ಒಟ್ಟು 2968 ಕಡೆಗಳಲ್ಲಿ , 112 ದಾಸರು , 1882 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನ ಬೇಡಲೊ ನಿನ್ನ ದೇವಾಧಿ ದೇವ ಪ ಏನಹುದೊ ನಿನ್ನೊಳಗೆ ಮಹಾನುಭಾವ ಅ.ಪ ವನಧಿ ಹಾಸಿಗೆಯು ವಟಪತ್ರವನಿತೆಯರ ಬೇಡಲೆ ಬ್ರಹ್ಮಚಾರಿಘನ ಸಖ್ಯವನು ಬಯಸೆ ನೆನೆಯುವರ ಮನದಲಿಹೆತಿನುವುದಕೆ ಕೇಳುವೆನೆ ನವನೀತಚೋರ 1 ಒಡವೆಗಳ ಬಯಸೆ ಶಿಖಿಪಿಂಛ ತುಳಸಿ ಪತ್ರಕಡು ಸೈನ್ಯವನೆ ಬಯಸೆ ಗೋಪಾಲನುಬಿಡದೆ ರೂಪವÀ ಬಯಸೆ ನೀಲಮೇಘಶ್ಯಾಮಉಡುವುದಕೆ ಕೇಳುವೆನೆ ಸ್ತ್ರೀವಸನ ಚೋರ 2 ಶಕ್ತಿಯನು ಗೋಪಿಕಾ ಸ್ತ್ರೀಯರಲಿ ವ್ರಯಗೈದೆಭಕ್ತಿಯನು ಸತ್ಯವಂತರಿಗಿತ್ತಿಹೆಭಕ್ತರನು ವಂಚಿಸುತ ನೀನು ಬಚ್ಚಿಟ್ಟಿರುವಮುಕ್ತಿ ಕಾಂತೆಯ ಕೊಡು ಸುಖಿಪೆನೊ ಶ್ರೀಕೃಷ್ಣ3
--------------
ವ್ಯಾಸರಾಯರು
ಏನಂತ ನರನೆನ್ನಬೇಕೋ ಜಾನಕೀಶನ ಧ್ಯಾನ ಮನದೊಳಿಲ್ಲದವಗೆ ಪ ಸುಕೃತ ಒಡಗೂಡಿ ಮಾನವನಾದದ್ದು ಖೂನವಿನತಿಲ್ಲದೆ ಜ್ಞಾನಶೂನ್ಯನಾಗಿ ಶ್ವಾನನಂದದಿ ಕೂಗಿ ಹೀನಭವಕೆ ಬಿದ್ದು ನರಕಕ್ಹೋಗುವನಿಗೆ 1 ತಾನಾರೆಂಬ ವಿಚಾರವು ಇಲ್ಲದೆ ಏನೇನು ಸುಖವಿಲ್ಲದ್ಹೇಯಸಂಸಾರದ ಕಾನನದೊಳು ಬಿದ್ದು ಕುನ್ನಿಯಂದದಿ ಮಹ ಜಾಣರ ಜರೆಯುತ ಜವಗೀಡಾಗುವನಿಗೆ 2 ಹೇಸಿಪ್ರಪಂಚದ ವಾಸನ್ಹಿಡಿದು ಹಿಂದ ಕ್ಕೇಸೇಸು ಜನಮದಿ ಘಾಸಿಯಾದಂಥಾದ್ದು ಸೋಸಿಲಿಂ ತಿಳಕೊಂಡು ದಾಸಾನುದಾಸರ ದಾಸನಾಗದೆ ಕಾಲಪಾಶಕ್ಹೋಗುವನಿಗೆ 3 ಮಿಥ್ಯೆ ಕಾಣುವುದೆಲ್ಲ ನಿತ್ಯವಲ್ಲೆನ್ನುತ ಸತ್ಯವೃತ್ತಿ ತನ್ನ ಚಿತ್ತದೋಳ್ಬಲಿಸಲು ನಿತ್ಯ ಸುಖವನೀವ ಉತ್ತಮವಾದಂಥ ಹೊತ್ತನು ಕಳಕೊಂಡು ಮೃತ್ಯುವಶನಾಗುವಗೆ 4 ಸುಮನಸಕಲ್ಪದ್ರುಮ ತಂದೆ ಶ್ರೀರಾಮ ನಮಿತ ಚರಣ ಕಂಡು ನಮಿಸಿ ಪ್ರಾರಬ್ದವ ಕ್ರಮದಿ ಗೆಲಿದು ನಿಜ ವಿಮಲಪದ ಪಡೆವ ಸಮಯವನರಿಯದೆ ಯಮಲೋಕ ಸೇರುವಗೆ 5
--------------
ರಾಮದಾಸರು
ಏನಬೇಡಲೊ ಕೃಷ್ಣ ನಾಚಿಕಿಲ್ಲದೆ ಪ ಜ್ಞಾನಶೂನ್ಯನಾಗಿ ಬಹಳ ಹೀನ ಕಾರ್ಯ ಮಾಡಿ ನಾನು ಅ.ಪ. ಪರರ ವನಿತೆ ಧನಗಳಿಂಗೆ ಅರಿತು ಅರಿತು ಆಶೆಪಡುತ ದುರಿತಕೋಟಿಗಳನು ಮಾಡಿ ಪರಮ ನೀಚನೆನಿಸಿದವನು 1 ವನಗಳನು ಕಡಿಸಿ ಹಿರಿದು ಮನೆಗಳನ್ನು ರಚಿಸಿಕೊಂಡು ವನಿತೆ ಮಾತು ಕೇಳಿ ಜನನಿ ಜನಕರನ್ನು ತೊರೆದ ಪಾಪಿ 2 ಸತ್ಯ ಮತವನು ತುಚ್ಛಗೈದು ನಿತ್ಯಕರ್ಮಗಳನು ಬಿಟ್ಟು ಮತ್ತನಾಗಿ ತಿಂದು ಮಲಗಿ ಕತ್ತೆಯಂತೆ ಹೊರಳುವವನು 3 ಆರ್ತರಾದ ಜನರ ಸಲಹಿ ಕೀರ್ತಿಯನ್ನು ಹೊಂದಿ ದೇಹ ಸಾರ್ಥಕವನು ಮಾಡಿಕೊಳದೆ ಧೂರ್ತನೆನಿಸಿಕೊಳುವ ನರನು 4 ವಾಸುದೇವ ಸಕಲ ದೋಷ ರಾಸಿಗಳನು ದಹಿಸುವ ರಂ- ಗೇಶವಿಠಲರೇಯ ನಿನ್ನ ದಾಸನೆಂದು ಪೇಳದವನು 5
--------------
ರಂಗೇಶವಿಠಲದಾಸರು
ಏನಾರಿಸುವಿ ಹರಿಯೇ ಎನ್ನವಗುಣಾ ಅನಂತಾನಂತ ತಪ್ಪು ಮಾಡಿದ ಪಾಮರೊಳೇನಾ ಪ ಉದಯ ಉದ್ಯೋಗನೆನುವೆ ಮಧ್ಯಾಹ್ನಕ ಕ್ಷುಧೆ ತೃಷೆಯಲ್ಲಿ ದಣಿವೆ ಇರುಳಿಗಿನ್ನು ವದಗಿ ನಿದ್ರೆ ಯನುವೆ ಇದರೊಳು ನಿನ್ನ ನಾಮನೆನೆಯದೆ ದಿನಗಳೆದೇನಾ 1 ನಿನ್ನ ಕಥೆಯಾ ಕೇಳದೇ ಮಂಗಳಂಗುಟ ಕಣ್ಣಿನೊಳಿಟ್ಟು ನೋಡದೇ ಸರ್ವಾಂಗದಿ ಚೆನ್ನಾಗಿ ಮಾಡದೇ ಎನ್ನ ಕಾಯವು ಸತಿಸುತರಿಗೆ ಮಾರಿದೇನಾ 2 ಹರಿ ಭಕ್ತಿ ಮುದ್ರೆ ಧರಿಸೀ ಹೆಮ್ಮಿಲಿ ದುರಾಚರಣೆ ಮಾಡಿದ ಕ್ಷಮಿಸೀ ಸತ್ಸಂಗದಿ ಅರಿವಿಗೆ ಮನನೀಲಿಸೀ ಹೊರೆವದು ಗುರು ಮಹಿಪತಿಸ್ವಾಮಿ ಕರುಣಿಸಿ ಎನ್ನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನಿದು ಕೌತುಕವೋ ವಿಠಲಾ ಏನಿದು ಕೌತುಕವೋ ಪ ಏನಿದು ಕೌತುಕ ಪಂಢರಿಯನೆ ಬಿಟ್ಟು ನೀನಿಲ್ಲಿಗೆ ಬಂದ್ಯ ವಿಠಲಾ ಅ.ಪ. ಮಿಥ್ಯಾವಾದಿಗಳು ನಿನ್ನ ಸುತ್ತುಮುತ್ತಿಕೊಂಡು ಅತ್ತು ಕರೆದು ಕೂಗುತ್ತಿರೆ ಬಹು ಬ್ಯಾಸತ್ತು ಬಂದೆಯಾ ವಿಠಲ 1 ಮಧ್ವದ್ವೇಷಿಗಳು ಮಾಡುವ ಪದ್ಧತಿಯನು ಕಂಡು ಹೃದ್ಯವಾಗದೆ ಕದ್ದ ಕಳ್ಳನಂತೆದ್ದು ಇಲ್ಲಿಗೆ ಬಂದ್ಯಾ ವಿಠಲಾ 2 ಶ್ರೀzವಿಠಲ ನಿಮ್ಮ ಸದ್ಗುಣ ವೇದಶಾಸ್ತ್ರದಲ್ಲಿ ಬಂದ್ಯಾ ವಿಠಲಾ 3
--------------
ಶ್ರೀದವಿಠಲರು
