ಒಟ್ಟು 362 ಕಡೆಗಳಲ್ಲಿ , 73 ದಾಸರು , 346 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶರಣು ಗಿರಿಯ ತಿಮ್ಮಾ | ಶರಣು ಪುರುಷೋತ್ತಮಾ | ಶರಣು ಮಹಾ ಮಹಿಮ | ಶರಣು ಪರಬೊಮ್ಮಾ | ಪರಿಹರಿಸುವದು ಹಮ್ಮಾ ಪ ವರೇಣ್ಯ | ಭಂಗ | ಹರಿಸಿದ ಶಿರಿ ರಂಗ | ವಿಹಂಗ | ತುರಗ ತುರಗ ವದನ | ಸದನ ಕರ ಮುಗಿವೆನೈಯಾ | ಕರದ ಮಾತಿಗೆ ಜೀಯಾ | ಭರದಿಂದ ಕೊಡು ಮತಿಯಾ 1 ಪಾದದಲಿ ಪೆಣ್ಣಾ | ಮೋದದಲಿ ಪೆತ್ತ ಚಿಣ್ಣಾ | ನಾದ ಬಲು ಪಾವನ್ನಾ | ಭೇದಾರ್ಥ ಜ್ಞಾನ | ಆದರಿಸೆ ಅನುದಿನಾ | ನೀ ದಯದಲಿ ಕೊಡು | ಈ ದೇಹ ನಿನ್ನ ಬೀಡು | ಯಾದುದೆ ಇತ್ತ ನೋಡು 2 ಜಲದೊಳಗಾಡಿದೆ | ಚಲಕೆ ಬೆನ್ನ ನೀಡಿದೆ | ನೆಲ ಬಂದು ನೆಗಹಿದೆ | ಖಳನನ್ನ ಕೆಡಹಿದೆ | ಇಳಿಯ ಮೂರಡಿ ಮಾಡಿದೆ | ಕುಲವ ಕೂಡಲಲಿ ಹಾರ | ಜಾರ ಚೋರ | ಅಳಿದೆ ಮುಪ್ಪುರು ಶೂರಾ | ವಿಜಯವಿಠ್ಠಲ ಪಾರಾ | ಫಲವೀವೆ ಧರಣೀಧರಾ 3
--------------
ವಿಜಯದಾಸ
ಶರಧಿ ಚಂದಿರಾ ಪ ಮಂದಹಾಸವದನ ಚತುರಾ ಮಂದರೋದ್ಧರಾ ಅ.ಪ ಶರಧಿ ಶಯನ ಪದ್ಮನಯನ ಸುರಮುನೀಶ್ವರ ನಮಿತ ಚರಣ ಪರಮ ಕರುಣ | ಸತ್ವಸದನ ಹರಿನಾರಾಯಣ ಗರುಡಗಮನಾ ವರದ ಮಾಂಗಿರಿ ಶೃಂಗ ಭವನ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶರಧಿಶಯನಾ ವರ ಸರಸಿಜ ಸುಂದರನಯನಾ ಪ ಸದನ ಅ.ಪ ನಿಗಮ ನಿರುಪಮ ಸೀಮಾ | ರಮ್ಯ ಪಟ್ಟಾಭಿರಾಮಾ | ದುರುಳದನುಜ ಭೀಮಾ ಶ್ರೀ[ಮಾಂಗಿರಿ] ರಮಾ ಪ್ರೇಮಾ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶಿವ ಶಿವ ಶಂಕರ ಮಹಾದೇವ ಭವ ಭಯಹರ ನಮೋ ಸದಾಶಿವ ಪ ಕಮನೀಯಾನನ ಸುಮನಸಪಾಲನ ಉಮೆಯ ರಮಣ ಘನಸುಮಶರದಹನ ವಿಮಲವಿಲೋಚನ ಶಮಾ ದಮಾ ಭವನ ಪ್ರಮಥಗಣಾನನ ಪಾವನಸದನಾ 1 [ಬಾಲ ಗಣಪಪಿತ ಸರ್ವೇಶ್ವರಾ] ನೀಲಕಂಠ ಸೋಮಶೇಖರಾ ಶೂಲಪಾಶಕರ ಫಾಲಾಂಬಕಹರ ಕರುಣಾಲವಾಲ ಹರ 2 ಸನ್ನುತ ಪಾವನಚರಣ ಸಕಲ ದನುಜಗಣ ಜೀವನಹರಣ ಸಕಲಾನತ ಮಾಂಗಿರಿಪತಿ ಕರುಣ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶೋಭಾನವೆನ್ನಿರೆ ಸಕಲ ಗುಣನಿಧಿಗೆ ಶೋಭಾನವೆನ್ನಿ ಸಮೀರ ಪಿತನಿಗೆ ಶೋಭಾನವೆನ್ನಿ ಸರೋಜಸದನ ಮನೋಭಿರಾಮನಿಗೆ ಶೋಭಾನವೆನ್ನಿ ಪ ಕಪಟ ಕಮಠಗೆ ತಪ ನಿಯಾಂಬಕನಸುಪರಿಹರಿಸಿದಗೆ ಕೃಪಣ ಪ್ರಹ್ಲಾದನ ವಿಪತ್ತು ಕಳೆದವಗೆ ಚಪಲಾಕ್ಷಿಯರಾರುತಿ ಬೆಳಗಿರೆ 1 ಕೊಡಲಿ ಕೋದಂಡವ ಪಿಡಿವ ಪಂಡಿತಗೆ ಕಡಲ ಕಟ್ಟಿಸಿ ಖಳರೊಡಲ ಬಗೆದಗೆ ಫಣಿ ಮೃಡನ ಗೆಲಿಸಿ ಕೀರ್ತಿ ಒಡನೆ ತಂದಿತ್ತಗೆ ಮಡದೇರಾರುತಿಯ ಬೆಳಗೀರೆ 2 ಹರಿಗಿ ಸುರಿಗಿ ಪಿಡಿದರವಿಂದಾಂಬಕಗೆ ಶರಧಿಯೊಳಾಡ್ದಗೆ ಗಿರಿಮಹಿಧರಗೆ ನರಹರಿ ರೂಪಗೆ ಧರಣಿಯಾಳ್ದಗೆ ಧುರದೊಳು ರಾಯರ ತರಿದ ಸಮರ್ಥಗೆ ಗರತೇರಾರುತಿಯ ಬೆಳಗೀರೆ3 ದಶರಥ ತನಯಗೆ ವಸುದೇವ ಸುತಗೆ ಕೂರ್ಮ ರೂಪಗೆ ವಸುಧಿ ವಾಹಕಗೆ ಮಿಸುನಿ ಕಶ್ಯಪಗೆ ಹೆಬ್ಬಸಿರ ಬಗೆದವಗೆ ಶಶಿಮುಖಿಯರಾರುತಿ ಬೆಳಗೀರೆ 4 ವಟು ಭೃಗುರಾಮಗೆ ಜಟಲ ಮಸ್ತಕಗೆ ಕಠಿಣ ಕಂಸನ ತಳ ಪಟವ ಮಾಡಿದಗೆ ಕಪಟ ಭೀಕರಗೆ ವಟಪತ್ರಶಯನ ನಿಷ್ಕುಟಿಲ ಜಗನ್ನಾಥ ವಿಠಲಗಾರುತಿಯ ಬೆಳಗೀರೆ 5
--------------
ಜಗನ್ನಾಥದಾಸರು
ಶೌರಿ ವಿಮಲಾಂಬರಧರ ಪಾಹಿ ಮುರಾರಿ ಪ ಸುಮನಸನುತ ಪದದನುಜ ಸಂಹಾರಿ ಅ.ಪ ಸರಸಿಜಲೋಚನ ಶರಣಸಂಜೀವನ ಸುರಮುನಿಸೇವನ ಕರುಣಾಸದನ ಅರವಿಂದಾನನ ವರಮಣಿರದನ ದುರಿತವಿಮೋಚನ ನಿರುಪಮ ಗಾನ 1 ಪುರಹರ ವಿನಮಿತ ಪಾವನಚರಿತ ಧರಣಿರಮಾಯುತ ಸುರಮುನಿವಿನುತ ಫಣಿ ಫಣಿಭೂಷಿತ ಮುರಳೀಧರ ಮಾಂಗಿರಿ ಶೃಂಗಸ್ಥಿತ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀ ಕಮಲನೇತುರ | ಪುಣ್ಯಗಾತುರ | ಸಾಕಾರ ಕ್ಷಣ ಮಾತುರ | ನೀ ಕರುಣದಿಂದ | ವಾಕು ಲಾಲಿಸು | ಬೇಕು ವೇಗದಲಿ | ಗೋಕುಲಾಂಬುಧಿ ರಾಕಾಂಬುಜ ಲಾ | ವಕರ ತೊಲಗಿಸಿ | ಸಾಕುವುದೆನ್ನ ನಿ | ಜಕರ ವಿಡಿದೂ ಪ ನಿತ್ಯ ಅಜಾತಾ | ಕುಂಭ ಮಕುಟನೀತಾ | ಮಾವ ಮರ್ದನ ನಿರ್ಭೀತಾ || ದೇವಮರರ ಕಾ | ವ ಭಕ್ತರ | ಜೀವನೆ ವರ | ವೀವನನುದಿನ | ಆವು ಕಾವುತ ಪೋಗಿ | ದಾ ವಿಷ ಬಿಡಿಸದೆ || ಶ್ರೀ ವಲ್ಲಭ ನಿನಗಾವವನೆಣೆ ತ್ರಿ | ಭುವನದೊಳಗತಿ | ಸೇವಕ ಜನರಿಗೆ ಕೈವಲ್ಯವನು ಕೊಡುವಾ 1 ಪೂತನಿ ಪ್ರಾಣಾಪಹಾರಾ | ಪರಮ ಸುಂದರಾ | ಪರಿಹಾರಾ | ಮರಣಜರ ವಿದೂರಾ | ಭೂತಿ ಉಳ್ಳಿಂದ್ರ ಕುಮಾರಾ | ಸೂತ ನೀನಾಗಿ ಭೂತಳದೊಳು | ವ್ರಾತ ಯಮುನೆಯ | ಭ್ರಾತನ್ನ ನಗರಿಯ | ಯಾತನಿಗಟ್ಟಿದೆ | ಪೂತುರೆ ನಿನ್ನ ಮಾ | ಯಾತನಕೇನೆಂಬೆ | ಖ್ಯಾತಿ ಮೂರುತಿ ಬೆನ್ನಾತು ಕಾಯೊ ಪಾರಿ | ಜಾತವ ತಂದ | ಮಿತ ಮಹಿಮ ಜಗ | ತಾತಾ ಬೊಮ್ಮಾದಿ ವಿನುತಾ 2 ತೋಷ ಗೋಪಾಲ ಮಾನಿಸಾ ವೇಷ | ಆ ಪಾರ ರತುನ ಭೂಷಾ | ನಂತಪ್ರಕಾಳಾ | ತಾಪಸಿಗಳ ವಿಲಾಸಾ || ಕೋಪ ಮೊದಲಾದ ತಾಪತ್ರಯಗಳ | ನೀ ಪೋಗಾಡು ಉ | ಡುಪಿ ಸದನನೆ ಪಾಪರಹಿತ ಮಧ್ವಪತಿ ಕರದಿಂ | ದ ಪೂಜೆಗೊಂಡ ಪ್ರತಾಪನೆ ಜ್ಞಾನದ | ದೀಪ ಬೆಳಗಲಿ | ರೂಪವ ತೋರಿಸು ಯದುಪಾ ಎನ್ನ ಸಮೀಪಾ 3
--------------
ವಿಜಯದಾಸ
