ಸಿರಿವರನ ಕರುಣಕ್ಕೆ ಪಾತ್ರ ನಾನಾದೆ
ಪರಮ ಹರಿಭಕ್ತನಾಗಿ ಬಾಗಿ ಶರಣೆಂದು ಪ
ಪರಿಪರಿಯಿಂದೊರೆದ ಕುಲಗುರುವಿನ ವಾಕ್ಯಗಳ
ತರದೆ ತುಸು ಗಣಿತಕ್ಕೆ ಮರಣಭೀತಿಲ್ಲದೆ
ಹರಿಸರ್ವೋತ್ತಮನೆಂಬ ವರಮಂತ್ರ ಪಠಿಸಿದ
ಪರಮಪ್ರಹ್ಲಾದರಿಗೆ ನಿರುತ ಶರಣೆಂದು 1
ಪನ್ನಂಗಶಯನ ಉನ್ನತ ಮಹಿಮೆಗಳ
ತನ್ನೊಳಗೆ ತಾ ತಿಳಿದು ಭಿನ್ನ ಭೇದವಿಲ್ಲದೆ
ಗನ್ನಗತಕನಾದ ಅಣ್ಣನಿಗೆ ಮಹ ನೀತಿ
ಯನ್ನು ಪೇಳಿದ ವಿಭೀಷಣಗಿನ್ನು ಶರಣೆಂದು 2
ವನಧಿಯನ್ನು ಲಂಘಿಸಿ ದನುಜಕುಲ ಸಂಹರಿಸಿ
ವನಜನಾಭನ ಸೇವೆ ಮನುಮುಟ್ಟಿ ಗೈದು
ಜನನಮರಣವ ಗೆಲಿದು ಘನಪದವಿ ಗಳಿಸಿದ
ಹನುಮರಾಯರ ಪದಕೆ ಮಣಿದು ಶರಣೆಂದು 3
ತರಳತನದಲಿ ನಿಖಿಲ ಧರೆಭೋಗಗಳ ತೊರೆದು
ಹರಿಮಂತ್ರ ಜಪಮಾಡಿ ಸ್ಥಿರಪದವ ಪಡೆದ
ಪರಮಕಂಟಕ ಗೆಲಿದವರಿಗರಿತು ಶರಣೆಂದು 4
ನಿತ್ಯನಿರ್ಮಲ ನಿಖಿಲಕರ್ತ ಶ್ರೀರಾಮನಡಿ
ಭಕ್ತರೆನಿಸಿದ ಮಹ ನಿತ್ಯಾತ್ಮರ
ಸತ್ಯಪಾದಗಳೆನ್ನ ನೆತ್ತಿಯೊಳ್ಪೊತ್ತು ನಿಜ
ಚಿತ್ತದಿಂ ನೆನೆನೆನೆದು ನಿತ್ಯಶರಣೆಂದು 5