ಏನಿದು ಚಿತ್ರ ಎಲೋ ಕಂಜನೇತ್ರ ಪ ದೀನನು ನಾನೆಂದು ದಿನ ದಿನ ಮೊರೆಯಿಡೆ ನೀನು ಮಾಡಿದ ಕರ್ಮವೆಂದು ತಪ್ಪಿಸಿಕೊಂಬ ಅ.ಪ ಮಾನಸದಲಿ ಸಾಕ್ಷಿಯಾಗಿ ನೀನಿಲ್ಲವೇ 1 ಯುಕುತಿ ಮಾತು ಇದಲ್ಲ ವೇದಶಾಸ್ತ್ರ ಪ್ರಮಾಣ2 ಸತ್ಯ ಸಂಕಲ್ಪನೆಂದು ಪೇಳುವರೆಲ್ಲರು ಭೃತ್ಯರ ಸಲಹದ ಪ್ರಭುತ್ವವೇತಕೆ ನಿನಗೆ 3 ದೇವ ನಿನ್ನ ಚಿತ್ತವೋ ಎನ್ನ ಪುರಾಕೃತವೋ 4 ಕರಣಾಭಿಮಾನಿಗಳಿಗೊಡೆಯ ನೀನಲ್ಲವೇ 5 ಭಾವ ಕೊಡುವುದಕೆ ಬಡತನವೆ ನಿನಗೆ 6 ನೀನೆ ಸರ್ವ ಸ್ವತಂತ್ರ ಗುರುರಾಮ ವಿಠಲ 7
--------------
ಗುರುರಾಮವಿಠಲ
ಏನಿದು ಮಹದಪರಾಧ ಮಾಡಿದೆ ನಾನು ನಿನ್ನವರನೆ ನಿಂದಿಸಿದೆ ತಿಳಿಯದಭವ ದೇವ ಪ ಜ್ಞಾನವಿಡಿದಿ ನೋಡದೆ ತುಸು ಏನುಕಾಣದೆ ನಾನಾಪರಿಯಲಿ ಶ್ವಾನನಂದದಿ ಚೀರುತ್ಹಾರುತ ಹೀನವಾಚಗಳ್ವಾಚಿಸಿದೆನೋ ಅ.ಪ ತತ್ತ್ವದರ್ಥಕರಾಗಿ ಗುಪ್ತದಿಂದಿರ್ವವರ ನರ್ತುನೋಡದೆ ಅನರ್ಥವಾಡಿದೆನೋ ಪ್ರಭೋ ಮತ್ರ್ಯಗುಣಗಳ ಮರ್ತುಬಿಡದೆ ನಿರ್ತಮಾನಿಸರ ಗುರ್ತುತಿಳಿಯದೆ ಕತ್ತೆಯಂತೊದರುತ್ತ ಸತ್ಯರ ಕೃತ್ತಿಮರೆಂದೆನುತ ಜರಿದೆ 1 ಮೀನು ಜಿಹ್ವೆಯ ರುಚಿಗಾ ಗೇನು ತಿಳಿಯದೆ ಪೋಗಿ ಗಾಣ ಸೆಳೆದುನುಂಗಿ ಪ್ರಾಣಕೊಟ್ಟಂತೆ ಹರಿಯೆ ಗಾನಲೋಲನ ಮನದೊಳಿಟ್ಟು ಧ್ಯಾನಿಪ ಕೋವಿದಸುಜನರ ಖೂನವಿಲ್ಲದೆ ಮನಕೆ ಬಂದಂತೆ ಕಾಣದಂಧಕನಂತೆ ಜರಿದೆ 2 ನಿನ್ನಿಂದೆ ನಾ ಬಂದೆ ನೀನೆನ್ನ ತಂದೆ ಮುಂ ದಿನ್ನಿಂಥ ದುರ್ಮತಿಯನ್ನು ಕೊಡದಿರೊ ರಂಗ ನಿನ್ನ ದಾಸರೊಳಿಟ್ಟು ಅನುದಿನ ಭಿನ್ನವಿಲ್ಲದೆ ರಕ್ಷಿಸಯ್ಯ ನಿನ್ನ ಚರಣದಾಸರ ನಾಮ ಪನ್ನಂಗಶಾಯಿ ವರ ಶ್ರೀರಾಮ 3
--------------
ರಾಮದಾಸರು
ಏನು ಖೋಡ್ಯಾದಲ್ಲೋ ಸಂಸಾರ ನಾನು ನೋಡಿದ್ದಿಲ್ಲ ಪ ಏನು ಖೋಡಿದು ವಿಚಾರ ತಪ್ಪಿಸಿ ಎನ್ನ ಶ್ವಾನದಂದದಿ ಖೂನವಿಲ್ಲದೆ ಕೂಗಿಸಿತೇನು ಅ.ಪ ತಾನೆ ನಿಜವಿಲ್ಲ ಎನ್ನನು ಏನು ಕೆಡಿಸಿತಲ್ಲ ನಾನಾಪರಿಲಿ ಮಾಯಮೋಹದಿ ಮುಳುಗಿಸಿ ಜ್ಞಾನ ಕೆಡಿಸಿ ಹೀನಬವಣೆಗೆ ತಂದಿತ್ತು 1 ಕನಸಿನಪರಿಯಂತೀಜಗಸುಖ ಕ್ಷಣಹೊತ್ತಿನ ಸಂತಿ ಇನಿಸು ತಿಳಿಗೊಡದೆನ್ನ ಮನಸು ಸೆಳೆದುಕೊಂಡು ಕುಣಿಸಿ ಕುಣಿಸಿ ಮಹ ನರಕಿಯೆನಿಸಿತ್ತು 2 ಸತ್ಯಮಾರ್ಗ ಮರೆಸಿ ಎನ್ನನಸತ್ಯಮಾರ್ಗಕೆಳಸಿ ನಿತ್ಯನಿರ್ಮಲನ ಸತ್ಯ ಚರಿತೆಗಳ ಗುರ್ತು ತಿಳಿಸದೆಮಮೃತ್ಯುತೀಡೆನಿಸಿತ್ತು3 ಮರವೆಯು ಮುಚ್ಚಿತ್ತು ಭವಪಾಶ ಕೊರಳಿಗೆ ಹಾಕಿತ್ತು ಅರಿವಿನ ಕುರುಹನು ತೋರಿಸದೆ ಪರದಿರವು ಮರೆಸಿ ಧರೆಭೋಗ ಅಹುದೆನಿಸಿತ್ತು 4 ನೇಮನಿತ್ಯಕೆಡಿಸಿ ಎನಗೆ ಶ್ರೀರಾಮಪಾದಮರೆಸಿ ಕಾಮಿಸಬಾರದ ಕಾಮಿತಗಳಿಂದ ಪಾಮರನೆನಿಸೆನ್ನ ಕೊಲ್ಲುತಲಿತ್ತು 5
