ಒಟ್ಟು 1028 ಕಡೆಗಳಲ್ಲಿ , 93 ದಾಸರು , 864 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಾತ್ಸಾರಕಿದು ಕಾಲವಲ್ಲ ರಂಗಯ್ಯ ಶ್ರೀ- ವತ್ಸಲಾಂಛನ ಸುಖ ಚಿನ್ಮಯನೆ ವತ್ಸನ ಧ್ವನಿ ಕೇಳಿ ಒದಗುವ ಗೋವಂತೆ ಭೃತ್ಯರ ಸಲಹುವ ಬಿರುದುಳ್ಳ ನರಸಿಂಹ ಪ. ಹುಚ್ಚಾಗೆಲ್ಲರ ಕಚ್ಚುವ ನಾಯಂತೆ ತುಚ್ಛವಾದ ಬಗುಳುಚ್ಚರಿಸಿ ಇಚ್ಛಾನುಸಾರದಿಂದಿರುವ ಹೂಣನ ಬಾಯಿ ಮುಚ್ಚಿಸಿ ಮೂಲೆಯೊಳ್ಮುರಿದೊತ್ತು ಮುರಹರ 1 ನಿನ್ನ ಸೇವೆಯನ್ನು ನಿರುತದಿ ನಡೆಸುತ ಅನ್ಯರ ಲಕ್ಷಿಸದಿರಲೆನ್ನನು ಭಿನ್ನ ಭಾವದಿ ಭೀತಿ ಬಡಿಸುವ ದುಷ್ಟನ ಇನ್ನುಪೇಕ್ಷಿಸಿ ಸುಮ್ಮನಿರುವೆ ಯಾತಕೆ ಸ್ವಾಮಿ 2 ದುಷ್ಟ ಹಿರಣ್ಯಚರ್ಮಾದಿದಮನ ನಿನ- ಗೆಷ್ಟೆಂದು ಪೇಳಲಿ ವಿಧಿಜನಕ ಸೃಷ್ಟಿಗೊಡೆಯ ವೆಂಕಟೇಶನ ಹೂಣನ ಮಾಧವ 3
--------------
ತುಪಾಕಿ ವೆಂಕಟರಮಣಾಚಾರ್ಯ
ತಾಯಿತಂದೆಯರಿಗೆ ನಮನ (ವಾರ್ಧಕ ಷಟ್ಪದಿ) ಆನಮಿಪೆ ಮಾತೆ ಪಿತರರ್ಗೆ ಪ ಆನಮಿಸಿ ಈರ್ವರಿಗೆ | ಜ್ಞಾನ ಸಾಧನ ದೇಹದಾನ ಮಾಡ್ದದಕವರ | ಧೇನಿಸುತ ಪದವನಜಗಾನ ಮಾಡುವೆ ವಂಶದ ಅಕ್ಷೀಣ ವಾರ್ತೆಗಳ ಕೇಳ ಬಯಸುವರಾಲಿಸಿ ಅ.ಪ. ವಿಸ್ತರದ ಕೀರ್ತಿಯುತ | ಚಿತ್ತೂರು ಕೃಷ್ಣಾಖ್ಯರಿತ್ತ ಮಹಿ ಶೂರೊಳಗೆ | ನೆಲೆಸುತ್ತ ತಮ ಧರ್ಮಪತ್ನಿಯಲಿ ಚತುರ ಕುವ | ರರ ಪಡೆದು ಚತುರರಂಗೆಅಯ್ಯುತಿರೆ ವಿಧಿವಶದಲಿ |ಪೆತ್ತ ಪಿತ ಪರಪುರಕಡರೆ ಮಾತೆ ಕಡೆ ಕುವರಗೆತ್ತಣದು ವಿದ್ಯೆ ಎಂ | ದೆನ್ನಿಸದೆ ಸಲಹುತ್ತಉತ್ತಮರು ಬಕ್ಷಿತಿರು | ಮಲರ ವಂಶೋದ್ಭೂತ ಸುಬ್ಬರಾಯರ ಕುವರಿಯ 1 ಕಾಲ ಕಳೆಯುತಿರಲು 2 ಪತಿ ವಿಯೋಗವು ಆಯ್ತುಮಾರಿ ಕೋಪದ್ರವದಿ | ಮಾರಿ ಕಣಿವೆಲಿ ಪ್ರಥಮ ಅಪಮೃತ್ಯು ಸಂಭವಿಸಲು |ತಾರುಣ್ಯ ಉರುತರ | ವ್ಯಸನದಿಂ ನೂಕುತ್ತಪೋರನಭಿವೃದ್ಧಿಗಿ | ನ್ನೇನುಗತಿ ಎಂದೆನುತನಾರಾಯಣ ಸ್ಮರಣೆ | ಪರಿಪರಿಯಗೈಯ್ಸುತ್ತ ನಿಟ್ಟುಸಿರ ಬಿಡುತ್ತಿದ್ದಳು 3 ನಾಲ್ಕಾರು ವರುಷಗಳು | ದಾಯಾದ್ಯರೊಳು ದುಡಿದುನಾಲ್ಕೆಂಟು ಕಡುಕ್ರೂರ | ವಾಕ್ಕುಗಳ ಸಹಿಸುತ್ತಪ್ರಾಕ್ಕು ಕರ್ಮದ ಫಲವ | ಮುಕ್ಕಲೇಬೇಕೆಂಬ ವಾಕ್ಕುಗಳ ಮನ್ನಿಸುತಲಿ ||ನೂಕುತಿರೆ ಕೆಲಕಾಲ | ತೋಕಗಾಯ್ತುಪನಯನಕಾಕು ಮಾತುಗಳಾಡಿ | ನೂಕಲೂ ಗೃಹದಿಂದಆ ಕುಮಾರ ಧೃವನ | ನೂಕಿದಾಪರಿಯಾಯ್ತು ಎಂದೆನುತ ಹೊರ ಹೊರಡಲು 4 ಭವ ತರಣ | ಧವಣೆಯಲಿ ಕುವರಂಗೆ ವೈವಾಹ ತಾವಿರಚಿಸಿ 5 ಭಾಗವತ ವತ್ಸರ ವಸಿತ ದ್ವಿತಿಯ ತೃತಿಯ ತಿಥಿ ಹರಿ ಸ್ಮøತಿಲಿತನು ವಪ್ಪಿಸಿದಳು 6 ಭಾರತೀಶ ಪ್ರಿಯಗಭಿನ್ನಾತ್ಮನಮೊ ಗುರು ಗೋವಿಂದ ವಿಠ್ಠಲನ ದಾಸ ದಾಸಿಯರಿಗೇ ನಮೊ ಎಂಬೆನು 7
--------------
ಗುರುಗೋವಿಂದವಿಠಲರು
ತುತಿಸಬಲ್ಲೆನೆ ನಾ ನಿನ್ನೆ ವೆಂಕಟರನ್ನ ಪ ಪತಿ ನಿನ್ನ ಬ್ರಹ್ಮ ಪಾ ರ್ವತಿ ಪತ್ಯಾದ್ಯಳವಡದುತುಳ ಮಹಿಮೆಗಳ ಅ.ಪ. ನಮಿಪ ಜನರ ಕಲ್ಪದ್ರುಮ ದುಷ್ಟದಾನವ ದಮನ ದಿವಿಜಕುಲೋತ್ತಮ ಲಕ್ಷ್ಮೀ ಪವನಾದಿ ಸುಮನಸಾರ್ಚಿತ ಪಾದಕಮಲ ಯುಗ್ಮನೆ ಅನು ಕಾಯ ಹೃ ತ್ತಿಮಿರ ಭಾಸ್ಕರ ಶ್ರೀ ಭೂರಮಣ ಸರ್ವಗ ಸದಾ ಗಮವೇದ್ಯ ವೇದವ್ಯಾಸ ಕಪಿಲ ದತ್ತ ಕುಮುದಾಪ್ತ ಕೋಟಿ ಭಾಸಾ ತದ್ಭಕ್ತರ ಸಮುದಾಯಕೀಯೋ ಲೇಸಾ ಆನತ ಬಂಧು ಸುಮುಖ ಸುಲಭನೆಂದಾ ನಮಿಪೆ ಎನ್ನರಸಾ 1 ಘನಮಹಿಮನೆ ವೃಂದಾವನವಾಸಿ ಸ್ವಪ್ರಯೋ ಜನವಿವರ್ಜಿತ ಗೋವರ್ಧನಧಾರಿ ಗೋ ಗೋಪೀ ಜನ ಮನೋರಂಜನ ಜನಕಜಾರಮಣ ಪೂ ತನಿ ಪ್ರಾಣಾಂತಕ ವೇದವಿನುತ ಶ್ರೀ ವತ್ಸಲಾಂ ಕೌಸ್ತುಭ ಮಣಿ ವೈಜಯಂತೀ ಸ ದ್ವನ ಮಾಲಾಂಚಿತ ಕಂಧರಾ ಸತ್ಕಲ್ಯಾಣ ಗುಣ ಜ್ಞಾನಾತ್ಮಕ ಶರೀರಾ ಸಂತತ ನಿಷ್ಕಿಂ ಚನ ಭಕ್ತಜನಮಂದಾರಾ ವಂದಿಸುವೆ ಮ ನ್ಮನದಲಿ ನಿಲಿಸೋ ಕರುಣಾ ಪಾರಾವಾರಾ 2 ಕವಿಭಿರೀಡಿತ ಪುಣ್ಯ ಶ್ರವಣ ಕೀರ್ತನ ಮತ್ಸ್ಯಾ ದ್ಯವತಾರಂತರ್ಯಾಮಿ ಪ್ರವಿವಿಕ್ತ ಭುಗ್ವಿಭು ಭುವನ ನಿಧಿಯ ಪೆತ್ತ ಸವನ ತ್ರಯಾಹ್ವಯ ಶಿವರೂಪಿ ಶಿವದ ಭೂರ್ಭೂವಸ್ವಸ್ಥ ಸ್ವಶ ಭಾ ರ್ಗವ ನಿನ್ನೊಳಿಪ್ಪ ದಾನವನ ಸಂಹರಿಸುವ ನೆವದಿಂದ ದಾಶರಥೀ ಸಂಗಡ ಯುದ್ಧ ತವಕದಿ ಮಾಡಿ ಭೀತಿ ಬಟ್ಟವನಂತೆ ಅವನಿಗೆ ತೋರ್ದ ರೀತಿ ವರ್ಣಿಸಲಿನ್ನು ಪವನಮುಖಾದ್ಯರಿಗವಶ ನಿನ್ನಯ ಖ್ಯಾತಿ3 ಗತಶೋಕ ಗಾಯಿತ್ರಿ ಪ್ರತಿಪಾದ್ಯ ತತ್ವಾಧಿ ಪತಿಗಳೆನಿಸುವ ದೇವತೆಗಳೊಳಗಿದ್ದು ಮಾ ರುತನಿಂದ ಒಡಗೂಡಿ ಪ್ರತಿದೇಹಗಳಲಿ ಯೋ ಗ್ಯತೆಯನರಿತು ಕರ್ಮಗತಿಗಳನೀವೆ ಸಾಂ ಪ್ರತ ಬೇಡಿಕೊಂಬೆ ಆನತರ ಸಂತೈಸೆಂದು ಪ್ರಥಮಾಂಗ ಪ್ರಿಯ ಸತ್ತಮ ಸೌಭಾಗ್ಯ ಸಂ ಭೃತಸಾರ ಸರ್ವೋತ್ತಮ ನೀನೆ ಪಾಂಡು ಸುತರಾದ ಧರ್ಮ ಭೀಮಾ ಪಾರ್ಥರ ಕಾಯ್ದೆ ಪ್ರತಿಗಾಣೆ ನಿನಗೆ ಸಂತತ ಪರಂಧಾಮಾ 4 ಕಲಿ ಮುಖ್ಯ ದೈತ್ಯ ಗಂಟಲಗಾಣ ಗುರುತಮ ಬಲಿಬಂಧಮೋಚಕ ಸುಲಭ ಚೆತ್ಸುಖದಾಯಿ ಫಲ ಚತುಷ್ಟಯನಾಮ ಫಲಸಾರ ಭೋಕ್ತø ಶಂ ಬಲನಾಗಿ ಭಕತರ ಸಲಹುವ ಕರುಣಿ ಶಂ ಫಲಿಪುರವಾಸಿ ಬಾಂಬೊಳೆಯ ಜನಕ ಲಕ್ಷ್ಮೀ ನಿಲಯ ನಿರ್ಗತ ದುರಿತಾ ಮನ್ಮನದ ಚಂ ಚಲವ ಬಿಡಿಸೋ ನಿರುತಾ ಬೇಡಿಕೊಂಬೆ ತಲೆ ಬಾಗಿ ಸರ್ವಗತಾ ನೀನಹುದೆಂದು ತಿಳಿಸೋ ತೀವ್ರದಿ ಮುಪ್ಪೊಳಲುರಿಗನ ತಾತಾ 5 ಉದಿತ ಭಾಸ್ಕರನಂತೆ ಸುದತೇರಿಂದೊಡಗೂಡಿ ಉದರ ನಾಮಕ ನೀನು ಉದರದೊಳಿದ್ದೆನ್ನ ಉದಕಗಳಿಗೆ ನಿತ್ಯಾಸ್ಪದನಾಗಿ ಜೀವರ ಹೃದಯದೊಳಿರುತಿಪ್ಪೆ ಸದಸದ್ವಿಲಕ್ಷಣಾ ವಿಧಿಭವ ಶಕ್ರಾದಿ ತ್ರ್ರಿದಶರೊಂದಿತ ಪಾದ ಬದಿಗನಾಗಿರಲು ಪಾಪ ಕರ್ಮಗಳು ಬಂ ದೊದಗುವುವೇನೋ ಶ್ರೀ ಪಾ ಬಿನ್ನೈಸುವೆ ಬುಧ ಜನರಂತಸ್ತಾಪಾ ಕಳೆದು ನಿತ್ಯ ಬೆದರದಂದದಲಿ ಮಾಳ್ಪುದು ದೋಷ ನಿರ್ಲೇಪಾ 6 ಪಣಿಗಣ್ಣ ಸ್ವರದಿಂದಾಗ್ರಣಿಯಾದ ದುಷ್ಟ ರಾ ವಣನ ಬಾಹುಬಲ ಗಣಿಸಿದೆ ನಿಶಿತ ಮಾ ರ್ಗಣದಿ ಸದೆದು ವಿಭೀಷಣಗೆ ನೀ ಲಂಕಾಪ ಟ್ಟಣ ಭೋಗ ತತ್ಕಾಲ ಉಣಲಿತ್ತು ಭಕ್ತಗೆ ಪ್ರಣತ ಕಾಮದನೆಂಬೋ ಗುಣ ನಿನ್ನಲ್ಲಿದ್ದ ಕಾ ರÀಣದಿ ಪ್ರಾರ್ಥಿಸುವೆ ನಿನ್ನಾ ದಾಸರೊಳು ಗಣಿಸು ನೀ ದಯದಿ ಎನ್ನಾ ತಪ್ಪುಗಳ ನೀ ನೆಣಿಸಲಾಗದು ಪ್ರಸಾನ್ನಾ ಪಾಲಕನೆ ಕುಂ ಭಿಣಿಸುರರನು ಕಾಯೊ ಕ್ಷಣಾ ಲಕ್ಷ್ಮನಣ್ಣಾ 7 ಬಿಸಜ ಸಂಭವನ ನಿರ್ಮಿಸಿ ನಾಭಿಕಮಲದಿ ಸಶರೀರದೊಳು ಸುಮನಸರ ಪಡೆದು ನಿನ್ನಾ ಪೆಸರಿಟ್ಟು ಅವರವರೊಶನಾದೋಪಾದಿ ತೋ ರಿಸಿದಿ ನೀ ಸ್ವಾತಂತ್ಯ ಅಸಮನೆಸಿಕೊಂಡು ಬಸಿರೊಳಗಿಟ್ಟು ಪೊಂಬಸರಾದಿ ಸುರರ ಪಾ ಲಿಸುವಿ ನೀ ಪ್ರತಿ ಕಲ್ಪದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ವಾಸಿಸುತ ರ ಕ್ಕಸರನಂಧಂತಮದಿ ದಣಿಸುತಿಪ್ಪ ಪ್ರಸವಿತ್ತ ನಾಮ ವಂದಿಸುವೆ ಪ್ರಮೋದೀ 8 ಆಪದ್ಭಾಂಧವ ಬಹುರೂಪಾ ರುಕ್ಮಿಣೀಶಾ ತಾಪಸ ಜನರ ಹೃತ್ತಾಪದರ ಧರ್ಮ ಸುಜನ ಲೋ ಕೋಪಕಾರಕ ಧರ್ಮ ವ್ಯೂಪ ಊಧ್ರ್ವಗ ನಿರ್ಗು ಣೋಪಾಸಕರ ಸಲಹಲೋಸುಗದಿ ಸ ಲ್ಲಾಪದಿ ಬಹ ಕಲಹಾ ಮನ್ನಿಸೋ ಭವಾ ಕೂಪಾರ ನಾವಿಕ ಭೂಪತಿ ವರಹಾ 9 ಕೂರ್ಮ ಕ್ರೋಡ ವಪುಷ ಹಿರಣ್ಯಕ ಶಿಪುವಿನ ಸೀಳ್ದ ಕಾಶ್ಯಪಿಯಾಚಿಕನೆ ದುಷ್ಟ ನೃಪರ ಸಂಹರಿಸಿದ ಕಪಿವರ ಪೂಜಿತ ದ್ರುಪದಾತ್ಮಜೆಯ ಕಾಯ್ದ ತ್ರಿಪುರಾರಿ ಕಲಿಮುಖ್ಯ ರುಪಟಳ ಬಿಡಿಸಿದ ಕೃಪಣವತ್ಸಲ ಕಲ್ಕಿ ಅಮಿತ ರೂಪಾತ್ಮಕ ಸುಫಲ ಚಿತ್ಸುಖ ಭರಿತಾ ತ್ರೈ ಲೋಕಕ್ಕೆ ಪ್ರಪಿತಾಮಹನೆ ನಿರುತಾ ಪ್ರಾರ್ಥಿಸುವೆ ನಿ ನ್ನಪರೋಕ್ಷವಿತ್ತು ಪಾಲಿಪುದೆಮ್ಮ ಸ್ವರತಾ 10 ವಟಪತ್ರಶಯನ ವೆಂಕಟಗಿರಿ ನಿಲಯ ನಿ ಷ್ಕುಟಿಲ ದುರ್ವಿಷಯ ಲಂಪಟವ ಸದೆದು ನಿನ್ನ ಭಟಜನರಿಗೆ ಧರ್ಮ ಘಟಕನಾಗುವೆ ನಿತ್ಯ ವಟುರೂಪಿ ಎಡಪಾದಂಗುಟದಿ ಅಬ್ಬಜಾಂಡ ಕಟಾಹ ಭೇದಿಸಿ ದೇವ ತಟನೀಯ ಪಡಿಯೋ ಧೂ ರ್ಜಟಿ ತಲೆಯೊಳು ಧರಿಸಿ ನಿನ್ನ ನಾಮ ಪರಿಸುತ್ತ ಸತಿಗೆರಸಿ ಕುಣಿದನೆಂದು ತ್ಕಟದಿ ಕೈಗಳ ಬಾರಿಸಿ ಜಗನ್ನಾಥ ವಿಠಲ ಸರ್ವೋತ್ತಮ ದಿಟನೆಂದುದ್ಫಟಸೀ11
--------------
ಜಗನ್ನಾಥದಾಸರು
