆಕದ್ದು ಒಡಲ ಪೊರೆವವನ ಮನೆಯೊಳುಇದ್ದದ್ದು ಹೋಗದೆ ಉಳಿದೀತೆ5 ಅಂಗಜ ವಿಷಯಗಳನು ತೊರೆದಾತಗೆಅಂಗನೆಯರ ಸುಖ ಸೊಗಸೀತೆಸಂಗ ದುಃಖಗಳು ಹಿಂಗಿದ ಮನುಜಗೆಶೃಂಗಾರದ ಬಗೆ ರುಚಿಸೀತೆಇಂಗಿತವರಿತ ನಿಸ್ಸಂಗಿ ಶರೀರ ವ-ಜ್ರಾಂಗಿಯಾಗದೆ ತಾನಿದ್ದೀತೆಮಂಗಳ ಮಹಿಮನ ಅಂಘ್ರಿಯ ಕಾಣದಮಂಗಗೆ ಮುಕುತಿಯು ದೊರಕೀತೆ 6 ಕರುಣಾಮೃತದಾಭರಣವ ಧರಿಸಿದಶರಣಗೆ ಸಿರಿಯು ತಪ್ಪೀತೆಕರುಣ ಪಾಶದುರವಣೆ ಹರಿದಾತಗೆಶರಣರ ಕರುಣವು ತಪ್ಪೀತೆಅರಿತು ಶಾಸ್ತ್ರವನಾಚರಿಪ ಯೋಗ್ಯಗೆಗುರು ಉಪದೇಶವು ತಪ್ಪೀತೆವರ ವೇಲಾಪುರದಾದಿಕೇಶವನಸ್ಮರಿಸುವನಿಗೆ ಮೋಕ್ಷ ತಪ್ಪೀತೆ 7
--------------
ಕನಕದಾಸ
ಕೇಳಮ್ಮ ತಂಗಿ ಕೇಳಮ್ಮ ಪ ಕೇಳಿ ಪುರಾಣದಿ ಪೇಳಿದ ಕೃಷ್ಣನ ಲೀಲೆಯ ಪಾಡುತ ``ಬಾಳಮ್ಮ'' ಅ.ಪ ನಿಷ್ಟೆಯಿಂದಲಿ ಬಲು ಶಿಷ್ಟಳಾಗುತ ದುಷ್ಟರಿಂದ ದೂ``ರಾಗಮ್ಮ'' 1 ಹರಿದಾಸರಪದ ಹರುಷದಿ ಹಾಡುತ ಗುರು ಹಿರಿಯರ ಮನ ``ಕೊಪ್ಪಮ್ಮ'' 2 ಕಾಲ ಕಳೆಯದೆ ಶೀಲಮತಿ ನೀ “ನಾಗಮ್ಮ'' 3 ವಿದ್ಯೆಯ ಕಲಿತು ಬದ್ಧಿವಂತ | ಳಾ | ಗಿದ್ದರೆ ಸುಖ ಶತ “ಸಿದ್ಧಮ್ಮ'' 4 ವಂದಿಸಿ ತುಲಸಿ ವೃಂದಾವನ ಪೂಜಿಸು ಮುಂದೆ ನಿನಗೆ ``ಆನಂದಮ್ಮ'' 5 ಹೀನರ ಬೆರೆಯದೆ ಮೌನವ್ರತದಲಿ | ಜ್ಞಾನಿ ಜನರ ನೀ ``ನರಸಮ್ಮ'' 6 ಮೂಢ ಜನರ ಒಡನಾಡದೆ ಭಕ್ತಿಲಿ ಮಾಡುವ ಸಜ್ಜನರ ``ಸಂಗಮ್ಮ'' 7 ಧರ್ಮದಿಂದ ಸತ್ಕರ್ಮ ಮಾಡುತ ನಿರ್ಮಲಗೊಳಿಸಿ ಸಂತ ``ರಂಗಮ್ಮ'' 8 ಪವನ ಪಿತನ ಕಥಾಶ್ರವಣವೆ ಪುಣ್ಯವು ಭವ ವಿದು ಕತ್ತಲು ``ಕಾಳಮ್ಮಾ'' 9 ಸದನಕೆ ಬಂದಿಹ ಬುಧರಾವರಿಸಲು ಮಂದಬಲು ನಿನಗದ ``ರಿಂದಮ್ಮ'' 10 ಎಂದೆಂದಿಗು ಪರನಿಂದೆಯ ಮಾಡದೆ ಮಂದಿರದಿರುವದೆ ``ಚಂದಮ್ಮ'' 11 ಸಾರಿದ ಜನರಘದೂರಗೈದು ಹರಿ ತೋರುವ ನುಜಗುರು ``ಈರಮ್ಮ'' 12 ಅತ್ತಿಯ ಮನಿಗೆ ಹೆತ್ತವರಿಗೆ ಉತ್ತಮ ಕೀರ್ತಿ ``ತಾರಮ್ಮ'' 13 ಗೋವಿಪ್ರಾಳಿ ಸೇವಿಸುತಿರುವದೆ ಕೋವಿದರಿಗೆ ಬಲು ``ಜೀವಮ್ಮ'' 14 ಭಾವದೊಳಗೆ ಪರದೇವನೆ ಪತಿಯೆಂದು ಪಡಿ ``ಭೋಗಮ್ಮ'' 15 ಭೇದಜ್ಞಾನ ಸಂಪಾದಿಸು ಕ್ಷಮಿಸುವ ಶ್ರೀಧರ ನಿನ್ನಾಪ ``ರಾಧಮ್ಮ'' 16 ಕೋಪದಿ ಪರರಿಗೆ ತಾಪವ ಬಡಿಸಲು ಲೇಪವಾಗುವದು ``ಪಾಪಮ್ಮ'' 17 ಇಂಗಡಲಾತ್ಮಜನಂಘ್ರಿ ಸರೋಜಕೆ ಸತಿ ``ತುಂಗಮ್ಮ'' 18 ದಾಸಜನರ ಸಹವಾಸದೊಳಿರುವದೆ ಕಾಶಿಗಿಂತ ವಿ``ಶೇಷಮ್ಮ'' 19 ಕಲಿಯುಗದಲಿ ಸಿರಿನಿಲಯನ ನೆನೆದರೆ ಸುಲಭ ಮುಕ್ತಿ ತಿಳಿ ``ಕಂದಮ್ಮ'' 20 ಪತಿಯು ಸದ್ಗತಿಗೆ ಗತಿ ಎಂದರಿತಹ ಮತಿಯುತ ಸತಿಯೆ ``ಯವನಮ್ಮ'' 21 ಮಧ್ವಸಿದ್ಧಾಂತದ ಪದ್ಧತಿ ತಪ್ಪದೆ ಇದ್ದರೆ ಹರಿಗತಿ ``ಮುದ್ದಮ್ಮ'' 22 ಸೋಗಿಗೆ ನೀ ಮರುಳಾಗಿ ನಡೆದರೆ ಯೋಗಿ ಜನರ ಮನ ``ಕಲ್ಲಮ್ಮ'' 23 ಶೀಲೆ ಗುಣದಿ ಪಾಂಚಾಲೆಯು ಎಲ್ಲ ಬಾಲೆಯರೊಳು ``ಮೇಲಮ್ಮ'' 24 ನೇಮದಿ ನಡೆದರೆ ಪ್ರೇಮದಿ ಸಲಹುವ ಶಾಮಸುಂದರನು ``ಸತ್ಯಮ್ಮ'' 25
--------------
ಶಾಮಸುಂದರ ವಿಠಲ
ಕೇಳಲೊಲ್ಲನೆ ಎನ್ನ ಮಾತನು ರಂಗ ಪ. ಕಾಳೀಮರ್ದನ ಕೃಷ್ಣಗೆ ಹೇಳೆ ಗೋಪ್ಯಮ್ಮ ಬುದ್ಧಿಅ. ಪ.ಬಿಟ್ಟ ಕಣ್ಣನು ಮುಚ್ಚಲೊಲ್ಲನೆ ದೊಡ್ಡ ಬೆಟ್ಟಕ್ಕೆ ಬೆನ್ನೊತ್ತಿ ನಿಂದನೆ ಬಲುಸಿಟ್ಟಲಿ ಕೋರೆ ಹಲ್ಲ ಕಿರಿದನೆ ಈಗಗಟ್ಟಿ ಉಕ್ಕಿನ ಕಂಬವೊಡೆದು ಬಂದನೆ ರಂಗ1 ಮೂರಡಿ ಭೂಮಿ ಬೇಡಿ ಬಂದನೆ ತಾಯ- ಶಿರವ ಕಡಿಯಲಿಕೆ ಕೊಡಲಿ ತಂದನೆನಾರಸೀರೆಯನುಟ್ಟುಕೊಂಡನೆ ಬಲುಚೋರತನÀದಲಿ ಹರವಿಹಾಲ ಕುಡಿದನೆÉ ರಂಗ 2 ಬತ್ತಲೆ ನಾರಿಯರ ಅಪ್ಪಿದ ಹೋಗಿಉತ್ತಮ ಅಶ್ವವ ಹತ್ತಿದಹತ್ತವತಾರವ ತೋರಿದ ದಿಟ್ಟಮೂರ್ತಿ ನಮ್ಮ ಚೆಲುವ ಶ್ರೀ ಹಯದವನ 3
--------------
ವಾದಿರಾಜ
ಕೇಳವ್ವ ತಂಗಿ ಕೇಳವ್ವ ಕೇಳಿ ತಿಳಿದು ನೀ ಬಾಳವ್ವ ಪ ನೀಲವರ್ಣನ ಕೃಪೆಯ ಪಡೆಯಲಿಕ್ಕೆ ನಾಳೆಂದರೆ ಮನೆಹಾಳವ್ವ ಅ.ಪ ಅಂಬುಜಾಕ್ಷನ ಪಾದಪಕಮಲವ್ವ ನೀ ನಂಬಿದ್ದಿ ಬಿಡಬೇಡ ಸಂಗವ್ವ ನಂಬಿದ ಭಕ್ತರ ಬೆಂಬಲಿಸಾತನು ಇಂಬುಗೊಟ್ಟು ಕಾಯ್ವ ಸಂಭ್ರಮ ಕೀರ್ತೆವ್ವ 1 ಒಂದೆ ಮನಸಿನ ಬಾಗವ್ವ ಗೋ ವಿಂದನ ವರಪಡಿ ಚೆಂದವ್ವ ಮಂದರಧರನ ಹೊಂದಿಕೊಳ್ಳಲಿಕ್ಕೆ ಹಿಂದು ಮುಂದು ನೋಡಬೇಡ ಮುಕ್ತ್ಯವ್ಯ 2 ಒಂದಿನ ಹೋಗ್ವುದು ಸತ್ಯವ್ವ ತಂಗಿ ಸಂದೇಹ್ಯ ಪಡಬೇಡ ಹುಚ್ಚವ್ವ ತಂದೆ ಶ್ರೀರಾಮ ಗತಿಯೆಂದು ನಂಬಲು ನಿನಗೆ ಬಂಧನವೆಲ್ಲ ಬೈಲವ್ವ 3