ಶ್ರೀ ಕೃಷ್ಣವೇಣಿ ಕಲ್ಯಾಣೀ ಪಂಕಜಾಸನ ಸ್ವೀಕೃತ ಬುಧ ಶ್ರೇಣೀ ನೀ ಕೃಪೆÉಯಿಂದ ಮಹಾಕೃತು ಹರಿಯ ನಿ ಜಾಕೃತಿ ತೋರ್ದೂರಿಕೃತ ದುರಿತೇ ಪ ಸುಜನ ಮಾತೆ ಶಮಲ ಸಂಕೂಲ ನರ್ಧೂತೆ ಸುಮನಸ ಜನ ಸನ್ನುತೆ ಸನ್ಮೋದ ದಾತೆ ವಿಮಲ ಸದ್ಗುಣ ಸಂಭೃತೆ ನಮಿಸುವೆ ತ್ವತ್ಪದÀ ಕಮಲಯುಗಳಿಗನು ಪಮ ಸುಂದರೆ ಭ್ರಮೆಗೊಳಿಸುವ ದುರ್ಮಮ ಕಳೆದು |ಸೋ ತ್ತಮರ ಪದಾಬ್ಜಕೆ ಭ್ರಮರನೆನಿಸಿ ಮಾರಮಣನ ದುಹಿತ್ರೆ 1 ಮದಗಜಯಾನೆ ಪಿಕಗಾನೆ ಉಭಯಾನೆ ಮಾನಿನಿ ಮದನಾರಿ ಜಟಜಸೊನೆ ಪಾಪೌಘದಹನೆ ಮುದವ ಕೊಡು ಎಮಗೆ ನಿ ೀನೆ ಮದಡನರನು ಒಂದು ದಿನ ಮಜ್ಜನವ ವಿಧಿಸೆ ಶರೀರದಿ ಹುದುಗಿದ ಪಾಪಗಳುದುರಿಸಿ ಕಾಲನ ಸದನವ ಹೋಗಗೊಡದುದಧಿ ಮಥನ ಪದ ಪದುಮವ ತೋರ್ಪೆ 2 ನೀಲ ಪುನತ ಹೃತ್ಕುಮುದಾ ಭೇಶೇ ಅನುದಿನ ಪೂರೈಸೇ ಜನನಿಯೆನ್ನ ದುರ್ಗುಣವೆಣಿಸದೆ | ಮಾ ತನು ಲಾಲಿಸು ಸುಹೃದ್ವನರುಹದಲಿ ಶ್ರೀ ವನತೆಯರಸ ಜಗನ್ನಾಥ ವಿಠಲನ ಅನವರತ ನಿಲಿಸು ಘನ ಮಾಂಗಲ್ಯೇ 3
--------------
ಜಗನ್ನಾಥದಾಸರು
ಶ್ರೀ ತಾಂದೋಣಿ ವೆಂಕಟರಮಣ ಇಂದು ವೆಂಕಟನ ಕಂಡು ಅನ್ಯರೊಬ್ಬರು ಇವಗೆ ಸರಿಪರರು ಇಲ್ಲ ಪ ಅಮರರಿಗು ಮನುಜರಿಗು ಸರ್ವ ಪ್ರಾಣಿಗಳಿಗು ಸ್ವಾಮಿ ರಕ್ಷಕ ಸರ್ವ ಪ್ರೇರಕನು ದೇವ ಅಮರಾವತಿ ಸರಿತತೀರ ಗಿರಿಯಲಿ ನಿಂತ ಪ್ರೇಮದಿಂದಲಿ ಭಜಿಸೆ ಅಭಯ ವರವೀವ 1 ಎನ್ನ ಕುಲದೇವನು ತಿರುಪತಿ ವೆಂಕಟನು ತಾನೇವೆ ಭಕ್ತರಿಗೆ ಒಲಿಯೆ ಬಂದಿಹನು ಅನಂತ ಗುಣಪರಿಪೂರ್ಣ ತನ್ನ ಸೇವಿಸುವರ ಅನುಗಾಲ ರಕ್ಷಿಸುವ ಅನಿಮಿತ್ತಬಂಧು 2 ಮಧ್ವಮುನಿ ಹೃತ್ಸದನ ದೇವದೇವೋತ್ತಮನು ಮಧ್ವಮುನಿ ಗುರುಸ್ವಾಮಿ ವಿಧಿತಾತ ಶ್ರೀಶ ಶುದ್ಧಕಾರುಣ್ಯನಿಧಿ ಪ್ರಸನ್ನ ಶ್ರೀನಿವಾಸ ಉದ್ಧರಿಪ ಸಂಸ್ಮರಿಸೆ ಇಹಪರದಿ ಎಂದೂ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಧನ್ವಂತ್ರಿ ಸ್ತೋತ್ರ(ನಾರಾಯಣಾಚ್ಯುತ ವಿಠಲ ದಾಸಿಗಾಗಿ) ಕಾರುಣ್ಯ ನಿಧಿ ತವಾ | ಪಾರ ಮಹಿಮೆಯ ಕೇಳಿಸಾರಿದೆನೊ ಪಾದಾಬ್ಜ ಶರಣೆಂದು | ಶರಣೆಂದೆಶ್ರುನಾಥಪಾರು ಮಾಡಾಕೆಯ ವೃಜಿನವ 1 ಆಂತ್ರಕೆಟ್ಟಿಹುದೆಂದು | ತಾಂತ್ರಿಕರು ಪೇಳುವರುಆಂತ್ರ ಸರಿಮಾಡುವ ಕಾರ್ಯವ | ಕಾರ್ಯನಿರ್ವಹಿಸಿ ಸ್ವಾ-ತಂತ್ರ ಪುರುಷಾ ದಯತೋರೋ 2 ಪಾದ ಭಜಿಸೂವ | ಭಜಿಸೂವ ದಾಸಿಗೆಈ ರೀತಿ ಭವಣ್ಯಾಕೊ ಧನ್ವಂತ್ರಿ 3 ಆರೋಗ್ಯ ಆಯುಷ್ಯ | ಆರಾಧಕರ್ಗೀವೆಈರನುತ ಧನ್ವಂತ್ರಿ ಕರುಣಾಳು | ಕರುಣಾಳು ಸರ್ವಜ್ಞಆರೋಗ್ಯ ದಾಸಿಗೆ ಕೊಡು ಎಂಬೆ4 ಧಂ ಎಂದು ಉಚ್ಛರಿಸೆ | ಧ್ವಂಸ ಮಾಡುವೆ ರೋಗಧನಂತ್ರಿಯೆನ್ನೆ ಭವರೋಗ | ಭವರೋಗ ವಾರಿಸುವಧನ್ವಂತ್ರಿ ರೂಪಿ ನಮೊ ಎಂಬೆ 5 ಕರದಲ್ಲಿ ಸುಧೆ ಕಲಶ | ಧರಿಸಿರುವ ಬಗೆಯೇನೊಶರಣರ್ಗೆ ಸುಧೆಯಾನುಣಿಸುತ್ತ | ಉಣಿಸುತ್ತಲಮರತ್ವಕರುಣಿಸುವಿ ಎಂದೂ ಶ್ರುತಿ ಸಿದ್ಧ 6 ಇಂತಿರಲು ದಾಸಿಸ | ತ್ಪಂಥಗಳನ್ನುದ್ದರಿಸೊಅಂತು ತವ ಚರಣಾಬ್ಜ ಬೇಡುವೆ | ಬೇಡುವೆನೋಪಾದಾಕ್ರಾಂತಳಿಗೆ ಸುಧೆಯಾ ನೂಣೀಸೊ7 ಚಂದ್ರ ನಿವಹದ ಕಾಂತಿ | ಯಿಂದಮೃತ ಕಿರಣದಿಂಹೊಂದ್ಯಮಿತ ಸುಖರೂಪಿ ಉಲ್ಲಾಸವೀವುತ್ತಚಂದುಳ್ಳ ಸುಧೆ ಕಲಶ ಪಿಡಿಯುತ್ತ 8 ಆತು ಜ್ಞಾನಾಂಕವನು | ಆತ್ಮಸ್ಥಶೀತಾಂಶುಧೌತ ಮಂಡಲಗ ಲಕ್ಷ್ಮೀಶ | ಲಕ್ಷ್ಮೀಶ ಹರಿಯನ್ನುಮಾತು ಮಾತಿಗೆ ನಾನು ಸ್ಮರಿಸೂವೆ 9 ಉತ್ತಮಾಂಗದಲಿರುವ | ಹತ್ತೆರಡು ದಳ ಕಮಲಪ್ರಸ್ಥಿತನು ಧನ್ವಂತ್ರಿ ಮಕರಂದ | ಮಕರಂದ ಸ್ರವಿಸುವನಭಕ್ತಿಯಲಿ ಸ್ಮರಿಸೋದು ರೋಗಾರ್ತೆ 10 ಕಮಲ ಹೃದಯಸ್ಥ 11 ಸದನ ಷಟ್ದಳ ಕಮಲಗುದವು ಮೂಲಾಧಾರಾನಾಲ್ದಳವುನಾಲ್ದಳ ಕಮಲಸ್ಥಬದಿಗನು ಧನ್ವಂತ್ರಿ ರೂಪೀಯು 12 ರೂಪೀ ಈ ದೇಹವನು | ವ್ಯಾಪಿಸುತ ತಾನಿದ್ದುಕಾಪಾಡಲೋಸುಕದಿ ಮಕರಂದ | ಮಕರಂದ ಸುರಿಸುವವ್ಯಾಪಾರದಿಂ ಜೀವರುದ್ಧಾರ 13 ಹತ್ತಿರುವ ಅಜ್ಞಾನ | ವತ್ತಿಬಹ ಭಯದುಃಖಮತ್ತೆ ಮಹವಿಷವು ಇದರಿಂದ | ಇದರಿಂದ ಪರಿಹಾರ ಭಕ್ತಿಯಿಂ ಭಜಿಸೇ - ಸುಖ ಸೌಖ್ಯ 14 ಶರಣರ್ಗೆ ತಪ್ಪದೆಲೆ | ಗೆರೆವೆ ಸೌಖ್ಯಂಗಳನುಗುರು ಗೋವಿಂದ ವಿಠಲಾ | ವಿಠ್ಠಲ ಧನ್ವಂತ್ರಿಮರುತಾಂತರಾತ್ಮಾ ಸಲಹಯ್ಯ15
--------------
ಗುರುಗೋವಿಂದವಿಠಲರು
ಶ್ರೀ ಮಧ್ವಾಚಾರ್ಯರ ಸ್ತೋತ್ರ ಪದ ನಮೋ ನಮೋ ಹರಿಪ್ರೀಯ ನಮೋ ನಮೋ ಸುರಗೇಯನಮೋ ನಮೋ ಗುರುರಾಯ ಮಧ್ವ ಮುನಿ ಜೀಯಾ ಪ ಧರೆಗೆ ಭಾರವಾಗಿ ಚರಿಸುತಿರೆ ಮಾಯಿಗಳುಧರಿಸಲಾರದೆ ಧರಣಿ ಸರಸಿಜೋದ್ಭವಗೆಮೊರೆಯಿಡಲು ಅಜನಾಗ ಹರಸುರರ ಸಹವಾಗಿಹರಿಯ ಸದನವ ಸಾರಿ ಅರುಹಿದನು ಇದನೆಲ್ಲ 1 ಕಾವನಯ್ಯನು ವಸುಧೆ ಭಾವವನು ತಿಳಿದನಿಲದೇವನೇ ನಿನಗೆ ಆಜ್ಞೆಯನೀಯಲುದೇವ ನೀ ನವತರಿಸಿ ಪಾವನವ ಮಾಡಿ ಸ-ಜ್ಜೀವಿಗಳ ಪೊರೆದರ ದುರ್ಜೀವಿಗಳ ನೀ ಮುರಿದೆ 2 ಕಾಮವನು ಕಡಿದು ಸನ್ನೇಮವನೆ ಹಿಡಿದು ಬಹುಸೀಮೆಯೊಳು ವಾದಿಗಳ ಸ್ತೋಮ ತರಿದುಹೇಮಕಚ್ಚುಲ ವೇಣುಗೋಪಾಲ ವಿಠಲನನಾಮಸುಧೆ ಸುಜನರಿಗೆ ಪ್ರೇಮದಲಿ ಸಮಿಯಿತ್ತೆ 3
--------------
ವೇಣುಗೋಪಾಲದಾಸರು