--------------
ರಾಮದಾಸರು
ಏನು ಗತಿ ಎನಗಿನ್ನು ಏನು ಗತಿಯೋ ನೀನು ಸಿರಿ ಕೃಷ್ಣ ಪ ಕಾಯ ಮೊದಲಾದ ಬದುಕುಗಳೆಲ್ಲ ಸ್ಥಿರತರಗಳಲ್ಲೆಂದು ತೋರಿಸಲು ಪರಮ ಭಕುತಿಯು ಪುಟ್ಟಿ ಮೊದಲೆ ನಾ ನಿನ್ನ ಪದ ಮರೆದು ಬಿಡುವೆನು ತಡಿಯದೇ ಕರುಣಿ 1 ಹೀಗೆ ತೋರದೆ ಪೋದರೆ ಎನಗೆ ಹಂಬಲವು ಆಗುವುದು ಸತ್ಯಲೋಕಗಳ ತನಕ ಭೋಗಗಳು ಕೊಟ್ಟರೆ ಮರೆವೆ ಅದರಿಂದ ನಾ ಕೂಗುವೆನು ಕೊಡದಿದ್ದರೆ 2 ಪಾಮರನ ಮಾಡಲೆನ್ನನು ತಿಳಿಯದಲೇವೆ ಸೀಮೆ ಇಲ್ಲದ ಪಾಪ ಮಾಡುವೆನೊ ಪ್ರೇಮದಲಿ ಪಾಂಡಿತ್ಯ ನೀಡಿದರೆ ಭಕುತ ಜನ ಸ್ತೋಮ ನಿಂದಿಸುವೆನಯ್ಯಾ 3 ಧನದಿಂದ ಹೀನನ್ನ ಮಾಡೆ ಲೋಕದಲಿನ್ನು ಜನರು ಕೊಡುವುದು ಎಲ್ಲ ಎನಗೆ ಕೊಡಲೆಂಬೆ ಧನವು ನೀ ಕೊಡಲು ಬಲು ಮದದಿಂದ ಕೆಟ್ಟು ಸ- ಜ್ಜನಕೆ ಕಾಸೊಂದು ಕೊಡಿನೊ 4 ಏಸು ಪರಿಯಲಿ ಪೇಳಿದರು ಕೇಳೆನ್ನ ನಿಜ ವಾಸನಿಯು ತನಗೆ ತಾನಿಟ್ಟಾಹದೈ ವಾಸುದೇವವಿಠಲ ನೀ ಎನ್ನಯ ಮನದಲ್ಲಿ ವಾಸವನು ಮಾಡಿ ಬೋದÉೈಸದನಕೆÀ5
--------------
ವ್ಯಾಸತತ್ವಜ್ಞದಾಸರು
ಏನು ತಿಳಿವುದೋ ಮೂರ್ಖರಿಗೇನು ತಿಳುವುದೋತಾನೇ ತಾನಾದ ತತ್ವವ ಹೇಳಲು ತನ್ನ ತಲೆಯನು ತೂಗುತಿರುವಗೆ ಪ ಮಂಕರಿ ಹೊರುವ ಕೋಣನ ಮುಂದೇ ಮಹಾವೀಣೆಯನು ಹಿಡಿದುಕಿಂಕಿಣಿ ಕಿಣಿ ಕಿಣಿ ಎಂದು ಬಾರಿಸೆ ತಿಳಿಯುವುದೇಓಂಕಾರದ ಮಹಿಮೆಯನು ಒಲಿದು ಹಿರಿಯರು ಹೇಳುತಿರಲುತಂಕದಿ ಕೇಳುತ ಹೋ ಹೋ ಎಂದು ತಲೆಯನು ತೂಗುವರಿಗೆ1 ಮೂಟೆಯ ಹೊರುವ ಕತ್ತೆಯ ಮೂಗಿಗೆ ಮಘ ಮಘಿಪ ಕಸ್ತೂರಿಯ ಹಚ್ಚಲುಗಾಳಿಯ ಪರಿಮಳ ಸುಗಂಧಗಳ ಅದು ತಿಳಿಯುವದೇಲಾಲಿಪ ಬ್ರಹ್ಮಾನಂದದ ಲಕ್ಷಣ ಲಕ್ಷ್ಯವ ಹಿರಿಯರು ಹೇಳುತಿರಲು ಕೇಳಿದಾಗಲೇಹೋ ಹೋ ಎನ್ನುತ ತಲೆಯ ತೂಗುವವರಿಗೆ 2 ಸತ್ಯಾನಂದರೆ ಅವರೇ ಗುರುಗಳು ಸತ್ಯ ಸಂಧರು ಅವರೇ ಭಕ್ತರುಸತ್ಯ ಜ್ಞಾನವ ತಿಳಿಯಲಿಕೆ ಅವರೇ ಯೋಗ್ಯರುಸತ್ಯವಸ್ತು ಚಿದಾನಂದ ಸಾಕ್ಷಾತ್ ರೂಪವೇ ಹೇಳುತಿರಲುಚಿತ್ತದಿ ಕೇಳು ಹೋ ಹೋ ಎಂದು ತಲೆಯ ತೂಗುವರಿಗೆ 3
--------------
ಚಿದಾನಂದ ಅವಧೂತರು
ಏನು ಬರುವುದೊ ಸಂಗಡೇನು ಬರುವುದೊ ಪ ದಾನ ಧರ್ಮ ಮಾಡಿ ಬಹು ನಿಧಾನಿ ಎನಿಸಿಕೊಳ್ಳೊ ಮನುಜಅ ಮಂಡೆ ತುಂಬ ಬಂಧುಬಳಗಕಂಡು ಬಿಡಿಸಿಕೊಂಬರಾರೊ ದುಂಡ ಯಮನ ದೂತರೆಳೆಯೆಬಂಡಿ ತುಂಬ ಇದ್ದ ಧನವು ಹಿಂದೆ ಉಳಿವುದಲ್ಲೊ ನಿನ್ನಅಂಡಿಕೊಂಡು ಬರುವ ವಸ್ತು ಕೀರ್ತಿ ಅಪಕೀರ್ತಿ ಎರಡೆ1 ಎನ್ನದೆಂದು ತನ್ನದೆಂದು ಹೊನ್ನು ಹೆಣ್ಣು ಮಣ್ಣಿಗಾಗಿಬನ್ನಪಟ್ಟು ಬಾಯಿಬಿಡುವೆ ಬರಿದೆ ಮೋಹದಿಚೆನ್ನ ಮನದಿ ಪರಹಿತಾರ್ಥ ಮಾಡಿ ಪುಣ್ಯಪಡೆಯೊ ನೀನುಇನ್ನು ಮುಂದೆ ಕಿತ್ತು ತಿಂಬ ಕೂಪದಲ್ಲಿ ಕೆಡಲು ಬೇಡ ಮನುಜ2 ಬತ್ತಲಿಂದ ಬರುತ್ತಿಹರು ಬತ್ತಲಿಂದ ಹೋಗುತಿಹರುಕತ್ತಲೆ ಕಾಲವನು ಬೆಳಕು ಮಾಡಿ ಹೊತ್ತುಗಳೆವರುಸತ್ತರಿಲ್ಲ ಅತ್ತರಿಲ್ಲ ಹೊತ್ತುಕೊಂಡು ಹೋಹರಿಲ್ಲಿಮತ್ತೆ ದೇಹ ಮಣ್ಣುಗೂಡಿದಂತೆ ಕೆಡಲು ಬೇಡ ಮನುಜ3 ಬಟ್ಟೆ ನಿನಗೆ ಹೊಂದಲಿಲ್ಲಕಟ್ಟ ಕಡೆಗೆ ದೃಷ್ಟಿ ನೋಟ ಬಟ್ಟ ಬಯಲು ಆಗುತಿಹುದು 4 ಕಾಲ ಕಳೆದೆ - ಮುಂ-ದರಿದು ನೋಡು ನರರ ತನುವು ದೊರಕಲರಿಯದುನೆರೆ ಮಹಾಮೂರ್ತಿ ಒಡೆಯ ಬಾಡದಾದಿಕೇಶವನಲಿಟ್ಟು ಭಕುತಿಚರಣ ಭಜಿಸಿ ಚಂಚಲಳಿಸಿ ವರವ ಪಡೆದು ಹೊಂದು ಮುಕುತಿ 5
--------------
ಕನಕದಾಸ
ಏನು ಸುಕೃತವ ಮಾಡಿದಳೊ ಯಶೋದೆಶ್ರೀನಿಧಿಯಾದ ಕೃಷ್ಣನ್ನ ಕರೆದು ಮುದ್ದಿಸುವಳಂತೆಪ ಗಂಗಾಜನಕನಿಗೆ ಗಡಿಗೆನೀರೆರೆವಳಂತೆಮಂಗಳಾಂಗಗೆ ಭಾಮೆ ಶೃಂಗರಿಸುವಳಂತೆತುಂಗ ಭೂಧರನ್ನ ತೊಟ್ಟಿಲೊಳು ತೂಗುವಳಂತೆಕಂಗಳಿಗಗೋಚರನ ಕರೆದಪ್ಪಿಕೊಂಬಳಂತೆ1 ನಗವನೆತ್ತಿದವನ ಮಗುವೆಂದೆತ್ತುವಳಂತೆನಿಗಮಗೋಚರನ ತಾ ನಿಟ್ಟಿಪಳಂತೆಅಗಣಿತ ಸತ್ವನ್ನ ಹಗ್ಗದಿ ಕಟ್ಟುವಳಂತೆಮಿಗೆ ನಿತ್ಯತೃಪ್ತಗೆ ಪಾಲನೆರೆವಳಂತೆ 2 ಬಹುಮುಖನಿಗೆ ಭಾಮೆ ಮುದ್ದುಕೊಡುವಳಂತೆಅಹಿತಲ್ಪನಿಗೆ ಹಾವತುಳಿದೀಯೆಂಬಳಂತೆಮಹಾದೈತ್ಯದಲ್ಲಣನಿಗೆ ಬಹು ಭಯವ ತೋರುವಳಂತೆಮಹಿಮ ನರಸಿಂಹಗೆ ಗುಮ್ಮನ ತೋರುವಳಂತೆ 3 ಚತುರ್ಮುಖಪಿತನ ಸುತನೆಂದೆತ್ತುವಳಂತೆಶ್ರುತಿವಿನುತಗೆ ಜೋಗುಳ ಪಾಡುವಳಂತೆಶತರವಿತೇಜಗಾರತಿಯನೆತ್ತುವಳಂತೆಗತಭೀತನಿಗೆ ಭಾಮೆ ರಕ್ಷೆಯಿಕ್ಕುವಳಂತೆ 4 ಕಡೆಗೋಲ ನೇಣ ಕೈಯಲಿ ಪಿಡಿದೊಲವಿಂದಪಡುಗಡಲತಡಿಯ ದ್ವಾರಕೆನಿಲಯಬಿಡದೆ ನೆಲೆಸಿದ ಹಯವದನ ಮುದ್ದುಉಡುಪಿನ ಕೃಷ್ಣನ ಉಡಿಯೊಳೆತ್ತುವಳಂತೆ5
--------------
ವಾದಿರಾಜ
ಏನೆಂದು ಕೊಂಡಾಡಿ ಸುತ್ತಿಸೆಲೊ ನಿನ್ನಾ ಪ ದಾನವಾಂತಕ ಕೃಷ್ಣ ಆನಂದ ಗುಣ ಪೂರ್ಣ ಅ.ಪ. ಮತ್ಸರೂಪಿಯೆ ನಿನ್ನ ಉತ್ಸಹದಿ ಕರೆಯಲಾಕುತ್ಸಿತನ ಸೊಲ್ಲ ನೀನೆತ್ತ ಕೇಳುವಿಯೋ |ಮತ್ಸ್ಯಕೇತನ ಜನಕ | ಮತ್ಸರವ ಕಳೆಯಯ್ಯಸಚ್ಚಿದಾನಂದಾತ್ಮ | ಚಿತ್ಸುಖಪದನೇ 1 ಕೂರ್ಮರೂಪಿಯೆಂದು | ಪೇರ್ಮೆಯಲಿ ಕರೆಯಲಾಭರ್ಮ ಗರ್ಭನ ಪಿತನೆ | ಗಿರಿಯ ಧರಿಸಿರುವೇ |ನಿರ್ಮಲಾತ್ಮಕನೆ ಯೆನಗೆ | ನಿರ್ಮಮತೆ ನೀಡಯ್ಯಾ ಊರ್ಮಿಳಾಪತಿ ಭ್ರಾತೃ | ಪರಮ ಮಂಗಳನೇ 2 ವರಹ ರೂಪಿಯೆ ನಿನ್ನ | ಕರೆಯುವುದು ಹೇಗಯ್ಯಾ ಕೋರೆ ದಾಡಿಯ ಮೇಲೆ | ಧರೆಯೆ ಧರಿಸಿರುವೇ | ವಾರೆ ನೋಟದಿ ಯೆನ್ನ | ಪರಿಕಿಸೀ ಪೊರೆಯಯ್ಯಾಧೀರ ಭೂವರಹ ವರ | ಧರಣಿ ಪರಿಪಾಲಾ 3 ನಾರಸಿಂಹನೆ ನಾನು | ಕರೆಯಲಾಪನೆ ನಿನ್ನಘೋರರೂಪವ ನೋಡಿ | ದೂರ ಸಾರುವರೋವಾರಿಜಾಕ್ಷಿಯು ಬಂದು | ಘೋರ ಪ್ರಹ್ಲಾದನ್ನಚಾರು ತವ ಚರಣದಲಿ | ಇರಿಸಬೇಕಾಯ್ತು 4 ದಧಿ | ವಾಮನನೆ ಬಾರೆಂದುಸಾಮಸನ್ಮುತ ನಿನ್ನ | ನಾಮಗಳ ನೆನೆಯೆಲಾ |ಭೂಮಿ ಬೇಡುವ ನೆವದಿ | ಬಲಿಯ ಭೂಮಿಗೆ ತುಳಿದೆಸೀಮೆ ಮೀರಿದ ಮಹಿಮ | ಮರ್ಮವಿನ್ನೆಷ್ಟೋ | 5 ಪರಶುರಾಮನೆ ನಿನ್ನ | ಕರೆಯಲಾರೆನು ನಾನುದುರುಳ ಕ್ಷತ್ರಿಯರ | ಶಿರಗಳನೆ ತರಿದೂ |ಭಾರಿ ಪರಶುವಿನಿಂದ | ವರಮಾತೆ ಶಿರ ತರಿದಿಸರಿ ಕಾಣೋ ಇದು ನಿನಗೆ | ಪರಮ ಪಾವನ್ನಾ 6 ರಾಮ ರೂಪಿಯೆ ನಿನ್ನ | ಆ ಮಹಾ ಮಹಿಮೆಗಳಸೀಮೆಗಾಣಳು ಲಕುಮಿ | ಪಾಮರನಿಗಳವೇ |ಆ ಮರಾ ಈ ಮರಾನೆಂದ ಆ | ಪಾಮರನ ಪೊರೆದುಆ ಮಹಾತ್ಮನ ಗೈದ | ಪರಿಯೆನ್ನ ಮಾಡೋ 7 ಕೃಷ್ಣ ಕೃಷ್ಣಾ ಎಂದು ಕರೆಯುವೆನೆ ನಾ ನಿನ್ನಕಷ್ಟದೊಳು ಸಿಲುಕಿರುವೆ | ಗಿರಿಯನ್ನೆ ಪೊತ್ತು |ವೃಷ್ಟಿಕುಲ ಸಂಪನ್ನ | ಕೃಷ್ಣ ಮೂರುತಿ ನೀನುಇಷ್ಟ ಭಕುತರ ಮನೋ | ಭೀಷ್ಟ ಸಲಿಸುವಿಯಾ 8 ಬುದ್ಧ ದೇವನೆ ಎನಗೆ ಸ | ದ್ಭುದ್ಧಿ ಕೊಡು ಎಂದುಬುದ್ಧಿ ಪೂರ್ವಕವಾಗಿ ನಿನ್ನ ಕರೆಯಲಾ |ಬುದ್ಧಿಯಿಂದಲಿ ನೀ | ಭೋಧಿಸಿದೆ ದುಶ್ಯಾಸ್ತ್ರಬೌದ್ಧ ನಿನ್ನನು ಪೊದ್ದು | ಬುಧರ ಪಾಡೇನೊ 9 ಕಲ್ಕಿ ಕಲ್ಕೀ ಎಂದೇ ಕರೆಯಲಾಪೆನೆ ದೇವಾಶುಲ್ಕ ಮೇಲಾಗಿಹುದು ಕಲಿಯುಗದೊಳು |ಉಲ್ಕ ಮುಖ ಮೊದಲಾದ | ಕಲ್ಕಿರಾಜರು ನಿನ್ನಕಲ್ಕ್ಯಾತ್ಮ ಸತ್ಯ ತವ | ವ್ರತವ ಮಾಳ್ಪರು ಬಿಡದೆ 10 ಸರ್ವರೂಪಾತ್ಮಕನೆ | ಸರ್ವ ವ್ಯಾಪಕ ಸ್ವಾಮಿಸರ್ವಜಿತು ಸರ್ವಾತ್ಮ ಸರ್ವೇಶನೇ |ಶರ್ವಾರಿ ವಂದ್ಯ ಗುರು | ಗೋವಿಂದ ವಿಠಲನೇಗುರು ಹೃದಂಬರದಲ್ಲಿ | ತೋರಿ ಪೊರೆಯನ್ನ 11
--------------
ಗುರುಗೋವಿಂದವಿಠಲರು
ಏನೆಂದೆ ಏನೆಂದೆ ಪ ನಾನೇನೆಂದೆನೆ ಗಾನಲೋಲಗವ ಮಾನದ ಮಾತಿಂಥ ಜೀನನ ಕಾಣೆನೆಂದೆ ಅ.ಪ ಕಾಲು ಇಲ್ಲದ ಹೆಳವನೆಂದೆ ತಲೆಯ ಕಾಣದ ಕುರೂಪಿಯೆಂದೆ ಚೆಲುವಿಕಿಲ್ಲದ ಕಾಡು ಹೀನಮೃಗವೆಂದೆ ಬಲಿಯ ಬಾಗಿಲ ಕಾಯ್ವ ಕೂಲಿಕಾರನೆಂದೆ1 ನಾಲಗೆ ಚಾಚಿ ರಕ್ತ ಕುಡಿದನೆಂದೆ ತಿಳಿದು ಜನನಿತಲೆ ಕಡಿದವನೆಂದೆ ಲಲನೆಯೊಡನೆ ವನವಾಸಕೆ ಪೋಗಿ ಬಳಲಿ ಬಳಲಿ ಬಾಯಾರಿದನೆಂದೆ 2 ಗೊಲ್ಲರ ಕುಲದಲಿ ಹುಟ್ಟಿದನೆಂದೆ ಗುಳ್ಳೆ ಗುಳ್ಳೆ ಬೆಣ್ಣೆ ಕದ್ದವನೆಂದೆ ಗೊಲ್ಲರ ಅಕಳ ಕಾಯುವ ಚರನೆಂದೆ ಫುಲ್ಲನಲನೆಯರ ವಸ್ತ್ರಗಳ್ಳನೆಂದೆ 3 ಬತ್ತಲೆ ಕುಣಿಕುಣಿದಾಡಿದನೆಂದೆ ಸತ್ಯಭ್ರಷ್ಟ ಮಹಕಲಿಯು ಈತನೆಂದೆ ಮತ್ತೆ ವೈಕುಂಠದಿ ಒದೆಸಿಕೊಂಡು ಇವ ವಿತ್ತದಾಸೆಗೆ ಮತ್ರ್ಯಲೋಕಕಿಳಿದವನೆಂದೆ 4 ಕುದುರೆ ನಡೆಸಿ ಒಬ್ಬನುಳಿಸಿದನೆಂದೆ ಕದನದ್ವೊಂಚಿಸಿ ಒಬ್ಬನಳಿದವನೆಂದೆ ಕುದುರೆ ಕಟ್ಟಿದ ವೀರ ತಾಮ್ರಧ್ವಜಗೆ ಸೋತು ಮುದುಕನಾಗಿ ಭಿಕ್ಷದಶ್ವ ತಂದವನೆಂದೆ 5 ಸೋದರಮಾವನ ಕೊಂದವನೆಂದೆ ಸೋದರಳಿಯರ ಜೀವ ಹೊಡೆಸಿದನೆಂದೆ ಭೇದದಿಂದ ಸಾಧು ಹನುಮನ ಸೋಲಿಸಿ ಸಾಧಿಸ್ವರೂಪಕ್ಕೆ ಪತಾಕೆನಿಸಿದನೆಂದೆ 6 ಜಾರ ಸಿರಿ ಸೊರೆಗೊಂಡವನೆಂದೆ ಮೀರಿದಂಥ ಮಹಮಾಯದ ಹೆಣ್ಣೆಂದೆ ಈರೇಳುಲೋಕದ ಕಪಟನಾಟಕನೆಂದೆ 7 ಮೊಚ್ಚೆಗಾರ ಕೈಯೊಳುಂಡವನೆಂದೆ ಉಚ್ಚಿಷ್ಟನಾಗಿ ಬಹಿಷ್ಕಾರ್ಹೊಂದಿದನೆಂದೆ ವೆಚ್ಚಮಾಡಿ ಮತ್ತು ಕುಲದಿ ಬಿದ್ದವನೆಂದೆ ನಿಶ್ಚಲ ಭಕ್ತರಿಗ್ಹುಚ್ಚ್ಹಿಡಿಸಿದನೆಂದೆ 8 ಪುಲ್ಲನಯನ ಸಿರಿರಾಮನ ಮುಂದೆ ಅಲ್ಲದ ಮಾತುಗಳ್ನಾನೇನೆಂದೆ ಬಲ್ಲಿದ ಹದಿನಾಲ್ಕು ಲೋಕ ಪೊತ್ತವನೆಂದೆ ಉಲ್ಲಾಸದಿ ನಿಮ್ಮ ಬಿರುದು ಸಾರುತ ಬಂದೆ 9
--------------
ರಾಮದಾಸರು
ಏನೆಂಬೆ ನಿಮ್ಮ ಕರುಣವು ದೇವವರ್ಯ, ಶ್ರೀಮ- ಪ ದಾನಂದತೀರ್ಥಾರ್ಯ ಹರಿಕಾರ್ಯಧುರ್ಯ ಅ.ಪ. ವಾರಿಧಿಯ ಗೋಷ್ಪಾದ ನೀರಂತೆ ದಾಟ್ಯಂದುಮಾರು ಮಲೆತಾಕ್ಷನನು ಮುರಿದು ಮೆರೆದೆಸಾರಿ ಬಹ ರಕ್ಕಸರ ಮುರಿದÉೂಟ್ಟಿ ನೀನಿಂದುಮೇರೆಯಿಲ್ಲದ ಭವಾಂಬುಧಿಯ ದಾಟಿಸಿದೆ 1 ದಾನವನಶೋಕವನ ಕಿತ್ತು ಈಡ್ಯಾಡಂದುಶ್ರೀನಾಥಗೆನುತ ಲಂಕೆಯನುರುಪಿದೆಮಾನವರ ಶೋಕವನ ಬೇರೊರಸೆ ಕಿತ್ತಿಂದುದಾನವರಿಹ ಪುರವ ಪೂರೈಸಿ ಮೆರೆದೆ 2 ಬೇಗ ಸಂಜೀವನವ ತಂದಿತ್ತು ಪೊರೆದ್ಯಂದುನಾಗಪಾಶದಿ ನೊಂದ ಕಪಿಕಟಕವಈಗ ಹರಿಭಕುತಿ ಸುಧೆಯ ನೆರೆದು ಪಾಲಿಸಿದೆರಾಗದಿಂ ಭವಪಾಶಬದ್ಧ ಜನರುಗಳನ್ನು 3 ಭವಾಬ್ಧಿ ಮಗ್ನ ಜನಗಳನಿಂದು 4 ಹತ್ತು ದಿಕ್ಕನು ಗೆಲಿದು ರಾಜಸೂಯದಿ ಅಂದುಚಿತ್ತೈಸಿ ಹರಿಗಗ್ರ ಪೂಜೆಯನು ಮಾಡಿದೆಹತ್ತೆರಡು ಮತ್ತೊಂದು ದುರ್ಭಾಷ್ಯ ಜರಿದಿಂದು ಬಿತ್ತರಿಸಿದೆ ಭಾಷ್ಯದಿಂದಗ್ರಪೂಜೆಯನು 5 ದ್ರೌಪದಿಯ ಸಂತವಿಟ್ಟಂದು ಮುಡಿ ಪಿಡಿದೆಳೆದಪಾಪಿ ದುಶ್ಶಾಸನನ ಬಸುರನ್ನು ಬಗೆದೆಪಾಪಿ ಜನರುಗಳೆಳೆಯೆ ವೇದಾಂತ ದೇವಿಯರಶ್ರೀಪತಿಗೆ ಸೇರಿಸಿದೆ ಭಾವವರಿದಿಂದು 6 ಅಂದು ಕಲಿಯಂಶ ದುರ್ಯೋಧನನ ಸಂದುಗಳಕುಂದದೆ ಮುರಿದೆ ಗದೆಯಿಂದ ಸದೆದುಇಂದು ಕಲಿಯನನೇಕ ಶಾಸ್ತ್ರ ಶಸ್ತ್ರಗಳಿಂದಕೊಂದೆಳೆದೆ ಹರಿಯ ಮನ್ನೆಯದಾಳು ಭಳಿರೆ 7 ಶ್ರುತಿಪಂಕಜಗಳರಳೆ ಅಜ್ಞಾನ ತತಿಯೋಡೆಗತಿಗಳಡಗೆ ಮಿಥ್ಯವಾದಿ ಖಳರಕುಮತಗಳು ಮುರಿಯೆ ಸತ್ಪಥವು ಕಾಣಿಸಲುವಿತತವಾಯಿತು ನಿನ್ನ ಪ್ರಭೆ ಸೂರ್ಯನಂತೆ 8 ಜ್ಞಾನಚಂದ್ರಿಕೆ ಪೊಳೆಯೆ ಭಕ್ತಿವಾರಿಧಿಯುಕ್ಕೆಮನ ಚಕೋರವು ವಿಷ್ಣುಪದದಿ ನಲಿಯೆದೀನ ಜನ ಭಯವಡಗೆ ತಾಪತ್ರಯಗಳೋಡೆಆನಂದತೀರ್ಥೇಂದು ಶ್ರೀ ಕೃಷ್ಣ ತಾ ಮೆಚ್ಚೆ 9
--------------
ವ್ಯಾಸರಾಯರು