--------------
ರಾಮದಾಸರು
ಕೇಳಿಕೊ ಗುರುಬುದ್ಧಿ ಮನವೆ ಕೇಳಿಕೊ ಗುರುಬುದ್ಧಿ ಕೇಳಿ ನಡೆಯದಿದ್ದರೆ ನೀನು ಜನ್ಮಕ ಜಾರಿಬಿದ್ದಿ ಮನವೆ ಧ್ರುವ ವೇದಕ ನಿಲುಕದ ಹಾದಿಯದೋರುವ ಸದ್ಗರುವಿನ ಸುಬುದ್ಧಿ ಸಾಧಿಸಿ ನೋಡಲು ತನ್ನೊಳಗ ತಾ ಎದುರಿಡುವುದು ಸುಶುದ್ಧಿ ಭೆದಿಸದಲ್ಲದೆ ತಿಳಿಯದು ಎಂದಿಗೆ ಆದಿ ತತ್ವದ ನಿಜ ಶುದ್ಧಿ ಸುಬೋಧದಲಿ ಗೆದ್ದಿ 1 ತರಣೋಪಾಯಕೆ ಸಾಧನವೇ ಮುಖ್ಯ ಗುರುಬುದ್ಧಿಯ ವಿಶೇಷ ಪರಗತಿ ಸಾಧನ ಪಡೆದೇನಂದರೆ ಗುರು ಮಾತ ಉಪದೇಶ ದೋರುದು ತಾ ಹರುಷ ಭವ ಬಂಧಪಾಶ 2 ಗುರು ಘನಸೌಖ್ಯ ಸುರಮುನಿ ಜನರಿಗೆ ಬಲು ಅಗಮ್ಯದೋರುವದೆ ಆಠಕ್ಯ ತರಳ ಮಹಿಪತಿ ಮನವೆÀ ಕೇಳು ಗುರುರಾಯನ ಸುವಾಕ್ಯ ಪರ ಗೆಲಿಸುವದು ನಿಜಮುಖ್ಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೇಳಿಪೇಳಮ್ಮ ನಮ್ಮಮ್ಮ ಲಕುಮೀ ಪ ಕೇಳಿಪೇಳೆ ಹರಿಯಲಿ ಪೋಗಿ ಬಹಳ ಸೋಕಿನವ ಗೋಪಿಬಾಲೀಯರಿಗೆ ಮೆಚ್ಚಿ ಬಹು ಜಾಲವ ಮಾಡಿದ ಕೃಷ್ಣನ ಅ.ಪ. ಪ್ರಳಯ ಕಾಲದಲ್ಲಿ ಆಲದೆಲೆ ಮೇಲೆ ಮಲಗಿಪ್ಪನುಒಲುಮಿಗಳ ಒಲುಮಿಕಾಂತ ಲಲನೆ ನೀನು ಕಮಲಾದೇವಿ 1 ನಿತ್ಯಮುಕ್ತೆ ನಿತ್ಯತೃಪ್ತೆ ನಿತ್ಯಾವಿಯೋಗಿನಿ ಹರಿಗೆಭೃತ್ಯನಲ್ಲೆ ನಾನು ಸ್ವಲ್ಪ ಚಿತ್ತವಿಟ್ಟು ನೋಡೆ ತಾಯಿ 2 ನಿನ್ನ ಹೊರತು ಆತನನ್ನು ತೋರುವರ ಕಾಣೆನಮ್ಮಸನ್ನುತಾಂಗಿ ಸಾರಸಾಕ್ಷಿ ಎನ್ನೊಳು ಕರುಣವ ಮಾಡೇ 3 ಎಲ್ಲ ದಿವಿಜರಲ್ಲಿ ಪೋಗೆ ಬಲುಬಗೆ ಪೇಳಿಕೊಂಡೆಫುಲ್ಲನಾಭನಲ್ಲಿ ಒಂದು ಸೊಲ್ಲನಾಡೋ ಶಕ್ತಿಯಿಲ್ಲ 4 ಪಾದ ಬಾಲ್ಯದಿಂದ ಸೇರಿದ್ದಕ್ಕೆನೀರಜಾಕ್ಷನನ್ನು ತೋರೆ ಭಾರಿ ಫಲವಾಯಿತೆಂಬೆ 5 ನಿಮ್ಮ ಮಾತು ಮೀರ ಶೂರ ನಮ್ಮ ಮಾರಜನಕ ಕೃಷ್ಣಅಮರ ತರುವ ಕಿತ್ತಿ ನಿಮ್ಮ ಮನೆಯೊಳ ಹಚ್ಚಿದನಂತೆ 6 ಸುಂದರಿ ಸೌಭಾಗ್ಯವಂತೆ ಮಂದಿರದೋಳಿಪ್ಪನನ್ನುಇಂದಿರೇಶನನ್ನು ತೋರೆ ನಂದ ಬಾಲ ಮಹಿಳೆ ಅಂಬಾ 7
--------------
ಇಂದಿರೇಶರು
ಕೇಳಿರಿ ಕೌತುಕ ಪೇಳುವೆನೀಗ ಶೀಲ ಶ್ರೀ ಗುರುಗಳ ಕರುಣದಲಿ ಪ. ವ್ಯಾಳಶಯನ ರಂಗ ತಾಳಿ ಕರುಣಿಸಿದ ಮೇಲು ಮೇಲು ಭಕ್ತಿಯ ನೀಡುತಲಿ ಅ.ಪ. ಅರಿಯದ ದೇಶದಿ ಅರಿಯದ ಕಾಲದಿ ಅರಿಯದವಸ್ಥೆಯ ಅನುಭವವು ಸಿರಿಯರಸನ ವ್ಯಾಪಾರವಿದಲ್ಲದಡೆ ನರರಿಗೆ ಸಾಧ್ಯವೆ ನಾಡಿನೊಳು 1 ಸಂಭÀ್ರಮದಲಿ ಸಮಾರಂಭವು ಕಲೆತಿರೆ ಬೆಂಬಿಡದಲೆ ರಕ್ಷಿಸುತಿರಲು ಕುಂಭಿಣಿಯೊಳು ಸ್ಥಿರವಾದ ಪದವಿಗೆ ಅಂಬುಜನಾಭನ ಕರುಣವಿದು 2 ಅಗ್ನಿಗಳೆರಡು ಕಲೆತು ಶಾಂತವಾಗಿ ಭಗ್ನವಿಲ್ಲದ ಆನಂದ ತೋರೆ ವಿಘ್ನವಾಗದ ಕಾಲಗಳೊದಗುತ ಮಗ್ನಗೈಸಿತಾನಂದದಲಿ 3 ಚಲಿಸದ ವಸ್ತುಗಳ್ ಚಲಿಸಿತು ಮತ್ತೆ ಚಲನೆಯಿಲ್ಲದೆ ಸುಸ್ಥಿರವಾಯ್ತು ಬಲು ವಿಚಿತ್ರವು ಭೂತಲದೊಳಗಿದು ನಳಿನನಾಭನ ಸಮ್ಮತವು4 ಬಿಂಬನಾಗಿ ಹೃದಂಬರ ಮಧ್ಯದಿ ಸಂಭ್ರಮಗೊಳಿಸೆಲೊ ಶ್ರೀ ವರನೆ ನಿತ್ಯ ಇಂಬುಗೊಟ್ಟು ಕಾಯೊ ಬಿಂಬ ಶ್ರೀ ಗೋಪಾಲಕೃಷ್ಣವಿಠ್ಠಲ 5
--------------
ಅಂಬಾಬಾಯಿ
ಕೇಳು ಕಿವಿಗೊಟ್ಟು ನಿನ್ನ ನಿಜಗುಹ್ಯದ ಸುಮಾತ | ಹೇಳುತಿಹ್ಯಾ ನಂದಬೋಧ ತಿಳಿಯಾ ವಿಶ್ವನಾಥ ಧ್ರುವ ನೋಡಿ ನಿನ್ನ ಗೂಡಿನೊಳು ಮಾಡಿಕೊ ಸ್ವಹಿತ ಚಾಡುವಿಡಿದು ನಡೆದು ಹೋಗಿ ಕೂಡಿರೊ ಸುಪಥ ಹಿಡಿಯದೆ ಆಲೇಶದ ಮನೆಯ ನೀ ಪಡಕೊ ಘನ ಅಮೃತ ಬೇಡಿ ಬಯಸಿದರಾಗದು ವಸ್ತು ಹಿಡಕೊಡುವ ಗುರುನಾಥ 1 ಖೂನ ಕಂಡು ಗುರುಪಾದದಲಿ ತನುಮನದಲಿ ನೀಜಡಿಯೊ | ಮೌನಮುಗ್ದದಲಿ ನೀನೆಂದು ಅನುಭವದ ನೀಹಿಡಿಯೊ ನಾನು ನೀನೆಂಬುದು ತಾ ಬಿಟ್ಟರೆ ಸನ್ಮತ ಸುಖನಿಲುಕಡಿಯೊ ಜ್ಞಾನ ದೈವತೆಯಂಬು ಮಾರ್ಗದಲಿ ಅನುಸರಿಸಿ ನೀ ನಡಿಯೋ 2 ಒಂದೆ ಮನದಲಿ ಹೊಂದಿ ನಿಜವುಸಂದಿಸಿಕೊಸ್ವಾನಂದ ಬಂದ ಜನ್ಮವು ಸಾರ್ಥಕ ಮಾಡುದು ಇದು ನಿನಗೆ ಬಲುಚಂದ ಹಿಂದೆ ಮುಂದೆ ತಾ ತುಂಬ್ಯಾನೆ ಮಹಿಪತಿಸ್ವಾಮಿ ಸಚ್ಚಿದಾನಂದ ಹೊಂದಿದವರನುಮಾನವ ಬಿಡಿಸಿ ಛೇದಿಸುವ ಭವಬಂಧ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೇಳು ಜೀವನವೆ ನೀ ಮಧ್ವಮತವನುಸರಿಸಿ ಶ್ರೀಲೋಲನಂಘ್ರಿಯನು ನೆನೆದು ಸುಖಿಸೊ ಪ. ನರನಾಗಿ ಪುಟ್ಟುವುದು ದುರ್ಲಭವೆಲವೊ ಭೂ- ಸುರಕುಲದಿ ಜನಿಸುವುದು ಬಹು ದುರ್ಲಭ ಪರಮ ಸುಕೃತವದೇನು ಫಲಿಸಿತೊ ನಿನಗೀಗ ದೊರಕಿದೀ ಜನುಮವನು ಸಫಲ ಮಾಡೊ 1 ಅರಘಳಿಗೆ ಮಾತ್ರವೆ ಪೊತ್ತು ಪೋಗಲು ಆಯು ಕೊರತೆಂದು ತಿಳಿ ನಿನ್ನ ಕ್ಲುಪ್ತದೊಳಗೆ ಮರಳುತನದಲಿ ಬರಿದೆ ದಿನಗಳಿಯಬ್ಯಾಡೆಲವೊ ಸ್ಥಿರವಲ್ಲ ಈ ದೇಹ ಸ್ವಪ್ನಸಮವೊ 2 ದುರುಳರೊಡನಾಡಿ ದುರ್ವಿಷಯ ಲಂಪಟನಾಗಿ ನರಕಯಾತನೆಗೆ ಗುರಿಯಾಗದಿರೆಲೊ ಎರಡುದಿನದೋಡ್ಯಾಟ ಇರಬಂದುದಲ್ಲವಿದು ಪರಗತಿಗೆ ಸಾಧನ ಮಾಡಿಕೊಳ್ಳೊ 3 ಹೋಗುತಿವೆ ಹೋಗುತಿವೆ ದಿವಸ ವ್ಯರ್ಥವಾಗಿ ಹೀಗೆ ಮೈಮರೆದಿಹುದು ನಿನಗೊಳ್ಳಿತೆ ಬ್ಯಾಗ ಹರಿಯನು ಭಜಿಸು ಬಾ ಈ ಮಾತಲ್ಲ ನೀ ಹೋಗಿನೋಡಲು ಯಮನ ಬಾಧೆ ಬಿರುಸೊ4 ಏನ ಹೇಳಲಿ ನಿನ್ನ ಮಂದಮತಿಯನು ಹಿಂದೆ ಶ್ವಾನಸೂಕರ ಮೊದಲಾದ ನೀಚ- ಯೋನಿಗಳೊಳಗೆ ಬಂದು ಅಂದದನು ಕ್ರಮಿಸಿದವನು ಆ ನೋವನಾಗಲೆ ಮರೆದಿಯಲ್ಲೊ 5 ಮುನ್ನ ದುಷ್ಕರ್ಮವ ಮಾಡಿದ ಪ್ರಾಣಿಗಳು ಉನ್ನತ ನೀಚ ದೇಹಗಳ ಧರಿಸಿ ಬನ್ನಬಡುತಿಹುದು ನೀ ನೋಡಿ ನೋಡಿ ಮತ್ತೆ ದುರ್ನಡತೆಯನು ಮಾಡಲುದ್ಯೋಗಿಪೆ 6 ಎಂಬತ್ತು ನಾಲ್ಕು ಲಕ್ಷ ಯೋನಿಗಳೊಳಗೆ ಕುಂಭಿಣಿಯೊಳಗೆ ತಿರುತಿರುಗಿ ಪಾಪ ಉಂಬುದನುಚಿತವೆಂದು ಮನ ಹೇಸಿ ವಾಕರಿಸಿ ನಂಬುನಾರಾಯಣನ ಇನ್ನಾದರೂ 7 ಜನನಿಯ ಗರ್ಭವಾಸ ದುಃಖ ಅತಿಶಯವೊ ಜನನ ಮರಣದ ದುಃಖ ಬಲು ಅಧಿಕವೊ ಘನ ನರಕದಾ ದುಃಖ ಪೇಳಲೊಶವಲ್ಲ ನಿನ- ಗಿನಿತಾದರೂ ನಾಚಿಕಿಲ್ಲವೇನೊ 8 ಸಾರಿ ಪೇಳುವೆನೀಗ ಪುಟ್ಟಿ ಬೆಳೆದಳಿವ ಸಂ- ಸಾರ ಸುಖವಲ್ಲ ಮಹ ದುಃಖಪುಂಜ ಘೋರ ಸಂತಾಪಕ್ಕೆ ಕಡೆಮೊದಲಿಲ್ಲವೊ ವಾರಿಜಾಂಬಕನ ಮರೆಯೊಕ್ಕು ಬದುಕೊ 9 ಹಿಂದೆ ಬಹುಜನುಮದಲಿ ಬಂದು ಬಳಲಿದ ಬವಣೆ ಒಂದೊಂದು ನೆನೆಸಿಕೊಳಲತಿ ಕಷ್ಟವೊ ಮುಂದಾದರು ಸರಿ ಎಚ್ಚೆತ್ತು ಬಿಡದೆ ಗೋ- ವಿಂದನ ಪದಾಂಬುಜವ ಧ್ಯಾನ ಮಾಡೊ 10 ಮಾರಿ ಇಲ್ಲಿದೆಯೆಂದು ಕೇಳುತಲಿ ಪೋಗಿ ನೀ ಭೂರಿ ಭಯಕೊಳಗಹದು ನೀತಿಯಲ್ಲ ದೂರ ತಿಳಿದು ನೋಡಿ ದುರ್ಮಾರ್ಗವನು ಜರಿದು ಸೇರಿ ಸಜ್ಜನರ ಸುಪಥವ ಪಡೆಯೊ 11 ನಿನ್ನಯ ಸ್ವರೂಪಕ್ಕೆ ಹೀಗಾಗುವುದೆಂದು ಪುಣ್ಯವನೆ ಗಳಿಸಿಕೊ ಬ್ಯಾಗ ನೀನು ಇನ್ನು ಈ ಧರೆಯಲ್ಲಿ ಬಿಟ್ಟು ಹೋಗುವ ದೇಹ- ವನ್ನು ಪೋಷಿಸಿಕೊಂಡು ಹಿಗ್ಗಬೇಡ 12 ವನಿತೆಸುತರನು ಪೊರೆಯಬೇಕೆಂಬ ಬುದ್ಧಿಯಲಿ ಧನದಾಸೆಯಿಂದಲಗಣಿತ ಪಾಪವ ಕ್ಷಣದೊಳಗೆ ಸಂಪಾದಿಸಿಕೊಂಬೆ ಎಲೊ ಮೂಢ ನಿನಗಿವರು ಕೊನೆಗೆ ಸಂಗಡ ಬರುವರೆ 13 ಕೆಡಬ್ಯಾಡ ವ್ಯರ್ಥಮೋಹಕೆ ಸಿಲುಕಿ ಜವನವರು ಪಿಡಿದೊಯ್ದು ಕಡಿದಿರಿದು ಕೊಲ್ಲುವಾಗ ಬಿಡಿಸುವವರಾರಿಲ್ಲ ಈಗಳೆ ಮುಂದರಿತು ಕಡಲಶಯನನ ಪೊಂದಿ ಮುಕುತಿ ಪಡೆಯೊ 14 ಈಗಲೇನೊ ಇನ್ನು ಕ್ಷಣಕೇನು ಬಪ್ಪುದೊ ನೀ ಗರುತರಿಯದಲೆ ಹಿತ ರಾಗದಲಿ ಸರ್ವವನು ಎನ್ನದೆಂದಾಡದಿರು ನಾಗಾರಿಗಮನನಾಧೀನವೆನ್ನೊ 15 ನೀ ಮಗುಳೆ ಮಹಿಯೊಳಗೆ ಕಂಡುಕಂಡುದ ಬಯಸಿ ಭ್ರಾಮಕರ ನುಡಿಗೇಳಿ ಭ್ರಾಂತಿಗೊಳದೆ ಕಾಮಾದಿಗಳ ತ್ಯಜಿಸಿ ಸತ್ಕರ್ಮವನು ಮಾಡಿ ಶ್ರೀಮನೋ ಹರನಿಗರ್ಪಣೆಯ ಮಾಡೊ16 ಏನುಧಾವತಿಗೊಳಲೇನೇನು ಫಲವಿಲ್ಲ ಮಾನವಜನುಮ ಜೊಳ್ಳು ಮಾಡಬ್ಯಾಡ ಆನಂದತೀರ್ಥರ ಪಾದಕಮಲವ ಪೊಂದಿ ಅಚ- ಲಾನಂದವಿಠಲನ್ನ ನೀನೊಲಿಸಿಕೊ 17
--------------
ಅಚಲಾನಂದದಾಸ
ಕೇಳು ಹಿತವಾ ಬಾಳು ಮನವೇ ಸಾಧು ಸಂಗ ಮಾಡು | ಹೇಳತೀರದ ಸ್ವಾನಂದದ ಸುಖಭಾವಿಕಗ ಬಲು ಪಾಡು ಪ ಹೀನ ಕೀಟಕ ಸಂಗದಿಂದ ಭೃಂಗಿಯಾಗಲಿಲ್ಲಾ | ತಾನು ಕಬ್ಬಿಣ ಪರಸವ ಮುಟ್ಟಿ ಚಿನ್ನವಾದುದಲ್ಲಾ 1 ಹಳ್ಳ ಕೊಳ್ಳ ಬಂದು ಕೂಡಿ ಗಂಗೆಯಾಗುವಂತೆ | ಎಲ್ಲ ವೃಕ್ಷವು ಸಂಗದಿಂ ಚಂದನಾಗುದು ಗಾದೆಯ ಮಾತೆ 2 ಕೋಟಿಗೆಂದೇ ಮಾತು ಕೇಳು ನಾಡ ಸಾಧನ್ಯಾಕ | ಪುನರಪಿ ನೀ ಬರಬೇಕ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳೊ ಗೋವಿಂದ ಹೇಳಿದರಂತು ಬಲು ಚಂದ ಇಂದಿರೇಶನ ಗುಣ ಚಂದಿಲ್ಲಚಾರವಿಲ್ಲ ಅಂದರೆಭಾಳ ಬಲುಕೋಪ ಕೇಳೊ ಗೋವಿಂದ ಪ ಭೇರಿ ಬಾರಿಸಿ ಕೇಳುತ ಭೂರಿಜನರ ಕೂಡಿಭೋರೆಂಬೊ ಕಾಳಿ ಹಿಡಿಸುತ ಭೋರೆಂಬೊ ಕಾಳಿ ಹಿಡಿಸುತ ಖಳರ ಸಂಹಾರ ಮಾಡಿದ ಮಧುರೆಯಲಿ ಕೇಳೊ 1 ಹೊರಗಿಂದ ಬಂದಳು ತಿರುಗಲ ತಿಪ್ಪಿಯು ಹೆರವರಿಗುಪಕಾರಿ ಮನೆಗೆ ಮಾರಿ ಹೆರವರಿಗುಪಕಾರಿ ಮನೆಗೆ ಮಾರಿ ಮಕ್ಕಳ ಕೊರಳ ಹಿಚುಕಿ ಕೊಂದಳು2 ತಲೆಹೊೈಕ ಹಿರಿಯವ ಚಿಕ್ಕವ ಚಂಚಲ ಬಹು ಚಾಡಿಕೋರ ಇನ್ನೊಬ್ಬಬಹು ಚಾಡಿಕೋರ ಇನ್ನೊಬ್ಬ ಎನುತಲಿಫಲ್ಗುಣ ನಗುತ ನುಡಿದನು 3 ಸುರತರು ತರುವಾಗ ಇಂದ್ರ ಬಂದಿದ್ದ ಜಗಳಕ್ಕೆÀಇಂದ್ರ ಬಂದಿದ್ದ ಜಗಳಕ್ಕೆ ಆಗನಮ್ಮಕ್ಕನಿಂದ ಮಾನ ಉಳಿದೀತೊ4 ಒಗೆತನ 5 ಬಲು ಪತಿವ್ರತೆಯೆಂದು ಜನರೆಲ್ಲ ಹೊಗಳೋರು ತಲೆಯಲ್ಲಿ ಹೊತ್ತ ಮಹಾದೇವತಲೆಯಲ್ಲಿ ಹೊತ್ತ ಮಹಾದೇವ ಇಂಥವಳ ಬಲುಗುಣವಂತೆ ಎನಬಹುದೆ 6 ಒಗೆತನ ಕೇಳೊ ಗೋವಿಂದ7
--------------
ಗಲಗಲಿಅವ್ವನವರು
ಕೇಳೋನಂದ ಇದು ಏನು ಚೆಂದ ಹಾಲಿನ್ಹರವಿಯ ಒಡೆದೋಡಿ ಬಂದು ಬಾಲರನು ಕೂಡ್ಯಾಡಿ ಗೋವಿಂದ ಬವಣೆಬಡಿಸುವ ಬಲುಬಗೆಯಿಂದ ಪ ಕಣ್ಣ ತೆರೆದು ಉದಕದೊಳಾಡುವನು ಸಣ್ಣ ಮೋರೆಯ ಮಾಡಿ ಬಗ್ಗುವನು ಮಣ್ಣಕೆದರುತ ಕ್ರೋಡಾಗಿ ತಾನು ಚಿನ್ನಸುರ ಎಲ್ಲೆ ಕರುಳ್ಹಾರ್ಹಾಕುವನು 1 ತಿರುಕನಂದದಿ ಬೇಡಿಕೊಂಬುವನೊ ಗುರುತದಾರದರಿಯ ತಾಯ್ಹಂತಕನು ದೊರೆತನವ ಬಿಟ್ಟಡವಿಲಿರುವವನು ಶರತಮಾಡಿ ಮಾತುಳನ ಕೊಲ್ಲುವನು 2 ಬËದ್ಧರೂಪದಿ ಲಜ್ಜೆಗೆಡಿಸುವನು ಎದ್ದು ತುರುಗನೇರ್ಯೋಡಿ ಪೋಗುವನು ಕದ್ದು ಬೆಣ್ಣೆಯ ಮೆಲ್ಲುವ ತಾನು ಮುದ್ದು ಭೀಮೇಶಕೃಷ್ಣ ಎಲ್ಲಿಹನು 3
--------------
ಹರಪನಹಳ್ಳಿಭೀಮವ್ವ
ಕೈಕೊಂಡ - ನೃಹರಿ ಕೈಕೊಂಡ ಪ ಕೈಕೊಂಡ ಪೂಜೆಯ ನೃಹರಿ | ತ್ರೈಲೋಕ್ಯಕನಾಥನು ಅಸುರಾರಿ | ಆಹತೋಕನ ಸಲಹಲು | ಏಕಮೇವನ ಲೀಲೆಕೈಕೊಂಡ ಅವತಾರ | ಆ ಕಂಬೋದ್ಭವನಾಗಿಅ.ಪ. ಭಕ್ತಿ ಭಾವದಿ ಪರಾಶರ | ಬಹುತಪ್ತ ಭಾವದಿ ಕೃಷ್ಣೇ ತೀರ | ದಲ್ಲಿಸಕ್ತನಿರೆ ಧ್ಯಾನ ಗೋಚರ | ನಾಗಿವ್ಯಕ್ತನು ಷೋಡಶಕರ | ಆಹದೃಪ್ತ ದಾನವ ಧ್ವಂಸಿ | ದೀಪ್ತಾನಂತ ತೇಜಮೂರ್ತಿ ಕಾಣಿಸಿದನ | ವ್ಯಕ್ತನಾಗಿದ್ದಂಥ 1 ಕಟಿಸೂತ್ರ ಸ್ಮರ ಕೋಟಿ ಲಾವಣ್ಯಕರ ಪಾಶ ಅಸಿಕುಂತ | ವರದಾ ಭಯವು ಹಸ್ತ 2 ಕಂಬು ಚಕ್ರ ಚರ್ಮಕರ | ಮತ್ತೆಅಂಬುಜ ಶಾಂಙÁ್ರ್ಞದಿಧರ | ಗದಸಂಭೃತ ತುಳಸಿಯ ಹಾರ | ಮತ್ತೆಇಂಬಿನ್ವ್ಯೊ ಜಯಂತಿ ಹಾರ | ಆಹಅಂಬುಜದಳ ನೇತ್ರ | ಇಂಬಾಗಿ ಕರಪಾತ್ರತುಂಬ ಪೀಯುಷಧಿ | ಪೊಂಬಸಿರ ವಂದ್ಯನು 3 ಶ್ರೀವತ್ಸ ಲಾಂಛನ ಭೂಷ | ತನ್ನಭ್ರೂವಿಲಾಸದಿ ಬ್ರಹ್ಮ ಈಶ | ರಿಗೆತಾವೊಲಿದೀವ ಆವಾಸ | ಯೆನುತವ ವೇದಂಗಳು ಅನಿಶ | ಆಹಮಾವಿನೋದಿಯ ಗುಣ | ಸಾವಕಾಶಿಲ್ಲದೆಸಾರ್ವದ ಪೊಗಳುತ್ತ | ಭಾವದೊಳ್ಹಿಗ್ಗುವವು 4 ಪೊತ್ತು ರೂಪವ ಬಲಪಾದ | ಚಾಚುತ್ತ ರಕ್ಕಸನೊಡಲಗಾಧ | ಇಟ್ಟುವತ್ತುತ ತೊಡೆಯಲ್ವಿನೋದ | ದ್ವಯಹಸ್ತ ನಖದಿ ಉದರ ಬಗೆದ | ಆಹಕಿತ್ತುತ ಕರುಳನ್ನ | ಕತ್ತಿನೊಳ್ಹಾಕುತಭಕ್ತನ ಸಂಬಂಧ | ಎತ್ತಿ ತೋರ್ದ ಜಗಕೆ 4 ಪಂಚ ಮೋಕ್ಷಪ್ರದ ಹರಿ | ಆಯ್ತುಪಂಚಾಮೃತಭಿಷೇಕ ಅವಗೆ | ಮತ್ತೆಪಂಚಕಲಶಾರ್ಚನವು ಆವಗೆ | ಆಯ್ತುಪಂಚ ಕುಂಭಾಭಿಷೇಕವಗೆ | ಆಹಸಂಚಿಂತಿಸುತ ಹೃ | ತ್ಪಂಕಜದೊಳು ನೋಡೆಸಂಚಿಂತಾಗಮ ನಾಶ | ಕೊಂಚವು ಪ್ರಾರಬ್ಧ 6 ಶಾಲಿಗ್ರಾಮದ ಶಿಲ ಏಕ | ಪೊತ್ತುಪೋದಕ ಬಾಹು ಅಲೀಕ | ಶತಶಾಲೀವಾಹನವೆಂಬ ಶಕ | ದೊಳುಜ್ವಾಲಾ ನರಹರಿ ನಾಮಕ | ಆಹಯೇಳು ಐದೊರ್ಷದ | ಭಾಳ ತಪಕೆ ಮೆಚ್ಚಿಶೀಲ ದ್ವಿಜ ದಂಪತಿ | ಗೊಲಿದು ಪೇಳಿದ ಹೀಗೆ 7 ಭೀಮಕ ರಾಜಗೆ ಪೇಳು | ತೃಣಜಾಲವ ಹಾಕೆ ನೀರೊಳು | ಅಲ್ಲಿಜ್ವಾಲೆ ಉದ್ಭವಿಸಲು ಬಲು | ನೀರಮೇಲಕ್ಕೆ ಒಳಗಿಂದ ಬರಲು | ಆಹತೋಳೆರಡಲಿ ರಾಜ | ಮೇಲೆತ್ತೆ ಬರುವನುತಾಳ ಮೇಳ್ವೈಭವ | ದೊಳಗೆ ಸ್ಥಾಪಿಸಲೆಂದು 8 ಅಂಗಹೀನರೆ ಕೇಳಿ ಆವ | ನಿಮ್ಮಭಂಗಿಪ ಮೂಕಾಂಧ ಭಾವ | ನೀಗಿಶೃಂಗಾರ ರೂಪ ಸ್ವಭಾವ | ನರಸಿಂಗ ಕೊಡುವೆನು ಸೇವ | ಆಹ ಹಿಂಗದೆ ಕೊಡುವೆನು | ಅಂಗಜ ಪಿತ ನರಸಿಂಗಪುರವೆಂದು | ಸಂಗೀತವಾಗಲಿ 9 ವತ್ಸರ ಸೌಮ್ಯವು ಪುಷ್ಯ | ದಿನದರ್ಶ ವ್ಯಾಸತೀರ್ಥ ಶಿಷ್ಯ | ಆದರ್ಶ ದಾಸರ ದಿನ ಭವ್ಯ | ಭಕ್ತವತ್ಸಲ ಸ್ವೀಕಾರ ಆಲ್ಪ್ಯ | ಆಹಉತ್ಸವ ಕೊಳ್ಳುತ | ಉತ್ಸಾಹವೆನಗಿತ್ತುಮತ್ಸ್ಯಾದಿ ದಶರೂಪಿ | ಕೃತ್ಸ್ನ ಕಾರುಣ್ಯನು 10 ಪರಾಶರಗೊಲಿದ ಸುಶೀಲ | ಖಗವರನು ಭೂದೇವಿಯು ಬಲ | ಎಡವರಲಕ್ಷ್ಮೀ ಪ್ರಹ್ಲಾದ ಬಾಲ | ಸುರವರರಿಂದ ಸ್ತುತ್ಯ ವಿಶಾಲ | ಆಹಗುರು ಗೋವಿಂದ ವಿಠ್ಠಲ | ಗುರು ಬಿಂಬ ನರಸಿಂಗಶರಣರ ಅಪಮೃತ್ಯು | ಹರಿಸಿ ಸಂತತ ಕಾಯ್ವ11
--------------
ಗುರುಗೋವಿಂದವಿಠಲರು