ತೆರಳಿ ಪೋದರು ದಿವ್ಯ ನರಹರಿಯ ಪುರಕೆ ಶ್ರೀ ವರತಂದೆ ಮುದ್ದುಮೋಹನರೂ ಪ. ಕರಿಗಿರಿ ಕ್ಷೇತ್ರದಲಿ ತೊರದು ಭೌತಿಕ ದೇಹ ಪರಮ ಉಲ್ಲಾಸದಿಂದಾ ನಂದಾ ಅ. ಪರಿಪರೀ ಪೂಜಿಸಿದ ಪರಮ ಭಕ್ತರಿಗೆ ತಾವ್ ತೆರಳುವೋಪರಿ ತಿಳಿಸದೇ ಪರಮ ಕರುಣಾಳು ಹೆಂಗರುಳಿನಾ ಖಣಿ ಎಂಬ ತೆರವೆಲ್ಲರಿಗೆ ಮರೆಸದೇ ಪರಮಸುಜ್ಞಾನಿಯಾದಂಥ ಶಿಷ್ಯರಾ ಕರೆಸಿ ಅಗಲಿಸಿಕೊಳ್ಳದೇ ಪರಮ ಸಾಧ್ವೀಪತ್ನಿ ವರ ಪುತ್ರರಿರುತಿರಲು ಕಿರಿಶಿಷ್ಯನೊಬ್ಬನೆದುರೊಳ್ | ಜವದೊಳ್ 1 ಎಂಭತ್ತು ಮೇಲೆರಡು ವತ್ಸರವು ಧರಣಿಯೊಳು ಸಂಭ್ರಮದಿ ಧೃಡ ಕಾಯದೀ ತುಂಬಿ ತತ್ವಾಮೃತವು ಸುಜನರಾ ಹೃದಯದಲಿ ಕುಂಭಿಣಿಯೋಳ್ ದಾಸತ್ವದೀ ನಂಬಿಕೆಗಳಿತ್ತು ಸುಜ್ಞಾನಿಗಳಿಗಂಕಿತವು ಅಂಬುಜಾಕ್ಷನ ನಾಮದೀ ಒಂಭತ್ತು ವರ್ಷದಿಂ ಬೆಂಬಿಡದೆ ಕಾಯ್ದೆನ್ನ ಕುಂಭಿನಿಯ ತೊರೆದು ಈಗಾ | ಬೇಗಾ 2 ಶಾಲಿಶಕ ಸಾಹಸ್ರ ಅಷ್ಟ ಶತ ಅರವತ್ತು ಮೇಲೆರಡು ವಿಕ್ರಮದಲೀ ಕಾಲ ಮಧ್ಯಾಹ್ನ ಚೈತ್ರದ ಶುದ್ಧ ಶ್ರೀ ರಾಮ ನವಮಿ ಭೌಮವಾಸರದಲಿ ಆಲಿಸುತ ದಿವ್ಯ ಮಂತ್ರ ಶ್ರವಣ ಕೀರ್ತನವ ಶೀಲ ಶ್ರೀ ಗೋಪಾಲಕೃಷ್ಣವಿಠಲನ ಪುರಕೆ ಆಯಾಸಗೊಳದೆ ಮುದದೀ ತ್ವರದೀ 3
--------------
ಅಂಬಾಬಾಯಿ
ತೆರಳಿದರು ವಿಜಯರಾಯರು ವಿಜಯ ವಿಠಲನ ಪುರದೊಳಗೆ ಪರಮ ಭಕ್ತರ ಕಾಣಬೇಕೆನುತ ಪ ಯುವ ಸಂವತ್ಸರದ ಕಾರ್ತಿಕ ಶುದ್ಧ ದಶಮಿ ವಿಭಕ ರವು ಗುರುವಾರ ಪ್ರಥಮ ಯಾಮದೀ ಪವನಾಂತರಾತ್ಮಕ ಶ್ರೀ ಹರಿಯ ದರ್ಶನೋ ತ್ಸವ ಸಂಪಾದಿಸುವ ಬಹು ಲವಲವಿಕೆಯಿಂದ 1 ಧರಣಿಯೊಳು ಬಾಸ್ಕರ ಕ್ಷೇತ್ರವೆನಿಸುವ ಚಿಪ್ಪ ಗಿರಿಯೆಂಬ ಗ್ರಾಮದಿ ವಿಬುಧರ ಮುಖದಿ ಭಾಗವತ ಬ್ರಹ್ಮಸೂತ್ರ ಭಾರತ ಗೀತ ಮರುತ ಶಾಸ್ತ್ರಾರ್ಥ ಗ್ರಂಥಗಳನಾಲಿಸುತಲಿ 2 ಸುಖತೀರ್ಥ ಮುನಿಯ ಮನಕನುಕೂಲ ಸಚ್ಛಾಸ್ತ್ರ ನಿಕರಗಳ ಕವನ ರೂಪದಲ್ಲಿ ರಚಿಸಿ ಭಕತರಿಗೆ ಸನ್ಮಾರ್ಗ ತೋರಿ ಸಂತೋಷದಲಿ ವಿಖನಸಾರ್ಚಿತ ಜಗನ್ನಾಥ ವಿಠಲನ ಪದಕೆ 3
--------------
ಜಗನ್ನಾಥದಾಸರು
ತೆರಳಿದರು ವ್ಯಾಸತತ್ವಜ್ಞರಿಂದು ಪುರುಷೋತ್ತಮನ ಗುಣಗಳರುಪಿ ಸುಜನರಿಗೆ ಪ ವರ ರೌದ್ರಿನಾಮ ಸಂವತ್ಸರದ ಶ್ರಾವಣ ಪರಪಕ್ಷ ಅಷ್ಟಮಿ ಭಾನುವಾರ ಭರಣಿ ನಕ್ಷತ್ರ ಪ್ರಾತಃಕಾಲದಲಿ ಸೋಮ ಪಾದ ಸನ್ನಿಧಿಗೆ 1 ಭಾಗವತ ಮೊದ ಲಾದ ಶಾಸ್ತ್ರಗಳ ಕೀರ್ತನೆಗೈಯುತಾ ಪಾದೋದಕವ ಶಿರದಿ ಧರಿಸುತಿಪ್ಪ ವರಘತಿ ರೋಧಾನಗೈಸಿ ಪರಗತಿ ಮಾರ್ಗವನು ತೋರಿ 2 ಸೋಜಿಗವಿದಲ್ಲ ಸಜ್ಜನರನುದ್ಧರಿಸುವುದು ನೈಜ ಜಗನ್ನಾಥ ವಿಠ್ಠಲನ ಪಾದ ರಾಜೀವಯುಗಳ ನಿವ್ರ್ಯಾಜದಲಿ ಭಜಿಪ ಪ್ರ ಯೋಜನನೊರೆದಿತರ ವ್ಯಾಪಾರ ತೊರೆದು 3
--------------
ಜಗನ್ನಾಥದಾಸರು
ತೆರಳಿದರು ಶ್ರೀ ಜಗನ್ನಾಥದಾಸಾರ್ಯರು ಸಿರಿಪತಿಯ ಸ್ಮರಿಸಿ ಹರಿಪುರಕೆ ಹರುಷದಲಿ ಪ ವರಶುಕ್ಲವತ್ಸರದ ಭಾದ್ರಪದ ಶಿತಪಕ್ಷ ಹರಿವಾರ ನವಮಿಯಲ್ಲಿ ಸುರಸಿದ್ಧ ಸಾಧ್ಯ ಸನ್ಮುನಿಗಣಾರ್ಚಿತ ಪಾದ ಹರಿಯೆ ಪರನೆಂದೆನುತಲಿ ಧರಣಿಯನು ತ್ಯಜಿಸಿ ಬಹುಮಾನಪೂರ್ವಕವಾಗಿ ಬೆರೆದು ಸುರಸಂದಣಿಯಲಿ ಪರಮಾರ್ಥವೈದಿ ಮನ ಹರಿಯ ಪಾದದಲಿಟ್ಟು ವರವಿಷ್ಣುದೂತ ವೈಮಾನಿಕರ ಒಡಗೂಡಿ 1 ಅತಿಪ್ರೇಮಿಗಳು ಹಸನ್ಮುಖರು ದಯೆ ಬೀರುವರು ಖತಿದೂರರಿವರು ಜಗದೀ ಮಿತಿಮೀರಿ ಶ್ರೀಹರಿಯ ಕಥೆ ನಾನಾ ಪರಿಯಲ್ಲಿ ಅತಿಶಯದಿ ಪೇಳಿ ಇಹಕೆ ಸತತವು ಶರಣರ್ಗೆ ಗತಿಯಾಗುವಂತೆ ಸ ತ್ವಥವಿಡಿಸಿ ಕರುಣದಿಂದ ಹಿತವಂತರೆನಿಸಿ ಸಮ್ಮತವಾಗಿ ಸರ್ವರಿಗೆ ಮತಿದೋರಿ ಕೊಟ್ಟು ಸದ್ಗತಿಯಗೋಸುಗವಾಗಿ 2 ಆಚರಣೆಯಲಿ ಒಂದರಘಳಿಗೆ ಬಿಡದೆ ಬಲು ಖೇಚರಾರೂಢ ಹರಿಯಾ ಸೋಚಿತಾರಾಧನೆಯ ಮಾಡಿ ಮರೆಯದಲೆ ಮಹಾ ವೈಚಿತ್ರ್ಯವನು ತೋರಿ ಈ ಚರಾಚರದಿ ಸಂಗೀತ ಸಾಹಿತ್ಯದಲಿ ಪ್ರಾಚಾರ್ಯವಂತರೆನಿಸೀ ಆ ಚತುರ್ದಶಭುವನಪತಿ ಶ್ರೀದವಿಠಲನ ಯೋಚನೆಯ ಬಿಡದೆ ಮಂಗಳ ಶಬ್ದವಾದ್ಯದಿಂ 3
--------------
ಶ್ರೀದವಿಠಲರು
ತೆರಳಿದರೋ ತಂದೆ ಮುದ್ದು ಮೋಹನರೂಮರಳಿ ಬಾರವ ಪುರಿ ನರಹರಿ ಪೂರಕೇ ಪ ತರಳತನಾರಭ್ಯ ದ್ವಾದಶ ವತ್ಸರಪರಿಸರಾಗಮ ಪಠಿಸಿ ನಿಪುಣನೆನಿಸೀ |ಇರಲು ಬಂದರು ಮುದ್ದು ಮೋಹನ್ನದಾಸರುಕರಿಗಿರಿ ನರಹರಿ ರಥವ ಉತ್ಸವಕೇ 1 ಕರಿಗಿರಿ ಸನಿಯದ ನರಸಿಪುರದೊಳಿದ್ದವರಸುಬ್ಬರಾಯಾಖ್ಯ ಭರದಿಂದ ಬರುತಾ |ಗುರು ಮುದ್ದು ಮೋಹನರ ಪದಪಾಂಸು ಶಿರದಲ್ಲಿಧರಿಸಿ ಬಿನ್ನವಿಸಿದರುಪದೇಶ ಕೊಂಡಿರೆಂದೂ 2 ಪರಿಕಿಸಲೋಸುಗ ಅರುಣ ಉದಯ ಮುನ್ನಕರಿಗಿರಿ ಪುರಬಿಟ್ಟು ತೆರಳಲು ಅವರೂ |ಭರದಿ ಅಡ್ಡೈಸುತ ಗುರುಪಾದದಲಿ ಬಿದ್ದುವರ ಉಪದೇಶವ ಕೈಗೊಂಡ ಧೀರಾ 3 ಶುಭ ಅಂಕಿತವಾ |ತಂದೆ ಮುದ್ದು ಮೋಹನ್ನ ವಿಠ್ಠಲನೆಂದುಛಂದೋಗಮ್ಯನೆ ದಿವ್ಯ ನಾಮವನಿತ್ತರು 4 ದಾಸ ದೀಕ್ಷೆಯ ಪೊತ್ತು ದಾಸ ಕೂಟವ ನೆರಸಿಶೇಷಗಿರೀಶನೆ ಸರ್ವೇಶನೆನುತಾಎಸೆವ ಅಂಕಿತ ಮಂತ್ರ ಉಪದೇಶಗೈಯ್ಯುತ್ತದಾಸರ ಕ್ಲೇಶವ ಹರಿಸೀದ ಗುರುವೇ 5 ವರಚೈತ್ರ ಪಂಚಮಿ ವರುಷವು ವಿಕ್ರಮಶರಣರ ಪೊರೆಯಲು ಕರಿಗಿರಿಯಲ್ಲೀ |ಗುರು ಮುಖ್ಯ ಪ್ರಾಣ ಪ್ರತೀಕವ ನಿಲಿಸುತಆರು ಮೂರನೆ ದಿನ ಹರಿಯ ಸೇರುವೆ ನೆನುತಾ 6 ನರಲೀಲೆ ಕೊನೆಗೈದು ಪರಮ ಪುರುಷಹರಿಶಿರಿಯರಸಗೆ ಪ್ರೀತೆ ಪಾತ್ರನೆನಿಪಾನೂ |ವರ ಗುರು ಗೋವಿಂದ ವಿಠಲನ ಚರಣವಸ್ಮರಿಸಿ ಹಿಗ್ಗುತ ಪೊರಟ ನೀರಿಕ್ಷಿಸುತಾ7
--------------
ಗುರುಗೋವಿಂದವಿಠಲರು
ತೊಡರು ಪ ತೊಡರು ನಿಮಗಳವಡದು ನಾನರಿವೆ 1 ಮೇಣದಹಿಕೋಟಿ ದಳ್ಳುರಿಯ ಗರುಡನ ಕೂಡಪ್ರಾಣದಿಂ ಕಾದಿ ಜಯಿಸುವುದೆ ಹೇಳಾಕ್ಷೋಣಿಯೊಳು ಕ್ಷೀಣದೈವ ಬ್ರಹ್ಮಾಂಡ ಕೋಟಿಗಳುದಾನವಾರಿಯ ದಾಸಗಳವಡವು ನಾನರಿವೆ 2 ಹುಲಿಯ ಮೀಸೆಯ ಪಾಶವಿಡಿದು ಗೋವತ್ಸಗಳುನಲಿದು ಉಯ್ಯಾಲೆಯನಾಡುವವೆ ಹೇಳಾಕಲಿ ಬಾಡದಾದಿಕೇಶವರಾಯ ಚಕ್ರದಲಿತಲೆಗಳನು ಚೆಂಡಾಡಿಸುವ ಕಾಣೊ ಬೇಡ 3
--------------
ಕನಕದಾಸ
ತೊರವಿ ನರಸಿಂಹನ ಸ್ತೋತ್ರ ನರಹರೀ | ಪಾಲಿಸೊ ಎನ್ನ | ನರಹರೀ ಪ ನರಹರೀ | ನಮಿಸೂವೆ ನಿನ್ನ | ಚಾರುಚರಣ ಕಮಲಕ್ಕೆ ಮುನ್ನ | ಅಹತೊರವಿ ಕ್ಷೇತ್ರದಲ್ಲಿ | ಪರಿಪರಿ ಭಕುತರಮೊರೆಯ ಕೇಳ್ಕರುಣದಿ | ವರವ ನೀಡುತಲಿಹ ಅ.ಪ. ಪೂರ್ವ ಸಾಲಿಗ್ರಾಮ ರೂಪ | ದಲ್ಲಿದೂರ್ವಾಸ ಪೂಜಿತ | ರೂಪ | ಇದ್ದುಓರ್ವ ಭಕ್ತನಿಗೆ ಸಲ್ಲಾಪ | ತೇಜಗೈವದ ಕೇಳ್ವದು ಅಪರೂಪ | ಅಹಊರ್ವಿಯೊಳ್ ಚಿಮ್ಮಲಗಿ | ಸರ್ವಾಧಿಕವು ಕ್ಷೇತ್ರಇರ್ವೆ ನಾನಲ್ಲೀಗ | ತರ್ವೋದು ತೊರವೀಗೆ 1 ಸೊಲ್ಲ ಲಾಲಿಸಿ ಗಾಢ ಭಕ್ತ | ಎದ್ದುಚೆಲ್ಲೀದ ವಾರ್ತೆ ಸರ್ವತ್ರ | ಜನರಲ್ಲಸ ಗೊಳದೆ ಮುಂದತ್ತ | ಹಸಿಹುಲ್ಲನು ತೆಂಕದಿಶಿಯಿತ್ತ | ಅಹಚೆಲ್ಲುತ ಪೋಗುತಿರೆ | ಜ್ವಲೀಸಿತದುಚಿಮ್ಮಲ್ಲಿಗಿ ಊರ್ಬಳಿ | ಒಳ್ಳೆ ಕೃಷ್ಣಾತೀರ 2 ಸ್ವಪ್ನ ಸೂಚಿತ ತಾಣ ಬಗೆದು | ನೋಡೆಅಪ್ಪ ನೃಹರಿ ಕಂಡನಂದು | ಭಕ್ತರಪ್ಪಿ ಆನಂದಾಶ್ರು ಬಿಂಧು | ಕೈಚಪ್ಪಾಳೆ ಬಡಿದುಘೇಯೆಂದು | ಆಹಅಪ್ಪಾರ ಮಹಿಮನ | ಗೊಪ್ಪಾದ ಘನಮೂರ್ತಿಉಪ್ಪರಿ ತಂದಿಡುತ | ದರ್ಪದಿ ನಿಂತರು 3 ಶಿರಿ ಹಾಗೂ ಪ್ರಹ್ಲಾದರಾಯ | ಯುಕ್ತಹಿರಣ್ಯಕನ ತನ್ನ ತೊಡೆಯ | ಮೇಲೆಇರಿಸಿ ಉದರ ಸೀಳ್ದ ಬಗೆಯ | ಕೇಳಿಕರುಳನು ಮಾಲೆಯ ಪರಿಯ | ಆಹಧರಿಸುತ್ತ ತೋರ್ದನು | ಹಿರಣ್ಯಕಶಿಪೂಜತರಳ ಭಕ್ತನ ತೆರ | ತರಳನರಿದಿಷ್ಟೆಂದು 4 ಶಿಷ್ಟ ಮತ್ಸ್ಯಾವತಾರ | ಯುಕ್ತಶ್ರೇಷ್ಠ ಪ್ರಭಾವಳಿಹಾರ | ಸುವಿಶಿಷ್ಟದಿ ನರ ಮೃಗಾಕಾರ | ನಾಗಿಅಷ್ಟವು ಭುಜಯುಕ್ತಾಕಾರ | ಆಹಶಿಷ್ಟ ಭಕ್ತರಿಂದ ಕಷ್ಟವಿಲ್ಲದೆ ತೆರಳಿಶ್ರೇಷ್ಠ ತೊರವಿಯಲ್ಲಿ ಇಷ್ಟನಾಗಿ ನಿಂದ 5 ಮುನ್ನಿದ್ದ ನೃಹರಿಯ ಶಿಲೆಯ | ಕೊಂಡುಚೆನ್ನ ತೀರ್ಥದಿ ನರಹರಿಯ | ಇಡಲುಕೃಷ್ಣೆಗೆ ಪೋಗುವ ಪರಿಯ | ಪೇಳೆಘನ್ನ ಮೂರ್ತಿಯ ಒಯ್ದ ಬಗೆಯ | ಆಹ ಇನ್ನು ಮುನ್ನು ಪೇಳ್ವ | ನನ್ನೆಯ ಜನರಿಹರು ಮನ್ನಿಸುತೀವಾರ್ತೆ ಚಿನ್ಮಯನ ಕೊಂಡಾಡಿ 6 ಗುಪ್ತಾವು ಗಂಗಾ ಸನ್ನಿಹಿತ | ತೀರ್ಥಉತ್ತಮ ದಿಂದಭಿಷೇಚಿತ | ನಾಗಿನಿತ್ಯವು ಪವಮಾನ ಸೂಕ್ತ | ಪಂಚಯುಕ್ತವು ಪೂಜಾದಿ ಕೃತ | ಆಹಭಕ್ತಿ ಪೂರ್ವಕವಾದ | ಉತ್ತಮ ಸೇವೆಯನಿತ್ಯ ಕೈಗೊಳ್ಳುತ | ಭಕ್ತರಭೀಷ್ಟದ 7 ಮಾಸ | ಎರಡುಉತ್ಸವ ವೈಭವ ಘೋಷ | ಕೇಳಿ ಕುತ್ಸಿತ ಜನರೊಲ್ಲ ಈಶ | ಅಂತೆ ಸಚ್ಛಾಸ್ತ್ರ ಪ್ರವಚನ ಪೋಷ | ಆಹವತ್ಸಾರಿ ದುರುಳನ | ಕುತ್ಸಿತ ಉದರವವಿಸ್ತ್ರುತ ನಖದಿಂದ | ಕುತ್ತಿದ ಚಿಂತಿಸು 8 ನರಹರಿ ನಾಮಕ ಕವಿಯು | ಇಲ್ಲಿತೊರವಿಯ ನರಹರಿ ಸನಿಯ | ಚೆಲ್ವವರರಾಮ ಕಥೆಯನ್ನು ಬರೆಯು | ಅವ - ಕುವರ ವಾಲ್ಮೀಕಿಯೆ ಮೆರೆಯು | ಆಹತೊರವೆ ರಾಮಾಯಣ | ವಿರಚಿತ ವಾಯ್ತಿಲ್ಲಿಹರಿಯನುಗ್ರಹ ಜಾತ | ವರ ಕವಿತೆ ಉಲ್ಲಾಸ 9 ಹೃದಯ ಗುಹೆಯಲ್ಲಿ ವಾಸ | ಉಪನಿಷದು ಪೇಳ್ವದು ಅಂತೆಲೇಸ | ಬಲುಮುದದಿಂದ ಮಾಳ್ಪದ ವಾಸ | ಅಂಥಬುಧಜನಕಹುದು ಸಂತೋಷ | ಆಹವಿಧವು ಈ ಪರಿಯೆಂದು | ವಿಧಿಸಲು ಜಗತೀಗೆಹದುಳದಿ ತೊರವಿ ಸ | ನ್ನಿಧಿ ಗುಹೆಯೊಳುವಾಸ 10 ವಿಭವ | ದಿಂದಲೀವನು ಮುಕ್ತಿಯ ಸುಖವ | ಈತಕೈವಲ್ಯಾಕಧಿಪತಿ ಇರುವ | ಆಹತಾವಕನಾಗಿ ಗುರು | ಗೋವಿಂದ ವಿಠಲನಭಾವದಿ ನೆನೆವಂಗೆ | ತೀವರ ವರವೀವ11
--------------
ಗುರುಗೋವಿಂದವಿಠಲರು
ತೋರವ್ವಾ ಕೇಳದೀ ಶ್ರೀನಿಧಿಯಾ|ಕಾರುಣ್ಯಂಬುಧಿಯಾ ಪ ಹರಿಯಾ ಸಕಲ ಜಗಧೊರಿಯಾ|| ಸುರಮನಿ ಜನಸಿರಿಯಾ|ಅನಂತಾನಂತ ಚರಿಯಾ| ಕರುಣ ಹೊಕ್ಕಾಕರಿಯಾ| ಕೇಳುತ ಘನ ಮೊರಿಯ ಬಂದೊದಗಿದಧೊರಿಯಾ 1 ಸ್ಮರನಾ ಲಾವಣ್ಯಾ ಮಂದಿರನಾ| ಸಿರಿದೇವಿ ಮನೋಹರನಾ ಪರಕ ಪರಾತ್ಪರನಾ| ಶಂಖಚಕ್ರದ ಕರನಾ| ಸಾರಥಿಯಾದಾ ನರನಾ|ಪೀತಾಂಬರ ಧರನಾ 2 ನಂದಾನಂದನ ಶ್ರೀ ಮುಕುಂದಾ| ದೀನವತ್ಸಲದಿಂದಾ|ಹೊರಿಯಲಯನ್ನದೊಂದಾ| ನೋಡದೇ ಮುನ್ನಿನ ಕುಂದಾ| ಗುರು ಮಹೀಪತಿ ಪ್ರಭುಬಂದಾ ನೀಡಿದಾನಂದಾ|| 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಯದಿಂದಲಿ ನೋಡೊ ಎನ್ನಾ ಹಯವದನ್ನಾ ಶ್ರೀಹರಿ ಪ ವರಗಳ ನೀಡಿ ಅ.ಪ. ಭಕುತದಿ ಕೂಡಿ ಆಡುವೆ ನೀ ನಿತ್ಯ ಸುಜನರಿಗೆ ಕಾಡಿ ಕೆಣಕುವ ಈ ಖೋಡಿ ಅನುದಿನ ಸಾಮಗಾನ ಪ್ರೇಮಾ ಬ್ರಹ್ಮಾದಿಗಳಿಗೆ ಕಾಮಿತಪ್ರದ ರಾಮಾ ಪರಿಪೂರ್ಣ ರಾಮಾ 1 ಶಾಮಸುಂದರ ಶಕಟಾಸುರಮರ್ದನ ಸಾಮಜವರದನೆ ಮಾತುಳಾಂತಕ ಮದನ ಜ£ಕÀನೆ ಕರುಣಿಸಿ ಎನ್ನನು 2 ಏನು ಬಲ್ಲೆನು ನಾನು ನಿನ್ನ ಮಹಿಮೆಯನ್ನು ದೀನ ಸುರಧೇನು ಬಣ್ಣಿಸಲಳವೆ ನಿನ್ನ ಮಹತ್ತನ್ನು ಮುನಿಮೌನಿವರರಿಂದ ಅನಘನೆನಿನ್ನಮಿತ ಗುಣಗಣನ ಕಾಣದೆ ಲಕುಮಿ ಮನದಲ್ಲಿ ಅನುವು ತಪ್ಪೆ ನಿತ್ಯ 3 ಹಾಟಕಾಂಬರಧರ ಶ್ರೀವತ್ಸಲಾಂಛನ ಜಟಾಮಕುಟ ಕುಂqಲ ಕೈಟಭಾಂತಕನೆ ಕಡಲಮಂದಿರ ಕುಟಿಲ ಕಟುಮತಿ ಖಳರನು ಶಿಕ್ಷಿಸಿ ಕೈಯ್ಯ ಬಿಡದೆ ಎನ್ನಾ ಮಾನಿಧಿವಿಠಲ ಕಾಲಿಗೆ ಬೀಳುವೆ 4
--------------
ಮಹಾನಿಥಿವಿಠಲ
ದಯಮಾಡೋ ರಂಗ ಹೇ ಕೃಪಾಂಗ ಪ ದಯಮಾಡಿ ನೀಯೆನ್ನ ಭಯವ ಪರಿಹರಿಸು ಚಿ- ನ್ಮಯ ಮೂರುತಿ ಸುಖಮಯ ಮಂದರಧರ ಅ.ಪ. ಪತಿತ ಪಾವನ ನೀನು ಪತಿತಾಗ್ರೇಸರ ನಾನು ಜತನದಿ ಭಕುತಿಯ ಪಥವ ತೋರಿ ನೀನು 1 ಮುಕ್ತಿ ಫಲಪ್ರದ ಶಕ್ತಿಯು ನಿನ್ನ ವ್ಯತಿರಿಕ್ತವಲ್ಲವೆಂದು ಭಕ್ತಿಯುವರವಳು...[?] 2 ಕಾಮಧೇನು ನೀನು ಕಾಮನಯ್ಯನು ನೀನು ಕಾಮಿತಫಲದಾತ ಮಾಮನೋಹಕ ತ್ರಾತ 3 ಸೃಷ್ಟಿಪಾಲಕ ನಿನ್ನ ಯಷ್ಟೆಂತವರ್ಣಿಪೆ ಅಷ್ಟು ಕರ್ತೃತ್ವಕ್ಕೆ ಶಿಷ್ಟಮೂರುತಿ ನೀನೆ 4 ಭಾರಿಭಾರಿಗೆ ನಿನ್ನ ಆರಾಧಿಸುವರ ಚಾರುಚರಣವನು ತೋರೊ ಮಾರಜನಕ 5 ಸಕಲಕ್ಕು ನೀ ಮುಖ್ಯ ಶಕಟಭಂಜನ ಕೇಳು ಪ್ರಕಟನಾಗಿಯೆನಗೆ ಶಕ್ತಿಯ ನೀಡೋ6 ಭೂವಲಯದೊಳು ನಾ ಆವಲ್ಯಪೋಗಲು ಕಾವಲು ನೀನೇ ಶ್ರೀವತ್ಸಾಂಕಿತನೇ 7
--------------
ಸಿರಿವತ್ಸಾಂಕಿತರು
ದಶರಥರಾಮಹರೆ ಸೀತಾಪತೆ ದಶರಥರಾಮ ಸುಧಾಕರವದನ ¥ರಶುರಾಮ ಬಾಹುಪರಾಕ್ರಮ ಜಿತಶ್ರೀ ಪ ಸುರಮುನಿ ಸೇವಿತ ಶುಭಕರ ಚರಿತ ಕೌಸ್ತುಭ ಶೋಭಿತ ವರ ವಿಶ್ವಾಮಿತ್ರಾಧ್ವರ ಪರಿಪಾಲನ ಖರ ದೂಷಣ ರಾಕ್ಷಸ ಬಲ ಖಂಡನ 1 ವಾಲಿ ಮರ್ದನ ಭಕ್ತವತ್ಸಲ ಮಾಧವ ವಿನುತ ಪಾದ ಪದ್ಮ ನೀಲ ನೀರದ ಸನ್ನಿಭಗಾತ್ರ ಪರಮ ದಯಾಳು ನಾರಾಯಣ ಲೀಲಾ ಮಾನುಷ ವೇಷ 2 ಸಿಂಧು ಬಂಧನ ಪಂಕ್ತಿ ಕಂಧರಾಂತಕ ಗೋವಿಂದ ಮುಕುಂದಾರ ವಿಂದೋದರ ಇಂದಿರಾಧಿಪ ಶ್ರೀ ಹೆನ್ನೆಪುರ ನಿಲಯಾ ನಂದ ವಿಗ್ರಹ ಜಗದ್ವಂದ್ಯ ಮಂದಹಾಸ 3
--------------
ಹೆನ್ನೆರಂಗದಾಸರು
ದಾಮ ಶೋಭಿತ ವಿಠಲ | ಸಾಮ ಸನ್ನುತನೇ ಪ ಪ್ರೇಮದಿಂದಿವಳ ಮನ | ಕಾಮ ಪೊರೈಸೋ ಅ.ಪ. ಯೇಸೊ ಜನ್ಮದ ಪುಣ್ಯ | ರಾಶಿ ಫಲ ಒದಗುತಲಿದಾಸತ್ವ ದೀಕ್ಷೆಯನು | ಆಶಿಸುತ್ತಿಹಳೋ |ದಾಸವರ್ಯರು ವಿಜಯ | ದಾಸರುತ್ಸವದಿ ಸಂ-ತೋಷದಲಿ ಬಿನ್ನಹವ | ಲೇಸು ಗೈದಿಹಳೋ 1 ಸಾರ ಚಾರು ಮೂರುತಿಯೇ 2 ಆನಂದ ಮುನಿ ಮತದಿ | ಸ್ವಾನುಭವ ದೀಕೆಯನುಜ್ಞಾನ ಭಕ್ತ್ಯಾದಿ ಸಂ | ಧಾನ ತಿಳಿಸುತಲೀ |ಮಾನನಿಧಿ ಕೈ ಪಿಡಿದು | ದೀನಳನು ಪೊರೆಯೆಂದುಪ್ರಾಣ ಪ್ರಾಣನೆ ಬೇಡ್ವೆ | ದೀನ ವತ್ಸಲನೇ 3 ಸಾಧನದಿ ಸತ್ವತೆಯ | ಹಾದಿಯಲ್ಲಿಹಳೀಕೆಸಾಧುಗಳ ಕಂಡು ಹೃದ | ಯಾದ್ರ್ರ ಭಾವದಲೀ |ಮೋದ ಬಡಿಸುತ ಸೇವೆ | ಶ್ರೀಧರನಿಗರ್ಪಿಪಳುಹೇ ದಯಾಂಬುಧೆ ಸಲಹೊ | ಸಾಧು ಜನ ವಂದ್ಯಾ 4 ಸರ್ವಕಾಲವು ದೇಶ | ಸರ್ವಗುಣದ್ರವ್ಯದಲಿದುರ್ವಿಭಾವ್ಯನ ವ್ಯಾಪ್ತಿ | ಸ್ಛುರಣೆಯನು ಕೊಡುತಾ |ಸರ್ವಾಂತರಾತ್ಮಗುರು | ಗೋವಿಂದ ವಿಠ್ಠಲನೆದರ್ವಿ ಜೀವಿಯ ಹೃದಯ | ಗಹ್ವರದಿ ತೋರೋ 5
--------------
ಗುರುಗೋವಿಂದವಿಠಲರು