ಶ್ರೀ ಮಹಾಲಕ್ಷ್ಮೀ ಮಾತೆ ತ್ರಿಭುವನ ಜನನಿಶ್ರೀಮಂತ ವಿಷ್ಣುವಾಮಾಂಕಸದನಿ ಪ. ತಾಮರಸಾಸನ ವ್ಯೋಮಾಳಕ ಸುರ-ಸ್ತೋಮ ವಿನುತೆ ಹೇ ಸೋಮ ಸಹೋದರಿಅ.ಪ. ಕರ್ಮ ಇಂಧನ ಕಾಲವೆ ಮಹಾಅನಳ ಜನರ ಸಾಧನವೆಂಬ ದರ್ವಿಲಿಇನಿತು ಪಾಕವ ಮಾಡಿ ಘನಮಹಿಮನ ಭೋ-ಜನಕನುಕೂಲ ಮಾಡ್ದ ವನರುಹನಯನೆ 1 ಕಳೇವರ ಕೊಳುತಲಿಹಲವು ವಿಧಾರ್ಚನೆಗಳಲಿ ಪತಿಯನುಒಲಿಸಿ ವಲ್ಲಭನ ತೋಳಲಿ ಬಿಗಿದಪ್ಪಿದಬಲುಸುಖಜಲನಿಧೆ ಸಲಹೆ ನಮಿಸುವೆ 2 ಹೇಮಾಂಬರ ಚಾರು ಶ್ರೋಣಿಅಮಿತ ಸುಗುಣೆ ಶೋಭಿತ ಅಬ್ಜಸದನೆತಮಹಾರಿ ಗೋಪಾಲವಿಠಲನರ್ಧಾಂಗಿಯೆಸಮರೂಪ ಸಮಕಾಲ ಸಮದೇಶ ವ್ಯಾಪುತೆರಮೆ ಅನುಪಮೆ ಸಮೆ ನಮಿಸುವೆ ಎನ್ನ ಭವ-ಶಮಲವಳಿದು ಹೃತ್ಕಮಲದಿ ಹರಿತೋರೆ 3
--------------
ಗೋಪಾಲದಾಸರು
ಶ್ರೀ ಮಾರುತಾತ್ಮ ಸಂಭೂತ ಹನುಮ ಭೀಮ ಮಧ್ವಾಖ್ಯ ಯತಿನಾಥ | ಮೂಲ ರಾಮಕೃಷ್ಣಾರ್ಪಿತ ಸುಚೇತಾ | ಮಮ ಸ್ವಾಮಿ ಚಿತ್ತೈಸೆನ್ನ ಮಾತಾ 1 ಅಂಜನಾದೇವಿ ಸುಕುಮಾರ |ಎಮ್ಮ ನಂಜಿಸುವ ಘೋರ ಸಂಸಾರ |ಹೇ ಪ್ರ ನಿಗಮ ಸಂಚಾರ | ಕ್ಲೇಶ ಭಂಜಿಸಿ ಸಲಹೋ ಗುಣೋದಾರ 2 ಕುಂತಿ ಜಠರದಲುದಿಸೆ ಬಂದೆ | ಮಾ ಹೊಂತ ಕೌರವರ ನೀ ಕೊಂದೆ | ಅನಾ ದ್ಯಂತ ಕಾಲದಿ ಎಮ್ಮ ತಂದೆ | ನೀನೆ ಸಂತೈಸಬೇಕೆಂದು ನಿಂದೆ 3 ಮಧ್ಯ ಗೇಹಾಖ್ಯ ದ್ವಿಜಸದನ | ದೊಳಗೆ ಉದ್ಭವಿಸಿ ಮೆರೆದೆ ಜಿತಮದನ | ಧರ್ಮ ಪದ್ಧತಿಗಳ ಪ್ರಸನ್ನವದನಾ | ತಿಳಿಸಿ ಉದ್ಧರಿಸೋ ದನುಜಕುಲ ನಿಧನ4 ಶ್ರೀ ಪೂರ್ಣಬೋಧ ಯತಿರಾಯ | ಎಮ್ಮ ತಾಪತ್ರಯಗಳಿಂದ ನೋಯ | ಗೊಡದೆ ನಿಕಾಯ | ಕೃಷ್ಣ ದ್ವೈಪಾಯನಗೆ ನೀನೆ ಪ್ರೀಯ 5 ಬದರಿಕಾಶ್ರಮಕೆ ನೀ ಪೋಗಿ | ಲಕ್ಷ್ಮೀ ಹೃದಯ ವಾಸನ ಪದಕೆ ಬಾಗಿ | ಭಾಷ್ಯ ಮುದದಿಂದ ಪೇಳ್ದೆ ಚೆನ್ನಾಗಿ | ಎನಗೆ ಅದರ ಭಾವವ ತಿಳಿಸೋ ಯೋಗಿ6 ತಾಪ ಭಾರ ತೀರಮಣ ಮಹಪಾಪ ವೆಣಿಸಿ ದೂರ ನೋಳ್ಪರೆ ಸುಪ್ರತಾಪ ಪರಮ ಕಾರುಣಿಕ ತೋರೋ ತವರೂಪ 7 ಭಕ್ತರಿಗೊಲಿದು ಭವದಿಂದ ನೀ ಮುಕ್ತರನÀ ಮಾಡು ದಯದಿಂದ ನೀನೆ ಶಕ್ತನಹುದೆಂದು ವೇದವೃಂದದೊಳಗೆ ಉಕ್ತವಾಗಿದೆ ನಿಮ್ಮಾನಂದಾ8 ಜೀವಕೋಟಿಯೊಳು ನೀನೆ ಪಿರಿಯ ಎಮ್ಮ ನೋವು ಸುಖಗಳನು ನೀನೆ ಅರಿಯ ಈಗ ನೀವೊಲಿಯದಿರೆ ಹರಿ ನಮ್ಮ ಪೊರೆಯಾ ಜಗವ ಕಾಯ್ವ ಗುರುವರ ನೀನೆ ಖರೆಯ 9 ಶ್ರೀ ಜಗನ್ನಾಥ ವಿಠ್ಠಲಯ್ಯ ನಂಘ್ರಿ ಪೂಜಿಸುವ ಸಜ್ಜನರ ಕೈಯಾ ಪಿಡಿದು ನೀ ಜೋಕೆ ಮಾಡುವುದು ಜೀಯಾ ನೀನೆ ಈ ಜಗತ್ರಯ [ಕೆ] ಗುರುವರ್ಯಾ 10
--------------
ಜಗನ್ನಾಥದಾಸರು
ಶ್ರೀ ಲಕ್ಷ್ಮೀಸ್ತುತಿ ಅಪರೋಕ್ಷಜ್ಞಾನ ಸಂಚಯೇ ಶ್ರೀಪದ್ಮನಾಭ ನಿಲಯೇ ಪ ತಪಯೋಗ ಭಕ್ತಿನಿಧಿಯೆ ಅಪಾರಮಹಿಮಾವಲಯೇ ಅ.ಪ ಕಮಲಾ ಕಮಲಸದನೆ | ಕಮಲನಯನೆ ಕಮಲವದನೆ ಕಮಲಾಂಬರೆ ಕುಂದರದನೆ | ಕಮಲಾಂಬಿಕೆ ಮನಮೋಹನೆ 1 ಸರಸೀರುಹಜಾತನಮಿತೆ | ವರ ಮಾಂಗಿರಿರಂಗಪ್ರೀತೆ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀ ವಧುರಮಣನ ಚರಿತಾಮೃತವನು ಸೇವಿಸಬಾರದೆ ಜಿವ್ಹೆ| ಆವಾಗು ವಿಷಯಾಸಕ್ತಿಲಿ ಬಾಳುವ ದಾವರಸಜ್ಞದ ಗುಣವೇ ಪ ಆರತಿಯಿಂದಲಿ ಷಡರಸದನ್ನದ ಸಾರಾಯಕ ಮರುಳಾದೆ ನೀ| ನರೆರಧರಕ್ಕೊಲಿದೇ ಸುಧಾರಸವೆಂದು ಬಗೆದೇ| ಧಾರಣಿ ಕಳ್ಳಿಯ ಹಾಲೆಂದೆನಿಸಲು ಗೋರಸದ್ಹಂಬಲ ಮರೆದೆ 1 ಜ್ಞಾನವ ಸಾಧಿಸಿ ಬಹು ಸಾಯಾಸದಿ ನಾನು ಶಾಸ್ತ್ರವ ನೋಡಿ| ಮಾನದ ಕಾಂಕ್ಷಿಯ ಕೂಡಿ| ಪರಿ ಕುಣಿದಾಡುವ ಹೀನ ಮನುಜರಾ ಪಾಡಿ2 ಸ್ಮರಿಸಲು ಶ್ರೀಹರಿಯಾ ಲೋಹ| ಪರಸವ ಮುಟ್ಟಿದ ಪರಿಯಾ ಧನ್ಯರು ತಮನೆನಿಸುವನರಿಯಾ| ಗುರುವ್ಕ ಮಹಿತಪಿ ನಂದನು ಸಾರಿದ ಮೊರೆ ಹೋಗು| ಮೂಜಗ ಧೊರಿಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು