ಒಟ್ಟು 765 ಕಡೆಗಳಲ್ಲಿ , 86 ದಾಸರು , 677 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪವಮಾನ ಪಾವನ ಚರಿತ ಪದ್ಮ ಭವನ ಪದಾರ್ಹನೆ ನಿರುತ ಅಹ ಪ ಶ್ರವಣಾದಿ ಭಕುತಿ ಜ್ಞಾನವಿತ್ತು ಸಲಹೊ ಮೂ ರವತಾರಾತ್ಮಕ ತತ್ವ ದಿವಿಜನಿಯಾಮಕ ಅ.ಪ. ಪ್ರಾಣೋಪಾನ ವ್ಯಾನೋದಾನ ಹೇ ಸ ಮಾನ ರೂಪಕನೆ ವಿಜ್ಞಾನ ತತ್ವ ಗೀರ್ವಾಣ ಅಹ ಸೇನಾಧಿಪತಿ ನಿನ್ನ ಜ್ಞಾನಸಾರದಲಿಪ್ಪ ಮಾನವರನು ಕಾಯೋ ಮೌನಿ ಧ್ಯಾನಗಮ್ಯ 1 ನಾಗಕೂರ್ಮ ದೇವದತ್ತ ಕೃಕಳ ಯೋಗಿವರಿಯ ಮುಕ್ತಾಮುಕ್ತ ಕ್ಲುಪ್ತ ಭೋಗಗಳೀವ ಸುಶಕ್ತಾ ತಲೆ ಬಾಗಿ ಬೇಡುವೆ ಸರ್ವೋದ್ರ್ರಿಕ್ತ ಅಹ ಜಾಗುಮಾಡದೆ ನಿಜ ಭಾಗವತರೊಳಿಡೊ ಮೈಗಣ್ಣಪದನಾಳ್ದ 2 ಮೂರುಕೋಟಿ ರೂಪಧರನೆ ಲೋಕ ಧಾರಕ ಲಾವಣ್ಯಕರನೆ ಸರ್ವ ಪ್ರೇರಕ ಭಾರತಿವರನೆ ತ್ರಿಪು ರಾರಿಗೆ ವಜ್ರಪಂಜರನೆ ಆಹ ನೀರಜ ಜಾಂಡದಿ ಮೂರೇಳು ಸಾವಿರ ದಾರು ನೂರು ಜಪ ಬೇರೆ ಬೇರೆ ಮಾಳ್ಪ 3 ಆಖಣಾಶ್ಮ ಸಮಚರಣ ಪದ್ಮ ಲೇಖರ ಮಸ್ತಕಾಭರಣ ಕಲ್ಪ ಶಾಖೆಯಂತೆ ಅತಿಕರುಣಾದಿಂದ ಈ ಖಂಡದೊಳು ಮಿಥ್ಯಾವರಣ ಆಹಾ ನೀ ಖಂಡಿಸಿದಿ ದಂಡ ಮೇಖಲ ಭೂಷಣ ಆಖುವಾಹನಪಿತ ಆಖಂಡಲರ್ಚಿತ 4 ಶ್ರೀವಲ್ಲಭಗೆ ಪ್ರತಿಬಿಂಬನಾಗಿ ಜೀವವೇದ ಕಾಲಸ್ತಂಭಗತ ಆವಾಗ ಹರಿರೂಪ ಕಾಂಬ ಶಕ್ತ ನೀ ಒಬ್ಬನಹುದೋ ನಾನೆಂಬೆ ಆಹಾ ವಿಭವ ಜಗ ನಿತ್ಯ 5 ದಕ್ಷಿಣಾಕ್ಷಿಗತ ವತ್ಸಾ ರೂಪಿ ದಕ್ಷನಹುದೋ ಪರಮೋಚ್ಚಾ ಚಾರು ತ್ರ್ಯಕ್ಷಾದಿ ಸುರರೊಳಧ್ಯಕ್ಷಾ ಸರ್ವಾ ಪೇಕ್ಷರಹಿತನೆ ಸ್ವೇಚ್ಛಾ ಆಹಾ ಮೋಕ್ಷಾದಿ ದ್ವಾತ್ರಿಂಶ ಲಕ್ಷಣ ಪುರುಷ ನಿ ರೀಕ್ಷಿಸಿ ಕರುಣದಿ ರಕ್ಷಿಸೋ ಎನ್ನನು 6 ಮೂಲೇಶನಂಘ್ರಿ ಸರೋಜ ಭೃಂಗ ಏಳೇಳು ಲೋಕಾಧಿರಾಜಾ ಇಪ್ಪ ತ್ತೇಳು ರೂಪನೆ ರವಿತೇಜಾ ಲೋಕ ಪಾಲಕರಾಳ್ವ ಮಹೋಜಾ ಆಹಾ ಕಾಳಿರಮಣ ನಿನ್ನ ಕಾಲಿಗೆರಗುವೆ ಕೃ ಪಾಳು ಭಕ್ತಿ ಜ್ಞಾನವಾಲಯ ಕರುಣಿಸು 7 ಅಧಿಭೂತ ಅಧ್ಯಾತ್ಮಗತನೇ ವಿಮಲ ಅಧಿದೈವರೊಳು ಪ್ರವಿತತನೆ ಕಲಿ ವದನದಿ ನಿಲಿಸೋ ಮಾರುತನೆ ಆಹಾ ಬದರಿಕಾಶ್ರಮದೊಳು ಹದಿನಾರು ಸಾವಿರ ಸನ್ನುತ 8 ಮಾತರಿಶ್ವ ಮಹಾಮಹಿಮ ಸರ್ವ ಚೇತನ ಹೃದ್ಗತ ಹನುಮ ಭೀಮ ಭೂತಳದೊಳು ಮಧ್ವ ನಾಮಾದಿಂದ ಜಾತನಾಗಿ ಜಿತಕಾಮಾ ಆಹಾ ಆ ತಿಪ್ಪಣ್ಣಾದಿ ವಿಖ್ಯಾತ ಮಾಯ್ಗಿಳ ಗೆದ್ದ ಸೀತಾರಮಣ ಜಗನ್ನಾಥ ವಿಠ್ಠಲ ದೂತ 9
--------------
ಜಗನ್ನಾಥದಾಸರು
ಪವಿತ್ರೋತ್ಸವ ಗೀತೆ ಪವಿತ್ರ ಉತ್ಸವವನ್ನು ನೋಡುವ ಬನ್ನಿ ಭಕ್ತರೆಲ್ಲಾ ಪ ವರಶುಕ್ಲಪಕ್ಷದ ಏಕಾದಶಿಯಲಿ ಅನೇಕಾ ಭರಣವ ಬಿಟ್ಟು ರಂಗ ವೈದೀಕನಂತೆ ವೈಜಯಂತಿ ಜನಿವಾರ ಕೌಸ್ತುಭಮಣಿಯು ಕೊರಳೊಳು ಹೊಳೆಯೆ ಓಲ್ಯಾಡುತಲೆ ಅರಳಿದಪುಷ್ಪದ ಮೇಲೆ ಯಾಗಶಾಲೆಗೆ ಬಂದರಂಗನ 1 ವೇದಘೋಷಗಳನ್ನು ವಿಪ್ರರು ಮೋದದಿಂ ಮಾಡುತಿರಲು ವೇದಮೂರುತಿ ರಂಗನಾಥಗೆ ಆ ರಾಧನೆ ಮಾಡಿ ಮುನ್ನೂರುಅರವತ್ತು ಪೂಜೆಯನು ಮಾಡಿ ಮುದ್ದುರಂಗನಿಗೆ ಮಜ್ಜನವ ಮಾಡಿ ನಿಂದು ಹರುಷದಿ ಯಾಗಪೂರ್ತಿಯ ಮಾಡಿದ ರಂಗನ 2 ತಂದ ತಂಡುಲವರವಿಯೆ ಮಧ್ಯದಿ ಭಾಂಡಗಳ ತಂದಿರಿಸಿ ತಂಬಿ ಪವಿತ್ರವನು ಕಲ್ಪೋಕ್ತದಿಂದ ಪ್ರತಿಷ್ಠೆ ಮಾಡಿ ಒಂದು ಪವಿತ್ರವನು ಪ್ರದಕ್ಷಿಣೆಯಿಂದ ತಂದು ಧರಿಸಿ ಚಂದದಿಂ ವೈಯ್ಯಾರ ನಡೆ ಯಿಂದ ಮಂದಿರಕೆ ನಡೆತಂದ ರಂಗನ 3 ದ್ವಾದಶಿ ದಿವಸದಲಿ ಶ್ರೀರಂಗನ ಪೊಗಳೆ ವೇದಪಾಠಕರು ಅನಾದಿಮೂರುತಿ ರಂಗನಾಥಗೆ ಆ ರಾಧನೆ ಮಾಡಿ ಮುನ್ನೂರು ಅರವತ್ತು ಮಂಗಳಾರತಿ ಮು ಕ್ತಿದಾಯಕಗೆತ್ತಿ ಪೂಜೆಗೊಂಡು ಪವಿತ್ರವನು ಧರಿಸಿ ವಿ ನೋದ ಸೇವೆಯ ತೋರಿದ ರಂಗನ 4 ಸಂಧ್ಯಾರಾಗದಿ ಇಂದಿರಾಪತಿ ಬಂದು ಮಂಟಪದಲಿ ಚಂದದಿಂದಲೆ ಪೂಜೆ ನೈವೇದ್ಯವ ಆ ನಂದದಿಂದ ಗ್ರಹಿಸಿ ದಿಂಧಿಮಿತೆಂಬ ವಾದ್ಯದಿ ಗೋ ವಿಂದ ತಾನೆ ಪೊರಟು ಚಂದದಿಂದ ಶಾರ್ದೂಲನಡೆ ಯಿಂದ ಮಂದಹಾಸದಿ ಬಂದ ರಂಗನ 5 ಸಪ್ತದಿವಸದಿ ಪವಿತ್ರದಾಭರಣವಿಟ್ಟು ಭಕ್ತವತ್ಸಲ ಕರ್ಪೂರದ ಚೂರ್ಣಾಭಿಷೇಕವ ಅರ್ಥಿಯಿಂದ ಗ್ರಹಿಸಿ ಪತ್ನಿಯರು ಸಹಜವಾಗಿ ಭತ್ತದಕೊಟ್ಟಿಗೆ ಎದುರೆ ಭತ್ತವಳಿಸಿಯೆ ನಿಂತ ಭಕ್ತವತ್ಸಲ ಮಿತ್ರರಎದುರಲಿ ನಿಂದ ರಂಗನ 6 ಒಂಭತ್ತು ದಿನದಲಿ ಅಂಬುಜನಾಭ ಆನಂದ ದಾಭರಣವಿಟ್ಟು ಕುಂದಣದ ಕೋಳಿಕೆಯನೇರಿ [ತುಂಬು ಚೆಲ್ವನಾ] ಚಂದ್ರಪುಷ್ಕರಿಣಿಯಲಿ ಶುಭ್ರತೀರ್ಥವ ಆನಂದದಿಂದಲಿತ್ತು ಬಂದು ಅವಭೃತ ಮಾಡಿಯೆನಿಂದ ಶ್ರೀನಿವಾಸರಂಗನ 7 ಉತ್ಸವದ ಮರುದಿನದಿ ಶ್ರೀರಂಗನು ತನ್ನ ಏಕಾಂತ ಭಕ್ತರಿಗೆ ಇತ್ತು ಪವಿತ್ರದಾಭರಣ ತೀರ್ಥಪ್ರಸಾದವನ್ನು ಮುಕ್ತಿದಾಯಕ ಮುನಿಗಳ ಮುಂದೆ ಚಂದ್ರನಂತೆ ಬ ರುತ್ತಿರಲು ಸುತ್ತ ತಾರಕೆಯಂತೆ ವೈಷ್ಣವರು ಒತ್ತಿ ಬರುವ ಅಂದಚಂದದ 8
--------------
ಯದುಗಿರಿಯಮ್ಮ
ಪಾದ | ನಿತ್ಯದಿ ಭಜಿಸುವ ಭೃತ್ಯನೆ ಬಲು ಧನ್ಯನೋ ಪ ಭೃತ್ಯ ಜನಕೊತ್ತೊತ್ತಿ ಪೇಳುವ ಅ.ಪ. ಮುನಿಕುಲ ಸನ್ಮಾನ್ಯ ಸತ್ಯಜ್ಞಾನರ ಕರಜಮಾನ ಮೇಯ ಜ್ಞಾನ ನಿಪುಣಾಹೀನ ಮಾಯ್ಗಳ ಗೋಣ ಮುರಿಸು | ಸ್ವಾನುಭಾವದಿ ಬ್ರಹ್ಮ ಸತ್ಯಜ್ಞಾನ ಆನಂದನೆನುತಲಿ | ಆನುಪೂರ್ವ ವೇದಾರ್ಥ ಪೇಳ್ದ 1 ಈ ಮಹಿಯೊಳು ಭರತ | ಭೂಮಿಯೊಳಖಿಳ ಸುಸೀಮೆಯ ಚರಿಸುತಲೀ ||ನೇಮದಿಂದಲಿ ವಾದ ಭಿಕ್ಷೆಯ | ಪ್ರೇಮದಿಂದಲಿ ಬಯಸಿ ಬರುತಗ್ರಾಮ ಗ್ರಾಮದ ಭ್ರಾಮಕ ಜನ | ಸ್ತೋಮವ ನಿಸ್ತೇಜ ಗೈಸಿದ 2 ಪರಮ ಹಂಸೋತ್ತಮ | ಪರವಾದಿ ಗಜಸಿಂಹಗರುವ ರಹಿತ ಸಾರ್ವಭೌಮಾ ||ವರ ಸುವತ್ಸರ ಚಿತ್ರ ಭಾನುವು | ಚೈತ್ರ ಶುಕ್ಷದಿ ಅಷ್ಟಮೀ ದಿನಸಿರಿ ಗುರು ಗೋವಿಂದ ವಿಠಲನ | ಚರಣ ಸರಸಿಜ ಸೇರಿ ಮೆರೆದ 3
--------------
ಗುರುಗೋವಿಂದವಿಠಲರು
ಪಾದ | ಭೃಂಗನು ಎನಿಸುವಡಿಂಗರಿಗನೆ ಧನ್ಯನೊ ಪ ಧೃತ :ಅಂಗಜನಪಿತ ಕಾ | ಳಿಂಗ ಮರ್ದನತುಂಗ ಮಹಿಮನಪಾಂಗ ಕರುಣನಡಿಂಗರಿಗೆ ಅಭಯಾಂಕ ಹಸ್ತನರಂಗನಂಘ್ರಿ ಸರೋಜ ಭೃಂಗನ ಅ.ಪ. ಮೇದಿನಿ | ಮೌನಿವರ ವರದೇಂದ್ರ ಯತಿಯಲಿ |ಸಾನು ರಾಗದಿ ಜ್ಞಾನವಾರ್ಜಸಿ | ಜ್ಞಾನ ನಿಧಿ ಎಂದೆನಿಸಿ ಮೆರೆದ 1 ವಿಜಯರ ನಿಂದೆಯಿಂದ | ಸಂದಿತು ರೋಗವುನಿಜತನು ತ್ಯಜಿಸುವಂತೇ ||ಅಜನ ನಿಜಪದ ಯೋಗ್ಯ ಪ್ರಾಣನು | ಬಿಜಯಗೆಯ್ಯುತನಿಜ ಸುಸ್ವಪ್ನದಿ |ವಿಜಯದಾಸರ ಪೂಜಿಸೆನ್ನಲು | ಭಜಿಸುತಲಿ ವರವನ್ನೆ ಪಡೆದ 2 ತ್ಯಾಗೀ ಭೋಗೀ ಶೀಲ | ವಿಜಯರ ಸೇವಕಭಾಗಣ್ಣಾರ್ಯರ ಸೇವಿಸೀ ||ಆಗಮಜ್ಞನ ನಾಲ್ದಶಾಯು | ಭಾಗ್ಯವನೆ ತಾಪಡೆದು ಚಂದ್ರಭಾಗದಲಿ ಮೀಯುತಿರೆ ಶಿರಿ | ಜಗದೀಶ ವಿಠಲಾಂಕ ಪಡೆದ 3 ಸ್ವಾದಿ ಸ್ಥಳಕೆ ಪೋಗಿ | ರಾಜರ ಆಜ್ಞೆಯ ಆದರದಲಿ ಕೊಳ್ಳುತಾ ||ಮೋದ ತೀರ್ಥರ ಮತವ ಸಾರುತ | ವೇದ ಶಾಸ್ತ್ರ ಸುಧಾದಿ ಗ್ರಂಥದಸ್ವಾದುರಸ ಪ್ರಾಕೃತದಿ ಬೋಧಿಸಿ | ಶ್ರೀ ಹರಿಕಥೆ ಸುಧೆಯ ಗರೆದ 4 ಲಕ್ಷ್ಯವಿಡುತ ಶುಕ್ಲ | ವರ್ಷವು ಸಿತವೆನ್ನಪಕ್ಷ ಭಾದ್ರ ಪದದೀ ||ದಕ್ಷಿಣಾಯನ ಶುದ್ಧನವಮಿಲಿ | ದೀಕ್ಷೆ ಪಿಡಿಯುತ ಆದಿವಾರದಿಪಕ್ಷಿವಹ ಗುರು ಗೋವಿಂದ ವಿಠಲನ | ಈಕ್ಷಿಸುತ ಭುವಿಯನ್ನೆ ತೊರೆದ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪಾದ ಭಜಿಸಿದವಗನವರತವಿಜಯವಾಗುವದಕ್ಕೆ ಸಂದೇಹವ್ಯಾಕೆ ಪ ಗಜರಾಜ ವರದನಿಗೆ ನಿಜದಾಸರೆಂದೆನಿಸಿದ್ವಿಜಕುಲದಲ್ಲಿ ಮೆರೆವರಾ ಯಿವರ ಅ.ಪ. ಭವ ಬಂಧು ಮುನಿವೃಂದಹೃದಯ ಸಂಶಯ ಹೊಂದಲು (ಹೊಂದಿಸಲು)ವಿಧಿ ವಿಷ್ಣು ಶಿವರೊಳಗೆ ಉತ್ತಮರ ತೋರದಲೆಮದಡ ಭಾವವ ವೊಹಿಸಲು ||ಒದಗಿ ಭೃಗುಮುನಿಗಳೇ ಸರ್ವೇಶ ವೈಕುಂಠಸದನನೆಂದರುಹಿದವರೊ ಯಿವರೊ 1 ಪುರಂದರ ದಾಸರಾಗಿ | ಈ |ಮೇದನೀ ತಳಕೆ ಬರಲೂಸಾಧು ಸಮ್ಮತವಾದ ಪದಪಂಚಲಕ್ಷಕೆ (ತ್ರಿ)ಪಾದವೇ ನ್ಯೂನವಿರಲು | ಆ |ಪಾದವನು ಪೂರ್ತಿಪರು ಮತ್ಪುತ್ರರಿವರೆಂದುಆದಿಯಲಿ ಸೂಚಿಸಿರಲೂ ||ಭೂದೇವ ಜನ್ಮದಿಂದಾ ದಾಸರಭಿಲಾಷೆಸಾಧಿಸಿದ ಸದಯರಿವರೊ ಯಿವರೊ 2 ವೀ ಯೆನಲು ವಿಮಲತೆಯು ಜ ಯೆಂದವಗ ಜಯವುಯ ಯೆನಲು ಯಾಗಫಲವುರಾ ಯೆನಲು ರಾಜ್ಯವು ಯ ಯೆನಲು ಯಮಭಟರುನೋಯಿಸರು ಯಿವನ ಕುಲವೂ ||ಈ ಯಾವದಕ್ಷರವ ಓಂಕಾರ ಸಹ ಪಠಿಸೆಕಾಯಭವ ಪಿತನ ಬಲವೊ ||ಜಾಯಾ ಸಮೇತ ಮೋಹನ್ನ ವಿಠಲನ ಪಾದತೋಯಜ ಭ್ರಮರರಿವರೊ ಯಿವರೊ 3
--------------
ಮೋಹನದಾಸರು
ಪಾದುಕೆಗಳ ದಯಪಾಲಿಸು ಪರಮ ಪಾವನ ಮಹಿಮ ಸುದೇವ ಲಲಾಮ ಪ ನೀ ದಯದಿಂ ತವಪಾದ ಪಯೋಜಗ ಳಾದರದಲಿ ಕೊಡು ಹೇ ದಯಧಾಮ ಅ.ಪ. ಅಜನವ್ಯಯನಪ್ರಾಕೃತ ಮಹಿಮನು ಅಜನಪಿತನು ತನ್ನಿಚ್ಛೆಯೊಳು ಅಜಸುತ ದಶರಥ ಸುತನೆಂದೆನಿಸಿದ ತ್ರಿಜಗ ನೋಡೆ ಆಶ್ಚರ್ಯದೊಳು 1 ತುಂಗಮಹಿಮ ತವ ಮಂಗಳಕರ ಚರ ಣಂಗಳು ಈ ತ್ರಿಜಗಂಗಳ ಪಾಲಿಪುವು ಅಂಗಜಕೋಟಿ ಶುಭಾಂಗನೆ ತವಪದ ಭೃಂಗನೆನಿಸಿ ಕೃಪಾಪಾಂಗದಿ ಈಕ್ಷಿಸೊ ಮಂಗಳಕರ ರಘುಪುಂಗವ ಕರಿಗಿರಿ ರಂಗ ನೃಸಿಂಹ ಸೀತಾಂಗನೆಯರಸ 2
--------------
ವರಾವಾಣಿರಾಮರಾಯದಾಸರು
ಪಾಪ ಕರ್ಮವ ಮಾಡಬ್ಯಾಡಾ ನರಕಕೂಪದೊಳಗೆ ಬಿದ್ದು ಹೊರಳಾಡಬ್ಯಾಡಕಾಕಪುರುಷರ ಸಂಗ ಕೇಡಾ ನಮ್ಮಶ್ರೀಪತಿಯ ಸ್ಮರಣೆ ಮಾಡದೆ ಬಿಡಬ್ಯಾಡಾ 6 ವಿಹೀತ ಕರ್ಮಗಳನ್ನು ಮಾಡೋ ನೀನುಅಹಿತಲ್ಪನೊಲಿಸಿ ಸದ್ಗತಿಯನ್ನು ಬೇಡೊಅಹಿತ ವಿಷಯ ಸುಖ ದೂಡೋ ಲೋಕ ದಹಿತನ ಸೇವೆಗೆಯುತಲಿ ಕೊಂಡಾಡೊ 7 ಸತ್ಯವಚನದಿಂದ ಬಾಳೊ ಬಲುಭಕ್ತಿಪೂರ್ವಕದಿ ಸಚ್ಛಾಸ್ತ್ರ ಕೇಳೊಚಿತ್ತದಿ ಶಾಂತಿಯ ತಾಳೊ ದುಷ್ಟ_ರುಕ್ತಿ ಕೇಳದೆ ನಿನ್ನ ಕಿವಿ ಮುಚ್ಚಿಕೊಳ್ಳೊ 8 ಪಂಚಭೇದ ಪ್ರಪಂಚವು ನಿಜವೆನ್ನೊ ಮೂಢಾ 9 ಜೀವೇಶಾರೊಂದೆಂಬೊ ಹೊಲಿಯಾ ಪರಿಭಾವಿಸೂ ದ್ವಾಸುಪರ್ಣವೆಂಬೊ ಶ್ರುತಿಯಾಕಾವನಯ್ಯನೆ ಜಗದೊಡೆಯಾ ನಮ್ಮಜೀವಾತ್ಮ ಭೃತ್ಯನೊ ಖರಿಯಾ 10 ಅದ್ವೈತರೊಡನಾಟ ಬ್ಯಾಡ ನಮ್ಮಮಧ್ವಮತದ ಪದ್ಧತಿ ಬಿಡಬ್ಯಾಡಾಖದ್ಯೋತಸುತಗಂಜಬ್ಯಾಡಾ ನೀನುಪೊಂದು ಐಹೊಳಿಯ ವೆಂಕಟನಂಘ್ರಿಗಾಢಾ 11
--------------
ಐಹೊಳೆ ವೆಂಕಟೇಶ
ಪಾಪಾತ್ಮ ನಾನಲ್ಲ ಪಾಪವೆನದಿನಿತಿಲ್ಲ ಪ ಶ್ರೀಪತಿಯೆ ನಿನಗೆ ನೀನೇ ಮಾಡಿಕೊಂಡೆ ಅ ವರದನು ಕರದಲಿ ಉಷ್ಣಜಲ ಮೃತ್ತಿಕೆಯತರಲು ಕೈ ಸುಟ್ಟಾಗ ಪಣೆಯ ಠೊಣೆದು ಬೈದೆಮರಳಿ ನಾಚಿಕೆ ಇರದೆ ಚರಣಕೆ ಪಾವುಗೆ ತಂ-ದಿರಿಸಿದಪರಾಧ ಎನ್ನದೊ ನಿನ್ನದೊ ದೇವ 1 ಬಂದ ಭೃಗು ಮುನಿ ಎದೆಯನೊದೆಯೆ ಆತಗೆ ಪಾಪಅಂದು ಮೂದಲಿಸಿ ಬೈದವರಿಗೆ ದೋಷನಿಂದುದೇ ಹಣೆಯೊಳಗೆಸೆಯೆ ಭೀಷ್ಮಂಗಘವುಹೊಂದಿದಾ ಪಾಂಡವರಿಗೆ ಕುಂದು ಬಂದಿತೆ ದೇವ2 ಕುರುಡನಿಗೆ ದಾರಿಯನು ತೋರದೆ ಆತಗೆ ಮುನಿದುದರಿಗೆ ನೂಕಿದಡೆ ಅವನು ಏನು ಮಾಡುವನುಶಿರಕೆ ತಪ್ಪಾಗಿ ಗುರಿಯಿಡಲದು ಸರಳ ತಪ್ಪೆಅರಸನಾಳ ಕೊಂದಡೆ ಆರೇನು ಮಾಡುವರು 3 ಕುಣಿಸಿದರೆ ಆಡುವುದು ಬೊಂಬೆ ಸೂತ್ರಮುಖದಿಇನಿತುಂಟೆ ಕಪಟನಾಟಕ ಸೂತ್ರಧಾರಿಇನಿತಾಡಿಸಿದರಾಡುವೆ ಪಾಪ ಪುಣ್ಯಂಗಳಿಂದಎಣಿಕೆಗಾನಲ್ಲ ನೀನಲ್ಲದಿಲ್ಲ 4 ತಂದೆತಾಯಿಗಳು ತಮ್ಮ ಕಂದಗೆ ಸರ್ಪಮುಖದಿಂದ ಕಚ್ಚಿಸಲು ಆ ತಪ್ಪು ಕಂದನದೆಮುಂದರಿಯದಜ್ಞಾನಿಯೆಂದು ಕ್ಷಮಿಸೆಲ್ಲವನು ತಂದೆ ವೇಲಾಪುರದ ಆದಿಕೇಶವನೆ5
--------------
ಕನಕದಾಸ
ಪಾಪಾತ್ಮನಾನಲ್ಲ ಪಾಪವೆನಗಿನಿತಿಲ್ಲ ಶ್ರೀಪತಿಯೆ ನಿನಗೆ ನೀನೇ ಮಾಡಿಕೊಂಡೆ ಪ ಅಂದು ಭೃಗುಮುನಿಯೆದೆಯಲೊದೆಯಲವನಿಗೆ ಪಾಪ ಬಂದುದೇ ಮೂದಲಿಸಿ ಬೈದವನಿಗಾ ದೋಷವು ನಿಂದುದೇ ಹಣೆಯೊಡೆಯಲೆಸೆದ ಭೀಷ್ಮಂಗಘವು ಹೊಂದೀತೆ ಪಾಂಡವರ್ಗೆ ಕುಂದು ಬಂದೀತೆ ದೇವಾ 1 ವರದನಾಕಾರದೊಳಗುಷ್ಣಜಲ ಮೃತ್ತಿಕೆಯ ತರಲು ಕೈಸುಡಲು ಹಣೆಯನು ಟೊಣದು ಬೈದೇ ಮರಳಿ ನಾಚಿಕೆಯಿಲ್ಲದೆ ಚರಣಕ್ಕೆ ಪಾವುಗೆಯ ನಿರಿಸಿದಪರಾಧ ನಿನ್ನದೋ ಯೆನ್ನದೋ ದೇವಾ 2 ಕುರುಡನಿಗೆ ದಾರಿಯನು ತೋರುವಾಪ್ತನು ಮುಳಿದು ಜರಿದು ನೂಕಿದೊಡಾತನೇನ ಮಾಡುವನೂ ಗುರಿಯನಿಡುವವನು ತಪ್ಪೆಸೆಯೆ ಸರಳಿನದೇನು ಅರಸಾಳಕೊಂದಡವನೇನು ಮಾಡುವನೂ 3 ಕುಣಿಸಿದಂತಾಡುವುದು ಬೊಂಬೆಯು ಸ್ವತಂತ್ರವದ ಕಿನಿತುಂಟೆ ಕಪಟನಾಟಕ ಸೂತ್ರಧಾರೀ ಎನಿತಾಡಿಸಿದೊಡಾಡುವೆನು ಪಾಪಪುಣ್ಯವೆಂ ಬೆಣಿಕೆಗಾನಲ್ಲ ನೀನಲ್ಲದೆಲೆ ದೇವಾ4 ತಂದೆ ತಾಯ್ಗಳು ತಮ್ಮ ಕಂದನನು ಸರ್ಪಮುಖ ದಿಂದ ಕಚ್ಚಿಸಲು ತರಳನಲಿ ತಪ್ಪೇನೂ ಮುಂದರಿಯದಜ್ಞಾನಿಯೆಂದು ನೀಕ್ಷಮಿಸಿಕೋ ತಂದೆ ವೈಕುಂಠ ವೇಲಾಪುರಾಧೀಶಾ 5
--------------
ಬೇಲೂರು ವೈಕುಂಠದಾಸರು
ಪಾಲಯಮಾಂ ಪರಮೇಶಚಿತಕಾಲಿ ಸಂತತಮಂಬಿಕೇಶಭೂರಿಲೀಲ ಶಂಕರವಿಯತ್ಕೇಶಕರುಣಾಲಯಹೃತಪಶುಪಾಶಧೃತಶೂಲ ವಿಶಾಲ ಕಪಾಲ ಕರಾಲಕಂ-ಕಾಲಿಕಾಕೂಲ (?) ವಿಲೋಲಾಸ್ಥಿಮಾಲಾ ಪ ವಾರಣಾಸುರ ಚರ್ಮಚೇಲಸುರವಾರಸೇವಿತ ಗಾನಲೋಲಭಕ್ತಾಧಾರ ಸಕಲ ಜಗನ್ಮೂಲನಿರ್ವಿಕಾರ ಮೃಕಂಡು ಕಸಾಲಹಾರ ಹೀರ ಮಂದಾರ ಪಟೀರ ನೀಹಾರಗೋಕ್ಷೀರ ಕರ್ಪೂರ ಸುಧಾರಸಗೌರ1 ವ್ಯೋಮತರಂಗಿಣೀಜೂಟಜಿತಕಾಮಪಾಲಿತ ಸರ್ವಖೇಟವಿತತಾಮಲಾಂಬರ ಪುಷ್ಪವಾಟರಘುರಾಮಪೂಜಿತ ಪಾದಪೀಠಪೂರ್ಣಕಾಮಾತಿಧಾಮಾಭಿರಾಮ ನಿಸ್ಸೀಮಸುತ್ರಾಮ ಮುಖ್ಯಾಮರಸ್ತೋಮಲಲಾಮ 2 ಗೋಪತಿರಾಜಿತುರಂಗಘೋರಪಾಪಾಂಧಕಾರಪತಂಗದಿವ್ಯತಾಪಸಹೃದಯಾಬ್ಜಭೃಂಗವಿಶ್ವವ್ಯಾಪಕನಿಗಮಾಂತರಂಗಯಾಮಿನಿಪಕಲಾಪಾದ್ರಿಚಾಪರಮಾಪತಿರೂಪನಿರ್ಲೇಪ ಕೆಳದಿ ರಾಮೇಶ ಚಿದ್ರೂಪ 3
--------------
ಕೆಳದಿ ವೆಂಕಣ್ಣ ಕವಿ
ಪಾಲಿಸು ನಮ್ಮಮ್ಮ ಮುದ್ದು ಶಾರದೆ ನಮ್ಮ ನಾಲಿಗೆ ಯೊಳು ತಪ್ಪುಬಾರದೆ ನೀಲ ಕುಂತಳೆ ತಾಯೀ ನಿನ್ನ ನಂಬಿದೆ ಕಾಯೆ ಪ ಅಕ್ಷರಾಕ್ಷರ ವಿವೇಕಿಯೇ ನಿಮ್ಮ ಕುಕ್ಷಿಯೊಳೀರೇಳು ಲೋಕವೆ ಸಾಕ್ಷಾತ್ ಸ್ವರೂಪಿಣಿ ಮೋಕ್ಷದಾ ಯಕಿಯೆ ತಾಯೆ ಪಾಲಿಸಮ್ಮಮ್ಮ 1 ಸರ್ವಾಲಂಕಾರ ಮೂರ್ತಿಯ ಚರಣ ಭಜಿ ಸುವೆ ಕೀರ್ತಿಯ ಗುರುಮೂರ್ತಿ ಪರಮಾ ನಂದದೊಳ್ ಪಾಲಿಸಮ್ಮಮ್ಮ 2 ಶೃಂಗಪುರದ ನೆಲೆವಾಸಿಯೆ ನಿಮ್ಮ ಸಂಗೀತ ಶಾಸ್ತ್ರ ವಿಶಾಲಯ ಭೃಂಗ ಕುಂತಳೆ ತಾಯೆ ಭಳಿರೆ ಬ್ರಹ್ಮನರಾಣಿ ಪಾಲಿಸಮ್ಮಮ್ಮ 3
--------------
ಕವಿ ಪರಮದೇವದಾಸರು
ಪಾಲಿಸು ಶ್ರೀಹರಿಯೆ ಯದುಭೂಮಿಪತಿಯೆ ಪ ಬಾಲಾರ್ಕ ಸಮಮುಖ ಲೋಲ ಮುರಳೀಧರ ಅ.ಪ. ನಂದ ನಂದನ ದಿವ್ಯ ಸುಂದರ ರೂಪನೆ ಬಂಧುರಾಲಕ ವರ ಮಂದಹಾಸನೆ 1 ಗೋಪ ಸುಂದರೀಗಣ ದೀಪವಿರಾಜಿತ ತಾಪಿಂಛ ಪಲ್ಲವ ನೂಪುರ ಶೋಭಿತ2 ಕಾಳೀಯ ಮರ್ದನ ನೀಲಾಂಬುದ ಪ್ರಭ ನಾಳೀಕಾನನ ಚಿತ ಲೋಲಾಕ್ಷಿ ಚಿತ್ತನೆ3 ಭವ ಭಂಗ ಮಾನುಷ ವೇಷ ಶೃಂಗಾರ ಶೋಭಿತ ಭೃಂಗಾಲಕಾರ್ಚಿತ 4 ಧೇನುನಗರ ದೊರೆ ಸಾನುರಾಗದಿ ಪೊರೆ ಗಾನ ವಿನೋದ ಹರೆ ಭಾನುಸನ್ನಿಭ ಶೌರೆ 5
--------------
ಬೇಟೆರಾಯ ದೀಕ್ಷಿತರು
ಪಾಲಿಸೆನ್ನ ಪಾಲಿಸೋ ಎನ್ನಾ ಪ ಪಾಲಿಸೆನ್ನ ಗುರು ಫಾಲನಯನಾಸುರಪಾಲನ ಪಿತ ಶ್ರೀ ಪಾರ್ವತಿರಮಣಅ.ಪ. ಲಿಂಗವೇರಿ ಸುರರಂಗದಿ ಚರಿಸುವ ಶಿರಿರಂಗನ ಪದ ಪವನನ ಭೃಂಗಾ 1 ಕವಿ ವಿನುತ ಪರರಾಳಿಯ ಪ್ರಿಯಬಾಲಾ 2 ನವಿಲನೇರಿ ಬರುತಿಪ್ಪನ ಪಿತತಂದೆವರದಗೋಪಾಲವಿಠಲನ ಆಪ್ತಾ 3
--------------
ತಂದೆವರದಗೋಪಾಲವಿಠಲರು
ಪಾಲಿಸೆನ್ನನು ದೇವಾ ಪರಮ ಪುರುಷಾ ಶ್ವೇತ ವರಹಾ ಪ ಸ್ವಾಯಿಚ್ಛೆಯಲಿ ಬಂದು ಮೆರೆದು ಮಹಾಕೀರ್ತಿಯನು ಪಯೋನಿಧಿಸುತೆಯಿಂದ ತುತಿಸಿಕೊಳ್ಳುತಾ ಜಯಜಯದೇವನಾಶ್ರಯ ಕಾಮಧೇನು ನೀ ದಯಮಾಡಿ ನೋಡುವದು ದಾಸ ನೆನೆಸುವದು 1 ಪರಾಕು ಬೊಮ್ಮಾಂಡವನು ಹೊತ್ತು ನಸುನಗು ನಾಗಾರಿಗಮನಾ ಮಣಿ ಮಯದಾಭರಣದಿಂದೆಸೆವ ದೇ ವೋತ್ತಮನೆ ದಾನವರ ಬಲವಳಿದಾ ಧೈರ್ಯ 2 ನಿತ್ಯ ಪುಷ್ಕರಣಿಯಲಿ ನಿರುತ ಪೂಜೆಯಗೊಂಡು ಪ್ರತ್ಯಕ್ಷವಾಗಿ ವರಗಳನೀವುತ ಸಿರಿ ವಿಜಯವಿಠ್ಠಲ ವರಹ ಭೃತ್ಯನೆನೆಸಿ ನಿನ್ನ ಸ್ತೋತ್ಯದೊಳಗಿಡು ದೇವಾ3
--------------
ವಿಜಯದಾಸ
ಪಾಲಿಸೊ ಮನ್ಮಾನಸಾ | ಮಂದಿರಶ್ರೀಲೋಲ ಭಕ್ತ ಪೋಷ ಪ ಭಂಜನ ರಾಮ | ಗಾಳಿ ಸುತಗೆ ಪ್ರೇಮ ಅ.ಪ. ದೈತ್ಯ ಜನರು ಬಹಳಾ | ಎನ್ನ ತಮ್ಮಭೃತ್ಯನ ಮಾಡಿ ಜಗಳಾ ||ನಿತ್ಯವಾಡುತಲೆನ್ನ | ಕೃತ್ಯಾಗಳಿಗೆ ದೋಷಎತ್ತಿಸುತಿಹರಯ್ಯ ದೈತ್ಯ ನಿಷೂದನ 1 ಸಂಚೀತಾಗಾಮಿ ನಾಶಾ | ಗೈ ಭವವಂಚೀತನಿಹೆ ಶ್ರೀಶಾ ||ಹೆಂಚು ಹಾಟಕ ಸಮ | ಸಂಚಿಂತನೆಯ ಕೊಟ್ಟುಕೊಂಚ ಮತಿಯ ಕಳೆ | ವಾಂಛಿತಾರ್ಥದ ಹರಿ 2 ಜನ್ಮಾಜನ್ಮವು ಬರಲೀ | ತವಸ್ಮøತಿಕರ್ಮಾಕರ್ಮದೊಳಿರಲೀ ||ಭರ್ಮ ಗರ್ಭನಯ್ಯ | ಸುಮ್ಮನಸರ ಪ್ರೀಯನಿರ್ಮಲ ಭಕ್ತಿಯಿತ್ತು | ಹಮ್ರ್ಯದೊಳಗೆ ತೋರೊ 3 ಸುರರು ಭೋಕ್ತ ಭಂಜನ ಭವ 4 ಭವ ಭವ | ಕಾರುಣ್ಯಾತ್ಮಕ ದೇವ 5
--------------
ಗುರುಗೋವಿಂದವಿಠಲರು